Tag: sulagitti narasamma

  • ಮನ್ ಕಿ ಬಾತ್‍ನಲ್ಲಿ ಸೂಲಗಿತ್ತಿ ನರಸಮ್ಮರನ್ನು ನೆನೆದ ಪ್ರಧಾನಿ ಮೋದಿ

    ಮನ್ ಕಿ ಬಾತ್‍ನಲ್ಲಿ ಸೂಲಗಿತ್ತಿ ನರಸಮ್ಮರನ್ನು ನೆನೆದ ಪ್ರಧಾನಿ ಮೋದಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 51 ನೇ ಹಾಗೂ ವರ್ಷದ ಕೊನೆಯ ‘ಮನ್ ಕಿ ಬಾತ್’ ಕಾರ್ಯಕ್ರಮಲ್ಲಿ ತುಮಕೂರು ಜಿಲ್ಲೆಯ ಪದ್ಮಶ್ರೀ ಪುರಸ್ಕೃತೆ ಸೂಲಗಿತ್ತಿ ನರಸಮ್ಮ ರವರ ಸಾಧನೆಯನ್ನು ನೆನೆದು, ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮನ್ ಕಿ ಬಾತ್ ಕಾರ್ಯಕ್ರಮದ ಮೂಲಕ 2018ರಲ್ಲಿ ದೇಶ ಸಾಧಿಸಿದ ವಿವಿಧ ಮೈಲಿಗಲ್ಲುಗಳನ್ನು ವಿವರಿಸಿದರು. ಜೊತೆಗೆ ದೇಶದ ಜನತೆಗೆ 2019ರ ಹೊಸ ವರ್ಷದ ಶುಭಶಯ ತಿಳಿಸಿದ್ದಾರೆ.

    ದೇಶದಲ್ಲಿ ಪರಮಾಣು ಸಾಮಥ್ರ್ಯ ಹೆಚ್ಚಾಗಿದ್ದು, ಭೂ ಸೇವೆ, ಜಲಪಡೆ ಹಾಗೂ ವಾಯುಪಡೆಯಲ್ಲಿ ಹೋರಾಡುವ ನ್ಯೂಕ್ಲಿಯರ್ ಟ್ರಯಾಡ್ ಸಾಧನೆ ಈ ವರ್ಷ ಲಭಿಸಿದೆ. 2018ರಲ್ಲಿ ನಡೆದ ಏಷ್ಯನ್ ಗೇಮ್ಸ್, ಪ್ಯಾರಾ ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಕ್ರೀಡಾಪಟುಗಳು ಹೆಚ್ಚು ಪದಕಗಳನ್ನು ಗಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಪ್ರಪಂಚದಲ್ಲೇ ಅತಿ ದೊಡ್ಡ ಆರೋಗ್ಯ ವಿಮೆ ಯೋಜನೆಯಾದ ಆಯುಷ್ಮಾನ್ ಭಾರತ್ ಯೋಜನೆಗೆ ಚಾಲನೆ, ದೇಶದ ಪ್ರತಿ ಗ್ರಾಮಕ್ಕೂ ವಿದ್ಯುತ್ ಸಂಪರ್ಕ, ಸರ್ದಾರ್ ಪಟೇಲ್‍ರ ‘ಏಕತಾ ಪ್ರತಿಮೆ’ ಅನಾವರಣ ಸೇರಿದಂತೆ ಅನೇಕ ಬೆಳಗವಣಿಗೆಯನ್ನು 2018ರಲ್ಲಿ ಕಂಡಿದ್ದೇವೆ. ಇತ್ತ ವಿಶ್ವಸಂಸ್ಥೆ ನೀಡುವ ಅತ್ಯುನ್ನತ ಪರಿಸರ ಪ್ರಶಸ್ತಿ ‘ಚಾಂಪಿಯನ್ಸ್ ಆಫ್ ದಿ ಅರ್ಥ್’ ಗೆ ಭಾರತ ಪಾತ್ರವಾಗಿದೆ ಎಂದು ಹೇಳಿದರು.

    ಇದು 2018ರ ಕೊನೆಯ ಮನ್ ಕಿ ಬಾತ್ ಕಾರ್ಯಕ್ರಮ. ಮತ್ತೆ 2019ರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಭೇಟಿಯಾಗೋಣ ಎಂದು ತಿಳಿಸಿದ ಮೋದಿ, ದೇಶದ ಜನತೆಗೆ ಹೊಸ ವರ್ಷದ ಶುಭಶಯ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪದ್ಮ ಪ್ರಶಸ್ತಿ ಪುರಸ್ಕೃತ ಸೂಲಗಿತ್ತಿ ನರಸಮ್ಮ ಪಂಚಭೂತಗಳಲ್ಲಿ ಲೀನ

    ಪದ್ಮ ಪ್ರಶಸ್ತಿ ಪುರಸ್ಕೃತ ಸೂಲಗಿತ್ತಿ ನರಸಮ್ಮ ಪಂಚಭೂತಗಳಲ್ಲಿ ಲೀನ

    ತುಮಕೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸೂಲಗಿತ್ತಿ ನರಸಮ್ಮ ಅವರ ಅಂತ್ಯ ಸಂಸ್ಕಾರ ಇಂದು ನಗರದ ಗಂಗಸಂದ್ರ ಸರ್ಕಾರಿ ಜಮೀನಿನಲ್ಲಿ ನೆರವೇರಿತು.

    ಸಕಲ ಸರ್ಕಾರಿ ಗೌರವಗಳೊಂದಿಗೆ ಸೂಲಗಿತ್ತಿ ನರಸಮ್ಮ ಅವರಿಗೆ ಜಿಲ್ಲಾಡಳಿತವು ಅಂತಿಮ ನಮನ ಸಲ್ಲಿಸಿತು. ಅಂತ್ಯಸಂಸ್ಕಾರದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಭಾಗಿಯಾಗಿದ್ದರು. ನಗರದ ಗಾಜಿನ ಮನೆಯಿಂದ ಮೆರವಣಿಗೆ ಹೊರಟು ಗಂಗಸಂದ್ರ ಸರ್ಕಾರಿ ಜಮೀನು ತಲುಪಿತು. ಬಳಿಕ ಸಕಲ ವಿಧಿ ವಿಧಾನಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಯಿತು.

    ನರಸಮ್ಮ ಅವರ ಕುಟುಂಬಸ್ಥರ ಮನವಿಯಂತೆ ಸಮಾಧಿ ಹಾಗೂ ಸ್ಮಾರಕ ನಿರ್ಮಾಣಕ್ಕೆ ಗಂಗಸಂದ್ರದಲ್ಲಿ ಒಂದು ಎಕರೆ ಸರ್ಕಾರಿ ಜಮೀನನ್ನು ಜಿಲ್ಲಾಡಳಿತವು ನಿಗದಿ ಮಾಡಿದೆ. ಆ ಜಮೀನಿನಲ್ಲಿಯೇ ಇಂದು ಅಂತ್ಯಸಂಸ್ಕಾರ ನೆರವೇರಿತು.

    ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನರಸಮ್ಮ ಅವರಿಗೆ ಟ್ರೈಕ್ಯಾಸ್ಟಮಿ ಚಿಕಿತ್ಸೆ ಸಹ ನಡೆಸಲಾಗಿತ್ತು. ಕ್ರಮೇಣ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ನವೆಂಬರ್ 30ರಂದು ಸಿಗ್ನಲ್ ಮುಕ್ತ ಸಂಚಾರ ವ್ಯವಸ್ಥೆಯೊಂದಿಗೆ ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದರು. ತುಮಕೂರು ಭಾಗದ ಜನರು ಸೂಲಗಿತ್ತಿ ನರಸಮ್ಮ ಅವರನ್ನು ದೇವರ ಸ್ವರೂಪದಂತೆ ಕಾಣುತ್ತಾರೆ. ಇವರ ಸೇವೆಯನ್ನು ಗುರುತಿಸಿರುವ ಹಲವು ಸಂಘ ಸಂಸ್ಥೆಗಳು ಈಗಾಗಲೇ ಹಲವು ಪ್ರಶಸ್ತಿಗಳು ನೀಡಿ ಗೌರವಿಸಿವೆ. ದೇವರಾಜು ಅರಸು ಪ್ರಶಸ್ತಿ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ, ವಯೋಶ್ರೇಷ್ಠ ಸಮ್ಮಾನ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪದ್ಮ ಪ್ರಶಸ್ತಿ ಪುರಸ್ಕೃತ ಸೂಲಗಿತ್ತಿ ನರಸಮ್ಮ ವಿಧಿವಶ

    ಪದ್ಮ ಪ್ರಶಸ್ತಿ ಪುರಸ್ಕೃತ ಸೂಲಗಿತ್ತಿ ನರಸಮ್ಮ ವಿಧಿವಶ

    ಬೆಂಗಳೂರು: ದೇಶದ ಉನ್ನತ ನಾಗರಿಕ ಪದ್ಮ ಪ್ರಶಸ್ತಿ ಪುರಸ್ಕೃತ ಕನ್ನಡತಿ ಸೂಲಗಿತ್ತಿ(98) ನರಸಮ್ಮ ಅವರು ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಇಂದು ವಿಧಿವಶರಾಗಿದ್ದಾರೆ.

    ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಕೃಷ್ಣಾಪುರದ ಮೂಲದವರಾದ ಸೂಲಗಿತ್ತಿ ನರಸಮ್ಮ ಆಸ್ಪತ್ರೆ, ವೈದ್ಯರಿಲ್ಲದ ಕಾಲದಲ್ಲಿ ಆಧುನಿಕ ಕಾಲದ ಹೆರಿಗೆ ತಜ್ಞೆಯಂತೆ 15 ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿದ್ದರು.

    ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನರಸಮ್ಮ ಅವರಿಗೆ ಟ್ರೈಕ್ಯಾಸ್ಟಮಿ ಚಿಕಿತ್ಸೆ ಸಹ ನಡೆಸಲಾಗಿತ್ತು. ಕ್ರಮೇಣ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ನವೆಂಬರ್ 30ರಂದು ಸಿಗ್ನಲ್ ಮುಕ್ತ ಸಂಚಾರ ವ್ಯವಸ್ಥೆಯೊಂದಿಗೆ ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

    ತುಮಕೂರು ಭಾಗದ ಜನರು ಸೂಲಗಿತ್ತಿ ನರಸಮ್ಮ ಅವರನ್ನು ದೇವರ ಸ್ವರೂಪದಂತೆ ಕಾಣುತ್ತಾರೆ. ಇವರ ಸೇವೆಯನ್ನು ಗುರುತಿಸಿರುವ ಹಲವು ಸಂಘ ಸಂಸ್ಥೆಗಳು ಈಗಾಗಲೇ ಹಲವು ಪ್ರಶಸ್ತಿಗಳು ನೀಡಿ ಗೌರವಿಸಿವೆ. ದೇವರಾಜು ಅರಸು ಪ್ರಶಸ್ತಿ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ, ವಯೋಶ್ರೇಷ್ಠ ಸಮ್ಮಾನ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿವೆ.

    https://youtu.be/EDUP6ymyTJ4

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv