Tag: Sunil Gavaskar

  • ಲಾಕ್‍ಡೌನ್ ವೇಳೆ ಅನುಷ್ಕಾ ಜೊತೆ ಪ್ರಾಕ್ಟೀಸ್- ಕ್ಯಾಚ್ ಡ್ರಾಪ್ ಕುರಿತು ಗವಾಸ್ಕರ್ ಕಾಮೆಂಟ್

    ಲಾಕ್‍ಡೌನ್ ವೇಳೆ ಅನುಷ್ಕಾ ಜೊತೆ ಪ್ರಾಕ್ಟೀಸ್- ಕ್ಯಾಚ್ ಡ್ರಾಪ್ ಕುರಿತು ಗವಾಸ್ಕರ್ ಕಾಮೆಂಟ್

    – ಕಮೆಂಟರಿ ವೇಳೆ ಅನುಷ್ಕಾ ಬಗ್ಗೆ ವಿವಾದಾತ್ಮಕ ಹೇಳಿಕೆ
    – ಸುನಿಲ್ ಗವಾಸ್ಕರ್ ವಿರುದ್ಧ ಆಕ್ರೋಶ

    ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಎರಡು ಕ್ಯಾಚ್ ಕೈಚೆಲ್ಲಿದ್ದರು. ಈ ಕುರಿತಂತೆ ವಿಶ್ಲೇಷಣೆ ನೀಡಿದ್ದ ಗವಾಸ್ಕರ್ ಅವರ ಕಾಮೆಂಟ್‍ಗಳು ಸದ್ಯ ವಿವಾದಕ್ಕೆ ಕಾರಣವಾಗಿದೆ.

    ಗವಾಸ್ಕರ್ ಕಾಮೆಂಟ್ ವಿರುದ್ಧ ಸಾಮಾಜಿಕ ಜಾಲತಾಣಲದಲ್ಲಿ ಆಕ್ರೋಶ ಹೊರ ಹಾಕಿರುವ ಕ್ರಿಕೆಟ್ ಅಭಿಮಾನಿಗಳು ಸುನಿಲ್ ಗವಾಸ್ಕರ್ ಅವರ ವಿರುದ್ಧ ಕಿರಿಕಾರಿದ್ದಾರೆ. ಅಲ್ಲದೇ ಕಾಮೆಂಟರಿ ಬಾಕ್ಸ್ ನಿಂದ ಅವರನ್ನು ಮನೆಗೆ ವಾಪಸ್ ಕಳುಹಿಸಲು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಚೆನ್ನೈ, ಡೆಲ್ಲಿ ತಂಡಗಳ ಬಲಾಬಲ- ಧೋನಿ ಬ್ಯಾಟಿಂಗ್ ಕ್ರಮಾಂಕ ಬದಲಾಗುತ್ತಾ?

    ಸೆ.24 ರಂದು ದುಬೈನಲ್ಲಿ ಪಂಜಾಬ್ ಮತ್ತು ಆರ್‌ಸಿಬಿ ನಡುವಿನ ಪಂದ್ಯದಲ್ಲಿ ಕೊಹ್ಲಿ ಪ್ರಮುಖ ಕ್ಯಾಚ್‍ಗಳನ್ನು ಕೈಚೆಲ್ಲಿ ಕಳಪೆ ಫೀಲ್ಡಿಂಗ್ ಮಾಡಿದ್ದರು. ನಾಯಕ ಕೆಎಲ್ ರಾಹುಲ್ 83 ರನ್ ಮತ್ತು 89 ರನ್ ಗಳಿಸಿದ್ದ ವೇಳೆ ಕೊಹ್ಲಿ ಕ್ಯಾಚ್ ಡ್ರಾಪ್ ಮಾಡಿದ್ದರು. ಪರಿಣಾಮ ರಾಹುಲ್ 69 ಎಸೆತಗಳಲ್ಲಿ, 14 ಬೌಂಡರಿ, 7 ಸಿಕ್ಸರ್ ಗಳ ನೆರವಿನೊಂದಿಗೆ 132 ರನ್ ಸಿಡಿಸಿದ್ದರು. ಕೊಹ್ಲಿ ಕ್ಯಾಚ್ ಬಿಟ್ಟ ಬಳಿಕ ಕೇವಲ 9 ಎಸೆತಗಳಲ್ಲಿ ರಾಹುಲ್ 42 ರನ್ ಗಳಿಸಿದ್ದರು. ಪರಿಣಾಮ ಪಂದ್ಯದಲ್ಲಿ 207 ರನ್ ಬೃಹತ್ ಮೊತ್ತ ಗಳಿಸಿದ್ದ ಪಂಜಾಬ್ 97 ರನ್ ಗಳ ಭಾರೀ ಅಂತರದಲ್ಲಿ ಗೆಲುವು ಪಡೆದಿತ್ತು. ಇದನ್ನೂ ಓದಿ: ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿಗೆ 12 ಲಕ್ಷ ರೂ. ದಂಡ

    ಇತ್ತ ಬ್ಯಾಟಿಂಗ್‍ನಲ್ಲೂ ಉತ್ತಮ ಪ್ರದರ್ಶನ ನೀಡಲು ವಿಫಲರಾದ ಕೊಹ್ಲಿ ಬಹುಬೇಗ ಪೆವಿಲಿಯನ್ ಸೇರಿದ್ದರು. ಕೊಹ್ಲಿ ಔಟಾಗುತ್ತಿದಂತೆ ಕ್ರಿಕೆಟ್ ವಿಶ್ಲೇಷಣೆ ನೀಡುತ್ತಿದ್ದ ಸುನಿಲ್ ಗವಸ್ಕಾರ್ ಹಾಟ್ ಕಾಮೆಂಟ್ ಮಾಡಿದ್ದರು. ಕೊಹ್ಲಿ ಕಳಪೆ ಪ್ರದರ್ಶನವನ್ನು ಟೀಕಿಸುವ ವೇಳೆ ಅನುಷ್ಕಾ ಶರ್ಮಾರನ್ನು ಎಳೆದು ತಂದ ಗವಾಸ್ಕರ್, ‘Inhone lockdown me to bas Anushka ki gendon ki practice ki hai’ (ಲಾಕ್‌ ಟೈಮ್ ಸಮಯದಲ್ಲಿ ವಿರಾಟ್ ಕೊಹ್ಲಿ ಅನುಷ್ಕಾ ಶರ್ಮಾ ಚೆಂಡುಗಳೊಂದಿಗೆ ಅಭ್ಯಾಸ ಮಾಡಿದ್ದಾರೆ) ಎಂದು ಡಬಲ್ ಮಿನಿಂಗ್ ಬರುವಂತೆ ಕಾಮೆಂಟ್ ಮಾಡಿದ್ದರು. ಸದ್ಯ ಈ ಕಾಮೆಂಟ್‍ಗಳ ವಿರುದ್ಧ ಅಭಿಮಾನಿಗಳು ಕಿಡಿಕಾರಿದ್ದಾರೆ. ಇದನ್ನೂ ಓದಿ: ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಎಡವಿದ್ದೆಲ್ಲಿ?- ಕೊಹ್ಲಿ ಪಡೆಯ ಬಿಗ್ 3 ಮಿಸ್ಟೇಕ್ಸ್

    ಉತ್ತಮ ಗೌರವವನ್ನು ಹೊಂದಿರುವ ಗವಾಸ್ಕರ್ ರಂತಹ ವ್ಯಕ್ತಿ ಇಂತಹ ಕೆಳಮಟ್ಟದ ಕಾಮೆಂಟ್ ಮಾಡುವುದು ಸರಿಯಲ್ಲ. ಅದು ಇಂತಹ ದೊಡ್ಡ ವೇದಿಕೆಯಲ್ಲಿ ಅಂತ ಕಾಮೆಂಟ್ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿ ಅವರನ್ನು ವಾಪಸ್ ಮನೆಗೆ ಕಳುಹಿಸಿದ ಎಂದು ಆಗ್ರಹಿಸಿದ್ದಾರೆ.

    ಟೀಂ ಇಂಡಿಯಾ ನಾಯಕರಾಗಿರುವ ಕೊಹ್ಲಿ ಮದುವೆ ಬಳಿಕ ಕೆಲ ಸಮಯ ಫಾರ್ಮ್ ಸಮಸ್ಯೆ ಎದುರಿಸಿದ್ದರು. ಈ ವೇಳೆಯೂ ಕೂಡ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರ ಹೆಸರನ್ನು ಎಳೆದುತಂದು ಕೆಲವರು ಟೀಕೆ ಮಾಡಿ ಪೋಸ್ಟ್ ಮಾಡಿದ್ದರು. ಈ ಟೀಕೆಗಳಿಗೆ ತಿರುಗೇಟು ನೀಡಿದ್ದ ಕೊಹ್ಲಿ, ಪ್ರತಿ ನಕಾರಾತ್ಮಕ ಅಂಶವನ್ನು ಅನುಷ್ಕಾಗೆ ಸಂಬಂಧ ಕಲ್ಪಿಸುವವರಿಗೆ ನಾಚಿಕೆ ಆಗಬೇಕು. ವಿದ್ಯಾವಂತರು ಎಂದು ಹೇಳಿಕೊಳ್ಳುವ ಅಂತಹ ಜನರ ಬಗ್ಗೆ ನಾಚಿಕೆ ಇಲ್ಲ. ನನ್ನ ಆಟದಲ್ಲಿ ನಾನು ಏನು ಮಾಡುತ್ತೇನೆ ಎಂಬುವುದು ಅನುಷ್ಕಾಗೆ ಸಂಬಂಧಿಸಿಲ್ಲ. ಈ ವಿಚಾರದಲ್ಲಿ ಗೇಲಿ ಮಾಡುವವರಿಗೆ ನಾಚಿಕೆ ಇಲ್ಲ. ಏನೇ ಆದರೂ ಅನುಷ್ಕಾ ನನಗೆ ಪ್ರೇರಣೆ, ಸಕಾರಾತ್ಮಕ ಭಾವನೆಯನ್ನು ನೀಡುತ್ತಾರೆ ಎಂದು ತಿರುಗೇಟು ನೀಡಿದ್ದರು.

  • ಇಂಡೋ-ಪಾಕ್ ಕ್ರಿಕೆಟ್ ಪಂದ್ಯಕ್ಕಾಗಿ ಸ್ನೋಫಾಲ್ ಕಥೆ ಹೇಳಿದ ಅಖ್ತರ್

    ಇಂಡೋ-ಪಾಕ್ ಕ್ರಿಕೆಟ್ ಪಂದ್ಯಕ್ಕಾಗಿ ಸ್ನೋಫಾಲ್ ಕಥೆ ಹೇಳಿದ ಅಖ್ತರ್

    ನವದೆಹಲಿ: ಇಂಡೋ-ಪಾಕ್ ದ್ವಿಪಕ್ಷೀಯ ಕ್ರಿಕೆಟ್ ಪಂದ್ಯಕ್ಕಾಗಿ ಪಾಕಿಸ್ತಾನದ ಶೋಯೆಬ್ ಅಖ್ತರ್ ಸ್ನೋಫಾಲ್ ಕಥೆಯನ್ನು ಹೇಳಿದ್ದಾರೆ.

    ಹೆಮ್ಮಾರಿ ಕೊರೊನಾ ವಿರುದ್ಧದ ಹೋರಾಟಕ್ಕೆ ಹಣ ಸಂಗ್ರಹಿಸಲು ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಭಾರತ-ಪಾಕಿಸ್ತಾನ ಟೆಸ್ಟ್ ಸರಣಿಯನ್ನು ಪ್ರಸ್ತಾಪಿಸಿದಾಗಿನಿಂದಲೂ ವಿವಿಧ ಆಟಗಾರರು ತಮ್ಮದೆಯಾದ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಕ್ರಿಕೆಟಿಗರಲ್ಲಿ ಒಬ್ಬರಾಗಿರುವ ಅಖ್ತರ್, ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸರಣಿಯನ್ನು ನೋಡಲು ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಾರೆ. ಇದರಿಂದ ಕೊರೊನಾ ವಿರುದ್ಧದ ಹೋರಾಟಕ್ಕೆ ಆರ್ಥಿಕ ನೆರವು ಸಿಗಬಹುದು ಎಂದು ಸಲಹೆ ನೀಡಿದ್ದರು.

    ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರು ಅಂತಹ ಯಾವುದೇ ಸರಣಿಯ ಅಗತ್ಯವಿಲ್ಲ ಎಂದು ಅಖ್ತರ್ ಅವರ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ. ವಿಶ್ವಕಪ್ ವಿಜೇತ ಭಾರತ ತಂಡದ ನಾಯಕರಾಗಿದ್ದ ಮಾಜಿ ಕ್ರಿಕೆಟರ್ ಕಪಿಲ್ ದೇವ್ ಅವರು, ಭಾರತಕ್ಕೆ ಹಣದ ಅಗತ್ಯವಿಲ್ಲ. ಅದು ಕ್ರಿಕೆಟಿಗರ ಜೀವನವನ್ನು ಅಪಾಯಕ್ಕೆ ಸಿಲುಕಿಸಬೇಡಿ ಎಂದು ಅಭಿಪ್ರಾಯಪಟ್ಟಿದ್ದರು. ಈ ಬೆನ್ನಲ್ಲೇ ಸುನಿಲ್ ಗವಾಸ್ಕರ್ ಅವರು ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದರು.

    ‘ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸರಣಿಗಳಿಗಿಂತ ಲಾಹೋರ್‌ನಲ್ಲಿ ಹಿಮಪಾತವಾಗುವ ಸಾಧ್ಯತೆಗಳೆ ಹೆಚ್ಚು. ಎರಡೂ ತಂಡಗಳು ವಿಶ್ವಕಪ್ ಮತ್ತು ಐಸಿಸಿ ಪಂದ್ಯಾವಳಿಗಳಲ್ಲಿ ಭೇಟಿಯಾಗುತ್ತಲೇ ಇರುತ್ತವೆ. ಆದರೆ ಉಭಯ ತಂಡಗಳ ನಡುವಿನ ಸರಣಿಯು ಇದೀಗ ಅಸಂಭವವಾಗಿದೆ’ ಎಂದು ಗವಾಸ್ಕರ್ ಹೇಳಿದ್ದರು.

    ಗವಾಸ್ಕರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅಖ್ತರ್, ಕಳೆದ ವರ್ಷ ಲಾಹೋರ್‌ನಿಂದ ಹಿಮಪಾತವಾಗಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಜೊತೆಗೆ, ”ಸರಿ ಬಿಡಿ ಸನ್ನಿ ಭಾಯ್, ಕಳೆದ ವರ್ಷ ಲಾಹೋರ್‌ನಲ್ಲಿ ಹಿಮಪಾತವಾಯಿತು. ಆದ್ದರಿಂದ ಅಸಾಧ್ಯ ಎನ್ನುವುದು ಯಾವುದು ಇಲ್ಲ” ಎಂದು ಬರೆದುಕೊಂಡಿದ್ದಾರೆ.

    ಈ ಮೊದಲು, ಕಪಿಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅಖ್ತರ್, ”ನಾನು ಹೇಳಲು ಪ್ರಯತ್ನಿಸುತ್ತಿರುವುದನ್ನು ಕಪಿಲ್ ಭಾಯ್ ಅರ್ಥಮಾಡಿಲ್ಲ ಎಂದು ಭಾವಿಸಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲರೂ ಆರ್ಥಿಕವಾಗಿ ಸಿಕ್ಕಿಹಾಕಿಕೊಳ್ಳಲಿದ್ದಾರೆ. ಇದು ನಮ್ಮ ತಲೆಯನ್ನು ಒಟ್ಟುಗೂಡಿಸಿ ಆದಾಯವನ್ನು ಗಳಿಸುವ ಸಮಯ. ಜಾಗತಿಕ ಪ್ರೇಕ್ಷಕರು ಒಂದು ಪಂದ್ಯದಿಂದ ಸೇರುತ್ತಾರೆ. ಕಪಿಲ್ ದೇವ್ ಅವರಿಗೆ ಹಣದ ಅಗತ್ಯವಿಲ್ಲ. ಆದರೆ ಉಳಿದವರೆಲ್ಲರ ಅಭಿಪ್ರಾಯ ಭಿನ್ನವಾಗಿರುತ್ತದೆ. ನನ್ನ ಸಲಹೆಯು ಶೀಘ್ರದಲ್ಲೇ ಪರಿಗಣನೆಗೆ ಬರಲಿದೆ ಎಂಬ ಭರವಸೆ ಇದೆ” ಎಂದು ಹೇಳಿದ್ದರು.

    ಇತ್ತ ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯನ್ನು ‘ವಿಶ್ವಾಸಾರ್ಹವಲ್ಲದ ಮಂಡಳಿ’ ಎಂದು ಕರೆದ ಪಿಸಿಬಿ ಅಧ್ಯಕ್ಷ ಈಶನ್ ಮಣಿ, ಪಾಕಿಸ್ತಾನ ಕ್ರಿಕೆಟ್‍ಗೆ ಬದುಕಲು ಭಾರತೀಯ ಕ್ರಿಕೆಟ್ ಅಗತ್ಯವಿಲ್ಲ ಎಂದು ಹೇಳಿದ್ದರು. ”ನಾವು ನಷ್ಟವನ್ನು ಅನುಭವಿಸಿದ್ದೇವೆ. ಆದರೆ ಭಾರತ ನಮ್ಮ ಆಲೋಚನೆ ಅಥವಾ ಯೋಜನೆಯಲ್ಲಿಲ್ಲ. ನಾವು ಭಾರತದ ಕ್ರಿಕೆಟ್ ತಂಡವಿಲ್ಲದೆ ಬದುಕಬೇಕು. ಹೀಗಾಗಿ ನಮಗೆ ಅವರ ಅಗತ್ಯವಿಲ್ಲ” ಎಂದು ತಿಳಿಸಿದ್ದರು.

    ದಂಡ ತೆತ್ತಿದ್ದ ಪಿಸಿಬಿ:
    ಪಾಕಿಸ್ತಾನ ಕ್ರಿಕೆಟ್ ನಿಯಂತ್ರಣ ಮಂಡಳಿ ಐಸಿಸಿಯಲ್ಲಿ ಬಿಸಿಸಿಐ ವಿರುದ್ಧ ದೂರಿನ ಪ್ರಕರಣದಲ್ಲಿ ಸೋಲುಂಡಿದ್ದು, ಪರಿಣಾಮ 1.6 ಮಿಲಿಯನ್ ಡಾಲರ್ (ಸುಮಾರು 11 ಕೋಟಿ ರೂ.) ದಂಡವನ್ನು ಬಿಸಿಸಿಐಗೆ ಪಾವತಿಸಿತ್ತು.

    ಈ ಕುರಿತು 2019ರ ಮಾರ್ಚ್ ನಲ್ಲಿ ಈಶನ್ ಮಣಿ ಪ್ರತಿಕ್ರಿಯಿಸಿ 2.2 ಮಿಲಿಯನ್ ಡಾಲರ್ ಹಣವನ್ನು ಪರಿಹಾರವಾಗಿ ಪಾವತಿ ಮಾಡಿದಿದ್ದೇವೆ ಎಂದು ತಿಳಿಸಿದ್ದರು.

    ಪಾಕಿಸ್ತಾನದೊಂದಿಗೆ ದ್ವಿಪಕ್ಷಿಯ ಒಪ್ಪಂದ ಕ್ರಿಕೆಟ್ ಪಂದ್ಯಗಳನ್ನು ಭಾರತ ಆಯೋಜಿಸದ ಕಾರಣ ತನಗೆ ನಷ್ಟವಾಗಿದೆ ಎಂದು ಕಳೆದ ವರ್ಷ ಪಿಸಿಬಿ ದೂರು ದಾಖಲಿಸಿತ್ತು. ಸುಮಾರು 480 ಕೋಟಿ ರೂ. ಪರಿಹಾರವಾಗಿ ಬಿಸಿಸಿಐನಿಂದ ಕೊಡಿಸುವಂತೆ ಪಾಕಿಸ್ತಾನ ಐಸಿಸಿಗೆ ನೀಡಿದ ದೂರಿನಲ್ಲಿ ತಿಳಿಸಿತ್ತು.

    2014 ರಲ್ಲಿ ಬಿಸಿಸಿಐ ಪಾಕ್ ನೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಆಡಲು ಒಪ್ಪಂದಕ್ಕೆ ಸಹಿ ಮಾಡಿತ್ತು. ಇದರಂತೆ ಭಾರತ 2014 ಹಾಗೂ 2015 ಅವಧಿಯಲ್ಲಿ ದ್ವಿಪಕ್ಷೀಯ ಸರಣಿಯಲ್ಲಿ ಭಾಗವಹಿಸಬೇಕಾಗಿತ್ತು. ಆದರೆ ಬಿಸಿಸಿಐಗೆ ಭಾರತ ಸರ್ಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಪಾಕ್ ಪ್ರವಾಸವನ್ನು ಕೈಗೊಂಡಿರಲಿಲ್ಲ. ಪಾಕಿಸ್ತಾನದ ಮನವಿಯನ್ನು ತಿರಸ್ಕರಿಸಿದ ಐಸಿಸಿ ಸಮಿತಿ, ಈ ಪ್ರಕರಣದ ವಿಚಾರಣೆ ನಡೆಸಿದ ಐಸಿಸಿ ಬಿಸಿಸಿಐಗೆ ಕಾನೂನು ವೆಚ್ಚವಾಗಿ ಸುಮಾರು 11 ಕೋಟಿಗಳನ್ನು ಪಾವತಿಸುವಂತೆ ಆದೇಶಿಸಿತ್ತು.

    2009ರಲ್ಲಿ ಏನಾಗಿತ್ತು?
    ಸುಮಾರು 12 ಮಂದಿಯ ಭಯೋತ್ಪಾದಕರ ತಂಡ ಶ್ರೀಲಂಕಾ ಕ್ರಿಕೆಟಿಗರು ಹಾಗೂ ಅಂಪೈರ್ ಗಳ ಮೇಲೆ ಲಹೋರಿನ ಗಢಾಪಿ ಕ್ರೀಡಾಂಗಣದ ಬಳಿ ಗುಂಡಿನ ದಾಳಿ ನಡೆಸಿತ್ತು. ಪರಿಣಾಮ ಘಟನೆಯಲ್ಲಿ 8 ಪೊಲೀಸರು ಸಾವನ್ನಪ್ಪಿದ್ದರೆ, 6 ಮಂದಿ ಗಾಯಗೊಂಡಿದ್ದರು. ಈ ವೇಳೆ ಶ್ರೀಲಂಕಾ ತಂಡಕ್ಕೆ ಇಂಗ್ಲೆಂಡ್‍ನ ಬೇಲಿಸ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಉಗ್ರರು ಸಿಡಿಸಿದ್ದ ಗುಂಡು ಬಸ್ ಗ್ಲಾಸ್ ಸೀಳಿತ್ತು. ಪರಿಣಾಮ ಗಾಜಿನ ಚುರು ತಂಡದ ಸಹಾಯಕನಾಗಿದ್ದ ಫಾಬ್ರ್ರಾಸ್ ಎಂಬವರ ಭುಜಕ್ಕೆ ಹೊಕ್ಕಿತ್ತು. ಇಂದಿಗೂ ಘಟನೆಯನ್ನು ನೆನೆದರೆ ಫಾಬ್ರ್ರಾಸ್ ಬೆಚ್ಚಿ ಬೀಳುತ್ತಾರೆ.

    2015ರಲ್ಲಿ ಜಿಂಬಾಬ್ವೆ ಕ್ರಿಕೆಟ್ ಮಂಡಳಿ ಮೊಂಡು ಧೈರ್ಯ ಮಾಡಿ ಲಾಹೋರಿನಲ್ಲಿ ಕ್ರಿಕೆಟ್ ಆಡಲು ಮುಂದಾಗಿತ್ತು, ಆದರೆ ಅಂದು ಕೂಡ ಪಂದ್ಯ ನಡೆಯುವ ವೇಳೆ ಸ್ಟೇಡಿಯಂ ಹೊರ ಭಾಗದಲ್ಲಿ ಉಗ್ರ ಮಾನವ ಬಾಂಬ್ ಸ್ಫೋಟಿಸಿ ಓರ್ವ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಬಲಿ ಪಡೆದಿದ್ದ. ಈ ಘಟನೆ ಮತ್ತೆ ಪಾಕ್ ಕ್ರಿಕೆಟ್ ಆಡಲು ಆಸುರಕ್ಷಿತ ಎಂಬುವುದು ಖಚಿತವಾಯ್ತು. ಪರಿಣಾಮ ಐಸಿಸಿ ಕ್ರಿಕೆಟ್ ಟೂರ್ನಿಗಳನ್ನು ಏರ್ಪಡಿಸುವ ಅವಕಾಶವನ್ನು ಪಾಕಿಸ್ತಾದಿಂದ ಕಿತ್ತುಕೊಂಡಿತ್ತು.

  • ತನ್ನ ಪ್ರತಿ ಸೆಂಚುರಿಗೆ ಲಕ್ಷ ರೂ. ಸೇರಿಸಿ ದೇಣಿಗೆ ಕೊಟ್ಟ ಗವಾಸ್ಕರ್

    ತನ್ನ ಪ್ರತಿ ಸೆಂಚುರಿಗೆ ಲಕ್ಷ ರೂ. ಸೇರಿಸಿ ದೇಣಿಗೆ ಕೊಟ್ಟ ಗವಾಸ್ಕರ್

    ಮುಂಬೈ: ಟೀಂ ಇಂಡಿಯಾ ದಿಗ್ಗಜ ಆಟಗಾರ ಸುನಿಲ್ ಗವಾಸ್ಕರ್ ದೇಶದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ 59 ಲಕ್ಷ ರೂ.ಗಳನ್ನು ದೇಣಿಗೆಯಾಗಿ ನೀಡಿದ್ದಾರೆ.

    ಭಾರತದ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್, ಸುರೇಶ್ ರೈನಾ, ಎಂ.ಎಸ್.ಧೋನಿ ಸೇರಿದಂತೆ ಅನೇಕ ಕ್ರಿಕೆಟಿಗರು, ಸ್ಟಾರ್ ಸಿನಿಮಾ ನಟರು ರೌಂಡ್ ಫಿಗರ್ ಮೊತ್ತವನ್ನು ಪಿಎಂ-ಕೇರ್ಸ್ ಫಂಡ್‍ಗೆ ದೇಣಿಗೆ ನೀಡಿದ್ದಾರೆ. ಆದರೆ ಸುನಿಲ್ ಗವಾಸ್ಕರ್ ಅವರು ಮಾತ್ರ ಏಕೆ 59 ಲಕ್ಷ ರೂ.ಗಳನ್ನ ನೀಡಿದ್ದರು ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ಗವಾಸ್ಕರ್ ಏಕೆ 59 ಲಕ್ಷ ರೂ.ಗಳನ್ನು ನೀಡಿದ್ದಾರೆ ಎಂದು ಅವರ ಪುತ್ರ ರೋಹನ್ ಗವಾಸ್ಕರ್ ರಿವೀಲ್ ಮಾಡಿದ್ದಾರೆ.

    ಸುನಿಲ್ ಗವಾಸ್ಕರ್ ನೀಡಿರುವ 59 ಲಕ್ಷ ರೂ. ದೇಣಿಗೆಯಲ್ಲಿ 35 ಲಕ್ಷ ರೂ.ಗಳನ್ನು ಮಹಾರಾಷ್ಟ್ರ ಸಿಎಂ ಪರಿಹಾರ ನಿಧಿಗೆ ಹಾಗೂ ಉಳಿದ 24 ಲಕ್ಷ ರೂ.ಗಳನ್ನು ಪ್ರಧಾನಿಗಳ ನಿಧಿಗೆ ನೀಡಿದ್ದಾರೆ. ಈ ದೇಣಿಗೆ ಹಿಂದಿರುವ ಕಥೆಯನ್ನು ರಿವೀಲ್ ಮಾಡಿರುವ ರೋಹನ್ ಅವರು, ಭಾರತದ ಪರ 1971ರಿಂದ 1987ರವರೆಗೂ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ಆಡಿದ್ದ ಗವಾಸ್ಕರ್ 35 ಶತಕ ಸಿಡಿಸಿದ್ದರು. ಅಲ್ಲದೇ ಮುಂಬೈ ಪರ ಆಡಿದ್ದ ಪಂದ್ಯಗಳಲ್ಲಿ 24 ಶತಕಗಳನ್ನು ಗವಾಸ್ಕರ್ ಸಿಡಿಸಿದ್ದರು. ಪರಿಣಾಮ ಈ ಶತಕಗಳ ಅನ್ವಯ ಗವಾಸ್ಕರ್ ದೇಣಿಗೆ ನೀಡಿದ್ದಾರೆ ಎಂದು ವಿವರಿಸಿದ್ದಾರೆ.

    ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಜೋಡಿ 3 ಕೋಟಿ ರೂ., ರೋಹಿತ್ ಶರ್ಮಾ 80 ಲಕ್ಷ ರೂ., ರೈನಾ 52 ಲಕ್ಷ ರೂ. ಸಚಿನ್ 50 ಲಕ್ಷ ರೂ., ರಹಾನೆ 10 ಲಕ್ಷ ರೂ.ಗಳನ್ನು ದೇಣಿಗೆ ನೀಡಿದ್ದಾರೆ. ಇತ್ತ ಚೇತೇಶ್ವರ ಪೂಜಾರ ಕೂಡ ದೇಣಿಗೆ ನೀಡಿದ್ದು, ಆದರೆ ಎಷ್ಟು ಮೊತ್ತವನ್ನು ನೀಡಿದ್ದಾರೆ ಎಂದು ಮಾತ್ರ ತಿಳಿಸಿಲ್ಲ.

    ಭಾರತದ ಪರ 124 ಟೆಸ್ಟ್ ಪಂದ್ಯಗಳನ್ನು ಆಡಿರುವ ಗವಾಸ್ಕರ್ 34 ಶತಕ ಸಿಡಿಸಿದ್ದಾರೆ. ಈ ವೇಳೆಗೆ ಟೆಸ್ಟ್ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ದಾಖಲೆಯನ್ನು ಗವಾಸ್ಕರ್ ನಿರ್ಮಿಸಿದ್ದರು. ಬರೋಬ್ಬರಿ 29 ವರ್ಷಗಳ ಬಳಿಕ ಸಚಿನ್ 2005 ರಲ್ಲಿ ಈ ದಾಖಲೆಯನ್ನು ಬ್ರೇಕ್ ಮಾಡಿದ್ದರು. ಉಳಿದಂತೆ ಗವಾಸ್ಕರ್ ಆಡಿರುವ 108 ಏಕದಿನ ಪಂದ್ಯಗಳಲ್ಲಿ 1 ಶತಕ ಗಳಿಸಿದ್ದಾರೆ.

  • ‘ಧೋನಿ’ಯನ್ನ ಬಿಟ್ಟು ಟೀಂ ಇಂಡಿಯಾ ಮುಂದೆ ಸಾಗಿದೆ: ಗವಾಸ್ಕರ್

    ‘ಧೋನಿ’ಯನ್ನ ಬಿಟ್ಟು ಟೀಂ ಇಂಡಿಯಾ ಮುಂದೆ ಸಾಗಿದೆ: ಗವಾಸ್ಕರ್

    ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕಮ್‍ಬ್ಯಾಕ್ ಬಗ್ಗೆ ಕ್ರಿಕೆಟ್ ಅಂಗಳದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಮಾಜಿ ಕ್ರಿಕೆಟರ್ ವಿರೇಂದ್ರ ಸೆಹ್ವಾಗ್ ಬೆನ್ನಲ್ಲೇ ಭಾರತ ಬ್ಯಾಟಿಂಗ್ ದಂತಕಥೆ ಸುನಿಲ್ ಗವಾಸ್ಕರ್ ಅವರು ಕೂಡ ಧೋನಿ ಕಮ್‍ಬ್ಯಾಕ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

    ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‍ನಲ್ಲಿ ಎಂ.ಎಸ್.ಧೋನಿ ಭಾರತದ ತಂಡದಲ್ಲಿ ಇರುವುದನ್ನು ನೋಡಲು ಇಷ್ಟಪಡುತ್ತೇನೆ. ಆದರೆ ತಂಡವು ಮಾಜಿ ನಾಯಕನಿಂದ ಮುಂದೆ ಸಾಗಿದೆ ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

    ಟೀಂ ಇಂಡಿಯಾಗೆ ಆಯ್ಕೆಯಾಗುವ ಹಂತದಿಂದ ಧೋನಿ ದೂರ ಉಳಿದಿದ್ದಾರೆ. ನನ್ನ ಅಭಿಪ್ರಾಯದಲ್ಲಿ ಅವರು ಸದ್ದಿಲ್ಲದೆ ಆಟಕ್ಕೆ ವಿದಾಯ ಹೇಳುವ ಸಾಧ್ಯತೆಯಿದೆ ಎಂದು ಗವಾಸ್ಕರ್ ತಿಳಿಸಿದ್ದಾರೆ.

    ಮಾರ್ಚ್ 29ರಿಂದ ನಡೆಯಬೇಕಿದ್ದ ಐಪಿಎಲ್ ಟೂರ್ನಿಯನ್ನು ಏಪ್ರಿಲ್ 15ರವರೆಗೆ ರದ್ದುಗೊಳಿಸಲಾಗಿದೆ. ಮುಂಬರುವ ವಾರಗಳಲ್ಲಿ ವೈರಸ್ ಭೀತಿ ಕಡಿಮೆಯಾಗಲಿದೆ. ಹೀಗಾಗಿ ಟೂರ್ನಿ ಏಪ್ರಿಲ್ ಬಳಿಕ ನಡೆಯಲಿದ್ದು, ವಿದೇಶಿ ಆಟಗಾರರು ಆಡುತ್ತಾರೋ, ಇಲ್ಲವೋ ಎನ್ನುವುದು ಖಚಿತವಾಗಿಲ್ಲ ಎಂದು ಹೇಳಿದರು.

    ನ್ಯೂಜಿಲೆಂಡ್ ಸರಣಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನ್ಯೂಜಿಲೆಂಡ್ ಪಿಚ್‍ಗಳು ಬ್ಯಾಟಿಂಗ್ ಮಾಡಲು ಸುಲಭವಲ್ಲ. ನಮ್ಮ ಬ್ಯಾಟ್ಸ್‌ಮನ್‌ಗಳು ಕಷ್ಟಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಿವೀಸ್ ಆಟಗಾರರು ಕೂಡ ಬ್ಯಾಟಿಂಗ್ ಮಾಡಲು ಸಾಕಷ್ಟು ತೊಂದರೆಗಳನ್ನು ಎದುರಿಸಿದ್ದರು. ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಉತ್ತಮ ಬ್ಯಾಟ್ಸ್‌ಮನ್‌. ಅವರು ಕೂಡ ಹೆಚ್ಚು ರನ್ ಗಳಿಸುವಲ್ಲಿ ವಿಫಲರಾದರು ಎಂದು ಗವಾಸ್ಕರ್ ಅಭಿಪ್ರಾಯಪಟ್ಟರು.

    ಇದಕ್ಕೂ ಮುನ್ನ ಮಾತನಾಡಿದ್ದ ವಿರೇಂದ್ರ ಸೆಹ್ವಾಗ್, ಕೆ.ಎಲ್.ರಾಹುಲ್ ಹಾಗೂ ರಿಷಬ್ ಪಂತ್ ಅವರು ವಿಕೆಟ್ ಕೀಪರ್ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಕೆ.ಎಲ್.ರಾಹುಲ್ ಕೂಡ ಅತ್ಯುತ್ತಮ ಫಾರ್ಮ್ ನಲ್ಲಿದ್ದಾರೆ. ಅವರನ್ನು ತಂಡದಿಂದ ಹೊರಹಾಕುವುದು ಕಷ್ಟ. ಎಂ.ಎಸ್.ಧೋನಿ 2019ರ ಏಕದಿನ ವಿಶ್ವಕಪ್ ಸೆಮಿಫೈನಲ್ ಸೋಲಿನ ನಂತರ ಯಾವುದೇ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿಲ್ಲ. ಹೀಗಾಗಿ ಅವರು ತಂಡಕ್ಕೆ ಮರಳುವ ಸಾಧ್ಯತೆಗಳಿಲ್ಲ ಎಂದು ತಿಳಿಸಿದ್ದರು.

    ಕಳೆದ ವರ್ಷ ಇಂಗ್ಲೆಂಡ್‍ನಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಸೋಲಿನ ನಂತರ ಧೋನಿ ಸ್ಪರ್ಧಾತ್ಮಕ ಕ್ರಿಕೆಟ್ ಆಡಿಲ್ಲ. ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಟೀಂ ಇಂಡಿಯಾಗೆ ಧೋನಿ ಮರಳುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಐಪಿಎಲ್ 13ನೇ ಆವೃತ್ತಿಯು ಕೊರೊನಾ ವೈರಸ್‍ನಿಂದಾಗಿ ರದ್ದಾಗುವ ಸಾಧ್ಯತೆಗಳಿವೆ. ಹೀಗಾಗಿ ಎರಡು ಮಾದರಿಯ ಕ್ರಿಕೆಟ್‍ನಲ್ಲಿ ವಿಶ್ವಕಪ್ ವಿಜೇತ ನಾಯಕನ ಭವಿಷ್ಯದ ಮೇಲೆ ಕೊರೊನಾ ಕೆಟ್ಟ ಪರಿಣಾಮ ಬೀರುವ ಸಾಧ್ಯತೆಯಿದೆ.

  • ಮಾಜಿ ಕ್ರಿಕೆಟ್ ಆಟಗಾರ ಸುನೀಲ್ ಗವಾಸ್ಕರ್‌ರನ್ನು ಭೇಟಿ ಮಾಡಿದ ರಕ್ಷ್

    ಮಾಜಿ ಕ್ರಿಕೆಟ್ ಆಟಗಾರ ಸುನೀಲ್ ಗವಾಸ್ಕರ್‌ರನ್ನು ಭೇಟಿ ಮಾಡಿದ ರಕ್ಷ್

    ಬೆಂಗಳೂರು: ಕಿರುತೆರೆ ನಟ, ಗಟ್ಟಿಮೇಳ ಖ್ಯಾತಿಯ ವೇದಾಂತ್ ಪಾತ್ರಧಾರಿಯ ರಕ್ಷ್ ಅವರು ಮಾಜಿ ಕ್ರಿಕೆಟ್ ಆಟಗಾರ ಸುನೀಲ್ ಗವಾಸ್ಕರ್ ಅವರನ್ನು ಭೇಟಿ ಮಾಡಿದ್ದಾರೆ.

    ಇತ್ತೀಚೆಗೆ ರಕ್ಷ್, ಸುನೀಲ್ ಗವಾಸ್ಕರ್ ಅವರನ್ನು ಭೇಟಿ ಮಾಡಿದ್ದು, ಅವರ ಜೊತೆ ಕ್ಲಿಕ್ಕಿಸಿಕೊಂಡ ಫೋಟೋವನ್ನು ಇನ್‍ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ, ಈ ಲೆಜೆಂಡ್ ಅನ್ನು ಭೇಟಿ ಆದ ಕ್ಷಣ ಸುಂದರವಾಗಿತ್ತು ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

    ನಿಮ್ಮ ಜೀವನದಲ್ಲಿ ನೀವು ಭೇಟಿಯಾದ ನೂರು ಜನರನ್ನು ಸೂಕ್ಷ್ಮವಾಗಿ ಗಮನಿಸಿದರೆ, ನೀವು ನೂರು ಪುಸ್ತಕಗಳನ್ನು ಓದಿದ್ದೀರಿ ಎಂದು ಅರ್ಥ. ನೀವು ಭೇಟಿಯಾದ ಪ್ರತಿಯೊಬ್ಬ ವ್ಯಕ್ತಿಯೂ ಒಂದು ಪುಸ್ತಕದಂತೆ. ಕೆಲವು ಬೋರಿಂಗ್, ಕೆಲವು ಅದ್ಭುತ, ಕೆಲವು ಶಕ್ತಿಯುತ, ಕೆಲವು ದುರ್ಬಲ. ಆದರೆ ಅವೆಲ್ಲವೂ ಬಹಳ ಉಪಯೋಗವಾಗಿದೆ. ಏಕೆಂದರೆ ಅವೆಲ್ಲವೂ ವಿಭಿನ್ನ ಅನುಭವಗಳನ್ನು ಹೊಂದಿದೆ ಎಂದು ಇನ್‍ಸ್ಟಾದಲ್ಲಿ ಬರೆದುಕೊಂಡಿದ್ದಾರೆ.

    ಕಳೆದ ತಿಂಗಳು ರಕ್ಷ್ ತಮ್ಮ ಹುಟ್ಟುಹಬ್ಬಕ್ಕಾಗಿ ದುಬಾರಿ ಆಡಿ ಎ5 ಸ್ಪೋರ್ಟ್ ಬ್ಯಾಕ್ ಕಾರು ಖರೀದಿಸಿದ್ದರು. ಈ ಬಗ್ಗೆ ಸ್ವತಃ ರಕ್ಷ್ ತಮ್ಮ ಇನ್‍ಸ್ಟಾದಲ್ಲಿ ಹೇಳಿಕೊಂಡಿದ್ದರು. ಈ ಪೋಸ್ಟ್ ನಂತರ ರಕ್ಷ್ ಕ್ರೆಡಿಟ್ಸ್ ಕರುನಾಡ ಜನತೆಯ ಆಶೀರ್ವಾದ ಹಾಗೂ ಪ್ರೀತಿ ಎಂದು ಬರೆದಿದ್ದರು. ರಕ್ಷ್ ಅವರ ಪೋಸ್ಟ್‌ಗೆ ಅಭಿಮಾನಿಗಳು ಕಮೆಂಟ್ ಮಾಡುವ ಮೂಲಕ ಶುಭ ಕೋರಿದ್ದರು.

    ನಟ ರಕ್ಷ್ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ `ಪುಟ್ಟಗೌರಿ ಮದುವೆ’ ಧಾರಾವಾಹಿಯಲ್ಲಿ ಮಹೇಶ್ ಪಾತ್ರ ಮಾಡಿದ್ದು, ಪ್ರೇಕ್ಷಕರ ಮನ ಗೆದ್ದಿದ್ದರು. ಧಾರಾವಾಹಿ ಮುಗಿದ ಕೆಲವು ದಿನಗಳ ನಂತರ ರಕ್ಷಿತ್ ಎಂಬ ಹೆಸರನ್ನು ರಕ್ಷ್ ಎಂದು ಬದಲಾಯಿಸಿಕೊಂಡಿದ್ದರು. ಸದ್ಯ ರಕ್ಷ್ ಇದೀಗ `ಗಟ್ಟಿಮೇಳ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

  • ಗಂಗೂಲಿ ಹೊಗಳಿದ ಕೊಹ್ಲಿ ವಿರುದ್ಧ ಕಿಡಿಕಾರಿದ ಗವಾಸ್ಕರ್

    ಗಂಗೂಲಿ ಹೊಗಳಿದ ಕೊಹ್ಲಿ ವಿರುದ್ಧ ಕಿಡಿಕಾರಿದ ಗವಾಸ್ಕರ್

    ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರನ್ನು ಹೊಗಳಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅಸಮಾಧಾನ ಹೊರಹಾಕಿದ್ದಾರೆ.

    ಈಡನ್ ಗಾರ್ಡನ್ಸ್ ಮೈದಾನದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಮೊದಲ ಐತಿಹಾಸಿಕ ಹಗಲು-ರಾತ್ರಿ ಟೆಸ್ಟ್ ಪಂದ್ಯವನ್ನು ಭಾರತ ಗೆದ್ದು ಇತಿಹಾಸ ನಿರ್ಮಿಸಿದೆ. ಭಾರತದ ಮೊದಲ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ಒಂದು ಇನ್ನಿಂಗ್ಸ್ ಮತ್ತು 46 ರನ್ ಗಳಿಂದ ಗೆಲ್ಲುವ ಮೂಲಕ ಬಾಂಗ್ಲಾದೇಶದ ವಿರುದ್ಧದ 2 ಪಂದ್ಯಗಳ ಸರಣಿಯನ್ನು ಭಾರತ ಕ್ಲೀನ್‍ಸ್ವೀಪ್ ಮಾಡಿಕೊಂಡಿದೆ. ಈ ಪಂದ್ಯದ ಗೆಲುವಿನ ನಂತರ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರನ್ನು ಹೊಗಳಿದ ಕೊಹ್ಲಿ ವಿರುದ್ಧ ಮಾಜಿ ಆಟಗಾರ ಸುನಿಲ್ ಗವಾಸ್ಕರ್ ಕಿಡಿಕಾರಿದ್ದಾರೆ.

    ಕೋಲ್ಕತ್ತಾದಲ್ಲಿ ಸರಣಿ ಗೆಲುವಿನ ನಂತರ ಮಾತನಾಡಿದ ವಿರಾಟ್ ಕೊಹ್ಲಿ, ಭಾರತದಲ್ಲಿ ಗೆಲುವಿನ ಸಂಸ್ಕೃತಿ ಹುಟ್ಟಿಹಾಕಿದ್ದಕ್ಕೆ ಧನ್ಯವಾದಗಳು. ಭಾರತ ತಂಡದ ಗೆಲುವು ಆರಂಭವಾಗಿದ್ದು, ದಾದಾ ಕಟ್ಟಿದ ಟೀಂನಿಂದ. ಅಂದು ಅವರು ಆರಂಭ ಮಾಡಿದ್ದನ್ನು ನಾವು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ ಎಂದು ಹೇಳಿ ಸೌರವ್ ಗಂಗೂಲಿ ಅವರನ್ನು ಪ್ರಶಂಸಿಸಿದ್ದರು.

    ಕೊಹ್ಲಿ ಅವರ ಈ ಹೇಳಿಕೆಗೆ ಕೆಂಡಾಮಂಡಲವಾಗಿರುವ ಮಾಜಿ ಆಟಗಾರ ಸುನಿಲ್ ಗವಾಸ್ಕಾರ್, ಮೊದಲ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದ್ದು ಬಹಳ ಸಂತೋಷವಾಗಿದೆ. ಆದರೆ ವಿರಾಟ್ ಕೊಹ್ಲಿ ಅವರು ಭಾರತ, 1970 ಮತ್ತು 1980 ರ ಸಮಯದಲ್ಲಿಯೂ ಗೆಲುವು ಸಾಧಿಸಿತ್ತು ಎಂಬುದನ್ನು ಮರೆತಿದ್ದಾರೆ. ಆ ಸಮಯದಲ್ಲಿ ಕೊಹ್ಲಿ ಹುಟ್ಟಿರಲಿಲ್ಲ ಎಂದು ಕಿಡಿಕಾರಿದ್ದಾರೆ.

    ಭಾರತದ ತಂಡದ ಗೆಲುವಿನ ಪಯಣ ಶುರುವಾಗಿದ್ದು ದಾದಾ ತಂಡದಿಂದ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. ಈಗ ಗಂಗೂಲಿ ಅಧ್ಯಕ್ಷ ಎಂಬುದು ಎಲ್ಲರಿಗೂ ಗೊತ್ತು. ಈ ಕಾರಣಕ್ಕೆ ಕೊಹ್ಲಿ ಈ ಹೇಳಿಕೆಯನ್ನು ನೀಡಿರಬಹುದು. ಆದರೆ ಭಾರತ ಈ ಹಿಂದೆಯೂ ಕೂಡ ವಿಶ್ವಕಪ್ ಗೆದ್ದಿತ್ತು. ಹೊರ ದೇಶಗಳಿಗೆ ಹೋಗಿ ಅಲ್ಲಿ ಪಂದ್ಯಗಳನ್ನು ಗೆದ್ದು ಬಂದಿತ್ತು ಎಂಬುದನ್ನು ಕೊಹ್ಲಿ ಮರೆಯಬಾರದು ಎಂದು ಗವಾಸ್ಕಾರ್ ಹೇಳಿದ್ದಾರೆ.

    ಕೆಲವರು ಭಾರತದ ತಂಡದ ಕ್ರಿಕೆಟ್ ಆರಂಭವಾಗಿದ್ದು 2000 ವರ್ಷದಿಂದ ಎಂಬಂತೆ ಮಾತನಾಡುತ್ತಾರೆ. ನಮ್ಮ ತಂಡ ಅದಕ್ಕೂ ಮುನ್ನ ವಿಶ್ವಕಪ್ ಗೆದ್ದಿತ್ತು. ಭಾರತ 70 ರ ದಶಕದಲ್ಲಿಯೇ ವಿದೇಶಕ್ಕೆ ಹೋಗಿ ಟೂರ್ನಿಯನ್ನು ಆಡಿ ಬಂದಿತ್ತು. ಅಲ್ಲಿ ಸರಣಿಯನ್ನು ಗೆದ್ದು ತಂದಿತ್ತು. ಬಲಿಷ್ಠ ವೆಸ್ಟ್ ಇಂಡೀಸ್ ವಿರುದ್ಧ 1983 ರ ವಿಶ್ವಕಪ್ ಗೆದ್ದಿತ್ತು ಎಂದು ನೆನಪಿಸಿ ಅಸಮಾಧಾನ ಹೊರಹಾಕಿದ್ದಾರೆ.

  • ಹೊರತಳ್ಳುವ ಬದಲು ಧೋನಿಯೇ ನಿವೃತ್ತಿ ಘೋಷಿಸುವುದು ಉತ್ತಮ: ಗವಾಸ್ಕರ್

    ಹೊರತಳ್ಳುವ ಬದಲು ಧೋನಿಯೇ ನಿವೃತ್ತಿ ಘೋಷಿಸುವುದು ಉತ್ತಮ: ಗವಾಸ್ಕರ್

    ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಅವರು ಸಿಮೀತ ಓವರ್ ಗಳ ಕ್ರಿಕೆಟ್‍ಗೆ ನಿವೃತ್ತಿ ಹೇಳುವ ಸಮಯ ಹತ್ತಿರ ಬಂದಿದೆ ಎಂದು ಮಾಜಿ ದಿಗ್ಗಜ ಆಟಗಾರ ಸುನಿಲ್ ಗವಾಸ್ಕರ್ ಹೇಳಿದ್ದಾರೆ.

    ಟೀಂ ಇಂಡಿಯಾದಲ್ಲಿ ಎಂಎಸ್ ಧೋನಿ ಅವರ ಸ್ಥಾನದ ಕುರಿತು ಚರ್ಚೆ ನಡೆಯುತ್ತಿರುವ ವೇಳೆಯೇ ಗವಾಸ್ಕರ್ ಧೋನಿ ಕುರಿತು ಹೇಳಿಕೆ ನೀಡಿದ್ದಾರೆ. 2019ರ ವಿಶ್ವಕಪ್ ಸೆಮಿಫೈನಲ್ ಬಳಿಕ ಧೋನಿ ಯಾವುದೇ ಪಂದ್ಯ ಆಡಿಲ್ಲ. ವೆಸ್ಟ್ ಇಂಡೀಸ್ ಟೂರ್ನಿಗೆ ಸ್ವತಃ ಅಲಭ್ಯರಾಗಿದ್ದ ಧೋನಿ ದಕ್ಷಿಣ ಆಫ್ರಿಕಾ ವಿರುದ್ಧದ ಟೂರ್ನಿಗೆ ಆಯ್ಕೆಯಾಗುವ ನಿರೀಕ್ಷೆ ಅಭಿಮಾನಿಗಳಲ್ಲಿ ಇತ್ತು. ಆದರೆ ಈ ಟೂರ್ನಿಗೂ ಧೋನಿ ಆಯ್ಕೆಯಾಗಿರಲಿಲ್ಲ. ಪರಿಣಾಮ ಧೋನಿ ಅವರ ಕ್ರಿಕೆಟ್ ವೃತ್ತಿ ಜೀವನ ಅಂತ್ಯವಾಯ್ತೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

    ಧೋನಿ ಅವರ ಮನದಲ್ಲಿ ಏನಿದೆ ಎನ್ನುವುದು ಯಾರಿಗೂ ತಿಳಿದಿಲ್ಲ. ಧೋನಿ ಮಾತ್ರ ತಮ್ಮ ಭವಿಷ್ಯದ ಬಗ್ಗೆ ಯಾವ ಚಿಂತನೆ ಹೊಂದಿದ್ದಾರೆ ಎಂಬುವುದನ್ನು ತಿಳಿಸಬಲ್ಲರು. ಈಗ ಅವರಿಗೆ 38 ವರ್ಷ ವಯಸ್ಸಾಗಿದ್ದು, ಮುಂದಿನ ಟಿ20 ವಿಶ್ವಕಪ್ ವೇಳೆಗೆ 39 ವರ್ಷವಾಗುತ್ತದೆ ಎಂದು ಗವಾಸ್ಕರ್ ಹೇಳಿದ್ದಾರೆ.

    ಧೋನಿ ತಂಡದಲ್ಲಿ ಇರುವುದರಿಂದ ದೊಡ್ಡ ಲಾಭ ಸಿಗುತ್ತದೆ. ಬರೀ ರನ್ ಮಾತ್ರವಲ್ಲದೇ ವಿಕೆಟ್ ಹಿಂದೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ. ಅವರ ಒಟ್ಟಾರೆ ಪ್ರದರ್ಶನ ಧೋನಿ ಅವರನ್ನು ಅತ್ಯುತ್ತಮ ನಾಯಕ ಎಂಬ ಸ್ಥಾನದಲ್ಲಿ ತಂದು ನಿಲ್ಲಿಸಿದೆ. ಸದ್ಯದ ತಂಡದ ನಾಯಕನಿಗೂ ಧೋನಿ ಕ್ರೀಡಾಂಗಣದಲ್ಲಿ ಇದ್ದರೆ ಒತ್ತಡ ಕಡಿಮೆ ಇರುತ್ತದೆ. ಆದರೆ ಧೋನಿ ಅವರು ಗೌರವಾನಿತ್ವವಾಗಿ ತಂಡದಿಂದ ನಿರ್ಗಮಿಸಬೇಕು ಎನಿಸುತ್ತದೆ ಎಂದು ಗವಾಸ್ಕರ್ ಹೇಳಿದ್ದಾರೆ.

  • ನಗದು ಬಹುಮಾನ ನೀಡದ್ದಕ್ಕೆ ವಿಂಬಲ್ಡನ್ ಉದಾಹರಣೆ ಕೊಟ್ಟು ಕಿಡಿಕಾರಿದ ಗವಾಸ್ಕರ್

    ನಗದು ಬಹುಮಾನ ನೀಡದ್ದಕ್ಕೆ ವಿಂಬಲ್ಡನ್ ಉದಾಹರಣೆ ಕೊಟ್ಟು ಕಿಡಿಕಾರಿದ ಗವಾಸ್ಕರ್

    ಮೆಲ್ಬರ್ನ್: ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಗೆದ್ದ ಭಾರತ ತಂಡಕ್ಕೆ ನಗದು ಬಹುಮಾನ ನೀಡದ್ದಕ್ಕೆ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕ್ರಿಕೆಟ್ ಆಸ್ಟ್ರೇಲಿಯಾ ವಿರುದ್ಧ ಕಿಡಿಕಾರಿದ್ದಾರೆ.

    ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಯಜುವೇಂದ್ರ ಚಹಲ್ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿಗೆ 500 ಡಾಲರ್(35,600 ರೂ.) ನಗದು ಬಹುಮಾನವಾಗಿ ನೀಡಿದ್ದಾರೆ. ತಂಡದ ಆಟಗಾರರಿಗೆ ಒಂದು ಟ್ರೋಫಿ ಬಿಟ್ಟರೆ ಬೇರೆ ಏನೂ ಸಿಕ್ಕಿಲ್ಲ. ಸಂಘಟಕರು ಪ್ರಸಾರದ ಹಕ್ಕಿನಿಂದ ಸಾಕಷ್ಟು ಹಣವನ್ನು ಸಂಪಾದಿಸಿದ್ದರೂ ಆಟಗಾರರಿಗೆ ನಗದು ಬಹುಮಾನ ನೀಡಿಲ್ಲ ಯಾಕೆ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

    ವಿಂಬಲ್ಡನ್ ಟೆನ್ನಿಸ್ ಟೂರ್ನಿ ನೋಡಿ ಕಲಿತುಕೊಳ್ಳಲಿ. ಹಣ ಉತ್ಪಾದನೆಯಾಗುವುದೇ ಆಟಗಾರರಿಂದ. ಹೀಗಿರುವಾಗ ಆಟಗಾರರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದು ತಮ್ಮ ವಾದವನ್ನು ಸಮರ್ಥಿಸಿಕೊಂಡಿದ್ದಾರೆ.

    500 ಡಾಲರ್ ನಗದು ಬಹುಮಾನ ಸಿಕ್ಕಿದರೂ ಚಹಲ್ ಮತ್ತು ಧೋನಿ ಆ ಹಣವನ್ನು ದಾನ ನೀಡಿದ್ದಾರೆ. ವಿಂಬಲ್ಡನ್ ಟೆನ್ನಿಸ್ ನಲ್ಲಿ ಮೊದಲ ಹಂತದಲ್ಲಿ ಸೋತ ಸ್ಪರ್ಧಿಗೆ 36 ಲಕ್ಷ ರೂ. ಹಣ ಸಿಕ್ಕಿದರೆ, ಸಿಂಗಲ್ಸ್ ವಿಜೇತರು ಅಂದಾಜು 21 ಕೋಟಿ ರೂ. ನಗದು ಬಹುಮಾನವನ್ನು ಪಡೆಯುತ್ತಾರೆ.

    ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟಿ 20 ಪಂದ್ಯ 1-1 ರಲ್ಲಿ ಸಮಬಲಗೊಂಡಿತ್ತು. ಎರಡನೇ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತ್ತು. ಟೆಸ್ಟ್ ಸರಣಿ 2-1 ರಿಂದ ಗೆದ್ದಿದ್ದ ಭಾರತ ಈಗ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಮೊದಲ ಟಿ-20 ಪಂದ್ಯದಲ್ಲಿ ಮಳೆಯಿಂದಾಗಿ ಡಕ್‍ವರ್ಥ್ ಲೂಯಿಸ್ ನಿಯಮದಿಂದ ಪರಿಷ್ಕೃತ ರನ್ ನೀಡಿದ ಪರಿಣಾಮ ಭಾರತ ಗೆಲುವಿನ ಸಮೀಪ ಬಂದು ಸೋತಿತ್ತು. ಆಸ್ಟ್ರೇಲಿಯಾ 4 ರನ್ ಗಳಿಂದ ಈ ಪಂದ್ಯವನ್ನು ಗೆದ್ದುಕೊಂಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಧೋನಿ ರಣಜಿ ಆಡುವುದು ಒಳ್ಳೆ ಚಿಂತನೆ ಅಲ್ಲ : ಜಾರ್ಖಂಡ್ ಕೋಚ್

    ಧೋನಿ ರಣಜಿ ಆಡುವುದು ಒಳ್ಳೆ ಚಿಂತನೆ ಅಲ್ಲ : ಜಾರ್ಖಂಡ್ ಕೋಚ್

    ರಾಂಚಿ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಆಸೀಸ್ ಟೂರ್ನಿಯಲ್ಲಿ ಭಾಗವಹಿಸದ ಕಾರಣ ರಣಜಿ ಪಂದ್ಯದಲ್ಲಿ ಆಡಬೇಕಿತ್ತು ಎಂದು ಟೀಕೆ ಮಾಡಿದ್ದ ವಿಶ್ಲೇಷಕರಿಗೆ ಜಾರ್ಖಂಡ್ ತಂಡಧ ಕೋಚ್ ಉತ್ತರಿಸಿದ್ದು, ಇದು ಯುವ ಕ್ರಿಕೆಟ್ ಆಟಗಾರರ ಮೇಲೆ ಪರಿಣಾಮ ಉಂಟು ಮಾಡುತ್ತದೆ ಎಂದು ತಿಳಿಸಿದ್ದಾರೆ.

    ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಕೋಚ್ ರಾಜೀವ್ ಕುಮಾರ್, ಧೋನಿ ರಣಜಿ ಕ್ರಿಕೆಟ್ ಆಡುವುದು ಒಳ್ಳೆಯ ಚಿಂತನೆ ಅಲ್ಲ. ಏಕೆಂದರೆ ಹಲವು ಯುವ ಆಟಗಾರರು ಪಂದ್ಯದಲ್ಲಿ ಆಡುವ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತು ಪಡಿಸಿ ಆಯ್ಕೆಗಾರರ ಗಮನ ಸೆಳೆಯಲು ಶ್ರಮಿಸುತ್ತಿದ್ದಾರೆ. ಆದರೆ ಧೋನಿ ಆಡುವುದರಿಂದ ಯುವ ಆಟಗಾರರ ಅವಕಾಶ ಕೈ ತಪ್ಪುತ್ತದೆ ಎಂದು ತಿಳಿಸಿದ್ದಾರೆ.

    ಧೋನಿ ಯುವ ಆಟಗಾರರ ಬಗ್ಗೆ ಸಾಕಷ್ಟು ಆಸಕ್ತಿ ವಹಿಸಿದ್ದು ತರಬೇತಿ ವೇಳೆ ಹಲವು ಬಾರಿ ಹಾಜರಿದ್ದು, ಬ್ಯಾಟಿಂಗ್ ಸೇರಿದಂತೆ ಹಲವು ವಿಚಾರಗಳಲ್ಲಿ ಸಲಹೆ ನೀಡಿದ್ದಾರೆ. ಇದರಿಂದ ಆಟಗಾರರ ಪ್ರದರ್ಶನ ಶೈಲಿಯೇ ಬದಲಾಗಿದೆ. ಇದು ಆಟಗಾರರಿಗೆ ಮತ್ತಷ್ಟು ಸಹಕಾರಿ ಆಗಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

    ಟೀಂ ಇಂಡಿಯಾ ಮಾಜಿ ನಾಯಕ ಸುನೀಲ್ ಗವಾಸ್ಕರ್, ಧೋನಿ ಹಾಗೂ ಶಿಖರ್ ಧವನ್ ಆಸೀಸ್ ಟೂರ್ನಿಯಲ್ಲಿ ಭಾಗವಹಿಸದಿದ್ದರು ಯಾಕೆ ರಣಜಿ ಪಂದ್ಯದಲ್ಲಿ ಆಡುತ್ತಿಲ್ಲ ಎಂದು ಪ್ರಶ್ನೆ ಮಾಡಿದ್ದರು.

    ಧೋನಿ ಆಸೀಸ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಆಗಿರಲಿಲ್ಲ. ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ಟೆಸ್ಟ್ ಟೂರ್ನಿ ಆಡಿಲ್ಲ. ಅಂದರೆ ಅಕ್ಟೋಬರ್ ನಿಂದ ಮುಂದಿನ ಜನವರಿ ವರೆಗೂ ಧೋನಿ ಟೀಂ ಇಂಡಿಯಾ ಪರ ಆಡಿಲ್ಲ. ಅದ್ದರಿಂದ ರಣಜಿ ಟೂರ್ನಿಯಲ್ಲಿ ಧೋನಿ ಭಾಗವಹಿಸಬೇಕಿತ್ತು. ಒಂದೊಮ್ಮೆ ಆಸೀಸ್ ಹಾಗೂ ಮುಂದಿನ ನ್ಯೂಜಿಲೆಂಡ್ ಸರಣಿಯಲ್ಲಿ ಧೋನಿ ಉತ್ತಮ ಪ್ರದರ್ಶನ ನೀಡದಿದ್ದರೆ, ಮುಂದಿನ ವಿಶ್ವಕಪ್ ತಂಡಕ್ಕೆ ಧೋನಿ ಆಯ್ಕೆ ಮಾಡುವ ಪ್ರಶ್ನೆ ಉದ್ಭವಿಸುತ್ತದೆ. ಆಟದಲ್ಲಿ ಹೆಚ್ಚಿನ ಸಮಯ ವಿಶ್ರಾಂತಿ ತೆಗೆದುಕೊಳ್ಳುವುದು ಹೆಚ್ಚಿನ ಪರಿಣಾಮ ಉಂಟುಮಾಡುತ್ತದೆ ಎಂದು ಸುನೀಲ್ ಗವಾಸ್ಕರ್ ಹೇಳಿದ್ದರು.

    ಉಳಿದಂತೆ ಜನವರಿ 12 ರಿಂದ ಆರಂಭವಾಗುವ ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಧೋನಿ ಭಾಗವಹಿಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಐಸಿಸಿ ಹಾಲ್ ಆಫ್ ಫೇಮ್ ಗೌರವ ಪಡೆದ ರಾಹುಲ್ ದ್ರಾವಿಡ್

    ಐಸಿಸಿ ಹಾಲ್ ಆಫ್ ಫೇಮ್ ಗೌರವ ಪಡೆದ ರಾಹುಲ್ ದ್ರಾವಿಡ್

    ತಿರುವನಂತಪುರಂ: ಟೀಂ ಇಂಡಿಯಾ ಮಾಜಿ ಆಟಗಾರ, ಅಂಡರ್ 19 ತಂಡದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಐಸಿಸಿ ನೀಡುವ ಹಾಲ್ ಆಫ್ ಫೇಮ್ ಗೌರವಕ್ಕೆ ಪಾತ್ರರಾಗಿದ್ದು, ಈ ಮೂಲಕ ಪ್ರಶಸ್ತಿ ಪಡೆದ 5ನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆ ಪಡೆದರು.

    ಕೇರಳದಲ್ಲಿ ನಡೆಯುತ್ತಿರುವ ವಿಂಡೀಸ್ ವಿರುದ್ಧದ 5ನೇ ಏಕದಿನ ಪಂದ್ಯಕ್ಕೂ ಮುನ್ನ ನಡೆದ ಔಪಚಾರಿಕ ಕಾರ್ಯಕ್ರಮದಲ್ಲಿ ಸುನಿಲ್ ಗವಾಸ್ಕರ್ ಅವರು ಐಸಿಸಿ ನೀಡುವ ಗೌರವ ಕಾಣಿಕೆಯನ್ನು ರಾಹುಲ್ ಅವರಿಗೆ ಹಸ್ತಾಂತರಿಸಿದರು. ಈ ಹಿಂದೆ ಭಾರತದ ಬಿಷನ್ ಸಿಂಗ್ ಬೇಡಿ, ಸುನಿಲ್ ಗವಾಸ್ಕರ್, ಕಪಿಲ್ ದೇವ್, ಅನಿಲ್ ಕುಂಬ್ಳೆ ಐಸಿಸಿ ಹಾಲ್ ಆಫ್ ಫೇಮ್ ಗೌರವಕ್ಕೆ ಪಾತ್ರರಾಗಿದ್ದರು.

    ಈ ವೇಳೆ ಮಾತನಾಡಿದ ರಾಹುಲ್ ದ್ರಾವಿಡ್, ಐಸಿಸಿ ಹಾಲ್ ಆಫ್ ಫೇಮ್ ಎಲೈಟ್ ಪಟ್ಟಿಗೆ ನನ್ನನ್ನು ಸೇರಿಸಿದ್ದಕ್ಕೆ ಸಂತಸವಾಗುತ್ತಿದೆ. ಇದು ತಮಗೆ ದೊರಕಿರುವ ಅತಿ ದೊಡ್ಡ ಗೌರವ. ನನ್ನ ಹೀರೋಗಳ ಜೊತೆಗೆ ಗುರುತಿಸಿರುವುದು ನನಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು. ಅಲ್ಲದೇ ಇದೇ ವೇಳೆ ತಮ್ಮ ವೃತ್ತಿ ಜೀವನದಲ್ಲಿ ಬೆಂಬಲ ಸೂಚಿಸಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.

    ದ್ರಾವಿಡ್ ತಮ್ಮ ವೃತ್ತಿ ಜೀವನದಲ್ಲಿ 164 ಟೆಸ್ಟ್ ಪಂದ್ಯಗಳಿಂದ 36 ಶತಕಗಳೊಂದಿಗೆ 13,288 ರನ್ ಗಳಿಸಿದ್ದಾರೆ. ಅಲ್ಲದೇ 344 ಏಕದಿನ ಪಂದ್ಯಗಳಿಂದ 10,899 ರನ್ ಗಳಿಸಿದ್ದು, 2004 ರಲ್ಲಿ ಐಸಿಸಿ ವಾರ್ಷಿಕ ಟೆಸ್ಟ್ ಆಟಗಾರರಾಗಿ ಆಯ್ಕೆ ಆಗಿದ್ದರು. ಕೇವಲ ಬ್ಯಾಟಿಂಗ್ ಮಾತ್ರವಲ್ಲದೇ ಸ್ಲಿಪ್ ನಲ್ಲಿ 210 ಕ್ಯಾಚ್ ಪಡೆಯುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv