Tag: sulvadi maramma temple

  • ಬಿಕೋ ಎನ್ನುತ್ತಿದೆ ಭಕ್ತರಿಂದ ತುಂಬಿ ತುಳುಕುತ್ತಿದ್ದ ಸಾಲೂರು ಮಠ

    ಬಿಕೋ ಎನ್ನುತ್ತಿದೆ ಭಕ್ತರಿಂದ ತುಂಬಿ ತುಳುಕುತ್ತಿದ್ದ ಸಾಲೂರು ಮಠ

    – ಸಂಸ್ಕೃತ ಪಾಠ ಶಾಲೆಗೂ ಬೀಗ

    ಚಾಮರಾಜನಗರ/ಮೈಸೂರು: ಪ್ರತಿ ದಿನವೂ ಭಕ್ತರಿಂದ ತುಂಬಿ ತುಳುಕುತ್ತಿದ್ದ ಹಾಗೂ ದಾಸೋಹಕ್ಕೆ ಪ್ರಸಿದ್ಧವಾಗಿರುವ ಮಲೆಮಹದೇಶ್ವರ ಬೆಟ್ಟದ ಸಾಲೂರು ಮಠ ಇದೀಗ ಬಿಕೋ ಎನ್ನುತ್ತಿದೆ.

    ಸುಳ್ವಾಡಿ ಮಾರಮ್ಮ ದುರಂತದ ಪ್ರಕರಣದಲ್ಲಿ ಬಂಧಿಯಾಗಿರುವ ಸಾಲೂರು ಮಠದ ಕಿರಿಯ ಸ್ವಾಮೀಜಿ ಇಮ್ಮಡಿ ಮಹದೇವಸ್ವಾಮೀಜಿಯಿಂದ ಮಠಕ್ಕೆ ಕಳಂಕ ಬಂದಿದೆ. ಇದ್ರಿಂದಾಗಿ ಇತ್ತ ಭಕ್ತರೇ ಸುಳಿಯುತ್ತಿಲ್ಲ. ಈ ಮೊದಲು ಭಕ್ತರಿಂದ ತುಂಬಿ ತುಳುಕುತ್ತಿದ್ದ ಮಠ ಇದೀಗ ಸಂಪೂರ್ಣವಾಗಿ ಸ್ತಬ್ಧವಾಗಿದೆ.

    ಇದಲ್ಲದೇ ಮಠದ ಮುಂಭಾಗವಿರುವ ಸಂಸ್ಕೃತ ಪಾಠ ಶಾಲೆಯೂ ಮುಚ್ಚಿದೆ. ಈ ಶಾಲೆಯಲ್ಲಿ ಪ್ರತಿದಿನ ನೂರಾರು ವಿದ್ಯಾರ್ಥಿಗಳು ಸಂಸ್ಕೃತ ಪಾಠವನ್ನು ಕಲಿಯುತ್ತಿದ್ದರು. ಇದೀಗ ಆ ಶಾಲೆಗಳಿಗೂ ಸಹ ಬೀಗ ಹಾಕಲಾಗಿದೆ.

    ಫೋಟೋ ಹರಿದು ಆಕ್ರೋಶ:
    ಸುಳ್ವಾಡಿ ವಿಷ ಪ್ರಸಾದ ಪ್ರಕರಣ ಈಗ ಸಾಲೂರು ಮಠದ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. 1ನೇ ಆರೋಪಿ ಇಮ್ಮಡಿ ಮಹದೇಸ್ವಾಮಿ ವಿರುದ್ಧ ಸಿಡಿದೆದ್ದಿರುವ ಭಕ್ತರು, ಸಾಲೂರು ಮಠದಲ್ಲಿದ್ದ ಕಿರಿಯ ಸ್ವಾಮೀಜಿ ಫೋಟೋ ಹರಿದು ಭಕ್ತರ ಆಕ್ರೋಶ ಹೊರಹಾಕಿದ್ದಾರೆ. ವಿಷ ರಾಕ್ಷಸ ಇಮ್ಮಡಿ ಮಹಾದೇವಸ್ವಾಮಿ ಫೋಟೋ ಒಡೆದು ಚೂರುಚೂರು ಮಾಡಿದ್ದಾರೆ.

    ಇಮ್ಮಡಿ ಸ್ವಾಮಿ ಕುಳಿತುಕೊಳ್ಳುತ್ತಿದ್ದ ಪೀಠದ ಹಿಂದಿನ ಭಾವಚಿತ್ರವನ್ನು ಮಠದಿಂದ ಹೊರಗಿಡಲಾಗಿತ್ತು. ಅದನ್ನು ಕಂಡ ಕೂಡದೇ ಸಿಟ್ಟಿಗೆದ್ದ ಭಕ್ತರು, ತಮ್ಮಲ್ಲಿನ ಆಕ್ರೋಶ ಹೊರಹಾಕಿದ್ದಾರೆ. ಹಿರಿಸ್ವಾಮಿ ಮತ್ತು ಕಿರಿಸ್ವಾಮಿ ಒಟ್ಟಿಗೆ ಇದ್ದ ಫೋಟೋಗಳಲ್ಲಿ ಕಿರಿಸ್ವಾಮಿ ಫೋಟೋವನ್ನು ಹರಿದುಹಾಕಿದ್ದಾರೆ. ಇಮ್ಮಡಿ ಮಹದೇಸ್ವಾಮಿಯಿಂದ ಮಠಕ್ಕೆ ಕೆಟ್ಟ ಹೆಸರು ಬಂದಿದೆ ಎಂದು ಭಕ್ತರು ಆರೋಪಿಸಿದ್ದಾರೆ.

    ಅಸ್ವಸ್ಥರಿಗೆ ಮುಂದುವರಿದ ಚಿಕಿತ್ಸೆ:
    ದೇವಸ್ಥಾನದ ಕ್ರಿಮಿನಾಶಕ ಪ್ರಸಾದ ಸೇವೆನೆಯಿಂದ ಅಸ್ವಸ್ಥರಾದವರಿಗೆ 11ನೇ ದಿನವೂ ಚಿಕಿತ್ಸೆ ಮುಂದುವರಿದಿದೆ. ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಒಟ್ಟು 33 ಮಂದಿಗೆ ಚಿಕಿತ್ಸೆ ನೀಡಲಾಗ್ತಿದೆ. ಅದರಲ್ಲಿ 8 ಮಂದಿಗೆ ಐಸಿಯೂನಲ್ಲಿ ಟ್ರೀಟ್‍ಮೆಂಟ್ ನೀಡಲಾಗ್ತಿದೆ. 12 ಮಂದಿಗೆ ಕೃತಕ ಉಸಿರಾಟದ ವ್ಯವಸ್ಥೆ ಕಲ್ಪಿಸಲಾಗಿದೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ. ಇನ್ನು 13 ಮಂದಿಗೆ ಸಾಮಾನ್ಯ ವಾರ್ಡ್‍ನಲ್ಲಿ ನೀಡಲಾಗ್ತಿದೆ. ಇನ್ನು ಕೆ.ಆರ್.ಆಸ್ಪತ್ರೆಯಿಂದ ಎಲ್ಲಾ ಅಸ್ವಸ್ಥರು ಡಿಸ್ಚಾರ್ಜ್ ಆಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸುಳ್ವಾಡಿ ದುರಂತ- ತಾನು ಕಲ್ಪಿಸಿದ ಮಗುವನ್ನು ತನ್ನ ಸನ್ನಿಧಿಯಲ್ಲೇ ಕಿತ್ತುಕೊಂಡ ಮಾರಮ್ಮ!

    ಸುಳ್ವಾಡಿ ದುರಂತ- ತಾನು ಕಲ್ಪಿಸಿದ ಮಗುವನ್ನು ತನ್ನ ಸನ್ನಿಧಿಯಲ್ಲೇ ಕಿತ್ತುಕೊಂಡ ಮಾರಮ್ಮ!

    ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಸೇವಿಸಿ 17 ಮಂದಿ ಮೃತಪಟ್ಟಿದ್ದು, ಇದೀಗ ಗರ್ಭಿಣಿಯೊಬ್ಬರಿಗೆ ಗರ್ಭಪಾತವಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

    ಹೌದು. ಸ್ಥಳೀಯ ನಿವಾಸಿ ಸೌಂದರ್ಯ ಅವರು ಮಾರಮ್ಮ ದೇವಿಗೆ ಹರಕೆ ಹೊತ್ತ ಬಳಿಕ ಗರ್ಭಿಣಿಯಾಗಿದ್ದು, 3 ತಿಂಗಳು ಆಗಿತ್ತು. ಆದ್ರೆ ಇದೀಗ ಅದೇ ತಾಯಿಯ ಸನ್ನಿಧಿಯಲ್ಲಿ ವಿಷ ಪ್ರಸಾದ ಸೇವಿಸಿದ್ದರಿಂದ ಅವರಿಗೆ ಗರ್ಭಪಾತವಾಗಿದೆ. ಈ ಮೂಲಕ ಮಾರಮ್ಮ ದೇವಿ ತಾನು ಕಲ್ಪಿಸಿದ ಮಗುವನ್ನು ತನ್ನ ಸನ್ನಿಧಿಯಲ್ಲೇ ಕಿತ್ತುಕೊಂಡಿದ್ದಾಳೆ ಅಂತ ಸೌಂದರ್ಯ ಕಣ್ಣೀರು ಹಾಕುತ್ತಿದ್ದಾರೆ.

    ಹರಕೆ ಏನಿತ್ತು?
    ನಾನು ಗರ್ಭಿಣಿಯಾದ್ರೆ ಪ್ರತಿ ವಾರ ಸನ್ನಿಧಿಗೆ ಬರುತ್ತೇನೆ ಎಂದು ಸೌಂದರ್ಯ ಹರಕೆ ಹೊತ್ತಿದ್ದರು. ಅಂತೆಯೇ ಅವರು ಪ್ರತೀ ವಾರ ಮಾರಮ್ಮನ ಸನ್ನಿಧಿಗೆ ಬರುತ್ತಿದ್ದರು. ಹೀಗೆ ಡಿಸೆಂಬರ್ 14ರಂದು ಸೌಂದರ್ಯ ದೇವಸ್ಥಾನಕ್ಕೆ ಬಂದಿದ್ದರು. ಈ ವೇಳೆ ಅಲ್ಲಿ ಕೊಟ್ಟ ಪ್ರಸಾದವನ್ನು ಸ್ವೀಕರಿಸಿದ್ದರು. ಹೀಗಾಗಿ ವಿಷ ಪ್ರಸಾದ ಸೇವನೆಯಿಂದ ಅಸ್ವಸ್ಥಗೊಂಡ ಅವರನ್ನು ಕೊಳ್ಳೇಗಾಲ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರಂತವೆಂದರೆ ಸೌಂದರ್ಯ ವಿಷ ಪ್ರಸಾದ ಸೇವಿಸಿದ್ದರಿಂದ ಹೊಟ್ಟೆಯಲ್ಲಿನ ಭ್ರೂಣ ಸಾವನ್ನಪ್ಪಿದ್ದು, ಅವರಿಗೆ ಗರ್ಭಪಾತವಾಗಿದೆ ಅಂತ ವೈದ್ಯರು ತಿಳಿಸಿದ್ದಾರೆ.

    ಡಿಸೆಂಬರ್ 14 ರಂದು ದೇವಸ್ಥಾನದಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮವಿತ್ತು. ಹೀಗಾಗಿ ಭಕ್ತರೆಲ್ಲರೂ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಟೊಮೆಟೋ ಬಾತನ್ನು ಅಲ್ಲಿ ಪ್ರಸಾದದ ರೂಪದಲ್ಲಿ ವಿತರಿಸಲಾಗಿತ್ತು. ಆದ್ರೆ ಈ ಪ್ರಸಾದದಲ್ಲಿ ವಿಷ ಬೆರೆಸಲಾಗಿದ್ದು, ತಿಂದವರೆಲ್ಲ ಆಸ್ಪತ್ರೆಗೆ ಸೇರಿದ್ದರು. ಅದರಲ್ಲಿ 17 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದು, ಉಳಿದವರು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಸಾದಕ್ಕೆ ವಿಷ ಹಾಕಿದ ಆರೋಪಿಗಳನ್ನು ಕೂಡಲೇ ಗಲ್ಲಿಗೇರಿಸಿ- ಸ್ಥಳೀಯರ ಒತ್ತಾಯ

    ಪ್ರಸಾದಕ್ಕೆ ವಿಷ ಹಾಕಿದ ಆರೋಪಿಗಳನ್ನು ಕೂಡಲೇ ಗಲ್ಲಿಗೇರಿಸಿ- ಸ್ಥಳೀಯರ ಒತ್ತಾಯ

    ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮ ದೇವಸ್ಥಾನದಲ್ಲಿ ವಿಷ ಹಾಕಿದ ವ್ಯಕ್ತಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಅಂತ ಸ್ಥಳೀಯರು ಒತ್ತಾಯಿಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಗ್ರಾಮಸ್ಥರು, ರಾಮಾಪುರದಲ್ಲಿ ಗಾಂಜಾ ಪ್ರಕರಣದಲ್ಲಿ ದೊಡ್ಡಯ್ಯ ಸಿಕ್ಕಿಬಿದ್ದು ಅರೆಸ್ಟ್ ಆಗಿದ್ದ. ಆ ದೊಡ್ಡಯ್ಯನನ್ನು ಮಾರಮ್ಮ ದೇವಾಲಯದ ಟ್ರಸ್ಟ್ ಅಧ್ಯಕ್ಷರಾಗಿರೋ ಸಾಲೂರು ಮಠದ ಇಮ್ಮಡಿ ಮಹದೇವ ಸ್ವಾಮಿ ಬಿಡುಗಡೆಗೊಳಿಸಿ ಟ್ರಸ್ಟಿಯನ್ನಾಗಿ ಮಾಡಿದ್ದಾರೆ ಎಂದು ಹೇಳಿದರು.

    ಕಳೆದ 3 ತಿಂಗಳ ಹಿಂದೆ ಸ್ವಾಮೀಜಿ ಸಂಗಮೇಶ ಎನ್ನುವವರಿಗೆ ಕಪಾಳ ಮೋಕ್ಷವನ್ನು ಮಾಡಿದ್ದರು. ಪುಣ್ಯದ ಕೆಲಸ ಮಾಡಬೇಕು ಅಂತ ಹೇಳಿ ದೇವಸ್ಥಾನದ ಗೋಪುರ ಮಾಡುವಾಗ ಎಲ್ಲಿ ನನ್ನ ಹೆಸರು ತಪ್ಪಿ ಹೋಗುತ್ತೋ? ನನ್ನನ್ನು ಬಿಟ್ಟು ಗೋಪುರ ಮಾಡುತ್ತಿದ್ದಾರೆ. ಹೀಗಾಗಿ ನನ್ನ ಕಡೆಯಿಂದಲೇ ಆಗಬೇಕು ಎಂದು ಅದರಲ್ಲಿ ಬರುತ್ತಿರುವ ಆದಾಯವೆಲ್ಲಾ ನಮ್ಮ ನಮಗೆ ಸೇರಬೇಕು ಎನ್ನುವ ಉದ್ದೇಶಕ್ಕಾಗಿ ಈ ರೀತಿಯ ಪಿತೂರಿ ನಡೆಸಿದ್ದಾರೆ ಅಂತ ಆರೋಪಿಸಿದ್ದಾರೆ.

    ಸ್ವಾಮೀಜಿ, ದೇವಸ್ಥಾನದ ಅಂದ್ರೆ ಜನರಿಗೆ ಅಪಾರವಾದ ಗೌರವವಿದೆ. ಅದ್ರಲ್ಲೂ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟ ಅಂದ್ರೆ ಬಹಳ ಪ್ರಸಿದ್ಧಿ ಇದೆ. ಆದ್ರೆ ಇಂತಹ ಸ್ವಾಮೀಜಿಗಳಿಂದ ಇಡೀ ಸ್ವಾಮೀಜಿ ಕುಲಕ್ಕೆ ಎಲ್ಲಾ ದೇವಸ್ಥಾನಗಳಿಗೆ ಕೆಟ್ಟ ಹೆಸರು ಬರುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಪ್ರಕರಣ ಸಂಬಂಧ ಸಿಕ್ಕಿಬಿದ್ದವರನ್ನು ಹೆಚ್ಚು ದಿನ ಬಿಡದೆ ಪೊಲೀಸರು ತನಿಖೆ ಮಾಡಿದ ಕೂಡಲೇ ಪ್ರಕರಣದ ಶೀಘ್ರ ಇತ್ಯರ್ಥಕ್ಕೆ ವಿಶೇಷವಾದ ನ್ಯಾಯಾಲಯವನ್ನು ಸ್ಥಾಪಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದರು.

    ಮುಗ್ಧ ಜನರು ಸ್ವಾಮೀಜಿಗಳನ್ನು ನಂಬುತ್ತಾರೆ. ಇಂತಹವರು ಇರೋದಕ್ಕಿಂತ ಸಾಯೋದೇ ಮುಲು, ಇವರಿಗೆಲ್ಲ ಕಠಿಣ ಶಿಕ್ಷೆ ವಿಧಿಸಬೇಕು. ಗಲ್ಲು ಶಿಕ್ಷೆಯೇ ನೀಡಬೇಕು ಅಂತ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

    ಈಗಾಗಲೇ ಮೃತಪಟ್ಟವರ ಕುಟುಂಬದವರು ಎಷ್ಟು ಸಂಕಟವನ್ನು ಅನುಭವಿಸುತ್ತಿದ್ದಾರೆಯೋ, ಅದು ಅವರಿಗೆ ಅರಿವಾಗಬೇಕು ಅಂತಾದ್ರೆ ಈ ಕ್ಷಣಿಕವೇ ಒಂದು ತಿಂಗಳೊಳಗಡೆ ಗಲ್ಲು ಶಿಕ್ಷೆ ಆಗಬೇಕು. ಇನ್ನೊಬ್ಬರು ಮತ್ತೆ ಇಂತಹ ನೀಚ ಕೃತ್ಯ ಎಸಗಬಾರದು ಅಂತ ಆರೋಪಿಗಳ ವಿರುದ್ಧ ಗ್ರಾಮಸ್ಥರು ಕಿಡಿಕಾರಿದ್ದಾರೆ.

    ಸ್ವಾಮೀಜಿಯಿಂದ ಸುಪಾರಿ:
    ಹೇಗಾದರೂ ಮಾಡಿ ಇನ್ನೊಂದು ಬಣಕ್ಕೆ ಕೆಟ್ಟ ಹೆಸರು ತರಬೇಕೆಂಬ ಕೆಟ್ಟ ಆಲೋಚನೆ ಇಮ್ಮಡಿ ಸ್ವಾಮೀಜಿಯದ್ದಾಗಿತ್ತು. ಆಗ ಪ್ರಸಾದಕ್ಕೆ ವಿಷ ಬೆರೆಸುವ ಕುತಂತ್ರ ಹೊಳೆದಿದೆ. ವಿಷಮಿಶ್ರಿತ ಪ್ರಸಾದ ಸೇವಿಸಿದವರು ವಾಂತಿ ಮಾಡಿ ಅಸ್ವಸ್ಥಗೊಳ್ಳುತ್ತಾರೆ. ಆಗ ಟ್ರಸ್ಟಿ ಚಿನ್ನಪ್ಪಿ ಹಾಗೂ ಇತರರಿಗೆ ಕೆಟ್ಟ ಹೆಸರು ಬರುತ್ತದೆ. ಇದರಿಂದಾಗಿ ದೇವಸ್ಥಾನ ಸಂಪೂರ್ಣವಾಗಿ ತಮ್ಮ ಆಡಳಿತಕ್ಕೆ ಒಳಪಡುತ್ತೆ ಎಂಬುದು ಸ್ವಾಮೀಜಿ ಪ್ಲಾನ್ ಮಾಡಿಕೊಂಡಿದ್ದರು.

    ಸ್ವಾಮೀಜಿ ಮತ್ತು ವ್ಯವಸ್ಥಾಪಕ ಮಾದೇಶ್, ಮಾದೇಶನ ಹೆಂಡತಿ ಅಂಬಿಕಾ (ಅಂಬಿಕಾ ಸ್ವಾಮೀಜಿಯ ಸಂಬಂಧಿಯೂ ಹೌದು) ಈ ಮೂವರು ಸೇರಿ ಪ್ರಸಾದಕ್ಕೆ ವಿಷ ಬೆರೆಸಲು ಸಂಚು ರೂಪಿಸಿದರು. ಕ್ರಿಮಿನಾಶಕ ತಂದು ನಾಗರಕೊಯೀಲು ದೇವಸ್ಥಾನದ ಅರ್ಚಕ ದೊಡ್ಡಯ್ಯನಿಗೆ ನೀಡಿ ಹೇಗಾದರೂ ಮಾಡಿ ಪ್ರಸಾದಕ್ಕೆ ಬೆರೆಸುವಂತೆ ಸುಪಾರಿ ನೀಡಿದರು.

    ಈ ಮೂವರ ಅಣತಿಯಂತೆ ದೊಡ್ಡಯ್ಯ ಶಂಕುಸ್ಥಾಪನೆ ಸಮಾರಂಭದ ದಿನ ಎಲ್ಲರ ಕಣ್ತಪ್ಪಿಸಿ ರೈಸ್ ಪ್ರಸಾದಕ್ಕೆ ಕ್ರಿಮಿನಾಶಕ ಮಿಶ್ರಣ ಮಾಡಿದ್ದ. ಈ ವಿಷಯ ಅರಿಯದ ಚಿನ್ನಪ್ಪಿ ಹಾಗೂ ಇತರರು ಶಂಕುಸ್ಥಾಪನೆ ಸಮಾರಂಭಕ್ಕೆ ಬಂದಿದ್ದ ಭಕ್ತರಿಗೆ ವಿಷಮಿಶ್ರಿತ ಪ್ರಸಾದ ವಿತರಿಸಿದ್ದಾರೆ. ನೋಡುನೋಡುತ್ತಿದ್ದಂತೆ ಕೆಲವರಿಗೆ ವಾಂತಿ ಭೇದಿ ಕಾಣಿಸಿಕೊಂಡಿತು. ಒಬ್ಬೊಬ್ಬರಾಗಿ ಸಾವನ್ನಪ್ಪತೊಡಗಿದರು. ಒಟ್ಟಿನಲ್ಲಿ 5 ಮಂದಿಯ ಕುತಂತ್ರಕ್ಕೆ 15 ಮಂದಿ ಅಮಾಯಕರು ಬಲಿಯಾಗಿದ್ದಾರೆ.

    https://www.youtube.com/watch?v=GJDDFeVaJcg

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸುಳ್ವಾಡಿ ವಿಷ ದುರಂತದ ತನಿಖೆ ಚುರುಕು- ಇಮ್ಮಡಿ ಮಹದೇವಸ್ವಾಮಿ ಬಂಧನ..?

    ಸುಳ್ವಾಡಿ ವಿಷ ದುರಂತದ ತನಿಖೆ ಚುರುಕು- ಇಮ್ಮಡಿ ಮಹದೇವಸ್ವಾಮಿ ಬಂಧನ..?

    – ಇತ್ತ ಅಂಬಿಕಾಗೂ ಫುಲ್ ಡ್ರಿಲ್

    ಮೈಸೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಕಿಚ್‍ಗುತ್ತ್ ಮಾರಮ್ಮ ವಿಷಪ್ರಸಾದಕ್ಕೆ ಬಿಗ್ ಟ್ವಿಸ್ಟ್ ದೊರೆತಿದೆ. ವಿಷ ದುರಂತದ ತನಿಖೆ ಚುರುಕುಗೊಂಡಿದೆ. ಸಾಲೂರು ಮಠದ ಕಿರಿಯ ಸ್ವಾಮೀಜಿಯ ತೀವ್ರ ವಿಚಾರಣೆ ಮಾಡಲಾಗುತ್ತಿದ್ದು, ಇಮ್ಮಡಿ ಮಹದೇವಸ್ವಾಮಿ ಬಂಧನವಾಗೋ ಸಾಧ್ಯತೆ ಹೆಚ್ಚಿದೆ.

    ಇಂದು ರಾತ್ರಿ ಅಥವಾ ನಾಳೆ ವಶಕ್ಕೆ ಪಡೆಯೋ ಸಾಧ್ಯತೆಗಳಿವೆ. ಯಾಕಂದ್ರೆ ಸ್ವಾಮೀಜಿಯನ್ನು ಇಂದು ಪೊಲೀಸರು ಎರಡನೇ ಬಾರಿಗೆ ವಿಚಾರಣೆಗೆ ಒಳಪಡಿಸಿದ್ದಾರೆ. ಶಂಕಿತ ಆರೋಪಿಗಳು ಸ್ವಾಮೀಜಿ ಹೆಸರು ಬಾಯ್ಬಿಟ್ಟ ಹಿನ್ನೆಲೆಯಲ್ಲಿ ಮತ್ತೆ ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗುತ್ತಿದೆ. ಈ ಮೂಲಕ ಸ್ವಾಮೀಜಿ ಯಾರದೋ ಮೇಲಿನ ದ್ವೇಷಕ್ಕೆ ವಿಷ ಬೆರೆಸಲು ಸೂಚಿಸಿದ್ರಾ ಅನ್ನೋ ಪ್ರಶ್ನೆಯೊಂದು ಮೂಡಿದೆ.

    ಇತ್ತ ಆರೋಪಿ ಮಾದೇಶ್ ಪತ್ನಿ ಅಂಬಿಕಾರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಪ್ರಸಾದಕ್ಕೆ ಕ್ರಿಮಿನಾಶಕ ಬೆರೆಸಿರುವ ವಿಚಾರ ಈಕೆಗೂ ಗೊತ್ತಿರಬಹುದು ಎಂಬ ಶಂಕೆ ಮೇಲೆ ಕಳೆದ ರಾತ್ರಿಯಿಂದ ಇಲ್ಲಿವರೆಗೂ ಸುಮಾರು 10 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಈಗಾಗಲೇ ಅಂಬಿಕಾಳ ಗಂಡ ದೇವಸ್ಥಾನದ ವ್ಯವಸ್ಥಾಪಕ ಮಾದೇಶ್ ಪೊಲೀಸ್ ವಶದಲ್ಲಿದ್ದು ವಿಚಾರಣೆ ಎದುರಿಸುತ್ತಿದ್ದಾನೆ. ಇದನ್ನೂ ಓದಿ: ವಿಷ ಪ್ರಸಾದ ಕೇಸ್ – ರಾತ್ರಿ ಅಡ್ಮಿಟ್, ಬೆಳಗ್ಗೆ ಡಿಸ್ಚಾರ್ಜ್ ಕಿರಿಯ ಸ್ವಾಮೀಜಿ ನಡೆ ಬಗ್ಗೆ ಮೂಡಿದೆ ಅನುಮಾನ


    ಒಟ್ಟಿನಲ್ಲಿ ಸುಳ್ವಾಡಿಯಲ್ಲಿರುವ ಮಾರಮ್ಮನ ಪ್ರಸಾದಕ್ಕೆ ಹಾಕಲು ವಿಷ ಸಿಕ್ಕಿದಾದ್ರೂ ಎಲ್ಲಿಂದ..? ಕೊಟ್ಟಿದ್ದು ಯಾರು..? ತಂದಿದ್ದು ಯಾರು..? ಇದು ಇನ್ನೂ ನಿಗೂಢವಾಗಿರೋ ಪ್ರಶ್ನೆಯಾಗಿದೆ. ಸುಳ್ವಾಡಿಯಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜದ ಮೂರು ಅಂಗಡಿಗಳಿವೆ. ಆದ್ರೆ ಆ ಅಂಗಡಿಗಳಲ್ಲಿ ಕ್ರಿಮಿನಾಶಕ ಮಾರುತ್ತಿಲ್ಲ. ಕೀಟನಾಶಕ ಬೇಕು ಅಂದ್ರೆ 50 ಕಿಲೋ ಮೀಟರ್ ದೂರದಲ್ಲಿರುವ ಹನೂರಿಗೆ ಬರಬೇಕು. ಸುಳ್ವಾಡಿ ಭಾಗದಲ್ಲಿ ಬೆಳೆದಿರೋದೇ ಜೋಳ ಮತ್ತು ಸೂರ್ಯಕಾಂತಿ ಬೆಳೆ. ಅವುಗಳಿಗೆ ಕ್ರಿಮಿನಾಶಕದ ಅವಶ್ಯಕತೆ ಇಲ್ಲ. ಹಾಗಾದ್ರೆ ಪ್ರಸಾದಕ್ಕೆ ವಿಷ ತಂದಿದ್ದು ಎಲ್ಲಿಂದ ಅನ್ನೋ ಪ್ರಶ್ನೆಗೆ ಸದ್ಯಕ್ಕೆ ಉತ್ತರ ಇಲ್ಲ.

    https://www.youtube.com/watch?v=y44ngMg3714

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚುರುಕುಗೊಂಡ ಪ್ರಸಾದ ದುರಂತದ ತನಿಖೆ- ರೋಗರ್ ಕೀಟನಾಶಕ ಬೆರೆಸಿರುವ ಶಂಕೆ

    ಚುರುಕುಗೊಂಡ ಪ್ರಸಾದ ದುರಂತದ ತನಿಖೆ- ರೋಗರ್ ಕೀಟನಾಶಕ ಬೆರೆಸಿರುವ ಶಂಕೆ

    ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಮಾರಮ್ಮ ದೇವಸ್ಥಾನದ ಪ್ರಸಾದ ಸೇವಿಸಿ ಮೃತಪಟ್ಟ ಹಾಗೂ ಅಸ್ವಸ್ಥಗೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಚುರುಕುಗೂಳಿಸಿದ್ದಾರೆ.

    ಟೊಮೆಟೋ ಬಾತ್‍ಗೆ ಬಳಸಿದ ಅಕ್ಕಿ ಮತ್ತಿತ್ತರ ಸಾಮಾಗ್ರಿಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅಕ್ಕಿ ತಂದಿದ್ದು ಎಲ್ಲಿಂದ, ತಂದವರು ಯಾರು..? ಎಂಬಿತ್ಯಾದಿ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ. ಅಲ್ಲದೆ ಈಗಾಗಲೇ ಮೂರು ತಂಡಗಳನ್ನು ರಚಿಸಿ ಕಾರ್ಯಾಚರಣೆಗಿಳಿದಿದ್ದಾರೆ.

    ಶನಿವಾರ ಸಂಜೆ ದೇವಸ್ಥಾನಕ್ಕೆ ಭೇಟಿ ನೀಡಿದ ದಕ್ಷಿಣ ವಲಯ ಐಜಿಪಿ ಶರತ್ಚಂದ್ರ, ಸತತ 5 ಗಂಟೆಗಳ ಕಾಲ ದೇವಸ್ಥಾನದ ಇಂಚಿಂಚೂ ಪರಿಶೀಲನೆ ನಡೆಸಿದ್ದರು. ಇದೇ ವೇಳೆ ದೇವಸ್ಥಾನ ಧರ್ಮಾಧಿಕಾರಿ ಚಿನ್ನಪ್ಪಿ, ಮ್ಯಾನೇಜರ್ ಮಾದೇಶ್‍ರನ್ನು ಕರೆದೊಯ್ದು ಸ್ಥಳ ಮಹಜರು ಮಾಡುವ ವೇಳೆಯೂ ಸ್ಥಳದಲ್ಲೇ ಉಪಸ್ಥಿತರಿದ್ದರು.

    ಆಸ್ಪತ್ರೆಗೆ ದಾಖಲಾಗಿರುವ ಅಸ್ವಸ್ಥರಿಗೆ ಆಟ್ರೋಪೈನ್ ಸಲ್ಫಟ್ ಔಷಧ ನೀಡಲಾಗುತ್ತಿದೆ. ಸಾಮಾನ್ಯವಾಗಿ ಈ ಔಷಧವನ್ನು ಆರ್ಗನೋ ಪಾಸ್ಪರಸ್ ರಾಸಾಯನಿಕ ಸೇವಿಸಿದವರಿಗೆ ನೀಡಲಾಗುತ್ತದೆ. ಈ ರಾಸಾಯನಿಕ ರೋಗರ್ ಎಂಬ ಕೀಟನಾಶಕದಲ್ಲಿ ಮಾತ್ರ ಬಳಸಲಾಗುತ್ತೆ. ಹೀಗಾಗಿ ಪ್ರಸಾದದಲ್ಲಿ ರೋಗರ್ ಕೀಟನಾಶಕವನ್ನೇ ಬೆರೆಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

    ಇಂದು ಸಂಜೆ ವಿಧಿವಿಜ್ಞಾನ ಪ್ರಯೋಗಾಲಯ ವರದಿ ಬರಲಿದ್ದು, ಪ್ರಸಾದಕ್ಕೆ ಏನು ಬೆರೆಸಲಾಗಿತ್ತು ಮತ್ತು ಯಾವ ಪ್ರಮಾಣದಲ್ಲಿ ಬೆರೆಸಲಾಗಿತ್ತು ಅನ್ನೋದು ಸ್ಪಷ್ಟವಾಗಲಿದೆ.

    https://www.youtube.com/watch?v=beiR3uvrY9Q

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಮಾರಮ್ಮನ ಪ್ರಸಾದ ದುರಂತ- ಮೈಸೂರಿನ ಆಸ್ಪತ್ರೆಗಳಲ್ಲಿ 104 ಮಂದಿ ಪರದಾಟ

    ಮಾರಮ್ಮನ ಪ್ರಸಾದ ದುರಂತ- ಮೈಸೂರಿನ ಆಸ್ಪತ್ರೆಗಳಲ್ಲಿ 104 ಮಂದಿ ಪರದಾಟ

    – 15 ಮಂದಿ ಸ್ಥಿತಿ ಚಿಂತಾಜನಕ

    ಮೈಸೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಿಚ್ಚುಗುತ್ ಮಾರಮ್ಮನ ಸನ್ನಿಧಿಯಲ್ಲಿ ಪ್ರಸಾದ ದುರಂತ ನಡೆದು 2 ದಿನ ಕಳೆದೋಗಿದೆ. ಪ್ರಕಾಶ್ ಎಂಬವರ ಸಾವಿನೊಂದಿಗೆ ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, 15 ಜನ ಇನ್ನೂ ವೆಂಟಿಲೇಟರ್ ನಲ್ಲಿ ಸಾವು- ಬದುಕಿನ ಮಧ್ಯೆ ಹೋರಾಡ್ತಿದ್ದಾರೆ.

    ಅಸ್ವಸ್ಥಗೊಂಡಿರೋ 104 ಜನ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚೆಲುವಾಂಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 10 ಮಕ್ಕಳನ್ನು ನಗರದ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ಶಿಫ್ಟ್ ಮಾಡಲಾಗಿದೆ. ಕಾವೇರಿ ಆಸ್ಪತ್ರೆಯಲ್ಲಿ 14, ಕೆ.ಆರ್.ಆಸ್ಪತ್ರೆಯಲ್ಲಿ 24, ಅಪೋಲೋ ಆಸ್ಪತ್ರೆಯಲ್ಲಿ 14, ಜೆಎಸ್‍ಎಸ್ ಆಸ್ಪತ್ರೆಯಲ್ಲಿ 13 ಮಂದಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಶನಿವಾರ ರಾತ್ರಿ ಮುಜರಾಯಿ ಸಚಿವ ರಾಜಶೇಖರ್ ಪಾಟೀಲ್ ಆಸ್ಪತ್ರೆಗೆ ಭೇಟಿ ನೀಡಿದ್ರು. ಬಳಿಕ ಮಾತನಾಡಿ, ಈ ದೇವಸ್ಥಾನ ಮುಜುರಾಯಿ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ. ಮುಜರಾಯಿ ವ್ಯಾಪ್ತಿಯ ಎಲ್ಲಾ ದೇವಾಲಯಗಳಲ್ಲೂ ಎಚ್ಚರ ವಹಿಸುವಂತೆ ಸೂಚಿಸಿದ್ದೇನೆ ಅಂದ್ರು.

    https://www.youtube.com/watch?v=_8ddjfF9ZqM

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಗೋಪುರ ವಿಚಾರಕ್ಕೆ ಅಸಮಾಧಾನವಿತ್ತು, ಆದ್ರೆ ವಿಷ ಬೆರೆಸಿಲ್ಲ- ಶಂಕಿತರಿಂದ ಗೊಂದಲದ ಹೇಳಿಕೆ

    ಗೋಪುರ ವಿಚಾರಕ್ಕೆ ಅಸಮಾಧಾನವಿತ್ತು, ಆದ್ರೆ ವಿಷ ಬೆರೆಸಿಲ್ಲ- ಶಂಕಿತರಿಂದ ಗೊಂದಲದ ಹೇಳಿಕೆ

    ಚಾಮರಾಜನಗರ: ಇಲ್ಲಿ ಸುಳುವಾಡಿ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿದ ಬಳಿಕ ಮೃತಪಟ್ಟ ಭಕ್ತರ ಸಂಖ್ಯೆ ಇಂದು 18ಕ್ಕೆ ಏರಿದೆ. ಆದ್ರೆ ಇತ್ತ ವಶಕ್ಕೆ ಪಡೆದ ಇಬ್ಬರು ಶಂಕಿತರು ಪ್ರಕರಣದ ಬಗ್ಗೆ ಗೊಂದಲವಾದ ಹೇಳಿಕೆ ನೀಡುತ್ತಿದ್ದಾರೆ.

    ನಾವು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆವು. ಗೋಪುರ ವಿಚಾರಕ್ಕೆ ಅಸಮಾಧಾನ ಇದ್ದದ್ದು ನಿಜ. ಆದ್ರೆ ವಿಷ ಬೆರೆಸಿಲ್ಲ. ಈ ಘಟನೆಯಲ್ಲಿ ನನ್ನ ಸಂಬಂಧಿಗಳು ಕೂಡ ಆಸ್ಪತ್ರೆಯ ಪಾಲಾಗಿದ್ದಾರೆ ಎಂದು ಪೊಲೀಸರ ಮುಂದೆ ಶಂಕಿತ ಮಾದೇಶ್ ಹೇಳಿಕೆ ನೀಡಿದ್ದಾರೆ ಎಂದು ಪಬ್ಲಿಕ್ ಟಿವಿಗೆ ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ಲಭಿಸಿದೆ.

    ಪ್ರಕರಣ ಸಂಬಂಧ ನಾಲ್ವರು ಶಂಕಿತರನ್ನು ಪ್ರತ್ಯೇಕವಾಗಿ ವಿಚಾರಣೆ ಮಾಡಲಾಗುತ್ತಿದೆ. ಸದ್ಯ ಆಹಾರದ ವಸ್ತುವನ್ನು ಎಫ್ ಎಸ್ ಎಲ್ ಗೆ ರವಾನೆ ಮಾಡಲಾಗಿದೆ. ಆಹಾರದಲ್ಲಿ ಯಾವ ವಿಷಕಾರಿ ಅಂಶ ಇದೆ ಎಂಬುದರ ಬಗ್ಗೆ ತಿಳಿದುಕೊಳ್ಳಲಾಗುತ್ತಿದೆ. ವೈದ್ಯರು ಕ್ರಿಮಿನಾಶಕ ಬೆರೆಸಿರುವುದಾಗಿ ಅಭಿಪ್ರಾಯ ಪಟ್ಟಿದ್ದಾರೆ. ತನಿಖೆ ನಡೆಯುತ್ತಾ ಇದೆ ಶಂಕಿತರೇ ದ್ವಂದ್ವದಲ್ಲಿ ಇರೋದು ಸ್ವಲ್ಪ ಕಷ್ಟವಾಗ್ತಿದೆ ಅಂತ ತಿಳಿದುಬಂದಿದೆ.

    ಘಟನೆ ವಿವರ:
    ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಮಾರಮ್ಮ ದೇವಸ್ಥಾನದ ಗೋಪುರ ಶಂಕುಸ್ಥಾಪನೆ ಶುಕ್ರವಾರ ನಡೆದಿತ್ತು. ವಿವಿಧ ಪೂಜಾ ಕಾರ್ಯಗಳು ಮುಗಿದ ಬಳಿಕ ಮಧ್ಯಾಹ್ನ ಭಕ್ತರಿಗೆ ಪ್ರಸಾದ (ರೈಸ್‍ಬಾತ್) ವ್ಯವಸ್ಥೆ ಮಾಡಲಾಗಿತ್ತು. ಸುಳ್ವಾಡಿ ಸುತ್ತಮುತ್ತಲಿನ ಅನೇಕ ಗ್ರಾಮದ ಜನರು ದೇವಿಯ ದರ್ಶನಕ್ಕೆ ಹಾಗೂ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಶಂಕುಸ್ಥಾಪನೆ ಬಳಿಕ ಕೆಲವರು ಪ್ರಸಾದ ಸೇವಿಸಿ ತಮ್ಮ ಮನೆಗೆ ಹಾಗೂ ಊರುಗಳಿಗೆ ತೆರಳಿದರು. ದೇವಸ್ಥಾನದ ಪ್ರಸಾದ ಸೇವಿಸಿದ ಬಳಿಕ ಎಲ್ಲರ ಕಣ್ಣುಗಳು ನೀಲಿ ಬಣ್ಣಕ್ಕೆ ತಿರುಗಿದೆ. ಎಲ್ಲರನ್ನೂ ಗಮನಿಸಿದಾಗ ಉಸಿರಾಟದ ತೊಂದರೆ ಕಾಣಿಸಿದೆ. ಪ್ರಸಾದದಲ್ಲಿ ಕ್ರಿಮಿನಾಶಕ ಅಥವಾ ಟಿಕ್-20 ಬೆರೆಸಿರುವ ಸಾಧ್ಯತೆ ಇದೆ ಎಂದು ಮೈಸೂರು ಜಿಲ್ಲಾಸ್ಪತ್ರೆ ಡಿ.ಎಚ್.ಒ ಡಾ.ಬಸವರಾಜ್ ಹೇಳಿದ್ದರು.


    ದೇವಾಲಯ ಬಂದ್:
    ಇನ್ನು ದುರಂತದ ಪರಿಣಾಮ ಇತಿಹಾಸದಲ್ಲೇ ಮೊದಲ ಬಾರಿಗೆ ಸುಳ್ವಾಡಿಯ ಕಿಚ್ಚುಗುತ್ತು ಮಾರಮ್ಮ ಗುಡಿಗೆ ಬೀಗ ಜಡಿಯಲಾಗಿದೆ. ನಿತ್ಯವೂ ಧಾರ್ಮಿಕ ಚಟುವಟಿಕೆಗಳಿಂದ ಕೂಡಿರುತ್ತಿದ್ದ ದೇವಸ್ಥಾನವನ್ನು ಬಂದ್ ಮಾಡಲಾಗಿದೆ. ದೇವಸ್ಥಾನದ ಪುರೋಹಿತರು, ಅಡುಗೆ ತಯಾರಕರು, ಭದ್ರತಾ ಸಿಬ್ಬಂದಿಯ ಕುಟುಂಬಗಳಲ್ಲೂ ಸಾವು, ನೋವು ಸಂಭವಿಸಿದ್ದು, ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv