Tag: Suresh Itnal

  • ಅಂಜನಾದ್ರಿಯಲ್ಲಿ ಮತ್ತೆ ವಿವಾದ – ಹೊರಗಿನ ಅರ್ಚಕರಿಂದ ಪೂಜೆ ಮಾಡಿಸಿದ ನೂತನ ಡಿಸಿ ಸುರೇಶ್

    ಅಂಜನಾದ್ರಿಯಲ್ಲಿ ಮತ್ತೆ ವಿವಾದ – ಹೊರಗಿನ ಅರ್ಚಕರಿಂದ ಪೂಜೆ ಮಾಡಿಸಿದ ನೂತನ ಡಿಸಿ ಸುರೇಶ್

    ಕೊಪ್ಪಳ: ಜಿಲ್ಲೆಯ ಅಂಜನಾದ್ರಿಯಲ್ಲಿ (Anjanadri) ಮತ್ತೆ ಪೂಜೆ ವಿವಾದ ಶುರುವಾಗಿದೆ. ಆಂಜನೇಯ ಸ್ವಾಮಿ (Anjaneya Swamy) ದರ್ಶನಕ್ಕೆ ಬಂದ ನೂತನ ಡಿಸಿ ಸುರೇಶ್ (DC Suresh) ಅವರು ಹೊರಗಿನ ಅರ್ಚಕನಿಂದ ಪೂಜೆ ಮಾಡಿಸಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

    ಕೊಪ್ಪಳ ನೂತನ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಅವರು ಮೊದಲ ಬಾರಿಗೆ ಅಂಜನಾದ್ರಿಗೆ ಭೇಟಿ ನೀಡಿದ್ದು, ಈ ವೇಳೆ ಆಂಜನೇಯ ಸ್ವಾಮಿ ದರ್ಶನ ಮಾಡುವಾಗ ಹೊರಗಿನಿಂದ ಅರ್ಚಕನನ್ನು ಕರೆತಂದು ಪೂಜೆ ನೆರವೇರಿಸಿದ್ದಾರೆ. ಸೌಜನ್ಯಕ್ಕಾದರೂ ಪ್ರಧಾನ ಅರ್ಚಕ ವಿದ್ಯಾದಾಸ ಬಾಬಾರನ್ನು ಮಾತನಾಡಿಸಬೇಕಿತ್ತು. ಆದರೆ ಮಾತಾಡಿಸದೇ ಹಾಗೇ ಹೋಗಿದ್ದಾರೆ. ಜಿಲ್ಲಾಧಿಕಾರಿಯ ಈ ನಡೆ ಆಂಜನೇಯಸ್ವಾಮಿ ಭಕ್ತರ ಅಸಮಾಧಾನಕ್ಕೆ ಕಾರಣವಾಗಿದೆ.ಇದನ್ನೂ ಓದಿ: ಯಾರ ಕೈಗೂ ಸಿಗದೇ ಸರಳವಾಗಿ ಹುಟ್ಟುಹಬ್ಬ ಆಚರಿಸಿದ ರಿಷಬ್ ಶೆಟ್ಟಿ

    ಸುಪ್ರೀಂ ಕೋರ್ಟ್ ವಿದ್ಯಾದಾಸ ಬಾಬಾ ಅವರಿಗೆ ಪೂಜೆಯ ಹಕ್ಕು ನೀಡಿದೆ. ಆದರೆ, ಕಳೆದ ಹಲವು ತಿಂಗಳಿನಿಂದ ಅಧಿಕಾರಿಗಳು ಬಾಬಾಗೆ ಕಿರುಕುಳ ನೀಡುತ್ತಾ ಧಾರ್ಮಿಕ ಕಾರ್ಯಗಳಿಗೆ ಅಡಚಣೆ ಉಂಟು ಮಾಡುತ್ತಿದ್ದಾರೆ ಎಂಬ ಆರೋಪವಿದೆ. ಈಗ ಡಿಸಿ ಕೂಡ ಇದೇ ವರ್ತನೆ ತೋರಿದ್ದಾರೆ.

    ಪೂಜಾ ಕಾರ್ಯಗಳ ಚಿತ್ರೀಕರಣದ ವೇಳೆಯೂ ಆಡಳಿತ ಅಧಿಕಾರಿ ಎಂ.ಹೆಚ್.ಪ್ರಕಾಶರಾವ್ ವಿದ್ಯಾದಾಸ ಬಾಬಾರನ್ನು ತಡೆದಿದ್ದಾರೆ. ಇಷ್ಟೆಲ್ಲಾ ಆದರೂ ಡಿಸಿ ಸುರೇಶ್ ಮಾತ್ರ ನನಗೂ ಇದಕ್ಕೂ ಸಂಬಂಧ ಇಲ್ಲ ಎನ್ನುವಂತೆ ದೇವರ ದರ್ಶನ ಪಡೆದು ಹೋಗಿದ್ದಾರೆ. ಭಕ್ತರಿಗೆ ಮಂಗಳಾರತಿ ನಿಷೇಧಿಸಿರುವ ಜಿಲ್ಲಾಡಳಿತ ಅಧಿಕಾರಿಗಳಿಗೆ ಮಾತ್ರ ಮಂಗಳಾರತಿ, ವಿಶೇಷ ಅರ್ಚಕರ ಸೌಲಭ್ಯ ಕಲ್ಪಿಸುತ್ತಿದೆ. ಇದು ಸರ್ವಾಧಿಕಾರಿ ಧೋರಣೆ ಎಂದು ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಶಾಲೆ ಬಳಿ ಇದ್ದ ನೇರಳೆ ತಿಂದು 7 ವಿದ್ಯಾರ್ಥಿಗಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು

  • ಸಂಚಾರಿ ಮಾಂಸ ಮಾರಾಟ ಮಳಿಗೆಗೆ ಸುರೇಶ್ ಇಟ್ನಾಳ್ ಚಾಲನೆ

    ಸಂಚಾರಿ ಮಾಂಸ ಮಾರಾಟ ಮಳಿಗೆಗೆ ಸುರೇಶ್ ಇಟ್ನಾಳ್ ಚಾಲನೆ

    – ಚಿಕನ್ 220, ಮಟನ್ 700 ದರ ನಿಗದಿ

    ಹುಬ್ಬಳ್ಳಿ: ಲಾಕ್‍ಡೌನ್ ಹಾಗೂ ರಂಜಾನ್ ಹಿನ್ನೆಲೆಯಲ್ಲಿ ಜನರಿಗೆ ಅನುಕೂಲವಾಗಲಿ ಎಂದು ಮಿಟ್ ಆನ್ ಮಿಲ್ಸ್ (ಮಾಂಸ ಮತ್ತು ಮಾಂಸದಿಂದ ತಯಾರಿಸಿದ ಖಾದ್ಯ ಪದಾರ್ಥಗಳ) ಸಂಚಾರಿ ಮಾರಾಟ ಮಳಿಗೆಗೆ ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ್ ಪಾಲಿಕೆ ಆವರಣದಲ್ಲಿ ಚಾಲನೆ ನೀಡಿದರು.

    ಬಳಿಕ ಮಾತನಾಡಿದ ಅವರು, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಲಾಕ್‍ಡೌನ್ ಜಾರಿಯಲ್ಲಿದ್ದು, ಈ ವೇಳೆಯಲ್ಲಿ ಜನರು ಮನೆಯಿಂದ ಹೊರಬರದಂತೆ ಆದೇಶ ಹೊರಡಿಸಲಾಗಿದೆ. ಅಲ್ಲದೆ ಇದು ರಂಜಾನ್ ತಿಂಗಳ ಹಿನ್ನೆಲೆಯಲ್ಲಿ ಜನರ ಮಾಂಸಕ್ಕೆ ಬೇಡಿಕೆ ಹೆಚ್ಚಿದೆ. ಪರಿಣಾಮ ಅವರ ಪ್ರದೇಶದಲ್ಲಿಯೇ ಮಾಂಸ ಪದಾರ್ಥಗಳನ್ನು ಮುಟ್ಟಿಸುವ ಉದ್ದೇಶದಿಂದ ಮಾಂಸ ಮತ್ತು ಮಾಂಸದಿಂದ ತಯಾರಿಸಿದ ಖಾದ್ಯ ಪದಾರ್ಥಗಳ ಸಂಚಾರಿ ಮಾರಾಟ ಮಳಿಗೆಯನ್ನು ಪ್ರಾರಂಭಿಸಲಾಗಿದೆ ಎಂದರು.

    ಮಿಟ್ ಆನ್ ವಿಲ್ಸ್ ಮೊದಲ ಹಂತದಲ್ಲಿ ಹುಬ್ಬಳ್ಳಿಯ ಎಲ್ಲ ಪ್ರದೇಶಗಳಲ್ಲಿ ಜಾರಿಗೆ ತರಲಾಗಿದ್ದು, ಹಂತ ಹಂತವಾಗಿ ಧಾರವಾಡಕ್ಕೂ ವಿಸ್ತರಿಸಲಾಗುವುದು. ಇನ್ನೂ ಉತ್ತಮ ಗುಣಮಟ್ಟದ ಮಾಂಸವನ್ನು ಕೆಜಿ ಚಿಕನ್‍ಗೆ 220, ಕೆಜಿ ಮಟನ್‍ಗೆ 700 ರೂ. ನಿಗದಿ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ದರದಲ್ಲಿ ಇನ್ನಷ್ಟು ಕಡಿತಗೊಳಿಸಿ ಗ್ರಾಹಕರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಹೇಳಿದರು.

    ಡಾ. ಪ್ರಭು ಬಿರಾದಾರ ಮಾತನಾಡಿ, ಮಾಂಸವನ್ನು ಉಪಯೋಗ ಮಾಡುವುದರಿಂದ ರೋಗಿಗಳಿಗೆ ಇನ್ನಷ್ಟು ವಿಟಮಿನ್ ನೀಡಿ ರೋಗ ನಿರೋಧಕ ಶಕ್ತಿಯನ್ನು ಹೆಚ್ವಿಸುವುದು. ಹಾಗಾಗಿ ಸಾರ್ವಜನಿಕರು ಮಿಟ್ ಆನ್ ವಿಲ್ಸ್ ನ ಉಪಯೋಗ ಪಡೆದುಕೊಳ್ಳಬೇಕೆಂದರು. ಈ ಸಂದರ್ಭದಲ್ಲಿ ಡಾ. ರವಿ ಸಾಲಿಗೌಡರು, ಪಾಲಿಕೆ ಸಹಾಯಕ ಆಯುಕ್ತರು ಎಜೀಜ್ ದೇಸಾಯಿ, ಶ್ರೀಧರ್ ಸಾಮ್ರಾಣಿ ಸೇರಿದಂತೆ ಇತರರು ಇದ್ದರು.