Tag: Sundar C

  • ಕಾಲಿವುಡ್‌ನತ್ತ ನಟ ದುನಿಯಾ ವಿಜಯ್ – ನಯನತಾರಾಗೆ ವಿಲನ್!

    ಕಾಲಿವುಡ್‌ನತ್ತ ನಟ ದುನಿಯಾ ವಿಜಯ್ – ನಯನತಾರಾಗೆ ವಿಲನ್!

    ಟ, ನಿರ್ದೇಶಕ ದುನಿಯಾ ವಿಜಯ್ (Duniya Vijay) ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ತೆಲುಗಿನಲ್ಲಿ ಘರ್ಜಿಸಿದ್ದಾಯ್ತು, ಈಗ ತಮಿಳಿನತ್ತ ಮುಖ ಮಾಡಿದ್ದಾರೆ. ನಯನತಾರಾಗೆ (Nayanthara) ವಿಲನ್ ಆಗಿ ವಿಜಯ್ ಅಬ್ಬರಿಸಲಿದ್ದಾರೆ. ಸ್ಟಾರ್ ನಟಿಯ ಸಿನಿಮಾದಲ್ಲಿ ಭಾಗವಾಗ್ತಿರುವ ಬಗ್ಗೆ ಸ್ವತಃ ವಿಜಯ್ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ರಮ್ಯಾ ಫ್ಯಾನ್ಸ್‌ಗೆ ಸಿಹಿಸುದ್ದಿ- ಕಮ್‌ ಬ್ಯಾಕ್‌ ಬಗ್ಗೆ ಸುಳಿವು ಕೊಟ್ರು ನಟಿ

    ನಂದಮೂರಿ ಬಾಲಕೃಷ್ಣಗೆ ವಿಲನ್ ಆಗಿ ದುನಿಯಾ ವಿಜಯ್ ನಟಿಸಿದ ಬಳಿಕ ಮತ್ತೊಂದು ಬಂಪರ್ ಆಫರ್ ಸಿಕ್ಕಿದೆ. ಸುಂದರ್ ಸಿ. ನಿರ್ದೇಶನದ ಹಾಗೂ ನಯನತಾರಾ ನಟನೆಯ ‘ಮೂಕುತ್ತಿ ಅಮ್ಮನ್ 2’ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದೆ. ಇದನ್ನು ವಿಜಯ್ ಅವರೇ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ತಿಳಿಸಿದ್ದಾರೆ. ತಮಿಳು ಪ್ರೇಕ್ಷಕರಿಗೆ ಪರಿಚಯಿಸುತ್ತಿರೋದಕ್ಕೆ ನಿರ್ದೇಶಕ ಸುಂದರ್ ಸಿ.ಗೆ ಥ್ಯಾಂಕ್ಯೂ ಎಂದಿದ್ದಾರೆ.

     

    View this post on Instagram

     

    A post shared by Duniya Vijay (@duniyavijayofficial)

    ಅಂದಹಾಗೆ, ವಿಜಯ್ ಅವರು ಸಲಗ, ಭೀಮ ಸಕ್ಸಸ್ ನಂತರ ಕನ್ನಡದ ‘ಲ್ಯಾಂಡ್‌ಲಾರ್ಡ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಮಗಳು ಮೋನಿಷಾ ಮತ್ತು ವಿನಯ್ ರಾಜ್‌ಕುಮಾರ್ ನಟನೆಯ ‘ಸಿಟಿಲೈಟ್ಸ್’ ಚಿತ್ರಕ್ಕೆ ದುನಿಯಾ ವಿಜಯ್ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ.

  • ಲೇಡಿ ಸೂಪರ್ ಸ್ಟಾರ್‌ಗೆ ತಮಿಳು ಡೈರೆಕ್ಟರ್ ಸುಂದರ್ ಸಿ. ಆ್ಯಕ್ಷನ್ ಕಟ್

    ಲೇಡಿ ಸೂಪರ್ ಸ್ಟಾರ್‌ಗೆ ತಮಿಳು ಡೈರೆಕ್ಟರ್ ಸುಂದರ್ ಸಿ. ಆ್ಯಕ್ಷನ್ ಕಟ್

    ಮಿಳಿನ ಲೇಡಿ ಸೂಪರ್ ಸ್ಟಾರ್ ನಯನತಾರಾ (Nayanathara) ಅವರು ನಟಿ, ನಿರ್ಮಾಪಕಿಯಾಗಿ ಬ್ಯುಸಿಯಾಗಿದ್ದಾರೆ. ಇದೀಗ ಡೈರೆಕ್ಟರ್ ಸುಂದರ್ ಸಿ. (Sundar C.) ಜೊತೆ ಸಿನಿಮಾ ಮಾಡಲು ನಟಿ ಮುಂದಾಗಿದ್ದಾರೆ.

    ಶಾರುಖ್ ಖಾನ್ ಜೊತೆ ‘ಜವಾನ್’ (Jawan) ಸಿನಿಮಾದಲ್ಲಿ ನಯನತಾರಾ ನಟಿಸಿದ ಮೇಲೆ ಅವರ ಬೇಡಿಕೆ ಹೆಚ್ಚಾಗಿದೆ. ಬಹುಭಾಷೆಗಳಲ್ಲಿ ನಟಿಸುತ್ತಾ ನಟಿ ಆ್ಯಕ್ಟಿವ್ ಆಗಿದ್ದಾರೆ. ಸದ್ಯ ಅವರು ‘ಮೂಕುತಿ ಅಮ್ಮನ್ 2’ (Mookuthi Amman 2) ಸಿನಿಮಾದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಕುರಿತು ಚಿತ್ರತಂಡ ಅಧಿಕೃತವಾಗಿ ತಿಳಿಸಿದೆ.

    ಇನ್ನೂ ನಯನತಾರಾಗೆ ಸುಂದರ್ ಸಿ. ನಿರ್ದೇಶನ ಮಾಡಲಿದ್ದಾರೆ. ಮತ್ತೊಂದು ದೇವಿ ಕುರಿತು ವಿಭಿನ್ನ ಕಥೆ ತರಲು ಅವರು ಸಿದ್ಧತೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ಉತ್ತಮ ಕಥೆ ಸಿಕ್ಕರೆ ಕನ್ನಡದಲ್ಲಿ ರಕ್ಷಿತ್‌ ಶೆಟ್ಟಿ ಜೊತೆ ನಟಿಸಲು ಸಿದ್ಧ: ಕೃತಿ ಶೆಟ್ಟಿ

    ಇದರ ಮೊದಲ ಭಾಗ ‘ಮೂಕುತಿ ಅಮ್ಮನ್’ ಸಿನಿಮಾದಲ್ಲಿ ನಯನತಾರಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈಗ ಪಾರ್ಟ್ 2ನಲ್ಲಿಯೂ ಕೂಡ ಅವರು ಸಾಥ್ ನೀಡಲಿದ್ದಾರೆ.

  • ಬೆಚ್ಚಿ ಬೀಳಿಸಲು ಬಂದ ತಮನ್ನಾ ಭಾಟಿಯಾ

    ಬೆಚ್ಚಿ ಬೀಳಿಸಲು ಬಂದ ತಮನ್ನಾ ಭಾಟಿಯಾ

    ಹಾಟ್ ಬ್ಯೂಟಿ ತಮನ್ನಾ ಭಾಟಿಯಾ (Tamannaah Bhatia) ಇದೀಗ ಬೆಚ್ಚಿ ಬೀಳಿಸಲು ರೆಡಿಯಾಗಿದ್ದಾರೆ. ‘ಅರಣ್ಮನೈ 4’ (Aranmanai 4) ಚಿತ್ರದ ಮೂಲಕ ಭಯಾನಕವಾಗಿ ಮಿಲ್ಕಿ ಬ್ಯೂಟಿ ಎಂಟ್ರಿ ಕೊಡುತ್ತಿದ್ದಾರೆ. ಚಿತ್ರದ ಟ್ರೈಲರ್ ಈಗ ರಿಲೀಸ್ ಆಗಿದ್ದು, ತಮನ್ನಾ ನಟನೆಯ ಝಲಕ್‌ಗೆ ಫ್ಯಾನ್ಸ್ ದಂಗಾಗಿದ್ದಾರೆ.

    ತಮನ್ನಾ ಸದಾ ಹೊಸ ಬಗೆಯ ಪಾತ್ರಗಳಲ್ಲಿ ಕಾಣಿಸಿಕೊಳ್ಳಲು ಇಷ್ಟಪಡುತ್ತಾರೆ. ಇತ್ತೀಚಿನ ದಿನಗಳಲ್ಲಿ ಸಖತ್ ಹಾಟ್ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಹೈಲೆಟ್ ಆಗಿದ್ದ ನಟಿ ಈಗ ದೆವ್ವದ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಪ್ರೇಕ್ಷಕರನ್ನು ಬೆಚ್ಚಿ ಬೀಳಿಸಲು ಬರುತ್ತಿದ್ದಾರೆ. ಇದನ್ನೂ ಓದಿ:ಕ್ಲಿಕ್ ಮಾಡಿ ಎರಡು ಲಕ್ಷ ಕಳೆದುಕೊಂಡ ಬಿಗ್ ಬಾಸ್ ಸ್ಪರ್ಧಿ

     

    View this post on Instagram

     

    A post shared by Tamannaah Bhatia (@tamannaahspeaks)

    ‘ಅರಣ್ಮನೈ 4’ ಸೀಕ್ವೆಲ್ ಸಿನಿಮಾದಲ್ಲಿ ತಮನ್ನಾರ ಕೊಲೆಯಾಗಿರುತ್ತದೆ. ಆದರೆ ಅವಳ ಸಾವು ಸಹಜ ಅಲ್ಲ ಎಂದು ನಟ, ಡೈರೆಕ್ಟರ್ ಸುಂದರ್ ಸಿ. ಹೇಳುವುದನ್ನು ಟ್ರೈಲರ್‌ನಲ್ಲಿ ನೋಡಬಹುದಾಗಿದೆ. ತಂಗಿಯ ಸಾವಿಗೆ ಅಸಲಿ ಕಾರಣವೇನು ಎಂದು ಹುಡುಕುವ ಲಾಯರ್ ಪಾತ್ರದಲ್ಲಿ ಸುಂದರ್ ಸಿ. ನಟಿಸಿದ್ದಾರೆ. ಸಿನಿಮಾ ಕಥೆ ಮತ್ತು ನಿರ್ದೇಶನ ಕೂಡ ಸುಂದರ್ ಸಿ. ಮಾಡಿದ್ದಾರೆ.

    ಈ ಚಿತ್ರದಲ್ಲಿ ನಟಿ ರಾಶಿ ಖನ್ನಾ (Raashii Khanna) ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಯೋಗಿ ಬಾಬು, ಕನ್ನಡದ ನಟ ಗರುಡ ರಾಮ್ ಕೂಡ ನಟಿಸಿದ್ದಾರೆ. ಖುಷ್ಬೂ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದೇ ಏಪ್ರಿಲ್ 11ಕ್ಕೆ ಸಿನಿಮಾ ರಿಲೀಸ್ ಆಗಲಿದೆ.

    ಅಂದಹಾಗೆ, ಈ ಸಿನಿಮಾದಲ್ಲಿ ವಿಜಯ್ ಸೇತುಪತಿ ಕೂಡ ನಟಿಸಬೇಕಿತ್ತು. ಆದರೆ ಡೇಟ್ಸ್ ಹೊಂದಾಣಿಕೆ ಆಗದ ಕಾರಣ ಅವರು ಕೈಬಿಟ್ಟಿದ್ದಾರೆ.

  • ಖುಷ್ಬೂ ಮತಾಂತರ ಆಗಿದ್ದಾರಾ?: ನಟಿ ಕೊಟ್ಟ ಉತ್ತರವೇನು?

    ಖುಷ್ಬೂ ಮತಾಂತರ ಆಗಿದ್ದಾರಾ?: ನಟಿ ಕೊಟ್ಟ ಉತ್ತರವೇನು?

    ಟಿ ಹಾಗೂ ಸಕ್ರಿಯ ರಾಜಕಾರಣಿಯೂ ಆಗಿರುವ ಖುಷ್ಬೂ (Khushboo) ಸೋಷಿಯಲ್ ಮೀಡಿಯಾದಲ್ಲಿ ಆಗಾಗ್ಗೆ ಒಂದಿಲ್ಲೊಂದು ಚರ್ಚೆ ಹುಟ್ಟು ಹಾಕುತ್ತಲೇ ಇರುತ್ತಾರೆ. ಅದಕ್ಕೆ ಬಂದ ಉತ್ತರಗಳಿಗೆ ಮತ್ತು ಹುಟ್ಟಿದ ಪ್ರಶ್ನೆಗಳಿಗೆ ಸಮಾಧಾನವಾಗಿಯೇ ಉತ್ತರ ನೀಡುತ್ತಾರೆ. ಈ ಬಾರಿ ಅವರ ಮದುವೆ ಮತ್ತು ಮತಾಂತರ (Conversion) ಕುರಿತಾಗಿ ಪ್ರಶ್ನೆಯೊಂದು ತೇಲಿ ಬಂದಿದ್ದು, ಅದಕ್ಕೂ ಖುಷ್ಬೂ ಉತ್ತರಿಸಿದ್ದಾರೆ.

    ಖುಷ್ಬೂ ಮುಂಬೈನ ಮುಸ್ಲಿಂ ಕುಟುಂಬದಲ್ಲಿ ಹುಟ್ಟಿದವರು. ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ನಂತರ ಅವರು ದಕ್ಷಿಣ ಭಾರತದಲ್ಲಿ ನೆಲೆಯೂರಿದರು. ಹೆಚ್ಚೆಚ್ಚು ಸಿನಿಮಾಗಳು ಸಿಕ್ಕಾಗಿ ಚೆನ್ನೈನಲ್ಲೇ ಮನೆ ಮಾಡಿಕೊಂಡರು. ಅಲ್ಲದೇ, ನಿರ್ದೇಶಕ ಸುಂದರ್. ಸಿ  (Sundar C)ಅವರನ್ನು ವಿವಾಹವೂ ಆದರು. ಈ ವಿವಾಹದ ಕುರಿತಾಗಿಯೇ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡಿದ್ದಾರೆ. ನೀವು ಹಿಂದೂ ವ್ಯಕ್ತಿಯನ್ನು ಮದುವೆ ಆಗಿದ್ದೀರಿ. ಹಾಗಾಗಿ ಮತಾಂತರ ಆಗಿದ್ದೀರಾ? ಎನ್ನುವ ಪ್ರಶ್ನೆಯನ್ನು ನಟಿಯ ಮುಂದಿಟ್ಟಿದ್ದಾರೆ. ಇದನ್ನೂ ಓದಿ:ಶಿವಣ್ಣ ಅಭಿಮಾನಿಗಳ ಆಕ್ರೋಶಕ್ಕೆ ಮಣಿದು, ಹೇಳಿದ ಮಾತು ಹಿಂಪಡೆದ ಸಂಬರ್ಗಿ

    ದಿ ಕೇರಳ ಸ್ಟೋರಿ ಸಿನಿಮಾ ರಿಲೀಸ್ ಆದ ಬೆನ್ನಲ್ಲೇ ಈ ಪ್ರಶ್ನೆ ಅವರಿಗೆ ಎದುರಾಗಿದೆ. ಕೇಳಿದ ಪ್ರಶ್ನೆಗೆ ಸಮಚಿತ್ತದಿಂದಲೇ ಉತ್ತರಿಸಿರುವ ಖುಷ್ಭೂ. ನಾನು ಮತಾಂತರ ಆಗಿಲ್ಲ. ವಿಶೇಷ ವಿವಾಹ ಕಾಯ್ದೆ ಅಡಿಯಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿದ್ದೆ. ಈ ಕಾಯ್ದೆ ಬಗ್ಗೆ ತಿಳಿದುಕೊಳ್ಳಿ ಎಂದು ಅವರು ಹೇಳಿದ್ದಾರೆ. ಈ ಮೂಲಕ ತಾವು ಯಾವುದೇ ಧರ್ಮಕ್ಕೆ ಮತಾಂತರ ಆಗಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ.

    ಖುಷ್ಬೂ ದಕ್ಷಿಣ ಭಾರತದ ಅಷ್ಟೂ ಭಾಷೆಯ ಸಿನಿಮಾಗಳಲ್ಲಿ ನಟಿಸಿರುವ ಹೆಸರಾಂತ ನಟ. ಕನ್ನಡದಲ್ಲೂ ಅವರು ರವಿಚಂದ್ರನ್ ಜೊತೆ ಸಿನಿಮಾ ಮಾಡಿದ್ದಾರೆ. ಮತ್ತೆ ಕನ್ನಡ ಸಿನಿಮಾ ರಂಗಕ್ಕೆ ವಾಪಸ್ಸಾಗುವ ಮಾತುಗಳನ್ನೂ ಆಡಿದ್ದಾರೆ. ಇದರ ಜೊತೆ ಜೊತೆಗೆ ರಾಜಕಾರಣದಲ್ಲೂ ಅವರು ಹಂತ ಹಂತವಾಗಿ ಬೆಳೆಯುತ್ತಿದ್ದಾರೆ.