Tag: Sunil Jakhar

  • ಪಕ್ಷದ ಎಲ್ಲಾ ಸ್ಥಾನಗಳಿಂದ ಸುನೀಲ್ ಜಾಖರ್, ಥಾಮಸ್‍ರನ್ನು ತೆಗೆದು ಹಾಕಿದ ಕಾಂಗ್ರೆಸ್

    ಪಕ್ಷದ ಎಲ್ಲಾ ಸ್ಥಾನಗಳಿಂದ ಸುನೀಲ್ ಜಾಖರ್, ಥಾಮಸ್‍ರನ್ನು ತೆಗೆದು ಹಾಕಿದ ಕಾಂಗ್ರೆಸ್

    ಶಿಲಾಂಗ್: ಪಂಜಾಬ್ ಘಟಕದ ಮಾಜಿ ಮುಖ್ಯಸ್ಥ ಸುನೀಲ್ ಜಾಖರ್ ಮತ್ತು ಕೇರಳ ನಾಯಕ ಕೆ ವಿ ಥಾಮಸ್ ಅವರನ್ನು ಪಕ್ಷದ ಎಲ್ಲಾ ಸ್ಥಾನಗಳಿಂದ ತೆಗೆದುಹಾಕಲು ಕಾಂಗ್ರೆಸ್ ನಿರ್ಧರಿಸಿದೆ.

    ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಮೇಘಾಲಯದಲ್ಲಿ ತನ್ನ ಐವರು ಶಾಸಕರನ್ನು ಅಮಾನತುಗೊಳಿಸಿದೆ. ಕಾಂಗ್ರೆಸ್ ಶಿಸ್ತು ಸಮಿತಿಯು ಜಾಖರ್ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿತು. ಆರಂಭದಲ್ಲಿ ಅವರನ್ನು ಎರಡು ವರ್ಷಗಳ ಕಾಲ ಅಮಾನತುಗೊಳಿಸಲು ನಿರ್ಧರಿಸಲಾಯಿತು. ಇದನ್ನೂ ಓದಿ: ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ

    ಸಭೆ ನಡೆಸಿದ ಸಮಿತಿ, ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸಿ ರಾಜ್ಯದಲ್ಲಿ ಆಡಳಿತಾರೂಢ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್ (ಎಂಡಿಎ)ಗೆ ಬೆಂಬಲ ನೀಡಿದ ಮೇಘಾಲಯದ ಐವರು ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸುವಂತೆ ಶಿಫಾರಸು ಮಾಡಿದೆ.

    ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶಿಸ್ತು ಸಮಿತಿಯ ಶಿಫಾರಸುಗಳನ್ನು ಅನುಮೋದಿಸಿದ್ದಾರೆ. ಮೇಘಾಲಯ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿನ್ಸೆಂಟ್ ಪಾಲಾ ಅವರಿಂದ ಸೋನಿಯಾ ಅವರು ಪ್ರಸ್ತುತ ಬಿಜೆಪಿ ಬೆಂಬಲಿತ ಸರ್ಕಾರವನ್ನು ಬೆಂಬಲಿಸುವ ಐದು ಶಾಸಕರ ಕ್ರಮಗಳ ಬಗ್ಗೆ ಪತ್ರವನ್ನು ಸ್ವೀಕರಿಸಿದ್ದರು. ಇದನ್ನೂ ಓದಿ: ಹಂಪಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಿಂತನೆ: ವಚನಾನಂದ ಮಹಾಸ್ವಾಮೀಜಿ

    ಸಮಿತಿಯು ಈ ವಿಷಯವನ್ನು ವಿಸ್ಕೃತವಾಗಿ ಚರ್ಚಿಸಿದೆ. ಈ ಸಭೆಯ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಶಾಸಕರಾದ ಅಮ್ರಾರೀನ್ ಲಿಂಗ್ಡೋಹ್, ಪಿಟಿ ಸೌಕಿಮಿ, ಕಿಮ್ಫಾ ಮಾರ್ಬನಿಯಾಂಗ್, ಮೈರಾಲ್ಬೋರ್ನ್ ಸೈಯೆಮ್ ಮತ್ತು ಮೊಹೆಂದ್ರೋ ರಾಪ್ಸಾಂಗ್ ಅವರನ್ನು ಅಮಾನತುಗೊಳಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

    ಥಾಮಸ್ ಅವರಿಗೆ ಸಂಬಂಧಿಸಿದಂತೆ, ಸಮಿತಿಯು ಅವರನ್ನು ರಾಜ್ಯ ರಾಜಕೀಯ ವ್ಯವಹಾರಗಳ ಸಮಿತಿ ಮತ್ತು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಸಮಿತಿಯಿಂದ ತೆಗೆದುಹಾಕಲು ನಿರ್ಧರಿಸಿತು. ಜಾಖರ್ ವಿಚಾರವಾಗಿ ಅವರನ್ನು ಪಕ್ಷದ ಎಲ್ಲಾ ಸ್ಥಾನಗಳಿಂದ ವಜಾಗೊಳಿಸಲು ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಯಿತು ಎಂದು ಮೂಲಗಳು ತಿಳಿಸಿವೆ.

    ಅವರನ್ನು ಎರಡು ವರ್ಷಗಳ ಕಾಲ ಅಮಾನತುಗೊಳಿಸಲು ಮತ್ತು ಪಕ್ಷದ ಎಲ್ಲಾ ಸ್ಥಾನಗಳಿಂದ ತೆಗೆದುಹಾಕಲು ಸಮಿತಿಯು ಮೊದಲು ನಿರ್ಧರಿಸಿತು. ಆದರೆ ನಂತರ ಅವರ ಕ್ರಮವನ್ನು ತಗ್ಗಿಸಿತು ಮತ್ತು ಅವರ ಅಮಾನತು ಕೈಬಿಡಲಾಯಿತು ಎಂದು ಮೂಲಗಳು ಸೂಚಿಸಿವೆ.

  • ಪಂಜಾಬ್ ಸಿಎಂ ರೇಸ್‍ನಲ್ಲಿ ಅಚ್ಚರಿಯ ಹೆಸರು?

    ಪಂಜಾಬ್ ಸಿಎಂ ರೇಸ್‍ನಲ್ಲಿ ಅಚ್ಚರಿಯ ಹೆಸರು?

    ಚಂಡೀಗಢ: ಪಂಜಾಬ್ ಕಾಂಗ್ರೆಸ್‍ನಲ್ಲಿ ಆಂತರಿಕ ಸಂಘರ್ಷ ಮುಗಿಲುಮುಟ್ಟಿದ್ದು, ಕಡೆಗೂ ಸಿಎಂ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಇದೀಗ ಮುಂದಿನ ಸಿಎಂ ಯಾರು ಎಂಬ ಪ್ರಶ್ನೆ ಮೂಡಿದ್ದು, ಸಿಎಂ ರೇಸ್‍ನಲ್ಲಿ ಅಚ್ಚರಿಯ ಹೆಸರಗಳು ಕೇಳಿಬರುತ್ತಿದೆ.

    ಹೈಕಮಾಂಡ್ ಒತ್ತಡದ ಹಿನ್ನೆಲೆಯಲ್ಲಿ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ್ದು, ಪಕ್ಷದ ನಾಯಕತ್ವದ ವಿರುದ್ಧ ಕಿಡಿಕಾರಿದ್ದಾರೆ. ನನಗೆ ಪದೇ ಪದೇ ಅವಮಾನ ಆಗ್ತಿದೆ. ಇದನ್ನು ಅವಮಾನ ಎಂದೇ ಪರಿಗಣಿಸುತ್ತಿರುವೆ. ಬಹುಷಃ ಹೈಕಮಾಂಡ್‍ಗೆ ನನ್ನ ಮೇಲೆ ನಂಬಿಕೆ ಇಲ್ಲ. ಹೀಗಾಗಿ ರಾಜೀನಾಮೆ ನೀಡಿದ್ದೇನೆ. ಅವರಿಗೆ ಯಾರ ಮೇಲೆ ನಂಬಿಕೆ ಇದ್ಯೋ ಅವರು ಸಿಎಂ ಆಗ್ಲಿ. ನನ್ನ ಮುಂದೆ ಆಯ್ಕೆಗಳು ಮುಕ್ತವಾಗಿವೆ ಎಂದಿದ್ದಾರೆ. ಈ ಮೂಲಕ ಪಕ್ಷ ತೊರೆಯುವ ಸುಳಿವನ್ನು ಕ್ಯಾಪ್ಟನ್ ಅಮರೀಂದರ್ ಸಿಂಗ್ ನೀಡಿದ್ದಾರೆ.

    https://twitter.com/ANI/status/1439219430584508417

    ಪಂಜಾಬ್ ಕಾಂಗ್ರೆಸ್‍ನ ಬಹುತೇಕ ಶಾಸಕರು ಮುಖ್ಯಮಂತ್ರಿ ಬದಲಾವಣೆ ಮಾಡುವಂತೆ ಒತ್ತಡ ಹೇರಿದ್ರು. ಬಳಿಕ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದರು. ಈ ಬೆನ್ನಲ್ಲೇ ಚಂಡೀಗಢದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ಮುಂದಿನ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದ್ದು, ಈ ನಡುವೆ ಪ್ರಬಲ ಅಭ್ಯರ್ಥಿಯಾಗಿ ನವಜೋತ್ ಸಿಂಗ್ ಸಿಧು ಹೆಸರು ಕೇಳಿಬಂದಿದೆ. ಈ ನಡುವೆ ಅಚ್ಚರಿಯ ಹೆಸರೆಂಬಂತೆ ಸುನಿಲ್ ಜಾಖರ್ ಅವರ ಹೆಸರು ಹರಿದಾಡುತ್ತಿದೆ. ಇದನ್ನೂ ಓದಿ: ನನ್ನನ್ನು ಅವಮಾನ ಮಾಡಲಾಗಿದೆ – ಸಿಎಂ ಸ್ಥಾನಕ್ಕೆ ಅಮರೀಂದರ್ ಸಿಂಗ್ ರಾಜೀನಾಮೆ

    67 ವರ್ಷದ ಸುನಿಲ್ ಜಾಖರ್ ಪಂಜಾಬ್ ಕಾಂಗ್ರೆಸ್ ಸಮಿತಿ ಮಾಜಿ ಮುಖ್ಯಸ್ಥರಾಗಿದ್ದರು. ಪಂಜಾಬ್ ವಿಧಾನಸಭೆಯಲ್ಲಿ ವಿರೋಧ ಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇವರು 2019 ರಲ್ಲಿ ಬಾಲಿವುಡ್ ನಟ ಸನ್ನಿ ಡಿಯೋಲ್ ಎದುರು ಪರಾಭವಗೊಂಡಿದ್ದರು. ಸೋಲಿನ ನೈತಿಕ ಹೊಣೆ ಹೊತ್ತು ಸುನಿಲ್ ಜಾಖರ್ ಪಿಸಿಸಿ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಇವರ ಹೆಸರು ಕೂಡ ಸಿಎಂ ರೇಸ್‍ನಲ್ಲಿ ಮುಂಚೂಣಿಯಲ್ಲಿದೆ. ಇದನ್ನೂ ಓದಿ: ನಾಯಕತ್ವ ಬದಲಾವಣೆಗೆ ಮುಂದಾದ ಕಾಂಗ್ರೆಸ್- ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ರಾಜೀನಾಮೆ?

    ಪಂಚಾಬ್ ಚುನಾವಣೆಗೆ ಕೆಲ ತಿಂಗಳುಗಳು ಬಾಕಿ ಇರುವಾಗ ಈ ಬೆಳವಣಿಗೆ ನಡೆದಿರುವುದು ಗಮನಾರ್ಹ. ರಾಜಸ್ಥಾನದಲ್ಲೂ ನಾಯಕತ್ವ ಬದಲಾವಣೆಗೆ ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಶೀಘ್ರವೇ ಕಾಂಗ್ರೆಸ್‍ಗೆ ಖಾಯಂ ಅಧ್ಯಕ್ಷರನ್ನು ನೇಮಕ ಮಾಡಬೇಕು: ಶಶಿ ತರೂರ್