Tag: sushil kumar modi

  • ಬಿಹಾರ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ನಿಧನ

    ಬಿಹಾರ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ನಿಧನ

    ಪಾಟ್ನಾ: ಬಿಹಾರದ (Bihar) ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ (Sushil Kumar Modi) ಅವರು ಸೋಮವಾರ 72ನೇ ವಯಸ್ಸಿನಲ್ಲಿ ಸೋಮವಾರ ನಿಧನರಾಗಿದ್ದಾರೆ.

    ಸುಶೀಲ್ ಕುಮಾರ್ ಮೋದಿ ಅವರು ಈ ವರ್ಷ ಏಪ್ರಿಲ್‌ನಲ್ಲಿ ದೀರ್ಘ ಕಾಲದ ಕ್ಯಾನ್ಸರ್‌ನಿಂದ (Cancer) ಬಳಲುತ್ತಿರುವ ಕಾರಣದಿಂದಾಗಿ 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ಮಂಗಳವಾರ ರೇವಣ್ಣ ಬಿಡುಗಡೆ – ಕೋರ್ಟ್‌ನಲ್ಲಿ ವಾದ, ಪ್ರತಿವಾದ ಹೇಗಿತ್ತು? ಜಾಮೀನು ಷರತ್ತು ಏನು?

     

    ರಾಜ್ಯಸಭಾ ಮಾಜಿ ಸಂಸದರಾಗಿದ್ದ ಸುಶೀಲ್ ಮೋದಿ ಪಾರ್ಥಿವ ಶರೀರವನ್ನು ಮಂಗಳವಾರ (ಮೇ 14) ಪಾಟ್ನಾದ ರಾಜೇಂದ್ರ ನಗರ ಪ್ರದೇಶದಲ್ಲಿರುವ ಅವರ ನಿವಾಸಕ್ಕೆ ತರಲಾಗುವುದು ಮತ್ತು ಅಂತಿಮ ದರ್ಶನದ ಬಳಿಕ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗುವುದು. ಇದನ್ನೂ ಓದಿ: ಮುಂಬೈನಲ್ಲಿ ಬಿರುಗಾಳಿಗೆ ಉರುಳಿತು ಬೃಹತ್‌ ಬಿಲ್‌ ಬೋರ್ಡ್‌ – 8 ಸಾವು, 59 ಮಂದಿಗೆ ಗಾಯ

    ಸುಶೀಲ್ ಕುಮಾರ್ ಮೋದಿ ಅವರ ನಿಧನಕ್ಕೆ ಬಿಹಾರದ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಸೇರಿದಂತೆ ಹಲವಾರು ಬಿಜೆಪಿ ನಾಯಕರು ದುಃಖ ವ್ಯಕ್ತಪಡಿಸಿದ್ದು, ಸುಶೀಲ್ ಕುಮಾರ್ ಮೋದಿಯವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಶಂಕರಾಚಾರ್ಯರು ಸಂಚರಿಸಿದ್ದ ರಸ್ತೆಯಲ್ಲಿ ಮೋದಿ 6 ಕಿ.ಮೀ ರೋಡ್‌ ಶೋ – ಮಂಗಳವಾರವೇ ನಾಮಪತ್ರ ಸಲ್ಲಿಕೆ ಯಾಕೆ?

  • ಸಲಿಂಗ ಸಂಬಂಧ ಸರಿ.. ಆದ್ರೆ ವಿವಾಹ ಒಪ್ಪುವಂಥದ್ದಲ್ಲ: ಸುಶೀಲ್ ಮೋದಿ

    ಸಲಿಂಗ ಸಂಬಂಧ ಸರಿ.. ಆದ್ರೆ ವಿವಾಹ ಒಪ್ಪುವಂಥದ್ದಲ್ಲ: ಸುಶೀಲ್ ಮೋದಿ

    ನವದೆಹಲಿ: ಸಲಿಂಗ ಸಂಬಂಧಗಳು ಸ್ವೀಕಾರಾರ್ಹವಾದರೂ ಅಂತಹ ವಿವಾಹಗಳು (Marriage) ಒಪ್ಪುವಂತಹದ್ದಲ್ಲ. ಅಂತಹ ವಿವಾಹಗಳಿಗೆ ಅವಕಾಶ ನೀಡುವುದರಿಂದ ವಿಚ್ಛೇದನ, ದತ್ತು ಸ್ವೀಕಾರ ಸೇರಿದಂತೆ ಹಲವು ಹಂತಗಳಲ್ಲಿ ಸಮಸ್ಯೆ ಉದ್ಭವಿಸಲಿದೆ ಎಂದು ಬಿಜೆಪಿ (BJP) ಸಂಸದ ಸುಶೀಲ್ ಕುಮಾರ್ ಮೋದಿ (Sushil Kumar Modi) ಹೇಳಿದ್ದಾರೆ.

    ಸಂಸತ್ತಿನ (Parliament) ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಕೆಲ ಎಡ- ಉದಾರವಾದಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಸಲಿಂಗ ವಿವಾಹದ ಕಾನೂನು (Law) ಮಾನ್ಯತೆಗಾಗಿ ಹೋರಾಟ ನಡೆಸುತ್ತಿದ್ದಾರೆ. ಇಂಥ ಪ್ರಯತ್ನವನ್ನು ಸರ್ಕಾರ ತೀವ್ರವಾಗಿ ವಿರೋಧಿಸಬೇಕು. ದೇಶದ ಸಂಸ್ಕೃತಿಗೆ ಧಕ್ಕೆ ತರುವಂತಹ ಇಂಥ ನೀತಿಯ ಪರವಾಗಿ ನ್ಯಾಯಾಂಗವು ಯಾವುದೇ ತೀರ್ಪು ನೀಡಬಾರದು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ನನಗೆ ಗುಂಡು ಹೊಡೆದ್ರೂ ಟಿಪ್ಪು ಭಾವಚಿತ್ರ ಅಳವಡಿಸಲು ಬಿಡಲ್ಲ – ಯತ್ನಾಳ್

    ಯಾವುದೇ ಕಾನೂನುಗಳು ದೇಶದ ಸಂಪ್ರದಾಯದದೊಂದಿಗೆ ಹೊಂದಿಕೆಯಾಗಬಾರದು. ಭಾರತೀಯ ಸಮಾಜ ಹೇಗಿದೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಇಲ್ಲಿನ ಜನರು ಹೇಗೆ ಅದನ್ನು ಸ್ವೀಕರಿಸಲು ಸಿದ್ಧರಿದ್ದಾರೆ ಎಂಬುದನ್ನು ನಿರ್ಣಯಿಸಬೇಕು. ಸಲಿಂಗ ಸಂಬಂಧವನ್ನು ಅಪರಾಧೀಕರಿಸಲಾಗಿದೆ. ಸಲಿಂಗ ದಂಪತಿಗೆ ಒಟ್ಟಿಗೆ ವಾಸಿಸಲು ಕಾನೂನು ಸ್ಥಾನಮಾನ ನೀಡುವುದು ಬೇರೆ ವಿಚಾರ. ಆದರೆ ಮದುವೆ ಪವಿತ್ರ ಸಂಬಂಧ. ಭಾರತವನ್ನು ಅಮೆರಿಕದಂತೆ (US) ಮಾಡಬೇಡಿ ಎಂದು ಅವರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: 1,050 ರೂ. LPG ಸಿಲಿಂಡರ್ ಇನ್ಮುಂದೆ 500 ರೂ.ಗೆ – ಗುಡ್‌ನ್ಯೂಸ್ ಕೊಟ್ಟ ರಾಜಸ್ಥಾನ ಸಿಎಂ

    ಭಾರತದಲ್ಲಿ ಮುಸ್ಲಿಂ ವೈಯಕ್ತಿಕ ಕಾನೂನು ಅಥವಾ ಯಾವುದೇ ಕ್ರೋಢೀಕರಿಸದ ವೈಯಕ್ತಿಕ ಕಾನೂನಿನಲ್ಲಿ ಸಲಿಂಗ ವಿವಾಹವನ್ನು ಅಂಗೀಕರಿಸಲಾಗುವುದಿಲ್ಲ. ಸಲಿಂಗ ವಿವಾಹವು ದೇಶದಲ್ಲಿ ವೈಯಕ್ತಿಕ ಕಾನೂನುಗಳ ಸೂಕ್ಷ್ಮ ಸಮತೋಲನಕ್ಕೆ ಹಾನಿಯುಂಟು ಮಾಡುತ್ತದೆ. ಇಂತಹ ಮಹತ್ವದ ಸಾಮಾಜಿಕ ವಿಷಯದ ಬಗ್ಗೆ ಇಬ್ಬರು ನ್ಯಾಯಮೂರ್ತಿಗಳು ನಿರ್ಧರಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟ ಸುಶೀಲ್ ಕುಮಾರ್, ಈ ವಿಷಯವು ಸಂಸತ್ತು ಮತ್ತು ಸಮಾಜದಲ್ಲಿ ದೊಡ್ಡಮಟ್ಟದಲ್ಲಿ ಚರ್ಚೆಗೆ ಒಳಪಡಬೇಕಿದೆ ಎಂದು ಸಲಹೆ ನೀಡಿದ್ದಾರೆ.

    ಸರ್ಕಾರವು, ನ್ಯಾಯಾಲಯದಲ್ಲಿ ಇಂಥ ಪ್ರಕರಣಗಳ ವಿರುದ್ಧ ತೀವ್ರವಾಗಿ ವಾದ ಮಂಡಿಸಬೇಕು ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 2025ರವರೆಗೂ ನಿತೀಶ್ ಕುಮಾರ್ ಸಿಎಂ ಆಗಿರುತ್ತಾರೆ: ಸುಶೀಲ್ ಕುಮಾರ್ ಮೋದಿ

    2025ರವರೆಗೂ ನಿತೀಶ್ ಕುಮಾರ್ ಸಿಎಂ ಆಗಿರುತ್ತಾರೆ: ಸುಶೀಲ್ ಕುಮಾರ್ ಮೋದಿ

    ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಬದಲಾಯಿಸಲು ಪಕ್ಷ ಬಯಸಿದೆ ಎಂಬ ವದಂತಿಗಳ ಬಗ್ಗೆ ಬಿಜೆಪಿಯ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಒಂದು ದಶಕಕ್ಕಿಂತಲೂ ಹೆಚ್ಚು ದಿನಗಳ ಕಾಲ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನಿತೀಶ್ ಕುಮಾರ್ ಅವರನ್ನು ಬಿಜೆಪಿಯ ಹೆಚ್ಚು ನಂಬಿಗಸ್ಥ ವ್ಯಕ್ತಿಯಾಗಿ ಸುಶೀಲ್ ಕುಮಾರ್ ಮೋದಿ ಅವರು ಕಾಣುತ್ತಿದ್ದಾರೆ. ಜನಾದೇಶದೊಂದಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ನಿತೀಶ್ ಕುಮಾರ್ ಅವರನ್ನು ಯಾವುದೇ ಕಾರಣಕ್ಕೂ ಬದಲಾಯಿಸುವ ಮಾತೇ ಇಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಯ ರಾತ್ರಿ ದಾಖಲೆಯ 18 ಸಾವಿರ ಫೋನ್ ಕರೆಗಳ ವಿನಿಮಯ

    NITHISH KUMAR

    ರಾಜಕೀಯ ಅಸ್ಥಿರತೆಯನ್ನು ಸೃಷ್ಟಿಸುವ ಗುರಿಯನ್ನು ಹೊಂದಿರುವ ಆಧಾರವಿಲ್ಲದ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಇದೇ ವೇಳೆ ಪ್ರತಿಪಕ್ಷಗಳಿಗೆ ಟಾಂಗ್ ನೀಡಿದರು. ಎನ್‍ಡಿಎ 2020 ರ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ ಹೋರಾಡಿ ಗೆದ್ದಿದೆ ಎಂದು ಸರಣಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಗೆ ಮುಂಬೈ ನಂಟು!

  • ಕಳಪೆ ಪ್ರದರ್ಶನದ ನಂತರವೂ ಗಾಂಧಿ ಕುಟುಂಬಕ್ಕೆ ಸೀಮಿತವಾಯ್ತು ಪಕ್ಷ: ಸುಶೀಲ್‌ ಮೋದಿ ವಾಗ್ದಾಳಿ

    ಕಳಪೆ ಪ್ರದರ್ಶನದ ನಂತರವೂ ಗಾಂಧಿ ಕುಟುಂಬಕ್ಕೆ ಸೀಮಿತವಾಯ್ತು ಪಕ್ಷ: ಸುಶೀಲ್‌ ಮೋದಿ ವಾಗ್ದಾಳಿ

    ನವದೆಹಲಿ: ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕಳಪೆ ಪ್ರದರ್ಶನ ಹಿನ್ನೆಲೆಯಲ್ಲಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಬಿಜೆಪಿ ಸಂಸದ ಸುಶೀಲ್‌ ಕುಮಾರ್‌ ಮೋದಿ ವಾಗ್ದಾಳಿ ನಡೆಸಿದ್ದಾರೆ.

    ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಯುಪಿಯಲ್ಲಿ ಕಾಂಗ್ರೆಸ್‌ನ ಮುಖವಾಗಿದ್ದರು. ‘ನಾನು ಮಹಿಳೆ, ನಾನು ಹೋರಾಡಬಲ್ಲೆ’ ಎಂಬ ಘೋಷಣೆಯೊಂದಿಗೆ ಮಹಿಳೆಯರನ್ನು ದಾರಿತಪ್ಪಿಸಲು ಪ್ರಯತ್ನಿಸಿದರು. ಆದರೆ ಜನರು ಅವರಿಗೆ ಕೇವಲ 2 ಸ್ಥಾನಗಳನ್ನು ನೀಡಿದರು. ಇಷ್ಟೆಲ್ಲಾ ಆದರೂ ಕಾಂಗ್ರೆಸ್ಸಿನ ಯಾವೊಬ್ಬ ನಾಯಕರೂ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಕೇಳಲಿಲ್ಲ ಎಂದು ಸುಶೀಲ್‌ ಮೋದಿ ಟ್ವೀಟ್‌ ಮಾಡಿ ಕುಟುಕಿದ್ದಾರೆ. ಇದನ್ನೂ ಓದಿ: ಬಿಜೆಪಿ ಥೀಮ್ ಸಾಂಗ್‍ಗಳಿಗೆ ಡ್ಯಾನ್ಸ್ ಮಾಡ್ತಿದ್ದವರ ಮೇಲೆ ಎಸ್‍ಪಿ ಕಾರ್ಯಕರ್ತರಿಂದ ಹಲ್ಲೆ

    ವಂಶಪಾರಂಪರ್ಯ ಆಡಳಿತ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿರುವ ಪಕ್ಷವು ಹಲವು ವರ್ಷಗಳಿಂದ ಆತ್ಮಾವಲೋಕನ ಮಾಡಿಕೊಂಡಂತೆ ನಟಿಸುತ್ತಿದೆ ಎಂದು ಟೀಕಿಸಿದ್ದಾರೆ.

    ದೇಶದಲ್ಲಿ ರಾಜಕೀಯವಾಗಿ ಪ್ರಮುಖ ಸ್ಥಾನವನ್ನು ಪಡೆದಿರುವ ಉತ್ತರ ಪ್ರದೇಶದಲ್ಲಿ ಮಹಿಳಾ ಕೇಂದ್ರಿತವಾಗಿ ಕಾಂಗ್ರೆಸ್‌ ಪ್ರಚಾರ ನಡೆಸಿತ್ತು. ಆದರೆ ಆಡಳಿತದಲ್ಲಿ ರಾಜಪ್ರಭುತ್ವದ ಗುಣ ಮತ್ತು ಭ್ರಷ್ಟಾಚಾರಕ್ಕೆ ಆದ್ಯತೆ ನೀಡುತ್ತಲೇ ಬಂದಿದೆ ಎಂದು ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸೋಲಿಗೆ ಗಾಂಧಿ ಕುಟುಂಬದವರಷ್ಟೇ ಹೊಣೆ ಅಲ್ಲ: ಮಲ್ಲಿಕಾರ್ಜುನ ಖರ್ಗೆ

    ಐದು ರಾಜ್ಯಗಳಲ್ಲಿ ನಾಚಿಕೆಗೇಡಿನ ಪ್ರದರ್ಶನದ ನಂತರವೂ ಗಾಂಧಿ ಕುಟುಂಬಕ್ಕೆ ಸೀಮಿತವಾದ ಪಕ್ಷವನ್ನು ಮುಕ್ತಗೊಳಿಸಲು ಕಾಂಗ್ರೆಸ್ ನಾಯಕರಿಗೆ ಧೈರ್ಯವಿಲ್ಲ. ಮುಂದಿನ ಚುನಾವಣೆಯಲ್ಲಿ ರಾಜಸ್ಥಾನ ಮತ್ತು ಛತ್ತೀಸಗಡದಿಂದಲೂ ಪಕ್ಷ ನಿರ್ನಾಮವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

    ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲಿನ ಜವಾಬ್ದಾರಿ ಹೊತ್ತು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು. ಆದರೆ ಸಿಡಬ್ಲ್ಯೂಸಿ ಇವರ ರಾಜೀನಾಮೆ ಅಂಗೀಕರಿಸಲು ನಿರಾಕರಿಸಿತು. ಇದನ್ನೂ ಓದಿ: ಉತ್ತರಪ್ರದೇಶದಲ್ಲಿ BJP ಗೆಲುವಿಗೆ BSP ಕಾರಣ: ಅಶೋಕ್ ಗೆಹ್ಲೋಟ್