Tag: sumaltha ambareesh

  • ಪಕ್ಷ ಸೇರುವಂತೆ ಬಿವೈವಿ ಆಹ್ವಾನ – ಬೆಂಬಲಿಗರ ಜೊತೆ ಚರ್ಚಿಸಿ ನಿರ್ಧಾರ ಎಂದ ಸುಮಲತಾ

    ಪಕ್ಷ ಸೇರುವಂತೆ ಬಿವೈವಿ ಆಹ್ವಾನ – ಬೆಂಬಲಿಗರ ಜೊತೆ ಚರ್ಚಿಸಿ ನಿರ್ಧಾರ ಎಂದ ಸುಮಲತಾ

    ಬೆಂಗಳೂರು: ಶನಿವಾರ ಬೆಂಬಲಿಗರ ಸಭೆ ಕರೆದು ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ (Sumalatha Ambareesh) ಹೇಳಿದ್ದಾರೆ.

    ಇಂದು ಬಿಜೆಪಿ ರಾಜ್ಯಾಧಕ್ಷ ವಿಜಯೇಂದ್ರ (BY Vijayendra) ಮತ್ತು ಪ್ರೀತಂ ಗೌಡ (Pretham Gowda) ಸುಮಲತಾ ನಿವಾಸಕ್ಕೆ ಆಗಮಿಸಿ ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಬೇಕು ಎಂದು ಮನವಿ ಮಾಡಿದರು.  ಇದನ್ನೂ ಓದಿ: ದೋಸ್ತಿಗಳ ಮೊದಲ ಸಮ್ಮಿಲನ ಸಭೆ – ದೇಶದಲ್ಲಿ ಮೋದಿಯಂತ ನಾಯಕರು ಮತ್ತೊಬ್ಬರಿಲ್ಲ ಎಂದ ಹೆಚ್‌ಡಿಡಿ

     

    ಭೇಟಿಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸುಮಲತಾ,  ವಿಜಯೇಂದ್ರ, ಪ್ರೀತಂಗೌಡ ಒಂದು ಗಂಟೆಗಳ ಕಾಲ ಬಂದು ಮಾತನಾಡಿ ಅವರ ಭಾವನೆಯನ್ನು ಹೇಳಿ ಪಕ್ಷಕ್ಕೆ ಸೇರ್ಪಡೆಯಾಗಬೇಕು ಎಂದು ಕೇಳಿದರು. ನಾಳೆ ಬೆಂಬಲಿಗರು ಬರುತ್ತಿದ್ದಾರೆ. ಅವರ ಭಾವನೆಯನ್ನು ಕೇಳಬೇಕಾದ ಕರ್ತವ್ಯವಿದೆ. ನಾನು ಕಾರ್ಯಕರ್ತರ ಭಾವನೆ ಕೇಳಿ ಮಂಡ್ಯದಲ್ಲಿ ನಿಲುವನ್ನು ತಿಳಿಸುತ್ತೇನೆ ಎಂದರು.

    ಬಿಜೆಪಿಯನ್ನು ಬೆಂಬಲಿಸಬೇಕು ಎನ್ನುವುದು ಒಂದು ಕಡೆ. ಬೆಂಬಲಿಗರು ಏನು ಹೇಳುತ್ತಾರೆ ಎನ್ನುವುದನ್ನು ಕೇಳಬೇಕು. ಮಂಡ್ಯಗೆ (Mandya) ಹೋಗಿ ಅವರ ಮುಂದೆಯೇ ನಿಲುವನ್ನು ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಕೋಲಾರದಲ್ಲಿ ನಾನು ಹೇಳಿದ ಅಭ್ಯರ್ಥಿಗೆ ಟಿಕೆಟ್ ಕೊಟ್ಟರೆ ಗೆಲ್ಲಿಸುತ್ತೇನೆ: ಸಚಿವ ಮುನಿಯಪ್ಪ

     

    ಸುಲಭವಾಗಿ ಗೆಲ್ಲುವ ಕ್ಷೇತ್ರದ ಆಫರ್ ಇತ್ತು. ಬೇರೆ ಪಕ್ಷದಿಂದಲೂ ಆಫರ್ ಇತ್ತು. ಆದರೆ ನಾನು ಮಂಡ್ಯ ಬಿಟ್ಟರೇ ಮತ್ತೆಲ್ಲೂ ಹೋಗುತ್ತಿಲ್ಲ. ನನ್ನ ಅಸ್ತಿತ್ವ ಅಂದ್ರೆ ಮಂಡ್ಯ. ಅದನ್ನು ಕಳೆದುಕೊಳ್ಳಲು ಇಷ್ಟವಿಲ್ಲ. ಕುಮಾರಸ್ವಾಮಿ ಅವರಿಗೆ ಟಿಕೆಟ್‌ ನೀಡಿದ್ದಕ್ಕೆ ಮಾತನಾಡುವುದಿಲ್ಲ ಎಂದು ತಿಳಿಸಿದರು.

    ಭೇಟಿ ವೇಳೆ ಏನಾದ್ರೂ ಆಫರ್‌ ನೀಡಿದ್ರಾ ಎಂಬ ಪ್ರಶ್ನೆಗೆ, ಬೇರೆ ಏನು ಅಫರ್ ಕೊಟ್ಟಿಲ್ಲ. ಆ ರೀತಿ ಕೇಳಿ ಪಡೆಯುವ ಅಭ್ಯಾಸ ಇಲ್ಲ. ಇದ್ದಿದ್ದರೆ ನಾವು ಮುಂದೆ ಇರುತ್ತಿರಲಿಲ್ಲ ಎಂದು ಸುಮಲತಾ ಹೇಳಿದರು.

  • ನನಗೆ ರಾಜಕೀಯ ಅನಿವಾರ್ಯ ಅಲ್ಲ ಆಕಸ್ಮಿಕ: ಸುಮಲತಾ

    ನನಗೆ ರಾಜಕೀಯ ಅನಿವಾರ್ಯ ಅಲ್ಲ ಆಕಸ್ಮಿಕ: ಸುಮಲತಾ

    ಮಂಡ್ಯ: ನನಗೆ ರಾಜಕೀಯ ಅನಿವಾರ್ಯ ಅಲ್ಲ, ಆಕಸ್ಮಿಕ ಎಂದು ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಹೇಳಿದರು.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನಗೆ ಸ್ವಾರ್ಥ ಇದ್ದಿದ್ರೆ, ಮಗನ ಭವಿಷ್ಯ ಬೇಕು ಎಂದಿದ್ರೆ ಏನು ಬೇಕಾದ್ರು ಮಾಡಬಹುದಿತ್ತು. ಎಂಎಲ್‍ಸಿ ಪೋಸ್ಟ್ ಬಂದಿತ್ತು. ಬೆಂಗಳೂರಿನಲ್ಲಿ ಒಂದು ಕ್ಷೇತ್ರದಲ್ಲಿ ನಿಲ್ಲಿ ಎಂದಿದ್ರು. ಮಂಡ್ಯಗೆ ಬಂದು ಸರ್ಕಾರದ ವಿರುದ್ಧ ಸಿಎಂ ಮಗನ ಎದುರು ನಿಂತೆ. ಸ್ವಾರ್ಥ ಇದ್ದಿದ್ರೆ ನಾನು ಮಂಡ್ಯದಲ್ಲಿ ನಿಲ್ಲಬೇಕಿರಲಿಲ್ಲ. ನನ್ನ ಬೆಂಬಲಿಗರ ಭವಿಷ್ಯವನ್ನು ಏನು ನಾನು ನೋಡಿಲ್ಲ ಎಂದರು.

    ಮಂಡ್ಯ ಜನ ಅಂಬರೀಶ್ (Ambareesh) ಅವರಿಗೆ ಪ್ರೀತಿ ಕೊಟ್ಟರು. ಅವರು ಹೋಗುವಾಗ ಮಹಾರಾಜನ ರೀತಿ ಕಳಿಸಿದ್ರಿ. ಈ ಪ್ರೀತಿಗಾಗಿ ನಾನು ಚುನಾವಣೆಗೆ ನಿಂತೆ. ಮಂಡ್ಯ ಜನ ನನ್ನ ಪರ ನಿಂತರು. ಚಿತ್ರರಂಗ, ಅಂಬರೀಶ್ ಅಭಿಮಾನಿಗಳು, ನನ್ನ ಜನ ಬೆಂಬಲಕ್ಕೆ ನಿಂತರು. ನಾನು ಯಾರು ಅಂಬರೀಶ್ ಯಾರು ಎಂದು ಇಂಡಿಯಾಗೆ ಹಲವು ವರ್ಷದಿಂದ ಗೊತ್ತು. ಈಗ ಅಲ್ಲ ನಾವು ಸಿನಿಮಾದಲ್ಲಿ ಇದ್ದಾಗಿನಿಂದ ನಮ್ಮ ಬ್ಯಾನರ್ ಹಾಕಿದ್ದಾರೆ ಎಂದು ಹೇಳಿದರು.

    ಜನ ದುಡ್ಡು ಕೊಟ್ಟು ನಮ್ಮ ಸಿನಿಮಾ ನೋಡಿದ್ದಾರೆ. ಈಗ ಬೇರೆ ದಾರಿ ತುಳಿಯುವ ಅವಶ್ಯಕತೆ ಇಲ್ಲ. ಯಾವುದು ಅನಿವಾರ್ಯ ಅಲ್ಲ ಯಾವುದು ಶಾಶ್ವತ ಅಲ್ಲ. ನಾನು ರಾಜಕೀಯ ಪ್ರವೇಶ ಮಾಡಿ 4 ವರ್ಷ ಕಳೆದಿದೆ. ನನಗೆ ರಾಜಕೀಯ ಅನಿವಾರ್ಯ ಅಲ್ಲ ಆಕಸ್ಮಿಕ. ನನ್ನ ಸ್ವಾರ್ಥಕ್ಕೆ ರಾಜಕೀಯ ಪ್ರವೇಶ ಆಗಲಿಲ್ಲ. ಜನರ ಒತ್ತಾಯಕ್ಕೆ ಮಣಿದು ರಾಜಕೀಯಕ್ಕೆ ಬರಬೇಕಾಯ್ತು ಎಂದರು.

    ನನ್ನ, ಮಗನ ಭವಿಷ್ಯ ಯೋಚಿಸಿದ್ದರೆ ನನ್ನ ಹೆಜ್ಜೆ ಬೇರೆ ಆಗಿರುತ್ತಿತ್ತು. ಅಂಬರೀಶ್ ಅವರಿಗಿದ್ದ ಪ್ರಭಾವ ಬಳಸಿ ನಾನು ಅಧಿಕಾರ ಪಡೆಯಬಹುದಿತ್ತು. ಆದರೆ ನಾನು ಸ್ವಾರ್ಥಕ್ಕೆ ರಾಜಕಾರಣ ಮಾಡಿಲ್ಲ. ಸರ್ಕಾರದ ಎದುರಿಸಿ ನಾನು ಚುನಾವಣೆಗೆ ನಿಂತೆ. ನನಗೆ ಮುಂದೆ ಏನಾಗುತ್ತೆ ಅನ್ನೋ ಯೋಚನೆ ಇರಲಿಲ್ಲ. ಜನರಿಗಾಗಿ ರಾಜಕೀಯಕ್ಕೆ ಬಂದೆ. ಜನರು ತೋರಿದ ಅಭಿಮಾನ ಪ್ರೀತಿಗೆ ಬೆಲೆ ಕೊಡದಿದ್ದರೆ ಮನುಷ್ಯತ್ವ ಇಲ್ಲದಂತಾಗುತ್ತಿತ್ತು ಎಂದು ತಿಳಿಸಿದರು.

    ಅಂಬರೀಶ್ ಅಭಿಮಾನಿಗಳು, ಮಂಡ್ಯ ಜನರಿಗಾಗಿ ಹೋರಾಟ ಮಾಡಿದೆ. ನನಗೆ ಇದ್ಯಾವುದು ಬೇಡ ಎಂದಿದ್ದರೆ ನನಗೆ ಯಾವುದೇ ತೊಂದರೆ ಆಗುತ್ತಿರಲಿಲ್ಲ. ನಮ್ಮ ಬ್ಯಾನರ್, ಹೋರ್ಡಿಂಗ್ ಚಿಕ್ಕ ವಯಸ್ಸಿನಿಂದ ಹಾಕುತ್ತಿದ್ದಾರೆ. ನಾನ್ಯಾರು ಅಂಬರೀಶ್ ಯಾರು 40 ವರ್ಷದಿಂದ ಗೊತ್ತಿದೆ. ನನಗೆ ಯಾವದನ್ನು ಹುಡುಕಿಕೊಂಡು ಹೋಗುವ ಅವಶ್ಯಕತೆ ಇಲ್ಲ. ಜನ ನನ್ನ ಮೇಲೆ ನಂಬಿಕೆ ಇಟ್ಟಿದ್ರು. ಅಂಬರೀಶ್ ಅಣ್ಣನ ದಶಕಗಳ ಜನಸೇವೆ ಮುಂದುವರೆಸಬೇಕು ಎಂದು ನನಗೆ ಜನ ಬೆಂಬಲಿಸಿದ್ರು. ಚುನಾವಣೆಯಲ್ಲಿ ಮಾತ್ರ ನನಗೆ ಟಾರ್ಗೆಟ್ ಮಾಡಿದ್ರು ಎಂದು ಹೇಳಿದರು.