Tag: Sunil Acharaya

  • ಅದ್ಭುತ ಕಥೆಯ ಸುಳಿವು ಬಿಚ್ಚಿಟ್ಟ ರಾಂಧವ ಟ್ರೇಲರ್!

    ಅದ್ಭುತ ಕಥೆಯ ಸುಳಿವು ಬಿಚ್ಚಿಟ್ಟ ರಾಂಧವ ಟ್ರೇಲರ್!

    ಬೆಂಗಳೂರು: ಮೊದಲ ಪ್ರಯತ್ನವೊಂದರಲ್ಲಿ ಯಾವುದೇ ಸಿನಿಮಾವಾದರೂ ಕಾಲೂರಿ ನಿಲ್ಲುವುದೇ ಕಷ್ಟ. ಅಂಥಾದ್ದರಲ್ಲಿ ಯಾವ ಸ್ಟಾರ್ ಸಿನಿಮಾಗಳಿಗೂ ಕಡಿಮೆಯಿಲ್ಲದಂತೆ ಅಬ್ಬರಿಸೋದೆಂದರೆ ಅದೊಂದು ಪವಾಡವೇ. ಅಂಥಾದ್ದೊಂದು ಪವಾಡವನ್ನು ವಾಸ್ತವದಲ್ಲಿಯೇ ಸೃಷ್ಟಿಸೋದರಲ್ಲಿ ರಾಂಧವ ಚಿತ್ರತಂಡ ಈಗಾಗಲೇ ಗೆದ್ದಿದೆ. ಇದೇ ಇಪ್ಪತ್ಮೂರನೇ ತಾರೀಕಿನಂದು ತೆರೆಗಾಣಲಿರೋ ಈ ಚಿತ್ರದ ಟ್ರೇಲರ್ ಇದೀಗ ಬಿಡುಗಡೆಗೊಂಡಿದೆ. ಬಿಡುಗಡೆಯ ಕಡೆಯ ಕ್ಷಣಗಳಲ್ಲಿ ಅದ್ಭುತ ಕಥಾಹಂದರದ ಸುಳಿವು ಬಿಚ್ಚಿಡುತ್ತಲೇ ನಿಗೂಢ ಅಂಶಗಳನ್ನು ಬಚ್ಚಿಟ್ಟುಕೊಂಡಿರೋ ಈ ಟ್ರೇಲರ್ ನೋಡಿದ ಪ್ರತಿಯೊಬ್ಬರೂ ಥ್ರಿಲ್ ಆಗಿದ್ದಾರೆ.

    ಸುನಿಲ್ ಆಚಾರ್ಯ ನಿರ್ದೇಶನದ ಚೊಚ್ಚಲ ಚಿತ್ರ ರಾಂಧವ. ಬಿಗ್‍ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣರಿಗೂ ನಾಯಕನಾಗಿ ಇದು ಮೊದಲ ಹಾಗೂ ಮಹತ್ತರ ಸಿನಿಮಾ. ಎರಡು ವರ್ಷಗಳಿಗೂ ಹೆಚ್ಚು ಕಾಲದ ನಿರಂತರ ಶ್ರಮ, ಶ್ರದ್ಧೆಯ ಫಲವಾಗಿ ಈ ಚಿತ್ರವೀಗ ಗೆಲುವಿನ ಸ್ಪಷ್ಟ ಸೂಚನೆಯೊಂದಿಗೆ ಥೇಟರಿನ ಹಾದಿಯಲ್ಲಿದೆ. ಈವರೆಗೂ ರಾಂಧವನ ಟೀಸರ್, ಟ್ರೇಲರ್‍ಗಳು ಬಂದಿವೆ. ಆದರೆ ಅದರಲ್ಲಿ ಕಥೆಯ ಬಗ್ಗೆ ಯಾವ ಸುಳಿವನ್ನೂ ಕೂಡಾ ಬಿಟ್ಟುಕೊಟ್ಟಿರಲಿಲ್ಲ. ಆದರೆ ಈಗ ಬಿಡುಗಡೆಯಾಗಿರೋ ಟ್ರೇಲರ್‍ನಲ್ಲಿ ಕಥೆಯ ಬಗ್ಗೆ ಒಂದು ಅಂದಾಜು ಮೂಡಿಕೊಳ್ಳುತ್ತದೆ. ಆದರೆ ಕಥೆ ಸಾಗೋ ಪಥ ಮಾತ್ರ ನಿಗೂಢ. ಇದುವೇ ಈ ಟ್ರೇಲರ್‍ನ ಶಕ್ತಿ ಎನ್ನಲಡ್ಡಿಯಿಲ್ಲ.

    ಈ ಟ್ರೇಲರ್ ನಲ್ಲಿಯೇ ಭುವನ್ ಪೊನ್ನಣ್ಣರ ಅಭಿನಯದ ಝಲಕ್‍ಗಳೂ ಅನಾವರಣಗೊಂಡಿವೆ. ಪಕ್ಷಿತಜ್ಞ ರಾಬರ್ಟ್ ಗೂಬೆಯೊಂದರ ಬೆಂಬಿದ್ದು ಒಡೆಯನ ಸಮುದ್ರ ಸಂಸ್ಥಾನಕ್ಕೆ ಹೋದಾಗ ಅಲ್ಲೆದುರಾಗೋ ವಿಚಿತ್ರ ಜಗತ್ತು, ಆತನನ್ನು ಕಾಡೋ ಜನ್ಮಾಂತರಗಳ ಪ್ರಶ್ನೆಗಳೊಂದಿಗೆ ಒಂದಷ್ಟು ಪಾತ್ರಗಳನ್ನೂ ಕೂಡಾ ಈ ಟ್ರೇಲರ್ ಕಾಣಿಸಿದೆ. ಈ ಮೂಲಕ ಮತ್ತಷ್ಟು ಪ್ರೇಕ್ಷರನ್ನೂ ರಾಂಧವ ತಲುಪಿಕೊಂಡಿದ್ದಾನೆ. ಈ ಟ್ರೇಲರ್‍ನೊಂದಿಗೆ ಈ ಚಿತ್ರ ಭರ್ಜರಿಯಾಗಿಯೇ ಪ್ರೇಕ್ಷಕರತ್ತ ದಾಪುಗಾಲಿಟ್ಟಿದೆ. ಇದನ್ನು ಕಂಡ ಎಲ್ಲರೊಳಗೂ ಬೇಗನೆ ಈ ಸಿನಿಮಾ ನೋಡಬೇಕೆಂಬ ಬಯಕೆ ಹುಟ್ಟುವಂತಿದೆ. ಅದು ರಾಂಧವನ ಗೆಲುವಿನ ಲಕ್ಷಣವಾಗಿಯೂ ಕಾಣಿಸುತ್ತಿದೆ.

  • ಆಡಿಯೋ ಲಾಂಚ್ ಮೂಲಕ ಐತಿಹಾಸಿ ಹೆಜ್ಜೆಯಿಟ್ಟ ರಾಂಧವ!

    ಆಡಿಯೋ ಲಾಂಚ್ ಮೂಲಕ ಐತಿಹಾಸಿ ಹೆಜ್ಜೆಯಿಟ್ಟ ರಾಂಧವ!

    ಬೆಂಗಳೂರು: ಸುನೀಲ್ ಆಚಾರ್ಯ ನಿರ್ದೇಶನದ ರಾಂಧವ ಚಿತ್ರ ಇದೇ ಆಗಸ್ಟ್ ಹದಿನೈದರಂದು ಬಿಡುಗಡೆಯಾಗಲು ರೆಡಿಯಾಗಿದೆ. ಭುವನ್ ಪೊನ್ನಣ್ಣ ನಾನಾ ಗೆಟಪ್ಪುಗಳಲ್ಲಿ ಕಾಣಿಸಿಕೊಂಡಿರೋ ರೀತಿ, ಕಥೆಯ ಬಗ್ಗೆ ಚಿತ್ರತಂಡ ಜಾಹೀರು ಮಾಡಿರೋ ಒಂದಷ್ಟು ಸುಳಿವುಗಳ ಮೂಲಕವೇ ರಾಂಧವ ಬಹುನಿರೀಕ್ಷಿತ ಚಿತ್ರವಾಗಿ ದಾಖಲಾಗಿದೆ. ಇನ್ನೇನು ಬಿಡುಗಡೆಗೆ ಒಂದಷ್ಟು ದಿನಗಳು ಬಾಕಿಯಿರುವಾಗಲೇ ರಾಂಧವನ ಆಡಿಯೋ ಲಾಂಚ್ ಮಾಡಲಾಗಿದೆ. ಈ ಕಾರ್ಯಕ್ರಮದ ಮೂಲಕವೇ ಚಿತ್ರತಂಡ ಐತಿಹಾಸಿಕ ಹೆಜ್ಜೆಯೊಂದರ ಮೂಲಕ ಗಮನ ಸೆಳೆದಿದೆ.

    ಸಿನಿಮಾಗಳ ಯಾವುದೇ ಸಮಾರಂಭವಿದ್ದರೂ ಅಲ್ಲಿ ತಾರೆಯರದ್ದೇ ಕಾರುಬಾರು. ಆಡಿಯೋ ಬಿಡುಗಡೆಯಂಥಾದ್ದಕ್ಕೂ ಸ್ಟಾರ್‍ಗಳನ್ನು ಮಾತ್ರವೇ ಕರೆಸುವಂಥಾ ಪರಿಪಾಠವೂ ಬೆಳೆದು ಬಂದಿದೆ. ಆದರೆ ರಾಂಧವ ತಂಡ ಆಡಿಯೋ ಬಿಡುಗಡೆ ಮಾಡಿಸಿರೋದು ಈ ನಾಡಿನ ಅನ್ನದಾತರಾದ ರೈತರು ಮತ್ತು ದೇಶ ಕಾಯಲು ಬದುಕನ್ನೇ ಮುಡಿಪಾಗಿಟ್ಟಿರುವ ಯೋಧರಿಂದ. ಈ ಮೂಲಕ ರಾಂಧವ ಚಿತ್ರತಂಡ ಹೊಸ ಪರಂಪರೆಗೆ ನಾಂದಿ ಹಾಡಿದೆ.

    ಹೀಗೆ ಹೊಸ ರೀತಿಯಲ್ಲಿ, ರೈತರು ಮತ್ತು ಯೋಧರು ಬಿಡುಗಡೆಗೊಳಿಸಿರೋ ರಾಂಧವ ಚಿತ್ರದ ಹಾಡುಗಳಿಗೆ ಪ್ರೇಕ್ಷಕರ ಕಡೆಯಿಂದ ಉತ್ತಮ ಪ್ರತಿಕ್ರಿಯೆಗಳೇ ಬರುತ್ತಿವೆ. ಈವರೆಗೂ ಗಾಯಕರಾಗಿದ್ದ ಶಶಾಂಕ್ ಶೇಷಗಿರಿ ತಮ್ಮ ಗೆಳೆಯ ಸುನೀಲ್ ಆಚಾರ್ಯ ನಿರ್ದೇಶನ ಮಾಡಿರೋ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗಿಯೂ ಬಡ್ತಿ ಹೊಂದಿದ್ದಾರೆ. ಈ ಮೊದಲ ಹೆಜ್ಜೆಯಲ್ಲಿಯೇ ತಾಜಾತನದಿಂದ ಕೂಡಿರುವ ಸಂಗೀತದ ಪಟ್ಟುಗಳೊಂದಿಗೆ ಹಾಡುಗಳನ್ನು ಕಟ್ಟಿ ಕೊಡುವ ಮೂಲಕ ಭರವಸೆಯನ್ನೂ ಮೂಡಿಸಿದ್ದಾರೆ. ನಿರ್ದೇಶಕ ಸುನೀಲ್ ಆಚಾರ್ಯರ ಕಥೆಗೆ, ಕಲ್ಪನೆಗೆ ಪೂರಕವಾಗಿ ಮೂಡಿ ಬಂದಿರೋ ಈ ಹಾಡುಗಳು ಸೂಪರ್ ಹಿಟ್ ಆಗುವತ್ತ ಮುನ್ನುಗ್ಗುತ್ತಿವೆ.

  • ಅವಹೇಳನ ಮಾಡಿದ ತಮಿಳನಿಗೆ ಸೆಡ್ಡು ಹೊಡೆದ ರಾಜ ರಾಂಧವ!

    ಅವಹೇಳನ ಮಾಡಿದ ತಮಿಳನಿಗೆ ಸೆಡ್ಡು ಹೊಡೆದ ರಾಜ ರಾಂಧವ!

    ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಭುವನ್ ನಟಿಸಿರೋ ರಾಂಧವ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಎರಡು ತಲೆಮಾರುಗಳ ರೋಚಕ ಕಥೆ ಹೊಂದಿರೋ ಈ ಚಿತ್ರದಲ್ಲಿ ಭುವನ್ ಮಹಾ ಪರಾಕ್ರಮಿ ರಾಜನಾಗಿಯೂ ಅಬ್ಬರಿಸಿದ್ದಾರೆ. ಈಗಾಗಲೇ ಟ್ರೈಲರ್ ಮತ್ತು ಭಿನ್ನಾತಿಭಿನ್ನವಾದ ಪೋಸ್ಟರ್ ಗಳ ಮೂಲಕವೇ ಪ್ರೇಕ್ಷಕರನ್ನೆಲ್ಲ ಆವರಿಸಿಕೊಂಡಿರೋ ಪ್ರೇಕ್ಷಕರಿಗೊಂದು ಸರ್‍ಪ್ರೈಸ್ ನೀಡಲು ರಾಂಧವ ಚಿತ್ರ ತಂಡ ತಯಾರಾಗಿದೆ.

    ನಿರ್ದೇಶಕ ಸುನೀಲ್ ಆಚಾರ್ಯ ನಾಳೆ ಸಂಜೆ ಆರು ಘಂಟೆಗೆ ರಾಂಧವನ ಅಚ್ಚರಿದಾಯಕ ವೀಡಿಯೋ ಒಂದನ್ನು ಪ್ರೇಕ್ಷಕರ ಮುಂದೆ ಅನಾವರಣಗೊಳಿಸಲು ತೀರ್ಮಾನಿಸಿದ್ದಾರೆ. ಕರ್ನಾಟಕವನ್ನು ಮತ್ತು ಕನ್ನಡಿಗರನ್ನು ಬರಡು ಭೂಮಿಗೆ ಹೋಲಿಸಿದ್ದ ತಮಿಳನೊಬ್ಬನಿಗೆ ರಾಜ ರಾಂಧವ ಮಾಡಿದ್ದೇನೆಂಬುದರ ವಿವರ ಆ ವೀಡಿಯೋದಲ್ಲಿ ಜಾಹೀರಾಗಲಿದೆಯಂತೆ. ಕನ್ನಡತನವನ್ನು ಅವಹೇಳನ ಮಾಡಿದ ತಮಿಳನಿಗೆ ರಾಜ ರಾಂಧವ ಮಾಡಿದ್ದೇನೆಂಬ ಕುತೂಹಲ ನಾಳೆ ಸಂಜೆ ಆರು ಘಂಟೆಗೆ ತಣಿಯಲಿದೆ.

    ಈ ವೀಡಿಯೋ ಅಷ್ಟಕ್ಕೆ ಮಾತ್ರವೇ ಸೀಮಿತವಾಗಿಲ್ಲ. ಈ ಮೂಲಕವೇ ರಾಂಧವನಾಗಿ ಭುವನ್ ಅಬ್ಬರಿಸಿರೋ ರೀತಿ ಮತ್ತು ಇಡೀ ಕಥೆಯ ಸ್ಪೆಷಾಲಿಟಿಯೂ ಪ್ರೇಕ್ಷಕರ ಮುಂದೆ ಅನಾವರಣಗೊಳ್ಳಲಿದೆಯಂತೆ. ಅಷ್ಟಕ್ಕೂ ಈ ಚಿತ್ರದ ಹಿಂದೆ ಅಖಂಡ ಎರಡು ವರ್ಷಗಳ ಕಾಲದ ಅಗಾಧ ಪರಿಶ್ರಮವಿದೆ. ಇದಕ್ಕಾಗಿ ನಿರ್ದೇಶಕ ಸುನೀಲ್ ಆಚಾರ್ಯ ಸೇರಿದಂತೆ ಇಡೀ ಚಿತ್ರ ತಂಡ ನಿರಂತರವಾಗಿ ಶ್ರಮ ವಹಿಸಿದೆ.

    ಇನ್ನು ಭುವನ್ ಅವರಂತೂ ಈ ಚಿತ್ರಕ್ಕಾಗಿ ಎರಡು ವರ್ಷಗಳನ್ನೂ ಪಣವಾಗಿಟ್ಟಿದ್ದಾರೆ. ಇದರಲ್ಲಿನ ಪಾತ್ರ ಪಳಗಿದ ನಟರಿಗೂ ಕಷ್ಟವಾಗುವಂಥಾದ್ದು. ಇಲ್ಲಿ ಅವರಿಗೆ ಒಂದಷ್ಟು ಶೇಡಿನ ಪಾತ್ರಗಳಿವೆ. ಅದನ್ನು ಭುವನ್ ಯಾವ ರೀತಿಯಲ್ಲಿ ನಿರ್ವಹಿಸಿದ್ದಾರೆಂಬುದಕ್ಕೆ ನಾಳೆ ಹೊರ ಬರೋ ವೀಡಿಯೋದಲ್ಲಿ ಸಾಕ್ಷಿಗಳು ಸಿಗಲಿವೆ.

    https://www.youtube.com/watch?v=eRpnWE0j_mQ

  • ಎರಡನೇ ಟ್ರೈಲರ್ ಮೂಲಕ ಮೆರೆದ `ರಾಂಧವ’!

    ಎರಡನೇ ಟ್ರೈಲರ್ ಮೂಲಕ ಮೆರೆದ `ರಾಂಧವ’!

    ಬೆಂಗಳೂರು: ಸುನೀಲ್ ಎಸ್ ಆಚಾರ್ಯ ನಿರ್ದೇಶನದ ರಾಂಧವ ಚಿತ್ರ ಎಲ್ಲರ ಗಮನವನ್ನೂ ತನ್ನತ್ತ ಸೆಳೆದುಕೊಂಡಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಟ್ರೈಲರ್ ಮೂಲಕವೇ ಇದು ಪ್ರೇಕ್ಷಕರ ಗಮನದ ಕೇಂದ್ರಕ್ಕೆ ತಲುಪಿಕೊಂಡಿತ್ತು. ಇದೀಗ ಹೊಸ ವರ್ಷದ ಕೊಡುಗೆಯಂತೆ ಎರಡನೇ ಟ್ರೈಲರ್ ಬಿಡುಗಡೆಯಾಗಿದೆ.

    ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಭುವನ್ ನಟನೆಯ ಚಿತ್ರ ರಾಂಧವ. ಇದೀಗ ಎರಡನೇ ಟ್ರೈಲರ್ ಮೂಲಕ ಹೊಸ ವರ್ಷಾರಂಭದಲ್ಲಿಯೇ ರಾಂಧವ ಮೆರೆದಿದ್ದಾನೆ. ಅದರ ಸೊಗಸು ಕಂಡು ಪ್ರೇಕ್ಷಕರು ಕೂಡಾ ಬೆರಗಾಗಿದ್ದಾರೆ. ಈ ಟ್ರೈಲರ್ ಇಡೀ ಚಿತ್ರದ ಬಗ್ಗೆ ಅನೇಕ ಪ್ರಶ್ನೆಗಳನ್ನು ಹುಟ್ಟಿಸುತ್ತಲೇ ಅದನ್ನು ನಿರೀಕ್ಷೆಯಾಗಿ ರೂಪಾಂತರಗೊಳಿಸುವಲ್ಲಿಯೂ ಸಫಲವಾಗಿದೆ.

    ರಾಂಧವ ಮಾಮೂಲಿ ಕಥಾ ಹಂದರದ ಸಿನಿಮಾ ಖಂಡಿತಾ ಅಲ್ಲ ಎಂಬುದನ್ನು ಈ ಹಿಂದೆ ಬಿಡುಗಡೆಯಾಗಿದ್ದ ಟ್ರೈಲರ್ ಸಾಬೀತು ಪಡಿಸಿತ್ತು. ಇದೀಗ ಬಿಡುಗಡೆಯಾಗಿರೋ ಟ್ರೈಲರ್ ಒಟ್ಟಾರೆ ಚಿತ್ರದ ಅದ್ಧೂರಿತನದ ಸುಳಿವನ್ನೂ ತೆರೆದಿಟ್ಟಿದೆ. ಈ ಮೂಲಕ ನಾಯಕ ಭುವನ್ ಬರ್ತ್ ಡೇ ಗಿಫ್ಟ್ ಎಂಬಂತೆ ಬಿಡುಗಡೆಯಾಗಿರೋ ಟ್ರೈಲರ್ ಪ್ರೇಕ್ಷಕರ ಪಾಲಿನ ನ್ಯೂ ಇಯರ್ ಗಿಫ್ಟಾಗಿಯೂ ಮಾರ್ಪಾಡಾಗಿದೆ.

    ಇದು ನಿರ್ದೇಶಕ ಸುನೀಲ್ ಎಸ್ ಆಚಾರ್ಯ ಅವರ ಕನಸಿಗೆ ಸಿಕ್ಕ ಆರಂಭಿಕ ಗೆಲುವು. ಟ್ರೈಲರ್ ಮೂಲಕವೇ ಹುಟ್ಟಿಕೊಂಡಿರೋ ಕ್ರೇಜ್ ನೋಡಿದರೆ ಸಂಭಾವ್ಯ ಗೆಲುವಿನ ಸುಳಿವೂ ನಿಚ್ಚಳವಾಗಿಯೇ ಕಾಣಲಾರಂಭಿಸಿದೆ.

    https://www.youtube.com/watch?v=eRpnWE0j_mQ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv