Tag: suicide bomb

  • ಪುಲ್ವಾಮಾದಲ್ಲಿ ಮತ್ತೆ ಗುಂಡಿನ ಸದ್ದು – ಮೂವರು ಉಗ್ರರನ್ನು ಸುತ್ತುವರಿದ ಸೇನೆ

    ಪುಲ್ವಾಮಾದಲ್ಲಿ ಮತ್ತೆ ಗುಂಡಿನ ಸದ್ದು – ಮೂವರು ಉಗ್ರರನ್ನು ಸುತ್ತುವರಿದ ಸೇನೆ

    – ನಾಲ್ವರು ಯೋಧರಿಗೆ ಗಾಯ

    ಶ್ರೀನಗರ: ಉಗ್ರರ ಅಟ್ಟಹಾಸಕ್ಕೆ ತುತ್ತಾದ ಪುಲ್ವಾಮಾದಲ್ಲಿ ಉಗ್ರರ ಬೇಟೆ ಮುಂದುವರಿದಿದ್ದು, ಇಂದು ಯೋಧರು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಕಾಳಗ ನಡೆದಿದೆ.

    40 ಯೋಧರ ಬಲಿ ಪಡೆದ ಆದಿಲ್ ದಾರ್ ಗೆ ನೆರವು ನೀಡಿದ ಆರೋಪಿಗಳು ಮನೆಯೊಂದರಲ್ಲಿ ಅಡಗಿರುವ ಖಚಿತ ಮೇರೆಗೆ ಸೇನೆ ಕಾರ್ಯಾಚರಣೆ ನಡೆಸಿದೆ. ಕಳೆದ ನಾಲ್ಕು ಗಂಟೆಗಳಿಂದ ಉಗ್ರರು ಮತ್ತು ಸೇನೆ ನಡುವೆ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಇಬ್ಬರಿಂದ ಮೂವರು ಉಗ್ರರನ್ನು ಸೇನೆ ಸುತ್ತವರಿದಿದೆ. ಇದುವರೆಗೂ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದಾರೆ.

    40 ಯೋಧರು ಹುತಾತ್ಮ:
    ಗುರುವಾರ ಬೆಳಗ್ಗೆ 3.30ಕ್ಕೆ ಜಮ್ಮುವಿನಿಂದ ಶ್ರೀನಗರಕ್ಕೆ 78 ಸಿಆರ್‍ಪಿಎಫ್ ವಾಹನಗಳಲ್ಲಿ 2,547 ಯೋಧರು ಪ್ರಯಾಣಿಸುತ್ತಿದ್ದರು. ಶ್ರೀನಗರಕ್ಕೆ 20 ಕಿ.ಮೀ ದೂರದಲ್ಲಿದ್ದಾಗ 350 ಕೆಜಿ ಸುಧಾರಿತ ಸ್ಫೋಟಕಗಳನ್ನು ತುಂಬಿದ್ದ ಬಿಳಿ ಬಣ್ಣದ ಸ್ಕಾರ್ಪಿಯೋ ಕಾರನ್ನು ಉಗ್ರನೊಬ್ಬ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದನು. ಡಿಕ್ಕಿ ಹೊಡೆದ ರಭಸಕ್ಕೆ ಸ್ಫೋಟಕಗಳು ಸ್ಫೋಟಗೊಂಡ ಪರಿಣಾಮ 40 ಮಂದಿ ಸೈನಿಕರು ವೀರ ಮರಣವನ್ನು ಅಪ್ಪಿದ್ದಾರೆ. ಇದನ್ನೂ ಓದಿ:  ಛಿದ್ರ ಛಿದ್ರವಾದ ಆ ಬಸ್ಸಿನಲ್ಲಿದ್ದ 40 ವೀರ ಯೋಧರ ರೋಚಕ ಕಥೆ ನಿಮಗೆ ತಿಳಿದಿರಲೇಬೇಕು

    ಸ್ಫೋಟದ ತೀವ್ರತೆ ಎಷ್ಟು ಇತ್ತು ಎಂದರೆ ಸೈನಿಕರ ದೇಹದ ಭಾಗಗಳು ಹೈವೇಯ 100 ಮೀಟರ್ ದೂರದಲ್ಲಿ ಪತ್ತೆಯಾಗಿತ್ತು. ಸ್ಫೋಟಕಗೊಂಡ ಬಳಿಕ ಉಳಿದ ಬಸ್ಸುಗಳು ನಿಂತ ಮೇಲೆ ಅವುಗಳ ಮೇಲೂ ಉಗ್ರರು ದಾಳಿ ನಡೆಸಿದ್ದರು. ಪೂರ್ವನಿಯೋಜಿತ ಕೃತ್ಯವಾಗಿದ್ದರಿಂದ ಸೈನಿಕರ ವಾಹನವನ್ನು ಉಗ್ರರು ಹಿಂಬಾಲಿಸಿಕೊಂಡು ಬಂದಿದ್ದರು. ಹೀಗಾಗಿ ಸಾವು, ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಉಗ್ರರ ಈ ದಾಳಿಗೆ ಸಾಕ್ಷ್ಯ ಎಂಬಂತೆ ಬಸ್ಸಿನ ಹಿಂಭಾಗದಲ್ಲಿ ಬುಲೆಟ್ ಗುರುತು ಬಿದ್ದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ದಾಳಿ ಬಗ್ಗೆ ಮೊದ್ಲೇ ಸಿಕ್ಕಿತ್ತು ಸುಳಿವು- ಕಣಿವೆ ರಾಜ್ಯದ ಖಾಕಿಗಳಿಗೆ ಬಂದಿತ್ತು ಐಬಿ ಪತ್ರ

    ದಾಳಿ ಬಗ್ಗೆ ಮೊದ್ಲೇ ಸಿಕ್ಕಿತ್ತು ಸುಳಿವು- ಕಣಿವೆ ರಾಜ್ಯದ ಖಾಕಿಗಳಿಗೆ ಬಂದಿತ್ತು ಐಬಿ ಪತ್ರ

    ಪುಲ್ವಾಮಾ(ಜಮ್ಮು-ಕಾಶ್ಮೀರ): ಪುಲ್ವಾಮಾದಲ್ಲಿ ಉಗ್ರ ನಡೆಸಿದ ದಾಳಿಯ ಬಗ್ಗೆ ಮೊದಲೇ ಮುನ್ಸೂಚನೆ ಸಿಕ್ಕಿತ್ತು. ಗುಪ್ತಚರ ಇಲಾಖೆ ನೀಡಿದ್ದ ಆ ಅರ್ಜೆಂಟ್ ಮ್ಯಾಟರ್ ಕಡೆಗಣಿಸಿದ್ದಕ್ಕೆ 40 ಯೋಧರು ಬಲಿ ಆದ್ರಾ ಅನ್ನೋ ಪ್ರಶ್ನೆಯೊಂದು ಇದೀಗ ಎಲ್ಲರ ಮನದಲ್ಲಿ ಕಾಡುತ್ತಿದೆ.

    ಹೌದು. ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿ ನಡೆಯೋ 6 ದಿನ ಮೊದಲೇ ತುರ್ತು ಲೆಟರೊಂದು ಹೋಗಿತ್ತು. ಈ ತುರ್ತು ಸಂದೇಶದ ಸಿಗ್ನಲ್ ಜಮ್ಮು ಕಾಶ್ಮೀರದ ಎಲ್ಲಾ ಭದ್ರತಾ ಪಡೆಗಳಿಗೆ ಹೋಗಿತ್ತು. ಇದನ್ನು ಪರಿಗಣಿಸಿ ಮೊದಲೇ ಎಚ್ಚೆತ್ತುಕೊಂಡಿದಿದ್ದರೆ ಈ ಭಯಾನಕ ದಾಳಿಯನ್ನು ತಪ್ಪಿಸಬಹುದಾಗಿತ್ತು. ಸಿಆರ್ ಪಿಎಫ್ ಗೆ ಬರೆದಿದ್ದ ಈ ಗೌಪ್ಯ ಮತ್ತು ತುರ್ತು ಸಂದೇಶ ಇದಿಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ. ಇದನ್ನೂ ಓದಿ: ಕಾರು ಬಾಂಬ್ ಸೇನೆಗೆ ಹೊಸ ತಲೆನೋವಾಗಿದ್ದು ಹೇಗೆ? ಏನಿದು ವಿಬಿಐಇಡಿ?

    ಗುಪ್ತಚರ ಇಲಾಖೆ ಈ ಬಗ್ಗೆ ಮಾಹಿತಿ ನೀಡಿತ್ತಾ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಿದ್ರೆ, ಹೌದು ಅಂತಿದೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ಪತ್ರ. ಐಇಡಿ ಸ್ಫೋಟಕ ಬಳಕೆಯ ಕುರಿತು 6 ದಿನಗಳ ಹಿಂದೆಯೇ ಇಂಟಲಿಜೆನ್ಸ್ ಬ್ಯೂರೋಗೆ ಮಾಹಿತಿ ಇತ್ತು. ಈ ಬಗ್ಗೆ ಕಾಶ್ಮೀರದ ಎಲ್ಲಾ ಭಾಗಗಳಿಗೆ ಅರ್ಜೆಂಟ್ ಮ್ಯಾಟರ್ ಅಂತ ಪತ್ರಗಳನ್ನು ಕೂಡಾ ರವಾನಿಸಲಾಗಿತ್ತು ಎನ್ನಲಾಗ್ತಿದೆ. ಆ ಪತ್ರದ ಪ್ರತಿ ಇದೀಗ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ಪಾಕ್ ಗಡಿ ಬಳಿಯೇ ವಾಯುಪಡೆ ಶಕ್ತಿ ಪ್ರದರ್ಶನ – ಎಚ್ಚರಿಕೆ ಸಂದೇಶ ರವಾನಿಸಿದ ಭಾರತ – ವಿಡಿಯೋ ನೋಡಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದಾಳಿಗೂ ನಮಗೂ ಸಂಬಂಧ ಕಲ್ಪಿಸೋದು ಸರಿಯಲ್ಲ- ಪಾಕ್ ಮೊಂಡುತನ

    ದಾಳಿಗೂ ನಮಗೂ ಸಂಬಂಧ ಕಲ್ಪಿಸೋದು ಸರಿಯಲ್ಲ- ಪಾಕ್ ಮೊಂಡುತನ

    ಪುಲ್ವಾಮಾ(ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರನ ಆತ್ಮಾಹುತಿ ದಾಳಿ ವಿಚಾರದಲ್ಲಿ ಪಾಕಿಸ್ತಾನ ತನ್ನ ಹಳೇ ರಾಗ ಮುಂದುವರಿಸಿದೆ. ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಉಗ್ರರ ದಾಳಿಗೂ ನಮಗೂ ಸಂಬಂಧ ಕಲ್ಪಿಸೋದು ಸರಿಯಲ್ಲ ಅಂತ ಮೊಂಡುತನ ಮುಂದುವರಿಸಿದೆ.

    ಈ ಬೆನ್ನಲ್ಲೆ ಪಾಕಿಸ್ತಾನ ಸೈನಿಕರು ಪೂಂಛ್ ವಯಲದಲ್ಲಿ ಕದನ ವಿರಾಮ ಉಲ್ಲಂಘಿಸಿದ್ದು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಭದ್ರತಾ ಸಂಪುಟ ಸಮಿತಿ ಸಭೆ ನಡೆಸುತ್ತಿದ್ದು, ಈ ಮಧ್ಯೆ ಇಂದು ಜಮ್ಮು ಕಾಶ್ಮೀರದ ಪುಲ್ವಾಮಾಗೆ ಗೃಹಸಚಿವ ರಾಜನಾಥ್ ಸಿಂಗ್ ಮತ್ತು ಎನ್‍ಐಎ ತಂಡ ಭೇಟಿ ನೀಡಲಿದೆ.

    ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು ಬಂದ್‍ಗೆ ಕರೆ ನೀಡಲಾಗಿದೆ. ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಜಮ್ಮು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್, ದಾಳಿಯ ಬಗ್ಗೆ ಮುನ್ಸೂಚನೆ ಇತ್ತು. ಆದ್ರೂ ಸರಿಯಾದ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದೇ ದಾಳಿಗೆ ಕಾರಣ ಅಂತಾ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹುತಾತ್ಮ ಯೋಧ ಗುರು ಮನೆಗೆ ತೆರಳಿ ಕುಟುಂಬಸ್ಥರಿಗೆ ಜಿಲ್ಲಾಧಿಕಾರಿ ಸಾಂತ್ವಾನ

    ಹುತಾತ್ಮ ಯೋಧ ಗುರು ಮನೆಗೆ ತೆರಳಿ ಕುಟುಂಬಸ್ಥರಿಗೆ ಜಿಲ್ಲಾಧಿಕಾರಿ ಸಾಂತ್ವಾನ

    ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ ದೊಡ್ಡಿ ಸಮೀಪದ ಗುಡಿಕೆರೆ ಕಾಲೋನಿಯ ಯೋಧ ಗುರು ಎಚ್(33) ಹುತಾತ್ಮರಾಗಿದ್ದು, ಜಿಲ್ಲಾಧಿಕಾರಿ ಎನ್ ಮಂಜುಶ್ರೀ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರು ಕುಟುಂಬಕ್ಕೆ ಜಿಲ್ಲಾಡಳಿತದಿಂದ ಯಾವುದೇ ರೀತಿಯ ನೆರವಿಗೆ ಸಿದ್ಧವಿದೆ. ಕುಟುಂಬಸ್ಥರು ಧೈರ್ಯವಾಗಿರಬೇಕು ಹಾಗೆಯೇ ಹೆಚಚ್ಚಿನ ಆತಂಕಕ್ಕೆ ಒಳಗಾಗಬಾರದು ಎಂದು ಅವರು ಮನವಿ ಮಾಡಿಕೊಂಡರು.

    ಮೃತರ ಶರೀರ ಇಂದು ಅಥವಾ ನಾಳೆ ಸ್ವ-ಗ್ರಾಮಕ್ಕೆ ವಾಪಸ್ಸಾಗಲಿದೆ. ಆದ್ರೆ ಇನ್ನೂ ನಾವು ಅಧಿಕೃತ ಮಾಹಿತಿಗಾಗಿ ಕಾಯುತ್ತಿದ್ದೇವೆ. ಅದು ಬಂದ ನಂತರ ಇದೇ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸುವುದಾಗಿ ಅವರು ಹೇಳಿದರು.

    ಈಗಾಗಲೇ ನಾನು ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಅಂತ್ಯಕ್ರಿಯೆಗಾಗಿ ತಾಲೂಕು ಆಡಳಿತದಿಂದ ಎರಡು ಜಾಗವನ್ನು ಗುರುತಿಸಿದ್ದೇವೆ. ಎರಡರಲ್ಲಿ ಯಾವುದು ಸೂಕ್ತ ಎನ್ನುವುದನ್ನು ನೋಡಿ ಅಂತಿಮ ಮಾಡುತ್ತೇವೆ. ಗುರು ಹುತಾತ್ಮರಾದ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಆದ್ರೆ ದೆಹಲಿಯಲ್ಲಿರುವ ಸಿಆರ್ ಪಿ ಎಫ್ ಕಚೇರಿಗೆ ಕರೆ ಮಾಡಿ ಕೇಳಿದಾಗ ಸಾವಾಗಿರುವುದು ನಿಶ್ಚಿತ ಎಂಬ ಮಾಹಿತಿ ಲಭಿಸಿದೆ ಎಂದು ಅವರು ತಿಳಿಸಿದ್ರು.

    ಗುರುವಾರ ಮಧ್ಯಾಹ್ನ 3.30ರ ಸುಮಾರಿಗೆ ಜೈಶ್-ಎ- ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಅದಿಲ್ ದರ್ ಎಂಬ ಉಗ್ರ ಸ್ಕಾರ್ಪಿಯೋ ಕಾರಿನಲ್ಲಿ ಸ್ಫೋಟಕ ತುಂಬಿ ಆತ್ಮಾಹುತಿ ದಾಳಿ ಮಾಡಿದ್ದನು. ಈ ದಾಳಿಯಲ್ಲಿ ಇದೂವರೆಗೆ 44 ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆ.

    https://www.youtube.com/watch?v=Cagqto-A9E0

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪುಲ್ವಾಮಾದಲ್ಲಿ ದಾಳಿ ನಡೆಯೋ ಬಗ್ಗೆ ಮೊದ್ಲೇ ಸಿಕ್ಕಿತ್ತಾ ಸುಳಿವು..?

    ಪುಲ್ವಾಮಾದಲ್ಲಿ ದಾಳಿ ನಡೆಯೋ ಬಗ್ಗೆ ಮೊದ್ಲೇ ಸಿಕ್ಕಿತ್ತಾ ಸುಳಿವು..?

    ಪುಲ್ವಾಮಾ: ಜಮ್ಮು ಕಾಶ್ಮೀರದ ಆವಂತಿಪುರದಲ್ಲಿ ಉಗ್ರ ನಡೆಸಿದ ಆತ್ಮಾಹುತಿ ದಾಳಿಯ ಬಗ್ಗೆ ಭಾರತಕ್ಕೆ ಮೊದಲೇ ಸುಳಿವು ಸಿಕ್ಕಿದೆಯಾ ಎನ್ನುವ ಚರ್ಚೆಯೊಂದು ಇದೀಗ ಎದ್ದಿದೆ.

    ಪುಲ್ವಾಮಾದಲ್ಲಿ ನಡೆದ ದಾಳಿ ಕಳೆದ 20 ವರ್ಷಗಳಲ್ಲಿಯೇ ನಡೆದ ಅತೀ ದೊಡ್ಡ ದಾಳಿಯಾಗಿದೆ. 2001ರಲ್ಲಿ ಶ್ರೀನಗರದಲ್ಲಿರುವ ಸಚಿವಾಲಯದ ಮುಂಭಾಗ ನಡೆಸಿದ ಬಾಂಬ್ ದಾಳಿಯಲ್ಲಿ 38 ಮಂದಿ ಮೃತಪಟ್ಟು, 40 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಗುರುವಾರ ಪುಲ್ವಾಮಾದಲ್ಲಿ ನಡೆದ ದಾಳಿಯ ಬಗ್ಗೆ ಭಾರತಕ್ಕೆ ಮೊದಲೇ ಸುಳಿವು ಸಿಕ್ಕಿತ್ತು ಅನ್ನೋ ಚರ್ಚೆ ನಡೀತಿದೆ. ಇದನ್ನೂ ಓದಿ: ನಂಗೆ ಅವರು ಬೇಕು ಅಮ್ಮಾ..- ಮುಗಿಲು ಮುಟ್ಟಿದೆ ಹುತಾತ್ಮ ಗುರು ಪತ್ನಿಯ ಆಕ್ರಂದನ

    ಭಾರತಕ್ಕಿತ್ತಾ ದಾಳಿಯ ಸುಳಿವು..?
    ಫೆ. 5ರಂದು ಪಾಕಿಸ್ತಾನದ ಕರಾಚಿಯಲ್ಲಿ ಜೈಶ್ ಎ ಮೊಹ್ಮದ್ ಸಂಘಟನೆಯ ಜಾಥಾ ನಡೆದಿತ್ತು. ಇದರಲ್ಲಿ ಉಗ್ರ ಮಸೂದ್ ಅಜರ್ ಸಹೋದರ ಅಬ್ದುಲ್ ರವೂಫ್ ಅಜರ್ ಕೂಡಾ ಭಾಗಿಯಾಗಿದ್ದನು. ಈ ವೇಳೆ ಭಾರತದಲ್ಲಿ ದಾಳಿ ನಡೆಸಲು 7 ಉಗ್ರರ ತಂಡಗಳನ್ನು ಕಳುಹಿಸೋದಾಗಿ ಘೋಷಣೆ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: 2 ನಿಮಿಷ ಬಿಟ್ಟು ಕರೆ ಮಾಡ್ತೀನಿ ಅಂದೋನು ಮಾಡ್ಲೇ ಇಲ್ಲ- ಗುರು ಗೆಳೆಯ ಯೋಧ ಕಣ್ಣೀರು

    ರವೂಫ್ ಘೋಷಣೆಯ ಬೆನ್ನಲ್ಲೇ ಅಲರ್ಟ್ ಆಗಿದ್ದ ಭಾರತದ ಗುಪ್ತಚರ ಇಲಾಖೆ ಭಾರತದಲ್ಲಿ ಜೈಷ್ ಎ ಮೊಹಮ್ಮದ್, ಲಷ್ಕರ್ ಎ ತಯ್ಬಾ ದಾಳಿ ಬಗ್ಗೆ ಸುಳಿವು ನೀಡಿತ್ತು. ವಾಹನಗಳ ಮೂಲಕವೇ ದಾಳಿ ನಡೆಸೋದಾಗಿ ಉಗ್ರ ಸಂಘಟನೆಯ ದೂರವಾಣಿ ಕರೆಗಳ ಮೂಲಕ ಭದ್ರತಾ ಪಡೆಗಳಿಗೆ ಮಾಹಿತಿ ಸಿಕ್ಕಿತ್ತು ಎನ್ನಲಾಗಿದೆ. ಇದನ್ನೂ ಓದಿ: ಪುಲ್ವಾಮಾದಲ್ಲಿ ಮಂಡ್ಯದ ಯೋಧ ಹುತಾತ್ಮ – ಫೆ.10ಕ್ಕೆ ರಜೆ ಮುಗಿಸಿ ಊರಿಂದ ಹೊರಟಿದ್ದರು


    ಇತ್ತೀಚಿನ ದಿನಗಳಲ್ಲಿ 2 ಸಂಘಟನೆಗಳು ಒಟ್ಟಾಗಿ ಕಾರ್ಯಚರಣೆ ನಡೆಸುತ್ತಿದ್ದು, ಇದೀಗ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ಆತ್ಮಾಹುತಿ ದಾಳಿಯ ಪ್ಲಾನ್ ಮಾಡಿ 44 ಮಂದಿ ಭಾರತದ ಅಮಾಯಕ ಯೋಧರನ್ನು ಬಲಿತೆಗೆದುಕೊಂಡಿದೆ.

    https://www.youtube.com/watch?v=5JqTWRx0JWA

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 2 ನಿಮಿಷ ಬಿಟ್ಟು ಕರೆ ಮಾಡ್ತೀನಿ ಅಂದೋನು ಮಾಡ್ಲೇ ಇಲ್ಲ- ಗುರು ಗೆಳೆಯ ಯೋಧ ಕಣ್ಣೀರು

    2 ನಿಮಿಷ ಬಿಟ್ಟು ಕರೆ ಮಾಡ್ತೀನಿ ಅಂದೋನು ಮಾಡ್ಲೇ ಇಲ್ಲ- ಗುರು ಗೆಳೆಯ ಯೋಧ ಕಣ್ಣೀರು

    ಮಂಡ್ಯ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರನ ಆತ್ಮಾಹುತಿ ದಾಳಿಯಲ್ಲಿ ಮಂಡ್ಯದ ಯೋಧ ಗುರು ಹುತಾತ್ಮರಾಗಿದ್ದು, ಇದೀಗ ಜಿಲ್ಲೆಯಲ್ಲಿ ನೀರವ ಮೌನ ಆವರಿಸಿದೆ. ಗುರು ಪೋಷಕರು, ಪತ್ನಿ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ರೆ, ಇತ್ತ ಗೆಳೆಯರು ಕಣ್ಣೀರು ಹಾಕುತ್ತಿದ್ದಾರೆ.

    ಗುರು ಗೆಳೆಯರು ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಉಗ್ರ ಕೃತ್ಯವನ್ನು ಖಂಡಿಸಿ, ಪ್ರತೀಕಾರ ತೀರಿಸಿಕೊಳ್ಳಲೇ ಬೇಕು ಎಂದು ಆಗ್ರಹಿಸಿದ್ದಾರೆ. ಗೆಳೆಯರಾಗಿದ್ದ ಯೋಧರೊಬ್ಬರು ಮಾತನಾಡಿ, ಗುರು ಭಾಯ್ ಓರ್ವ ಯೋಧ. ಅವನು ತುಂಬಾ ನಿಯತ್ತಿನಿಂದ ಕೆಲಸ ಮಾಡುತ್ತಿದ್ದನು. ಒಳ್ಳೆಯ ವ್ಯಕ್ತಿತ್ವ ಹೊಂದಿದ್ದನು. ಆದ್ರೆ ಉಗ್ರರು ಈ ರೀತಿ ಮಾಡಿರುವುದು ತುಂಬಾನೇ ನೋವಾಗಿದೆ. ನಾನು ಕೂಡ ಓರ್ವ ಯೋಧನಾಗಿದ್ದೇನೆ. ಉಗ್ರರು ಈ ರೀತಿ ಮಾಡಿದ್ದಕ್ಕೆ ತಕ್ಕ ಉತ್ತರ ಕೊಡುತ್ತೇವೆ. ಬುಧವಾರವಷ್ಟೇ ಗುರು ನನ್ನ ಜೊತೆ ಫೋನಿನಲ್ಲಿ ಮಾತನಾಡಿ, ಡ್ಯೂಟಿಗೆ ಹೋಗ್ತಾ ಇದ್ದೀನಿ. 2 ನಿಮಿಷದ ಬಳಿಕ ಕರೆ ಮಾಡ್ತೀನಿ ಎಂದು ಹೇಳಿದ್ದನು. ಆದ್ರೆ ಮತ್ತೆ ಆತನ ಕರೆ ಬಂದೇ ಇಲ್ಲ ಎಂದು ಗುರವಿನ ಗೆಳೆಯ ಯೋದರೊಬ್ಬರು ಬೇಸರ ವ್ಯಕ್ತಪಡಿಸಿದ್ರು. ಇದನ್ನೂ ಓದಿ: ನಂಗೆ ಅವರು ಬೇಕು ಅಮ್ಮಾ..- ಮುಗಿಲು ಮುಟ್ಟಿದೆ ಹುತಾತ್ಮ ಗುರು ಪತ್ನಿಯ ಆಕ್ರಂದನ

    ಒಂದು ವಾರದ ಹಿಂದೆಯಷ್ಟೇ ಗುರು ಊರಿಗೆ ಬಂದು ಮೂರು ದಿನಗಳ ಹಿಂದೆಯಷ್ಟೇ ತೆರಳಿ ಮತ್ತೆ ಕೆಲಸಕ್ಕೆ ಸೇರಿಕೊಂಡಿದ್ದರು. ಆದ್ರೆ ಇದೀಗ ಅವರು ಉಗ್ರನ ಕೃತ್ಯದಿಂದ ಹುತಾತ್ಮರಾಗಿದ್ದಾರೆ. ಈ ವಿಚಾರ ಸ್ನೇಹಿತರ ಬಳಗಕ್ಕೆ ತುಂಬಾ ಬೇಸರವಾಗುತ್ತದೆ. ಇದಕ್ಕೆ ಪ್ರತಿಫಲವಾಗಿ ನಮ್ಮ ಸರ್ಕಾರ ಸೇಡು ತೀರಿಸಿಕೊಳ್ಳಲೇ ಬೇಕು ಎಂದು ಗೆಳೆಯರೊಬ್ಬರು ಒತ್ತಾಯಿಸಿದ್ರು. ಇದನ್ನೂ ಓದಿ: 44 ಯೋಧರನ್ನು ಬಲಿ ಪಡೆದುಕೊಂಡ ಉಗ್ರನೂ ಭಾರತೀಯ..!

    ನನ್ನ ಗೆಳೆಯ ನಂದೀಶ್ ಎಂಬವರು ಜಾರ್ಖಂಡ್ ನಲ್ಲಿ ಸಿಆರ್‍ಪಿಎಫ್ ಯೋಧರಾಗಿ ಕೆಲಸ ಮಾಡುತ್ತಿದ್ದಾರೆ. ಅವರು ನನಗೆ ಕರೆ ಮಾಡಿ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಪಟ್ಟಿಯಲ್ಲಿ ಗುರು ಹೆಸರಿದೆ ಎಂಬ ಮಾಹಿತಿ ನೀಡಿದ್ರು. ಆದ್ರೆ ಈ ಬಗ್ಗೆ ಇನ್ನೂ ನಿಖರ ಮಾಹಿತಿಯಿಲ್ಲ. ಹೀಗಾಗಿ ªಅವರ ಮನೆಯವರಿಗೆ ವಿಷಯ ತಿಳಿಸಬೇಡ ಎಂದಿದ್ದರು. ಇನ್ನೊಬ್ಬರು ಚೆಲುರಾಜು ಎಂಬವರು ಕೂಡ ಅಲ್ಲೇ ಕೆಲಸ ನಿರ್ವಹಿಸುತ್ತಿಒದ್ದರು. ಅವರು ಕೂಡ 12 ಗಂಟೆ ಸುಮಾರಿಗೆ ಅದೇ ರಸ್ತೆಯಲ್ಲಿ ಪಾಸ್ ಆಗಿದ್ದರು. ಅವರು ಕೂಡ ಗುರು ಹುತಾತ್ಮರಾಗಿದ್ದಾರೆ ಎಂದು ಹೇಳಿದ್ರು ಎಂದು ಮತ್ತೋರ್ವ ಗೆಳೆಯ ಕಣ್ಣೀರು ಹಾಕಿದ್ರು. ಇದನ್ನೂ ಓದಿ: ಪುಲ್ವಾಮಾದಲ್ಲಿ ಮಂಡ್ಯದ ಯೋಧ ಹುತಾತ್ಮ – ಫೆ.10ಕ್ಕೆ ರಜೆ ಮುಗಿಸಿ ಊರಿಂದ ಹೊರಟಿದ್ದರು

    https://www.youtube.com/watch?v=5JqTWRx0JWA

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 44 ಯೋಧರು ಹುತಾತ್ಮ- ಸಾಮಾಜಿಕ ಜಾಲತಾಣದಲ್ಲಿ ದುಷ್ಟರ ಸಂಭ್ರಮ

    44 ಯೋಧರು ಹುತಾತ್ಮ- ಸಾಮಾಜಿಕ ಜಾಲತಾಣದಲ್ಲಿ ದುಷ್ಟರ ಸಂಭ್ರಮ

    ಪುಲ್ವಾಮ: ಭಾರತಮಾತೆಗೆ ಗುರುವಾರ ಕರಾಳ ದಿನವಾಗಿದೆ. ಆದ್ರೆ ಕೆಲ ದುಷ್ಟಬುದ್ಧಿಯ ಉಗ್ರ ಬೆಂಬಲಿಗರು ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ಈ ದುರಂತವನ್ನು ಸಂಭ್ರಮಿಸಿದ್ದಾರೆ.

    ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಸಹಿತ ಉಗ್ರಬೆಂಬಲಿಗ ರಾಷ್ಟ್ರಗಳ ಮಂದಿ ಸಾಮಾಜಿಕ ಜಾಲತಾಣದಲ್ಲಿ ಬಿತ್ತರವಾದ ಭಾರತೀಯ ಯೋಧರ ಹತ್ಯೆ ಸುದ್ದಿಯನ್ನು ಸಂಭ್ರಮಿಸಿದ್ದಾರೆ.

    ಭಾರತಕ್ಕೆ ತಕ್ಕ ಶಾಸ್ತಿಯಾಗಿದೆ. ಹ್ಯಾಪಿ ವ್ಯಾಲೆಂಟೈನ್ಸ್ ಡೇ. ಈಗ ಸಾವಿನ ಸಂಖ್ಯೆ 40 ಆಗಿದ್ದು, ಇನ್ನೂ ಮುಂದುವರಿಯಲಿದೆ. ಕಾಶ್ಮೀರಕ್ಕೆ ಇಂದು ಸಂಭ್ರಮದ ದಿನ. ಹಿಂದೂಗಳಿಗೆ ದೀಪಾವಳಿಯ ಶುಭಾಶಯಗಳು ಎಂದೆಲ್ಲಾ ಸಂದೇಶ ಹರಿಬಿಟ್ಟಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪುರದಲ್ಲಿ ಗುರುವಾರ ನಡೆಸಿದ ಉಗ್ರರ ಆತ್ಮಾಹುತಿ ದಾಳಿಗೆ 44 ಮಂದಿ ಸಿಆರ್‍ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹಲವು ಯೋಧರು ಸ್ಥಿತಿ ಗಂಭೀರವಾಗಿದೆ. ಸೇನಾ ವಾಹನದಲ್ಲಿದ್ದು ವೀರ ಮರಣವನ್ನಪ್ಪಿದ ಧೀರ ಯೋಧರ ಹೆಸರಿನ ಪಟ್ಟಿ ಸಿಕ್ಕಿದ್ದು, ಅದು ಈ ಕೆಳಗಿನಂತಿದೆ.

    * ಜಮಾಲ್ ಸಿಂಗ್, ನಾಸೀರ್ ಅಹಮ್ಮದ್, ಸಿಖ್ವಿಂದರ್ ಸಿಂಗ್, ರೋಹಿತಾಶ್ ಲಂಬಾ
    * ತಿಲಕ್ ರಾಜ್, ಭಗೀರಥ ಸಿಂಗ್, ಬೀರೇಂದ್ರ ಸಿಂಗ್, ಅವದೇಶ್ ಕುಮಾರ್ ಯಾದವ್
    * ನಿತಿನ್ ಸಿಂಗ್ ರಾಥೋರ್, ರತನ್ ಕುಮಾರ್ ಠಾಕೂರ್, ಸುರೇಂದ್ರ ಯಾದವ್
    * ಸಂಜಯ್ ಕುಮಾರ್ ಸಿಂಗ್, ರಾಮ್ ವಕೀಲ್, ಧರ್ಮಚಂದ್ರ, ಬೇಲ್‍ಖರ್ ಟಾಕಾ
    * ಶಾಮ್ ಬಾಬು, ಅಜಿತ್ ಕುಮಾರ್ ಆಜಾದ್, ಪ್ರದೀಪ್ ಸಿಂಗ್, ಸಂಜಯ್ ರಜಪೂತ್

    * ಜೀತ್‍ರಾಮ್, ಕೌಶಲ್‍ಕುಮಾರ್, ಅಮಿತ್ ಕುಮಾರ್, ಬಿಜಯ್ ಕುಮಾರ್
    * ಕುಲವಿಂದರ್ ಸಿಂಗ್, ವಿಜಯ್ ಸೋರಂಗ್, ವಸಂತ್ ಕುಮಾರ್, ಗುರು, ಶುಭಂ ಅನಿರಂಗ್
    * ಅಮರ್ ಕುಮಾರ್, ಅಜಯ್ ಕುಮಾರ್, ಮಣಿಂದರ್ ಸಿಂಗ್, ರಮೇಶ್ ಯಾದವ್
    * ಪ್ರಸನ್ನ ಕುಮಾರ್, ಹೇಮರಾಜ್, ಬಬಲಾಶ್ ಶಾಂತ್ರಾ, ಅಶ್ವಿನಿ ಕುಮಾರ್, ಪ್ರದೀಪ್ ಕುಮಾರ್
    * ಸುಧೀರ್ ಕುಮಾರ್ ಬನ್ಸಾಲ್, ರವೀಂದ್ರ ಸಿಂಗ್, ಬಷುಮಾತ್ರೆ, ಮಹೇಶ್ ಕುಮಾರ್, ಗುರ್ಜರ್

    ಗೋರಿಪುರ ಪ್ರದೇಶದಲ್ಲಿ ಉಗ್ರರು ಸುಧಾರಿತ ಸ್ಫೋಟಕ ಬಳಸಿ ಸಿಆರ್‍ಪಿಎಫ್ ಯೋಧರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು. ಸ್ಫೋಟದ ಬಳಿಕ ಸ್ಥಳದಲ್ಲಿ ಗುಂಡಿನ ದಾಳಿ ಕೂಡ ನಡೆದಿದೆ. ಸುಧಾರಿತ ಸ್ಫೋಟಕ ಅಳವಡಿಸಿದ್ದ ಕಾರನ್ನು ಸಿಆರ್‍ಪಿಎಫ್ ಯೋಧರಿದ್ದ ವಾಹನಕ್ಕೆ ಗುದ್ದಿಸಿ ದಾಳಿ ನಡೆಸಿದ್ದಾರೆ. ಸ್ಫೋಟದ ತೀವ್ರತೆಗೆ ಯೋಧರ ದೇಹಗಳು ಛಿದ್ರ, ಛಿದ್ರವಾಗಿವೆ. ದಾಳಿಗೆ ಬಳಸಲಾಗಿರುವ ಆಟೋದ ಗುರುತು ಸಿಗದಷ್ಟು ಜಖಂ ಆಗಿದೆ. ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ಈ ದಾಳಿಯ ಹೊಣೆ ಹೊತ್ತುಕೊಂಡಿದೆ. ಲೋಕಸಭೆ ಚುನಾವಣೆ ಹೊತ್ತಲ್ಲಿ ಭಾರತದಲ್ಲಿ ಉಗ್ರರ ದೊಡ್ಡ ದಾಳಿ ನಡೆಯಲಿದೆ ಅಂತ ಅಮೆರಿಕ ಬೇಹುಗಾರಿಕೆ ಸಂಸ್ಥೆ ಎಚ್ಚರಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv