Tag: summons

  • ಸಂಸದ ಪ್ರಜ್ವಲ್ ರೇವಣ್ಣಗೆ ಸಮನ್ಸ್

    ಸಂಸದ ಪ್ರಜ್ವಲ್ ರೇವಣ್ಣಗೆ ಸಮನ್ಸ್

    ಹಾಸನ: ಲೋಕಸಭೆ ಚುನಾವಣೆಯಲ್ಲಿ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಲಾಗಿದೆ ಎಂಬ ಆರೋಪ ಸಂಬಂಧ ಪತ್ರಿಕಾ ಪ್ರಕಟಣೆ ನೀಡಲಾಗಿದೆ.

    ಸೆಪ್ಟಂಬರ್ 30ರಂದು ವಿಚಾರಣೆಗೆ ಹಾಜರಾಗುವಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸ್ಥಳೀಯ ಪತ್ರಿಕೆಯಲ್ಲಿ ಜಾಹೀರಾತು ಪ್ರಕಟಿಸುವ ಮೂಲಕ ಹೈಕೋರ್ಟ್ ಸಮನ್ಸ್ ಜಾರಿಗೊಳಿಸಲಾಗಿದೆ. ದೂರುದಾರ ಮಾಜಿ ಸಚಿವ ಎ.ಮಂಜು ಹಾಗೂ ವಕೀಲ ಜಿ. ದೇವರಾಜೇಗೌಡ ಅವರು ಪ್ರತ್ಯೇಕವಾಗಿ ದಾಖಲಿಸಿರುವ ಪ್ರಕರಣಗಳ ವಿಚಾರಣೆಗೆ ಸೆ.30ರಂದು ಬೆಳಗ್ಗೆ 10.30ಕ್ಕೆ ಖುದ್ದಾಗಿ ಇಲ್ಲವೇ ವಕೀಲರ ಮೂಲಕ ಹಾಜರಾಗುವಂತೆ ಹೈ ಕೋರ್ಟ್ ಸಮನ್ಸ್ ನಲ್ಲಿ ಸೂಚಿಸಲಾಗಿದೆ.

    ಈ ಹಿಂದೆ ತಮಗೆ ಪ್ರಕರಣ ಸಂಬಂಧ ನ್ಯಾಯಾಲಯದ ಸಮನ್ಸ್ ತಲುಪಿಲ್ಲ ಎಂದು ಸಂಸದ ಪ್ರಜ್ವಲ್ ಹೇಳಿದ್ದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಹೈಕೋರ್ಟ್ ಸಂಸದರಿಗೆ ಪತ್ರಿಕೆಯ ಜಾಹೀರಾತು ಮೂಲಕ ಸಮನ್ಸ್ ಜಾರಿ ಮಾಡಲು ಅನುಮತಿ ನೀಡಿತ್ತು. ಅದರಂತೆ ಸ್ಥಳೀಯ ಪತ್ರಿಕೆಯಲ್ಲಿ ಜಾಹೀರಾತು ನೀಡಲಾಗಿದೆ. ಇದರಿಂದ 30ರಂದು ಪ್ರಜ್ವಲ್ ಇಲ್ಲವೇ ಅವರ ಪರವಾಗಿ ವಕೀಲರು ನ್ಯಾಯಾಧೀಶರ ಮುಂದೆ ಹಾಜರಾಗಬೇಕು ಎಂದು ದೂರದಾರ ಹೇಳಿದ್ದಾರೆ.

  • ತಡರಾತ್ರಿ ಡಿಕೆಶಿಯಿಂದ ವಿನಯ್ ಗುರೂಜಿ ಭೇಟಿ

    ತಡರಾತ್ರಿ ಡಿಕೆಶಿಯಿಂದ ವಿನಯ್ ಗುರೂಜಿ ಭೇಟಿ

    – ಇಂದು ಬೆಳಗ್ಗೆ ಅಜ್ಜಯ್ಯನ ಭೇಟಿ

    ಬೆಂಗಳೂರು: ಗುರುವಾರ ತಡರಾತ್ರಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಸಂಕಷ್ಟದಿಂದ ಪಾರು ಮಾಡುವಂತೆ ವಿನಯ್ ಗುರೂಜಿ ಅವರನ್ನು ಭೇಟಿ ಮಾಡಿ ಸಂಕಷ್ಟ ತೋಡಿಕೊಂಡಿದ್ದಾರೆ.

    ಡಿಕೆಶಿ ಖಾಸಗಿ ಹೋಟೆಲಿನಿಂದ ನೇರವಾಗಿ ಉತ್ತರ ಹಳ್ಳಿಗೆ ಹೋಗಿ ದೇವ ಮಾನವ ವಿನಯ್ ಗುರೂಜಿಯನ್ನು ಭೇಟಿ ಮಾಡಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ಡಿ.ಕೆ ಶಿವಕುಮಾರ್ ಕುಟುಂಬ ವಿನಯ್ ಗುರೂಜಿ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಪತಿಯ ಸಂಕಷ್ಟ ಕಂಡು ವಿನಯ್ ಗುರೂಜಿ ಮುಂದೆ ಡಿಕೆಶಿ ಪತ್ನಿ ಕಣ್ಣೀರಿಟ್ಟಿದ್ದಾರೆ. ಈ ವೇಳೆ ಗುರೂಜಿ ಅವರ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ.

    ನವೆಂಬರ್‌ವರೆಗೆ ಇಂತಹ ಅಗ್ನಿ ಪರಿಕ್ಷೆ ಎದುರಾಗುತ್ತಲೇ ಇರುತ್ತದೆ. ನವೆಂಬರ್‌ವರೆಗೆ ನಿಮ್ಮ ಟೈಂ ಸರಿ ಇಲ್ಲ. ನವೆಂಬರ್ ನಂತರ ನಿಮ್ಮ ಎಲ್ಲಾ ಸಂಕಷ್ಟಗಳು ಹಂತ ಹಂತವಾಗಿ ದೂರ ಆಗಲಿದೆ. ಯಾವುದೇ ರಾಜಕೀಯವಾದ ಮಾತುಗಳನ್ನಾಡದೇ ಮೌನವಾಗಿರುವುದು ಒಳಿತು ಎಂದು ವಿನಯ್ ಗುರೂಜಿ ಭವಿಷ್ಯ ನುಡಿದಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ವಿನಯ್ ಗುರೂಜಿ ಅವರನ್ನು ಭೇಟಿ ಮಾಡಿದ ನಂತರ ದತ್ತಾತ್ರೆಯನ ಸನ್ನಿಧಿಯಲ್ಲಿ ಸಂಕಷ್ಟ ಹರ ಸಂಕಲ್ಪ ಪೂಜೆ ಮಾಡಿ ಸಂಕಷ್ಟದಿಂದ ಪಾರು ಮಾಡುವಂತೆ ದೇವರ ಬಳಿ ಕೇಳಿಕೊಂಡಿದ್ದಾರೆ. ಇಂದು ಬೆಳಗ್ಗೆ ಕೂಡ ಡಿ.ಕೆ ಶಿವಕುಮಾರ್ ಸಂಕಷ್ಟದಿಂದ ಪಾರು ಮಾಡುವಂತೆ ತಮ್ಮ ನಂಬಿಕೆಯ ದೈವ ಮಾನವ ನೊಣವಿನಕೆರೆ ಅಜ್ಜಯ್ಯನನ್ನು ಭೇಟಿ ಮಾಡಿದ್ದಾರೆ.

    ಬೆಂಗಳೂರಿನ ಭಕ್ತರೊಬ್ಬರ ಮನೆಯಲ್ಲಿ ಅಜ್ಜಯ್ಯ ತಂಗಿದ್ದರು. ಮಾಹಿತಿ ತಿಳಿದು ಆ ಭಕ್ತರ ಮನೆಗೆ ಹೋಗಿ ಭೇಟಿ ಮಾಡಿದ್ದಾರೆ. ಜೊತೆಗೆ ಅಜ್ಜಯ್ಯನ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಅಮವಾಸ್ಯೆ ಪೂಜೆ ಮಾಡಿಸಿದ್ದಾರೆ.

    ಕಾಂಗ್ರೆಸ್ ಟ್ರಬಲ್ ಶೂಟರ್, ಮಾಜಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು ಜಾರಿ ನಿರ್ದೇಶನಾಲಯದ(ಇಡಿ) ವಿಚಾರಣೆಗೆ ಹಾಜರಾಗಬೇಕೆಂದು ಹೈಕೋರ್ಟ್ ಆದೇಶಿಸಿದೆ. ಇದರಿಂದ ಡಿಕೆಶಿ ಫುಲ್ ಟೆನ್ಶನ್ ಆಗಿದ್ದು, ತಡರಾತ್ರಿ ಮಾಜಿ ಸಂಸದ ಶಿವರಾಮೇಗೌಡ ಹಾಗೂ ಡಿಕೆಶಿ ಆಪ್ತರು ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಆದರೆ ಯಾವೊಬ್ಬ ಕಾಂಗ್ರೆಸ್ ನಾಯಕರು ಭೇಟಿ ಮಾಡಿಲ್ಲ ಎನ್ನಲಾಗಿದೆ.

  • ಏನ್ ವ್ಯಾಖ್ಯಾನ ಮಾಡ್ತಿರೋ ಮಾಡಿ, ನಾಳೆ ಸಿಗೋಣ: ಮಾಧ್ಯಮಗಳ ವಿರುದ್ಧ ಡಿಕೆಶಿ ಕಿಡಿ

    ಏನ್ ವ್ಯಾಖ್ಯಾನ ಮಾಡ್ತಿರೋ ಮಾಡಿ, ನಾಳೆ ಸಿಗೋಣ: ಮಾಧ್ಯಮಗಳ ವಿರುದ್ಧ ಡಿಕೆಶಿ ಕಿಡಿ

    – ನೀನ್ ಏನ್ ನನ್ನ ವಕೀಲ ಏನಪ್ಪ?

    ಬೆಂಗಳೂರು: ಎಲ್ಲರೂ ಚೆನ್ನಾಗಿ ವ್ಯಾಖ್ಯಾನ ಮಾಡುತ್ತಿದ್ದೀರಾ. ಏನ್ ವ್ಯಾಖ್ಯಾನ ಮಾಡ್ತಿರೋ ಮಾಡಿ. ನಾಳೆ ಎಲ್ಲವನ್ನೂ ಮಾತನಾಡುತ್ತೇನೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.

    ಹೈಕೋರ್ಟ್ ನಲ್ಲಿ ಅರ್ಜಿ ರದ್ದಾದ ಬಳಿಕ ಸದಾಶಿವನಗರದ ಅವರ ಮನೆಯಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವರು, ಶುಕ್ರವಾರ ಮಾಧ್ಯಮಗೋಷ್ಠಿ ಕರೆದು ಮಾತನಾಡುತ್ತೇನೆ ಎಂದರು. ಈ ವೇಳೆ ವಕೀಲರನ್ನು ಭೇಟಿ ಮಾಡಿದ್ರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಗುಡುಗಿದ ಅವರು, ನೀನು ಏನ್ ನನ್ನ ವಕೀಲ ಏನಪ್ಪ? ನಾಳೆ ಮಾತನಾಡುತ್ತೇನೆ ಬಿಡಿ ಎಂದು ಹೇಳಿದರು.

    ಬಳಿಕ ಡಿ.ಕೆ.ಶಿವಕುಮಾರ್ ಅವರು ಮನೆಗೆ ಬಂದ ನಾಲ್ವರು ಇಡಿ ಅಧಿಕಾರಿಗಳು ಮಾಜಿ ಸಚಿವರಿಗೆ ಮತ್ತೊಮ್ಮೆ ಸಮನ್ಸ್ ನೀಡಿದ್ದಾರೆ. ಹೀಗಾಗಿ ಸಮನ್ಸ್ ನೀಡಿದ ಕೆಲವೇ ನಿಮಿಷದಲ್ಲಿ ಮನೆಯಿಂದ ಫೈಲ್ ಹಿಡಿದು ಪತ್ನಿ ಹಾಗೂ ಮಗಳ ಜೊತೆಗೆ ಹೊರ ಬಂದಿದ್ದಾರೆ. ಈ ವೇಳೆಯೂ ಮಾಧ್ಯಮಗಳ ವಿರುದ್ಧ ಗುಡುಗಿದ ಮಾಜಿ ಸಚಿವರು, ದೆಹಲಿಗೆ ಬೇಕಾದರೂ ಹೋಗುತ್ತೇನೆ, ಎಲ್ಲಿಗೆ ಬೇಕಾದರೂ ವಿಚಾರಣೆಗೆ ಹೋಗುತ್ತೇನೆ. ಶುಕ್ರವಾರ ಎಲ್ಲ ವಿಚಾರಗಳ ಬಗ್ಗೆ ಮಾತನಾಡುತ್ತೇನೆ ಎಂದು ಮನೆಯಿಂದ ಹೊರಟು ಹೋದರು.

    ಡಿ.ಕೆ.ಶಿವಕುಮಾರ್ ಅವರು ಪತ್ನಿ ಮತ್ತು ಮಗಳ ಜೊತೆಗೆ ಸದಾಶಿವನಗರ ಮನೆಯಿಂದ ನೇರವಾಗಿ ರ‍್ಯಾಡಿಸನ್‌ ಬ್ಲೂ ಹೋಟೆಲ್‍ಗೆ ಆಗಮಿಸಿದ್ದಾರೆ. ಅಲ್ಲಿಯೇ ಇಂದು ಇದ್ದು ಕಾನೂನು ಹೋರಾಟಕ್ಕೆ ಸಿದ್ಧತೆ ನಡೆಸಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

  • ಮಾಜಿ ಸಚಿವ ರೇಣುಕಾಚಾರ್ಯ ಪೊಲೀಸ್ ಕಸ್ಟಡಿಗೆ

    ಮಾಜಿ ಸಚಿವ ರೇಣುಕಾಚಾರ್ಯ ಪೊಲೀಸ್ ಕಸ್ಟಡಿಗೆ

    ಬೆಂಗಳೂರು: ಮಾಜಿ ಸಚಿವ ರೇಣುಕಾಚಾರ್ಯ ಅವರನ್ನು ಜನಪ್ರತಿನಿಧಿಗಳ ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ.

    ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಹಲವು ಬಾರಿ ರೇಣುಕಾಚಾರ್ಯ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿಯಾಗಿದ್ದರೂ ರೇಣುಕಾಚಾರ್ಯ ವಿಚಾರಣೆಗೆ ಗೈರು ಹಾಜರಿ ಹಾಕುತ್ತಿದ್ದರು.

    ಇಂದು ಬೆಳಗ್ಗೆ ರೇಣುಕಾಚಾರ್ಯ ತಮ್ಮ ಮೇಲಿರುವ ಜಾಮೀನು ರಹಿತ ವಾರೆಂಟ್ (ಎನ್‍ಬಿಡಬ್ಲು) ರೀಕಾಲ್ ಮಾಡಿಸಲು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ನ್ಯಾಯಾಧೀಶರು ಪದೇ ಪದೇ ವಿಚಾರಣೆಗೆ ಗೈರು ಆಗಿದ್ದಕ್ಕೆ ಇಂದು ಸಂಜೆಯವರೆಗೆ ರೇಣುಕಾಚಾರ್ಯ ಕೋರ್ಟ್‍ನಲ್ಲೇ ಇರಬೇಕು ನ್ಯಾ. ರಾಮಚಂದ್ರ ಡಿ. ಹುದ್ದಾರ್ ಆದೇಶಿಸಿದ್ದಾರೆ.

    2016 ರಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ರೇಣುಕಾಚಾರ್ಯ ವಿರುದ್ಧ ಕೇಸ್ ದಾಖಲಾಗಿತ್ತು.

  • ನಮ್ಮ ಪೈಲಟ್ ಬಿಡುಗಡೆ ಮಾಡಿ – ಪಾಕಿಸ್ತಾನಕ್ಕೆ ಭಾರತ ತಾಕೀತು

    ನಮ್ಮ ಪೈಲಟ್ ಬಿಡುಗಡೆ ಮಾಡಿ – ಪಾಕಿಸ್ತಾನಕ್ಕೆ ಭಾರತ ತಾಕೀತು

    ನವದೆಹಲಿ: ಕಸ್ಟಡಿಯಲ್ಲಿರುವ ಭಾರತೀಯ ಪೈಲಟ್ ಅವರನ್ನು ಬಿಡುಗಡೆ ಮಾಡಿ ಭಾರತ ಪಾಕಿಸ್ತಾನಕ್ಕೆ ತಾಕೀತು ಮಾಡಿದೆ.

    ವಿದೇಶಾಂಗ ಸಚಿವಾಲಯವು ಭಾರತದಲ್ಲಿವ ಪಾಕ್ ಉಪ ರಾಯಭಾರಿ ಸೈಯದ್ ಹೈದರ್ ಶಾಗೆ ಸಮನ್ಸ್ ಜಾರಿ ಮಾಡಿ ಕೂಡಲೇ ಬಿಡುಗಡೆ ಮಾಡುವಂತೆ ಸೂಚಿಸಿದೆ.

    ಅಂತರಾಷ್ಟ್ರೀಯ ಮಾನವೀಯ ಕಾನೂನು ಹಾಗೂ ಜಿನೀವಾ ಒಪ್ಪಂದವನ್ನು ಪಾಕಿಸ್ತಾನ ಉಲ್ಲಂಘಿಸಿದೆ. ಪಾಕ್ ಭಾರತೀಯ ಸೇನೆಗೆ ಸೇರಿರುವ ಪೈಲೆಟ್ ಅವರನ್ನು ಸೆರೆಹಿಡಿದಿಟ್ಟುಕೊಂಡು ಚಿತ್ರಹಿಂಸೆ ನೀಡಿ, ಆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಕ್ರೌರ್ಯ ಮೆರೆಯುತ್ತಿದೆ. ಇದು ಅಪರಾಧ. ಈ ಕೂಡಲೇ ಭಾರತೀಯ ಪೈಲೆಟ್ ಅವರನ್ನು ಬಿಡುಗಡೆ ಮಾಡುವಂತೆ ಸೂಚಿಸಿದೆ.

    ಏನಿದು ಜಿನೀವಾ ಒಪ್ಪಂದ?
    ಎರಡನೇ ಮಹಾಯುದ್ಧದ ಬಳಿಕ 1949ರಲ್ಲಿ 196 ದೇಶಗಳ ನಡುವೆ ಏರ್ಪಟ್ಟ ಒಪ್ಪಂದ ಇದಾಗಿದ್ದು, ಈ ಒಪ್ಪಂದ ಪ್ರಕಾರ ಯುದ್ಧ ಕೈದಿಗಳನ್ನು ಮಾನವೀಯವಾಗಿ ನಡೆಸಿಕೊಳ್ಳಬೇಕು. ಗಾಯಗೊಂಡ, ಅನಾರೋಗ್ಯಕ್ಕೆ ತುತ್ತಾದ ಯುದ್ಧ ಕೈದಿಗಳಿಗೆ ಚಿಕಿತ್ಸೆ ನೀಡಬೇಕು. ಜಿನೀವಾ ಒಪ್ಪಂದ ಆರ್ಟಿಕಲ್ 3 ಅಘೋಷಿತ ಯುದ್ಧಕ್ಕೆ ಸಂಬಂಧಿಸಿದ್ದಾಗಿದೆ. ಯುದ್ಧ ಕೈದಿಯ ಕೊಲೆ, ಹಲ್ಲೆ, ಶಿರಚ್ಛೇದ, ಒತ್ತೆಯಂತಹ ಕೃತ್ಯಗಳನ್ನು ಮಾಡಬಾರದು. ಕಾನೂನು ಪ್ರಕ್ರಿಯೆಗಳನ್ನು ಮಾಡದೇ, ಆರೋಪ ಸಾಬೀತಾಗದೇ ಶಿಕ್ಷೆ ನೀಡಬಾರದು. ಆರೋಪ ಸಾಬೀತಾಗದೇ ಇದ್ದಲ್ಲಿ ಯುದ್ಧ ಕೈದಿಯನ್ನು ಅವರ ದೇಶಕ್ಕೆ ಒಪ್ಪಿಸಬೇಕು ಎಂಬ ನಿಯಮಗಳನ್ನು ರೂಪಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಂಧನದ ಭೀತಿಯಲ್ಲಿ ಸಚಿವ ಡಿಕೆ ಶಿವಕುಮಾರ್..!

    ಬಂಧನದ ಭೀತಿಯಲ್ಲಿ ಸಚಿವ ಡಿಕೆ ಶಿವಕುಮಾರ್..!

    ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಕೇಸ್‍ಗೆ ಸಂಂಧಿಸಿದಂತೆ ವಿಚಾರಣೆಗೆ ಬರುವಂತೆ ಇಡಿ ಅಧಿಕಾರಿಗಳು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹಾಗೂ ಐವರಿಗೆ ಸಮನ್ಸ್ ನೋಟಿಸ್ ಜಾರಿ ಮಾಡಿದ್ದಾರೆ.

    ಡಿಕೆ ಶಿವಕುಮಾರ್ ಸೇರಿದಂತೆ ಗೆಳೆಯ ಸುನಿಲ್ ಶರ್ಮಾ, ಅಂಜನೇಯ, ರಾಜೇಂದ್ರ ಸೇರಿ ಐವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಮುಖ್ಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಡಿಕೆಶಿ ದೆಹಲಿಯಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ತಯಾರಿ ಮಾಡಿಕೊಂಡಿದ್ದಾರೆ. ಸಮನ್ಸ್ ಆಧರಿಸಿ ನಿರೀಕ್ಷಣಾ ಜಾಮೀನಿನ ಅರ್ಜಿಗೆ ತಯಾರಿ ಮಾಡಿಕೊಳ್ಳಲಿದ್ದಾರೆ.

    ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‍ಎ) ಅಡಿಯಲ್ಲಿ ಇಡಿ ಕೇಸ್ ದಾಖಲಿಸಿಕೊಂಡಿದ್ದರಿಂದ ಡಿಕೆಶಿಗೆ ಬಂಧನದ ಭೀತಿ ಎದುರಾಗಿದೆ. ಶಿವಕುಮಾರ್ ಜೊತೆಗೆ ಸಚಿನ್ ನಾರಾಯಣ್, ಶರ್ಮ ಟ್ರಾವೆಲ್ಸ್ ನ ಸುನೀಲ್ ಕುಮಾರ್ ಶರ್ಮ, ದೆಹಲಿಯ ಕರ್ನಾಟಕ ಭವನದ ಸಿಬ್ಬಂದಿ ಆಂಜನೇಯ ಹನುಮಂತಯ್ಯ ಮತ್ತು ರಾಜ್ಯ ಸರಕಾರದ ನಿವೃತ್ತ ಸಿಬ್ಬಂದಿ ರಾಜೇಂದ್ರ ಅವರನ್ನು ಆರೋಪಿಯನ್ನಾಗಿಸಿ ಕೇಸ್ ದಾಖಲಾಗಿತ್ತು.

    ಏನಿದು ಪ್ರಕರಣ?
    ದೆಹಲಿ ನಿವಾಸದಲ್ಲಿ ಪತ್ತೆಯಾದ 8.5 ಕೋಟಿ ರೂ. ಸಿಕ್ಕ ಹಣದ ಸಂಬಂಧ ಆದಾಯ ತೆರಿಗೆ ಇಲಾಖೆಯ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿತ್ತು. ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಸಿಕ್ಕ ಮಾಹಿತಿ ಆಧರಿಸಿ ನೀಡಿರುವ ದೂರಿನಲ್ಲಿ ಹವಾಲ ಹಣದ ವಿವರವನ್ನು ಉಲ್ಲೇಖಿಸಿತ್ತು. ಇಲಾಖೆಗೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಐಟಿ ಇಲಾಖೆ ಹಿರಿಯ ಅಧಿಕಾರಿಗಳು ಈ ಹಿಂದೆ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿದ್ದರು. ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಸಿಕ್ಕ ಮಾಹಿತಿ ಆಧರಿಸಿ ನೀಡಿರುವ ದೂರಿನಲ್ಲಿ ಹವಾಲ ಹಣದ ವಿವರವನ್ನು ಉಲ್ಲೇಖಿಸಿದ್ದರು. ಈ ದೂರಿನಲ್ಲಿ ಹವಾಲ ಹಣದ ಮೂಲಕ ಕೋಟಿ ಕೋಟಿ ಹಣವನ್ನು ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಕಳುಹಿಸಿಕೊಟ್ಟಿದ್ದಾರೆ ಎಂಬ ಆರೋಪಗಳನ್ನು ಮಾಡಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಬಾಗಲಕೋಟೆ ರೈತನಿಗೆ ಸಾಲಕಟ್ಟುವಂತೆ ಸಮನ್ಸ್!

    ಬಾಗಲಕೋಟೆ ರೈತನಿಗೆ ಸಾಲಕಟ್ಟುವಂತೆ ಸಮನ್ಸ್!

    ಬಾಗಲಕೋಟೆ: ಒಂದು ಕಡೆ ಕಬ್ಬು ಬೆಳೆಗಾರರ ಹೋರಾಟ ಮುಗಿಲು ಮುಟ್ಟಿದೆ. ಈ ಬೆನ್ನಲ್ಲೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕಬ್ಬು ಬೆಳೆಗಾರನೋರ್ವರಿಗೆ ಬ್ಯಾಂಕ್ ನಿಂದ ಕೋರ್ಟ್ ಸಮನ್ಸ್ ಬಂದಿದೆ.

    ಸಾಲ ಮರುಪಾವತಿ ಮಾಡುವಂತೆ ಸಮನ್ಸ್ ಜಾರಿಯಾಗಿದ್ದು, ರೈತ ಕಂಗಾಲಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಹಲಗಲಿ ಗ್ರಾಮದ ರೈತ ರವಿಶಂಕರ ವೆಂಕಪ್ಪ ಕುಸಗಲ್ ಗೆ ಬೆಂಗಳೂರಿನ ಡೆಬ್ಟ್ ರಿಕವರಿ ಟ್ರಿಬ್ಯೂನಲ್‍ನಿಂದ ಸಮನ್ಸ್ ಜಾರಿಯಾಗಿದೆ.

    ರೈತ ಇಂಡಿಯನ್ ಬ್ಯಾಂಕ್ ನಿಂದ 2015ರಲ್ಲಿ ಕಬ್ಬು ಬೆಳೆಸಾಲ ಅಂತ 10 ಲಕ್ಷ ರೂ. ಪೈಪ್ ಲೈನ್ ಗಾಗಿ 6 ಲಕ್ಷ ರೂ. ಸಾಲ ಪಡೆದಿದ್ದರು. ನಂತರ ಕೊಳವೆ ಬಾವಿ ಬಂದ್ ಆಗಿದ್ದರಿಂದ ನಾಲ್ಕು ವರ್ಷಗಳಿಂದ ಕಬ್ಬು ಬೆಳೆಯಲು ಆಗಿರಲಿಲ್ಲ. ಹೀಗಾಗಿ ರೈತನಿಗೆ ಸಾಲವನ್ನು ಸರಿಯಾದ ಸಮಯಕ್ಕೆ ಮರುಪಾವತಿ ಮಾಡಲಾಗಿಲ್ಲ. ಆದರೂ ನೋಟಿಸ್ ಬರುತ್ತಲೇ ಇತ್ತು. ಇದರಿಂದ ನೊಂದ ರೈತ ಶಿವಶಂಕರ್ ಬ್ಯಾಂಕಿನ ಕಿರುಕುಳಕ್ಕೆ ಬೇಸತ್ತು ಕಳೆದ ಆಗಸ್ಟ್ 30ರಂದು ಸಿಎಂ ಕುಮಾರಸ್ವಾಮಿಗೆ ಪತ್ರ ಬರೆದಿದ್ದರು. ನಂತರ ಮುಖ್ಯಮಂತ್ರಿ ಸಚಿವಾಲಯದಿಂದ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಬಾಗಲಕೋಟೆ ಜಿಲ್ಲಾಧಿಕಾರಿಗೆ ಕಳೆದ ಅಕ್ಟೋಬರ್ 3 ರಂದು ಮುಖ್ಯ ಕಾರ್ಯದರ್ಶಿ ಪತ್ರ ಬರೆದಿದ್ದರು.

    ನಾಲ್ಕು ವರ್ಷಗಳ ಹಿಂದೆ ಮುಧೋಳ ರನ್ನ ಸಕ್ಕರೆ ಕಾರ್ಖಾನೆಗೆ ಸಾಗಿಸಿದ ಕಬ್ಬಿಗೆ ಕಡಿತ ಮಾಡಿದ್ದ ದುಡ್ಡು ಇನ್ನೂ ಬಾಕಿ ಬಂದಿಲ್ಲ ಸಾಲ ಎಲ್ಲಿ ಕಟ್ಟಲಿ ಎಂಬುದು ಇದೀಗ ರೈತನ ಗೋಳಾಗಿದೆ. ಶಿವಶಂಕರನಿಗೆ ಅಷ್ಟೇ ಅಲ್ಲದೆ ಇವರಿಗೆ ಜಾಮೀನುದಾರರಾದವ್ರಿಗೂ ಸಮನ್ಸ್ ಜಾರಿಯಾಗಿದೆ. ರೈತನಿಗೆ ಸರ್ಕಾರದ ಸಾಲ ಮನ್ನಾ ಲಾಭವೂ ಕೂಡ ತಟ್ಟಿಲ್ಲ ಬ್ಯಾಂಕಿನಿಂದ ಕಿರುಕುಳವೂ ನಿಂತಿಲ್ಲ.

    ಸಿಎಂ ಬ್ಯಾಂಕಿನವರಿಗೆ ನೋಟಿಸ್ ನೀಡದಂತೆ ಹೇಳಿದ್ದೇನೆ ಅಂತಾರೆ. ಆದರೆ ಇಲ್ಲಿ ಬ್ಯಾಂಕಿನವರು ಅದಕ್ಕೆ ಕಿವಿಗೊಡದೇ ನೋಟಿಸ್ ಮೇಲೆ ನೋಟಿಸ್ ಕೊಡುತ್ತಲೇ ಇದ್ದಾರೆ. ಇದು ಕಬ್ಬು ಬೆಳೆಗಾರ ರೈತ ರವಿಶಂಕನಿಗೆ ಚಿಂತೆಗೀಡು ಮಾಡಿದೆ.

    ಕಬ್ಬು ಬೆಳೆಗಾರರ ಹೋರಾಟದ ನಡುವೆಯೇ ಇಂದು ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಕಬ್ಬು ರೈತರು ಮತ್ತು ಕಾರ್ಖಾನೆ ಮಾಲೀಕರ ಮಹತ್ವದ ಸಭೆ ನಡೆಯಲಿದೆ. ವಿಧಾನಸೌಧದಲ್ಲಿ ಮಧ್ಯಾಹ್ನ 12.30ಕ್ಕೆ ಗಂಟೆಗೆ ಸಭೆ ನಡೆಯಲಿದ್ದು, ಕಬ್ಬು ಬಾಕಿ ಪಾವತಿ ಮತ್ತು ರೈತರ ಇತರೆ ಬೇಡಿಕೆಗಳ ಕುರಿತು ಚರ್ಚೆ ನಡೆಯಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ನಟ ಅಕ್ಷಯ್ ಕುಮಾರ್ ಸೇರಿದಂತೆ ಮೂವರಿಗೆ ಸಮನ್ಸ್ ಜಾರಿ

    ನಟ ಅಕ್ಷಯ್ ಕುಮಾರ್ ಸೇರಿದಂತೆ ಮೂವರಿಗೆ ಸಮನ್ಸ್ ಜಾರಿ

    ಚಂಡೀಗಢ: ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಸೇರಿದಂತೆ ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬದಲ್ ಹಾಗೂ ಅವರ ಪುತ್ರ ಸುಖಬೀರ್ ಸಿಂಗ್ ಬದಲ್ ಗೆ ವಿಶೇಷ ತನಿಖಾ ತಂಡ(ಎಸ್‍ಐಟಿ) ಸಮನ್ಸ್ ಜಾರಿಮಾಡಿದೆ.

    2015 ರಲ್ಲಿ ಪಂಜಾಬಿನ ಫರೀದ್‍ಕೋಟ್ ಜಿಲ್ಲೆಯಲ್ಲಿ ನಡೆದ ಪೊಲೀಸರ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದ ಎಸ್‍ಐಟಿ ತನಿಖೆ ನಡೆಸುತ್ತಿತ್ತು. ಈ ಸಂಬಂಧ ಅಕ್ಷಯ್ ಕುಮಾರ್ ಸೇರಿದಂತೆ ಮೂವರಿಗೆ ಸಮನ್ಸ್ ಜಾರಿಮಾಡಿದೆ.

    ತನಿಖಾಧಿಕಾರಿಯಾದ ಇನ್ಸ್ ಪೆಕ್ಟರ್ ಜನರಲ್ ವಿಜಯ್ ಪ್ರತಾಪ್ ಸಿಂಗ್ ಮುಂದೆ ಅಮೃತಸರ್ ದಲ್ಲಿರುವ ಸರ್ಕ್ಯೂಟ್ ಹೌಸ್‍ನಲ್ಲಿ ವಿಚಾರಣೆಗೆ ಆಗಮಿಸುವಂತೆ ಎಸ್‍ಐಟಿ ಹೇಳಿತ್ತು. ಅಲ್ಲದೇ ನವೆಂಬರ್ 19ಕ್ಕೆ ಪ್ರಕಾಶ್ ಸಿಂಗ್ ಬದಲ್, ನ.19ಕ್ಕೆ ಸುಖಬೀರ್ ಬದಲ್ ಹಾಗೂ ನ.21ಕ್ಕೆ ಅಕ್ಷಯ್ ಕುಮಾರ್ ಗೆ ಹಾಜರಾಗಲೂ ಸೂಚಿಸಿದೆ.

    ಈ ಕುರಿತು ಪ್ರತಿಕ್ರಯಿಸಿರುವ ಐಜಿ, ಕಾನೂನು ಎಲ್ಲರಿಗೂ ಒಂದೇ. ನಮ್ಮ ತನಿಖೆ ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ನಡೆಯುತ್ತದೆ. ವಿಚಾರಣೆ ಸಂಪೂರ್ಣವಾಗಿ ಪಾರದರ್ಶಕವಾಗಿರುತ್ತದೆಂದು ಹೇಳಿದ್ದಾರೆ.

    ಏನಿದು ಗೋಲಿಬಾರ್ ಪ್ರಕರಣ?
    2015ರ ಫರೀದ್‍ಕೋಟ್ ಜಿಲ್ಲೆಯ ಹಾಲ್ ಕಲನ್ ಗ್ರಾಮದಲ್ಲಿ ಸಿಖ್ಖರ ಪವಿತ್ರ ಗ್ರಂಥ ‘ಗುರು ಗ್ರಂಥ ಸಾಹಿಬ್’ ಅನ್ನು ಅಪವಿತ್ರಗೊಳಿಸಿದ್ದಾರೆಂದು, ಸಿಖ್ ಸಮುದಾಯದವರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಉದ್ರಿಕ್ತರ ಗುಂಪು ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿತ್ತು, ಹೀಗಾಗಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದರು. ಪರಿಣಾಮ ಇಬ್ಬರು ಸಾವನ್ನಪ್ಪಿದ್ದರು.

    ಅಕ್ಷಯ್ ಕುಮಾರ್ ಹೆಸರು ಬಂದಿದ್ದೇಗೆ?
    ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ರಂಜಿತ್ ಸಿಂಗ್ ಅವರ ಕಮಿಷನ್ ವರದಿಯಲ್ಲಿ ನಟ ಅಕ್ಷಯ್ ಕುಮಾರ್ ಹೆಸರನ್ನು ಉಲ್ಲೇಖಿಸಲಾಗಿತ್ತು. ವರದಿಯ ಪ್ರಕಾರ ಮುಂಬೈನಲ್ಲಿರುವ ನಟ ಅಕ್ಷಯ್ ಕುಮಾರ್ ಫ್ಲಾಟ್ ನಲ್ಲಿ ಮಾಜಿ ಉಪ ಮುಖ್ಯಮಂತ್ರಿ ಸುಖಬೀರ್ ಹಾಗೂ ಡೇರಾ ಸಚ್ಚಾ ಸೌಧ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಜೊತೆ ಎಂಎಂಜಿ ಸಿನೆಮಾ ಬಿಡುಗಡೆಯ ಸಂಬಂಧ ಸಭೆ ನಡೆಸಿದ್ದರು.

    ಧರ್ಮ ನಿಂದನೆ ಪ್ರಕರಣದಲ್ಲಿ ಗುರ್ಮಿತ್ ಸಿಂಗ್ ಅವರಿಗೆ ಕ್ಷಮಾಧಾನ ಸಿಗುವುದಕ್ಕೂ ಮುನ್ನ ಸಭೆ ನಡೆದಿತ್ತು ಎನ್ನಲಾಗುತ್ತಿದೆ. ಆದರೆ ಈ ಆರೋಪಗಳನ್ನು ನಟ ಅಕ್ಷಯ್ ಕುಮಾರ್ ತಳ್ಳಿ ಹಾಕಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ಅರೆಸ್ಟ್ ವಾರಂಟ್ ಜಾರಿ

    ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ಅರೆಸ್ಟ್ ವಾರಂಟ್ ಜಾರಿ

    ಹೈದರಾಬಾದ್: ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರ ವಿರುದ್ಧ 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ನ್ಯಾಯಾಲಯ ಬಂಧನದ ವಾರಂಟ್  ಜಾರಿ ಮಾಡಿದೆ.

    ಮಹಾರಾಷ್ಟ್ರದ ನಾಂದೇಡ್ ನಲ್ಲಿರುವ ಧರ್ಮಬಾದ್ ಕೋರ್ಟ್ ಸಿಎಂ ಚಂದ್ರಬಾಬು ನಾಯ್ಡು ಸೇರಿದಂತೆ ಆಂಧ್ರಪ್ರದೇಶ ಕ್ಯಾಬಿನೆಟ್ ಮಿನಿಸ್ಟರ್ ಡಿ ಉಮಾಮಹೇಶ್ವರ್ ರಾವ್ ಹಾಗೂ 14 ಮಂದಿ ವಿರುದ್ಧ ವಾರಂಟ್ ಜಾರಿ ಮಾಡಿದೆ. ಅಲ್ಲದೇ ಸೆಪ್ಟೆಂಬರ್ 21ರ ಒಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ.

    ಅವಿಭಜಿತ ಆಂಧ್ರಪ್ರದೇಶ ಇದ್ದಾಗ 2010ರಲ್ಲಿ ತೆಲುಗು ದೇಶಂ ಪಕ್ಷದ ಮುಖ್ಯಸ್ಥರು ಆಗಿರುವ ಸಿಎಂ ಚಂದ್ರಬಾಬು ನಾಯ್ಡು ಅವರು, ಮಹಾರಾಷ್ಟ್ರದ ಬಾಬ್ಲಿ ಯೋಜನೆ ಕುರಿತು ಪ್ರತಿಭಟನೆ ನಡೆಸಿದ್ದರು. ಟಿಡಿಪಿ ತನ್ನ ಶಾಸಕರೊಂದಿಗೆ ಮಹಾರಾಷ್ಟ್ರದ ನಿಷೇಧಿತ ಪ್ರದೇಶವಾದ ಬಾಬ್ಲಿ ಯೋಜನೆ ಪ್ರದೇಶಕ್ಕೆ ಪ್ರತಿಭಟನಾ ಯಾತ್ರೆ ನಡೆಸಿತ್ತು. ಈ ವೇಳೆ ಗೋದಾವರಿ ನದಿಗೆ ಮಹಾರಾಷ್ಟ್ರ ಸರ್ಕಾರ ನಿರ್ಮಾಣ ಮಾಡುತ್ತಿರುವ ಬಾಬ್ಲಿ ಯೋಜನೆ ನಿಯಮಗಳ ವಿರುದ್ಧವಾಗಿದೆ ಎಂದು ಆರೋಪಿಸಿತ್ತು.

    ಅಂದು ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶ ವಿಧಾನಸಭೆಯಲ್ಲಿ ವಿರೋಧಿ ಪಕ್ಷದ ನಾಯಕತ್ವದ ಸ್ಥಾನ ಹೊಂದಿದ್ದರು. ಯಾತ್ರೆಯ ವೇಳೆ ಭಾಗವಹಿಸಿದ್ದ 40 ಶಾಸಕರು ಹಾಗೂ ಚಂದ್ರಬಾಬು ನಾಯ್ಡುರನ್ನು ಅಂದು ಮಹಾರಾಷ್ಟ್ರ ಪೊಲೀಸರು ಬಂಧಿಸಿ ಜಾಮೀನು ರಹಿತ ಪ್ರಕರಣ ದಾಖಲಿಸಿದ್ದರು. ಇತ್ತೀಚೆಗೆ ಈ ಪ್ರಕರಣವನ್ನು ಮರುವಿಚಾರಣೆ ನಡೆಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು.

    ಸದ್ಯ ಕೋರ್ಟ್ ನೋಟಿಸ್ ಪಡೆದಿರುವ ಟಿಡಿಪಿ ಮುಖಂಡ ಬುದ್ಧ ವೆಂಕಣ್ಣ ಈ ಕುರಿತು ವಿಜಯವಾಡದಲ್ಲಿ ಪ್ರತಿಕ್ರಿಯೆ ನೀಡಿದ್ದು, ಪ್ರಕರಣದಲ್ಲಿ ತಮಗೆ ಸಮನ್ಸ್ ಜಾರಿಯಾಗಲು ಪ್ರಧಾನಿ ನರೇಂದ್ರಮೋದಿ ಅವರೇ ಕಾರಣ ಎಂದು ಆರೋಪಿಸಿದ್ದಾರೆ. ಅಲ್ಲದೇ ತಮ್ಮನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಚಂದನ್ ಶೆಟ್ಟಿ ನಂತ್ರ ಅರ್ಜುನ್ ಜನ್ಯ, ಅಧಿತಿ ಸಾಗರ್ ಗೆ ಬಂಧನದ ಭೀತಿ!

    ಚಂದನ್ ಶೆಟ್ಟಿ ನಂತ್ರ ಅರ್ಜುನ್ ಜನ್ಯ, ಅಧಿತಿ ಸಾಗರ್ ಗೆ ಬಂಧನದ ಭೀತಿ!

    ಬೆಂಗಳೂರು: ಸ್ಯಾಂಡಲ್ ವುಡ್ ಮೇಲೆ ಸಿಸಿಬಿ ಕಣ್ಣು ಬಿದ್ದಿದ್ದು, ಚಂದನ್ ಶೆಟ್ಟಿ ನಂತರ ಈಗ ‘ರ‍್ಯಾಂಬೋ -2’ ಚಿತ್ರದ ತಂಡಕ್ಕೆ ಸಂಕಷ್ಟ ಎದುರಾಗಿದೆ.

    ರ‍್ಯಾಂಬೋ -2 ಚಿತ್ರದ ಧಮ್ ಮಾರೋ ಧಮ್ ಹಾಡಿನ ಮೇಲೆ ಸಿಸಿಬಿ ಕಣ್ಣು ಬಿದ್ದಿದ್ದು, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮತ್ತು ಅಧಿತಿ ಸಾಗರ್ ಗೆ ಸಮನ್ಸ್ ನೀಡಲು ಸಿಸಿಬಿ ತಂಡ ಸಿದ್ಧತೆ ನಡೆಸುತ್ತಿದೆ. ಚಂದನ್ ಶೆಟ್ಟಿ ಅವರ ವಿಚಾರಣೆಯ ಬಳಿಕ ಅರ್ಜುನ್ ಜನ್ಯ ಮತ್ತು ಮುತ್ತುಗೆ ಸಂಕಷ್ಟ ಎದುರಾಗಲಿದೆ. ಚಿತ್ರದ ಈ ಹಾಡಿನಲ್ಲಿ ಗಾಂಜಾ ಹೊಡಿ ಎಂಬ ಪ್ರಚೋದನೆ ಹಿನ್ನೆಲೆಯಲ್ಲಿ ಸಿಸಿಬಿ ತಂಡ ಇಬ್ಬರಿಗೂ ಸಮನ್ಸ್ ಜಾರಿಗೊಳಿಸಲಿದೆ ಎಂಬುದಾಗಿ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ಇತ್ತೀಚೆಗೆ ಬಿಡುಗಡೆಯಾದ ರ‍್ಯಾಪರ್ ಚಂದನ್ ಶೆಟ್ಟಿ ಸಂಗೀತ ಸಂಯೋಜನೆಯ ‘ಅಂತ್ಯ’ ಸಿನಿಮಾದ “ಗಾಂಜಾ ಕಿಕ್” ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಆದರೆ ಗಾಂಜಾ ಕಿಕ್ ಹಾಡಿನಲ್ಲಿ ಮಾದಕ ವಸ್ತುಗಳನ್ನು ಸೇವಿಸುವ ಕುರಿತು ವೈಭವೀಕರಿಸಿ ತೋರಿಸಲಾಗಿದೆ. ಹೀಗಾಗಿ ಖುದ್ದು ಸ್ವಯಂ ದೂರು ದಾಖಲಿಸಿಕೊಂಡಿರುವ ಸಿಸಿಬಿ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಚಂದನ್ ಶೆಟ್ಟಿಗೆ ಸಮನ್ಸ್ ಜಾರಿ ಮಾಡಿದರು. ಇಂದು ಚಂದನ್ ವಿಚಾರಣೆಗೆ ಹಾಜರಾಗಿದ್ದಾರೆ. ಇದನ್ನೂ ಓದಿ: ರ‍್ಯಾಪರ್ ಚಂದನ್ ಶೆಟ್ಟಿಗೆ ಬಂಧನ ಭೀತಿ?

    ಚಂದನ್ ಶೆಟ್ಟಿ ವಿಚಾರಣೆ ಆದ ಬಳಿಕ ರ‍್ಯಾಂಬೋ-2 ಚಿತ್ರದ ‘ಧಮ್ ಮಾರೋ ಧಮ್’ ಹಾಡಿನ ಸಾಹಿತ್ಯ ಬರೆದ ಮುತ್ತು ಸೇರಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಗಾಯಕಿ ಅಧಿತಿ ಸಾಗರ್ ಅವರಿಗೆ ನೋಟಿಸ್ ನೀಡುವ ಸಾಧ್ಯತೆಗಳಿವೆ. ಈ ಹಾಡು ಯುವಜನತೆಗೆ ಗಾಂಜಾ ಸೇವನೆ ಮಾಡಲು ಪ್ರಚೋದನೆ ನೀಡುವ ರೀತಿಯಲ್ಲಿದೆ. ಯುವ ಜನತೆ ಪಾರ್ಟಿ ಹಾಗೂ ಪಬ್‍ಗೆ ಹೋದಾಗ ಈ ಹಾಡು ಕೇಳಿ ಗಾಂಜಾಗೆ ಆಕರ್ಷಕರಾಗಿ ಅದನ್ನು ಸೇವಿಸಲು ಮುಂದಾಗುತ್ತಾರೆ.

    ಸಿಸಿಬಿ ಪೊಲೀಸರು ಚಂದನ್ ಶೆಟ್ಟಿ ಅವರಿಗೆ ನೋಟಿಸ್ ನೀಡುವ ಮೊದಲು ಫಿಲಂ ಚೇಂಬರ್ ಗೆ ಮನವಿ ಮಾಡಿಕೊಂಡಿದ್ದರು. ಮನವಿಯಲ್ಲಿ `ಈ ರೀತಿಯ ಹಾಡುಗಳು ಸಮಾಜದಲ್ಲಿ ಸಾಕಷ್ಟು ಕೆಡುಕು ಉಂಟು ಮಾಡುತ್ತಿದೆ. ಅಲ್ಲದೇ ಯುವಜನತೆಗೆ ಗಾಂಜಾ ಸೇವನೆ ಮಾಡಲು ಆಕರ್ಷಿಸುತ್ತದೆ. ಹಾಗಾಗಿ ನೀವು ಈ ರೀತಿಯ ಹಾಡುಗಳ ಬಗ್ಗೆ ನಿಗಾವಹಿಸಿ ಎಂದು ತಿಳಿಸಿದ್ದರು. ಅಲ್ಲದೇ ಈ ರೀತಿಯ ಹಾಡುಗಳ ಲಿಂಕ್‍ಗಳನ್ನು ಸಾಮಾಜಿಕ ಜಾಲತಾಣ ಹಾಗೂ ಯೂಟ್ಯೂಬ್‍ನಲ್ಲಿ ಡಿಲೀಟ್ ಮಾಡಬೇಕೆಂದು ಸಿಸಿಬಿ ಪೊಲೀಸರು ಹೇಳಿದ್ದರು ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv