ನವದೆಹಲಿ: ಮಧ್ಯಪ್ರದೇಶದಲ್ಲಿ (Madhya Pradesh) ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಈಗಾಗಲೇ ಕೆಮ್ಮಿನ ಸಿರಪ್ ಸೇವಿಸಿ 16 ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದಲ್ಲಿ ಡಾ. ಪ್ರವೀಣ್ ಸೋನಿ ಅವರನ್ನು ಬಂಧಿಸಿ ಅಮಾನತುಗೊಳಿಸಲಾಗಿದೆ. ಕೆಮ್ಮಿನ ಸಿರಪ್ ತಯಾರಿಸಿದ ಕಂಪನಿಯ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಕೂಡ ಈ ವಿಷಯದಲ್ಲಿ ಕಠಿಣ ಕ್ರಮ ಕೈಗೊಂಡಿದ್ದಾರೆ. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ ಮತ್ತು ಔಷಧ ನಿಯಂತ್ರಕರನ್ನು ವರ್ಗಾಯಿಸಿದ್ದಾರೆ. ತನಿಖೆಗಾಗಿ ಪೊಲೀಸರು 12 ಸದಸ್ಯರ ವಿಶೇಷ ತನಿಖಾ ತಂಡವನ್ನು ಸಹ ರಚಿಸಿದೆ.
ನವದೆಹಲಿ: ನನಗೆ ಯಾವುದೇ ಪಶ್ಚಾತ್ತಾಪವಿಲ್ಲ, ನನ್ನ ನಿರ್ಧಾರ ಸರಿಯಿದೆ ಎಂದು ಸುಪ್ರೀಂ ಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ (CJI Gavai) ಅವರ ಮೇಲೆ ಶೂ ಎಸೆಯಲು ಮುಂದಾದ ವಕೀಲ ರಾಕೇಶ್ ಕಿಶೋರ್ (Rakesh Kishore) ಹೇಳಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಜೈಲು (Jail) ಶಿಕ್ಷೆ ಎದುರಿಸಲು ಸಿದ್ಧ. ಈ ಕೃತ್ಯಕ್ಕೆ ನಾನು ಕ್ಷಮೆಯಾಚಿಸಲ್ಲ. ಅಷ್ಟೇ ಅಲ್ಲದೇ ಯಾವುದೇ ರಾಜಕೀಯ ಪಕ್ಷದೊಂದಿಗೆ ನಾನು ಸಂಬಂಧ ಹೊಂದಿಲ್ಲ ಎಂದು ತಿಳಿಸಿದರು.
#WATCH | Delhi: Suspended Advocate Rakesh Kishore, who attempted to hurl an object at CJI BR Gavai, says, “…I was hurt…I was not inebriated, this was my reaction to his action…I am not fearful. I don’t regret what happened.”
ಶೂ ಎಸೆಯಲು ದೇವರೇ ಪ್ರಚೋದನೆ ನೀಡಿದ್ದಾನೆ. ಖಜುರಾಹೊ ಅರ್ಜಿ ವಿಚಾರಣೆ ವೇಳೆ ನ್ಯಾ. ಗವಾಯಿ ಹೇಳಿದ ಅಭಿಪ್ರಾಯದಿಂದ ನನಗೆ ರಾತ್ರಿ ನಿದ್ದೆಯೇ ಬರಲಿಲ್ಲ. ನಂತರ ಮಾರಿಷಸ್ನಲ್ಲಿ ಭಾರತೀಯ ಕಾನೂನು ವ್ಯವಸ್ಥೆಯು ಕಾನೂನಿನ ಆಳ್ವಿಕೆಯಿಂದ ನಿಯಂತ್ರಿಸಲ್ಪಡುತ್ತದೆಯೇ ಹೊರತು ಬುಲ್ಡೋಜರ್ ನಿಯಮದಿಂದ ಅಲ್ಲ ಎಂದು ಗವಾಯಿ ಹೇಳಿಕೆಯಿಂದ ನನಗೆ ಅಸಮಾಧಾನವಾಗಿತ್ತು ಎಂದು ಹೇಳಿದರು. ಇದನ್ನೂ ಓದಿ: ಸನಾತನ ಧರ್ಮಕ್ಕೆ ಅವಮಾನ ಸಹಿಸಲ್ಲ- ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಮುಂದಾದ ವಕೀಲ
ನನ್ನ ಕೃತ್ಯದಿಂದ ಕುಟುಂಬದವರು ಅಸಮಾಧಾನಗೊಂಡಿದ್ದಾರೆ ಎನ್ನುವುದು ನನಗೆ ತಿಳಿದಿದೆ. ಮುಂದೆ ಯಾವುದೇ ರೀತಿಯ ಪರಿಣಾಮ ಎದುರಿಸಲು ನಾನು ಸಿದ್ಧನಿದ್ದೇನೆ. ದೇವರ ಹೆಸರಿನಲ್ಲೇ ಎಲ್ಲವನ್ನೂ ಸಹಿಸುತ್ತೇನೆ ಎಂದು ಹೇಳಿದ್ದಾರೆ.
– ಸಿಜೆಐ ಗವಾಯಿ ಅವ್ರ ಮೇಲೆ ಶೂ ಎಸೆಯಲು ಯತ್ನಿಸಿರುವುದನ್ನು ನಾನು ಖಂಡಿಸುತ್ತೇನೆ
ಬೆಂಗಳೂರು: ಸುಪ್ರೀಂಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಗವಾಯಿ (CJI BR Gavai) ಅವರ ತಾಯಿ, ಆರ್ಎಸ್ಎಸ್ ಕಾರ್ಯಕ್ರಮದ ಆಹ್ವಾನ ಸ್ವೀಕರಿಸದ್ದಕ್ಕೆ ಈ ಕೃತ್ಯ ಎಸಗಿರಬಹುದು ಎಂದು ಸಚಿವ ಸಂತೋಷ್ ಲಾಡ್ (Santosh Lad) ಶಂಕೆ ವ್ಯಕ್ತಪಡಿಸಿದ್ದಾರೆ.
ಸಿಜೆಐ ಮೇಲೆ ಶೂ ಎಸೆಯಲು ಮುಂದಾದ ಘಟನೆ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಇದೊಂದು ನಾಚಿಕೆಗೇಡಿನ ವಿಷಯ. ವೈಯಕ್ತಿಕವಾಗಿ ನಾನು ಇದನ್ನ ಧಿಕ್ಕರಿಸುತ್ತೇನೆ. ಭಾರತದಲ್ಲಿ ಎಲ್ಲಾ ಧರ್ಮಗಳು ಬಹಳ ವರ್ಷಗಳಿಂದ ಇವೆ. ದೇಶ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದನ್ನು ಯುವಕರು ಗಮನಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಸನಾತನ ಧರ್ಮಕ್ಕೆ ಅವಮಾನ ಸಹಿಸಲ್ಲ- ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಮುಂದಾದ ವಕೀಲ
ನನ್ನ ಪ್ರಕಾರ ಸಿಜೆಐ ಅವರ ತಾಯಿ, ಆರ್ಎಸ್ಎಸ್ ಕಾರ್ಯಕ್ರಮದ ಆಹ್ವಾನ ಸ್ವೀಕರಿಸದ್ದಕ್ಕೆ ಈ ಕೃತ್ಯ ಎಸಗಿರಬಹುದು. ದೇಶದ 25 ಸಾವಿರ ಹಿಂದೂ ಜನರು ಪಾಸ್ಪೋರ್ಟ್ ಸರಂಡರ್ ಮಾಡಿ ಹೋಗಿದ್ದಾರೆ. ಶೂ ಎಸೆಯಲು ಯತ್ನಿಸಿದಾತನನ್ನು ಹುಡುಕಿ ತಕ್ಕಪಾಠ ಕಲಿಸಬೇಕು ಎಂದು ಕಿಡಿಕಾರಿದ್ದಾರೆ.
ಇದನ್ನ ಹೆಚ್ಚಾಗಿ ಪ್ರಚಾರ ಮಾಡೋದು ಸರಿಯಲ್ಲ. ರಾಜಕೀಯ ಲಾಭದ ಪ್ರಯತ್ನ ನಡೆಯುತ್ತಿದೆ. ಕಳೆದ 10 ವರ್ಷಗಳಿಂದ ಇದು ನಡೆಯುತ್ತಿದೆ. ಈ ಘಟನೆ ಬಗ್ಗೆ ವ್ಯಾಪಕ ಚರ್ಚೆಯಾಗಬೇಕು. ಎಲ್ಲಾ ಸನಾತನ ಧರ್ಮದವರು ಈ ರೀತಿ ಇಲ್ಲ. ಇಡೀ ದೇಶದ ಯುವಜನತೆ ಇದನ್ನ ತಿಳಿಯಬೇಕು. ಎಲ್ಲಾ ಜಾತಿ ಜನಾಂಗ ಒಂದಾಗಬೇಕು. ಇಂತದಕ್ಕೆಲ್ಲ ಅವಕಾಶ ಕೊಡಬಾರದು ಅಂತ ಕರೆ ನೀಡಿದ್ದಾರೆ.
ಕೋರ್ಟ್ ಹಾಲ್ನಲ್ಲಿ ಕಿಶೋರ್ ರಾಕೇಶ್ ಶೂ ತೆಗೆಯುತ್ತಿದ್ದಾಗ ಅಲ್ಲಿದ್ದ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ವಕೀಲರನ್ನು ತಡೆದು ಹೊರಗೆ ಕರೆದುಕೊಂಡು ಹೋಗಿದ್ದಾರೆ. ಕರೆದುಕೊಂಡು ಹೋಗುವಾಗ ಸನಾತನ ಧರ್ಮಕ್ಕೆ ಅವಮಾನ ಮಾಡುವುದನ್ನು ನಾನು ಸಹಿಸುವುದಿಲ್ಲ ಎಂದು ಕೂಗಿಕೊಂಡು ಹೋಗಿದ್ದಾರೆ.
ಈ ವೇಳೆ ಸಿಜೆಐ ಯಾವುದೇ ಯಾವುದೇ ಮುಜುಗರಕ್ಕೊಳಗಾಗದೇ ನ್ಯಾಯಾಲಯದಲ್ಲಿ ಹಾಜರಿದ್ದ ವಕೀಲರಿಗೆ ತಮ್ಮ ವಾದಗಳನ್ನು ಮುಂದುವರಿಸುವಂತೆ ಕೇಳಿಕೊಂಡರು. ಈ ಘಟನೆಯಿಂದ ವಿಚಲಿತರಾಗಬೇಡಿ. ನಾವು ವಿಚಲಿತರಾಗುವುದಿಲ್ಲ. ಈ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿ ಕಲಾಪ ಮುಂದುವರಿಸಿದರು.
ದೆಹಲಿ ಡಿಸಿಪಿ ಮತ್ತು ಸುಪ್ರೀಂ ಕೋರ್ಟ್ ಭದ್ರತಾ ಅಧಿಕಾರಿಗಳು ಕಿಶೋರ್ ರಾಕೇಶ್ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಏನಿದು ಪ್ರಕರಣ?
ಮಧ್ಯಪ್ರದೇಶದ ಯುನೆಸ್ಕೋ ವಿಶ್ವ ಪರಂಪರೆಗೆ ಸೇರ್ಪಡೆಯಾಗಿರುವ ಖಜುರಾಹೊ ದೇವಾಲಯ ( Lord Vishnu Idol in Khajuraho) ಸಂಕೀರ್ಣದ ಭಾಗವಾಗಿರುವ ಜವಾರಿ ದೇವಾಲಯದಲ್ಲಿ ಏಳು ಅಡಿ ಎತ್ತರದ ವಿಷ್ಣುವಿನ ವಿಗ್ರಹವನ್ನು ಪುನರ್ನಿರ್ಮಿಸಲು ಮತ್ತು ಮರುಸ್ಥಾಪಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸಿಜೆಐ ಗವಾಯಿ ನೇತೃತ್ವದ ಪೀಠ ಸೆ.16 ರಂದು ವಜಾಗೊಳಿಸಿತ್ತು.
ಈ ಪ್ರಕರಣ ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಮೀಕ್ಷೆಯ (ASI) ವ್ಯಾಪ್ತಿಗೆ ಬರುತ್ತದೆಯೇ ಹೊರತು ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ. ಏನೇ ಮಾಡುವುದರಿದ್ದರೂ ಎಎಸ್ಐ ಅನುಮತಿ ನೀಡಬೇಕಾಗಿದೆ. ಕ್ಷಮಿಸಿ ಎಂದು ತಿಳಿಸಿದ್ದರು.
ಸಂಪೂರ್ಣವಾಗಿ ಪ್ರಚಾರ ಹಿತಾಸಕ್ತಿಗಾಗಿ ಈ ಅರ್ಜಿಯನ್ನು ನೀವು ಸಲ್ಲಿಕೆ ಮಾಡಿದ್ದೀರಿ. ಹೋಗಿ ದೇವರಲ್ಲೇ ಏನಾದರೂ ಮಾಡುವಂತೆ ಬೇಡಿಕೊಳ್ಳಿ. ನೀವು ವಿಷ್ಣುವಿನ ಕಟ್ಟಾ ಭಕ್ತ ಎಂದು ಹೇಳುತ್ತೀರಿ. ಆದ್ದರಿಂದ ಈಗಲೇ ಹೋಗಿ ಪ್ರಾರ್ಥಿಸಿ ಮತ್ತು ಸ್ವಲ್ಪ ಧ್ಯಾನ ಮಾಡಿ ಎಂದು ಸಿಜೆಐ ಗವಾಯಿ ಹೇಳಿದ್ದರು.
ಮೊಘಲ್ ಆಕ್ರಮಣದ ಸಮಯದಲ್ಲಿ ವಿಗ್ರಹವು ವಿರೂಪಗೊಂಡಿದ್ದು, ಅದನ್ನು ಪುನಃಸ್ಥಾಪಿಸಲು ಸರ್ಕಾರಕ್ಕೆ ಪದೇ ಪದೇ ಮನವಿ ಮಾಡಿದರೂ ಅದು ಅದೇ ಸ್ಥಿತಿಯಲ್ಲಿದೆ ಎಂದು ರಾಕೇಶ್ ದಲಾಲ್ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.
– ವಾಸ್ತವಾಂಶ ಜನರಿಗೆ ತಿಳಿಸಬೇಕು, ವರದಿ ಬಂದ ನಂತ್ರ ಮಾತಾಡ್ತೇನೆ; ಡಿಸಿಎಂ
ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಧರ್ಮಸ್ಥಳ ಪ್ರಕರಣ (Dharmasthala Case) ಖಾಲಿ ಡಬ್ಬ, ದೊಡ್ಡ ಷಡ್ಯಂತ್ರ ಎಂದಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈಗ ಬುರುಡೆ ಗ್ಯಾಂಗ್ ಷಡ್ಯಂತ್ರದ ಕುರಿತು ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬುರುಡೆಯನ್ನ ದೆಹಲಿಗೆ ಎತ್ತಿಕೊಂಡು ಹೋಗಿದ್ದೂ ಗೊತ್ತು, ಸುಪ್ರೀಂ ಕೋರ್ಟ್ಗೆ (Supreme Court) ಹೋಗಿದ್ದೂ ಗೊತ್ತು ಎಂದು ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ (DK Shivakumar), ವಾಸ್ತವಾಂಶ ಜನರಿಗೆ ತಿಳಿಸಬೇಕು ಅನ್ನೋದು ನಮ್ಮ ಆಸೆ. ರಾಜಕೀಯ ಯಾರೂ ಏನ್ ಬೇಕಾದರೂ ಮಾತಾಡಬಹುದು. ನಾನು ಮಾತಾಡಿದ್ರೆ ಸರ್ಕಾರದ ಹೇಳಿಕೆ ಆಗುತ್ತೆ. ಅಂತಿಮ ವರದಿ ಬರಲಿ, ಮಾತಾಡ್ತೀನಿ. ಹೋಮ್ ಮಿನಿಸ್ಟರ್, ಸಿಎಂ ಅಧಿಕೃತ ಸ್ಟೇಟ್ಮೆಂಟ್ ಮಾಡ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ| ಇದೊಂದು ಖಾಲಿ ಡಬ್ಬ, ದೊಡ್ಡ ಷಡ್ಯಂತ್ರ ನಡೆದಿದೆ: ಡಿಕೆಶಿ
ಸುಪ್ರೀಂ ಕೋರ್ಟ್ ಆದೇಶ ಮುಚ್ಚಿಟ್ಟು ಮೋಸ
ದಕ್ಷಿಣ ಕನ್ನಡ ಎಸ್ಪಿಗೆ ದೂರು ನೀಡುವುದಕ್ಕೆ ಮುನ್ನವೇ ಚಿನ್ನಯ್ಯನ ಮೂಲಕ ಬುರುಡೆ ಗ್ಯಾಂಗ್ ಸುಪ್ರೀಂ ಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಆದ್ರೆ ಮೇ 5ರಂದು ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ, ನ್ಯಾ.ಸತೀಶ್ ಚಂದ್ರ ನೇತೃತ್ವದ ಪೀಠ ಅರ್ಜಿ ವಜಾ ಮಾಡಿತ್ತು. ಆದ್ರೂ ಇದನ್ನ ಮುಚ್ಚಿಟ್ಟು ಬುರುಡೆ ಗ್ಯಾಂಗ್ ಬೆಳ್ತಂಗಡಿ ಕೋರ್ಟ್ಗೆ ಅರ್ಜಿ ಸಲ್ಲಿಸಿ, ಎಸ್ಪಿಗೂ ದೂರು ನೀಡಲಾಗಿತ್ತು.
ಎಸ್ಐಟಿ ರಚನೆ ಮಾಡುವಂತೆ ಅರ್ಜಿ ಸಲ್ಲಿಸಿದ್ದ ಗ್ಯಾಂಗ್
ಕಳೆದ ಏಪ್ರಿಲ್ 30 ರಂದು ಧರ್ಮಸ್ಥಳ ಪ್ರಕರಣದ ಕುರಿತು ಎಸ್ಐಟಿ ರಚನೆ ಮಾಡುವಂತೆ ಒತ್ತಾಯಿಸಿ ಬುರುಡೆ ಗ್ಯಾಂಗ್ ಅರ್ಜಿ ಸಲ್ಲಿಕೆ ಮಾಡಿತ್ತು. ಆದ್ರೆ ಮೇ 5ರಂದೇ ಸುಪ್ರೀಂ ಕೋರ್ಟ್ ಬುರುಡೆ ಗ್ಯಾಂಗ್ಗೆ ಛೀಮಾರಿ ಹಾಕಿ ಅರ್ಜಿ ವಜಾಗೊಳಿಸಿತ್ತು. ಇದರಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಕಾಣುತ್ತಿಲ್ಲ, ವೈಯಕ್ತಿಕ ಹಿತಾಸಕ್ತಿ ಕಾಣಿಸುತ್ತಿದೆ. ಇದು ಪೈಸಾ ಇಂಟರೆಸ್ಟ್ ಲಿಟಿಗೇಷನ್, ಪೊಲಿಟಿಕಲ್ ಇಂಟರೆಸ್ಟ್ ಲಿಟಿಗೇಷನ್, ಪ್ರೈವೇಟ್ ಇಂಟರೆಸ್ಟ್ ಲಿಟಿಗೇಷನ್ ಎಂದು ಬುರುಡೆ ಗ್ಯಾಂಗ್ಗೆ ತಪರಾಕಿ ಹಾಕಿತ್ತು. ನಾಚಿಕೆ ಮಾನಾ ಮರ್ಯಾದೆ ಎಲ್ಲವನ್ನೂ ಬಿಟ್ಟು ಬಂದು ದೂರು ನೀಡಿದ್ದೀರಿ ಎಂದು ಗ್ಯಾಂಗನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಲ್ಲದೇ ಸಾರಾಸಗಟಾಗಿ ಅರ್ಜಿಯನ್ನ ತಿರಸ್ಕರಿಸಿತ್ತು. ಇದೆಲ್ಲವನ್ನೂ ಮುಚ್ಚಿಟ್ಟಿದ್ದ ಬುರುಡೆ ಗ್ಯಾಂಗ್ ಬೆಳ್ತಂಗಡಿ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಬಳಿಕ ಎಸ್ಪಿಗೂ ದೂರು ನೀಡಿ ಪ್ರಕರಣ ಮುನ್ನೆಲೆಗೆ ತಂದಿದೆ ಅನ್ನೋದು ಈಗ ಬಯಲಾಗಿತ್ತು. ಈ ಬೆನ್ನಲ್ಲೇ ಡಿಕೆಶಿ ಹೇಳಿಕೆ ವಿಪಕ್ಷಗಳ ಬಾಯಿಗೂ ಆಹಾರವಾಗಿದೆ.
ನವದೆಹಲಿ: ಭಾರತೀಯ ದಂಡ ಸಂಹಿತೆ(IPC) ಸೆಕ್ಷನ್ 498 ಎ ಅತ್ಯಂತ ಕಠಿಣ ಸೆಕ್ಷನ್ ಎಂದು ಸುಪ್ರೀಂ ಕೋರ್ಟ್ (Supreme Court) ಅಭಿಪ್ರಾಯಪಟ್ಟಿದೆ.
ಮದುವೆಯಾದ 1.5 ತಿಂಗಳೊಳಗೆ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸುವ ವೇಳೆ ನ್ಯಾ. ಬಿ. ನಾಗರತ್ನ ಅವರು ನಾವು ಎಲ್ಲಾ ಪ್ರಕರಣಗಳನ್ನು ಸುಳ್ಳು ಎಂದು ಹೇಳುತ್ತಿಲ್ಲ. ಆದರೆ ನಾವು ಹಲವಾರು 498A ಪ್ರಕರಣಗಳನ್ನು ರದ್ದುಗೊಳಿಸಿದ್ದೇವೆ ಎಂದು ಹೇಳಿದರು.
ಐಪಿಸಿ ಜಾರಿಯಲ್ಲಿದ್ದಾಗ ಮಹಿಳೆ ವರದಕ್ಷಿಣೆ ಕಿರುಕುಳ (Dowry Harassment) ದೂರು ನೀಡಿದಾಗ ಸೆಕ್ಷನ್ 498 ಎ ಅಡಿ ಎಫ್ಐಆರ್ ದಾಖಲಾಗುತ್ತಿತ್ತು. ವರದಕ್ಷಿಣೆ ಪಿಡುಗನ್ನು ತೊಡೆದು ಹಾಕುವುದು ಈ ಸೆಕ್ಷನ್ನ ಮೂಲ ಉದ್ದೇಶವಾಗಿತ್ತು. ಆದರೆ ಈ ಸೆಕ್ಷನ್ ದುರುಪಯೋಗ ಆಗುತ್ತಿರುವ ಹಿನ್ನೆಲೆಯಲ್ಲಿ ಕೋರ್ಟ್ಗಳು ಹಲವು ಪ್ರಕರಣಗಳು ರದ್ದು ಮಾಡುತ್ತಿವೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್ | ರಾಜ್ಯ ಸರ್ಕಾರವನ್ನೇ ಯಾಮಾರಿಸಿದ ʻಬುರುಡೆʼ ಗ್ಯಾಂಗ್ – ಸುಪ್ರೀಂ ಆದೇಶ ಮುಚ್ಚಿಟ್ಟು ಮಹಾ ಮೋಸ
ಐಪಿಸಿ ಸೆಕ್ಷನ್ 498 ಎ ಏನು ಹೇಳುತ್ತೆ?
ಪತಿ ಅಥವಾ ಅತನ ಸಂಬಂಧಿಗಳು ಪತ್ನಿಗೆ ಹಿಂಸೆ ನೀಡಿದರೆ ಈ ಸೆಕ್ಷನ್ ಅಡಿ ಕೇಸ್ ದಾಖಲಿಸಬಹುದು. ಜಾಮೀನು ರಹಿತ ಕೇಸ್ ಇದಾಗಿದ್ದು ಆರೋಪ ಸಾಬೀತಾದರೆ 3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದು.
ಯಾವುದೇ ಆಸ್ತಿ ಅಥವಾ ಬೆಲೆಬಾಳುವ ವಸ್ತುಗಳಿಗಾಗಿ ಕಾನೂನುಬಾಹಿರ ಬೇಡಿಕೆಯನ್ನು ಇಡುವುದು, ಬೇಡಿಕೆಯನ್ನು ಪೂರೈಸಲು ಮಹಿಳೆ ಅಥವಾ ಆಕೆಯ ಸಂಬಂಧಿಗಳು ವಿಫಲವಾದರೆ ಆಕೆಯನ್ನು ಒತ್ತಾಯಿಸುವ ಉದ್ದೇಶದಿಂದ ನೀಡುವ ಕಿರುಕುಳ.
ಅಪರಾಧದಿಂದ ಸಂತ್ರಸ್ತರಾದ ಮಹಿಳೆಯರು ಅಥವಾ ರಕ್ತಸಂಬಂಧ, ವಿವಾಹ ಅಥವಾ ದತ್ತು ಸ್ವೀಕಾರದ ಮೂಲಕ ಅವರಿಗೆ ಸಂಬಂಧಿಸಿದ ಯಾವುದೇ ವ್ಯಕ್ತಿ ಸೆಕ್ಷನ್ 498A ಅಡಿಯಲ್ಲಿ ದೂರು ಸಲ್ಲಿಸಬಹುದು. ಒಂದು ವೇಳೆ ಯಾವುದೇ ಸಂಬಂಧಿಗಳು ಇಲ್ಲದೇ ಇದ್ದರೆ ಆಕೆಯ ಪರವಾಗಿ ರಾಜ್ಯ ಸರ್ಕಾರವು ಸೂಚಿಸಬಹುದಾದ ಯಾವುದೇ ಸಾರ್ವಜನಿಕ ಸೇವಕರು ದೂರು ನೀಡಬಹುದು.
ನವದೆಹಲಿ: ದೀಪಾವಳಿ (Deepavali) ಸನಿಹವಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಮತ್ತೆ ವಾಯು ಮಾಲಿನ್ಯದ (Pollution) ಆತಂಕ ಶುರುವಾಗಿದೆ. ಈ ನಡುವೆ ಈ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು, ದೆಹಲಿ – ಎನ್ಸಿಆರ್ನಲ್ಲಿ ಎಲ್ಲಾ ರೀತಿಯ ಪಟಾಕಿಗಳ (Firecrackers) ಮಾರಾಟವನ್ನು ನಿಷೇಧಿಸಿದೆ.
ಸುಪ್ರೀಂಕೋರ್ಟ್ (Supreme Court) ದೆಹಲಿಯಲ್ಲಿ ಪಟಾಕಿ ತಯಾರಕರಿಗೆ ಹಸಿರು ಪಟಾಕಿಗಳನ್ನು ತಯಾರಿಸಲು ಅನುಮತಿ ನೀಡಿತು. ಆದಾಗ್ಯೂ, ಮುಂದಿನ ಆದೇಶದವರೆಗೆ ಈ ಪಟಾಕಿಗಳನ್ನು ದೆಹಲಿ-ಎನ್ಸಿಆರ್ನಲ್ಲಿ ಮಾರಾಟ ಮಾಡಬಾರದು ಎಂದು ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ. ಹಸಿರು ಪಟಾಕಿ ಪ್ರಮಾಣಪತ್ರ ಹೊಂದಿರುವ ತಯಾರಕರು ಮಾತ್ರ ಪಟಾಕಿಗಳನ್ನು ತಯಾರಿಸಬೇಕು ಎಂಬ ಷರತ್ತನ್ನು ನ್ಯಾಯಾಲಯ ವಿಧಿಸಿದೆ. ಈ ಪ್ರಮಾಣಪತ್ರವನ್ನು NEERI ಮತ್ತು PESOನಂತಹ ಅಧಿಕೃತ ಏಜೆನ್ಸಿಗಳು ನೀಡಬೇಕು ಎಂದು ಹೇಳಿದೆ. ಇದನ್ನೂ ಓದಿ: ಲಡಾಖ್ ಹಿಂಸಾಚಾರಕ್ಕೆ ಪ್ರಚೋದನೆ – ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅರೆಸ್ಟ್
ದೆಹಲಿ-ಎನ್ಸಿಆರ್ನಲ್ಲಿ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವುದಿಲ್ಲ ಎಂದು ಪಟಾಕಿ ತಯಾರಕರು ಲಿಖಿತ ಭರವಸೆ ನೀಡಬೇಕಾಗುತ್ತದೆ. ದೀಪಾವಳಿಯ ಸಮಯದಲ್ಲಿ ಈ ಪ್ರದೇಶದಲ್ಲಿ ಮಾಲಿನ್ಯದ ಮಟ್ಟವು ಗಮನಾರ್ಹವಾಗಿ ಹೆಚ್ಚಾಗುವುದರಿಂದ ನ್ಯಾಯಲಯ ಈ ಷರತ್ತು ವಿಧಿಸಿದೆ. ಈ ವಿಷಯದ ಕುರಿತು ಮುಂದಿನ ವಿಚಾರಣೆಯಲ್ಲಿ, ಮಾರಾಟವನ್ನು ತಡೆಯಲು ಮುಂದಿನ ಹಂತದಲ್ಲಿ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ಸುಪ್ರೀಂಕೋರ್ಟ್ ನಿರ್ಧರಿಸಲಿದೆ. ಇದನ್ನೂ ಓದಿ: ಮಿಗ್ -21 ತ್ರಿವರ್ಣ ಧ್ವಜದ ಗೌರವ ಹೆಚ್ಚಿಸಿದೆ: ರಾಜನಾಥ್ ಸಿಂಗ್
ಬೆಂಗಳೂರು: ಬುರುಡೆ ಗ್ಯಾಂಗ್ಗೆ ಸುಪ್ರೀಂ ಕೋರ್ಟ್ (Supreme Court) ಛೀಮಾರಿ ಹಾಕಿದ ವಿಚಾರದ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಉತ್ತರ ನೀಡಲು ಗೃಹ ಸಚಿವ ಪರಮೇಶ್ವರ್ (Parameshwar) ನಿರಾಕರಿಸಿದ್ದಾರೆ.
ನಾನು ಅದರ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಅದರ ಬಗ್ಗೆ ನನಗೆ ಗೊತ್ತಿಲ್ಲ. ತಿಳಿದುಕೊಂಡು ಮಾತನಾಡುತ್ತೇನೆ. ತಿಳಿದುಕೊಂಡು ಮಾತನಾಡದೇ ಹೋದರೆ ಹೋದ್ರೆ ಸಚಿವರಿಗೆ ಏನು ಗೊತ್ತಿಲ್ಲ ಎನ್ನುತ್ತೀರಿ. ತಿಳಿದುಕೊಂಡು ಅಮೇಲೆ ಮಾತನಾಡುತ್ತೇನೆ ಎಂದು ಉತ್ತರ ನೀಡಿದ್ದಾರೆ.
ಏನಿದು ಪ್ರಕರಣ?
ಕಳೆದ ಏಪ್ರಿಲ್ 30 ರಂದು ಧರ್ಮಸ್ಥಳ ಪ್ರಕರಣದ ಕುರಿತು ಎಸ್ಐಟಿ ರಚನೆ ಮಾಡುವಂತೆ ಒತ್ತಾಯಿಸಿ ಬುರುಡೆ ಗ್ಯಾಂಗ್ ಸಾರ್ವಜನಿಕಾ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿತ್ತು. ಆದರೆ ಮೇ 5ರಂದೇ ಸುಪ್ರೀಂ ಕೋರ್ಟ್ ಬುರುಡೆ ಗ್ಯಾಂಗ್ಗೆ ಛೀಮಾರಿ ಹಾಕಿ ಅರ್ಜಿ ವಜಾಗೊಳಿಸಿತ್ತು.
ಇದರಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಕಾಣುತ್ತಿಲ್ಲ, ವೈಯಕ್ತಿಕ ಹಿತಾಸಕ್ತಿ ಕಾಣಿಸುತ್ತಿದೆ. ಇದು ಪೈಸಾ ಇಂಟರೆಸ್ಟ್ ಲಿಟಿಗೇಷನ್, ಪೊಲಿಟಿಕಲ್ ಇಂಟರೆಸ್ಟ್ ಲಿಟಿಗೇಷನ್, ಪ್ರೈವೇಟ್ ಇಂಟರೆಸ್ಟ್ ಲಿಟಿಗೇಷನ್ ಎಂದು ಬುರುಡೆ ಗ್ಯಾಂಗ್ಗೆ ತಪರಾಕಿ ಹಾಕಿತ್ತು. ನಾಚಿಕೆ ಮಾನಾ ಮರ್ಯಾದೆ ಎಲ್ಲವನ್ನೂ ಬಿಟ್ಟು ಬಂದು ದೂರು ನೀಡಿದ್ದೀರಿ ದಶಕಗಳು ಕಳೆದ ಬಳಿಕ ತಡವಾಗಿ ಯಾಕೆ ಈ ಅರ್ಜಿ ಸಲ್ಲಿಸಿದ್ದೀರಿ ಎಂದು ಗ್ಯಾಂಗನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಲ್ಲದೇ ಸಾರಾಸಗಟಾಗಿ ಅರ್ಜಿಯನ್ನ ತಿರಸ್ಕರಿಸಿತ್ತು. ಆದರೆ ಈ ವಿಚಾರವನ್ನು ಮುಚ್ಚಿಟ್ಟು ಬುರುಡೆ ಗ್ಯಾಂಗ್ ಬೆಳ್ತಂಗಡಿ ನ್ಯಾಯಾಲಯದಲ್ಲಿ ಶವ ಹೂಳಲು ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿತ್ತು ಮತ್ತು ಚಿನ್ನಯ್ಯನ ಹೇಳಿಕೆಯನ್ನು ದಾಖಲು ಮಾಡಿಸಿತ್ತು.
ಈ ಬೆಳವಣಿಗೆಯ ಬೆನ್ನಲ್ಲೇ ದಕ್ಷಿಣ ಕನ್ನಡ ಪೊಲೀಸರು ಚಿನ್ನಯ್ಯ ಮಂಪರು ಪರೀಕ್ಷೆ ನಡೆಸಲು ಅರ್ಜಿ ಹಾಕಿದ್ದರು. ಈ ವಿಚಾರ ಚರ್ಚೆ ಆಗುತ್ತಿದ್ದಂತೆ ಸರ್ಕಾರ ದಿಡೀರ್ ಎಂಬಂತೆ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶ ಪ್ರಕಟಿಸಿತ್ತು.
ಬೆಂಗಳೂರು/ನವದೆಹಲಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ (Dharmasthala Mass Burials Case) ಸಂಬಂಧಿಸಿದಂತೆ ಬುರುಡೆ ಗ್ಯಾಂಗ್ನ ಮತ್ತೊಂದು ಮುಖವಾಡ ಕಳಚಿಬಿದ್ದಿದೆ. ಸುಪ್ರೀಂ ಕೋರ್ಟ್ನಲ್ಲಿ ಛೀಮಾರಿ ಹಾಕಿಸಿಕೊಂಡಿದ್ದ ಗ್ಯಾಂಗ್, ತಮಗಾದ ಹಿನ್ನಡೆಯನ್ನು ಮುಚ್ಚಿಟ್ಟು ದಕ್ಷಿಣ ಕನ್ನಡ (Dakshina Kannada) ಎಸ್ಪಿಗೆ ದೂರು ನೀಡಿದ್ದ ಸತ್ಯ ಈಗ ಬಟಾಬಯಲಾಗಿದೆ.
ಸುಪ್ರೀಂ (Supreme Court) ಆದೇಶವನ್ನ ಮುಚ್ಚಿಚ್ಚು ರಾಜ್ಯ ಸರ್ಕಾರವನ್ನೇ (Karnataka Government) ಈ ಬುರುಡೆ ಗ್ಯಾಂಗ್ ಯಾಮಾರಿಸಿತ್ತು. ಅರ್ಜಿ ವಜಾಗೊಂಡಿದ್ದರೂ ಎಸ್ಐಟಿ ರಚನೆ ಮಾಡಿಸಿಕೊಂಡು ತನಿಖೆ ಮಾಡಿಸಿತ್ತು ಅನ್ನೋ ರಹಸ್ಯ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಗಡಿಪಾರು ಆದೇಶ ಬಳಿಕ ತಿಮರೋಡಿ ಅಜ್ಞಾತ – ಇತ್ತ ಚಿನ್ನಯ್ಯನ 15, 16ನೇ ವಿಡಿಯೋ ರಿಲೀಸ್
ಸುಪ್ರೀಂ ಕೋರ್ಟ್ ಆದೇಶ ಮುಚ್ಚಿಟ್ಟು ಮೋಸ
ದಕ್ಷಿಣ ಕನ್ನಡ ಎಸ್ಪಿಗೆ ದೂರು ನೀಡುವುದಕ್ಕೆ ಮುನ್ನವೇ ಚಿನ್ನಯ್ಯನ ಮೂಲಕ ಬುರುಡೆ ಗ್ಯಾಂಗ್ ಸುಪ್ರೀಂ ಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಆದ್ರೆ ಮೇ 5ರಂದು ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ, ನ್ಯಾ.ಸತೀಶ್ ಚಂದ್ರ ನೇತೃತ್ವದ ಪೀಠ ಅರ್ಜಿ ವಜಾ ಮಾಡಿತ್ತು. ಆದ್ರೂ ಇದನ್ನ ಮುಚ್ಚಿಟ್ಟು ಬುರುಡೆ ಗ್ಯಾಂಗ್ ಬೆಳ್ತಂಗಡಿ ಕೋರ್ಟ್ಗೆ ಅರ್ಜಿ ಸಲ್ಲಿಸಿ, ಎಸ್ಪಿಗೂ ದೂರು ನೀಡಲಾಗಿತ್ತು. ಇದನ್ನೂ ಓದಿ: ತಿಮರೋಡಿ ಬಳಿಗೆ ನಮ್ಮನ್ನ ಕರೆದುಕೊಂಡು ಹೋಗಿದ್ದೇ ಸೌಜನ್ಯ ಮಾವ: ಚಿನ್ನಯ್ಯನ 2ನೇ ಪತ್ನಿ ಬಾಂಬ್
ಎಸ್ಐಟಿ ರಚನೆ ಮಾಡುವಂತೆ ಅರ್ಜಿ ಸಲ್ಲಿಸಿದ್ದ ಗ್ಯಾಂಗ್
ಕಳೆದ ಏಪ್ರಿಲ್ 30 ರಂದು ಧರ್ಮಸ್ಥಳ ಪ್ರಕರಣದ ಕುರಿತು ಎಸ್ಐಟಿ ರಚನೆ ಮಾಡುವಂತೆ ಒತ್ತಾಯಿಸಿ ಬುರುಡೆ ಗ್ಯಾಂಗ್ ಅರ್ಜಿ ಸಲ್ಲಿಕೆ ಮಾಡಿತ್ತು. ಆದ್ರೆ ಮೇ 5ರಂದೇ ಸುಪ್ರೀಂ ಕೋರ್ಟ್ ಬುರುಡೆ ಗ್ಯಾಂಗ್ಗೆ ಛೀಮಾರಿ ಹಾಕಿ ಅರ್ಜಿ ವಜಾಗೊಳಿಸಿತ್ತು. ಇದರಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಕಾಣುತ್ತಿಲ್ಲ, ವೈಯಕ್ತಿಕ ಹಿತಾಸಕ್ತಿ ಕಾಣಿಸುತ್ತಿದೆ. ಇದು ಪೈಸಾ ಇಂಟರೆಸ್ಟ್ ಲಿಟಿಗೇಷನ್, ಪೊಲಿಟಿಕಲ್ ಇಂಟರೆಸ್ಟ್ ಲಿಟಿಗೇಷನ್, ಪ್ರೈವೇಟ್ ಇಂಟರೆಸ್ಟ್ ಲಿಟಿಗೇಷನ್ ಎಂದು ಬುರುಡೆ ಗ್ಯಾಂಗ್ಗೆ ತಪರಾಕಿ ಹಾಕಿತ್ತು. ನಾಚಿಕೆ ಮಾನಾ ಮರ್ಯಾದೆ ಎಲ್ಲವನ್ನೂ ಬಿಟ್ಟು ಬಂದು ದೂರು ನೀಡಿದ್ದೀರಿ ಎಂದು ಗ್ಯಾಂಗನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಲ್ಲದೇ ಸಾರಾಸಗಟಾಗಿ ಅರ್ಜಿಯನ್ನ ತಿರಸ್ಕರಿಸಿತ್ತು.
ನವದೆಹಲಿ: ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ವಿರುದ್ಧ ಆದಾಯ ಮೀರಿ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ವಾಪಸ್ ಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ (Supreme Court) ಮುಂದೂಡಿದೆ.
ಈ ಹಿಂದೆ ಈ ಪ್ರಕರಣ ನ್ಯಾ. ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಅಲ್ಲದೇ ಡಿ.ಕೆ ಶಿವಕುಮಾರ್ ಅವರಿಗೆ ಸಂಬಂಧಿಸಿದ ಆದಾಯ ತೆರಿಗೆ ಪ್ರಕರಣವೂ ಬಾಕಿ ಇರುವ ಹಿನ್ನಲೆ ಎಲ್ಲ ಪ್ರಕರಣಗಳ ವಿಚಾರಣೆಯಾಗಲಿದೆ ಎಂದು ಸಿಜೆಐ ಬಿ.ಆರ್ ಗವಾಯಿ ಹೇಳಿದರು.
ನಾನು ಅಮಿತ್ ಶಾರನ್ನು ಭೇಟಿಯಾಗಿಲ್ಲ
ದೆಹಲಿಯಲ್ಲಿ ತಮ್ಮ ವಿರುದ್ಧದ ಪ್ರಕರಣದ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ನಮ್ಮ ಪ್ರಕರಣದ ವಿಚಾರಣೆ ಮುಂದೂಡಿಕೆಯಾಗಿದೆ. ಮತ್ತೆ ಬರಬೇಕು ಎಂದರು. ಮೇಕೆದಾಟು ಪ್ರಕರಣ ಮಂಗಳವಾರ ವಿಚಾರಣೆ ನಡೆಯಬೇಕಿದೆ. ಆದರೆ ಬೇರೊಂದು ಪ್ರಕರಣದಲ್ಲಿ ಸಾಂವಿಧಾನಿಕ ಪೀಠ ವಿಚಾರಣೆ ನಡೆಸುತ್ತಿರುವ ಹಿನ್ನಲೆ ಅದೂ ಮುಂದೂಡಿಕೆಯಾಗಿದೆ ಎಂದು ತಿಳಿಸಿದರು.
ಬಳಿಕ ಅಮಿತ್ ಶಾ ಭೇಟಿ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೆಲವರಿಗೆ ನನ್ನ ನೆನಪಿಸಿಕೊಳ್ಳದಿದ್ದರೆ ನಿದ್ದೆ ಬರುವುದಿಲ್ಲ. ಅಮಿತ್ ಶಾ ಅವರನ್ನು ಭೇಟಿಯಾಗಲು ನನಗೆ ತಲೆ ಕೆಟ್ಟಿದ್ಯಾ ಎಂದು ಪ್ರಶ್ನಿಸಿದರು.
ಆಲಮಟ್ಟಿ ಎತ್ತರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಹೇಳಿಕೆಗೆ ಕೇಂದ್ರ ಸಚಿವರು, ಬಿಜೆಪಿ ಸಂಸದರು ಉತ್ತರ ಕೊಡಬೇಕು.ಬೊಮ್ಮಾಯಿ, ಜಗದೀಶ್ ಶೆಟ್ಟರ್, ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ ಈ ಬಗ್ಗೆ ಮಾತನಾಡಬೇಕು. ಅವರು ಇದಕ್ಕೆಲ್ಲ ಉತ್ತರ ಕೊಡಬೇಕು ಎಂದರು.