Tag: suresh

  • Breaking- ದುನಿಯಾ ಸೂರಿ ಟೀಮ್ ಜೊತೆ ಸತೀಶ್ ನೀನಾಸಂ ಸಿನಿಮಾ: ಕುತೂಹಲ ಮೂಡಿಸಿದ ಜೋಡಿ

    Breaking- ದುನಿಯಾ ಸೂರಿ ಟೀಮ್ ಜೊತೆ ಸತೀಶ್ ನೀನಾಸಂ ಸಿನಿಮಾ: ಕುತೂಹಲ ಮೂಡಿಸಿದ ಜೋಡಿ

    ಸರಾ, ಮ್ಯಾಟ್ನಿ, ಅಶೋಕ ಬ್ಲೇಡ್ ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಕನ್ನಡದ ಪ್ರತಿಭಾವಂತ ನಟ ಸತೀಶ್ ನೀನಾಸಂ (Satish Ninasam) ಇದೀಗ ತಮ್ಮ ಅಭಿಮಾನಿಗಳಿಗೆ ಮತ್ತಷ್ಟು ಖುಷಿ ಸುದ್ದಿಕೊಟ್ಟಿದ್ದಾರೆ. ಹೆಸರಾಂತ ನಿರ್ದೇಶಕ ದುನಿಯಾ ಸೂರಿ (Duniya Suri) ಟೀಮ್ ಜೊತೆ ಕೆಲಸ ಮಾಡುತ್ತಿರುವುದಾಗಿ ಹಂಚಿಕೊಂಡಿದ್ದಾರೆ. ಈ ಸಿನಿಮಾವ ಸೂರಿ ಅವರ ಮಾರ್ಗದರ್ಶನದಲ್ಲಿ ನಡೆಯುವುದಾಗಿಯೂ ತಿಳಿಸಿದ್ದಾರೆ.

    ಸೂರಿ ನಿರ್ದೇಶನದ ಕೆಲ ಸಿನಿಮಾಗಳಲ್ಲಿ ಸತೀಶ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆದರೆ, ಸೋಲೋ ಹೀರೋ ಆಗಿ ಕಾಣಿಸಿಕೊಂಡಿಲ್ಲ. ಹಾಗಾಗಿಯೇ ಸತೀಶ್ ಗಾಗಿಯೇ ಸಿನಿಮಾವೊಂದನ್ನು ನಿರ್ದೇಶನ ಮಾಡಬೇಕು ಎನ್ನುವ ಮಾತುಗಳನ್ನು ಈ ಹಿಂದೆ ಸೂರಿ ಆಡಿದ್ದರು. ಆದರೆ, ಈ ಬಾರಿ ತಮ್ಮ ಶಿಷ್ಯ ಸುರೇಶ್ ಎನ್ನುವವರಿಗೆ ಈ ಅವಕಾಶವನ್ನು ಬಿಟ್ಟುಕೊಟ್ಟಿದ್ದಾರೆ ಸೂರಿ. ಹತ್ತಾರು ವರ್ಷಗಳ ಕಾಲ ಸೂರಿಯೊಂದಿಗೆ ಕೆಲಸ ಮಾಡಿರುವ ಸುರೇಶ್ (Suresh) ತಮ್ಮ ಚೊಚ್ಚಲು ನಿರ್ದೇಶನದ ಸಿನಿಮಾಗೆ ಸತೀಶ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ.

    ಸೂರಿ ಸಿನಿಮಾಗಳೆಂದರೆ, ಅದಕ್ಕೊಂದು ಬ್ರ್ಯಾಂಡ್ ಇದೆ. ಅವರದ್ದೇ ಆದ ಸ್ಟೈಲ್ ಇದೆ. ಶಿಷ್ಯರಿಗೂ ಅದೇ ಹಾದಿಯನ್ನೇ ಕಲಿಸಿ ಕೊಟ್ಟಿದ್ದಾರೆ. ಈ ಕಾರಣದಿಂದಾಗಿಯೇ ಸತೀಶ್ ನಟನೆಯ ಹೊಸ ಸಿನಿಮಾ ಕೂಡ ಅದೇ ಮಾದರಿಯಲ್ಲಿ ಇರಲಿದೆ. ಇದೇ ಮೊದಲ ಬಾರಿಗೆ ಅಂತಹ ಸಿನಿಮಾದಲ್ಲಿ ಸತೀಶ್ ನಟಿಸುತ್ತಿದ್ದಾರೆ. ದನ್ನೂ ಓದಿ: Oscar-ಆಸ್ಕರ್ ಪ್ರಶಸ್ತಿ ಪಡೆದ ನಾಟು ನಾಟು ‘ಲಹರಿ’ಯ ಹಾಡು ನೀವಿನ್ನೂ ನೋಡಿಲ್ವಾ?

    ಹೊಸ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿಯನ್ನೂ ಕೊಡದೇ ಇದ್ದರೂ, ಸೂರಿ ಟೀಮ್ ಜೊತೆ ಸಿನಿಮಾ ಮಾಡುತ್ತಿರುವುದನ್ನು ಸತೀಶ್ ಖಚಿತ ಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿಯನ್ನು ನೀಡುವುದಾಗಿಯೂ ಅವರು ತಿಳಿಸಿದ್ದಾರೆ. ಸದ್ಯ ಮ್ಯಾಟ್ನಿ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಅವರು, ಬ್ಯಾಕ್ ಟು ಬ್ಯಾಕ್ ಸಿನಿಮಾಗಳಿಗೆ ಸಹಿ ಮಾಡುತ್ತಿದ್ದಾರೆ.

  • ರುದ್ರಪ್ಪ: ಇದು 21 ಸಾವಿರ ರೂಪಾಯಿ ಬಹುಮಾನ ಪಡೆದ ಟೈಟಲ್

    ರುದ್ರಪ್ಪ: ಇದು 21 ಸಾವಿರ ರೂಪಾಯಿ ಬಹುಮಾನ ಪಡೆದ ಟೈಟಲ್

    ಸ್ಟಾಕರ್’ ಚಿತ್ರ ನಿರ್ಮಾಣ ಮಾಡಿದ್ದ ಎಸ್‌ಎಂಎಲ್ ಪ್ರೊಡಕ್ಷನ್ ಸಂಸ್ಥೆಯು  ’ಪ್ರೊಡಕ್ಷನ್ ನಂ.2’ ಹೆಸರಿನಲ್ಲಿ ಹೊಸ ಚಿತ್ರವನ್ನು ಶುರು ಮಾಡಲು ಸಜ್ಜಾಗಿತ್ತು. ಸೂಕ್ತ ಶೀರ್ಷಿಕೆ (Title) ನೀಡಿದವರಿಗೆ ಇಪ್ಪತ್ತೊಂದು ಸಾವಿರ ಬಹುಮಾನ ನೀಡುವುದಾಗಿ ಹೇಳಿಕೊಂಡಿತ್ತು.  ಇದಕ್ಕಾಗಿ ಫಸ್ಟ್ ಲುಕ್ ಪೋಸ್ಟರ್ ಹಾಗೂ ಟೀಸರ್‌ನ್ನು ಬಿಡುಗಡೆ ಮಾಡಿದ್ದರು. ಅದರಂತೆ ನೂರಾರು ಸಿನಿರಸಿಕರು ಹೆಸರುಗಳನ್ನು ನೀಡಿದ್ದಾರೆ.

    ಪ್ರೇಕ್ಷಕರು ನೀಡಿದ ಟೈಟಲ್ ನಲ್ಲೇ ಕೊನೆಗೊಂದು ಆಯ್ಕೆ ಮಾಡಿಕೊಂಡಿದ್ದು,  ಬೆಂಗಳೂರಿನ ಸುರೇಶ್ (Suresh) ಎಂಬುವರು ನೀಡಿದ ಟೈಟಲ್ ಆಯ್ಕೆಯಾಗಿದೆ. ’ರುದ್ರಪ್ಪ’ (Rudrappa) ಎಂಬ ಟೈಟಲ್ ನೀಡುವ ಮೂಲಕ ಸುರೇಶ್  ಬಹುಮಾನ ಪಡೆದಿದ್ದಾರೆ. ರಮೇಶ್ (Ramesh) ನಾಯಕನಾಗಿ ಎರಡನೇ ಅನುಭವ. ಇದನ್ನೂ ಓದಿ:ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ

    ಹೇಮಂತ್ (Hemant) ನಿರ್ದೇಶನದಲ್ಲಿ ಭರತ್.ಹೆಚ್.ಎಸ್ ಸಂಗೀತ ಮತ್ತು ಸುಧೀರ್ ಛಾಯಾಗ್ರಹಣ ಇರಲಿದೆ. ನಾಯಕಿ, ಮಿಕ್ಕಂತೆ ಕಲಾವಿದರುಗಳನ್ನು ಅಡಿಷನ್ ಮೂಲಕ ಆಯ್ಕೆ ಮಾಡಲಿದ್ದು, ಪ್ರಕ್ರಿಯೆ ಶುರುವಾಗಿದೆ. ಇನ್ನರೆಡು ತಿಂಗಳಲ್ಲಿ ಶೂಟಿಂಗ್ ಪ್ರಾರಂಭಿಸಲು ತಂಡವು ಯೋಜನೆ ರೂಪಿಸಿಕೊಂಡಿದೆ.

    Live Tv
    [brid partner=56869869 player=32851 video=960834 autoplay=true]

  • ನನ್ನ ಮಗನ ಕೊಲೆಯಾಗಿದೆ- ಮೃತ ಕಿಕ್ ಬಾಕ್ಸರ್ ತಂದೆ ಆರೋಪ

    ನನ್ನ ಮಗನ ಕೊಲೆಯಾಗಿದೆ- ಮೃತ ಕಿಕ್ ಬಾಕ್ಸರ್ ತಂದೆ ಆರೋಪ

    ಮೈಸೂರು: ನನ್ನ ಮಗನ ಕೊಲೆಯಾಗಿದೆ ಎಂದು ಮೃತ ಕಿಕ್ ಬಾಕ್ಸರ್ ನಿಖಿಲ್ ತಂದೆ ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ನಡೆದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ನಿಖಿಲ್ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವೈಜ್ಞಾನಿಕವಾಗಿ ಕ್ರೀಡೆಯ ಆಯೋಜನೆ ಮಾಡಲಾಗಿದೆ. ಕಿಕ್ ಬಾಕ್ಸಿಂಗ್ ಬಗ್ಗೆ ಜ್ಞಾನವೇ ಇಲ್ಲದವರು ಆಯೋಜನೆ ಮಾಡಿದ್ದಾರೆ ಎಂದು ದೂರಿದ್ದಾರೆ.

    ಕೇವಲ ಹಣಕ್ಕಾಗಿ ಈ ರೀತಿಯ ಕ್ರೀಡೆಗಳನ್ನ ಆಯೋಜನೆ ಮಾಡಲಾಗುತ್ತೆ. ಇದಕ್ಕೆ ಕೋಚ್ ವಿಕ್ರಮ್, ಮತ್ತು ಆಯೋಜಕರು ಕಾರಣ. ಇಂತಹ ಕ್ರೀಡೆಗಳಿಗೆ ಪೋಷಕರು ಉತ್ತೇಜನ ನೀಡಬೇಡಿ ಎಂದು ಮಗನ ಕಳೆದುಕೊಂಡ ದುಃಖದಲ್ಲಿರುವ ಸುರೇಶ್ ತಮ್ಮ ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಆಟವಾಡ್ತಿದ್ದಾಗ ನೀರಿನ ಹೊಂಡಕ್ಕೆ ಬಿದ್ದು ಬಾಲಕ ಸಾವು

    ನಡೆದಿದ್ದೇನು..?
    ಇದೇ ತಿಂಗಳ 10ರಂದು ಬೆಂಳೂರಿನ ಕೆಂಗೇರಿಯಲ್ಲಿ ಏ 1 ಕಿಕ್ ಬಾಕ್ಸರ್ ಆರ್ಗನೈಸೇಷನ್ ವತಿಯಿಂದ ಸ್ಪರ್ಧೆ ಆಯೋಜನೆಗೊಂಡಿತ್ತು. ಈ ವೇಳೆ ರಿಂಗ್‍ನಲ್ಲಿ ಸೆಣೆಸಾಡುತ್ತಿದ್ದಂತೆ ಎದುರಾಳಿಯ ಏಟಿಗೆ ನಿಖಿಲ್ (24) ಗಂಭೀರ ಗಾಯಗೊಂಡಿದ್ದರು. ಎದುರಾಳಿ ತಲೆಗೆ ಹೊಡೆದ ಒಂದೇ ಏಟಿಗೆ ಬಾಕ್ಸಿಂಗ್ ರಿಂಗ್ ನಲ್ಲಿಯೇ ನಿಖಿಲ್ ಕೆಳಗೆ ಬಿದ್ದಿದ್ದರು. ತಕ್ಷಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಎರಡು ದಿನಗಳ ಕಾಲ ಕೋಮಾದಲ್ಲಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾವನ್ನಪ್ಪಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನೀವ್ಯಾರು ಮಕ್ಕಳು ಮಾಡಲ್ವಾ?: ತೋತಾಪುರಿ ಚಿತ್ರದ ಡಬಲ್ ಮೀನಿಂಗ್ ಡೈಲಾಗ್ ಸಮರ್ಥಿಸಿಕೊಂಡ ಜಗ್ಗೇಶ್

    ನೀವ್ಯಾರು ಮಕ್ಕಳು ಮಾಡಲ್ವಾ?: ತೋತಾಪುರಿ ಚಿತ್ರದ ಡಬಲ್ ಮೀನಿಂಗ್ ಡೈಲಾಗ್ ಸಮರ್ಥಿಸಿಕೊಂಡ ಜಗ್ಗೇಶ್

    ನಿನ್ನೆಯಷ್ಟೇ ಜಗ್ಗೇಶ್ ನಟನೆಯ ‘ತೋತಾಪುರಿ’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಟ್ರೈಲರ್ ತುಂಬಾ ಬರೀ ಡಬಲ್ ಮೀನಿಂಗ್ ಡೈಲಾಗ್ ಗಳೇ ತುಂಬಿಕೊಂಡಿವೆ. ಇಂತಹ ಸಿನಿಮಾವನ್ನು ಕುಟುಂಬ ಸಮೇತ ನೋಡುವುದಕ್ಕೆ ಆಗುತ್ತಾ ಎನ್ನುವ ಮಾತುಗಳು ಕೂಡ ಕೇಳಿ ಬಂದಿದ್ದವು. ನಿರ್ದೇಶಕ ವಿಜಯ್ ಪ್ರಸಾದ್ ಅವರ ಬಹುತೇಕ ಸಿನಿಮಾಗಳ ಡೈಲಾಗ್ ಹಾಗೆಯೇ ಏಕೆ ಎನ್ನುವ ಪ್ರಶ್ನೆಯೂ ಪತ್ರಿಕಾಗೋಷ್ಠಿಯಲ್ಲಿ ತೂರಿ ಬಂತು. ಅದಕ್ಕೆ ಜಗ್ಗೇಶ್ ಮಾರ್ಮಿಕವಾಗಿಯೇ ಸಮರ್ಥನೆ ನೀಡಿರು. ಇದನ್ನೂ ಓದಿ : ಅಪ್ಪ ಸರಿ, ಮಕ್ಕಳು ತಪ್ಪು ಸರಕಾರಕ್ಕೆ ಟಾಂಗ್ ಕೊಟ್ಟ ನಟ ಉಪೇಂದ್ರ

    ತೋತಾಪುರಿ ಒಂದೊಳ್ಳೆ ಸಿನಿಮಾ. ಆ ಡೈಲಾಗ್ ಕೇಳಿದಾಗ ಸಹಜವಾಗಿ ಡಬಲ್ ಮೀನಿಂಗ್ ಅನಿಸತ್ತೆ. ನಾವ್ಯಾರು ಆ ರೀತಿ ಮಾತೇ ಆಡಲ್ಲವಾ? ಮಾಯಮಂತ್ರದಿಂದ ಹೆಂಡತಿ ನೋಡಿದ್ರೆ ಮಕ್ಕಳ ಆಗತ್ತಾ? ನಾವ್ಯಾರು ಮಕ್ಕಳ ಮಾಡಲ್ವಾ?’ ಎಂದು ಡಬಲ್ ಮೀನಿಂಗ್ ನಲ್ಲೇ ಉತ್ತರಿಸಿದರು ಜಗ್ಗೇಶ್. ಈ ಸಿನಿಮಾದಲ್ಲಿ ಅದ್ಭುತವಾದ ಸಂದೇಶವಿದೆ. ಅದನ್ನು ಮನರಂಜನೆಯ ಮೂಲಕ ಹೇಳುವ ಪ್ರಯತ್ನ ಮಾಡಿದ್ದಾರೆ ಎಂದರು ಜಗ್ಗೇಶ್. ಇದನ್ನೂ ಓದಿ : ಕನ್ನಡ ಚಿತ್ರರಂಗವನ್ನು ರಾಷ್ಟ್ರಮಟ್ಟಕ್ಕೆ ತಗೆದುಕೊಂಡು ಹೋದ ಮೊದಲಿಗರಾರು? ಹೀಗಿದೆ ನಟ ಜಗ್ಗೇಶ್ ಉತ್ತರ

    ವಿಜಯ್ ಪ್ರಸಾದ್ ಮತ್ತು ಜಗ್ಗೇಶ್ ಕಾಂಬಿನೇಷನ್ ನ ಎರಡನೇ ಸಿನಿಮಾವಿದು. ಈ ಹಿಂದೆ ರಿಲೀಸ್ ಆಗಿದ್ದ ನೀರ್ ದೋಸೆ ಕೂಡ ಸಿಕ್ಕಾಪಟ್ಟೆ ಹಿಟ್ ಆಗಿತ್ತು. ಈ ಸಿನಿಮಾ ಕೂಡ ನಿರೀಕ್ಷೆ ಮೂಡಿಸಿದೆ. ಮತ್ತೇ ಜಗ್ಗೇಶ್ ಮತ್ತು ವಿಜಯ್ ಪ್ರಸಾದ್ ಪ್ರೇಕ್ಷಕರಿಗೆ ಒಂದೊಳ್ಳೆ ಸಿನಿಮಾ ಕೊಡಲಿದ್ದಾರೆ ಎನ್ನುವ ಸೂಚನೆ ಕೊಡುವಂತಿದೆ ರಿಲೀಸ್ ಆಗಿರುವ ಟ್ರೈಲರ್. ಇದನ್ನೂ ಓದಿ :  ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕನ ವಿರುದ್ಧ ಕಿಡಿಕಾರಿದ ಸಿಖ್ ಸಂಘ

    ಹಿಂದೂ ಮುಸ್ಲಿಂ ಕಥೆಯನ್ನು ಸಿನಿಮಾಗಾಗಿ ನಿರ್ದೇಶಕರು ಆಯ್ಕೆ ಮಾಡಿಕೊಂಡಿದ್ದು, ಭಾವಕ್ಯತೆಗೆ ಹೇಳಿ ಮಾಡಿಸಿದ ಸಿನಿಮಾ ಎನ್ನಲಾಗುತ್ತಿದೆ. ಎಲ್ಲಿಯೂ ಕೋಮಗಲಭೆ ಆಗುವಂತಹ ಒಂದೇ ಒಂದು ದೃಶ್ಯವನ್ನೂ ಸಿನಿಮಾದಲ್ಲಿ ಬಳಸಿಲ್ಲವಂತೆ. ಇಡೀ ಕುಟುಂಬ ಸಮೇತ ನೋಡುವಂತಹ ಸಿನಿಮಾ ಇದಾಗಿದೆ ಎನ್ನುತ್ತಾರೆ ನಿರ್ದೇಶಕರು. ಇದನ್ನೂ ಓದಿ : ನಟಿ ಮಂದನಾ ಕರೀಮಿಗೆ ಮೋಸ ಮಾಡಿದ್ರಾ ನಿರ್ದೇಶಕ ಅನುರಾಗ್ ಕಶ್ಯಪ್?

    ಕೆ.ಎ.ಸುರೇಶ್ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಜಗ್ಗೇಶ್ ಜತೆ ಡಾಲಿ ಧನಂಜಯ್, ಹೇಮಾ ದತ್ತ್, ಅದಿತಿ ಪ್ರಭುದೇವ್ ಸೇರಿದಂತೆ ಹಲವು ಕಲಾವಿದರು ಸಿನಿಮಾದಲ್ಲಿದ್ದಾರೆ. ಈ ಸಿನಿಮಾ ಎರಡು ಪಾರ್ಟ್ ನಲ್ಲಿ ಮೂಡಿ ಬಂದಿದೆ. ಮೊದಲನೇ ಭಾಗ ಅತೀ ಶೀಘ್ರದಲ್ಲೇ ರಿಲೀಸ್ ಮಾಡಲಿದ್ದಾರಂತೆ ನಿರ್ಮಾಪಕರು.

  • ಹೆಚ್‍ಡಿಕೆ, ಡಿ.ಕೆ ಸುರೇಶ್‍ರಿಂದ ನನಗೆ ತೊಂದರೆ ಆಗಿದೆ: ಸಿ.ಪಿ ಯೋಗೇಶ್ವರ್

    ಹೆಚ್‍ಡಿಕೆ, ಡಿ.ಕೆ ಸುರೇಶ್‍ರಿಂದ ನನಗೆ ತೊಂದರೆ ಆಗಿದೆ: ಸಿ.ಪಿ ಯೋಗೇಶ್ವರ್

    ಚಿಕ್ಕಬಳ್ಳಾಪುರ: ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಸಂಸದ ಡಿ.ಕೆ ಸುರೇಶ್ ನನ್ನ ರಾಜಕೀಯ ವಿರೋಧಿಗಳು, ಅವರಿಂದ ನನಗೆ ಬಹಳ ತೊಂದರೆ ಆಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.

    ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯದ್ದು ಸದಾ ದ್ವಂದ್ವ ನಿಲುವು, ಬೇಕಾದಾಗ ಯಡಿಯೂರಪ್ಪ ಹತ್ತಿರ ಹೋಗಿ ಬೇಕಾದ ಕೆಲಸ ಮಾಡಿಸಿಕೊಳ್ಳುತ್ತಾರೆ. ಮತ್ತೆ ಅವರ ಮೇಲೆ ದೂಷಣೆ ಮಾಡುತ್ತಾರೆ. ಕುಮಾರಸ್ವಾಮಿನ ನಂಬಬೇಡಿ ಹತ್ತಿರ ಬಿಟ್ಟುಕೊಳ್ಳಬೇಡಿ. ಅವರು ಅವಕಾಶವಾದಿ ರಾಜಕಾರಣಿ ಅಂತ ನಾನು ಮೊದಲಿಂದ ಹೇಳುತ್ತಲೇ ಇದ್ದೆ ಎಂದು ಕಿಡಿಕಾರಿದ್ದಾರೆ.

    ಮತ್ತೊಂದೆಡೆ ಸಂಸದ ಡಿ.ಕೆ. ಸುರೇಶ್ ನನ್ನ ಬಗ್ಗೆ ಇಲ್ಲಸಲ್ಲದನ್ನು ಹೇಳಿ ಕಪ್ಪು ಚುಕ್ಕೆ ತರಲು ಪ್ರಯತ್ನಿಸಿ, ಅಸಂಬದ್ಧ ಹೇಳಿಕೆಗಳನ್ನು ಕೊಡುತ್ತಿರುತ್ತಾರೆ. ಡಿ.ಕೆ. ಸುರೇಶ್ ಭ್ರಮ ನಿರಸನರಾಗಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಬೆಳೆದಿದೆ. ಹೊಸ ಶಕ್ತಿ ಬರುತ್ತಿದೆ. ಆದರೆ ಇವರು ಮುಂದೆ ಸರ್ಕಾರ ಬರುತ್ತದೆ ಅಂತ ಡ್ರೆಸ್ ಹೊಲಿಸಿಕೊಂಡಿದ್ದರು. ಅದು ತಪ್ಪುತ್ತೆ ಅನ್ನೋ ಆತಂಕದಲ್ಲಿ ಈಗ ನನ್ನ ಬಗ್ಗೆ ಏನೇನೋ ಮಾತಾಡುತ್ತಿದ್ದಾರೆ. ನಾನು ಡಿ.ಕೆ. ಸುರೇಶ್ ಬದಲು ಕೇಡಿ ಸುರೇಶ್ ಅಂತ ಹೇಳಬಹುದಲ್ವಾ ಎಂದು ಟಾಂಗ್ ಕೊಟ್ಟಿದ್ದಾರೆ.

    ಸಿಎಂ ಯಡಿಯೂರಪ್ಪ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ನಾನೇನು ಮಾತನಾಡಲ್ಲ. ಅವರು ಹಿರಿಯರು, ಸಿಎಂ ಅವರೇ ಸ್ವತಃ ಸ್ಪಷ್ಟಪಡಿಸುತ್ತಾ, ಹೋಗುತ್ತಿದ್ದಾರೆ. ನಾನು ನಿನ್ನೆ ಮೊನ್ನೆ ಕೂಡ ಗಮಿನಿಸಿದ್ದೇನೆ ಬಹಿರಂಗವಾಗಿಯೇ ಮಾಧ್ಯಮಗಳ ಮುಂದೆ ರಾಜೀನಾಮೆ ವಿಷಯ ಪ್ರಸ್ತಾಪಿಸಿದ್ದಾರೆ. ಹಾಗಾಗಿ ಈ ವಿಚಾರದಲ್ಲಿ ನನ್ನದೇನು ವೈಯಕ್ತಿಕ ಅಭಿಪ್ರಾಯ ಇಲ್ಲ ಎಂದಿದ್ದಾರೆ.

    ಈ ಮೊದಲು ನಾನು ನನ್ನ ಜಿಲ್ಲೆಯ ಸಮಸ್ಯೆಗಳ ಬಗ್ಗೆ ತೊಂದರೆಗಳ ಬಗ್ಗೆ ಮಾತಾಡಿದ್ದೆ ಹೊರತು ನಾಯಕತ್ವ ಬದಲಾವಣೆ ಬಗ್ಗೆ ಮಾತಾಡಿಲ್ಲ. ಸಿಎಂ ಬದಲವಾಣೆ ರಾಜೀನಾಮೆ ಬಗ್ಗೆ ನಮ್ಮ ವರಿಷ್ಠರು ಹಾಗೂ ಹಿರಿಯರು ಆ ಬಗ್ಗೆ ಮಾತನಾಡಲಿದ್ದಾರೆ ಎಂದರು. ಜೊತೆಗೆ ಕಾಂಗ್ರೆಸ್ಸಿನಿಂದ ಬಂದ ವಲಸಿಗ ಸಚಿವರಿಗೆ ಸಚಿವ ಸ್ಥಾನ ಕಳೆದುಕೊಳ್ಳುವ ಭೀತಿ ಬಗ್ಗೆ ಮಾತನಾಡಿದ ಅವರು, ಮಂತ್ರಿ ಸ್ಥಾನ ಶಾಶ್ವತನಾ..? ಸೇವೆ ಮಾಡಲು ಅವಕಾಶ ಸಿಕ್ಕಾಗ ಮಾಡಬೇಕು ಅಷ್ಟೆ. ರಾಜೀನಾಮೆ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಯಡಿಯೂರಪ್ಪ ರಾಜೀನಾಮೆ ವಿಚಾರ ಸಂಬಂಧ ಮೌನವೇ ಉತ್ತರವಾಗಿತ್ತು.  ಇದನ್ನೂ ಓದಿ:ನನ್ನ ಫೋನ್​​ಗಳನ್ನು ಕದ್ದಾಲಿಕೆ ಮಾಡಲಾಗಿದೆ: ರಾಹುಲ್ ಗಾಂಧಿ

  • ಅಪಘಾತಕ್ಕೀಡಾಗಿ ಗಾಯಗೊಂಡ ವೈದ್ಯ – ಕಾರಿನಿಂದ ಇಳಿಯದೆ ಅಮಾನವೀಯತೆ ತೋರಿದ ಬಿಜೆಪಿ ಶಾಸಕ

    ಅಪಘಾತಕ್ಕೀಡಾಗಿ ಗಾಯಗೊಂಡ ವೈದ್ಯ – ಕಾರಿನಿಂದ ಇಳಿಯದೆ ಅಮಾನವೀಯತೆ ತೋರಿದ ಬಿಜೆಪಿ ಶಾಸಕ

    – ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ವೈದ್ಯ ಸಾವು

    ಚಿಕ್ಕಮಗಳೂರು: ಅಪಘಾತದಿಂದ ರಸ್ತೆ ಬದಿಯಲ್ಲೇ ವೈದ್ಯರೊಬ್ಬರು ನರಳಾಡಿದರೂ ಕಾರಿನಿಂದ ಕೆಳಗಿಳಿಯದೆ ಬಿಜೆಪಿ ಶಾಸಕರೊಬ್ಬರು ಅಮಾನವೀಯತೆ ತೋರಿದ ಘಟನೆಯೊಂದು ಚಿಕ್ಕಮಗಳೂರಿನಲ್ಲಿ ನಡೆದಿದೆ.

    ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದಿದ್ದರಿಂದ ವೈದ್ಯ ಡಾ. ರಮೇಶ್ ಪ್ರಾಣಬಿಟ್ಟಿದ್ದಾರೆ. ತರೀಕೆರೆ ತಾಲೂಕಿನ ಲಕ್ಕವಳ್ಳಿ ಕ್ರಾಸ್ ಬಳಿ ಅಪಘಾತ ನಡೆದಿದೆ. ಈ ವೇಳೆ ಶಾಸಕ ಡಿ ಎಸ್ ಸುರೇಶ್ ಅವರು ಅದೇ ದಾರಿಯಲ್ಲಿ ಲಕ್ಕವಳ್ಳಿಯಿಂದ ತರೀಕೆರೆಗೆ ಬರ್ತಿದ್ದರು. ಅಪಘಾತ ಕಂಡ ಶಾಸಕರು, ಇನ್ನೋವಾ ಕಾರಿನಲ್ಲೇ ಕೂತು ನೋಡಿದ್ದಾರೆ. ಬಳಿಕ ಶಾಸಕರ ಗನ್‍ಮ್ಯಾನ್ ಅಂಬುಲೆನ್ಸ್ ಕರೆ ಮಾಡಿದ್ದಾರೆ. ಅಂಬುಲೆನ್ಸ್ ಬರೋವರೆಗೂ ಶಾಸಕರು ಮಾತ್ರ ಕಾರಿನಲ್ಲೇ ಕುಳಿತಿದ್ದು, ವೈದ್ಯರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗದೇ ಉಡಾಫೆ ತೋರಿದ್ದಾರೆ.

    ಘಟನೆ ನಡೆದು 20 ನಿಮಿಷದ ಬಳಿಕ ಗಾಯಾಳು ವೈದ್ಯರನ್ನು ಅಂಬುಲೆನ್ಸ್ ನಲ್ಲಿ ತರೀಕೆರೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹೀಗಾಗಿ ತಡವಾಗಿದ್ದರಿಂದ ರಸ್ತೆ ಮಧ್ಯೆಯೇ ಡಾ. ರಮೇಶ್ ಪ್ರಾಣ ಬಿಟ್ಟಿದ್ದಾರೆ. ಘಟನೆ ನಡೆದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ್ದ ಶಾಸಕರು ಕಾರಲ್ಲಿ ಕರೆದುಕೊಂಡು ಹೋಗಿದ್ದರೆ ವೈದ್ಯರ ಪ್ರಾಣ ಉಳಿಯುತ್ತಿತ್ತು. ಯಾಕಂದರೆ ಅಪಘಾತ ಸ್ಥಳದಿಂದ ಆಸ್ಪತ್ರೆಗೆ ಕಾರಲ್ಲಿ ಮೂರ್ನಾಲ್ಕು ನಿಮಿಷದ ದಾರಿ ಅಷ್ಟೆ ಇತ್ತು.

    ಒಟ್ಟಿನಲ್ಲಿ ಅಮಾನವೀಯತೆ ತೋರಿದ್ದರಿಂದ ಶಾಸಕರು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

  • ರವಿ ಚನ್ನಣ್ಣನವರ್ ಸ್ಫೂರ್ತಿಯಿಂದ ಡಿವೈಎಸ್ಪಿಯಾಗಿ ಆಯ್ಕೆಯಾಗಿದ್ದೇನೆ – ಎಂ.ಸುರೇಶ

    ರವಿ ಚನ್ನಣ್ಣನವರ್ ಸ್ಫೂರ್ತಿಯಿಂದ ಡಿವೈಎಸ್ಪಿಯಾಗಿ ಆಯ್ಕೆಯಾಗಿದ್ದೇನೆ – ಎಂ.ಸುರೇಶ

    – ಕೆಪಿಎಸ್‍ಸಿಯಲ್ಲಿ 2ನೇ ಸ್ಥಾನ

    ಕೊಪ್ಪಳ: ಬೆಂಗಳೂರು ಗ್ರಾಮಾಂತರ ವಿಭಾಗದ ಎಸ್‍ಪಿ ರವಿ ಡಿ.ಚೆನ್ನಣ್ಣನವರ್ ಹಲವು ಯುವಕರ ಹೀರೋ ಎಂದು ಕೇಳಿದ್ದೇವೆ. ಅವರ ಸ್ಫೂರ್ತಿಯಿಂದಲೇ ಇದೀಗ ಕೆಪಿಎಸ್ಸಿಯಲ್ಲಿ 2ನೇ ಸ್ಥಾನ ಗಳಿಸುವ ಮೂಲಕ ಎಂ.ಸುರೇಶ ಡಿವೈಎಸ್ಪಿಯಾಗಿ ಆಯ್ಕೆಯಾಗಿದ್ದಾರೆ.

    ವಿವಿಧ ಹುದ್ದೆಗಳ ನೇಮಕಕ್ಕಾಗಿ ನಡೆದ ಕೆಪಿಎಸ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕೊಪ್ಪಳದ ಗಂಗಾವತಿ ತಾಲೂಕಿನ ಕಲ್ಲಯ್ಯ ಕ್ಯಾಂಪ್‍ನ ಎಂ.ಸುರೇಶ ಅವರು ಎರಡನೇ ರ್ಯಾಂಕ್ ಪಡೆದಿದ್ದು, ಈ ಮೂಲಕ ಡಿವೈಎಸ್ಪಿ ಹುದ್ದೆಗೆ ಆಯ್ಕೆಯಾಗಿದ್ದಾರೆ.

    ಕನ್ನಡ ಮಾಧ್ಯಮದಲ್ಲಿ ಓದಿದ್ದರೂ 2017ರಲ್ಲಿ ನಡೆದ ಕೆಪಿಎಸ್‍ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಮೂಲತಃ ಕೃಷಿಕರಾದ ದುರುಗಪ್ಪ ಮತ್ತು ಹನುಮಮ್ಮ ಮಳ್ಳಿಕೇರಿ ದಂಪತಿಯ 6ನೇ ಪುತ್ರರಾದ ಎಂ.ಸುರೇಶ, ಗಂಗಾವತಿ ನಗರದ ವಿವೇಕ ಭಾರತಿ ವಿದ್ಯಾ ಕೇಂದ್ರದಲ್ಲಿ ಪ್ರಾಥಮಿಕ ಅಭ್ಯಾಸ ಮುಗಿಸಿದ್ದಾರೆ. ವಿದ್ಯಾಗಿರಿಯ ಎಂಎನ್‍ಎಂ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿಯನ್ನು ಶೇ.71ರಷ್ಟು ಅಂಕದೊಂದಿಗೆ ಪೂರ್ಣಗೊಳಿಸಿದ್ದಾರೆ. ಹುಬ್ಬಳ್ಳಿಯ ಪಿಸಿ ಜಾಬೀನ್ ಪಿಯು ಕಾಲೇಜಿನಲ್ಲಿ ಪಿಯು ಓದಿದ್ದು, ಶೇ.86ರಷ್ಟು ಅಂಕಪಡೆದಿದ್ದಾರೆ. ಮೈಸೂರಿನ ವಿದ್ಯಾ ವಿಕಾಸ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್‍ನಲ್ಲಿ ಪದವಿ ಪಡೆದಿದ್ದು, ಶೇ.68ರಷ್ಟು ಅಂಕ ಪಡೆದು ಉತ್ತೀರ್ಣರಾಗಿದ್ದಾರೆ.

    ಎರಡನೇ ಯತ್ನದಲ್ಲಿ ಕೆಪಿಎಸ್ಸಿಗೆ ಅರ್ಹತೆ ಪಡೆದಿದ್ದು, ಸಮಾಜ ಕಲ್ಯಾಣ ಇಲಾಖೆ ನೆರವಿನೊಂದಿಗೆ ದೆಹಲಿಯಲ್ಲಿ ತರಬೇತಿ ಪಡೆದಿದ್ದಾರೆ. 9 ತಿಂಗಳ ತರಬೇತಿ ನಂತರ 2017ರಲ್ಲಿ ಕೆಪಿಎಸ್‍ಸಿ ಆಯೋಜಿಸಿದ್ದ ಪರೀಕ್ಷೆಯಲ್ಲಿ 2ನೇ ರ್ಯಾಂಕ್ ಪಡೆದಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿದ ಸುರೇಶ, ನನಗೆ ಎಸ್‍ಪಿ ರವಿ ಚನ್ನಣ್ಣನವರ್ ಸ್ಫೂರ್ತಿ, ನಿತ್ಯ 8 ಗಂಟೆ ಓದುತ್ತಿದ್ದೆ. ವರ್ತಮಾನದ ವಿದ್ಯಮಾನಗಳ ಬಗ್ಗೆ ತಿಳಿದುಕೊಳ್ಳುತ್ತಿದ್ದೆ. ಚಿತ್ರಕಲೆಯಲ್ಲಿ ಆಸಕ್ತಿಯಿದ್ದು, ಪರೀಕ್ಷೆಯಲ್ಲಿ ಭೂಗೋಳಶಾಸ್ತ್ರ ವಿಷಯ ಪಡೆದಿದ್ದರಿಂದ ಉತ್ತಮ ಸಾಧನೆ ಮಾಡಲು ಅನುಕೂಲವಾಯಿತು. ಎಸಿ ಆಗಬೇಕೆಂಬ ಆಸೆಯಿತ್ತು, ಡಿವೈಎಸ್ಪಿಗೆ ಆಯ್ಕೆಯಾಗಿದ್ದು ಸಂತಸ ತಂದಿದೆ. ಜನ ಸೇವೆಗೆ ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿದ್ದೇನೆ. ಯುಪಿಎಸ್‍ಸಿ ಪರೀಕ್ಷೆಯಲ್ಲಿ ಉತ್ತಮ ರ್ಯಾಂಕ್ ಗಳಿಸುವ ಮೂಲಕ ಮೂಲಕ ಜಿಲ್ಲಾಧಿಕಾರಿಯಾಗುವ ಕನಸು ಹೊಂದಿದ್ದೇನೆ ಎಂದರು.

  • ರಣಹೇಡಿ: ಕಥೆಗೆ ಮನಸೋತು ಕಾಸು ಹೂಡಿದ ಸುರೇಶ್ ಸಾಹಸ!

    ರಣಹೇಡಿ: ಕಥೆಗೆ ಮನಸೋತು ಕಾಸು ಹೂಡಿದ ಸುರೇಶ್ ಸಾಹಸ!

    ನ್ನಡ ಚಿತ್ರರಂಗದಲ್ಲಿ ಹೊಸ ಆಲೋಚನೆಯ ಪ್ರಕ್ರಿಯೆಗೆ ಯಾವ ಭಂಗವೂ ಇಲ್ಲ. ಆಗಾಗ ಸಿದ್ಧ ಸೂತ್ರದ ಚಿತ್ರಗಳ ಅಲೆಗೆದುರಾಗಿ ಇಂತಹ ಪ್ರಯೋಗಾತ್ಮಕ ಚಿತ್ರಗಳು ತೆರೆಗಾಣುತ್ತಿರುತ್ತವೆ. ಆದರೆ ಅದೆಷ್ಟೋ ಒಳ್ಳೆ ಕಥೆಗಳು, ಭಿನ್ನ ಆಲೋಚನೆಗಳು ಎಲ್ಲೆಲ್ಲೋ ಮಣ್ಣಾಗಿರುತ್ತವೆ. ಅದಕ್ಕೆ ಕಾರಣ ಅಭಿರುಚಿ ಹೊಂದಿರುವ, ವ್ಯವಹಾರವನ್ನು ಮೀರಿದ ಸಿನಿಮಾ ಪ್ರೇಮ ಹೊಂದಿರುವ ನಿರ್ಮಾಪಕರ ಕೊರತೆ. ಬಹುಶಃ ಸುರೇಶ್ ಅವರಂತಹ ಸದಭಿರುಚಿಯ ನಿರ್ಮಾಪಕರು ಸಿಗದಿದ್ದಿದ್ದರೆ ರಣಹೇಡಿ ಎಂಬ ಚಿತ್ರ ಕೂಡ ಎಲ್ಲಿಯೋ ಕಳೆದು ಹೋಗುತ್ತಿತ್ತು. ಈ ನೆಲದ ಕಂಪು ಹೊಂದಿರೋ ಈ ಕಥೆಯೂ ಕಣ್ಮರೆಯಾಗುತ್ತಿತ್ತು.

    ಸುರೇಶ್ ಈ ಹಿಂದೆಯೂ ಒಂದು ಸದಭಿರುಚಿಯ ಸಿನಿಮಾ ನಿರ್ಮಾಣ ಮಾಡಿದ್ದರು. ಹೆಚ್ಚಿನ ನಿರ್ಮಾಪಕರು ಪಕ್ಕಾ ಕಮರ್ಷಿಯಲ್ ವಿಧಾನದ ಸಿನಿಮಾಗಳತ್ತ ಮಾತ್ರವೇ ಆಕರ್ಷಿತರಾಗುತ್ತಾರೆ. ಆದರೆ ಸಮಾಜಮುಖಿಯಾದ, ಪ್ರೇಕ್ಷಕರಿಗೆ ದಾಟಿಕೊಳ್ಳಲೇ ಬೇಕಾದ ಕಥೆಯನ್ನೊಳಗೊಂಡಿರೋ ಸಿನಿಮಾಗಳತ್ತ ಒಲವು ಹೊಂದಿರುವವರು ಕಡಿಮೆಯೇ. ಆದರೆ ಸುರೇಶ್ ಅವರದ್ದು ಭಿನ್ನ ಅಭಿರುಚಿ. ವ್ಯಾಪಾರ-ವಹಿವಾಟುಗಳ ಪಾಡು ಏನೇ ಆದರೂ ತಾವು ನಿರ್ಮಾಣ ಮಾಡೋ ಸಿನಿಮಾಗಳು ಮಹತ್ವದ ಸಂದೇಶ ಕೊಡುವಂತಿರಬೇಕೆಂಬುದು ಸುರೇಶ್ ಅವರ ಅಭಿಲಾಷೆ. ಈ ಕಾರಣದಿಂದಲೇ ಮನು ಕೆ ಶೆಟ್ಟಿಹಳ್ಳಿಯವರ ಕಥೆಯನ್ನು ಮೆಚ್ಚಿಕೊಂಡು ರಣಹೇಡಿಯ ನಿರ್ಮಾಣದ ಹೊಣೆ ಹೊತ್ತುಕೊಂಡಿದ್ದಾರೆ.

    ಈ ಚಿತ್ರ ಕನ್ನಡ ಚಿತ್ರರಂಗದಲ್ಲಿ ಮೈಲಿಗಲ್ಲಿನಂತೆ ಮೂಡಿ ಬಂದಿದೆ ಎಂಬ ಭರವಸೆ ಸುರೇಶ್ ಅವರಲ್ಲಿದೆ. ಅವರು ಈ ಕಥೆಯನ್ನು ಇಷ್ಟೊಂದು ಇಷ್ಟಪಟ್ಟು ನಿರ್ಮಾಣ ಮಾಡೋ ರಿಸ್ಕ್ ತೆಗೆದುಕೊಳ್ಳಲು ಕಾರಣವಾಗಿರೋದು ಅದರಲ್ಲಿರೋ ಮಣ್ಣಿನ ಘಮ. ಇಲ್ಲಿ ರೈತಾಪಿ ವರ್ಗದ ತಲ್ಲಣಗಳ ಕಥೆಯಿದೆ. ಹೊಲದಿಂದ ಮೊದಲ್ಗೊಂಡು ಆ ರೈತಾಪಿ ವರ್ಗದ ಜೀವನ ಪದ್ಧತಿ, ಮರೆಯಾಗುತ್ತಿರೋ ಅಮೂಲ್ಯ ಆಚರಣೆಗಳನ್ನು ಕೂಡ ಪುನರ್ ಸೃಷ್ಟಿಸಿ ಈ ಜನರೇಷನ್ನಿಗೆ ತಲುಪಿಸುವಲ್ಲಿಯೂ ರಣಹೇಡಿ ಮಹತ್ವದ ಪಾತ್ರ ವಹಿಸಲಿದೆ. ಈ ಎಲ್ಲ ಕಾರಣದಿಂದ ಮಹತ್ವದ್ದಾಗಿ ಗುರುತಿಸಿಕೊಂಡಿರುವ ಈ ಚಿತ್ರ ಇದೇ ತಿಂಗಳ 29ರಂದು ಬಿಡುಗಡೆಯಾಗಲಿದೆ.

  • ಇತಿಹಾಸದಲ್ಲಿ ಇಂದು ಕಪ್ಪು ದಿನ: ಡಿ.ಕೆ.ಸುರೇಶ್

    ಇತಿಹಾಸದಲ್ಲಿ ಇಂದು ಕಪ್ಪು ದಿನ: ಡಿ.ಕೆ.ಸುರೇಶ್

    -ಎಲ್ಲದಕ್ಕೂ ಬಿಜೆಪಿಯ ಅಧಿಕಾರ ದಾಹವೇ ಕಾರಣ

    ಬೆಂಗಳೂರು: ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ  ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ ನಾಯಕರ ಕೈವಾಡವಿದೆ ಎಂದು ದೂರಿದರು.

    ನಾವು ಹೋಟೆಲ್‍ನಲ್ಲಿ ರೂಮ್ ಬುಕ್ ಮಾಡಿದ್ವಿ. ಆದರೆ ಇದ್ದಕ್ಕಿದ್ದಂತೆ ರೂಮ್ ಕ್ಯಾನ್ಸಲ್ ಮಾಡಿದ್ದಾರೆ. ಇತ್ತ ನಮ್ಮ ಶಾಸಕರನ್ನು ಭೇಟಿ ಮಾಡಲು ಮಹಾರಾಷ್ಟ್ರ ಪೊಲೀಸರು ಅವಕಾಶ ಮಾಡಿಕೊಡುತ್ತಿಲ್ಲ. ಹೀಗಾಗಿ ಇದರ ಹಿಂದೆ ಬಿಜೆಪಿ ನಾಯಕರಿದ್ದಾರೆ. ಬಿಜೆಪಿ ಅವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ಬಂಧಿಸಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದರು.

    ಡಿ.ಕೆ.ಶಿವಕುಮಾರ್ ಅವರನ್ನು ಯಾವುದಾದರೂ ಠಾಣೆಗೆ ಅಥವಾ ಜೈಲಿಗೆ ಕರೆದುಕೊಂಡು ಹೋಗಿರುತ್ತಾರೆ. ಏನ್ ಮಾಡೋಕೆ ಆಗುತ್ತೆ, ಎಲ್ಲವನ್ನು ಅನುಭವಿಸಬೇಕು. ಬಿಜೆಪಿ ಅವರು ಇನ್ನೂ ಏನೇನು ಮಾಡುತ್ತಾರೆ ಎಂದು ಕಾದು ನೋಡಬೇಕಿದೆ. ಇದೆಲ್ಲದಕ್ಕೂ ಬಿಜೆಪಿ ನಾಯಕರ ಅಧಿಕಾರದ ದಾಹವೇ ಕಾರಣ ಎಂದು ಸುರೇಶ್ ಆರೋಪಿಸಿದರು.

    ನಾನು ಫೋನ್ ಮಾಡಿದಾಗ ಈ ರೀತಿ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು ಅಷ್ಟೇ. ಹೀಗಾಗಿ ಮಳೆ, ಗಾಳಿ, ಚಳಿ, ಬಿಸಿಲು ಏನೇ ಆದರೂ ಎಲ್ಲದಕ್ಕೂ ಸಿದ್ಧವಾಗಿದ್ದೇವೆ ಎಂದು ಕೋಪದಿಂದ ಸುರೇಶ್ ಹೇಳಿದರು.

    ಇದು ಪಕ್ಷದ ಅಸ್ಥಿತ್ವದ ಪ್ರಶ್ನೆ. ಮುಂಬೈನಲ್ಲಿರುವ ಅತೃಪ್ತ ಶಾಸಕರು ಕಾಂಗ್ರೆಸ್ ಪಕ್ಷವನ್ನು ಕಷ್ಟಪಟ್ಟು ಕಟ್ಟಿದ್ದಾರೆ. ಹೀಗಾಗಿ ಅಂತಹವರು ಈ ರೀತಿ ರಾಜೀನಾಮೆ ನೀಡಿದ್ದಾರೆ ಎಂದರೆ ನಂಬಲು ಸಾಧ್ಯವಾಗುತ್ತಿಲ್ಲ. ಅವರು ಒತ್ತಡದಲ್ಲಿ ಮಾತನಾಡುತ್ತಿದ್ದಾರೆ. ಅವರು ಕೂಡ ನಾವು ಕಾಂಗ್ರೆಸ್ ಪಕ್ಷದಲ್ಲಿ ಇದ್ದೇವೆ ಎಂದು ಸ್ಪಷ್ಟ ಪಡಿಸಿದ್ದಾರೆ. ಹಾಗಾಗಿ ಕಾಂಗ್ರೆಸ್‍ನವರು ಹೋಗಿ ಮಾತನಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದರು.

    ಒಂದು ಪಕ್ಷ ಎಂದರೆ ಅದು ಒಂದು ಕುಟುಂಬ ಇದ್ದಂತೆ. ನಮ್ಮ ಕುಟುಂಬದವರ ಜೊತೆ ಮಾತನಾಡಬೇಕು ಎಂದು ಶಿವಕುಮಾರ್ ಹೋಗಿದ್ದರು. ಅವರು ಶಿವಕುಮಾರ್ ಅವರಿಗೆ ಬೈಯುತ್ತಾರ, ಹೊಡೆಯುತ್ತಾರ ಹೊಡೆಯಲಿ ಅವರಿಗೆ ಆ ಹಕ್ಕಿದೆ. ಬೈರತಿ ಬಸವರಾಜ್, ಸೋಮಶೇಖರ್ ಸೇರಿದಂತೆ ಇತರೆ ಶಾಸಕರು ಸೇರಿದಂತೆ ಎಲ್ಲರಿಗೂ ಬೈಯುವ, ತೆಗಳುವ ಹಕ್ಕಿದೆ. ಒಂದು ಕುಟುಂಬ ಎಂದರೆ ಜಗಳ, ಕೋಪ ಇದ್ದೇ ಇರುತ್ತದೆ. ಏನೇ ತಪ್ಪಾಗಿದ್ದರೂ ಅದನ್ನು ಸರಿ ಮಾಡಿಕೊಳ್ಳುವ ಪ್ರಯತ್ನ ಮಾಡಲು ಮುಂಬೈಗೆ ಹೋಗಿದ್ದರು ಎಂದು ಸುರೇಶ್ ತಿಳಿಸಿದರು.

  • ಪ್ರತಿಷ್ಠೆ ಬದಿಗೊತ್ತಿ ಗ್ರಾಮದ ಅಭಿವೃದ್ಧಿ ಮಾಡ್ತಿದ್ದಾರೆ ಚಿತ್ರದುರ್ಗದ ಸುರೇಶ್

    ಪ್ರತಿಷ್ಠೆ ಬದಿಗೊತ್ತಿ ಗ್ರಾಮದ ಅಭಿವೃದ್ಧಿ ಮಾಡ್ತಿದ್ದಾರೆ ಚಿತ್ರದುರ್ಗದ ಸುರೇಶ್

    ಚಿತ್ರದುರ್ಗ: ಗ್ರಾಮಪಂಚಾಯ್ತಿ ಅಧ್ಯಕ್ಷರಾಗಿದ್ದರು ಕೂಡ ಸ್ವಲ್ಪವೂ ಮುಜುಗರವಿಲ್ಲದೇ, ವಿದ್ಯುತ್ ಕಂಬ ಹತ್ತಿ ವಿದ್ಯುತ್ ಸರಿ ಮಾಡ್ತಾ, ಪಂಚಾಯ್ತಿ ವ್ಯಾಪ್ತಿಗೆ ಬರೋ ಎಲ್ಲಾ ಸಮಸ್ಯೆಗಳನ್ನ ಶೀಘ್ರವೇ ಸ್ವ-ಇಚ್ಛೆಯಿಂದ ಪರಿಹರಿಸುತ್ತಿರೋ ಸ್ವಯಂ ಸೇವಕ ಸುರೇಶ್ ಪಬ್ಲಿಕ್ ಹೀರೋ ಆಗಿದ್ದಾರೆ.

    ಹೌದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ದೊಡ್ಡಚೆಲ್ಲೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಸುರೇಶ್ ಎಲ್ಲರಂತಲ್ಲ. ಜನ ಸೇವೆಯೇ ಜನಾರ್ದನ ಸೇವೆ ಅಂದುಕೊಂಡು ಜನರಿಗಾಗಿ ಕೆಲಸ ಮಾಡ್ತಾರೆ. ಬರದ ನಾಡಲ್ಲಿ ಮಳೆ, ಬೆಳೆ ಇಲ್ಲದ ಹಿನ್ನೆಲೆಯಲ್ಲಿ ರೈತರಿಂದ ಕಂದಾಯ ವಸೂಲಿಯಾಗೋದೆ ಕಷ್ಟಕರ. ಹೀಗಾಗಿ ಗ್ರಾಮ ಪಂಚಾಯ್ತಿಯಲ್ಲಿ ಸಂಬಳ ನೀಡಲ್ಲ ಅಂತ ಭಾವಿಸಿರೋ ಡಿ. ದರ್ಜೆಯ ನೌಕರರು ಕೆಲಸಕ್ಕೆ ಬರಲ್ಲ. ಅಲ್ಲದೆ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ಆದಾಗ ಪಂಚಾಯ್ತಿ ಕಛೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡ ಎಲೆಕ್ಟ್ರೀಷಿಯನ್ ಹಾಗು ಬೆಸ್ಕಾಂ ನೌಕರರು ಬರುವಷ್ಟರಲ್ಲಿ ಕಾಲ ಮಿಂಚಿ ಹೋಗುತ್ತದೆ.

    ಹೀಗಾಗಿ ವಿದ್ಯಾರ್ಥಿಗಳು ಕತ್ತಲಲ್ಲಿ ಓದಿಕೊಳ್ಳಲು, ವಯೋವೃದ್ಧರಿಗೆ ಓಡಾಡಲು ಕಷ್ಟಕರವಾಗುತ್ತದೆ ಅಂತ ಗ್ರಾಮಸ್ಥರ ಸಂಕಷ್ಟ ಅರಿತ ಗ್ರಾಮಪಂಚಾಯ್ತಿ ಅಧ್ಯಕ್ಷ ಸುರೇಶ್ ತಮ್ಮ ಸ್ವಪ್ರತಿಷ್ಠೆ ಸಂಕೋಚ ಎಲ್ಲವನ್ನು ಬದಿಗೊತ್ತಿ ಗ್ರಾಮಗಳಲ್ಲಿ ಯಾವುದೇ ವಿದ್ಯುತ್ ಸಮಸ್ಯೆ ಆದಾಗ ಅವರೇ ಸ್ವಯಂ ಕಂಬ ಹತ್ತಿ ವಿದ್ಯುತ್ ರಿಪೇರಿ ಮಾಡಿ ಹಳ್ಳಿಯನ್ನು ಬೆಳಗುತ್ತಿದ್ದಾರೆ. ಒಂದು ವೇಳೆ ಬಲ್ಬು ಅಥವಾ ಸಣ್ಣಪುಟ್ಟ ಸಮಸ್ಯೆ ಇದ್ರೆ ತಮ್ಮ ಸ್ವಂತ ಜೇಬಿನಿಂದಲೇ ಹಣ ತೆಗೆದು ಖರ್ಚುಮಾಡಿ ಸಮಸ್ಯೆ ಪರಿಹರಿಸೋ ಸುರೇಶ್, ಅಭಿವೃದ್ಧಿ ಮಾಡಬೇಕೆನ್ನುವ ಜನಪ್ರತಿನಿಧಿಗಳಿಗೆ ಮಾದರಿ ಗ್ರಾಮಪಂಚಾಯ್ತಿ ಅಧ್ಯಕ್ಷ ಎನಿಸಿದ್ದಾರೆ.

    ಒಂದು ಕಾಲದಲ್ಲಿ ಎಲೆಕ್ಟ್ರಿಷಿಯನ್ ಆಗಿದ್ದ ಸುರೇಶ್ ಅವರು ಆ ಕಾಯಕವನ್ನ ಈಗ ಸದುಪಯೋಗಪಡಿಸಿಕೊಂಡು ಸಮಾಜಸೇವೆ ಮಾಡುತ್ತಿದ್ದಾರೆ. ಮೂರು ವರ್ಷಗಳಿಂದಲೂ ಗ್ರಾಮಪಂಚಾಯ್ತಿ ಅಧ್ಯಕ್ಷರಾಗಿ, ಪ್ರಭಾವಿ ಜನಪ್ರತಿನಿಧಿ ಎನಿಸಿದ್ದರೂ ಸಹ ಸಾಮಾನ್ಯ ವ್ಯಕ್ತಿಯಂತೆ ಜನಸೇವೆ ಮಾಡುತ್ತಾ ಜನ ನಾಯಕರೆನಿಸಿದ್ದಾರೆ. ಅಭಿವೃದ್ಧಿಯ ಮಂತ್ರ ಜಪಿಸೋ ದೊಡ್ಡಚೆಲ್ಲೂರಿನ ಗ್ರಾಮಪಂಚಾಯ್ತಿ ಸದಸ್ಯರು ಕೂಡ ಸುರೇಶ್ ಅವರ ಸೇವೆಗೆ ಸಾಥ್ ನೀಡುತ್ತಿದ್ದಾರೆ. ಅಲ್ಲದೆ ಸರ್ಕಾರದಿಂದ ಬರೋ ಅಲ್ಪ ಅನುದಾನದಲ್ಲೇ ಗ್ರಾಮಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ, ಅಂಗವಿಕಲರ ಕಲ್ಯಾಣ ಮಾಡ್ತಿದ್ದಾರೆ.

    ಅದೇನೇಯಾದರೂ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಕ್ಷಣ ಬಿಳಿ ಬಟ್ಟೆ ಹಾಕ್ಕೊಂಡು, ಅಧಿಕಾರಿಗಳಿಗೆ ಕೇವಲ ತರಾಟೆ ತಗೋಳದ್ರಲ್ಲೇ ಕಾಲಾಹರಣ ಮಾಡುವ ಜನಪ್ರತಿನಿಧಿಗಳ ನಡುವೇ ದೊಡ್ಡಚೆಲ್ಲೂರಿನ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಅಪರೂಪದ ವ್ಯಕ್ತಿ ಎನಿಸಿಕೊಂಡಿದ್ದಾರೆ. ಇವರ ಕಾರ್ಯವನ್ನು ಇತರೆ ಗ್ರಾಮಪಂಚಾಯ್ತಿಗಳ ಅಧ್ಯಕ್ಷರು ಸಹ ಮೈಗೂಡಿಸಿಕೊಂಡು ಸೇವೆ ಮಾಡಿದರೆ ಹಳ್ಳಿಗಳು ಅಭಿವೃದ್ಧಿ ಪಥದತ್ತ ಸಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಅನ್ನೋದು ಹಿರಿಯರ ಅಭಿಪ್ರಾಯವಾಗಿದೆ.

    https://www.youtube.com/watch?v=fMDBY3xCMV4

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv