Tag: summer

  • ಚಿತ್ರದುರ್ಗದಲ್ಲಿ ಬಿಸಿಲಿನ ತಾಪ ಹೆಚ್ಚಳ – ಕೆರೆಯಲ್ಲಿ ಕೋತಿಗಳ ನೀರಾಟ

    ಚಿತ್ರದುರ್ಗದಲ್ಲಿ ಬಿಸಿಲಿನ ತಾಪ ಹೆಚ್ಚಳ – ಕೆರೆಯಲ್ಲಿ ಕೋತಿಗಳ ನೀರಾಟ

    ಚಿತ್ರದುರ್ಗ: ಬಿಸಿಲ ಝಳದಿಂದ (Summer) ಬಸವಳಿದ ಕೋತಿಗಳು (Monkeys) ಕೆರೆಯಲ್ಲಿ ಈಜಾಡುವ ಮೂಲಕ ದಣಿವಾರಿಸಿಕೊಂಡ ಘಟನೆ ಚಿತ್ರದುರ್ಗದಲ್ಲಿ (Chitradurga) ನಡೆದಿದೆ.

    ಚಂದ್ರವಳ್ಳಿ ತೋಟ ಎಂದೇ ಹೆಸರಾಗಿರುವ ಈ ರಮಣೀಯ ಪ್ರವಾಸಿ ತಾಣದಲ್ಲೀಗ ಕೋತಿಗಳ ಕಲರವ ಶುರುವಾಗಿದೆ.ಬಿಸಿಲಿನ ಬೇಗೆ ತಾಳಲಾರದೇ ಹಿಂಡು ಹಿಂಡು ಕೋತಿಗಳು ಚಂದ್ರವಳ್ಳಿ ಕೆರೆಗೆ ಲಗ್ಗೆ ಇಟ್ಟಿವೆ. ಕದಂಬರ ಅರಸ ಮಯೂರ ವರ್ಮ ಕಟ್ಟಿಸಿರುವ ಕೆರೆಯಲ್ಲಿ ಈಜುತ್ತಾ, ನೀರಾಟ ಆಡುತ್ತಾ ಬಿಸಿಲಿನ ಧಗೆ ಕಡಿಮೆ ಮಾಡಿಕೊಳ್ಳುತ್ತಿವೆ. ಕೋತಿಗಳ ಈ ನೀರಾಟದ ದೃಶ್ಯ ಪ್ರವಾಸಿಗರಿಗೆ ಹೊಸ ಮನರಂಜನೆಯಾಗಿದೆ. ಥೇಟ್ ಮನುಷ್ಯರಂತೆಯೇ ನೀರಲ್ಲಿ ಈಜಾಡುವ ಕೋತಿಗಳ ಈ ದೃಶ್ಯವನ್ನು ಇಲ್ಲಿಗೆ ಬರುವ ಪ್ರವಾಸಿಗರು ಕಣ್ತುಂಬಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಕಾಶ್ಮೀರದ ಬುದ್ಗಾಮ್‌ನಲ್ಲಿ ಕಮರಿಗೆ ಉರುಳಿದ ಸೇನಾ ವಾಹನ – 10 ಮಂದಿಗೆ ಗಾಯ

    ಅದರಲ್ಲೂ ಮನುಷ್ಯರಂತೆ ಕಲ್ಲ ಮೇಲಿಂದ ನೀರಿಗೆ ಡೈವ್ ಹೊಡೆಯುವ ಕೋತಿ ನೀರೊಳಗೆ ಕೀಟಲೆ ಮಾಡುತ್ತಾ ಒಂದು ಕಡೆ ಮುಳುಗಿ, ಮತ್ತೊಂದೆಡೆ ಎದ್ದು ಹೋಗುವ ಮಂಗಣ್ಣಗಳ ಕುಚೇಷ್ಟೆ ಹಾಗೂ ಥೇಟ್ ಮನುಷ್ಯರಂತೆ ನೀರಿಗೆ ಹಾರುವ ಸಾಹಸ ನೋಡಿ ಪುಳಕಿತರಾದರು. ಇದನ್ನೂ ಓದಿ: ಮೋದಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ ಮೋಹನ್‌ ಭಾಗವತ್‌

    ಚಿತ್ರದುರ್ಗದಲ್ಲಿ ಪ್ರಸ್ತುತ 40 ಡಿಗ್ರಿಗಿಂತ ಹೆಚ್ಚು ತಾಪಮಾನ ಇದೆ. ಹೀಗಾಗಿ ತಂಪಾದ ವಾತಾವರಣ ಇರುವ ಈ ಚಂದ್ರವಳ್ಳಿಗೆ ನಿತ್ಯವೂ ಬೆಳಗ್ಗೆ ಹಾಗೂ ಸಂಜೆ ನೂರಾರು ಜನ ವಾಕ್ ಬರುತ್ತಾರೆ. ವೀಕೆಂಡ್‌ನಲ್ಲಿ ಸಾವಿರಾರು ಜನ ಪ್ರವಾಸಿಗರು ಕೂಡಬರ್ತಾರೆ.ಆದರೆ ಕಳೆದ ಒಂದು ವಾರದಿಂದ ಬಿಸಿಲ ಝಳ ಹೆಚ್ಚಾಗಿದ್ದೂ,ಪ್ರವಾಸಿಗರ ಸಂಖ್ಯೆ ಸಹ ವಿರಳವಾಗಿದೆ. ಇದನ್ನೂ ಓದಿ: ಎರಡನೇ ವಿಮಾನ ನಿಲ್ದಾಣ – ಶಾಸಕ ಸ್ಥಾನ ಪಣಕ್ಕಿಟ್ಟು ರೈತರ ಪರ ನಿಲ್ತೀನಿ: ಎನ್.ಶ್ರೀನಿವಾಸ್

    ಈ ಮೂಕಜೀವಿಗಳು ಆಹಾರವಿಲ್ಲದೇ ಪರದಾಡುತ್ತಿದ್ದು, ನೀರಾಟದಲ್ಲೇ ಕಾಲ ಕಳೆಯಿತ್ತಿವೆ. ಹೀಗಾಗಿ ಆದಷ್ಟು ನೀರಿನ ಮೂಲಗಳನ್ನು ಸಂರಕ್ಷಿಸುವ ಮೂಲಕ ಇಂತಹ ಮೂಕಜೀವಿಗಳು ಸಹ ಬೇಸಿಗೆ ವೇಳೆ ಬಿಂದಾಸ್ ಆಗಿ ಬದುಕಲು ಎಲ್ಲರು ಸಹಕರಿಸಬೇಕೆಂಬುದು ಪ್ರಾಣಿಪ್ರಿಯರ ಅಭಿಪ್ರಾಯ. ಇದನ್ನೂ ಓದಿ:  52ನೇ ಸಿಜೆಐ ಆಗಿ ನ್ಯಾ.ಬಿಆರ್ ಗವಾಯಿ ನೇಮಕ

  • ದೇಹ ತಂಪಾಗಿಸುವ ಆರೋಗ್ಯಕರ ತಾಳೆಹಣ್ಣಿನ ಜ್ಯೂಸ್‌

    ದೇಹ ತಂಪಾಗಿಸುವ ಆರೋಗ್ಯಕರ ತಾಳೆಹಣ್ಣಿನ ಜ್ಯೂಸ್‌

    ಬಿರು ಬೇಸಿಗೆಯಲ್ಲಿ ದೇಹವನ್ನು ತಂಪಾಗಿಸಲು ಜನರು ಅನೇಕ ಕೂಲ್‌ ಡ್ರಿಂಕ್ಸ್‌ಗಳ ಮೊರೆ ಹೋಗುತ್ತಾರೆ. ಬೇಸಿಗೆಯಲ್ಲಿ ದೇಹವನ್ನು ತಂಪಾಗಿಸಲು ಉತ್ತಮ ಪಾನೀಯವೆಂದರೆ ಅದು ತಾಳೆಹಣ್ಣಿನ ಜ್ಯೂಸ್‌. ಈ ಉರಿ ಬಿಸಿಲಿನ ಸಮಯಲ್ಲಿ ದೇಹ ರಕ್ಷಣೆ ಮಾಡಲು ಮಾಡಲು ತಾಳೆ ಹಣ್ಣಿನ ಜ್ಯೂಸ್‌ ಸಹಕಾರಿಯಾಗಿದೆ. ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಇದು ತುಂಬಾನೇ ಒಳ್ಳೆಯದು. ಇವತ್ತಿನ ನಮ್ಮ ರೆಸಿಪಿಯಲ್ಲಿ ಆರೋಗ್ಯಕರ ಹಾಗೂ ಬಿಸಿಲಿನ ದಾಹವನ್ನು ತಣಿಸುವ ತಾಳೆಹಣ್ಣಿನ ಜ್ಯೂಸ್ ಯಾವರೀತಿ ಮಾಡುವುದು ಎಂಬುದನ್ನು ತಿಳಿಸಿಕೊಡುತ್ತೇವೆ.

    ಬೇಕಾಗುವ ಸಾಮಗ್ರಿ
    ತಾಳೆಹಣ್ಣು ಅಥವಾ ಈರೋಳ್‌ – 6 ಪೀಸ್‌
    ನಿಂಬೆರಸ – 1 ಚಮಚ
    ಸಕ್ಕರೆ – 6 ಚಮಚ
    ಐಸ್‌ ಕ್ಯೂಬ್ಸ್‌ – 5

    ಮಾಡುವ ವಿಧಾನ
    * ತಾಳೆಹಣ್ಣು ತೆಗೆದು ಮಿಕ್ಸ್‌ಯನ್ನು ಪೇಸ್ಟ್‌ ಮಾಡಿ
    * ಬಳಿಕ ಈಗ ನೀರಿಗೆ ಸಕ್ಕರೆ, ನಿಂಬೆರಸ ಹಾಕಿ ಮಿಕ್ಸ್ ಮಾಡಿಕೊಳ್ಳಿ
    * ನಂತರ ಅದಕ್ಕೆ ತಾಳೆಹಣ್ಣು ಪೇಸ್ಟ್ ಹಾಕಿ ಸೇರಿಸಿಕೊಳ್ಳಿ
    * ಐಸ್‌ಕ್ಯೂಬ್ಸ್ ಹಾಕಿ ಕುಡಿಯರಿ.

    ಸೋಡಾ ಹಾಕಿ ಮಾಡುವ ವಿಧಾನ
    ಸೋಡಾ – 1 ಬಾಡಲ್‌
    ತಾಳೆಹಣ್ಣು – 6 ಪೀಸ್‌
    ಪುದೀನಾ ಎಲೆ
    ನಿಂಬೆಹಣ್ಣು – 1 ಚಮಚ
    ಸಕ್ಕರೆ – 6 ಚಮಚ
    ಐಸ್‌ಕ್ಯೂಬ್ಸ್

    ಮಾಡುವ ವಿಧಾನ
    * ಸೋಡಾಗೆ ಸಕ್ಕರೆ ಪುಡಿ ಮಾಡಿಕೊಳ್ಳಿ
    * ನಂತರ ಅದಕ್ಕೆ ನಿಂಬೆರಸ ಹಾಕಿ ಮಿಕ್ಸ್ ಮಾಡಿಕೊಳ್ಳಿ
    * ತಾಳೆಹಣ್ಣು ಪೇಸ್ಟ್‌ ಮಾಡಿ ಸೋಡಾಗೆ ಹಾಕಿ ಮಿಕ್ಸ್‌ ಹಾಕಿಕೊಳ್ಳಿ
    * ಕೊನೆಯದಾಗಿ ಐಸ್‌ಕ್ಯೂಬ್ಸ್‌ ಹಾಗೂ ಪುದೀನಾ ಎಲೆ ಹಾಕಿ ಕುಡಿಯಿರಿ

  • ಬೇಸಿಗೆಯಲ್ಲಿ ದೇಹವನ್ನು ತಂಪಾಗಿರಿಸಬೇಕೆ? – ಒಂದು ಕ್ಲಿಕ್‌ನಲ್ಲಿದೆ ಸಿಂಪಲ್‌ ಟಿಪ್ಸ್‌

    ಬೇಸಿಗೆಯಲ್ಲಿ ದೇಹವನ್ನು ತಂಪಾಗಿರಿಸಬೇಕೆ? – ಒಂದು ಕ್ಲಿಕ್‌ನಲ್ಲಿದೆ ಸಿಂಪಲ್‌ ಟಿಪ್ಸ್‌

    ಬೇಸಗಿಯ ಬಿರು ಬಿಸಿಲು ಜನರ ನೆತ್ತಿ ಸುಡುತ್ತಿದೆ, ಮನೆಯೊಳಗಿದ್ದರೂ ಧಗೆಯ ಬೇಗೆ ಹೆಚ್ಚಾಗಿದೆ. ಫ್ಯಾನು ಎ.ಸಿ ಬಿಟ್ಟಿರಿಂಗೇ ಇಲ್ಲ. ಈ ಬೇಸಿಗೆಯಲ್ಲಿ ದೇಹದ ಉಷ್ಣಾಂಶ ಕಡಿಮೆಯಾಗಿರುವಂತೆ ನೋಡಿಕೊಳ್ಳವುದು ಬಹಳ ಮುಖ್ಯ. ಅದಕ್ಕಾಗಿ ದೇಹ ತಂಪಾಗಿರಲು ದೇಹದಲ್ಲಿ ನೀರಿನ ಅಂಶ ಪ್ರಮುಖ ಪಾತ್ರವಹಿಸುತ್ತದೆ. ನೀರು, ಪಾನೀಯಗಳ ಜೊತೆ ಹಣ್ಣುಗಳು ಸಹ ದೇಹವನ್ನು ತಂಪಾಗಿಡಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲದೇ ನಾವು ಇಂತಹ ಸಮಯದಲ್ಲಿ ನಾವು ಸೇವಿಸುವ ಆಹಾರ, ಧರಿಸುವ ಬಟ್ಟೆ, ಇರುವ ವಾತಾವರಣ ಎಲ್ಲವೂ ದೇಹದ ಮೇಲೆ ಪರಿಣಾಮ ಬೀರುತ್ತದೆ.

    ಬೇಸಿಗೆಯಲ್ಲಿ ಬಿಸಿಲಿನ ಝಳದಿಂದ ನಿರ್ಜಲೀಕರಣಕ್ಕೆ ಒಳಗಾಗುವುದು ಒಂದು ತೊಂದರೆಯಾದರೆ, ಬೆವರು, ಬೆವರುಸಾಲೆ, ಚರ್ಮ ಒಣಗುವಿಕೆ, ಬಿಸಿಲಿಗೆ ಒಡ್ಡಿದ ಚರ್ಮದ ಭಾಗ ಕಪ್ಪಗಾಗುವುದು, ಬಿರಿಯುವುದು ಮೊದಲಾದ ತೊಂದರೆಯಾಗಿವೆ. ಈ ತೊಂದರೆಗಳಿಗೆ ಆಯುರ್ವೇದ ಕ್ಷಾರೀಯ ಆಹಾರಗಳನ್ನು ಸೇವಿಸುವಂತೆ ಸಲಹೆ ಮಾಡುತ್ತದೆ ಹಾಗೂ ದೇಹವನ್ನು ತಂಪಾಗಿರಿಸಲು ಕೆಲವು ಕ್ರಮಗಳನ್ನುಸೂಚಿಸಿದೆ. ಅದಕ್ಕೆ ನಾವೇನು ಮಾಡಬೇಕು ಅನ್ನೋದರ ಕುರಿತು ಒಂದಿಷ್ಟು ಟಿಪ್ಸ್‌ ಇಲ್ಲಿದೆ…

    ದೈನಂದಿನ ತ್ವಚೆಯ ಆರೈಕೆಯಲ್ಲಿ ಕೊಬ್ಬರಿ ಎಣ್ಣೆ ಸೇರಿಸಿಕೊಳ್ಳಿ
    ನಿತ್ಯವೂ ಬೆಳಿಗ್ಗೆ, ಸ್ನಾನಕ್ಕೂ ಮುನ್ನ ಸ್ವಲ್ಪ ಕೊಬ್ಬರಿ ಎಣ್ಣೆಯನ್ನು ದೇಹಕ್ಕೆ ಚೆನ್ನಾಗಿ ತಿಕ್ಕಿಕೊಳ್ಳಿ. ಈ ಮೂಲಕ ತ್ವಚೆಗೆ ತಂಪಾದ ಅನುಭವ ಸಿಗುವ ಜೊತೆಗೇ ಉರಿಯಾಗದೇ ಇರಲೂ ಸಾಧ್ಯವಾಗುತ್ತದೆ. ಕೊಬ್ಬರಿ ಎಣ್ಣೆ ಲಭ್ಯವಿಲ್ಲದಿದ್ದರೆ ಸೂರ್ಯಕಾಂತಿ ಎಣ್ಣೆಯನ್ನೂ ಬಳಸಬಹುದು ಎನ್ನುತ್ತಾರೆ ಆಯುರ್ವೇದ ತಜ್ಞರು.

    Coconut oil, essential oil, organic cosmetic

    ಪಿತ್ತ ಶಮನಗೊಳಿಸುವ ಆಹಾರ ಸೇವಿಸಿ
    ದೇಹವನ್ನು ತಂಪಾಗಿರಿಸಲು ಪಿತ್ತವನ್ನು ಶಮನಗೊಳಿಸುವ ಗುಣವಿರುವ ಆಹಾರಗಳನ್ನು ಬೇಸಿಗೆಯಲ್ಲಿ ಸೇವಿಸಬೇಕು. ಇವು ದೇಹವನ್ನು ತಂಪಾಗಿಸುವ ಜೊತೆಗೆ ಹೆಚ್ಚುವರಿ ಶಾಖವನ್ನು ದೇಹದಿಂದ ಹೊರಹಾಕಲೂ ನೆರವಾಗುತ್ತವೆ. ಇದಕ್ಕಾಗಿ ನೀರಿನಂಶ ಹೆಚ್ಚಾಗಿರುವ ಆಹಾರಗಳಾದ ಕಲ್ಲಂಗಡಿ, ಮರಸೇಬು (ಪಿಯರ್ಸ್), ಸೇಬು, ಪ್ಲಂ ಹಣ್ಣುಗಳು, ವಿವಿಧ ಬೆರ್‍ರಿ ಹಣ್ಣುಗಳು, ಪ್ರೂನ್ಸ್ ಮೊದಲಾದವುಗಳನ್ನು ಸೇವಿಸಬೇಕು. ಜೊತೆಗೇ ತರಕಾರಿಗಳಾದ ಶತಾವರಿ, ಬ್ರೋಕೋಲಿ, ಬ್ರಸಲ್ಸ್ ಮೊಗ್ಗುಗಳು, ಸೌತೆಕಾಯಿ ಮೊದಲಾದವುಗಳನ್ನೂ ಸೇವಿಸಬೇಕು., ಪುದಿನಾ, ಮಜ್ಜಿಗೆ ಮೊದಲಾದವುಗಳಿಂದ ತಯಾರಿಸಿದ ಪಾನೀಯಗಳೂ ಉತ್ತಮ ಆಯ್ಕೆಯಾಗಿವೆ.

    ​ಸರಿಯಾದ ಸಮಯದಲ್ಲಿ ಆಹಾರ ಸೇವಿಸಿ
    ಜೀರ್ಣಾಗ್ನಿ ಅತ್ಯಂತ ಪ್ರಬಲವಾಗಿದ್ದಾಗಿನ ಸಮಯದಲ್ಲಿಯೇ ಊಟ ಮಾಡಿ. ಇದು ನಡು ಮಧ್ಯಾಹ್ನ ಅಥವಾ ಸೂರ್ಯ ಸರಿಯಾಗಿ ನೆತ್ತಿಯ ಮೇಲಿದ್ದಾಗ ಗರಿಷ್ಟವಾಗಿರುತ್ತದೆ. ಈ ಸಮಯದಲ್ಲಿ ಆಹಾರ ಸೇವಿಸುವ ಮೂಲಕ ಪಿತ್ತದೋಶ ಎದುರಾಗುವುದಿಲ್ಲ. ಇದೇ ಕಾರಣದಿಂದ ಮಧ್ಯಾಹ್ನದ ಊಟ ಬಿಡಬಾರದು, ಬಿಟ್ಟರೆ ಪಿತ್ತದೋಶ ಎದುರಾಗುತ್ತದೆ ಮತ್ತು ದೇಹದಲ್ಲಿ ಉರಿಯೂತ ಹಾಗೂ ಚಡಪಡಿಕೆಯನ್ನು ಉಂಟು ಮಾಡುತ್ತದೆ. ಆದ್ದರಿಂದ ದಿನದ ಮೂರೂ ಹೊತ್ತಿನ ಊಟಗಳನ್ನು ಸಮಯಕ್ಕೆ ಸರಿಯಾಗಿ ಸೇವಿಸಬೇಕು. ತಡವೂ ಆಗಬಾರದು ಮತ್ತು ಬಿಡಲೂಬಾರದು. ಜೊತೆಗೆ ನೀರನ್ನು ಸಾಧ್ಯವಾದಷ್ಟು ಕುಡಿಯುತ್ತಲೇ ಇರಬೇಕು. ಜೊತೆಗೆ ಬಿಸಿ ಪೇಯಗಳಿಂದ ಅಂದ್ರೆ ಕಾಫೀ, ಟೀ ಅಂತಹ ದೇಹದ ಉಷ್ಣಾಂಶ ಹೆಚ್ಚಿಸುವ ಲಿಕ್ವಿಡ್‌ಗಳನ್ನು ಸೇವಿಸಬಾರದು.

    ಸ್ನಾನಕ್ಕೆ ತಣ್ಣೀರು ಬಳಸಿ
    ಬೇಸಿಗೆಯಲ್ಲಿ ನಿಮ್ಮ ದೇಹವು ಒಳಗಿನಿಂದ ತುಂಬಾ ಬಿಸಿಯಾಗುತ್ತಿದ್ದರೆ, ನೀವು ಸ್ನಾನಕ್ಕೆ ತಣ್ಣೀರನ್ನು ಬಳಸಬೇಕು. ಹೀಗೆ ಮಾಡಿದಾಗ, ನಿಮ್ಮ ದೇಹದ ಉಷ್ಣತೆ ನಿಯಂತ್ರಣದಲ್ಲಿರುತ್ತದೆ. ಸ್ನಾನದ ನಂತರವೂ ನಿಮಗೆ ತುಂಬಾ ಸೆಕೆ ಅನಿಸುತ್ತಿದ್ದರೆ, ನಿಮ್ಮ ಮಣಿಕಟ್ಟು, ಕುತ್ತಿಗೆ, ಹಣೆ ಮತ್ತು ಪಾದಗಳಿಗೆ ಕೂಲಿಂಗ್ ಪ್ಯಾಕ್‌ಗಳನ್ನು ಬಳಸಬಹುದು.

    ಹಗುರ ಮತ್ತು ಸಡಿಲವಾದ ಬಟ್ಟೆಗಳನ್ನು ಧರಿಸಿ
    ಬೇಸಿಗೆಯಲ್ಲಿ ಸಡಿಲ ಮತ್ತು ಹಗುರವಾದ ಬಟ್ಟೆಗಳನ್ನು ಧರಿಸುವುದರಿಂದ ದೇಹವನ್ನು ಇನ್ನಷ್ಟು ಆರಾಮದಾಯಕಗೊಳಿಸಬಹುದು. ಇದರಿಂದ ದೇಹದ ಉಷ್ಣತೆ ಹೆಚ್ಚಾಗದಂತೆ ನಿಯಂತ್ರಣದಲ್ಲಿಡಬಹುದು.

  • ಬಿಸಿಲಿನ ದಾಹಕ್ಕೆ ಆರೋಗ್ಯಕರ ನೆಲ್ಲಿಕಾಯಿ ಜ್ಯೂಸ್!

    ಬಿಸಿಲಿನ ದಾಹಕ್ಕೆ ಆರೋಗ್ಯಕರ ನೆಲ್ಲಿಕಾಯಿ ಜ್ಯೂಸ್!

    ಬೇಸಿಗೆಯಲ್ಲಿ ನಿರ್ಜಲೀಕರಣದ ಸಮಸ್ಯೆ ಅತ್ಯಂತ ಸಾಮಾನ್ಯ. ಹಾಗಾಗಿ, ದೇಹದಲ್ಲಿ ನೀರಿನ ಸಮತೋಲನವನ್ನು ಕಾಪಾಡಿಕೊಳ್ಳಲು, ಬೇಸಿಗೆಯಲ್ಲಿ ಯಥೇಚ್ಚವಾಗಿ ದ್ರವ ಆಹಾರಗಳನ್ನು ಸೇವಿಸಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ. ಆಯುರ್ವೇದ ಔಷದಗಳಲ್ಲಿ ಭಾರತೀಯ ನೆಲ್ಲಿಕಾಯಿ ಅಥವಾ ಆಮ್ಲಾವನ್ನು ಅಮೃತವೆಂದು ಪರಿಗಣಿಸಲಾಗುತ್ತದೆ. ಇವತ್ತಿನ ನಮ್ಮ ರೆಸಿಪಿಯಲ್ಲಿ ಆರೋಗ್ಯಕರ ಹಾಗೂ ಬಿಸಿಲಿನ ದಾಹವನ್ನು ತಣಿಸುವ ನೆಲ್ಲಿಕಾಯಿ ಜ್ಯೂಸ್ ಯಾವರೀತಿ ಮಾಡುವುದು ಎಂಬುದನ್ನು ತಿಳಿಸಿಕೊಡುತ್ತೇವೆ.

    ಬೇಕಾಗುವ ಸಾಮಗ್ರಿಗಳು:
    ನೆಲ್ಲಿಕಾಯಿ ರಸ – ಒಂದು ಕಪ್
    ಜೇನು ತುಪ್ಪ – 1 ಚಮಚ
    ಪಿಂಕ್ ಉಪ್ಪು – ರುಚಿಗೆ ತಕ್ಕಷ್ಟು

    ಮಾಡುವ ವಿಧಾನ:
    *ಮೊದಲಿಗೆ ಬೀಜ ತೆಗದ ನೆಲ್ಲಿಕಾಯಿಯನ್ನು ಮಿಕ್ಸರ್‌ನಲ್ಲಿ ರುಬ್ಬಿಕೊಳ್ಳಿ.
    *ನಂತರ ಒಂದು ಉದ್ದನೆಯ ಲೋಟಕ್ಕೆ ಒಂದು ಕಪ್ ನೆಲ್ಲಿಕಾಯಿ ರಸ ಹಾಕಿ.
    *ಬಳಿಕ ಅದಕ್ಕೆ ಜೇನು ತುಪ್ಪ ಮತ್ತು ಪಿಂಕ್ ಉಪ್ಪು ಸೇರಿಸಿ.
    *ಎಲ್ಲವನ್ನು ಚೆನ್ನಾಗಿ ಮಿಶ್ರ ಮಾಡಿ.
    *ನೆಲ್ಲಿಕಾಯಿ ರಸ ಕಡಿಮೆಯಿದ್ದಲ್ಲಿ ನೀರು ಬೆರೆಸಿಕೊಳ್ಳಬಹುದು.
    *ನಂತರ ಚೆನ್ನಾಗಿ ಮಿಕ್ಸ್ ಮಾಡಿ ಕುಡಿಯಿರಿ.

  • ರಣ ಬಿಸಿಲು – ಕಿತ್ತೂರು, ಕಲ್ಯಾಣ ಕರ್ನಾಟಕದ 8 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

    ರಣ ಬಿಸಿಲು – ಕಿತ್ತೂರು, ಕಲ್ಯಾಣ ಕರ್ನಾಟಕದ 8 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

    – ಬೆಳಗ್ಗೆ 8ರಿಂದ ಮಧ್ಯಾಹ್ನ 1:30ರ ತನಕ ಕೆಲಸ

    ಬೆಂಗಳೂರು: ಬಿಸಿಲಿನ ತಾಪಮಾನದ ಕಾರಣಕ್ಕಾಗಿ ಕಿತ್ತೂರು (Kittur) ಕರ್ನಾಟಕದ ಎರಡು ಜಿಲ್ಲೆಗಳು, ಕಲ್ಯಾಣ ಕರ್ನಾಟಕದ (Kalyana Karnataka) 6 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ (Govt Office) ಕೆಲಸದ ಸಮಯ ಬದಲಾವಣೆ ಮಾಡಲಾಗಿದೆ.

    ಕಲಬುರಗಿ ವಿಭಾಗದ 6 ಜಿಲ್ಲೆಗಳು, ಬೆಳಗಾವಿ ವಿಭಾಗದ ಎರಡು ಜಿಲ್ಲೆಗಳಲ್ಲಿ ಸರ್ಕಾರಿ ಕೆಲಸದ ಸಮಯ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳಗ್ಗೆ 8ರಿಂದ ಮಧ್ಯಾಹ್ನ 1:30ರ ತನಕ ಸರ್ಕಾರಿ ಕಚೇರಿಗಳ ಕೆಲಸದ ಸಮಯ ನಿಗದಿ ಮಾಡಿದ್ದು, ಏಪ್ರಿಲ್, ಮೇ ತಿಂಗಳ ಅಂತ್ಯದ ತನಕವೂ ಸರ್ಕಾರಿ ಕಚೇರಿ ಸಮಯ ಬದಲಾವಣೆ ಜಾರಿಯಲ್ಲಿ ಇರಲಿದೆ. ಇದನ್ನೂ ಓದಿ: ನಾಳೆ ಹೈಕಮಾಂಡ್ ಮುಂದೆ ವರದಿ ಕೊಡಲಿರುವ ಸಿಎಂ ಸಿದ್ದರಾಮಯ್ಯ: ರಾಜಣ್ಣ ಹನಿಟ್ರ್ಯಾಪ್ ಕೇಸ್‌ಗೆ ಎಳ್ಳುನೀರು?

    ಕಲಬುರಗಿ, ಬೀದರ್, ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ ಆಗಲಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿ ಮೇರೆಗೆ ಸರ್ಕಾರದ ಆದೇಶ ಹೊರಬಿದ್ದಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ| ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಮೂವರು ದುರ್ಮರಣ

    8 ಜಿಲ್ಲೆಗಳಲ್ಲಿ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಎಂದಿನಂತೆ ಯಾವುದೇ ಲೋಪ/ಅಡೆತಡೆಯಿಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು. ಸಾರ್ವಜನಿಕರಿಗೆ ಯಾವುದೇ ರೀತಿ ಅನಾನುಕೂಲ ಆಗದಂತೆ ಮತ್ತು ಜಿಲ್ಲಾಧಿಕಾರಿಗಳು/ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಕರ್ತವ್ಯ ನಿರ್ವಹಿಸತಕ್ಕದ್ದು ಎಂಬ ಷರತ್ತನ್ನು ಸಹ ಹಾಕಲಾಗಿದೆ. ಇದನ್ನೂ ಓದಿ: ಗದಗ| ಬೀದಿ ನಾಯಿಗಳ ದಾಳಿ – ಮಹಿಳೆಗೆ ಗಂಭೀರ ಗಾಯ

  • ಮಧ್ಯಾಹ್ನ 12 ರಿಂದ 3 ಗಂಟೆ ವರೆಗೆ ಮನೆಯಿಂದ ಹೊರಗೆ ಬರಬೇಡಿ: ದಿನೇಶ್ ಗುಂಡೂರಾವ್

    ಮಧ್ಯಾಹ್ನ 12 ರಿಂದ 3 ಗಂಟೆ ವರೆಗೆ ಮನೆಯಿಂದ ಹೊರಗೆ ಬರಬೇಡಿ: ದಿನೇಶ್ ಗುಂಡೂರಾವ್

    ರಾಯಚೂರು: ಈ ವರ್ಷ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆಯಿದ್ದು, ಮಧ್ಯಾಹ್ನ 12 ರಿಂದ 3 ರವರೆಗೆ ಹೊರಗೆ ಕೆಲಸ ಮಾಡಬಾರದು, ಮನೆ, ಕಚೇರಿಯಲ್ಲೇ ಇರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಹೇಳಿದ್ದಾರೆ.ಇದನ್ನೂ ಓದಿ: ಲಿವ್‌ ಇನ್‌ನಲ್ಲಿದ್ದಾಗ ಕೊಟ್ಟಿದ್ದ ಹಣ, ಒಡವೆ ಕೊಡು ಎಂದವನಿಗೆ ಥಳಿಸಿ ವಿಷ ಕುಡಿಸಿದ ಮಾಜಿ ಪ್ರೇಯಸಿ!

    ರಾಯಚೂರಿನ (Raichuru) ಮಾನ್ವಿಯಲ್ಲಿ (Manvi) ಮಾತನಾಡಿದ ಅವರು, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಈಗಾಗಲೇ ಸೂಚಿಸಿದ್ದೇವೆ. ಬಿಸಿಲು ಹೆಚ್ಚಾಗುತ್ತಿರುವುದರಿಂದ ಸರ್ಕಾರಿ ಕಚೇರಿಗಳ ಕೆಲಸದ ಸಮಯ ಬದಲಾವಣೆಯ ಬಗ್ಗೆ ಸರ್ಕಾರ ಮಟ್ಟದಲ್ಲಿ ತೀರ್ಮಾನ ಮಾಡಿಕೊಳ್ಳಲಿ. ಮಧ್ಯಾಹ್ನ ಹೊತ್ತು ಫೀಲ್ಡ್ ವಿಸಿಟ್ ಮಾಡುವುದನ್ನು ಅಧಿಕಾರಿಗಳು ಬಿಡಬೇಕು. ಸರ್ಕಾರಿ ನೌಕರರು ಹೊರಗಡೆ ವೀಕ್ಷಣೆಯನ್ನು ಮಧ್ಯಾಹ್ನ 12 ರಿಂದ 3ರ ವರೆಗೆ ಮಾಡಬಾರದು. ಬೆಳಗಿನ ಜಾವ ಅಥವಾ ಸಾಯಂಕಾಲ ಮಾಡಬೇಕು. ಸರ್ಕಾರ ರಜೆ ಕೊಡಬೇಕು ಅಂತ ಹೇಳುವುದಿಲ್ಲ, ಸಮಯ ಬದಲಾವಣೆ ಮಾಡಿಕೊಂಡರೆ ಒಳ್ಳೆಯದು ಎಂದರು.

    ರಾಯಚೂರು ಜಿಲ್ಲೆ ಸೇರಿ ಈ ಭಾಗದಲ್ಲಿ 43 ರಿಂದ 44 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ಹೋಗುತ್ತದೆ. ಮಧ್ಯಾಹ್ನ ಸಮಯದಲ್ಲಿ ಮನೆಯೊಳಗೆ ಅಥವಾ ಕಚೇರಿಯೊಳಗೆ ಇರುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ಶಾಲೆಗಳು, ಎಲ್ಲಾ ಸಂಸ್ಥೆಗಳು ಆ ಬಗ್ಗೆ ಗಮನ ಕೊಡಬೇಕು. ಆಹಾರದ ಬಗ್ಗೆಯೂ ಗಮನ ಕೊಡಬೇಕು. ಆಗಾಗ ನೀರು ಕುಡಿದರೆ ನಿರ್ಜಲೀಕರಣದಿಂದ ದೂರ ಇರಬಹುದು. ಬಿಸಿಲಿನ ತಾಪಮಾನ ಹೆಚ್ಚಳ ಹಿನ್ನೆಲೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಪೆಷಲ್ ವಾರ್ಡ್ ಅಗತ್ಯ ಇಲ್ಲ. ನಮ್ಮಲ್ಲಿ ಎಲ್ಲಾ ಸೌಲಭ್ಯಗಳಿವೆ ಎಂದು ತಿಳಿಸಿದರು.ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ವಕ್ಫ್‌ ಅಧ್ಯಕ್ಷ ಸ್ಥಾನ ವಿಚಾರದಲ್ಲಿ ಜಟಾಪಟಿ – ಅಧ್ಯಕ್ಷರಾಗಿ ಸೈಯದ್ ಹುಸೈನಿ ಆಯ್ಕೆ

  • ರಾಜ್ಯದ 6 ಜಿಲ್ಲೆಗಳಲ್ಲಿ 40ರ ಗಡಿದಾಟಿದ ತಾಪಮಾನ

    ರಾಜ್ಯದ 6 ಜಿಲ್ಲೆಗಳಲ್ಲಿ 40ರ ಗಡಿದಾಟಿದ ತಾಪಮಾನ

    ರಾಯಚೂರು: ಬೇಸಿಗೆ ಆರಂಭವಾಗುತ್ತಿದ್ದಂತೆ ರಾಜ್ಯದಲ್ಲಿ ತಾಪಮಾನ ಹೆಚ್ಚಾಗುತ್ತಿದ್ದು, ಇದೀಗ ರಾಜ್ಯದ ಕೆಲವು ಜಿಲ್ಲೆಗಳು ಗರಿಷ್ಠ ತಾಪಮಾನದ ಗಡಿಯನ್ನು ದಾಟಿದೆ.ಇದನ್ನೂ ಓದಿ: ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಹಿಂದೂ ಚಿಂತಕ ಚಕ್ರವರ್ತಿ ಸೂಲಿಬೆಲೆ ವಿವಾದದ ಮಾತು

    ಹೌದು, ಕಳೆದ 24 ಗಂಟೆಗಳಲ್ಲಿ ರಾಜ್ಯದ 6 ಜಿಲ್ಲೆಗಳು 40 ಡಿಗ್ರಿ ಸೆಲ್ಸಿಯಸ್ ತಾಪಮಾನದ ಗಡಿದಾಟಿದೆ. ಈ ಪೈಕಿ ಬಿಸಿಲನಾಡು ರಾಯಚೂರು ಅಗ್ರ ಸ್ಥಾನದಲ್ಲಿದ್ದು, 41.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ತಾಪಮಾನ ಹೆಚ್ಚಳದಿಂದಾಗಿ ಜಿಲ್ಲೆಯ ಜನ ಕಂಗಾಲಾಗಿದ್ದು, ಕನಿಷ್ಠ ತಾಪಮಾನ ಏರಿಕೆಯಾಗಿರುವುದು ತಲೆ ಸುಡುವಂತೆ ಮಾಡಿದೆ.

    ರಾಯಚೂರು ಬಳಿಕ ಕೊಪ್ಪಳ 40.7 ಡಿಗ್ರಿ, ಉತ್ತರಕನ್ನಡ ಮತ್ತು ಧಾರವಾಡದಲ್ಲಿ 40.5 ಡಿಗ್ರಿ, ಕಲಬುರಗಿ 40.4 ಡಿಗ್ರಿ ಹಾಗೂ ಬಾಗಲಕೋಟೆಯಲ್ಲಿ 40.1 ಡಿಗ್ರಿ ತಾಪಮಾನ ದಾಖಲಾಗಿದೆ. ರಾಯಚೂರು ತಾಪಮಾನದಲ್ಲಿ ದಾಖಲೆಯತ್ತ ಮುನ್ನುಗ್ಗುತ್ತಿದೆ.ಇದನ್ನೂ ಓದಿ: ಬಾಗಲಕೋಟೆ | ಕುರಿ ಕಳ್ಳರನ್ನ ಹಿಡಿಯಲು ಹೋದ ವ್ಯಕ್ತಿಯ ಕೊಲೆ – ಆರೋಪಿಗಳು ಅರೆಸ್ಟ್

     

  • ಕರಾವಳಿಯಲ್ಲಿ ಅಚ್ಚರಿ – ಬೇಸಿಗೆಯಲ್ಲಿ ಏಕಾಏಕಿ ಗ್ರಾಮಕ್ಕೆ ನುಗ್ಗಿದ ಕಾಳಿ ನದಿಯ ನೀರು!

    ಕರಾವಳಿಯಲ್ಲಿ ಅಚ್ಚರಿ – ಬೇಸಿಗೆಯಲ್ಲಿ ಏಕಾಏಕಿ ಗ್ರಾಮಕ್ಕೆ ನುಗ್ಗಿದ ಕಾಳಿ ನದಿಯ ನೀರು!

    – ಕರಾವಳಿ ಗ್ರಾಮದ ಗದ್ದೆಗಳಲ್ಲಿ ಉಪ್ಪು ಮಿಶ್ರಿತ ನೀರು
    – ಸಾವಿರಾರು ಎಕ್ರೆ ರೈತರ ಭೂಮಿ ಜಲಾವೃತ

    ಕಾರವಾರ:  ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಬಿಸಿ ಗಾಳಿ ಬೀಸತೊಡಗಿದೆ. ಈ ಮಧ್ಯೆ ಕಳೆದ ಮೂರು ದಿನದಿಂದ ಕಾರವಾರದ(Karawara) ಕಿನ್ನರ ಗ್ರಾಮದ ಗದ್ದೆಗಳಿಗೆ ಏಕಾಏಕಿ ಕಾಳಿ ನದಿಯ (Kali River) ಉಪ್ಪು ಮಿಶ್ರಿತ ನೀರು ಬಂದು ಸೇರುತ್ತಿದ್ದು ಕೃತಕ ಪ್ರವಾಹವನ್ನೇ ಸೃಷ್ಟಿಸಿದೆ.

    ಸಾವಿರಾರು ಎಕರೆ ಕೃಷಿ ಭೂಮಿ ಇದೀಗ ಕಾಳಿ ನದಿಯ ಉಪ್ಪು ಮಿಶ್ರಿತ ನೀರಿನಿಂದ ಹಾನಿಯಾಗಿದ್ದು ರೈತ ಬೆಳೆದ ತರಕಾರಿ, ಭತ್ತಗಳು ನೀರುಪಾಲಾಗಿದ್ದರೆ ಕುಡಿಯಲು ಬಳಸುವ ಬಾವಿ ನೀರು ಸಹ ಉಪ್ಪು ಮಿಶ್ರಿತವಾಗಿ ಕುಡಿಯಲು ಈಗ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

    ಕಾಳಿ ನದಿಯ ನೀರು ಏಕಾಏಕಿ ಜನವಸತಿ ಪ್ರದೇಶಕ್ಕೆ ನುಗ್ಗಿದ್ದರಿಂದ ಜನ ಭಯಭೀತರಾದರೆ ವಿಜ್ಞಾನಿಗಳು ಇದೊಂದು ನೈಸರ್ಗಿಕ ಪ್ರಕ್ರಿಯೆ ಎಂದಿದ್ದಾರೆ. ಇದನ್ನೂ ಓದಿ:  ಬೆಂಗಳೂರು| ನೇಣು ಬಿಗಿದುಕೊಂಡು ಮಂಗಳೂರು ಮೂಲದ ನವವಿವಾಹಿತೆ ಆತ್ಮಹತ್ಯೆ

    ಪಬ್ಲಿಕ್‌ ಟಿವಿಗೆ ಕಾರವಾರದ ಕಡಲ ಜೀವಶಾಸ್ತ್ರಜ್ಞ ಜಗನ್ನಾಥ್ ರಾಥೋಡ್ ಪ್ರತಿಕ್ರಿಯಿಸಿ, ಪ್ರತಿ ಬಾರಿ ಸಮುದ್ರದಲ್ಲಿ ಭರತ-ಇಳಿತ ಎಂಬ ನೈಸರ್ಗಿಕ ಕ್ರಿಯೆ ನಡೆಯುತ್ತದೆ. ಅಮಾವಾಸ್ಯೆ, ಹುಣ್ಣಿಮೆ ಸಂದರ್ಭದಲ್ಲಿ ಭೂಮಿಗೆ ಚಂದ್ರ ಹತ್ತಿರವಾಗುತ್ತಾನೆ. ಆಗ ಗುರುತ್ವಾಕರ್ಷಣೆ ಹೆಚ್ಚಿರುತ್ತದೆ. ಈ ಸಂದರ್ಭದಲ್ಲಿ ಭರತ – ಇಳಿತ ಎಂಬ ನೈಸರ್ಗಿಕ ಪ್ರಕ್ರಿಯೆ ಸಮುದ್ರದಲ್ಲಿ ನಡೆಯುತ್ತದೆ. ಮೊನ್ನೆ ಶಿವರಾತ್ರಿ ಸಂದರ್ಭದಲ್ಲಿ ಅಮವ್ಯಾಸೆ ಬಂದಿತ್ತು. ಅಂದಿನಿಂದ ಭರತದ ಪ್ರಮಾಣ ಗಣನೀಯ ಏರಿಕೆ ಕಂಡಿದೆ. ಮಾರ್ಚ್‌ 1 ಮತ್ತು 2 ರಂದು ಸಮುದ್ರದ ಅಲೆಯ ಪ್ರಮಾಣ 3 ಮೀಟರ್‌ಗಿಂತಲೂ ಹೆಚ್ಚಾಗಿತ್ತು. ಇದರಿಂದ ಸಮುದ್ರದ ನೀರು ನದಿ ನೀರಿಗೆ ಹೆಚ್ಚಿನ ಪ್ರಮಾಣದಲ್ಲಿ ಸೇರಿ ತಗ್ಗು ಪ್ರದೇಶಕ್ಕೆ ನೀರು ನುಗ್ಗಿದೆ ಎಂದು ತಿಳಿಸಿದರು.

    ಏಕಾಏಕಿ ಕೃಷಿ ಭೂಮಿಗೆ ನೀರು ನುಗ್ಗಿದ್ದರಿಂದ ಸಣ್ಣನೀರಾವರಿ ಇಲಾಖೆ ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಮುದ್ರದ ನೀರು ಹೆಚ್ಚಾಗಿ ಕಾಳಿ ನದಿಗೆ ಸೇರಿದ್ದರಿಂದ ನದಿ ಪಾತ್ರದ ಸುತ್ತಮುತ್ತ ಪ್ರದೇಶಕ್ಕೆ ನೀರು ನುಗ್ಗಿದ್ದು ಯಾವುದೇ ಸಮಸ್ಯೆಯಾಗದು ಎಂದು ಸಣ್ಣ ನೀರಾವರಿ ಇಲಾಖೆ ಅಧಿಕಾರಿ ಪೂರ್ಣಿಮಾ ಹೇಳಿದ್ದಾರೆ.

     

    ಎಲ್ಲೆಲ್ಲಿ ನೀರು ನುಗ್ಗಿದೆ?
    ಕೇವಲ ಕಿನ್ನರ ಗ್ರಾಮದಲ್ಲಿ ಅಲ್ಲದೇ ಸಮುದ್ರ ತೀರಭಾಗದ ಚಂಡಿಯಾ, ಚಿತ್ತಾಕುಲ, ಅಮದಳ್ಳಿಯಲ್ಲಿ ಅಲ್ಲದೇ ಕುಮಟ, ಅಂಕೋಲ ತಾಲೂಕಿನ ಭಾಗದಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗಿದೆ.

    ಒಟ್ಟಿನಲ್ಲಿ ಬಿಸಿಲ ಬೇಗೆಯಲ್ಲಿ ಕರಾವಳಿಯ ಜನ ಬೆಂದಿರುವಾಗಲೇ ಮಳೆ, ಗಾಳಿ ಇಲ್ಲದೇ ಕಾಳಿ ನದಿ ಪ್ರವಾಹ ಜನರನ್ನು ಬೆಚ್ಚು ಬೀಳಿಸಿದೆ. ಆರು ವರ್ಷಗಳ ನಂತರ ಇದೀಗ ಸಮುದ್ರದ ನೈಸರ್ಗಿಕ ಪ್ರಕ್ರಿಯೆಯ ಪರಿಣಾಮ ಕರಾವಳಿ ಗ್ರಾಮದಲ್ಲಿ ರೈತರು ಬೆಳೆದ ಬೆಳೆ ನದಿಪಾಲಾಗಿದೆ.

     

  • ರಾಜ್ಯದಲ್ಲಿ ಮತ್ತೆ 2-3 ಡಿಗ್ರಿ ಉಷ್ಣಾಂಶ ಏರಿಕೆ – ಕರಾವಳಿ, ಬೆಂಗ್ಳೂರಲ್ಲಿ ದಾಖಲೆಯ ಬಿಸಿಲು ಸಾಧ್ಯತೆ

    ರಾಜ್ಯದಲ್ಲಿ ಮತ್ತೆ 2-3 ಡಿಗ್ರಿ ಉಷ್ಣಾಂಶ ಏರಿಕೆ – ಕರಾವಳಿ, ಬೆಂಗ್ಳೂರಲ್ಲಿ ದಾಖಲೆಯ ಬಿಸಿಲು ಸಾಧ್ಯತೆ

    ಬೆಂಗಳೂರು: ರಾಜ್ಯದಲ್ಲಿ ಪೂರ್ವ ಬೇಸಿಗೆ ಅಬ್ಬರ ಜೋರಾಗಿದೆ. ಈ ಹಿಂದಿನ ವರ್ಷಗಳಿಗಿಂತಲೂ ಈ ಬಾರಿ ಉಷ್ಣಾಂಶದಲ್ಲಿ ಏರಿಕೆಯಾಗಿದ್ದು, ಮುಂದಿನ ಒಂದು ವಾರ ಉಷ್ಣಾಂಶನ್ನು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ 3-4 ಡಿಗ್ರಿ ಉಷ್ಣಾಂಶ ಹೆಚ್ಚಾಗುವ ಮೂಲಕ ಜನರನ್ನ ಕಂಗಾಲಾಗಿಸಿದೆ. ಬೇಸಿಗೆಗೂ ಮುನ್ನವೇ ಪರಿಸ್ಥಿತಿ ಹೀಗಾಗಿದ್ದು, ಮುಂಬರುವ ಬೇಸಿಗೆ ದಿನಗಳನ್ನ ಎದುರಿಸೋದು ಹೇಗೆ ಎನ್ನುವ ಆತಂಕ ಶುರುವಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಮುಂದಿನ ಒಂದು ವಾರ ಬಿಸಿಲಬ್ಬರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ಸದ್ಯಕ್ಕಿಂತಲೂ 2-3 ಡಿಗ್ರಿ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆ ಇದೆ.ಇದನ್ನೂ ಓದಿ: ಮತ್ತೆ ಅಚ್ಚರಿ ನೀಡಿದ ಮೋದಿ, ಶಾ ಜೋಡಿ – ರೇಖಾ ಗುಪ್ತಾ ಆಯ್ಕೆ ಹಿಂದಿದೆ ಭಾರೀ ಲೆಕ್ಕಾಚಾರ

    ಮುಂದಿನ ಒಂದು ವಾರ ಕರಾವಳಿಯಲ್ಲಿ ಗರಿಷ್ಠ ತಾಪಮಾನದ ಜೊತೆಗೆ ಕನಿಷ್ಠ ಉಷ್ಣಾಂಶವೂ ಕೂಡ ಗರಿಷ್ಠ ಉಷ್ಣಾಂಶದ ಮಟ್ಟಕ್ಕೆ ಏರಿಕೆಯಾಗಿದೆ. ಕರಾವಳಿಯಲ್ಲಿ ಕನಿಷ್ಠ ಉಷ್ಣಾಂಶ 23-25 ಡಿಗ್ರಿ ಹಾಗೂ ಗರಿಷ್ಠ ತಾಪಮಾನ 33-34 ಡಿಗ್ರಿ ವ್ಯಾಪ್ತಿಯಲ್ಲಿರುತ್ತದೆ. ಉತ್ತರ ಒಳನಾಡಿನಲ್ಲಿ 34-37 ಡಿಗ್ರಿ, ದಕ್ಷಿಣ ಒಳನಾಡಿನ ಆಗುಂಬೆ, ಬೆಂಗಳೂರು, ಚಿಕ್ಕಮಗಳೂರು, ಹಾಸನ, ಮೈಸೂರು, ಚಿಂತಾಮಣಿ ಮತ್ತು ಮಡಿಕೇರಿಯಲ್ಲಿ 31-33 ಡಿಗ್ರಿ ಇರಲಿದೆ.

    ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ ಮತ್ತು ಶಿವಮೊಗದಲ್ಲಿ 34-37 ಇರಲಿದೆ. ಉತ್ತರ ಒಳನಾಡಿನ, ಬಾಗಲಕೋಟೆ ಮತ್ತು ಕೊಪ್ಪಳದಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಗಮನಾರ್ಹನಾಗಿ ಹೆಚ್ಚಾಗಿದ್ದು, ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಗದಗ ಮತ್ತು ಕಲಬುರಗಿಯಲ್ಲಿ ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ದಕ್ಷಿಣ ಒಳನಾಡಿನ ಬೆಂಗಳೂರು (ಕೆಐಎಎಲ್) ವಿಮಾನ ನಿಲ್ದಾಣ, ದಾವಣಗೆರೆ, ಚಿಂತಾಮಣಿ, ಹಾಸನ ಮತ್ತು ಮೈಸೂರಿನಲ್ಲಿ ಸಾಮಾನ್ಯಕ್ಕಿಂತ ತಾಪಮಾನ ಹೆಚ್ಚಾಗಿರಲಿದೆ. ಕರ್ನಾಟಕದಾದ್ಯಂತ ಮುಂದಿನ 5 ದಿನಗಳವರೆಗೆ ತಾಪಮಾನ, ಉತ್ತರ ಒಳನಾಡಿನಲ್ಲಿ 2-4 ಡಿಗ್ರಿ ಸೆಲ್ಸಿಯಸ್ ಹಾಗೂ ಕರಾವಳಿ, ದಕ್ಷಿಣ ಒಳನಾಡಿನಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಸಾಮಾನ್ಯಕ್ಕಿಂತ ಹೆಚ್ಚಾಗಿರಲಿದೆ ಎಂದು ಇಲಾಖೆ ತಿಳಿಸಿದೆ.

    ಇನ್ನೂ ಬೆಂಗಳೂರಿನಲ್ಲೂ ಬಿಸಿಲಬ್ಬರ ಜೋರಾಗುವ ಸಾಧ್ಯತೆ ಇದೆ. ಕಳೆದ 20 ವರ್ಷಗಳ ಬಳಿಕ ಮೊದಲ ಬಾರಿಗೆ ಫೆಬ್ರವರಿಯಲ್ಲಿ 35.5 ಡಿಗ್ರಿ ದಾಖಲಾಗಿತ್ತು. ಆದರೆ ಈ ವರ್ಷ ಈಗಾಗಲೇ 34 ಡಿಗ್ರಿಗೆ ಏರಿಕೆಯಾಗಿದೆ. ಕಳೆದ ಒಂದು ವಾರದಿಂದ 32 ಡಿಗ್ರಿ ದಾಖಲಾಗಿತ್ತು. ಈಗ 34 ರಿಂದ 35 ಡಿಗ್ರಿಗೆ ಏರಿಕೆಯಾಗುವ ಸಾಧ್ಯತೆಯಿದೆ. ಬುಧವಾರ ಕೂಡ ನಗರದಲ್ಲಿ 34 ಡಿಗ್ರಿ ದಾಖಲಾಗಿದ್ದು, ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.ಇದನ್ನೂ ಓದಿ: ಭಕ್ತರು ದೇವರ ಹುಂಡಿಗೆ ಹಾಕಿದ್ದ ಹಣ ಪತ್ನಿ ಖಾತೆಗೆ – ಮುಜರಾಯಿ ಇಲಾಖೆಯ 60 ಲಕ್ಷಕ್ಕೆ ಕನ್ನ

  • ಬೇಸಿಗೆಯಲ್ಲಿ ಪ್ರವಾಸ ಮಾಡುವವರು ಅನುಸರಿಸಬೇಕಾದ ಸಲಹೆಗಳು

    ಬೇಸಿಗೆಯಲ್ಲಿ ಪ್ರವಾಸ ಮಾಡುವವರು ಅನುಸರಿಸಬೇಕಾದ ಸಲಹೆಗಳು

    ಬೇಸಿಗೆ ರಜೆ ಬಂತೆಂದರೆ ಸಾಕು, ಪೋಷಕರು ತಮ್ಮ ಮಕ್ಕಳು, ಕುಟುಂಬದೊಂದಿಗೆ ಪ್ರವಾಸ ಕೈಗೊಂಡು ಎಂಜಾಯ್ ಮಾಡುತ್ತಾರೆ. ಆದರೆ ಈ ಬಾರಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಮನೆಯಿಂದ ಹೊರಹೋಗುವುದು ಸ್ವಲ್ಪ ಕಷ್ಟಕರವಾಗಿದೆ. ಅದರಲ್ಲೂ ಬಿಸಿಲಿನ ತಾಪದಿಂದ ಮಕ್ಕಳು ಮಾತ್ರವಲ್ಲದೇ ದೊಡ್ಡವರೂ ಸಹ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಇದೆ. ಕೆಲವೊಂದು ಟಿಪ್ಸ್ ಅನುಸರಿಸುವುದರಿಂದ ನಿಮ್ಮ ಟ್ರಿಪ್ ಅನ್ನು ಆನಂದಿಂದ ಅನುಭವಿಸುವುದರ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಿದ್ರೆ ಬೇಸಿಗೆಯಲ್ಲಿ ಹೊರಹೋಗುವವರು ಅನುಸರಿಸಬೇಕಾದ ಸಲಹೆಗಳು ಯಾವುವು? ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬಹುದು ಎಂಬ ಬಗ್ಗೆ ಇಲ್ಲಿ ವಿವರಿಸಲಾಗಿದೆ.

    ಹೋಗಬೇಕಾದ ಸ್ಥಳಗಳ ಬಗ್ಗೆ ತಿಳಿದುಕೊಳ್ಳಿ:
    ಪ್ರವಾಸ ಹೋಗುವುದಕ್ಕೂ ಮೊದಲು ನೀವು ಹೋಗಾಬೇಕಾದ ಸ್ಥಳದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡರೆ ಉತ್ತಮ. ಅಲ್ಲಿನ ವಾತಾವರಣ ಹೇಗಿದೆ? ಯಾವ ಸಮಯದಲ್ಲಿ ಹೋದರೆ ಉತ್ತಮ ಎಂಬುದರ ಬಗ್ಗೆ ಮೊದಲು ಅರಿತುಕೊಳ್ಳಿ. ಎಲ್ಲಾ ಸ್ಥಳದಲ್ಲೂ ಬಿಸಿಲು ಒಂದೇ ರೀತಿಯಾಗಿ ಇರುವುದಿಲ್ಲ. ಆದ್ದರಿಂದ ನೀವು ಹೋಗಬೇಕೆಂದಿರುವ ಸ್ಥಳದಲ್ಲಿ ಬಿಸಿಲು ಯಾವ ರೀತಿಯಾಗಿದೆ ಎಂಬುದರ ಬಗ್ಗೆ ಮಾಹಿತಿ ಪಡೆದು ಬಿಸಿಲು ಕಡಿಮೆ ಇರುವ ಜಾಗವನ್ನು ಆಯ್ದುಕೊಂಡರೆ ನಿಮ್ಮ ಪ್ರವಾಸವನ್ನು ಆನಂದಿಸಬಹುದು.

    ಬಿರುಬಿಸಿಲಿನಲ್ಲಿ ಸುತ್ತಾಟ ಒಳ್ಳೆಯದಲ್ಲ:
    ಬಿರುಬಿಸಿಲು ಅಂದರೆ ಬಿಸಿಲು ಹೆಚ್ಚಾಗಿರುವ ಸಮಯದಲ್ಲಿ ಸುತ್ತಾಟ ನಿಮಗೆ ಮತ್ತು ನಿಮ್ಮ ಮನಸ್ಸಿಗೆ ಮುದ ನೀಡುವುದಿಲ್ಲ. ಆದ್ದರಿಂದ ಆದಷ್ಟು ಬೆಳಗ್ಗೆ 11 ಗಂಟೆಯ ಒಳಗೆ ಹಾಗೂ ಸಂಜೆ 5 ಗಂಟೆಯ ಮೇಲೆ ಹೊರಹೋಗುವುದು ಒಳ್ಳೆಯದು. ಆದಷ್ಟು ಮಧ್ಯಾಹ್ನ 12-4 ಗಂಟೆಯವರೆಗಿನ ಬಿಸಿಲಿನಲ್ಲಿ ಒಡಾಡುವುದನ್ನು ಕಡಿಮೆ ಮಾಡಿ. ಇದರಿಂದ ನಿಮ್ಮ ದೇಹದಲ್ಲಿ ಚೈತನ್ಯ ಹಾಗೇ ಇರುತ್ತದೆ ಮತ್ತು ನಿಮ್ಮ ಪ್ರವಾಸವನ್ನು ಎಂಜಾಯ್‌ ಮಾಡಬಹುದಾಗಿದೆ.

    ಹೆಚ್ಚಿನ ನೀರು ಸೇವನೆ:
    ಬೇಸಿಗೆಯಲ್ಲಿ ಹೆಚ್ಚಿನ ನೀರು ಸೇವಿಸುವುದರಿಂದ ನಮ್ಮ ದೇಹದಲ್ಲಿ ನಿರ್ಜಲೀಕರಣ ಆಗುವುದನ್ನು ತಡೆಯಬಹುದು. ಪ್ರವಾಸದ ಸಂದರ್ಭದಲ್ಲಿ ಹೆಚ್ಚಿನ ನೀರನ್ನು ಸೇವಿಸುವುದರ ಜೊತೆಗೆ ತಂಪು ಪಾನೀಯಗಳು, ಎಳನೀರು, ಫ್ರೆಶ್‌ ಜ್ಯೂಸ್‌ ಸೇವಿಸಿ. ಇದರಿಂದ ದಣಿವಾರುವುದಲ್ಲದೇ ದೇಹದಲ್ಲಿನ ಶಕ್ತಿ ಹೆಚ್ಚಿಸಲು ಸಹಾಯವಾಗುತ್ತದೆ. ಅಲ್ಲದೇ ಶುದ್ಧವಾದ ನೀರನ್ನೇ ಸೇವಿಸಿ.

    ಬೀದಿಬದಿ ಆಹಾರ ಸೇವನೆಯನ್ನು ಕಡಿಮೆ ಮಾಡಿ:
    ಪ್ರವಾಸದ ಸಮಯದಲ್ಲಿ ಎಲ್ಲೆಂದರಲ್ಲಿ ತಿನ್ನುವುದರಿಂದ ಆರೋಗ್ಯ ಹದಗೆಡಬಹುದು. ಆದ್ದರಿಂದ ಬೀದಿಬದಿ ತಿನ್ನುವುದನ್ನು ಆದಷ್ಟು ಕಡಿಮೆ ಮಾಡಿ ಶುಚಿತ್ವದ ಕಡೆ ಗಮನಹರಿಸಿ. ಧೂಳು, ಮಾಲಿನ್ಯ ಇರುವ ಕಡೆ ಆಹಾರ ಸೇವನೆ ಒಳ್ಳೆಯದಲ್ಲ. ಇದರಿಂದ ನಿಮ್ಮ ಹಾಗೂ ನಿಮ್ಮ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಇದೆ. 

    ಎಮರ್ಜೆನ್ಸಿ ಕಿಟ್‌ ನಿಮ್ಮ ಬಳಿ ಇರಲಿ:
    ಪ್ರವಾಸ ತೆರಳುವುದಕ್ಕೂ ಮೊದಲು ನಿಮ್ಮ ಬ್ಯಾಗ್‌ನಲ್ಲಿ ಎಮರ್ಜೆನ್ಸಿ ಕಿಟ್‌ ಇಟ್ಟುಕೊಳ್ಳಲೇಬೇಕು. ಪ್ರವಾಸ ತೆರಳಿದ ಸಂದರ್ಭ ನಿಮಗೆ ಮತ್ತು ನಿಮ್ಮ ಮಕ್ಕಳಿಗೆ  ಅನಾರೋಗ್ಯ ಉಂಟಾದರೆ ಅದಕ್ಕೆ ಬೇಕಾದ ಸಿದ್ಧತೆಗಳನ್ನು ಮೊದಲೇ ಮಾಡಿಕೊಳ್ಳಿ. ಗ್ಲುಕೋಸ್‌, ಒಆರ್‌ಎಸ್‌, ಪ್ಲಾಸ್ಟರ್‌, ನೋವಿನ ಔಷಧಿಗಳು ಸೇರಿದಂತೆ ಅಗತ್ಯ ವಸ್ತುಗಳು ನಿಮ್ಮ ಬ್ಯಾಗ್‌ನಲ್ಲಿರಲಿ.

    ಸನ್‌ಸ್ಕ್ರೀನ್‌ ಬಳಸಿ:
    ಬಿಸಿಲಿಗೆ ಹೋಗುವ ಮೊದಲು ಸನ್‌ಸ್ಕ್ರೀನ್‌ ಹಾಗೂ ಬಾಡಿ ಲೋಶನ್ ಬಳಸುವುದು ಅತಿ ಅಗತ್ಯ. ಇದನ್ನು ಬಳಸುವ ಮೊದಲು ವೈದ್ಯರ ಬಳಿ ನಿಮ್ಮ ದೇಹಕ್ಕೆ ಯಾವರೀತಿಯ ಸನ್‌ಸ್ಕ್ರೀನ್‌ ಹೊಂದಿಕೊಳುತ್ತದೆ ಎಂಬುದನ್ನು ಪರಿಶೀಲಿಸಿ ಅವರ ಸಲಹೆಯ ಮೇರೆಗೆ ಸನ್‌ಸ್ಕ್ರೀನ್‌ಗಳನ್ನು ಬಳಸಿ. ಅಂತೆಯೇ ನಿಮ್ಮ ಮಕ್ಕಳಿಗೂ ವೈದ್ಯರ ಸಲಹೆಯಂತೆ ಸನ್‌ಸ್ಕ್ರೀನ್‌ ಕ್ರೀಮ್‌ಗಳನ್ನು ಹಚ್ಚಿ. ಇದರಿಂದ ನಿಮ್ಮ ತ್ವಚೆಯನ್ನು ಬಿಸಿಲಿನಿಂದ ಕಾಪಾಡಿಕೊಳ್ಳಬಹುದು. ಸನ್‌ಸ್ಕ್ರೀನ್‌ ಹಾಗೂ ಬಾಡಿ ಲೋಶನ್‌ಗಳನ್ನು ಬಳಸುವುದರಿಂದ ಚರ್ಮ ಒಣಗುವುದು, ಬಿರುಕು ಬಿಡುವುದನ್ನು ತಡೆಯಬಹುದು.  ‌

    ಬಿಸಿಲಿನಿಂದ ರಕ್ಷಣೆ ಪಡೆಯಲು ಇವುಗಳನ್ನು ಬಳಸಿ:
    ಬೇಸಿಗೆಯಲ್ಲಿ ಬಿಸಿಲು ಹೆಚ್ಚಾಗಿ ಇರುವುದರಿಂದ ಬಿಸಿಲಿನಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಬೇಕು. ಛತ್ರಿ, ಟೋಪಿ, ಸನ್‌ಗ್ಲಾಸ್‌ ಮುಂತಾದ ವಸ್ತುಗಳನ್ನು ಬಳಸುವುದರಿಂದ ಬಿಸಿಲಿನಿಂದ ನಿಮ್ಮ ದೇಹವನ್ನು ಹಾಗೂ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ನೆತ್ತಿ ಸುಡುವ ಬಿಸಿಲು ತಲೆನೋವು ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಉಂಟು ಮಾಡಬಹುದು. ಜೊತೆಗೆ ಸೂರ್ಯನ ಕಿರಣಗಳಿಂದ ಕಣ್ಣುಗಳಿಗೂ ಹಾನಿಯಾಗಬಹುದು. ಆದ್ದರಿಂದ ಛತ್ರಿ, ಟೋಪಿಯಂತಹ ವಸ್ತುಗಳನ್ನು ಬಳಸಿ ನೆರಳನ್ನು ಪಡೆದುಕೊಳ್ಳಿ.

    ಯಾವ ರೀತಿಯ ಬಟ್ಟೆ ಧರಿಸಿದರೆ ಉತ್ತಮ?
    ಬೇಸಿಗೆಯಲ್ಲಿ ಆದಷ್ಟು ತಿಳಿಬಣ್ಣದ ಬಟ್ಟೆ ಧರಿಸಿದರೆ ಉತ್ತಮ. ಕಪ್ಪು ಬಣ್ಣದ ಬಟ್ಟೆಯನ್ನು ಆದಷ್ಟು ದೂರವಿರಿಸಿ. ಅದರಲ್ಲೂ ತೆಳ್ಳನೆಯ ಹತ್ತಿ ಬಟ್ಟೆಗೆ ಆದ್ಯತೆ ನೀಡಿ. ತುಂಬು ತೋಳಿನ, ಪಾದದವರೆಗೆ ಮುಚ್ಚಿರುವ ಬಟ್ಟೆ ಧರಿಸಿ. ಇದರಿಂದ ಚರ್ಮ ಟ್ಯಾನ್‌ ಆಗುವುದನ್ನು ತಡೆಯಬಹುದು.