Tag: Suicide case

  • ನಾಲ್ವರು ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- 9 ತಿಂಗಳ ಕಂದಮ್ಮನನ್ನು ಕತ್ತು ಹಿಸುಕಿ ಕೊಂದಿದ್ದ ತಾಯಿ

    ನಾಲ್ವರು ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- 9 ತಿಂಗಳ ಕಂದಮ್ಮನನ್ನು ಕತ್ತು ಹಿಸುಕಿ ಕೊಂದಿದ್ದ ತಾಯಿ

    – ಮಗುವನ್ನು ಕೊಂದು ಬಳಿಕ ತಾನು ಆತ್ಮಹತ್ಯೆ

    ಬೆಂಗಳೂರು: ನಾಲ್ವರು ಆತ್ಮಹತ್ಯೆ ಹಾಗೂ ಒಂದು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಗೆದಷ್ಟು ಮಾಹಿತಿ ಲಭ್ಯವಾಗುತ್ತಿದೆ. ತಾಯಿ ಸಿಂಧು ರಾಣಿಯೇ 9 ತಿಂಗಳ ತನ್ನ ಮಗುವನ್ನು ಕತ್ತುಹಿಸುಕಿ ಕೊಲೆ ಮಾಡಿ, ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.


    ತಿಗಳರಪಾಳ್ಯದಲ್ಲಿ ಸಾಮೂಹಿಕ ಆತ್ಮಹತ್ಯೆ ಕೇಸ್ ಬೆಚ್ಚಿ ಬೀಳಿಸಿತ್ತು. ಒಬ್ಬೊಬ್ಬರು ಒಂದೊಂದು ಕಾರಣ ನೀಡಿ ಕುಟುಂಬಸ್ಥರು ಸಾಯಲು ನಿರ್ಧರಿಸಿದ್ದರು. ಒಬ್ಬ ಅಪ್ಪ ಸರಿ ಇಲ್ಲ ಅಂದ, ಮತ್ತಿಬ್ಬಿರು ಗಂಡ ಸರಿ ಇಲ್ಲ ಅಂದಿದ್ದರು. ಹೀಗೆ ಒಂದೀಡಿ ಕುಟುಂಬವೇ ಸಾವನ್ನಪ್ಪಿತ್ತು. ಆದರೆ ಇದೀಗ ಸತ್ತವಳ ಕಟುಕುತನ ಹೇಗಿತ್ತು ಎಂಬುದು ಅನಾವರಣ ಆಗಿದೆ. ಸಿಂಧು ರಾಣಿ ತಾನು ಸಾಯುವ ಮೊದಲು 9 ತಿಂಗಳ ತನ್ನ ಮಗುವಿನ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ ಎಂಬುದು ಇದೀಗ ಬಹಿರಂಗವಾಗಿದೆ. ಇದನ್ನೂ ಓದಿ: ನನ್ನ ಮಗ ಡೆತ್ ನೋಟ್‍ನಲ್ಲಿ ಹೇಳಿರುವುದೆಲ್ಲಾ ಸುಳ್ಳು: ಶಂಕರ್


    ಮಗುವಿನ ಕತ್ತಿನ ಬಳಿ ಹುಳು ಬಂದಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣ ಆಗಿತ್ತು. ಅನುಮಾನ ಈಗ ದೃಢ ಆಗಿದ್ದು, ವೈದ್ಯಕೀಯ ಮೂಲಗಳು ಇದು ಕೊಲೆ ಎಂದು ಮಾಹಿತಿ ನೀಡಿವೆ. ಪೊಲೀಸರಿಗೆ ಈ ಮಾಹಿತಿ ಮೌಖಿಕವಾಗಿ ಬಂದಿದ್ದು, ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಬಳಿಕ ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಐವರು ಆತ್ಮಹತ್ಯೆ ಪ್ರಕರಣ- ಶಂಕರ್ ಮನೆಯಲ್ಲಿ 15 ಲಕ್ಷ ನಗದು, ಎರಡು ಕೆಜಿಯಷ್ಟು ಚಿನ್ನಾಭರಣ ಪತ್ತೆ


    ವೈದ್ಯಕೀಯ ಮಾಹಿತಿ ಏನು?
    ಘಟನೆ ಬೆಳಕಿಗೆ ಬರುವುದಕ್ಕೂ ಮೊದಲು ಐದು ದಿನದ ಹಿಂದೆಯೇ ಮಗು ಸಾವನ್ನಪ್ಪಿದೆ. ಸಿಂಧು ರಾಣಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಮಗುವಿನ ಕತ್ತು ಹಿಸುಕಿ, ಉಸಿರುಗಟ್ಟಿಸಿ ಕೊಲೆ ಮಾಡಿರೋದು ಸಾಬೀತಾಗಿದೆ. ಕತ್ತಿನ ಭಾಗದಲ್ಲಿ ಹುಳು ಬಿದ್ದಿದ್ದು, ಇದರ ಆಧಾರದ ಮೇಲೆ ವೈದ್ಯಕೀಯ ತಂಡ ಮಗುವಿನ ಕೊಲೆ ಆಗಿರುವುದನ್ನು ಪತ್ತೆ ಹಚ್ಚಿದೆ. ಮನುಷ್ಯನ ಸಾವಿನ ಬಳಿಕ ದೇಹದಲ್ಲಿ ಕಾಣಿಸುವ ಹುಳುಗಳ ಆಧಾರದ ಮೇಲೆ ಎಷ್ಟು ದಿನದ ಹಿಂದೆ ಸಾವನ್ನಪ್ಪಿದೆ ಎಂದು ಗೊತ್ತಾಗಿದೆ. ಇದನ್ನೂ ಓದಿ: ಐವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಡೆತ್ ನೋಟ್‍ನಲ್ಲಿ ಅಪ್ಪನ ವಿರುದ್ಧವೇ ಮಕ್ಕಳ ಆರೋಪ

  • ಬಗೆದಷ್ಟು ಬಯಲಾಗ್ತಿದೆ ಐವರ ಡೆತ್ ಸೀಕ್ರೆಟ್ – ‘ಹಾಳಾಗ್ ಹೋಗ್ರಿ’ ಅಂದಿದ್ದಕ್ಕೇ ಆತ್ಮಹತ್ಯೆನಾ..?

    ಬಗೆದಷ್ಟು ಬಯಲಾಗ್ತಿದೆ ಐವರ ಡೆತ್ ಸೀಕ್ರೆಟ್ – ‘ಹಾಳಾಗ್ ಹೋಗ್ರಿ’ ಅಂದಿದ್ದಕ್ಕೇ ಆತ್ಮಹತ್ಯೆನಾ..?

    ಬೆಂಗಳೂರು: ತಿಗಳರಪಾಳ್ಯದಲ್ಲಿ ನಡೆದಿರುವ ಐವರು ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಇಡೀ ಕುಟುಂಬ ಸರ್ವನಾಶಕ್ಕೆ ಮನೆಯಲ್ಲಿ ಆಗಿದ್ದಾದ್ರು ಏನು..?, ಶಂಕರ್ ಮನೆಯಲ್ಲಿ ಕಳೆದ ಭಾನುವಾರ ಐವರ ಮಧ್ಯೆ ಆಗಿದ್ದೇನು…?, 3 ಕೋಟಿ ಮನೆ, ಲಕ್ಷಾಂತರ ರೂ. ದುಡ್ಡಿದ್ದರೂ ಆತ್ಮಹತ್ಯೆ ಮಾಡಿಕೊಂಡಿದ್ಯಾಕೆ..? ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡುವುದು ಸಹಜ. ಇದೀಗ ಸಾವಿನ ಕೊನೆ ಕ್ಷಣಗಳ ಎಕ್ಸ್ ಕ್ಲೂಸಿವ್ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಭಾನುವಾರ ನಡೆದಿದ್ದೇನು..?
    ಶಂಕರ್ ಮನೆಯಲ್ಲಿ ಒಂದಲ್ಲಾ ಒಂದು ಕಾರಣಕ್ಕೆ ನಿತ್ಯ ಗಲಾಟೆಗಳು ನಡೆಯುತ್ತಿದ್ದವು. ಶಂಕರ್-ಹೆಂಡತಿ, ಮೂವರು ಮಕ್ಕಳ ಮಧ್ಯೆ ನಿತ್ಯ ಕಲಹಗಳಾಗುತ್ತಿದ್ದವು. ಪತ್ನಿ, ಮಕ್ಕಳ ನಡುವಳಿಕೆ ಬಗ್ಗೆ ಶಂಕರ್ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. 10 ಲಕ್ಷ ಚೀಟಿ ಹಣ ನೀಡುವಂತೆ ಮಗ ಮಧುಸಾಗರ್‍ಗೆ ಶಂಕರ್ ಕೇಳಿದ್ದರು. ಹಣದ ವಿಚಾರವಾಗಿ ಅಪ್ಪ-ಮಗನ ಮಧ್ಯೆ ದೊಡ್ಡದಾಗಿ ವಾಗ್ವಾದ ನಡೆದಿತ್ತು. ಇದನ್ನೂ ಓದಿ: ನನ್ನ ಮಗ ಡೆತ್ ನೋಟ್‍ನಲ್ಲಿ ಹೇಳಿರುವುದೆಲ್ಲಾ ಸುಳ್ಳು: ಶಂಕರ್

    ಹಣ ಕೊಡುವುದಾಗಿ ಕರೆಸಿಕೊಂಡು ಮತ್ತೆ ಮಗ ತಗಾದೆ ತೆಗೆದಿದ್ದ. ಸಾಮೂಹಿಕ ಆತ್ಮಹತ್ಯೆಗೆ ಮುನ್ನ ಮನೆಯಲ್ಲಿ ರಣರಂಗವೇ ನಡೆದು ಹೋಗಿತ್ತು. ತಂದೆ- ಮಗನ ನಡುವೆ ಆರಂಭದ ಜಗಳ ಇಡೀ ಮನೆಗೆ ಅಂಟಿಕೊಂಡಿತ್ತು. ಕೊನೆಗೆ ಶಂಕರ್ ಒಬ್ಬರನ್ನ ಒಂದು ಕಡೆ ಮಾಡಿ ಎಲ್ಲರೂ ಶಂಕರ್ ಮೇಲೆ ಮುಗಿಬಿದ್ದಿದ್ದರು. ಎಷ್ಟರ ಮಟ್ಟಿಗೆ ಅಂದ್ರೆ ಶಂಕರ್ ‘ಹಾಳಾಗ್ ಹೋಗ್ರಿ’ ಎಂದು ಮನೆಯಲ್ಲಿದ್ದ ಬಟ್ಟೆಗಳನ್ನ ತುಂಬಿಕೊಂಡು ಶಂಕರ್ ಮನೆಯಿಂದ ಹೊರ ಬಂದಿದ್ದರು. ಇದನ್ನೂ ಓದಿ: ನಮ್ಮಪ್ಪ ಕಾಮುಕ, ಸ್ಯಾಡಿಸ್ಟ್, ಕುಡುಕ – ಡೆತ್‍ನೋಟ್‍ನಲ್ಲಿ ಮಧುಸಾಗರ್ ಗಂಭೀರ ಆರೋಪ

    ಬಟ್ಟೆ ಬರೆಯೊಂದಿಗೆ ಶಂಕರ್ ಮೈಸೂರು ಕಡೆ ಹೊರಟು ಹೋಗಿದ್ದರು. ಶಂಕರ್ ಮನೆ ಬಿಟ್ಟು ಹೋಗಿ ಮೂರ್ನಾಲ್ಕು ದಿನದಲ್ಲಿ ಇಡೀ ಮನೆ ಮಂದಿಯೆಲ್ಲಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ನಡೆದ ವೇಳೆ ಶಂಕರ್ ಹೇಳಿದು ಅದೊಂದು ಮಾತು ಎಲ್ಲರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾಯ್ತಾ? ‘ಹಾಳಾಗಿ ಹೋಗಿ ನೀವೆಲ್ಲಾ’ ಎಂದು ಶಾಪ ಹಾಕಿದ್ದರಿಂದ ರೋಸಿ ಹೋಗಿ ಆತ್ಮಹತ್ಯೆ ಅಂತ ನಿರ್ಧಾರ ಮಾಡಿಕೊಂಟ್ರಾ ಅನ್ನೋದು ಸದ್ಯ ದೊಡ್ಡ ಚರ್ಚೆ ಆಗುತ್ತಿದೆ. ಇದನ್ನೂ ಓದಿ: ಐವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಶಂಕರ್, ಇಬ್ಬರು ಅಳಿಯಂದಿರ ವಿರುದ್ಧ ದೂರು ದಾಖಲು

  • ಡಿವೈಎಸ್ಪಿ ಗಣಪತಿ ಕೇಸಲ್ಲಿ ಸಿಬಿಐ ಎಫ್.ಐ.ಆರ್ – ಮತ್ತೆ ಸಂಕಷ್ಟದಲ್ಲಿ ಜಾರ್ಜ್

    ಡಿವೈಎಸ್ಪಿ ಗಣಪತಿ ಕೇಸಲ್ಲಿ ಸಿಬಿಐ ಎಫ್.ಐ.ಆರ್ – ಮತ್ತೆ ಸಂಕಷ್ಟದಲ್ಲಿ ಜಾರ್ಜ್

    ಬೆಂಗಳೂರು: ಡಿವೈಎಸ್ಪಿ ಗಣಪತಿ ನಿಗೂಢ ಆತ್ಮಹತ್ಯೆ ಪ್ರಕರಣದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‍ಗೆ ಮತ್ತೆ ಸಂಕಷ್ಟ ಎದುರಾಗಿದೆ. ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ತನಿಖೆ ಆರಂಭಿಸಿರುವ ಸಿಬಿಐ ಇಂದು ಸಚಿವ ಜಾರ್ಜ್ ವಿರುದ್ಧ ಎಫ್.ಐ.ಆರ್ ದಾಖಲಿಸಿದೆ. ಆತ್ಮಹತ್ಯೆಗೂ ಮುನ್ನ ಡಿವೈಎಸ್ಪಿ ಗಣಪತಿ ನೀಡಿರುವ ಹೇಳಿಕೆಯನ್ನು ಆಧರಿಸಿ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಸೆಕ್ಷನ್ 306 ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಸಿಬಿಐ ಎಫ್.ಐ.ಆರ್ ದಾಖಲಿಸಿದೆ.

    ಸಿಬಿಐ ದಾಖಲಿಸಿರೋ ಎಫ್.ಐ.ಆರ್ ನಲ್ಲೇನಿದೆ.?
    ಕೆ.ಜೆ. ಜಾರ್ಜ್- ಎ1 ಆರೋಪಿ (ಬೆಂಗಳೂರು ನಗರಾಭಿವೃದ್ಧಿ ಸಚಿವ), ಪ್ರಣವ್ ಮೊಹಾಂತಿ- ಎ2 ಆರೋಪಿ (ಆಧಾರ್, ಉಪ ಮಹಾನಿರ್ದೇಶಕ, ಐಪಿಎಸ್ ಅಧಿಕಾರಿ), ಎ.ಎಂ. ಪ್ರಸಾದ್- ಎ-3 ಆರೋಪಿ (ಗುಪ್ತಚರ ಇಲಾಖೆ ಡಿಜಿ)

    ಕೆ.ಜೆ. ಜಾರ್ಜ್ ವಿರುದ್ಧ ಎಫ್‍ಐಆರ್ ದಾಖಲಿಸುತ್ತಿದ್ದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸಭೆ ನಡೆಸಿದ್ದರು. ಪೂರ್ವ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ಮುಗಿಯುತ್ತಿದ್ದಂತೆ, ಸಚಿವ ಜಾರ್ಜ್ ಸೇರಿದಂತೆ, ತಮ್ಮ ಆಪ್ತ ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ಸಚಿವ ಜಾರ್ಜ್ ರಾಜೀನಾಮೆ ನೀಡುವ ಸಾಧ್ಯತೆಗಳಿಲ್ಲ. ಮೂರು ತಿಂಗಳಲ್ಲಿ ತನಿಖಾ ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್ ಸೂಚಿಸಿರುವುದರಿಂದ ಈ ವರದಿಯನ್ನು ಆಧರಿಸಿ ಜಾರ್ಜ್ ಮುಂದಿನ ಹೆಜ್ಜೆ ಇಡಲಿದ್ದಾರೆ ಎನ್ನಲಾಗಿದೆ. ಪ್ರಕರಣದ ಮುಂದಿನ ಹಂತದಲ್ಲಿ ಸಿಬಿಐನಿಂದ ವಿಚಾರಣೆಗಾಗಿ ಸಮನ್ಸ್ ಜಾರಿಯಾಗುವ ಸಾಧ್ಯತೆಯಿದೆ.

    ನಾಳೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ: ಎಫ್.ಐ.ಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ನಾಳೆ ಸಿಬಿಐ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಕೆ.ಜೆ.ಜಾರ್ಜ್ ಪರ ವಕೀಲರು ಸಿಟಿ ಸಿವಿಲ್ ಕೋರ್ಟ್ ನಲ್ಲಿರೋ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ನಿರೀಕ್ಷಣ ಜಾಮೀನಿಗಾಗಿ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ. ಶನಿವಾರ ಮತ್ತು ಭಾನುವಾರ ಕೋರ್ಟ್ ರಜೆ ಇರುವ ಕಾರಣ ಶುಕ್ರವಾರವೇ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡುವ ಸಾಧ್ಯತೆಯಿದೆ.

    ಎಫ್.ಐ.ಆರ್ ಬೆನ್ನಲ್ಲೆ ತನಿಖೆ ಚುರುಕುಗೊಳಿಸಿದ ಸಿಬಿಐ ತಂಡ ಕರ್ನಾಟಕ ಸಿಐಡಿ ಅಧಿಕಾರಿಗಳಿಂದ ಇನ್ನೂ ಮಾಹಿತಿ ಪಡೆಯುತ್ತಿದ್ದಾರೆ. ಘಟನೆ ನಡೆದ ವಿವರ, ಎಫ್.ಎಸ್.ಎಲ್ ವರದಿ ಎಲ್ಲದರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ನಾಳೆಯೇ ಬೆಂಗಳೂರಿಗೆ ಬರಲು ಸಿದ್ಧತೆ ನಡೆಸಿರೋ ಸಿಬಿಐ ತಂಡ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡದಂತೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕೋರಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿಯೂ ಇದೆ.

    2016ರ ಜುಲೈ 7ರಂದು ಡಿವೈಎಸ್‍ಪಿ ಗಣಪತಿ ಮಡಿಕೇರಿಯ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವೇಳೆ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು.

    ಸಿಬಿಐ ಎಫ್.ಐ.ಆರ್ ದಾಖಲಾದ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಗಣಪತಿ ಸೋದರಿ ಸಬಿತಾ, ನನ್ನ ಸೋದರನ ಸಾವಿಗೆ ಕಾರಣ ಯಾರು ಎನ್ನುವುದು ಗೊತ್ತಾಗಬೇಕು. ಈ ತನಿಖೆಯಿಂದ ನ್ಯಾಯ ಸಿಗುವ ಭರವಸೆಯಿದೆ ಎಂದರು.

    ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ರಮೇಶ್ ಕುಮಾರ್, ಇದು ಕೇಂದ್ರ ಸರ್ಕಾರದ ರಾಜಕೀಯ ಪ್ರೇರಿತ ನಡೆ. ಸಿಬಿಐ ರಾಜಕೀಯ ಪ್ರೇರಿತವಾಗಿ ಕೆಲಸ ಮಾಡುತ್ತದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ನಾವು ಯಾವುದೇ ಕಾರಣಕ್ಕೂ ಜಾರ್ಜ್ ರಾಜೀನಾಮೆ ಕೊಡಲು ಬಿಡುವುದಿಲ್ಲ. ನಾವು ರಾಜಕೀಯವಾಗೇ ಉತ್ತರ ನೀಡುತ್ತೇವೆ. ಕೇಂದ್ರದಲ್ಲಿ ಯಾರ ವಿರುದ್ಧವೆಲ್ಲಾ ಎಫ್.ಐ.ಆರ್ ದಾಖಲಾಗಿಲ್ಲ ಹೇಳಿ ಎಂದು ಮೋದಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿ ಹಿಟ್ಲರ್ ನ ತಮ್ಮನಂತೆ ವರ್ತಿಸುತ್ತಿದ್ದಾರೆ ಎಂದರು.

    ಇದೇ ವೇಳೆ ಮಾತನಾಡಿದ ಸಿ.ಎಂ.ಇಬ್ರಾಹಿಂ, ಇದು ರಾಜಕೀಯ ಪ್ರೇರಿತ. ಸಿದ್ದರಾಮಯ್ಯರನ್ನು ದುರ್ಬಲಗೊಳಿಸಲು ಎಫ್.ಐ.ಆರ್ ಹಾಕುವ ಕ್ರಮಕೈಗೊಂಡಿದ್ದಾರೆ. ನಮ್ಮಲ್ಲಿ ಬೌಲರ್ ಗಳು, ಬ್ಯಾಟ್ಸ್ ಮನ್‍ಗಳು, ವಿಕೆಟ್ ಕೀಪರ್ ಗಳು ಇದ್ದಾರೆ ಎಂದರು.