Tag: Sunil Rao

  • ‘ಹಯಗ್ರೀವ’ ತಂಡ ಸೇರಿಕೊಂಡ ನಟ ಸುನೀಲ್ ರಾವ್

    ‘ಹಯಗ್ರೀವ’ ತಂಡ ಸೇರಿಕೊಂಡ ನಟ ಸುನೀಲ್ ರಾವ್

    ಸಂಜನಾ ಆನಂದ್ (Sanjana Anand) ಮತ್ತು ಧನ್ವೀರ್ (Dhanveer) ಕಾಂಬಿನೇಷನ್ ನ ಹಯಗ್ರೀವ (Hayagreeva) ಸಿನಿಮಾದಲ್ಲಿ ನಟಿಸಲಿದ್ದಾರೆ ಸುನೀಲ್ ರಾವ್ (Sunil Rao). ಈಗಾಗಲೇ ಚಿತ್ರೀಕರಣದಲ್ಲಿ ಅವರು ಭಾಗಿಯಾಗಿದ್ದಾರಂತೆ. ಅದೊಂದು ಮಹತ್ವದ ಪಾತ್ರವಾಗಿದ್ದು, ಪಾತ್ರದ ಬಗ್ಗೆ ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಚಿತ್ರತಂಡವೇ ತಿಳಿಸಲಿದೆ.

    ಮೃದ್ಧಿ ಮಂಜುನಾಥ್ ಅವರು ತಮ್ಮ ಕೆ.ವೆ.ಸಿ ಪ್ರೊಡಕ್ಷನ್ಸ್  ಲಾಂಛನದಲ್ಲಿ ನಿರ್ಮಿಸುತ್ತಿರುವ, ರಘುಕುಮಾರ್ ಓ.ಆರ್ ನಿರ್ದೇಶನದ ಚಿತ್ರವಿದು. ಕೆಲ ದಿನಗಳ ಹಿಂದೆಯಷ್ಟೇ ಈ ಸಿನಿಮಾದ ಮುಹೂರ್ತ (Muhurta) ಸಮಾರಂಭ ನಾಡದೇವತೆ ಶ್ರೀಚಾಮುಂಡೇಶ್ವರಿ ಸನ್ನಿಧಿಯಲ್ಲಿ ನೆಡಿದಿತ್ತು.

    ಹಯಗ್ರೀವ ಕೆವಿಸಿ ಪ್ರೊಡಕ್ಷನ್ಸ್‌ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ  ಮೂರನೆಯ ಚಿತ್ರ. ಈ ಕುರಿತಂತೆ ನಿರ್ಮಾಪಕ ಸಮೃದ್ದಿ ಮಂಜುನಾಥ್ ಮಾತಮಾಡಿ, ನಾನು ಯೂಟ್ಯೂಬ್‍ನಲ್ಲಿ ‘ದಿ ಬೆಲ್‍’ ಎಂಬ ಕಿರುಚಿತ್ರ ನೋಡಿದೆ. ಆ ಕಿರುಚಿತ್ರ ಬಹಳ ಖುಷಿ ನೀಡಿತು. ಆ ಕಿರುಚಿತ್ರದ  ನಿರ್ದೇಶಕ ರಘುಕುಮಾರ್ ಅವರನ್ನು ಎಂಟು ತಿಂಗಳ ಹಿಂದೆ ಕರೆಸಿ ಮಾತನಾಡಿದೆ. ಒಂದು ಚಿತ್ರ ಮಾಡಿಕೊಡಿ ಎಂದು ಹೇಳಿದೆ. ಅವರು ತಮ್ಮ ತಂಡದೊಂದಿಗೆ ಒಂದೊಳ್ಳೆಯ ಕಥೆ ಮಾಡಿದ್ದಾರೆ. ಇದೊಂದು ಪಕ್ಕಾ ಕಮರ್ಷಿಯಲ್‍ ಚಿತ್ರ. ಕನ್ನಡದಲ್ಲಿ ಇಲ್ಲಿಯವರೆಗೂ ಈ ತರಹದ ಚಿತ್ರ ಬಂದಿಲ್ಲ ಎಂದು ಹೇಳಬಹುದು. ಧನ್ವೀರ್ ಹಾಗೂ ಸಂಜನಾ ಆನಂದ್ ನಾಯಕ-ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ಮತ್ತೊಬ್ಬ ನಾಯಕ ನಟಿಸುತ್ತಿದ್ದು, ಅವರು ಯಾರು ಎಂದು ಚಿತ್ರ ಬಿಡುಗಡೆಯವರೆಗೂ ಗೌಪ್ಯವಾಗಿಡಲಾಗುವುದು. ಒಂದೊಳ್ಳೆಯ ಕಥೆಗೆ ಪೂರಕವಾಗಿ ಶೀರ್ಷಿಕೆ ಸಿಕ್ಕಿದೆ. ಈ ಚಿತ್ರವನ್ನು ಎಲ್ಲರೂ ಒಪ್ಪುತ್ತಾರೆ ಎಂಬ ನಂಬಿಕೆ ಇದೆ ಎಂದಿದ್ದರು.

    ನಿರ್ಮಾಪಕರು ಫೋನ್‍ ಮಾಡಿ ಸಿನಿಮಾ ಮಾಡಿಕೊಡಿ ಎಂದರು. ನನ್ನ ಹತ್ತಿರ ಒಂದು ಕಥೆ ಇತ್ತು. ಅದನ್ನು ಅವರಿಗೆ ಹೇಳಿದಾಗ, ಇಷ್ಟಪಟ್ಟು ಈ ಚಿತ್ರ ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಈ ಚಿತ್ರದಲ್ಲಿ ಮುಖ್ಯವಾಗಿ ಪೌರಾಣಿಕ ಅಂಶಗಳ ಜೊತೆಗೆ ಕ್ರೈಮ್‍ ಇದೆ. ಲವ್, ಸೆಂಟಿಮೆಂಟ್, ಸಸ್ಪೆನ್ಸ್ ಸೇರಿದಂತೆ ಕಮರ್ಷಿಯಲ್ ಚಿತ್ರಕ್ಕೆ ಬೇಕಾದ ಎಲ್ಲಾ ಅಂಶಗಳು ಹಯಗ್ರೀವ ಚಿತ್ರದಲ್ಲಿದೆ. ಕನ್ನಡದಲ್ಲಿ ಇದುವರೆಗೂ ಯಾರೂ ಈ ತರಹದ ಪ್ರಯತ್ನವನ್ನು ಮಾಡಿಲ್ಲ ಎಂಬುದು ನನ್ನ ಅನಿಸಿಕೆ. ಇಲ್ಲಿ ಹಯಗ್ರೀವ ಎಂಬ ಪೌರಾಣಿಕ ಪಾತ್ರದ ಸುತ್ತ ಚಿತ್ರ ಸುತ್ತುತ್ತದೆ.  ಬೆಂಗಳೂರಿನಲ್ಲಿ ಇಡೀ ಚಿತ್ರದ ಚಿತ್ರೀಕರಣ ನಡೆಯಲಿದೆ.  ರಂಗಾಯಣ ರಘು, ತಾರಾ, ಸಾಧು ಕೋಕಿಲ, ರವಿಶಂಕರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ‍್ಳುತ್ತಿದ್ದಾರೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಜೂಡಾ ಸ್ಯಾಂಡಿ ಸಂಗೀತ ಸಂಯೋಜಿಸುತ್ತಿದ್ದಾರೆ.‌ ಕಾರ್ತಿಕ್, ಛಾಯಾಗ್ರಹಣ ಹಾಗೂ ಉಮೇಶ್ ಅವರ ಸಂಕಲನವಿರುವ ಈ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಬರೆದಿದ್ದೇನೆ. ಸಂಭಾಷಣೆಯನ್ನು ಶೈಲೇಶ್ ರಾಜ್ ಹಾಗೂ ಚೇತನ್ ಸಿದ್ ಬರೆದಿದ್ದಾರೆ ಎಂದು ನಿರ್ದೇಶಕ ರಘುಕುಮಾರ್ ಓ ಆರ್ ತಿಳಿಸಿದ್ದರು.

     

    ಇದು ನನ್ನ ಐದನೇ ಚಿತ್ರ ಎಂದು ಮಾತು ಆರಂಭಿಸಿದ ನಾಯಕ ಧನ್ವೀರ್, ಒಳ್ಳೆಯ ತಂಡ ಮತ್ತು ಒಳ್ಳೆಯ ಶೀರ್ಷಿಕೆ ಸಿಕ್ಕಿದೆ. ಬಹಳ ದಿನಗಳಿಂದ ಪ್ಲಾನ್‍ ಮಾಡಿ, ಒಂದೊಳ್ಳೆಯ ಕಥೆ ಮಾಡಿ ಈ ಚಿತ್ರ ಮಾಡುತ್ತಿದ್ದೇವೆ. ಅಭಿಮಾನಿಗಳಿಗೆ ಖುಷಿಯಾಗುವಂತಹ ಕಥೆ ಇದೆ. ಈ ಚಿತ್ರದಲ್ಲಿ ನೀಗ್ರೋಗಳ ಜೊತೆಗೆ ಫೈಟ್‍ ಇದೆ. ‘ಬಜಾರ್’ ನಂತರ ಸಿಕ್ಸ್ ಪ್ಯಾಕ್ ‍ಮಾಡಿಕೊಳ್ಳುತ್ತಿದ್ದೇನೆ. ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ. ಕಥೆ ಮತ್ತು ಪಾತ್ರ ವಿಭಿನ್ನವಾಗಿದೆ ಎಂದಿದ್ದರು.

  • Bigg Bossಗೆ ಇವರೇನಾ ಸ್ಪರ್ಧಿಗಳು? ಸೋಷಿಯಲ್‌ ಮೀಡಿಯಾದಲ್ಲಿ ಪಟ್ಟಿ ವೈರಲ್‌

    Bigg Bossಗೆ ಇವರೇನಾ ಸ್ಪರ್ಧಿಗಳು? ಸೋಷಿಯಲ್‌ ಮೀಡಿಯಾದಲ್ಲಿ ಪಟ್ಟಿ ವೈರಲ್‌

    ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್‌ಗೆ (Bigg Boss Kannada 10) ದಿನಗಣನೆ ಶುರುವಾಗಿದೆ. ಈಗಾಗಲೇ ತೆಲುಗಿನ ಬಿಗ್ ಬಾಸ್‌ಗೆ ಚಾಲನೆ ಸಿಕ್ಕಿರುವ ಬೆನ್ನಲ್ಲೇ ಕನ್ನಡದ ಬಿಗ್ ಬಾಸ್‌ಗೆ ಬರುವ ಸ್ಪರ್ಧಿಗಳ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ. ಬಿಗ್ ಬಾಸ್ ಸೀಸನ್ 10ರ ಕಾರ್ಯಕ್ರಮದಲ್ಲಿ ಇವರೆಲ್ಲಾ ಸ್ಪರ್ಧಿಸುತ್ತಾರಾ?

    ಬಿಗ್ ಬಾಸ್ 10ನೇ ಸೀಸನ್ ಆಗಿರುವ ಕಾರಣ ಒಟಿಟಿ ಇಲ್ಲದೇ ಟಿವಿ ಬಿಗ್ ಬಾಸ್ ಶುರು ಮಾಡಲು ವಾಹಿನಿ ನಿರ್ಧರಿಸಿದೆ. ದೊಡ್ಮನೆ ಆಟಕ್ಕೆ ತೆರೆಮರೆಯಲ್ಲಿ ಎಲ್ಲಾ ತಯಾರಿ ಕೂಡ ನಡೆಯುತ್ತಿದೆ. ಹಾಗಾದ್ರೆ ಯಾರೆಲ್ಲಾ ಸ್ಟಾರ್‌ಗಳ ಹೆಸರು ಸದ್ದು ಮಾಡ್ತಿದೆ. ಇಲ್ಲಿದೆ ಮಾಹಿತಿ.

    artist_48037_megha-shetty-photos-images-86684

    ಟಿವಿ ಲೋಕದ ಸ್ಟಾರ್ ನಟಿ ಮೇಘಾ ಶೆಟ್ಟಿ (Megha Shetty) ಅವರು ‘ಜೊತೆ ಜೊತೆಯಲಿ’ (Jothe Jotheyali) ಧಾರಾವಾಹಿ ಮೂಲಕ ಪ್ರೇಕ್ಷಕರಿಗೆ ಪರಿಚಿತರಾದರು. ಈಗಾಗಲೇ ‘ದಿಲ್ ಪಸಂದ್’ ಮತ್ತು ‘ತ್ರಿಬಲ್ ರೈಡಿಂಗ್’ (Triple Riding) ಚಿತ್ರಗಳು ರಿಲೀಸ್ ಆಗಿವೆ. ಸೋಷಿಯಲ್ ಮೀಡಿಯಾದಲ್ಲಿ ಮಿಲಿಯನ್ ಫಾಲೋವರ್ಸ್ ಹೊಂದಿರುವ ಮೇಘಾ ಕೂಡ ದೊಡ್ಮನೆಗೆ ಬರುತ್ತಾರೆ ಎಂದು ಚರ್ಚೆಯಾಗುತ್ತಿದೆ.

    ಸುನೀಲ್ ರಾವ್ (Sunil Rao) ಎಂದಾಕ್ಷಣ ಮೊದಲು ನೆನಪಾಗೋದು ರಮ್ಯಾ(Ramya), ಅಜಯ್ ರಾವ್ ಜೊತೆಗಿನ ಎಕ್ಸ್‌ಕ್ಯೂಸ್‌ ಮಿ (Excuse Me) ಸಿನಿಮಾ. ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ರು ಚಿತ್ರರಂಗದಲ್ಲಿ ನಾಯಕನಾಗಿ ನಿಲ್ಲಲು ಸುನೀಲ್ ರಾವ್‌ಗೆ ಅದೃಷ್ಟ ಒಲಿಯಲಿಲ್ಲ. ಈಗ ವರ್ಷಕ್ಕೆ ಒಂದು ಸಿನಿಮಾದಲ್ಲಿ ನಟಿಸುತ್ತಾ, ಉದ್ಯಮಿಯಾಗಿ ಸುನೀಲ್ ಗುರುತಿಸಿಕೊಳ್ತಿದ್ದಾರೆ.

    ‘ನಾಗಿಣಿ 2’ (Nagini 2) ಸೀರಿಯಲ್‌ನ ಜೋಡಿ ನಿನಾದ್ ಹರಿತ್ಸ (Ninaad Harithsa) ಮತ್ತು ನಮ್ರತಾ ಗೌಡ (Namratha Gowda) ಇಬ್ಬರ ಹೆಸರು ಕೂಡ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ. ನಮ್ರತಾ, ಬಾಲನಟಿಯಾಗಿ ಹಲವು ಸಿನಿಮಾಗಳಲ್ಲಿ ನಟಿಸಿದ ಕಲಾವಿದೆ. ಕಿರುತೆರೆಯಲ್ಲಿ ಸಿಕ್ಕ ಬ್ರೇಕ್, ನಾಯಕಿಯಾಗಿ ಬೆಳ್ಳಿಪರದೆಯಲ್ಲಿ ಮಿಂಚಲು ಸಿಗಲಿಲ್ಲ. ಇನ್ನೂ ನಟನೆ ಮತ್ತು ಗಾಯನದ ಮೂಲಕ ನಿನಾದ್ ಗಮನ ಸೆಳೆದಿದ್ದಾರೆ. ಇದನ್ನೂ ಓದಿ:ಮಿಲಿಯನ್ ಗಡಿ ದಾಟಿದ ಸೋನು ಬಿಕಿನಿ ವಿಡಿಯೋ

    ದಿವಂಗತ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ (Rakshak Bullet Prakash) ಅವರು ‘ಗುರು ಶಿಷ್ಯರು’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದರು. ಈಗ ದೊಡ್ಮನೆಗೆ ಕಾಲಿಡುತ್ತಾರೆ ಎಂದು ರಕ್ಷಕ್ ಸುದ್ದಿಯಲ್ಲಿದ್ದಾರೆ.

    ಪ್ರತಿ ಸೀಸನ್‌ನಲ್ಲೂ ಸಿಂಗರ್‌ಗಳಿಗೆ ಬಿಗ್ ಬಾಸ್ ಟೀಂ ಗಾಳ ಹಾಕುತ್ತಾರೆ. ಅದರಂತೆ ಈ ಬಾರಿ ರ‍್ಯಾಪರ್-ಸಿಂಗರ್ ಇಶಾನಿ (Eshani) ಕೂಡ ಬರುತ್ತಾರೆ ಎಂದು ಹೇಳಲಾಗುತ್ತಿದೆ.

    ಕಳೆದ ವರ್ಷ ಡ್ರೋನ್ ಪ್ರತಾಪ್ (Drone Prathap) ಅವರು ಬಿಗ್ ಬಾಸ್‌ಗೆ(Bigg Boss Kannada) ಬರುತ್ತಾರೆ ಎಂದು ಹೇಳಲಾಗಿತ್ತು. ಆದರೆ ಬರಲಿಲ್ಲ. ಈ ಬಾರಿ ಕೂಡ ದೊಡ್ಮನೆಗೆ ಬರುವ ಅವಕಾಶ ಸಿಕ್ಕಿದೆ. ಒಪ್ಪಿ ಮನೆಗೆ ಬರುತ್ತಾರಾ ಕಾಯಬೇಕಿದೆ.

    ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದ ಧನುಶ್ರೀ, ಸೋನು ಗೌಡಗೆ ಕಳೆದ ಬಾರಿ ಅವಕಾಶ ನೀಡಿದ್ದರು. ಈ ಬಾರಿ ಶಿಲ್ಪಾ ಗೌಡ(Shilpa Gowda), ಭೂಮಿಕಾ ಬಸವರಾಜ್(Bhumika Basavaraj), ಬಿಂದು ಗೌಡ ಬರಲಿದ್ದಾರೆ ಎನ್ನಲಾಗುತ್ತಿದೆ. ಶೋ ಶುರುವಾಗುವ ಸಮಯದಲ್ಲಿ ಅಧಿಕೃತ ಮಾಹಿತಿ ಸಿಗಲಿದೆ.

    ಈಗಾಗಲೇ ಬಿಗ್ ಬಾಸ್ ಕನ್ನಡ ಸೀಸನ್ 10ರ ಮೊದಲ ಪ್ರೋಮೋ ರಿಲೀಸ್ ಆಗಿದೆ. ಸಮ್‌ಥಿಂಗ್ ಸ್ಪೆಷಲ್ ಆಗಿ ಈ ಸೀಸನ್ ಇರಲಿದೆ ಎಂಬುದನ್ನ ವಾಹಿನಿ ತಿಳಿಸಿದೆ. ಅಕ್ಟೋಬರ್ ಮೊದಲ ವಾರದಲ್ಲಿ ಬಿಗ್ ಬಾಸ್ ಆಟ ಶುರುವಾಗಲಿದೆ. ಅಷ್ಟರ ಒಳಗೆ ನಟ ಕಮ್ ನಿರೂಪಕ ಸುದೀಪ್, ಈಗಾಗಲೇ ಒಪ್ಪಿರುವ ಸಿನಿಮಾಗಳ ಕೆಲಸ ಮುಗಿಸಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗೌಡ್ರು ಎಂಬ ಕಾರಣಕ್ಕೆ ʻಎಕ್ಸ್‌ಕ್ಯೂಸ್‌ ಮಿʼ ಸಿನಿಮಾ ಒಪ್ಪಿಕೊಂಡೆ: ರಮ್ಯಾ

    ಗೌಡ್ರು ಎಂಬ ಕಾರಣಕ್ಕೆ ʻಎಕ್ಸ್‌ಕ್ಯೂಸ್‌ ಮಿʼ ಸಿನಿಮಾ ಒಪ್ಪಿಕೊಂಡೆ: ರಮ್ಯಾ

    ಮೋಹಕತಾರೆ ರಮ್ಯಾ (Ramya) ಸಿನಿಮಾರಂಗಕ್ಕೆ ಬಂದು 20 ವರ್ಷಗಳಾಗಿದೆ. ಎರಡು ದಶಕಗಳಿಂದ ರಮ್ಯಾ ಮೋಡಿ ಮಾಡಿರುವ ಪರಿ ಅಷ್ಟೀಷ್ಟಲ್ಲ. ಸಾಧಕರ ಸಾಲಿನಲ್ಲಿ ಕುಳಿತು ವೀಕೆಂಡ್ ವಿತ್ ರಮೇಶ್ ಶೋನಲ್ಲಿ ಸಾಧಕಿಯ ಸ್ಥಾನ ಅಲಂಕರಿಸಿರುವ ರಮ್ಯಾ ಎಲ್ಲೂ ಹೇಳಿರದ ಸಾಕಷ್ಟು ವಿಚಾರಗಳನ್ನ ಹಂಚಿಕೊಂಡಿದ್ದಾರೆ. ಸಕ್ಸಸ್‌ಫುಲ್ ಚಿತ್ರ Excuse Me ಚಿತ್ರವನ್ನು ಮೊದಲು ರಮ್ಯಾ ರಿಜೆಕ್ಟ್ ಮಾಡಿದ್ರಂತೆ, ಬಳಿಕ ಈ ಸಿನಿಮಾ ಒಪ್ಪಿಕೊಳ್ಳೊಕೆ ಅಸಲಿ ಕಾರಣ ಎನು ಎಂಬುದನ್ನ ನಟಿ ಹಂಚಿಕೊಂಡಿದ್ದಾರೆ.

    ದಿವ್ಯಾ ಸ್ಪಂದನ ರಮ್ಯಾ ಮೊದಲು ಆಡಿಷನ್ ಕೊಟ್ಟಿದ್ದು, ಪುನೀತ್ ನಟನೆಯ `ಅಪ್ಪು’ (Appu) ಚಿತ್ರಕ್ಕೆ ಆದರೆ ಈ ಸಿನಿಮಾಗೆ ರಮ್ಯಾ ರಿಜೆಕ್ಟ್ ಆಗಿದ್ದರು. ಬಳಿಕ ಮತ್ತೆ `ವಜ್ರೇಶ್ವರಿ ಕಂಬೈನ್ಸ್’ ರಮ್ಯಾ ಅವರನ್ನು ಸಂಪರ್ಕ ಮಾಡಿ ಅಭಿ (Abhi) ಚಿತ್ರಕ್ಕೆ ಆಫರ್ ನೀಡಿದರು. ಆಡಿಷನ್ ಮಾಡದೆ ಅಭಿ ಚಿತ್ರಕ್ಕೆ ರಮ್ಯಾ ಸೆಲೆಕ್ಟ್ ಆಗಿದ್ದರು. ಈ ಮೂಲಕ ರಮ್ಯಾ ಪುನೀತ್ ರಾಜ್‌ಕುಮಾರ್‌ಗೆ ನಾಯಕಿಯಾಗಿ ಎಂಟ್ರಿ ಕೊಟ್ಟರು.

    ಅಭಿ ಸಿನಿಮಾ ಭರ್ಜರಿಯಾಗಿ ಹಿಟ್ ಆಗಿತ್ತು. ಮೊದಲ ಚಿತ್ರದಲ್ಲಿಯೇ ರಮ್ಯಾ ಪ್ರೇಕ್ಷಕರ ಗಮನ ಸೆಳೆದರು. ಈ ಚಿತ್ರದ ರಿಲೀಸ್‌ಗೂ ಮೊದಲೇ ರಮ್ಯಾಗೆ `ಎಕ್ಸ್‌ಕ್ಯೂಸ್‌ ಮಿ’ ಸಿನಿಮಾಗೆ ಆಫರ್ ಬಂದಿತ್ತು. ನಿರ್ದೇಶಕ ಪ್ರೇಮ್ ನಿರ್ದೇಶನದಲ್ಲಿ ರಮ್ಯಾ ನಾಯಕಿಯಾಗಿ ಮಿಂಚಿದರು. ಆದರೆ ಈ ಸಿನಿಮಾದಲ್ಲಿ ನಟಿಸಲು ಇಷ್ಟವಿರಲಿಲ್ಲ ಎಂದು ರಮ್ಯಾ ರಿವೀಲ್ ಮಾಡಿದ್ದಾರೆ. ಪ್ರೇಮ್ (Director Prem) ಅವರು ಈ ಸಿನಿಮಾದ ಆಫರ್ ಮಾಡಿದಾಗ ನನಗೆ ಇಷ್ಟವಿರಲಿಲ್ಲ. ಆದರೆ ಅಮ್ಮ ನಮ್ಮ ಮಂಡ್ಯ ಗೌಡ್ರು ಒಪ್ಪಿಕೊ ಎಂದು ಹೇಳಿದರು. ಗೌಡ್ರು ಎನ್ನುವ ಕಾರಣಕ್ಕೆ ಒಪ್ಪಿಕೊಂಡೆ ಎಂದು ಹೇಳಿದರು. ಮೊದಲು ಈ ಸಿನಿಮಾದ ಅರ್ಧ ಭಾಗದ ಕಥೆ ಮಾತ್ರ ಹೇಳಿದ್ರು ಎಂದರು.

    ನಿರ್ದೇಶಕ ಪ್ರೇಮ್ ಸಿನಿಮಾ ಸೆಟ್‌ನಲ್ಲಿ ಕುಳಿತು ಕ್ಲೈಮ್ಯಾಕ್ಸ್ ಬರೆದರು ಎಂದು ಬಹಿರಂಗ ಪಡಿಸಿದ್ದಾರೆ. ಕ್ಲೈಮ್ಯಾಕ್ಸ್ ಬಗ್ಗೆ ಎಲ್ಲರಿಗೂ ಕ್ಯೂರಿಯಾಸಿಟಿ ಇತ್ತು. ಏನಾಗಲಿದೆ ಎಂದು ಎಲ್ಲರೂ ಕಾಯುತ್ತಿದ್ವೆ. ಪ್ರೇಮ್ ಕ್ಲೈಮ್ಯಾಕ್ಸ್ ಬರ್ದೆ ಇರಲಿಲ್ಲ. ಸೆಟ್‌ನಲ್ಲೇ ಕುಳಿತು ಬರೆದರು. ಅವರು ಕ್ಲೈಮ್ಯಾಕ್ಸ್ ಬರೆಯುವಾಗ ನಾವೆಲ್ಲಾ ಕುಳಿತು ಏನು ಬರೆಯುತ್ತಾರೆ ಎಂದು ಕಾಯುತ್ತಿದ್ವಿ. ಬಳಿಕ ಸಿನಿಮಾ ಮುಗಿಸಿ ರಿಲೀಸ್ ಆಯ್ತು. `ಎಕ್ಸ್‌ಕ್ಯೂಸ್‌ ಮಿ’ ಚಿತ್ರ ಯಶಸ್ವಿಯಾಯಿತು ಎಂದು ರಮ್ಯಾ ಹಳೆಯ ನೆನಪುಗಳನ್ನ ಬಿಚ್ಚಿಟ್ಟಿದ್ದಾರೆ.

  • Exclusive- ಸಾವರ್ಕರ್ ಪತ್ನಿ ಪಾತ್ರದಲ್ಲಿ ಸನಾದಿ ಅಪ್ಪಣ್ಣನ ಮರಿಮೊಮ್ಮಗಳು

    Exclusive- ಸಾವರ್ಕರ್ ಪತ್ನಿ ಪಾತ್ರದಲ್ಲಿ ಸನಾದಿ ಅಪ್ಪಣ್ಣನ ಮರಿಮೊಮ್ಮಗಳು

    ಖ್ಯಾತ ಸನಾದಿ ವಾದಕ ಸನಾದಿ ಅಪ್ಪಣ್ಣನ (Sanadi Appanna) ಮೊಮ್ಮಗಳು ಜಾಹ್ನವಿಕ (Jahvavik) ಪ್ರಾರಂಭ ಸಿನಿಮಾದ ನಂತರ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ರಾಧಾಕೃಷ್ಣ ಪಲ್ಲಕ್ಕಿ (Radhakrishna Pallakki) ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ವೀರ ಸಾವರ್ಕರ್ (Veera Savarkar) ಸಿನಿಮಾದಲ್ಲಿ ಅವರು ಸಾವರ್ಕರ್ ಪತ್ನಿ ಯಮುನಾ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸನಾದಿ ಅಪ್ಪಣನ ಅವರ ಪುತ್ರ ಹನುಮಂತ, ಹನುಮಂತ ಅವರ ಪುತ್ರ ಪ್ರಭಾಕರ್ ಮಗಳು ಇವರಾಗಿದ್ದಾರೆ.

    ಸಾವರ್ಕರ್ ಪಾತ್ರಕ್ಕಾಗಿ ಸುನೀಲ್ ರಾವ್ (Sunil Rao) ಆಯ್ಕೆಯಾಗಿದ್ದು, ಇವರ ಫಸ್ಟ್ ಲುಕ್ ಎಕ್ಸ್ ಕ್ಲೂಸಿವ್ ಆಗಿ ಪಬ್ಲಿಕ್ ಟಿವಿ ಡಿಜಿಟಲ್ ನಿನ್ನೆಯಷ್ಟೇ ಪ್ರಕಟಿಸಿತ್ತು. ಇವತ್ತು ಸಾವರ್ಕರ್ ಪತ್ನಿಯಾಗಿ ನಟಿಸುತ್ತಿರುವ ಜಾಹ್ನವಿಕ ಸುದ್ದಿಯನ್ನು ಮೊದಲ ಬಾರಿಗೆ ಪ್ರಕಟಿಸುತ್ತಿದೆ. ಈ ಸಿನಿಮಾದ ಪ್ರಮುಖ ಪಾತ್ರಕ್ಕಾಗಿ ಬಾಲಿವುಡ್ ನಟ ಅನುಪಮ್ ಖೇರ್ ಅವರನ್ನು ಕರೆತರುವ ಪ್ರಯತ್ನ ನಡೆದಿದ್ದು, ನಿರ್ದೇಶಕ ರಾಧಾಕೃಷ್ಣ ಪಲ್ಲಕ್ಕಿ ಈಗಾಗಲೇ ಮುಂಬೈಗೆ ಹೋಗಿ ಬಂದಿದ್ದಾರೆ. ಇದನ್ನೂ ಓದಿ: ಅಭಿಷೇಕ್ ಅಂಬರೀಶ್ ಮದುವೆ ಬಗ್ಗೆ ಮಾತಾಡಿದ ಸುಮಲತಾ

    ಹಿಂದಿಯಲ್ಲಿ ಈಗಾಗಲೇ ಸಾವರ್ಕರ್ ಬಯೋಪಿಕ್ ರೆಡಿ ಆಗುತ್ತಿದ್ದು, ಬಹುತೇಕ ಚಿತ್ರೀಕರಣ ಮುಗಿದಿದೆ. ಈ ಹೊತ್ತಿನಲ್ಲಿ ಸ್ಯಾಂಡಲ್ ವುಡ್ ಅವರ ಬಯೋಪಿಕ್ ಅನ್ನು ಕೈಗೆತ್ತಿಕೊಂಡಿದೆ. ಈ ಕುರಿತು ಚಿತ್ರದ ನಿರ್ದೇಶಕ ಪಲ್ಲಕ್ಕಿ ರಾಧಾಕೃಷ್ಣ ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಎಕ್ಸ್ ಕ್ಲೂಸಿವ್ ಆಗಿ ಮಾತನಾಡಿದ್ದಾರೆ. ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.  ವೀರ ಸಾವರ್ಕರ್ ಪಾತ್ರವನ್ನು ಸುನೀಲ್ ರಾವ್ ನಿರ್ವಹಿಸುತ್ತಿದ್ದು, ಮಹಾತ್ಮ ಗಾಂಧಿ ಪಾತ್ರವನ್ನು ಹಿಂದಿಯ ನಟ ಶರ್ಮಾ ಮಾಡುತ್ತಿದ್ದಾರೆ. ಚಿತ್ರದ ಟೀಸರ್ ಮತ್ತು ವೀರ ಸಾವರ್ಕರ್ ಪಾತ್ರವನ್ನು ನಿರ್ವಹಿಸುತ್ತಿರುವ ಸುನೀಲ್ ರಾವ್ ಅವರ ಫೋಟೋ ಶೂಟ್ ಕೂಡ ಮುಗಿದಿದೆ. ಮಾರ್ಚ್ 12 ರ ನಂತರ ಆ ಲುಕ್ ರಿಲೀಸ್ ಗೆ ಪ್ಲ್ಯಾನ್ ಮಾಡಲಾಗಿತ್ತು, ಅದು ಮುಂದೂಡಲಾಗಿದೆ.

    “ಹಿಂದಿಯಲ್ಲಿ ಈಗಾಗಲೇ ವೀರ ಸಾವರ್ಕರ್ ಅವರ ಬಯೋಪಿಕ್ ಚಾಲನೆ ಸಿಕ್ಕಿದೆ. ಆ ಸಿನಿಮಾಗೂ ನಮಗೂ ಸಂಬಂಧವಿಲ್ಲ. ಆ ತಂಡವೇ ಬೇರೆ ಇದೆ. ಕನ್ನಡದಲ್ಲಿ ಬರಲಿರುವ ತಂಡ ಮತ್ತು ಕಲಾವಿದರೇ ಬೇರೆ ಇದ್ದಾರೆ. ಚಿತ್ರೀಕರಣಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಮಾಡಿಕೊಂಡಿದ್ದೇವೆ. ಮಾರ್ಚ್ 25 ರಿಂದ ಶೂಟಿಂಗ್ ಶುರು ಮಾಡುತ್ತೇವೆ. ಇದೊಂದು ಭಾರೀ ಬಜೆಟ್ ಸಿನಿಮಾ ಆಗಲಿರಲಿದೆ’ ಎಂದರು ರಾಧಾಕೃಷ್ಣ ಪಲ್ಲಕ್ಕಿ.

    ಪಾತ್ರಕ್ಕೆ ಬೇಕಾಗಿರುವ ಎಲ್ಲ ತಯಾರಿಯನ್ನೂ ಸುನೀಲ್ ರಾವ್ ಕೂಡ ಮಾಡಿದ್ದಾರೆ. ಗೆಟಪ್ ಕೂಡ ಬದಲಾಯಿಸಿಕೊಂಡಿದ್ದಾರೆ. ಆದಷ್ಟು ನೈಜತೆಗೆ ಹತ್ತಿರವಾಗುವಂತೆ ಚಿತ್ರೀಕರಣಕ್ಕೆ ಪ್ಲ್ಯಾನ್ ಮಾಡಿದ್ದಾರಂತೆ ನಿರ್ದೇಶಕರು. ರಂಗಾಯಣ ರಘು, ಸಾಯಿಕುಮಾರ್, ರವಿಶಂಕರ್, ಅನುಪ್ರಭಾಕರ್ ಹೀಗೆ ಅನೇಕ ನುರಿತ ಕಲಾವಿದರು ಕೂಡ ತಾರಾಗಣದಲ್ಲಿ ಇರಲಿದ್ದಾರೆ. ಕೆ.ಎಸ್. ಚಂದ್ರಶೇಖರ್ ಅವರ ಸಿನಿಮಾಟೋಗ್ರಫಿ, ಥ್ರಿಲ್ಲರ್ ಮಂಜು ಅವರ ಸಾಹಸ ಮತ್ತು ಸ್ಯಾಮ್ ಸಂಗೀತ ಚಿತ್ರಕ್ಕಿರಲಿದೆ. ಕೆ.ಎನ್. ಚಕ್ರಪಾಣಿ ಈ ಸಿನಿಮಾದ ನಿರ್ಮಾಪಕರು.

  • Exclusive- ಸಾವರ್ಕರ್ ಸಿನಿಮಾದಲ್ಲಿ ಸುನೀಲ್ ರಾವ್ ಫಸ್ಟ್ ಲುಕ್

    Exclusive- ಸಾವರ್ಕರ್ ಸಿನಿಮಾದಲ್ಲಿ ಸುನೀಲ್ ರಾವ್ ಫಸ್ಟ್ ಲುಕ್

    ನ್ನಡದ ಹಿರಿಯ ಸಿನಿಮಾ ನಿರ್ದೇಶಕ ರಾಧಾಕೃಷ್ಣ ಪಲ್ಲಕ್ಕಿ (Radhakrishna Palakki) ಮಹತ್ವದ ಸಿನಿಮಾವೊಂದನ್ನು ಕೈಗೆತ್ತಿಕೊಂಡಿದ್ದಾರೆ. ಅವರು ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್  (Biopic) ಕುರಿತಾದ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಸಾವರ್ಕರ್ (Veera Savarkar) ಪಾತ್ರಕ್ಕಾಗಿ ಸುನೀಲ್ ರಾವ್ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಆ ಸಿನಿಮಾದ ಫಸ್ಟ್ ಲುಕ್ ಎಕ್ಸ್ ಕ್ಲೂಸಿವ್ ಆಗಿ ಪಬ್ಲಿಕ್ ಟಿವಿ ಡಿಜಿಟಲ್ ಗೆ ಸಿಕ್ಕಿದೆ. ಈ ಸಿನಿಮಾದ ಪ್ರಮುಖ ಪಾತ್ರಕ್ಕಾಗಿ ಬಾಲಿವುಡ್ ನಟ ಅನುಪಮ್ ಖೇರ್ (Anupam Kher) ಅವರನ್ನು ಕರೆತರುವ ಪ್ರಯತ್ನ ನಡೆದಿದ್ದು, ನಿರ್ದೇಶಕ ರಾಧಾಕೃಷ್ಣ ಪಲ್ಲಕ್ಕಿ ಈಗಾಗಲೇ ಮುಂಬೈಗೆ ಹೋಗಿ ಬಂದಿದ್ದಾರೆ.

    ಹಿಂದಿಯಲ್ಲಿ ಈಗಾಗಲೇ ಸಾವರ್ಕರ್ ಬಯೋಪಿಕ್ ರೆಡಿ ಆಗುತ್ತಿದ್ದು, ಬಹುತೇಕ ಚಿತ್ರೀಕರಣ ಮುಗಿದಿದೆ. ಈ ಹೊತ್ತಿನಲ್ಲಿ ಸ್ಯಾಂಡಲ್ ವುಡ್ ಅವರ ಬಯೋಪಿಕ್ ಅನ್ನು ಕೈಗೆತ್ತಿಕೊಂಡಿದೆ. ಈ ಕುರಿತು ಚಿತ್ರದ ನಿರ್ದೇಶಕ ಪಲ್ಲಕ್ಕಿ ರಾಧಾಕೃಷ್ಣ ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಎಕ್ಸ್ ಕ್ಲೂಸಿವ್ ಆಗಿ ಮಾತನಾಡಿದ್ದಾರೆ. ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.  ವೀರ ಸಾವರ್ಕರ್ ಪಾತ್ರವನ್ನು ಸುನೀಲ್ ರಾವ್ (Sunil Rao) ನಿರ್ವಹಿಸುತ್ತಿದ್ದು, ಮಹಾತ್ಮ ಗಾಂಧಿ ಪಾತ್ರವನ್ನು ಹಿಂದಿಯ ನಟ ಶರ್ಮಾ ಮಾಡುತ್ತಿದ್ದಾರೆ. ಚಿತ್ರದ ಟೀಸರ್  ಕೂಡ ಮುಗಿದಿದೆ. ಮಾರ್ಚ್ 12 ರ ನಂತರ ಆ ಲುಕ್ ರಿಲೀಸ್ ಗೆ ಪ್ಲ್ಯಾನ್ ಮಾಡಲಾಗಿತ್ತು, ಅದು ಮುಂದೂಡಲಾಗಿದೆ. ಇದನ್ನೂ ಓದಿ: ಮಗನಿಗೆ ಸಾಹಸಸಿಂಹ ವಿಷ್ಣುವರ್ಧನ್ ಹೆಸರಿಟ್ಟ ವಿಷ್ಣು ಅಭಿಮಾನಿ

    “ಹಿಂದಿಯಲ್ಲಿ ಈಗಾಗಲೇ ವೀರ ಸಾವರ್ಕರ್ ಅವರ ಬಯೋಪಿಕ್ ಚಾಲನೆ ಸಿಕ್ಕಿದೆ. ಆ ಸಿನಿಮಾಗೂ ನಮಗೂ ಸಂಬಂಧವಿಲ್ಲ. ಆ ತಂಡವೇ ಬೇರೆ ಇದೆ. ಕನ್ನಡದಲ್ಲಿ ಬರಲಿರುವ ತಂಡ ಮತ್ತು ಕಲಾವಿದರೇ ಬೇರೆ ಇದ್ದಾರೆ. ಚಿತ್ರೀಕರಣಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಮಾಡಿಕೊಂಡಿದ್ದೇವೆ. ಮಾರ್ಚ್ 25 ರಿಂದ ಶೂಟಿಂಗ್ ಶುರು ಮಾಡುತ್ತೇವೆ. ಇದೊಂದು ಭಾರೀ ಬಜೆಟ್ ಸಿನಿಮಾ ಆಗಲಿರಲಿದೆ’ ಎಂದರು ರಾಧಾಕೃಷ್ಣ ಪಲ್ಲಕ್ಕಿ.

    ಪಾತ್ರಕ್ಕೆ ಬೇಕಾಗಿರುವ ಎಲ್ಲ ತಯಾರಿಯನ್ನೂ ಸುನೀಲ್ ರಾವ್ ಕೂಡ ಮಾಡಿದ್ದಾರೆ. ಗೆಟಪ್ ಕೂಡ ಬದಲಾಯಿಸಿಕೊಂಡಿದ್ದಾರೆ. ಆದಷ್ಟು ನೈಜತೆಗೆ ಹತ್ತಿರವಾಗುವಂತೆ ಚಿತ್ರೀಕರಣಕ್ಕೆ ಪ್ಲ್ಯಾನ್ ಮಾಡಿದ್ದಾರಂತೆ ನಿರ್ದೇಶಕರು. ರಂಗಾಯಣ ರಘು, ಸಾಯಿಕುಮಾರ್, ರವಿಶಂಕರ್, ಅನುಪ್ರಭಾಕರ್ ಹೀಗೆ ಅನೇಕ ನುರಿತ ಕಲಾವಿದರು ಕೂಡ ತಾರಾಗಣದಲ್ಲಿ ಇರಲಿದ್ದಾರೆ. ಕೆ.ಎಸ್. ಚಂದ್ರಶೇಖರ್ ಅವರ ಸಿನಿಮಾಟೋಗ್ರಫಿ, ಥ್ರಿಲ್ಲರ್ ಮಂಜು ಅವರ ಸಾಹಸ ಮತ್ತು ಸ್ಯಾಮ್ ಸಂಗೀತ ಚಿತ್ರಕ್ಕಿರಲಿದೆ. ಕೆ.ಎನ್. ಚಕ್ರಪಾಣಿ ಈ ಸಿನಿಮಾದ ನಿರ್ಮಾಪಕರು.

  • Exclusive-‘ವೀರ ಸಾವರ್ಕರ್’ ಸಿನಿಮಾಗಾಗಿ ಕನ್ನಡಕ್ಕೆ ಬರಲಿದ್ದಾರಾ ಅನುಪಮ್ ಖೇರ್?

    Exclusive-‘ವೀರ ಸಾವರ್ಕರ್’ ಸಿನಿಮಾಗಾಗಿ ಕನ್ನಡಕ್ಕೆ ಬರಲಿದ್ದಾರಾ ಅನುಪಮ್ ಖೇರ್?

    ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತಾದ ಸಿನಿಮಾ ಕನ್ನಡದಲ್ಲೂ ತಯಾರಾಗುತ್ತಿದೆ. ಈ ಸಿನಿಮಾದ ಪ್ರಮುಖ ಪಾತ್ರಕ್ಕಾಗಿ ಬಾಲಿವುಡ್ ನಟ ಅನುಪಮ್ ಖೇರ್ ಅವರನ್ನು ಕರೆತರುವ ಪ್ರಯತ್ನ ನಡೆದಿದ್ದು, ನಿರ್ದೇಶಕ ರಾಧಾಕೃಷ್ಣ ಪಲ್ಲಕ್ಕಿ ಈಗಾಗಲೇ ಮುಂಬೈನಲ್ಲಿ ಬೀಡು ಬಿಟ್ಟಿದ್ದಾರೆ. ಅನುಪಮ್ ಖೇರ್ ಭೇಟಿಯಾಗಿ ಅವರು ಕಾದಿದ್ದಾರೆ. ಅಂದುಕೊಂಡಂತೆ ಆದರೆ ಇನ್ನೆರಡು ದಿನದಲ್ಲಿ ಅನುಪಮ್ ಕನ್ನಡಕ್ಕೆ ಬರುವ ವಿಚಾರ ಗೊತ್ತಾಗಲಿದೆ.

    ಹಿಂದಿಯಲ್ಲಿ ಈಗಾಗಲೇ ಸಾವರ್ಕರ್ ಬಯೋಪಿಕ್ ರೆಡಿ ಆಗುತ್ತಿದ್ದು, ಬಹುತೇಕ ಚಿತ್ರೀಕರಣ ಮುಗಿದಿದೆ. ಈ ಹೊತ್ತಿನಲ್ಲಿ ಸ್ಯಾಂಡಲ್ ವುಡ್ ಅವರ ಬಯೋಪಿಕ್ ಅನ್ನು ಕೈಗೆತ್ತಿಕೊಂಡಿದೆ. ಈ ಕುರಿತು ಚಿತ್ರದ ನಿರ್ದೇಶಕ ಪಲ್ಲಕ್ಕಿ ರಾಧಾಕೃಷ್ಣ ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಎಕ್ಸ್ ಕ್ಲೂಸಿವ್ ಆಗಿ ಮಾತನಾಡಿದ್ದಾರೆ. ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.  ವೀರ ಸಾವರ್ಕರ್ ಪಾತ್ರವನ್ನು ಸುನೀಲ್ ರಾವ್ ನಿರ್ವಹಿಸುತ್ತಿದ್ದು, ಮಹಾತ್ಮ ಗಾಂಧಿ ಪಾತ್ರವನ್ನು ಹಿಂದಿಯ ನಟ ಶರ್ಮಾ ಮಾಡುತ್ತಿದ್ದಾರೆ. ಚಿತ್ರದ ಟೀಸರ್ ಮತ್ತು ವೀರ ಸಾವರ್ಕರ್ ಪಾತ್ರವನ್ನು ನಿರ್ವಹಿಸುತ್ತಿರುವ ಸುನೀಲ್ ರಾವ್ ಅವರ ಫೋಟೋ ಶೂಟ್ ಕೂಡ ಮುಗಿದಿದೆ. ಮಾರ್ಚ್ 12 ರ ನಂತರ ಆ ಲುಕ್ ರಿಲೀಸ್ ಗೆ ಪ್ಲ್ಯಾನ್ ಮಾಡಲಾಗಿದೆ.

    “ಹಿಂದಿಯಲ್ಲಿ ಈಗಾಗಲೇ ವೀರ ಸಾವರ್ಕರ್ ಅವರ ಬಯೋಪಿಕ್ ಚಾಲನೆ ಸಿಕ್ಕಿದೆ. ಆ ಸಿನಿಮಾಗೂ ನಮಗೂ ಸಂಬಂಧವಿಲ್ಲ. ಆ ತಂಡವೇ ಬೇರೆ ಇದೆ. ಕನ್ನಡದಲ್ಲಿ ಬರಲಿರುವ ತಂಡ ಮತ್ತು ಕಲಾವಿದರೇ ಬೇರೆ ಇದ್ದಾರೆ. ಚಿತ್ರೀಕರಣಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಮಾಡಿಕೊಂಡಿದ್ದೇವೆ. ಮಾರ್ಚ್ 25 ರಿಂದ ಶೂಟಿಂಗ್ ಶುರು ಮಾಡುತ್ತೇವೆ. ಇದೊಂದು ಭಾರೀ ಬಜೆಟ್ ಸಿನಿಮಾ ಆಗಲಿರಲಿದೆ’ ಎಂದರು ರಾಧಾಕೃಷ್ಣ ಪಲ್ಲಕ್ಕಿ.  ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ಸೋಲಿನ ಬಗ್ಗೆ ಮೌನ ಮುರಿದ ಕನ್ನಡದ `ಗಿಲ್ಲಿ’ ನಟಿ ರಾಕುಲ್

    ಪಾತ್ರಕ್ಕೆ ಬೇಕಾಗಿರುವ ಎಲ್ಲ ತಯಾರಿಯನ್ನೂ ಸುನೀಲ್ ರಾವ್ ಕೂಡ ಮಾಡಿದ್ದಾರೆ. ಗೆಟಪ್ ಕೂಡ ಬದಲಾಯಿಸಿಕೊಂಡಿದ್ದಾರೆ. ಆದಷ್ಟು ನೈಜತೆಗೆ ಹತ್ತಿರವಾಗುವಂತೆ ಚಿತ್ರೀಕರಣಕ್ಕೆ ಪ್ಲ್ಯಾನ್ ಮಾಡಿದ್ದಾರಂತೆ ನಿರ್ದೇಶಕರು. ರಂಗಾಯಣ ರಘು, ಸಾಯಿಕುಮಾರ್, ರವಿಶಂಕರ್, ಅನುಪ್ರಭಾಕರ್ ಹೀಗೆ ಅನೇಕ ನುರಿತ ಕಲಾವಿದರು ಕೂಡ ತಾರಾಗಣದಲ್ಲಿ ಇರಲಿದ್ದಾರೆ. ಕೆ.ಎಸ್. ಚಂದ್ರಶೇಖರ್ ಅವರ ಸಿನಿಮಾಟೋಗ್ರಫಿ, ಥ್ರಿಲ್ಲರ್ ಮಂಜು ಅವರ ಸಾಹಸ ಮತ್ತು ಸ್ಯಾಮ್ ಸಂಗೀತ ಚಿತ್ರಕ್ಕಿರಲಿದೆ. ಕೆ.ಎನ್. ಚಕ್ರಪಾಣಿ ಈ ಸಿನಿಮಾದ ನಿರ್ಮಾಪಕರು.

  • Exclusive Details- ಕನ್ನಡದಲ್ಲೂ ‘ವೀರ ಸಾವರ್ಕರ್’ ಬಯೋಪಿಕ್

    Exclusive Details- ಕನ್ನಡದಲ್ಲೂ ‘ವೀರ ಸಾವರ್ಕರ್’ ಬಯೋಪಿಕ್

    ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ (Veera Savarkar) ಕುರಿತಾದ ಸಿನಿಮಾ ಕನ್ನಡದಲ್ಲೂ ಮೂಡಿ ಬರಲಿದೆ. ಹಿಂದಿಯಲ್ಲಿ ಈಗಾಗಲೇ ಸಾವರ್ಕರ್ ಬಯೋಪಿಕ್ (Biopic) ರೆಡಿ ಆಗುತ್ತಿದ್ದು, ಬಹುತೇಕ ಚಿತ್ರೀಕರಣ ಮುಗಿದಿದೆ. ಈ ಹೊತ್ತಿನಲ್ಲಿ ಸ್ಯಾಂಡಲ್ ವುಡ್ ಅವರ ಬಯೋಪಿಕ್ ಅನ್ನು ಕೈಗೆತ್ತಿಕೊಂಡಿದೆ. ಈ ಕುರಿತು ಚಿತ್ರದ ನಿರ್ದೇಶಕ ಪಲ್ಲಕ್ಕಿ ರಾಧಾಕೃಷ್ಣ (Radhakrishna Palakki) ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಎಕ್ಸ್ ಕ್ಲೂಸಿವ್ ಆಗಿ ಮಾತನಾಡಿದ್ದಾರೆ. ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

    ವೀರ ಸಾವರ್ಕರ್ ಪಾತ್ರವನ್ನು ಸುನೀಲ್ ರಾವ್ ನಿರ್ವಹಿಸುತ್ತಿದ್ದು, ಮಹಾತ್ಮ ಗಾಂಧಿ ಪಾತ್ರವನ್ನು ಹಿಂದಿಯ ನಟ ಶರ್ಮಾ ಮಾಡುತ್ತಿದ್ದಾರೆ. ಮತ್ತೊಂದು ಮಹತ್ವದ ಪಾತ್ರಕ್ಕಾಗಿ ಅನುಪಮ್ ಖೇರ್ ಅವರನ್ನು ಸಂಪರ್ಕಿಸಲಾಗುತ್ತಿದೆ. ಅನುಪಮ್ ಖೇರ್ ಭೇಟಿಯಾಗಿ ನಿರ್ದೇಶಕರು ಮುಂಬೈನಲ್ಲಿ ಬೀಡು ಬಿಟ್ಟಿದ್ದಾರೆ. ಚಿತ್ರದ ಟೀಸರ್ ಮತ್ತು ವೀರ ಸಾವರ್ಕರ್ ಪಾತ್ರವನ್ನು ನಿರ್ವಹಿಸುತ್ತಿರುವ ಸುನೀಲ್ ರಾವ್ ಅವರ ಫೋಟೋ ಶೂಟ್ ಕೂಡ ಮುಗಿದಿದೆ. ಮಾರ್ಚ್ 12 ರ ನಂತರ ಆ ಲುಕ್ ರಿಲೀಸ್ ಗೆ ಪ್ಲ್ಯಾನ್ ಮಾಡಲಾಗಿದೆ. ಇದನ್ನೂ ಓದಿ: ನಡುರಸ್ತೆಯಲ್ಲಿ ಹುಡುಗಿಗೆ ಹೊಡೆದ ಲವರ್‌ಗೆ ಜಾಡಿಸಿದ ನಟ ನಾಗಶೌರ್ಯ

    “ಹಿಂದಿಯಲ್ಲಿ ಈಗಾಗಲೇ ವೀರ ಸಾವರ್ಕರ್ ಅವರ ಬಯೋಪಿಕ್ ಚಾಲನೆ ಸಿಕ್ಕಿದೆ. ಆ ಸಿನಿಮಾಗೂ ನಮಗೂ ಸಂಬಂಧವಿಲ್ಲ. ಆ ತಂಡವೇ ಬೇರೆ ಇದೆ. ಕನ್ನಡದಲ್ಲಿ ಬರಲಿರುವ ತಂಡ ಮತ್ತು ಕಲಾವಿದರೇ ಬೇರೆ ಇದ್ದಾರೆ. ಚಿತ್ರೀಕರಣಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಮಾಡಿಕೊಂಡಿದ್ದೇವೆ. ಮಾರ್ಚ್ 25 ರಿಂದ ಶೂಟಿಂಗ್ ಶುರು ಮಾಡುತ್ತೇವೆ. ಇದೊಂದು ಭಾರೀ ಬಜೆಟ್ ಸಿನಿಮಾ ಆಗಲಿರಲಿದೆ’ ಎಂದರು ರಾಧಾಕೃಷ್ಣ ಪಲ್ಲಕ್ಕಿ.

    ಪಾತ್ರಕ್ಕೆ ಬೇಕಾಗಿರುವ ಎಲ್ಲ ತಯಾರಿಯನ್ನೂ ಸುನೀಲ್ ರಾವ್ ಕೂಡ ಮಾಡಿದ್ದಾರೆ. ಗೆಟಪ್ ಕೂಡ ಬದಲಾಯಿಸಿಕೊಂಡಿದ್ದಾರೆ. ಆದಷ್ಟು ನೈಜತೆಗೆ ಹತ್ತಿರವಾಗುವಂತೆ ಚಿತ್ರೀಕರಣಕ್ಕೆ ಪ್ಲ್ಯಾನ್ ಮಾಡಿದ್ದಾರಂತೆ ನಿರ್ದೇಶಕರು. ರಂಗಾಯಣ ರಘು, ಸಾಯಿಕುಮಾರ್, ರವಿಶಂಕರ್, ಅನುಪ್ರಭಾಕರ್ ಹೀಗೆ ಅನೇಕ ನುರಿತ ಕಲಾವಿದರು ಕೂಡ ತಾರಾಗಣದಲ್ಲಿ ಇರಲಿದ್ದಾರೆ. ಕೆ.ಎಸ್. ಚಂದ್ರಶೇಖರ್ ಅವರ ಸಿನಿಮಾಟೋಗ್ರಫಿ, ಥ್ರಿಲ್ಲರ್ ಮಂಜು ಅವರ ಸಾಹಸ ಮತ್ತು ಸ್ಯಾಮ್ ಸಂಗೀತ ಚಿತ್ರಕ್ಕಿರಲಿದೆ. ಕೆ.ಎನ್. ಚಕ್ರಪಾಣಿ ಈ ಸಿನಿಮಾದ ನಿರ್ಮಾಪಕರು.

  • ತುರ್ತು ನಿರ್ಗಮನ: ದಶಕಗಳ ನಂತರ ಪ್ರತ್ಯಕ್ಷರಾದ ಸುನೀಲ್

    ತುರ್ತು ನಿರ್ಗಮನ: ದಶಕಗಳ ನಂತರ ಪ್ರತ್ಯಕ್ಷರಾದ ಸುನೀಲ್

    ಸಿನಿಮಾರಂಗ ಅಂದ್ರೆ ಸಾಕಷ್ಟು ಸಿನಿಮಾಗಳು ಬರ್ತಾವೆ, ಹೋಗ್ತಾವೆ. ಆದರೆ ಕೆಲವೊಂದಿಷ್ಟು ಸಿನಿಮಾಗಳು ಬರ್ತಾನೆ ನಿರೀಕ್ಷೆಯನ್ನ ಹುಟ್ಟುಹಾಕ್ತಾವೆ. ಅದಕ್ಕೆ ಕಾರಣ ಸಿನಿಮಾ ಶೀರ್ಷಿಕೆ, ತಾರಾಗಣ, ಕಥಾ ಹಂದರ ಇನ್ನೂ ಏನೇನೋ ಇರತ್ತೆ. ಆದರೆ ಅಂಥದ್ದೇ ನಿರೀಕ್ಷೆಯೊಂದಿಗೆ ಇದೇ ವಾರ ಅಂದ್ರೆ 24 ರಂದು ತೆರೆಕಾಣ್ತಿರೋ ಸಿನಿಮಾ ತುರ್ತು ನಿಗಮನ. ಹೌದು. ಟೈಟಲ್ ಕೇಳಿದ್ರೆನೇ ಇಲ್ಲೇನೂ ನಿಗೂಢಗಳಂತೂ ಇದೇ ಅನ್ನೋದು ಪಕ್ಕಾ ಆಗತ್ತೆ. ಆದರೆ ಆ ಸೀಕ್ರೆಟ್ ಗಳನ್ನ ಗೌಪ್ಯವಾಗಿಟ್ಟುಕೊಂಡು ಸಿನಿಮಾ ಮೇಲಿನ ಭರವಸೆ, ಕಾತುರವನ್ನ ಹಾಗೇ ಕಾಯ್ದಿಟ್ಟುಕೊಂಡು ಬಂದಿರುವ ಈ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ.

    ಹೇಮಂತ್ ಕುಮಾರ್ ನಿರ್ದೇಶನದ ತುರ್ತು ನಿಗಮನ ಚಿತ್ರ ಬರೀ ಟೈಟಲ್ ಮೂಲಕ ಮಾತ್ರವಲ್ಲ ಟ್ರೈಲರ್ ಮೂಲಕವೂ ಗಮನ ಸೆಳೆದಿತ್ತು. ಈ ಚಿತ್ರದಲ್ಲಿ ಪ್ರೇಕ್ಷಕರೊಳಗಿರೋ ನಿರೀಕ್ಷೆಗಳನ್ನು ಮೀರಿದ ಕಥಾನಕವಿದೆ. ಕಲ್ಪನೆಗೆ ನಿಲುಕದ ಅಚ್ಚರಿಗಳಿದ್ದಾವೆ ಅನ್ನೋದನ್ನು ಟ್ರೈಲರ್ ಮೂಲಕ ಚಿತ್ರತಂಡವೇ ರಿವೀಲ್ ಮಾಡಿತ್ತು. ತುರ್ತು ನಿರ್ಗಮನ ಚಿತ್ರದಿಂದ ಸಿನಿಪ್ರಿಯರಿಗೆ ಇನ್ನೊಂದು ಗುಡ್ ನ್ಯೂಸ್ ಸಹ ಇದೆ. ಅದೇನಪ್ಪಾ ಅಂದ್ರೆ ಈ ಸಿನಿಮಾದ ಕಥೆಯೇ ವಿಶೇಷ ಅಂದುಕೊಂಡರೆ ಅದು ತಪ್ಪು, ಯಾಕಂದ್ರೆ ಈ ಸಿನಿಮಾದ ಪಾತ್ರವರ್ಗ ಮತ್ತು ಅದನ್ನು ನಿರ್ವಹಿಸಿರುವ ಕಲಾವಿದರ ವಿಚಾರವಾಗಿಯೂ ಅಂಥಾದ್ದೇ ವಿಶೇಷತೆಗಳಿದ್ದಾವೆ. ಅದ್ ಹೇಗೆ? ಅಂಥ ವಿಶೇಷ ಈ ಸಿನಿಮಾದಲ್ಲಿ ಏನಿದೆ? ಯಾರಿದ್ದಾರೆ? ಅಂತನಾ ? ಈ ಮೂಲಕ ಎಕ್ಸ್‍ಕ್ಯೂಸ್‍ಮೀ ಚಿತ್ರದ ಟೀನೇಜ್ ಹುಡುಗೀರ ಮನ ಕದ್ದಿದ್ದ ಸುನೀಲ್ ರಾವ್ ದಶಕಗಳ ನಂತರ ಮತ್ತೆ ನಾಯಕ ನಟನಾಗಿ ತೆರೆಯ ಮೇಲೆ ಕಾಣಿಸಿಕೊಳ್ತಿದ್ದಾರೆ. ಇದನ್ನೂ ಓದಿ: ನಟಿ ಕಾರುಣ್ಯ ರಾಮ್ ಗೃಹ ಪ್ರವೇಶದಲ್ಲಿ ಚಂದನವನದ ತಾರೆಯರು

    ಅದೇನೋ ಗೊತ್ತಿಲ್ಲ ಸಖತ್ ಹೈಪ್ ಕ್ರಿಯೇಟ್ ಆಗಿ ಮಿಂಚುತ್ತಿದ್ದ ಕಾಲದಲ್ಲೇ ಸುನೀಲ್ ತೆರೆಮರೆಗೆ ಸರಿದಿದ್ದರು. ಆದರೆ ಬಾಲ ನಟನಾಗಿಯೇ ಇಷ್ಟವಾಗಿದ್ದ ಸುನೀಲ್ ರಾವ್ ನಾಯಕ ನಟನಾಗಿಯೂ ಮನಸು ಕದ್ದಿದ್ರು. ಆದರೆ ಸಡನ್ ಅಗಿ ಸುನಿಲ್ ನಟನೆಯಿಂದ ದೂರ ಊಳಿದರೂ ಸಹ ಅವರ ಅಭಿಮಾನಿಗಳು ಮಾತ್ರ ಅವರನ್ನ ಮರೆತಿಲ್ಲ ಸುನೀಲ್ ಮತ್ಯಾವಾಗ ರಿಟರ್ನ್ ಸಿನೆಮಾಗೆ ಬರ್ತಾರೆ? ನಟಿಸ್ತಾರೆ ಅಂತ ಎದುರು ನೋಡ್ತಿದ್ರು. ಆ ನಿರೀಕ್ಷೆಗಳು ತುರ್ತು ನಿರ್ಗಮನ ಸಿನಿಮಾ ಮೂಲಕ ನಿಜವಾಗಲಿದೆ.

    ಒಂದೊಳ್ಳೆ ಅವಕಾಶ ಮತ್ತು ಅದ್ಭುತ ಪಾತ್ರದ ಮೂಲಕ ಮತ್ತೆ ಬಣ್ಣ ಹಚ್ಚುವ ಇರಾದೆ ಹೊಂದಿದ್ದ ಸುನೀಲ್ ರಾವ್‍ಗೆ ವರದಂತೆ ಸಿಕ್ಕಿದ್ದ ಚಿತ್ರ ತುರ್ತು ನಿರ್ಗಮನ. ಅವರೇ ಹೇಳುವ ಪ್ರಕಾರ ಈ ಚಿತ್ರದ ಕಥೆಯನ್ನು ಯಾವ ಹೀರೋಗಳೇ ಕೇಳಿದರೂ ಇಲ್ಲ ಎನ್ನಲು ಸಾಧ್ಯವೇ ಇಲ್ಲವಂತೆ. ಅವರ ಪಾತ್ರದ ಬಗೆಗೂ ಚಿತ್ರ ತಂಡ ಕೆಲವು ವಿಚಾರಗಳನ್ನು ಬಿಟ್ಟು ಕೊಟ್ಟಿತ್ತು. ಅವರ ಪ್ರಕಾರ ಬಹುತೇಕ ಗಂಡುಮಕ್ಕಳ ಬದುಕಿಗೆ, ಮನಸ್ಥಿತಿಗೆ ಹತ್ತಿರವಾದ ಪಾತ್ರಕ್ಕೆ ಸುನೀಲ್ ಬಣ್ಣ ಹಚ್ಚಿದ್ದು, ತನ್ನನ್ನು ತಾನೇ ಬುದ್ಧಿವಂತ ಅಂದುಕೊಂಡಿರುವ ಯುವಕನೊಬ್ಬ ಅದ್ಯಾವುದೋ ಅಗೋಚರ ಸಾಧನೆಗೆ ರೆಡಿಯಾಗಿ ನಿಂತಿರುವ ಪಾತ್ರಕ್ಕೆ ಸುನೀಲ್ ರಾವ್ ಜೀವ ತುಂಬಿದ್ದಾರಂತೆ. ಈ ಪಾತ್ರದ ಮೂಲಕ ಸುನೀಲ್ ಚಿತ್ರಬದುಕಿಗೆ ಹಾಕಿದ್ದ ಒಂದಷ್ಟು ಕಾಲದ ಬ್ರೇಕ್ ಈ ತುರ್ತು ನಿರ್ಗಮನದ ಮೂಲಕ ಒಂದೊಳ್ಳೆ ಹೊಸ ಮೈಲಿಗಲ್ಲಾಗಿ ನಿಲ್ಲಲಿದೆಯಂತೆ.

    ಚಿತ್ರದಲ್ಲಿ ಡಿಫರೆಂಟ್ ರೋಲ್ ನಲ್ಲಿ ಸುಧಾರಾಣಿ, ರಾಜ್ ಬಿ ಶೆಟ್ಟಿ, ನಟಿಸಿದ್ದು, ಸಂಯುಕ್ತ ಹೆಗಡೆ, ಹಿತ ಚಂದ್ರಶೇಖರ್ ತಾರಾಗಣದಲ್ಲಿದ್ದಾರೆ. ಧೀರೇಂದ್ರ ದಾಸ್ ಸಂಗೀತ, ಪ್ರಯಾಗ್ ಅವರ ಛಾಯಾಗ್ರಹಣ ತುರ್ತು ನಿರ್ಗಮನಕ್ಕಿದ್ದು ಇವೆಲ್ಲದರ ಒಟ್ಟು ಪ್ರಯತ್ನ ಇದೇ ವಾರವೇ ಅನಾವರಣಗೊಳ್ಳಲಿದೆ.

    Live Tv

  • ನಟ ಸುನೀಲ್ ರಾವ್ ಮದುವೆಗೆ ಆಗಮಿಸಿದ ಸ್ಯಾಂಡಲ್‍ವುಡ್ ತಾರೆಯರು!

    ನಟ ಸುನೀಲ್ ರಾವ್ ಮದುವೆಗೆ ಆಗಮಿಸಿದ ಸ್ಯಾಂಡಲ್‍ವುಡ್ ತಾರೆಯರು!

    ಬೆಂಗಳೂರು: ಸ್ಯಾಂಡಲ್‍ವುಡ್ ಖ್ಯಾತ ಗಾಯಕಿ ಬಿ.ಕೆ ಸುಮಿತ್ರ ಅವರ ಪುತ್ರ ನಟ, ಗಾಯಕ ಸುನೀಲ್ ರಾವ್ ತನ್ನ ಪ್ರೇಯಸಿ ಶ್ರೇಯಾ ಐಯ್ಯರ್ ಜೊತೆ ಸೋಮವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

    ಬೆಂಗಳೂರಿನ ಜೆಪಿ ನಗರದಲ್ಲಿ ಸುನೀಲ್ ಹಾಗೂ ಶ್ರೇಯಾ ಅವರ ಮದುವೆ ನಡೆಯಿತು. ಸುನೀಲ್ ರಾವ್ ಮದುವೆ ತುಂಬಾ ಅದ್ಧೂರಿಯಾಗಿ ನಡೆದಿದ್ದು, ಹಿಂದೂ ಸಂಪ್ರದಾಯದಂತೆ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇನ್ನು ಸುನೀಲ್ ರಾವ್ ಮದುವೆಯಲ್ಲಿ ಹಲವಾರು ಸಿನಿಮಾ ಕಲಾವಿದರು ಭಾಗಿಯಾಗಿದ್ದರು.

    ನಟಿ ಸುಧಾರಾಣಿ, ನಟಿ ಹಗೂ ನೃತ್ಯಗಾರ್ತಿ ಹೇಮಾ ಪಂಚಮುಖಿ, ನಟಿ ಅನುಪಮಾ ಗೌಡ, ನಿರ್ದೇಶಕ ರಘುಶಾಸ್ತ್ರಿ ಮದುವೆಯಲ್ಲಿ ಭಾಗಿಯಾಗಿದ್ದರು. ಅಲ್ಲದೇ ಯುವ ಗಾಯಕ-ಗಾಯಕಿಯಾಗಿರುವ ಚಿನ್ಮಯ್, ಸಿಂಚನ್ ದೀಕ್ಷಿತ್, ಡಾ. ಶಮಿತಾ ಮಲ್ನಾಡ್ ಹಾಗೂ ನಿರ್ದೇಶಕ ಮಯೂರ ರಾಘವೇಂದ್ರ ಸುನೀಲ್ ಅವರ ಮದುವೆಗೆ ಆಗಮಿಸಿದ್ದರು. ಸುನೀಲ್ ರಾವ್ ಅವರ ಸಹೋದರಿ ಸೌಮ್ಯ ರಾವ್ ಮುಂಬೈನಲ್ಲಿ ಖ್ಯಾತ ಗಾಯಕಿಯಾಗಿದ್ದು, ತನ್ನ ಸಹೋದರನ ಮದುವೆಗೆ ಆಗಮಿಸಿ ನೂತನ ದಂಪತಿಗೆ ಶುಭ ಕೋರಿದ್ದಾರೆ.

    ಪ್ರೀತಿ ಶುರುವಾಗಿದ್ದು ಹೇಗೆ?
    ಸುನೀಲ್ ರಾವ್ ಹಾಗೂ ಶ್ರೇಯಾ ಐಯ್ಯರ್ ವೆಬ್ ಸೀರಿಸ್ ಚಿತ್ರೀಕರಣದ ವೇಳೆ ಒಬ್ಬರಿಗೊಬ್ಬರು ಪರಿಚಯವಾಗಿದ್ದರು. ಪರಿಚಯವಾದ ಮೇಲೆ ಇಬ್ಬರು ಒಬ್ಬರನೊಬ್ಬರು ಪ್ರೀತಿಸಲು ಶುರು ಮಾಡಿದ್ದರು. ಈಗ ಇಬ್ಬರ ಕುಟುಂಬದ ಒಪ್ಪಿಗೆಯಿಂದ ಹೊಸ ಜೀವನಕ್ಕೆ ಕಾಲಿಟ್ಟರು. ಸದ್ಯ ಸುನೀಲ್ ರಾವ್ ‘ಎಕ್ಸ್ ಕ್ಯೂಸ್ ಮಿ’ ಚಿತ್ರದ ನಂತರ ವೆಬ್ ಸೀರಿಸ್ ನಲ್ಲಿ ನಟಿಸಿ ಮತ್ತೆ ಚಿತ್ರರಂಗದಲ್ಲಿ ಸಕ್ರೀಯ ನಟನಾಗಿ ಕಾಣಿಸಿಕೊಂಡಿದ್ದಾರೆ. ಈಗ ‘ತುರ್ತು ನಿರ್ಗಮನ’ ಚಿತ್ರದ ಮೂಲಕ ಮತ್ತೆ ಸ್ಯಾಂಡಲ್ ವುಡ್‍ಗೆ ಎಂಟ್ರಿ ಕೊಡುತ್ತಿದ್ದಾರೆ.

    ಸುನೀಲ್ ರಾವ್ ಅವರ ಪತ್ನಿ ಶ್ರೇಯಾ ಐಯ್ಯರ್ ವೃತ್ತಿಯಲ್ಲಿ ಕಾಸ್ಟ್ಯೂಮ್ ಡಿಸೈನರ್ ಆಗಿದ್ದು, ಸುನೀಲ್ ಅಭಿನಯಿಸಿದ ವೆಬ್ ಸೀರಿಸ್‍ಗೆ ಡಿಸೈನರ್ ಆಗಿ ಕೆಲಸ ಮಾಡಿದ್ದರು. ಸದ್ಯ ‘ಟಕ್ಕರ್’ ಚಿತ್ರಕ್ಕೂ ಶ್ರೇಯಾ ಅವರೇ ವಸ್ತ್ರ ವಿನ್ಯಾಸ ಮಾಡಲಿದ್ದಾರೆ.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಸುನೀಲ್ ರಾವ್!

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಸುನೀಲ್ ರಾವ್!

    ಬೆಂಗಳೂರು: ಸ್ಯಾಂಡಲ್‍ವುಡ್ ಖ್ಯಾತ ಗಾಯಕಿ ಬಿ.ಕೆ ಸುಮಿತ್ರ ಅವರ ಪುತ್ರ ನಟ ಹಾಗೂ ಗಾಯಕ ಸುನೀಲ್ ರಾವ್ ತನ್ನ ಪ್ರೇಯಸಿ ಶ್ರೇಯಾ ಐಯ್ಯರ್ ಜೊತೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಸುನೀಲ್ ರಾವ್ ಅವರ ಪತ್ನಿ ಶ್ರೇಯಾ ಐಯ್ಯರ್ ವೃತ್ತಿಯಲ್ಲಿ ಕಾಸ್ಟ್ಯೂಮ್ ಡಿಸೈನರ್ ಆಗಿದ್ದು, ಸುನೀಲ್ ಅಭಿನಯಿಸಿದ ವೆಬ್ ಸೀರಿಸ್‍ಗೆ ಡಿಸೈನರ್ ಆಗಿ ಕೆಲಸ ಮಾಡಿದ್ದಾರೆ. ಸದ್ಯ ‘ಟಕ್ಕರ್’ ಚಿತ್ರಕ್ಕೂ ಶ್ರೇಯಾ ಅವರೇ ವಸ್ತ್ರ ವಿನ್ಯಾಸ ಮಾಡಲಿದ್ದಾರೆ.

    ಬೆಂಗಳೂರಿನ ಜೆಪಿ ನಗರದಲ್ಲಿ ಸುನೀಲ್ ಹಾಗೂ ಶ್ರೇಯಾ ಅವರ ಮದುವೆ ನಡೆದಿದೆ. ಸುನೀಲ್ ಆಪ್ತರಾದ ಅನುಪಮ ಗೌಡ ಹಾಗೂ ರಘು ಶಾಸ್ತ್ರಿ ಸೇರಿದಂತೆ ಹಲವಾರು ಗಣ್ಯರು ಮದುವೆಯಲ್ಲಿ ಭಾಗಿಯಾಗಿದ್ದರು.

    ಪ್ರೀತಿ ಶುರುವಾಗಿದ್ದು ಹೇಗೆ?
    ಸುನೀಲ್ ರಾವ್ ಹಾಗೂ ಶ್ರೇಯಾ ಐಯ್ಯರ್ ವೆಬ್ ಸೀರಿಸ್ ಚಿತ್ರೀಕರಣದ ವೇಳೆ ಒಬ್ಬರಿಗೊಬ್ಬರು ಪರಿಚಯವಾಗಿದ್ದರು. ಪರಿಚಯವಾದ ಮೇಲೆ ಇಬ್ಬರು ಒಬ್ಬರನೊಬ್ಬರು ಪ್ರೀತಿಸಲು ಶುರು ಮಾಡಿದ್ದರು. ಈಗ ಇಬ್ಬರ ಕುಟುಂಬದ ಒಪ್ಪಿಗೆಯಿಂದ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಸದ್ಯ ಸುನೀಲ್ ರಾವ್ ‘ಎಕ್ಸ್ ಕ್ಯೂಸ್ ಮಿ’ ಚಿತ್ರದ ನಂತರ ವೆಬ್ ಸೀರಿಸ್ ನಲ್ಲಿ ನಟಸಿ ಮತ್ತೆ ಚಿತ್ರರಂಗದಲ್ಲಿ ಸಕ್ರೀಯ ನಟನಾಗಿ ಕಾಣಿಸಿಕೊಂಡಿದ್ದಾರೆ. ಈಗ ‘ತುರ್ತು ನಿರ್ಗಮನ’ ಚಿತ್ರದ ಮೂಲಕ ಮತ್ತೆ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡುತ್ತಿದ್ದಾರೆ.