Tag: sunil heggaravalli

  • ರವಿ ಬೆಳಗೆರೆ ಸುಪಾರಿ ಪ್ರಕರಣ: ಸಿಸಿಬಿ ಅಧಿಕಾರಿಗಳಿಗೆ ಪತ್ನಿ ಯಶೋಮತಿ ಹೇಳಿದ್ದಿಷ್ಟು

    ರವಿ ಬೆಳಗೆರೆ ಸುಪಾರಿ ಪ್ರಕರಣ: ಸಿಸಿಬಿ ಅಧಿಕಾರಿಗಳಿಗೆ ಪತ್ನಿ ಯಶೋಮತಿ ಹೇಳಿದ್ದಿಷ್ಟು

    ಬೆಂಗಳೂರು: ತನ್ನ ಸಹೋದ್ಯೋಗಿ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆಯವರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ಅವರ ಎರಡನೇ ಪತ್ನಿ ಯಶೋಮತಿ ನಾಪತ್ತೆಯಾಗಿದ್ದರು.

    ಸದ್ಯ ರವಿ ಬೆಳಗೆರೆ ವಿಚಾರಣೆ ನಡೆಯುತ್ತಿದ್ದು, ಶನಿವಾರ ರವಿ ಜೊತೆ ಪೊಲೀಸರು ರಾಜರಾಜೇಶ್ವರಿ ನಗರದಲ್ಲಿರೋ ಯಶೋಮತಿಯವರ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಯಶೋಮತಿ ಅಲ್ಲಿರಲಿಲ್ಲ. ಬಳಿಕ ನಿನ್ನೆ ಸಂಜೆಯೇ ಸಿಸಿಬಿ ಅಧಿಕಾರಿಗಳ ಜೊತೆ ಮಾತನಾಡಿದ ಯಶೋಮತಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನೇನು ಹೇಳೋದಿಲ್ಲ. ವೈಯಕ್ತಿಕವಾಗಿ ನನ್ನ ಮಾನ ಹರಣ ಆಗ್ತಿದೆ. ಸುನಿಲ್ ನನಗೆ ರವಿ ಕಡೆಯಿಂದ ಪರಿಚಯವಾಗಿದ್ದರು ಅಂತ ಹೇಳಿದ್ದಾರೆ.

    ಈ ಪ್ರಕರಣದಲ್ಲಿ ಅವರಿಬ್ಬರ ನಡುವೆ ಗಲಾಟೆಯಾಗಿದೆ. ಇದ್ರಲ್ಲಿ ನಾನೇನು ಹೆಚ್ಚು ಹೇಳೋ ವಿಚಾರ ಇಲ್ಲ ಅಂತ ಯಶೋಮತಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

    ಶುಕ್ರವಾರ ರಾತ್ರಿಯಿಂದ 2ನೇ ಪತ್ನಿ ಯಶೋಮತಿ ನಾಪತ್ತೆಯಾಗಿದ್ದರು. ಅಲ್ಲದೆ ತನ್ನ ಫೇಸ್‍ಬುಕ್ ಅಕೌಂಟ್ ಕೂಡ ಅವರು ಬ್ಲಾಕ್ ಮಾಡಿದ್ದಾರೆ. ಅಲ್ಲದೆ ಯಶೋಮತಿ ಯಾವುದೇ ಫೋನ್ ಕರೆಗಳನ್ನ ಸ್ವೀಕರಿಸುತ್ತಿಲ್ಲ ಎಂಬುದಾಗಿ ತಿಳಿದುಬಂದಿತ್ತು.

    ಸುನಿಲ್ ಹೆಗ್ಗರವಳ್ಳಿ ಹಾಗೂ ಯಶೋಮತಿ ನಡುವೆ ಅನೈತಿಕ ಸಂಬಂಧವಿತ್ತು. ಈ ಬಗ್ಗೆ ಮನೆ ಕೆಲಸದಾಕೆ ರವಿ ಬೆಳಗೆರೆಗೆ ಮಾಹಿತಿ ನೀಡಿದ್ದರು. ಈ ಮಧ್ಯೆ ಒಂದು ಬಾರಿ ರವಿ ಬೆಳಗೆರೆ ಮಧ್ಯರಾತ್ರಿ ಮನೆಗೆ ಬಂದಾಗ ಸುನಿಲ್ ಓಡಿಹೋಗಿದ್ದರು ಎಂಬ ಮಾತುಗಳೂ ಕೂಡ ಕೇಳಿಬಂದಿದೆ. ಇದೇ ಹಿನ್ನೆಲೆಯಲ್ಲಿ ರವಿ ಬೆಳಗೆರೆ ಸುನೀಲ್ ಹತ್ಯೆಗೆ ಸುಪಾರಿ ಕೊಟ್ಟಿದ್ದರು ಎಂಬ ಆರೋಪಗಳು ಕೇಳಿಬಂದಿದ್ದವು.

    https://www.youtube.com/watch?v=OA0RbYjR09k

    https://www.youtube.com/watch?v=y8cIVgw5Yno

    https://www.youtube.com/watch?v=hEoR4Fec7Ec

  • ರವಿ ಬೆಳಗೆರೆ ಹತ್ಯೆಗೂ ನಡೆದಿತ್ತಂತೆ ಸಂಚು – ಗನ್ ಹಿಂದಿನ ರಿಯಲ್ ಕಹಾನಿ

    ರವಿ ಬೆಳಗೆರೆ ಹತ್ಯೆಗೂ ನಡೆದಿತ್ತಂತೆ ಸಂಚು – ಗನ್ ಹಿಂದಿನ ರಿಯಲ್ ಕಹಾನಿ

    ಬೆಂಗಳೂರು: ಸಹೋದ್ಯೋಗಿ, ಪತ್ರಕರ್ತ ಸುನಿಲ್ ಹೆಗ್ಗರವಳ್ಳಿಯನ್ನು ಕೊಲೆ ಮಾಡಲು ಸುಪಾರಿ ನೀಡಿರುವ ಆರೋಪದ ಮೇಲೆ ರವಿಬೆಳಗೆರೆ ಬಂಧನವಾಗಿದ್ದು, ಈ ಬೆನ್ನಲ್ಲೇ ರವಿಬೆಳಗೆರೆ ಹತ್ಯೆಗೂ ಸಂಚು ರೂಪಿಸಲಾಗಿತ್ತು ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭಿಸಿದೆ.

    ರವಿ ಹತ್ಯೆಗೆ ಸ್ವಾಮೀಜಿ ಹಾಗೂ ಸಂಪಾದಕರೊಬ್ಬರಿಂದ ಸುಪಾರಿ ನೀಡಿರುವ ವಿಚಾರವೊಂದು ಬೆಳಕಿಗೆ ಬಂದಿದೆ. ತ್ಯಾಗಿ ಎಂಬವರಿಂದ ಈ ಸುಪಾರಿ ಸಂಚಿನ ಬಗ್ಗೆ ರವಿ ಬೆಳಗೆರೆಗೆ ಮಾಹಿತಿ ದೊರಕಿದ್ದು, ರೌಡಿ ಕುಳ್ಳಶಾಂತನಿಗೆ ಸುಪಾರಿ ಕೊಟ್ಟು ರವಿ ಹತ್ಯೆಗೆ ಸಂಚು ರೂಪಿಸಿದ್ದರು ಎನ್ನಲಾಗಿದೆ.

    ಆದ್ರೆ ಆ ರೌಡಿಯನ್ನ ಗೆಳೆಯರೇ ರವಿಬೆಳೆಗೆರೆ ಮುಂದೆ ಕರೆತಂದಿದ್ರಂತೆ. ಈ ವೇಳೆ ಅವರು ರವಿ ಬೆಳಗೆರೆಯನ್ನು ಕಂಡು ಶಾಕ್ ಆಗಿದ್ರಂತೆ. ಇದೇ ಸಂದರ್ಭದಲ್ಲಿ ಸುಪಾರಿ ಕಿಲ್ಲರ್ ಹತ್ಯೆಗೆ ಡೀಲ್ ಕೊಟ್ಟಿದ್ದವರ ಮಾಹಿತಿ ನೀಡಿದ್ದನಂತೆ. ಹತ್ಯೆಗೆ ಸುಪಾರಿ ಕೊಟ್ಟ ಸ್ವಾಮೀಜಿ, ಸಂಪಾದಕರ ಹೆಸರು ಕೇಳಿ ರವಿ ಬೆಳಗೆರೆಗೆ ಶಾಕ್ ಆಗಿತ್ತಂತೆ. ಹೀಗಾಗಿ ರವಿಬೆಳಗೆರೆ ಅಂದೇ ಒಂದು ರಿವಾಲ್ವರ್ ಬೇಕೆಂದು ಡಿಸೈಡ್ ಮಾಡಿದ್ದರಂತೆ. ಈವರೆಗೆ ರವಿ ಎರಡು ಬಾರಿ ರಿವಾಲ್ವರ್ ಬಳಸಿದ್ದಾರೆ ಎಂಬ ಮಾಹಿತಿಯೊಂದು ದೊರೆತಿದೆ.

  • ಪತ್ರಕರ್ತ ರವಿ ಬೆಳಗೆರೆ ಸುಪಾರಿ ಕೇಸಲ್ಲಿ ಹೊಸ ಟ್ವಿಸ್ಟ್!

    ಪತ್ರಕರ್ತ ರವಿ ಬೆಳಗೆರೆ ಸುಪಾರಿ ಕೇಸಲ್ಲಿ ಹೊಸ ಟ್ವಿಸ್ಟ್!

    ಬೆಂಗಳೂರು: ಸುಮಾರು 14 ವರ್ಷ ಜೊತೆಗಿದ್ದ ಸಹೋದ್ಯೋಗಿ ಹಾಗೂ ತನ್ನ ಎರಡನೇ ಮಗ ಎಂದೇ ಕರೆದಿದ್ದ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಹಾಯ್ ಬೆಂಗಳೂರು ಪತ್ರಿಕೆಯ ಸಂಪಾದಕ ರವಿ ಬೆಳಗೆರೆ ನೀಡಿರುವ ಸುಪಾರಿ ಕೇಸ್ ಮತ್ತೊಂದು ತಿರುವು ಪಡೆದಿದೆ.

    ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ರೂಪಿಸಿದ ಮೊದಲ ಸಂಚು ವಿಫಲವಾದ ಕೂಡಲೇ ಹಂತಕರಿಗೆ ತಲೆಮರೆಸಿಕೊಳ್ಳುವಂತೆ ರವಿ ಬೆಳಗೆರೆ ಸೂಚಿಸಿದ್ದರು. ಆಗಸ್ಟ್ 28ರ ಮೊದಲ ಪ್ಲಾನ್ ವಿಫಲವಾದ ಬಳಿಕ ಅಂದರೆ, ತಿಂಗಳು ಕಳೆದ ಬಳಿಕ ಮತ್ತೊಮ್ಮೆ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸ್ಕೆಚ್ ಹಾಕಿದ್ದರು. ಆದ್ರೆ ಅಂದು ಕೂಡ ಸುನಿಲ್ ಹೆಗ್ಗರವಳ್ಳಿ ಸ್ವಲ್ಪದ್ರಲ್ಲೇ ಪಾರಾಗಿದ್ದರು. ಇದನ್ನೂ ಓದಿ: ನನ್ನ ಕೊಲೆಗೆ ರವಿ ಬೆಳಗೆರೆ ಸುಪಾರಿ ಕೊಟ್ಟಿದ್ದರೆಂದು ಕೇಳಿ ಶಾಕ್ ಆಗಿದೆ: ಸುನೀಲ್ ಹೆಗ್ಗರವಳ್ಳಿ

    ಸುನಿಲ್ ಮನೆಯಲ್ಲಿ ಸಿಸಿಟಿವಿ ಇದ್ದಿದ್ದರಿಂದ ಮೊದಲ ಪ್ಲಾನ್ ವಿಫಲವಾದ ಬಳಿಕ, 2ನೇ ಬಾರಿ ಬೇರೆ ಕಡೆ ಹತ್ಯೆಗೆ ಸಂಚು ರೂಪಿಸಿದ್ದರು. ಕರೆ ಮಾಡಿ ಬೇರೆ ಕಡೆಗೆ ಕರೆಸಿಕೊಂಡು ಹತ್ಯೆಗೆ ಪ್ಲಾನ್ ಮಾಡಿದ್ದರು. ತನ್ನ ಆಪ್ತನ ಮೊಬೈಲ್‍ನಿಂದ 20ಕ್ಕೂ ಹೆಚ್ಚು ಬಾರಿ ಕರೆ ಮಾಡಿದ್ದರು. ಆದ್ರೆ ಈ ಬಾರಿ ಸುನಿಲ್ ಹೆಗ್ಗರವಳ್ಳಿ ಧರ್ಮಸ್ಥಳದಲ್ಲಿ ಇದ್ದಿದ್ರಿಂದ ಪಾರಾಗಿದ್ದರು. ಇದರಿಂದ ಬೇಸತ್ತು ಶಶಿಧರ್ ಮುಂಡೇವಾಡಗೆ ರವಿಬೆಳಗೆರೆ ಬೈದು ಕಳುಹಿಸಿದ್ದರು ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭಿಸಿದೆ. ಇದನ್ನೂ ಓದಿ: Exclusive: ರವಿಬೆಳಗೆರೆ ರಾಕ್ಷಸ, ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ: ಸುನೀಲ್ ಹೆಗ್ಗರವಳ್ಳಿ

    ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ವೇಳೆ ವಿಶೇಷ ತನಿಖಾ ತಂಡ ಬೆಂಗಳೂರಿನಲ್ಲಿ ಸುಪಾರಿ ಕಿಲ್ಲರ್ ವಿಜಯಪುರದ ಚಡಚಣದ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಯನ್ನು ಶುಕ್ರವಾರ ಬಂಧಿಸಿತ್ತು. ಆತನ ವಿಚಾರಣೆ ವೇಳೆ ರವಿ ಬೆಳೆಗೆರೆಯವರು ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪತ್ರಕರ್ತ ರವಿ ಬೆಳಗೆರೆಯನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: Exclusive: ಮದ್ವೆ ಮನೆಯಲ್ಲಿ ಊಟ ಮಾಡಿ ಸಿಎಂ ಕೊಟ್ಟ ಆದೇಶದಿಂದ ಬೆಳಗೆರೆ ಅರೆಸ್ಟ್!

    ರವಿ ಬೆಳಗೆರೆ ಎರಡನೇ ಪತ್ನಿ ಜತೆ ಹಾಯ್ ಬೆಂಗಳೂರು ಪತ್ರಿಕೆ ವರದಿಗಾರ ಸನೀಲ್ ಹೆಗ್ಗರವಳ್ಳಿ ಅಕ್ರಮ ಸಂಬಂಧದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸುನೀಲ್ ಹತ್ಯೆ ಮಾಡಲು ನಿರ್ಧರಿಸಿದ್ದ ಬೆಳಗೆರೆ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಗೆ 30 ಲಕ್ಷ ರುಪಾಯಿ ಸುಪಾರಿ ಕೊಟ್ಟಿದ್ದರು ಎಂಬುದಾಗಿ ತಿಳಿದುಬಂದಿತ್ತು. ಸದ್ಯ ರವಿಬೆಳಗೆರೆ ಸಿಸಿಬಿ ವಶದಲ್ಲಿದ್ದಾರೆ. ಇದನ್ನೂ ಓದಿ: ರವಿ ಬೆಳಗೆರೆ ಹೆಸರನ್ನ ಸುಪಾರಿ ಹಂತಕ ಬಾಯ್ಬಿಟ್ಟಿದ್ದು ಹೇಗೆ? ಬೆಳಗೆರೆ ಕಚೇರಿಯಲ್ಲಿ ಏನು ಸಿಕ್ಕಿದೆ?

    https://www.youtube.com/watch?v=X0xApCHxdCQ

    https://www.youtube.com/watch?v=x86o3NINFFM

    https://www.youtube.com/watch?v=J4W3Dqe2jrY

    https://www.youtube.com/watch?v=NVU9MGtsE60

  • ಸಿಸಿಬಿ ಕಚೇರಿಯಲ್ಲೇ ರವಿ ಬೆಳಗೆರೆ 2ನೇ ದಿನದ ವಾಸ್ತವ್ಯ- ಕಾಲು ನೋವಿನಿಂದ ನಿದ್ದೆಬಾರದೆ ಪರದಾಟ

    ಸಿಸಿಬಿ ಕಚೇರಿಯಲ್ಲೇ ರವಿ ಬೆಳಗೆರೆ 2ನೇ ದಿನದ ವಾಸ್ತವ್ಯ- ಕಾಲು ನೋವಿನಿಂದ ನಿದ್ದೆಬಾರದೆ ಪರದಾಟ

    ಬೆಂಗಳೂರು: ತನ್ನ ಸಹೋದ್ಯೋಗಿಯ ಹತ್ಯೆಗೆ ಸುಪಾರಿ ನೀಡಿದ್ದ ಆರೋಪದ ಮೇಲೆ ಹಾಯ್ ಬೆಂಗಳೂರು ಪತ್ರಿಕೆಯ ಸಂಪಾದಕ ರವಿ ಬೆಳಗೆರೆಯವರನ್ನು ಬಂಧಿಸಲಾಗಿದ್ದು, ಎರಡನೆಯ ದಿನವನ್ನೂ ಕೂಡ ಅವರು ಸಿಸಿಬಿ ಕಚೇರಿಯಲ್ಲೇ ಕಳೆದಿದ್ದಾರೆ.

    ಶನಿವಾರ ರಾತ್ರಿ 8:30ರ ಸುಮಾರಿಗೆ ರವಿ ಬೆಳೆಗೆರೆ ವಿಚಾರಣೆ ಮುಕ್ತಾಯವಾಗಿದೆ. ನಂತರ ಮನೆಯಿಂದ ತಂದ ಊಟ ಮಾಡಿ, ಕಚೇರಿಯಲ್ಲಿದ್ದ ಬೆಡ್‍ನಲ್ಲಿ ಮಲಗಿದ್ದಾರೆ. ಮಲಗುವ ಮುನ್ನ ಪೆನ್ನು, ಪೇಪರ್ ಪಡೆದು ಇಡೀ ದಿನ ಏನೇನು ನಡೆಯಿತ್ತು ಎಂಬುದರ ಬಗ್ಗೆ ಬರೆದಿದ್ದಾರೆ.

    ಇದನ್ನೂ ಓದಿ: ಸಿಸಿಬಿ ಕಸ್ಟಡಿಯಲ್ಲಿ ನಿದ್ದೆ ಬಾರದೇ ಮೊದಲ ರಾತ್ರಿ ಕಳೆದ ರವಿ ಬೆಳಗೆರೆ- ಪೇಪರ್ ನಲ್ಲಿ ಏನೇನೋ ಗೀಚಿದ್ರು

    ಕಾಲುನೋವಿನಿಂದ ನಿದ್ದೆ ಬಾರದೆ ಪರದಾಡಿದ ಬೆಳಗೆರೆ ಆಗಾಗ ಎದ್ದು ಸಿಗರೇಟ್ ಸೇದಿದ್ದರು. ಅಂತೆಯೇ ನಸುಕಿನ ಜಾವ ಸುಮಾರು 3 ಗಂಟೆ ಸುಮಾರಿಗೆ ನಿದ್ದೆಗೆ ಜಾರಿದ್ರು ಎಂದು ತಿಳಿದುಬಂದಿದೆ.  ಇದನ್ನೂ ಓದಿ: ಸಿಸಿಬಿ ಪೊಲೀಸರ ಮೊದಲ ಪ್ರಶ್ನೆ ಕೇಳಿ ಮಧ್ಯರಾತ್ರಿ ಬೆಚ್ಚಿಬಿದ್ದ ರವಿ ಬೆಳಗೆರೆ

    ಇಂದು 9 ಗಂಟೆಯ ಬಳಿಕ ಎಸಿಪಿ ಸುಬ್ರಮಣ್ಯ ನೇತೃತ್ವದಲ್ಲಿ ರವಿಬೆಳಗೆರೆ ವಿಚಾರಣೆ ನಡೆಯಲಿದೆ. ವಿಚಾರಣೆ ಬಳಿಕ ಸ್ಥಳ ಮಹಜರ್ ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ರವಿ ಬೆಳೆಗೆರೆ ಆರೋಗ್ಯದ ಸ್ಥಿತಿ ನೋಡಿಕೊಂಡು ಮಹಜರ್ ಮಾಡಲು ನಿರ್ಧಾರ ಮಾಡಿದ್ದಾರೆ. ರವಿ ಕಚೇರಿ, ಮನೆ ಮತ್ತು ಸುನೀಲ್ ಹೆಗ್ಗರವಳ್ಳಿ ಮನೆ ಬಳಿ ಮಹಜರ್ ಸಾಧ್ಯತೆ ಇದೆ ಎನ್ನಲಾಗಿದೆ.   ಇದನ್ನೂ ಓದಿ: ರವಿ ಬೆಳಗೆರೆಗೆ ಸಿಗರೇಟ್ ಕೊರತೆಯಂತೆ!

    ಇತ್ತ ಪತ್ರಿಕರ್ತ ಸುನೀಲ್ ಹೆಗ್ಗರವಳ್ಳಿ ಕೂಡ ಇಂದು ತನಿಖಾಧಿಕಾರಿಗಳ ಮುಂದೆ ಹಾಜರಾಗಲಿದ್ದು, ಪ್ರಕರಣ ಸಂಬಂಧ ಸಿಸಿಬಿ ಅಧಿಕಾರಿಗಳಿಗೆ ಹೇಳಿಕೆ ನೀಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

  • ಪತ್ರಕರ್ತ ರವಿ ಬೆಳಗೆರೆ ಬಂಧನ: ಬಿಗ್ ಬುಲೆಟಿನ್ ನಲ್ಲಿ `ಬಿಗ್’ ಚರ್ಚೆಯ ಸಂಪೂರ್ಣ ವರದಿ

    ಪತ್ರಕರ್ತ ರವಿ ಬೆಳಗೆರೆ ಬಂಧನ: ಬಿಗ್ ಬುಲೆಟಿನ್ ನಲ್ಲಿ `ಬಿಗ್’ ಚರ್ಚೆಯ ಸಂಪೂರ್ಣ ವರದಿ

    ಬೆಂಗಳೂರು: ಸುಮಾರು 14 ವರ್ಷ ಜೊತೆಗಿದ್ದ ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಅವರ ಕೊಲೆಗೆ ಸುಪಾರಿ ನೀಡಿದ ಆರೋಪದ ಮೇಲೆ ಪತ್ರಕರ್ತ ರವಿಬೆಳಗೆರೆಯನ್ನು ಪೊಲೀಸರು ಬಂಧಿಸಿದ್ದು. ಈ ಕುರಿತು ಶನಿವಾರದ ಬಿಗ್ ಬುಲೆಟಿನ್ ಕಾರ್ಯಕ್ರಮದಲ್ಲಿ ಖ್ಯಾತ ವಕೀಲ ಎಂಟಿ ನಾಣಯ್ಯ ಹಾಗೂ ಠಾಗೂರ್ ಜೊತೆ ನಡೆದ ಚರ್ಚೆಯ ಸಂಪೂರ್ಣ ವಿವರ ಇಲ್ಲಿದೆ.

    * ಅನುಮಾನ ಬಂದ ತಕ್ಷಣ ಬಂಧನ ಮಾಡ್ತಾರಾ? ಅಥವಾ ಅದಕ್ಕೆ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡು ಬಳಿಕ ಕ್ರಮ ಕೈಗೊಳ್ಳುತ್ತಾರಾ?
    ಅನುಮಾನ ಬಂದ ತಕ್ಷಣ ಓರ್ವ ವ್ಯಕ್ತಿಯನ್ನು ಬಂಧಿಸಲು ಸಾಧ್ಯವಾಗಲ್ಲ. ಯಾಕಂದ್ರೆ ಒಬ್ಬ ವ್ಯಕ್ತಿಯ ಮೇಲೆ ಅನುಮಾನ ಬಂದ್ರೆ ಅದು ಸ್ವಲ್ಪ ಮಟ್ಟಿಗಾದ್ರು ಸಾಕ್ಷಿಭೂತವಾಗಿರುತ್ತೆ. ವ್ಯಕ್ತಿಯಿಂದ ಇನ್ನೊಬ್ಬ ವ್ಯಕ್ತಿಗೆ ಭಾರೀ ದೊಡ್ಡ ಆಘಾತವಾಗುತ್ತೆ ಅಂತಂದ್ರೆ ಮಾತ್ರ ಆತನನ್ನು ಬಂಧಿಸಲಾಗುತ್ತೆ.

    ನಿಮಗೆ ಈ ಸುದ್ದಿ ಕೇಳಿ ಅಚ್ಚರಿಯಾಯ್ತಾ ಅಂತ ಠಾಗೋರ್ ಅವರನ್ನು ಕೇಳಿದಾಗ, ಅವರು ನನಗೆ ನಿಜಕ್ಕೂ ಇದೊಂದು ಅಚ್ಚರಿ ಅಂತ ಅನಿಸಿಲ್ಲ. ಯಾಕಂದ್ರೆ ನಾನು ಅವರನ್ನು ಕಿರಿತೆರೆಯಿಂದ, ಅವರು ಬರೆದ ಪುಸ್ತಕಗಳ ಹಾಗೂ ಕಪ್ಪು ಹಣದ ಬಗ್ಗೆ ಬರೆದ ಲೇಖನಗಳನ್ನು ನಾನು ಓದುತ್ತಾ ಬಂದಿದ್ದೇನೆ. ಅವರು ಬೆಳೆದು ಬಂತ ರೀತಿಯನ್ನು ನೋಡಿದ್ರೆ ಅಚ್ಚರಿ ಅನಿಸಲ್ಲ. ಅಧಿಕಾರ ಮತ್ತು ಹಣದ ಮದ ಏರಿದ ಯಾರಿಗೂ ತಮ್ಮ ಪೂರ್ವ ಜನ್ಮ ಸ್ಮರಣೆಯಿರುವುದಿಲ್ಲ. ಇವರು ಈ ಪತ್ರಿಕೆಯನ್ನು ಆರಂಭಿಸುವ ಸಮಯದಲ್ಲಿ ನಾನು ವಿಜಯಪುರದಲ್ಲಿ ಎಸ್‍ಪಿಯಾಗಿದ್ದೆ. ಆ ವೇಳೆ ನನ್ನ ಇನ್ನೊಬ್ಬ ಆತ್ಮೀಯ ಸಹೋದ್ಯೋಗಿ ಇವರನ್ನು ನನ್ನ ಬಳಿ ಕಳುಹಿಸಿಕೊಟ್ಟು, ಇವರೊಬ್ಬ ಒಳ್ಳೆಯ ಪತ್ರಕರ್ತ, ಸಾಹಿತಿ. ತುಂಬಾ ಚೆನ್ನಾಗಿ ಲೇಖನಗಳನ್ನು ಬರೆಯುತ್ತಾರೆ. ಸ್ವಲ್ಪ ಅವರಿಗೆ ಸಹಾಯ ಮಾಡಿ ಅಂತ ಹೇಳಿದ್ರು.

    ಈ ವೇಳೆ ನಾನು ಏನು ಸಹಾಯ ಮಾಡಲಿ ಅಂದಾಗ ಅವರು ಏನಿಲ್ಲಾ ಕೆಲವೊಂದು ಪ್ರಕರಣಗಳ ನೈಜತೆಯನ್ನು ಅವರಿಗೆ ಕೊಡಿ ಅಂತ ಹೇಳಿದ್ರು. ಅವಾಗ ನಾನು ತನಿಖೆಯಲ್ಲಿದ್ದರೆ ಅಂತಹ ವಿಷಯಗಳನ್ನು ಕೊಡಲು ಸಾಧ್ಯವಿಲ್ಲ. ತನಿಖೆ ಆದ ಬಳಿಕ ಚಾರ್ಜ್ ಶೀಟ್ ನಂತ್ರ ಪ್ರಕರಣಗಳ ವಿಷಯಗಳನ್ನು ಕೊಡಬಹುದು ಅಂತ ಹೇಳಿದ್ದೆ ಅಂತ ಅವರು ವಿವರಿಸಿದ್ರು.

    * ಕಾನೂನಾತ್ಮಕವಾಗಿ ಈ ಪ್ರಕರಣ ಗಟ್ಟಿಯಾಗಿದೆಯಾ?
    ಅವನೊಬ್ಬ ಹೇಳಿಕೆ ಕೊಟ್ಟ ಅಂತ ಪೊಲೀಸರು ರವಿಬೆಳಗೆರೆ ಅವರನ್ನು ಬಂಧಿಸಿದ್ದಾರೆ. ಅವರ ಕಚೇರಿಗೆ ಬಂದು ಅಲ್ಲಿ ಸಾಕಷ್ಟು ಆಯುಧಗಳು ಸಿಕ್ಕಿದ್ದವು. ಆದ್ರೆ ಒಬ್ಬ ಮಾಧ್ಯಮ ವ್ಯಕ್ತಿ ಅನಧಿಕೃತವಾಗಿ ಇಂತಹ ಆಯುಧಗಳನ್ನು ಇಟ್ಟುಕೊಳ್ಳುವ ಅವಶ್ಯಕತೆ ಇದೆಯಾ ಅಂತ ನಾಣಯ್ಯ ಪ್ರಶ್ನಿಸಿದ್ರು.

    * ಒಂದು ಗನ್ ಇಟ್ಕೊಂಡವನು 40-50 ಲೈವ್ ಕಾಟ್ರೆಜನ್ನು ಇಟ್ಟುಕೊಳ್ಳಲು ಅವಕಾಶವಿದೆಯಾ?
    ಇಲ್ಲ. ಯಾವುದೇ ಒಂದು ಆಯುಧ ಪರವಾನಿಗೆ ಕೊಡಬೇಕಾದ್ರೆ ಅವನಿಗಿರುವಂತಹ ಭಯ, ಹೆದರಿಕೆ ಅಥವಾ ಬೆದರಿಕೆಯ ಆಧಾರದ ಮೇಲೆ ಸಾಧರಣವಾಗಿ ಸುಮಾರು 20 ಗುಂಡುಗಳನ್ನು ಮಾತ್ರ ಇಟ್ಟುಕೊಳ್ಳಬಹುದು. ಅದರಕ್ಕಿಂದ ಜಾಸ್ತಿ ಅವಕಾಶವಿಲ್ಲ ಅಂತ ಠಾಕೋರ್ ಹೇಳಿದ್ರು.

    ಅಲ್ಲದೆ ಒಂದು ಆಯುಧಕ್ಕೆ ಮಾತ್ರ ಅವಕಾಶವಿದೆ ಹೊರತು ಎರಡೆರಡು ಆಯುಧಕ್ಕೆ ಯಾವತ್ತು ಅವಕಾಶ ಕೊಡಲ್ಲ. ಎರಡನೇ ಆಯುಧ ಡಬಲ್ ಬ್ಯಾರೆಲ್ ಗನ್ ಆಗಿರುತ್ತದೆ. ತುಂಬಾ ದೂರ ಪ್ರಯಾಣ ಮಾಡುವಾಗ ಸ್ವಯಂ ರಕ್ಷಣೆಗಾಗಿ ಮಾತ್ರ ಇದನ್ನು ಇಟ್ಟುಕೊಳ್ಳಬಹುದು. ಆದ್ರೆ 50 ಗುಂಡುಗಳನ್ನು ಇಟ್ಟುಕೊಂಡಿರುವುದು ದುರುದ್ದೇಶವೇ ಸರಿ ಅಂತ ಅವರು ವಿವರಿಸಿದ್ರು.

    ಕಾನೂನು ಬಾಹಿರವಾಗಿ ಆಯುಧಗಳು ಹಾಗೂ ಪ್ರಾಣಿಗಳ ಚರ್ಮಗಳನ್ನು ಇಟ್ಟುಕೊಂಡಿರುವುದು ಸರಿಯಲ್ಲ. ಅದಕ್ಕೆ ಅರಣ್ಯ ಇಲಾಖೆಯಿಂದ ಅನುಮತಿ ಪಡೆದುಕೊಳ್ಳಬೇಕು. ಸದ್ಯ ರವಿ ಬೆಳೆಗೆರೆ ವಿರುದ್ಧ ಐಪಿಸಿ ಸೆಕ್ಷನ್ 307 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ಬಂಧನ ಮಾಡಿದ 90 ದಿನದೊಳಗಡೆ ಚಾರ್ಜ್‍ಶೀಟ್ ಹಾಕ್ಬೇಕು ಅಂತ ವಕೀಲ ನಾಣಯ್ಯ ಹೇಳಿದ್ರು.

    ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ವೇಳೆ ವಿಶೇಷ ತನಿಖಾ ತಂಡ ಬೆಂಗಳೂರಿನಲ್ಲಿ ಸುಪಾರಿ ಕಿಲ್ಲರ್ ವಿಜಯಪುರದ ಚಡಚಣದ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಯನ್ನು ಶುಕ್ರವಾರ ಬಂಧಿಸಿತ್ತು. ಆತನ ವಿಚಾರಣೆ ವೇಳೆ ರವಿ ಬೆಳೆಗೆರೆಯವರು ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪತ್ರಕರ್ತ ರವಿ ಬೆಳಗೆರೆಯನ್ನು ಬಂಧಿಸಲಾಗಿತ್ತು.

    ರವಿ ಬೆಳಗೆರೆ ಎರಡನೇ ಪತ್ನಿ ಜತೆ ಹಾಯ್ ಬೆಂಗಳೂರು ಪತ್ರಿಕೆ ವರದಿಗಾರ ಸನೀಲ್ ಹೆಗ್ಗರವಳ್ಳಿ ಅಕ್ರಮ ಸಂಬಂಧದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸುನೀಲ್ ಹತ್ಯೆ ಮಾಡಲು ನಿರ್ಧರಿಸಿದ್ದ ಬೆಳಗೆರೆ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಗೆ 30 ಲಕ್ಷ ರುಪಾಯಿ ಸುಪಾರಿ ಕೊಟ್ಟಿದ್ದರು ಎಂಬುದಾಗಿ ತಿಳಿದುಬಂದಿತ್ತು.

    https://www.youtube.com/watch?v=3nx-qtIEjcg

     

  • ರವಿ ಬೆಳಗೆರೆಯನ್ನು ಯಾಕೆ ಬಂಧಿಸಿದ್ದಾರೆ?- ವರದಿಗಾರರಿಗೆ ಸಿಎಂ ಪ್ರಶ್ನೆ

    ರವಿ ಬೆಳಗೆರೆಯನ್ನು ಯಾಕೆ ಬಂಧಿಸಿದ್ದಾರೆ?- ವರದಿಗಾರರಿಗೆ ಸಿಎಂ ಪ್ರಶ್ನೆ

    ಮೈಸೂರು: ಹಾಯ್ ಬೆಂಗಳೂರು ಸಂಪಾದಕ ರವಿ ಬೆಳೆಗೆರೆ ಬಂಧನ ಕುರಿತಂತೆ ಪ್ರತಿಕ್ರಿಯೆ ನೀಡಲು ಕೇಳಿದಾಗ ಸಿಎಂ ಸಿದ್ದರಾಮಯ್ಯ, ಯಾವ ಕಾರಣಕ್ಕೆ ಬಂಧನ ಮಾಡಿದ್ದಾರೆ? ಅಂತ ಪ್ರಶ್ನಿಸಿದ್ದಾರೆ.

    ನಗರದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಕಾನೂನು ಪ್ರಕಾರ ತನಿಖೆ ಮಾಡ್ತಾರೆ. ನಮಗೂ ಅದಕ್ಕೂ ಸಂಬಂಧ ಇಲ್ಲ. ಅವರ ಬಳಿ ಸಾಕ್ಷಿ ಇದೆಯೋ ಏನೋ ಗೊತ್ತಿಲ್ಲ. ಮಾತಾಡಬೇಕು. ಪೊಲೀಸರು ನನ್ನೊಂದಿಗೆ ಮಾತಾಡಿಲ್ಲ ಅಂದ್ರು. ಇದನ್ನೂ ಓದಿ: Exclusive: ಮದ್ವೆ ಮನೆಯಲ್ಲಿ ಊಟ ಮಾಡಿ ಸಿಎಂ ಕೊಟ್ಟ ಆದೇಶದಿಂದ ಬೆಳಗೆರೆ ಅರೆಸ್ಟ್!

    ರವಿ ಬೆಳಗರೆ ಕರ್ನಾಟಕದ ಖ್ಯಾತ ಪತ್ರಕರ್ತರಾದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸುವುದು ಹೇಗೆ ಎಂದು ಪೊಲೀಸರು ಚಿಂತೆಯಲ್ಲಿದ್ದಾಗ ಸಿಎಂ ಸಿದ್ದರಾಮಯ್ಯ ಪೊಲೀಸರಿಗೆ ಸಂಪೂರ್ಣ ಬೆಂಬಲ ನೀಡಿದ್ದರು. ಸಿಎಂ ಬೆನ್ನಿಗೆ ನಿಲ್ಲದೇ ಇದ್ದಲ್ಲಿ ಬಂಧನ ಕಷ್ಟವಾಗುತಿತ್ತು ಎಂದು ಬೆಳಗೆರೆ ಬಂಧನವಾದ ಬಳಿಕ ಪೊಲೀಸ್ ಮೂಲಗಳು ಮಾಹಿತಿ ನೀಡಿದ್ದವು.  ಇದನ್ನೂ ಓದಿ: Exclusive: ರವಿಬೆಳಗೆರೆ ರಾಕ್ಷಸ, ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ: ಸುನೀಲ್ ಹೆಗ್ಗರವಳ್ಳಿ

    ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಆರಂಭದಲ್ಲಿ ನಾಡ ಪಿಸ್ತೂಲ್ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ತಾಹೀರ್ ಹುಸೇನ್ ಅನೂಪ್ ಗೌಡನನ್ನು ವಶಕ್ಕೆ ಪಡೆದಿದ್ದರು. ಯಲಹಂಕದಲ್ಲರುವ ಆತನ ಮನೆಯನ್ನು ಪರಿಶೀಲನೆ ನಡೆಸುತ್ತಿದ್ದಾಗ ಒನಿಡಾ ಟಿವಿಯ ಹಿಂದುಗಡೆ ಮೂರು ಪಿಸ್ತೂಲ್ ಇರುವುದನ್ನು ನೋಡಿ ಪೊಲೀಸರು ಒಮ್ಮೆ ಬೆಚ್ಚಿ ಬಿದ್ದಿದ್ದರು. ಬಳಿಕ ಆತನನ್ನು ವಿಚಾರಣೆ ನಡೆಸಿದಾಗ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿಯವರನ್ನು ಹತ್ಯೆ ಮಾಡಲು ರವಿ ಬೆಳೆಗೆರೆ 30 ಲಕ್ಷ ಸುಪಾರಿ ನಿಡಿರುವ ಬಗ್ಗೆ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ರವಿಬೆಳೆಗೆರೆಯನ್ನು ಪೊಲಿಸರು ಬಂಧಿಸಿದ್ದರು. ಇದನ್ನೂ ಓದಿ: ರವಿ ಬೆಳಗೆರೆ ಸುಪಾರಿ ಪ್ರಕರಣ: ಮಗಳು ಭಾವನಾ, ಮಗ ಕರ್ಣ ಹೀಗಂದ್ರು

    https://www.youtube.com/watch?v=gpHJrcsZuBM

    https://www.youtube.com/watch?v=kJ5uYUEgVeM

    https://www.youtube.com/watch?v=lgEoaxQ1l44

    https://www.youtube.com/watch?v=tvAkOpM6ZZo

    https://www.youtube.com/watch?v=p0Orve2DpiM

    https://www.youtube.com/watch?v=ucQolRekyhU

     

  • ಪತ್ರಕರ್ತ ರವಿಬೆಳಗೆರೆ ಬಂಧನ- ಸಂಸದ ಪ್ರಹ್ಲಾದ್ ಜೋಷಿ ಹೀಗಂದ್ರು

    ಪತ್ರಕರ್ತ ರವಿಬೆಳಗೆರೆ ಬಂಧನ- ಸಂಸದ ಪ್ರಹ್ಲಾದ್ ಜೋಷಿ ಹೀಗಂದ್ರು

    ಹುಬ್ಬಳ್ಳಿ: ಕಾಲವೇ ಎಲ್ಲದಕ್ಕೂ ಉತ್ತರ ನೀಡುತ್ತೆ. ಯಾರು ಎಂಥವರು ಎಂಬುದನ್ನು ಕಾಲ ನಿರ್ಧಾರ ಮಾಡುತ್ತೆ ಅಂತ ಸಂಸದ ಪ್ರಹ್ಲಾದ್ ಜೋಷಿ ಹೇಳಿಕೆ ನೀಡಿದ್ದಾರೆ.

    ಪತ್ರಕರ್ತ ರವಿ ಬೆಳಗೆರೆ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ತಾನೊಬ್ಬನೇ ಸತ್ಯವಂತ ಎನ್ನುವ ಹಾಗೆ ರವಿ ಬೆಳಗೆರೆ ಇದ್ದರು. ತಾನೊಬ್ಬನೇ ಸಾಚಾ.. ಉಳಿದವರೆಲ್ಲಾ ಚಾರಿತ್ರ್ಯಹೀನರು ಅನ್ನೋ ರೀತಿಯಲ್ಲಿ ಜೀವನ ಮಾಡುತ್ತಿದ್ದರು ಅಂದರು.  ಇದನ್ನೂ ಓದಿ: ಸಿಸಿಬಿ ಕಸ್ಟಡಿಯಲ್ಲಿ ಮೊದಲ ರಾತ್ರಿ ಕಳೆದ ರವಿ ಬೆಳಗೆರೆ- ನಿದ್ದೆ ಬಾರದೇ ಪೇಪರ್ ನಲ್ಲಿ ಗೀಚಿದ್ರು

    ಪ್ರಕರಣದಲ್ಲಿ ಬೆಳಗೆರೆ ಸಿಲುಕಿದ್ದಾರೆ ಎಂದು ಈ ಮಾತು ಹೇಳುತ್ತಿಲ್ಲ. ಯಾರನ್ನಾದರೂ ದೈಹಿಕವಾಗಿ ಮುಗಿಸುತ್ತೇನೆ ಎಂಬುದು ಸರಿಯಲ್ಲ ಅಂತ ಜೋಷಿ ಹೇಳಿದ್ರು.

    ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ವೇಳೆ ವಿಶೇಷ ತನಿಖಾ ತಂಡ ಬೆಂಗಳೂರಿನಲ್ಲಿ ಸುಪಾರಿ ಕಿಲ್ಲರ್ ವಿಜಯಪುರದ ಚಡಚಣದ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಯನ್ನು ಶುಕ್ರವಾರ ಬಂಧಿಸಿತ್ತು. ಆತನ ವಿಚಾರಣೆ ವೇಳೆ ರವಿ ಬೆಳೆಗೆರೆಯವರು ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪತ್ರಕರ್ತ ರವಿ ಬೆಳಗೆರೆಯನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಕಮಿಷನರ್ ಹೇಳಿಕೆಗೂ, ಎಫ್‍ಐಆರ್ ಅಂಶಗಳಿಗೂ ವ್ಯತ್ಯಾಸವಿದೆ- ರವಿ ಪರ ವಕೀಲ ದಿವಾಕರ್ ಹೇಳಿಕೆ

    ರವಿ ಬೆಳಗೆರೆ ಎರಡನೇ ಪತ್ನಿ ಜತೆ ಹಾಯ್ ಬೆಂಗಳೂರು ಪತ್ರಿಕೆ ವರದಿಗಾರ ಸನೀಲ್ ಹೆಗ್ಗರವಳ್ಳಿ ಅಕ್ರಮ ಸಂಬಂಧದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸುನೀಲ್ ಹತ್ಯೆ ಮಾಡಲು ನಿರ್ಧರಿಸಿದ್ದ ಬೆಳಗೆರೆ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಗೆ 30 ಲಕ್ಷ ರುಪಾಯಿ ಸುಪಾರಿ ಕೊಟ್ಟಿದ್ದರು ಎಂಬುದಾಗಿ ತಿಳಿದುಬಂದಿತ್ತು.  ಇದನ್ನೂ ಓದಿ: ರವಿ ಬೆಳಗೆರೆ ಸುಪಾರಿ ಪ್ರಕರಣ: ಮಗಳು ಭಾವನಾ, ಮಗ ಕರ್ಣ ಹೀಗಂದ್ರು

    https://www.youtube.com/watch?v=86k-IW3-boE

    https://www.youtube.com/watch?v=kJ5uYUEgVeM

    https://www.youtube.com/watch?v=tvAkOpM6ZZo

    https://www.youtube.com/watch?v=lgEoaxQ1l44

    https://www.youtube.com/watch?v=bwXnj2XMWag

  • ಕಮಿಷನರ್ ಹೇಳಿಕೆಗೂ, ಎಫ್‍ಐಆರ್ ಅಂಶಗಳಿಗೂ ವ್ಯತ್ಯಾಸವಿದೆ- ರವಿ ಪರ ವಕೀಲ ದಿವಾಕರ್ ಹೇಳಿಕೆ

    ಕಮಿಷನರ್ ಹೇಳಿಕೆಗೂ, ಎಫ್‍ಐಆರ್ ಅಂಶಗಳಿಗೂ ವ್ಯತ್ಯಾಸವಿದೆ- ರವಿ ಪರ ವಕೀಲ ದಿವಾಕರ್ ಹೇಳಿಕೆ

    ಬೆಂಗಳೂರು: ಸಹೋದ್ಯೋಗಿ ಹತ್ಯೆಗೆ ಸುಪಾರಿ ನೀಡಿರುವ ಆರೋಪದ ಮೇಲೆ ಪತ್ರಕರ್ತ ರವಿ ಬೆಳಗೆರೆ ಬಂಧನವಾಗಿದ್ದು, ಈ ಪ್ರಕರಣ ಸಂಬಂಧ ಕಾನೂನು ಹೋರಾಟ ನಡೆಸಲಾಗುವುದು ಎಂದು ರವಿ ಬೆಳೆಗೆರೆ ಪರ ವಕೀಲ ದಿವಾಕರ್ ತಿಳಿಸಿದ್ದಾರೆ.

    ಪ್ರಕರಣ ಸಂಬಂಧ ಪೊಲೀಸ್ ಕಮಿಷನರ್ ಸುನಿಲ್ ಕುಮಾರ್ ಹೇಳಿಕೆಗೂ, ಎಫ್‍ಐಆರ್‍ನಲ್ಲಿ ದಾಖಲಾಗಿರುವ ಅಂಶಗಳಿಗೂ ಭಿನ್ನತೆಯಿದೆ. ವ್ಯತಿರಿಕ್ತ ಅಂಶಗಳು ಕಂಡು ಬಂದಿವೆ. ಹೀಗಾಗಿ ಇದೇ ವಿಚಾರವಾಗಿ ಕಾನೂನು ಹೋರಾಟ ನಡಸಲಾಗುವುದು ಎಂದು ವಕೀಲರು ತಿಳಿಸಿದ್ದಾರೆ.

    ಬೆಳಗೆರೆಯನ್ನು ಕೋರ್ಟ್ ಸಿಸಿಬಿ ಕಸ್ಟಡಿಗೆ ನೀಡಿದ ಬಳಿಕ ಮಾತನಾಡಿದ ಅವರು, ಬೆಳೆಗೆರೆ ಮೇಲೆ ಕೊಲೆ ಯತ್ನ ಪ್ರಕರಣ ದಾಖಲಾಗಿರುವುದರಿಂದ ಜಾಮೀನು ಅರ್ಜಿ ವಿಚಾರಣೆ ಎಸಿಎಂಎಂ ನ್ಯಾಯಾಧೀಶರ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ಸೆಷನ್ಸ್ ನ್ಯಾಯಾಲಯದಲ್ಲಿ ಸೋಮವಾರ ಜಾಮೀನು ಅರ್ಜಿ ಸಲ್ಲಿಸುತ್ತೇವೆ ಅಂದ್ರು.

    ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಬೆಳೆಗೆರೆಗೆ ಅಗತ್ಯವಿದ್ದಲ್ಲಿ ವೈದ್ಯಕೀಯ ನೆರವು ನೀಡುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ. ಅದೇ ರೀತಿ ಯಾವುದೇ ರೀತಿಯ ತೊಂದರೆ ನೀಡದಂತೆಯೂ ಆದೇಶ ನೀಡಲಾಗಿದೆ ಎಂದು ತಿಳಿಸಿದ್ರು.

    ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪದಲ್ಲಿ ರವಿ ಬೆಳಗೆರೆ ಅವರನ್ನು ಬಂಧಿಸಲಾಗಿದೆ ಎಂದು ಪಬ್ಲಿಕ್ ಟಿವಿಗೆ ಸಿಸಿಬಿ ಮುಖ್ಯಸ್ಥ ಸತೀಶ್ ಕುಮಾರ್ ತಿಳಿಸಿದ್ದಾರೆ. ಶಶಿಧರ್ ಮುಂಡೇವಾಡಿ ಸ್ನೇಹಿತರಿಗೆ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ನೀಡಿದ ಆರೋಪದಲ್ಲಿ ರವಿ ಬೆಳಗೆರೆ ಅವರನ್ನು ಬಂಧಿಸಲಾಗಿದೆ.

    ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ವೇಳೆ ವಿಶೇಷ ತನಿಖಾ ತಂಡ ಬೆಂಗಳೂರಿನಲ್ಲಿ ಸುಪಾರಿ ಕಿಲ್ಲರ್ ವಿಜಯಪುರದ ಚಡಚಣದ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಯನ್ನು ಶುಕ್ರವಾರ ಬಂಧಿಸಿತ್ತು. ಆತನ ವಿಚಾರಣೆ ವೇಳೆ ರವಿ ಬೆಳೆಗೆರೆಯವರು ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪತ್ರಕರ್ತ ರವಿ ಬೆಳಗೆರೆಯನ್ನು ಬಂಧಿಸಲಾಗಿತ್ತು.

    ರವಿ ಬೆಳಗೆರೆ ಎರಡನೇ ಪತ್ನಿ ಜತೆ ಹಾಯ್ ಬೆಂಗಳೂರು ಪತ್ರಿಕೆ ವರದಿಗಾರ ಸನೀಲ್ ಹೆಗ್ಗರವಳ್ಳಿ ಅಕ್ರಮ ಸಂಬಂಧದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸುನೀಲ್ ಹತ್ಯೆ ಮಾಡಲು ನಿರ್ಧರಿಸಿದ್ದ ಬೆಳಗೆರೆ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಗೆ 30 ಲಕ್ಷ ರುಪಾಯಿ ಸುಪಾರಿ ಕೊಟ್ಟಿದ್ದರು ಎಂಬುದಾಗಿ ತಿಳಿದುಬಂದಿತ್ತು.

    https://www.youtube.com/watch?v=lgEoaxQ1l44

    https://www.youtube.com/watch?v=tvAkOpM6ZZo

    https://www.youtube.com/watch?v=kJ5uYUEgVeM

    https://www.youtube.com/watch?v=rgZqwcCWW3w

    https://www.youtube.com/watch?v=qGy8AT5j-zQ

  • Exclusive: ರವಿಬೆಳಗೆರೆ ರಾಕ್ಷಸ, ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ: ಸುನೀಲ್ ಹೆಗ್ಗರವಳ್ಳಿ

    Exclusive: ರವಿಬೆಳಗೆರೆ ರಾಕ್ಷಸ, ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ: ಸುನೀಲ್ ಹೆಗ್ಗರವಳ್ಳಿ

    ಬೆಂಗಳೂರು: ರಾಕ್ಷಸ ರವಿಬೆಳಗೆರೆ ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ, ಈ ಕುರಿತು ತನಿಖೆ ನಡೆಸಿ ಶಿಕ್ಷೆ ನೀಡಬೇಕು ಎಂದು ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹೇಳಿದ್ದಾರೆ.

    ತನ್ನ ಹತ್ಯೆಗೆ ಸುಪಾರಿ ನೀಡಿ ಬಂಧನವಾಗಿರುವ ರವಿ ಬೆಳಗೆರೆ ಅವರ ಕುರಿತು ಅವರು ಪಬ್ಲಿಕ್ ಟಿವಿ ಗೆ ಪ್ರತಿಕ್ರಿಯೆ ನೀಡಿ, ರವಿ ಬೆಳಗೆರೆ ಅವರ ವಿರುದ್ಧ ನಾನು ಯಾವುದೇ ದೂರು ನೀಡಿಲ್ಲ. ಸಿಸಿಬಿ ಮತ್ತು ಎಸ್‍ಐಟಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದು, ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. 

    ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ತನಿಖೆ ವೇಳೆ ಕೆಲವರನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ನನ್ನನ್ನು ಕೊಲೆ ಮಾಡಲು ರವಿಬೆಳಗೆರೆಯಿಂದ ಸುಪಾರಿ ಪಡೆದಿರುವ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾರೆ. ಈ ವಿಚಾರ ನನಗೂ ತಿಳಿದಿರಲಿಲ್ಲ. ಇಂದು ಬೆಳಗ್ಗೆ ಪೊಲೀಸರು ಬಂಧನ ನಡೆಸಿದ ಸಂದರ್ಭದಲ್ಲಿ ತಿಳಿಯಿತು ಎಂದರು.

    ಸುಪಾರಿ ನೀಡಿರುವ ಬಗ್ಗೆ ಕೇಳಿ ನನಗೂ ಶಾಕ್ ಆಗಿದ್ದು, ನನ್ನ ಹಾಗೂ ರವಿಬೆಳಗೆರೆ ಅವರ ಸಂಬಂಧ ಸುಮಾರು 14 ವರ್ಷಗಳದ್ದು, ನಿರಂತರವಾಗಿ 14 ವರ್ಷ ಅವರ ಬಳಿ ಕೆಲಸ ಮಾಡಿದ್ದೇನೆ. ಅಲ್ಲದೇ ಅವರಿಗೆ ಎಂದು ಅಸಮಾಧಾನ ಬಾರದ ಹಾಗೇ ಕೆಲಸ ಮಾಡಿದ್ದೇನೆ. ಈಗಿದ್ದು ನನ್ನ ವಿರುದ್ಧ ಸುಪಾರಿ ನೀಡುವ ಸುದ್ದಿ ಕೇಳಿ ಅಶ್ಚರ್ಯ ಹಾಗೂ ಅತಂಕವಾಗುತ್ತಿದೆ ಎಂದು ಹೇಳಿದರು.

    ಹಾಯ್ ಬೆಂಗಳೂರು ಬಿಟ್ಟಿದ್ದು ಯಾಕೆ?
    ನನ್ನ ಅವರ ಮಧ್ಯೆ ಯಾವುದೇ ವೈಯಕ್ತಿಕ ಜಗಳವಿಲ್ಲ. 2014 ಡಿಸೆಂಬರ್ ನಲ್ಲಿ ನಾನು ಅವರ ಬಳಿ ಕೆಲಸ ಬಿಟ್ಟೆ. 14 ವರ್ಷದ ಅವಧಿಯಲ್ಲಿ ನನ್ನ ಹಾಗೂ ನನ್ನ ವರದಿಗಳ ಬಗ್ಗೆ ಯಾವುದೇ ಅನುಮಾನ ವ್ಯಕ್ತವಾಗಿರಲಿಲ್ಲ. ಯಾವುದೇ ವ್ಯಕ್ತಿಯನ್ನು ಬ್ಲಾಕ್ ಮೇಲ್ ಮಾಡದೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಆದರೆ 2014ರಲ್ಲಿ ಅವರು ನನ್ನ ಬಗ್ಗೆ ಸಂಶಯ ವ್ಯಕ್ತಪಡಿಸಲು ಆರಂಭಮಾಡಿದರು. ಹೀಗಾಗಿ ನಂಬಿಕೆ ಇಲ್ಲದ ಜಾಗದಲ್ಲಿ ಕಾರ್ಯನಿರ್ವಹಿಸಬಾರದು ಎಂಬ ಕಾರಣಕ್ಕೆ ಕೆಲಸ ಬಿಟ್ಟೆ ಎಂದು ತಿಳಿಸಿದರು. ಇದನ್ನೂ ಓದಿ: ಗಂಡ ರಣಭೂಮಿಯಲ್ಲಿ ಇರುವಾಗ ಶತ್ರುವಿನ ತೊಡೆ ಮೇಲೆ ಕುಳಿತರೆ ಅದು ಪಾತಿವ್ರತ್ಯೆಯೇ: ಬೆಳಗೆರೆ ಪೋಸ್ಟ್ ಸುತ್ತ ಅನುಮಾನದ ಹುತ್ತ

    ಈ ಹಿಂದೆ ಪ್ಲಾನ್ ಮಾಡಲಾಗಿತ್ತಾ?
    ಈ ಹಿಂದೆ ತಮ್ಮ ಮೇಲೆ ನಡೆದ ದಾಳಿ ಕುರಿತು ಪ್ಲಾನ್ ಮಾಡಲಾಗಿತ್ತು ಎಂದು ಸಿಸಿಬಿ ಪೊಲೀಸರ ಮಾಹಿತಿ ಕುರಿತು ಪ್ರತಿಕ್ರಿಯಿಸಿದ ಅವರು, ಈ ಕುರಿತು ನನಗೆ ಎಂದು ಸಂಶಯ ಉಂಟಾಗಿರಲಿಲ್ಲ, ಆದರೆ ಪೊಲೀಸ್ ಮಾಹಿತಿ ಪಡೆದ ನಂತರ ನನ್ನ ಜೀವನದಲ್ಲಿ ನಡೆದ ಘಟನೆಗಳನ್ನು ನೆನಪಿಸಿ ಕೊಂಡರೆ ಹೌದು ಎನ್ನುವ ಭಾವನೆ ಬರುತ್ತಿದೆ. 2014 ಡಿಸೆಂಬರ್ 20, ಶನಿವಾರ ರವಿಬೆಳಗೆರೆ ಅವರು ನನಗೆ ಪದೆ ಪದೆ ಕರೆಮಾಡಿ ಚಾನಲ್‍ಗೆ ಬಂಡವಾಳ ಹೂಡಲು ಕೆಲವರು ಬರುತ್ತಿದ್ದಾರೆ. ನಿನ್ನ ಬಳಿ ಮಾತನಾಡಬೇಕು ಬಾ ಎಂದು ಕರೆದರು. ಆದರೆ ನಾನು ಅಂದು ತಡವಾಗಿ ಕಚೇರಿ ಬಳಿ ತೆರಳಿದೆ, ಆ ವೇಳೆಗೆ ಕ್ರಿಮಿನಲ್ ಹಿನ್ನೆಲೆಯುಳ್ಳ ಹಲವರು ಅಲ್ಲಿಗೆ ಬಂದಿದ್ದರು. ಆದರೆ ಕಚೇರಿಯಲ್ಲಿ ನೋಡಿದರೆ ಯಾರು ಇರಲಿಲ್ಲ. ಆಗ ನಾನು ಅವರ ಬಳಿ ಬಂಡವಾಳ ಹೂಡುವ ವ್ಯಕ್ತಿಗಳ ಬಗ್ಗೆ ಕೇಳಿದೆ, ಆದರೆ ಈ ಬಗ್ಗೆ ಮಾತನಾಡದೆ ಬೇರೆ ವಿಷಯ ಕುರಿತು ಮಾತನಾಡಿದರು. ಅಂದು ಅನುಮಾನಗೊಂಡು ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಮಾಹಿತಿ ಪಡೆದೆ. ಅವರು ಸಹ ಅನುಮಾನ ವ್ಯಕ್ತಪಡಿಸಿ ನನ್ನನ್ನು ಅಲ್ಲಿಂದ ಹೊರಡುವಂತೆ ಸೂಚಿಸಿದರು. ತಕ್ಷಣ ನಾನು ಅಲ್ಲಿಂದ ನಾನು ಬೇರೆ ಕಡೆ ತೆರಳಿ ಕೆಲಸ ಬಿಡುವ ನಿರ್ಧಾರ ಮಾಡಿದೆ ಎಂದು ವಿವರಿಸಿದರು.

    ವಿಳಾಸ ತಿಳಿಯಲು ಕೊರಿಯರ್ ನೆಪ:
    ಕಳೆದ ಆಗಸ್ಟ್ 28 ರಂದು ನನ್ನ ಮನೆ ಬಳಿ ಆರೋಪಿ ಶಶಿ ಓಡಾಡುವುದನ್ನು ಗಮನಿಸಿದ್ದೇನೆ, ಆತನು ಅಲ್ಲಿಯೇ ಒಂದು ವರ್ಷ ಕೆಲಸ ಮಾಡಿದ್ದ. ಈ ವೇಳೆ ಆತನ ಹಿನ್ನೆಲೆ ತಿಳಿದಿತ್ತು. ನಾನು ಉತ್ತರ ಹಳ್ಳಿ ಬಳಿ ವಾಸಿಸುತ್ತಿದ್ದೆ, ನಂತರ ಕಳೆದ ವರ್ಷ ನನ್ನ ಮಗನ ಶಾಲೆಯ ವಿಚಾರವಾಗಿ ಮಲ್ಲೇಶ್ವರಂ ಬಳಿ ಮನೆ ಬದಲಾಯಿಸಿದೆ. ನಂತರ ವಸಂತಪುರಕ್ಕೆ ಬಂದೆ ಈ ವೇಳೆ ನನಗೆ ಕೊರಿಯರ್ ಅಫೀಸ್ ನಿಂದ ಕರೆ ಬಂತು. ಆಗ ಕೆಲವು ಪುಸ್ತಕ ನೀಡಬೇಕಿದೆ ಎಂದು ನನ್ನ ವಿಳಾಸ ಪಡೆದರು. ಅಂದು ಬಂದ ಪುಸ್ತಕದಲ್ಲಿ ಬಿ.ಎಚ್ ರಾಘವೇಂದ್ರ ಬರೆದ ಪುಸ್ತಕವು ಇತ್ತು, ರಾಘವೇಂದ್ರ ಅವರು ರವಿಬೆಳಗೆರೆ ಅವರ ಆಪ್ತ ಗೆಳೆಯರು. ಇದರಿಂದ ಅನುಮಾನಗೊಂಡು ರವಿಬೆಳಗೆರೆ ಅವರಿಗೆ ಕರೆ ಮಾಡಿ ಈ ಕುರಿತು ವಿಚಾರಿಸಿದೆ. ಆದರೆ ಅವರು ಪುಸ್ತಕ ಕಳುಹಿಸಿಲ್ಲ ಎಂದು ಹೇಳಿದರು. ನಂತರ ಕೊರಿಯರ್ ನಿಂದ ಬಂದ ಕರೆ ಆಧಾರಿಸಿ ನಾನು ಪರಿಶೀಲಿಸಲು ಮುಂದಾದಾಗ ಅದು ಹಾಯ್ ಬೆಂಗಳೂರು ಪತ್ರಿಕೆಯಲ್ಲಿ 10 ವರ್ಷಗಳ ಕಾಲ ಕೊರಿಯರ್ ಸೇವೆ ಮಾಡುತ್ತಿದ್ದ ಮಂಜುವಿನ ನಂಬರ್ ಎಂದು ತಿಳಿಯಿತು. ಆಗ ನಾನು ಆತನನ್ನು ವಿಚಾರಿಸಿದಾಗ ಮಹಿಳೆಯೊಬ್ಬರು ಬಂದು ಕೊಟ್ಟರು ಎಂದು ತಿಳಿಸಿದ. ಆಗ ನನಗೆ ಆತ ಸುಳ್ಳು ಹೇಳುತ್ತಿರುವ ಕುರಿತು ಮನವರಿಕೆ ಆಯ್ತು, ನನ್ನ ಮನೆ ವಿಳಾಸ ತಿಳಿಯಲು ಮಾಡಿದ ತಂತ್ರ ಎಂದು ಅರಿವಾಯಿತು ಎಂದರು.

    ಆದರೂ ನಾನು ಏನು ತಪ್ಪು ಮಾಡಿಲ್ಲ ಎಂಬ ಧೈರ್ಯದ ಮೇಲೆ ಸುಮ್ಮನಾದೆ, ಸುಪಾರಿ ಕೊಟ್ಟಿರುವ ಕುರಿತು ಎಲ್ಲೂ ಸುಳಿವು ನನಗೆ ಸಿಗಲಿಲ್ಲ. ಇಲ್ಲವಾದರೆ ಅಂದೇ ರವಿಬೆಳಗೆರೆ ಅವರು ಜೈಲು ಸೇರುತ್ತಿದ್ದರು, ಎಸ್‍ಐಟಿ ಅಧಿಕಾರಿಗಳ ಕಾರ್ಯ ಮೆಚ್ಚುವಂತದ್ದು, ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯಾದೇ ಕಾರ್ಯನಿರ್ವಹಿಸಿದ್ದಾರೆ. ಆದರೆ ಒಬ್ಬ ರಾಕ್ಷಸ ರವಿಬೆಳಗೆರೆ ಬಳಿ 14 ವರ್ಷದ ಕೆಲಸ ಮಾಡಿದ ನಂತರವು ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ, ಈ ಕುರಿತು ತನಿಖೆ ನಡೆಸಿ ಶಿಕ್ಷೆ ನೀಡಬೇಕಿದೆ ಎಂದರು.

    ಇದನ್ನೂ ಓದಿ: ಯಾಕ್ ನೀವ್ ರಿಸ್ಕ್ ತೆಗೆದುಕೊಳ್ತೀರಿ: ಪೊಲೀಸರಿಗೆ ರವಿ ಬೆಳಗೆರೆ ಬುದ್ಧಿವಾದ

    https://www.youtube.com/watch?v=tvAkOpM6ZZo

     

     

  • ರವಿ ಬೆಳಗೆರೆ ಹೆಸರನ್ನ ಸುಪಾರಿ ಹಂತಕ ಬಾಯ್ಬಿಟ್ಟಿದ್ದು ಹೇಗೆ? ಬೆಳಗೆರೆ ಕಚೇರಿಯಲ್ಲಿ ಏನು ಸಿಕ್ಕಿದೆ?

    ರವಿ ಬೆಳಗೆರೆ ಹೆಸರನ್ನ ಸುಪಾರಿ ಹಂತಕ ಬಾಯ್ಬಿಟ್ಟಿದ್ದು ಹೇಗೆ? ಬೆಳಗೆರೆ ಕಚೇರಿಯಲ್ಲಿ ಏನು ಸಿಕ್ಕಿದೆ?

    ಬೆಂಗಳೂರು: ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸಂಚು ರೂಪಿಸಿದ ಆರೋಪದ ಮೇಲೆ ಹಿರಿಯ ಪತ್ರಕರ್ತ ರವಿಬೆಳಗೆರೆ ಮತ್ತು ಸುಪಾರಿ ಕಿಲ್ಲರ್‍ಗಳ ಬಂಧನವಾಗಿದೆ.

    ಡಿಸೆಂಬರ್ 3ರಂದು ಬೆಂಗಳೂರು ನಗರ ಸಿಸಿಬಿ ಪೊಲೀಸ್ ಅಧಿಕಾರಿಗಳು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ನಾಡ ಪಿಸ್ತೂಲ್ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ತಾಹೀರ್ ಹುಸೇನ್ ಅನೂಪ್ ಗೌಡ ಎಂಬಾತನನ್ನು ಬಂಧಿಸಿದ್ದರು. ಈತನನ್ನು ಪೊಲೀಸ್ ಬಂಧನಕ್ಕೆ ಪಡೆದು ಹೆಚ್ಚಿನ ವಿಚಾರಣೆ ಮಾಡಿದಾಗ ವಿಜಯಪುರ ಜಿಲ್ಲೆಯ ಶಶಿಧರ್ ರಾಮಚಂದ್ರ ಮುಂಡೆವಾಡಿ ಎಂಬಾತ ಮತ್ತೊಂದು ನಾಡ ಪಿಸ್ತೂಲ್ ಮತ್ತು 02 ಜೀವಂತ ಗುಂಡುಗಳನ್ನು ಪಡೆದುಕೊಂಡಿದ್ದನೆಂದು ತಿಳಿಸಿದ್ದ.

    ನಂತರ ಅಕ್ರಮ ಪಿಸ್ತೂಲ್ ಹೊಂದಿದ್ದ ಜಾಲವನ್ನು ಬೆನ್ನಟ್ಟಿದ್ದ ಸಿಸಿಬಿ ಅಧಿಕಾರಿಗಳು ಡಿಸೆಂಬರ್ 07ರಂದು ರಾತ್ರಿ 11.15 ರ ಸಮಯಕ್ಕೆ ಶಶಿಧರ್ ರಾಮಚಂದ್ರ ಮುಂಡೆವಾಡಿಯನ್ನು ಪತ್ತೆ ಮಾಡಿ ಬಂಧಿಸಿದ್ದರು.ಶಶಿಧರ್ ರಾಮಚಂದ್ರ ಮುಂಡೆವಾಡಿನನ್ನು ಕೂಲಂಕುಶವಾಗಿ ವಿಚಾರಣೆ ಮಾಡಿದಾಗ ಹಾಯ್ ಬೆಂಗಳೂರ್ ಪತ್ರಿಕೆಯ ಸಂಸ್ಥಾಪಕರಾದ ರವಿ ಬೆಳಗೆರೆ ನೀಡಿದ ಸುಪಾರಿಯ ಬಗ್ಗೆ ಬಾಯ್ಬಿಟ್ಟಿದ್ದಾನೆ.

    ಹೇಳಿದ್ದು ಏನು?: ಸುಪಾರಿ ಮೇರೆಗೆ ಆಗಸ್ಟ್ 28ರಂದು ನಾನು ನನ್ನ ಸಹಚರ ವಿಜು ಬಡಿಗೇರ್ ಜೊತೆಯಲ್ಲಿ ರವಿಬೆಳಗೆರೆ ಕಚೇರಿಗೆ ಬಂದಿದ್ದೆ. ಅದೇ ದಿನ ರವಿ ಬೆಳಗೆರೆ ಶಶಿಧರ್‍ಗೆ ಒಂದು ಗನ್ ಮತ್ತು 04 ಜೀವಂತ ಗುಂಡುಗಳನ್ನು ಹಾಗೂ 01 ಚಾಕುವನ್ನು ನೀಡಿದ್ದರು. ವೈಯಕ್ತಿಕ ವೈಷಮ್ಯದಿಂದಾಗಿ ತನಗೆ ದ್ರೋಹ ಬಗೆದಿರುವ, ಈ ಹಿಂದೆ ತನ್ನ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸುನೀಲ್ ಹೆಗ್ಗರವಳ್ಳಿಯನ್ನು ಕೊಲೆ ಮಾಡು. ನಿನಗೆ ಎಷ್ಟು ಬೇಕೋ ಅಷ್ಟು ಹಣ ಕೊಡುತ್ತೇನೆಂದು ಹೇಳಿದರು. ಸುಪಾರಿಗಾಗಿ ಮುಂಗಡವಾಗಿ 15,000 ರೂ. ನೀಡಿದ್ದರು.

    ಸಂಚು ಹೀಗಿತ್ತು: ರವಿ ಬೆಳಗೆರೆ ಕಚೇರಿಯ ಒಬ್ಬ ಹುಡುಗ ಶಶಿಧರ್ ಮತ್ತು ವಿಜು ಬಡಿಗೇರ್ ಗೆ ಉತ್ತರಹಳ್ಳಿಯಲ್ಲಿರುವ ಸುನೀಲ್ ಹೆಗ್ಗರವಳ್ಳಿಯ ಮನೆಯನ್ನು ತೋರಿಸಿಕೊಟ್ಟಿದ್ದರು. ನಂತರ ಶಶಿಧರ್ ಮತ್ತು ವಿಜು ಬಡಿಗೇರ್ ಸುನೀಲ್ ಹೆಗ್ಗರವಳ್ಳಿಯನ್ನು ಗನ್‍ನಿಂದ ಶೂಟ್ ಮಾಡಿ ಕೊಲೆ ಮಾಡಲು ಮನೆಯ ಬಳಿ ಕಾಯುತ್ತಿದ್ದರು. ಮನೆಯಿಂದ ಹೊರಬಂದ ಸುನೀಲ್ ಹೆಗ್ಗರವಳ್ಳಿಯನ್ನು ಶೂಟ್ ಮಾಡಲು ಶಶಿಧರ್ ರಾಮಚಂದ್ರ ಮುಂಡೆವಾಡಿ ಗುರಿ ಇಟ್ಟಿದ್ದ. ಆಗ ಸುನೀಲ್ ಮರೆಯಾಗಿ ಸರಿಯಾದ ಸಮಯ ದೊರೆಯದ ಕಾರಣ ಆರೋಪಿ ಶಶಿಧರ್ ರವಿ ಬೆಳಗೆರೆಗೆ ಗನ್ ಹಾಗು ಗುಂಡುಗಳನ್ನು ವಾಪಸ್ ನೀಡಿ ಒಂದು ತಿಂಗಳು ಬಿಟ್ಟು ಬಂದು ಕೆಲಸ ಮುಗಿಸಿಕೊಡುವುದಾಗಿ ತಿಳಿಸಿ ವಾಪಸ್ ಊರಿಗೆ ಹೋಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಸಂಚಿನ ಬಗ್ಗೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಐ.ಪಿ.ಸಿ ಸೆಕ್ಷನ್ 120(ಬಿ), 307 ಸಹಿತ 34 ಜೊತೆಗೆ 1958 ಆಮ್ರ್ಸ್ ಕಾಯ್ದೆಯ 3, 25 ಅಡಿ ಪ್ರಕರಣ ದಾಖಲಾಗಿದ್ದು, ಸಿಸಿಬಿ ಅಧಿಕಾರಿಗಳು ತನಿಖೆಯನ್ನು ಕೈಗೊಂಡಿದ್ದಾರೆ.

    ಸಿಸಿಬಿ ಅಧಿಕಾರಿಗಳು ಈ ಪ್ರಕರಣದ ಮುಖ್ಯ ಆರೋಪಿ ರವಿ ಬೆಳಗೆರೆಯನ್ನು ಪತ್ತೆ ಮಾಡಲು ನ್ಯಾಯಾಲಯದಿಂದ ಸರ್ಚ್‍ವಾರೆಂಟ್ ಪಡೆದು ಶುಕ್ರವಾರ ಮಧ್ಯಾಹ್ನ 01. 30ಕ್ಕೆ ಹಾಯ್ ಬೆಂಗಳೂರು ಕಚೇರಿಯಲ್ಲಿ ರವಿ ಬೆಳಗೆರೆ ಯವರನ್ನು ಬಂಧಿಸಿದ್ದಾರೆ.

    ರವಿ ಬೆಳಗೆರೆ ಕಚೇರಿಯಿಂದ ಒಂದು ರಿವಾಲ್ವಾರ್, 53 ಜೀವಂತ ಗುಂಡುಗಳು, ಒಂದು ಬಳಸಿರುವ ಗುಂಡು, ಜಿಂಕೆ ಚರ್ಮ, ಒಂದು ಡಬ್ಬಲ್ ಬ್ಯಾರೆಲ್ ಗನ್, 41 ಜೀವಂತ ಗುಂಡುಗಳು, 1.5 ಅಡಿ*1.5 ಅಡಿ ಉದ್ದಗಲದ ಒಂದು ದೊಡ್ಡ ಆಮೆ ಚಿಪ್ಪನ್ನು ವಶಪಡಿಸಿಕೊಂಡಿದ್ದಾರೆ.

    ಶಶಿಧರ್ ಮುಂಡೆವಾಡಿ ವಿರುದ್ಧ ದಾಖಲಾಗಿರುವ ಪ್ರಕರಣಗಳು: 
    1. 2006 ರಲ್ಲಿ ಮುತ್ತು ಮಾಸ್ತರ್ ಎಂಬವನನ್ನು ಕೊಲೆ ಮಾಡಿದ ಬಗ್ಗೆ ಪ್ರಕರಣ
    2. 2013 ರಲ್ಲಿ ಬಸಪ್ಪ ಹರಿಜನ್ ಎಂಬಾತನನ್ನು ಕೊಲೆ ಮಾಡಿದ ಬಗ್ಗೆ ಪ್ರಕರಣ.
    3. 2014 ರಲ್ಲಿ ತನ್ನ ಸ್ನೇಹಿತ ಸುರೇಶ್ ಲಾಳಸಂಗಿ ಎಂಬಾತನನ್ನು ಕೊಲೆ ಮಾಡಿದ ಬಗ್ಗೆ ಪ್ರಕರಣ.
    4. 2016ನೇ ಸಾಲಿನಲ್ಲಿ ಇಂಡಿ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ.
    5. 2017 ರಲ್ಲಿ ಮಹಾರಾಷ್ಟ್ರದ ಮೀರಜ್‍ನ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರವನ್ನು ಇಟ್ಟುಕೊಂಡಿದ್ದ ಬಗ್ಗೆ ಪ್ರಕರಣ ದಾಖಲಾಗಿದೆ.

    https://www.youtube.com/watch?v=TUKBh2D8Qcw&feature=youtu.be&a