Tag: Sushma swaraj

  • Lok Sabha: ಸುಷ್ಮಾ ಸ್ವರಾಜ್‌ ಪುತ್ರಿ ಬಾನ್ಸುರಿ ಸ್ವರಾಜ್‌ಗೆ ಬಿಜೆಪಿ ಟಿಕೆಟ್‌

    Lok Sabha: ಸುಷ್ಮಾ ಸ್ವರಾಜ್‌ ಪುತ್ರಿ ಬಾನ್ಸುರಿ ಸ್ವರಾಜ್‌ಗೆ ಬಿಜೆಪಿ ಟಿಕೆಟ್‌

    – ನವದೆಹಲಿ ಕ್ಷೇತ್ರದಿಂದ ಬಾನ್ಸುರಿ ಸ್ಪರ್ಧೆ

    ನವದೆಹಲಿ: ಕೇಂದ್ರ ಮಾಜಿ ಸಚಿವೆ ಸುಷ್ಮಾ ಸ್ವರಾಜ್ (Sushma Swaraj) ಅವರ ಪುತ್ರಿ ಬಾನ್ಸುರಿ ಸ್ವರಾಜ್ (Bansuri Swaraj) ಮುಂಬರುವ ಲೋಕಸಭಾ ಚುನಾವಣೆಯಲ್ಲಿ (General Elections 2024) ಸ್ಪರ್ಧೆಗೆ ಬಿಜೆಪಿ (BJP) ಟಿಕೆಟ್‌ ನೀಡಿದೆ.

    ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದ್ದು, ಬಾನ್ಸುರಿ ಸ್ವರಾಜ್ ಅವರು ನವದೆಹಲಿ (New Delhi) ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷವು ಘೋಷಿಸಿತು. ಇದನ್ನೂ ಓದಿ: BJP First list: 3ನೇ ಬಾರಿಗೆ ವಾರಣಾಸಿಯಿಂದ ಮೋದಿ ಕಣಕ್ಕೆ

    ಮೊದಲ ಪಟ್ಟಿಯಲ್ಲಿ ತಮ್ಮ ಹೆಸರು ಘೋಷಣೆಯಾಗಿದ್ದಕ್ಕೆ ಸಂಸತ ವ್ಯಕ್ತಪಡಿಸಿರುವ ಬಾನ್ಸುರಿ ಸ್ವರಾಜ್‌, ನನ್ನ ತಾಯಿ ಸ್ಥಾಪಿಸಿದ ಪರಂಪರೆಗೆ ತಕ್ಕಂತೆ ಬದುಕಲು ಪ್ರಯತ್ನಿಸುತ್ತೇನೆ. ಅವರು ಸ್ವರ್ಗದಿಂದ ನನಗೆ ಆಶೀರ್ವಾದ ಮಾಡುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

    ನನಗೆ ಅಮ್ಮನ ಆಶೀರ್ವಾದವಿದೆ. ಆದರೆ ಈ ಸಾಧನೆಯು ಬಾನ್ಸುರಿ ಸ್ವರಾಜ್ ಅವರದ್ದಲ್ಲ. ದೆಹಲಿ ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರದ್ದು ಎಂದು ಬಾನ್ಸುರಿ ಮಾತನಾಡಿದ್ದಾರೆ. ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

    ಹೆಸರಾಂತ ವಕೀಲರಾದ ಬಾನ್ಸುರಿ ಸ್ವರಾಜ್ ಅವರು ರಾಜಕೀಯ ಕ್ಷೇತ್ರಕ್ಕೆ ಕಾನೂನು ಪ್ರಕ್ರಿಯೆಗಳಲ್ಲಿ ಅನುಭವದ ಸಂಪತ್ತನ್ನು ತರುತ್ತಾರೆ. ಕಳೆದ ವರ್ಷ ಬಿಜೆಪಿಯು ಅವರನ್ನು ಬಿಜೆಪಿ ದೆಹಲಿಯ ಕಾನೂನು ಘಟಕದ ಸಹ ಸಂಚಾಲಕರನ್ನಾಗಿ ನೇಮಿಸಿತ್ತು.

    ಬಾನ್ಸುರಿ ಸ್ವರಾಜ್ ಅವರು ವಕೀಲ ವೃತ್ತಿಯಲ್ಲಿ 15 ವರ್ಷಗಳ ಅನುಭವ ಹೊಂದಿದ್ದಾರೆ. ಅವರು 2007 ರಲ್ಲಿ ದೆಹಲಿಯ ಬಾರ್ ಕೌನ್ಸಿಲ್‌ಗೆ ಸೇರಿಕೊಂಡರು. ವಾರ್ವಿಕ್ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಪದವಿಪೂರ್ವ ಅಧ್ಯಯನ ಪೂರ್ಣಗೊಳಿಸಿದ ನಂತರ, ಅವರು ಪ್ರತಿಷ್ಠಿತ BPP ಕಾನೂನಿ ಕಾಲೇಜಿನಲ್ಲಿ ಕಾನೂನು ಪದವಿಯನ್ನು ಪಡೆದರು. ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸೇಂಟ್ ಕ್ಯಾಥರೀನ್ ಕಾಲೇಜಿನಲ್ಲಿ ತನ್ನ ಸ್ನಾತಕೋತ್ತರ ಅಧ್ಯಯನ ಪೂರ್ಣಗೊಳಿಸಿದ್ದರು. ಇದನ್ನೂ ಓದಿ: ಲೋಕಸಭೆಗೆ ಬಿಜೆಪಿ ಅಭ್ಯರ್ಥಿಗಳ ಫಸ್ಟ್‌ ಲಿಸ್ಟ್‌ ಔಟ್‌ – ಮಥುರಾದಿಂದ ಹೇಮಾ ಮಾಲಿನಿ ಕಣಕ್ಕೆ

  • ಸಕ್ರಿಯ ರಾಜಕಾರಣಕ್ಕೆ ಸುಷ್ಮಾ ಸ್ವರಾಜ್ ಪುತ್ರಿ

    ಸಕ್ರಿಯ ರಾಜಕಾರಣಕ್ಕೆ ಸುಷ್ಮಾ ಸ್ವರಾಜ್ ಪುತ್ರಿ

    ನವದೆಹಲಿ: ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ (Sushma Swaraj) ಅವರ ಪುತ್ರಿ ಬಾನ್ಸುರಿ ಸ್ವರಾಜ್ ಸಕ್ರಿಯ ರಾಜಕಾರಣಕ್ಕೆ ಬಂದಿದ್ದು, ಬಿಜೆಪಿ (BJP) ಅವರನ್ನು ದೆಹಲಿಯ ಕಾನೂನು ಘಟಕದ ಸಹ ಸಂಚಾಲಕರನ್ನಾಗಿ ನೇಮಕ ಮಾಡಿದೆ.

    ಬನ್ಸುರಿ ಸ್ವರಾಜ್ (Bansuri Swaraj) ಅವರು ಕಾನೂನು ಪ್ರಕ್ರಿಯೆಗಳಲ್ಲಿ ಅನುಭವ ಹೊಂದಿರುವ ವಕೀಲರಾಗಿದ್ದಾರೆ. ಈಗಾಗಲೇ ಅವರು ಸುಪ್ರೀಂ ಕೋರ್ಟ್‍ನಲ್ಲಿ (Supreme Court) ಕೆಲಸ ಮಾಡುತ್ತಿದ್ದಾರೆ.

    ಬನ್ಸುರಿ ಸ್ವರಾಜ್‍ರ ವಿದ್ಯಾರ್ಹತೆಯೇನು?: ಇಂಗ್ಲೆಂಡ್‍ನ ವಾರ್ವಿಕ್ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಪದವಿಯನ್ನು ಪಡೆದಿದ್ದಾರೆ. ನಂತರ ಲಂಡನ್‍ನ ಬಿಪಿಪಿ ಕಾನೂನು ಶಾಲೆಯಿಂದ ಪದವಿಯನ್ನು ಪಡೆದರು. ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪಡೆದರು. ಇದನ್ನೂ ಓದಿ: ಬಿಜೆಪಿ ಮಾಜಿ ಸಂಸದ ಮಂಜುನಾಥ್ ಕುನ್ನೂರು, ಪುತ್ರ ಶೀಘ್ರವೇ ಕಾಂಗ್ರೆಸ್‌ಗೆ ಸೇರ್ಪಡೆ

    ಅಷ್ಟೇ ಅಲ್ಲದೇ ಕಾನೂನು ವೃತ್ತಿಯಲ್ಲಿ ಅವರಿಗೆ 16 ವರ್ಷಗಳ ಅನುಭವವಿದ್ದು, ದೆಹಲಿಯ ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಸುಪ್ರೀಂ ಕೋರ್ಟ್‍ನಲ್ಲಿ ಹಲವು ಹೈಪ್ರೋಫೈಲ್ ಕೇಸ್‍ಗಳಿಗೂ ವಾದಿಸಿದ್ದರು. ರಿಯಲ್ ಎಸ್ಟೇಟ್, ತೆರಿಗೆ, ಅಂತಾರಾಷ್ಟ್ರೀಯ ವಾಣಿಜ್ಯ ಮಧ್ಯಸ್ಥಿಕೆಗಳು ಮತ್ತು ಹಲವಾರು ಕ್ರಿಮಿನಲ್ ಕೇಸ್‍ಗಳನ್ನೊಳಗೊಂಡ ವಿವಾದಗಳನ್ನು ನಿಭಾಯಿಸಿದ್ದಾರೆ.

    ಈ ಹಿಂದೆಯೂ ಕಾನೂನು ವಿಚಾರದಲ್ಲಿ ಬಿಜೆಪಿಗೆ ಕೆಲವು ಸಲಹೆಯನ್ನು ನೀಡುತ್ತಿದ್ದರು. ಇದೀಗ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ದೆಹಲಿ ಬಿಜೆಪಿಯ ಕಾನೂನು ವಿಭಾಗದ ಸಹ ಸಂಚಾಲಕನಾಗಿ ಪಕ್ಷಕ್ಕೆ ಹೆಚ್ಚು ಸಕ್ರಿಯವಾಗಿ ಸೇವೆ ಸಲ್ಲಿಸಲು ನನಗೆ ಔಪಚಾರಿಕವಾಗಿ ಅವಕಾಶ ನೀಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಜಾತಿ ಬಲ ಇಲ್ಲದಿದ್ದರೂ, ಅಭಿವೃದ್ಧಿ ನಂಬಿ ಗೆದ್ದು ಸಚಿವರಾದ ಬಿ.ಸಿ. ನಾಗೇಶ್

  • ಮಗಳಿಗೆ ಸುಷ್ಮಾ ಸ್ವರಾಜ್ ಎಂದು ಹೆಸರಿಡಲು ಮುಂದಾದ ಬಿಜೆಪಿ ಕಾರ್ಯಕರ್ತ

    ಮಗಳಿಗೆ ಸುಷ್ಮಾ ಸ್ವರಾಜ್ ಎಂದು ಹೆಸರಿಡಲು ಮುಂದಾದ ಬಿಜೆಪಿ ಕಾರ್ಯಕರ್ತ

    ಕೊಪ್ಪಳ: ಅಭಿಮಾನಿಯೊಬ್ಬರು ತನ್ನ ಮಗಳಿಗೆ ದೆಹಲಿಯ ಮಾಜಿ ಮುಖ್ಯಮಂತ್ರಿ ಸುಷ್ಮಾ ಸ್ವರಾಜ್ ಎಂದು ನಾಮಕರಣ ಮಾಡಲು ಮುಂದಾಗಿದ್ದಾನೆ.

    ಹೌದು, ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪೂರ ನಿವಾಸಿಯಾಗಿರುವ ಬಿಜೆಪಿ ಕಾರ್ಯಕರ್ತ ದೇವರಾಜ್ ಅವರು ತಮ್ಮ ಮಗಳಿಗೆ ದಿವಂಗತೆ ಸುಷ್ಮಾ ಸ್ವರಾಜ್ ಹೆಸರಿಡಲು ಮುಂದಾಗಿದ್ದಾರೆ. ವಿಶೇಷವೆಂದರೆ ಈ ಹೆಸರು ನಾಮಕರಣ ಮಾಡಲು ಸುಷ್ಮಾ ಸ್ವರಾಜ್ ಅವರ ಮಾನಸಪುತ್ರರಾದ ಸಚಿವ ಬಿ. ಶ್ರೀರಾಮುಲು ಹಾಗೂ ಜಿ. ಜನಾರ್ದನರಡ್ಡಿ ಅವರೇ ಬರಬೇಕು ಎಂದು ದೇವರಾಜ ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಮೆಟ್ರೋದಲ್ಲಿ ಮಹಿಳೆಗೆ ಕಿರುಕುಳ – ಸೀನಿಯರ್ ಮ್ಯಾನೇಜರ್, ಎಂಬಿಎ ವಿದ್ಯಾರ್ಥಿ ಅರೆಸ್ಟ್

    ಸುಷ್ಮಾ ಸ್ವರಾಜ್ ಅವರಿಗೆ ಜನಾರ್ದನ ರೆಡ್ಡಿ ಹಾಗೂ ರಾಮುಲು ಮಾನಸ ಪುತ್ರರು. ಹೀಗಾಗಿ ನನ್ನ ಮಗಳಿಗೆ ಅವರು ಬಂದು ನಾಮಕಾರಣ ಮಾಡಬೇಕು. ಅವರು ಬರುವವರೆಗೂ ಮಗಳಿಗೆ ನಾಮಕಾರಣ ಮಾಡಲ್ಲ ಎಂದು ದೇವರಾಜ್ ಹಠ ಹಿಡಿದು ಕುಳಿತುಕೊಂಡಿದ್ದಾರೆ. ಈ ಬಗ್ಗೆ ಜನಾರ್ದನ ರೆಡ್ಡಿ, ರಾಮುಲು ಆಪ್ತ ಸಹಾಯಕರ ಗಮನಕ್ಕೆ ತರಲಾಗಿದೆ ಎಂದು ಹೇಳಿದ್ದಾರೆ.

    ಅಪ್ಪಟ ಸುಷ್ಮಾ ಸ್ವರಾಜ್ ಅಭಿಮಾನಿಯಾಗಿರುವ ದೇವರಾಜ್ ತನಗೆ ಹೆಣ್ಣು ಮಗು ಜನಿಸಿದರೆ ಸುಷ್ಮಾ ಸ್ವರಾಜ್ ಎಂದು ನಾಮಕಾರಣ ಮಾಡುತ್ತೇನೆ ಅಂದುಕೊಂಡಿದ್ದೆ. ಮೊದಲನೆಯದು ಗಂಡು ಮಗುವಾದ ಕಾರಣ ಹೆಸರನ್ನಿಡಲು ಆಗಲಿಲ್ಲ. ಇತ್ತೀಚೆಗೆ ಎರಡನೇಯದಾಗಿ ಹೆಣ್ಣು ಮಗು ಜನಿಸಿದೆ. ಆ ಮಗುವಿಗೆ ನನ್ನ ಆಸೆಯಂತೆ ಸುಷ್ಮಾ ಸವರಾಜ್ ಎಂದು ಹೆಸರಿಡಲು ನಿರ್ಧರಿಸಿರುವುದಾಗಿ ದೇವರಾಜ್ ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವದ ದೊಡ್ಡಣ್ಣನಿಗೆ ಸೆಡ್ಡು ಹೊಡೆದ ಚೀನಾ: ಅಮೆರಿಕದ ಹೌಸ್ ಆಫ್ ಸ್ಪೀಕರ್‌ಗೆ ನಿರ್ಬಂಧ

    Live Tv
    [brid partner=56869869 player=32851 video=960834 autoplay=true]

  • ಪ್ರಧಾನಿ ಮೋದಿ ಸೋದರಳಿಯನ ಮಗಳಿಗೆ ಸುಷ್ಮಾ ಸ್ವರಾಜ್‌ ಹೆಸರು ನಾಮಕರಣ

    ಪ್ರಧಾನಿ ಮೋದಿ ಸೋದರಳಿಯನ ಮಗಳಿಗೆ ಸುಷ್ಮಾ ಸ್ವರಾಜ್‌ ಹೆಸರು ನಾಮಕರಣ

    ನವದೆಹಲಿ: ಕೇಂದ್ರ ಮಾಜಿ ಸಚಿವೆ ಹಾಗೂ ಬಿಜೆಪಿ ವರಿಷ್ಠರಾದ ಸುಷ್ಮಾ ಸ್ವರಾಜ್‌ ಅವರ 70ನೇ ಜನ್ಮದಿನವಾದ ಸೋಮವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು ಕುತೂಹಲಕಾರಿ ಘಟನೆಯ ನೆನಪೊಂದನ್ನು ಹಂಚಿಕೊಂಡಿದ್ದಾರೆ.

    ಪಂಜಾಬ್‌ನ ಜಲಂಧರ್‌ನಿಂದ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿ ಹಿಂದಿರುಗುವಾಗ ಬರೆದ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ಪ್ರಧಾನಿ ಮೋದಿ ಅವರು ದಿವಂಗತ ನಾಯಕಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಸುಷ್ಮಾ ಸ್ವರಾಜ್‌ ಅವರು ಗುಜರಾತ್‌ನ ತಮ್ಮ ಗ್ರಾಮಕ್ಕೆ ಭೇಟಿ ನೀಡಿದ ಸಮಯವನ್ನು ಅವರು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ನವಜೋತ್ ಸಿಂಗ್ ಸಿಧು ನನ್ನ ಸಹೋದರನಿದ್ದಂತೆ: ಚರಣ್‍ಜಿತ್ ಸಿಂಗ್ ಚನ್ನಿ

    25 ವರ್ಷಗಳ ಹಿಂದೆ ನಾನು ಬಿಜೆಪಿಯಲ್ಲಿ ಸಂಘಟಕನಾಗಿ ಕೆಲಸ ಮಾಡುತ್ತಿದ್ದಾಗ, ಸುಷ್ಮಾ ಜಿ ಅವರು ಗುಜರಾತ್‌ನಲ್ಲಿ ಚುನಾವಣಾ ಪ್ರವಾಸದಲ್ಲಿದ್ದರು. ಅವರು ನನ್ನ ಹಳ್ಳಿಯಾದ ವಡ್ನಗರಕ್ಕೆ ಹೋಗಿ ನನ್ನ ತಾಯಿಯನ್ನು ಭೇಟಿಯಾಗಿದ್ದರು. ಆ ಸಮಯದಲ್ಲಿ ನಮ್ಮ ಕುಟುಂಬದಲ್ಲಿ ನನ್ನ ಸೋದರಳಿಯನಿಗೆ ಹೆಣ್ಣು ಮಗು ಜನಿಸಿತ್ತು. ಅವಳ ಹೆಸರಿನಲ್ಲಿ ಜ್ಯೋತಿಷ್ಯ ಕೇಳಿದಾಗ ಜ್ಯೋತಿಷಿಗಳು ಹೆಸರೊಂದನ್ನು ಸೂಚಿಸಿದ್ದರು.

    ಇದಾದ ಬಳಿಕ ಮತ್ತೊಂದು ಟ್ವಿಸ್ಟ್‌ ಬಂತು. ಸುಷ್ಮಾ ಜಿ ಅವರ ಭೇಟಿಯಾದ ನಂತರ ನನ್ನ ತಾಯಿ, ಮಗುವಿಗೆ ಸುಷ್ಮಾ ಎಂದು ಹೆಸರಿಡುವುದಾಗಿ ಹೇಳಿದರು ಎಂದು ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರಾಹುಲ್ ವಿರುದ್ಧ ಹಿಮಂತ ಬಿಸ್ವಾ ವಿವಾದಾತ್ಮಕ ಹೇಳಿಕೆ – ತೆಲಂಗಾಣ ಕಾಂಗ್ರೆಸ್ ನಾಯಕರಿಂದ ದೂರು

    ನನ್ನ ತಾಯಿ ವಿದ್ಯಾವಂತರಲ್ಲ. ಆದರೆ ಆಲೋಚನೆಗಳಲ್ಲಿ ಅವರು ತುಂಬಾ ಆಧುನಿಕರು. ಆ ಸಮಯದಲ್ಲಿ ಎಲ್ಲರೆದರೂ ನಿರ್ಧಾರ ತಿಳಿಸಿದ ಸನ್ನಿವೇಶದ ನೆನಪು ಈಗಲೂ ಇದೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಅವರ ತಾಯಿಗೆ ಈಗ 90 ವರ್ಷ.

    ಸುಷ್ಮಾ ಸ್ವರಾಜ್‌ ಅವರು 2019ರ ಆಗಸ್ಟ್‌ ತಿಂಗಳಲ್ಲಿ ನಿಧನರಾಗಿದರು. ಅವರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿದಾಶಾಂಗ ಸಚಿವೆಯಾಗಿ ಕಾರ್ಯನಿರ್ವಹಿಸಿದ್ದರು. ಇದನ್ನೂ ಓದಿ: ತ್ರಿವಳಿ ತಲಾಕ್ ವಿರುದ್ಧದ ಕಾನೂನು ಮುಸ್ಲಿಂ ಮಹಿಳೆಯರ ಕುಟುಂಬ ಉಳಿಸಿದೆ: ಮೋದಿ

  • ಸುಷ್ಮಾಗೆ ಚಿಕಿತ್ಸೆ ಕೊಡಲು ವೈದ್ಯರು ತಯಾರಿರಲಿಲ್ಲ- ಸತ್ಯಾಂಶ ಬಿಚ್ಚಿಟ್ಟ ಪತಿ ಕೌಶಲ್

    ಸುಷ್ಮಾಗೆ ಚಿಕಿತ್ಸೆ ಕೊಡಲು ವೈದ್ಯರು ತಯಾರಿರಲಿಲ್ಲ- ಸತ್ಯಾಂಶ ಬಿಚ್ಚಿಟ್ಟ ಪತಿ ಕೌಶಲ್

    ನವದೆಹಲಿ: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಚಿಕಿತ್ಸೆ ಕೊಡಲು ಏಮ್ಸ್ ವೈದ್ಯರು ತಯಾರಿರಲಿಲ್ಲ. ಕೊನೆಗೆ ಒತ್ತಾಯದ ಮೇರೆಗೆ ಚಿಕಿತ್ಸೆ ಕೊಟ್ಟರು ಎಂದು ಸುಷ್ಮಾ ಅವರು ನಿಧನರಾಗುವ ಮುನ್ನ ಮಾಡಲಾಗಿದ್ದ ಶಸ್ತ್ರಚಿಕಿತ್ಸೆ ಬಗ್ಗೆ ಪತಿ ಸ್ವರಾಜ್ ಕೌಶಲ್ ಸತ್ಯಾಂಶ ಬಿಚ್ಚಿಟ್ಟಿದ್ದಾರೆ.

    ಸುಷ್ಮಾ ಸ್ವರಾಜ್ ಅವರ ಪತಿ ಸ್ವರಾಜ್ ಕೌಶಲ್ ಅವರು ಸರಣಿ ಟ್ವೀಟ್ ಮಾಡಿ, ಪತ್ನಿಯ ಶಸ್ತ್ರಚಿಕಿತ್ಸೆ ಹಾಗೂ ಏಮ್ಸ್ ವೈದ್ಯರ ಬಗ್ಗೆ ತಿಳಿಸಿದ್ದಾರೆ. ಸುಷ್ಮಾ ನಿಧನ ಹೊಂದುವ ಮುನ್ನ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ವೇಳೆ ಏಮ್ಸ್ ವೈದ್ಯರು ಸುಷ್ಮಾಗೆ ಶಸ್ತ್ರಚಿಕಿತ್ಸೆ ಮಾಡಲು ತಯಾರಿರಲಿಲ್ಲ. ನೀವು ವಿದೇಶದಲ್ಲಿ ಕಿಡ್ನಿ ಕಸಿ ಮಾಡಿಸಿ ಎಂದು ಸಲಹೆ ನೀಡಿದ್ದರು. ಆದರೆ ಸುಷ್ಮಾ ಅದಕ್ಕೆ ಒಪ್ಪದೆ ಭಾರತದಲ್ಲೇ ನನಗೆ ಶಸ್ತ್ರಚಿಕಿತ್ಸೆ ನಡೆಯಬೇಕು ಎಂದು ಬಯಸಿದ್ದರು. ಜನರು ನಮ್ಮ ದೇಶದ ವೈದ್ಯರ ಮೇಲೆ ಬಹಳ ನಂಬಿಕೆ ಇಟ್ಟಿದ್ದಾರೆ. ಒಂದು ವೇಳೆ ನಾನು ನಮ್ಮ ವೈದ್ಯರನ್ನೇ ನಂಬದೆ ವಿದೇಶಕ್ಕೆ ಹೋಗಿ ಚಿಕಿತ್ಸೆ ಪಡೆದರೆ ಜನರ ನಂಬಿಕೆಗೆ ಧಕ್ಕೆ ಉಂಟಾಗುತ್ತೆ. ಹೀಗಾಗಿ ನಮ್ಮ ವೈದ್ಯರೇ ನನಗೆ ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ಹೇಳಿದ್ದರು ಅಂತ ಪತ್ನಿ ದೇಶದ ಮೇಲಿಟ್ಟಿರುವ ಪ್ರೀತಿಯನ್ನು ತಿಳಿಸಿದ್ದಾರೆ. ಇದನ್ನೂ ಓದಿ:  ಸುಷ್ಮಾ ಸ್ವರಾಜ್ ಪ್ರೇಮ್ ಕಹಾನಿ – ಸ್ನೇಹಿತರು ಸತಿ, ಪತಿಗಳಾದ ಕಥೆ ಓದಿ

    https://twitter.com/governorswaraj/status/1191434693402644483

    ಏಮ್ಸ್ ವೈದ್ಯರು ತಮಗೆ ಯಾವಾಗ ಶಸ್ತ್ರಚಿಕಿತ್ಸೆ ಮಾಡಬೇಕು ಎನ್ನುವುದನ್ನು ಸುಷ್ಮಾನೇ ನಿರ್ಧರಿಸಿದ್ದರು. ವಿದೇಶದಲ್ಲಿ ಚಿಕಿತ್ಸೆ ಪಡೆಯುವುದನ್ನು ನಿರಾಕರಿಸಿ, ಭಾರತದಲ್ಲೇ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ನೀವು ಕೇವಲ ಶಸ್ತ್ರಚಿಕಿತ್ಸೆಗೆ ಬೇಕಾಗುವ ಉಪಕರಣಗಳನ್ನು ಹಿಡಿದು ನಿಲ್ಲಿ, ಉಳಿದದ್ದೆಲ್ಲಾ ಆ ಕೃಷ್ಣ ನೋಡಿಕೊಳ್ಳುತ್ತಾನೆ ಎಂದು ಸುಷ್ಮಾ ಸ್ವರಾಜ್ ವೈದ್ಯರಿಗೆ ಧೈರ್ಯ ತುಂಬಿದ್ದರು ಅಂತ ಕೌಶಲ್ ಟ್ವೀಟ್‌ನಲ್ಲಿ ಬರೆದು ಪತ್ನಿ ಮಾತುಗಳನ್ನು ನೆನಪಿಸಿಕೊಂಡಿದ್ದಾರೆ.

    https://twitter.com/governorswaraj/status/1191436597255966721

    ಶಸ್ತ್ರಚಿಕಿತ್ಸೆ ನಡೆದ ಮರುದಿನವೇ ಸುಷ್ಮಾ ಕುರ್ಚಿಯಲ್ಲಿ ಕೂತು ಖುಷಿಯಿಂದ ಏಮ್ಸ್ ವೈದ್ಯರನ್ನು ಹೊಗಳಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಗೊಳಿಸುವಲ್ಲಿ ವೈದ್ಯರು ಪಟ್ಟ ಶ್ರಮವನ್ನು ಶ್ಲಾಘಿಸಿದರು. ಹಾಗೂ ಅಲ್ಲಿನ ಸಿಬ್ಬಂದಿ ವರ್ಗಕ್ಕೂ ಅಭಿನಂದನೆ ತಿಳಿಸಿದ್ದರು. ಏಮ್ಸ್ ವೈದ್ಯರು ಜಗತ್ತಿನ ಬೆಸ್ಟ್ ವೈದ್ಯರು ಎಂದು ಹೊಗಿಳಿದ್ದನ್ನು ನೆನೆದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

    https://twitter.com/governorswaraj/status/1191450268027772929

    ಹಾಗೆಯೇ ಸುಷ್ಮಾ ಸ್ವರಾಜ್ ಅನಾರೋಗ್ಯದಿಂದ ಬಳಲುತ್ತಿದ್ದಾಗ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಸಹಾಯ ಮರೆಯಲು ಸಾಧ್ಯವಿಲ್ಲ. ಸುಷ್ಮಾ ಅವರು ಧೈರ್ಯ ತುಂಬುತ್ತಿದ್ದ ರೀತಿ, ವೈದ್ಯರ ಜೊತೆ ನಿರಂತರ ಸಂಪರ್ಕದಲ್ಲಿದ್ದು ಸುಷ್ಮಾ ಅವರ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದ ಪರಿ ಹಾಗೂ ನಮಗೂ ಧೈರ್ಯ ಹೇಳಿದ್ದನ್ನು ನಾನು ಹಾಗೂ ಬನ್ಸುರಿ ಎಂದಿಗೂ ಮರೆಯಲ್ಲ. ಅವರಿಗೆ ನಾವು ಚಿರಋಣಿ ಎಂದು ಮೋದಿಗೆ ಧನ್ಯವಾದ ತಿಳಿಸಿದರು.

    https://twitter.com/governorswaraj/status/1191563447516979200

    ಆಗಸ್ಟ್ 6ರಂದು ಸುಷ್ಮಾ ಸ್ವರಾಜ್ ಅವರು ನಿಧರಾದರು. ಏಮ್ಸ್ ಆಸ್ಪತ್ರೆಯಲ್ಲಿಯೇ ತಮ್ಮ ಕೊನೆಯುಸಿರೆಳೆದಿದ್ದರು. ಸುಷ್ಮಾ ಅವರ ಅಗಲಿಕೆಯಿಂದ ದೇಶಕ್ಕೆ ಹಾಗೂ ಬಿಜೆಪಿ ಪಕ್ಷಕ್ಕೆ ಆಘಾತವಾಗಿತ್ತು. ವಿದೇಶಾಂಗ ಸಚಿವೆಯಾಗಿ ದೇಶಕ್ಕಾಗಿ ಅವರು ನೀಡಿರುವ ಕೊಡುಗೆ, ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿ ಜನರ ಸಮಸ್ಯೆಗೆ ಅವರು ಸ್ಪಂದಿಸುತ್ತಿದ್ದ ರೀತಿ ಇಂದಿಗೂ ಎಲ್ಲರ ಮನದಲ್ಲಿದೆ.

  • ಹರೀಶ್ ಸಾಳ್ವೆಗೆ 1 ರೂ. ಗೌರವಧನ ನೀಡಿ, ಅಮ್ಮನ ವಾಗ್ದಾನ ನೆರವೇರಿಸಿದ ಸುಷ್ಮಾ ಪುತ್ರಿ

    ಹರೀಶ್ ಸಾಳ್ವೆಗೆ 1 ರೂ. ಗೌರವಧನ ನೀಡಿ, ಅಮ್ಮನ ವಾಗ್ದಾನ ನೆರವೇರಿಸಿದ ಸುಷ್ಮಾ ಪುತ್ರಿ

    ನವದೆಹಲಿ: ಹಿರಿಯ ವಕೀಲರಾದ ಹರೀಶ್ ಸಾಳ್ವೆ ಅವರಿಗೆ 1 ರೂ. ಗೌರವಧನ ನೀಡಿ, ಅಮ್ಮನ ವಾಗ್ದಾನವನ್ನು ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಪುತ್ರಿ ನೆರವೇರಿಸಿದ್ದಾರೆ.

    ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಕುಲಭೂಷನ್ ಜಾಧವ್ ಪ್ರಕರಣದಲ್ಲಿ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು ಸಮರ್ಥವಾದ ವಾದ ಮಂಡನೆ ಮಾಡಿದ್ದರು. ಈ ಮೂಲಕ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತಕ್ಕೆ ಗೆಲುವು ತಂದಿದ್ದರು. ಅಷ್ಟೇ ಅಲ್ಲದೆ ಸರ್ಕಾರದಿಂದ ಕೇವಲ 1 ರೂ. ಸಂಭಾವನೆ ಪಡೆದಿದ್ದರು.

    ಪುತ್ರಿ ಬಾನ್ಸುರಿ ಹರೀಶ್ ಸಾಳ್ವೆ ಅವರಿಗೆ 1 ರೂ. ಗೌರವಧನ ನೀಡುತ್ತಿರುವ ಫೋಟೋವನ್ನು ಸುಷ್ಮಾ ಪತಿ, ಮಿಜೋರಾಂನ ಮಾಜಿ ರಾಜ್ಯಪಾಲ ಸ್ವರಾಜ್ ಕೌಶಲ್ ಟ್ವೀಟ್ ಮಾಡಿದ್ದಾರೆ. ಜೊತೆಗೆ ತಾಯಿಯ ಕೊನೆಯಾಸೆಯನ್ನು ಪುತ್ರಿ ಬಾನ್ಸುರಿ ಸ್ವರಾಜ್ ಈಡೇರಿಸಿದ್ದಾರೆ ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

    https://twitter.com/governorswaraj/status/1177605870378602501

    ಸುಷ್ಮಾ ಅವರು ನಿಧನಕ್ಕೂ ಮುನ್ನ ಆಗಸ್ಟ್ 6ರಂದು ರಾತ್ರಿ 8.30ರ ಸಮಯದಲ್ಲಿ ಹರೀಶ್ ಸಾಳ್ವೆ ಅವರಿಗೆ ಫೋನ್ ಕರೆ ಮಾಡಿದ್ದರು. ಸುಷ್ಮಾ ಸ್ವರಾಜ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದ ಹರೀಶ್ ಸಾಳ್ವೆ, ಅವರೊಂದಿಗೆ ನಡೆಸಿದ್ದ ಕೊನೆಯ ಸಂಭಾಷಣೆಯನ್ನು ನೆನಪಿಸಿಕೊಂಡು ದುಃಖ ವ್ಯಕ್ತಪಡಿಸಿದ್ದರು.

    ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಗೆಲುವು ಪಡೆದಿದ್ದೀರಿ. ನಿಮ್ಮನ್ನು ಭೇಟಿ ಮಾಡಬೇಕಿದೆ. ನಿಮಗೆ ನೀಡಬೇಕಿದ್ದ ಶುಲ್ಕ 1 ರೂ. ಬಾಕಿ ಇದೆ. ಆಗಸ್ಟ್ 7ರಂದು (ಬುಧವಾರ) ಬೆಳಗ್ಗೆ ಮನೆಗೆ ಬನ್ನಿ ಎಂದು ಹೇಳಿದ್ದರು. ಆದರೆ ಈಗ ಅವರೇ ಇಲ್ಲ ಎಂದು ಹರೀಶ್ ಸಾಳ್ವೆ ಭಾವುಕರಾಗಿದ್ದರು.

    ಅಂತರಾಷ್ಟ್ರೀಯ ನ್ಯಾಯಾಲಯ ವಿಯೆನ್ನಾದಲ್ಲಿ ಜಾಧವ್ ಪ್ರಕರಣದಲ್ಲಿ ಭಾರತದ ಪರ ವಾದ ಸಾಳ್ವೆ ಅವರು ವಾದ ಮಂಡಿಸಿದ್ದರು. ಈ ಸಂದರ್ಭದಲ್ಲಿ ಅವರಿಗೆ ಕರೆ ಮಾಡಿದ್ದ ಸುಷ್ಮಾ ಸ್ವರಾಜ್ ಅವರು ಅಭಿನಂದನೆ ಸಲ್ಲಿಸಿದ್ದರು. ಅಲ್ಲದೇ ಧನ್ಯವಾದ ಹೇಳಿ ಟ್ವೀಟ್ ಮಾಡಿದ್ದರು ಎಂದು ಸಾಳ್ವೆ ಅವರು ನೆನಪಿಸಿಕೊಂಡಿದ್ದರು.

    ಜಾಧವ್ ಪ್ರಕರಣವನ್ನು ವಿಶ್ವಸಂಸ್ಥೆಯ ಇಂಟರ್ ನ್ಯಾಷನಲ್ ಕೋರ್ಟ್ ಆಫ್ ಜಸ್ಟಿಸ್‍ನಲ್ಲಿ ಭಾರತ ಪರ ಸಾಳ್ವೆ ಅವರು ವಾದ ಮಂಡಿಸಿದ್ದರು. ಈ ಸಂದರ್ಭದಲ್ಲಿ ಅವರು ಸರ್ಕಾರದಿಂದ ಕೇವಲ 1 ರೂ. ಸಂಭಾವನೆ ಪಡೆದಿದ್ದರು. ಈ ಬಗ್ಗೆ ವ್ಯಕ್ತಿಯೊಬ್ಬರ ಟ್ವಿಟ್ಟಿಗೆ ಪ್ರತಿಕ್ರಿಯೆ ನೀಡಿದ್ದ ಸುಷ್ಮಾ ಅವರು, ಹರೀಶ್ ಸಾಳ್ವೆ ಅವರು ನಮ್ಮಿಂದ ಕೇವಲ 1 ರೂ. ಸಂಭಾವನೆ ಪಡೆಯುತ್ತಿದ್ದಾರೆ ಅಷ್ಟೇ ಎಂದು ಹೇಳಿದ್ದರು.

  • ಪ್ರತಿ ಪಕ್ಷಗಳ ಮಾಟ ಮಂತ್ರಕ್ಕೆ ನಮ್ಮ ನಾಯಕರ ಸಾವು: ಸಾಧ್ವಿ ಪ್ರಜ್ಞಾಸಿಂಗ್

    ಪ್ರತಿ ಪಕ್ಷಗಳ ಮಾಟ ಮಂತ್ರಕ್ಕೆ ನಮ್ಮ ನಾಯಕರ ಸಾವು: ಸಾಧ್ವಿ ಪ್ರಜ್ಞಾಸಿಂಗ್

    ಭೋಪಾಲ್: ವಿವಾದತ್ಮಾಕ ಹೇಳಿಕೆಗಳ ಮೂಲಕವೇ ಸುದ್ದಿಯಾಗುವ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾಸಿಂಗ್ ಮತ್ತೊಮ್ಮೆ ವಿವಾದತ್ಮಾಕ ಹೇಳಿಕೆ ನೀಡಿದ್ದು, ತಮ್ಮ ಪಕ್ಷದ ಹಿರಿಯ ನಾಯಕರ ಸಾವಿಗೆ ಪ್ರತಿಪಕ್ಷದವರು ನಡೆಸುತ್ತಿರುವ ಮಾಟ ಮಂತ್ರ ಕಾರಣವೆಂದು ಆರೋಪ ಮಾಡಿದ್ದಾರೆ.

    ಪಕ್ಷದ ಸಭೆಯೊಂದರಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿರುವ ಅವರು, ಈ ಹಿಂದೆ ಮಹಾರಾಜ್ ಹೇಳಿದಂತೆ ನಾವು ಈಗ ವಿಪತ್ತಿನ ಸಮಯವನ್ನು ಎದುರಿಸುತ್ತಿದ್ದೇವೆ ಎಂದಿದ್ದಾರೆ.

    ಕಳೆದ 20 ದಿನಗಳ ಅವಧಿಯಲ್ಲಿ ಬಿಜೆಪಿ ಕೇಂದ್ರ ನಾಯಕರಾದ ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ ಅವರು ನಿಧನರಾಗಿದ್ದು, ಕಾರ್ಯಕರ್ತರಿಗೆ ತೀವ್ರ ದುಃಖವನ್ನು ಉಂಟು ಮಾಡಿತ್ತು. ಈ ಕುರಿತ ಮಾತನಾಡುವ ಸಂದರ್ಭದಲ್ಲಿ ಪ್ರಜ್ಞಾ ಸಿಂಗ್ ವಿವಾದತ್ಮಾಕ ಹೇಳಿಕೆ ನೀಡಿದ್ದಾರೆ. ಬಿಜೆಪಿ ನಾಯಕರ ವಿರುದ್ಧವಾಗಿ ಪ್ರತಿಪಕ್ಷದವರು ಮಾಟ ಮಂತ್ರ ಮಾಡುತ್ತಿದ್ದಾರೆ ಎಂದು ಮಹಾರಾಜ್ ಅವರು ನನಗೆ ಈ ಹಿಂದೆ ಹೇಳಿದ್ದರು. ಅವರ ಮಾತು ಈಗ ನಿಜವಾಗುತ್ತಿದೆ. ಆದರೆ ಅವರು ಈ ಹಿಂದೆ ತಮಗೆ ಹೇಳಿದ್ದ ಮಾತನ್ನು ನಾನು ಮರೆತು ಹೋಗಿದ್ದೆ. ಆದರೆ ಇಂದು ನಾಯಕರು ನಮ್ಮನ್ನು ಅಗಲಿ ಹೋಗುತ್ತಿರುವುದಿಂದ ಅವರು ಹೇಳಿದ ಮಾತು ಈಗ ನನಗೆ ನಿಜ ಎನಿಸುತ್ತಿದೆ ಎಂದರು.

    ಕಳೆದ ತಿಂಗಳು ಸೆಹೋರೆಯಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಮಾತನಾಡುವ ವೇಳೆ ಪ್ರಜ್ಞಾಸಿಂಗ್ ನೀಡಿದ್ದ ಹೇಳಿಕೆ ಭಾರೀ ತೀವ್ರ ವಿರೋಧ ವ್ಯಕ್ತವಾಗಿತ್ತು. ಕಾರ್ಯಕರ್ತರೊಂದಿಗೆ ಮಾತನಾಡಿದ್ದ ಅವರು, ನಾನು ಚರಂಡಿ ಹಾಗೂ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಆಯ್ಕೆಯಾಗಿಲ್ಲ ಅರ್ಥ ಮಾಡಿಕೊಳ್ಳಿ. ನಾನು ಯಾವ ಕೆಲಸ ಮಾಡಲು ಚುನಾಯಿತಳಾಗಿದ್ದೇನೆ ಎನ್ನುವುದು ತಿಳಿದಿದೆ. ಆ ಕೆಲಸವನ್ನು ನಾನು ಮಾಡುತ್ತೇನೆ, ಈ ಕುರಿತು ಹಲವು ಬಾರಿ ಹೇಳಿದ್ದೇನೆ ಎಂದು ಆಕ್ರೋಶ ಭರಿತರಾಗಿ ಹೇಳಿದ್ದರು.

  • ನೆರೆ ಸಮಸ್ಯೆ ಮುಗಿದ ಕೂಡ್ಲೇ ಮಂತ್ರಿಮಂಡಲ ವಿಸ್ತರಣೆ- ಶೋಭಾ

    ನೆರೆ ಸಮಸ್ಯೆ ಮುಗಿದ ಕೂಡ್ಲೇ ಮಂತ್ರಿಮಂಡಲ ವಿಸ್ತರಣೆ- ಶೋಭಾ

    ಉಡುಪಿ: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನ, ರಾಜ್ಯದ ನೆರೆಯಿಂದಾಗಿ ಮಂತ್ರಿಮಂಡಲ ವಿಸ್ತರಣೆ ಮುಂದೂಡಲಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಪರಿಹಾರ ನಮ್ಮ ಮೊದಲ ಆದ್ಯತೆ. ನೆರೆ ಸಮಸ್ಯೆ ಮುಗಿದ ಕೂಡಲೇ ಹೈಕಮಾಂಡ್ ಬಳಿ ಹೋಗಿ ಮಂತ್ರಿ ಮಂಡಲ ವಿಸ್ತರಣೆ ಮಾಡುತ್ತೇವೆ. ಇದು ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯ ಎಂದರು.

    ಮಾಜಿ ಸಿಎಂ ಕುಮಾರಸ್ವಾಮಿ ಅಧಿಕಾರ ಕಳೆದುಕೊಂಡು ಅಸಹನೆಗೊಳಗಾಗಿ ಯಡಿಯೂರಪ್ಪ ಎಲ್ಲಿದ್ದೀಯಪ್ಪ ಎಂಬ ಪ್ರಶ್ನೆ ಮಾಡಿದ್ದಾರೆ. ಅಧಿಕಾರ ಇಲ್ಲದೆ ಬೇಸತ್ತು ನೊಂದಿದ್ದಾರೆ. ಕುಮಾರಸ್ವಾಮಿ ಬಹಳ ಸಿಟ್ಟಿನಲ್ಲಿದ್ದಾರೆ. ಭ್ರಮನಿರಸನಗೊಂಡವರ ಪ್ರಶ್ನೆಗೆ ಉತ್ತರಿಸಲ್ಲ ಎಂದು ವಾಗ್ದಾಳಿ ನಡೆಸಿದರು.

    ನೆರೆಯ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಬೆಳಗಾವಿಗೆ ಧಾವಿಸಿದ್ದಾರೆ. ಅಧಿಕಾರ ಇದ್ದರೂ ಇಲ್ಲದಿದ್ದರೂ ಕೆಲಸ ಮಾಡಿದ್ದಾರೆ. ಯಡಿಯೂರಪ್ಪ ಅವರು ನಿರಂತರವಾಗಿ ಜನರ ಜೊತೆಗಿದ್ದಾರೆ. ರಾಜ್ಯದ ನೆರೆ ಹಾನಿಯ ಸಂಪೂರ್ಣ ಲೆಕ್ಕ ಸಿಕ್ಕಿಲ್ಲ. ಮಳೆ ಹಾನಿ ಜಾಸ್ತಿಯಾಗುವ ಸಾಧ್ಯತೆ ಇದೆ. ಸಂಪೂರ್ಣ ಲೆಕ್ಕಾಚಾರ ಸಿಕ್ಕಕೂಡಲೇ ಕೇಂದ್ರಕ್ಕೆ ಪತ್ರ ಬರೆಯುವುದಾಗಿ ತಿಳಿಸಿದರು.

    ಜಮ್ಮುಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ವಿಚಾರದಲ್ಲಿ ಕಾಂಗ್ರೆಸ್ ನಿಲುವಿನ ಬಗ್ಗೆ ಪ್ರತಿಕ್ರಿಯಿಸಿದ ಶೋಭಾ, ಕಾಂಗ್ರೆಸ್‍ನ ನಿಲುವು ಏನು ಅನ್ನೋದು ಸ್ಪಷ್ಟವಾಗಿದೆ. ಕಾಂಗ್ರೆಸ್‍ನ ದಿವಾಳಿತನ, ದೇಶದ್ರೋಹ ಪ್ರದರ್ಶನವಾಗುತ್ತಿದೆ. ಕಾಂಗ್ರೆಸ್ ನಡೆಯಿಂದ ಬೇಸರವಾಗುತ್ತಿದೆ ಎಂದರು.

  • ಪಾಕ್ ನಟಿಯಿಂದ ಸುಷ್ಮಾ ಸ್ವರಾಜ್​​ಗೆ ಅವಮಾನ- ಭಾರತೀಯರಿಂದ ಖಡಕ್ ತಿರುಗೇಟು

    ಪಾಕ್ ನಟಿಯಿಂದ ಸುಷ್ಮಾ ಸ್ವರಾಜ್​​ಗೆ ಅವಮಾನ- ಭಾರತೀಯರಿಂದ ಖಡಕ್ ತಿರುಗೇಟು

    ಇಸ್ಲಾಮಾಬಾದ್: ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರಿಗೆ ಪಾಕಿಸ್ತಾನದ ನಟಿ ಅವಮಾನ ಮಾಡಿದ್ದು, ಭಾರತೀಯರು ಅವರಿಗೆ ಖಡಕ್ ತಿರುಗೇಟು ನೀಡಿದ್ದಾರೆ.

    ವೀಣಾ ಬುಧವಾರ ತಮ್ಮ ಟ್ವಿಟ್ಟರಿನಲ್ಲಿ RIH ಎಂದು ಟ್ವೀಟ್ ಮಾಡಿದ್ದಾರೆ. RIH ಎಂದರೆ ರೆಸ್ಟ್ ಇನ್ ಹೆಲ್ (ನಿಮಗೆ ನರಕ ಸಿಗಲಿ) ಎಂದರ್ಥ. ವೀಣಾ ಅವರು ತಮ್ಮ ಟ್ವೀಟ್‍ನಲ್ಲಿ ಯಾರ ಹೆಸರನ್ನು ಉಲ್ಲೇಖಿಸಿಲ್ಲ. ಆದರೆ ಸುಷ್ಮಾ ಸ್ವರಾಜ್ ಅವರ ನಿಧನದ ಸಂದರ್ಭದಲ್ಲಿ ಈ ರೀತಿ ಟ್ವೀಟ್ ಮಾಡಿದ್ದಕ್ಕೆ ಅವರ ಮೇಲೆ ಅನುಮಾನ ಶುರುವಾಗಿದೆ.

    ಈ ಟ್ವೀಟ್ ನೋಡಿ ಭಾರತೀಯರು ವೀಣಾ ಮಲ್ಲಿಕ್‍ಗೆ ಖಡಕ್ಕಾಗಿ ತಿರುಗೇಟು ನೀಡಿದ್ದಾರೆ. ಕೆಲವರು, ನೀನು ಈ ದೇಶದಲ್ಲಿದ್ದೆ. ನೀನು ಈಗ ಏನೇ ಆಗಿದ್ದರು ಅದಕ್ಕೆ ಈ ದೇಶ ಕಾರಣ. ಆದರೆ ನೀನು ಅಸಹ್ಯಕರ ಅಲೋಚನೆ ದ್ವೇಷ ತುಂಬಿದ ವ್ಯಕ್ತಿ. ನಿಧನ ಹೊಂದಿದ್ದ ಮಹಿಳೆಯನ್ನು ಸಹ ನೀನು ಬಿಡುವುದಿಲ್ಲ. ನಿನಗೆ ನಾಚಿಕೆಯಾಗಬೇಕು. ನೀನು ಖಂಡಿತವಾಗಿಯೂ ನರಕಕ್ಕೆ ಹೋಗುತ್ತೀಯಾ ಎಂದು ಖಡಕ್ಕಾಗಿ ಪ್ರತಿಕ್ರಿಯಿಸಿದ್ದರು.

    ಮತ್ತೆ ಕೆಲವರು, ನೀನು ಈಗಾಗಲೇ ನರಕದಲ್ಲಿ ಅಂದರೆ ಪಾಕಿಸ್ತಾನದಲ್ಲಿ ಇದ್ದೀಯಾ. ನಿನಗೆ ಶುಭಾಶಯಗಳು ಎಂದು ಪ್ರತಿಕ್ರಿಯಿಸಿದ್ದಾರೆ. ವೀಣಾ ಮಲ್ಲಿಕ್ ಟ್ವೀಟ್ ಭಾರತೀಯರು ರೀ-ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಸುಷ್ಮಾ ಸ್ವರಾಜ್ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು. ತಕ್ಷಣವೇ ಅವರನ್ನು ರಾತ್ರಿ 9.35ಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ರಾತ್ರಿ 10 ಗಂಟೆ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದರು.

  • ನಾನು ನಿಮ್ಮನ್ನೇ ಹಿಂಬಾಲಿಸುತ್ತಿದ್ದೇನೆ ಮೇಡಂ- ಸುಷ್ಮಾ ನಿವೃತ್ತಿ ವೇಳೆ ಪತಿ ಮಾಡಿದ್ದ ಟ್ವೀಟ್ ಈಗ ವೈರಲ್

    ನಾನು ನಿಮ್ಮನ್ನೇ ಹಿಂಬಾಲಿಸುತ್ತಿದ್ದೇನೆ ಮೇಡಂ- ಸುಷ್ಮಾ ನಿವೃತ್ತಿ ವೇಳೆ ಪತಿ ಮಾಡಿದ್ದ ಟ್ವೀಟ್ ಈಗ ವೈರಲ್

    ನವದೆಹಲಿ: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ನಿಧನರಾಗಿದ್ದರಿಂದ ದೇಶಾದ್ಯಂತ ಜನತೆ ಕಂಬನಿ ಮಿಡಿಯುತ್ತಿದ್ದರೆ, ಇದೇ ಸಂದರ್ಭದಲ್ಲಿ ಸುಷ್ಮಾ ರಾಜಕೀಯ ನಿವೃತ್ತಿ ವೇಳೆ ಅವರ ಪತಿ ಮಾಡಿದ ಟ್ವೀಟ್ ವೈರಲ್ ಆಗುತ್ತಿದೆ.

    ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಆರೋಗ್ಯ ಸಮಸ್ಯೆಯ ಕಾರಣಗಳಿಂದ ನವೆಂಬರ್ 2018ರಲ್ಲಿ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸುತ್ತಿದ್ದಂತೆ ಸುಷ್ಮಾ ಸ್ವರಾಜ್ ಅವರ ಪತಿ ಹಾಗೂ ಮಾಜಿ ರಾಜ್ಯಪಾಲ ಸ್ವರಾಜ್ ಕೌಶಲ್ ಅವರು ಸುಷ್ಮಾ ಅವರಿಗೆ ವಿಶಿಷ್ಟ ರೀತಿಯಲ್ಲಿ ಧನ್ಯವಾದ ತಿಳಿಸಿದ್ದರು.

    ‘ಮೇಡಂ- ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂಬ ನಿಮ್ಮ ನಿರ್ಧಾರಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇದನ್ನು ಕೇಳಿದ ನನಗೆ ಮಿಲ್ಕಾ ಸಿಂಗ್ ಓಡುವುದನ್ನು ನಿಲ್ಲಿಸಿದ ನೆನಪು ಮರುಕಳಿಸಿದಂತಾಗಿದೆ, ಧನ್ಯವಾದಗಳು ಎಂದು ಸರಣಿ ಟ್ವೀಟ್ ಮಾಡುವ ಮೂಲಕ ಸುಷ್ಮಾ ಅವರ ಚುನಾವಣಾ ರಾಜಕೀಯದ ವೃತ್ತಿಜೀವನವನ್ನು ಗುರುತಿಸಿದ್ದರು.

    ಸುಷ್ಮಾ ಸ್ವರಾಜ್ ಅವರು ದೀರ್ಘ ಕಾಲದ ವರೆಗೆ ಮಧ್ಯ ಪ್ರದೇಶದ ವಿದಿಶಾ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಆದರೆ, 2016ರಲ್ಲಿ ಡಯಾಬಿಟೀಸ್ ಮತ್ತು ಕಿಡ್ನಿ ಟ್ರಾನ್ಸ್‍ಪ್ಲಾಂಟೇಶನ್ ಗೆ ಒಳಗಾಗಿದ್ದರು. ನಂತರ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು.

    ಈ ವೇಳೆ ಸುಷ್ಮಾ ಸ್ವರಾಜ್ ಅವರಿಗೆ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡುವ ಮೂಲಕ ಅವರ ನಾಲ್ಕು ದಶಕಗಳ ರಾಜಕೀಯ ಜೀವನವನ್ನು ಅವರ ಪತಿ ಉಲ್ಲೇಖಿಸಿದ್ದರು.

    ನಿಮ್ಮ ಈ ಮ್ಯಾರಥಾನ್ 1977ರಿಂದಲೂ ನಡೆಯುತ್ತಿದ್ದು, ಸುಮಾರು 41 ವರ್ಷಗಳ ಕಾಲ ರಾಜಕೀಯ ಜೀವನದಲ್ಲಿ ಓಡಿದ್ದೀರಿ. ಒಟ್ಟು 11 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದು, ಹಾಗೆ ನೋಡಿದರೆ ನೀವು ಎಲ್ಲ ಚುನಾವಣೆಗಳಲ್ಲಿಯೂ ಸ್ಪರ್ಧಿಸುತ್ತಿದ್ದಿರಿ. ಆದರೆ, 1991 ಹಾಗೂ 2004ರಲ್ಲಿ ಎರಡು ಬಾರಿ ಪಕ್ಷ ನಿಮ್ಮನ್ನು ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಲಿಲ್ಲ. ನಾಲ್ಕು ಬಾರಿ ಲೋಕಸಭೆಗೆ, ಮೂರು ರಾಜ್ಯಸಭೆಗೆ ಹಾಗೂ ಮೂರು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದೀರಿ. ನೀವು 25 ವರ್ಷದವರಿದ್ದಾಗಿನಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದೀರಿ. ಸುಮಾರು 41 ವರ್ಷಗಳ ಕಾಲ ಚುನಾವಣೆಯಲ್ಲಿ ಹೋರಾಡಿರುವುದು ಬಹುದೊಡ್ಡ ಮ್ಯಾರಥಾನ್ ಆಗಿದೆ ಎಂದು ಟ್ವೀಟ್ ಮಾಡಿದ್ದರು.

    ಮೇಡಂ ನಾನು ಕಳೆದ 46 ವರ್ಷಗಳಿಂದ ನಿಮ್ಮ ಹಿಂದೆ ಓಡುತ್ತಿದ್ದೇನೆ. ನಾನಿನ್ನು ಕೇವಲ 19 ವರ್ಷದವನಲ್ಲ, ನಾನೂ ಸಹ ಉಸಿರಾಟದಿಂದ ಹೊರಗುಳಿಯುತ್ತಿದ್ದೇನೆ, ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದರು.

    ಸುಷ್ಮಾ ಸ್ವರಾಜ್ ಅವರನ್ನು ಕೆಲವರು ಟ್ರೋಲ್ ಮಾಡಿದಾಗ ಸಹ ಸ್ವರಾಜ್ ಕೌಶಲ್ ಅವರು ತಮ್ಮ ಹೆಂಡತಿಯನ್ನು ಸಮರ್ಥಿಸಿಕೊಂಡಿದ್ದರು. ಮುಸ್ಲಿಮರನ್ನು ಸಮಾಧಾನ ಪಡಿಸಿದ್ದಕ್ಕೆ ಅವಳನ್ನು ಹೊಡೆಯಿರಿ ಎಂದು ಟ್ರೋಲ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕೌಶಲ್ ಅವರು, ನಾವು ಅವಳನ್ನು ಆರಾಧಿಸುತ್ತೇವೆ. ದಯವಿಟ್ಟು ಅಂತಹ ಪದಗಳನ್ನು ಬಳಸಬೇಡಿ. ನಾವು ಕಾನೂನು ಮತ್ತು ರಾಜಕೀಯದಲ್ಲಿ ಮೊದಲ ತಲೆಮಾರಿನವರು. ಅವಳ ಜೀವಕ್ಕಿಂತ ಹೆಚ್ಚೇನು ಆಗುವುದು ಬೇಡವೆಂದು ಪ್ರಾರ್ಥಿಸುತ್ತವೆ ಎಂದು ಪೋಸ್ಟ್ ಮಾಡಿ ಟ್ರೋಲ್ ಮಾಡುವವರಿಗೆ ತಕ್ಕ ಉತ್ತರ ನೀಡಿದ್ದರು.

    ಸುಷ್ಮಾ ಸ್ವರಾಜ್ ಹಾಗೂ ಕೌಶಲ್ ಇಬ್ಬರೂ ಸಹ ಅನೇಕ ಪ್ರಥಮಗಳಿಗೆ ಸಾಕ್ಷಿಯಾಗಿದ್ದಾರೆ. ಸುಷ್ಮಾ ಸ್ವರಾಜ್ ಅವರು ತಮ್ಮ 27ನೇ ವಯಸ್ಸಿನಲ್ಲಿ ಜನತಾ ಪಕ್ಷದ ರಾಜ್ಯಾಧ್ಯಕ್ಷೆಯಾಗಿರುವ ಹೆಗ್ಗಳಿಕೆ ಹೊಂದಿದ್ದರೆ, ಸ್ವರಾಜ್ ಕೌಶಲ್ ಅವರು 34ನೇ ವಯಸ್ಸಿನಲ್ಲಿ ಅತ್ಯಂತ ಕಿರಿಯ ಅಡ್ವೊಕೇಟ್ ಜನರಲ್ ಎಂಬ ಗೌರವ ಹೊಂದಿದ್ದಾರೆ. ಅಲ್ಲದೆ, ಸುಷ್ಮಾ ಸ್ವರಾಜ್ ಅವರು ವಿದೇಶಾಂಗ ಸಚಿವೆಯಾಗಿ ಕಾರ್ಯ ನಿರ್ವಹಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೌಶಲ್ ಅವರು ತಮ್ಮ 37ನೇ ವಯಸ್ಸಿನಲ್ಲಿ ರಾಜ್ಯಪಾಲರಾಗುವ ಮೂಲಕ ದೇಶದ ಕಿರಿಯ ರಾಜ್ಯಪಾಲರು ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ.