Tag: Suryanarayana Reddy

  • ಚುನಾವಣೆಗೆ ತಯಾರಿ – ಮಂಗಳಮುಖಿಯರ ಮೊರೆ ಹೋದ ನಾರಾ ಭರತ್ ರೆಡ್ಡಿ

    ಚುನಾವಣೆಗೆ ತಯಾರಿ – ಮಂಗಳಮುಖಿಯರ ಮೊರೆ ಹೋದ ನಾರಾ ಭರತ್ ರೆಡ್ಡಿ

    ಬಳ್ಳಾರಿ: ಮಾಜಿ ಶಾಸಕ ಸೂರ್ಯ ನಾರಾಯಣ ಅವರ ಮಗ ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಹಿನ್ನೆಲೆಯಲ್ಲಿ ಮಂಗಳಮುಖಿಯರ ಮೊರೆ ಹೋಗಿದ್ದಾರೆ.

    ನಾರಾ ಭರತ್ ರೆಡ್ಡಿ ಮಂಗಳಮುಖಿಯರಿಗೆ ಉಡಿತುಂಬುವ ಮೂಲಕ ವಿಶೇಷ ಪೂಜೆ ಪುರಸ್ಕಾರ ಮಾಡಿದ್ದಾರೆ. ಭರತ್ ರೆಡ್ಡಿಯವರು ಕಾಂಗ್ರೆಸ್ ಪಕ್ಷದಿಂದ ಬಳ್ಳಾರಿ ಕ್ಷೇತ್ರಕ್ಕೆ ಸ್ಪರ್ಧೆ ಮಾಡಬೇಕೆಂದು ಯೋಜನೆ ನಡೆಸಿದ್ದಾರೆ. 101 ಮಂಗಳಮುಖಿಯರಿಗೆ ಸೀರೆ, ಬೆಳ್ಳಿ ದೀಪ, ಅರಿಶಿನ ಕುಂಕುಮ ಬಟ್ಟಲು ಸೇರಿದಂತೆ ಇತ್ಯಾದಿ ವಸ್ತುಗಳನ್ನು ನೀಡಿದ್ದಾರೆ. ಇದನ್ನೂ ಓದಿ: ಸಿಎಂ ತವರು ಜಿಲ್ಲೆಗೂ ಕಾಲಿಟ್ಟ ಹಿಜಬ್, ಕೇಸರಿ ಶಾಲು ಫೈಟ್ – ವಿದ್ಯಾರ್ಥಿಗಳನ್ನ ಹೊರಹಾಕಿದ ಕಾಲೇಜು ಸಿಬ್ಬಂದಿ

    ಕೇರಳ ಮೂಲದ ಜ್ಯೋತಿಷಿಗಳ ಸಲಹೆ ಮೇರೆಗೆ ಮಂಗಳ ಮುಖಿಯರಿಗೆ ಪೂಜೆ ಸಲ್ಲಿಸಿದ್ದಾರೆ. ಮಂಗಳ ಮುಖಿಯರಿಗೆ ಪೂಜೆ ಮಾಡಿದರೇ ಟಿಕೆಟ್ ಸಿಗುತ್ತದೆ ಹಾಗೂ ನೀವು ಚುನಾವಣೆಯಲ್ಲಿ ಗೆಲ್ಲಬಹುದು ಎನ್ನುವ ನಂಬಿಕೆಯಿದೆ ಎಂದು ಸಲಹೆ ನೀಡಿದ್ದರು. ಇನ್ನೂ ಚುನಾವಣೆಗೆ ಒಂದುವರೆ ವರ್ಷ ಇರುವಾಗಲೇ ಚುನಾವಣೆ ಸಿದ್ಧತೆ ಮಾಡಿಕೊಂಡಿದ್ದಾರೆ.

  • ಆನಂದ್‍ಸಿಂಗ್ ಜೊತೆ ರಾಜಿಗೆ ಕಂಪ್ಲಿ ಗಣೇಶ್ ಕಸರತ್ತು!

    ಆನಂದ್‍ಸಿಂಗ್ ಜೊತೆ ರಾಜಿಗೆ ಕಂಪ್ಲಿ ಗಣೇಶ್ ಕಸರತ್ತು!

    ಬಳ್ಳಾರಿ: ಮೂರು ತಿಂಗಳ ಹಿಂದೆ ಬಿಡದಿ ರೆಸಾರ್ಟ್ ನಲ್ಲಿ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ್ದ ಕಂಪ್ಲಿ ಗಣೇಶ್ ಈಗ ರಾಜಿ ಪಂಚಾಯ್ತಿಗೆ ಮುಂದಾಗಿದ್ದಾರೆ.

    ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಆನಂದ್ ಸಿಂಗ್ ಭೇಟಿ ಮಾಡಿ ತಪ್ಪಾಯ್ತು ಕ್ಷಮಿಸಿಬಿಡಿ, ಇನ್ಮುಂದೆ ನಿಮ್ಮ ತಂಟೆಗೆ ಬರಲ್ಲ ಎಂದು ಕ್ಷಮೆ ಕೇಳಿದ್ದಾರೆ. ಸುಮಾರು 1 ಗಂಟೆಗಳ ಕಾಲ ಆನಂದ್ ಸಿಂಗ್ ಜೊತೆ ಚರ್ಚೆ ನಡೆಸಿದ ಗಣೇಶ್ ಇನ್ಮುಂದೆ ಆನಂದ್ ಸಿಂಗ್ ಮಾರ್ಗದರ್ಶನದಲ್ಲೇ ನಡೆಯೋದಾಗಿ ಹೇಳಿದ್ದಾರೆ.

    ಹೊಸಪೇಟೆಯಲ್ಲಿ ವಾಲ್ಮೀಕಿ ಸಮುದಾಯ ಹಾಗೂ ಸಿಂಗ್ ಕುಟುಂಬದವರು ಸಹಬಾಳ್ವೆಯಿಂದ ಇರಲು ಆನಂದ್ ಸಿಂಗ್ ಈ ಸಂಧಾನಕ್ಕೆ ಒಪ್ಪಿದ್ದಾರೆ ಎನ್ನಲಾಗಿದೆ. ಆದರೆ ರೌಡಿ ಎಂಎಲ್‍ಎ ಗಣೇಶ್‍ರನ್ನು ಶಾಸಕ ಆನಂದ್ ಸಿಂಗ್ ಕ್ಷಮಿಸಿದ್ರೂ, ಪತ್ನಿ ಹಾಗೂ ಕುಟುಂಬ ಸದಸ್ಯರು ಕ್ಷಮಿಸೋದಿಲ್ಲ ಅನ್ನೋ ಮಾತುಗಳು ಕೇಳಿಬಂದಿದೆ.

    ಇತ್ತ ಜೈಲಿನಿಂದ ರಿಲೀಸ್ ಆಗಿರುವ ಕಂಪ್ಲಿ ಶಾಸಕ ಜೆ ಎನ್ ಗಣೇಶ್, ಬಳ್ಳಾರಿ ರಾಜಕೀಯದಲ್ಲಿ ಮತ್ತೆ ಬ್ಯುಸಿ ಆಗಿದ್ದಾರೆ. ನನ್ನ ಮತ್ತು ಆನಂದ್ ಸಿಂಗ್ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಮ್ಮ ನಡುವೆ ಯಾವುದೋ ಶಕ್ತಿ ಕೆಲಸ ಮಾಡಿದೆ ಎಂದು ಹೇಳಿದ್ದರು.

    ಜೈಲಿಂದ ಹೊರಬಂದ ಬಳಿಕ ಕೆಪಿಸಿಸಿ ಉಪಾಧ್ಯಕ್ಷ ಸೂರ್ಯನಾರಾಯಣ ರೆಡ್ಡಿಯನ್ನ ಭೇಟಿ ಮಾಡಿದ್ದರು. ತಂದೆ ಸಮಾನರಾದ, ನನ್ನ ರಾಜಕೀಯ ಗುರು ಸೂರ್ಯನಾರಾಯಣ ರೆಡ್ಡಿಯವರನ್ನು ಭೇಟಿಯಾಗಿ ಚರ್ಚೆ ಮಾಡಿದ್ದೇನೆ. ಉಪಚುನಾವಣೆಯಲ್ಲಿ ಉಗ್ರಪ್ಪ ಅವರನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿದ್ದೇವೆ. ಚುನಾವಣೆಯ ಮುನ್ನ ಇದ್ದ ಸ್ಥಿತಿ ಬೇರೆ, ಎರಡು ದಿನಗಳಿದ್ದಂತೆ ಚುನಾವಣೆ ಪರಿಸ್ಥಿತಿ ಬೇರೆ ಇತ್ತು ಎಂದು ಗಣೇಶ್ ಹೇಳಿದ್ದರು.

    ಕೆಪಿಸಿಸಿ ಉಪಾಧ್ಯಕ್ಷ ಸೂರ್ಯನಾರಾಯಣ ರೆಡ್ಡಿ ಅವರು, ಈ ಹಲ್ಲೆ ಅಚಾನಕ್ ಆಗಿ ನಡೆದ ಘಟನೆ ಆಗಿದೆ. ಆನಂದ್ ಸಿಂಗ್ ಹಾಗೂ ಗಣೇಶ್ ಇಬ್ಬರನ್ನೂ ಸಂಧಾನ ಮಾಡಲಾಗುತ್ತೆ ಎಂದು ಹೇಳಿದ್ದರು.

  • ಏಯ್ ರೆಡ್ಡಿ ಬಾರಪ್ಪ ನೀನು ಎಂದ ಸಿಎಂ – ಊಹುಂ ನಾ ಬರಕಿಲ್ಲ ಎಂದ ಮಾಜಿ ಶಾಸಕ

    ಏಯ್ ರೆಡ್ಡಿ ಬಾರಪ್ಪ ನೀನು ಎಂದ ಸಿಎಂ – ಊಹುಂ ನಾ ಬರಕಿಲ್ಲ ಎಂದ ಮಾಜಿ ಶಾಸಕ

    ಬಳ್ಳಾರಿ: ನಗರದಲ್ಲಿ ನಡೆದ ಸಮಾವೇಶದಲ್ಲಿ ಮಾಜಿ ಶಾಸಕರೊಬ್ಬರನ್ನು ವೇದಿಕೆಗೆ ತರಲು ಸಿಎಂ ಹರಸಾಹಸ ಪಟ್ಟ ಘಟನೆ ನಡೆಯಿತು.

    ಸ್ಥಳೀಯ ಮುಖಂಡರಿಗೆ ವೇದಿಕೆ ನೀಡದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ ವೇದಿಕೆಯಿಂದ ದೂರ ಉಳಿದಿದ್ದರು. ವಿಷಯ ತಿಳಿದ ಸಿಎಂ ಸಿದ್ದರಾಮಯ್ಯ ಬಾ ರೆಡ್ಡಿ ಅಂತಾ ಕೂಗಿ ಕರೆದ್ರೂ ಬರಲಿಲ್ಲ. ಕೊನೆಗೆ ಸಿ.ಎಂ ಇಬ್ರಾಹಿಂ ಅವರೇ ಕೆಳಗಿಳಿದು ಸೂರ್ಯನಾರಾಯಣ ರೆಡ್ಡಿಯನ್ನು ವೇದಿಕೆಗೆ ಕರೆತಂದಿದ್ದು ವಿಶೇಷವಾಗಿತ್ತು. ಇದನ್ನು ಓದಿ: ನಿಮ್ ಜೊತೆ ಬರಲ್ಲ, ವೋಟು ಹಾಕಲ್ಲ- ಪ್ರಚಾರದ ವೇಳೆ ಸಿದ್ದು ಮರಿಸ್ವಾಮಿ ಮಾತಿನ ಜಟಾಪಟಿ

    ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ, ಯಡಿಯೂರಪ್ಪ, ಹಾಗೂ ಕುಮಾರಸ್ವಾಮಿ ಎಷ್ಟೇ ತಿಪ್ಪರಲಾಗ ಹಾಕಿದ್ರೂ ಸಿಎಂ ಆಗಲ್ಲ, ನಾನೇ ಸಿಎಂ ಆಗೋದು. ಜೆಡಿಎಸ್-ಬಿಜೆಪಿ ಸರ್ಕಾರ ರಚನೆಗೆ ದಿನಾಂಕ ನಿಗದಿ ಮಾಡಿದ್ದಾರೆ. ಆದ್ರೆ ಅವರ ಕನಸು ಈಡೇರಲ್ಲ, ಬಿಜೆಪಿಯ ಅಲಿಬಾಬಾ ಮತ್ತು 40 ಮಂದಿ ಕಳ್ಳರು ಮತ್ತೆ ಒಂದಾಗಿದ್ದಾರೆ. ನಮ್ಮನ್ನು ಸೋಲಿಸಲು ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಅಂತಾ ಗುಡುಗಿದ್ರು. ಇದನ್ನೂ ಓದಿ: ಸಿಎಂ ಜೊತೆ ಮಾತಿನ ಜಟಾಪಟಿ ನಡೆಸಿದ್ದ ಮರಿಸ್ವಾಮಿಗೆ ಎಚ್‍ಡಿಕೆಯಿಂದ ಸನ್ಮಾನ