Tag: Sumitra Mahajan

  • ನಾನು ಸ್ಪರ್ಧಿಸಲ್ಲ, ಯಾರನ್ನು ಬೇಕಾದ್ರೂ ಆಯ್ಕೆ ಮಾಡಬಹುದು: ಸುಮಿತ್ರಾ ಮಹಾಜನ್

    ನಾನು ಸ್ಪರ್ಧಿಸಲ್ಲ, ಯಾರನ್ನು ಬೇಕಾದ್ರೂ ಆಯ್ಕೆ ಮಾಡಬಹುದು: ಸುಮಿತ್ರಾ ಮಹಾಜನ್

    ನವದೆಹಲಿ: ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಇಂದೋರ್ ಕ್ಷೇತ್ರದಿಂದ ಯಾರನ್ನು ಬೇಕಾದರೂ ಆಯ್ಕೆ ಮಾಡಬಹುದು ಎಂದು ಲೋಕಸಭೆಯ ಸ್ಪೀಕರ್ ಸುಮಿತ್ರಾ ಮಹಾಜನ್ ಹೇಳಿದ್ದಾರೆ.

    ಸುಮಿತ್ರಾ ಮಹಾಜನ್ ಅವರು 75 ವರ್ಷದವರಾಗಿದ್ದು, ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದಿಂದ 8 ಬಾರಿ ಆಯ್ಕೆಯಾಗಿದ್ದಾರೆ. ಹೀಗಾಗಿ ಈ ಬಾರಿಯೂ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಇಷ್ಟು ದಿನಗಳು ಕಳೆದರೂ ಇಂದೋರ್ ಕ್ಷೇತ್ರದ ಅಭ್ಯರ್ಥಿಯ ಹೆರನ್ನು ಪಕ್ಷದ ನಾಯಕರು ಅಂತಿಮಗೊಳಿಸಿರಲಿಲ್ಲ. ಹೀಗಾಗಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸಂದೇಶ ಹೊರಹಾಕಿದ್ದಾರೆ.

    ಈ ನಿರ್ಧಾರದ ಕುರಿತು ಪ್ರತಿಕ್ರಿಯೆ ನೀಡಿರುವ ಸುಮಿತ್ರಾ ಮಹಾಜನ್ ಅವರು, ನಾನು ಈ ಬಾರಿಯ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಈ ಮೂಲಕ ನನ್ನ ಸ್ಪರ್ಧೆಯ ಬಗ್ಗೆ ಇರುವ ಎಲ್ಲ ಊಹಾಪೋಹಗಳಿಗೆ ತೆರೆ ಎಳೆಯುತ್ತಿರುವೆ. ಪಕ್ಷದ ನಾಯಕರು ಯಾರಿಗೆ ಬೇಕಾದರೂ ಇಂದೋರ್ ಕ್ಷೇತ್ರದ ಟಿಕೆಟ್ ನೀಡಲಿ. ಅದಕ್ಕೆ ನನ್ನ ವಿರೋಧವಿಲ್ಲ. ಅವರು ಘೋಷಣೆ ಮಾಡಿದ ಅಭ್ಯರ್ಥಿಯ ಪರವಾಗಿ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಬಿಜೆಪಿ ಹೈಕಮಾಂಡ್ 75 ವರ್ಷಕ್ಕಿಂತ ಹೆಚ್ಚು ವಯಸ್ಸಾದ ನಾಯಕರಿಗೆ ಟಿಕೆಟ್ ನೀಡದೇ ಇರಲು ನಿರ್ಧರಿಸಿದೆ. ಸುಮಿತ್ರಾ ಮಹಾಜನ್ ಅವರು ಮುಂದಿನ ವಾರ 76ನೇ ವಸಂತಕ್ಕೆ ಕಾಲಿಡಲಿದ್ದಾರೆ. ಹೀಗಾಗಿ ಅವರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎನ್ನಲಾಗುತ್ತದೆ.

  • ಹನುಮಂತ ಲಂಕೆಯನ್ನು ಸುಟ್ಟಂತೆ ವಾಯುಪಡೆ ಉಗ್ರರನ್ನು ಮಟ್ಟ ಹಾಕಿದೆ: ಸ್ಪೀಕರ್ ಮೆಚ್ಚುಗೆ

    ಹನುಮಂತ ಲಂಕೆಯನ್ನು ಸುಟ್ಟಂತೆ ವಾಯುಪಡೆ ಉಗ್ರರನ್ನು ಮಟ್ಟ ಹಾಕಿದೆ: ಸ್ಪೀಕರ್ ಮೆಚ್ಚುಗೆ

    ನವದೆಹಲಿ: ಲಂಕೆಯನ್ನು ಸುಟ್ಟು ಹನುಮಂತ ಬಂದಂತೆ ಭಾರತೀಯ ವಾಯುಪಡೆ ಪಾಕಿಸ್ತಾನ ಉಗ್ರರ ಕ್ಯಾಂಪ್‍ಗಳನ್ನು ಸುಟ್ಟು ನೆಲಸಮ ಮಾಡಿದೆ ಎಂದು ಲೋಕಸಭೆಯ ಸ್ಪೀಕರ್ ಸುಮಿತ್ರಾ ಮಹಾಜನ್ ಏರ್‌ಸ್ಟ್ರೈಕ್‌ ಶೌರ್ಯವನ್ನು ಹೊಗಳಿದ್ದಾರೆ.

    ಭಾರತೀಯ ವಾಯುಪಡೆಗೆ ಇಂತಹ ಅದ್ಭುತ ಏರ್‌ಸ್ಟ್ರೈಕ್‌ ನಡೆಸಲು ಅನುಮತಿ ನೀಡಿದ ಪ್ರಧಾನಿ ನರೇಂದ್ರ ಮೋದಿಗೂ ಧನ್ಯವಾದಗಳು. ಈ ಮೂಲಕ ಪಾಕಿಸ್ತಾನ ಮತ್ತೆ ಭಾರತದತ್ತ ತನ್ನ ಕೆಟ್ಟ ದೃಷ್ಟಿ ಹಾಕಲು ಹೆದರುವಂತೆ ವಾಯುಸೇನೆ ಮಾಡಿದೆ ಎಂದು ಶ್ಲಾಘಿಸಿದ್ದಾರೆ.

    ಪವನ ಪುತ್ರ ಹನುಮಂತ ಲಂಕೆಯನ್ನು ಧ್ವಂಸ ಮಾಡಿ ವಾಪಸ್ ಆದಂತೆ ವಾಯುಪಡೆ ಉಗ್ರರನ್ನು ಧ್ವಂಸ ಮಾಡಿ ಸುರಕ್ಷಿತವಾಗಿ ದೇಶಕ್ಕೆ ಮರಳಿದೆ. ಒಂದೇ ಒಂದು ಸಣ್ಣ ಗಾಯವಾದಂತೆ ಚಾಣಾಕ್ಯತನದಿಂದ ಕೆಲಸ ಮುಗಿಸಿ ವಾಯುಪಡೆ ವಾಪಸ್ ಬಂದಿದೆ. ಈ ಮೂಲಕ ಪ್ರಜೆಗಳಲ್ಲಿ ದೇಶದಲ್ಲಿ ಭಯೋತ್ಪದನೆ ನೆಲಸಮವಾಗುತ್ತದೆ ಎಂಬ ನಂಬಿಕೆ ಮೂಡುತ್ತಿದೆ. ಇಷ್ಟೆಲ್ಲ ನಡೆದರೂ, ನೂರಾರು ಉಗ್ರರು ಮಣ್ಣಾದರೂ ಪಾಕ್ ಸೇನೆಗೆ ಮಾತ್ರ ಕಿಂಚಿತ್ತು ಈ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಇದು ಭಾರತೀಯ ಸೇನೆಯ ಶಕ್ತಿ ಎಂದು ಸುಮಿತ್ರಾ ಮಹಾಜನ್ ಹೆಮ್ಮೆಯಿಂದ ವಾಯುಪಡೆಯ ಏರ್‌ಸ್ಟ್ರೈಕ್‌ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಹುಲ್ ಗಾಂಧಿ ನಡೆಗೆ ಸ್ಪೀಕರ್ ಸುಮಿತ್ರಾ ಮಹಾಜನ್ ಅಸಮಾಧಾನ

    ರಾಹುಲ್ ಗಾಂಧಿ ನಡೆಗೆ ಸ್ಪೀಕರ್ ಸುಮಿತ್ರಾ ಮಹಾಜನ್ ಅಸಮಾಧಾನ

    ನವದೆಹಲಿ: ಭಾಷಣ ಮುಗಿಯುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರವರು ಪ್ರಧಾನಿ ನರೇಂದ್ರ ಮೋದಿ ರವರ ಆಲಂಗಿಸಿದ್ದು, ಸದನದ ಶಿಷ್ಟಾಚಾರದ ಉಲಂಘನೆ ಎಂದು ಎಂದು ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಅವಿಶ್ವಾಸ ನಿರ್ಣಯ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್ ತಮ್ಮ ಭಾಷಣ ಮಾಡಿದ ಬಳಿಕ ಪ್ರಧಾನಿ ಮೋದಿ ಅವರನ್ನು ಆಲಂಗಿಸಿ ಕೊಂಡಿದ್ದರು. ರಾಹುಲ್ ನಡೆಯ ಬಳಿಕ ಮಾತನಾಡಿದ ಸ್ಪೀಕರ್, ನನಗೆ ನಿಮ್ಮ ನಡೆ ಇಷ್ಟವಾಗಲಿಲ್ಲ. ಸದನದಲ್ಲಿ ಇರುವುದು ಬರಿ ನರೇಂದ್ರ ಮೋದಿ ಅಲ್ಲ, ಅವರು ಭಾರತದ ಪ್ರಧಾನಿ. ಈ ಹುದ್ದೆಗೆ ತನ್ನದೇ ಆದ ಗೌರವ ಇದೆ ಎಂದರು.

    ಇದೇ ವೇಳೆ ತಮಗೇ ರಾಹುಲ್‍ಗಾಂಧಿ ಮೇಲೆ ಯಾವುದೇ ದ್ವೇಷವಿಲ್ಲ ಎಂದು ಸ್ಪಷ್ಟಪಡಿಸಿದ ಸ್ಪೀಕರ್, ರಾಹುಲ್ ತಮಗೇ ಮಗನ ಹಾಗೇ. ಸದನದಲ್ಲಿರುವ ಎಲ್ಲಾ ಸದಸ್ಯರು ಸಭೆಯ ಘನತೆ ಗೌರವವನ್ನು ಕಾಪಾಡಬೇಕು ಹಾಗೂ ಶಾಂತಿಯಿಂದ ವರ್ತಿಸಬೇಕು ಸೂಚಿಸಿದರು.

    ಸ್ಪೀಕರ್‍ ರವರ ಹೇಳಿಕೆ ನಂತರ ಗೃಹ ಸಚಿವ ರಾಜ್‍ನಾಥ್ ಸಿಂಗ್ ಪ್ರತಿಕ್ರಿಯೆ ನೀಡಿ, ರಾಹುಲ್ ಗಾಂಧಿಯ ಆಲಿಂಗನವನ್ನು ಚಿಪ್ಕೋ ಆಂದೋಲನ ರೀತಿಯಾಗಿತ್ತು ಎಂದು ವ್ಯಂಗ್ಯವಾಡಿದರು.

    ಸದ್ಯ ರಾಹುಲ್ ನಡೆಯನ್ನು ಸಮರ್ಥಿಸಿರುವ ಕಾಂಗ್ರೆಸ್ ಹಿರಿಯ ಮುಖಂಡ, ಸಂಸದ ಶಶಿತರೂರ್, ರಾಹುಲ್ ಗಾಂಧಿರವರದ್ದು ಅದ್ಭುತವಾದ ಭಾಷಣವಾಗಿತ್ತು. ಅವರ ಭಾಷಣ ಗೇಮ್ ಚೇಂಜಿಂಗ್ ಆಗಿತ್ತು. ಸರ್ಕಾರದ ಹೇಳಿಕೆಗಳನ್ನು ಹೊರತುಪಡಿಸಿ, ಬಿಜೆಪಿ ಅಕ್ಷರಃ ಸಹ ಉಸಿರಾಡಲು ಸಾಧ್ಯವಿಲ್ಲವಾಗಿತ್ತು ಎಂದು ಶಶಿ ತರೂರ್ ಟ್ವೀಟ್ ಮಾಡಿದ್ದಾರೆ.

    ಈ ರಾಹುಲ್ ರವರ ನಡೆಯನ್ನು ಟೀಕಿಸಿದ ಬಿಜೆಪಿ ಮುಖಂಡ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್, ರಾಹುಲ್ ರವರ ನಡೆ ಚಿಕ್ಕ ಮಕ್ಕಳ (ಚೈಲ್ಡಿಶ್) ವರ್ತನೆಯಂತಿತ್ತು. ರಾಹುಲ್ ಗಾಂಧಿ ಇಷ್ಟು ದೊಡ್ಡವರಾಗಿದ್ದು, ಚಿಕ್ಕ ಮಗುವಿನ ಹಾಗೇ ವರ್ತಿಸಿದರು ಅವರಿಗೆ ತಿಳುವಳಿಕೆ ಇಲ್ಲ ಎಂಬುವುದನ್ನು ಸ್ಪಷ್ಟಪಡಿಸುತ್ತದೆ ಎಂದು ಆರೋಪಿಸಿದರು.