Tag: supriya

  • Breaking – ಕೆಜಿಎಫ್ ಹಾಡು ದುರ್ಬಳಕೆ : ರಾಹುಲ್ ಗಾಂಧಿ ಮತ್ತೆ ಸಂಕಷ್ಟ

    Breaking – ಕೆಜಿಎಫ್ ಹಾಡು ದುರ್ಬಳಕೆ : ರಾಹುಲ್ ಗಾಂಧಿ ಮತ್ತೆ ಸಂಕಷ್ಟ

    ಭಾರತ್‌ ಜೋಡೋ ಸಮಯದಲ್ಲಿ ತನ್ನ ಪ್ರಚಾರಕ್ಕೆ ಕೆಜಿಎಫ್‌ ಹಾಡನ್ನು ಬಳಿಸಿದ್ದ ರಾಹುಲ್‌ ಗಾಂಧಿ ಮತ್ತು ಕಾಂಗ್ರೆಸ್‌ ನಾಯಕರಿಗೆ ಸಂಕಷ್ಟ ಎದುರಾಗಿದೆ.

    ಕಾಂಗ್ರೆಸ್ ಮುಖಂಡರು ಪ್ರಕರಣವನ್ನು ರದ್ದು ಮಾಡಬೇಕು ಎಂದು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್  ನ್ಯಾ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಪ್ರಕರಣವನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಆದೇಶ ನೀಡಿದೆ.

    ಜೂನ್‌ 23 ರಂದು ಎರಡು ಕಡೆಯ ವಾದ, ಪ್ರತಿವಾದ ಆಲಿಸಿದ್ದ ಕೋರ್ಟ್‌ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಇದನ್ನೂ ಓದಿ:ಹೊಸ ಸಿನಿಮಾ ಮುನ್ನ ಫ್ಯಾಮಿಲಿ ಜೊತೆ ರಾಜಮೌಳಿ ಟ್ರಿಪ್

    ಏನಿದು ಪ್ರಕರಣ?

    ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು, ಸಂಸ್ಥೆಯ ಅನುಮತಿ ಇಲ್ಲದೇ ಹಾಡುಗಳನ್ನು ಯಾತ್ರೆಯಲ್ಲಿ ಬಳಸಿದ್ದಾರೆ. ಕೆಜಿಎಫ್ ಸಿನಿಮಾದ ‘ಸುಲ್ತಾನಾ..’ ಹಾಡನ್ನು ಯಾತ್ರೆಯಲ್ಲಿ ಬಳಸಿದ್ದಕ್ಕಾಗಿ ಕೆಜಿಎಫ್ ಚಿತ್ರದ ಹಾಡುಗಳ ಪ್ರಸಾರ ಹಕ್ಕು ಹೊಂದಿದ್ದ MRT ಸಂಸ್ಥೆಯು ರಾಹುಲ್ ಗಾಂಧಿ (Rahul Gandhi) , ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ (Supriya) ಹಾಗೂ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಂ ರಮೇಶ್ (Jairam Ramesh) ವಿರುದ್ಧ ದೂರು ದಾಖಲಿಸಿತ್ತು. ನ್ಯಾಯಾಲಯದ ನಿರ್ದೇಶನದ ಮೇರೆಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ (FIR) ದಾಖಲಾಗಿತ್ತು.

    ಕೆಜಿಎಫ್‌ ಹಾಡನ್ನು ಕಾಗ್ರೆಸ್ ಪಕ್ಷದ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಗಳಾದ ಟ್ಟಿಟ್ಟರ್‌, ಯೂಟ್ಯೂಬ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಬಳಸಲಾಗಿದೆ. ನಮ್ಮ ಸಂಸ್ಥೆಯ ಅನುಮತಿ ಪಡೆಯದೇ ಕಾಪಿರೈಟ್‌ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಎಂಆರ್‌ಟಿ ಸಂಸ್ಥೆ ಕೋರ್ಟ್‌ ಮೊರೆ ಹೋಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Breaking-ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಮ್ಯೂಸಿಕ್ ಬಳಕೆ : ರಾಹುಲ್ ವಿರುದ್ಧ ಎಫ್ಐಆರ್‌

    Breaking-ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಮ್ಯೂಸಿಕ್ ಬಳಕೆ : ರಾಹುಲ್ ವಿರುದ್ಧ ಎಫ್ಐಆರ್‌

    ಭಾರತೀಯ ರಾಷ್ಟ್ರೀಯ ಕಾಂಗ್ರಸ್ ಪಕ್ಷದ ಭಾರತ್ ಜೋಡೋ ಯಾತ್ರೆಯ (Bharat Jodo Yatra) ವಿಡಿಯೋಗಳಿಗೆ ‘ಕೆಜಿಎಫ್’ (KGF) ಸಿನಿಮಾದ ಹಾಡೊಂದರ ಮ್ಯೂಸಿಕ್ ಬಳಸಿರುವ ಆರೋಪ ಕೇಳಿ ಬಂದಿದ್ದು, ಕಾಪಿ ರೈಟ್ಸ್ ಉಲ್ಲಂಘನೆಗಾಗಿ ಕಾಂಗ್ರೆಸ್ ಪಕ್ಷದ ಮೇಲೆ ಎಮ್.ಆರ್.ಟಿ ಸಂಸ್ಥೆಯು ಕಾನೂನು ಸಮರಕ್ಕೆ ಮುಂದಾಗಿದೆ. ತಮ್ಮ ಸಂಸ್ಥೆಯ ಅನುಮತಿ ಇಲ್ಲದೇ, ಕೆಜಿಎಫ್ ಸಿನಿಮಾದ ಸಂಗೀತವನ್ನು ಬಳಸಿಕೊಂಡಿದ್ದಕ್ಕಾಗಿ ಸಂಸ್ಥೆಯು ದೂರು ದಾಖಲಿಸಿದೆ.

    MRT ಸಂಸ್ಥೆಗೆ ಸೇರಿದ ಹಾಡುಗಳನ್ನು ಬಳಸಿದ ಆರೋಪ ಹೊತ್ತಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು, ಸಂಸ್ಥೆಯ ಅನುಮತಿ ಇಲ್ಲದೇ ಹಾಡುಗಳನ್ನು ಯಾತ್ರೆಯಲ್ಲಿ ಬಳಸಿದ್ದಾರೆ. ಕೆಜಿಎಫ್ ಸಿನಿಮಾದ ‘ಸುಲ್ತಾನಾ..’ ಹಾಡನ್ನು ಯಾತ್ರೆಯಲ್ಲಿ ಬಳಸಿದ್ದಕ್ಕಾಗಿ  ಕೆಜಿಎಫ್ ಚಿತ್ರದ ಹಾಡುಗಳ ಪ್ರಸಾರ ಹಕ್ಕು ಹೊಂದಿರುವರ MRT ಸಂಸ್ಥೆಯು ರಾಹುಲ್ ಗಾಂಧಿ (Rahul Gandhi) , ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ (Supriya) ಹಾಗೂ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಂ ರಮೇಶ್ (Jairam Ramesh) ವಿರುದ್ಧ ದೂರು ದಾಖಲಾಗಿತ್ತು. ನ್ಯಾಯಾಲಯದ ನಿರ್ದೇಶನದ ಮೇರೆಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ (FIR) ದಾಖಲಾಗಿದೆ. ಇದನ್ನೂ ಓದಿ:ತಾಯ್ನಾಡಿಗೆ ಪ್ರಿಯಾಂಕಾ ಚೋಪ್ರಾ ಕಾಲಿಟ್ಟ ಬೆನ್ನಲ್ಲೇ ನಟಿಯ ವಿರುದ್ಧ ಗಂಭೀರ ಆರೋಪ

    ದೇಶಾದ್ಯಂತ ಆರಂಭವಾಗಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ ರಾಹುಲ್ ಗಾಂಧಿ ಮತ್ತು ಆಯಾ ರಾಜ್ಯಗಳ ಮುಖಂಡರು ಭಾಗಿಯಾಗಿದ್ದು, ಹಿಂದಿಯಲ್ಲಿ ತಯಾರಾದ ವಿಡಿಯೋಗಳಿಗೆ ಕೆಜಿಎಫ್ ಮ್ಯೂಸಿಕ್ ಅಳವಡಿಸಲಾಗಿತ್ತು. ಆ ವಿಡಿಯೋಗಳನ್ನು ಕಾಂಗ್ರೆಸ್ ಪಕ್ಷದ ಅಧಿಕೃತ ಸೋಷಿಯಲ್ ಮೀಡಿಯಾ ಪೇಸ್ ಗಳಾದ ಟ್ವಿಟರ್ ಅಕೌಂಟ್, ಯ್ಯೂಟ್ಯಬ್  ಹಾಗೂ ಯಾತ್ರೆಯಲ್ಲೂ ಬಳಸಲಾಗಿತ್ತು. ಹಾಗಾಗಿ ಸಂಸ್ಥೆಯ ಅನುಮತಿ ಪಡೆಯದೇ ಇರುವ ಕಾರಣಕ್ಕಾಗಿ ಕಾನೂನು ಕ್ರಮಕ್ಕೆ ಮುಂದಾಗಿದೆ ಎಮ್.ಆರ್.ಟಿ ಸಂಸ್ಥೆ.

    ಯಶ್ ನಟನೆಯ ಕೆಜಿಎಫ್ ಸಿನಿಮಾ ಭಾರತೀಯ ಸಿನಿಮಾ ರಂಗದಲ್ಲೇ ಹೊಸ ದಾಖಲೆಯನ್ನು ಬರೆದಂತಹ ಚಿತ್ರ. ಈ ಸಿನಿಮಾದ ಹಾಡುಗಳು ಕೂಡ ಸೂಪರ್ ಹಿಟ್ ಆಗಿವೆ. ರಿಲೀಸ್ ಆದ ಎಲ್ಲಾ ಭಾಷೆಗಳಲ್ಲೂ ಚಿತ್ರ ಕೋಟಿ ಕೋಟಿ ಬಾಚಿದೆ. ಅಲ್ಲದೇ, ಈ ಸಿನಿಮಾದ ಸುಲ್ತಾನ ಹಾಡು ಕೂಡ ಅಷ್ಟೇ ಫೇಮಸ್ ಆಗಿತ್ತು. ಸಿನಿಮಾದ ಹೀರೋನನ್ನು ವೈಭವೀಕರಿಸುವ ಹಾಡು ಇದಾಗಿತ್ತು. ಇದೇ ಹಾಡನ್ನು ಕಾಂಗ್ರೆಸ್ ತನ್ನ ಯಾತ್ರೆಗೆ ಬಳಸಿಕೊಂಡು ಸಂಕಷ್ಟಕ್ಕೆ ಸಿಲುಕಿಕೊಂಡಿದೆ.

    Live Tv
    [brid partner=56869869 player=32851 video=960834 autoplay=true]

  • ಓಡೋಡಿ ಬಂದು ಅಂಧವೃದ್ಧನನ್ನ ಬಸ್ಸಿಗತ್ತಿಸಿದ ಮಹಿಳೆಗೆ ಮನೆ ನೀಡಿದ ಜಾಯ್ ಅಲುಕ್ಕಾಸ್

    ಓಡೋಡಿ ಬಂದು ಅಂಧವೃದ್ಧನನ್ನ ಬಸ್ಸಿಗತ್ತಿಸಿದ ಮಹಿಳೆಗೆ ಮನೆ ನೀಡಿದ ಜಾಯ್ ಅಲುಕ್ಕಾಸ್

    – ಮುಖ್ಯಕಚೇರಿಗೆ ಬರಲು ಹೇಳಿ ಸುಪ್ರಿಯಾಗೆ ಸರ್ಪ್ರೈಸ್ ಗಿಫ್ಟ್

    ತಿರುವನಂತಪುರ: ಜುಲೈ ತಿಂಗಳ ಮೊದಲ ವಾರದಲ್ಲಿ ಅಂಧ ವೃದ್ಧರೊಬ್ಬರ ಕೈಹಿಡಿದು ಬಸ್ ಹತ್ತಿಸಿದ ಮಹಿಳೆಗೆ ಇದೀಗ ಬಿಗ್ ಸರ್ಪ್ರೈಸ್ ಒಂದು ದೊರಕಿದೆ.

    ಹೌದು. ಸುಪ್ರಿತಾ ಎಂಬ ಮಹಿಳೆ ತಾನು ಕೆಲಸ ಮಾಡುತ್ತಿರುವ ಅಂಗಡಿಯ ಬಳಿಯಿರುವ ಬಸ್ ನಿಲ್ದಾಣದಲ್ಲಿ ಅಂಧ ವೃದ್ಧರೊಬ್ಬರು ಬಸ್ಸಿಗೆ ಕಾಯುತ್ತಿರುವುದನ್ನು ಗಮನಿಸಿದ್ದಾರೆ. ಅಂತೆಯೇ ಬಸ್ ನಿಲ್ದಾಣಕ್ಕೆ ಇನ್ನೇನು ಹೊರ ಬೇಕೆನ್ನುವಷ್ಟುರಲ್ಲಿ ಅಜ್ಜ ಕೂಡ ಅದೇ ಬಸ್ಸಿಗೆ ಹತ್ತಲು ಹಪಹಪಿಸಿದ್ದಾರೆ. ಇವೆಲ್ಲವನ್ನು ಗಮನಿಸಿದ್ದ ಸುಪ್ರಿತಾ ಕೂಡಲೇ ಓಡೋಡಿ ಬಂದು, ಹೊರಡಲು ಅಣಿಯಾಗುತ್ತಿದ್ದ ಬಸ್ಸನ್ನು ನಿಲ್ಲಿಸಿದ್ದಾರೆ. ಅಲ್ಲದೆ ತಾತನ ಕೈ ಹಿಡಿದು ಬಸ್ ಹತ್ತಿಸಿದ್ದಾರೆ.

    ಈ ಎಲ್ಲಾ ದೃಶ್ಯಗಳನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಈ ವಿಡಿಯೋ ನೋಡಿದ ಜಾಲತಾಣಿಗರು ಕೂಡ ಮಹಿಳೆಯ ಮಾನವೀಯ ಕಾರ್ಯಕ್ಕೆ ಮಾರು ಹೋಗಿ ಶಹಬ್ಬಾಸ್ ಅಂದಿದ್ದರು. ಇದಿಗ ಇದೇ ಮಹಿಳೆಗೆ ಒಂದು ದೊಡ್ಡ ಗಿಫ್ಟ್ ಸಿಕ್ಕಿದೆ. ಅದೇನಂದರೆ ಸುಪ್ರಿಯಾಗೆ ಕನಸಿನ ಮನೆಯೊಂದು ದೊರಕಿದೆ. ಈ ಮನೆಯನ್ನು ಪ್ರತಿಷ್ಠಿತ ಆಭರಣ ಮಳಿಗೆಯಾದ ಜಾಯ್ ಅಲುಕ್ಕಾಸ್ ಅವರು ನೀಡಿದ್ದಾರೆ. ಈ ಮೂಲಕ ಮಾನವೀಯತೆ ಮೆರೆದ ಮಹಿಳೆಯನ್ನು ಸಂಸ್ಥೆ ಗೌರವಿಸಿದೆ.

    ಮಾನವೀಯ ಕಾರ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಜಾಯ್ ಅಲುಕ್ಕಾಸ್ ಗ್ರೂಪ್ ಮುಖ್ಯಸ್ಥ ಜಾಯ್ ಅಲುಕ್ಕಾಸ್ ಅವರು ಸುಪ್ರಿಯಾ ಅವರನ್ನು ಭೇಟಿ ಮಾಡಿ, ಮೊದಲು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಆ ಬಳಿಕ ತ್ರಿಶೂರಿನಲ್ಲಿರುವ ಮುಖ್ಯ ಕಚೇರಿಗೆ ಬಂದು ಭೇಟಿಯಾಗುವಂತೆ ಹೇಳಿದ್ದಾರೆ ಈ ವೇಳೆ ಸುಪ್ರಿಯಾಗೆ ಅಲ್ಲಿ ಬಿಗ್ ಗಿಫ್ಟ್ ಸಿಕ್ಕಿದೆ. ಇದನ್ನೂ ಓದಿ: ಅಂಧ ವೃದ್ಧನಿಗಾಗಿ ಓಡೋಡಿ ಬಂದು ಬಸ್ ನಿಲ್ಲಿಸಿದ ಮಹಿಳೆ- ವಿಡಿಯೋ ವೈರಲ್

    ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಸುಪ್ರಿಯಾ, ನಾನು ಮಾಡಿರುವ ಕಾರ್ಯಕ್ಕೆ ಇಂತಹದ್ದೊಂದು ದೊಡ್ಡ ಉಡುಗೊರೆ ಸಿಗುತ್ತೆ ಎಂದು ಕನಸಲ್ಲೂ ಅಂದುಕೊಂಡಿರಲಿಲ್ಲ. ನಾನು ಜಾಯ್ ಅಲುಕ್ಕಾಸ್ ಮುಖ್ಯ ಕಚೇರಿಗೆ ಭೇಟಿ ನೀಡಿದಾಗ ಅಲ್ಲಿರುವ ನೂರಾರು ಸಿಬ್ಬಂದಿ ನನ್ನನ್ನು ಹುರಿದುಂಬಿಸಿದರು. ಈ ವೇಳೆ ನನ್ನ ಕಣ್ಣಂಚಲ್ಲಿ ನೀರು ಬಂತು. ನಾನು ವೃದ್ಧನಿಗೆ ಮಾಡಿರುವ ಸಹಾಯ ಅಚಾನಕ್ ಆಗಿದೆ. ಆದರೆ ಆ ವಿಚಾರ ನನ್ನನ್ನು ಈ ಮಟ್ಟಕ್ಕೆ ಅಲ್ಲದೆ ಇಷ್ಟೊಂದು ಮಂದಿ ಮೆಚ್ಚಿ ಕೊಂಡಾಡುತ್ತಾರೆ ಎಂದು ಅಂದುಕೊಂಡಿರಲಿಲ್ಲ ಎಂದು ಖುಷಿ ಹಂಚಿಕೊಂಡಿದ್ದಾರೆ.

    ಇದೇ ವೇಳೆ ಅಲುಕ್ಕಾಸ್ ಮುಖ್ಯಸ್ಥರ ಪತ್ನಿ ಕೂಡ ನನ್ನ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ನೀವು ಈ ಹಿಂದೆಯೂ ತುಂಬಾ ಒಳ್ಳೆಯ ಕೆಲಸವನ್ನು ಮಾಡಿರಬೇಕು. ಹೀಗಾಗಿ ಇಂದು ಈ ಕೆಲಸ ಮಾಡಲು ಅದು ಪ್ರೇರೇಪಿಸಿದೆ. ಈ ದೇಶದಲ್ಲಿ ಅನುಕಂಪ ಎಂಬುದು ಹರಿಯುವ ನದಿ ಆಗಿರಬೇಕು. ಅದು ಯಾವತ್ತೂ ಬತ್ತಬಾರದು ಎಂದು ಹೇಳಿರುವ ಮಾತನ್ನು ಸುಪ್ರಿಯಾ ಉಲ್ಲೇಖಿಸಿದ್ದಾರೆ.

    ಸುಪ್ರಿಯಾ ಅವರು ಜಾಲಿ ಸಿಲ್ಕ್ಸ್ ಎಂಬ ಟೆಕ್ಸ್ ಟೈಲ್ ನಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಇವರ ಪರಿ ಕೂಡ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.