Tag: Suhas Yatiraj

  • ಬೆಳ್ಳಿ ಹುಡುಗ ಸುಹಾಸ್‍ಗೆ ಕುಟುಂಬಸ್ಥರ ಅಭಿನಂದನೆ

    ಬೆಳ್ಳಿ ಹುಡುಗ ಸುಹಾಸ್‍ಗೆ ಕುಟುಂಬಸ್ಥರ ಅಭಿನಂದನೆ

    ಬೆಂಗಳೂರು: ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ತಂದು ಕೊಟ್ಟ ಐಎಎಸ್ ಅಧಿಕಾರಿಯ ಸಾಧನೆಗೆ ಕುಟುಂಬದವರು ಅಭಿನಂದಿಸಿ ಭಾವುಕರಾಗಿದ್ದಾರೆ.

    ಟೋಕಿಯೋದಲ್ಲಿ ನಡೆಯುತ್ತಿರೋ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಇಂದು ಮತ್ತೊಂದು ಬೆಳ್ಳಿ ಪದಕ ಸಿಕ್ಕಿದೆ. ಈ ಬೆಳ್ಳಿ ಪದಕವನ್ನು ನಮ್ಮ ಕರ್ನಾಟಕದ ಹಾಸನ ಮೂಲದ ಸುಹಾಸ್ ಯತಿರಾಜ್ ತಂದುಕೊಟ್ಟಿದ್ದು, ಕನ್ನಡಿಗರಿಗೆ ಹೆಮ್ಮೆಯ ವಿಚಾರವಾಗಿದೆ. ಇದನ್ನೂ ಓದಿ: ದೂಡಾದಲ್ಲಿ ಅರ್ಜಿ ಹಾಕೋಕೆ 4ರಿಂದ 5 ಸಾವಿರ ಕೊಡ್ಬೇಕಂತೆ..!

    ಐಎಎಸ್ ಅಧಿಕಾರಿ!:ಸುಹಾಸ್ ಯತಿರಾಜ್ ಅವರು ಐಎಎಸ್ ಅಧಿಕಾರಿ ಕೂಡ ಆಗಿದ್ದಾರೆ. ನೋಯ್ಡಾದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಡಳಿತಾಧಿಕಾರಿಯಾಗಿ ಸುಹಾಸ್ ಕಾರ್ಯ ನಿರ್ವಹಿಸುತ್ತಿದ್ದಾರೆ.

    ಸುಹಾಸ್ ಪ್ಯಾರಾಲಿಂಪಿಕ್ಸ್ ಗೇಮ್ಸ್‍ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ವಿಶೇಷ ಸಾಧನೆ ಮಾಡಿದ್ದು, ಪ್ಯಾರಾಲಿಂಪಿಕ್ ಪದಕ ಗೆದ್ದ ಮೊದಲ ಐಎಎಸ್ ಅಧಿಕಾರಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದನ್ನೂ ಓದಿ:ಮಾಜಿ ಸೈನಿಕನಿಗೆ ಅಪಮಾನ – ರಾಷ್ಟ್ರಧ್ವಜ ಹಿಡಿದು ಮಾಜಿ ಸೈನಿಕರಿಂದ ಟೋಲ್ ಗೆ ಮುತ್ತಿಗೆ

    ಪುರುಷರ ಸಿಂಗಲ್ಸ್ ಎಸ್‍ಎಲ್ 4 ನಲ್ಲಿ 21-15, 21-15-21 ರಲ್ಲಿ ಅಗ್ರ ಶ್ರೇಯಾಂಕಿತ ಮತ್ತು ವಿಶ್ವ ಚಾಂಪಿಯನ್ ಫ್ರಾನ್ಸ್‍ನ ಲ್ಯೂಕಾಸ್ ಮಜೂರ್ ವಿರುದ್ಧ ಸೋತು ಬೆಳ್ಳಿ ಪದಕ ಪಡೆದಿದ್ದಾರೆ.

    ಸುಹಾಸ್ ಬೆಳ್ಳಿ ಪದಕ ಪಡೆಯುತ್ತಿದ್ದಂತೆ ಅವರ ಕುಟುಂಬದವರಲ್ಲಿ ಸಂಭ್ರಮ ಮನೆ ಮಾಡಿತ್ತು. ಅಣ್ಣನ ಸಾಧನೆ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ತಮ್ಮ ಶರತ್ ಯತಿರಾಜ್ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಜೊತೆಗೆ ಸುಹಾಸ್ ಯತಿರಾಜ್ ನಾದಿನಿ ಸಂಜನಾ ಕೂಡ ತಮ್ಮ ಭಾವನ ಸಾಧನೆಯನ್ನು ಹೊಗಳಿ ನಾವೆಲ್ಲರೂ ಹೆಮ್ಮೆ ಪಡುವಂತೆ ಮಾಡಿದ್ದಾರೆ ಎಂದರು. ಇದನ್ನೂ ಓದಿ:ಆತ್ಮಹತ್ಯೆಗೆ ಮುಂದಾಗಿದ್ದ ವೃದ್ಧೆಯನ್ನು ರಕ್ಷಿಸಿದ ಯುವಕರು

  • ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ವೀರ ಕನ್ನಡಿಗ ಸುಹಾಸ್ ಬೆಳ್ಳಿ ಸಾಧನೆ

    ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ವೀರ ಕನ್ನಡಿಗ ಸುಹಾಸ್ ಬೆಳ್ಳಿ ಸಾಧನೆ

    ಟೋಕಿಯೋ: ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ವೀರ ಕನ್ನಡಿಗ ಬೆಳ್ಳಿ ಗೆದ್ದಿದ್ದಾರೆ. ಕರ್ನಾಟಕ ಮೂಲದ ಐಎಎಸ್ ಅಧಿಕಾರಿ ಸುಹಾಸ್ ಯತಿರಾಜ್ ಬ್ಯಾಡ್ಮಿಂಟನ್‍ನಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದು, ಈ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

    ಬ್ಯಾಡ್ಮಿಂಟನ್ ಫೈನಲ್‍ನ SL4 ವಿಭಾಗದಲ್ಲಿ ಫ್ರಾನ್ಸ್ ನ ಲುಕಾಸ್ ಮಜೂರ್ ಎದುರು 15-21, 21-17, 21-15 ಅಂತರದಲ್ಲಿ ಸೋಲು ಅನುಭವಿಸಿ ಬೆಳ್ಳಿ ಕೊರಳಿಗೇರಿಸಿಕೊಂಡಿದ್ದಾರೆ. ಇಂದು ಮುಂಜಾನೆ ಚಿನ್ನದ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಫ್ರಾನ್ಸ್ ನ ಲುಕಾಸ್ ಮಜೂರ್ ವಿರುದ್ಧ ಸೋತಿದ್ದಾರೆ. ಇದನ್ನೂ ಓದಿ: ಬ್ಯಾಡ್ಮಿಂಟನ್ ಅವಳಿ ಪದಕ- ಪ್ರಮೋದ್ ಭಗತ್‍ಗೆ ಚಿನ್ನ, ಮನೋಜ್ ಸರ್ಕಾರ್‌ಗೆ ಕಂಚು

    ಶಿವಮೊಗ್ಗ ಮೂಲದ ಯತಿರಾಜ್ ಹಾಗೂ ಹಾಸನ ಮೂಲದ ಜಯಶ್ರೀ ಅವರ ಪುತ್ರ ಸುಹಾಸ್ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಸದ್ಯ ಉತ್ತರ ಪ್ರದೇಶದ ನೋಯ್ಡಾದಲ್ಲಿ ಸುಹಾಸ್ ಜಿಲ್ಲಾಧಿಕಾರಿಯಾಗಿದ್ದಾರೆ. ಸುಹಾಸ್ ಅವರ ಪತ್ನಿ ರಿತು ಗಾಜಿಯಾಬಾದ್‍ನಲ್ಲಿ ಸಹಾಯಕ ವಿಭಾಗಾಧಿಕಾರಿ ಆಗಿದ್ದಾರೆ.

    ಸುಹಾಸ್ ಯತಿರಾಜ್ ಸಾಧನೆಗೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅಭಿನಂದನೆ ಸಲ್ಲಿಸಿದ್ದಾರೆ. ಸುಹಾಸ್ ಅವರ ಬೆಳ್ಳಿ ಬೇಟೆಯೊಂದಿಗೆ ಪ್ಯಾರಾ ಒಲಿಂಪಿಕ್ಸ್ ನಲ್ಲಿ ಭಾರತದ ಪದಕಗಳ ಸಂಖ್ಯೆ 19ಕ್ಕೆ ಏರಿದೆ. 5 ಚಿನ್ನ, 8 ಬೆಳ್ಳಿ, 6 ಕಂಚು ಪದಕಗಳನ್ನು ಭಾರತ ಗೆದ್ದಿದೆ.