Tag: suicide bombers

  • ಚೀನಿಯರನ್ನು ಗುರಿಯಾಗಿಸಿ ಕರಾಚಿಯಲ್ಲಿ ಬಾಂಬ್ ಸ್ಫೋಟ – ನಾಲ್ವರು ಸಾವು

    ಚೀನಿಯರನ್ನು ಗುರಿಯಾಗಿಸಿ ಕರಾಚಿಯಲ್ಲಿ ಬಾಂಬ್ ಸ್ಫೋಟ – ನಾಲ್ವರು ಸಾವು

    ಇಸ್ಲಾಮಾಬಾದ್: ಪಾಕಿಸ್ತಾನದ ಕರಾಚಿ ವಿಶ್ವವಿದ್ಯಾಲಯದ ಬಳಿ ಮಂಗಳವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಚೀನಾದ ಪ್ರಜೆಗಳು ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ.

    ಮಂಗಳವಾರ ಕರಾಚಿ ವಿಶ್ವವಿದ್ಯಾಲಯದ ಕನ್ಫ್ಯೂಷಿಯಸ್ ಇನ್ಸ್‌ಟಿಟ್ಯೂಟ್ ಬಳಿ ನಡೆದ ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಚೀನಿ ಪ್ರಜೆಗಳನ್ನು ಗುರಿಯಾಗಿಸಿ ಮಹಿಳಾ ಆತ್ಮಾಹುತಿ ಬಾಂಬರ್ ನಡೆಸಿರುವುದಾಗಿ ತಿಳಿದು ಬಂದಿದೆ.

    ವರದಿಗಳ ಪ್ರಕಾರ ವಿಶ್ವವಿದ್ಯಾನಿಲಯದಲ್ಲಿ ಬೋಧನೆ ಮುಗಿಸಿ ಹಿಂದಿರುಗುತ್ತಿದ್ದ ವ್ಯಾನ್‌ನಲ್ಲಿ ಸ್ಫೋಟ ಸಂಭವಿಸಿದೆ. ವ್ಯಾನ್‌ನಲ್ಲಿ ಮೂವರು ಚೀನಾದ ಹಾಗೂ ಇತರ ಉಪನ್ಯಾಸಕರು ಇದ್ದರು. ಒಟ್ಟು 8 ಜನರಿದ್ದ ವ್ಯಾನ್‌ನಲ್ಲಿ ರಿಮೋಟ್ ಕಂಟ್ರೋಲ್ ಮುಖಾಂತರ ಸ್ಫೋಟವನ್ನು ನಡೆಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ತಾಳೆ ಎಣ್ಣೆ ರಫ್ತು ನಿಷೇಧ ವಿಸ್ತರಿಸಲು ಇಂಡೋನೇಷ್ಯಾ ಚಿಂತನೆ

     

    ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಮಜೀದ್ ಬ್ರಿಗೇಡ್ ಸಂಘಟನೆ ಈ ಕೃತ್ಯವನ್ನು ತಾನು ನಡೆಸಿದೆ ಎಂದು ಹೇಳಿದೆ. ಮಹಿಳಾ ಬಾಂಬರ್ ಶಾರಿ ಬಲೋಚ್ ಈ ದಾಳಿ ನಡೆಸಿದ್ದಾಳೆ.

    ಘಟನೆ ಹೇಗಾಯ್ತು?
    ವಿಶ್ವವಿದ್ಯಾಲಯದ ಬಳಿಯಲ್ಲಿರುವ ರಸ್ತೆ ಬದಿ ನಿಂತಿದ್ದ ಮಹಿಳಾ ಬಾಂಬರ್ ಚೀನಾ ಉಪನ್ಯಾಸಕರನ್ನು ಗುರಿಯಾಗಿಸಿಕೊಂಡಿದ್ದಳು. ಉಪನ್ಯಾಸಕರಿದ್ದ ವ್ಯಾನ್ ಮಹಿಳೆ ಬಳಿ ಬರುತ್ತಿದ್ದಂತೆ ಆಕೆ ತನ್ನ ಕೈಯಲ್ಲಿದ್ದ ರಿಮೋಟ್ ಕಂಟ್ರೋಲ್ ಅನ್ನು ಒತ್ತಿ, ಸ್ಫೋಟವನ್ನು ನಡೆಸಿದ್ದಾಳೆ. ಈ ವೇಳೆ ಭಾರೀ ಸ್ಫೋಟ ಸಂಭವಿಸಿ, ಬಾಂಬರ್ ಸೇರಿದಂತೆ ಮೂವರು ಚೀನಾದ ಉಪನ್ಯಾಸಕರು ಸಾವನ್ನಪ್ಪಿದ್ದಾರೆ.

    ಕಳೆದ ವರ್ಷ ಜುಲೈನಲ್ಲಿ ಪಾಕಿಸ್ತಾನದ ಕರಾಚಿಯಲ್ಲಿ ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಇಬ್ಬರು ಚೀನಾ ಪ್ರಜೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಇದಕ್ಕೂ ಮುನ್ನ ಚೀನಾದ ಎಂಜಿನಿಯರ್‌ಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ಐಇಡಿ ದಾಳಿ ನಡೆಸಿತ್ತು. ಘಟನೆಯಲ್ಲಿ 9 ಚೀನಾದ ಪ್ರಜೆಗಳು ಸೇರಿದಂತೆ 13 ಜನರು ಸಾವನ್ನಪ್ಪಿದ್ದರು. ಇದನ್ನೂ ಓದಿ: ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹದಗೆಟ್ಟಿದೆ: ಅಮೆರಿಕ

  • ತಾಲಿಬಾನ್‌ ಸೇನೆಗೆ ಆತ್ಮಹತ್ಯಾ ಬಾಂಬರ್‌ಗಳ ನೇಮಕ

    ತಾಲಿಬಾನ್‌ ಸೇನೆಗೆ ಆತ್ಮಹತ್ಯಾ ಬಾಂಬರ್‌ಗಳ ನೇಮಕ

    ಕಾಬೂಲ್: ಆತ್ಮಹತ್ಯಾ ಬಾಂಬರ್‌ಗಳನ್ನು ತಾಲಿಬಾನ್‌ ಸೇನೆಗೆ ಅಧಿಕೃತವಾಗಿ ನೇಮಿಸಿಕೊಳ್ಳುತ್ತಿದೆ. ನಾಲ್ಕು ತಿಂಗಳ ಹಿಂದೆ ಅಫ್ಘಾನಿಸ್ತಾನದಲ್ಲಿ ಸರ್ಕಾರವನ್ನು ರಚಿಸಿದ ನಂತರ ತನ್ನ ಮೇಲಿನ ಭದ್ರತಾ ಬೆದರಿಕೆಗಳಿಗೆ ಪ್ರತಿಸ್ಪರ್ಧೆ ನೀಡುವ ಉದ್ದೇಶದಿಂದ ಸೇನಾ ಶ್ರೇಣಿಯಲ್ಲಿ ಆತ್ಮಹತ್ಯಾ ಬಾಂಬರ್‌ಗಳನ್ನೂ ನೇಮಕಾತಿ ಮಾಡಿಕೊಳ್ಳುತ್ತಿದೆ.

    ಅಧಿಕಾರಕ್ಕೆ ಬರುವ ಮೊದಲು ತಾಲಿಬಾನ್‌ 20 ವರ್ಷಗಳ ಯುದ್ಧದಲ್ಲಿ ಯುಎಸ್‌ ಮತ್ತು ಅಫ್ಘಾನ್‌ ಪಡೆಗಳ ಮೇಲೆ ದಾಳಿ ಮಾಡಲು ಆತ್ಮಹತ್ಯಾ ಬಾಂಬರ್‌ಗಳನ್ನು ಪ್ರಮುಖ ಅಸ್ತ್ರವಾಗಿ ಬಳಸಿತ್ತು. ಈಗ ಗುಂಪು ಒಂದೇ ಘಟಕದ ಅಡಿಯಲ್ಲಿ ಕಾರ್ಯನಿರ್ವಹಿಸಲು ಹಾಗೂ ಅಪ್ಘಾನಿಸ್ತಾನವನ್ನು ರಕ್ಷಿಸಲು ದೇಶಾದ್ಯಂತ ಆತ್ಮಹತ್ಯಾ ಬಾಂಬರ್‌ಗಳನ್ನು ಸಂಘಟಿಸಲು ತಾಲಿಬಾನ್‌ ಮುಂದಾಗಿದೆ ಎಂದು ಉಪ ವಕ್ತಾರ ಬಿಲಾಲ್‌ ಕರಿಮಿ ತಿಳಿಸಿದ್ದಾರೆ. ಇದನ್ನೂ ಓದಿ: ಏರ್‌ ಇಂಡಿಯಾ ಹರಾಜು – ಟಾಟಾ ಡೀಲ್‌ ಪ್ರಶ್ನಿಸಿ ಸುಬ್ರಮಣಿಯನ್‌ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಜಾ

    ತಾಲಿಬಾನ್‌ನ ಈಗಿನ ಮುಖ್ಯ ಗುರಿ ಇಸ್ಲಾಮಿಕ್‌ ಸ್ಟೇಟ್‌ನ ಸ್ಥಳೀಯ ಶಾಖೆಯಾಗಿದೆ. ಕಳೆದ ವರ್ಷದ ಆಗಸ್ಟ್‌ ತಿಂಗಳಲ್ಲಿ ಅಪ್ಘಾನಿಸ್ತಾನದಿಂದ ಯುಎಸ್‌ ತನ್ನ ಸೇನೆಯನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದಾಗ, ದೇಶದಲ್ಲಿ ಅಧಿಕಾರವನ್ನು ಬಲಪಡಿಸಲು ತಾಲಿಬಾನ್‌ ಮುಂದಾಗಿತ್ತು. ಈ ವೇಳೆ ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌) ಐದು ಪ್ರಮುಖ ದಾಳಿಗಳನ್ನು ನಡೆಸಿತ್ತು.

    ಗಡಿಯಲ್ಲಿ ಆತ್ಮಹತ್ಯಾ ಬಾಂಬರ್‌ಗಳು ಕಾರ್ಯತಂತ್ರದ ಅವಿಭಾಜ್ಯ ಅಂಗವಾಗಿದೆ. ಅಲ್ಲದೇ ರಕ್ಷಣೆಯನ್ನು ಹೆಚ್ಚಿಸಲು ಬಲವಾದ ಮತ್ತು ಸಂಘಟಿತ ಸೈನ್ಯಕ್ಕೆ ಸಹಕಾರಿಯಾಗಿದೆ. ಸುಮಾರು 1,50,000 ಯೋಧರನ್ನು ಸೇನೆಗೆ ಆಹ್ವಾನಿಸಲಾಗುವುದು ಎಂದು ಕರಿಮಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಫುಡ್ ಡೆಲಿವರಿ ಬಾಯ್‍ಗೆ ನಡು ರಸ್ತೆಯಲ್ಲಿ ಹಿಗ್ಗಾಮುಗ್ಗ ಥಳಿಸಿದ ಪೊಲೀಸ್

    ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌) ಸಂಘಟನೆ ತಾಲಿಬಾನ್‌ ಅಧಿಕಾರವನ್ನು ಪ್ರಶ್ನಿಸುತ್ತಾ ಬಂದಿದೆ. ಈ ಬೆಳವಣಿಗೆ ಅಫ್ಘಾನಿಸ್ತಾನದಲ್ಲಿ ಮತ್ತೊಂದು ಯುದ್ಧ ಸಾಧ್ಯತೆಯ ಸುಳಿವನ್ನು ನೀಡುತ್ತಿದೆ. ಯುಎಸ್‌ ಯೋಧರು ಹಾಗೂ ಅಫ್ಘಾನ್‌ ಜನರ ಹತ್ಯೆಯಲ್ಲಿ ಆತ್ಮಹತ್ಯಾ ಬಾಂಬರ್‌ಗಳು ಪ್ರಮುಖ ಪಾತ್ರ ವಹಿಸಿದ್ದರು.

  • ಶ್ರೀಲಂಕಾ ಬಾಂಬ್ ಸ್ಫೋಟ – ಓರ್ವ ಮಹಿಳೆ ಭಾಗಿ, ಸುಶಿಕ್ಷಿತರೇ ಬಾಂಬರ್‌ಗಳು!

    ಶ್ರೀಲಂಕಾ ಬಾಂಬ್ ಸ್ಫೋಟ – ಓರ್ವ ಮಹಿಳೆ ಭಾಗಿ, ಸುಶಿಕ್ಷಿತರೇ ಬಾಂಬರ್‌ಗಳು!

    ಕೊಲಂಬೋ: ಸರಣಿ ಬಾಂಬ್ ಸ್ಫೋಟ ಕೃತ್ಯದಲ್ಲಿ ಓರ್ವ ಮಹಿಳೆಯೂ ಭಾಗಿಯಾಗಿದ್ದಳು ಎನ್ನುವ ಸ್ಫೋಟಕ ವಿಚಾರ ಶ್ರೀಲಂಕಾ ಪೊಲೀಸರ ತನಿಖೆಯ ವೇಳೆ ಬೆಳಕಿಗೆ ಬಂದಿದೆ.

    ಬುಧವಾರ ಶ್ರೀಲಂಕಾದ ಪೊಲೀಸ್ ವಕ್ತಾರ ರುವಾನ್ ಗುನಶೇಖರ ಮಾತನಾಡಿ, ಒಟ್ಟು 9 ಮಂದಿ ಕೃತ್ಯ ಎಸಗಿದ್ದು, ಈ ತಂಡದಲ್ಲಿ ಓರ್ವ ಮಹಿಳೆ ಭಾಗಿಯಾಗಿದ್ದಾಳೆ. ಈ ದಾಳಿ ಸಂಬಂಧ ಇಲ್ಲಿಯವರೆಗೆ 60 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

    ಓರ್ವ ಮಹಿಳೆ ಭಾಗಿಯಾಗಿರುವುದನ್ನು ಅಪರಾಧ ತನಿಖಾ ತಂಡ(ಸಿಐಡಿ) ಅಧಿಕೃತವಾಗಿ ತಿಳಿಸಿದೆ. ಬಂಧನಕ್ಕೆ ಒಳಗಾಗಿರುವ 60 ಮಂದಿಯಲ್ಲಿ 32 ಮಂದಿ ಸಿಐಡಿ ಕಸ್ಟಡಿಯಲ್ಲಿದ್ದಾರೆ. ಬಂಧನಕ್ಕೆ ಒಳಗಾದ ಎಲ್ಲರೂ ಶ್ರೀಲಂಕಾದ ಪ್ರಜೆಗಳು ಎಂದು ಮಾಹಿತಿ ನೀಡಿದ್ದಾರೆ.

    ಶ್ರೀಲಂಕಾದ ಉಪ ರಕ್ಷಣಾ ಸಚಿವ ರುವಾನ ವಿಜೆಯವರ್ಧನೆ ಮಾತನಾಡಿ, ಎಲ್ಲ ಆತ್ಮಹತ್ಯಾ ಬಾಂಬರ್‍ಗಳು ಸುಶಿಕ್ಷಿತರಾಗಿದ್ದು ಶ್ರೀಮಂತರಾಗಿದ್ದಾರೆ. ಓರ್ವ ಇಂಗ್ಲೆಂಡಿನಲ್ಲಿ ಪದವಿ ಪಡೆದಿದ್ದರೆ ಇನ್ನೊಬ್ಬ ಆಸ್ಟ್ರೇಲಿಯಾದಲ್ಲಿ ಸ್ನಾತಕೋತ್ತರ ಪದವಿ ಓದಿದ್ದ ಎಂಬುದನ್ನು ತಿಳಿಸಿದ್ದಾರೆ.

    ಪ್ರಾಥಮಿಕ ತನಿಖೆಯ ವೇಳೆ ನ್ಯೂಜಿಲೆಂಡಿನ ಕ್ರೈಸ್ಟ್‍ಚರ್ಚ್ ಮಸೀದಿ ಮೇಲಿನ ದಾಳಿಗೆ ಪ್ರತೀಕಾರವಾಗಿ ಈ ದಾಳಿ ನಡೆದಿದೆ ಎನ್ನುವುದು ತಿಳಿದು ಬಂದಿದೆ. ಒಟ್ಟು ಈ ದಾಳಿಯಲ್ಲಿ 359 ಮಂದಿ ಮೃತಪಟ್ಟಿದ್ದು ಇದರಲ್ಲಿ 39 ಮಂದಿ ವಿದೇಶಿಯರು ಸೇರಿದ್ದಾರೆ. 17 ಮೃತ ದೇಹಗಳನ್ನು ಗುರುತಿಸಲಾಗಿದ್ದು ಆ ದೇಹಗಳನ್ನು ಮೃತರ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಮಾಹಿತಿ ನೀಡಿದರು.

    ಕೆಲವು ಅಧಿಕಾರಿಗಳಿಗೆ ಉಗ್ರರಿಂದ ದಾಳಿ ನಡೆಯಲಿದೆ ಎನ್ನುವ ಮಾಹಿತಿ ಸಿಕ್ಕಿತ್ತು ಎನ್ನುವ ವಿಚಾರವನ್ನು ಒಪ್ಪಿಕೊಂಡ ಉಪ ರಕ್ಷಣಾ ಸಚಿವರು ಈ ವಿಚಾರವನ್ನು ಪ್ರಧಾನ ಮಂತ್ರಿಯವರಿಗೆ ತಿಳಿಸಿರಲಿಲ್ಲ ಎಂದು ಹೇಳಿದರು.

    ಈ ದಾಳಿಯ ಹಿಂದೆ ಐಸಿಸ್ ಪಾತ್ರ ಇದ್ಯಾ ಎನ್ನುವ ಪ್ರಶ್ನೆಗೆ, ಈ ದಾಳಿಗೆ ಐಸಿಸ್ ಅಥವಾ ಬೇರೆ ಅಂತರಾಷ್ಟ್ರೀಯ ಸಂಘಟನೆಯ ಸಂಬಂಧದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಉತ್ತರಿಸಿದರು.

    ಐಸಿಸ್ ಸಂಘಟನೆ ಮಂಗಳವಾರ ಶ್ರೀಲಂಕಾದಲ್ಲಿ ಕೃತ್ಯ ಎಸಗಿದ್ದು ನಾವೇ ಎಂದು ಹೇಳಿತ್ತು.