Tag: Sumalata

  • ಮತದಾನ ಮಾಡದೇ ಇದ್ದರೆ ಪ್ರಶ್ನೆ ಮಾಡುವ ಹಕ್ಕು ಇರಲ್ಲ : ಸುಮಲತಾ ಅಂಬರೀಶ್

    ಮತದಾನ ಮಾಡದೇ ಇದ್ದರೆ ಪ್ರಶ್ನೆ ಮಾಡುವ ಹಕ್ಕು ಇರಲ್ಲ : ಸುಮಲತಾ ಅಂಬರೀಶ್

    ಸಂಸದೆ ಹಾಗೂ ನಟಿ ಸುಮಲತಾ ಅಂಬರೀಶ್ (Sumalata) ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕು ದೊಡ್ಡರಸಿಕೆರೆ ಗ್ರಾಮದ ಮತದಾನ (Election) ಕೇಂದ್ರದಲ್ಲಿ ಮತ (Voting) ಚಲಾಯಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಮತದಾನ ನಮ್ಮೆಲ್ಲರ ಹಕ್ಕು ಮತ್ತು ಕರ್ತವ್ಯ ಕೂಡ. ಹಾಗಾಗಿ ತಪ್ಪದೇ ಎಲ್ಲರೂ ಮತದಾನ ಮಾಡಿ. ಯಾರು ವೋಟು ಹಾಕುವುದಿಲ್ಲವೋ ಅವರು ಪ್ರಶ್ನೆ ಮಾಡುವ ಹಕ್ಕನ್ನೇ ಕಳೆದುಕೊಳ್ಳುತ್ತಾರೆ’ ಎಂದು ಮಾತನಾಡಿದರು.

    ಕುಟುಂಬ ಸಮೇತ ಸಾಮಾನ್ಯರಂತೆ ಮತದಾನ ಕೇಂದ್ರಕ್ಕೆ ಬಂದ ಡಾಲಿ ಧನಂಜಯ್ ಮತದಾನ ಮಾಡಿದ್ದಾರೆ. ಸಹೋದರಿ, ಸಹೋದರ ಸೇರಿದಂತೆ ಕುಟುಂಬದ ಸದಸ್ಯರೊಂದಿಗೆ ಅರಸಿಕೆರೆ ತಾಲ್ಲೂಕು ಕಾಳೇನಹಳ್ಳಿ ಮತದಾನ ಕೇಂದ್ರಕ್ಕೆ ಆಗಮಸಿದ್ದ ಧನಂಜಯ್, ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ.

    ಬಿಳಿ ಶರ್ಟ್ ಹಾಗೂ ಲುಂಗಿ ಧರಿಸಿದ್ದ ಧನಂಜಯ್, ತಾವು ಕಲಿತಿದ್ದ ಶಾಲೆಯಲ್ಲೇ ಮತದಾನ ಮಾಡಿ ಸಂಭ್ರಮಿಸಿದ್ದರು. ಅದೇ ಸಮಯದಲ್ಲಿ ಆಗಮಿಸಿದ್ದ ಅಭಿಮಾನಿಗಳ ಜೊತೆ ಸೆಲ್ಫಿಗೆ ಸಹಕರಿಸಿದರು. ನೆಚ್ಚಿನ ನಟನ ಜೊತೆ ಅನೇಕರು ಫೋಟೋ ತಗೆಸಿಕೊಂಡು ಖುಷಿ ಪಟ್ಟರು. ಮತದಾನ ಎಷ್ಟು ಶ್ರೇಷ್ಠ ಎನ್ನುವ ಕುರಿತು ಡಾಲಿ ಮಾತನಾಡಿದರು. ಇದನ್ನೂ ಓದಿ:ಹೈದರಾಬಾದ್‌ನಲ್ಲಿ ಐಷಾರಾಮಿ ಮನೆ ಖರೀದಿಸಿದ ನಟಿ ಸಮಂತಾ

    ಡಿವೈನ್ ಸ್ಟಾರ್, ನಟ ರಿಷಬ್ ಶೆಟ್ಟಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಮಾಡಿದ್ದಾರೆ. ಉಡುಪಿ ಜಿಲ್ಲೆ, ಬೈಂದೂರು ತಾಲೂಕಿನ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವೈಟ್ ಅಂಡ್ ವೈಟ್ ಡ್ರೆಸ್ ನಲ್ಲಿ ಬಂದಿದ್ದ ರಿಷಬ್ ಶೆಟ್ಟಿ ಮತದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.

  • ಸಂಧಾನಕ್ಕೆ ಬರಬೇಡಿ, ಏನೇ ಆದ್ರೂ ನಾವು ಸುಮಲತಾರನ್ನ ಬೆಂಬಲಿಸುತ್ತೇವೆ: ಕೈ ನಾಯಕ ಸಚ್ಚಿದಾನಂದ

    ಸಂಧಾನಕ್ಕೆ ಬರಬೇಡಿ, ಏನೇ ಆದ್ರೂ ನಾವು ಸುಮಲತಾರನ್ನ ಬೆಂಬಲಿಸುತ್ತೇವೆ: ಕೈ ನಾಯಕ ಸಚ್ಚಿದಾನಂದ

    – ನಾವೇ ಉಳಿಸಬೇಕು, ನಾವೇ ಬೆಳೆಸಬೇಕು
    – ಪಕ್ಷಕ್ಕೆ ಕಾರ್ಯಕರ್ತರ ಬಗ್ಗೆ ಗೌರವ ಇಲ್ಲ

    ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಮುಖಂಡರೆಲ್ಲರೂ ಸುಮಲತಾರನ್ನ ಬೆಂಬಲಿಸುತ್ತೇವೆ. ಸಂಧಾನಕ್ಕೆ ಪಕ್ಷದ ವರಿಷ್ಠರು ಯಾರೂ ಜಿಲ್ಲೆಗೆ ಆಗಮಿಸುವುದು ಬೇಡ. ನಿಮ್ಮ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದು ಇಂಡುವಾಳು ಗ್ರಾಮದಲ್ಲಿ ಕೆಪಿಸಿಸಿ ಸದಸ್ಯ ಸಚ್ಚಿದಾನಂದ ಸುಮಲತಾ ಪರ ಬ್ಯಾಟಿಂಗ್ ಮಾಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಏನೇ ಆದರೂ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಸುಮಲತಾ ಅವರಿಗೆ ಬೆಂಬಲ ನೀಡುತ್ತೇವೆ. ನಿಮ್ಮ ಬಗ್ಗೆ ನಮಗೆ ಅಪಾರವಾದ ಪ್ರೀತಿ ವಿಶ್ವಾಸವಿದೆ, ದಯವಿಟ್ಟು ಸಂಧಾನ ಮಾಡಲು ಮಂಡ್ಯಕ್ಕೆ ಬರಬೇಡಿ. ನಾವು ನಮ್ಮ ನಿರ್ಧಾರ ಬದಲಾಯಿಸುವುದಿಲ್ಲ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.

    ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನ ನಾವೇ ಕಟ್ಟಬೇಕು, ನಾವೇ ಉಳಿಸಬೇಕು, ನಾವೇ ಬೆಳೆಸಬೇಕು. ಏನಾದರೂ ಆದ್ರೆ ನಾವೇ ಅನುಭವಿಸಬೇಕು. ದಯಮಾಡಿ ಯಾವುದೇ ರಾಜ್ಯ ನಾಯಕರು ಸಂಧಾನಕ್ಕೆ ಬರಬೇಡಿ. ಬಂದರೂ ಅದರಲ್ಲಿ ನೀವು ಯಶಸ್ವಿಯಾಗಲ್ಲ. ನಾನು ದೊಡ್ಡವನಲ್ಲ, ನನ್ನ ಯಾರೂ ಸಂಧಾನಕ್ಕೆ ಕರೆದು ಮಾತನಾಡ್ತಾರೆ ಎಂದುಕೊಂಡಿಲ್ಲ. ಆದ್ರೆ ದೊಡ್ಡ ನಾಯಕರನ್ನ ಕರೆದು ಮಾತನಾಡಿದರೂ ಅದು ಅಲ್ಲಿನ ಮಾತಿಗಷ್ಟೇ ಸೀಮಿತ ಎಂದಿದ್ದಾರೆ.

    ಯಾವ ಮಂಡ್ಯ ನಾಯಕರು ಇಲ್ಲಿ ಬಂದು ಹೇಳುವುದಿಲ್ಲ. ಯಾಕೆಂದರೆ ನಾಯಕರಿಗೆ ಕಾರ್ಯಕರ್ತರೆ ಮುಖ್ಯ. ಕಾರ್ಯಕರ್ತರೆಲ್ಲರೂ ಈಗ ಸುಮಲತಾ ಪರ ಇರಬೇಕೆಂದು ನಿರ್ಧರಿಸಿದ ಮೇಲೆ ನಾನಾಗಲಿ ನನ್ನ ಮೇಲ್ಮಟ್ಟದವರಾಗಿ ಏನು ಮಾಡಲು ಸಾಧ್ಯವಿಲ್ಲ. ದಯವಿಟ್ಟು ವರಿಷ್ಠರು ಸಂಧಾನಕ್ಕೆ ಬಾರದೇ ಅವರ ಘನತೆಯನ್ನ ಹೆಚ್ಚಿಸಿಕೊಳ್ಳಲಿ. ನಾವು ಸುಮಲತಾ ಪರವಾಗಿ ಇರುತ್ತೇವೆ ಎಂದರು.

    ನಾವು ಪಕ್ಷದ ಬಗೆಗೆ ಗೌರವ ಇಟ್ಟುಕೊಂಡಿರೋರು ಆದ್ರೆ, ಪಕ್ಷದವರಿಗೆ ಕಾರ್ಯಕರ್ತರ ಬಗ್ಗೆ ಗೌರವ ಇಲ್ಲ. ಕಾರ್ಯಕರ್ತರ ಭಾವನೆಗಳನ್ನ ಅರ್ಥ ಮಾಡಿಕೊಳ್ಳದವರೇ ಇರೋದ್ರಿಂದ ನಾವು ಸುಮಲತಾ ಪರ ಇರುತ್ತೇವೆ. ನಾನೊಬ್ಬನೇ ಅಲ್ಲ ಮುಂದೆ ಬಾರದೇ ಇರುವ ಹಲವು ಜನರು ಸುಮಲತಾರನ್ನು ಬೆಂಬಲಿಸಿದ್ದಾರೆ ಎಂದು ತಿಳಿಸಿದರು.

    ನಾವು ಜೆಡಿಎಸ್ ಪಕ್ಷವನ್ನು ಬೆಂಬಲಿಸುವ ಸಾಧ್ಯತೇ ಇಲ್ಲ. ಜಿಲ್ಲೆಯಲ್ಲಿ ಪಕ್ಷದ ಅಳಿವು ಉಳಿವಿಗಾಗಿ ಅಂಬರೀಶ್ ಸಹ ದುಡಿದಿದ್ದಾರೆ. ಅವರಿಲ್ಲದ ವೇಳೆಯಲ್ಲಿ ನಾವು ಅವರ ಕುಟುಂಬದ ಜೊತೆ ನಿಲ್ಲಬೇಕು. ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಾಗಿರುವ ಸುಮಲತಾ ಅವರ ಗೆಲುವಿಗೆ ಶ್ರಮ ಹಾಕಬೇಕಿದೆ ಎಂದು ತಿಳಿಸಿದರು.

  • ಅಣ್ಣನ ತಪ್ಪಿಗೆ ಕ್ಷಮೆ ಕೇಳಿದ ಸಿಎಂ!

    ಅಣ್ಣನ ತಪ್ಪಿಗೆ ಕ್ಷಮೆ ಕೇಳಿದ ಸಿಎಂ!

    ಬೆಂಗಳೂರು: ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಅವರು ಸುಮಲತಾ ಅಂಬರೀಶ್ ಅವರ ಬಗ್ಗೆ ಕೊಟ್ಟ ಹೇಳಿಕೆಗೆ ಸ್ವತಃ ಸಿಎಂ ಕುಮಾರಸ್ವಾಮಿ ಅವರು ಕ್ಷಮೆಯಾಚಿಸಿದ್ದಾರೆ.

    ಇಂದು ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಕಾರ್ಯಕ್ರಮಕ್ಕೆ ಸಿಎಂ ಕುಮಾರಸ್ವಾಮಿ ಅವರು ಪುಟಾಣಿ ಮಕ್ಕಳಿಗೆ ಲಸಿಕೆ ಹಾಕೋ ಮೂಲಕ ಚಾಲನೆ ನೀಡಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೇವಣ್ಣ ಅವರು ಸುಮಲತಾ ಅವರ ವಿರುದ್ಧ ಮಾತನಾಡಿಲ್ಲ. ಅವರನ್ನು ಟೀಕಿಸಿಲ್ಲ. ರೇವಣ್ಣ ಬಳಿ ನಾನು ಈ ಬಗ್ಗೆ ಮಾತನಾಡಿ, ಯಾಕೆ ಈ ಹೇಳಿಕೆ ನೀಡಿದಿರಿ ಅಂತ ಕೇಳಿದ್ದೇನೆ. ಸುಮಲತಾ ಅವರು ಅಂಬರೀಶ್ ಅವರು ಅಗಲಿರುವ ನೋವಿನಲ್ಲಿದ್ದಾರೆ. ಈ ನಡುವೆ ರಾಜಕೀಯ ಬೇಡವಾಗಿತ್ತು ಎನ್ನುವ ದೃಷ್ಟಿಯಲ್ಲಿ ಹೇಳಿದ್ದು ಅಷ್ಟೆ. ಆದರೆ ಅವರು ಈ ರೀತಿ ಹೇಳಿಕೆ ನೀಡಬಾರದಿತ್ತು. ರೇವಣ್ಣ ಅವರ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ಅವರ ಪರವಾಗಿ ಕ್ಷಮೆ ಕೇಳುತ್ತೇನೆ. ನಮ್ಮದು ಮಹಿಳೆಯರಿಗೆ ಗೌರವ ಕೊಡುವ ಕುಟುಂಬ. ಯಾವ ಹೆಣ್ಣು ಮಕ್ಕಳಿಗೂ ನಾವು ಅವಮಾನ ಮಾಡಿಲ್ಲ ಎಂದು ಕ್ಷಮೆಯಾಚಿಸಿದ್ದಾರೆ.

    ರೇವಣ್ಣ ಅವರು ಸುಮಲತಾ ಅವರಿಗೆ ರಾಜಕೀಯ ಯಾಕೆ ಬೇಕಿತ್ತು ಅಂತ ಹೇಳಿಕೆಗೆ ಅಂಬಿ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಬಿಜೆಪಿ ನಾಯಕರು ಕೂಡ ರೇವಣ್ಣ ಹೇಳಿಕೆಯನ್ನು ಖಂಡಿಸಿದ್ದರು. ಸಾಮಾಜಿಕ ಜಾಲತಾಣಗಳ ಮೂಲಕ ಬಹುತೇಕ ಜನರು ಸುಮಲತಾ ಅವರಿಗೆ ಬೆಂಬಲ ವ್ಯಕ್ತಪಡಿಸಿ, ದೇವೇಗೌಡರು ಕುಟುಂಬ ರಾಜಕೀಯ ಮಾಡುತ್ತಿದ್ದಾರೆ ಅಂತ ಆರೋಪಗಳನ್ನೂ ಕೂಡ ಮಾಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ರೇವಣ್ಣ ವಿರುದ್ಧ ಹಾಡಿನ ಮೂಲಕ ಆಕ್ರೋಶ ಹೊರಹಾಕಿದ ಯುವಕ

    ರೇವಣ್ಣ ವಿರುದ್ಧ ಹಾಡಿನ ಮೂಲಕ ಆಕ್ರೋಶ ಹೊರಹಾಕಿದ ಯುವಕ

    ಮಂಡ್ಯ: ಸುಮಲತಾ ಅಂಬರೀಶ್ ಅವರ ರಾಜಕೀಯ ಪ್ರವೇಶಿಸುವ ಬಗ್ಗೆ ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಹೇಳಿಕೆಗೆ ಹಾಡಿನ ಮೂಲಕ ಮಂಡ್ಯದ ಯುವಕನೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರಹಾಕಿದ್ದು, ಈ ವಿಡಿಯೋ ಸದ್ಯ ಎಲ್ಲಡೆ ವೈರಲ್ ಆಗಿದೆ.

    ಉಮೇಶ್‍ಗೌಡ  ಎಂಬವರ ಫೇಸ್ ಬುಕ್ ಪೇಜ್‍ನಿಂದ ರೇವಣ್ಣ ಅವರ ಕುರಿತು ಹಾಡಿದ ಹಾಡು ವೈರಲ್ ಆಗುತ್ತಿದೆ. ಕನ್ನಡ ಸಿನಿಮಾವೊಂದರ ಹಾಡೊಂದನ್ನು ರಿಮಿಕ್ಸ್ ಮಾಡಿ ಸಚಿವ ರೇವಣ್ಣನ ವಿರುದ್ಧ ವ್ಯಂಗ್ಯ ಮಾಡಲಾಗಿದೆ. ಬಿಸ್ಕಟ್ ರೇವಣ್ಣನಿಗೆ ಹಾಡಿನ ಮಂಗಳಾರತಿ, ಶೇರ್ ಮಾಡಲು ಮರೆಯದಿರಿ ಅಂತ ಬರೆದು ಹಾಡನ್ನು ಸಾಮಾಜಿಕ ಜಾಲತಾಣಗಳಲ್ಲಿ ಯುವಕ ಪೋಸ್ಟ್ ಮಾಡಿದ್ದಾನೆ. ಈಗ ಎಲ್ಲೆಡೆ ಹಾಡಿನ ವಿಡಿಯೋ ವೈರಲ್ ಆಗಿದೆ. ಇದನ್ನೂ ಓದಿ:ಗಂಡ ಸತ್ತು ಒಂದೂವರೆ ತಿಂಗಳಾಗಿಲ್ಲ, ಇದೆಲ್ಲಾ ಬೇಕಾ?: ಸುಮಲತಾ ವಿರುದ್ಧ ರೇವಣ್ಣ ಕಿಡಿ

    ರೇವಣ್ಣ ರೇವಣ್ಣ ಏನಣ್ಣ ಏನಣ್ಣ, ಏನಂತ ಮಾತಾಡ್ತೀಯ ಎಂದು ಹಾಡು ಶುರುವಾಗುತ್ತೆ. ಬಳಿಕ ವಿಧವಿಧವಾಗಿ ರೇವಣ್ಣ ಅವರನ್ನು ಈ ಹಾಡಿನಲ್ಲಿ ಯುವಕ ಟೀಕಿಸಿದ್ದಾನೆ. ಅಲ್ಲದೆ ಸುಮಕ್ಕನ ಸ್ಥಿತಿಯನ್ನು ಲೇವಡಿ ಮಾಡಿದ್ಯಣ್ಣ, ನಿಖಿಲ್ ಗೆಲ್ಲೋದಿಕ್ಕೆ ಅಡ್ಡಗಾಲು ನೀನೆಯಣ್ಣ ಎಂದು ಹಾಡಿನ ಮೂಲಕವೇ ಟಾಂಗ್ ನೀಡಿದ್ದಾನೆ. ಸುಮಾರು 1 ನಿಮಿಷ 40 ಸೆಕೆಂಡ್ ಇರುವ ಹಾಡು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಸದ್ದು ಮಾಡುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ದೇವೇಗೌಡರ ಕುಟುಂಬದ ವಿರುದ್ಧ ನಿಂತ್ರೆ ಅವರನ್ನು ತುಳಿಯುವ ಕೆಲಸ ಮಾಡ್ತಾರೆ: ಜಗದೀಶ್ ಶೆಟ್ಟರ್

    ದೇವೇಗೌಡರ ಕುಟುಂಬದ ವಿರುದ್ಧ ನಿಂತ್ರೆ ಅವರನ್ನು ತುಳಿಯುವ ಕೆಲಸ ಮಾಡ್ತಾರೆ: ಜಗದೀಶ್ ಶೆಟ್ಟರ್

    ಹುಬ್ಬಳ್ಳಿ: ಸುಮಲತಾ ಅಂಬರೀಶ್ ಬಗ್ಗೆ ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಅವರು ಬಹಳ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ. ದೇವೇಗೌಡರ ಮನೆತನದ ವಿರುದ್ಧ ಯಾರು ಸ್ಪರ್ಧೆ ಮಾಡಿದರು ಅವರನ್ನ ತುಳಿಯುವ ಕೆಲಸ ಮಾಡ್ತಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗಂಡ ಸತ್ತು ಒಂದೂವರೆ ತಿಂಗಳಾಗಿಲ್ಲ ಸುಮಲತಾಗೆ ರಾಜಕಾರಣ ಬೇಕಾ ಎಂಬ ರೇವಣ್ಣ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು. ಇದು ಪ್ರಜಾಪ್ರಭುತ್ವ ಸುಮಲತಾ ಅವರಿಗೆ ಸ್ಪರ್ಧೆ ಮಾಡುವ ಹಕ್ಕಿದೆ. ಅವರು ಸ್ಪರ್ಧೆ ಮಾಡುತ್ತಾರೆಂದು ಈ ರೀತಿ ಕೀಳು ಮಟ್ಟದ ಹೇಳಿಕೆ ನೀಡಬಾರದು. ಅವರು ಸ್ಪರ್ಧೆ ಮಾಡಿದರೆ ರೇವಣ್ಣ ಅವರಿಗೆ ಏನೂ ತೊಂದರೆ. ಈ ಮೊದಲು ದೇವೇಗೌಡರು ಮತ್ತು ಅವರ ಮಕ್ಕಳು ರಾಜಕಾರಣದಲ್ಲಿದ್ದರು. ಈಗ ಮೊಮ್ಮಕ್ಕಳು, ಅವರು ಸೊಸೆಯಂದಿರು ರಾಜಕೀಯಕ್ಕೆ ಬಂದಿದ್ದಾರೆ. ಅವರಿಗೆ ಮುಂದಿನ ದಿನಗಳಲ್ಲಿ ಜನರೇ ಉತ್ತರ ನೀಡುತ್ತಾರೆ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ:ಗಂಡ ಸತ್ತು ಒಂದೂವರೆ ತಿಂಗಳಾಗಿಲ್ಲ, ಇದೆಲ್ಲಾ ಬೇಕಾ?: ಸುಮಲತಾ ವಿರುದ್ಧ ರೇವಣ್ಣ ಕಿಡಿ

    ಹೆಣ್ಣುಮಕ್ಕಳ ಬಗ್ಗೆ ಈ ರೀತಿ ಒಬ್ಬ ರಾಜಕಾರಣಿ ಮಾತನಾಡುವುದು ಸರಿಯಲ್ಲ. ಅಂಬರೀಶ್ ಅವರ ಧರ್ಮಪತ್ನಿ ಬಗ್ಗೆ ಈ ರೀತಿ ತಳಮಟ್ಟದ ರಾಜಕಾರಣ ಮಾಡಬಾರದು. ರಾಮನಗರ, ಮಂಡ್ಯ ಸೇರಿದಂತೆ ಕೆಲವು ಜಿಲ್ಲೆಗಳನ್ನ ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳಲು ಜೆಡಿಎಸ್ ಅವರು ಹೊರಟಿದ್ದಾರೆ. ಮಹಿಳಾ ದಿನಾಚರಣೆ ದಿನದಂದೇ ಒಬ್ಬ ಮಹಿಳೆಯ ಬಗ್ಗೆ ಕೀಳು ಮಟ್ಟದ ಭಾಷೆ ಬಳಸಿದ್ದು ಖಂಡನೀಯ. ವಿಧವೆ ಎಂಬುದನ್ನು ನೋಡದೆ ಇಂತಹ ಪದಗಳನ್ನ ಬಳಸಿರುವುದು ಅವರ ಚಾರಿತ್ರ್ಯವನ್ನ ತೋರಿಸುತ್ತದೆ ಎಂದು ರೇವಣ್ಣ ವಿರುದ್ಧ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv