Tag: Sugar

  • ಡಿವಿಎಸ್‌ ಅಸ್ವಸ್ಥ – ಚಿತ್ರದುರ್ಗ ಆಸ್ಪತ್ರೆಗೆ ದಾಖಲು

    ಡಿವಿಎಸ್‌ ಅಸ್ವಸ್ಥ – ಚಿತ್ರದುರ್ಗ ಆಸ್ಪತ್ರೆಗೆ ದಾಖಲು

    ಚಿತ್ರದುರ್ಗ: ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದಗೌಡ ಅಸ್ವಸ್ಥರಾಗಿದ್ದು ನಗರದ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಶುಗರ್ ಮಟ್ಟ ಕಡಿಮೆಯಾದ ಹಿನ್ನೆಲೆಯಲ್ಲಿ ಸದಾನಂದ ಗೌಡರನ್ನು ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಚಿತ್ರದುರ್ಗ ನಗರದ ಖಾಸಗಿ ಹೋಟೆಲ್‌ಗೆ ಬಂದಾಗ ಈ ಘಟನೆ ನಡೆದಿದ್ದು, ಬಸವೇಶ್ವರ ಆಸ್ಪತ್ರೆಯ ವೈದ್ಯರು ಸದಾನಂದ ಗೌಡರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

  • ಬಿಪಿ, ಶುಗರ್ ಮಾತ್ರೆಯಲ್ಲಿದೆ ಪ್ಲಾಸ್ಟಿಕ್ ಅಂಶ: ಮಹಿಳೆ ಆರೋಪ

    ಬಿಪಿ, ಶುಗರ್ ಮಾತ್ರೆಯಲ್ಲಿದೆ ಪ್ಲಾಸ್ಟಿಕ್ ಅಂಶ: ಮಹಿಳೆ ಆರೋಪ

    ಹಾಸನ: ಶುಗರ್ ಹಾಗೂ ಬಿಪಿ ಮಾತ್ರೆಯಲ್ಲೂ ಮನುಷ್ಯನಿಗೆ ಮಾರಕವಾಗುವ ಪ್ಲಾಸ್ಟಿಕ್ ಅಂಶ ಇದೆ ಎಂದು ಮಹಿಳಾ ರೋಗಿಯೊಬ್ಬರು ಆರೋಪ ಮಾಡುತ್ತಿದ್ದು, ಮಾತ್ರೆಗಳ ಕ್ವಾಲಿಟಿ ಬಗ್ಗೆ ಆತಂಕ ಮೂಡಿಸಿದೆ.

    ಶುಗರ್ ಕಾಯಿಲೆ ಹೊಂದಿರುವ ಸಕೀನ ಎಂಬ ಮಹಿಳೆಯೊಬ್ಬರು, ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯ ಮೆಡಿಕಲ್ ಶಾಪ್ ಒಂದರಲ್ಲಿ ಮಾತ್ರೆ ಖರೀದಿ ಮಾಡಿದ್ದರು. ಆದರೆ ಆ ಮಾತ್ರೆ ನುಂಗಿದ ನಂತರ ಮಹಿಳೆ ಆರೋಗ್ಯದಲ್ಲಿ ಪದೇ ಪದೇ ವ್ಯತ್ಯಯ ಆಗುತ್ತಿತ್ತು.

    ಹೀಗಾಗಿ ಮಹಿಳೆ ಮಾತ್ರೆಯನ್ನು ನೀರಿನಲ್ಲಿ ನೆನೆಸಿ ಟೆಸ್ಟ್ ಮಾಡಿದ್ದಾರೆ. ಆದರೆ ಎಷ್ಟು ನೆನೆಸಿದರೂ ನೀರಿನಲ್ಲಿ ಮಾತ್ರೆ ಕರಗದೇ ಇದ್ದಿದ್ರಿಂದ ಕಂಗಾಲಾದ ಮಹಿಳಾ ರೋಗಿ ಮಾತ್ರೆಯನ್ನು ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಬೇಕು ಎಂದು ಮನವಿ ಮಾಡುತ್ತಿದ್ದು, ಒಂದು ವೇಳೆ ಮಾತ್ರೆಯಲ್ಲಿ ಮಾರಕ ಪ್ಲಾಸ್ಟಿಕ್ ಅಂಶ ಪತ್ತೆಯಾದರೆ ಅದನ್ನು ಬ್ಯಾನ್ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

  • ಶುಗರ್ ಸೇವನೆ ಬಿಟ್ಟ ಸಕ್ಕರೆ ನಾಡಿನ ಪದ್ಮಾವತಿ!

    ಶುಗರ್ ಸೇವನೆ ಬಿಟ್ಟ ಸಕ್ಕರೆ ನಾಡಿನ ಪದ್ಮಾವತಿ!

    ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾ ಅವರು ಸಕ್ಕರೆ ತಿನ್ನುವುದನ್ನು ಬಿಟ್ಟಿದ್ದಾರೆ.

    ನಟಿ ರಮ್ಯಾ ಅವರಿಗೆ ಸಕ್ಕರೆ ಅಂದರೆ ತುಂಬಾ ಇಷ್ಟ. ಆದರೆ ಈಗ ರಮ್ಯಾ ಅವರು ಈ ವರ್ಷದ ಕೊನೆಯವರೆಗೂ ಸಕ್ಕರೆ ಹಾಗೂ ಸಿಹಿ ಪದಾರ್ಥಗಳನ್ನ ಸೇವಿಸದೇ ಇರಲು ನಿರ್ಧಾರ ಮಾಡಿದ್ದಾರೆ. ಸಕ್ಕರೆ ಮತ್ತು ಸಿಹಿ ಪದಾರ್ಥಗಳು ತಮ್ಮ ಜೀವನ ಶೈಲಿಯ ಮೇಲೆ ಭಾರೀ ಪರಿಣಾಮ ಬೀರಿರುವ ಕಾರಣ ಡಿಸೆಂಬರ್ 31 ರವರೆಗೂ ಸಕ್ಕರೆ ಸೇವಿಸುವುದಿಲ್ಲ ಎಂದು ರಮ್ಯಾ ಅವರು #ನೋಶುಗರ್ ಚಾಲೆಂಜ್ ಸ್ವೀಕರಿಸಿದ್ದಾರೆ. ಮೂರು ದಿನಗಳ ಹಿಂದೆ ಈ ಬಗ್ಗೆ ಅವರೇ ಇನ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.

    ನಟಿ ರಮ್ಯಾ ”ಇದು ಸಕ್ಕರೆ ಇಲ್ಲದ ನನ್ನ ಮೊದಲ ದಿನವಾಗಿದೆ. ಈ ವರ್ಷದ ಕೊನೆಯವರೆಗೂ ಇದನ್ನು ಮುಂದುವರಿಸಲು ನಾನು ತೀರ್ಮಾನ ಮಾಡಿದ್ದೇನೆ. ಇದು ತುಂಬಾ ಒಳ್ಳೆಯದು. ಈ ಹಿಂದೆ ನಾನು ಸಕ್ಕರೆಯನ್ನ ಬಿಟ್ಟು ಇರಬೇಕು ಅಂತ ಹಲವಾರು ಬಾರಿ ನಾನು ಪ್ರಯತ್ನ ಪಟ್ಟಿದ್ದೇನೆ. ಆದರೆ 2-3 ದಿನಗಳಿಗಿಂತ ಹೆಚ್ಚು ದಿನ ಸಕ್ಕರೆಯನ್ನು ಬಿಟ್ಟಿರಲು ಸಾಧ್ಯ ಆಗಲಿಲ್ಲ” ಎಂದು ಹೇಳಿಕೊಂಡಿದ್ದಾರೆ.

    “ಅಷ್ಟೇ ಅಲ್ಲದೇ ಎಷ್ಟೋ ಬಾರಿ ಸಕ್ಕರೆ ತ್ಯಜಿಸಲು ನಾನು ನನ್ನ ಪ್ರೀತಿಸುವ ವ್ಯಕ್ತಿಗಳ ಮೇಲೆ ಪ್ರತಿಜ್ಞೆ ಮಾಡಿದ್ದೇನೆ. ಆದರೂ ನಾನು ಅವರ ಮೇಲೆ ಪ್ರಮಾಣ ಮಾಡಿದ್ದೇನೆ ಎಂದು ನಾನು ಮರೆತುಬಿಡುತ್ತಿದ್ದೆ. ನಾನು ಈ ಹಿಂದೆ ಇಷ್ಟಪಟ್ಟು ಸಿಹಿ ತಿನಿಸುಗಳನ್ನು ತಿನ್ನುತ್ತಿದ್ದೆ. ಆದರೆ ಈಗ ಅದೇ ಅಭ್ಯಾಸವಾಗಿ ಹೋಗಿದೆ. ನನಗೆ ಒತ್ತಡ ಹೆಚ್ಚಾದಾಗ ಸಿಹಿ ತಿನ್ನಬೇಕು ಎನಿಸುತ್ತದೆ. ಸಕ್ಕರೆ ದೈಹಿಕ ಹಾಗೂ ಮಾನಸಿಕವಾಗಿ ನನ್ನ ಆರೋಗ್ಯದ ಮೇಲೆ ಭಾರೀ ಪರಿಣಾಮ ಬೀರಿದೆ” ಎಂದು ರಮ್ಯಾ ತಿಳಿಸಿದ್ದಾರೆ.

    ನನ್ನ ಜೀವನದಲ್ಲಿ ನಾನು ಸಕ್ಕರೆಯನ್ನು ಅತಿಯಾಗಿ ಸೇವಿಸಿದ್ದೇನೆ. ಆದ್ದರಿಂದ ನಾನು ಈಗ ಮತ್ತೆ ಸಕ್ಕರೆ ಕಡಿಮೆ ಮಾಡಬೇಕು ಎಂಬ ಕಾರಣದಿಂದ ಡಿಸೆಂಬರ್ 31 ರವರೆಗೆ ಸಕ್ಕರೆಗೆ ಗುಡ್ ಬೈ ಹೇಳಲು ನಿರ್ಧಾರ ಮಾಡಿದ್ದೇನೆ. ಆದ್ದರಿಂದ ನನ್ನೊಂದಿಗೆ ನೀವು ಚಾಲೆಂಜ್ ತೆಗೆದುಕೊಳ್ಳಲು ಇಷ್ಟಪಟ್ಟರೆ ಮೊದಲು ನಿಮ್ಮ ಜೀವನದ ಸ್ಟೋರಿಯನ್ನು ಹಂಚಿಕೊಳ್ಳಿ. ಬಳಿಕ ನನ್ನ ಜೊತೆ ನೀವು ನೋ ಸುಗರ್ ಚಾಲೆಂಜ್ ಸ್ವೀಕಸಿ ಎಂದು ನಟಿ ರಮ್ಯಾ ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.instagram.com/p/Bo8dFYaD63r/?hl=en&taken-by=divyaspandana

  • ಕುಮಾರಸ್ವಾಮಿಗಾಗಿ ಎದುರು ನೋಡುತ್ತಾ ಕಾಯುತ್ತಿದ್ದಾರೆ ಚಿಕ್ಕಮಗ್ಳೂರಿನ ಪದವೀಧರ!

    ಕುಮಾರಸ್ವಾಮಿಗಾಗಿ ಎದುರು ನೋಡುತ್ತಾ ಕಾಯುತ್ತಿದ್ದಾರೆ ಚಿಕ್ಕಮಗ್ಳೂರಿನ ಪದವೀಧರ!

    ಚಿಕ್ಕಮಗಳೂರು: ಕಳೆದ ನಾಲ್ಕೈದು ವರ್ಷದಿಂದ ಬಿಪಿ ಹಾಗೂ ಶುಗರ್‍ನಿಂದ ಬಳಲುತ್ತಿರೋ 24 ವರ್ಷದ ಪದವೀಧರ ಯುವಕನೊಬ್ಬ ನಾನು ಮೃತಪಡುವ ಮುನ್ನ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನ ನೋಡಬೇಕೆಂದು ಹಂಬಲಿಸುತ್ತಿದ್ದಾರೆ.

    ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಹೋಬಳಿಯ ಹಿರೇಗರ್ಜೆ ಗ್ರಾಮದ ಜಗದೀಶ್ ಕಳೆದ ನಾಲ್ಕೈದು ವರ್ಷಗಳಿಂದ ಬಿಪಿ ಹಾಗೂ ಶುಗರ್‍ನಿಂದ ಬಳಲುತ್ತಿದ್ದಾರೆ. 80 ಕೆ.ಜಿ. ಇದ್ದ ಈ ಯುವಕ ಇಂದು ಇರೋದು 15-16 ಕೆ.ಜಿ. ಮಲಗಿದ್ದಲ್ಲೇ ಎಲ್ಲಾ. ಸದಾ ಇವರ ಸೇವೆಗೆ ಮನೆಯಲ್ಲಿ ಒಬ್ಬರು ಇರಲೇಬೇಕು.

    ಕೂಲಿ ಮಾಡುವ ಹೆತ್ತವರು ನಾಲ್ಕೈದು ಲಕ್ಷ ಖರ್ಚು ಮಾಡಿದ್ದರೂ ಮಗನನನ್ನ ಹುಷಾರು ಮಾಡಲು ಸರಿಯಾಗದೆ ಕೈಚೆಲ್ಲಿ ಕೂತಿದ್ದಾರೆ. ದಿನದಿಂದ ದಿನಕ್ಕೆ ಆರೋಗ್ಯದ ಸ್ಥಿತಿ ಹದಗೆಡ್ತಿರೋ ಜಗದೀಶ್‍ಗೆ ಸಾಯುವ ಮುನ್ನ ಕುಮಾರಸ್ವಾಮಿಯನ್ನ ನೋಡುವ ಹಂಬಲ ವ್ಯಕ್ತಪಡಿಸಿದ್ದಾರೆ.

    ನಾನು ಸಾಯುವ ಮುನ್ನ ಶಾಸಕ ವೈ.ಎಸ್.ವಿ ದತ್ತ ಹಾಗೂ ಕುಮಾರಸ್ವಾಮಿಯನ್ನ ನೋಡಬೇಕೆಂಬ ಆಸೆ ಹೊಂದಿದ್ದೇನೆ. ಆದ್ರೆ, ಶಾಸಕ ದತ್ತ ಅವರು ಬಂದು ನೋಡಿಕೊಂಡು ಹೋಗಿದ್ದಾರೆ. ಇದೀಗ ಕೊನೆ ಬಾರಿ ಕುಮಾರಸ್ವಾಮಿಯನ್ನು ನೋಡಬೇಕೆಂದು ಹಂಬಲಿಸುತ್ತಿದ್ದಾರೆ.

  • ಬಾಬಾರ ಬಳಿಯಿಂದ ನಾಟಿ ಔಷಧಿ ಪಡೆದ ಚಿತ್ರದುರ್ಗದ ಪೇದೆ ಸಾವು

    ಬಾಬಾರ ಬಳಿಯಿಂದ ನಾಟಿ ಔಷಧಿ ಪಡೆದ ಚಿತ್ರದುರ್ಗದ ಪೇದೆ ಸಾವು

    ಚಿತ್ರದುರ್ಗ: ಮಧುಮೇಹಕ್ಕೆ ನಾಟಿ ಔಷಧ ಪಡೆದು ಕೋಮಾಗೆ ತೆರಳಿದ್ದ ಮುಖ್ಯಪೇದೆ ಮೃತಪಟ್ಟ ಘಟನೆ ನಡೆದಿದೆ.

    ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಡಿವೈಎಸ್.ಪಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲಿಸ್ ಪೇದೆ ಕಲೀಮುಲ್ಲಾ (43) ಎಂಬವರೇ ಮೃತ ದುರ್ದೈವಿ. ಕಳೆದ ಮೂರು ದಿನಗಳ ಹಿಂದೆ ಶುಗರ್ ಹೆಚ್ಚಾಗಿರುವುದಕ್ಕೆ ನಾಟಿ ಔಷಧಿ ಸೇವಿಸಿದ್ದರು.

    ಮೂರು ದಿನಗಳ ಹಿಂದೆ ಪೇದೆ ಬಾಬಾರೊಬ್ಬರ ಬಳಿ ತೆರಳಿ ಶುಗರ್ ತೀವ್ರಗೊಂಡಿರುವುದಕ್ಕೆ ನಾಟಿ ಔಷಧದ ರೂಪದಲ್ಲಿ ವಿಷಪೂರಿತ ಕಾಡಿನ ಬಳ್ಳಿ ರಸವನ್ನು ಮುಖ್ಯಪೇದೆ ಸೇವಿಸಿದ್ದರು. ಆ ಬಳಿಕ ಅವರು ಪ್ರಜ್ಞೆ ಕಳೆದುಕೊಂಡು ಕೋಮಾಗೆ ತೆರಳಿದ್ದರು.

    ಅಂತೆಯೇ ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಪೇದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ.

  • ಪ್ಲಾಸ್ಟಿಕ್ ಅಕ್ಕಿ, ಮೊಟ್ಟೆ ಆಯ್ತು- ಈಗ ಪ್ಲಾಸ್ಟಿಕ್ ಪಾಪಡ್?

    ಪ್ಲಾಸ್ಟಿಕ್ ಅಕ್ಕಿ, ಮೊಟ್ಟೆ ಆಯ್ತು- ಈಗ ಪ್ಲಾಸ್ಟಿಕ್ ಪಾಪಡ್?

    ಹುಬ್ಬಳ್ಳಿ: ಇದುವರೆಗೆ ಪ್ಲಾಸ್ಟಿಕ್ ಸಕ್ಕರೆ, ಪ್ಲಾಸ್ಟಿಕ್ ಅಕ್ಕಿ ಹಾಗೂ ಪ್ಲಾಸ್ಟಿಕ್ ಮೊಟ್ಟೆಗಳ ಬಗ್ಗೆ ಕೇಳಿದ್ವಿ. ಆದರೆ, ಅಗ್ಗದ ದರದಲ್ಲಿ ಎಂದರೆ ಕೇವಲ ಒಂದು ರೂಪಾಯಿಗೆ ಸಿಗೋ, ಮಕ್ಕಳು ಬಲು ಇಷ್ಟಪಟ್ಟು ತಿನ್ನೊ ಪಾಪಡಿಗಳೂ ಪ್ಲಾಸ್ಟಿಕ್ ನಿಂದ ತಯಾರಾಗುತ್ತಿದ್ಯಾ ಎನ್ನುವ ಅನುಮಾನ ಕಾಡುತ್ತಿದೆ.

    ಹುಬ್ಬಳ್ಳಿ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಸಿಗುವ ಈ ಪಾಪಡಿಯನ್ನು ಸುಟ್ಟರೆ ದಟ್ಟ ಕಪ್ಪು ಹೊಗೆ ಬರುತ್ತೆ. ಜೊತೆಗೆ ಈ ಪಾಪಡಿ ಸುಡುವಾಗ ಪ್ಲಾಸ್ಟಿಕ್ ಸುಟ್ಟ ಹಾಗೆ ವಾಸನೆಯೂ ಬರುತ್ತೆ. ಹೀಗಾಗಿ ಇದು ಪ್ಲಾಸ್ಟಿಕ್ ನಿಂದ ತಯಾರಿಸಿದ ಪಾಪಡ್ ಎನ್ನುವ ಅನುಮಾನ ಜನರಲ್ಲಿ ಮೂಡಿದೆ.

    ಈ ಹಿಂದೆ ಪ್ಲಾಸ್ಟಿಕ್ ನ ಕೆಲ ಆಹಾರ ಪದಾರ್ಥಗಳು ಮಾರಾಟವಾಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ಈಗ ಮತ್ತೊಂದು ಪ್ಲಾಸ್ಟಿಕ್‍ನ ಆಹಾರ ಪದಾರ್ಥವೊಂದು ಬೆಳಕಿಗೆ ಬಂದಿದ್ದು, ಇದರಲ್ಲಿಯೂ ಕೂಡಾ ಪ್ಲಾಸ್ಟಿಕ್ ಇದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಈ ರೀತಿಯ ಉದ್ದದ ಪಾಪಡ್ ಗಳನ್ನು ನಗರದಲ್ಲಿ ಉತ್ಪಾದನೆ ಮಾಡಲಾಗುತ್ತಿದ್ದು, ಶಾಲೆಗಳ ಅಕ್ಕ ಪಕ್ಕದಲ್ಲಿ ಎಗ್ಗಿಲ್ಲದೇ ಮಾರಾಟ ಮಾಡಲಾಗುತ್ತಿದೆ.

    ಸಾಮಾನ್ಯ ಪಾಪಡಿಗಳಿಗಿಂತ ಈ ಪಾಪಡ್ ಗಳು ನೋಡಲು ಹಾಗೂ ತಿನ್ನಲು ವಿಭಿನ್ನವಾಗಿದ್ದು, ತಿಂದರೆ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತದೆಯಂತೆ. ಇನ್ನು ಇವುಗಳಿಗೆ ಬೆಂಕಿ ಹಚ್ಚಿದರೆ ಪ್ಲಾಸ್ಟಿಕ್ ಹಾಗೇ ಉರಿಯುತ್ತವೆ. ಜೊತೆಗೆ ಕೊನೆಯಲ್ಲಿ ಕೆಲ ತ್ಯಾಜ್ಯ ವಸ್ತುಗಳು ಉಳಿಯುತ್ತವೆ. ಹೀಗಾಗಿ ಇದರಲ್ಲಿ ಪ್ಲಾಸ್ಟಿಕ್ ಇದೆ ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿದೆ.

     

  • ಅಕ್ಕಿ, ಮೊಟ್ಟೆ, ಸಕ್ಕರೆ ಸಮಸ್ಯೆ ಇಲ್ಲ, ಪ್ಲಾಸ್ಟಿಕ್ ಫುಡ್ ಬಗ್ಗೆ ಆತಂಕ ಬೇಡ: ಆಹಾರ ಇಲಾಖೆಯಿಂದ ಸ್ಪಷ್ಟನೆ

    ಅಕ್ಕಿ, ಮೊಟ್ಟೆ, ಸಕ್ಕರೆ ಸಮಸ್ಯೆ ಇಲ್ಲ, ಪ್ಲಾಸ್ಟಿಕ್ ಫುಡ್ ಬಗ್ಗೆ ಆತಂಕ ಬೇಡ: ಆಹಾರ ಇಲಾಖೆಯಿಂದ ಸ್ಪಷ್ಟನೆ

    ಬೆಂಗಳೂರು: ಪ್ಲಾಸ್ಟಿಕ್ ಫುಡ್ ಆತಂಕದಲ್ಲಿರುವ ಬೆಂಗಳೂರು ಜನರಿಗೆ ಒಂದು ಗುಡ್‍ನ್ಯೂಸ್. ನೀವು ತಿನ್ನೋದು ಪ್ಲಾಸ್ಟಿಕ್ ಅಕ್ಕಿ ಅಲ್ಲ. ಪ್ಲಾಸ್ಟಿಕ್ ಮೊಟ್ಟೆ ಅಲ್ಲ. ಆಹಾರ ಸುರಕ್ಷತಾ ಅಧಿಕಾರಿಗಳು ನಡೆಸಿದ ಲ್ಯಾಬ್ ರಿಪೋರ್ಟ್‍ನಲ್ಲಿ ಈ ವಿಚಾರ ಬಹಿರಂಗವಾಗಿದೆ.

    ರಾಜ್ಯದ ಕೆಲವೆಡೆ ಪ್ಲಾಸ್ಟಿಕ್ ಅಕ್ಕಿ, ಮೊಟ್ಟೆ ಮಾರಾಟವಾಗುತ್ತಿದೆ ಎಂಬ ಸುದ್ದಿ ಹರಡುತ್ತಿದ್ದಂತೆಯೇ ಬೆಂಗಳೂರಿನಲ್ಲಿ ಸ್ಯಾಂಪಲ್ ಅಕ್ಕಿ, ಸಕ್ಕರೆ, ಮೊಟ್ಟೆಯನ್ನು ಸರ್ಕಾರಿ ಲ್ಯಾಬ್ ಹಾಗೂ ಖಾಸಗಿ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗಿತ್ತು. ಸದ್ಯ ಈ ಸ್ಯಾಂಪಲ್ ಟೆಸ್ಟ್ ವರದಿ ಅಧಿಕಾರಿಗಳ ಕೈ ಸೇರಿದೆ. ಬೆಂಗಳೂರಿನಲ್ಲಿ ಯಾವುದೇ ಪ್ಲಾಸ್ಟಿಕ್ ಅಕ್ಕಿ, ಪ್ಲಾಸ್ಟಿಕ್ ಮೊಟ್ಟೆ ಇಲ್ಲ ಅಂತ ಆಹಾರ ಸುರಕ್ಷತಾ ಇಲಾಖೆ ಉಪ ಆಯುಕ್ತ ಡಾ. ಹರ್ಷವರ್ಧನ್ ಸ್ಪಷ್ಟಪಡಿಸಿದ್ದಾರೆ.

    ಕೊಪ್ಪಳ, ಮಂಡ್ಯ, ರಾಮನಗರದ ಸ್ಯಾಂಪಲ್‍ಗಳನ್ನು ಪರೀಕ್ಷಿಸಲು ಮೈಸೂರಿಗೆ ಕಳುಹಿಸಲಾಗಿದ್ದು, ಏಳು ದಿನಗಳಲ್ಲಿ ಅದರ ವರದಿ ಕೂಡ ಸಿಗಲಿದೆ.

    ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಜನರುಮನೆಯಲ್ಲಿಬಳಸಿದ ಅಕ್ಕಿಯಿಂದ ಅನಾರೋಗ್ಯ ಉಂಟಾದ ಹಿನ್ನೆಲೆಯಲ್ಲಿ ತಾವು ಬಳಸುತ್ತಿರುವುದು ಪ್ಲಾಸ್ಟಿಕ್ ಅಕ್ಕಿ ಎಂದು ಆತಂಕಗೊಂಡಿದ್ದರು. ಅಕ್ಕಿಯನ್ನು ಬೇಯಿಸಿ ಉಂಡೆ ಮಾಡಿ ನೆಲಕ್ಕೆ ಬಡಿದರೆ ಅದು ಬೌನ್ಸ್ ಆಗುತ್ತಿದ್ದ ಕಾರಣ ಆತಂಕ ಸೃಷ್ಟಿಯಾಗಿತ್ತು. ಇದೀಗ ಆಹಾರ ಸುರಕ್ಷತಾ ಇಲಾಖೆಯ ವರದಿ ಬಂದಿದ್ದು, ಅಕ್ಕಿ, ಮೊಟ್ಟೆ, ಸಕ್ಕರೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದಿದ್ದಾರೆ.

  • ನೀವು ತಿನ್ನುವ ಸಕ್ಕರೆ ಆರೋಗ್ಯಕ್ಕೆ ಎಷ್ಟು ಸೇಫ್?- ನೀರಿಗೆ ಹಾಕಿ ಪರೀಕ್ಷೆ ಮಾಡಿ

    ನೀವು ತಿನ್ನುವ ಸಕ್ಕರೆ ಆರೋಗ್ಯಕ್ಕೆ ಎಷ್ಟು ಸೇಫ್?- ನೀರಿಗೆ ಹಾಕಿ ಪರೀಕ್ಷೆ ಮಾಡಿ

    -ಮಂಡ್ಯದಲ್ಲಿ ಅಕ್ಕಿಯಲ್ಲಿ ಸಿಕ್ತು ಪ್ಲಾಸ್ಟಿಕ್!

    ಚಿಕ್ಕಬಳ್ಳಾಪುರ: ನೀವು ಬಳಸುವ ಸಕ್ಕರೆ ಆರೋಗ್ಯಕ್ಕೆ ಎಷ್ಟು ಸೇಫ್ ಎಂಬುದನ್ನು ಒಮ್ಮೆ ನೀರಿಗೆ ಹಾಕಿ ಪರೀಕ್ಷೆ ಮಾಡಿ. ಕೆಲವು ದಿನಗಳ ಹಿಂದೆ ಅನ್ನಭಾಗ್ಯದ ಉಪ್ಪು ನೀಲಿ ಬಣ್ಣಕ್ಕೆ ತಿರುಗಿದ ಸುದ್ದಿ ಪ್ರಕಟವಾಗಿತ್ತು. ಇದೀಗ ಸಕ್ಕರೆಯ ಸರದಿ. ಚಿಕ್ಕಬಳ್ಳಾಪುರ ನಗರದ ಹೋಟೆಲ್‍ವೊಂದರಲ್ಲಿ ಸಕ್ಕರೆ ಹಸಿರು ಬಣ್ಣಕ್ಕೆ ತಿರುಗಿ ಜನರಲ್ಲಿ ಆತಂಕ ಉಂಟುಮಾಡಿದೆ.

    ಇಂದು ಬೆಳಗ್ಗೆ ಗ್ರಾಹಕ ಸ್ನೇಕ್ ಪ್ರಥ್ವಿರಾಜ್ ಎಂಬವರು ಮೊಸರಿನ ಜೊತೆ ಸಕ್ಕರೆ ಮಿಶ್ರಣ ಮಾಡಿ ಸೇವಿಸುವಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಹೀಗಾಗಿ ಮತ್ತೆರೆಡು ಬಾರಿ ಇದೇ ರೀತಿ ಮೊಸರು ಹಾಗೂ ನೀರಿಗೆ ಸಕ್ಕರೆ ಮಿಶ್ರಣ ಮಾಡಿ ಪರಿಶೀಲನೆ ನಡೆಸಿದಾಗ ಸಕ್ಕರೆ ಮಿಶ್ರಿತ ನೀರು ಸಂಪೂರ್ಣ ಹಸಿರು ಬಣ್ಣಕ್ಕೆ ತಿರುಗಿದೆ. ಸಕ್ಕರೆಯಲ್ಲಿ ಯಾವೋದೋ ಕೆಮಿಕಲ್ ಸೇರಿರಬೇಕೆಂಬ ಅನುಮಾನ ಮೂಡಿದೆ. ಹೀಗಾಗಿ ಸಂಬಂಧಪಟ್ಟವರು ಸಕ್ಕರೆಯ ಗುಣಮಟ್ಟದ ಪರೀಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಗ್ರಾಹಕರು ಒತ್ತಾಯಿಸಿದ್ದಾರೆ.

    ಪ್ಲಾಸ್ಟಿಕ್ ಅಕ್ಕಿ: ಪಡಿತರದಾರರಿಗೆ ಸೊಸೈಟಿಯಲ್ಲಿ ವಿತರಿಸಿರುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ವಸ್ತು ಪತ್ತೆಯಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ರಾಗಿಬೊಮ್ಮನಹಳ್ಳಿಯ ನಿವಾಸಿ ಪುಟ್ಟರಾಜು ಅವರು ಮಾರ್ಚ್ 23 ರಂದು ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 40 ಕೆಜಿ ಅಕ್ಕಿ ತೆಗೆದುಕೊಂಡಿದ್ದರು.

    ಕೆಲ ದಿನದ ಬಳಿಕ ಸ್ವಲ್ಪ ಅಕ್ಕಿಯನ್ನು ತೆಗೆದುಕೊಂಡು ಹೋಗಿ ಮಿಲ್ ಮಾಡಿಸಿಕೊಂಡು ಮನೆಗೆ ತಂದಿದ್ದಾರೆ. ಮನೆಯಲ್ಲಿ ರೊಟ್ಟಿ ಮಾಡಲು ಮುಂದಾದಾಗ ಪ್ಲಾಸ್ಟಿಕ್ ವಸ್ತು ಸಿಕ್ಕಿದೆ. ಬಳಿಕ ಮಿಲ್ ಮಾಡಿಸಿದ ಅಕ್ಕಿಯನ್ನು ಪರಿಶೀಲನೆ ನಡೆಸಿದಾಗ ಸುಮಾರು ಒಂದು ಹಿಡಿಯಷ್ಟು ಪ್ಲಾಸ್ಟಿಕ್ ವಸ್ತು ಪತ್ತೆಯಾಗಿದೆ ಎಂದು ಹೇಳಲಾಗಿದೆ.

    https://www.youtube.com/watch?v=2xgKCWaCgJs