Tag: Sun Glass

  • ಒಳ್ಳೆಯ ಬಟ್ಟೆ,‌ ದುಬಾರಿ ಸನ್‌ ಗ್ಲಾಸ್ ಧರಿಸಿದ್ದಕ್ಕೆ ದಲಿತ ವ್ಯಕ್ತಿಯ ಮೇಲೆ ಹಲ್ಲೆ- 7 ಮಂದಿ ವಿರುದ್ಧ FIR

    ಒಳ್ಳೆಯ ಬಟ್ಟೆ,‌ ದುಬಾರಿ ಸನ್‌ ಗ್ಲಾಸ್ ಧರಿಸಿದ್ದಕ್ಕೆ ದಲಿತ ವ್ಯಕ್ತಿಯ ಮೇಲೆ ಹಲ್ಲೆ- 7 ಮಂದಿ ವಿರುದ್ಧ FIR

    ಗಾಂಧಿನಗರ: ದಲಿತ ವ್ಯಕ್ತಿಯೊಬ್ಬ ಒಳ್ಳೆಯ ಬಟ್ಟೆ ಹಾಗೂ ದುಬಾರಿ ಸನ್‍ಗ್ಲಾಸ್ (Sunglass) ಧರಿಸಿದ್ದ ಎಂಬ ಕಾರಣಕ್ಕೆ ತಂಡವೊಂದು ಹಲ್ಲೆ ಮಾಡಿ ಘಟನೆ ಗುಜರಾತ್‍ನಲ್ಲಿ ನಡೆದಿದೆ.

    ಗುಜರಾತ್‍ (Gujrat) ನ ಬನಸ್ ಕಾಂತ ಜಿಲ್ಲೆಯ ಪಾಲನ್‍ಪುರ ತಾಲೂಕಿನ ಮೋಟಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜಿಗರ್ ಶೆಖಾಲಿಯಾ ಹಲ್ಲೆಗೊಳಗಾದ ವ್ಯಕ್ತಿ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಏಳು ಮಂದಿ ಆರೋಪಿಗಳ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ಶಕುನಿ ಪಾತ್ರಧಾರಿ ಗೂಫಿ ಆರೋಗ್ಯ ಸ್ಥಿತಿ ಗಂಭೀರ

    ನಡೆದಿದ್ದೇನು..?: ಮಂಗಳವಾರ ಬೆಳಗ್ಗೆ ಜಿಗರ್ ತಮ್ಮ ಮನೆ ಮುಂದೆ ನಿಂತಿದ್ದರು. ಈ ವೇಳೆ ಓರ್ವ ಆರೋಪಿ ಬಂದು ಇತ್ತೀಚಿನ ದಿನಗಳಲ್ಲಿ ನಿನ್ನದು ಅತಿಯಾಯ್ತು. ಇದೇ ರೀತಿ ಮುಂದುವರಿದ್ದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಹೊರಟು ಹೋಗಿದ್ದಾನೆ.

    ಅದೇ ದಿನ ರಾತ್ರಿ ಜಿಗರ್ ಗ್ರಾಮದ ಹೊರಭಾಗದ ದೇವಾಲಯದ ಬಳಿ ನಿಂತಿದ್ದ ವೇಳೆ ಬಂದ 7 ಮಂದಿ ಆರೋಪಿಗಳು ಏಕಾಏಕಿ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ. ತನ್ನನ್ನು ಯಾಕೆ ಹೊಡೆಯುತ್ತಿದ್ದೀರಾ ಎಂದು ಕೇಳಿದಾಗ ಒಳ್ಳೆಯ ಬಟ್ಟೆ ಹಾಗೂ ಸನ್ ಗ್ಲಾಸ್ ಧರಿಸಿದ್ದಕ್ಕಾಗಿ ಎಂದು ಹೇಳಿ ಮನಬಂದಂತೆ ಥಳಿಸಿದ್ದಾರೆ.

    ಇತ್ತ ಮಗನ ಮೇಲೆ ಹಲ್ಲೆ ನಡೆಯುತ್ತಿರುವ ವಿಚಾರ ತಿಳಿದ ತಾಯಿ ಸ್ಥಳಕ್ಕೆ ದೌಡಾಯಿಸಿ ಹಲ್ಲೆ ಮಾಡದಂತೆ ಮನವಿ ಮಾಡಿದ್ದಾರೆ. ಅಲ್ಲದೆ ಮಗನ ರಕ್ಷಣೆಗೆ ಧಾವಿಸಿದ್ದಾರೆ. ಈ ವೇಳೆ ಆರೋಪಿಗಳು ಜಿಗರ್ ತಾಯಿ ಮೇಲೆಯೂ ಹಲ್ಲೆ ನಡೆಸಿ ಆಕೆಯ ಬಟ್ಟೆಯನ್ನು ಹರಿದು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಹೊರಟು ಹೋಗಿದ್ದಾರೆ.

    ಗಾಯಾಳು ತಾಯಿ-ಮಗ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

  • ಶೂಟಿಂಗ್ ಸೆಟ್ ನಿಂದ ಸನ್ ಗ್ಲಾಸ್ ಕದ್ದ ರಾಧಿಕಾ ಪಂಡಿತ್!

    ಶೂಟಿಂಗ್ ಸೆಟ್ ನಿಂದ ಸನ್ ಗ್ಲಾಸ್ ಕದ್ದ ರಾಧಿಕಾ ಪಂಡಿತ್!

    ಬೆಂಗಳೂರು: ನಟಿ ರಾಧಿಕಾ ಪಂಡಿತ್ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಆಗುತ್ತಿದೆ. ರಾಧಿಕಾ ಒಂದು ವಸ್ತುವನ್ನ ಕದ್ದು ತಂದಿದ್ದಾರೆ. ಈ ಬಗ್ಗೆ ಖುದ್ದು ರಾಧಿಕಾ ತಮ್ಮ ಫೇಸ್ ಬುಕ್ ನಲ್ಲಿ ಹೇಳಿಕೊಂಡಿದ್ದಾರೆ.

    ಯಶ್ ಅವರನ್ನು ಭೇಟಿ ಮಾಡಲು ರಾಧಿಕಾ `ಕೆಜಿಎಫ್ ಸೆಟ್’ ಗೆ ಹೋಗಿದ್ದರು. ಅಲ್ಲಿಂದ ಸ್ಪೆಷಲ್ ಆಗಿ ಕಣ್ಣಿಗೆ ಕಂಡ ಒಂದು ವಸ್ತುವನ್ನು ತೆಗೆದುಕೊಂಡು ಬಂದಿದ್ದಾರೆ. ರಾಧಿಕಾ ಕೆಜಿಎಫ್ ಸೆಟ್ ನಲ್ಲಿದ್ದ ಹಳದಿ ಬಣ್ಣ ಸನ್ ಗ್ಲಾಸ್ ಅನ್ನು ಯಾರಿಗೂ ಗೊತ್ತಾಗದ ರೀತಿಯಲ್ಲಿ ತೆಗೆದುಕೊಂಡು ಬಂದಿದ್ದಾರೆ. ನಂತರ ಅದನ್ನು ಹಾಕಿಕೊಂಡು ಫೋಟೋ ಕೂಡ ತೆಗೆಸಿಕೊಂಡಿದ್ದಾರೆ.

    ಆ ಫೋಟೋ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ಇದನ್ನು ಯಾರಿಗೂ ತಿಳಿಯದಂತೆ ತಂದಿದ್ದೇನೆ ಎಂದು ಸ್ಟೇಟಸ್ ಹಾಕಿದ್ದಾರೆ. ಫೋಟೋ ನೋಡಿರುವ ಅಭಿಮಾನಿಗಳು ರಾಧಿಕಾ ಅವರ ಸಿನಿಮಾ ಬಿಡುಗಡೆ ಆಗದೆ ಇರುವುದರಿಂದ ಎಷ್ಟು ಮಿಸ್ ಮಾಡಿಕೊಳ್ಳುತ್ತಿದ್ದೇವೆ ಅಂತ ಕಮೆಂಟ್ ಮೂಲಕ ತಿಳಿಸಿದ್ದಾರೆ.

    ಕೆಲವರು ಈ ಫೋಟೋಗೆ ಲೈಕ್ ಕೊಟ್ಟು ಕೆಜಿಎಫ್ ಸಿನಿಮಾ ಬಗ್ಗೆ ಚರ್ಚೆ ಶುರು ಮಾಡಿದ್ದು, ಕೆಜಿಎಫ್ ಸೆಟ್ ಗೆ ಹೋದಾಗ ನೀವಾದರೂ ನಿರ್ದೇಶಕರಿಗೆ ಹೇಳಿ ಬೇಗ ಸಿನಿಮಾ ಬಿಡುಗಡೆ ಮಾಡಿಸಿ ಎಂದು ಅಭಿಮಾನಿಗಳು ಮನವಿ ಮಾಡಿದ್ದಾರೆ. ಅದರ ಜೊತೆಯಲ್ಲಿ ಯಶ್ ಅಣ್ಣನಿಗೂ ಚಿತ್ರ ರಿಲೀಸ್ ಮಾಡಿಸುವಂತೆ ತಿಳಿಸಿ ಎಂದಿದ್ದಾರೆ.