Tag: Sukhdev Singh Gogamedi

  • ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ ಪ್ರಕರಣ – ಪಿಸ್ತೂಲ್ ಒದಗಿಸಿದ್ದ ಮಹಿಳೆ ಅರೆಸ್ಟ್

    ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ ಪ್ರಕರಣ – ಪಿಸ್ತೂಲ್ ಒದಗಿಸಿದ್ದ ಮಹಿಳೆ ಅರೆಸ್ಟ್

    ಜೈಪುರ್: ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ (Sukhdev Singh Gogamedi) ಅವರ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಶಸ್ತ್ರಾಸ್ತ್ರ ಒದಗಿಸಿದ ಆರೋಪದ ಮೇಲೆ ಮಹಿಳೆ ಒಬ್ಬಳನ್ನು ರಾಜಸ್ಥಾನ (Rajasthan) ಪೊಲೀಸರು  (Police) ಬಂಧಿಸಿದ್ದಾರೆ.

    ಬಂಧಿತ ಮಹಿಳೆಯನ್ನು ಪೂಜಾ ಸೈನಿ ಎಂದು ಗುರುತಿಸಲಾಗಿದೆ. ಜೈಪುರದ ಜಗತ್‍ಪುರದಲ್ಲಿರುವ ಮಹಿಳೆಯ ಬಾಡಿಗೆ ಫ್ಲಾಟ್‍ನಲ್ಲಿ ಹತ್ಯೆ ಆರೋಪಿ ನಿತಿನ್ ಫೌಜಿಗೆ, ಪೂಜಾ ಸೈನಿ ಮತ್ತು ಆಕೆಯ ಪತಿ ಮಹೇಂದ್ರ ಮೇಘವಾಲ್ ಶಸ್ತ್ರಾಸ್ತ್ರಗಳನ್ನು ಒದಗಿಸಿದ್ದಾರೆ. ಈ ಬಗ್ಗೆ ಸುಳಿವು ಸಿಕ್ಕದ್ದು ಆರೋಪಿ ಮಹಿಳೆಯನ್ನು ಬಂಧಿಸಲಾಗಿದೆ. ಆಕೆಯ ಪತಿ ಪರಾರಿಯಾಗಿದ್ದಾನೆ ಎಂದು ಜೈಪುರ್‌ನ ಪೊಲೀಸ್ ಕಮಿಷನರ್ ಬಿಜು ಜಾರ್ಜ್ ಜೋಸೆಫ್ ತಿಳಿಸಿದ್ದಾರೆ.

    ಮೇಘವಾಲ್ ಮೂಲಕ ಫೌಜಿ ದರೋಡೆಕೋರರ ಗುಂಪು ರೋಹಿತ್ ಗೋಡಾರಾ ಜೊತೆ ಸಂಪರ್ಕದಲ್ಲಿದ್ದರು. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‍ನೊಂದಿಗೆ ಸಂಪರ್ಕ ಹೊಂದಿರುವ ಗೋದಾರಾ ಫೇಸ್‍ಬುಕ್‍ನಲ್ಲಿ ಗೊಗಮೆಡಿಯ ಹತ್ಯೆಯ ಹೊಣೆಯನ್ನು ಹೊತ್ತುಕೊಂಡು ಪೋಸ್ಟ್ ಮಾಡಿದ್ದ. ಕರ್ಣಿ ಸೇನಾ ಮುಖ್ಯಸ್ಥ ತಮ್ಮ ಶತ್ರುಗಳನ್ನು ಬೆಂಬಲಿಸುತ್ತಿದ್ದಾರೆ ಎಂದು ಆತ ಬರೆದುಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಮೇಘವಾಲ್ ಆರಕ್ಕೂ ಹೆಚ್ಚು ಪಿಸ್ತೂಲ್‍ಗಳು ಮತ್ತು ದೊಡ್ಡ ಪ್ರಮಾಣದಲ್ಲಿ ಮದ್ದುಗುಂಡುಗಳನ್ನು ಸಂಗ್ರಹಿಸಿದ್ದ. ಇವರಿಂದಲೇ ಹತ್ಯೆ ಆರೋಪಿಗಳು ಪಿಸ್ತೂಲ್‍ಗಳನ್ನು ಪಡೆದಿದ್ದಾರೆ. ಈ ಪ್ರಕರಣದಲ್ಲಿ ಮಹಿಳೆ ಪೂಜಾ ಕೂಡ ಭಾಗಿಯಾಗಿದ್ದಾಳೆ. ಅಲ್ಲದೇ ಈ ಫ್ಲಾಟ್‍ನಿಂದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‍ನ ಜಾಲವೊಂದು ಕಾರ್ಯನಿರ್ವಹಿಸುತ್ತಿದೆ ಎಂಬುದಕ್ಕೆ ಸಾಕಷ್ಟು ಪುರಾವೆಗಳು ಸಿಕ್ಕಿವೆ. ತನಿಖೆಯ ವೇಳೆ ಜೈಪುರದಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಡೆಸಿದ ಅಪರಾಧ ಕೃತ್ಯಗಳಿಗೆ ದಂಪತಿ ಶಸ್ತ್ರಾಸ್ತ್ರಗಳನ್ನು ಒದಗಿಸಿದ್ದಾರೆ ಎಂದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಹತ್ಯೆ ಪ್ರಕರಣದಲ್ಲಿ ಆರೋಪಿಗಳು, ಕರ್ಣಿ ಸೇನಾ ಮುಖ್ಯಸ್ಥರಿಗೆ ಪರಿಚಯವಿದ್ದ ನವೀನ್ ಶೇಖಾವತ್ ಎಂಬವರ ಮೂಲಕ ಗೊಗಮೇಡಿ ಅವರ ಮನೆಗೆ ಆರೋಪಿಗಳು ತೆರಳಿದ್ದರು. ಸ್ವಲ್ಪ ಸಮಯ ಮಾತಾಡಿದ ಬಳಿಕ ಅವರ ಮೇಲೆ ಗುಂಡು ಹಾರಿಸಿ ಅವರನ್ನು ಹತೈಗೈದಿದ್ದರು. ಬಳಿಕ ಅಲ್ಲಿಯೇ ಇದ್ದ ನವೀನ್ ಶೇಖಾವತ್ ಮೇಲೆ ಸಹ ಗುಂಡು ಹಾರಿಸಿ ಹತ್ಯೆಗೈದು ಪರಾರಿಯಾಗಿದ್ದರು.

    ಪ್ರಕರಣ ಪ್ರಮುಖ ಆರೋಪಿಗಳಾದ ಶಾರ್ಪ್ ಶೂಟರ್ ನಿತಿನ್ ಫೌಜಿ, ರೋಹಿತ್ ರಾಥೋಡ್ ಮತ್ತು ಸಹಚರ ಉಧಮ್ ಸಿಂಗ್‍ನನ್ನು ರಾಜಸ್ಥಾನ ಮತ್ತು ದೆಹಲಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಚಂಡೀಗಢದ ಸೆಕ್ಟರ್ 22ರಿಂದ ಶನಿವಾರ ಬಂಧಿಸಿದ್ದರು. ಆರೋಪಿಗಳನ್ನು ನ್ಯಾಯಾಲಯ ಏಳು ದಿನಗಳ ಕಾಲ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು.

  • ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ ಪ್ರಕರಣ – ಇಬ್ಬರು ಶೂಟರ್ ಸೇರಿ ಮೂವರು ಅರೆಸ್ಟ್

    ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ ಪ್ರಕರಣ – ಇಬ್ಬರು ಶೂಟರ್ ಸೇರಿ ಮೂವರು ಅರೆಸ್ಟ್

    ಜೈಪುರ: ರಾಷ್ಟ್ರೀಯ ರಜಪೂತ ಕರ್ಣಿ ಸೇನಾ (Rashtriya Rajput Karni Sena) ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ (Sukhdev Singh Gogamedi) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಶೂಟರ್‌ಗಳು ಮತ್ತು ಒಬ್ಬ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ.

    ದೆಹಲಿ ಕ್ರೈಂ ಬ್ರಾಂಚ್ ಮತ್ತು ರಾಜಸ್ಥಾನ ಪೊಲೀಸರು (Rajasthan Police) ತಡರಾತ್ರಿ ಜಂಟಿ ಕಾರ್ಯಾಚರಣೆ ನಡೆಸಿ ಚಂಡೀಗಢದಲ್ಲಿ (Chandigarh) ಆರೋಪಿಗಳನ್ನು ಬಂಧಿಸಿದ್ದಾರೆ. ಶೂಟರ್‌ಗಳಾದ ರೋಹಿತ್ ರಾಥೋಡ್, ನಿತಿನ್ ಫೌಜಿ ಹಾಗೂ ಸಹಚರ ಉಧಮ್ ಬಂಧಿತ ಆರೋಪಿಗಳು. ಈ ಹತ್ಯೆ ಪ್ರಕರಣದಲ್ಲಿ ಉಧಮ್ ಪಾತ್ರ ಏನು ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

    ದೆಹಲಿ ಪೊಲೀಸರು ರೋಹಿತ್ ಮತ್ತು ಉಧಮ್‌ನನ್ನು ದೆಹಲಿಗೆ ಕರೆತಂದಿದ್ದು, ನಿತಿನ್ ಫೌಜಿ ರಾಜಸ್ಥಾನ ಪೊಲೀಸರ ವಶದಲ್ಲಿದ್ದಾನೆ. ಈ ಹಿಂದೆ ಪ್ರಕರಣದ ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ನಗದು ಬಹುಮಾನವನ್ನು ಪೊಲೀಸರು ಘೋಷಿಸಿದ್ದರು.

    ಆರೋಪಿಗಳು ಕೊಲೆಯ ಬಳಿಕ ತಮ್ಮ ಶಸ್ತ್ರಾಸ್ತ್ರಗಳನ್ನು ಬಚ್ಚಿಟ್ಟು ರಾಜಸ್ಥಾನದ ಹರಿಯಾಣದ ಹಿಸ್ಸಾರ್‌ಗೆ ತೆರಳಿದ್ದರು. ಬಳಿಕ ಹಿಮಾಚಲ ಪ್ರದೇಶದ ಮನಾಲಿಗೆ ಹೋಗಿದ್ದರು. ನಂತರ ಚಂಡೀಗಢಕ್ಕೆ ಹೋಗಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕಡಲಾಮೆಗಳಿಗಾಗಿ 3 ತಿಂಗಳು ಕ್ಷಿಪಣಿ ಪರೀಕ್ಷೆ ಬಂದ್

    ಡಿಸೆಂಬರ್ 5 ರಂದು ರಾಜಸ್ಥಾನದ ಜೈಪುರದಲ್ಲಿರುವ ಗೊಗಮೆಡಿ ಅವರ ಮನೆಗೆ ನುಗ್ಗಿದ ಅಪರಿಚಿತರು ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಹತ್ಯೆಯ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಸಂಬಂಧ ಹೊಂದಿರುವ ಗ್ಯಾಂಗ್ಸ್ಟರ್ ರೋಹಿತ್ ಗೋಡಾರಾ ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ಗೊಗಮೆಡಿ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದಾನೆ.

    ಶೂಟರ್‌ಗಳು ತಲೆಮರೆಸಿಕೊಂಡಿದ್ದಾಗ ಗೋಡಾರಾನ ಆಪ್ತ ಸಹಾಯಕರಾದ ವೀರೇಂದ್ರ ಚಾಹನ್ ಮತ್ತು ದನರಾಮ್‌ನೊಂದಿಗೆ ಸಂಪರ್ಕದಲ್ಲಿದ್ದರು. ಅವರ ಸೂಚನೆಯ ಮೇರೆಗೆ ಕೊಲೆ ನಡೆಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:  ಚಿಕ್ಕಬಳ್ಳಾಪುರದಲ್ಲಿ ಅಂಡರ್‌ಪಾಸ್‌ ಗುಂಡಿಗೆ ಬಿದ್ದ ಬೆಂಗಳೂರು ಕಾರು – ನಾಲ್ವರು ಕಾಲೇಜು ವಿದ್ಯಾರ್ಥಿಗಳು ಸಾವು

  • ಜೀವ ಬೆದರಿಕೆ ಇದ್ದರೂ ಗೆಹ್ಲೋಟ್, ಪೊಲೀಸರು ಭದ್ರತೆ ನೀಡಲಿಲ್ಲ: ಕರ್ಣಿ ಸೇನಾ ಮುಖ್ಯಸ್ಥನ ಪತ್ನಿ ಆರೋಪ

    ಜೀವ ಬೆದರಿಕೆ ಇದ್ದರೂ ಗೆಹ್ಲೋಟ್, ಪೊಲೀಸರು ಭದ್ರತೆ ನೀಡಲಿಲ್ಲ: ಕರ್ಣಿ ಸೇನಾ ಮುಖ್ಯಸ್ಥನ ಪತ್ನಿ ಆರೋಪ

    ಜೈಪುರ: ರಾಜಸ್ಥಾನ (Rajasthan) ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಮತ್ತು ಪೊಲೀಸ್ ಮಹಾನಿರ್ದೇಶಕರು ಸುಖದೇವ್ ಸಿಂಗ್ ಗೊಗಮೇಡಿಗೆ (Sukhdev Singh Gogamedi) ಜೀವ ಬೆದರಿಕೆ ಇದ್ದರೂ ಭದ್ರತೆ ನೀಡಲು ವಿಫಲರಾಗಿದ್ದಾರೆ ಎಂದು ಸುಖದೇವ್ ಸಿಂಗ್ ಪತ್ನಿ ಆರೋಪಿಸಿದ್ದಾರೆ.

    ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಮಂಗಳವಾರ ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಘಟನೆಯ ಸಿಸಿಟಿವಿ ವೀಡಿಯೋದಲ್ಲಿ ಬಂದೂಕುಧಾರಿಗಳು ಗೊಗಮೆಡಿಗೆ ಗುಂಡು ಹಾರಿಸಿ ನಂತರ ಸ್ಥಳದಿಂದ ಪರಾರಿಯಾಗುವುದನ್ನು ತೋರಿಸುತ್ತದೆ. ಈ ಕುರಿತು ಅವರ ಪತ್ನಿ ದೂರು ದಾಖಲಿಸಿದ್ದು, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಪೊಲೀಸ್ ಮಹಾನಿರ್ದೇಶಕರು ಗೋಗಮೆಡಿಗೆ ಜೀವ ಬೆದರಿಕೆಯ ನಡುವೆಯೂ ಭದ್ರತೆ ನೀಡಲು ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: POK ನಮ್ಮದೇ, 24 ಅಸೆಂಬ್ಲಿ ಸೀಟ್‌ಗಳನ್ನು ಮೀಸಲಿಟ್ಟಿದ್ದೇವೆ: ಅಮಿತ್‌ ಶಾ

     

    ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಕೊಲ್ಲಲು ಯೋಜನೆ ರೂಪಿಸಲಾಗಿದೆ ಎಂದು ಮಾರ್ಚ್‌ನಲ್ಲಿ ರಾಜಸ್ಥಾನ ಡಿಜಿಪಿ ಉಮೇಶ್ ಮಿಶ್ರಾ ಅವರಿಗೆ ಪತ್ರವೊಂದನ್ನು ಕಳುಹಿಸಲಾಗಿತ್ತು ಎಂದು ಸುಖದೇವ್ ಸಿಂಗ್ ಪತ್ನಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಗೊಗಮೆಡಿಗೆ ಕೊಲೆ ಬೆದರಿಕೆಗಳ ಕುರಿತು ಮಾಹಿತಿ ನೀಡಿದರೂ ಗೆಹ್ಲೋಟ್ ಮತ್ತು ಮಿಶ್ರಾ ಅವರು ಕರ್ಣಿ ಸೇನಾ ಮುಖ್ಯಸ್ಥರಿಗೆ ಭದ್ರತೆಯನ್ನು ನೀಡಲಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ವೈದ್ಯ

    ಘಟನೆಯ ಕುರಿತು ಪೊಲೀಸರು ಭಾರತೀಯ ದಂಡ ಸಂಹಿತೆಯ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಮತ್ತು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯ 10 ಸಂಸದರಿಂದ ಸಂಸತ್ ಸ್ಥಾನಕ್ಕೆ ರಾಜೀನಾಮೆ

    ಇಬ್ಬರು ಆರೋಪಿಗಳ ಗುರುತು ಪತ್ತೆ:
    ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರ ಹತ್ಯೆಯ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳ ಗುರುತನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಆರೋಪಿಗಳಲ್ಲಿ ಒಬ್ಬನನ್ನು ರೋಹಿತ್ ರಾಥೋಡ್ ಎಂದು ಗುರುತಿಸಲಾಗಿದೆ. ಈತ ಮಕ್ರಾನಾ ನಾಗೌರ್ ಮೂಲದವನಾಗಿದ್ದು, ಮತ್ತೊಬ್ಬನನ್ನು ಹರಿಯಾಣದ ಮಹೇಂದ್ರಗಾತ್ ಮೂಲದ ನಿತಿನ್ ಫೌಜಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಜೀರ್ಣಾಂಗಕ್ಕೆ ಹಾನಿ- ಏಮ್ಸ್ ವೈದ್ಯರಿಂದ ಹೊಸ ವರದಿ

    ಆರೋಪಿಗಳಾದ ನವೀನ್ ಶೇಖಾವತ್, ರೋಹಿತ್ ರಾಥೋಡ್ ಮತ್ತು ನಿತಿನ್ ಫೌಜಿ ಅವರು ಮದುವೆ ಕಾರ್ಡ್ ನೀಡುವ ನೆಪದಲ್ಲಿ ಕರ್ಣಿ ಸೇನಾ ಮುಖ್ಯಸ್ಥರನ್ನು ಭೇಟಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಜಮೀನು ವಿವಾದದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ವರದಿಯ ಪ್ರಕಾರ, ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ ಅವರು ರೋಹಿತ್ ಗೋಡಾರಾ ಅವರ ಭೂ ವಿವಾದಗಳಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ. ಇದನ್ನೂ ಓದಿ: ಜಮೀನು ವಿವಾವದವೇ ಕರ್ಣಿ ಸೇನಾ ಮುಖ್ಯಸ್ಥನ ಕೊಲೆಗೆ ಕಾರಣವಾಯ್ತಾ?

  • ರಜಪೂತ್‌ ಕರ್ಣಿ ಸೇನಾ ಮುಖ್ಯಸ್ಥನ ಹಣೆಗೆ ಗುಂಡಿಟ್ಟು ಹತ್ಯೆ – ರೊಚ್ಚಿಗೆದ್ದ ಬೆಂಬಲಿಗರಿಂದ ರಾಜಸ್ಥಾನ ಬಂದ್‌ಗೆ ಕರೆ

    ರಜಪೂತ್‌ ಕರ್ಣಿ ಸೇನಾ ಮುಖ್ಯಸ್ಥನ ಹಣೆಗೆ ಗುಂಡಿಟ್ಟು ಹತ್ಯೆ – ರೊಚ್ಚಿಗೆದ್ದ ಬೆಂಬಲಿಗರಿಂದ ರಾಜಸ್ಥಾನ ಬಂದ್‌ಗೆ ಕರೆ

    ಜೈಪುರ: ರಾಜಸ್ಥಾನದ ಪ್ರಮುಖ ರಜಪೂತ ನಾಯಕ (Rajput Leader), ಹಾಗೂ ವಿವಾದಾತ್ಮಕ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಸುಖದೇವ್ ಸಿಂಗ್ ಗೊಗಾಮೇದಿಯನ್ನು (Sukhdev Singh Gogamedi) ತಡರಾತ್ರಿ ಹತ್ಯೆ ಮಾಡಲಾಗಿದೆ. ಸುಖದೇವ್ ಮೇಲೆ ಆತನ ಜೈಪುರ ನಿವಾಸದ ಒಳಗೆ ಗುಂಡಿನ ದಾಳಿ ನಡೆಸಿ ಕೊಲ್ಲಲಾಗಿದೆ. ಘಟನೆಯಿಂದ ರೊಚ್ಚಿಗೆದ್ದ ಬೆಂಬಲಿಗರು ರಾಜಸ್ಥಾನ ಬಂದ್‌ಗೆ ಕರೆ ನೀಡಿದ್ದಾರೆ.

    ಸುಖದೇವ್ ಸಿಂಗ್ ಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಬೆಂಬಲಿಗರು ರಸ್ತೆಗಿಳಿದು ಪ್ರತಿಭಟನೆ (Protest) ಶುರು ಮಾಡಿದ್ದಾರೆ. ವಾಹನಗಳ ಟಯರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸುವ ಪ್ರಯತ್ನದಲ್ಲಿ ಹೈರಾಣಾಗಿದ್ದಾರೆ. ಇದನ್ನೂ ಓದಿ: ಮಿಚಾಂಗ್‌ ಚಂಡಮಾರುತ ಅಬ್ಬರ, ಕಾಳಹಸ್ತಿಗೆ ಜಲದಿಗ್ಬಂಧನ – ಕರ್ನಾಟಕದಲ್ಲೂ ಮುಂದಿನ 5 ದಿನ ಮಳೆ ಸಾಧ್ಯತೆ

    ಸುಖದೇವ್ ಮೇಲೆ ಆತನ ಜೈಪುರ ನಿವಾಸದ ಒಳಗೆ ಗುಂಡಿನ ದಾಳಿ ನಡೆಸಿ ಹತ್ಯೆಗೈಯಲಾಗಿದೆ. ರಾಷ್ಟ್ರೀಯ ರಜಪೂತ ಕರ್ಣಿ ಸೇನಾದ ಮುಖ್ಯಸ್ಥನಾಗಿದ್ದ ಸುಖದೇವ್ ಮೇಲೆ ಸ್ಕೂಟರ್‌ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಇದು ತನ್ನ ಕೃತ್ಯ ಎಂದು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ (Lawrence Bishnoi Gang) ಹೇಳಿಕೊಂಡಿದೆ.

    ಸುಖದೇವ್ ಸಿಂಗ್ ಮತ್ತು ಆತನ ಇಬ್ಬರು ಸಹವರ್ತಿಗಳಿಗೆ ಗುಂಡೇಟಿನಿಂದ ಗಾಯಗಳಾಗಿದ್ದವು. ಮೂವರನ್ನೂ ಆಸ್ಪತ್ರೆಗೆ (Hospital_ ದಾಖಲಿಸಲಾಗಿತ್ತು. ಆದ್ರೆ ಸುಖದೇವ್ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದರು. ಗಾಯಾಳುಗಳಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ವಿಭಜನೆಯ ಸಿದ್ಧಾಂತ 70 ವರ್ಷದಿಂದ ಬಂದ ಅಭ್ಯಾಸ, ಜನ ಈಗ ಎಚ್ಚೆತ್ತಿದ್ದಾರೆ: ಕಾಂಗ್ರೆಸ್ಸನ್ನು ಕುಟುಕಿದ ಮೋದಿ

    ಬಾಲಿವುಡ್ ಸಿನಿಮಾ ಪದ್ಮಾವತ್ ವಿರುದ್ಧ ಪ್ರತಿಭಟನೆ ನಡೆಸಿದ್ದ ರಜಪೂತ್ ಕರ್ಣಿ ಸೇನಾಕ್ಕಿಂತ ವಿಭಿನ್ನವಾದ ಸಂಘಟನೆಯನ್ನು ಸುಖದೇವ್ ಮುನ್ನಡೆಸುತ್ತಿದ್ದ. ಲೋಕೇಂದ್ರ ಸಿಂಗ್ ಕಲ್ವಿ ನಾಯಕತ್ವದ ಕರ್ಣಿ ಸೇನಾದ ಭಾಗವಾಗಿದ್ದ ಸುಖದೇವ್, 2015ರಲ್ಲಿ ಸಂಘಟನೆಯಿಂದ ಹೊರಬಂದು ತನ್ನದೇ ಸಂಘಟನೆ ಸ್ಥಾಪಿಸಿದ್ದ.

    ಸುಖದೇವ್ ಸಿಂಗ್‌ನ ಎದೆ ಮತ್ತು ತಲೆಗೆ ಗುಂಡು ಹಾರಿಸಲಾಗಿದೆ. ಸ್ಥಳದಲ್ಲಿ ಒಡೆದ ಬಾಗಿಲು ಹಾಗೂ ನೆಲದ ಮೇಲೆ ರಕ್ತ ಚೆಲ್ಲಾಡಿರುವ ದೃಶ್ಯಗಳು ವಿಡಿಯೋಗಳಲ್ಲಿ ಕಾಣಿಸಿದೆ. ಇದನ್ನೂ ಓದಿ: ಹಿಂಡೆನ್‌ಬರ್ಗ್‌ ಆರೋಪ ಅಪ್ರಸ್ತುತ – ಅಮೆರಿಕ ಹೇಳಿಕೆ ಬೆನ್ನಲ್ಲೇ ಅದಾನಿ ಕಂಪನಿಗಳ ಷೇರು ಮೌಲ್ಯ ಭಾರೀ ಏರಿಕೆ

    ಸುಖದೇವ್ ಹಾಗೂ ಆತನ ಸಹವರ್ತಿಗಳ ಜತೆ ಮನೆಯ ಒಳಗೆ ಸೋಫಾ ಮೇಲೆ ಕುಳಿತು ಇಬ್ಬರು ಅಪರಿಚಿತ ದುಷ್ಕರ್ಮಿಗಳು ಮಾತನಾಡುವುದು ಹಾಗೂ ಇದ್ದಕ್ಕಿದ್ದಂತೆ ಗನ್ ಹೊರಗೆ ತೆಗೆದು ಗುಂಡು ಹಾರಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತನ್ನನ್ನು ಬಿಟ್ಟುಬಿಡುವಂತೆ ಸುಖದೇವ್‌ನ ಸಹಚರನೊಬ್ಬ ಬೇಡಿಕೊಂಡರೂ, ಆತನ ಮೇಲೆ ಗುಂಡು ಹಾರಿಸಲಾಗಿದೆ. ಮನೆಯಿಂದ ಹೊರಗೆ ಹೊರಟ್ಟಿದ್ದ ಒಬ್ಬ ಬಂದೂಕುಧಾರಿ, ಪುನಃ ಒಳಗೆ ಬಂದು ಸಮೀಪದಿಂದ ಸುಖದೇವ್ ಮೇಲೆ ಮತ್ತೊಂದು ಗುಂಡು ಹಾರಿಸಿದ್ದಾನೆ.

    ಈ ಘಟನೆಯಿಂದ ಆಘಾತ ಉಂಟಾಗಿದೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. ನಾನು ಪೊಲೀಸ್ ಕಮಿಷನರ್ ಜೊತೆ ಮಾತನಾಡಿದ್ದು, ಆರೋಪಿಗಳನ್ನು ಆದಷ್ಟು ಶೀಘ್ರವೇ ಬಂಧಿಸುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ. ರಾಜಸ್ಥಾನವನ್ನು ಅಪರಾಧ ಮುಕ್ತ ರಾಜ್ಯವನ್ನಾಗಿ ಮಾಡುವುದು ಬಿಜೆಪಿ ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.