Tag: Sunil Karanth

  • ಊಹಾಪೋಹಗಳಿಗೆ ಕಿವಿಗೊಡದಂತೆ SMK ನಿವಾಸದಿಂದ ಸಂದೇಶ

    ಊಹಾಪೋಹಗಳಿಗೆ ಕಿವಿಗೊಡದಂತೆ SMK ನಿವಾಸದಿಂದ ಸಂದೇಶ

    ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (SM Krishna) ಅವರ ಆರೋಗ್ಯದಲ್ಲಿ (Health) ಯಾವುದೇ ತೊಂದರೆ ಇಲ್ಲವೆಂದು ವೈದ್ಯರು ತಿಳಿಸಿದ್ದಾರೆ. ಹಾಗಾಗಿ ಊಹಾಪೋಹಗಳಿಗೆ ಕಿವಿಗೊಡದಂತೆ ಮನವಿ ಮಾಡುತ್ತೇವೆ ಎಂಬುದಾಗಿ ಎಸ್.ಎಂ.ಕೃಷ್ಣ ನಿವಾಸದಿಂದ ಸಂದೇಶ ಬಂದಿದೆ.

    ಶ್ವಾಸಕೋಶದ (Lungs) ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ (Chief Minister) ಎಸ್.ಎಂ ಕೃಷ್ಣ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ (Manipal Hospital) ದಾಖಲಿಸಲಾಗಿದೆ. ಡಾ.ಸತ್ಯನಾರಾಯಣ್ ಮತ್ತು ಡಾ.ಸುನೀಲ್ ಕಾರಂತ್ ವೈದ್ಯರ ತಂಡದಿಂದ ಐಸಿಯುನಲ್ಲಿ ಚಿಕಿತ್ಸೆ (Treatment) ನೀಡಲಾಗುತ್ತಿದೆ. ಆರೋಗ್ಯ ಸಚಿವ ಡಾ.ಕೆ ಸುಧಾಕರ್ (K Sudhakar) ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ವೈದ್ಯರ ತಂಡದೊಂದಿಗೆ ಸಂಪರ್ಕದಲ್ಲಿದ್ದು, ಮಾಹಿತಿ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಸಿಪಿಐ ಇಲ್ಲಾಳ್‍ ಮೇಲೆ ಹಲ್ಲೆ ಪ್ರಕರಣ- ಆಸ್ಪತ್ರೆಗೆ ಸಂಸದ ಜಾಧವ್ ಭೇಟಿ

    ಈ ನಡುವೆ ಎಸ್‌ಎಂ ಕೃಷ್ಣ ನಿವಾಸದಿಂದ ಸಂದೇಶ ಬಂದಿದ್ದು, ಎಸ್‌ಎಂ ಕೃಷ್ಣ ಅವರಿಗೆ ನಿನ್ನೆ ರಾತ್ರಿ ಜ್ವರ ಕಾಣಿಸಿಕೊಂಡ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋವಿಡ್ ಹಾಗೂ ಜ್ವರಕ್ಕೆ ಸಂಬಂಧಿಸಿದ ಕೆಲವು ಪರೀಕ್ಷೆಗಳನ್ನು ಮಾಡಿದ ನಂತರ ಯಾವುದೇ ತೊಂದರೆ ಇಲ್ಲವೆಂದು ವೈದ್ಯರು ತಿಳಿಸಿದ್ದಾರೆ. ಹಾಗಾಗಿ ಊಹಾಪೊಹದ ಮಾಹಿತಿಗಳಿಗೆ ಕಿವಿಗೊಡದಂತೆ ಎಸ್‌ಎಂಕೆ ಪರವಾಗಿ ಕೊರುತ್ತೇವೆ ಎಂಬುದಾಗಿ ಸಂದೇಶ ರವಾನೆ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

    ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

    ಬೆಂಗಳೂರು: ಮಾಜಿ ಮುಖ್ಯಮಂತ್ರಿ (Farmer Chief Minister) ಎಸ್‌.ಎಂ ಕೃಷ್ಣ (SM Krishna) ಅವರನ್ನು ಆಸ್ಪತ್ರೆ ದಾ‌ಖಲಿಸಲಾಗಿದೆ.

    ಶ್ವಾಸಕೋಶ (Lungs) ಸಮಸ್ಯೆಯಿಂದ ಬಳುತ್ತಿರುವ ಎಸ್‌.ಎಂ ಕೃಷ್ಣರನ್ನು ಬೆಂಗಳೂರಿನ ಮಣಿಪಾಲ್ ಆಸ್ಫತ್ರೆಗೆ (Manipal Hospital) ದಾಖಲಿಸಲಾಗಿದ್ದು, ಡಾ.ಸತ್ಯನಾರಾಯಣ್ ಮತ್ತು ಡಾ.ಸುನೀಲ್ ಕಾರಂತ್ ವೈದ್ಯರ ತಂಡದಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಬಲವಂತವಾಗಿ ಮತಾಂತರಕ್ಕೆ ಯತ್ನ – 11 ಮಂದಿಯ ವಿರುದ್ಧ ಎಫ್‍ಐಆರ್

    ಶ್ವಾಸಕೋಶದಲ್ಲಿ ಆಕ್ಸಿಜನ್ ಪ್ರಮಾಣ ಏರುಪೇರು ಆಗುತ್ತಿದ್ದು, ವೈದ್ಯರ ತಂಡ ಹೆಚ್ಚಿನ ನಿಗಾ ವಹಿಸಿದೆ. ಸದ್ಯ ಆರೋಗ್ಯ ಸಚಿವ ಡಾ‌.ಸುಧಾಕರ್ ಮೇಲ್ವಿಚಾರಣೆ ನಡೆಸುತ್ತಿದ್ದು, ವೈದ್ಯರ ತಂಡದ ಜೊತೆ ಸಂಪರ್ಕದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]