Tag: sunil heggaravalli

  • ‘ಹಾಯ್ ಬೆಂಗಳೂರು’ ಸಂಪಾದಕ ರವಿ ಬೆಳಗೆರೆಗೆ ಕೋರ್ಟ್ ನಿಂದ ಮಧ್ಯಂತರ ರಿಲೀಫ್

    ‘ಹಾಯ್ ಬೆಂಗಳೂರು’ ಸಂಪಾದಕ ರವಿ ಬೆಳಗೆರೆಗೆ ಕೋರ್ಟ್ ನಿಂದ ಮಧ್ಯಂತರ ರಿಲೀಫ್

    ಬೆಂಗಳೂರು: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆಯವರ ಜಾಮೀನು ಅರ್ಜಿ ವಿಚಾರಣೆ 65ನೇ ಸೆಷನ್ಸ್ ಕೋರ್ಟ್ ನಲ್ಲಿ ನಡೆಯಿತು.

    ಡಿಸೆಂಬರ್ 16 ರ ವರೆಗೆ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಇಂದಿಗೆ ಮಧ್ಯಂತರ ಜಾಮೀನು ಅರ್ಜಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಮತ್ತೆ ಮಧ್ಯಂತರ ಜಾಮೀನು ವಿಸ್ತರಿಸದಂತೆ ಸಿಸಿಬಿ ವಕೀಲರು ಮನವಿ ಮಾಡಿದ್ದರು.

    ಇನ್ನು ತಮ್ಮ ವಕೀಲರ ಜೊತೆ ಕೋರ್ಟ್ ಗೆ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೂಡ ಹಾಜರಾಗಿದ್ದರು. ಇನ್ನು ಸರ್ಕಾರಿ ವಕೀಲರು ಮುಖ್ಯ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಒಂದು ವಾರ ಸಮಯಾವಕಾಶ ಕೇಳಿದ್ದಾರೆ.

    ರವಿ ಬೆಳಗೆರೆಗೆ ಆರೋಗ್ಯ ಚೆನ್ನಾಗಿದೆ. ಹಾಗಾಗಿ ಅವರಿಗೆ ಮಧ್ಯಂತರ ಜಾಮಿನು ವಿಸ್ತರಿಸಬೇಡಿ ಅಂತ ಕೋರ್ಟ್ ನಲ್ಲಿ ಸಿಸಿಬಿ ವಕೀಲರು ವಾದ ಮಂಡಿಸಿದ್ರು. ರವಿಬೆಳಗೆರೆ ಅವರ ಆರೊಗ್ಯದ ಬಗ್ಗೆ ರಿಪೋರ್ಟ್ ಗಳು ಇದ್ದಾವೆ ಹೊರತು, ಆರೋಗ್ಯ ಸರಿಯಿಲ್ಲ ಅಂತ ಇತ್ತೀಚಿನ ಯಾವುದೇ ರಿಪೋರ್ಟ್ ಅವರ ಬಳಿ ಇಲ್ಲ. ಮಧ್ಯಂತರ ಜಾಮೀನಿಗಾಗಿ ಸುಳ್ಳು ಅನಾರೋಗ್ಯದ ಸರ್ಟಿಫಿಕೇಟ್ ಗಳನ್ನು ನೀಡುತ್ತಿದ್ದಾರೆ ಅಂತ ವಕೀಲರು ವಾದಿಸಿದ್ರು.

    ರವಿಬೆಳಗೆರೆ ಮಧ್ಯಂತರ ಜಾಮೀನು ಅವಧಿಯನ್ನು ಸೆಷನ್ಸ್ ಕೋರ್ಟ್ ನ್ಯಾಯಮೂರ್ತಿ ಮಧುಸೂದನ್ ಅವರು ಡಿ. 18ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.

  • ಬೆಳಗೆರೆ ಜಾಮೀನು ರದ್ದತಿಗೆ ಸುನಿಲ್ ಕಸರತ್ತು- ಮಹತ್ವ ಪಡೆದ ಜಾಮೀನು ಅರ್ಜಿ ವಿಚಾರಣೆ

    ಬೆಳಗೆರೆ ಜಾಮೀನು ರದ್ದತಿಗೆ ಸುನಿಲ್ ಕಸರತ್ತು- ಮಹತ್ವ ಪಡೆದ ಜಾಮೀನು ಅರ್ಜಿ ವಿಚಾರಣೆ

    ಬೆಂಗಳೂರು: ಇಂದು ರವಿ ಬೆಳಗೆರೆ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ರವಿ ಬೆಳಗೆರೆ ಮಧ್ಯಂತರ ಜಾಮೀನು ರದ್ದುಗೊಳಿಸುವಂತೆ ಸುನಿಲ್ ಹೆಗ್ಗರವಳ್ಳಿ ಅರ್ಜಿ ಸಲ್ಲಿಸಿರೋ ಹಿನ್ನೆಲೆಯಲ್ಲಿ ವಿಚಾರಣೆ ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ: ಶನಿ ಮುಖಿ ಕೊಲೆಗೆ ಸುಪಾರಿ ಒಂದು ಕೇಡು – ನೋಟ್ಸ್ ಫ್ರಮ್ ಸೆಂಟ್ರಲ್ ಜೈಲ್

    ಇತ್ತೀಚೆಗಷ್ಟೇ 65ನೇ ಸಿಟಿ ಸಿವಿಲ್ ನ್ಯಾಯಾಲಯ ರವಿ ಬೆಳಗೆರೆಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ನೀಡಿತ್ತು. ಆದ್ರೆ ರವಿ ಬೆಳಗೆರೆ ಆರೋಗ್ಯ ಸರಿ ಇರುವ ಬಗ್ಗೆ ಕೋರ್ಟ್‍ಗೆ ದಾಖಲೆ ಸಲ್ಲಿಸಲು ಸುನಿಲ್ ಹೆಗ್ಗರವಳ್ಳಿ ಹೇಳಿದ್ದಾರೆ. ಹೀಗಾಗಿ ನ್ಯಾಯಾಲಯ ಕೊಟ್ಟಿದ್ದ ಮಧ್ಯಂತರ ಜಾಮೀನನ್ನು ಮುಂದುವರಿಸುತ್ತಾ? ಅಥವಾ ರದ್ದುಗೊಳಿಸುತ್ತಾ ಅನ್ನೋದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ:  ಬೆಳಗೆರೆಗೆ ಜಾಮೀನು ಮಂಜೂರು: ಕೋರ್ಟ್ ಕಲಾಪದಲ್ಲಿ ಇಂದು ಏನಾಯ್ತು?

    ನಗರದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪತ್ರಕರ್ತ ರವಿ ಬೆಳಗೆರೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ. ಯಾವುದೋ ಯೋಚನೆಯಲ್ಲಿ ಮಗ್ನರಾಗಿರುವ ರವಿ ಬೆಳಗೆರೆ, ಪ್ರತಿನಿತ್ಯ 26 ಮಾತ್ರೆಗಳನ್ನು ನುಂಗುತ್ತಿದ್ದಾರೆ. ಅಲ್ಲದೆ ಸ್ಕ್ಯಾನಿಂಗ್ ವೇಳೆ ರವಿ ಬೆಳಗೆರೆ ಪಿತ್ತಕೋಶದಲ್ಲಿ ಕಲ್ಲು ಪತ್ತೆಯಾಗಿದ್ದು, ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಅಂತಾ ವೈದ್ಯರು ಹೇಳಿದ್ದಾರೆ. ಇದನ್ನೂ ಓದಿ: ರವಿ ಬೆಳಗೆರೆ ಆರೋಗ್ಯದಲ್ಲಿ ಏರುಪೇರು- ಜಯದೇವ ಹೃದ್ರೋಗ ಆಸ್ಪತ್ರೆಗೆ ಶಿಫ್ಟ್ ಮಾಡೋ ಸಾಧ್ಯತೆ

     

  • ಯಶೋಮತಿಯಿಂದ ಸಲಹೆ ಪಡೆಯುವಷ್ಟು ದಡ್ಡ ನಾನಲ್ಲ- ಸುನಿಲ್ ಹೆಗ್ಗರವಳ್ಳಿ

    ಯಶೋಮತಿಯಿಂದ ಸಲಹೆ ಪಡೆಯುವಷ್ಟು ದಡ್ಡ ನಾನಲ್ಲ- ಸುನಿಲ್ ಹೆಗ್ಗರವಳ್ಳಿ

    ಬೆಂಗಳೂರು: ಮಾಧ್ಯಮದ ಮೂಲಕ ಪತ್ರಕರ್ತ ರವಿ ಬೆಳಗೆಯವರ ಪತ್ನಿ ಯಶೋಮತಿ ಅವರ ಫೇಸ್‍ಬುಕ್ ಸ್ಟೇಟಸ್ ನ್ನು ಗಮನಿಸಿದ್ದೇನೆ. ಸುನಿಲ್ ವಿರುದ್ಧದ ಹೇಳಿಕೆ ಅಂತ ನನಗನ್ನಿಸಿಲ್ಲ. ಆದ್ರೆ ಯಶೋಮತಿಯವರಿಂದ ಸಲಹೆ ಪಡೆಯುವಷ್ಟು ದಡ್ಡ ನಾನಲ್ಲ ಅಂತ ಸುನಿಲ್ ಹೆಗ್ಗರವಳ್ಳಿ ಪ್ರತಿಕ್ರಿಯಿಸಿದ್ದಾರೆ.

    ಕೊಲೆ ಸುಪಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ಕರೆದಿರುವ ಹಿನ್ನೆಲೆಯಲ್ಲಿ ಇಂದು ಸುನಿಲ್ ಹೆಗ್ಗರವಳ್ಳಿ ಕಮಿಷನರ್ ಕಚೇರಿಗೆ ಬಂದಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಶೋಮತಿಯವರ ಸ್ಟೇಟಸ್ ನ ಮೊದಲನೇ ಲೈನ್ ನಲ್ಲಿ ನನ್ನ ಮಗ ಎರಡು ದಿನದಿಂದ ಶಾಲೆಗೆ ಹೋಗಲಿಲ್ಲ. ಊಟ ಮಾಡಲೆಂದು ಅನ್ನ ಹಾಕ್ಕೊಂಡ್ರೆ ರವಿ ಕಣ್ಣೆದುರಿಗೆ ಬರುತ್ತಾರೆ ಅಂತೆಲ್ಲಾ ಬರೆದಿದ್ದಾರೆ. ಹಾಗೆಯೇ ನನಗೂ ಕುಟುಂಬ ಇದೆ. ನನಗೂ 80 ವರ್ಷದ ತಂದೆ, 75 ವರ್ಷದ ತಾಯಿಯಿದ್ದಾರೆ. 8 ವರ್ಷದ ಮಗ ಇದ್ದಾನೆ. ಒಂದು ವೇಳೆ ನನಗೇನಾದ್ರೂ ಹೆಚ್ಚು ಕಡಿಮೆ ಆಗಿದ್ರೆ ಅಥವಾ ನನ್ನ ಕೊಲೆಯೇ ಆಗಿದ್ರೆ ಇಂದು ನನ್ನ ತಂದೆ-ತಾಯಿ, ಹೆಂಡ್ತಿ-ಮಗನ ಸ್ಥಿತಿ ಹೇಗಿರುತ್ತಿತ್ತು ಎಂದು ಪ್ರಶ್ನಿಸಿದ ಅವರು, ಇಂದು ಅದೃಷ್ಟವಶಾತ್ ನಾನು ಬದುಕಿದ್ದೀನಿ. ಹೀಗಾಗಿ ಅವರು ಅತ್ಯಂತ ಸುಲಭವಾಗಿ ಈ ಮಾತುಗಳನ್ನು ಹೇಳಬಹುದು ಅಂತ ಹೇಳಿದ್ರು. ಇದನ್ನೂ ಓದಿ: ಸುನಿಲ್ ಹೆಗ್ಗರವಳ್ಳಿ ವಿರುದ್ಧ ಮೊದಲ ಬಾರಿಗೆ ಸಿಡಿದ ಯಶೋಮತಿ

    ಬಳಿಕ ಹೇಡಿತರ ರಕ್ಷಣೆ ಕೇಳಿದ್ದಾನೆ ಅಂತ ಹೇಳಿದ್ದಾರೆ. ಹೇಡಿ ಅನ್ನೋದಕ್ಕಿಂತ ನನಗೂ ಒಂದು ಜವಾಬ್ದಾರಿ ಇದೆ. ಯಾರು ಹೇಡಿ ಅನ್ನೋದು ಈಗಾಗ್ಲೇ ಎಲ್ಲರಿಗೂ ತಿಳಿದಿದೆ. ನನಗೆ ನನ್ನ ತಂದೆ-ತಾಯಿ, ಪತ್ನಿ ಮಗ ಇವರೆಲ್ಲರ ಜವಾಬ್ದಾರಿ ಇದ್ದಾಗ, ನಾನು ರವಿ ಬೆಳಗೆರೆ ಎದುರಿಗೆ ಎದೆ ಬಿಚ್ಚಿ ರಿವಾಲ್ವರ್ ಕೊಟ್ಟು ಗುಂಡು ಹೊಡಿರಿ ಅಂತ ಕೇಳಕ್ಕಾಗಲ್ಲ. ಹೀಗಾಗಿ ಒಂದು ಪ್ರಕರಣ ನಡೆದಾಗ ಯಾವ ರೀತಿ ನಡೆದುಕೊಳ್ಳಬೇಕು ಎಂಬುದು ನನಗೆ ಗೊತ್ತಿದೆ. ಅದೇ ರೀತಿ ನಾನು ನಡೆದುಕೊಳ್ಳುತ್ತಿದ್ದೇನೆ. ಒಟ್ಟಿನಲ್ಲಿ ಯಶೋಮತಿಯವರಿಂದ ಸಲಹೆ ಪಡೆಯುವಷ್ಟು ದಡ್ಡ ನಾನಲ್ಲ. ಹಾಗೆಯೇ ಅವರ ಸಲಹೆ ನನಗೆ ಬೇಕಾಗಿಲ್ಲ. ಅವರ ವಿಷಯ ಏನ್ ಬೇಕಾದ್ರೂ ಮಾತನಾಡಿಕೊಳ್ಳಲಿ. ಆದ್ರೆ ನನ್ನ ಹಾಗೂ ನನ್ನ ಕುಟುಂಬದ ವಿಷಯಕ್ಕೆ ಅವರು ಬರುವುದು ಬೇಡ ಅಂತ ಸುನಿಲ್ ಹೆಗ್ಗರವಳ್ಳಿ ಎಚ್ಚರಿಕೆ ನೀಡಿದ್ದಾರೆ.

    ಭದ್ರತೆಗೆ ಕೋರಿಕೆ: ನನಗೆ ಭದ್ರತೆ ಬೇಕು. ಹೀಗಾಗಿ ಈಗಾಗಲೆ ಸಿಎಂ, ಗೃಹಸಚಿವರನ್ನು ಭೇಟಿಯಾಗಿದ್ದೇನೆ. ಸಿಎಂ ಕೂಡ ಭದ್ರತೆ ಕೊಡಿಸುವುದಾಗಿ ಹೇಳಿದ್ರು. ಇಂಟಲಿಜೆನ್ಸ್ ಕರೆ ಮಾಡಿ ಸ್ಟೇಟ್ ಸ್ ಚೆಕ್ ಮಾಡಿದ್ರು. ನನಗೆ ಗನ್ ಮ್ಯಾನ್ ಬೇಕು ಅಂತ ಹೇಳಿದ್ದೀನಿ ವಿಚಾರ ಮಾಡಿ ನಮಗೆ ವ್ಯವಸ್ಥೆ ಮಾಡ್ತಾರೆ. ರವಿ ಬೆಳಗೆರೆ ಪ್ರಭಾವಿ ವ್ಯಕ್ತಿ ಹೀಗಾಗಿ ಭದ್ರತೆಗೆ ಕೋರಿದ್ದೆನೆ. ಆದ್ರೆ ಗನ್ ಮ್ಯಾನ್ ಕೊಡ್ತಾರೋ ಏನೋ ಸರ್ಕಾರಕ್ಕೆ ಬಿಟ್ಟ ವಿಚಾರ ಅಂತ ಸುನಿಲ್ ಹೇಳಿದ್ದಾರೆ.

  • ಸುನಿಲ್ ಹೆಗ್ಗರವಳ್ಳಿ ವಿರುದ್ಧ ಮೊದಲ ಬಾರಿಗೆ ಸಿಡಿದ ಯಶೋಮತಿ

    ಸುನಿಲ್ ಹೆಗ್ಗರವಳ್ಳಿ ವಿರುದ್ಧ ಮೊದಲ ಬಾರಿಗೆ ಸಿಡಿದ ಯಶೋಮತಿ

    ಬೆಂಗಳೂರು: ಸೋಮವಾರ ಪತಿ ರವಿ ಬೆಳಗೆರೆಯನ್ನು ಬೆಂಬಲಿಸಿ ಪೋಸ್ಟ್ ಪ್ರಕಟಿಸಿದ್ದ ಯಶೋಮತಿ ಸಾರಂಗಿ ಅವರು ಮಂಗಳವಾರ ಫೇಸ್‍ಬುಕ್ ನಲ್ಲಿ ಸುನಿಲ್ ಹೆಗ್ಗರವಳ್ಳಿ ವಿರುದ್ಧ ಸಿಡಿದಿದ್ದಾರೆ.

    “ನಾನೇನಾದರೂ ಸುನಿಲ್ ಹೆಗ್ಗರವಳ್ಳಿಯ ಸ್ಥಾನದಲ್ಲಿದ್ದಿದ್ದರೆ ಅವರ ಪರಮ ಗುರುವಾದ ರವಿಯ ಬಗ್ಗೆ ಹೀಗೆಲ್ಲ ಮಾಧ್ಯಮದಲ್ಲಿ ಅವಮಾನಕರ ರೀತಿಯಲ್ಲಿ ಮಾತನಾಡುತ್ತಿರಲಿಲ್ಲ. ಇನ್ನೊಂದೆರಡು ಕೇಸುಗಳು ಜಡಿಯುವಂತೆ ಪ್ರೇರೇಪಿಸುತ್ತಿರಲಿಲ್ಲ. ಜೊತೆಗೆ ಹೆದರಿ ಪೊಲೀಸ್ ರಕ್ಷಣೆಯನ್ನು ಕೇಳುತ್ತಲೂ ಇರಲಿಲ್ಲ” ಎಂದು ಬರೆದಿದ್ದಾರೆ.

    ಸೋಮವಾರ ಪ್ರಕಟಿಸಿದ ಪೋಸ್ಟಿಗೆ ಸಂಬಂಧಿಸಿದಂತೆ ಬಂದಿರುವ ಕಮೆಂಟ್ ಗಳಿಗೆ ಪ್ರತಿಕ್ರಿಯಿಸುವ ವೇಳೆ ಯಶೋಮತಿ ಈ ಅಭಿಪ್ರಾಯವನ್ನು ತಿಳಿಸಿದ್ದಾರೆ. ಹೀಗಾಗಿ ಇಲ್ಲಿ ಯಶೋಮತಿ ಅವರ ಎರಡು ಪೋಸ್ಟ್ ಗಳನ್ನು ಇಲ್ಲಿ ಯಥಾವತ್ತಾಗಿ ನೀಡಲಾಗಿದೆ.

    ಮಂಗಳವಾರದ ಬರಹ:
    ಪ್ರತಿಕ್ರಿಯಿಸಿದ ಎಲ್ಲರಿಗೂ ಚಿರರುಣಿ… ವಿ ಆಲ್ ಲವ್ ರವಿ…ನಮ್ಮ ಹಿಮ ಇನ್ನೂ ಚಿಕ್ಕವನಾದ್ದರಿಂದ ಹಿ ಲವ್ಸ್ ಮೋರ್ ದೆನ್ ಅಸ್, ಹೀ ನೀಡ್ಸ್ ಹಿಸ್ ಕಂಪ್ಲೀಟ್ ಲವ್. ಎರಡು ದಿನದಿಂದ ಶಾಲೆಗೆ ಹೋಗಿಲ್ಲ. ಸ್ವಲ್ಪ ಡಿಸ್ಟರ್ಬ್ ಆದಂತೆ ಕಾಣ್ತಿದ್ದಾನೆ. ಬಟ್ ಐ ಆ್ಯಮ್ ದೇರ್ ಫಾರ್ ಹಿಮ್ ಅವರೆಲ್ಲೋ ಜೋಯಿಡಾದಲ್ಲೋ, ಆಫೀಸಲ್ಲೋ, ಕರಿಶ್ಮಾ ಹಿಲ್ಸ್ ನಲ್ಲೋ ಇದ್ದಾರೆ ಅಂದ್ರೆ ನಮಗೂ ಒಂದು ರೀತಿಯ ಭರವಸೆ ಇರುತ್ತಿತು.್ತ ಅವರು ಸುರಕ್ಷಿತವಾಗಿದ್ದಾರೆಂದು. ಊಟದ ಮುಂದೆ ಕುಳಿತರೆ ಕಣ್ತುಂಬಿ ಬರುತ್ತೆ. ಧುತ್ತನೆ ಒಂದು ಅನೂಹ್ಯ ಘಟನೆ ಎದುರಾದಾಗ ಆಘಾತ, ಆತಂಕ, ಕುತೂಹಲ, ದಿಗ್ಭ್ರಮೆಗಳು ಎಲ್ಲರ ಮನದಲ್ಲಿ ಮೂಡುವುದು ಸಹಜವೇ. ಆ ಸಮಯದಲ್ಲಿ ನೀಡುವ ಪ್ರತಿಕ್ರಿಯೆಗಳು ಇನ್ನಷ್ಟು ಗೊಂದಲಗಳನ್ನುಂಟು ಮಾಡುವಂತಾಗಬಾರದು ಅಷ್ಟೆ.

    ಮಾಧ್ಯಮದವರಿಗೆ ನನ್ನ ಮನವಿ. “ನಾನು ಮನೆಬಿಟ್ಟು ಓಡಿ ಹೋಗಿದ್ದೇನೆ”, “ಪೊಲೀಸರ ಮುಂದೆ ಸಿಟ್ಟಿನಿಂದ ವರ್ತಿಸಿದ್ದೇನೆ”, “ನನ್ನ ಹೇಳಿಕೆಯಿಂದಲೇ ರವಿಗೆ ಇಂದು ಈ ಗತಿ ಬಂದಿದೆ” ಎಂದೆಲ್ಲ ಇಲ್ಲಸಲ್ಲದ ಮಾತುಗಳನ್ನು ಪ್ರಸರಿಸಬೇಡಿ. ದೈಹಿಕವಾಗಿ ಅನಾರೋಗ್ಯಗೊಂಡಾಗ ಮಾನಸಿಕವಾಗಿಯೂ ಬಲಹೀನರಾಗುತ್ತಾರೆ. ಹೀಗಾಗಿ ನಮಗೆಲ್ಲ ರವಿಯ ಆರೋಗ್ಯದ ಬಗ್ಗೆಯೇ ಬಹಳವಾಗಿ ಆತಂಕವಾಗುತ್ತಿದೆ.

    ಇನ್ನು ಸುನೀಲ್ ಹೆಗ್ಗರವಳ್ಳಿಯವರು ‘ಹಾಯ್ ಬೆಂಗಳೂರ್’ ಕಚೇರಿಯಲ್ಲಿ ಬಹಳ ಕಾಲದಿಂದ ಸಹೋದ್ಯೋಗಿಯಾಗಿ ದುಡಿದಿದ್ದರಿಂದ ಅದಕ್ಕಿಂತ ಹೆಚ್ಚಾಗಿ ಅವರು ಸದಾ ರವಿಯ ಒಳಿತನ್ನೇ ಬಯಸುತ್ತಿದ್ದ ಹಿನ್ನೆಲೆಯಲ್ಲಿ ಅವರನ್ನು ನಾನು ವಿಶ್ವಾಸಕ್ಕೆ ತೆಗೆದುಕೊಂಡಿದ್ದೆನಷ್ಟೆ. ಅದರ ಹೊರತಾಗಿ ಮತ್ಯಾವ ಕಾರಣವೂ ಇಲ್ಲ. ಒಂದುವೇಳೆ ಅನುಮಾನಗೊಂಡು ಸುಪಾರಿ ಕೊಟ್ಟಿದ್ದರೆಂದೇ ಊಹಿಸಿಕೊಂಡಾಗ ನಾನೇನಾದರೂ ಸುನಿಲ್ ಹೆಗ್ಗರವಳ್ಳಿಯ ಸ್ಥಾನದಲ್ಲಿದ್ದಿದ್ದರೆ ಅವರ ಪರಮ ಗುರುವಾದ ರವಿಯ ಬಗ್ಗೆ ಹೀಗೆಲ್ಲ ಮಾಧ್ಯಮದಲ್ಲಿ ಅವಮಾನಕರ ರೀತಿಯಲ್ಲಿ ಮಾತನಾಡುತ್ತಿರಲಿಲ್ಲ. ಇನ್ನೊಂದೆರಡು ಕೇಸುಗಳು ಜಡಿಯುವಂತೆ ಪ್ರೇರೇಪಿಸುತ್ತಿರಲಿಲ್ಲ. ಜೊತೆಗೆ ಹೆದರಿ ಪೊಲೀಸ್ ರಕ್ಷಣೆಯನ್ನು ಕೇಳುತ್ತಲೂ ಇರಲಿಲ್ಲ. “ನಿಮ್ಮ ಕೈಯಲ್ಲೇ ಪ್ರಾಣ ಹೋಗುವುದಾದರೆ ಅದಕ್ಕಿಂತ ಹೆಚ್ಚಿನ ಸಂತೋಷ ಬೇರೇನಿದೆ. ನೀವು ನನ್ನನ್ನು ತಂದೆಯಾಗಿ, ಗುರುವಾಗಿ ಸಲಹಿದ್ದೀರಿ ಎಂದು ಅವರ ಕೈಗೆ ಬಂದೂಕನ್ನ ನಾನೇ ಕೊಡುತ್ತಿದ್ದೆ.”

    ಇನ್ನು ರವಿ ದುಡಿದ ಹಣ, ಆಸ್ತಿ ಎಲ್ಲವೂ ಅವರ ಸ್ವಯಾರ್ಜಿತ. ಅದೆಲ್ಲದರ ಹಕ್ಕುದಾರರೂ ಅವರೇ. ನಾನವರನ್ನು ಪ್ರೀತಿಸಿದಾಗ ಅವರ ಮನೆ ಹಾಗೂ ಕಚೇರಿಗಳು ಬಾಡಿಗೆ ಕಟ್ಟಡಗಳಾಗಿದ್ದವು. ಅವರಿಂದ ನಾನು ಸದಾ ಬಯಸುವುದು ನಿಷ್ಕಲ್ಮಷ ಪ್ರೀತಿ ಹಾಗೂ ಅವರ ನಿರಂತರ ಸಮಾಜಮುಖಿ ಬರವಣಿಗೆ. ಹಿಮವಂತನಿಗೆ ಅಪ್ಪನ ಒಡನಾಟದ ಅಗತ್ಯವಿದೆ. ಆ ಮಗುವಿಗೆ ಅದರ ಸವಿ ಸದಾ ಸಿಗಲೆಂದು ನಿಮ್ಮೆಲ್ಲರ ಹಾರೈಕೆಯಿರಲಿ.

    ಸೋಮವಾರದ ಬರಹ:
    ಮೊನ್ನೆ ತಾನೇ ನಡೆದ ಹಿಮನ ಬರ್ತ್ ಡೇಯ ಫೊಟೋಗಳನ್ನು ನೋಡುತ್ತಾ ಕುಳಿತಿದ್ದೆ. ಅದರಲ್ಲಿ ಕೆಲವನ್ನು ಸೆಲೆಕ್ಟ್ ಮಾಡಿ ರವಿಗೆ ಕಳಿಸಬೇಕು ಅಂದುಕೊಳ್ಳುವಷ್ಟರಲ್ಲಿ…“ಯಶೂ ಮಾ ಎಲ್ಲಿದ್ದೀರ? ಒಂದು ಸ್ವಲ್ಪ ಟಿವಿ ನೋಡಿ” ಅಂದ ಕೂಡಲೇ ಅದನ್ನು ಅಲ್ಲೇ ಬಿಟ್ಟು ಟಿವಿ ಆನ್ ಮಾಡಿದವಳ ಕಿವಿಗೆ ಮೊದಲು ರಾಚಿದ್ದೇ ನನ್ನ ಹೆಸರು… ಏನಾಗ್ತಿದೆ? ನನ್ನ ಹೆಸರು ಯಾಕೆ ಬರ್ತಿದೆ ಅದೂ ನಂಗೇ ಗೊತ್ತಿಲ್ಲದೇ…. ಹಿಮ ಬೇರೆ ಸ್ಕೂಲಿಂದ ಬರುವ ಹೊತ್ತಾಗಿತ್ತು. ಮೊದಲು ಓಡಿ ಹೋಗಿ ಅವನನ್ನು ಕರೆದುಕೊಂಡು ಬಂದೆ.

    ರಾತ್ರಿಯಿಡೀ ಒಂದೇ ಸಮನೆ ಟಿವಿಗಳಲ್ಲಿ ಬಿತ್ತರವಾಗುತ್ತಿದ್ದ ಸುದ್ದಿಗಳು ಕಿವಿಗೆ ಕಾದ ಸೀಸದಂತೆ ಬೀಳುತ್ತಿದ್ದವು. ಕಚೇರಿಯಲ್ಲಿ ಫೋನುಗಳೆಲ್ಲ ಪೊಲೀಸರ ವಶದಲ್ಲಿದ್ದವು. ಹಾಗಾಗಿ ಎಲ್ಲಿಂದಲೂ ಉತ್ತರ ಸಿಗುತ್ತಿಲ್ಲ. ಸರಿ ಆದದ್ದಾಗಲಿ ನೋಡೋಣ ಭಗವಂತನೊಬ್ಬನಿದ್ದಾನೆ ಅಂದು ಧೈರ್ಯವಾಗಿ ಕುಳಿತವಳಿಗೆ ಅಮ್ಮ, ತಂಗಿ, ಅಣ್ಣನ ಮಗನ ಜೊತೆಗೆ ಗೆಳತಿಯರ ಧೈರ್ಯ ತುಂಬುವ ಮೆಸೇಜುಗಳು ಜೊತೆಯಾದವು.

    ಅಮ್ಮಾ ಯಾವುದಕ್ಕೂ ಹೆದರಿಕೊಳ್ಳಬೇಡ. ಏನೇ ಬಂದ್ರೂ ಧೈರ್ಯವಾಗಿ ಫೇಸ್ ಮಾಡು…. ಅಂದ ಹಿಮ. ಅನುಮಾನಗಳು, ಅವಮಾನಗಳು, ಆರೋಪಗಳು ಬೆನ್ನ ಹಿಂದೆ ನೆರಳಿನಂತೆ ನಡೆದು ಬರುತ್ತಲೇ ಇವೆ. ನಿಖರವಾದ ಮಾಹಿತಿಯಿಲ್ಲದೆ ಟಿವಿ ಮಾಧ್ಯಮಗಳು ತಮಗೆ ಬೇಕಾದ ಬಣ್ಣ ತುಂಬಿ ಒಂದು ರೀತಿಯ ರಿವೇಂಜಿಗಿಳಿದಿವೆ. ಕೆಲವರಿಗೆ ಮನರಂಜನೆ, ಕೆಲವರಿಗೆ ಆತಂಕ. ಕೆಲವರಿಗೆ ಕುತೂಹಲ. ಇನ್ನು ಕೆಲವರಿಗೆ ಅನುಮಾನ..

    “ಏನೂ ಯೋಚನೆ ಮಾಡಬೇಡ ನಂಗೇನೂ ಆಗಲ್ಲ” ಅಂತ ಚೆಲ್ಲಿ ಹೋದ ರವಿಯ ನಗುವೇ ಮನೆ ಮನ ತುಂಬಿದೆ. ಅದೇ ನಿರೀಕ್ಷೆಯಲ್ಲಿದ್ದೇವೆ ನಾನು ಹಿಮ. ನಿಮಗೇನೂ ಆಗಲ್ಲ ವೀ. ನಮ್ಮೆಲ್ಲರ ಪ್ರಾರ್ಥನೆ ಸದಾ ನಿಮ್ಮೊಂದಿಗಿದೆ. ಇದೊಂದು ಸಣ್ಣ ಪರೀಕ್ಷೆ ಅಷ್ಟೆ. ಅದರಲ್ಲಿ ಗೆದ್ದು ಬರುವಿರೆಂಬ ನಂಬಿಕೆ ನನಗಿದೆ. ಇದನ್ನೂ ಓದಿ: Exclusive: ರವಿಬೆಳಗೆರೆ ರಾಕ್ಷಸ, ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ: ಸುನೀಲ್ ಹೆಗ್ಗರವಳ್ಳಿ

  • ನೀವು ಯಾರು..? ನಾನು ಯಾಕೆ ಇಲ್ಲಿದ್ದೇನೆ..? ಜೈಲು ಸಿಬ್ಬಂದಿಗೆ ರವಿ ಬೆಳಗೆರೆ ಪ್ರಶ್ನೆ

    ನೀವು ಯಾರು..? ನಾನು ಯಾಕೆ ಇಲ್ಲಿದ್ದೇನೆ..? ಜೈಲು ಸಿಬ್ಬಂದಿಗೆ ರವಿ ಬೆಳಗೆರೆ ಪ್ರಶ್ನೆ

    ಬೆಂಗಳೂರು: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪ ಪ್ರಕರಣದಲ್ಲಿ 14 ದಿನಗಳ ಬಂಧನಕ್ಕೊಳಗಾಗಿರುವ ರವಿ ಬೆಳಗೆರೆ ಪರಪ್ಪನ ಅಗ್ರಹಾರದಲ್ಲಿ ಮೊದಲ ದಿನ ಕಳೆದಿದ್ದಾರೆ. ಜೈಲು ಸಿಬ್ಬಂದಿ ಬಳಿ ನೀವು ಯಾರು..ನಾನು ಯಾಕೆ ಇಲ್ಲಿದ್ದೇನೆ ಅಂತಾ ರವಿ ಬೆಳಗೆರೆ ಪ್ರಶ್ನಿಸಿದ್ದಾರೆ ಅಂತಾ ಮೂಲಗಳು ತಿಳಿಸಿವೆ.

    ರವಿ ಬೆಳಗೆರೆ ಅವರಿಗೆ 12785 ಕೈದಿ ನಂಬರ್ ಕೊಡಲಾಗಿದ್ದು, 3ನೇ ಬ್ಯಾರಕ್ ನ ಒಂದನೇ ಕೊಠಡಿಯನ್ನು ನೀಡಲಾಗಿದೆ. ಆದರೆ ರವಿ ಬೆಳಗೆರೆ ಬಿಪಿ, ಶುಗರ್‍ನಿಂದ ಬಳಲುತ್ತಿದ್ದು, ಅವರನ್ನು ಪರಪ್ಪನ ಅಗ್ರಹಾರದ ಆಸ್ಪತ್ರೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರವಿ ಬೆಳಗೆರೆಯವರಿಗೆ ಮನೆಯಿಂದ ಊಟ ತರಿಸಲು ಅವಕಾಶ ನೀಡಲಾಗಿದೆ. ಸೋಮವಾರ ರಾತ್ರಿ ಮನೆಯಿಂದಲೇ ತಂದಿದ್ದ ರಾಗಿ ಮುದ್ದೆ, ತರಕಾರಿ ಸಾಂಬಾರ್ ನೀಡಲಾಗಿತ್ತು. ಸುರಕ್ಷತೆ ಹಾಗೂ ಭದ್ರತೆ ದೃಷ್ಠಿಯಿಂದ ಮುನ್ನೆಚ್ಚರಿಕೆಯಾಗಿ ಬ್ಯಾರಕ್ ನ ಸುತ್ತಮುತ್ತ ಬಂದೋಬಸ್ತ್ ಮಾಡಲಾಗಿದೆ.

    ಇನ್ನು ಕಳೆದ ರಾತ್ರಿ ಪುತ್ರಿ ಚೇತನ ಬೆಳಗೆರೆ ಮಾತ್ರೆ ಹಾಗೂ ಔಷಧಿ ನೀಡಿ ಮನೆಗೆ ತೆರಳಿದ್ದಾರೆ. ಆದ್ರೆ ಪರಪ್ಪನ ಅಗ್ರಹಾರ ಸೇರಿದ ಬಳಿಕ ರವಿ ಬೆಳಗೆರೆ ಡಿಪ್ರೆಶನ್‍ಗೆ ಒಳಗಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೆರಡು ದಿನಗಳಲ್ಲಿ ರವಿ ಬೆಳಗೆರೆ ಜಾಮೀನಿಗೆ ಅರ್ಜಿ ಸಲ್ಲಿಸೋದಾಗಿ ವಕೀಲ ದಿವಾಕರ್ ಹೇಳಿದ್ದಾರೆ.

    ಇದನ್ನೂ ಓದಿ: ರವಿ ಬೆಳಗೆರೆಗೆ ಜಾಮೀನು ಮಂಜೂರು ಮಾಡದಂತೆ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ನೀಡಿದ 10 ಕಾರಣಗಳು ಇಲ್ಲಿವೆ…

  • ಬೆಳಗೆರೆ ವಿರುದ್ಧ  ಸಿಸಿಬಿ ಪೊಲೀಸರು ಸಲ್ಲಿಸಿದ್ದ  ಜಾಮೀನು ಆಕ್ಷೇಪಣೆಯಲ್ಲಿ ಏನಿದೆ ಗೊತ್ತಾ?

    ಬೆಳಗೆರೆ ವಿರುದ್ಧ ಸಿಸಿಬಿ ಪೊಲೀಸರು ಸಲ್ಲಿಸಿದ್ದ ಜಾಮೀನು ಆಕ್ಷೇಪಣೆಯಲ್ಲಿ ಏನಿದೆ ಗೊತ್ತಾ?

    ಬೆಂಗಳೂರು: ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪವನ್ನು ಎದುರಿಸುತ್ತಿರುವ ಪತ್ರಕರ್ತ ರವಿ ಬೆಳಗೆರೆ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ.

    ಬೆಳಗೆರೆ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಅವರ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸುವ ಮೊದಲೇ ಸಿಸಿಬಿ ಪೊಲೀಸರ ಪರ ವಕೀಲರು 10 ಕಾರಣಗಳನ್ನು ನೀಡಿ ಜಾಮೀನು ಮಂಜೂರು ಮಾಡದಂತೆ  ಆಕ್ಷೇಪಣೆ ಸಲ್ಲಿಸಿದ್ದಾರೆ.

    ಆ 10 ಕಾರಣಗಳು:
    1. ಆರೋಪಿ ರವಿ ಬೆಳಗೆರೆ ಅವರು ಸಮಾಜದಲ್ಲಿ ಪ್ರಭಾವಿ ವ್ಯಕ್ತಿಯಾಗಿದ್ದು, ಇವರು ಕಾನೂನು ತಿಳಿದಂತಹ ಪತ್ರಕರ್ತರಾಗಿದ್ದಾರೆ ಮತ್ತು ಸ್ವಂತ ಪತ್ರಿಕೆ ನಡೆಸುತ್ತಿದ್ದಾರೆ. ಇವುಗಳನ್ನು ತಿಳಿದ ಈ ವ್ಯಕ್ತಿ ಕಾನೂನಿಗೆ ಗೌರವವನ್ನು ನೀಡದೇ ತನ್ನ ಸಹೋದ್ಯೋಗಿಯೊಬ್ಬರನ್ನೇ ಕೊಲೆ ಮಾಡಿಸಲು ಸುಪಾರಿ ನೀಡಿದ ಪ್ರಕರಣದ ಆರೋಪಿಯಾಗಿರುತ್ತಾರೆ.

    2. ರವಿಬೆಳಗೆರೆ ರವರು ಮುಂದಿನ ದಿನಗಳಲ್ಲಿ ಸಮಾಜದಲ್ಲಿ ತಮಗಿರುವ ಪ್ರಭಾವವನ್ನು ಬಳಸಿ ಈ ಪ್ರಕರಣದಲ್ಲಿ ಮುಂದಿನ ತನಿಖೆಯಲ್ಲಿ ಸಂಗ್ರಹಿಸಬೇಕಾದಂತಹ ಸಾಕ್ಷಾಧಾರಗಳನ್ನು ನಾಶಪಡಿಸುವ ಸಂಭವ ಇರುತ್ತದೆ.

    3. ಅಪರಾಧಗಳ ಸಂಬಂಧ ಹೆಚ್ಚು ಹೆಚ್ಚು ಸುದ್ದಿಗಳನ್ನು, ಭೂಗತ ಲೋಕದ ಸುದ್ದಿಗಳನ್ನು ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಿ ಭೂಗತ ಪಾತಕಿಗಳೊಂದಿಗೆ ಸಂಪರ್ಕ ಹೊಂದಿದ್ದಂತಹ ಪತ್ರಕರ್ತರಾಗಿದ್ದು, ತಮಗಿರುವ ಈ ಭೂಗತ ಲೋಕದ ಸಂಪರ್ಕವನ್ನು ತಮ್ಮ ವೈಯಕ್ತಿಕ/ವ್ಯವಹಾರಿಕ ಬದುಕಿನ ಸಮಸ್ಯೆಗಳಿಗೆ ಉಪಯೋಗಿಸಿಕೊಂಡು ಕೊಲೆ ಮಾಡಿಸಲು ಸುಪಾರಿ ನೀಡಿದ ಆರೋಪ ಹೊಂದಿರುತ್ತಾರೆ.

    4. ಶಸ್ತ್ರ ಪರವಾನಗಿಯನ್ನು ರವಿ ಬೆಳಗೆರೆ ಹೊಂದಿದ್ದು, ಅವರು ಪರವಾನಗಿ ಹೊಂದಿದ್ದ ಶಸ್ತ್ರವನ್ನೇ ಈ ಪ್ರಕರಣದಲ್ಲಿ ಬಳಸಿರುವುದು ಕಂಡು ಬರುತ್ತದೆ.

    5. ಬೆಳಗೆರೆ ಹೊಂದಿದ್ದ ಶಸ್ತ್ರ ಪರವಾನಗಿಯ ನಿಬಂಧನೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಹೆಚ್ಚಿನ ಗುಂಡುಗಳನ್ನು ಹೊಂದಿರುವುದು ತನಿಖೆಯಲ್ಲಿ ಕಂಡು ಬಂದಿದ್ದು, ಇವರು ಅಪರಾಧದಲ್ಲಿ ಭಾಗಿಯಾಗುವ ಸಲುವಾಗಿಯೇ ಅಕ್ರಮವಾಗಿ ಗುಂಡುಗಳನ್ನು ಹೊಂದಿರುವುದು ದೃಢಪಟ್ಟಿರುತ್ತದೆ.

    6. ಆರೋಪಿಗೆ ಅಪರಾಧ ಜಗತ್ತಿನ ಮಾಹಿತಿ ಇದ್ದು ತಮ್ಮ ವೃತ್ತಿ ಜೀವನದಲ್ಲಿ ಹಲವಾರು ಪ್ರಕರಣಗಳ ಬಗ್ಗೆ ಅಳವಾದ ಮಾಹಿತಿಯನ್ನು ಹೊಂದಿದ್ದಾರೆ. ತಮಗಿರುವ ಅಪರಾಧ ಜಗತ್ತಿನ ಜ್ಞಾನದಿಂದ ಈ ಪ್ರಕರಣವನ್ನು ಯಾರಿಗೂ ತಿಳಿಯದಂತೆ ಮುತುವರ್ಜಿಯಿಂದ ಯವುದೇ ಸಾಕ್ಷ್ಯಾಧಾರಗಳನ್ನು ಸಿಗದಂತೆ ಮಾಡಲು ಪ್ರಯತ್ನಿಸಿದ್ದು, ಇಂತಹ ಪ್ರಕರಣದಲ್ಲಿ ಹೆಚ್ಚಿನ ವೈಜ್ಞಾನಿಕ ತನಿಖೆಗಾಗಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಬೇಕಾದ ಅಗತ್ಯತೆ ಇದೆ. ಹೀಗಾಗಿ ಅಲ್ಲಿಯವರೆಗೂ ಆರೋಪಿಯು ನ್ಯಾಯಾಂಗ ಬಂಧನದಲ್ಲಿರುವ ಅಗತ್ಯತೆ ಇರುತ್ತದೆ.

    7. ಬೆಳಗೆರೆ ಬಳಸುತ್ತಿದ್ದ ಐ ಪೋನ್ ಮತ್ತು ಟ್ಯಾಬ್ ಗಳಳನ್ನು ವಶ ಪಡಿಸಿಕೊಳ್ಳಲಾಗಿದೆ. ಇವುಗಳಲ್ಲಿ ತನಿಖೆಗೆ ಸಂಬಂಧಿಸಿದ ಸಾಕ್ಷ್ಯಗಳು ಇರುವ ಸಾಧ್ಯತೆ ಇದ್ದು, ಸಾಕ್ಷ್ಯಗಳನ್ನು ಸಂಗ್ರಹಿಸುವ ಸಲುವಾಗಿ ಇವುಗಳನ್ನು ತಜ್ಞರ ಬಳಿ ಕಳುಹಿಸಬೇಕಾದ ಅಗತ್ಯತೆ ಇರುತ್ತದೆ.

    8. ಈ ಪ್ರಕರಣದಲ್ಲಿ ಹೆಚ್ಚಿನ ಸಾಕ್ಷಿದಾರರು ಆರೋಪಿ ರವಿಬೆಳಗೆರೆ ಅವರ ಕಚೇರಿಯಲ್ಲಿ ಕೆಲಸ ಮಾಡುವವರೇ ಆಗಿದ್ದು ಇವರುಗಳ ಮೇಲೆ ಆರೋಪಿ ತನ್ನ ಪ್ರಭಾವವನ್ನು ಬೀರಿ ಅವರು ನಿರ್ಭಿತಿಯಿಂದ ಸಾಕ್ಷಿ ನುಡಿಯಲು ಮುಂದೆ ಬರದೇ ಇರುವ ಪರಿಸ್ಥಿತಿ ನಿರ್ಮಾಣ ಮಾಡುವ ಸಂಭವವಿದೆ. ಹೀಗಾಗಿ ಸಾಕ್ಷಿದಾರರು ನಿರ್ಭಿತಿಯಿಂದ ಸಾಕ್ಷಿ ನುಡಿಯಲು ಆರೋಪಿಯೂ ನ್ಯಾಯಾಂಗ ಬಂಧನದಲ್ಲಿರುವುದು ಅತ್ಯವಶ್ಯಕವಾಗಿರುತ್ತದೆ.

    9. ಈ ಪ್ರಕರಣದಲ್ಲಿ ವಶಪಡಿಸಿಕೊಂಡಿರುವ ಆರೋಪಿಯ ರಿವಾಲ್ವರ್, ಡಿ.ಬಿ.ಬಿ.ಎಲ್. ಗನ್ ಮತ್ತು ಜೀವಂತ ಗುಂಡುಗಳನ್ನು ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ತಜ್ಞರ ವರದಿ ಪಡೆಯಬೇಕಾಗಿರುತ್ತದೆ.

    10. ಆರೋಪಿಯ ಕಚೇರಿಯಿಂದ ನಿಷೇಧಿತ ಜಿಂಕೆ ಚರ್ಮ ಮತ್ತು ಆಮೆಯ ಚಿಪ್ಪನ್ನು ವಶಪಡಿಸಿಕೊಳ್ಳಲಾಗಿದೆ. ಹೀಗಾಗಿ ಈ ವಿಚಾರದ ಬಗ್ಗೆ ಮುಂದಿನ ಕ್ರಮ ಜರುಗಿಸಲು ಅರಣ್ಯ ಇಲಾಖೆ ವಶಕ್ಕೆ ನೀಡಬೇಕಿದೆ. ಇವುಗಳ ಬಗ್ಗೆ ಆರೋಪಿಯು ವಿಚಾರಣೆಯ ಸಮಯದಲ್ಲಿ ಸರಿಯಾದ ಮಾಹಿತಿಯನ್ನು ನೀಡಿಲ್ಲ. ಹೀಗಾಗಿ ಇವುಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುವ ಅವಶ್ಯಕತೆ ಇರುವ ಕಾರಣ ಅಲ್ಲಿಯವರೆಗೂ ನ್ಯಾಯಾಂಗ ಬಂಧನದಲ್ಲಿರುವ ಅಗತ್ಯತೆ ಇರುತ್ತದೆ.

    ಈ ಮೇಲ್ಕಂಡ ಕಾರಣಗಳಿಗೆ ಎ2 ಆರೋಪಿಯಾಗಿರುವ ರವಿಬೆಳಗೆರೆ ರವರನ್ನು ಡಿಸೆಂಬರ್ 11 ರಿಂದ ಡಿಸೆಂಬರ್ 24ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ನೀಡಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದೇವೆ.

    https://www.youtube.com/watch?v=1XjJ-a_uFjI

     

  • ರಾತ್ರಿ ಮಾವನನ್ನು ಭೇಟಿಯಾದ ಶ್ರೀನಗರ ಕಿಟ್ಟಿ- ಸುನಿಲ್ ಹೆಗ್ಗರವಳ್ಳಿ ಮಾತಿಗೆ ಬೇಸರ

    ರಾತ್ರಿ ಮಾವನನ್ನು ಭೇಟಿಯಾದ ಶ್ರೀನಗರ ಕಿಟ್ಟಿ- ಸುನಿಲ್ ಹೆಗ್ಗರವಳ್ಳಿ ಮಾತಿಗೆ ಬೇಸರ

    ಬೆಂಗಳೂರು: ಸಿಸಿಬಿ ಕಚೇರಿಯಲ್ಲಿದ್ದ ತಮ್ಮ ಮಾವನನ್ನು ನಟ ಶ್ರೀನಗರ ಕಿಟ್ಟಿ ಭಾನುವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

    ಬಳಿಕ ಮಾತನಾಡಿದ ಕಿಟ್ಟಿ, ಸುನಿಲ್ ಹೆಗ್ಗರವಳ್ಳಿ ಬಗ್ಗೆ ಮಾತನಾಡೋಕೂ ಇಷ್ಟವಿಲ್ಲ. ಅವನನ್ನು ನಾನು ನಿನ್ನೆ ಮೊನ್ನೆಯಿಂದ ನೋಡ್ತಿಲ್ಲ. ಅವನನ್ನು ಮನೆ ಮಗನಂತೆ ನೋಡಿಕೊಂಡಿದ್ದರು. ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ನನಗೆ ಕೆಲಸ ಕಲಿಸಿಕೊಟ್ಟವರು ರವಿ ಬೆಳಗೆರೆ ಅಂತ ಅವನೇ ಹೇಳಿಕೊಂಡಿದ್ದಾನೆ. ಅದರಲ್ಲೂ ಯಾರನ್ನೂ ಏಕವಚನದಲ್ಲಿ ಮಾತನಾಡೋದು ಸರಿಯಲ್ಲ. ಆದ್ರೆ ಮೊನೆನ ಅವನು ಆಡಿದ ಮಾತುಗಳು ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ ಅಂದ್ರು.

    ತಪ್ಪು ಮಾಡದಿದ್ದಾಗ ಹೊರಗಿನವರು ಆಡೋ ಮಾತುಗಳು ಮನಸ್ಸಿಗೆ ನೋವುಂಟು ಮಾಡುತ್ತೆ. ರವಿ ಬೆಳಗೆರೆಗೆ ಬಿಪಿ ಹೆಚ್ಚಾಗಿದ್ದು ಸುಧಾರಿಸಿಕೊಳ್ತಿದ್ದಾರೆ. ನಮಗೆ ಕಾನೂನಿನ ಮೇಲೆ ನಂಬಿಕೆಯಿದ್ದು, ನ್ಯಾಯ ಸಿಗುವ ವಿಶ್ವಾಸ ಇದೆ. ತಪ್ಪು ಮಾಡಿದ್ದರೆ ಶಿಕ್ಷೆ ಆಗೇ ಆಗುತ್ತೆ ಅಂತ ಅವರು ಹೇಳಿದ್ದರು.

    ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ವೇಳೆ ವಿಶೇಷ ತನಿಖಾ ತಂಡ ಬೆಂಗಳೂರಿನಲ್ಲಿ ಸುಪಾರಿ ಕಿಲ್ಲರ್ ವಿಜಯಪುರದ ಚಡಚಣದ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಯನ್ನು ಶುಕ್ರವಾರ ಬಂಧಿಸಿತ್ತು. ಆತನ ವಿಚಾರಣೆ ವೇಳೆ ರವಿ ಬೆಳೆಗೆರೆಯವರು ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪತ್ರಕರ್ತ ರವಿ ಬೆಳಗೆರೆಯನ್ನು ಬಂಧಿಸಲಾಗಿತ್ತು.

    ರವಿ ಬೆಳಗೆರೆ ಎರಡನೇ ಪತ್ನಿ ಜತೆ ಹಾಯ್ ಬೆಂಗಳೂರು ಪತ್ರಿಕೆ ವರದಿಗಾರ ಸನೀಲ್ ಹೆಗ್ಗರವಳ್ಳಿ ಅಕ್ರಮ ಸಂಬಂಧದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸುನೀಲ್ ಹತ್ಯೆ ಮಾಡಲು ನಿರ್ಧರಿಸಿದ್ದ ಬೆಳಗೆರೆ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಗೆ 30 ಲಕ್ಷ ರುಪಾಯಿ ಸುಪಾರಿ ಕೊಟ್ಟಿದ್ದರು ಎಂಬುದಾಗಿ ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಬೆಳಗೆರೆ ಬಂಧನವಾಗಿ ವಿಚಾರಣೆ ನಡೆಯುತ್ತಿತ್ತು. ಅಂತೆಯೇ ಭಾನುವಾರ ರಾತ್ರಿ ಸುಮಾರು 9.40ರ ವೇಳೆಗೆ ಮಧು ಎಂಬಾತ ಸುನಿಲ್ ಹೆಗ್ಗರವಳ್ಳಿಗೆ ಕರೆ ಮಾಡಿದ್ದಾರೆ.

    ಸುನೀಲ್ ರಿಸೀವ್ ಮಾಡಿದಾಗ ಕರೆ ಮಾಡಿದ್ದ ಮಧು ಎಂಬಾತ ರವಿ ಬೆಳೆಗೆರೆಯವರಿಗೆ ಫೋನ್ ಕೊಟ್ಟಿದ್ದಾನೆ. ಈ ವೇಳೆ ಸುನೀಲ್ ಜೊತೆ ಮಾತನಾಡಿದ ರವಿ ಬೆಳಗೆರೆ, ಯಶೋಮತಿ ಜೊತೆ ಸಂಬಂಧ ಇದೆ ಅಂತಾ ಮಾಧ್ಯಮಗಳ ಮುಂದೆ ಹೇಳಿದ್ದೀಯಾ? ಅಂತಾ ಕೇಳಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ಸುನೀಲ್, ನನಗೆ ಯಶೋಮತಿ ಜೊತೆ ಸಂಬಂಧವಿಲ್ಲ. ಹೀಗಿದ್ದಾಗ ನಾನ್ ಯಾಕೆ ಹಾಗೆ ಹೇಳಲಿ? ಅಂತಾ ಪ್ರಶ್ನಿಸಿದ್ದರು ಎಂಬುದಾಗಿ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿತ್ತು.

    ನನಗೆ ಏನೇ ಆದರೂ ರವಿ ಬೆಳಗೆರೆ ಅವರೇ ಕಾರಣ. ಸಿಸಿಬಿ ಕಚೇರಿಯಿಂದ ಕರೆ ಮಾಡುವ ಮೂಲಕ ತಾನು ಏನ್ ಬೇಕಾದ್ರೂ ಮಾಡ್ತೀನಿ ಅನ್ನೋ ಮೆಸೇಜ್ ಕೊಟ್ಟಿದ್ದಾರೆ. ಯಶೋಮತಿ ನನ್ನ ಗೆಳತಿಯಷ್ಟೇ. ಎಲ್ಲರೂ ರವಿ ಬೆಳಗೆರೆಯಂತೆ ಇರಲು ಆಗುತ್ತಾ? ಅವರಿಗಾದರೂ ಹತ್ತಾರು ಮಂದಿ ಗರ್ಲ್ ಫ್ರೆಂಡ್ಸ್ ಇದ್ದಾರೆ ಅಂತಾ ಸುನಿಲ್ ಕೂಡ ಪ್ರತಿಕ್ರಿಯಿಸಿದ್ದರು.

    https://www.youtube.com/watch?v=4amfU_N3xCI

    https://www.youtube.com/watch?v=kbcTIaQVj5Q

    https://www.youtube.com/watch?v=ED0FdtDgq5U

  • ವಿಜಯಪುರದಲ್ಲಿ ಬೀಡುಬಿಟ್ಟ ಸಿಸಿಬಿ ತಂಡ- ಮಾಹಿತಿ ತಿಳಿದು ವಿಜು ಬಡಿಗೇರ್ ಎಸ್ಕೇಪ್

    ವಿಜಯಪುರದಲ್ಲಿ ಬೀಡುಬಿಟ್ಟ ಸಿಸಿಬಿ ತಂಡ- ಮಾಹಿತಿ ತಿಳಿದು ವಿಜು ಬಡಿಗೇರ್ ಎಸ್ಕೇಪ್

    ವಿಜಯಪುರ: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣ ಸಂಬಂಧ ತನಿಖೆ ತೀವ್ರಗೊಳಿಸಿರುವ ಸಿಸಿಬಿ, ವಿಜಯಯಪುರದ ಸಿಂಧಗಿಯಲ್ಲಿ ಮತ್ತೊಬ್ಬ ಆರೋಪಿ ವಿಜು ಬಡಿಗೇರ್‍ಗಾಗಿ ತೀವ್ರ ಶೋಧ ನಡೆಸಿದೆ.

    ಭೀಮಾತೀರದ ಹಂತಕ ಶಶಿಧರ್ ಮುಂಡೆವಾಡಿ ಅಳಿಯ ವಿಜು ಬಡಿಗೇರ್ ಮನೆಯನ್ನು ಪತ್ತೆಹಚ್ಚಿರುವ ಸಿಸಿಬಿ, ಅಲ್ಲಿಗೆ ಹೋಗುವಷ್ಟರಲ್ಲಿ ಬಡಿಗೇರ್ ಎಸ್ಕೇಪ್ ಆಗಿದ್ದಾನೆ. ಸಿಂಧಗಿ ಪಟ್ಟಣದ ಕಂಟೆಪ್ಪನ ಪ್ಲಾಟ್ ನಲ್ಲಿರುವ ವಿಜು ಬಡಿಗೇರ ಮನೆಯಲ್ಲಿ ಇದೀಗ ಸಿಸಿಬಿ ಪೊಲೀಸರು ಶೋಧ ನಡೆಸ್ತಿದ್ದಾರೆ. ವಿಜು ಸದ್ಯ ಸಿಂಧಗಿಯಲ್ಲೇ ಅಡಗಿ ಕುಳಿತಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಅನುಮಾನಗಳಿವೆ.

    ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪವನ್ನು ಎದುರಿಸುತ್ತಿರುವ ಪತ್ರಕರ್ತ ರವಿ ಬೆಳಗೆರೆ ಸಿಸಿಬಿ ಕಚೇರಿಯಲ್ಲೇ ಮೂರನೇ ದಿನ ಕಳೆದಿದ್ದಾರೆ. ಇಂದು ಮಧ್ಯಾಹ್ನ ಸುಮಾರು 12 ಗಂಟೆಗೆ ಎಸಿಎಂಎಂ ಕೋರ್ಟ್‍ಗೆ ಪೊಲೀಸರು ಹಾಜರುಪಡಿಸಲಿದ್ದಾರೆ. ರವಿ ಬೆಳಗೆರೆ ಪರ ವಕೀಲ ದಿವಾಕರ್ ಜಾಮೀನಿಗೆ ಅರ್ಜಿ ಸಲ್ಲಿಸಲಿಸಿದ್ದಾರೆ. ಆದರೆ ಸಿಸಿಬಿ ಅಕ್ರಮ ಶಸ್ತ್ರಾಸ್ತ್ರ, ಕೊಲೆ ಸಂಚು ಸೇರಿ ಇನ್ನಿತರ ಜಾಮೀನು ರಹಿತ ಸೆಕ್ಷನ್ ಹಾಕಿದ್ದಾರೆ. ಆದ್ದರಿಂದ ಅನಾರೋಗ್ಯದ ನೆಪವೊಡ್ಡಿ ಜಾಮೀನು ನೀಡುವಂತೆ ವಕೀಲರು ವಾದ ಮಂಡಿಸಲಿದ್ದಾರೆ.

    ಇದಕ್ಕಾಗಿ ಬಿಪಿ, ಶುಗರ್, ನರ ದೌರ್ಬಲ್ಯ ಸೇರಿದಂತೆ ಹಲವು ಕಾಯಿಲೆಗಳಿಂದ ಬೆಳಗೆರೆ ಬಳಲುತ್ತಿರುವ ಕುರಿತು ಮೆಡಿಕಲ್ ಸರ್ಟಿಫಿಕೇಟ್‍ಗಳನ್ನು ಕೂಡ ರೆಡಿ ಮಾಡಿಕೊಂಡಿದ್ದಾರೆ. ಒಂದು ವೇಳೆ ಜಾಮೀನು ನೀಡದಿದ್ದರೆ ಕನಿಷ್ಠ ಪಕ್ಷ ಆಸ್ಪತ್ರೆಗೆ ಸೇರಿಸಲು ಮನವಿ ಮಾಡುವ ಸಾಧ್ಯತೆ ಇದೆ. ಜೊತೆಗೆ ಜಾಮೀನು ಅರ್ಜಿ ಇತ್ಯರ್ಥವಾಗುವವರೆಗೆ ಮಧ್ಯಂತರ ಜಾಮೀನಿಗೂ ಮನವಿ ಮಾಡಿದ್ದಾರೆ.

     

  • ನಾನು ಯಾರಿಗೂ ಸುಪಾರಿ ನೀಡಿಲ್ಲ, ನಿಮ್ಮ ಟೈಮೂ ವೇಸ್ಟ್, ನನಗೂ ತೊಂದ್ರೆ – ಸಿಸಿಬಿ ಪೊಲೀಸರ ಬೆವರಿಳಿಸಿದ ಬೆಳಗೆರೆ

    ನಾನು ಯಾರಿಗೂ ಸುಪಾರಿ ನೀಡಿಲ್ಲ, ನಿಮ್ಮ ಟೈಮೂ ವೇಸ್ಟ್, ನನಗೂ ತೊಂದ್ರೆ – ಸಿಸಿಬಿ ಪೊಲೀಸರ ಬೆವರಿಳಿಸಿದ ಬೆಳಗೆರೆ

    ಬೆಂಗಳೂರು: ಪತ್ರಕರ್ತ ಹಾಗೂ ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಬೆಳಗೆರೆ ವಿಚಾರಣೆ ಬಹುತೇಕ ಪೂರ್ಣಗೊಂಡಿದೆ.

    ವಿಚಾರಣೆಯ ವೇಳೆ ಯಾವುದೇ ಹೇಳಿಕೆ ನೀಡದಿರುವ ರವಿ ಬೆಳಗೆರೆ, ಯಾವ ಸುಪಾರಿಯೂ ನಾನು ನೀಡೇ ಇಲ್ಲ. ಕುಡಿದ ಮತ್ತಿನಲ್ಲಿ ಏನೋ ಹೇಳಿರಬಹುದು. ಅದನ್ನಾ ಪರಿಗಣಿಸೋಕೆ ಸಾಧ್ಯನಾ? ಎಂದು ಹೇಳಿದ್ದಾರೆ.

    ಕುಡಿದ ಮತ್ತಿನಲ್ಲಿ ಹೇಳಿರಬಹುದು ಅದನ್ನೇ ನೀವು ಸುಪಾರಿ ಅಂತ ಇದ್ದೀರಿ. ನಾನೇನಾದರೂ ಹೊಸಬನ ಭೇಟಿ ಮಾಡಿ, ಮಾತನಾಡಿದ್ರೆ ನಿಮ್ಮ ಅನುಮಾನ ಸರಿಯಾಗಿ ಇರ್ತಿತ್ತು. ಆದ್ರೆ ನಾನು ನನ್ನ ಮಾಜಿ ಡ್ರೈವರ್ ಭೇಟಿಯಾಗಿದ್ದೆ. ಪರಿಸ್ಥಿತಿ ಒತ್ತಡಕ್ಕೆ ಸಿಕ್ಕಿ ಕೊಲೆಗಾರ ಆದ. ಕೊಲೆಗಾರನನ್ನು ಭೇಟಿ ಮಾಡಿದ್ರೆ ನಾನು ಕೊಲೆಗಾರನ ಕೊಲೆ ಮಾಡಿಸ್ತೀನಾ?. ಸುಮ್ಮನೆ ನಿಮಗೂ ಕಾಲಹರಣ ನನಗೂ ಹಿಂಸೆನ್ರಪ್ಪ ಅಂತ ಸಿಸಿಬಿ ಅಧಿಕಾರಿಗಳಿಗೆಯೇ ರವಿ ಬೆಳಗೆರೆ ಟಾಂಗ್ ನೀಡಿದ್ದಾರೆ.

    ರವಿ ಬೆಳಗೆರೆ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗಲಿದೆ. ಈಗಾಗಲೇ ಪೊಲೀಸರು ಸಿಸಿಟಿವಿ, ಫೋನ್ ಕರೆಯನ್ನೇ ಆಧರಿಸಿ ತನಿಖೆ ಮುಂದುವರೆಸಿದ್ದಾರೆ. ಅಲ್ಲದೇ ಈಗಾಗಲೇ ಸುನಿಲ್ ಹೆಗ್ಗರವಳ್ಳಿ ಹೇಳಿಕೆ ಕೂಡ ಪೊಲೀಸರು ಸಂಗ್ರಹಿಸಿದ್ದಾರೆ ಎಂದು ಪಬ್ಲಿಕ್ ಟಿವಿಗೆ ಸಿಸಿಬಿ ಮೂಲಗಳ ಮಾಹಿತಿ ನೀಡಿವೆ.

    ಎಫ್‍ಐಆರ್ ದಾಖಲು: ರವಿಬೆಳಗೆರೆ ಬಂಧನ ಪ್ರಕರಣದ ಬಳಿಕ ಹಾಯ್ ಬೆಂಗಳೂರು ಕಚೇರಿಯಲ್ಲಿ ಜಿಂಕೆ ಚರ್ಮ, ಆಮೆ ಚಿಪ್ಪು ಪತ್ತೆ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಅರಣ್ಯ ಇಲಾಖೆಗೆ ಪತ್ರ ಬರೆದಿದ್ದರು. ಹೀಗಾಗಿ ಶನಿವಾರ ಅರಣ್ಯಾಧಿಕಾರಿಗಳು ಸಿಸಿಬಿ ಕಚೇರಿಗೆ ಆಗಮಿಸಿ ಜಿಂಕೆ ಚರ್ಮ ಮತ್ತು ಆಮೆ ಚಿಪ್ಪು ವಶಕ್ಕೆ ಪಡೆದಿದ್ದರು. ಸದ್ಯ ಈ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳಿಂದ ರವಿಬೆಳಗೆರೆ ವಿರುದ್ಧ ಎಫ್ ಐ ಆರ್ ದಾಖಲು ಮಾಡಲಾಗಿದೆ.

    ಆರೋಗ್ಯದಲ್ಲಿ ಏರುಪೇರು: ರವಿಬೆಳಗೆರೆಯವರಿಗೆ ಮತ್ತೆ ಲೋ ಶುಗರ್, ಲೋ ಬಿಪಿಯಾಗಿ ಆರೋಗ್ಯದಲ್ಲಿ ಏರಪೇರಾಗಿದೆ. ಹೀಗಾಗಿ ವೈದಕೀಯ ತಪಾಸಣೆಗೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ರವಿಬೆಳಗೆರೆ ಹೈಡ್ರಾಮ ಮಾಡಿದ್ದು, ಸಿಗರೇಟ್ ಬೇಕಾಂತ ಹಠ ಹಿಡಿದಿದ್ದರು. ಅಲ್ಲದೇ ಕಾರಿಗೆ ಕಾಲು ಅಡ್ಡ ಇಟ್ಟಿಕೊಂಡು ಸಿಗರೇಟ್ ಕೊಡದೆ ಇದ್ರೆ ಕಾಲು ತೆಗೆಯಲ್ಲ ಅಂತಾ ಹಠ ಮಾಡಿದ್ದಾರೆ.

    ಸಿಗರೇಟು ಕೊಡದೇ ಇದ್ದಿದ್ದಕ್ಕೆ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾನೂನಿನಲ್ಲಿಯೇ ಅವಕಾಶ ಇದೆ, ಕೊಡೊದಕ್ಕೆ ನಿಮಗೇನು ಅಂತ ಬೈಯ್ದಿದ್ದಾರೆ. ಮನವೊಲಿಸಲು ಹೋದ ಮಗ ಕರ್ಣನ ಮೇಲೂ ಕಿಡಿಕಾರಿದ್ದಾರೆ. ಕೊನೆಗೆ ಸಿಸಿಬಿ ಪೊಲೀಸರು ಸಿಗರೇಟು ಕೊಟ್ಟು ಸೇದಿಸಿ ಬಳಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ಕಾಲಿಗೆ ಗಾಯ ಆಗಿದೆ ನಿಮಗೆ ಮನುಷ್ಯತ್ವ ಇಲ್ವಾ ಅಂತ ಪೊಲೀಸರಿಗೆ ಬೆಳಗೆರೆ ತರಾಟೆ ತೆಗೆದುಕೊಂಡಿದ್ದಾರೆ.

    ಇದೇ ಸಂದರ್ಭದಲ್ಲಿ ಮಾಧ್ಯಮದವರನ್ನು ಹತ್ತಿರ ಕರೆದು ಎಷ್ಟು ದಿನ ಅಂತ ನನ್ನನ್ನೇ ಕಾಯ್ತಿರೋ ಬೇಜರಾಗೊಲ್ವಾ..? ಮತ್ತೆ ಸಿಕ್ತೀನಿ ಬಿಡ್ರೋ ಅಂತ ಹೇಳಿದ್ದಾರೆ.

    https://www.youtube.com/watch?v=Gw8qDp91QbA

    https://www.youtube.com/watch?v=7FMDBk4SZIs

    https://www.youtube.com/watch?v=BSYzOrn_xUM