Tag: Super Star

  • ರಜನಿಕಾಂತ್ ವಿರುದ್ಧ ತಿರುಗಿ ಬಿದ್ದ ವಿಜಯ್ ಫ್ಯಾನ್ಸ್

    ರಜನಿಕಾಂತ್ ವಿರುದ್ಧ ತಿರುಗಿ ಬಿದ್ದ ವಿಜಯ್ ಫ್ಯಾನ್ಸ್

    ಸೂಪರ್ ಸ್ಟಾರ್ (Super Star) ಟೈಟಲ್ ವಿಚಾರದಲ್ಲಿ ಮೊದಲಿನಿಂದಲೂ ತಮಿಳು ಚಿತ್ರೋದ್ಯಮದಲ್ಲಿ ತಿಕ್ಕಾಟ ಇದ್ದೇ ಇದೆ. ರಜನಿಕಾಂತ್ (Rajinikanth) ಮತ್ತು ವಿಜಯ್ ದಳಪತಿ (Vijay) ಅಭಿಮಾನಿಗಳು ಈ ಟೈಟಲ್ ವಿಚಾರವಾಗಿ ಆಗಾಗ್ಗೆ ಕಾಲೆಳೆಯುವುದುಂಟು. ಈ ವಿಷಯದ ಕುರಿತಾಗಿ ಮತ್ತೆ ತಮಿಳು ಚಿತ್ರೋದ್ಯಮದಲ್ಲಿ ಚರ್ಚೆ ಶುರುವಾಗಿದೆ. ಕಾರಣ ರಜನಿ ಹೇಳಿದ ಹದ್ದು ಕಾಗೆಯ ಕಥೆ.

    ಮೊನ್ನೆಯಷ್ಟೇ ರಜನಿ ನಟನೆಯ ‘ಜೈಲರ್’ ಸಿನಿಮಾದ ಹಾಡುಗಳು ಬಿಡುಗಡೆ ಕಾರ್ಯಕ್ರಮ ನಡೆಯಿತು. ಅಲ್ಲಿ ರಜನಿ ಪರೋಕ್ಷವಾಗಿಯೇ ವಿಜಯ್ ಅವರನ್ನು ಕಾಗೆ ಹೋಲಿಸಿ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಜೊತೆ ಸೂಪರ್ ಸ್ಟಾರ್ ಟೈಟಲ್ ಬೇಡ ಎಂದು ಹೇಳಿದ್ದೆ ಎನ್ನುವ ವಿಚಾರವನ್ನು ಹೇಳಿಕೊಂಡಿದ್ದರು. ಈ ಕಾಗೆ ಮತ್ತು ಹದ್ದಿನ ಕಥೆಯು ವಿಜಯ್ ಫ್ಯಾನ್ಸ್ (Fans) ಅನ್ನು ಕೆರಳಿಸಿದೆ. ಇದನ್ನೂ ಓದಿ:ಕೇವಲ ಒಂದು ಹಾಡಿಗೆ 90 ಕೋಟಿ ಖರ್ಚು ಮಾಡ್ತಾರಂತೆ ‘ಗೇಮ್‌ಚೇಂಜರ್’ ಚಿತ್ರತಂಡ

    ಹದ್ದಿನ ತಾಕತ್ತು ಮಾತ್ರ ಗಾತ್ರವನ್ನು ಅರಿಯದ ಕಾಗೆ, ಅದರೊಂದಿಗೆ ಹೋರಾಟ ಮಾಡಲು ಪೈಪೋಟಿ ಮಾಡುತ್ತದೆ. ಕಾಗೆ ಏನೇ ಮಾಡಿದರೂ ಹದ್ದಿನಷ್ಟು ಹಾರಾಡಲು ಆಗುವುದಿಲ್ಲ. ಹದ್ದನ್ನು ಕಾಗೆಯಿಂದ ಗೆಲ್ಲುವುದಕ್ಕೆ ಸಾಧ್ಯವೇ ಇಲ್ಲವೆಂದು  ಮಾತನಾಡಿದ್ದು ರಜನಿ. ಕಾಗೆಯನ್ನು ವಿಜಯ್ ಅವರಿಗೆ ಹೋಲಿಸಿದ್ದಾರೆ ಎನ್ನುವುದು ಅಭಿಮಾನಿಗಳ ಊಹೆ ಆಗಿತ್ತು. ಹಾಗಾಗಿ ವಿಜಯ್ ಫ್ಯಾನ್ಸ್ ರಜನಿ ವಿರುದ್ಧ ತಿರುಗಿ ಬಿದ್ದಿದ್ದಾರೆ.

    ರಜನಿಕಾಂತ್ ಪರೋಕ್ಷವಾಗಿ ವಿಜಯ್ ಅವರನ್ನು ತಿವಿದರೋ ಇಲ್ಲವೋ ಗೊತ್ತಿಲ್ಲ. ಆದರೆ, ಸೂಪರ್ ಸ್ಟಾರ್‍ ವಿಚಾರವಾಗಿ ಮುಸುಕಿನ ಗುದ್ದಾಟವಿದ್ದೇ ಇದೆ. ಹಾಗಾಗಿ ವಿಜಯ್ ಫ್ಯಾನ್ಸ್ ರಜನಿ ಆಡಿದ ಮಾತಿಗೆ ಗರಂ ಆಗಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಸೂಪರ್ ಸ್ಟಾರ್’ ಪದ ಯಾವಾಗಲೂ ಸಮಸ್ಯೆಯಾಗಿದೆ : ಅಚ್ಚರಿ ಹೇಳಿಕೆ ನೀಡಿದ ತಲೈವಾ

    ‘ಸೂಪರ್ ಸ್ಟಾರ್’ ಪದ ಯಾವಾಗಲೂ ಸಮಸ್ಯೆಯಾಗಿದೆ : ಅಚ್ಚರಿ ಹೇಳಿಕೆ ನೀಡಿದ ತಲೈವಾ

    ನಿನ್ನೆಯಷ್ಟೇ ರಜನಿಕಾಂತ್ (Rajinikanth) ನಟನೆಯ ‘ಜೈಲರ್’ (Jailer) ಸಿನಿಮಾದ ಹಾಡುಗಳು ಬಿಡುಗಡೆ (Song Release) ಕಾರ್ಯಕ್ರಮ ನಡೆಯಿತು. ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಜನಿಕಾಂತ್ ಸೇರಿದಂತೆ ಸಾಕಷ್ಟು ಗಣ್ಯರು ಹಾಜರಿದ್ದರು. ಈ ಸಂದರ್ಭದಲ್ಲಿ ಮನಬಿಚ್ಚಿ ಮಾತನಾಡಿದ ರಜನಿ, ಅಭಿಮಾನಿಗಳು ತಮ್ಮನ್ನು ಅಭಿಮಾನದಿಂದ ಕರೆಯುವ ‘ಸೂಪರ್ ಸ್ಟಾರ್’ (Super Star) ಪದವನ್ನು ಕಿತ್ತುಹಾಕಿ ಎಂದು ಹೇಳಿದ್ದರ ಕುರಿತು ಮಾತನಾಡಿದರು.

    ‘ಈ ಸೂಪರ್ ಸ್ಟಾರ್ ಪದ ಯಾವಾಗಲೂ ನನಗೆ ಸಮಸ್ಯೆಯನ್ನುಂಟು ಮಾಡಿದೆ. ಜೈಲರ್ ಸಿನಿಮಾದ ಹಾಡಿನಲ್ಲೂ ಸೂಪರ್ ಸ್ಟಾರ್ ಎನ್ನುವ ಪದ ನುಸುಳಿದೆ. ಸಾಹಿತ್ಯ ಬರೆದಿರುವ ಸೂಪರ್ ಸುಬು ಅವರಿಗೆ ಹೇಳಿದ್ದೆ. ನನಗೂ ಈ ಸೂಪರ್ ಸ್ಟಾರ್ ಪದಕ್ಕೂ ಯಾಕೋ ಕೂಡಿ ಬರುತ್ತಿಲ್ಲ’ ಎಂದು ನುಡಿದರು. ಜೊತೆಗೆ ಜೈಲರ್ ಸಿನಿಮಾದ ನಿರ್ದೇಶಕ ನೆಲ್ಸನ್ ಅವರನ್ನು ಈ ಸಿನಿಮಾದಿಂದ ತೆಗೆದುಹಾಕಿ ಎಂದೆಲ್ಲ ವಿರೋಧ ಬಂತು. ಅದಕ್ಕೆ ನಾನು ಒಪ್ಪಲಿಲ್ಲ ಎನ್ನುವ ಮಾತುಗಳನ್ನೂ ಅವರು ಆಡಿದರು. ಇದನ್ನೂ ಓದಿ:ದುಲ್ಕರ್ ಸಲ್ಮಾನ್ ಚಿತ್ರಕ್ಕೆ ‘ಲಕ್ಕಿ ಬಾಸ್ಕರ್’ ಟೈಟಲ್ ಫಿಕ್ಸ್

    ಒಂದು ಕಡೆ ಸಿನಿಮಾದ ಹಾಡುಗಳ ಸಂಭ್ರಮ ಜೋರಾಗಿದ್ದರೆ ಮತ್ತೊಂದು ಕಡೆ ಚಿತ್ರದ ಟೈಟಲ್ (Title) ಕುರಿತು ಸಂಕಷ್ಟ ಎದುರಾಗಿದೆ. ಈ ಸಿನಿಮಾ ಮೂರು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದ್ದು, ಈ ಸಂದರ್ಭದಲ್ಲಿ ಮಲಯಾಳಂ (Malayalam) ನಿರ್ದೇಶಕರೊಬ್ಬರು ಟೈಟಲ್ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದಾರೆ.

    ಮಲಯಾಳಂನಲ್ಲಿ ಈಗಾಗಲೇ ನಿರ್ದೇಶಕ ಸಕ್ಕಿರ್ ಮಡತ್ತಿಲ್ಲ (Sakkir Madattilla) ‘ಜೈಲರ್’ ಹೆಸರಿನಲ್ಲಿ ಸಿನಿಮಾ ಮಾಡಿದ್ದಾರೆ. ಅದು ಕೂಡ ಬಿಡುಗಡೆಗೆ ಸಿದ್ಧವಾಗಿತ್ತು. ಮಲಯಾಳಂನಲ್ಲಿ ರಜನಿ ಜೈಲರ್ ಸಿನಿಮಾ ಕೂಡ ಬಿಡುಗಡೆ ಆಗುತ್ತಿರುವುದರಿಂದ, ಮಲಯಾಳಂನಲ್ಲಿ ಟೈಟಲ್ ಬದಲಾಯಿಸಿ ರಿಲೀಸ್ ಮಾಡುವಂತೆ ಅವರು ಮನವಿ ಮಾಡಿಕೊಂಡಿದ್ದರು. ಆದರೆ, ಅದು ಆಗುವುದಿಲ್ಲ ಎಂದು ಸನ್ ಪಿಕ್ಚರ್ ನಿರ್ಮಾಣ ಸಂಸ್ಥೆ ಉತ್ತರ ಬರೆದಿತ್ತು.

     

    ಈಗ ಸಕ್ಕಿರ್ ಮಡತ್ತಿಲ್ಲ ತಮಿಳಿನ ಜೈಲರ್ ಸಿನಿಮಾದ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಜೊತೆ ಜೊತೆಗೆ ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ರಿಲೀಸ್ ದಿನವೇ ಮಲಯಾಳಂನಲ್ಲಿ ತಮ್ಮ ಜೈಲರ್ ಚಿತ್ರವನ್ನು ರಿಲೀಸ್ ಮಾಡುವುದಾಗಿ ಘೋಷಿಸಿದ್ದಾರೆ. ಆಗಸ್ಟ್ 10ಕ್ಕೆ ತಮ್ಮ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಅವರು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಸೂಪರ್ ಸ್ಟಾರ್’ ಚಿತ್ರದ ನಿರ್ದೇಶಕನ ಮೇಲೆ ಎಫ್ಐಆರ್ : ಉಪೇಂದ್ರ ಸಹೋದರ ಪುತ್ರನ ಚಿತ್ರ

    ‘ಸೂಪರ್ ಸ್ಟಾರ್’ ಚಿತ್ರದ ನಿರ್ದೇಶಕನ ಮೇಲೆ ಎಫ್ಐಆರ್ : ಉಪೇಂದ್ರ ಸಹೋದರ ಪುತ್ರನ ಚಿತ್ರ

    ಟ ಉಪೇಂದ್ರ ಅವರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ನಟನೆಯ ಸೂಪರ್ ಸ್ಟಾರ್ ಚಿತ್ರದ ನಿರ್ದೇಶಕನಿಗೆ ಕಾನೂನು ಸಂಕಷ್ಟ ಎದುರಾಗಿದೆ. ವಂಚನೆ, ಪ್ರಾಣ ಬೆದರಿಕೆಯಂತಹ ಗಂಭೀರ ಪ್ರಕರಣಗಳು ಅವರ ಮೇಲೆ ದಾಖಲಾಗಿದ್ದು, ಈ ಚಿತ್ರದ ನಿರ್ಮಾಪಕರು ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೋಟ್ಯಾಂತರ ರೂಪಾಯಿ ವಂಚನೆ ಮತ್ತು ತಮಗೆ ನಿರ್ದೇಶಕರು ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ನಿರ್ಮಾಪಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಅಂದುಕೊಂಡಂತೆ ಆಗಿದ್ದರೆ ಸೂಪರ್ ಸ್ಟಾರ್ ಸಿನಿಮಾ ಶೂಟಿಂಗ್ ಮುಗಿಸಿ, ಇಷ್ಟೊತ್ತಿಗೆ ತೆರೆಗೆ ಬರಬೇಕಿತ್ತು. ಆದರೆ, ಚಿತ್ರತಂಡದಲ್ಲಿಯ ಬಿರುಕಿನಿಂದಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತುವಂತಾಗಿದೆ. ಈ ಸಿನಿಮಾದ ನಿರ್ದೇಶಕರು ತಮಗೆ 1 ಕೋಟಿ 10 ಲಕ್ಷ ವಂಚನೆ ಮಾಡಿದ್ದಾರೆ ಎಂದು  ನಿರ್ಮಾಪಕರು ಆರೋಪ ಮಾಡಿದ್ದು, ಸಿನಿಮಾ ಚೆನ್ನಾಗಿ ಓಡುತ್ತೆ ಎಂದು ನಿರ್ಮಾಪಕನಿಗೆ ನಿರ್ದೇಶಕರು ಪ್ರಚೋದನೆ ನೀಡಿದ್ದಾರಂತೆ. ಕಲಾವಿದರಿಗೂ ಹಣ ನೀಡದೆ ಸ್ವಂತಕ್ಕೆ ತಮ್ಮ ಹಣವನ್ನು ನಿರ್ದೇಶಕರು ಬಳಸಿಕೊಂಡಿದ್ದಾರಂತೆ. ನಿರ್ಮಾಪಕನ ಚಿತ್ರವನ್ನ ನಿರ್ಮಾಪಕನಿಗೆ ಗೊತ್ತಿಲ್ಲದೆ ಮಾರಾಟ ಮಾಡಿದ್ದಾರೆ ಎಂದು ನಿರ್ಮಾಪಕರು ಆರೋಪ ಮಾಡಿದ್ದಾರೆ.

    ಈ ಸಿನಿಮಾವನ್ನು ಆರ್.ವೆಂಕಟೇಶ್ ಬಾಬು ನಿರ್ದೇಶನ ಮಾಡಿದ್ದು, ಮೈಲಾರಿ ಎನ್ನುವವರು ನಿರ್ಮಾಣ ಮಾಡಿದ್ದರು. ನಂತರ ಚಿತ್ರತಂಡದಲ್ಲಿ ಹಲವಾರು ಬದಲಾವಣೆಗಳು ಆಗಿ ಸತ್ಯನಾರಾಯಣ ಮತ್ತು ರಮಾದೇವಿ ನಿರ್ಮಾಪಕರಾಗಿ ಬಂದಿದ್ದಾರೆ ಎನ್ನಲಾಗುತ್ತಿದೆ. ಇವರೆಲ್ಲರೂ ಸೇರಿ ತಮಗೆ ವಂಚನೆ ಮಾಡಿದ್ದಾರೆ ಎಂದು ನಿರ್ಮಾಪಕ ಮೈಲಾರಿ ಈ ಮೂವರ ಮೇಲೂ ದೂರು ನೀಡಿದ್ದಾರೆ. ಇದನ್ನೂ ಓದಿ:ಕಾಲಿವುಡ್‌ನತ್ತ ಕನ್ನಡದ ನಟ ಭರತ್ ಭೋಪಣ್ಣ

    ಈ ಸಿನಿಮಾ ಮಾತೃಶ್ರಿ ಎಂಟರ್ ಪ್ರೈಸಸ್ ಬ್ಯಾನರ್ ನಡಿ ಮೈಲಾರಿ ಸೂಪರ್ ಸ್ಟಾರ್ ಚಿತ್ರ ಮಾಡ್ತಿದ್ದರು. ಕೋವಿಡ್ ಹಿನ್ನಲೆ ಚಿತ್ರೀಕರಣ ಸ್ವಲ್ಪ ದಿನ ಸ್ಥಗಿತಗೊಂಡಿತ್ತು. ನಂತರ ಸತ್ಯನಾರಾಯಣ ಎಂಬುವವರ ಜೊತೆ ಸೇರಿ ಚಿತ್ರದ ಮಾಲೀಕತ್ವವನ್ನೇ ಬದಲಿಸಿದ ಆರೋಪ ನಿರ್ದೇಶಕರ ಮೇಲೆ ಕೇಳಿ ಬಂದಿದೆ. ಹೊಸ ನಿರ್ಮಾಪಕರಾಗಿ ರಮಾದೇವಿ ಹಾಗು ಸತ್ಯನಾರಾಯಣ ಅವರನ್ನ ಹಾಕಿಕೊಂಡ ನಿರ್ದೇಶಕ ವೆಂಕಟೇಶ್ ಬಾಬು ಈ ಚಿತ್ರ ಮಾಡಿದ್ದು, ಹಾಕಿದ ಬಂಡವಾಳ ವಾಪಾಸ್ ಕೇಳಲು ಹೋದಾಗ ಪ್ರಾಣಬೆದರಿಕೆ , ಧಮ್ಕಿ ಹಾಕಿದ್ದಾರೆ ಎಂದು ದೂರಿನಲ್ಲಿಉಲ್ಲೇಖವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಯುವಿ ನೀನು ನನ್ನ ಸೂಪರ್ ಸ್ಟಾರ್ ಎಂದ ಗಂಗೂಲಿ

    ಯುವಿ ನೀನು ನನ್ನ ಸೂಪರ್ ಸ್ಟಾರ್ ಎಂದ ಗಂಗೂಲಿ

    ಮುಂಬೈ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷರಾಗಿ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ನೇಮಕ ಬಹುತೇಕ ಖಚಿತವಾದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

    ಟೀಂ ಇಂಡಿಯಾ ಮಾಜಿ ಆಟಗಾರ ಯುವರಾಜ್ ಸಿಂಗ್ ಕೂಡ ದಾದಾಗೆ ಶುಭ ಕೋರಿ ಟ್ವೀಟ್ ಮಾಡಿದ್ದು, ಈ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿದ ಗಂಗೂಲಿ, ನೀನು ನನ್ನ ಸೂಪರ್ ಸ್ಟಾರ್ ಎಂದು ಯುವಿಗೆ ಹೊಗಳಿಕೆ ನೀಡಿದ್ದಾರೆ.

    ‘ಟೀಂ ಇಂಡಿಯಾ ನಾಯಕತ್ವದಿಂದ ಬಿಸಿಸಿಐ ಅಧ್ಯಕ್ಷವರೆಗೂ ಉತ್ತಮ ವ್ಯಕ್ತಿಯ ಅತ್ಯುತ್ತಮ ಜರ್ನಿ. ಮಾಜಿ ಕ್ರಿಕೆಟ್ ಆಟಗಾರನಾಗಿ ಅವರು ಆಟಗಾರರ ದೃಷ್ಟಿಕೋನವನ್ನು ಉತ್ತಮವಾಗಿ ಅರ್ಥಮಾಡಿಕೊಳ್ಳುತ್ತಾರೆ. ಆಟಗಾರ ಕ್ರಿಕೆಟ್ ಆಡಳಿತಗಾರನಾಗುವುದು ಉತ್ತಮ ಬೆಳವಣಿಗೆ ಎನಿಸುತ್ತಿದೆ. ಆದರೆ ಯೋಯೋ ಟೆಸ್ಟ್ ವೇಳೆ ನೀವು ಬಿಸಿಸಿಐ ಅಧ್ಯಕ್ಷರಾಗಿರಬೇಕಿತ್ತು’ ಎಂದು ಯುವಿ ಟ್ವೀಟ್ ಮಾಡಿದ್ದರು.

    ಯುವರಾಜ್ ಸಿಂಗ್‍ರ ಈ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿರುವ ಗಂಗೂಲಿ, ನಿಮ್ಮ ಶುಭಾಶಯಕ್ಕೆ ಧನ್ಯವಾದ. ನೀವು ಭಾರತಕ್ಕಾಗಿ ವಿಶ್ವಕಪ್ ಗೆದ್ದು ತಂದಿದ್ದೀರಿ. ನೀವು ನನ್ನ ಸೂಪರ್ ಸ್ಟಾರ್. ಇದೀಗ ಕ್ರಿಕೆಟ್‍ಗೆ ಒಳ್ಳೆಯ ಕಾಲ ಬರಲಿದೆ ಎಂದು ಹೇಳಿದ್ದಾರೆ.

    ಅಂದಹಾಗೇ ಯುವರಾಜ್ ಸಿಂಗ್ ಕ್ಯಾನ್ಸರ್ ನಿಂದ ಬಳುತ್ತಿದ್ದರು ಕೂಡ ವಿಶ್ವಕಪ್ ಟೂರ್ನಿಯನ್ನು ಆಡಿದ್ದರು. 2007 ಮೊದಲ ಟಿ20 ಟೂರ್ನಿ ಹಾಗೂ 2011ರ ಏಕದಿನ ವಿಶ್ವಕಪ್ ಗೆಲುವಿನಲ್ಲಿ ಯುವಿ ಪ್ರಮುಖ ಪಾತ್ರ ವಹಿಸಿದ್ದರು. ಈ ಹಿನ್ನೆಲಯಲ್ಲಿ ಗಂಗೂಲಿ ಅವರು ಯುವರಾಜ್ ಸಿಂಗ್ ಅವರಿಗೆ ಹೆಚ್ಚಿನ ಗೌರವ ನೀಡಿದ್ದಾರೆ.

  • ಚಿತ್ರರಂಗದಲ್ಲಿ 44 ವರ್ಷ ಪೂರೈಸಿದ ರಜನಿ- ಟ್ವಿಟ್ಟರ್‌ನಲ್ಲಿ ಹಬ್ಬ ಆಚರಿಸಿದ ಅಭಿಮಾನಿಗಳು

    ಚಿತ್ರರಂಗದಲ್ಲಿ 44 ವರ್ಷ ಪೂರೈಸಿದ ರಜನಿ- ಟ್ವಿಟ್ಟರ್‌ನಲ್ಲಿ ಹಬ್ಬ ಆಚರಿಸಿದ ಅಭಿಮಾನಿಗಳು

    ಚೆನ್ನೈ: ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ ಅವರು ಇಂದು ಚಿತ್ರರಂಗಕ್ಕೆ ಕಾಲಿಟ್ಟು 44 ವರ್ಷ ಪೂರೈಸಿದ್ದಾರೆ. ಈ ದಿನವನ್ನು ರಜನಿ ಅಭಿಮಾನಿಗಳು ಟ್ವಿಟ್ಟರ್‍ನಲ್ಲಿ ಹಬ್ಬದ ರೀತಿಯಲ್ಲಿ ಆಚರಣೆ ಮಾಡುತ್ತಿದ್ದಾರೆ.

    #44YrsofUnmatchableRAJINISM ಎಂಬ ಹ್ಯಾಶ್‍ಟ್ಯಾಗ್ ಬಳಸಿ ಟ್ವಿಟ್ಟರ್ ಸೇರಿದಂತೆ ಎಲ್ಲಾ ಸಾಮಾಜಿಕ ಮಾಧ್ಯಮಗಳ ಪ್ಲಾಟ್‍ಫಾರ್ಮ್‍ಗಳಲ್ಲಿ ರಜನಿ ಅಭಿಮಾನಿಗಳು ಟ್ರೆಂಡಿಂಗ್ ಸೆಟ್ ಮಾಡಿದ್ದಾರೆ. ಈ ಹ್ಯಾಶ್‍ಟ್ಯಾಗ್ ಬಳಸಿ ಸೆಲೆಬ್ರಿಟಿಗಳಿಂದ ಹಿಡಿದು ಅಭಿಮಾನಿಗಳವರೆಗೂ ಅನೇಕರು ರಜನಿಕಾಂತ್ ವೃತ್ತಿಜೀವನ ಹೊಸ ಸಾಧನೆಗಾಗಿ ಹಾರೈಸಿ ಟ್ವೀಟ್ ಮಾಡಿದ್ದಾರೆ.

    ಕರ್ನಾಟಕದ ಬೆಂಗಳೂರಿನಲ್ಲಿ ಜನಿಸಿದ 68 ವರ್ಷದ ನಟ ರಜನಿಕಾಂತ್ ಅವರು ಮೊದಲು ಪೋಷಕ ಪಾತ್ರಗಳಲ್ಲಿ ನಟಿಸುವ ಮೂಲಕ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ನಂತರ ಪಾಥಿನಾರು ವಯತಿನಿಲೆ ಮತ್ತು ಆಡು ಪುಲಿ ಆಟಮ್ ಚಿತ್ರಗಳಲ್ಲಿ ವಿಲನ್ ಪಾತ್ರಗಳಲ್ಲಿ ಕಾಣಿಸಿಕೊಂಡರು.

    ಹೀಗೆ ಪೋಷಕ ಪಾತ್ರಗಳ ಮೂಲಕ ತನ್ನ ವೃತ್ತಿ ಜೀವನ ಆರಂಭಿಸಿದ ರಜನಿಕಾಂತ್, ಹೀರೋ ಪಾತ್ರದಲ್ಲಿ ಮೊದಲು ನಟಿಸಿದ ಚಲನಚಿತ್ರ ಭೈರವಿ ಇದು 1978 ರಲ್ಲಿ ಬಿಡುಗಡೆಯಾಯಿತು. ಈ ಚಲನಚಿತ್ರದ ಬಿಡುಗಡೆಯ ಸಮಯದಲ್ಲಿ ‘ಸೂಪಸ್ಟಾರ್’ ಶೀರ್ಷಿಕೆಯನ್ನು ರಜನಿಕಾಂತ್ ಅವರಿಗೆ ನೀಡಲಾಯಿತು. ಅಂದಿನಿಂದ ತಮಿಳು ಚಿತ್ರರಂಗದ ದೈತ್ಯ ಪ್ರತಿಭೆಯಾಗಿ ಮಾರ್ಪಟ್ಟ ಸ್ಟೈಲಿಶ್ ಸ್ಟಾರ್ ರಜನಿ ಮತ್ತೆ ಹಿಂತಿರುಗಿ ನೋಡಲಿಲ್ಲ.

    ರಜನಿ ಅಭಿನಯದ 2007 ರಲ್ಲಿ ಬಿಡುಗಡೆಯಾದ ಶಿವಾಜಿ ಚಿತ್ರದ ಪಾತ್ರಕ್ಕಾಗಿ 26 ಕೋಟಿ ಸಂಭಾವನೆ ಪಡೆದಿದ್ದರು. ಈ ಮೂಲಕ ಆ ಸಮಯದಲ್ಲಿ ಹಾಲಿವುಡ್ ಸ್ಟಾರ್ ಜಾಕಿ ಚಾನ್ ನಂತರ ಏಷ್ಯಾದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟ ಎಂಬ ಖ್ಯಾತಿ ಪಡೆದಿದ್ದರು. ಭಾರತ ಇತರ ಪ್ರಾದೇಶಿಕ ಚಲನಚಿತ್ರೋದ್ಯಮಗಳಲ್ಲಿ ಕೆಲಸ ಮಾಡುವಾಗ, ರಜನಿಕಾಂತ್ ಅವರು ಹೊರದೇಶದ ಅಂದರೆ 1988 ತೆರೆಕಂಡ ಅಮೆರಿಕನ್ ಚಲನಚಿತ್ರ ಬ್ಲಡ್‍ಸ್ಟೋನ್ ಸೇರಿದಂತೆ ಇತರ ರಾಷ್ಟ್ರಗಳ ಚಿತ್ರದಲ್ಲಿಯೂ ಕಾಣಿಸಿಕೊಂಡಿದ್ದಾರೆ.

    2018ರ ಹೊತ್ತಿಗೆ, ರಜನಿಕಾಂತ್ ಆರು ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿಗಳು. ನಾಲ್ಕು ಅತ್ಯುತ್ತಮ ನಟ ಪ್ರಶಸ್ತಿಗಳು ಮತ್ತು ಅತ್ಯುತ್ತಮ ನಟನಿಗಾಗಿ ಎರಡು ವಿಶೇಷ ಪ್ರಶಸ್ತಿಗಳು. ಫಿಲ್ಮ್ ಫೇರ್ ಅತ್ಯುತ್ತಮ ತಮಿಳು ನಟ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ನಟನೆಯ ಜೊತೆಗೆ ನಿರ್ಮಾಪಕ ಮತ್ತು ಚಿತ್ರಕಥೆಗಾರನಾಗಿಯೂ ಕೆಲಸ ಮಾಡಿರುವ ರಜನಿ, ನಟನ ವೃತ್ತಿಜೀವನದ ಹೊರತಾಗಿ ಲೋಕೋಪಕಾರಿ, ಆಧ್ಯಾತ್ಮಿಕ ಮತ್ತು ದ್ರಾವಿಡ ರಾಜಕೀಯದಲ್ಲಿ ಪ್ರಭಾವ ಬೀರಿದ್ದಾರೆ.

    ಭಾರತೀಯ ಚಿತ್ರರಂಗದಲ್ಲಿ ಮೇರು ನಟನಾಗಿ ಬೆಳದ ರಜನಿ ಅವರು ಕಲೆಗೆ ನೀಡಿದ ಕೊಡುಗೆಯನ್ನು ಗುರುತಿಸಿ ಭಾರತ ಸರ್ಕಾರ ಅವರಿಗೆ 2000ರಲ್ಲಿ ಪದ್ಮಭೂಷಣ ಮತ್ತು 2016 ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. 2014 ರಲ್ಲಿ ನಡೆದ ಭಾರತದ 45ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅವರಿಗೆ “ವರ್ಷದ ಭಾರತೀಯ ಚಲನಚಿತ್ರ ವ್ಯಕ್ತಿತ್ವಕ್ಕಾಗಿ ಶತಮಾನೋತ್ಸವ ಪ್ರಶಸ್ತಿ”ಯನ್ನು ನೀಡಿ ಗೌರವಿಸಿದೆ.

    1950 ಡಿಸೆಂಬರ್ 12 ರಂದು ಕರ್ನಾಟಕದ ಬೆಂಗಳೂರಿನಲ್ಲಿ ಜನಿಸಿದ ಶಿವಾಜಿ ರಾವ್ ಗಾಯಕ್‍ವಾಡ್ ಇಂದು ರಜನಿಕಾಂತ್ ಎಂಬ ಹೆಸರಿನ ಮೂಲಕ ವಿಶ್ವದಾದ್ಯಂತ ಖ್ಯಾತಿ ಅದವರು. ಅವರ ತಾಯಿ ರಜನಿ 9 ವರ್ಷದ ಮಗುವಾಗಿದ್ದಾಗ ತೀರಿಕೊಂಡರು. ಅವರ ತಂದೆ ರಾಮೋಜಿ ಗಾಯಕ್‍ವಾಡ್ ಅವರು ಪೊಲೀಸ್ ಕಾನ್‍ಸ್ಟೇಬಲ್ ಆಗಿದ್ದರು. ಈಗ ಭಾರತದ ಸಿನಿಮಾರಂಗದ ಸೂಪರ್ ಸ್ಟಾರ್ ಆಗಿ ಮಿಂಚುತ್ತಿರುವ ರಜನಿ ಅವರು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡಿದ್ದಾರೆ.

    ರಜನಿ ಅಭಿನಯದ ಭಾಷಾ, ಶಿವಾಜಿ, ರೋಬೋ, ಇತ್ತೀಚಿಗೆ ತೆರೆಕಂಡ ರೋಬೋ 2 (2.0) ಚಿತ್ರಗಳು ಬ್ಲಾಕ್ ಬಸ್ಟರ್ ಹಿಟ್ ಆಗಿವೆ. ರಜನಿಕಾಂತ್ ತನ್ನ ಮುಂದಿನ ಚಿತ್ರ ಎ.ಆರ್.ಮುರುಗದಾಸ್ ಅವರ ದರ್ಬಾರ್‍ ನಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ರಜನಿ ಅವರಿಗೆ ನಯನತಾರಾ ಜೋಡಿಯಾಗಿದ್ದಾರೆ. ದರ್ಬಾರ್ ಚಿತ್ರ 2020ಕ್ಕೆ ಬಿಡುಗಡೆಯಾಗಲಿದೆ.

  • ಸೊಂದಾ ವಾದಿರಾಜರ ಆಶೀರ್ವಾದ ಪಡೆದ ಉಪೇಂದ್ರ ಕುಟುಂಬ

    ಸೊಂದಾ ವಾದಿರಾಜರ ಆಶೀರ್ವಾದ ಪಡೆದ ಉಪೇಂದ್ರ ಕುಟುಂಬ

    ಕಾರವಾರ: ಸ್ಯಾಂಡಲ್‍ವುಡ್ ನ ಸೂಪರ್ ಸ್ಟಾರ್ ಉಪೇಂದ್ರ ಅವರ ಮಗ ಆಯುಷ್ ಉಪೇಂದ್ರ ದೊಡ್ಡವನಾಗಿದ್ದಾನೆ. ಹೀಗಾಗಿ ಮಗನಿಗೆ ಬ್ರಾಹ್ಮಣ ಸಂಪ್ರದಾಯದಂತೆ ಬಹ್ಮೋಪದೇಶಕ್ಕೆ ತಯಾರಿ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಉಪ್ಪಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಪ್ರಸಿದ್ಧ ಸೋಂದಾ ಶ್ರೀ ವಾದಿರಾಜ ಮಠಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ, ದೇವರ ಆಶೀರ್ವಾದವನ್ನು ಪಡೆದುಕೊಂಡಿದ್ದಾರೆ.

    ನಟ ಮತ್ತು ನಿರ್ದೇಶಕ ಉಪೇಂದ್ರ ಮತ್ತು ಪ್ರಿಯಾಂಕ ದಂಪತಿ ತಮ್ಮ ಮಗನ ಉಪನಯನ ನಿಮಿತ್ತ ದೇವರ ದರ್ಶನ ಪಡೆದು ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.

    ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಂದಾ ಗ್ರಾಮದಲ್ಲಿರುವ ಸೋದೆ ವಾದಿರಾಜ ಮಠವು ಉಪೇಂದ್ರ ಕುಟುಂಬದ ಗುರು ಮಠವಾಗಿದ್ದು, ಶನಿವಾರ ದಿನ ಭೂತರಾಜರಿಗೆ ವಿಶೇಷ ಪೂಜೆ ಇದ್ದ ಕಾರಣ ತಮ್ಮ ಮಗ ಮತ್ತು ಮಗಳ ಜೊತೆಯಲ್ಲಿ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.

    ಸೋದೆ ವಾದಿರಾಜ ಮಠವು ಉಡುಪಿಯ ಅಷ್ಠ ಮಠಗಳಲ್ಲೊಂದಾಗಿದ್ದು ಉಪೇಂದ್ರ ಕುಟುಂಬದ ಗುರು ಮಠವಾಗಿದೆ. ಉಪೇಂದ್ರರವರು ಮದುವೆಯಾಗಿದ್ದು ಬೆಂಗಾಲಿ ಮೂಲದ ಹುಡುಗಿ ಪ್ರಿಯಾಂಕರನ್ನು ಆದರೂ ದೇವರ ಬಗ್ಗೆ ಹೆಚ್ಚು ನಂಬಿಕೆ ಇರುವ ಉಪೇಂದ್ರ ಅವರು ತಮ್ಮ ಸಂಸ್ಕೃತಿಯನ್ನು ಉಳಿಸಿಕೊಂಡ ಬಂದಿದ್ದಾರೆ. ಬ್ರಾಹ್ಮಣರಲ್ಲಿ ಗಂಡುಮಕ್ಕಳಿಗೆ 13 ವರ್ಷ ತುಂಬುವುದರೊಳಗಾಗಿ ಬಹ್ಮೋಪದೇಶ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಉಪೇಂದ್ರ ಅವರು ತಮ್ಮ ತಂದೆ ಸ್ಥಾನದ ಕರ್ತವ್ಯ ನಿಭಾಯಿಸಿದ್ದು ಮಗನ ಉಪನಯನ ಕಾರ್ಯದ ದಿನಾಂಕ ನಿಗದಿ ಆಗಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಳೆಯ ಸಂಪ್ರದಾಯಕ್ಕೆ ಯಾರೂ ಹಸ್ತಕ್ಷೇಪ ಮಾಡ್ಬಾರ್ದು: ರಜನಿಕಾಂತ್ ಮನವಿ

    ಹಳೆಯ ಸಂಪ್ರದಾಯಕ್ಕೆ ಯಾರೂ ಹಸ್ತಕ್ಷೇಪ ಮಾಡ್ಬಾರ್ದು: ರಜನಿಕಾಂತ್ ಮನವಿ

    ಚೆನ್ನೈ: ಮಹಿಳೆಯರಿಗೆ ಶಬರಿಮಲೆ ದೇಗುಲ ಪ್ರವೇಶಕ್ಕೆ ಇರುವ ವಯಸ್ಸಿನ ಮಿತಿಯ ಹಳೆಯ ಸಂಪ್ರದಾಯದಲ್ಲಿ ಯಾರೋಬ್ಬರೂ ಹಸ್ತಕ್ಷೇಪ ಮಾಡಬಾರದೆಂದು ಸೂಪರ್ ಸ್ಟಾರ್ ರಜನಿಕಾಂತ್ ಅಭಿಪ್ರಾಯಪಟ್ಟಿದ್ದಾರೆ.

    ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅವಕಾಶ ಕಲ್ಪಿಸಿಕೊಟ್ಟಿದ್ದರ ಬಗ್ಗೆ ಇದೇ ಮೊದಲ ಬಾರಿಗೆ ನಟ ರಜನಿಕಾಂತ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಅನಾದಿಕಾಲದಿಂದಲೂ ನಮ್ಮ ಸಮಾಜದಲ್ಲಿ ಆಚರಣೆಗಳನ್ನು ನಾವು ಕಟ್ಟುನಿಟ್ಟಾಗಿ ನಡೆಸಿಕೊಂಡು ಬಂದಿದ್ದೇವೆ. ಹೀಗಾಗಿ ಅವುಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ ಎಂದು ತಿಳಿಸಿದರು.

    ನಮ್ಮ ದೇಶದಲ್ಲಿರುವ ಪ್ರತಿಯೊಂದು ದೇವಾಲಗಳು ಸಹ, ತನ್ನದೇ ಆದ ರೂಢಿ-ಸಂಪ್ರದಾಯಗಳನ್ನು ಬೆಳೆಸಿಕೊಂಡು ಬಂದಿರುತ್ತವೆ. ವಿಶೇಷವಾಗಿ ಸ್ವಾಮಿ ಶಬರಿಮಲೆ ಅಯ್ಯಪ್ಪ ದೇಗುಲ ವಿಚಾರದಲ್ಲಿಯೂ ಸಹ ಅನೇಕ ಸಂಪ್ರದಾಯಗಳು ರೂಢಿಯಲ್ಲಿವೆ. ಹೀಗಾಗಿ ಶಬರಿಮಲ ದೇವಾಲಯಕ್ಕೆ ಮಹಿಳೆಯರ ಪ್ರವೇಶದ ವಯಸ್ಸಿನ ವಿಚಾರಕ್ಕೆ ವಿಧಿಸಿರುವ ಹಳೆಯ ಸಂಪ್ರದಾಯದಲ್ಲಿ ಯಾರೋಬ್ಬರು ಸಹ ಹಸ್ತಕ್ಷೇಪ ಮಾಡಬಾರದೆಂಬುದು ನನ್ನ ಮನವಿ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

    ಶಬರಿಮಲೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ತಲೆ ಬಾಗುತ್ತೇನೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ನಾನು ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸುತ್ತೇನೆ. ಆದರೆ ಇದು ಧರ್ಮ ಹಾಗೂ ಅದಕ್ಕೆ ಸಂಬಂಧಪಟ್ಟ ಆಚರಣೆಗಳ ವಿಷಯಕ್ಕೆ ಬಂದಾಗ ಎಲ್ಲರೂ ಎಚ್ಚರ ವಹಹಿಸಬೇಕಾಗುತ್ತದೆ ಎಂದು ಸ್ಪಷ್ಟನೆ ನೀಡಿದ್ರು.

    ಸುಪ್ರೀಂ ಕೋರ್ಟ್ ತೀರ್ಪು ಬೆನ್ನಲ್ಲೇ ಮಹಿಳೆಯರು ಕಳೆದ ಬುಧವಾರ ಶಬರಿಮಲೆಯ ಪ್ರವೇಶಕ್ಕೆ ಮುಂದಾಗಿದ್ದರು. ಆದರೆ ಮಹಿಳೆಯರಿಗೆ ಮಾತ್ರ ಯಾವುದೇ ಕಾರಣಕ್ಕೂ ಮಣಿಕಂಠನ ದರ್ಶನಕ್ಕೆ ಅವಕಾಶ ನೀಡುವುದಿಲ್ಲವೆಂದು ಪ್ರಭಾವಿ ನಾಯರ್ ಸಮಾಜ, ಹಿಂದೂಪರ ಸಂಘಟನೆಗಳು, ಬಿಜೆಪಿ ಹಾಗೂ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಹಿಂಸಾರೂಪವನ್ನೂ ಪಡೆದುಕೊಂಡಿತ್ತು. ಶಬರಿಗಿರಿ ತಲುಪುವ ಮುಖ್ಯ ದ್ವಾರವಾದ ನಿಳಕ್ಕಲ್‍ನಲ್ಲಿ ಬುಧವಾರ ಬೆಳಗ್ಗೆಯಿಂದಲೂ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಯ್ಯಪ್ಪನ ದೇಗುಲದ ದ್ವಾರ ತೆರೆಯುತ್ತಿದ್ದಂತೆ ಉದ್ರಿಕ್ತರು ಪ್ರತಿಭಟನೆಯನ್ನು ಹಿಂಸಾರೂಪಕ್ಕೆ ಬದಲಾಯಿಸಿದ್ದರು. ಪರಿಣಾಮ ಅಯ್ಯಪ್ಪನ ದರ್ಶನಕ್ಕೆ ಆಗಮಿಸುತ್ತಿದ್ದ ಮಹಿಳೆಯರು ಹಾಗೂ ಹೆಣ್ಣು ಮಕ್ಕಳನ್ನು ಮಾರ್ಗಮಧ್ಯದಲ್ಲೇ ಹಿಂದೆಸರಿದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv