Tag: sunnyleone

  • ಪೊಲೀಸ್‌ ನೇಮಕಾತಿ ಪರೀಕ್ಷೆಯಲ್ಲಿ ಸನ್ನಿ ಲಿಯೋನ್‌ ಫೋಟೋ!

    ಪೊಲೀಸ್‌ ನೇಮಕಾತಿ ಪರೀಕ್ಷೆಯಲ್ಲಿ ಸನ್ನಿ ಲಿಯೋನ್‌ ಫೋಟೋ!

    ಲಕ್ನೋ: ಪಡ್ಡೆ ಹುಡುಗರ ಹಾಟ್‌ ಫೇವರೇಟ್‌, ನಟಿ ಸನ್ನಿಲಿಯೋನ್‌ ಅವರು ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ. ಈ ಬಾರಿ ಪೊಲೀಸ್‌ ನೇಮಕಾತಿ ಪರೀಕ್ಷೆಯಲ್ಲಿ ಸನ್ನಿ ಲಿಯೋನ್ (Sunny Leone) ಫೋಟೋ ಕಂಡುಬಂದಿದೆ.

    ಹೌದು. ಉತ್ತರ ಪ್ರದೇಶ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ (UP Police Recruitment Exam) ಪ್ರವೇಶ ಪತ್ರದಲ್ಲಿ ನಟಿ ಫೋಟೋ ಕಾಣಿಸಿಕೊಂಡಿದೆ. ಸದ್ಯ ಈ ಪ್ರವೇಶ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ. ಇದನ್ನೂ ಓದಿ: ಏರ್‌ಪೋರ್ಟ್ ಸ್ಫೋಟಿಸುತ್ತೇನೆ- ‌ ಬೆದರಿಕೆ ಕರೆ ಮಾಡಿ ಮೊಬೈಲ್‌ ಸ್ವಿಚ್ಛ್‌ ಆಫ್‌ ಮಾಡ್ಕೊಂಡ!

    ಫೇ. 17 ರಂದು ಉತ್ತರ ಪ್ರದೇಶ ಪೊಲೀಸ್ ನೇಮಕಾತಿ ಮತ್ತು ಪ್ರಚಾರ ಮಂಡಳಿ (UPPRPB)ಯು ರಾಜ್ಯದ 2,385 ಪರೀಕ್ಷಾ ಕೇಂದ್ರಗಳೊಂದಿಗೆ 75 ಜಿಲ್ಲೆಗಳಲ್ಲಿ ಪರೀಕ್ಷೆಗಳನ್ನು ನಡೆಸಿತು. ಇದರಲ್ಲಿ ಕನೌಜ್‌ನ ತಿರ್ವಾ ತಹಸಿಲ್‌ನಲ್ಲಿರುವ ಶ್ರೀಮತಿ ಸೋನೆಶ್ರೀ ಸ್ಮಾರಕ ಬಾಲಕಿಯರ ಕಾಲೇಜು ಕೂಡ ಒಂದು ಪರೀಕ್ಷಾ ಕೇಂದ್ರವಾಗಿತ್ತು. ಇಲ್ಲಿ ಸನ್ನಿಲಿಯೋನ್ ಅವರ ಫೋಟೋದೊಂದಿಗೆ ಉತ್ತರ ಪ್ರದೇಶ ಪೊಲೀಸ್ ನೇಮಕಾತಿ ಮತ್ತು ಪ್ರಚಾರ ಮಂಡಳಿಯ (UPPRB) ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಲಾಗಿದೆ.

  • ಸನ್ನಿ ವಿರೋಧಿಸಿ ಕೈ ಕುಯ್ದುಕೊಂಡವ್ರೇ 235 ಟಿಕೆಟ್ ಬುಕ್ ಮಾಡಿದ್ರು!

    ಸನ್ನಿ ವಿರೋಧಿಸಿ ಕೈ ಕುಯ್ದುಕೊಂಡವ್ರೇ 235 ಟಿಕೆಟ್ ಬುಕ್ ಮಾಡಿದ್ರು!

    ಬೆಂಗಳೂರು: ಬಾಲಿವುಡ್ ಮೋಹಕ ಬೆಡಗಿ ಸನ್ನಿಲಿಯೋನ್ ಎಂಟ್ರಿ ವಿರೋಧಿಸಿ ಕೈ ಕುಯ್ದುಕೊಂಡವರೇ ಇಂದು ಟಿಕೆಟ್ ಬುಕ್  ಮಾಡಿರುವುದು ಕನ್ನಡ ಸಂಘಟನೆಗಳ ಇಬ್ಬಗೆಯ ನೀತಿ ಕೊಂಚ ಅನುಮಾನ ಮೂಡಿಸಿದೆ.

    ನವೆಂಬರ್ ಮೂರರಂದು ಬೆಂಗಳೂರಿಗೆ ಪಡ್ಡೆ ಹುಡುಗರಿಗೆ ಕಚಕುಳಿ ಇಡೋದಕ್ಕೆ ಸನ್ನಿಲಿಯೋನ್ ಮತ್ತೆ ಬರುತ್ತಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್‍ನಲ್ಲಿ ನಡೆಯುವ ಸನ್ನಿ ಕಾರ್ಯಕ್ರಮ ನೋಡೋಕೆ ಇದೀಗ ಗೆ ಸನ್ನಿಲಿಯೋನ್‍ಗೆ ವಿರೋಧ ವ್ಯಕ್ತಪಡಿಸಿ ಟೌನ್‍ಹಾಲ್‍ನಲ್ಲಿ ಕೈ ಕುಯ್ದುಕೊಂಡಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ಯುವಸೇನೆ ಹುಡುಗರು ನೂಕು ನುಗ್ಗಲಲ್ಲಿ ನಿಂತು ಕಾರ್ಯಕ್ರಮದ ಟಿಕೆಟ್  ಖರೀದಿಸಿದ್ದಾರೆ.

    ಹೊಸವರ್ಷದಂದು ಹಾಗೂ ಸನ್ನಿಲಿಯೋನ್‍ಗೆ ಕನ್ನಡ ಸಿನಿಮಾಗೆ ಭಾರೀ ವಿರೋಧ ವ್ಯಕ್ತಪಡಿಸಿ, ರೋಡ್ ರೋಡ್‍ನಲ್ಲಿ ಪ್ರತಿಭಟಿಸಿದ ಹುಡುಗರು ಈ ಬಾರಿ ಒಂದಲ್ಲ-ಎರಡಲ್ಲ ಬರೋಬ್ಬರಿ 235 ಟಿಕೆಟ್ ತೆಗೆದುಕೊಂಡಿದ್ದಾರೆ. ಶೇಷಮ್ಮ ಕನ್ನಡ ಹಾಡಿಗೆ ಕುಣಿದ್ರೆ ನೋಡೋಕೆ ನಮ್ಮದೇನು ಅಭ್ಯಂತರವಿಲ್ಲ. ಆಮೇಲೆ ರಘುದೀಕ್ಷಿತ್ ಕನ್ನಡ ಹಾಡು ಹಾಡ್ತವ್ರೆ. ಅದನ್ನೆಲ್ಲ ನೋಡೋಕೆ ಹೋಗ್ತಿವಿ ಅಂತಾ ಸ್ಟೇಟ್‍ಮೆಂಟ್ ಕೊಟ್ಟಿದ್ದಾರೆ.

    ಕರವೇ ಯುವಸೇನೆ ಅಧ್ಯಕ್ಷ ಹರೀಶ್ ಮಾಧ್ಯಮಗಳ ಜೊತೆ ಮಾತನಾಡಿ, ನಾವು ಕೂಡ 235 ಟಿಕೆಟ್ ಖರೀದಿಸಿದ್ದೇವೆ. ಯಾಕಂದ್ರೆ ಅಲ್ಲಿ ಕನ್ನಡ ಹಾಡುಗಳನ್ನು ಹಾಕುತ್ತಾರೆ ಅಂತೆ. ಐಟಿಬಿಟಿ ಕಂಪನಿಗಳಲ್ಲಿ ಕನ್ನಡ ಹಾಡು ಹಾಕ್ತಾರೆ ಅಂದ್ರೆ ನಮಗೂ ಬಹಳಷ್ಟು ಸಂತೋಷ ಆಗುತ್ತದೆ. ಹೀಗಾಗಿ ನಾವು ಕೂಡ ಅದನ್ನು ಕೇಳಲು ಹೋಗ್ತಾ ಇದ್ದೀವಿ. ಮತ್ತೆ ಜಾಗದಲ್ಲಿ ಸನ್ನಿಲಿಯೋನ್ ಬಂದ್ರೆ ನಮ್ಮ ಹೋರಾಟ ಇದ್ದೇ ಇರುತ್ತದೆ ಅಂತ ಹೇಳಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸನ್ನಿಲಿಯೋನ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಬೆಂಗ್ಳೂರಲ್ಲಿ ಪ್ರತಿಭಟನೆ

    ಸನ್ನಿಲಿಯೋನ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಬೆಂಗ್ಳೂರಲ್ಲಿ ಪ್ರತಿಭಟನೆ

    ಬೆಂಗಳೂರು: ಬಾಲಿವುಡ್ ಮೋಹಕ ನಟಿ ವಿರುದ್ಧ ಮತ್ತೊಮ್ಮೆ ಬೆಂಗಳೂರಲ್ಲಿ ಪ್ರತಿಭಟನೆ ನಡೆದಿದೆ. ವೀರ ಮಹಾದೇವಿ ಚಿತ್ರದಲ್ಲಿ ಸನ್ನಿ ಲಿಯೋನ್ ನಟಿಸಬಾರದು ಎಂದು ಸನ್ನಿ ಲಿಯೋನ್ ಹಾಗೂ ನಿರ್ಮಾಪಕ ಡಿ.ಸಿ ವಾಡಿ ಉದಯನ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

    ವೀರ ಮಹಾದೇವಿ ಐತಿಹಾಸಿಕ ಚಿತ್ರವಾಗಿದೆ. ಹೀಗಾಗಿ ಈ ಚಿತ್ರದಲ್ಲಿ ನೀಲಿ ತಾರೆ ಸನ್ನಿ ಲಿಯೋನ್ ನಟಿಸಬಾರದು ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಸನ್ನಿಲಿಯೋನ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಕಾರ್ಯಕರ್ತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ವೀರ ಮಹಾದೇವಿ ಚಿತ್ರ ಪಂಚ ಭಾಷೆಗಳಲ್ಲಿ ತಯಾರಾಗುತ್ತಿದ್ದು, ಒಟ್ಟು 100 ಕೋಟಿ ವೆಚ್ಚದಲ್ಲಿ ಈ ಸಿನಿಮಾ ರೆಡಿಯಾಗುತ್ತಿದೆ.

    ಹೊಸ ವರ್ಷ ಆಚರಣೆಗೆ ಸಿಲಿಕಾನ್ ಸಿಟಿಗೆ ಬಾಲಿವುಡ್ ಮೋಹಕ ನಟಿ ಸನ್ನಿಲಿಯೋನ್ ಅವರು ಬರುವುದನ್ನು ನಿಷೇಧಿಸಿದ್ದು, ಇತ್ತೀಚೆಗಷ್ಟೇ ಮತ್ತೆ ಅವರ ಎಂಟ್ರಿಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ನವೆಂಬರ್ 3 ರಂದು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಸನ್ನಿ ನೈಟ್ ಹೆಸರಿನಲ್ಲಿ ಕಾರ್ಯಕ್ರಮವೊಂದನ್ನು ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಸನ್ನಿ, ಕನ್ನಡ ಹಾಡುಗಳಿಗೆ ಹೆಜ್ಜೆ ಹಾಕಲಿದ್ದು, ಆದ್ರೆ ಇದೀಗ ಸನ್ನಿ ಎಂಟ್ರಿಗೆ ಕನ್ನಡ ರಕ್ಷಣಾ ವೇದಿಕೆ ಯುವಸೇನೆ ವಿರೋಧ ವ್ಯಕ್ತಪಡಿಸಿತ್ತು.

    `ವೀರ ಮಹಾದೇವಿ’ ಚಿತ್ರದಲ್ಲಿ ಸನ್ನಿಲಿಯೋನ್ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಇದು ಅಪರಾಧ ಯಾವುದೇ ಕಾರಣಕ್ಕೂ ಈ ಚಿತ್ರದಲ್ಲಿ ಸನ್ನಿ ನಟಿಸಬಾರದು. ಹೀಗಾಗಿ ಈ ಚಿತ್ರದ ವಿರುದ್ಧ ಹೋರಾಟ ಮಾಡುತ್ತೀವಿ. ಸನ್ನಿ ಲಿಯೋನ್ ಎಲ್ಲಿಗೆ ಬಂದರೂ ನಾವು ಅವರನ್ನ ತಡೆ ಮಾಡ್ತೀವಿ. ಇದು ನಮ್ಮ ಸಂಸ್ಕೃತಿ ವಿಚಾರ. ಹೀಗಾಗಿ ನಾವು ಅದನ್ನ ವಿರೋಧಿಸ್ತೀವಿ. ಆದ್ರೆ ನಾವು ಕಾರ್ಯಕ್ರಮವನ್ನ ವಿರೋಧ ಮಾಡುತ್ತಿಲ್ಲ. ಬದಲಾಗಿದೆ ಸನ್ನಿ ಲೀಯೊನ್ ಅವರನ್ನ ಮಾತ್ರ ವಿರೋಧಿಸುತ್ತೇವೆ ಅಂತ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಕರವೇ ಯುವಸೇನೆಯ ಹರೀಶ್ ಹೇಳಿದ್ದರು.

    ಸನ್ನಿ ಲಿಯೋನ್ ಯಾವುದೇ ಕಾರಣಕ್ಕೂ ಬೆಂಗಳೂರಿಗೆ ಬರಬಾರದು. ಅವರ ಹಿನ್ನೆಲೆ ನೋಡಿದ್ರೆ ಬರೋದು ಬೇಡ ಅನ್ನಿಸುತ್ತೆ. ಸನ್ನಿ ಲಿಯೋನ್ `ನೀಲಿ ಚಿತ್ರದ ತಾರೆ’. ಇದರಿಂದ ನಮ್ಮ ಸಂಸ್ಕೃತಿಗೆ ಧಕ್ಕೆ ಉಂಟಾಗುತ್ತದೆ. ನಮ್ಮದು ಸಂಸ್ಕೃತಿಯ ನಾಡು. ಇದ್ರಿಂದ ನಮ್ಮ ಹಿಂದೂ ಸಂಸ್ಕೃತಿಗೆ ಹಾಳಾಗುತ್ತೆ ಅಂತ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv