Tag: Suresh angdi

  • ಬಿಎಸ್‍ವೈಯನ್ನು ಸಿಎಂ ಮಾಡಲು ‘ಕೈ’ಗೆ ರಾಜೀನಾಮೆ ನೀಡಿ- ಎಂಬಿಪಿಗೆ ರವಿ ಟಾಂಗ್

    ಬಿಎಸ್‍ವೈಯನ್ನು ಸಿಎಂ ಮಾಡಲು ‘ಕೈ’ಗೆ ರಾಜೀನಾಮೆ ನೀಡಿ- ಎಂಬಿಪಿಗೆ ರವಿ ಟಾಂಗ್

    ಬೆಂಗಳೂರು: ಲಿಂಗಾಯತರ ಮೇಲೆ ಕಾಳಜಿ ಇದ್ದರೆ ಮಾನ್ಯ ಗೃಹ ಮಂತ್ರಿ ಎಂ.ಬಿ ಪಾಟೀಲ್ ಅವರು ಕಾಂಗ್ರೆಸ್‍ಗೆ ರಾಜೀನಾಮೆ ನೀಡಿ ಬಿಜೆಪಿಗೆ ಬಂದು ಬಹುಕಾಲದಿಂದಲೂ ಲಿಂಗಾಯತರ ನಾಯಕರಾದ ಬಿ.ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲಿ ಎಂದು ಶಾಸಕ ಸಿ.ಟಿ ರವಿ ಅವರು ಹೇಳಿದ್ದಾರೆ.

    ಬಿಜೆಪಿ ಪಕ್ಷದಲ್ಲಿ ಲಿಂಗಾಯತ ಸಮುದಾಯದ ನಾಯಕರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪ ಮಾಡಿದ್ದ ಎಂ.ಬಿ ಪಾಟೀಲ್ ವಿರುದ್ಧ ಟ್ವೀಟ್ ಮಾಡಿ ಸಿ.ಟಿ ರವಿ ಟಾಂಗ್ ಕೊಟ್ಟಿದ್ದಾರೆ.

    ಲಿಂಗಾಯುತ ಸಮುದಾಯಕ್ಕೆ ಸೇರಿದ ಸಂಸದ ಸುರೇಶ್ ಅಂಗಡಿ ಅವರಿಗೆ ಕೇಂದ್ರ ಸರ್ಕಾರದಿಂದ ರಾಜ್ಯ ಸಚಿವ ಸ್ಥಾನ ನೀಡಿರುವುದಕ್ಕೆ ಪಾಟೀಲ್ ಅವರು ಕೇಂದ್ರ ಸರ್ಕಾರ ಲಿಂಗಾಯತರಿಗೆ ಮೋಸ ಮಾಡುತ್ತಿದೆ ಎಂದು ಅಸಮಾಧಾನ ಹೊರ ಹಾಕಿದ್ದರು.

    ಈ ಟ್ವೀಟ್ ಗೆ ಸಿಟಿ ರವಿ, ಬಿಜೆಪಿ ಪಕ್ಷ ಲಿಂಗಾಯುತ ಸಮುದಾಯದ ನಾಯಕರರಾದ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ಸಿದ್ಧವಿದೆ. ಲಿಂಗಾಯುತ ಸಮುದಾಯದ ಮೇಲೆ ಕಾಳಜಿ ಇರುವ ನೀವು ಏಕೆ ಕಾಂಗ್ರೆಸ್‍ಗೆ ರಾಜೀನಾಮೆ ನೀಡಿ ಬಿಜೆಪಿಗೆ ಬಂದು ಲಿಂಗಾಯುತ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಬಾರದು ಎಂದು ಪ್ರಶ್ನೆ ಕೇಳುವ ಮೂಲಕ ಕಲೆಳೆದಿದ್ದಾರೆ.

    ಪಾಟೀಲ್ ಹೇಳಿದ್ದೇನು?
    ಮಾಧ್ಯಮಗಳ ಜೊತೆ ವಿಜಯಪುರದಲ್ಲಿ ಮಾತನಾಡಿದ ಪಾಟೀಲ್ ಅವರು, ಸುರೇಶ್ ಅಂಗಡಿ ಹಾಗೂ ಪ್ರಹ್ಲಾದ್ ಜೋಶಿಗೆ ಮಾನದಂಡ ಬೇರೆ-ಬೇರೆಯಾಗಿದೆ. ಇಬ್ಬರು ನಾಲ್ಕು ಬಾರಿ ಗೆದ್ದು ಬಂದಿದ್ದು, ಅನುಭವ ಹೊಂದಿದ್ದಾರೆ. ಆದರೆ ಪ್ರಹ್ಲಾದ್ ಜೋಶಿಗೆ ಕ್ಯಾಬಿನೆಟ್ ಸ್ಥಾನ ಸಿಕ್ಕಿದರೆ ಸುರೇಶ್ ಅಂಗಡಿಯವರು ರಾಜ್ಯ ಸಚಿವರು. ಇಬ್ಬರು ಒಂದೇ ಸಮಾನವಾಗಿದ್ದರೂ ವ್ಯತ್ಯಾಸ ಮಾಡಿದ್ದಾರೆ. ಈ ವಿಚಾರವನ್ನು ಲಿಂಗಾಯತರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದರು.

    ಸುರೇಶ್ ಅಂಗಡಿಯವರಿಗೂ ಕ್ಯಾಬಿನೆಟ್ ದರ್ಜೆ ನೀಡಬೇಕಿತ್ತು. ಇದಕ್ಕೆ ಬಿಜೆಪಿ ನಾಯಕರು ಉತ್ತರ ನೀಡಬೇಕು. ಇದು ಒಂದು ದೊಡ್ಡ ಅನ್ಯಾಯ. ಈ ಮೂಲಕ ಲಿಂಗಾಯತರಿಗೆ ಅಗೌರವ ತೋರಿಸಿದ್ದಾರೆ. ಪಾಪ ಸುರೇಶ್ ಅಂಗಡಿಯವರು ಕೇಂದ್ರದ ರಾಜ್ಯ ಸಚಿವರು. ಅದಕ್ಕಾಗಿ ಪ್ರಹ್ಲಾದ್ ಜೋಶಿ ಕಡೆಗೆ ಅಂಗಡಿ ನೋಡಬೇಕು. ಸ್ವಾಭಿಮಾನವಿದ್ದರೆ ಸುರೇಶ್ ಅಂಗಡಿ ಜಾಗದಲ್ಲಿ ನಾನು ಇದ್ದಿದ್ದರೆ ಸಚಿವ ಸ್ಥಾನ ತಿರಸ್ಕಾರ ಮಾಡುತ್ತಿದ್ದೆ ಎಂದು ಹೇಳಿಕೆ ನೀಡಿದ್ದರು.