Tag: surappa babu

  • ಸೂರಪ್ಪ ಬಾಬುಗೆ ಸೆಕ್ಯೂರಿಟಿ ಗಾರ್ಡ್ ಕೆಲಸ ಕೊಡ್ತೀನಿ ಎಂದ ಚಕ್ರವರ್ತಿ ಚಂದ್ರಚೂಡ

    ಸೂರಪ್ಪ ಬಾಬುಗೆ ಸೆಕ್ಯೂರಿಟಿ ಗಾರ್ಡ್ ಕೆಲಸ ಕೊಡ್ತೀನಿ ಎಂದ ಚಕ್ರವರ್ತಿ ಚಂದ್ರಚೂಡ

    ನ್ನಡದ ಹೆಸರಾಂತ ನಿರ್ಮಾಪಕ ಸೂರಪ್ಪ ಬಾಬು (Surappa Babu) ವಿರುದ್ಧ ಮತ್ತೆ ನಟ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ (Chakravarty Chandrachuda) ಹರಿಹಾಯ್ದಿದ್ದಾರೆ. ಮೊನ್ನೆಯಷ್ಟೇ ವಿಡಿಯೋವೊಂದನ್ನು ಮಾಡಿ ಸೂರಪ್ಪ ಬಾಬು ಅವರನ್ನು ‘ಶಿಖಂಡಿ’ ಎಂದು ಕರೆದಿದ್ದರು ಚಂದ್ರಚೂಡ, ಇಂದು ಮತ್ತೆ ಮಾಧ್ಯಮ ಗೋಷ್ಠಿಯಲ್ಲಿ’ಸೂರಪ್ಪ ಬಾಬುಗೆ ನಮ್ಮ ಮನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಖಾಲಿ ಇದೆ. ಬೇಕಾದರೆ ಕೊಡುತ್ತೇನೆ’ ಎಂದು ವಾಗ್ದಾಳಿ ನಡೆಸಿದರು.

    ಕಿಚ್ಚ ಸುದೀಪ್ (Sudeep) ವಿಚಾರವಾಗಿ ಒಂದು ಕಡೆ ನಿರ್ಮಾಪಕ ಎನ್.ಕುಮಾರ್ (N. Kumar) ಮತ್ತು ಸುದೀಪ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದ್ದರೆ, ಮತ್ತೊಂದು ಕಡೆ ಇದೇ ಸುದೀಪ್ ಅವರ ವಿಚಾರವಾಗಿ ನಿರ್ಮಾಪಕ ಸೂರಪ್ಪ ಬಾಬು ಮತ್ತು ಪತ್ರಕರ್ತ ಚಕ್ರವರ್ತಿ ಚಂದ್ರಚೂಡ ಕಚ್ಚಾಡಿಕೊಳ್ಳುತ್ತಿದ್ದಾರೆ. ಈ ಕಚ್ಚಾಟ ಅಷ್ಟು ಸುಲಭಕ್ಕೆ ಮುಗಿಯುವಂತೆ ಕಾಣುತ್ತಿಲ್ಲ.

    ಸೂರಪ್ಪ ಬಾಬು ವಿಚಾರದಲ್ಲಿ ಚಂದ್ರಚೂಡ ವಿಡಿಯೋವೊಂದನ್ನು ಮಾಡಿ ಯೂಟ್ಯೂಬ್ ಗೆ ಹಾಕಿದ್ದರು. ಅದರಲ್ಲಿ ಸೂರಪ್ಪ ಬಾಬು ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಸೂರಪ್ಪ ಬಾಬು ಫ್ಯಾಮಿಲಿಯನ್ನು ಈ ವಿಚಾರದಲ್ಲಿ ಎಳೆತಂದಿದ್ದರು. ಬಾಬು ಮಗಳ ಬಗ್ಗೆಯೂ ಕೆಲವೊಂದಿಷ್ಟು ಮಾಹಿತಿಯನ್ನು ಆಚೆ ಹಾಕಿದ್ದರು. ಇದು ಬಾಬು ಕೋಪಕ್ಕೆ ಕಾರಣವಾಗಿತ್ತು. ಇದನ್ನೂ ಓದಿ:ಮೋಹನ್ ಲಾಲ್-ನಂದಕಿಶೋರ್ ಚಿತ್ರಕ್ಕೆ ಚಾಲನೆ: ಇದು ಪ್ಯಾನ್ ಇಂಡಿಯಾ ಸಿನಿಮಾ

    ನಿನ್ನೆಯಷ್ಟೇ ಸೂರಪ್ಪ ಬಾಬು ಮಾಧ್ಯಮಗೋಷ್ಠಿಯಲ್ಲಿ ಚಂದ್ರಚೂಡ ಅವರ ವಿರುದ್ಧ ಹಲವಾರು ಆರೋಪ ಮಾಡಿದ್ದರು. ಚಂದ್ರಚೂಡ ಅವರ ವೈಯಕ್ತಿಕ ಜೀವನದ ಬಗ್ಗೆಯೂ ಮಾತನಾಡಿದ್ದರು. ಜೊತೆಗೆ ಚಂದ್ರಚೂಡ ಯಾರು ಅಂತಾನೇ ತಮಗೆ ಗೊತ್ತಿಲ್ಲ. ಅವರಿಗೂ ಈ ವಿವಾದಕ್ಕೂ ಸಂಬಂಧವಿಲ್ಲ ಎಂದಿದ್ದರು.

     

    ಇಂದು ಮತ್ತೆ ಚಂದ್ರಚೂಡ ಮಾಧ್ಯಮಗಳ ಜೊತೆ ಮಾತನಾಡಿ, ‘ಸುದೀಪ್ ಅವರು ಸುಮ್ಮನಿದ್ದರೂ ನಾನು ಈ ವಿಚಾರದಲ್ಲಿ ಸುಮ್ಮನಿರುವುದಿಲ್ಲ. ಸುದೀಪ್ ಅವರಿಗೆ ಸೂರಪ್ಪ ಬಾಬು ಆರು ಕೋಟಿ ರೂಪಾಯಿ ಕೊಡಬೇಕು. ಅಲ್ಲದೇ ಅಣ್ಣನಂತಿರುವ ಸುದೀಪ್ ಅವರ ಮನಸ್ಸಿಗೆ ಬಾಬು ಸಾಕಷ್ಟು ನೋವು ಕೊಟ್ಟಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಇಲ್ಲಿಗೆ ಬಿಡುವುದಿಲ್ಲ’ ಎಂದಿದ್ದಾರೆ ಚಂದ್ರಚೂಡ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸುದೀಪ್ ಅವರಿಗೆ ಸೂರಪ್ಪ ಬಾಬು 6 ಕೋಟಿ ರೂಪಾಯಿ ಕೊಡಬೇಕು : ಚಕ್ರವರ್ತಿ ಚಂದ್ರಚೂಡ

    ಸುದೀಪ್ ಅವರಿಗೆ ಸೂರಪ್ಪ ಬಾಬು 6 ಕೋಟಿ ರೂಪಾಯಿ ಕೊಡಬೇಕು : ಚಕ್ರವರ್ತಿ ಚಂದ್ರಚೂಡ

    ಕಿಚ್ಚ ಸುದೀಪ್ (Sudeep) ವಿಚಾರವಾಗಿ ಒಂದು ಕಡೆ ನಿರ್ಮಾಪಕ ಎನ್.ಕುಮಾರ್ (N. Kumar) ಮತ್ತು ಸುದೀಪ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದ್ದರೆ, ಮತ್ತೊಂದು ಕಡೆ ಇದೇ ಸುದೀಪ್ ಅವರ ವಿಚಾರವಾಗಿ ನಿರ್ಮಾಪಕ ಸೂರಪ್ಪ ಬಾಬು (Surappa Babu) ಮತ್ತು ಪತ್ರಕರ್ತ ಚಕ್ರವರ್ತಿ ಚಂದ್ರಚೂಡ ಕಚ್ಚಾಡಿಕೊಳ್ಳುತ್ತಿದ್ದಾರೆ. ಈ ಕಚ್ಚಾಟ ಅಷ್ಟು ಸುಲಭಕ್ಕೆ ಮುಗಿಯುವಂತೆ ಕಾಣುತ್ತಿಲ್ಲ.

    ಸೂರಪ್ಪ ಬಾಬು ವಿಚಾರದಲ್ಲಿ ಚಂದ್ರಚೂಡ (Chakravarty Chandrachuda) ವಿಡಿಯೋವೊಂದನ್ನು ಮಾಡಿ ಯೂಟ್ಯೂಬ್ ಗೆ ಹಾಕಿದ್ದರು. ಅದರಲ್ಲಿ ಸೂರಪ್ಪ ಬಾಬು ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಶಿಖಂಡಿ ಎನ್ನುವ ಪದಬಳಕೆಯನ್ನೂ ಚಂದ್ರಚೂಡ ಮಾಡಿದ್ದರು. ಜೊತೆಗೆ ಸೂರಪ್ಪ ಬಾಬು ಫ್ಯಾಮಿಲಿಯನ್ನು ಈ ವಿಚಾರದಲ್ಲಿ ಎಳೆತಂದಿದ್ದರು. ಇದನ್ನೂ ಓದಿ:ರಾಜಮೌಳಿ ಡೈರೆಕ್ಷನ್, ರಾಮ್ ಚರಣ್ ಜೊತೆ ಆಕ್ಟಿಂಗ್- ಪ್ರಭಾಸ್ ಕೊಟ್ರು ಗುಡ್ ನ್ಯೂಸ್

     

    ನಿನ್ನೆಯಷ್ಟೇ ಸೂರಪ್ಪ ಬಾಬು ಮಾಧ್ಯಮಗೋಷ್ಠಿಯಲ್ಲಿ ಚಂದ್ರಚೂಡ ಅವರ ವಿರುದ್ಧ ಹಲವಾರು ಆರೋಪ ಮಾಡಿದ್ದರು. ಚಂದ್ರಚೂಡ ಅವರ ವೈಯಕ್ತಿಕ ಜೀವನದ ಬಗ್ಗೆಯೂ ಮಾತನಾಡಿದ್ದರು. ಜೊತೆಗೆ ಚಂದ್ರಚೂಡ ಯಾರು ಅಂತಾನೇ ತಮಗೆ ಗೊತ್ತಿಲ್ಲ. ಅವರಿಗೂ ಈ ವಿವಾದಕ್ಕೂ ಸಂಬಂಧವಿಲ್ಲ ಎಂದಿದ್ದರು.

     

    ಇಂದು ಮತ್ತೆ ಚಂದ್ರಚೂಡ ಮಾಧ್ಯಮಗಳ ಜೊತೆ ಮಾತನಾಡಿ, ‘ಸುದೀಪ್ ಅವರು ಸುಮ್ಮನಿದ್ದರೂ ನಾನು ಈ ವಿಚಾರದಲ್ಲಿ ಸುಮ್ಮನಿರುವುದಿಲ್ಲ. ಸುದೀಪ್ ಅವರಿಗೆ ಸೂರಪ್ಪ ಬಾಬು ಆರು ಕೋಟಿ ರೂಪಾಯಿ ಕೊಡಬೇಕು. ನನ್ನ ಮನೆಯಲ್ಲಿ ಸೆಕ್ಯೂರಿಟಿ ಗಾಡ್ ಪೋಸ್ಟ್ ಖಾಲಿ ಇದೆ. ಬೇಕಾದರೆ ಆ ಕೆಲಸವನ್ನು ಕೊಡುತ್ತೇನೆ’ ಎಂದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಿವಣ್ಣ-ಗಣೇಶ್ ನಟನೆಯ ಚಿತ್ರಕ್ಕೆ ಸ್ಟಾರ್ ನಿರ್ದೇಶಕನ ಎಂಟ್ರಿ

    ಶಿವಣ್ಣ-ಗಣೇಶ್ ನಟನೆಯ ಚಿತ್ರಕ್ಕೆ ಸ್ಟಾರ್ ನಿರ್ದೇಶಕನ ಎಂಟ್ರಿ

    ನ್ನಡದಲ್ಲಿ ಮತ್ತೊಂದು ಮಲ್ಟಿಸ್ಟಾರ್ ಸಿನಿಮಾ ಸದ್ದಿಲ್ಲದೇ ರೂಪುಗೊಳ್ಳುತ್ತಿದೆ. ಮೊನ್ನೆಯಷ್ಟೇ ಶಿವರಾಜ್ ಕುಮಾರ್ (Shivaraj Kumar) ಮತ್ತು ಗಣೇಶ್ (Ganesh) ಕಾಂಬಿನೇಷನ್ ಸಿನಿಮಾ ಬಗ್ಗೆ ಪಬ್ಲಿಕ್ ಟಿವಿ ಡಿಜಿಟಲ್ ಎಕ್ಸ್ ಕ್ಲೂಸಿವ್ ಸುದ್ದಿ ನೀಡಿತ್ತು. ಇದೀಗ ಆ ಚಿತ್ರಕ್ಕೆ ಸ್ಟಾರ್ ನಿರ್ದೇಶಕರೊಬ್ಬರ ಎಂಟ್ರಿಯಾಗಿದೆ. ಈಗಾಗಲೇ ಆ ನಿರ್ದೇಶಕರು ಇಬ್ಬರೂ ನಟರನ್ನು ಭೇಟಿ ಮಾಡಿ ಮಾತುಕತೆ ಕೂಡ ನಡೆಸಿದ್ದಾರೆ ಎನ್ನುವುದಕ್ಕೆ ಫೋಟೋವೊಂದು ಸಾಕ್ಷಿಯಾಗಿದೆ.

    ಶಿವರಾಜ್ ಕುಮಾರ್ ಜೊತೆ ಈಗಾಗಲೇ ಹಲವು ಸ್ಟಾರ್ ಗಳು ನಟಿಸಿದ್ದಾರೆ. ಉಪೇಂದ್ರ, ಸುದೀಪ್, ರವಿಚಂದ್ರನ್ ಸೇರಿದಂತೆ ಹಲವು ಕಲಾವಿದರು ತೆರೆ ಹಂಚಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಶಿವಣ್ಣ ಜೊತೆ ಗಣೇಶ್ ಸೇರಿಕೊಂಡಿದ್ದಾರೆ. ಹೀಗಾಗಿ ಈ ಚಿತ್ರಕ್ಕೆ ಮಹತ್ವ ಬಂದಿದೆ. ಅಲ್ಲದೇ ಈ ಸಿನಿಮಾಗೆ ನಿರ್ದೇಶಕರು ಯಾರಿರಬಹುದು ಎನ್ನುವ ಕುತೂಹಲ ಕೂಡ ಮೂಡಿದೆ. ಇದೀಗ ಕುತೂಹಲಕ್ಕೆ ತೆರೆ ಬಿದ್ದಿದೆ. ಇದನ್ನೂ ಓದಿ: ಪಾಕಿಸ್ತಾನದ ಡಿಸೈನರ್ ವಿನ್ಯಾಸ ಮಾಡಿದ ಲೆಹೆಂಗಾದಲ್ಲಿ ಕಂಗೊಳಿಸಿದ ಸ್ವರಾ ಭಾಸ್ಕರ್

    ತಮಿಳಿನಲ್ಲಿ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ಕೊಟ್ಟಿರುವ ಮತ್ತು ರಜನಿಕಾಂತ್ ಜೊತೆ ಹಲವಾರು ಸಿನಿಮಾಗಳನ್ನು ಮಾಡಿರುವ ಕೆ.ಎಸ್.ರವಿಕುಮಾರ್ (KS Ravikumar) ಮತ್ತೆ ಕನ್ನಡ ಸಿನಿಮಾ ರಂಗಕ್ಕೆ ಬರುತ್ತಿದ್ದಾರೆ. ಈ ಹಿಂದೆ ಅವರು ಸುದೀಪ್ ನಟನೆಯ ಕೋಟಿಗೊಬ್ಬ 2 ಸಿನಿಮಾಗೆ ನಿರ್ದೇಶನವನ್ನು ಮಾಡಿದ್ದರು. ಇದೀಗ ಶಿವಣ್ಣ ಮತ್ತು ಗಣೇಶ್ ಕಾಂಬಿನೇಷನ್ ಚಿತ್ರಕ್ಕೆ ಇವರೇ ನಿರ್ದೇಶಕರು ಎಂದು ಹೇಳಲಾಗುತ್ತಿದೆ.

    ನಿರ್ಮಾಪಕ ಸೂರಪ್ಪ ಬಾಬು (Surappa Babu) ಜೊತೆ ಶಿವರಾಜ್ ಕುಮಾರ್, ಗಣೇಶ್ ಮತ್ತು ರವಿಕುಮಾರ್ ಕಾಣಿಸಿಕೊಂಡ ಫೋಟೋ ವೈರಲ್ ಆಗಿದ್ದು, ಇವರೇ ಈ ಸಿನಿಮಾದ ನಿರ್ದೇಶಕರು ಎಂದು ಹೇಳಲಾಗುತ್ತಿದೆ. ಚಿತ್ರತಂಡ ಅಧಿಕೃತವಾಗಿ ಯಾವುದೇ ಮಾಹಿತಿ ನೀಡದೇ ಇದ್ದರು, ವೈರಲ್ ಆಗಿರುವ ಫೋಟೋ ಎಲ್ಲವನ್ನೂ ಹೇಳುವಂತಿದೆ.

  • ಥಿಯೇಟರ್‌ನಲ್ಲಿ ಫುಲ್ ಹೌಸ್ – ಶೀಘ್ರವೇ ಸರ್ಕಾರದ ನಿರ್ಧಾರ ಪ್ರಕಟ

    ಥಿಯೇಟರ್‌ನಲ್ಲಿ ಫುಲ್ ಹೌಸ್ – ಶೀಘ್ರವೇ ಸರ್ಕಾರದ ನಿರ್ಧಾರ ಪ್ರಕಟ

    ಬೆಂಗಳೂರು: ಚಿತ್ರಮಂದಿರಗಳಲ್ಲಿ ಪೂರ್ಣ ಪ್ರಮಾಣದ ಸೀಟು ಭರ್ತಿಗೆ ಅವಕಾಶ ಮಾಡಿಕೊಡುವ ಬಗ್ಗೆ ಎರಡು, ಮೂರು ದಿನದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.

    ಇಂದು ಚಲನಚಿತ್ರ ನಿರ್ಮಾಪಕರಾದ ಜಯಣ್ಣ, ಸೂರಪ್ಪ ಬಾಬು ಹಾಗೂ ಶ್ರೀಕಾಂತ್ ಅವರು ಪೂರ್ಣ ಪ್ರಮಾಣದ ಸೀಟು ಭರ್ತಿಗೆ ಅನುಮತಿ ಕೋರುವ ಸಂಬಂಧ ವಿಧಾನಸೌಧದ ಕೊಠಡಿ 339ರಲ್ಲಿ ಸುಧಾಕರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಜಾರಿಗೆ ಚಿಂತನೆ ಮಾಡಲಾಗುತ್ತಿದೆ: ಅರಗ ಜ್ಞಾನೇಂದ್ರ

    ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಅನೇಕ ಚಟುವಟಿಕೆಗೆ ರಿಯಾಯಿತಿ ನೀಡಿದ್ದೇವೆ. ಸಿನಿಮಾಗೆ ಶೇ.50 ರಷ್ಟು ರಿಯಾಯಿತಿ ನೀಡಿದ್ದೇವೆ. ಈಗ ಶೇ.100 ರಷ್ಟು ಬೇಡಿಕೆ ಇಟ್ಟಿದ್ದಾರೆ. ಇವರಿಗೆ ಹೇಗೆ ಸಹಕಾರ ಕೊಡಬೇಕು ಎಂಬುದರ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತದೆ. ಈ ಕುರಿತು 2, 3 ದಿನದಲ್ಲಿ ತಾಂತ್ರಿಕ ಸಲಹೆ ಸಮಿತಿ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ:  ಯುವತಿಯಿಂದ ಕಾರು ಚಾಲನೆ- ಆಟೋ ಸಂಪೂರ್ಣ ನಜ್ಜುಗುಜ್ಜು

    ನಿರ್ಮಾಪಕ ಸೂರಪ್ಪ ಬಾಬು ಈ ಕುರಿತು ಮಾತನಾಡಿದ್ದು, ಆದಷ್ಟು ಬೇಗ ಈ ವಿಚಾರಕ್ಕೆ ಅನುಮತಿ ಸಿಗುವ ಸಾಧ್ಯತೆ ಇದೆ. ಇದರ ಜೊತೆಗೆ ಇತರೆ ಕೊರೊನಾ ನಿಯಮ ಸಡಿಲಿಕೆ ಬಗ್ಗೆಯು ಸರ್ಕಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

     

  • ಯುಟ್ಯೂಬ್‍ನಲ್ಲಿ ಕೋಟಿಗೊಬ್ಬ-3 ಟೀಸರ್ ಡಿಲೀಟ್- ನಿರ್ಮಾಪಕ ಸೂರಪ್ಪಬಾಬು ಸ್ಪಷ್ಟನೆ

    ಯುಟ್ಯೂಬ್‍ನಲ್ಲಿ ಕೋಟಿಗೊಬ್ಬ-3 ಟೀಸರ್ ಡಿಲೀಟ್- ನಿರ್ಮಾಪಕ ಸೂರಪ್ಪಬಾಬು ಸ್ಪಷ್ಟನೆ

    ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ-3’ ಚಿತ್ರದ ಟೀಸರ್ ಯುಟ್ಯೂಬ್‍ನಿಂದ ಡಿಲೀಟ್ ಆಗಿದ್ದಕ್ಕೆ ನಿರ್ಮಾಪಕ ಸೂರಪ್ಪಬಾಬು ಅವರು ಸ್ಪಷ್ಟನೆ ನೀಡಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೂರಪ್ಪ ಅವರು, ಕೋಟಿಗೊಬ್ಬ-3 ಚಿತ್ರದ ಟೀಸರ್ ಯುಟ್ಯೂಬ್‍ನಿಂದ ಏಕೆ ಡಿಲೀಟ್ ಆಯ್ತು ಎಂದು ಕೇಳುತ್ತಿದ್ದರು. ಕೊರೊನಾ ವೈರಸ್‍ಗಿಂತ ಇದು ಜಾಸ್ತಿ ಸುದ್ದಿಯಾಗುತ್ತಿತ್ತು. ಪೋಲ್ಯಾಂಡ್‍ನಿಂದ ಶೂಟಿಂಗ್ ಆದ ಬಳಿಕ ಅಲ್ಲಿ ಸಹೋದರರಾದ ಸಂಜಯ್ ಪಾಲ್ ಹಾಗೂ ಅಜಯ್ ಪಾಲ್ ಇದ್ದರು. ಅವರು ಯಾರೆಂಬುದು ನನಗೆ ಗೊತ್ತಿರಲಿಲ್ಲ. ನನಗೆ ಯಾರೋ ಒಬ್ಬರು ಇಬ್ಬರು ಸಹೋದರರನ್ನು ಪರಿಚಯ ಮಾಡಿಸಿ ಅಲ್ಲಿ ಶೂಟಿಂಗ್ ಮಾಡೋಕ್ಕೆ ವ್ಯವಸ್ಥೆ ಮಾಡಿಕೊಟ್ಟರು. ಆದರೆ ಅವರು ಇಲ್ಲಿ ಹೋಗುವಾಗ ಆಡಿದ ಮಾತುಗಳನ್ನು ಅಲ್ಲಿ ಏನು ಮಾಡಿಕೊಟ್ಟಿಲ್ಲ. ಅವರಿಗೆ ಸಲ್ಲಬೇಕಾದ ಹಣವನ್ನು ನಮ್ಮ ಖಾತೆ ಮೂಲಕ ಕೊಟ್ಟಿದ್ದು, ಇದಕ್ಕೆ ನನ್ನ ಬಳಿ ದಾಖಲೆ ಇವೆ ಎಂದರು.

    ಯುಟ್ಯೂಬ್‍ನಲ್ಲಿ ಈಗ ಯಾರು ಏನಾದರೂ ದೂರು ನೀಡಿದರೆ ತಕ್ಷಣ ಅದನ್ನು ಡಿಲೀಟ್ ಮಾಡುತ್ತದೆ ಎಂಬುದು ನನಗೆ ನಿನ್ನೆ ಗೊತ್ತಾಗಿದೆ. ಇದರ ವಿರುದ್ಧವಾಗಿ ಆನಂದ್ ಆಡಿಯೋ ಶ್ಯಾಮ್ ಅವರು ಕಾನೂನಿನ ಪ್ರಕಾರ ಕ್ರಮಕೈಗೊಂಡಿದ್ದಾರೆ. ನಿನ್ನೆ, ಮೊನ್ನೆ ಶನಿವಾರ, ಭಾನುವಾರ ಆಗಿದ್ದ ಕಾರಣ ಅದು ವರ್ಕ್ ಆಗಿಲ್ಲ ಎಂಬ ಕಾರಣದಿಂದ ಇಂದು ಸಂಜೆಯೊಳಗೆ ಟೀಸರ್ ಅಪ್ಲೋಡ್ ಆಗುತ್ತದೆ ಎಂದು ನನಗೆ ಭರವಸೆ ಕೊಟ್ಟಿದ್ದಾರೆ. ಯುಟ್ಯೂಬ್ ಎನ್ನುವಂತದ್ದು ಮಶಿನ್ ಆಗಿದ್ದು, ಮನುಷ್ಯರು ಅಲ್ಲಿ ಕೆಲಸ ಮಾಡಲ್ಲ ಎಂದು ಶ್ಯಾಮ್ ಅವರು ತಿಳಿಸಿದ್ದರು. ಮನುಷ್ಯರು ಕೆಲಸ ಮಾಡುವಂತಿದ್ದರೆ ಈ ಸಮಸ್ಯೆಯನ್ನು ಅಲ್ಲಿಯೇ ಹೋಗಿ ಸರಿಪಡಿಸಬಹುದಿತ್ತು. ಆದರೆ ಅದು ಆಗಲ್ಲ ಎಂದು ತಿಳಿಸಿದರು.

    ಪಾಲ್ ಸಹೋದರರಿಂದ ಆದ ಅನ್ಯಾಯವನ್ನು ಪದೇ ಪದೇ ಹೇಳುತ್ತಾ ಕೋರ್ಟ್‍ಗೆ ಹೋಗುತ್ತೇನೆ ಎಂದು ಹೇಳುವ ಪರಿಸ್ಥಿತಿಯಲ್ಲಿ ನಾನಿಲ್ಲ. ನನ್ನ ಇಬ್ಬರು ಸಿಬ್ಬಂದಿಯನ್ನು ವಶಕ್ಕೆ ಪಡೆದು ಬ್ಯಾಕ್‍ಮೇಲ್ ಮಾಡಿದ್ದರು ಎಂಬುದು ಈ ಹಿಂದೆಯೇ ದಾಖಲೆಯೊಂದಿಗೆ ತೋರಿಸಿದ್ದೇನೆ. ಬಳಿಕ ನನ್ನ ಸಿಬ್ಬಂದಿಯನ್ನು ಕೇಂದ್ರ ಸಚಿವ ಸದಾನಂದ ಗೌಡ ಅವರ ಮೂಲಕ ಕರೆಸಿಕೊಂಡಿದ್ದೇವು. ಪಾಲ್ ಸಹೋದರರ ಮುಖಾಂತರ ನಾವು ಎಲ್ಲಾ ಲೋಕೇಶನ್‍ಗೆ ಹಣ ಕಟ್ಟಿದ್ದೇವೆ. ಆದರೆ ಈಗ ನನ್ನ ಸಂಬಂಧಪಟ್ಟವರಿಂದ ನನಗೆ ದುಡ್ಡು ಬಂದಿಲ್ಲ, ನಮ್ಮ ಲೋಕೇಶನ್ ಬಳಸಿಕೊಂಡಿದ್ದೀರಾ ಎಂದು ಪತ್ರ ಬರೆದು ಕಳುಹಿಸಿದ್ದರು ಎಂದು ಹೇಳಿದರು.

    ಶೂಟಿಂಗ್ ಕಡೆ ದಿನ ಅಂದರೆ 95 ಲಕ್ಷ ರೂ. ಕೊಟ್ಟರೆ ಮಾತ್ರ ನಿಮ್ಮ ತಂಡವನ್ನು ಹೊರಗೆ ಕಳುಹಿಸುತ್ತೇನೆ ಎಂದಿದ್ದ ವ್ಯಕ್ತಿ ಕೊನೆ ಕ್ಷಣದಲ್ಲಿ ಅಕೌಂಟ್ ಎಲ್ಲಾ ನೋಡಿ 45 ಲಕ್ಷ ರೂ. ಕೇಳಿದ್ದಾನೆ. ಇದರಿಂದ ನನ್ನ ಅಕೌಂಟೆಂಟ್ ಹೆದರಿ ನನಗೆ ಕರೆ ಮಾಡಿ ಸರ್ ಹಣ ಕಳುಹಿಸಿಕೊಡಿ ಇವರು ನನ್ನ ಬಿಡುತ್ತಿಲ್ಲ ಎಂದು ಹೇಳಿದ್ದಾರೆ. ಆಗ ನಾನು ಜಗ್ಗೇಶ್ ಅವರ ಮುಖಾಂತರ ದೂರು ನೀಡಿ ಅಕೌಂಟೆಂಟ್‍ನನ್ನು ಹಾಗೆ ಕರೆದುಕೊಂಡು ಬಂದೇವು. ನನ್ನ ಲೆಕ್ಕದ ಪ್ರಕಾರ ನಾನು ಅವರಿಗೆ 45 ಲಕ್ಷ ರೂ. ಕೊಡುವಂತಿಲ್ಲ. ಆ ಹಣವನ್ನು ನಾನು ಕೋರ್ಟ್‍ನಲ್ಲಿ ಡೆಪಾಸಿಟ್ ಇಟ್ಟು ಕಾನೂನಿನ ಹೋರಾಟ ಕೈಗೊಳ್ಳುತ್ತೇನೆ. ಆ ಹಣ ಕೊಡುವಂತಿದ್ರೆ ನಾನು ಕೊಡುತ್ತೇನೆ ಎಂದು ಸೂರಪ್ಪ ಸ್ಪಷ್ಟನೆ ನೀಡಿದರು.