Tag: supplier

  • ಯಾರ ಮನೆ ಹಾಳು ಮಾಡಲು ಬಂದಿದ್ದೀಯಾ ನೀನು: ಸಪ್ಲೈರ್ ಗೆ ಶಾಸಕರಿಂದ ಕ್ಲಾಸ್

    ಯಾರ ಮನೆ ಹಾಳು ಮಾಡಲು ಬಂದಿದ್ದೀಯಾ ನೀನು: ಸಪ್ಲೈರ್ ಗೆ ಶಾಸಕರಿಂದ ಕ್ಲಾಸ್

    ಮಂಡ್ಯ: ಗಂಗಾಕಲ್ಯಾಣ ಯೋಜನೆ ಫಲಾನುಭವಿಗಳಿಗೆ ಕಳಪೆ ಗುಣಮಟ್ಟದ ಸಾಮಗ್ರಿಗಳನ್ನು ಸರಬರಾಜು ಮಾಡಿದ್ದಕ್ಕೆ ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ, ಸರಬರಾಜುದಾರನನ್ನು ತರಾಟೆಗೆ ತೆಗೆದುಕೊಂಡು ಆಕ್ರೋಶ ಹೊರಹಾಕಿದ್ದಾರೆ.

    ಮಂಡ್ಯದ ಕೆಆರ್ ಪೇಟೆಯಲ್ಲಿ, ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ವತಿಯಿಂದ ಗಂಗಾಕಲ್ಯಾಣ ಯೋಜನೆಯ ಅಡಿಯಲ್ಲಿ 26ಕ್ಕೂ ಹೆಚ್ಚಿನ ವಿವಿಧ ಫಲಾನುಭವಿಗಳಿಗೆ ಪಂಪ್‍ಸೆಟ್ ಸರಬರಾಜು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

    ಗುತ್ತಿಗೆದಾರನು ಸರಬರಾಜು ಮಾಡಲು ತಂದಿದ್ದ ಐಎಸ್‍ಐ ಗುಣಮಟ್ಟದ ಮುದ್ರೆಯಿಲ್ಲದ ಕಳಪೆ ಗುಣಮಟ್ಟದ ಸಬ್ ಮರ್ಸಿಬಲ್ ಪಂಪುಗಳು, ಪೈಪುಗಳು ಹಾಗೂ ವಿವಿಧ ಸಾಮಗ್ರಿಗಳನ್ನು ತಪಾಸಣೆ ನಡೆಸಿದ ಶಾಸಕ ಡಾ.ನಾರಾಯಣಗೌಡ ಸರಬರಾಜುದಾರನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಸರಬರಾಜು ಮಾಡಲು ಬಂದಿದ್ದವನಿಗೆ, ಯಾರ ಮನೆ ಹಾಳು ಮಾಡಲು ಬಂದಿದ್ದೀಯಾ ನೀನು, ರೈತರಿಗೆ ಸರ್ಕಾರ ದುಡ್ಡು ಕೊಡುತ್ತಿದೆ. ಬಂದು ದುಡ್ಡು ಹೊಡೆದುಕೊಂಡು ಹೋಗಲು ನಿಮ್ಮ ಮನೆ ಆಸ್ತಿ ಅಲ್ಲ ಇದು. ರೈತರ ಮನೆ ಹಾಳು ಮಾಡುತ್ತೀರಾ ನೀವು ಎಂದು ತರಾಟೆಗೆ ತೆಗೆದುಕೊಂಡು ಆಕ್ರೋಶ ಹೊರಹಾಕಿದ್ದಾರೆ.

    ಅಷ್ಟೇ ಅಲ್ಲದೇ ಅಧಿಕಾರಿಯನ್ನು ಕರೆದು, ಐಎಸ್‍ಐ ಮಾರ್ಕ್ ಇಲ್ಲದ ಎಲ್ಲ ವಸ್ತುಗಳನ್ನು ವಾಪಸ್ ಕಳುಹಿಸಿ ಎಂದು ಸೂಚನೆ ನೀಡಿದ್ದಾರೆ. ಫಲಾನುಭವಿ ರೈತರನ್ನು ಕುರಿತು ಈ ವಸ್ತುಗಳು ಗುಣಮಟ್ಟದಿಂದ ಕೂಡಿಲ್ಲ. ಮತ್ತೊಂದು ದಿನ ನಿಮಗೆ ಒಳ್ಳೆಯ ಗುಣಮಟ್ಟದ ಪೈಪ್ ಮತ್ತು ಸಬ್ ಮರ್ಸಿಬಲ್ ಪಂಪ್ ವಿತರಿಸುತ್ತೇವೆ. ಅಲ್ಲಿಯವರೆಗೂ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಸಪ್ಲೈಯರ್ ಮೃತದೇಹ ಇದ್ದ ಸಂಪಿನ ನೀರಿನಲ್ಲಿ ಅಡುಗೆ, ಹೋಟೆಲ್ ಗ್ರಾಹಕರಿಗೂ ಅದೇ ನೀರು!

    ಸಪ್ಲೈಯರ್ ಮೃತದೇಹ ಇದ್ದ ಸಂಪಿನ ನೀರಿನಲ್ಲಿ ಅಡುಗೆ, ಹೋಟೆಲ್ ಗ್ರಾಹಕರಿಗೂ ಅದೇ ನೀರು!

    ಚಿಕ್ಕಬಳ್ಳಾಪುರ: ಹೋಟೆಲ್ ನ ಸಪ್ಲೈಯರ್ ಓರ್ವನ ಮೃತದೇಹ ಇದ್ದ ಸಂಪಿನ ನೀರು ಬಳಸಿ ಆಡುಗೆ ತಯಾರಿ ಮಾಡಿರುವುದಲ್ಲದೇ ಅದೇ ಸಂಪಿನ ನೀರನ್ನ ಕುಡಿಯಲು ಗ್ರಾಹಕರಿಗೆ ನೀಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣ ದಲ್ಲಿ ಬೆಳಕಿಗೆ ಬಂದಿದೆ.

    ದೇವನಹಳ್ಳಿ ಬಸ್ ನಿಲ್ದಾಣದಲ್ಲಿರುವ ಶಾಂತಿ ಸಾಗರ್ ಹೋಟೆಲ್ ನ ನೀರಿನ ಸಂಪ್‍ನಲ್ಲಿ ಸಪ್ಲೈಯರ್ ಕೃಷ್ಣ ಎಂಬಾತನ ಶವ ಇಂದು ಪತ್ತೆಯಾಗಿದೆ. ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಸಪ್ಲೈಯರ್ ಕೃಷ್ಣ ಬುಧವಾರದಂದು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ. ಇಂದು ಕೃಷ್ಣ ನ ಮೃತದೇಹ ಹೋಟೆಲ್‍ನ ಸಂಪಿನಲ್ಲಿ ತೇಲಾಡುತ್ತಿದ್ದು ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ನಿನ್ನೆಯೇ ಕೃಷ್ಣ ಸಂಪಿನಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

    ಆದ್ರೆ ಇಂದು ಅದೇ ಸಂಪಿನ ನೀರು ಬಳಸಿ ಹೋಟೆಲ್ ನಲ್ಲಿ ಆಡುಗೆ ತಯಾರಿ ಮಾಡಲಾಗಿದೆ. ಗ್ರಾಹಕರಿಗೆ ಕುಡಿಯಲು ಅದೇ ನೀರನ್ನೇ ಬಳಸಲಾಗಿದೆ. ಘಟನೆ ಹಿನ್ನೆಲೆಯಲ್ಲಿ ದೇವನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೋಟೆಲ್‍ನವರ ಕಾರ್ಯ ವೈಖರಿಗೆ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.