Tag: Sumalata Ambareesh

  • ಸುಮಲತಾ ಶುಕ್ರವಾರ ಬಿಜೆಪಿ ಸೇರ್ತಾರೆ: ಶಾಸಕ ಪುಟ್ಟರಾಜು

    ಸುಮಲತಾ ಶುಕ್ರವಾರ ಬಿಜೆಪಿ ಸೇರ್ತಾರೆ: ಶಾಸಕ ಪುಟ್ಟರಾಜು

    ಮೈಸೂರು: ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ನಾಳೆಯೇ ಬಿಜೆಪಿ ಸೇರಿಕೊಳ್ಳುತ್ತಾರೆ ಎಂದು ಜೆಡಿಎಸ್ ಶಾಸಕ ಸಿ.ಎಸ್ ಪುಟ್ಟರಾಜು (C.S Puttaraju) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೋದಿ (Narendra Modi) ಕಾರ್ಯಕ್ರಮದಲ್ಲೇ ಸೇರ್ಪಡೆ ಆಗೋ ಪ್ಲಾನ್ ಮಾಡಿದ್ರು. ಆದರೆ ಸರ್ಕಾರಿ ಕಾರ್ಯಕ್ರಮ ಆಗಿದ್ರಿಂದ ಅವಕಾಶ ಸಿಗಲಿಲ್ಲ. ಹೀಗಾಗಿ ನನ್ನ ಪ್ರಕಾರ ಅವರು ನಾಳೆ ಬಿಜೆಪಿ (Sumalatha BJP) ಸೇರಬಹುದು ಎಂದಿದ್ದಾರೆ.

    ಇದೇ ವೇಳೆ ದಶಪಥ ರಸ್ತೆ ಕ್ರೆಡಿಟ್ ವಾರ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಜೆಡಿಎಸ್‍ನದ್ದು ಪಾಲಿದೆ ಎಂದು ಕ್ರೆಡಿಟ್ ಕ್ಲೈಮ್ ಮಾಡಿದರು. ಪ್ರತಾಪ್ ಸಿಂಹ (Pratap Simha) ಹೆಜ್ಜೆ ಹೆಜ್ಜೆಗೂ ಚೀಫ್ ಎಂಜಿನಿಯರ್ ಥರ ಆಡ್ತಿದ್ದಾರೆ. ಕೇಂದ್ರ ಸರ್ಕಾರ ಪ್ರತಾಪ್ ಸಿಂಹಗೆ ಹೆದ್ದಾರಿ ಯೋಜನೆ ಗುತ್ತಿಗೆ ಕೊಟ್ಟಿದ್ಯಾ? ಇಡೀ ಯೋಜನೆ ನಾನೊಬ್ಬನೇ ಮಾಡಿಸಿದ್ದೇನೆ ಅಂತ ಓಡಾಡಿಕೊಂಡಿದ್ದಾರೆ. ನಾನು ಎಂಪಿ ಆಗಿದ್ದವನು. ದೆಹಲಿಯಲ್ಲಿ ಏನೆಲ್ಲಾ ಹೋರಾಟ ಮಾಡಿದ್ದೀನಿ ಅಂತ ಯಡಿಯೂರಪ್ಪ (BS Yediyurappa) ಅವರ ಬಳಿ ಕೇಳಿ ತಿಳಿದುಕೊಳ್ಳಲಿ ಎಂದು ಹೇಳಿದರು.

    ಮೈತ್ರಿ ಸರ್ಕಾರ ಇದ್ದಾಗ ಕುಮಾರಸ್ವಾಮಿ ಯೋಜನೆಯ ಅಲೈನ್‍ಮೆಂಟ್ ಮಾಡಿ, ಅನುಮೋದನೆ ನೀಡದಿದ್ದರೆ ಹೆದ್ದಾರಿ ಹೇಗೆ ಆಗುತ್ತಿತ್ತು. ಕೇಂದ್ರದಲ್ಲಿ ಯಾವುದೇ ಸರ್ಕಾರ ಇದ್ದಿದ್ರೂ ಈ ಯೋಜನೆಗೆ ಸಹಕಾರ ಕೊಡಲೇಬೇಕಿತ್ತು. ಹೆದ್ದಾರಿ ಬಂದಿರುವುದರಿಂದ ಚನ್ನಪಟ್ಟಣ, ರಾಮನಗರ, ಮಂಡ್ಯ ಶ್ರೀರಂಗಪಟ್ಟಣದ ನೂರಾರು ಕುಟುಂಬಗಳ ಬಾಯಿಗೆ ಮಣ್ಣು ಬಿದ್ದಿದೆ ಎಂದು ತಿಳಿಸಿದರು.

  • ರೆಬಲ್ ಮದುವೆಗೆ 31 ವರ್ಷ: ಅಂಬಿ ಜೊತೆಗಿನ ದಾಂಪತ್ಯ ನೆನೆದ ಸುಮಲತಾ ಅಂಬರೀಶ್

    ರೆಬಲ್ ಮದುವೆಗೆ 31 ವರ್ಷ: ಅಂಬಿ ಜೊತೆಗಿನ ದಾಂಪತ್ಯ ನೆನೆದ ಸುಮಲತಾ ಅಂಬರೀಶ್

    ಸ್ಯಾಂಡಲ್ ವುಡ್ ರೆಬಲ್ ಸ್ಟಾರ್ ಅಂಬರೀಶ್ ಮತ್ತು ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಮದುವೆಯಾಗಿ ಇಂದಿಗೆ ಮೂವತ್ತೊಂದು ವರ್ಷ. ನಟಿಯಾಗಿ ಪರಿಚಯವಾದ ಸುಮಲತಾ ಅವರನ್ನು ಪ್ರೀತಿಸಿ, ಅಂಬರೀಶ್ ಡಿಸೆಂಬರ್ 8ರಂದು ಮದುವೆಯಾದರು. ಈ ಸ್ಟಾರ್ ಜೋಡಿಯ ಮದುವೆಗೆ ಅನೇಕರು ಸಾಕ್ಷಿಯಾಗಿದ್ದರು. ಮೂವತ್ತು ವರ್ಷಗಳ ದಾಂಪತ್ಯ ಜೀವನದ ಬಗ್ಗೆ ಸುಮಲತಾ ಅಂಬರೀಶ್ ಭಾವುಕರಾಗಿಯೇ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.

    ಅಂಬರೀಶ್ ಜೊತೆಗಿನ ಕ್ಯೂಟ್ ಆಗಿರುವ ಫೋಟೋವನ್ನ ಹಂಚಿಕೊಂಡಿರುವ ಸುಮಲತಾ, ‘ನಿಮ್ಮೊಂದಿಗೆ ಹೆಜ್ಜೆ ಹಾಕಿದ ಆ ದಿನ, ಆ ಕ್ಷಣ ನಿತ್ಯವೂ ಹೊಸ ಪುಳಕ. ತುಳಿದ ಸಪ್ತಪದಿಯಲ್ಲೂ ನಿಮ್ಮದೇ ಗುಣಗಾನ. ನನ್ನ ಬದುಕಿಗೆ ಬಾಳ ಸಂಗಾತಿಯಾಗಿ ನೀವು ಬಂದ ದಿನದಿಂದಲೂ ನನ್ನೊಳಗೆ ಹೊಸ ಸಂಭ್ರಮ. ಮದುವೆ ದಿನದ ಎಲ್ಲ ನೆನಪುಗಳ ಜೊತೆ ನೀವು ಇದ್ದೀರಿ, ಮತ್ತೆ ಮತ್ತೆ ಆ ದಿನವನ್ನು ನೆನಪಿಸುತ್ತೀರಿ. 31 ವರ್ಷಗಳಲ್ಲಿ ಜೀವಮಾನದ ನೆನಪುಗಳನ್ನು ಬಿತ್ತಿದ್ದೀರಿ. ನೀವು ನೀಡಿದ ಪ್ರೀತಿ ಮತ್ತು ಬಾಂಧವ್ಯದ ಕುರುಹುಗಳು ನನ್ನ ಜೀವಿತಾವಧಿಯ ಕೊಡುಗೆಗಳು. ಮತ್ತೆ ಮತ್ತೆ ಹೇಳುತ್ತೇನೆ. ಮದುವೆಯ ಈ ಬಂಧ,  ಅನುರಾಗದ ಅನುಬಂಧ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ವಿದೇಶಿ ಭಾಷೆಗೆ ಡಬ್ ಆಗಲಿದೆ ರಿಷಬ್ ಶೆಟ್ಟಿ ನಟನೆಯ `ಕಾಂತಾರ’

    ಅಂಬರೀಶ್ ಮತ್ತು ಸುಮಲತಾ ಮದುವೆಯ ಈ ದಿನದಂದು ಅವರ ಪುತ್ರ ಅಭಿಷೇಕ್ ಅವರ ನಿಶ್ಚಿತಾರ್ಥದ ವಿಷಯವನ್ನು ಅಧಿಕೃತವಾಗಿ ಹಂಚಿಕೊಳ್ಳಲಿದ್ದಾರೆ ಎನ್ನುವ ಸುದ್ದಿಯಿತ್ತು. ಆದರೆ, ಈವರೆಗೂ ಅಂತಹ ಯಾವುದೇ ಮಾಹಿತಿಯನ್ನು ಅವರು ನೀಡಿಲ್ಲ. ಆದರೆ, ಡಿ.11 ರಂದು ಅಭಿಷೇಕ್ ಎಂಗೇಜ್ ಆಗಲಿದ್ದಾರೆ. ಪ್ರಸಾದ್ ಬಿದ್ದಪ್ಪ ಅವರ ಪುತ್ರಿಯ ಜೊತೆ ಅಭಿಷೇಕ್ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ.

    ಅಭಿಷೇಕ್ ನಿಶ್ಚಿತಾರ್ಥದ ವಿಷಯವನ್ನು ಈವರೆಗೂ ಅವರ ಕುಟುಂಬ ಗುಟ್ಟಾಗಿಯೇ ಇಟ್ಟಿದೆ. ಆಪ್ತರ ಪ್ರಕಾರ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‍ ವೊಂದರಲ್ಲಿ ಎಂಗೇಜ್ ಮೆಂಟ್ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಹಲವು ಗಣ್ಯರಿಗೆ ಆಹ್ವಾನ ಕೂಡ ನೀಡಲಾಗಿದೆಯಂತೆ.

    Live Tv
    [brid partner=56869869 player=32851 video=960834 autoplay=true]

  • 1 ಸೈಟ್, 15 ಲಕ್ಷ ಆಫರ್ – ಜೆಡಿಎಸ್ ವಿರುದ್ಧ ಸುಮಲತಾ ಸ್ಫೋಟಕ ಆರೋಪ

    1 ಸೈಟ್, 15 ಲಕ್ಷ ಆಫರ್ – ಜೆಡಿಎಸ್ ವಿರುದ್ಧ ಸುಮಲತಾ ಸ್ಫೋಟಕ ಆರೋಪ

    ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಜೆಡಿಎಸ್‍ನ ಟಾಪ್ ಲೀಡರ್ ಒಬ್ಬರು ನನ್ನನ್ನು ಸಂಪರ್ಕ ಮಾಡಿದ್ದರು ಎಂದು ಜೆಡಿಎಸ್ ವಿರುದ್ಧ ಆರೋಪ ಮಾಡಿದ್ದಾರೆ.

    ಶ್ರೀರಂಪಟ್ಟಣದ ಕಾಳೇನಹಳ್ಳಿಯಲ್ಲಿ ಪ್ರಚಾರ ಮಾಡುವಾಗ ಸುಮಲತಾ ಅವರು, ಈ ಸಂದರ್ಭದಲ್ಲಿ ನಾನು ಈ ವಿಚಾರವನ್ನು ಈಗ ಹೇಳಬೇಕಾ ಅಥವಾ ಮುಂದೆ ಹೇಳಬೇಕಾ ಗೊತ್ತಾಗುತ್ತಿಲ್ಲ. ಜೆಡಿಎಸ್‍ನ ಟಾಪ್ ಲೀಡರ್ ಒಬ್ಬರು ನನ್ನ ಸಂಪರ್ಕ ಮಾಡಿದ್ದರು. ನನ್ನ ಫೋಟೋ ಮಾರ್ಫ್ ಮಾಡಿ ಏನ್ ಬೇಕಾದರೂ ಮಾಡುವುದಕ್ಕೆ ತಯಾರಿ ಮಾಡಿಕೊಂಡಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ. ಆದರೂ ಜೆಡಿಎಸ್ ಅವರು ನನ್ನ ಖಾಸಗಿ ಜೀವನವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಪ್ಲಾನ್ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಫೋಟೋ ಮಾರ್ಫ್ ಮಾಡಿರುವ ವೀಡಿಯೊಗಳನ್ನ ನೀವು ನೋಡಿದರೂ ನೋಡಬಹುದು ಎಂದು ಜೆಡಿಎಸ್ ವಿರುದ್ಧ ಆರೋಪಿಸಿದ್ದಾರೆ.

    ನಮ್ಮ ಸೋಶಿಯಲ್ ಮೀಡಿಯಾದಲ್ಲಿ ಕೆಲಸ ಮಾಡುವ ಇಬ್ಬರು ಹುಡುಗರನ್ನ ಸಂಪರ್ಕ ಮಾಡಿದ್ದಾರೆ. ಈ ರೀತಿಯಾಗಿ ಮಾಡಬೇಕು ಎಂದು ಹೇಳಿಕೊಟ್ಟಿದ್ದಾರೆ. ಜೊತೆಗೆ ಅವರಿಗೆ ಒಂದು ಸೈಟ್ ಹಾಗೂ 15 ಲಕ್ಷ ಕೊಡುವುದಾಗಿ ಆಮಿಷ ವೊಡ್ಡಿದ್ದಾರೆ. ಅಷ್ಟೇ ಅಲ್ಲದೇ ಫಾರೀನ್‍ಗೆ ಕಳಿಸುವುದಾಗಿ ಹುಡುಗರಿಗೆ ಹೇಳಿದ್ದಾರೆ. ನೀವು ಫಾರೀನ್‍ಗೆ ಹೋಗಿ. ಇಲ್ಲಿ ಯಾವುದೇ ಸಂದರ್ಭ ಬಂದರೂ ನಾವು ನಿಭಾಯಿಸುತ್ತೇವೆ ಎಂದು ಹೇಳಿದ್ದಾರೆ. ಈ ರೀತಿಯಾಗಿ ಜೆಡಿಎಸ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಕೆಳಮಟ್ಟಕ್ಕೆ ಇಳಿಯುವುದಕ್ಕೆ ರೆಡಿಯಾಗಿದ್ದಾರೆ ಎಂದು ಸುಮಲತಾ ಅವರು ಆರೋಪಿಸಿದ್ದಾರೆ.

    ಈ ಎಲ್ಲ ಮಾಹಿತಿ ನನಗೆ ಅವರ ಕುಟುಂಬದವರು ಹೇಳಿದ್ದಾರೆ. ಜೆಡಿಎಸ್ ಅವರ ಇಂತಹ ಕೀಳುಮಟ್ಟದ ರಾಜಕೀಯವನ್ನು ನಾನು ನೋಡಿರಲಿಲ್ಲ. ಮುಂದಿನ ದಿನಗಳಲ್ಲಿ ನನ್ನ ಫೋಟೋ ಮಾರ್ಫ್ ಮಾಡಿ ರುವ ವಿಡಿಯೋಗಳ ಬರಬಹುದು. ನೋಡೋಣ ಏನು ಬರುತ್ತೊ ಅದನ್ನ ಫೇಸ್ ಮಾಡುವುದಕ್ಕೆ ನಾನು ರೆಡಿ ಇದ್ದೇನೆ ಎಂದು ಸುಮಲತಾ ಹೇಳಿದ್ದಾರೆ.

  • ರಾಜ್ಯ ಚುನಾವಣಾ ಆಯುಕ್ತರನ್ನ ಭೇಟಿ ಮಾಡಿದ ಸುಮಲತಾ

    ರಾಜ್ಯ ಚುನಾವಣಾ ಆಯುಕ್ತರನ್ನ ಭೇಟಿ ಮಾಡಿದ ಸುಮಲತಾ

    ಬೆಂಗಳೂರು: ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಇಂದು ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿ ಆಯುಕ್ತ ಸಂಜೀವ್ ಕುಮಾರ್ ರೊಂದಿಗೆ ಮಾತುಕತೆ ನಡೆಸಿದರು.

    ಆಯುಕ್ತರ ಭೇಟಿ ಬಳಿಕ ಮಾತನಾಡಿದ ಸುಮಲತಾ ಅವರು, ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ಕ್ರಮಬದ್ಧ ಆಗಿಲ್ಲ ಎಂದು ಆಯೋಗಕ್ಕೆ ದೂರು ಕೊಟ್ಟಿದ್ದೇವು. ಇದರ ತನಿಖೆ ನಡೆಯುತ್ತಿದ್ದು, ಇನ್ನಷ್ಟು ಮಾಹಿತಿ ಕೊಡಲು ಬಂದಿದ್ದೇವೆ. ನಾಮಪತ್ರ ಸಲ್ಲಿಕೆ ವೀಡಿಯೋ ಟ್ಯಾಂಪರಿಂಗ್ ಮಾಡಿದ್ದಾರೆ. ಇದರ ಬಗ್ಗೆ ಇನ್ನಷ್ಟು ದಾಖಲೆ ಕೇಳಿದ್ದೇವು. ಆದರೆ ದಾಖಲೆ ನಮಗೆ ಇನ್ನೂ ಕೊಟ್ಟಿಲ್ಲ. ಹಾಗಾಗಿ ಇದನ್ನು ಮುಖ್ಯ ಚುನಾವಣಾ ಆಯುಕ್ತರ ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದರು.

    ಚುನಾವಣಾ ಪ್ರಚಾರ ನಡೆಸಲು ನಮಗೆ ರಾತ್ರಿ 9.30ಕ್ಕೆ ಅಂತ್ಯ ಮಾಡುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕಿದ್ದಾರೆ. ಆದರೆ ಮತ್ತೊಂದು ಕಡೆ ಜೆಡಿಎಸ್ ಅಭ್ಯರ್ಥಿ ರಾತ್ರಿ 11 ಗಂಟೆ ವರೆಗೂ ಪ್ರಚಾರ ಮಾಡುತ್ತಾರೆ. ಇದನ್ನು ಚುನಾವಣಾಧಿಕಾರಿಗಳು ನಿಲ್ಲಿಸ್ತಿಲ್ಲ. ಜೆಡಿಎಸ್ ಅಭ್ಯರ್ಥಿ ಪ್ರಚಾರ ಅವಧಿ ಮುಗಿದ ನಂತರವೂ ನಡೆಯುತ್ತಿರುತ್ತದೆ. ಆದರೆ ಚುನಾವಣಾ ಅಧಿಕಾರಿಗಳು ವೀಕ್ಷಕರಾಗಿ ನೋಡುತ್ತಾರೆ ಹೊರತು ಅವರ ಪ್ರಚಾರ ನಿಲ್ಲಿಸಲ್ಲ. ಈ ಬಗ್ಗೆಯೂ ಕೂಡ ಮುಖ್ಯ ಚುನಾವಣಾ ಆಯುಕ್ತರ ಗಮನಕ್ಕೆ ತಂದಿದ್ದೇವೆ ಎಂದರು.

  • ಸುಮಲತಾ ಅಂಬರೀಶ್ ಬಳಿ ಚಿನ್ನ, ಆಸ್ತಿ ಎಷ್ಟಿದೆ – ಆಯೋಗಕ್ಕೆ ಸಲ್ಲಿಸಿದ ಮಾಹಿತಿ ಇಲ್ಲಿದೆ

    ಸುಮಲತಾ ಅಂಬರೀಶ್ ಬಳಿ ಚಿನ್ನ, ಆಸ್ತಿ ಎಷ್ಟಿದೆ – ಆಯೋಗಕ್ಕೆ ಸಲ್ಲಿಸಿದ ಮಾಹಿತಿ ಇಲ್ಲಿದೆ

    ಮಂಡ್ಯ: ಜಿಲ್ಲೆಯ ರಾಜಕೀಯ ಅಕ್ಷರಶಃ ಸ್ಟಾರ್ ರಣರಂಗವಾಗಿ ಮಾರ್ಪಟ್ಟಿದ್ದು, ಸುಮಲತಾ ಅಂಬರೀಶ್ ಅವರು ಇಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ವೇಳೆ ನಿಯಮಗಳಂತೆ ನಾಮಪತ್ರದೊಂದಿಗೆ ತಮ್ಮೊಂದಿಗೆ ಇದ್ದ ಹಣ, ಆಸ್ತಿ, ಸಂಪತ್ತಿನ ವಿವರದ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಿದ್ದಾರೆ.

    ಸುಮಲತಾ ಬಳಿ ಐದೂವರೆ ಕೆಜಿ ಚಿನ್ನ, 31 ಕೆಜಿ ಬೆಳ್ಳಿ ಹಾಗೂ 5 ಕೋಟಿ ರೂ. ಚರಾಸ್ತಿ, 17 ಕೋಟಿ ಸ್ಥಿರಾಸ್ತಿ ಸೇರಿ ಒಟ್ಟು 23 ಕೋಟಿ 41 ಲಕ್ಷ ರೂ. ಆಸ್ತಿ ಇದೆ. ಇದರ ಜೊತೆಯಲ್ಲಿ ಒಂದೂವರೆ ಕೋಟಿ ರೂ. ಸಾಲವೂ ಇದೆ.

    ಕಾಂಗ್ರೆಸ್ ಮುಖಂಡ ಸಚ್ಚಿದಾನಂದ ನಿವಾಸದಿಂದ ನೇರವಾಗಿ ಮಂಡ್ಯ ಡಿಸಿ ಕಚೇರಿಗೆ ಆಗಮಿಸಿದ ಸುಮಲತಾ ಅವರು 3 ಸೆಟ್‍ಗಳಲ್ಲಿ ನಾಮಪತ್ರ ಸಲ್ಲಿಸಿದರು. ಪ್ರತಿ ಸೆಟ್ ನಲ್ಲೂ ತಲಾ 10 ಸೂಚಕರ ಹೆಸರನ್ನು ಉಲ್ಲೇಖಿಸಿದ್ದರು.

    ಅಹಿಂದ ಅಸ್ತ್ರ:
    ನಾಮಪತ್ರ ಸಲ್ಲಿಕೆ ವೇಳೆಯೇ ಅಹಿಂದ ಅಸ್ತ್ರ ಪ್ರಯೋಗಿಸಿರುವ ಸುಮಲತಾ ಅವರು, ದಲಿತ, ಕುರುಬ, ಗಂಗಾಮತಸ್ಥ, ಮುಸ್ಲಿಂ ನಾಯಕರೊಂದಿಗೆ ಆಗಮಿಸಿ ಜಿಲ್ಲಾಧಿಕಾರಿ ಮಂಜುಶ್ರೀ ಅವರಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ, ಡಿಸಿ ಕಚೇರಿ ಹೊರಗಡೆ ಸುಮಲತಾ ಪರ ಜೈಕಾರ, ಘೋಷಣೆಗಳು ಮುಗಿಲು ಮುಟ್ಟಿದ್ದವು. ಸುಮಲತಾ ಅವರಿಗೆ ಪುತ್ರ ಅಭಿಷೇಕ್, ಅಂಬರೀಶ್ ಸಹೋದರ ಪುತ್ರ ಮಧುಸೂದನ್, ಅಂಬಿ ಆಪ್ತರಾದ ರಾಕ್‍ಲೈನ್ ವೆಂಕಟೇಶ್, ಶ್ರೀನಿವಾಸ್ ಅವರು ಸೇರಿದಂತೆ ಆತೃಪ್ತ ಕಾಂಗ್ರೆಸ್ ಮುಖಂಡರು, ಬಿಜೆಪಿಯ ಸತೀಶ್ ರೆಡ್ಡಿ ಸಾಥ್ ನೀಡಿದ್ದರು.

    ಬೃಹತ್ ಮೆರವಣಿಗೆ:
    ನಾಮಪತ್ರ ಸಲ್ಲಿಕೆ ಬಳಿಕ ಡಿಸಿ ಕಚೇರಿ ಬಳಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸುಮಲತಾ ಅವರು ಸಿಲ್ವರ್ ಜ್ಯುಬಿಲಿ ಪಾರ್ಕ್ ವರೆಗೂ ಸಮಾವೇಶಕ್ಕೆ ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ನಟ ದರ್ಶನ್ ಮತ್ತು ಯಶ್ ಅವರು ಸಾಥ್ ನೀಡಿದರು. ಈ ರೋಡ್ ಶೋ ವೇಳೆ ಕೆಂಡದಂತೆ ಸೂರ್ಯ ಪ್ರಕಾಶಿಸುತ್ತಿದ್ದರೂ ಲೆಕ್ಕಿಸದ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು. ಇತ್ತ ಮದ್ದೂರಿನಿಂದ ಅಭಿಮಾನಿಗಳು ಒಂದು ಸಾವಿರ ಬೈಕ್‍ಗಳ ಮೂಲಕ ರ್ಯಾಲಿಯಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದರು.

  • ಸುಮಲತಾ ಸ್ಪರ್ಧೆಗೆ ಎಸ್‍ಎಂಕೆ ಗ್ರೀನ್ ಸಿಗ್ನಲ್ ನೀಡಿದ್ರಾ?

    ಸುಮಲತಾ ಸ್ಪರ್ಧೆಗೆ ಎಸ್‍ಎಂಕೆ ಗ್ರೀನ್ ಸಿಗ್ನಲ್ ನೀಡಿದ್ರಾ?

    -ಮಂಡ್ಯ’ಲೋಕ’ ಅಖಾಡದ ಬಿಜೆಪಿ ಇನ್‍ಸೈಡ್ ಸ್ಟೋರಿ

    ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಹೊಸ ಅಭ್ಯರ್ಥಿಗಳು ಕಣದಲ್ಲಿದ್ದರೂ ಯಾವ ಪ್ರಭಾವಿ ಮುಖಂಡರ ಸ್ಪರ್ಧೆಗಿಂತ ಭಿನ್ನವಾಗಿಲ್ಲ. ಕಾರಣ ಓರ್ವ ಅಭ್ಯರ್ಥಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ, ಇತ್ತ ಮಾಜಿ ಸಚಿವ, ನಟ ಅಂಬರೀಶ್ ಅವರ ಪತ್ನಿ ಸುಮಲತಾ ಮಂಡ್ಯ ಅಖಾಡದಲ್ಲಿ ಮಿಂಚಿನಂತೆ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಈ ಮಧ್ಯೆ ಸುಮಲತಾ ಅಂಬರೀಶ್‍ಗೆ ಬಿಜೆಪಿ ಬೆಂಬಲ ನೀಡುತ್ತಾ ಅಥವಾ ಸುಮಲತಾ ಕಮಲವನ್ನು ಹಿಡಿಯುತ್ತಾರಾ ಎಂಬ ಪ್ರಶ್ನೆಗಳು ಮಂಡ್ಯ ರಾಜಕೀಯ ಅಂಗಳದಲ್ಲಿ ಹುಟ್ಟಿಕೊಂಡಿವೆ.

    ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಸ್ಪರ್ಧಿಸಿದ್ರೆ, ನನ್ನ ಅಭ್ಯಂತರವಿಲ್ಲ ಎಂದು ಮಾಜಿ ಸಿಎಂ ಎಸ್.ಎಂ.ಕೃಷ್ಣ ಗ್ರೀನ್ ಸಿಗ್ನಲ್ ನೀಡಿದ್ದಾರಂತೆ. ಆದ್ರೆ ಪಕ್ಷದ ಕೋರ್ ಕಮಿಟಿಯಲ್ಲಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಎಸ್‍ಎಂಕೆ ಹೇಳಿದ್ದಾರೆ ಎನ್ನಲಾಗಿದೆ. ಇಂದು ನಡೆಯುವ ಸಭೆಯಲ್ಲಿ ಮಂಡ್ಯ ಹೊರತುಪಡಿಸಿ 27 ಕ್ಷೇತ್ರಗಳ ಅಭ್ಯರ್ಥಿಗಳನ್ನ ಅಂತಿಮಗೊಳಿಸಿ ಶಿಫಾರಸ್ಸು ಮಾಡುವ ಸಾಧ್ಯತೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ.

    ಸುಮಲತಾರ ಅಂತಿಮ ನಿರ್ಧಾರದ ಬಳಿಕ ಬಿಜೆಪಿ ಮಂಡ್ಯದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೋ? ಬೇಡವೋ ಎಂಬುದನ್ನು ಚಿಂತಿಸಲಿದೆ. ಹಾಗಾಗಿ ಸೋಮವಾರದವರೆಗೆ ಅಧಿಕೃತ ನಿರ್ಧಾರ ಪ್ರಕಟಿಸದೆ ಕಾದು ನೋಡುವ ತಂತ್ರಕ್ಕೆ ಬಿಜೆಪಿ ಮುಂದಾಗಿದೆ.

  • ಯಡಿಯೂರಪ್ಪನವರ ಹುಣ್ಣಿಮೆ, ಅಮವಾಸ್ಯೆ ಡೆಡ್‍ಲೈನ್ ಮುಗಿದಿವೆ: ಎಂಬಿಪಿ ಟಾಂಗ್

    ಯಡಿಯೂರಪ್ಪನವರ ಹುಣ್ಣಿಮೆ, ಅಮವಾಸ್ಯೆ ಡೆಡ್‍ಲೈನ್ ಮುಗಿದಿವೆ: ಎಂಬಿಪಿ ಟಾಂಗ್

    ವಿಜಯಪುರ: ಮಾಜಿ ಸಿಎಂ ಯಡ್ಡಿಯೂರಪ್ಪನವರ ಹುಣ್ಣಿಮೆ, ಅಮವಾಸ್ಯೆ, ದೀಪಾವಳಿ, ಸಂಕ್ರಾಂತಿ ಎಲ್ಲ ಮುಗಿದಿವೆ. ಈ ರೀತಿ ಅನೇಕ ಡೆಡ್ ಲೈನ್ ಮುಗಿದರೂ ಕಾಂಗ್ರೆಸ್ ಇರುತ್ತೆ ಎಂದು ಜಿಲ್ಲೆಯ ಕಳ್ಳಕವಟಿಗಿಯಲ್ಲಿ ಗೃಹ ಸಚಿವ ಎಂ.ಬಿ ಪಾಟೀಲ್ ವ್ಯಂಗ್ಯವಾಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಡ್ಡಿಯೂರಪ್ಪನವರ ಹುಣ್ಣಿಮೆ, ಅಮವಾಸ್ಯೆ, ದೀಪಾವಳಿ, ಸಂಕ್ರಾಂತಿ ಅಂತ ಎಲ್ಲಾ ಡೆಡ್‍ಲೈನ್ ಮುಗಿದಿದೆ. ಅವರು ಆಪರೇಷನ್ ಕಮಲ ಮಾಡೋದು ಬಿಡಲ್ಲ. ಪದೇ ಪದೇ ಅದೇ ಮಾತನ್ನ ಕೇಳಿ ನಿಮಗೂ ಬೇಸರ ಆಗಿದೆ. ಮುಂದೆ ಅಸೆಂಬ್ಲಿ ಚುನಾವಣೆ ಬರುತ್ತೆ, ನಂತರ ಲೋಕಸಭಾ ಚುನಾವಣೆ ಬರುತ್ತೆ. ಆಗಲು ಕಾಂಗ್ರೆಸ್ ಇರುತ್ತೆ ಆಪರೇಷನ್ ಕಮಲ ನಡೆಯಲ್ಲ ಎಂದು ಯಡ್ಡಿಯೂರಪ್ಪ ಬಗ್ಗೆ ವ್ಯಂಗ್ಯವಾಡಿದ್ದಾರೆ.

    ದೋಸ್ತಿ ಸರ್ಕಾರದಲ್ಲಿ ಲೋಕಸಭೆ ಚುನಾವಣೆಯ ಟಿಕೆಟ್ ಹಂಚಿಕೆ ಬಗ್ಗೆ ಪ್ರತಿಕ್ರಿಯಿಸಿ, ಎಂಪಿ ಸ್ಥಾನದ 12 ಸೀಟುಗಳಿಗೆ ಯಾವುದೇ ಸಮಸ್ಯೆ ಇಲ್ಲ. ಈಗಾಗಲೇ ಜೆಡಿಎಸ್ 2, ಕಾಂಗ್ರೆಸ್‍ನ 10 ಸೀಟುಗಳ ಬಗ್ಗೆ ಯಾವುದೇ ಗೊಂದಲವಿಲ್ಲ. ಉಳಿದ 16 ಸೀಟ್‍ಗಳ ಬಗ್ಗೆ ಗುರುವಾರ ಚರ್ಚೆ ಆಗಿದೆ. ದೆಹಲಿಯಲ್ಲಿ ಮಾರ್ಚ್ 11ಕ್ಕೆ ಮೀಟಿಂಗ್ ಇದೆ. ಅಲ್ಲಿಯೇ ಎಲ್ಲವೂ ತೀರ್ಮಾನ ಆಗುತ್ತದೆ. 2014 ಹಾಗೂ 2018 ರ ವಿಜಯಪುರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮುಂದಿತ್ತು. ವಿಜಯಪುರ ನಮಗೆ ಬೇಕು ಎಂದು ನಾನು, ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಮತ್ತು ಶಾಸಕ ಯಶವಂತರಾಯಗೌಡ ಪಾಟೀಲ್ ಹೈಕಮಾಂಡ್‍ಗೆ ಮನವಿ ಮಾಡಿದ್ದೇವೆ ಎಂದರು.

    ಸುಮಲತಾ ಅವರ ಬಗ್ಗೆ ನಾನು ಮಾತನಾಡಲ್ಲ. ಬಹುತೇಕ ಮಂಡ್ಯ ಸೀಟ್ ಜೆಡಿಎಸ್ ಪಾಲಾಗಿದೆ. ಹಾಗಾಗಿ ಅದರ ಬಗ್ಗೆ ನಾನು ಹಸ್ತಕ್ಷೇಪ ಮಾಡಲ್ಲ. ಅವರು ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲೋದರ ಬಗ್ಗೆ ನಾನು ಮಾತನಾಡಲ್ಲ ಎಂದು ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಂಡ್ಯದಲ್ಲಿ ಸುಮಲತಾ ಅಂಬರೀಶ್‍ಗೆ ಬಿಜೆಪಿ ಬೆಂಬಲ: ಸಂಸದೆ ಶೋಭಾ ಕರಂದ್ಲಾಜೆ

    ಮಂಡ್ಯದಲ್ಲಿ ಸುಮಲತಾ ಅಂಬರೀಶ್‍ಗೆ ಬಿಜೆಪಿ ಬೆಂಬಲ: ಸಂಸದೆ ಶೋಭಾ ಕರಂದ್ಲಾಜೆ

    ಮಂಗಳೂರು: ರಾಜ್ಯದಲ್ಲಿ ಮಾಜಿ ಪ್ರಧಾನಿಗಳ ಇಡೀ ಕುಟುಂಬವೇ ರಾಜಕಾರಣದಲ್ಲಿ ಮುಳುಗಿದೆ. ಮಂಡ್ಯದಲ್ಲಿ ನಿಖಿಲ್ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಜೆಡಿಎಸ್ ಹೇಳಿದೆ. ಆದ್ದರಿಂದ ಬಿಜೆಪಿ ಯಾರು ಬಂದರೂ ಸ್ವಾಗತ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದೆ, ಮಂಡ್ಯದಲ್ಲಿ ಸುಮಲತಾ ಅಂಬರೀಶ್‍ಗೆ ಬಿಜೆಪಿ ಬೆಂಬಲ ನೀಡಲಿದೆ. ಯಾರು ಪಕ್ಷಕ್ಕೆ ಸೇರ್ಪಡೆ ಆದ್ರು ನಮ್ಮ ಸ್ವಾಗತ ಇದೆ. ಪಕ್ಷೇತರವಾಗಿ ನಿಂತರು ಕೂಡ ಬಿಜೆಪಿ ಬೆಂಬಲಿಸಲಿದೆ ಎಂದು ಹೇಳಿದರು.

    ಇತ್ತ ವಿಜಯಪುರದಲ್ಲಿ ಮಾತನಾಡಿದ ಗೃಹಸಚಿವ ಎಂಬಿ ಪಾಟೀಲ್, ಮಂಡ್ಯದಿಂದ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ಒಳ್ಳೆಯದು. ಅವರ ಪರ ನಾನು ಪ್ರಚಾರ ಮಾಡುತ್ತೇನೆ. ಆದರೆ ಟಿಕೆಟ್ ನೀಡುವ ನಿರ್ಧಾರ ಹೈಕಮಾಂಡ್ ಮಾಡುತ್ತೆ ಎಂದರು.

    ಸುಮಲತಾ ಅವರು ಸ್ಪರ್ಧೆ ಮಾಡಲು ಟಿಕೆಟ್ ಕೇಳುವುದು ತಪ್ಪೆನಲ್ಲಾ. ಆದರೆ ಕಾಂಗ್ರೆಸ್ ಮೈತ್ರಿ ರಾಜಕಾರಣದಲ್ಲಿ ಸರ್ಕಾರ ನಡೆಸುತ್ತಿರುವ ಕಾರಣ ನಮಗೆ ಟಿಕೆಟ್ ಕೇಳಿದ್ದೇವೆ. ಅವರು ಸ್ಪರ್ಧೆ ಮಾಡುವ ಬಗ್ಗೆ ನಮಗೆ ಯಾವುದೇ ಅತಂಕವಿಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಅವರು ಪ್ರತಿಕ್ರಿಯೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಂಬಿ ಮಾಡಲು ಸಾಧ್ಯವಾಗದ ಜಿಲ್ಲೆಯ ಅಭಿವೃದ್ಧಿಗೆ ನಾನು ಚಾಲನೆ ನೀಡಿದ್ದೇನೆ: ಸಿಎಂ ಎಚ್‍ಡಿಕೆ

    ಅಂಬಿ ಮಾಡಲು ಸಾಧ್ಯವಾಗದ ಜಿಲ್ಲೆಯ ಅಭಿವೃದ್ಧಿಗೆ ನಾನು ಚಾಲನೆ ನೀಡಿದ್ದೇನೆ: ಸಿಎಂ ಎಚ್‍ಡಿಕೆ

    – ಆತ್ಮೀಯರ ನಡುವೆ ಬಿರುಕು ಮೂಡಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ

    ಮಂಡ್ಯ: ಜಿಲ್ಲೆಯ ಜನರ ಋಣದ ಭಾರ ನನ್ನ ಮೇಲಿದ್ದು, ಆ ಋಣವನ್ನು ತೀರಿಸುವ ಕಾರ್ಯ ನನ್ನ ಮೇಲಿದೆ. ಅಭಿವೃದ್ಧಿಯ ವಿಚಾರಕ್ಕೆ ಜಿಲ್ಲೆಗೆ ದೊಡ್ಡ ಅನಾಯ್ಯವಾಗಿದ್ದು, ಅಂಬರೀಶ್ ಅವರ ಕಾಲದಲ್ಲಿ ಮಾಡಲು ಸಾಧ್ಯವಾಗದ ಕಾರ್ಯಗಳಿಗೆ ನಾನು ಚಾಲನೆ ಕೊಟ್ಟಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

    ಮಂಡ್ಯ ಅಭಿವೃದ್ಧಿ ಯೋಜನೆಗಳ ಚಾಲನೆ ನೀಡುವ ಸಂಬಂಧ ಇಂದು ನಗರದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮ ಉದ್ದೇಶಿಸಿ ಸಿಎಂ ಕುಮಾರಸ್ವಾಮಿ ಅವರು ಮಾತನಾಡಿದರು. ಅಂಬರೀಶ್ ಹಾಗೂ ನಾನು ಆತ್ಮೀಯ ಸ್ನೇಹಿತರು. ಅವರು ನಿಧನ ಹೊಂದಿದ್ದ ಸಂದರ್ಭದಲ್ಲಿ ಅವರಿಗೆ ನೀಡಿದ ಗೌರವ ಇಡೀ ಜಿಲ್ಲೆಗೆ ನೀಡಿದ ಗೌರವ. ಇದನ್ನು ಅಂಬರೀಶ್ ಅಭಿಮಾನಿಗಳು ಅರ್ಥ ಮಾಡಿಕೊಳ್ಳಬೇಕು. ಅಂದು ಮಂಡ್ಯ ಜಿಲ್ಲೆಗೆ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಕರೆತರುವುದು ಬೇಡ ಎಂದವರು ಇಂದು ಈ ಮಣ್ಣಿನ ಬಗ್ಗೆ ಪ್ರೀತಿ ತೋರಿಸುತ್ತಿದ್ದಾರೆ. ಅಂಬರೀಶ್ ಅವರಿಂದ ಮಾಡಲಾಗದ ಅಭಿವೃದ್ಧಿ ಕಾರ್ಯಗಳನ್ನು ನಾನು ಮಾಡುತ್ತಿದ್ದು, ನಿಮ್ಮ ಋಣವನ್ನು ತೀರಿಸುವ ಕಾರ್ಯವನ್ನು ಮಾಡಿದ್ದೇನೆ ಎಂದರು.

    ನನ್ನ ಕುಟುಂಬವನ್ನು ಇಂದು ಬೀದಿಗೆ ಎಳೆದಿದ್ದಾರೆ. ನಾನು ಎಂದಾದರೂ ನನ್ನ ಮಗನನ್ನು ರಾಜಕೀಯಕ್ಕೆ ಕರೆತರುವ ಬಗ್ಗೆ ಮಾತನಾಡಿದ್ದೇನಾ ಎಂದು ಪ್ರಶ್ನಿಸಿದರು. ಅಲ್ಲದೇ ಜಿಲ್ಲೆಯ ಅಭಿವೃದ್ಧಿ ನನ್ನ ಜೀವನದ ಗುರಿಯಾಗಿದ್ದು, ಕಳೆದ ಚುನಾವಣೆಯಲ್ಲಿ 7 ಸ್ಥಾನಗಳಲ್ಲಿ ನಮ್ಮನ್ನು ಗೆದ್ದು ತಂದಿದ್ದೀರಿ. ನಿಮ್ಮ ಆಶೀರ್ವಾದದಿಂದ ಈ ಜಾಗದಲ್ಲಿ ನಿಂತಿದ್ದೇನೆ. ನನ್ನ ಕೊನೆಯ ಉಸಿರು ಇರುವವರೆಗೂ ಇದನ್ನು ಮರೆಯಲ್ಲ. ಕೇವಲ ಮಂಡ್ಯ ಜಿಲ್ಲೆಗಾಗಿ ಕಾರ್ಯಕ್ರಮ ಮಾಡುತ್ತೇನೆ ಎಂದು ಸಣ್ಣತನದ ಮಾತನಾಡುತ್ತಾರೆ. ಆದರೆ ಬೇರೆ ಬೇರೆ ಜಿಲ್ಲೆಗಳಿಗೆ ಯಾವ ಕೊಡುಗೆ ನೀಡಿದ್ದೇನೆ ನನಗೆ ಗೊತ್ತಿದೆ ಎಂದು ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರಸ್ತಾಪಿಸಿ ತಮ್ಮ ವಿರುದ್ಧದ ಟೀಕೆಗಳಿಗೆ ಉತ್ತರಿಸಿದರು.

    ಬದುಕಿರುವುದೇ ನಿಮಗಾಗಿ: ಮತ್ತೆ ತಮ್ಮ ಬದುಕಿನ ಕುರಿತು ಪ್ರಸ್ತಾಪ ಮಾಡಿದ ಸಿಎಂ ಎಚ್‍ಡಿಕೆ ನಾನು ಬದುಕಿರುವುದು ನಿಮಗಾಗಿ, ನಾಡಿನ ಜನತೆಗಾಗಿ ಎಂದರು. ಅಲ್ಲದೇ ರೈತರ ಸಾಲಮನ್ನಾ ವಿಚಾರದಲ್ಲಿ ನಾನು ಎಂದು ಸುಳ್ಳು ಹೇಳಿಲ್ಲ. ನಿನ್ನೆ ಬೆಳಗ್ಗೆ ಹತ್ತು ಗಂಟೆವರೆಗೂ 6 ಲಕ್ಷದ 40 ಸಾವಿರ ರೈತ ಕುಟುಂಬಗಳಿಗೆ 4 ಸಾವಿರದ 103 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದೇನೆ. ರಾಜ್ಯ ಸರ್ಕಾರದ ಖಜಾನೆಯಲ್ಲಿ ಇನ್ನೂ 6 ಸಾವಿರ ದುಡ್ಡು ಇಟ್ಟಿದ್ದೇನೆ. ಕೇಂದ್ರ ಪ್ರಧಾನಿ ರೀತಿ ನಾನು ಮಾತನಾಡಲ್ಲ ಎಂದು ಕಿಡಿಕಾರಿದರು.

    ರೈತರ ಸಾಲಮನ್ನಾ ಮಾಡಿದರೆ ಮಾತ್ರ ರೈತರು ಆರಾಮವಾಗಿ ಇರುತ್ತಾರೆ ಎಂಬ ಭ್ರಮೆ ನನಗಿಲ್ಲ. ಸಮಗ್ರ ಅಭಿವೃದ್ಧಿಗಾಗಿ ನಾನು ದುಡಿಯುತ್ತೇನೆ. ಗಿರವಿ ಇಟ್ಟಿರುವ ಒಡವೆಗಳನ್ನ ಬಿಡಿಸಿಕೊಡುವ ನಿಟ್ಟಿನಲ್ಲಿ ಹೊಸ ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದೆ. ಯೋಜನೆ ಮುಗಿಯುವವರೆಗೂ ಯಾವುದೇ ಮಾನಸಿಕ ಹಿಂಸೆ ಕೊಟ್ಟರೂ ಅಧಿಕಾರದಲ್ಲಿ ಇರುತ್ತೇನೆ. ಆದರೆ ಜಿಲ್ಲೆಯ ಟಿಕೆಟ್ ವಿಚಾರದಲ್ಲಿ ಈ ವೇದಿಕೆಯಲ್ಲಿ ಪ್ರಸ್ತಾಪ ಮಾಡಲ್ಲ. ಅದಕ್ಕೆ ರಾಜಕೀಯ ವೇದಿಕೆ ಇದೆ. ಆಗ ಮಾತನಾಡುತ್ತೇನೆ ಎಂದರು.

    ಜಿಲ್ಲೆಯ ಜನ ಹಣ ಪಡೆದು ಮೋಸ ಹೋಗುವುದಿಲ್ಲ. ಯಾವುದೇ ಆಮಿಷಗಳಿಗೆ ಒಳಗಾಗಲ್ಲ. ಇದೇ ರೀತಿ ನಿಮ್ಮ ಬೆಂಬಲ ನಮಗೆ ನೀಡಿ ಯಾವುದೇ ಕಾರಣಕ್ಕೂ ಅನುಕಂಪದ ಮಾತುಗಳಿಗೆ ಮರುಳಾಗಬೇಡಿ. ನಿಜವಾಗಿ ಕೆಲಸ ಮಾಡುವವರಿಗೆ ಅವಕಾಶ ಮಾಡಿಕೊಡಿ ಎಂದು ಪರೋಕ್ಷವಾಗಿ ಸುಮಲತಾ ಅಂಬರೀಶ್ ಅವರಿಗೆ ಟಾಂಗ್ ಕೊಟ್ಟರು.

    ಕನ್ನಡಿಗ ಮತ್ತೊಮ್ಮೆ ಪ್ರಧಾನಿ: ರಾಜ್ಯದಲ್ಲಿ 20 ಸ್ಥಾನಗಳಿಗೆ ಹೆಚ್ಚು ಸ್ಥಾನ ಪಡೆದುಕೊಂಡರೆ ದೆಹಲಿಯಲ್ಲಿ ಮತ್ತೊಮ್ಮೆ ಕನ್ನಡಿಗರೊಬ್ಬರು ಪ್ರಧಾನಿಯಾಗ ಬಹುದು ಎಂದು ಹೇಳಿದ ಕುಮಾರಸ್ವಾಮಿ ಅವರು ಪರೋಕ್ಷವಾಗಿ ಎಚ್‍ಡಿಡಿ ಮತ್ತೊಮ್ಮೆ ಪ್ರಧಾನಿ ಆಗುವ ವಿಚಾರವನ್ನು ಬಿಚ್ಚಿಟ್ಟರು. ಅಲ್ಲದೇ ದೇವೇಗೌಡರು ಪ್ರಧಾನಿ ಆಗಿದ್ದಾಗ ಒಂದೇ ಒಂದು ಯೋಧರ ಕುಟುಂಬ ಅನಾಥರಾಗುವ ಘಟನೆ ನಡೆಯಲಿಲ್ಲ. ರೈತರ ಸಾಲಮನ್ನಾ ಮಾಡುವುದು ಪಾಪದ ಕೆಲಸ ಎನ್ನುವ ಪ್ರಧಾನಿಗೆ ಸರಿಯಾದ ಉತ್ತರ ಕೊಡಿ ಎಂದರು.

    ಗುರು ಪತ್ನಿಗೆ ನಾಳೆಯೇ ಉದ್ಯೋಗ: ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹುತಾತ್ಮ ಗುರು ಪತ್ನಿ ಕಲಾವತಿಯರಿಗೆ ಸಂತ್ವಾನ ಹೇಳಿದ ಸಿಎಂ ಕುಮಾರಸ್ವಾಮಿ ಅವರು, ಕಲಾವತಿಯವರು ಗೌರವಯುತವಾಗಿ ಬದುಕು ನಡೆಸಲು ಕೆಲಸ ನೀಡುವ ಆಶ್ವಾಸನೆ ನೀಡಿದ್ದೆ. ಅದರಂತೆ ಅವರಿಗೆ ಬೆಂಗಳೂರಿಗೆ ಬರಲು ಹೇಳಿದ್ದೇನೆ. ನಾಳೆಯೇ ಕೆಲಸ ನೀಡಲಾಗುತ್ತದೆ ಎಂದು ಘೋಷಣೆ ಮಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಷ್ಟದ ಹೊತ್ತಲ್ಲಿ ಶಕ್ತಿ ತುಂಬಿದ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಸುಮಲತಾ ಅಂಬರೀಶ್

    ಕಷ್ಟದ ಹೊತ್ತಲ್ಲಿ ಶಕ್ತಿ ತುಂಬಿದ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಸುಮಲತಾ ಅಂಬರೀಶ್

    – ಕರ್ನಾಟಕದ ಪುಣ್ಯ ಭೂಮಿಯಲ್ಲಿ ಹುಟ್ಟಿದ್ದೇ ಅಂಬಿ ಅದೃಷ್ಟ

    ಬೆಂಗಳೂರು: ಜೀವನದ ಅತ್ಯಂತ ಕಷ್ಟದ ಮತ್ತು ದುಃಖದ ಹೊತ್ತಿನಲ್ಲಿ ನನ್ನನ್ನು ಮತ್ತು ನನ್ನ ಕುಟುಂಬವನ್ನು ಬೆಂಬಲಿಸಿ ನಿಂತ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಹಾಗೆಯೇ ಸಕಲ ಸರ್ಕಾರಿ ಗೌರವ ನೀಡಿದ ಸರ್ಕಾರ, ಪೊಲೀಸ್ ಇಲಾಖೆ, ಮಂಡ್ಯ ಜನತೆ ಹಾಗೂ ಅಭಿಮಾನಿಗಳಿಗೆ ಸುಮಲತಾ ಅಂಬರೀಶ್ ಧನ್ಯವಾದ ತಿಳಿಸಿದ್ದಾರೆ.

    ಈ ಕುರಿತು ತಮ್ಮ ಫೇಸ್‍ಬುಕ್ ನಲ್ಲಿ ಬರೆದುಕೊಂಡಿರುವ ಸುಮಲತಾ ಅವರು, ನಿಮ್ಮ ಸಾಂತ್ವನದ ಮಾತುಗಳು ಮತ್ತು ನಿಮ್ಮ ಪ್ರೀತಿಯ ನಡೆಗಳು ಈ ಸಂಕಷ್ಟದ ಹೊತ್ತಿನಲ್ಲಿ ನಮಗೆ ಶಕ್ತಿ ತುಂಬಿದವು. ನಾನು, ಅಭಿಷೇಕ್ ಮತ್ತು ಅಂಬರೀಶ್ ಇಡೀ ಕುಟುಂಬವು ಕರ್ನಾಟಕದ ಜನತೆಗೆ ಸದಾ ಕಾಲ ಅಭಾರಿಯಾಗಿರುತ್ತೇವೆ. ವಿಶೇಷವಾಗಿ ಅಂಬರೀಶ್ ಅವರನ್ನು ತಮ್ಮ ರಾಜನಂತೆ ಗೌರವರಿಸಿ ಅತ್ಯಂತ ಪ್ರೀತಿಯಿಂದ ಕಳಿಸಿಕೊಟ್ಟ ಮಂಡ್ಯದ ಅಭಿಮಾನಿಗಳು ಮತ್ತು ಎಲ್ಲ ಅಭಿಮಾನಿಗಳಿಗೆ ನಾವುಗಳು ಯಾವಾಗಲು ಚಿರಋಣಿ ಎಂದು ತಿಳಿಸಿದ್ದಾರೆ.

    ಪೋಸ್ಟ್ ನಲ್ಲಿ ಏನಿದೆ?
    ಅಂತ್ಯಕ್ರಿಯೆಗೆ ಬೇಕಾದ ಎಲ್ಲ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿಕೊಡುವುದರ ಜೊತೆಗೆ ಅಂಬರೀಶ್ ಅವರಿಗೆ ಸಕಲ ಸರಕಾರಿ ಗೌರವದೊಂದಿಗೆ ಕಳುಹಿಸಿಕೊಟ್ಟ ಸನ್ಮಾನ್ಯ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೂ, ಮಂಡ್ಯದ ಸಂಸದ ಸಿ.ಎಸ್.ಪುಟ್ಟರಾಜು ಅವರಿಗೂ, ಇನ್ನಿತರ ಶಾಸಕರು ಮತ್ತು ಸಂಸದರಿಗೂ, ಕರ್ನಾಟಕ ಸರ್ಕಾರಕ್ಕೂ ನಾನು ಈ ಮೂಲಕ ಅಭಿನಂದನೆ ತಿಳಿಸುತ್ತೇನೆ. ಮೂರು ದಿನಗಳ ಕಾಲ ಸತತವಾಗಿ ಶ್ರಮವಹಿಸಿ ಯಾವುದೇ ರೀತಿ ತೊಂದರೆಯಾಗದಂತೆ ನೋಡಿಕೊಂಡ ಪೋಲಿಸ್ ಇಲಾಖೆಯವರಿಗೂ, ಅರ್ ಎ ಎಫ್ ಸಿಬ್ಬಂದಿಯವರಿಗೂ, ಮಂಡ್ಯ ಮತ್ತು ಬೆಂಗಳೂರು ಜಿಲ್ಲೆಯ ಅಧಿಕಾರಿ ವರ್ಗದವರಿಗೂ ನಾನು ಈ ಮೂಲಕ ಅಭಿನಂದನೆ ತಿಳಿಸಲು ಇಚ್ಚಿಸುತ್ತೇನೆ.

    ಅಂಬರೀಶ್ ಅವರು ಮೇಲೆ ಸದಾ ಕಾಲ ಪ್ರೀತಿ ಮತ್ತು ಅಭಿಮಾನವನ್ನು ತೋರಿಸಿದ ಮಂಡ್ಯ ಜನತೆಯ ಬಗ್ಗೆ ಹೇಳಲು ಪದಗಳೇ ಸಾಲುತ್ತಿಲ್ಲ. ಅವರು ಬದುಕಿದ್ದಾಗ ಹೇಗೆ ಪ್ರೀತಿ ಅಭಿಮಾನ ತೋರಿಸಿದರೋ ಹಾಗೆಯೇ ಅವರು ಸತ್ತ ನಂತರವು ಪ್ರೀತಿ ಅಭಿಮಾನಕ್ಕೆ ಯಾವುದೇ ಕೊರತೆಯಾಗದಂತೆ ನಡೆದುಕೊಂಡ ಮಂಡ್ಯದ ಜನತೆಗೆ ನಾನು ಸದಾ ಅಭಾರಿ. ಅವರೊಬ್ಬ ನಟ, ಕೇಂದ್ರದ ಮಂತ್ರಿ, ರಾಜ್ಯದ ಮಂತ್ರಿ, ಒಬ್ಬ ಸೂಪರ್ ಸ್ಟಾರ್, ಎಲ್ಲರಿಗೂ ಒಬ್ಬ ಒಳ್ಳೆಯ ಗೆಳೆಯರಾಗಿದ್ದರು. ಆದರೆ ಇವೆಲ್ಲಕ್ಕೂ ಮಿಗಿಲಾಗಿ ನಿಮ್ಮೆಲ್ಲರ ಪ್ರೀತಿ ಅಭಿಮಾನವೇ ಅವರಿಗೆ ದೊಡ್ಡ ಕಳಶದಂತೆ. ಅಂಬರೀಶ್ ಅವರು ನಮ್ಮ ಕರ್ನಾಟಕದ ಪುಣ್ಯ ಭೂಮಿಯಲ್ಲಿ ಹುಟ್ಟಿದ್ದೇ ಅವರಿಗೊಂದು ಅದೃಷ್ಟ. ಹಾಗೆಯೇ ಮಂಡ್ಯದ ಮಣ್ಣಿನ ಮಗ ಎನಿಸಿಕೊಳ್ಳಲು ಅಷ್ಟೇ ಅದೃಷ್ಟ ಮಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv