Tag: Suman Ranganath

  • ‘ಮೈನಾ’ ನಾಗಶೇಖರ್ ಹೇಳ್ತಿದ್ದಾರೆ ಮಳೆಯಲ್ಲಿ ನಡೆಯುವ ಪ್ರೇಮಕಥೆ

    ‘ಮೈನಾ’ ನಾಗಶೇಖರ್ ಹೇಳ್ತಿದ್ದಾರೆ ಮಳೆಯಲ್ಲಿ ನಡೆಯುವ ಪ್ರೇಮಕಥೆ

    ಸಂಜು ವೆಡ್ಸ್ ಗೀತಾ, ಮೈನಾ, ಅಮರ್ ನಂಥಾ ಅದ್ಭುತ ದೃಶ್ಯಕಾವ್ಯಗಳನ್ನು ಕನ್ನಡ ಬೆಳ್ಳಿ ತೆರೆಗೆ ಕೊಡುಗೆಯಾಗಿ ನೀಡಿದ ನಾಗಶೇಖರ್ ಈಗೇನು ಮಾಡ್ತಿದ್ದಾರೆ ಎನ್ನುವ ಪ್ರಶ್ನೆಗೆ ಅವರೇ ಮಾಧ್ಯಮದ ಮುಂದೆಬಂದು ಉತ್ತರ ನೀಡಿದ್ದಾರೆ. ನಾಗಶೇಖರ್ ನಾಯಕನಾಗಿ ನಟಿಸಿ, ನಿರ್ದೇಶಿಸುತ್ತಿರುವ “ನವೆಂಬರ್ ಮಳೆಯಲ್ ನಾನುಂ ಅವಳುಂ” ಚಿತ್ರದ ಶೂಟಿಂಗ್ ನಡೆಯುತ್ತಿದ್ದ ಬೆಂಗಳೂರಿನ ಮಿನರ್ವ ಮಿಲ್ ಆವರಣದಲ್ಲಿ ತಮ್ಮ ಮುಂಬರುತ್ತಿರುವ ಪ್ರಾಜೆಕ್ಟ್‌ ಗಳ ಬಗ್ಗೆ ವಿವರಿಸಿದರು. ಮಳೆಯ ಸೀನೊಂದರ ಚಿತ್ರೀಕರಣ ನಡೆಸಿದ ನಂತರ ನಡೆದ ಅಲ್ಲೇ ನಡೆದ ಪತ್ರಿಕಾಗೋಷ್ಠಿಯಲ್ಲಿ ತಮ್ಮ ತಂಡದ ಜೊತೆ ಸಂಪೂರ್ಣ ಮಾಹಿತಿ ನೀಡಿದರು.

    ತಮಿಳು ಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರ ಕನ್ನಡ ಹಾಗೂ ತೆಲುಗಿಗೆ ಡಬ್ ಆಗಲಿದೆ. ಈ ಸಂದರ್ಭದಲ್ಲಿ ಚಿತ್ರದ ನಿರ್ಮಾಪಕ ಸೆನ್ಸಾರ್ ಶಿವು, ಫೋಲೀಸ್ ಕಮೀಷನ್ ಪಾತ್ರ ಮಾಡುತ್ತಿರುವ ಸುಮನ್ ರಂಗನಾಥ್, ಏಳು ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ ಡೆಲ್ಲಿ ಗಣೇಶ್, ಅರ್ಜುನ್, ರಾಜಶೇಖರ್, ರಾಜಶೇಖರ ರೆಡ್ಡಿ, ಸಹನಿರ್ಮಾಪಕರಾದ ನಾಗೇಂದ್ರ ಶೆಟ್ಟಿ, ಛಾಯಾಗ್ರಾಹಕ ಸತ್ಯ ಹೆಗ್ಡೆ ಮುಂತಾದವರು ಹಾಜರಿದ್ದು ಮಾತನಾಡಿದರು. ಇದನ್ನೂ ಓದಿ:ಶೂಟಿಂಗ್ ವೇಳೆ ಅವಘಡ: ಆಸ್ಪತ್ರೆ ಸೇರಿದ ಬಾಹುಬಲಿ ಬಿಜ್ಜಳದೇವ ಪಾತ್ರಧಾರಿ ನಾಸರ್

    ಇದು ಮಳೆಗಾಲದಲ್ಲಿ ನಡೆಯೋ ಪ್ರೇಮಕಥೆ. ತಮಿಳುನಾಡಲ್ಲಿ ನವೆಂಬರ್‌ ನಲ್ಲಿ ಭಾರೀಮಳೆ, ಹಾಗಾಗಿ ಈ ಚಿತ್ರಕ್ಕೆ ನವೆಂಬರ್ ಮಳೆಯಲ್ ನಾನುಂ ಅವಳುಂ ಶೀರ್ಷಿಕೆ ಇಟ್ಟಿದ್ದೇನೆ. ಮೊದಲು ಈ ಕಥೆಯನ್ನು ಬೇರೆ ಹೀರೋಗಾಗಿ ಮಾಡಿದ್ದೆ. ಇಲ್ಲಿ ನಾಯಕನಿಗೆ ಸೀಳುತುಟಿಯಿರುತ್ತೆ. ಆತನಿಗೆ ತಾನೊಬ್ಬ ದೊಡ್ಡ ಸಿಂಗರ್ ಆಗಬೇಕೆಂಬ ಕನಸು. ಆತನ ಜೀವನದಲ್ಲೊಂದು ಲವ್ ಸ್ಟೋರಿ. ಇದು ಚಿತ್ರದ ಕಂಟೆಂಟ್. ಆ ನಾಯಕ ಈ ಕಥೆ ಮಾಡಿದರೆ ಸೆನ್ಸಾರ್ ನಿಂದ ಪ್ರಾಬ್ಲಂ ಆಗಬಹುದು ಎಂದಾಗ ನಾನು ಸ್ನೇಹಿತ ಸೆನ್ಸಾರ್ ಶಿವು ಬಳಿ ಚರ್ಚಿಸಿದೆ. ಈ ಕಥೆ ಕೇಳಿದ ಶಿವು ಇದರಲ್ಲಿ ನೀನೇ ಹೀರೋ ಆದ್ರೆ ಚೆನ್ನಾಗಿರುತ್ತೆ ಎಂದರು.  ನನ್ನ ಮೇಲೆ ಯಾರಪ್ಪ ಬಂಡವಾಳ ಹಾಕ್ತಾರೆ ಎಂದಾಗ, ಬೇರೆ ಯಾಕೆ ನಾನೇ ಹಾಕ್ತೇನೆ ಎಂದು ಈಗವರೇ ಪ್ರೊಡ್ಯೂಸ್ ಮಾಡ್ತಿದ್ದಾರೆ. ನಾಗೇಂದ್ರ ಶೆಟ್ಟರೂ ಜೊತೆಗೆ ಕೈಜೋಡಿಸಿದ್ದಾರೆ. ತಮಿಳಲ್ಲಿ ಈ ಥರದ  ಕಥೆಯನ್ನು ಹೆಚ್ಚು ಇಷ್ಟಪಡುತ್ತಾರೆ ಎಂಬ ಕಾರಣಕ್ಕೆ ಮೊದಲು  ತಮಿಳಲ್ಲಿ  ಮಾಡುತ್ತಿದ್ದೇನೆ. ಅಲ್ಲದೆ  ನವೆಂಬರ್ 11ಕ್ಕೇ ಚಿತ್ರವನ್ನು ರಿಲೀಸ್ ಮಾಡುತ್ತಿದ್ದೇವೆ. ಮಲಯಾಳಂನ ಅನು ಸಿತಾರಾ ನಾಯಕಿ ಪಾತ್ರ ಮಾಡಿದ್ದು, ಏಳು ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಡೆಲ್ಲಿ ಗಣೇಶ್, ದತ್ತಣ್ಣ, ರಂಗಾಯಣ ರಘು ಕೂಡ ಅಭಿನಯಿಸಿದ್ದಾರೆ. ಐಡಿಯಲ್ ಹೋಮ್ಸ್‌ ನ ರಾಜಶೇಖರ್ ಅವರು ಸಿಎಂ ಪಾತ್ರ ಮಾಡಿದ್ದಾರೆ, ಶಬ್ಬೀರ್ ಈ ಚಿತ್ರಕ್ಕೆ ಮ್ಯೂಸಿಕ್ ಮಾಡಿದ್ದು, ಮದನ್ ಕಾರ್ಕಿ(ವೈರಮುತ್ತು ಮಗ) ಸಾಹಿತ್ಯ ಬರೆದಿದ್ದಾರೆ. ವೇಣು ವೇಲ್ ಮುರುಗನ್ ಕೋಪ್ರೊಡ್ಯೂಸರ್ ಆಗಿದ್ದಾರೆ. ಇದರ ಜೊತೆಗೆ ಲವ್ ಮಾಕ್ಟೇಲ್ ನ ತೆಲುಗು ವರ್ಷನ್ ಕೂಡ ರೆಡಿಯಾಗಿದೆ. ಅದರಲ್ಲಿ ಸತ್ಯದೇವ್ ಹೀರೋ ಪಾತ್ರ ಮಾಡಿದ್ದು,  ತಮನ್ನಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಭಾವನಾರವಿ ಪ್ರೊಡ್ಯೂಸ್‌  ಮಾಡಿದ್ದಾರೆ ಎಂದು ವಿವರಿಸಿದರು. ಎ2 ಮ್ಯೂಸಿಕ್‌ ನವರು ಹಾಡುಕೇಳಿ ಅರ್ಧಕೋಟಗೆ ಆಡಿಯೋ ರೈಟ್ಸ್ ತಗೊಂಡಿದ್ದಾರೆ. 3 ಕೋಟಿಗೆ ಹಿಂದಿ ರೈಟ್ಸ್ ಮಾರಾಟವಾಗಿದೆ ಎಂಬ ಮಾಹಿತಿಯನ್ನೂ ನೀಡಿದರು.

    ನಟಿ ಸುಮನ್ ರಂಗನಾಥ್ ಮಾತನಾಡಿ ನಾಗಶೇಖರ್ ಕಾಲ್ ಮಾಡಿ ಈ ಪೋಲಿಸ್ ಕಮೀಷನರ್ ಪಾತ್ರದ ಬಗ್ಗೆ ಹೇಳಿದರು. ಚಿಕ್ಕದಾದರೂ ಪ್ರಮುಖ ಪಾತ್ರ,  ಯೂನಿಫಾರ್ಮ್ ಹಾಕಿದಕೂಡಲೇ ಅದೇನೋ ಪವರ್ ಬಂದುಬಿಡುತ್ತೆ ಎಂದು ಹೇಳಿದರು. ಹಿರಿಯ ಕಲಾವಿದ ಡೆಲ್ಲಿ ಗಣೇಶ್ ಮಾತನಾಡಿ ಸೌತ್ ಇಂಡಿಯಾ ಸಿನಿಮಾಗಳು ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುತ್ತಿವೆ. 47ವರ್ಷಗಳಿಂದ ಬಣ್ಣ ಹಚ್ಚುತ್ತಿದ್ದೇನೆ. ಇದರಲ್ಲೊಂದು ಸಾಫ್ಟ್ ನೇಚರ್ ವ್ಯಕ್ತಿಯಪಾತ್ರ ಮಾಡಿದ್ದೇನೆ ಎಂದು ಹೇಳಿದರು. ನಟ ಅರ್ಜುನ್ ಮಾತನಾಡಿ ನಾಗಶೇಖರ್ ಮುಹೂರ್ತಕ್ಕೆ ಕರೆದಿದ್ದರು. ಚಿತ್ರದಲ್ಲಿ ಒಬ್ಬ  ಇನ್ವೆಸ್ಟಿಗೇಶನ್ ಆಫೀಸರ್  ಪಾತ್ರ ಮಾಡಿದ್ದೇನೆ ಎಂದರು. ನಿರ್ಮಾಪಕರಾದ ಶಿವು, ನಾಗೇಂದ್ರ ಶೆಟ್ಟಿ, ಅಲ್ಲದೆ ತೆಲುಗು ನಿರ್ಮಾಪಕರೂ ಸಹ ತಮ್ಮ ಅಭಿಪ್ರಾಯ ಹಂಚಿಕೊಂಡರು.

    Live Tv
    [brid partner=56869869 player=32851 video=960834 autoplay=true]

  • ಬಾಗ್ಲು ತೆಗಿ ಮೇರಿ ಜಾನ್ ಹಾಡಿಗೆ ಗಲ್ಫ್ ಕನ್ನಡಿಗರ ಬಹುಪರಾಕ್: ಹಾಡೂ ಬೊಂಬಾಟ್ ಹಿಟ್

    ಬಾಗ್ಲು ತೆಗಿ ಮೇರಿ ಜಾನ್ ಹಾಡಿಗೆ ಗಲ್ಫ್ ಕನ್ನಡಿಗರ ಬಹುಪರಾಕ್: ಹಾಡೂ ಬೊಂಬಾಟ್ ಹಿಟ್

    ರೀಲ್ಸ್ ಮತ್ತು ಸೋಷಿಯಲ್ ಮೀಡಿಯಾಗಳಲ್ಲಿ ‘ಬಾಗ್ಲು ತೆಗಿ ಮೇರಿ ಜಾನ್’ ಹಾಡಿನದ್ದೇ ಸದ್ದು. ನವರಸ ನಾಯಕ ಜಗ್ಗೇಶ್ ನಟನೆಯ ತೋತಾಪುರಿ ಚಿತ್ರದ ಈ ಹಾಡಿಗೆ ದೇಶ-ವಿದೇಶದಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ. ‘ಬಾಗ್ಲು ತೆಗಿ ಮೇರಿ ಜಾನ್’ ಹಾಡು ಬಿಡುಗಡೆಯಾದಾಗಿನಿಂದಲೂ ಸಖತ್ ಸದ್ದು ಮಾಡುತ್ತಿದೆ. ದೇಶ ಮಾತ್ರವಲ್ಲದೇ ವಿದೇಶದಿಂದಲೂ ಈ ಹಾಡನ್ನು ಮೆಚ್ಚಿಕೊಂಡಿದ್ದು ‘ತೋತಾಪುರಿ’ ಹೆಚ್ಚುಗಾರಿಕೆ. ಇದನ್ನೂ ಓದಿ : ಹಾಲಿವುಡ್ ಗೆ ಹಾರಿದ ಸುದೀಪ್ ನಟನೆಯ ವಿಕ್ರಾಂತ್ ರೋಣ

    `ಬಾಗ್ಲು ತೆಗಿ ಮೇರಿ ಜಾನ್‌’ ಹಾಡು 100 ಮಿಲಿಯನ್‌ಗೂ ಅಧಿಕ ಹಿಟ್ಸ್ ದಾಖಲಿಸಿ ಮುನ್ನುಗ್ಗುತ್ತಿದೆ.  ಈ ಹಾಡಿಗೆ ಪ್ರಸ್ತುತ ಚಾನಲ್‌ವೊಂದರಲ್ಲೇ 15 ಮಿಲಿಯನ್‌ಗೂ ಅಧಿಕ ಹಿಟ್ಸ್ ದಾಖಲಾಗಿದೆ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ 85 ಮಿಲಿಯನ್‌ಗೂ ಅಧಿಕ ಹಿಟ್ಸ್ ದಾಖಲಾಗಿರುವುದು `ತೋತಾಪುರಿ’ ಹೆಚ್ಚುಗಾರಿಕೆ. ಇತ್ತೀಚೆಗೆ ಬಂದ ಹಾಡುಗಳ ಪೈಕಿ ದೊಡ್ಡ ಮಟ್ಟದಲ್ಲಿ ಜನರನ್ನು ಸೆಳೆದ ಹಾಡು ಇದಾಗಿದ್ದು, ದಿನದಿಂದ ದಿನಕ್ಕೆ ಕ್ರೇಜ್‌ ಹೆಚ್ಚಿಸುತ್ತಲೇ ಇದೆ. ಯೂ ಟ್ಯೂಬ್‌ ರೀಲ್ಸ್, ಶಾರ್ಟ್ಸ್ ಹಾಗೂ ಸ್ಟೋರಿಸ್‌ಗಳಲ್ಲಿ ಈ ಹಾಡಿನ ತುಣುಕಿಗೆ ಡಾನ್ಸ್ ಮಾಡಿ ಅಪ್ಲೋಡ್‌ ಮಾಡಿರುವುದು ವಿಶೇಷ. ವಿದೇಶದಲ್ಲಿ ನೆಲೆಸಿರುವ ಕನ್ನಡಿಗರಿಗೂ ಈ ಹಾಡು ಇಷ್ಟವಾಗಿರುವುದು `ತೋತಾಪುರಿ’ ಹಾಡಿನ ವಿಶೇಷ.

    ತೋತಾಪುರಿ ಚಿತ್ರದ ಹಾಡು, ಮೇಕಿಂಗ್ ಹಾಗೂ ತಂಡದ ಬಗ್ಗೆ ಸಾಕಷ್ಟು ವಿಷಯ ಹಂಚಿಕೊಂಡಿರುವ ಜಗ್ಗೇಶ್, ಈ ಸಿನಿಮಾಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡರು. ಇನ್ನು ‘ಬಾಗ್ಲು ತೆಗಿ ಮೇರಿ ಜಾನ್’ಗೆ ದುಬೈ ಕನ್ನಡಿಗರಿಂದ ಪ್ರಶಂಸೆಗಳ ಮಹಾಪೂರವೇ ಹರಿದುಬಂದಿದ್ದು ಈ ಕಾರ್ಯಕ್ರಮದ ವಿಶೇಷ. ಇದನ್ನೂ ಓದಿ : ಸ್ಸಾರಿ… ಥಿಯೇಟರ್ ಗೆ ಬರ್ತಿಲ್ಲ ತಮಿಳಿನ ಧನುಷ್ ನಟನೆಯ ಮಾರನ್ ಸಿನಿಮಾ

    ಇತ್ತೀಚೆಗಷ್ಟೇ ಅಮೆರಿಕಾ ನೆರೆಹೊರೆಯ ರಾಷ್ಟ್ರದ ಅನಿವಾಸಿ ಕನ್ನಡಿಗರೊಂದಿಗೆ ವರ್ಚುವಲ್ ಮಾತುಕತೆ ನಡೆಸಿದ್ದ ಜಗ್ಗೇಶ್, ಇದೀಗ ಗಲ್ಫ್ ಕನ್ನಡಿಗರೊಂದಿಗೂ ‘ತೋತಾಪುರಿ’ ಬಗ್ಗೆ ವಿಶೇಷವಾಗಿ ವಿಷಯ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:  ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಅಪ್ಡೇಟ್ : ಯಾವಾಗ, ಏನು ಅಂತ ನೋಡ್ಕೊಂಡ್ ಬಿಡಿ

    ಈಗಾಗಲೇ ಮಿಲಿಯನ್’ಗಟ್ಟಲೆ ಹಿಟ್ಸ್ ದಾಖಲಿಸಿರುವ ಈ ಚಿತ್ರದ ಹಾಡಿಗೆ ಎಲ್ಲರೂ ತಲೆದೂಗಿಸುತ್ತಿದ್ದಾರೆ. ‘ನೀರ್ ದೋಸೆ’ ಖ್ಯಾತಿಯ ವಿಜಯಪ್ರಸಾದ್ ನಿರ್ದೇಶಿಸಿರುವ ತೋತಾಪುರಿ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿದ್ದಾರೆ. ಮೋನಿಫ್ಲಿಕ್ಸ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಕೆ.ಎ.ಸುರೇಶ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಎರಡು ಭಾಗಗಳಲ್ಲಿ ತೋತಾಪುರಿ ತೆರೆಕಾಣಲಿರುವುದು ವಿಶೇಷ. ಇದನ್ನೂ ಓದಿ : ಖ್ಯಾತ ಗಾಯಕ ಮಿಕಾ ಸಿಂಗ್ ಸ್ವಯಂವರ : ನೀವೂ ಭಾಗಿಯಾಗಬಹುದು

    ಡಾಲಿ ಧನಂಜಯ್, ಸುಮನ್ ರಂಗನಾಥ್, ದತ್ತಣ್ಣ, ಅದಿತಿ ಪ್ರಭುದೇವ, ವೀಣಾ ಸುಂದರ್ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದ ತಾರಾಗಣದಲ್ಲಿದ್ದಾರೆ.

  • ಭಿನ್ನ-ವಿಭಿನ್ನತೆಯಿಂದ ಕೂಡಿದೆ ‘ತೋತಾಪುರಿ’

    ಭಿನ್ನ-ವಿಭಿನ್ನತೆಯಿಂದ ಕೂಡಿದೆ ‘ತೋತಾಪುರಿ’

    ಸೀಕ್ವೆನ್ಸ್ ಅನ್ನೋದು ಹಾಲಿವುಡ್, ಬಾಲಿವುಡ್ ಗಳಲ್ಲಿ ಹೆಚ್ಚಾಗಿತ್ತು. ಆದ್ರೆ ಇತ್ತೀಚೆಗೆ ಕನ್ನಡದಲ್ಲೂ ಸೀಕ್ವೆನ್ಸ್ ಹಾವಳಿ ಹೆಚ್ಚಾಗಿದೆ. ಅದೆಷ್ಟೋ ಸಿನಿಮಾಗಳಲ್ಲಿ ಕಥೆಯ ಗಡಸುತನ ಒಂದೇ ಭಾಗದಲ್ಲಿ ತೋರಿಸಲು ಆಗಲ್ಲ. ಹಾಗೇ ಒಂದೇ ಸಿನಿಮಾದಲ್ಲಿ ಇರುವಷ್ಟು ಮ್ಯಾಟರ್ ನ್ನು ತುರಿಕಿದರೆ ಪ್ರೇಕ್ಷಕನ ತಲೆಗೆ ಹೋಗಲ್ಲ. ಹೀಗಾಗಿ ನೋಡುಗರಿಗೂ ಮನರಂಜನೆಯಾಗಿ ನೀಡುವ ಮೆಸೇಜ್ ನ್ನು ಮನಸ್ಸಿಗೆ ಮುಟ್ಟುವ ಹಾಗೇ ಸಿನಿಮಾ ಕೊಡಬೇಕೆಂದರೆ ಒಂದಷ್ಟು ಫಿಲ್ಟರ್ ಇರಬೇಕಾಗುತ್ತದೆ. ಕಥೆಯ ಆಳವನ್ನು ಜನರಿಗೆ ಮುಟ್ಟಿಸಲೇಬೇಕಾದಂತ ಸಂದರ್ಭಗಳಲ್ಲಿ ಸೀಕ್ವೇನ್ಸ್ ದಾರಿ ಹಿಡಿಯಬೇಕಾಗುತ್ತದೆ. ಅದೇ ದಾರಿಯಲ್ಲಿ ಸಾಗುತ್ತಿರುವುದೇ ‘ತೋತಾಪುರಿ’ ಸಿನಿಮಾ.

    ಹೌದು ನವರಸ ನಾಯಕ ಜಗ್ಗೇಶ್ ಅಭಿನಯದ ‘ತೋತಾಪುರಿ’ ಬಗ್ಗೆ ಎಲ್ಲರಿಗೂ ಗೊತ್ತೆ ಇದೆ. ಈಗಾಗಲೇ ಸಿನಿಮಾದ ಶೂಟಿಂಗ್ ಕೂಡ ಕಂಪ್ಲೀಟ್ ಮಾಡಿಕೊಂಡಿದೆ ಚಿತ್ರತಂಡ. ಕಥೆ ತುಂಬಾ ಸ್ಟ್ರಾಂಗ್ ಆಗಿದ್ದು, ಭಾಗ 1 ಮತ್ತು 2 ರಲ್ಲಿ ಬರ್ತಾ ಇದೆ. ಸೀಕ್ವೆನ್ಸ್ ಸಿನಿಮಾಗಳು ಹೊಸತೇನಲ್ಲ. ಆದ್ರೆ ಸದ್ಯ ಬಂದು ಹೋಗಿರುವ ಬರುತ್ತಿರುವ ಸೀಕ್ವೆನ್ಸ್ ಸಿನಿಮಾಗಳಿಗೂ ‘ತೋತಾಪುರಿ’ ಗೂ ಕೊಂಚ ಭಿನ್ನ ಸಂಬಂಧವಿದೆ.

    ಹೌದು, ಕತೆ ಚೆನ್ನಾಗಿದ್ರೆ ಅಥವಾ ಪ್ರೇಕ್ಷಕರಿಂದ ರೆಸ್ಪಾನ್ಸ್ ಚೆನ್ನಾಗಿ ಬಂದ್ರೆ ಆ ಸಿನಿಮಾದೊಳಗಿನ ಪಾತ್ರಗಳ ಎಳೆಯನ್ನು ಹಿಡಿದು ಸಿನಿಮಾವನ್ನು ಮುಂದುವರೆಸಲಾಗುತ್ತೆ. ಸಿನಿಮಾ ಹಿಟ್ ಆಗುವವರೆಗೂ ಅದರ ಸೀಕ್ವೇನ್ಸ್ ಬರಲಿದೆ ಎಂಬುದು ಪ್ರೇಕ್ಷಕನಿಗೆ ಗೊತ್ತಿರಲ್ಲ. ವಿಜಯ್ ಪ್ರಸಾದ್ ಪ್ರೇಕ್ಷಕನ ನರನಾಡಿಗಳನ್ನು ಅರಿತಿರುವವರಾಗಿರುವುದರಿಂದ, ಇವತ್ತಿನ ಪ್ರೇಕ್ಷಕ ಏನನ್ನ ಬಯಸುತ್ತಾನೆಂಬುದು ಅವರಿಗೆ ಗೊತ್ತು. ಹೀಗಾಗಿ ‘ತೋತಾಪುರಿ’ ಯನ್ನು ಎರಡು ಭಾಗಗಳಾಗಿ ಸೀಳಿದ್ದಾರೆ. ಇಡೀ ಭಾರತೀಯ ಚಿತ್ರರಂಗದಲ್ಲೇ ಎರಡು ಭಾಗಗಳನ್ನು ಒಮ್ಮೆಗೆ ಸಿದ್ಧಪಡಿಸಿದ ಉದಾಹರಣೆಯೆ ಇಲ್ಲ. ಅಂತದ್ದೊಂದು ದಾಖಲೆಯನ್ನು ಈಗಾಗಲೇ ‘ತೋತಾಪುರಿ’ ಸಿನಿಮಾ ಮಾಡಿದೆ. ಸದ್ಯ ಎರಡು ಭಾಗದ ಚಿತ್ರೀಕರಣವನ್ನು ಪೂರ್ಣಗೊಳಿಸಿ, ಉಳಿದ ಕೆಲಸಕ್ಕೆ ಕೈ ಹಾಕಿದೆ. ಒಟ್ಟಾರೆ ಸದ್ಯ ಪ್ರಪಂಚದಲ್ಲಿರುವ ವೈರಸ್ ಎಂಬ ರೋಗ ಮಾಯವಾದ ನಂತರ, ಉಪ್ಪು, ಖಾರ ಹಾಕಿ ರೆಡಿ ಮಾಡುತ್ತಿರುವ ‘ತೋತಾಪುರಿ’ಯನ್ನು ಪ್ರೇಕ್ಷಕನಿಗೆ ಸವಿಯಲು ನೀಡಲಿದ್ದಾರೆ.

    ನವರಸ ನಾಯಕ ಜಗ್ಗೇಶ್, ಸುಮನ್ ರಂಗನಾಥ್, ವೀಣಾ, ಅದಿತಿ ಪ್ರಭುದೇವ, ಡಾಲಿ ಧನಂಜಯ್ ಸೇರಿದಂತೆ ಇನ್ನು ಅನೇಕರು ತಾರಾಬಳಗದಲ್ಲಿದ್ದಾರೆ.

  • ಪರಿಮಳ ಲಾಡ್ಜಿನತ್ತ ಹೊರಟ ಚಿರಯವ್ವನೆ ಸುಮನ್ ರಂಗನಾಥ್!

    ಪರಿಮಳ ಲಾಡ್ಜಿನತ್ತ ಹೊರಟ ಚಿರಯವ್ವನೆ ಸುಮನ್ ರಂಗನಾಥ್!

    ಬೆಂಗಳೂರು: ನೀನಾಸಂ ಸತೀಶ್ ಮತ್ತು ನೀರ್ ದೋಸೆ ಖ್ಯಾತಿಯ ನಿರ್ದೇಶಕ ವಿಜಯ್ ಪ್ರಸಾದ್ ಕಾಂಬಿನೇಷನ್ನಿನ ಚಿತ್ರದ ಬಗ್ಗೆ ನಿಖರ ಮಾಹಿತಿಗಳೇ ಹೊರ ಬಿದ್ದಿವೆ. ಆರಂಭದಲ್ಲಿ ಈ ಸಿನಿಮಾಗೆ ಗಣೇಶ ಮೆಡಿಕಲ್ಸ್ ಅನ್ನೋ ನಾಮಕರಣವಾಗಿತ್ತು. ಆದರೀಗ ಅದೇ ಟೀಮು ಜೊತೆ ಸೇರಿ ಪರಿಮಳ ಲಾಡ್ಜ್ ಅನ್ನೋ ಸಿನಿಮಾ ಶುರು ಮಾಡಿದೆ. ದೊಡ್ಡ ತಾರಾಗಣವಿರೋ ಈ ಚಿತ್ರದಲ್ಲಿ ನೀನಾಸಂ ಸತೀಶ್ ನಾಯಕನಾಗಿ ನಟಿಸಲಿದ್ದಾರೆ. ಸುಮನ್ ರಂಗನಾಥ್ ಕೂಡಾ ವಿಶೇಷ ಪಾತ್ರವೊಂದನ್ನು ನಿರ್ವಹಿಸಲಿದ್ದಾರೆ.

    ಈ ಹಿಂದೆ ಬ್ಯೂಟಿಫುಲ್ ಮನಸುಗಳು ಎಂಬ ಚಿತ್ರವನ್ನು ನಿರ್ಮಾಣ ಮಾಡಿದ್ದ ಪ್ರಸನ್ನ ಪರಿಮಳ ಲಾಡ್ಜಿಗೆ ಹಣ ಹೂಡಿದ್ದಾರೆ. ವಿಜಯ ಪ್ರಸಾದ್ ಚಿತ್ರಗಳೆಂದ ಮೇಲೆ ವಾಸ್ತವಿಕ ವಿಚಾರಗಳನ್ನೇ ಲಘುವಾದ ಶೈಲಿಯಲ್ಲಿ ಹೇಳೋ ಮಸ್ತ್ ಆಗಿರೋ ಕಥೆ ಇರುತ್ತದೆ ಅನ್ನೋದರಲ್ಲಿ ಯಾವ ಸಂಶಯವೂ ಇಲ್ಲ. ಪರಿಮಳ ಲಾಡ್ಜ್ ಕಥೆಯನ್ನಂತೂ ಇಂಥಾದ್ದೇ ಮಜವಾದ ಕಥಾ ಎಳೆಯೊಂದಿಗೆ ಅವರು ರೂಪಿಸಲು ಮುಂದಾಗಿದ್ದಾರೆ. ಇದರಲ್ಲಿನ ಮಹತ್ವದ ಪಾತ್ರವೊಂದರಲ್ಲಿ ಸುಮನ್ ರಂಗನಾಥ್ ನಟಿಸಿದ್ದಾರೆ.

    ಈ ಸಿನಿಮಾ ಮೂಲಕವೇ ವರ್ಷಾಂತರಗಳ ನಂತರ ಲೂಸ್ ಮಾದ ಯೋಗಿ ಮತ್ತು ವಿಜಯ ಪ್ರಸಾದ್ ಮತ್ತೆ ಒಂದಾಗಿದ್ದಾರೆ. ಯೋಗಿ ಕೂಡಾ ಈ ಸಿನಿಮಾದಲ್ಲಿ ನಟಿಸಲಿದ್ದಾರಂತೆ. ಸದ್ಯಕ್ಕೆ ಇಷ್ಟು ಮಂದಿಯ ತಾರಾಗಣ ನಿಗದಿಯಾಗಿದೆ. ಸುಮನ್ ರಂಗನಾಥ್ ಕೂಡಾ ನಟಿಸೋದು ಪಕ್ಕಾ ಆಗಿದೆ. ಸುಮನ್ ಈ ಹಿಂದೆ ಸಿದ್ಲಿಂಗು, ನೀರ್ ದೋಸೆ ಮತ್ತು ತೋತಾಪುರಿ ಚಿತ್ರದಲ್ಲಿಯೂ ನಟಿಸಿದ್ದಾರೆ. ಇದೀಗ ಅವರು ಪರಿಮಳ ಲಾಡ್ಜ್ ಗೂ ಎಂಟ್ರಿ ಕೊಡಲಿದ್ದಾರೆ. ಇದು ವಿಜಯ ಪ್ರಸಾದ್ ಮತ್ತು ಸುಮನ್ ಕಾಂಬಿನೇಷನ್ನಿನ ನಾಲ್ಕನೇ ಚಿತ್ರವಾಗಿಯೂ ದಾಖಲಾಗುತ್ತದೆ.

  • ತೋತಾಪುರಿಗೆ 100 ಡೇಸ್ ಶೂಟಿಂಗ್!

    ತೋತಾಪುರಿಗೆ 100 ಡೇಸ್ ಶೂಟಿಂಗ್!

    ಬೆಂಗಳೂರು: ಕೆ.ಎ.ಸುರೇಶ್ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಬಹು ನಿರೀಕ್ಷಿತ ಸಿನಿಮಾ `ತೋತಾಪುರಿ’. ನೀರ್ ದೋಸೆ ಚಿತ್ರದ ಯಶಸ್ವೀ ತಂಡ ಮತ್ತೊಮ್ಮೆ `ತೋತಾಪುರಿ’ಯ ಮೂಲಕ ಒಂದಾಗಿರೋದು ವಿಶೇಷ. ನಿರ್ದೇಶಕ ವಿಜಯಪ್ರಸಾದ್ ಅವರ ಈ ಚಿತ್ರದಲ್ಲಿ ನವರಸ ನಾಯಕ ಜಗ್ಗೇಶ್, ದತ್ತಣ್ಣ, ಸುಮನ್ ರಂಗನಾಥ್ ಮತ್ತೆ ಒಂದಾಗಿದ್ದಾರೆ. ಇದಲ್ಲದೆ ಉದ್ಯಮಿಯ ಪಾತ್ರದಲ್ಲಿ ಡಾಲಿ ಧನಂಜಯ ಮತ್ತು ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸುತಿದ್ದಾರೆ.

    ನಿರ್ಮಾಪಕ ಕೆ ಎ ಸುರೇಶ್ ಅವರ ಹಿಂದಿನ ಸಿನಿಮಾಗಳಿಗಿಂತ ಹೆಚ್ಚಿನ ಭರವಸೆ ಈ ಚಿತ್ರ ಮೂಡಿಸಿದೆ. ಮಾರುಕಟ್ಟೆಯಲ್ಲಿ ಈ ತಂಡದ ಬಗ್ಗೆಯೇ ದೊಡ್ಡ ನಿರೀಕ್ಷೆ ಉದ್ಭವವಾಗಿದೆ. ಕನ್ನಡ ಚಿತ್ರ ರಂಗದಲ್ಲಿ ಯಶಸ್ಸನ್ನು ಬೆನ್ನಿಗೆ ಕಟ್ಟಿಕೊಂಡಿರುವ ನಿರ್ಮಾಪಕ ಕೆ ಎ ಸುರೇಶ್ `ತೋತಾಪುರಿ’. ಚಿತ್ರದಲ್ಲಿ ಮೊದಲ ಬಾರಿಗೆ ಡಾಲಿ ಧನಂಜಯ್ ಜಗ್ಗೇಶ್ ಜೊತೆಯಾಗಿದ್ದಾರೆ. ನಾಯಕಿ ಅದಿತಿ ಪ್ರಭುದೇವ ಮುಸ್ಲಿಂ ಹುಡುಗಿ, ಸುಮನ್ ರಂಗನಾಥ್ ಕ್ರಿಶ್ಚಿಯನ್ ಹೆಣ್ಣುಮಗಳಾಗಿ ಅಭಿನಯಿಸಿದ್ದಾರೆ.

    ನವರಸ ನಾಯಕ ಜಗ್ಗೇಶ್ ಅವರ ಚಿತ್ರಜೀವನದಲ್ಲಿ ಇದೇ ಮೊದಲ ಬಾರಿಗೆ 100 ದಿವಸಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ನಿರ್ಮಾಪಕ ಕೆ ಎ ಸುರೇಶ್ `ರಾಜು ಕನ್ನಡ ಮೀಡಿಯಂ’ ಚಿತ್ರದ ಯಶಸ್ಸಿನ ನಂತರ ಒಂದು ಭರವಸೆ ಮೂಡಿಸುವ ತಂಡದ ಜೊತೆ ಹಣ ಹೂಡುತ್ತಿದ್ದಾರೆ. ವಿಜಯಪ್ರಸಾದ್ `ಸಿದ್ಲಿಂಗು’ ಸಿನಿಮಾದಲ್ಲಿ ಟೀಚರ್ ಆಗಿದ್ದ ಸುಮನ್ ರಂಗನಾಥ್ ಈ ಚಿತ್ರದಲ್ಲೂ ಪ್ರಮುಖ ಪಾತ್ರ ಗಿಟ್ಟಿಸಿಕೊಂಡಿದ್ದಾರೆ. ಅನೂಪ್ ಸೀಳಿನ್ ಸಂಗೀತ, ನಂಜೇಶ್ ಬಾಬು ಛಾಯಾಗ್ರಹಣ ಮಾಡಿದ್ದಾರೆ. ಮೈಸೂರು, ಶ್ರೀರಂಗಪಟ್ಟಣ, ಕೊಡಗಿನಲ್ಲಿ ಚಿತ್ರೀಕರಣ ಮಾಡಲಾಗಿದೆ.

    `ಎರಡನೇ ಮದುವೆ’, `ಗೋವಿಂದಾಯ ನಮಃ’, ಶ್ರಾವಣಿ ಸುಬ್ರಮಣಿ, ಆರ್ ಎಕ್ಸ್ ಸೂರಿ, ಶಿವಲಿಂಗ ಮತ್ತು ರಾಜು ಕನ್ನಡ ಮೀಡಿಯಂ ನಂತರ ಈ `ತೋತಾಪುರಿ’ಯನ್ನು ನಿರ್ಮಿಸಿರುವ ನಿರ್ಮಾಪಕ ಸುರೇಶ್ ಈ ಚಿತ್ರವನ್ನು ಮಾವಿನ ಹಣ್ಣಿನ ಸೀಸನ್ನಿನಲ್ಲೇ ಬಿಡುಗಡೆ ಮಾಡುವ ಇರಾದೆ ಇಟ್ಟುಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮತ್ತೊಮ್ಮೆ ಬಂತು ದಂಡುಪಾಳ್ಯ ಗ್ಯಾಂಗ್-ಮುಮೈತ್ ಐಟಂ ಹಾಡಿಗೆ ಪಡ್ಡೆ ಗ್ಯಾಂಗ್ ಫಿದಾ

    ಮತ್ತೊಮ್ಮೆ ಬಂತು ದಂಡುಪಾಳ್ಯ ಗ್ಯಾಂಗ್-ಮುಮೈತ್ ಐಟಂ ಹಾಡಿಗೆ ಪಡ್ಡೆ ಗ್ಯಾಂಗ್ ಫಿದಾ

    ಬೆಂಗಳೂರು: ದಂಡುಪಾಳ್ಯ ಗ್ಯಾಂಗ್ ಮತ್ತೊಮ್ಮೆ ಬೆಳ್ಳಿತೆರೆಗೆ ಲಗ್ಗೆ ಇಡೋಕೆ ತಯಾರಿ ನಡೆಸುತ್ತಿದೆ. ‘ಕೆವ್ವು ಕೇಕಾ’ ಅಂತ ಕೇಕೆ ಹಾಕಿ ಪಡ್ಡೆ ಹುಡುಗರ ಹಾರ್ಟ್ ಗೆ ಲಗ್ಗೆ ಇಟ್ಟ ಬ್ಯೂಟಿ ಮುಮೈತ್ ಖಾನ್, ದಂಡುಪಾಳ್ಯ ಅಖಾಡದಲ್ಲಿ ಸೆಕ್ಸಿ ಸೊಂಟ ಬಳುಕಿಸಿದ್ದಾರೆ.

    ನಿರ್ದೇಶಕ ಶ್ರೀನಿವಾಸ್ ರಾಜು ಮೂರು ಭಾಗಗಳಲ್ಲಿ ‘ದಂಡುಪಾಳ್ಯ’ದ ಕಥೆಯನ್ನು ಬಿಚ್ಚಿಟ್ಟಿದ್ದರು. ಮೂರು ಭಾಗ ತೆರೆಕಂಡ ಮೇಲೆ ‘ದಂಡುಪಾಳ್ಯ’ ಹಂತಕರ ಕಥೆಗೆ ಅವರು ಪೂರ್ಣ ವಿರಾಮ ಇಟ್ಟಿದ್ದರು. ಇದೀಗ ಕೆ.ಟಿ.ನಾಯಕ್ ಎಂಬವರು ‘ದಂಡುಪಾಳ್ಯ-4’ ಗ್ಯಾಂಗ್ ಜೊತೆಗೆ ಗಾಂಧಿನಗರ ಪ್ರವೇಶಿಸುತ್ತಿದ್ದಾರೆ.

    ಶ್ರೀನಿವಾಸ್ ರಾಜು ತೆರೆಗೆ ತಂದ ‘ದಂಡುಪಾಳ್ಯ’ ಸರಣಿಗೂ ‘ದಂಡುಪಾಳ್ಯ-4’ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲವಂತೆ. ಜೈಲಿನಿಂದ ತಪ್ಪಿಸಿಕೊಳ್ಳಲು ‘ದಂಡುಪಾಳ್ಯ’ ಗ್ಯಾಂಗ್ ಮಾಡಿದ ತಂತ್ರಗಳೇ ‘ದಂಡುಪಾಳ್ಯ-4’ ಚಿತ್ರದ ಕಥೆಯಂತೆ. ಪ್ರಮುಖ ಪಾತ್ರದಲ್ಲಿ ನಟಿ ಸುಮನ್ ರಂಗನಾಥ್ ಮಿಂಚಿದ್ದಾರೆ. ಸ್ಪೆಷಲ್ ಹಾಡಿಗೆ ಮುಮೈತ್ ಸೊಂಟ ಬಳುಕಿಸಿದ್ದಾರೆ.

    ‘ರಾಜಧಾನಿ’ ಹಾಗೂ ‘ ಪೊರ್ಕಿ’ ಐಟಂ ಹಾಡಿಗೆ ಸ್ಪೆಪ್ ಹಾಕಿದ್ದ ಮುಮೈತ್, ದಂಡುಪಾಳ್ಯ 4 ಮೂಲಕ ಸ್ಯಾಂಡಲ್‍ವುಡ್ ಗೆ ಕಮ್‍ಬ್ಯಾಕ್ ಮಾಡಿದ್ದಾರೆ. ತೆಲುಗು ನಟ ಸಂಜೀವ್, ವಿಠಲ್ ರಾಮದುರ್ಗ, ಮುಲೇಟ್ ಓಮು, ಸ್ನೇಹಾ, ರಿಚಾ ಶಾಸ್ತ್ರಿ, ಸೇರಿದಂತೆ ಹಲವರು ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ವೆಂಕಟ್ ಬಂಡವಾಳ ಹೂಡಿದ್ದಾರೆ. ಈಗಾಗಲೇ ಶೂಟಿಂಗ್ ಕಂಪ್ಲೀಟ್ ಆಗಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗ್ತಿವೆ. ಎಲ್ಲಾ ಅಂದುಕೊಂಡಂತೆ ಆದರೆ ಶೀಘ್ರದಲ್ಲೇ ಗ್ಯಾಂಗ್ ದರ್ಶನವಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಡಬಲ್ ಇಂಜಿನ್, ಅಥರ್ವ ಈ ವಾರ ಬಿಡುಗಡೆ

    ಡಬಲ್ ಇಂಜಿನ್, ಅಥರ್ವ ಈ ವಾರ ಬಿಡುಗಡೆ

    ಬೆಂಗಳೂರು: ಎಸ್ ಆರ್ ಎಸ್ ಲಾಂಛನದಲ್ಲಿ ತಯಾರಾಗಿರುವ ಮನರಂಜನಾತ್ಮಕ ಚಿತ್ರ ‘ಡಬಲ್ ಇಂಜಿನ್’ ಈ ಶುಕ್ರವಾರ ಬಿಡುಗಡೆಯಾಗುತ್ತಿದೆ. ಈ ಹಿಂದೆ ಬಾಂಬೆ ಮಿಠಾಯಿ ನಿರ್ದೇಶನ ಮಾಡಿ ಯಶಸ್ವಿ ನಿರ್ದೇಶಕ ಎನಿಸಿಕೊಂಡ ಚಂದ್ರ ಮೋಹನ್ ಈ ಚಿತ್ರವನ್ನೂ ಸಂಪೂರ್ಣ ಮನರಂಜನೆಯ ಅಂಶಗಳೊಂದಿಗೆ ತಯಾರು ಮಾಡಿದ್ದಾರೆ.

    ಅರುಣ್ ಕುಮಾರ್ ಎನ್, ಶ್ರೀಕಾಂತ್ ಮಠಪತಿ, ಮಂದಾರ ಎ, ಮಧು ಎಸ್ ಆರ್ ಎಸ್ ಶುಂಠಿ ಕಾಫಿ, ಮಂಜುನಾಥ್ ನಂಜಪ್ಪ, ಪದ್ಮ ಕೃಷ್ಣಮೂರ್ತಿ, ರಾಜು ಪಟೇಲ್ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ನಿರ್ಮಾಪಕ ಉದಯ್ ಕೆ ಮೆಹ್ತಾ ಅವರು ಈ ಚಿತ್ರದ ವಿತರಣೆಯನ್ನು ಮಾಡುತ್ತಿದ್ದಾರೆ.

    ಸುಮನ್ ರಂಗನಾಥ್, ಚಿಕ್ಕಣ್ಣ, ಅಶೋಕ್, ಪ್ರಭು, ಪ್ರಿಯಾಂಕ ಮಲ್ನಾಡ್, ಸಾಧು ಕೋಕಿಲ, ದತ್ತಣ್ಣ, ಅಚ್ಯುತ್ ಕುಮಾರ್, ಸುಚೇಂದ್ರ ಪ್ರಸಾದ್ ತಾರಾಗಣದ ಈ ಚಿತ್ರದಲ್ಲಿ ಮೂವರು ಯುವಕರು ಹಳ್ಳಿಯಲ್ಲಿ ವ್ಯವಸಾಯವನ್ನು ಬಿಟ್ಟು ಬಹುಬೇಗ ಶ್ರೀಮಂತರಾಗಲು ಹೊರಟು ಅನುಭವಿಸುವ ಸಂದರ್ಭಗಳು ಪ್ರಮುಖವಾದವು. ಸೂರ್ಯ ಕಿರಣ್ ಛಾಯಾಗ್ರಹಣ, ವೀರ್ ಸಮರ್ಥ ಸಂಗೀತ, ಶ್ರೀಕಾಂತ್ ಸಂಕಲನ ಚಿತ್ರಕ್ಕಿದೆ.

    ಇದೇ ವಾರ ಅಥರ್ವ ಬರುತ್ತಿದ್ದಾನೆ: ಅಥರ್ವ ಚಿತ್ರದ ಮೂಲಕ ಅರ್ಜುನ್ ಸರ್ಜಾ ಕುಟುಂಬದಿಂದ ಬರುತ್ತಿರುವ ಮತ್ತೊಬ್ಬ ನಾಯಕ. ಅವರೇ ಪವನ್ ತೇಜ. ಮಹಾ ಸಿಂಹ ಮೂವೀಸ್ ಅಡಿಯಲ್ಲಿ ವಿನಯ್ ಕುಮಾರ್ ಎಚ್ ನಿರ್ಮಾಣ ಮಾಡಿರುವ ಈ ಚಿತ್ರದ ನಿರ್ದೇಶಕರು ಅರುಣ್. ರಕ್ಷಯ್ ಎಸ್ ವಿ ಸಹ ನಿರ್ಮಾಪಕರು. ಇದನ್ನೂ ಓದಿ: ಅಥರ್ವ ನಾಯಕ ಪವನ್ ತೇಜಾಗೆ ಅರ್ಜುನ್ ಸರ್ಜಾ ಹೇಳಿದ್ದ ಕಿವಿ ಮಾತೇನು?

    ಹಲವು ತಾಕತ್ತುಗಳ ಸಂಗಮವನ್ನು ಪ್ರಥಮ ಪ್ರಯತ್ನದಲ್ಲೇ ಪವನ್ ತೇಜ ನಿಭಾಯಿಸುತ್ತಿದ್ದಾರೆ. ಸನಮ್ ಶೆಟ್ಟಿ ಈ ಚಿತ್ರದ ಕಥಾ ನಾಯಕಿ. ರಂಗಾಯಣ ರಘು, ತಾರಾ, ಧರ್ಮೇಂದ್ರ ಅರಸ್, ಯಶ್ವಂತ್ ಶೆಟ್ಟಿ, ಸುಚೇಂದ್ರ ಪ್ರಸಾದ್, ಸಿಲ್ಲಿ ಲಲ್ಲಿ ಶ್ರೀನಿವಾಸ ಗೌಡ, ಟಾಮಿ ರವಿ, ನಿಶಾಂತ್, ಚೇತನ ಹಾಗೂ ಇತರರು ತಾರಾಗಣದಲ್ಲಿ ಇದ್ದಾರೆ.

    ರಾಘವೇಂದ್ರ ಸಂಗೀತ ನಿರ್ದೇಶನ, ಶಿವ ಸೇನಾ ಛಾಯಾಗ್ರಹಣ, ಮೋಹನ್ ನೃತ್ಯ, ರಾಜು ಕಲಾ ನಿರ್ದೇಶನ, ಸಂತೋಷ್ ಎಂ ಸಂಭಾಷಣೆ, ವಿಜೇತ ಕೃಷ್ಣ ಹಿನ್ನೆಲೆ ಸಂಗೀತ ನೀಡಿದ್ದಾರೆ.