Tag: SuperintendentOfPolice

  • ಮರ್ಯಾದಾ ಹತ್ಯೆಗೆ ಬಾಲಕಿ ಬಲಿ – ತಂದೆ, ಅಣ್ಣನಿಂದಲೇ ಹತ್ಯೆ

    ಮರ್ಯಾದಾ ಹತ್ಯೆಗೆ ಬಾಲಕಿ ಬಲಿ – ತಂದೆ, ಅಣ್ಣನಿಂದಲೇ ಹತ್ಯೆ

    ಲಕ್ನೋ: ಉತ್ತರಪ್ರದೇಶದ ಬಾಂದಾದಲ್ಲಿ ನಡೆದ ಮರ್ಯಾದಾ ಹತ್ಯೆಗೆ 17 ವರ್ಷದ ಬಾಲಕಿ ಬಲಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.

    ಇಲ್ಲಿನ ಗುರ್ಹಾ ಕಾಲಾ ಗ್ರಾಮದ ನಿವಾಸಿಯೇ ತನ್ನ 17 ವರ್ಷದ ಮಗಳನ್ನು ಕತ್ತುಹಿಸುಕಿ ಕೊಲೆ ಮಾಡಿದ್ದಾನೆ ಎಂದು ಮರಣೋತ್ತರ ಪರೀಕ್ಷೆ ವರದಿ ದೃಢಪಡಿಸಿದೆ. ವರದಿಯನ್ನಾಧರಿಸಿ ತಂದೆ ಮತ್ತು ಮೃತಳ ಸಹೋದರನನ್ನು ಬಂಧಿಸಲಾಗಿದೆ. ಬಾಲಕಿಯ ತಂದೆ ದೇಶರಾಜ್ ಹಾಗೂ ಸಹೋದರ ಧನಂಜಯ್ ಎಂಬವರೇ ಆರೋಪಿಗಳು. ಇದನ್ನೂ ಓದಿ: ಪತ್ನಿಯನ್ನು ಗರ್ಭಿಣಿ ಮಾಡಲು ಜೀವಾವಧಿ ಕೈದಿಗೆ 15 ದಿನ ಪೆರೋಲ್ ನೀಡಿದ ಹೈಕೋರ್ಟ್

    CRIME 2

    ತನಿಖೆ ವೇಳೆ 17 ವರ್ಷದ ಬಾಲಕಿ ಅದೇ ಜಾತಿಯ ಹುಡುಗನೊಂದಿಗೆ ಸಂಬಂಧ ಹೊಂದಿದ್ದಳು. ಇದಕ್ಕೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದರು. ನಂತರ ಬುಧವಾರವೇ ಆಕೆಯನ್ನು ಕತ್ತು ಹಿಸುಕಿ ಸಾಯಿಸಿದ್ದಾರೆ. ಶವವನ್ನು ಮರೆಮಾಚಲು ದನದ ಕೊಟ್ಟಿಗೆಯ ಒಳಗೆ ಹೂತು ಹಾಕಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಿತಿನ್‌ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಯುವಕನಿಂದ ಹಿಂದೂ ಅತಿಥಿ ಶಿಕ್ಷಕಿಯ ಕಿಡ್ನಾಪ್ – ಲವ್ ಜಿಹಾದ್ ಆರೋಪ

    crime

    ಈ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಶುಕ್ರವಾರ ಶವವನ್ನು ಹೊರತೆಗೆಯಲಾಗಿತ್ತು. ಮರಣೋತ್ತರ ಪರೀಕ್ಷಾ ವರದಿಯು ಕತ್ತು ಹಿಸುಕಿದ ಕಾರಣದಿಂದ ಮೃತಪಟ್ಟಿದ್ದಾರೆ ಎಂಬುದನ್ನು ಖಚಿತಪಡಿಸಿತು. ಹುಡುಗಿಯ ದೇಹದ ಮೇಲೆ ಗಾಯದ ಗುರುತುಗಳಾಗಿರುವುದು ಕಂಡುಬಂದಿತ್ತು. ಈ ಪ್ರಕರಣವು ಮರ್ಯಾದೆ ಗೇಡು ಹತ್ಯೆಗೆ ಸಂಬಂಧಿಸಿದ್ದು ಇಬ್ಬರನ್ನೂ ಶುಕ್ರವಾರ ತಡರಾತ್ರಿ ಬಂಧಿಸಲಾಗಿದೆ ಎಂದು ನಿತಿನ್‌ ಕುಮಾರ್ ಹೇಳಿದ್ದಾರೆ.

  • ಚಾಮರಾಜನಗರದ ಲಿಪ್‌ಲಾಕ್ ಪ್ರೇಮಿಗಳಿಗೆ ಶಾಕ್ ಕೊಟ್ಟ ಪೊಲೀಸರು

    ಚಾಮರಾಜನಗರದ ಲಿಪ್‌ಲಾಕ್ ಪ್ರೇಮಿಗಳಿಗೆ ಶಾಕ್ ಕೊಟ್ಟ ಪೊಲೀಸರು

    ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ನಡುರಸ್ತೆಯಲ್ಲೇ ಬೈಕ್‌ನಲ್ಲಿ ರೈಡ್ ಹೋಗುತ್ತಾ ಸಾರ್ವಜನಿಕವಾಗಿ ಲಿಪ್‌ಲಾಕ್ (ಪರಸ್ಪರ ಚುಂಬನ) ಮಾಡಿದ್ದ ಪ್ರೇಮಿಗಳಿಗೆ ಇದೀಗ ಪೊಲೀಸರು ಶಾಕ್ ಕೊಟ್ಟಿದ್ದಾರೆ.

    ಈ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ, ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದು ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗಿದೆ. ಬೈಕ್ ಸವಾರನ ವಿರುದ್ಧ ಚಾಮರಾಜನಗರ ಸಂಚಾರ ಠಾಣೆಯ ಪೊಲೀಸರು ಸಂಚಾರ ನಿಯಮ ಕಾನೂನು ಉಲ್ಲಂಘನೆ ಅಡಿಯಲ್ಲಿ ಸ್ವಪ್ರೇರಿತ ದೂರು ತಯಾರಿಸಿ ಮೊ.ನಂ: 39/2022 ಕಲಂ 279 IPC ಮತ್ತು 184 IMV ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಬೈಕ್ ಟ್ಯಾಂಕ್ ಮೇಲೆ ಕುಳಿತು ಪ್ರೇಮಿಗಳ ಲಿಪ್‍ಲಾಕ್ – ಲವರ್ಸ್ ಜಾಲಿ ರೈಡ್ ವೀಡಿಯೋ ವೈರಲ್

    LETTER

    KA-10-EA-5121 ಪಲ್ಸರ್ ಬೈಕ್‌ನ RC ಮಾಲೀಕನಿಂದ ವಿವರ ಪಡೆದು, ಬೈಕ್ ಸವಾರ ಹೆಚ್.ಡಿ.ಕೋಟೆ ತಾಲೂಕಿನ ಶಿವಪುರ ಗ್ರಾಮದ ನಿವಾಸಿ ಎಸ್.ಸಿಸ್ವಾಮಿ ಅನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.  ಇದನ್ನೂ ಓದಿ : ಅಪ್ಪ ಸರಿ, ಮಕ್ಕಳು ತಪ್ಪು ಸರಕಾರಕ್ಕೆ ಟಾಂಗ್ ಕೊಟ್ಟ ನಟ ಉಪೇಂದ್ರ

    ಚಾಮರಾಜನಗರದ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕ ತಿಮ್ಮರಾಜು, ಪಿಎಸ್‌ಐ ನಂದೀಶ್‌ಕುಮಾರ್ ಅವರ ನೇತೃತ್ವದಲ್ಲಿ ಸಿಬ್ಬಂದಿ ಸಿ.ಚಿಕ್ಕಣ್ಣ, ಬಿ.ಕೆ.ಜಯರಾಮು, ಜಿ.ಬಿ.ಮಹದೇವಸ್ವಾಮಿ, ಟಿ.ಕೆ.ಜಗದೀಶ್, ಪಿ.ನವೀನ್‌ಕುಮಾರ್ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ : CFI, PFI ಸಂಘಟನೆಗಳೇ ಮಕ್ಕಳ ಭವಿಷ್ಯ ಹಾಳಾಗೋದಕ್ಕೆ ಕಾರಣ: ಬಿ.ಸಿ.ನಾಗೇಶ್

    lovers

    ಲಿಪ್‌ಲಾಕ್ ಸ್ವಾರಸ್ಯವೇನು?: ಇಂದು ಮಧ್ಯಾಹ್ನ ಚಾಮರಾಜನಗರದ ಗುಂಡ್ಲುಪೇಟೆ ರಸ್ತೆಯಲ್ಲಿ ಪ್ರೇಮಿಗಳಿಬ್ಬರು ನಡುರಸ್ತೆಯಲ್ಲಿ ಬೈಕ್ ಮೇಲೆ ರೈಡ್ ಹೋಗುತ್ತಾ, ಸಾರ್ವಜನಿಕವಾಗಿ ಲಿಪ್‌ಲಾಕ್ ಮಾಡಿದ್ದಾರೆ. ಪಲ್ಸರ್ ಬೈಕ್‌ನ ಪೆಟ್ರೋಲ್ ಟ್ಯಾಂಕ್ ಮೇಲೆ ಎದುರು-ಬದುರಾಗಿ ಕುಳಿತ ಯುವತಿ ತನ್ನ ಪ್ರಿಯಕರನನ್ನು ಬಿಗಿದಪ್ಪಿಕೊಂಡು ಚುಂಬಿಸಿದ್ದಾಳೆ. ಜನರು, ಬಸ್ಸು, ಲಾರಿಗಳ ಸಂಚಾರದ ಪರಿವೇ ಇಲ್ಲದೇ ಹೆದ್ದಾರಿಯಲ್ಲಿ ಪ್ರೇಮಿಗಳು ಹುಚ್ಚಾಟ ನಡೆಸಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಎಲ್ಲೆಡೆ ಆಕ್ಷೇಪ ವ್ಯಕ್ತವಾಗಿತ್ತು.