Tag: Suman Kumar

  • ನವೀನ್-ದಾನಿಶ್ ಕಾಂಬಿನೇಷನ್ ಚಿತ್ರ ಘೋಷಿಸಿದ ಕೆ.ಆರ್.ಜಿ ಸ್ಟುಡಿಯೋಸ್

    ನವೀನ್-ದಾನಿಶ್ ಕಾಂಬಿನೇಷನ್ ಚಿತ್ರ ಘೋಷಿಸಿದ ಕೆ.ಆರ್.ಜಿ ಸ್ಟುಡಿಯೋಸ್

    ಮೊನ್ನೆಯಷ್ಟೇ ಇಂದು ಹೊಸ ಸುದ್ದಿಯನ್ನು ಕೊಡುವುದಾಗಿ ಕೆಆರ್.ಜಿ ಸ್ಟುಡಿಯೋಸ್ (K.R.G ) ಘೋಷಣೆ ಮಾಡಿತ್ತು. ಅದು ಹೇಳಿಕೊಂಡಂತೆ ಇಂದು ಹೊಸ ಚಿತ್ರವೊಂದನ್ನು ಘೋಷಣೆ ಮಾಡಿದೆ. ಈ ಸಿನಿಮಾದಲ್ಲಿ ವಿಶೇಷ ತಾರಾಗಣವೇ ಇರಲಿದೆ. ಚಿತ್ರಕ್ಕೆ ಕಿರಿಕ್ ‘ಇಟಿ’1  (Kirik ET 1) ಎಂದು ಹೆಸರಿಡಲಾಗಿದೆ.

    ಕಿರಿಕ್ ‘et’ 11 ಚಿತ್ರ ಒಂದು ನಗೆ ಹಬ್ಬವಾಗಿ ತಯಾರಾಗಲಿದೆ. ಒಂದಷ್ಟು ಯುವಕರು ಯಾವುದೇ ರೀತಿಯಲ್ಲೂ ಅದೃಷ್ಟ ದೇವತೆ ಒಲಿಯದೆ ಇದ್ದಾಗ ಇಡೀ ದೇಶ ಅತ್ಯಂತ ಹುಮ್ಮಸ್ಸಿನಿಂದ ಆಡುವ, ನೋಡುವ ಕ್ರಿಕೆಟ್ ನಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಮುಂದಾಗುತ್ತಾರೆ. ಮುಂದೆ ಅವರು ಭವಿಷ್ಯ ಏನಾಗಲಿದೆ ಎನ್ನುವುದೇ ಸಿನಿಮಾವಂತೆ.

    ಗುಳ್ಟು ಖ್ಯಾತಿಯ ನವೀನ್  ಶಂಕರ್ (Naveen Shankar) ಮತ್ತು ದಾನಿಶ್ ಸೇಠ್ (Danish Sait) ಕಾಂಬಿನೇಷನ್ ನಲ್ಲಿ ಈ ಸಿನಿಮಾ ಮೂಡಿ ಬರಲಿದೆ. ಈ ಚಿತ್ರಕ್ಕೆ ಮನೋಜ್ ಕುಮಾರ್ ಕಾಲಾವನನ್ ಕಥೆ ಹೆಣೆದಿದ್ದರೆ, ಸುಮನ್ ಕುಮಾರ್ (Suman Kumar) ನಿರ್ದೇಶಿಸಲಿದ್ದಾರೆ. ಇದನ್ನೂ ಓದಿ:ಕೆಂಪು ಬಣ್ಣದ ಸೀರೆಯಲ್ಲಿ ಗ್ಲ್ಯಾಮರಸ್ ಆಗಿ ಮಿಂಚಿದ ಮಾನ್ವಿತಾ

    ಸುಮನ್ ಕುಮಾರ್ ಅವರು ಈ ಹಿಂದೆ ರಘುತಾತ ಚಿತ್ರವನ್ನು ನಿರ್ದೇಶಿಸಿದ್ದು , ವೆಬ್ ಸೀರಿಸ್ ಲೋಕದಲ್ಲಿ ಬಹಳ ಜನಪ್ರಿಯ ಆಗಿದ್ದಾರೆ. ಅಲ್ಲದೇ The Family Man ಮತ್ತು Farzi ಯ ಕಥೆಯನ್ನು ಹೆಣೆದಿದ್ದಾರೆ. ಈ ಚಿತ್ರಕ್ಕೆ ಸಂಗೀತವನ್ನು ಬಡವ ರಾಸ್ಕಲ್ ಚಿತ್ರಕ್ಕೆ ಸಂಗೀತ ನೀಡಿದ್ದ ವಾಸುಕಿ ವೈಭವ್ ಅವರು ನೀಡಲಿದ್ದಾರೆ.

     

    ಈ ಚಿತ್ರವನ್ನು ಕಾರ್ತಿಕ್, ವಿಜಯ್ ಸುಬ್ರಮಣ್ಯಂ ಮತ್ತು ಯೋಗಿ ಜಿ ರಾಜ್ ಅವರು ನಿರ್ಮಿಸಲಿದ್ದಾರೆ. ಕೆ ಆರ್ ಜಿ ಸ್ಟುಡಿಯೋಸಿನ 6 ವರ್ಷಗಳ ಚಿತ್ರರಂಗದ ಪಯಣದಲ್ಲಿ ಇದು 4 ನೇ ಚಿತ್ರ ನಿರ್ಮಾಣವಾಗಲಿದೆ. ಕಿರಿಕ್ et 11 ಚಿತ್ರದ ಚಿತ್ರೀಕರಣ ಈ ವರ್ಷ ನಡೆಯಲಿರುವ ಕ್ರಿಕೆಟ್ ವಿಶ್ವಕಪ್ ಸಮಯದಲ್ಲೇ ಶುರುವಾಗಲಿದೆಯಂತೆ.

  • ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನ ಮೊದಲ ತಮಿಳು ಸಿನಿಮಾ ರೆಡಿ

    ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನ ಮೊದಲ ತಮಿಳು ಸಿನಿಮಾ ರೆಡಿ

    ನ್ನಡದ ಹೆಮ್ಮೆಯ ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್  (Hombale Films) ಹಲವು ಭಾಷೆಗಳಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದೆ. ಈ ಹಿಂದೆ ಕೇವಲ ಕನ್ನಡದಲ್ಲಿ ಸಿನಿಮಾ ಮಾಡಿ, ಬೇರೆ ಭಾಷೆಗಳಿಗೆ ಡಬ್ ಮಾಡಿ ಚಿತ್ರಗಳನ್ನು ರಿಲೀಸ್ ಮಾಡುತ್ತಿತ್ತು. ಆದರೆ, ಇದೀಗ ಆಯಾ ಭಾಷೆಯಲ್ಲೇ ಸಿನಿಮಾ ಮಾಡುವ ಮೂಲಕ ಹೊಸ ಹೆಜ್ಜೆ ಇಟ್ಟಿದೆ.

    ಕನ್ನಡದಲ್ಲಿ ಮೂರ್ನಾಲ್ಕು ಸಿನಿಮಾಗಳನ್ನು ತಯಾರಿಸುತ್ತಿದ್ದರೆ, ತಮಿಳಿನಲ್ಲಿ (Tamil) ಒಂದು, ತೆಲುಗಿನಲ್ಲಿ ಒಂದು ಹಾಗೂ ಮಲಯಾಳಂ ಭಾಷೆಯಲ್ಲಿ ಒಂದು ಚಿತ್ರವನ್ನು ನಿರ್ಮಾಣ ಮಾಡುತ್ತಿತ್ತು. ಅಲ್ಲದೇ, ಬಾಲಿವುಡ್ ನಲ್ಲೂ ಸಿನಿಮಾ ಮಾಡುವ ಯೋಜನೆಯನ್ನೂ ಅದು ಸಿದ್ಧ ಪಡಿಸಿದೆ. ಮೊನ್ನೆಯಷ್ಟೇ ಮಲಯಾಳಂ ಸಿನಿಮಾ ಮುಗಿಸಿರುವುದಾಗಿ ಪವನ್ ಕುಮಾರ್ ಹೇಳಿಕೊಂಡಿದ್ದರು. ಇದೀಗ ತಮಿಳಿನಲ್ಲೂ ಶೂಟಿಂಗ್ ಮುಗಿಸಲಾಗಿದೆ.

    ತೆಲುಗಿನಲ್ಲಿ ಸಲಾರ್ ಸಿನಿಮಾ ಒಂದೂವರೆ ವರ್ಷದಿಂದ ಚಿತ್ರೀಕರಣ ನಡೆಯುತ್ತಿದ್ದರೂ, ತಮಿಳಿನಲ್ಲಿ ಮಾತ್ರ ವೇಗದಿಂದ ಚಿತ್ರೀಕರಣ ಮುಗಿಸಿದ್ದಾರೆ  ಸುಮನ್ ಕುಮಾರ್ (Suman Kumar) . ರಘುತಾತ (Raghutatha) ಹೆಸರಿನಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ (Keerthy Suresh) ಈ ಸಿನಿಮಾದ ನಾಯಕಿ. ಇದು ಮಹಿಳಾ ಪ್ರಧಾನ ಸಿನಿಮಾ ಎನ್ನುವುದು ವಿಶೇಷ. ಇದನ್ನೂ ಓದಿ:ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಹೊಯ್ಸಳ’ ಬಲಿ- ಫ್ಯಾನ್ಸ್‌ಗೆ ಸಿಕ್ತು ಸಿಹಿಸುದ್ದಿ

    ವೆಬ್ ಸೀರಿಸ್ ಮೂಲಕ ಗುರುತಿಸಿಕೊಂಡಿದ್ದ ನಿರ್ದೇಶಕರು, ಇದೇ ಮೊದಲ ಬಾರಿಗೆ ಸಿನಿಮಾವೊಂದಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಗಂಭೀರ ಸಮಸ್ಯೆಯೊಂದರ ಸುತ್ತ ಹೆಣೆದಿರುವ ಕಥೆಯನ್ನು ಹಾಸ್ಯಮಯವಾಗಿ ಹೇಳುವ ಪ್ರಯತ್ನ ಮಾಡಿದ್ದಾರಂತೆ ನಿರ್ದೇಶಕರು. ಈ ಸಿನಿಮಾದ ಶೂಟಿಂಗ್ ಮುಗಿಸಿ, ಚಿತ್ರತಂಡ ಕೇಕ್ ಕತ್ತರಿಸಿ ಸಂಭ್ರಮಿಸಿದೆ.