Tag: Sukhesh Chandrasekhar

  • ಗೆಳೆಯನ ವಿರುದ್ಧವೇ ಹೇಳಿಕೆ ದಾಖಲಿಸಿದ ನಟಿ ಜಾಕ್ವೆಲಿನ್ ಫರ್ನಾಂಡಿಸ್

    ಗೆಳೆಯನ ವಿರುದ್ಧವೇ ಹೇಳಿಕೆ ದಾಖಲಿಸಿದ ನಟಿ ಜಾಕ್ವೆಲಿನ್ ಫರ್ನಾಂಡಿಸ್

    ವಿಕ್ರಾಂತ್ ರೋಣ ಸಿನಿಮಾದಲ್ಲಿ ‘ರಾ ರಾ ರಕ್ಕಮ್ಮ’ ಹಾಡಿಗೆ ಸೊಂಟ ಬಳುಕಿಸಿದ್ದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇದೀಗ ಗೆಳೆಯನ ವಿರುದ್ಧವೇ ದೂರು ದಾಖಲಿಸಿದ್ದಾರೆ. ಬಹುಕೋಟಿ ವಂಚನೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಸುಖೇಶ್ ಚಂದ್ರಶೇಖರ್ ವಿರುದ್ಧವೇ ದೆಹಲಿ ಪಟಿಯಾಲಾ ಹೌಸ್ ಕೋರ್ಟಿನಲ್ಲಿ ಹೇಳಿಕೆ ದಾಖಲಿಸಿದ್ದಾರೆ. ಬಹುಕೋಟಿ ವಂಚನೆಯ ಆರೋಪಿ ಆಗಿರುವ ಸುಖೇಶ್ ಚಂದ್ರಶೇಖರ್ ಕಡೆಯಿಂದ ದುಬಾರಿ ಬೆಲೆಯ ಗಿಫ್ಟ್ ಪಡೆದುಕೊಂಡಿದ್ದಾರೆ ಎನ್ನುವ ಕಾರಣಕ್ಕಾಗಿ ಜಾಕ್ವೆಲಿನ್ ಇಡಿ ವಿಚಾರಣೆಯನ್ನು ಎದುರಿಸಿದರು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಕೋರ್ಟ್ ಮುಂದೆ ಹಾಜರಾಗಿದ್ದ ಜಾಕ್ವೆಲಿನ್ ಕಣ್ಣೀರಿಟ್ಟಿದ್ದಾರೆ. ಆತನ ಸ್ನೇಹದಿಂದಾಗಿ ನೆಮ್ಮದಿ ಕಳೆದುಕೊಂಡೆ ಹಾಗೂ ಅವನು ನನ್ನ ಭಾವನೆಗಳೊಂದಿಗೆ ಆಟವಾಡಿ, ಜೀವನವನ್ನೇ ನರಕ ಮಾಡಿದ್ದಾನೆ ಎಂದು ಅವರು ಹೇಳಿಕೊಂಡಿದ್ದಾರೆ. ಜೀವನವನ್ನು ಮಾತ್ರವಲ್ಲ, ವೃತ್ತಿ ಜೀವನವನ್ನೇ ಅವನು ಹದಗೆಡಿಸಿಬಿಟ್ಟಿದ್ದಾನೆ ಎಂದು ದೂರಿದ್ದಾರೆ. ಸುಖೇಶ್ ತಮಗೆ ಪರಿಚಯವಾಗಿದ್ದು ಪಿಂಕಿ ಇರಾನಿ ಎನ್ನುವ ಮಹಿಳೆಯಿಂದ ಎಂದು ಅವರು ಹೇಳಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಬೀಚ್ ಫೋಟೋ: ದೇವರಕೊಂಡ ಕ್ಲಿಕ್ಕಿಸಿದ್ದಾ ಎಂದ ನೆಟ್ಟಿಗರು

    ಪಿಂಕಿ ಇರಾನಿ ಎನ್ನುವ ಹೆಣ್ಣುಮಗಳು ಸುಖೇಶ್ ನನ್ನು ಗೃಹ ಸಚಿವಾಲಯದ ಅಧಿಕಾರಿ ಎಂದು ಪರಿಚಯಿಸಿದರು. ಈ ಪರಿಚಯ ಸ್ನೇಹವಾಯಿತು. ಆತ್ಮೀಯತೆ ಬೆಳೆಯಿತು. ಸುಖೇಶ್ ನಿಂದ ಕೆಲವು ಗಿಫ್ಟ್ ಗಳು ಬಂದಿದ್ದು ಪಿಂಕಿ ಇರಾನಿ ಕಡೆಯಿಂದ. ಸುಖೇಶ್ ಬಗ್ಗೆ ವಿಷಯ ಗೊತ್ತಿದ್ದರೂ, ಆಕೆ ನನ್ನಿಂದ ಎಲ್ಲವನ್ನೂ ಮುಚ್ಚಿಟ್ಟರು. ಅವನು ನನ್ನ ದೊಡ್ಡ ಅಭಿಮಾನಿ ಎಂದು ಸುಳ್ಳು ಹೇಳಿದ್ದರು ಎಂದು ಕೋರ್ಟ್ ನಲ್ಲಿ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ.

    ಸುಖೇಶ್ ಪ್ರಕರಣದಿಂದಾಗಿ ಜಾಕ್ವೆಲಿನ್ ಹೈರಾಣಾಗಿದ್ದಾರೆ. ಈ ಕಡೆ ಜಾರಿ ನಿರ್ದೇಶನಾಲಯದ ತನಿಖೆ, ಆ ಕಡೆ ಮರ್ಯಾದೆ ಎರಡನ್ನೂ ಕಳೆದುಕೊಂಡಿದ್ದು ಸುಸ್ತಾಗಿದ್ದಾರಂತೆ. ಪಾಸ್ಟ್ ಪೋರ್ಟ್ ಪೊಲೀಸ್ ವಶದಲ್ಲಿ ಇರುವುದರಿಂದ ನೆಮ್ಮೆದಿಯಿಂದ ಹೊರದೇಶಕ್ಕೂ ಅವರಿಗೆ ಹೋಗಲು ಆಗುತ್ತಿಲ್ಲವಂತೆ. ಒಟ್ನಲ್ಲಿ ಸುಖೇಶ್ ಪ್ರಕರಣ ಅವರನ್ನು ನಿದ್ದೆಗೆಡಿಸಿದ್ದಂತೂ ನಿಜ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅವನು ನನ್ನ ಜೀವನ ನರಕವಾಗಿಸಿದ : ನಟಿ ಜಾಕ್ವೆಲಿನ್ ಫರ್ನಾಂಡಿಸ್

    ಅವನು ನನ್ನ ಜೀವನ ನರಕವಾಗಿಸಿದ : ನಟಿ ಜಾಕ್ವೆಲಿನ್ ಫರ್ನಾಂಡಿಸ್

    ರ್ನಾಟಕ ಮೂಲದ ಸುಖೇಶ್ ಚಂದ್ರಶೇಖರ್ (Sukhesh Chandrasekhar) ಸ್ನೇಹದಿಂದಾಗಿ ನಾನು ನೆಮ್ಮದಿ ಕಳೆದುಕೊಂಡೆ ಎಂದಿದ್ದಾರೆ ಬಾಲಿವುಡ್ ನಟಿ ಹಾಗೂ ಕನ್ನಡದ ವಿಕ್ರಾಂತ್ ರೋಣ ಚಿತ್ರದ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez). ಬಹುಕೋಟಿ ವಂಚನೆಯ ಆರೋಪಿ ಆಗಿರುವ ಸುಖೇಶ್ ಚಂದ್ರಶೇಖರ್ ಕಡೆಯಿಂದ ದುಬಾರಿ ಬೆಲೆಯ ಗಿಫ್ಟ್ ಪಡೆದುಕೊಂಡಿದ್ದಾರೆ ಎನ್ನುವ ಕಾರಣಕ್ಕಾಗಿ ಜಾಕ್ವೆಲಿನ್ ಇಡಿ ವಿಚಾರಣೆಯನ್ನು ಎದುರಿಸಿದರು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಕೋರ್ಟ್ ಮುಂದೆ ಹಾಜರಾಗಿದ್ದ ಜಾಕ್ವೆಲಿನ್ ಕಣ್ಣೀರಿಟ್ಟಿದ್ದಾರೆ. ಆತನ ಸ್ನೇಹದಿಂದಾಗಿ ನೆಮ್ಮದಿ ಕಳೆದುಕೊಂಡೆ ಹಾಗೂ ಅವನು ನನ್ನ ಭಾವನೆಗಳೊಂದಿಗೆ ಆಟವಾಡಿ, ಜೀವನವನ್ನೇ ನರಕ ಮಾಡಿದ್ದಾನೆ ಎಂದು ಅವರು ಹೇಳಿಕೊಂಡಿದ್ದಾರೆ. ಜೀವನವನ್ನು ಮಾತ್ರವಲ್ಲ, ವೃತ್ತಿ ಜೀವನವನ್ನೇ ಅವನು ಹದಗೆಡಿಸಿಬಿಟ್ಟಿದ್ದಾನೆ ಎಂದು ದೂರಿದ್ದಾರೆ. ಸುಖೇಶ್ ತಮಗೆ ಪರಿಚಯವಾಗಿದ್ದು ಪಿಂಕಿ ಇರಾನಿ ಎನ್ನುವ ಮಹಿಳೆಯಿಂದ ಎಂದು ಅವರು ಹೇಳಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಖ್ಯಾತ ನಟ ವಿಜಯ್ ಆಂಟನಿ ಅಪಘಾತ: ಸ್ಥಿತಿ ಚಿಂತಾಜನಕ

    ಪಿಂಕಿ ಇರಾನಿ (Pinky Irani) ಎನ್ನುವ ಹೆಣ್ಣುಮಗಳು ಸುಖೇಶ್ ನನ್ನು ಗೃಹ ಸಚಿವಾಲಯದ ಅಧಿಕಾರಿ ಎಂದು ಪರಿಚಯಿಸಿದರು. ಈ ಪರಿಚಯ ಸ್ನೇಹವಾಯಿತು. ಆತ್ಮೀಯತೆ ಬೆಳೆಯಿತು. ಸುಖೇಶ್ ನಿಂದ ಕೆಲವು ಗಿಫ್ಟ್ ಗಳು ಬಂದಿದ್ದು ಪಿಂಕಿ ಇರಾನಿ ಕಡೆಯಿಂದ. ಸುಖೇಶ್ ಬಗ್ಗೆ ವಿಷಯ ಗೊತ್ತಿದ್ದರೂ, ಆಕೆ ನನ್ನಿಂದ ಎಲ್ಲವನ್ನೂ ಮುಚ್ಚಿಟ್ಟರು. ಅವನು ನನ್ನ ದೊಡ್ಡ ಅಭಿಮಾನಿ ಎಂದು ಸುಳ್ಳು ಹೇಳಿದ್ದರು ಎಂದು ಕೋರ್ಟ್ ನಲ್ಲಿ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ.

    ಸುಖೇಶ್ ಪ್ರಕರಣದಿಂದಾಗಿ ಜಾಕ್ವೆಲಿನ್ ಹೈರಾಣಾಗಿದ್ದಾರೆ. ಈ ಕಡೆ ಜಾರಿ ನಿರ್ದೇಶನಾಲಯದ ತನಿಖೆ, ಆ ಕಡೆ ಮರ್ಯಾದೆ ಎರಡನ್ನೂ ಕಳೆದುಕೊಂಡಿದ್ದು ಸುಸ್ತಾಗಿದ್ದಾರಂತೆ. ಪಾಸ್ಟ್ ಪೋರ್ಟ್ ಪೊಲೀಸ್ ವಶದಲ್ಲಿ ಇರುವುದರಿಂದ ನೆಮ್ಮೆಯಿಂದ ಹೊರದೇಶಕ್ಕೂ ಅವರಿಗೆ ಹೋಗಲು ಆಗುತ್ತಿಲ್ಲವಂತೆ. ಒಟ್ನಲ್ಲಿ ಸುಖೇಶ್ ಪ್ರಕರಣ ಅವರನ್ನು ನಿದ್ದೆಗೆಡಿಸಿದ್ದಂತೂ ನಿಜ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾ..ರಾ. ರಕ್ಕಮ್ಮ ಬೆಡಗಿ ಜಾಕ್ವೆಲಿನ್ ಇದೀಗ 215 ಕೋಟಿ ಹಣದ ಪ್ರಕರಣದಲ್ಲಿ ಆರೋಪಿ

    ರಾ..ರಾ. ರಕ್ಕಮ್ಮ ಬೆಡಗಿ ಜಾಕ್ವೆಲಿನ್ ಇದೀಗ 215 ಕೋಟಿ ಹಣದ ಪ್ರಕರಣದಲ್ಲಿ ಆರೋಪಿ

    ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ‘ರಾ ರಾ ರಕಮ್ಮ’ ಹಾಡಿಗೆ ಸಖತ್ ಆಗಿ ಸ್ಟೆಪ್ ಹಾಕಿ ಕೋಟಿ ಹೃದಯ ಕದ್ದಿದ್ದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇದೀಗ ಕೋರ್ಟ್ ಮೆಟ್ಟಿಲು ಹತ್ತುವಂತಾಗಿದೆ. ಬರೋಬ್ಬರಿ 215 ಕೋಟಿ ರೂಪಾಯಿ ಹಣ ವಸೂಲಿ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರನ್ನು ಆರೋಪಿಯನ್ನಾಗಿ ಇಡಿ ಅಧಿಕಾರಿಗಳು ಇಂದು ದೆಹಲಿ ಇಡಿ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸುತ್ತಿದ್ದಾರೆ.

    ಬೆಂಗಳೂರು ಮೂಲದ ಸುಖೇಶ್ ಚಂದ್ರಶೇಖರ್ ಗೂ ಮತ್ತು ಜಾಕ್ವೆಲಿನ್ ಇಬ್ಬರೂ ಸ್ನೇಹಿತರು ಎಂದು ಹೇಳಲಾಗುತ್ತಿದ್ದು, ಈ ಸುಖೇಶ್ ಬರೋಬ್ಬರಿ 215 ಕೋಟಿ ರೂಪಾಯಿಯನ್ನು ವಂಚಿಸಿದ್ದಾರೆ ಎನ್ನಲಾಗುತ್ತಿದೆ. ಜೈಲಿನಲ್ಲಿರುವ ಖೈದಿಯೊಬ್ಬರನ್ನು ಬಿಡುಗಡೆ ಮಾಡಿಸಲು ಈ ಪ್ರಮಾಣದ ಹಣವನ್ನು ಉದ್ಯಮಿಯ ಪತ್ನಿಗೆ ಕೇಳಿದ್ದರು. ನಂಬಿಸಿ ವಸೂಲಿ ಕೂಡ ಮಾಡಿದ್ದರು. ಆನಂತರ ಉದ್ಯಮಿ ಪತ್ನಿಗೆ ಇದು ಮೋಸ ಎಂದು ಗೊತ್ತಾಗಿ ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿ:ಬಾಯ್ಕಾಟ್ ಟ್ರೆಂಡ್ ಬೆಳೆಯದಂತೆ ಹತ್ತಿಕ್ಕಬೇಕು : ನಟ ಅರ್ಜುನ್ ಕಪೂರ್

    215 ಕೋಟಿ ಹಣದಲ್ಲಿ ಸುಖೇಶ್, ಬಾಲಿವುಡ್ ನಟಿ ಜಾಕ್ವೆಲಿನ್ ಗೆ ದುಬಾರಿ ಕಾರು, ಡೈಮೆಂಡ್, ವಾಚ್, ಬ್ಯಾಗ್ ಗಳು ಮತ್ತು ದುಬಾರಿ ಕುದುರೆಯೊಂದನ್ನು ಉಡುಗೊರೆಯಾಗಿ ನೀಡಿದ್ದರು ಎನ್ನುವ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಇಡಿ ತನಿಖೆ ಆರಂಭಿಸಿತ್ತು. ಇದೀಗ ಅದು ನಿಜವಾಗಿದೆ ಎಂದು ಇಡಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ ಎಂದು ಹೇಳಾಗುತ್ತಿದೆ. ಹಾಗಾಗಿ ಜಾರಿ ನಿರ್ದೇಶನಾಲಯವು ಕೋರ್ಟ್ ಗೆ ಜಾಕ್ವೆಲಿನ್ ಹೆಸರೂ ಸೇರಿಸಿದ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸುಖೇಶ್ ಮಾಡಿದ ತಪ್ಪಿಗೆ ಇದೀಗ ಈ ನಟಿ ಕೋರ್ಟ್ ಕಟಕಟೆಯಲ್ಲಿ ನಿಲ್ಲುವ ಪರಿಸ್ಥಿತಿ ಎದುರಾಗಿದೆ.

    Live Tv
    [brid partner=56869869 player=32851 video=960834 autoplay=true]