Tag: Sujatha Bhat

  • ಧರ್ಮಸ್ಥಳ ಕೇಸ್ – ಸುಜಾತ ಭಟ್ ಹೊರತುಪಡಿಸಿ ವಿಚಾರಣೆಗೆ ಗೈರಾದ ಬುರುಡೆ ಗ್ಯಾಂಗ್

    ಧರ್ಮಸ್ಥಳ ಕೇಸ್ – ಸುಜಾತ ಭಟ್ ಹೊರತುಪಡಿಸಿ ವಿಚಾರಣೆಗೆ ಗೈರಾದ ಬುರುಡೆ ಗ್ಯಾಂಗ್

    ಮಂಗಳೂರು: ರಾಜ್ಯಾದ್ಯಂತ ಸದ್ದು ಮಾಡಿದ್ದ ಧರ್ಮಸ್ಥಳ (Dharmasthala) ಬುರುಡೆ ಪ್ರಕರಣ ತನಿಖೆ ಬಹುತೇಕ ಅಂತ್ಯದಲ್ಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ (ಅ.27) ಮತ್ತೊಂದು ಸುತ್ತಿನ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ (SIT) ನೋಟಿಸ್ ನೀಡಿತ್ತು. ಆದರೆ ಸುಜಾತ್ ಭಟ್ (Sujatha Bhat) ಹೊರತುಪಡಿಸಿ, ಇನ್ನುಳಿದ ನಾಲ್ವರು ವಿಚಾರಣೆಗೆ ಗೈರಾಗಿದ್ದಾರೆ.

    ಸೋಮವಾರ ಬೆಳಗ್ಗೆ 10:30ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್, ಗಿರೀಶ್ ಮಟ್ಟಣ್ಣನವರ್, ವಿಠಲ್ ಗೌಡ ಹಾಗೂ ಸುಜಾತ್ ಭಟ್‌ಗೆ ಬಿಎನ್‌ಎಸ್‌ 35(3) ಅಡಿಯಲ್ಲಿ ನೋಟಿಸ್ ಜಾರಿ ಮಾಡಿತ್ತು. ತನಿಖೆಯಲ್ಲಿ ಕಂಡುಕೊಂಡಂತೆ ಪ್ರಕರಣದ ಕುರಿತಂತೆ ಹಲವು ಸಂಗತಿಗಳನ್ನು ಮತ್ತು ಸಂದರ್ಭಗಳನ್ನು ತಮ್ಮಿಂದ ಖಚಿತಪಡಿಸಿಕೊಳ್ಳಲು ನಿಮ್ಮನ್ನು ವಿಚಾರಿಸುವುದು ಅಗತ್ಯವಾಗಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಿದ್ದರು. ಜೊತೆಗೆ ವಿಚಾರಣೆಗೆ ಹಾಜರಾಗದಿದ್ದರೆ, ಬಂಧನ ಮಾಡುವ ಎಚ್ಚರಿಕೆಯನ್ನೂ ನೀಡಿದ್ದರು.ಇದನ್ನೂ ಓದಿ: ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅಪರಾಧವಲ್ಲ: ಹೈಕೋರ್ಟ್

    ವಿಚಾರಣೆ ಸಂಬಂಧ ಬೆಳ್ಳಂಬೆಳಗ್ಗೆ ಸುಜಾತ್ ಭಟ್ ಬೆಂಗಳೂರಿನಿಂದ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಆಗಮಿಸಿದ್ದರು. ಬುರುಡೆ ಗ್ಯಾಂಗ್ ಗೈರಾಗಿರುವುದನ್ನು ಕಂಡು ಎಸ್‌ಐಟಿ ಮಧ್ಯಾಹ್ನ 2 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಡೆಡ್‌ಲೈನ್ ನೀಡಿದ್ದರು. ಅದಕ್ಕೂ ಬಗ್ಗದ ಗ್ಯಾಂಗ್ ಕೊನೆಗೆ ವಿಚಾರಣೆಗೆ ಹಾಜರಾಗದೇ ತಮ್ಮ ವಕೀಲರನ್ನು ಕಳುಹಿಸಿದ್ದರು.

    ತಿಮರೋಡಿ ಪರ ವಕೀಲರಾದ ಅಂಬಿಕಾ ಪ್ರಭು ಹಾಗೂ ತಂಡ ಆಗಮಿಸಿ, ಮಹೇಶ್ ಶೆಟ್ಟಿ ತಿಮರೋಡಿ ಇಂದು ವಿಚಾರಣೆಗೆ ಬರಲು ಆಗಲ್ಲ, ಹೀಗಾಗಿ ನಾಲ್ವರಿಗೂ ಏಳು ದಿನ ಸಮಯ ಕೊಡಿ ಎಂದು ಎಸ್‌ಐಟಿ ಬಳಿ ಕೇಳಿಕೊಂಡಿದ್ದರು. ಅದರಂತೆ ಎಸ್‌ಐಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿಗೆ ಏಳು ದಿನ ಹಾಗೂ ಇನ್ನುಳಿದ ಮೂವರು ನಾಲ್ಕು ದಿನದ ಒಳಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ್ದಾರೆ.ಇದನ್ನೂ ಓದಿ: ಮೊರಾದಾಬಾದ್ ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ – ಓರ್ವ ಮಹಿಳೆ ಸಾವು, ಆರು ಮಂದಿಗೆ ಗಾಯ

  • ಧರ್ಮಸ್ಥಳ ಬುರುಡೆ ಕೇಸ್‌ | ಮಟ್ಟಣ್ಣನವರ್‌, ತಿಮರೋಡಿ, ಸುಜಾತಾ ಭಟ್‌ ಸೇರಿ ಐವರಿಗೆ ಮತ್ತೆ ನೋಟಿಸ್‌

    ಧರ್ಮಸ್ಥಳ ಬುರುಡೆ ಕೇಸ್‌ | ಮಟ್ಟಣ್ಣನವರ್‌, ತಿಮರೋಡಿ, ಸುಜಾತಾ ಭಟ್‌ ಸೇರಿ ಐವರಿಗೆ ಮತ್ತೆ ನೋಟಿಸ್‌

    – ವಿಚಾರಣೆಗೆ ಹಾಜರಾಗದಿದ್ರೆ ಮುಲಾಜಿಲ್ಲದೇ ಅರೆಸ್ಟ್‌ ಎಚ್ಚರಿಕೆ
    – ತಿಮರೋಡಿ ಪರ ಪ್ರತಿಭಟನೆಗೆ ಅನುಮತಿ ನಿರಾಕರಣೆ

    ಮಂಗಳೂರು: ಇಡೀ ದೇಶಾದ್ಯಂತ ಸದ್ದು ಮಾಡಿದ್ದ ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ (Dharmasthala Case) ಇನ್ನೇನು ತಾರ್ಕಿಕ ಅಂತ್ಯ ಕಾಣುವ ಹಂತಕ್ಕೆ ಬರುವಂತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸುತ್ತಿನ ವಿಚಾರಣೆಗೆ ಬೆಳ್ತಂಗಡಿಯ ಎಸ್‌ಐಟಿ (SIT) ಕಚೇರಿಗೆ ಹಾಜರಾಗಲು ಐವರಿಗೆ ವಿಶೇಷ ತನಿಖಾ ತಂಡ ನೋಟಿಸ್‌ ನೀಡಿದೆ.

    ಪ್ರಕರಣದ ಸೂತ್ರಧಾರಿಗಳಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ (Girish Mattannavar), ಜಯಂತ್. ಟಿ, ವಿಠಲ ಗೌಡ, ಸುಜಾತ ಭಟ್‌ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ತನಿಖಾಧಿಕಾರಿ ಎಸ್.ಪಿ ಜಿತೇಂದ್ರ ದಯಾಮಾ ನೋಟಿಸ್‌ ಜಾರಿಗೊಳಿಸಿದ್ದಾರೆ. ವಿಚಾರಣೆಗೆ ಹಾಜರಾಗದಿದ್ದರೆ, ಬಂಧನ ಮಾಡುವ ಎಚ್ಚರಿಕೆಯೊಂದಿಗೆ ನೋಟಿಸ್‌ ನೀಡಿದ್ದಾರೆ. ಬಿಎನ್‌ಎಸ್‌ಎಸ್ 35(3) ಅಡಿಯಲ್ಲಿ ಪ್ರದತ್ತವಾದ ವಿಶೇಷ ಅಧಿಕಾರ ಬಳಸಿಕೊಂಡು ಪ್ರಕರಣದ ಸೂತ್ರಧಾರಿಗಳಿಗೆ ನೋಟಿಸ್‌ ಜಾರಿಗೊಳಿಸಿದ್ದಾರೆ. ಇದನ್ನೂ ಓದಿ: ನಕಲಿ ʻಲೋಕಾಯುಕ್ತ ಜಸ್ಟೀಸ್ʼ ಹಾವಳಿಗೆ ಬೆಚ್ಚಿಬಿದ್ದ ಅಧಿಕಾರಿಗಳು – ದೂರು ದಾಖಲು

    ಮತ್ತೆ ನೋಟಿಸ್‌ಗೆ ಕಾರಣ ಏನು?
    ನೊಟೀಸ್‌ನಲ್ಲಿ ಹಲವು ಅಂಶ ಉಲ್ಲೇಖಿಸಿರೋ ತನಿಖಾಧಿಕಾರಿ ದಯಾಮ, ತನಿಖೆಯಲ್ಲಿ ಕಂಡುಕೊಂಡಂತೆ ಪ್ರಕರಣದ ಹಲವು ಸಂಗತಿಗಳನ್ನು ಮತ್ತು ಸಂದರ್ಭಗಳನ್ನು ತಮ್ಮಿಂದ ಖಚಿತಪಡಿಸಿಕೊಳ್ಳುವ ಅಗತ್ಯವಿದೆ. ಹೀಗಾಗಿ ನಿಮ್ಮನ್ನ ವಿಚಾರಿಸುವುದು ಅಗತ್ಯವಾಗಿದೆ ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಮುಂದಿನ ತಿಂಗಳಿಂದಲೇ ಭಾರತ್ ಟ್ಯಾಕ್ಸಿ ಶುರು – ಖಾಸಗಿ ಕ್ಯಾಬ್ ಸೇವೆಗಳ ಕಮಿಷನ್ ಹಾವಳಿಗೆ ಬ್ರೇಕ್!

    ತಿಮರೋಡಿ ಪರ ಪ್ರತಿಭಟನೆಗೆ ಅನುಮತಿ ನಿರಾಕರಣೆ
    ಇನ್ನೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಇಂದು ಹಮ್ಮಿಕೊಳ್ಳಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಪರ ಪ್ರತಿಭಟನೆಗೆ ಪೊಲೀಸ್‌ ಇಲಾಖೆ ಅನುಮತಿ ನಿರಾಕರಿಸಿದೆ. ತಿಮರೋಡಿ ಪ್ರಕರಣ ನ್ಯಾಯಾಲಯದಲ್ಲಿ ಇರೋ ಹಿನ್ನೆಲೆ ಪ್ರತಿಭಟನೆಗೆ ಅನುಮತಿ ನಿರಾಕರಿಸಿದೆ. ಇನ್ನೂ ಅನುಮತಿ ಇಲ್ಲದಿದ್ರೂ ಪ್ರತಿಭಟನೆಗೆ ಮುಂದಾಗಿದ್ದ ಕೆಲ ತಿಮರೋಡಿ ಬೆಂಬಲಿಗರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ರಸ್ತೆಗಳಲ್ಲಿ ಬಟರ್ ಫ್ಲೈ ಲೈಟ್ ಹಾಕಿದ್ದೇವೆಂದು 73 ಲಕ್ಷ ಹಣ ಪಡೆದು ಗುಳುಂ; ಗೋಲ್ಮಾಲ್ ಬಹಿರಂಗ

  • ಮಂಜುನಾಥ ಸ್ವಾಮಿ, ವೀರೇಂದ್ರ ಹೆಗ್ಗಡೆಯವರಲ್ಲಿ ಕ್ಷಮೆ ಕೇಳ್ತೀನಿ – ನನ್ನಿಂದ ತಪ್ಪಾಗಿದೆ ಎಂದ ಸುಜಾತ ಭಟ್‌

    ಮಂಜುನಾಥ ಸ್ವಾಮಿ, ವೀರೇಂದ್ರ ಹೆಗ್ಗಡೆಯವರಲ್ಲಿ ಕ್ಷಮೆ ಕೇಳ್ತೀನಿ – ನನ್ನಿಂದ ತಪ್ಪಾಗಿದೆ ಎಂದ ಸುಜಾತ ಭಟ್‌

    ಬೆಂಗಳೂರು: ನಾನು ತಪ್ಪು ಮಾಡಿದ್ದೇನೆ. ಮಂಜುನಾಥ ಸ್ವಾಮಿ (Manjunatha Swamy)ಬಳಿ ನಾನು ಕ್ಷಮಾಪಣೆ ಕೇಳುತ್ತೇನೆ. ವೀರೇಂದ್ರ ಹೆಗ್ಗಡೆ (Veerendra Heggade) ಅವರನ್ನು ಭೇಟಿಯಾಗಿ ಕೈ ಮುಗಿದು ಕ್ಷಮೆ ಕೇಳುತ್ತೇನೆ ಎಂದು ಸುಜಾತ ಭಟ್‌ (Sujatha Bhat) ಪಬ್ಲಿಕ್‌ ಟಿವಿಯಲ್ಲಿ ಕಣ್ಣೀರಿಟ್ಟಿದ್ದಾರೆ.

    ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಬುರುಡೆ ಗ್ಯಾಂಗ್ ಜೊತೆ ಹೋಗಿ ನಾನು ತಪ್ಪು ಮಾಡಿದ್ದೇನೆ. ಆ ಪಶ್ಚಾತ್ತಾಪ ನನಗೆ ಈಗಲೂ ಕಾಡುತ್ತಿದೆ. ಹಾಗಾಗಿ ನಾನು ಧರ್ಮಸ್ಥಳಕ್ಕೆ ಹೋಗಿ ನನ್ನಿಂದ ತಪ್ಪಾಗಿದೆ ಎಂದು ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.

    ಖ್ಯಾತ ನಟನ ಸಹೋದರ ತನಗೆ ಸಹಾಯ ಮಾಡಿದ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ನಟನ ಸಹೋದರನಿಗೂ ನನಗೂ ಯಾವುದೇ ಸಂಬಂಧ ಇಲ್ಲ. ವಾಸಂತಿ ಸತ್ತಿಲ್ಲ ಆಕೆ ಬದುಕಿದ್ದಾಳೆ ಎಂದು ಎಂದು ಎಸ್‌ಐಟಿ ಮುಂದೆ ಹೇಳಿದ್ದೇನೆ. ಹೀಗಾಗಿ ಎಸ್‌ಐಟಿ ಅವರು ತನಿಖೆ ನಡೆಸುತ್ತಿರಬಹದು ಎಂದರು. ಇದನ್ನೂ ಓದಿ:  ಅನನ್ಯಾ ಭಟ್ ಕೇಸ್ – ಖ್ಯಾತ ಬಹುಭಾಷಾ ನಟನ ಸಹೋದರನಿಗೆ SIT ನೋಟಿಸ್ ಸಾಧ್ಯತೆ

    ನನಗೆ ಈಗ ಜೀವನ ನಡೆಸುವುದು ಕಷ್ಟವಾಗಿದೆ. ನನಗೆ ಮೊಬೈಲ್ ಭಾಗ್ಯ, ವಾಚ್ ಭಾಗ್ಯ, ದುಡ್ಡಿನ ಭಾಗ್ಯ ಎಂದು ಹೇಳುತ್ತಾರೆ. ಸಹಾಯ ಮಾಡುವುದೇ ತಪ್ಪು ಅಂತಾದ್ರೆ ಮಾನವೀಯತೆ ಎಲ್ಲಿದೆ? ಅನನ್ಯ ಭಟ್ , ಬುರುಡೆ ಗ್ಯಾಂಗ್ ಎಲ್ಲದಕ್ಕೂ ನಾನು ಫುಲ್ ಸ್ಟಾಪ್ ಇಟ್ಟಿದ್ದೇನೆ ಎಂದು ತಿಳಿಸಿದರು.

    ವಸಂತಿ ಪ್ರಕರಣದಲ್ಲಿ ನಟನ ಸಹೋದರ ಇರುವುದು ನಿಜ. ವಾಸಂತಿ ಮಿಸ್ಸಿಂಗ್ ಕೇಸಲ್ಲಿ ನಟನ ಸಹೋದರ ಎ2 ಆರೋಪಿ. ವಾರದ ಬಳಿಕ ಕೊಳೆತ ಸ್ಥಿತಿಯಲ್ಲಿ ವಾಸಂತಿ ಶವ ಪತ್ತೆಯಾಗಿದೆ ಎಂಬ ಸುದ್ದಿ ಹರಿದಾಡಿತ್ತು. ವಾಸಂತಿ ಹಾಗೂ ಸ್ಟಾರ್ ನಟನ ಸಹೋದರನ ನಡುವಿನ ಸಂಬಂಧ ಏನು ಅಂತಾ ಗೊತ್ತಿಲ್ಲ ಎಂದು ಹೇಳಿದರು.

  • ಅನನ್ಯಾ ಭಟ್ ಕೇಸ್ – ಖ್ಯಾತ ಬಹುಭಾಷಾ ನಟನ ಸಹೋದರನಿಗೆ SIT ನೋಟಿಸ್ ಸಾಧ್ಯತೆ

    ಅನನ್ಯಾ ಭಟ್ ಕೇಸ್ – ಖ್ಯಾತ ಬಹುಭಾಷಾ ನಟನ ಸಹೋದರನಿಗೆ SIT ನೋಟಿಸ್ ಸಾಧ್ಯತೆ

    ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಕಟ್ಟುಕತೆ ಕೇಸ್‌ನಲ್ಲಿ ಎಸ್‌ಐಟಿ ತನಿಖೆ ಮುಂದುವರಿಸಿದೆ. ಇದೀಗ ಬಹುಭಾಷಾ ನಟ, ನಿರ್ದೇಶಕನ ಸಹೋದರನಿಗೆ ಎಸ್‌ಐಟಿ (SIT) ನೋಟಿಸ್ ನೀಡಲು ಮುಂದಾಗಿದೆ.

    ಧರ್ಮಸ್ಥಳ (Dharmasthala) ಬುರುಡೆ ಫೈಲ್ಸ್ ವಿಚಾರದಲ್ಲಿ ದಿನೇ ದಿನೇ ಹೊಸ ಬೆಳವಣಿಗೆಗಳಾಗುತ್ತಲೇ ಇದೆ. ಈ ಮೊದಲು ಅನನ್ಯಾ ಭಟ್ ಬಗ್ಗೆ ಕಟ್ಟುಕತೆ ಕಟ್ಟಿ ಸುಜಾತಾ ಭಟ್ ಎಲ್ಲರನ್ನು ನಂಬಿಸುವ ಕೆಲಸ ಮಾಡಿದ್ದರು. ಬಳಿಕ ಇದೆಲ್ಲವನ್ನು ಜಮೀನು ವಿಚಾರವಾಗಿ ಮಾಡಿರುವುದಾಗಿ ಒಪ್ಪಿಕೊಂಡಿದ್ದರು. ಇದೀಗ ಅನನ್ಯಾ ಭಟ್ ಕೇಸ್ ಮತ್ತೆ ಮುನ್ನೆಲೆಗೆ ಬಂದಿದ್ದು, ಪ್ರಕರಣದ ತನಿಖೆಯನ್ನು ಎಸ್‌ಐಟಿ ಮುಂದುವರಿಸಿದೆ.ಇದನ್ನೂ ಓದಿ: Koalr | ಸೇತುವೆ ಮೇಲಿಂದ ಕಾರು ಬಿದ್ದು ಓರ್ವ ಸಾವು, ನಾಲ್ವರಿಗೆ ಗಾಯ

    ವಾಸಂತಿ ಕೇಸ್ ಬಗ್ಗೆ ತನಿಖೆಗಿಳಿದಾಗ ಎಸ್‌ಐಟಿಗೆ ಬಹುಭಾಷಾ ನಟನ ಸಹೋದರನ ಹೆಸರು ಕೇಳಿಬಂದಿದೆ. ನಟನ ಸಹೋದರ ಕೂಡ ಕಾಲಿವುಡ್ ನಟನಾಗಿದ್ದು, ವಾಸಂತಿ ಗಂಡನ ಗೆಳೆಯ ಎಂದು ತಿಳಿದುಬಂದಿದೆ. ಸದ್ಯ ಕಾಲಿವುಡ್ ನಟ ಚೆನ್ನೈನಲ್ಲಿರುವುದಾಗಿ ಮಾಹಿತಿಯಿದ್ದು, ಆತನ ವಿಳಾಸ ಪತ್ತೆ ಮಾಡುವಲ್ಲಿ ಎಸ್‌ಐಟಿ ಕಾರ್ಯನಿರತವಾಗಿದೆ. ವಿಳಾಸ ಸಿಗದ ಹಿನ್ನೆಲೆ ನೋಟಿಸ್ ನೀಡಲು ವಿಳಂಬವಾಗಿದೆ.

    ಇನ್ನೂ ಬುರುಡೆ ಫೈಲ್ಸ್ ಪ್ರಕರಣದಲ್ಲಿ ಏಳು ಅಸ್ಥಿಪಂಜರ ಸಿಕ್ಕ ಬಂಗ್ಲೆಗುಡ್ಡ ಜಾಗದ ಸರ್ವೇಗಾಗಿ ಅರಣ್ಯಾಧಿಕಾರಿಗಳ ತಂಡವೊಂದು ಆಗಮಿಸಿದೆ. ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಏಳು ಅಸ್ಥಿಪಂಜರ ಸಿಕ್ಕಿದೆ ಎಂದು ದೃಢಪಡಿಸಲು ಸರ್ವೇ ಕಾರ್ಯನಡೆಸಿದೆ.ಇದನ್ನೂ ಓದಿ: ಬುರುಡೆ ಕೇಸ್‌ಗೆ ಟ್ವಿಸ್ಟ್; ಎಸ್‌ಐಟಿ ತಂಡದಿಂದ ಇಬ್ಬರು ಅಂಬುಲೆನ್ಸ್ ಡ್ರೈವರ್‌ಗಳ ವಿಚಾರಣೆ

     

     

  • ಚಿನ್ನಯ್ಯನನ್ನು ಬಾಡಿಗಾರ್ಡ್‌ ಎಂದಿದ್ರು, ದೆಹಲಿಗೆ ಅವ್ರು ಕರೆದುಕೊಂಡು ಹೋಗಿದ್ರು: ಸುಜಾತ ಭಟ್‌

    ಚಿನ್ನಯ್ಯನನ್ನು ಬಾಡಿಗಾರ್ಡ್‌ ಎಂದಿದ್ರು, ದೆಹಲಿಗೆ ಅವ್ರು ಕರೆದುಕೊಂಡು ಹೋಗಿದ್ರು: ಸುಜಾತ ಭಟ್‌

    – ನಾನು ಸಂಪರ್ಕಿಸಿಲ್ಲ, ಅವರೇ ಮನೆಗೆ ಬಂದು ಸಂಪರ್ಕಿಸಿದ್ದರು
    – ನನ್ನ ಫೋನ್‌ ಐಸ್‌ಐಟಿ ವಶದಲ್ಲಿದೆ

    ಬೆಂಗಳೂರು: ನನ್ನನ್ನು ಅವರು ದೆಹಲಿಗೆ (Delhi) ಕರೆದುಕೊಂಡು ಹೋಗಿದ್ದರು. ನಾನು ಎಲ್ಲವನ್ನೂ ವಿಶೇಷ ತನಿಖಾ ತಂಡದ (SIT) ಪೊಲೀಸರಿಗೆ ತಿಳಿಸಿದ್ದೇನೆ ಎಂದು ಸುಜಾತ ಭಟ್‌ (Sujatha Bhat) ಹೇಳಿದ್ದಾರೆ.

    ಎಸ್‌ಐಟಿ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸುಜಾತ ಭಟ್‌ ಅವರನ್ನು ಪಬ್ಲಿಕ್‌ ಟಿವಿ ದೂರವಾಣಿ ಮೂಲಕ ಮಾತನಾಡಿಸಿತು. ಈ ವೇಳೆ ಅವರು ಹಲವು ವಿಚಾರಗಳನ್ನು ಎಸ್‌ಐಟಿಗೆ ತಿಳಿಸಿರುವುದಾಗಿ ನುಡಿದರು.

    ಮಾತನಾಡುವಾಗ ಅವರು ಅಂದರೆ ಯಾರು ಎಂಬ ಪ್ರಶ್ನೆಗೆ ಸುಜಾತ ಭಟ್‌ ಉತ್ತರ ನೀಡಲಿಲ್ಲ. ಪದೇ ಪದೇ ಅವ್ರು ಹೇಳಿದ್ರು, ಅವ್ರು ದೆಹಲಿಗೆ ಕರೆದುಕೊಂಡು ಹೋದರು. ಅವ್ರು ಮನೆಗೆ ಬಂದಿದ್ರು ಎಂದು ಹೇಳುತ್ತಿದ್ದರು. ಇದನ್ನೂ ಓದಿ: ಚಿನ್ನಯ್ಯ ಈಗ ಡಬಲ್‌ ಗೇಮ್‌ ಆಡುತ್ತಿದ್ದಾನೆ: ಜಯಂತ್‌

    ಸುಜಾತ ಭಟ್‌ ಹೇಳಿದ್ದೇನು?
    ಎಸ್‌ಐಟಿ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಕೊಟ್ಟಿದ್ದೇನೆ. ನನ್ನ ಅಧ್ಯಾಯ ಮುಗಿದಿದ್ದು ನಾನು ಇನ್ನು ಮುಂದೆ ಯಾವುದಕ್ಕೂ ಮುಂದೆ ಹೋಗುವುದಿಲ್ಲ.

    ನನ್ನ ಫೋನ್ ಎಸ್‌ಐಟಿಯಲ್ಲಿದೆ. ಅವರು ನನ್ನ ಕಾಲ್‌ ರೆಕಾರ್ಡ್‌ ಎಲ್ಲವನ್ನು ಈಗ ನೋಡುತ್ತಿರಬಹುದು. 15 ದಿನ ಬಿಟ್ಟು ತೆಗೆದುಕೊಳ್ಳುವುದಕ್ಕೆ ಹೇಳಿದ್ದಾರೆ. ನಾನು ತಪ್ಪು ಮಾಡಿದ್ದೇನೆ. ಆದರೆ ಯಾರೂ ಬೇಕು ಎಂದು ತಪ್ಪುಮಾಡುವುದಿಲ್ಲ. ಹಣೆ ಬರಹ ಹಾಳಾದಾಗ ಹೀಗೆ ಆಗುತ್ತದೆ. ಇದನ್ನೂ ಓದಿಬುರುಡೆ ಗ್ಯಾಂಗ್‌ನ ಷಡ್ಯಂತ್ರ ರೂಪುಗೊಂಡಿದ್ದೇ ಬೆಂಗಳೂರಿನ ಲಾಡ್ಜ್‌ನಲ್ಲಿ!

    ಚಿನ್ನಯ್ಯನನ್ನು ಬಾಡಿಗಾರ್ಡ್ ಎಂದು ಹೇಳಿ ಪರಿಚಯಿಸಿದ್ದರು. ನನ್ನನ್ನು ಅವರು ದೆಹಲಿಗೆ ಕರೆದುಕೊಂಡು ಹೋಗಿದ್ದರು. ದೆಹಲಿಯಲ್ಲಿ ನಾನು ವಕೀಲರ ಬಳಿ ಮಾತನಾಡಿಲ್ಲ. ಆದರೆ ಒಂದು ಕಡೆ ಕಾರಿನಲ್ಲಿ ಕೂರಿಸುತ್ತಿದ್ದರು. ಯಾರ ಜೊತೆ ಅವರು ಏನು ಮಾತನಾಡಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ನಾನು ನಡೆದ ಎಲ್ಲಾ ವಿಚಾರವನ್ನು ವಿವರವಾಗಿ ತಿಳಿಸಿದ್ದೇನೆ. ಈ ಹೋರಾಟಕ್ಕೆ ನಾನು ಯಾರನ್ನು ಸಂಪರ್ಕ ಮಾಡಿರಲಿಲ್ಲ. ಆದರೆ ಅವರೇ ನನ್ನ ಮನೆಗೆ ಬಂದು ಸಂಪರ್ಕ ಮಾಡಿದ್ದರು.

    ನನ್ನ ಬಳಿ ಯಾವುದನ್ನೂ ಕೂಲಂಕಷವಾಗಿ ಹೇಳಿಲ್ಲ. ನಾನು ಬೇರೆ ರೀತಿಯಲ್ಲಿ ಹೋರಾಟ ಮಾಡುತ್ತಿದ್ದೆ. ಆದರೆ ನನ್ನನ್ನು ಅವರು ಬಳಸಿಕೊಂಡಿದ್ದಾರೆ ಎಂಬ ನೋವು ನನಗೆ ಇದೆ. ಮುಂದೆ ವೃದ್ದಾಶ್ರಮನೋ ಏನೋ ನೋಡಬೇಕು. ನನಗೆ ಇದರಿಂದ ಹೊರಗೆ ಬರಲು ಕಾಲಾವಕಾಶ ಬೇಕು.

    ಆಸ್ತಿ ಗಲಾಟೆ ವಿವರ, ನನ್ನ ಬದುಕಿನ ಎಲ್ಲಾ ವಿವರವನ್ನು ಕೇಳಿದ್ದಾರೆ. ವಾಸಂತಿ ಬದುಕಿದ್ದಾಳೆ ಸತ್ತಿಲ್ಲ. ಅವಳ ಸಾವಿನ ಬಗ್ಗೆ ಅನುಮಾನ ಇದೆ ಎಂದಿದ್ದೇನೆ ಎಂದು ಹೇಳಿದರು.

    ವಿಚಾರಣೆಯಿಂದ ನನಗೆ ಮುಕ್ತಿ ಕೊಡಿ ಎಂದು ಕೇಳಿದ್ದೇನೆ. ಎಸ್‌ಐಟಿ ಅವರು ಬಹಳ ಚೆನ್ನಾಗಿ ನಡೆಸಿಕೊಂಡಿದ್ದಾರೆ. ಬಸ್ ಟಿಕೇಟ್ ಕೂಡ ಅವರೇ ಬುಕ್ ಮಾಡಿ ನೀಡಿದ್ದಾರೆ. ದೂರನ್ನು ನಾನು ಹಿಂದಕ್ಕೆ ಪಡೆದುಕೊಳ್ಳುವುದಿಲ್ಲ.

  • ಷಡ್ಯಂತ್ರ ಬಯಲಾದ ಬೆನ್ನಲ್ಲೇ ತಿಮರೋಡಿ ಮನೆಗೆ ಸುಜಾತ ಭಟ್‌ಗೆ ಇಲ್ಲ ಪ್ರವೇಶ

    ಷಡ್ಯಂತ್ರ ಬಯಲಾದ ಬೆನ್ನಲ್ಲೇ ತಿಮರೋಡಿ ಮನೆಗೆ ಸುಜಾತ ಭಟ್‌ಗೆ ಇಲ್ಲ ಪ್ರವೇಶ

    ಮಂಗಳೂರು: ಧರ್ಮಸ್ಥಳ ದೇವಸ್ಥಾನದ (Dharmasthala Temple) ವಿರುದ್ಧ ಹೂಡಿದ ಷಡ್ಯಂತ್ರ ಬಯಲಾಗುತ್ತಿದ್ದಂತೆ ದೂರುದಾರೆ ಸುಜಾತ ಭಟ್‌ಗೆ (Sujatha Bhat) ಗೇಟ್‌ಪಾಸ್‌ ನೀಡಲಾಗಿದ್ದು ಮಹೇಶ್‌ ಶೆಟ್ಟಿ ತಿಮರೋಡಿ (Mahesh Shetty Thimarodi) ಗ್ಯಾಂಗ್‌ ಅಂತರ ಕಾಯ್ದುಕೊಂಡಿದೆ.

    ತಾವೇ ಸೃಷ್ಟಿಸಿದ ಅನನ್ಯಾ ಭಟ್‌ (Ananya Bhat) ಕಟ್ಟು ಕಥೆಯ ವಿಚಾರ ಬಯಲಾಗುತ್ತಿದ್ದಂತೆ ತಿಮರೋಡಿ ಮನೆಯಲ್ಲಿ ಸುಜಾತ ಭಟ್‌ಗೆ ಅವಕಾಶ ನಿರಾಕರಿಸಲಾಗಿದೆ.

    ಸದ್ಯ ಎಸ್‌ಐಟಿ ವಿಚಾರಣೆಗೆ ಹಾಜರಾಗುತ್ತಿರುವ ಸುಜಾತ ಭಟ್‌ ಈಗ ಉಜಿರೆಯ ಲಾಡ್ಜ್‌ನಲ್ಲಿ ತಂಗಿದ್ದು ಅಲ್ಲಿಂದ ರಿಕ್ಷಾದ ಮೂಲಕ ಬೆಳ್ತಂಗಡಿ ಠಾಣೆಗೆ ಆಗಮಿಸುತ್ತಿದ್ದಾರೆ. ಇದನ್ನೂ ಓದಿ: ಬುರುಡೆ ಗ್ಯಾಂಗ್‌ ಹೇಳಿದಂತೆ ನಾನು ಮಾಡಿದ್ದೇನೆ ಎಸ್‌ಐಟಿ ಪ್ರಶ್ನೆಗಳಿಗೆ ಸುಜಾತ ಥಂಡಾ

     

    ಬುರುಡೆ ರಹಸ್ಯ ಬಯಲಾಗುವ ಮೊದಲು ಮಹೇಶ್‌ ಶೆಟ್ಟಿ ತಿಮರೋಡಿ ಕಡೆಯವರಿಗೆ ಸಂಬಂಧಿಸಿದ ಕಾರಿನಲ್ಲಿ ಸುಜಾತ ಭಟ್‌ ಆಗಮಿಸುತ್ತಿದ್ದರು. ಅಷ್ಟೇ ಅಲ್ಲದೇ ತಿಮರೋಡಿ ಮನೆಯಲ್ಲಿ ಉಳಿದುಕೊಂಡಿದ್ದರು ಮತ್ತು ಅಲ್ಲಿಯೇ ಕೆಲ ಯೂಟ್ಯೂಬ್‌ ವಾಹಿನಿಗಳಿಗೆ ಸಂದರ್ಶನ ನೀಡಿದ್ದರು. ಈಗ ಸುಳ್ಳಿನ ಕಥೆ ಬಯಲಾಗುತ್ತಿದ್ದಂತೆ ಮನೆಯಿಂದ ತಿಮರೋಡಿ ಸುಜಾತ ಭಟ್‌ಗೆ ಗೇಟ್‌ಪಾಸ್‌ ನೀಡಿದ್ದಾರೆ.

    ಉಡುಪಿ ಕೋರ್ಟ್‌ ಜಾಮೀನು ನೀಡಿದ ಬಳಿಕ ಪ್ರತಿಕ್ರಿಯಿಸಿದ್ದ ತಿಮರೋಡಿ, ಸುಜಾತ ಭಟ್‌ಗ್‌ ನಮಗೂ ಯಾವುದೇ ಸಂಬಂಧ ಇಲ್ಲ. ಅವರು ಮಗಳು ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದರು ಅಷ್ಟೇ. ನಮ್ಮದು ಸೌಜನ್ಯ ಪರವಾದ ಹೋರಾಟ ಎಂದು ಹೇಳಿದ್ದರು.

     

  • ಬುರುಡೆ ಗ್ಯಾಂಗ್‌ ಹೇಳಿದಂತೆ ನಾನು ಮಾಡಿದ್ದೇನೆ – ಎಸ್‌ಐಟಿ ಪ್ರಶ್ನೆಗಳಿಗೆ ಸುಜಾತ ಥಂಡಾ

    ಬುರುಡೆ ಗ್ಯಾಂಗ್‌ ಹೇಳಿದಂತೆ ನಾನು ಮಾಡಿದ್ದೇನೆ – ಎಸ್‌ಐಟಿ ಪ್ರಶ್ನೆಗಳಿಗೆ ಸುಜಾತ ಥಂಡಾ

    – 11 ಗಂಟೆಗಳ ವಿಚಾರಣೆಯಲ್ಲಿ ಸುಜಾತ ಸತ್ಯ ಸ್ಫೋಟ
    – ಬುರುಡೆ ಗ್ಯಾಂಗ್‌ನಿಂದ ಅನನ್ಯಾ ಸೃಷ್ಟಿ
    – ಕೇಸ್ ಹಿಂಪಡೆಯುತ್ತೇನೆ ಎಂದು ಕಣ್ಣೀರು

    ಮಂಗಳೂರು: ದಿನಕ್ಕೊಂದು ಕಥೆ ಹೇಳುತ್ತಾ ಅನನ್ಯಾ ಭಟ್ (Ananya Bhat) ತನ್ನ ಮಗಳು ಎಂದು ಎಲ್ಲೆಡೆ ಸುದ್ದಿಯಾಗಿದ್ದ ಸುಜಾತ ಭಟ್ (Sujatha Bhat) ವಿಶೇಷ ತನಿಖಾ ತಂಡದ ವಿಚಾರಣೆ ಎದುರಿಸಿದ್ದಾರೆ.

    ಎರಡು ದಿನಗಳ ಕಾಲ ನಡೆದ ವಿಚಾರದಲ್ಲಿ ಅನನ್ಯಾ ಭಟ್ ತನ್ನ ಮಗಳು ಎಂದು ದಾಖಲೆ ನೀಡಲಾಗದೆ ಸುಸ್ತಾಗಿದ್ದಾರೆ. ಅನನ್ಯಾ ಭಟ್ ಕಥೆ ಸೃಷ್ಟಿಯ ಹಿಂದೆ ಇದ್ದ ಗ್ಯಾಂಗ್‌ನ ಮುಖವಾಡ ಅನಾವರಣ ಮಾಡಿದ ಸುಜಾತ ಭಟ್ ಹೇಳಿಕೆಯಿಂದ ಬುರುಡೆ ಗ್ಯಾಂಗ್‌ಗೆ ಸಂಕಷ್ಟಕ್ಕೆ ಸಿಲುಕಿದೆ.

    ಬುಧವಾರ  ನಡೆದ ವಿಚಾರಣೆಯಲ್ಲಿ ಅನನ್ಯಾ ಭಟ್ ತನ್ನ ಮಗಳು ಎಂದು ದಾಖಲೆ ನೀಡಲಾಗದೇ ಸುಸ್ತಾಗಿದ್ದಾರೆ. ಅನನ್ಯಾ ಭಟ್ ಕಥೆ ಸೃಷ್ಟಿಯ ಹಿಂದೆ ಇದ್ದ ಗ್ಯಾಂಗ್‌ನ ಮುಖವಾಡವನ್ನ ಸುಜಾತ ಭಟ್ ಅನಾವರಣ ಮಾಡಿದ್ದಾರೆ. ಇದನ್ನೂ ಓದಿ: ʻಬುರುಡೆʼ ಪ್ರಕರಣದಲ್ಲಿ ಚಿನ್ನಯ್ಯನೇ ಎ1 ಹಳೆ ಸೆಕ್ಷನ್ ತೆಗೆದು ಹೊಸ ಸೆಕ್ಷನ್ ಹಾಕಿದ SIT

     

    ಮಂಗಳವಾರ ಕರೆಯದಿದ್ದರೂ ಬೆಳ್ಳಂಬೆಳಗ್ಗೆ ಎಸ್‌ಐಟಿ ಕಚೇರಿಯಲ್ಲಿ ಪ್ರತ್ಯಕ್ಷವಾಗಿದ್ದ ಸುಜಾತಾ ಭಟ್‌ಗೆ ಅಧಿಕಾರಿಗಳು ಸತತ 6 ಗಂಟೆಗಳ ಕಾಲ ಗ್ರಿಲ್ ಮಾಡಿದರು. ಶಿವಮೊಗ್ಗದ ರಿಪ್ಪನ್ ಪೇಟೆ, ಉಡುಪಿಯ ಪರಿಕದ ಪರಿಸರ, ಕೊಡಗಿನ ವಿರಾಜಪೇಟೆ ಲಿಂಕ್ ಸಂಬಂಧ ವಿಚಾರಣೆ ನಡೆಸಿದ್ದ ಎಸ್‌ಐಟಿ ಬುಧವಾರ ಮತ್ತೆ ಪ್ರಶ್ನೆ ಕೇಳಿತು. ಆಟೋದಲ್ಲಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬೆಳ್ತಂಡಿಯ ಎಸ್‌ಐಟಿ ಕಚೇರಿಗೆ ಬಂದಿದ್ದ ಸುಜಾತ ಭಟ್ ತನಿಖಾಧಿಕಾರಿ ಮುಂದೆ ಹೇಳಿಕೆ ದಾಖಲಿಸಿದರು. ಇದನ್ನೂ ಓದಿ: SIT ದಾಳಿ ತಿಳಿದು ತಿಮರೋಡಿ ಎಸ್ಕೇಪ್ – ಅತ್ತ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಮತ್ತೊಂದು ದೂರು

    ಎಸ್‌ಐಟಿ ವಿಚಾರಣೆಯಲ್ಲಿ ಸುಜಾತಾ ಭಟ್ ತಬ್ಬಿಬ್ಬಾಗಿದ್ದಾರೆ. ಅನನ್ಯಾ ಭಟ್ ಸೃಷ್ಟಿ ಬಗ್ಗೆ ಪ್ರಶ್ನಿಸಿ ಎಲ್ಲ ಸತ್ಯವನ್ನೂ ಆಕೆಯ ಬಾಯಿಂದಲೇ ಕಕ್ಕಿಸಿದ್ದಾರೆ. ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಲಾಗದೇ ಸುಸ್ತಾದ ಸುಜಾತ ಭಟ್ ನಾನು ಹೇಳಿದ್ದ ಅನನ್ಯಾ ಭಟ್ ಕಥೆ ಸುಳ್ಳು ಎಂದು ಒಪ್ಪಿಕೊಂಡಿದ್ದಾರೆ. ನನಗೆ ಬುರುಡೆ ಗ್ಯಾಂಗ್ ಹೇಳಿದಂತೆ ಮಾಡಿದ್ದೇನೆ. ನನ್ನ ಹಿರಿಯರ ಆಸ್ತಿ ನನಗೆ ಬೇಕಿತ್ತು. ಈ ಕಾರಣಕ್ಕೆ ಅನನ್ಯಾ ಭಟ್‌ ಪಾತ್ರ ಸೃಷ್ಟಿಯಾಗಿತ್ತು. ಬೇರೆ ನನಗೆ ಏನು ಗೊತ್ತಿಲ್ಲ. ನನ್ನನ್ನು ಬಿಟ್ಟು ಬಿಡಿ ಎಂದು ಕಣ್ಣೀರು ಹಾಕಿದ್ದಾರೆ. ಕೊಟ್ಟ ದೂರನ್ನು ವಾಪಸ್‌ ಪಡೆಯುವುದಾಗಿಯೂ ಸುಜಾತ ಗೋಗರೆದಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

     

    ಬುಧವಾರ ರಾತ್ರಿ 10 ಗಂಟೆಯ ವೇಳೆ ಸುಜಾತ ಭಟ್‌ ವಿಚಾರಣೆ ಮುಗಿಸಿ ಹೊರ ಬಂದರು. ಈ ವೇಳೆ ಮಾಧ್ಯಮಗಳು ಪ್ರಶ್ನೆ ಕೇಳಿದ್ದಕ್ಕೆ, ನೀವು ಮಾಡಿದ ಸಹಕಾರ ಸಾಕು. ನನ್ನನ್ನು ನೀವು ಫಾಲೋ ಮಾಡುವ ಅಗತ್ಯವಿಲ್ಲ. ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಿಟ್ಟು ಹೊರಹಾಕಿ ರಿಕ್ಷಾದಲ್ಲಿ ತೆರಳಿದರು. ಇದನ್ನೂ ಓದಿ: ತಿಮರೋಡಿಯ ಮನೆಯ ಒಳಗಡೆಗೆ ಚಿನ್ನಯ್ಯನಿಗೆ ಇರಲಿಲ್ಲ ಪ್ರವೇಶ!

  • ಎಸ್‌ಐಟಿ ಕಚೇರಿ ಕದ ತಟ್ಟಿದ ಸುಜಾತ ಭಟ್ – ಅನನ್ಯಾ ಸೃಷ್ಟಿಕರ್ತೆಗೆ 6 ಗಂಟೆ ಗ್ರಿಲ್

    ಎಸ್‌ಐಟಿ ಕಚೇರಿ ಕದ ತಟ್ಟಿದ ಸುಜಾತ ಭಟ್ – ಅನನ್ಯಾ ಸೃಷ್ಟಿಕರ್ತೆಗೆ 6 ಗಂಟೆ ಗ್ರಿಲ್

    – ಇಂದು ಮತ್ತೆ ವಿಚಾರಣೆ

    ಮಂಗಳೂರು: ಎಸ್‌ಐಟಿ (SIT) ಕಚೇರಿಯ ಕದ ತಟ್ಟಿದ್ದ ಅನನ್ಯಾ ಭಟ್ (Ananya Bhat Missing Case) ನಕಲಿ ಸೃಷ್ಟಿಕರ್ತೆ ಸುಜಾತ ಭಟ್ (Sujatha Bhat) ಎಸ್‌ಐಟಿ ವಿಚಾರಣೆ ಎದುರಿಸಿದ್ದಾರೆ. ತನಿಖಾಧಿಕಾರಿ ಇಲ್ಲದಿದ್ದ ಕಾರಣ ಪ್ರಾಥಮಿಕ ತನಿಖೆ ನಡೆಸಿ ಕಳುಹಿಸಲಾಗಿದೆ. ಇಂದು ಮತ್ತೆ ವಿಚಾರಣೆಗೆ ಹಾಜರಾಗಲು ಎಸ್‌ಐಟಿ ಅಧಿಕಾರಿಗಳು ಸೂಚಿಸಿದ್ದು, ಇಂದು ಮ್ಯಾಜಿಕ್ ಅಜ್ಜಿಯ ಗ್ರಿಲ್ ನಡೆಯಲಿದೆ.

    ಧರ್ಮಸ್ಥಳದಲ್ಲಿ ಅನನ್ಯಾ ಭಟ್ ನಾಪತ್ತೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಮಂಗಳವಾರ ನಸುಕಿನ ಜಾವ 5 ಗಂಟೆಗೆ ದೂರುದಾರೆ ಸುಜಾತ ಭಟ್ ಎಸ್‌ಐಟಿ ಬಾಗಿಲು ಬಡಿದಿದ್ದಾರೆ. ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಇಬ್ಬರು ವಕೀಲರ ಜೊತೆ ಎಸ್‌ಐಟಿ ಅಧಿಕಾರಿಗಳು ನಿದ್ದೆಯಲ್ಲಿದ್ದಾಗ ಹಾಜರಾಗಿದ್ದಾರೆ. ವಿಚಾರಣೆಗೆ ಸಮಾಯಾವಕಾಶ ಕೇಳಿದ್ದ ಸುಜಾತ ಆಗಸ್ಟ್ 29ಕ್ಕೆ ಬರ್ತೇನೆ ಅಂತ ಪತ್ರ ಬರೆದಿದ್ದರು. ಆದ್ರೆ ನಸುಕಿನ ಜಾವ ದಿಢೀರ್ ಅಂತ ಎಸ್‌ಐಟಿ ಕಚೇರಿ ಮುಂದೆ ಹಾಜರಾಗಿದ್ರು. ಸುಮಾರು 6 ಗಂಟೆಗಳ ಕಾಲ ಸುಜಾತ ಭಟ್ ವಿಚಾರಣೆ ಎದುರಿಸಿದರು. ಇದನ್ನೂ ಓದಿ: ಗಿರೀಶ್ ಮಟ್ಟಣ್ಣವರ್ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು

    ಹೇಗಿತ್ತು ಎಸ್‌ಐಟಿ ವಿಚಾರಣೆ?
    ನಿಮ್ಮ ಮಗಳ ಹೆಸರು ಏನು?
    ನಿಮ್ಮ ಮಗಳು ನಾಪತ್ತೆಯಾಗಿದ್ದು ಯಾವಾಗ?
    ನಿಮ್ಮ ಮಗಳ ಫೋಟೋ/ ದಾಖಲೆ ಇದ್ಯಾ?
    ನಿಮ್ಮ ಮಗಳು ಓದಿದ್ದು ಎಲ್ಲಿ? ಯಾವ ವರ್ಷ?
    ಇಷ್ಟು ವರ್ಷ ಯಾಕೆ ದೂರು ಕೊಡಲಿಲ್ಲ?
    ನಿಮಗೆ ಯಾರಾದ್ರೂ ಒತ್ತಡ ಹಾಕಿದ್ದಾರಾ?
    ದೂರು ಕೊಡುವ ಮೊದಲು ಯಾರಾದ್ರೂ ಭೇಟಿ ಆಗಿದ್ರಾ?

    ಸುಜಾತ ಭಟ್ ಉತ್ತರಗಳೇನು?
    ನನ್ನ ಹೆಸರು ಸುಜಾತ ಭಟ್; ಮಗಳು ಅನನ್ಯಾ ಭಟ್.
    ಅನನ್ಯ ಭಟ್ ಇದ್ದಿದ್ದು ನಿಜ, ಕಾಲ್ಪನಿಕ ಅಲ್ಲ.
    2003ರಲ್ಲಿ ನನ್ನ ಮಗಳು ಮೆಡಿಕಲ್ ಓದುತ್ತಿದ್ದಳು.
    ಧರ್ಮಸ್ಥಳ ಕ್ಷೇತ್ರಕ್ಕೆ ತೆರಳಿದಾಗ ನಾಪತ್ತೆಯಾಗಿದ್ದಳು.
    ನನ್ನ ಮಗಳು ಸತ್ತು ಹೋಗಿದ್ದಾಳೆ.
    ಮಗಳ ಅಸ್ಥಿ ಸಿಕ್ಕರೆ ಕೊಡುವಂತೆ ದೂರು ನೀಡಿದ್ದೆ.
    ಅನನ್ಯ ಎಂಬಿಬಿಎಸ್ ಓದಿದ ದಾಖಲೆ ಕಳವಾಗಿದೆ.
    ಮನೆಗೆ ಬೆಂಕಿ ಹಚ್ಚಿ ದಾಖಲೆ ನಾಶಪಡಿಸಿದ್ದಾರೆ.
    ಸೂರತ್ಕಲ್‌ನಲ್ಲಿರುವ ಮನೆಯನ್ನು ಸುಟ್ಟು ಹಾಕಿದ್ದಾರೆ.
    ನನ್ನ ಹತ್ತಿರ ಯಾವುದೇ ದಾಖಲೆಗಳು ಇಲ್ಲ.

    ಇಂದು ಮತ್ತೆ ಸುಜಾತ ಭಟ್ ವಿಚಾರಣೆ:
    ಮಂಗಳವಾರ ಅಲ್ಪಮಟ್ಟಿಗೆ ವಿಚಾರಣೆ ಎದುರಿಸಿರೋ ಸುಜಾತಾ ಭಟ್‌ಗೆ ಇಂದು ಕೂಡ ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿದೆ. ತನಿಖಾಧಿಕಾರಿ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಸುಜಾತ್ ಭಟ್‌ರನ್ನು ವಿಚಾರಣೆ ನಡೆಸಲಿದ್ದಾರೆ. ಸುಜಾತ ಭಟ್ ಹೆಣೆದಿರೋ ಕಥೆಗೆ ಸಂಬಂಧಿಸಿದ ಎಸ್‌ಐಟಿ ಅಧಿಕಾರಿಗಳು ಈಗಾಗಲೇ ಸಾಕಷ್ಟು ಮಾಹಿತಿ ಸಂಗ್ರಹಿಸಿಟ್ಟಿದ್ದರು. ಎಲ್ಲವನ್ನೂ ವಿಚಾರಣೆ ವೇಳೆ ಸುಜಾತ ಭಟ್ ಮುಂದಿಡಲು ಎಸ್‌ಐಟಿ ಅಧಿಕಾರಿಗಳು ತಯಾರಿ ನಡೆಸಿದ್ದಾರೆ. ಒಟ್ಟಿನಲ್ಲಿ ಅನನ್ಯಾ ಭಟ್ ನನ್ನ ಮಗಳು ಎಂದಿದ್ದ ಸುಜಾತ ಭಟ್ ಮತ್ಯಾವ ಟ್ವಿಸ್ಟ್ ಕೊಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ಭಾರತದ ಈ ಹಳ್ಳಿಯ ಮನೆಗಳಲ್ಲಿ ಅಡುಗೆ ಮನೆಯೇ ಇಲ್ಲ – ಕಾರಣ ಏನು? ಆಹಾರ ಸೇವನೆ ಹೇಗೆ?

  • ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್‌ಐಟಿ ಅಧಿಕಾರಿಗಳಿಗೆ ಶಾಕ್‌ ಕೊಟ್ಟ ಸುಜಾತ ಭಟ್‌!

    ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್‌ಐಟಿ ಅಧಿಕಾರಿಗಳಿಗೆ ಶಾಕ್‌ ಕೊಟ್ಟ ಸುಜಾತ ಭಟ್‌!

    ಮಂಗಳೂರು: ಅನನ್ಯಾ ಭಟ್‌ ನಾಪತ್ತೆ ಪ್ರಕರಣದ (Ananya Bhat Missing Case) ಸೃಷ್ಟಿಕರ್ತೆ ಸುಜಾತ ಭಟ್‌ (Sujatha Bhat) ಬೆಳ್ಳಂಬೆಳಗ್ಗೆ ವಿಶೇಷ ತನಿಖಾ ತಂಡದ (SIT) ಕಚೇರಿಗೆ ಆಗಮಿಸಿ ಅಧಿಕಾರಿಗಳಿಗೆ ಶಾಕ್‌ ನೀಡಿದ್ದಾರೆ.

    ಅನನ್ಯಾ ಭಟ್‌ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರು ಆ.29 ರಂದು ವಿಚಾರಣೆಗೆ ಹಾಜರಾಗುವಂತೆ ಸುಜಾತ ಭಟ್‌ಗೆ ನೋಟಿಸ್‌ ನೀಡಿದ್ದರು.

    ಶುಕ್ರವಾರ ವಿಚಾರಣೆ ನಿಗದಿಯಾಗಿದ್ದರೂ ಇಂದು ಬೆಳಗ್ಗೆ 5 ಗಂಟೆಗೆ ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ಇಬ್ಬರು ವಕೀಲರ ಜೊತೆ ಆಗಮಿಸಿದ್ದಾರೆ. ಸುಜಾತ ಭಟ್‌ ಬರುವಾಗ ಅಧಿಕಾರಿಗಳು ನಿದ್ದೆಯಲ್ಲಿದ್ದರು. ಕಚೇರಿಗೆ ಬಂದ ನಂತರ ಪೊಲೀಸರು ಸುಜಾತ ಭಟ್‌ ಅವರನ್ನು ಒಳಗಡೆ ಬರುವಂತೆ ಹೇಳಿದ್ದಾರೆ. ಸದ್ಯ ಈಗ ಸುಜಾತ ಭಟ್‌ ಎಸ್‌ಐಟಿ ಕಚೇರಿಯ ಒಳಗಡೆಯೇ ಇದ್ದಾರೆ. ಇದನ್ನೂ ಓದಿ: ಮಟ್ಟಣ್ಣನವರ್‌ನಿಂದ ಹೋರಾಟ ಹಳ್ಳ ಹಿಡಿಯಿತು ಸೌಜನ್ಯ ಪರ ಹೋರಾಟಗಾರರಲ್ಲೇ ಒಡಕು!

     

    ಮಣಿಪಾಲದಲ್ಲಿ ಎಂಬಿಬಿಎಸ್‌ ಓದುತ್ತಿದ್ದ ಪುತ್ರಿ ಅನನ್ಯಾ ಭಟ್‌ ಧರ್ಮಸ್ಥಳಕ್ಕೆ ಬಂದಾಗ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಠಾಣೆಗೆ ಹೋದಾಗ ಯಾರೂ ನನ್ನ ದೂರನ್ನು ತೆಗೆದುಕೊಂಡಿಲ್ಲ. ಪ್ರಶ್ನೆ ಮಾಡಿದರೆ ನನಗೆ ಧರ್ಮಸ್ಥಳದಲ್ಲಿ ಹೊಡೆಯಲಾಗಿತ್ತು. ಉತ್ಕನನದ ವೇಳೆ ನನ್ನ ಮಗಳ ಮೂಳೆ ಸಿಕ್ಕಿದರೆ ನಾನು ಸನಾತನ ಹಿಂದೂ ಧರ್ಮದ ಪ್ರಕಾರ ಅಂತ್ಯಸಂಸ್ಕಾರ ಮಾಡುತ್ತೇನೆ ಎಂದು ಸುಜಾತ ಭಟ್‌ ಕಲರ್‌ ಕಲರ್‌ ಕಥೆ ಕಟ್ಟಿದ್ದರು. ಇದನ್ನೂ ಓದಿAI ವೀಡಿಯೋಗೆ ಸಾಕ್ಷಿ ಕೊಡಲು ತಡಬಡಿಸಿದ ಬುರುಡೆ ಸಮೀರ್

    ನಂತರದ ದಿನಗಳಲ್ಲಿ ಒಂದೊಂದು ಮಾಧ್ಯಮಗಳಲ್ಲಿ ಬೇರೆ ಬೇರೆ ರೀತಿಯ ಹೇಳಿಕೆ ನೀಡುತ್ತಿದ್ದ ಕಾರಣ ಅನನ್ಯಾ ಭಟ್‌ ಪ್ರಕರಣ ನಕಲಿ ಎನ್ನುವುದು ಸಾಬೀತಾಗಿತ್ತು. ಕೊನೆಗೆ ಸುಜಾತ ಭಟ್‌ ನಾನು ಹೇಳುತ್ತಿರುವುದು ಸುಳ್ಳು ಎಂದು ಅಧಿಕೃತವಾಗಿ ತಿಳಿಸಿ ಈ ನಾಪತ್ತೆ ಪ್ರಕರಣಕ್ಕೆ ಅಂತ್ಯ ಹಾಡಿದ್ದರು.

    ಸುಜಾತ ಭಟ್‌ ಅಂತ್ಯ ಹಾಡಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಸಮೀರ್‌ ಅನನ್ಯಾ ಭಟ್‌ಗೆ ಸಂಬಂಧಿಸಿದಂತೆ ಎಐ ವಿಡಿಯೋ ರಚಿಸಿ ಬುರುಡೆ ಬಿಟ್ಟಿದ್ದ. ಈ ವಿಡಿಯೋ ಲಕ್ಷಗಟ್ಟಲ್ಲೇ ವ್ಯೂ ಪಡೆದುಕೊಂಡಿತ್ತು ಮತ್ತು ಪ್ರಕರಣಕ್ಕೆ ದೊಡ್ಡ ತಿರುವು ನೀಡಿತ್ತು. ಆದರೆ ಸುಳ್ಳು ಕಥೆ ಕಟ್ಟಿ ದೇವಸ್ಥಾನದ ವಿರುದ್ಧ ಷಡ್ಯಂತ್ರ ನಡೆಸಿದ್ದಕ್ಕೆ ಸುಜಾತ ಭಟ್‌ ವಿರುದ್ಧ ಕೇಸ್‌ ದಾಖಲಿಸುವಂತೆ ಭಾರೀ ಒತ್ತಡ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಸುಜಾತ ಭಟ್‌ ಅವರನ್ನು ವಿಚಾರಣೆಗೆ ಬರುವಂತೆ ಸೂಚಿಸಿದ್ದರು.

  • ಅನನ್ಯಾ ಭಟ್ ನಾಪತ್ತೆ ಪ್ರಕರಣ – ಎಸ್‌ಐಟಿ 2ನೇ ನೋಟಿಸ್‌ಗೂ ಉತ್ತರಿಸದ ಸುಜಾತ ಭಟ್

    ಅನನ್ಯಾ ಭಟ್ ನಾಪತ್ತೆ ಪ್ರಕರಣ – ಎಸ್‌ಐಟಿ 2ನೇ ನೋಟಿಸ್‌ಗೂ ಉತ್ತರಿಸದ ಸುಜಾತ ಭಟ್

    ಬೆಂಗಳೂರು: ಅನನ್ಯ ಭಟ್ ಮಿಸ್ಸಿಂಗ್ ಕೇಸ್‌ನ (Ananya Bhat Missing Case) ರಾಜ್ಯ ಸರ್ಕಾರ ಎಸ್‌ಐಟಿಗೆ (SIT) ವರ್ಗಾವಣೆ ಮಾಡಿತ್ತು. ಈ ಸಂಬಂಧ ತನಿಖೆಗಿಳಿದ ಅಧಿಕಾರಿಗಳು, ದೂರಿಗೆ ಸಂಬಂಧಪಟ್ಟ ಅಗತ್ಯ ದಾಖಲೆಗಳೊಂದಿಗೆ ಎಸ್‌ಐಟಿ ಕಚೇರಿಗೆ ಹಾಜರಾಗುವಂತೆ ದೂರುದಾರೆ ಸುಜಾತ ಭಟ್‌ಗೆ ನೋಟಿಸ್ ನೀಡಿದ್ದರು. ಆದರೆ ಮೊದಲನೇ ನೋಟಿಸ್‌ಗೆ ಸುಜಾತ ಭಟ್ (Sujatha Bhat) ಯಾವುದೇ ಉತ್ತರ ನೀಡಿಲ್ಲ. ಹಾಗಾಗಿ ಎಸ್‌ಐಟಿ ಅಧಿಕಾರಿಗಳು, ಎರಡನೇ ನೋಟಿಸ್ ನೀಡಿ ಹಾಜರಾಗುವಂತೆ ಸೂಚಿಸಿದ್ದಾರೆ.

    ಈ ಬಾರಿ ಸುಜಾತ ಭಟ್ ನಂಗೆ ಅನಾರೋಗ್ಯ ಇದೆ, ಜೊತೆಗೆ ಜೀವ ಭಯವಿದೆ ನಾನು ಬರೋಕೆ ಆಗಲ್ಲ ಎನ್ನುತ್ತಿದ್ದಾರೆ. ಅಷ್ಟೇ ಅಲ್ಲದೇ ಅನನ್ಯ ಭಟ್ ನನ್ನ ಮಗಳು ಅನ್ನೋದಕ್ಕೆ ಇಲ್ಲಿಯವರೆಗೆ ಯಾವುದೇ ದಾಖಲೆ ನೀಡಿಲ್ಲ. ಇದನ್ನೂ ಓದಿ: ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸರಣಿ ಆಡಲ್ಲ: ಸಚಿವ ಮನ್ಸುಖ್ ಮಾಂಡವಿಯಾ

    ಈ ಮಧ್ಯೆ ಖಾಸಗಿ ಚಾನಲ್‌ವೊಂದಕ್ಕೆ ಮಾತಾಡಿ ನನ್ನ ದೂರು ಸುಳ್ಳು, ನಂಗೆ ಅನನ್ಯ ಭಟ್ ಅನ್ನೋ ಮಗಳು ಇಲ್ಲ ಅಂತಾ ಹೇಳಿಕೆ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಬಿಎನ್‌ಎಸ್ 180 ಅಡಿಯಲ್ಲಿ ಮನೆಗೆ ಬಂದು ವಿಚಾರಣೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ರಾಜ್ಯದ ಹಲವೆಡೆ ಮಳೆ ಅವಾಂತರ – ಬೆಳೆ ನಾಶ, ಹೈರಾಣಾದ ಅನ್ನದಾತ