Tag: Sushma swaraj

  • ಜರ್ಮನಿಯಲ್ಲಿ ಚಾಕು ಇರಿತಕ್ಕೊಳಗಾದ ಉಡುಪಿ ಮೂಲದ ದಂಪತಿ, ಪತಿ ಸಾವು

    ಜರ್ಮನಿಯಲ್ಲಿ ಚಾಕು ಇರಿತಕ್ಕೊಳಗಾದ ಉಡುಪಿ ಮೂಲದ ದಂಪತಿ, ಪತಿ ಸಾವು

    ಉಡುಪಿ: ಜರ್ಮನಿಯ ಮ್ಯೂನಿಚ್ ನಲ್ಲಿ ದುಷ್ಕರ್ಮಿಯೋರ್ವ ಕರ್ನಾಟಕ ಮೂಲದ ದಂಪತಿಗೆ ಚೂರಿ ಇರಿದಿದ್ದಾನೆ. ಘಟನೆಯಲ್ಲಿ ಪತಿ ಪ್ರಶಾಂತ್ ಮೃತಪಟ್ಟಿದ್ದು, ಪತ್ನಿ ಸ್ಮಿತಾ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜರ್ಮನಿಯ ಖಾಸಗಿ ಆಸ್ಪತ್ರೆಯಲ್ಲಿ ಇರಿತಕ್ಕೊಳಗಾದ ಸ್ಮಿತಾ ಚೇತರಿಸಿಕೊಳ್ಳುತ್ತಿದ್ದಾರೆ.

    ಸ್ಮಿತಾ ಮೂಲತಃ ಉಡುಪಿ ಜಿಲ್ಲೆಯ ಸಿದ್ಧಾಪುರದವರು. ಸ್ಮಿತಾ ತಂದೆ ಚಂದ್ರಮೌಳಿ ಸಿದ್ದಾಪುರದಲ್ಲೇ ಆಯುರ್ವೇದಿಕ್ ಕ್ಲಿನಿಕ್ ಹೊಂದಿದ್ದಾರೆ. ಘಟನೆ ಬಗ್ಗೆ ಮಾಹಿತಿ ಸಿಕ್ಕಕೂಡಲೇ ಸ್ಮಿತಾ ಕುಟುಂಬ ಆಘಾತಕ್ಕೊಳಗಾಗಿದ್ದು, ಕುಟುಂಬಸ್ಥರು ಜರ್ಮನಿಗೆ ತೆರಳುವ ಸಿದ್ಧತೆ ಮಾಡಿಕೊಂಡಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಭಾರತೀಯ ದಂಪತಿ ಪ್ರಶಾಂತ್ ಮತ್ತು ಸ್ಮಿತಾ ಬಸ್ರೂರು ಎಂಬವರಿಗೆ ಅಪರಿಚಿತ ವಲಸಿಗನೊಬ್ಬ ಚೂರಿಯಿಂದ ಇರಿದಿದ್ದಾನೆ. ಪ್ರಶಾಂತ್ ಮೃತಪಟ್ಟಿದ್ದು, ಸ್ಮಿತಾ ಬಸ್ರೂರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಪ್ರಶಾಂತ್ ಅವರ ಸಹೋದರನನ್ನು ಮ್ಯೂನಿಚ್ ಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

    ಪ್ರಶಾಂತ್ ಮತ್ತು ಸ್ಮಿತಾ ದಂಪತಿ 15 ವರ್ಷಗಳಿಂದ ಮ್ಯೂನಿಚ್ ನಲ್ಲಿ ನೆಲೆಸಿದ್ದರು. ಇವರಿಗೆ ಒಬ್ಬ ಪುತ್ರಿ ಮತ್ತು ಒಬ್ಬ ಪುತ್ರನಿದ್ದಾನೆ. ಸ್ಮಿತಾ ಸಿದ್ದಾಪುರ ಮೂಲದವರಾದರೆ, ಪ್ರಶಾಂತ್ ಶಿವಮೊಗ್ಗದ ಹೊಸನಗರದವರು. ಕುಂದಾಪುರದಲ್ಲಿ ಮನೆ ಕಟ್ಟಿದ್ದಾರೆ. ಕೆಲಕಾಲ ಬೆಂಗಳೂರಿನಲ್ಲಿದ್ದು, ಈಗ ಜರ್ಮನಿಯಲ್ಲಿದ್ದಾರೆ.

    ಸ್ಮಿತಾ ಸಹೋದರ ಸುಜಯ್ ಮತ್ತು ಆಪ್ತರು ಜರ್ಮನಿ ತೆರಳಲಿದ್ದಾರೆ. ಜರ್ಮನಿಯಲ್ಲಿ ನಡೆದ ಘಟನೆ ಬಗ್ಗೆ ಸ್ಥಳೀಯರು, ಡಾ. ಚಂದ್ರಮೌಳಿಯವರ ಆಪ್ತರು ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

  • ಪಾಕಿಸ್ತಾನದಲ್ಲಿ ಹಿಂದೂ ಬಾಲಕಿಯರ ಅಪಹರಣ – ವರದಿ ಕೇಳಿದ ಸುಷ್ಮಾ ಸ್ವರಾಜ್

    ಪಾಕಿಸ್ತಾನದಲ್ಲಿ ಹಿಂದೂ ಬಾಲಕಿಯರ ಅಪಹರಣ – ವರದಿ ಕೇಳಿದ ಸುಷ್ಮಾ ಸ್ವರಾಜ್

    ನವದೆಹಲಿ: ಪಾಕಿಸ್ತಾನದಲ್ಲಿ ಇಬ್ಬರು ಹಿಂದೂ ಬಾಲಕಿಯರ ಅಪರಹಣ ಮಾಡಿ ಬಲವಂತವಾಗಿ ಮತಾಂತರ ಮಾಡಿರುವ ಕುರಿತಂತೆ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನದಲ್ಲಿರುವ ಭಾರತ ರಾಯಭಾರಿ ಕಚೇರಿಯಿಂದ ವರದಿ ಕೇಳಿದ್ದಾರೆ.

    ಪಾಕ್‍ನ ಸಿಂಧ್ ಪ್ರಾಂತ್ಯದಲ್ಲಿ ಹೋಳಿ ಆಚರಣೆಯಲ್ಲಿ ತೊಡಗಿದ್ದ ಯುವತಿಯನ್ನು ಅಪಹರಣ ಮಾಡಿದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ವರದಿಗೆ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿ ಸುಷ್ಮಾ ಸ್ವರಾಜ್ ಮಾಹಿತಿ ನೀಡಿದ್ದಾರೆ.

    ಮಾಧ್ಯಮ ವರದಿಯ ಅನ್ವಯ ಸಿಂಧ ಪ್ರಾಂತ್ಯದ ಧ್ವಾರಕಿ ನಗರದಲ್ಲಿ ಘಟನೆ ನಡೆದಿದೆ. ಅಲ್ಲದೇ ಹಿಂದೂ ಸಮೂದಾಯದ ಈ ಘಟನೆಯ ಬಗ್ಗೆ ಪ್ರತಿಭಟನೆ ನಡೆಸಿ ಕೃತ್ಯ ನಡೆಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ಪಾಕಿಸ್ತಾನದಲ್ಲಿ ನೆಲೆಸಿರುವ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಹಾಗೂ ಹಕ್ಕುಗಳ ವಿಚಾರವಾಗಿ ಭಾರತ ಈಗ ವಿಶ್ವದ ಗಮನ ಸೆಳೆಯಲು ಪ್ರಯತ್ನಿಸುತ್ತಿದೆ.

  • ನೀವು ಶಾಂತಿಪ್ರಿಯರಾಗಿದ್ದರೆ ಮಸೂದ್‍ನನ್ನು ಒಪ್ಪಿಸಿ: ಪಾಕ್ ಪಿಎಂಗೆ ಸುಷ್ಮಾ ಸ್ವರಾಜ್ ಸವಾಲು

    ನೀವು ಶಾಂತಿಪ್ರಿಯರಾಗಿದ್ದರೆ ಮಸೂದ್‍ನನ್ನು ಒಪ್ಪಿಸಿ: ಪಾಕ್ ಪಿಎಂಗೆ ಸುಷ್ಮಾ ಸ್ವರಾಜ್ ಸವಾಲು

    – ಭಾರತ ಬದಲಾಗಿದೆ, ಯೋಚಿಸಲಾಗದ ಉತ್ತರ ನೀಡುತ್ತೆ
    – ಭಯೋತ್ಪಾದನೆ, ಶಾಂತಿ ಮಾತುಕತೆ ಒಟ್ಟಿಗೆ ನಡೆಯಲು ಸಾಧ್ಯವಿಲ್ಲ

    ನವದೆಹಲಿ: ನೀವು ಶಾಂತಿ ಪ್ರಿಯರು ಆಗಿದ್ದರೆ ಮಸೂದ್ ಅಜರ್‍ನನ್ನು ಭಾರತಕ್ಕೆ ಒಪ್ಪಿಸಿ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್‍ಗೆ ಸವಾಲು ಎಸೆದಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಗ್ರ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳದೆ, ಭಯೋತ್ಪಾದನೆಗೆ ಆಶ್ರಯ ನೀಡುತ್ತಿರುವ ಪಾಕಿಸ್ತಾನ ಸರ್ಕಾರದ ವಿರುದ್ಧ ಸುಷ್ಮಾ ಸ್ವರಾಜ್ ಹರಿಹಾಯ್ದಿದ್ದಾರೆ. ಕೆಲವರು ಪಾಕ್ ಪ್ರಧಾನಿ ಉದಾರಿ, ಗೌರವಾನ್ವಿತ ರಾಜಕಾರಣಿ ಎನ್ನುತ್ತಾರೆ. ಹಾಗಾದರೆ ಅವರಿಗೆ ಅಷ್ಟೊಂದು ಉದಾರತನವಿದ್ದರೆ ಜೈಷ್-ಇ-ಮೊಹಮ್ಮದ್ ಮುಖ್ಯಸ್ಥ ಮಜೂರ್ ಅಜರ್‍ನನ್ನು ಭಾರತಕ್ಕೆ ಒಪ್ಪಿಸಲಿ ಎಂದು ಸವಾಲು ಹಾಕಿದ್ದಾರೆ. ಹಾಗೆಯೇ ಎಲ್ಲಿಯವರೆಗೆ ಪಾಕ್ ಸರ್ಕಾರ ಭಯೋತ್ಪಾದನೆ ಹಾಗೂ ಉಗ್ರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಿಲ್ಲವೋ ಅಲ್ಲಿವರೆಗೆ ಪಾಕ್ ಜೊತೆ ಭಾರತದ ಶಾಂತಿ ಮಾತುಕತೆ ಮಾಡಲು ಸಾಧ್ಯವೇ ಇಲ್ಲ ಎಂದು ಹೇಳುವ ಮೂಲಕ ಸುಷ್ಮಾ ಸ್ವರಾಜ್ ಪಾಕ್‍ಗೆ ಖಡಕ್ ಸಂದೇಶ ನೀಡಿದ್ದಾರೆ.

    ಮೊದಲು ಭಯೋತ್ಪಾದನೆಗೆ ಪಾಕ್ ಸರ್ಕಾರ ಕಡಿವಾಣ ಹಾಕಲಿ. ನಂತರ ಪಾಕ್ ಜೊತೆ ಶಾಂತಿ ಮಾತುಕತೆ ನಡೆಯುತ್ತದೆ. ಭಯೋತ್ಪಾದನೆ ನಡುವೆ ಶಾಂತಿ ಮಾತುಕತೆ ಅಸಾಧ್ಯ. ಭಾರತೀಯ ವಾಯುಪಡೆ ಜೆಇಎಂ ಉಗ್ರರ ಕ್ಯಾಂಪ್ ಮೇಲೆ ಏರ್ ಸ್ಟ್ರೈಕ್ ಮಾಡಿದೆ. ಆದ್ರೆ ಜೆಇಎಂ ಉಗ್ರರ ಪ್ರತಿದಾಳಿ ಬದಲು ಪಾಕ್ ಸೇನೆ ಯಾಕೆ ನಮ್ಮ ವಿರುದ್ಧ ದಾಳಿ ಮಾಡುತ್ತಿದೆ ಎಂದು ಸುಷ್ಮ ಸ್ವರಾಜ್ ಪ್ರಶ್ನಿಸಿದ್ದಾರೆ.

    ನೀವು ಕೇವಲ ಉಗ್ರರಿಗೆ ನಿಮ್ಮ ಮಣ್ಣಿನಲ್ಲಿ ಜಾಗ ಕೊಟ್ಟಿಲ್ಲ, ಅವರನ್ನೂ ನೀವು ಸಾಕುತ್ತಿದ್ದೀರಿ. ಅಲ್ಲದೆ ಉಗ್ರರ ವಿರುದ್ಧ ಸಂತ್ರಸ್ತ ರಾಷ್ಟ್ರಗಳು ಬಂದರೆ, ಉಗ್ರರ ಪರವಾಗಿ ನೀವು ದಾಳಿ ಮಾಡುತ್ತಿರಿ. ಪಾಕ್ ಸರ್ಕಾರ ಅಲ್ಲಿನ ಸೇನೆ ಹಾಗೂ ಉಗ್ರರನ್ನು ನಿಯಂತ್ರಿಸುವ ಅಗತ್ಯವಿದೆ. ಇಲ್ಲವಾದರೆ ದ್ವೀಪಕ್ಷೀಯ ಸಂಬಂಧಗಳು ನಾಶವಾಗುವ ಸಮಯ ಮತ್ತೆ ಬರುತ್ತದೆ ಎಂದು ಅಭಿಪ್ರಾಯಪಟ್ಟರು.

    ಪುಲ್ವಾಮಾ ದಾಳಿಯಲ್ಲಿ 40ಕ್ಕೂ ಹೆಚ್ಚು ಮಂದಿ ಯೋಧರು ಹುತಾತ್ಮರಾದ ಬಗ್ಗೆ ಮಾತನಾಡುತ್ತ, ಪುಲ್ವಾಮಾ ದಾಳಿ ನಡೆದಾಗ ಹಲವು ರಾಷ್ಟ್ರಗಳು ಭಾರತದ ಪರವಾಗಿ ನಿಂತಿದ್ದವು. ಹಾಗೆಯೇ ಯೋಧರ ಸಾವಿಗೆ ಸಂತಾಪ ಸೂಚಿಸಿ, ಭಾರತ ಈ ಪರಿಸ್ಥತಿಯನ್ನು ಹೇಗೆ ನಿಭಾಯಿಸುತ್ತೆ ಎಂದಿದ್ದವು. ಅವರಿಗೆ ನಾನು ಕೊಟ್ಟ ಉತ್ತರ ಒಂದೇ. ಅದು ಭಾರತ ಬದಲಾಗಿದೆ. ಮತ್ತೊಮ್ಮೆ ಈ ರೀತಿ ದಾಳಿ ಮಡಿದರೇ ಭಾರತ ಸುಮ್ಮನೆ ಕೂರುವುದಿಲ್ಲ. ಯೋಚಿಸಲಾಗದ ಉತ್ತರ ನೀಡುತ್ತದೆ ಎಂದು ಹೇಳಿ ಪಾಕಿಸ್ತಾನಕ್ಕೆ ಖಡಕ್ ಸಂದೇಶ ರವಾನಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಅಬುಧಾಬಿಯಲ್ಲಿ ಇತಿಹಾಸ ಬರೆದು ಇಸ್ಲಾಂ ರಾಷ್ಟ್ರಗಳ ಶೃಂಗದಲ್ಲಿ ಪಾಕಿಗೆ ಸುಷ್ಮಾ ಟಾಂಗ್

    ಅಬುಧಾಬಿಯಲ್ಲಿ ಇತಿಹಾಸ ಬರೆದು ಇಸ್ಲಾಂ ರಾಷ್ಟ್ರಗಳ ಶೃಂಗದಲ್ಲಿ ಪಾಕಿಗೆ ಸುಷ್ಮಾ ಟಾಂಗ್

    ದುಬೈ: ಇಸ್ಲಾಂ ರಾಷ್ಟ್ರಗಳ ವಾರ್ಷಿಕ ಶೃಂಗ ಸಭೆಯಲ್ಲಿ ಇದೇ ಮೊದಲ ಬಾರಿಗೆ ಪಾಲ್ಗೊಳ್ಳುವ ಮೂಲಕ ಭಾರತ ಹೊಸ ಇತಿಹಾಸ ಬರೆದಿದೆ. ಇಸ್ಲಾಮಿಕ್ ಸಹಕಾರ ಸಂಘ(ಒಐಸಿ) ಸ್ಥಾಪನೆಯಾಗಿ 50 ವರ್ಷಗಳ ನಂತರ ಭಾರತದ ವಿದೇಶಾಂಗ ಸಚಿವೆ ಸುಷ್ಮ ಸ್ವರಾಜ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಎಲ್ಲ ರಾಷ್ಟ್ರಗಳು ಸಹಕಾರ ನೀಡಬೇಕೆಂದು ಮನವಿ ಮಾಡಿ ಪಾಕಿಸ್ತಾನಕ್ಕೆ ಟಾಂಗ್ ಕೊಟ್ಟಿದ್ದಾರೆ.

    ಶುಕ್ರವಾರದಿಂದ ಅಬುಧಾಬಿಯಲ್ಲಿ ಒಐಸಿಯ ವಿದೇಶಾಂಗ ಸಚಿವರ ಸಮ್ಮೇಳನ ಆರಂಭಗೊಂಡಿದೆ. ಈ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯನ್ನಾಗಿ ಸುಷ್ಮಾ ಸ್ವರಾಜ್ ಅವರನ್ನು ಆಹ್ವಾನಿಸಿದ್ದಕ್ಕೆ ಪಾಕಿಸ್ತಾನ ವಿರೋಧ ವ್ಯಕ್ತಪಡಿಸಿತ್ತು. ಭಾರತಕ್ಕೆ ನೀಡಿದ ಆಹ್ವಾನವನ್ನು ಕೈಬಿಡಬೇಕು ಎಂದು ಆಗ್ರಹಿಸಿತ್ತು. ಪಾಕ್ ಆಗ್ರಹಕ್ಕೆ ಐಒಸಿ ಸೊಪ್ಪು ಹಾಕದ ಪರಿಣಾಮ ಸುಷ್ಮಾ ಸ್ವರಾಜ್ ಅವರು ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿ ಪರೋಕ್ಷವಾಗಿ ಪಾಕಿಸ್ತಾನಕ್ಕೆ ಟಾಂಗ್ ಕೊಟ್ಟಿದ್ದಾರೆ.

    ಇಸ್ಲಾಮಿಕ್ ರಾಷ್ಟ್ರಗಳ ಶೃಂಗಸಭೆಯಲ್ಲಿ ಸುಷ್ಮಾ ಸ್ವರಾಜ್ ಮಾತನಾಡುವ ವೇಳೆ ಪಾಕ್ ವಿದೇಶಾಂಗ ಸಚಿವರು ಭಾಗವಹಿಸಿರಲಿಲ್ಲ. ಪಾಕ್ ಸಚಿವರಿಗೆ ಮೀಸಲಿಟ್ಟಿದ್ದ ಕುರ್ಚಿ ಖಾಲಿಯಾಗಿತ್ತು.

    ತಮ್ಮ ಭಾಷಣದಲ್ಲಿ ಸುಷ್ಮಾ ಸ್ವರಾಜ್, ಭಯೋತ್ಪಾದನೆಯು ವಿಶ್ವದಲ್ಲಿ ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡುತ್ತಿದೆ. ಹೀಗಾಗಿ ಅದನ್ನು ಹೊಡೆದು ಹಾಕಲು ಎಲ್ಲ ರಾಷ್ಟ್ರಗಳು ಒಂದಾಗಬೇಕಿದೆ ಎಂದು ಮನವಿ ಮಾಡಿದರು.

    ಆಗ್ನೇಯ ಏಷ್ಯಾ, ಉತ್ತರ ಆಫ್ರಿಕಾ, ಯುರೋಪ್, ಉತ್ತರ ಅಮೆರಿಕ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭಾರತ ಹಾಗೂ ಪೂರ್ವ ಗಲ್ಫ್ ರಾಷ್ಟ್ರಗಳಲ್ಲಿ ಉಗ್ರರ ಸಂಖ್ಯೆ ಹೆಚ್ಚಾಗುತ್ತಿದೆ. ಭಯೋತ್ಪಾದನೆ ಮತ್ತು ಉಗ್ರವಾದ ಎರಡೂ ಬೇರೆ ಬೇರೆ ಹೆಸರುಗಳಷ್ಟೇ. ಅವೆರಡನ್ನೂ ಬೇರೆ ಬೇರೆ ಉದ್ದೇಶಗಳಿಗೆ ಬಳಸಲಾಗುತ್ತಿದೆ ಎಂದು ಹೇಳಿದರು.

    ಧರ್ಮದ ಹೆಸರಿನಲ್ಲಿ ಉಗ್ರರು ಯುವಕರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ಯುವಕರಲ್ಲಿ ಭಯೋತ್ಪಾದನೆಯ ಬೀಜ ಬಿತ್ತಿ ತಮ್ಮ ವಿಧ್ವಂಸಕ ಕೃತ್ಯಗಳನ್ನು ಸಾಧಿಸುತ್ತಿದ್ದಾರೆ. ನಮಗೆ ಭಯೋತ್ಪಾದನೆಯನ್ನು ಹೊಡೆದು ಹಾಕಬೇಕು ಉದ್ದೇಶವಿದೆಯೇ ಹೊರತು ಯಾವುದೇ ಧರ್ಮದ ವಿರುದ್ಧ ಹೋರಾಟ ಅಲ್ಲ ಎಂದರು.

    ಕುರಾನ್, ಭಗವದ್ಗೀತೆ, ಸಿಖ್ ಧರ್ಮ ಗುರು ಗುರುನಾನಕ್, ವಿವೇಕಾನಂದ್ ಅವರ ಸಾಲುಗಳನ್ನು ಪ್ರಸ್ತಾಪಿಸಿ ಯಾವುದೇ ಧರ್ಮವೂ ಕೆಟ್ಟದನ್ನು ಮಾಡುವಂತೆ ಹೇಳಿಲ್ಲ. ಭಾರತ ಶಾಂತಿಯ ನೆಲೆಬೀಡಾಗಿದೆ, ನಾವು ಶಾಂತಿಯನ್ನೇ ಭಯಸುತ್ತೇವೆ ಎಂದು ಹೇಳಿದರು.

    ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದನೆ ತಡೆಯಲು ಶ್ರಮಿಸುತ್ತಿದ್ದಾರೆ. ಜನರಿಗೆ ಉದ್ಯೋಗ, ವಸತಿ, ಮೂಲ ಸೌಲಭ್ಯಗಳನ್ನು ಒದಗಿಸಿದರೆ ಯುವಕರು ಉಗ್ರ ಸಂಘಟನೆಗೆ ಸೇರುವುದಿಲ್ಲ ಎಂದು ಪ್ರಧಾನಿ ಮೋದಿ ಅವರು ಈ ಹಿಂದೆಯೇ ಹೇಳಿದ್ದರು. ಈ ನಿಟ್ಟಿನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

    ಭಾರತವು ಜ್ಞಾನದ ಪರ್ವತ, ಶಾಂತಿ ಸಂಕೇತವಾಗಿ, ನಂಬಿಕೆ ಮತ್ತು ಸಂಪ್ರದಾಯಗಳ ಮೂಲ, ಅನೇಕ ಧರ್ಮಗಳ ಮನೆಯಾಗಿದೆ ಹಾಗೂ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿದೆ. ಅಂತಹ ದೇಶವನ್ನು ಪ್ರತಿನಿಧಿಸಿ ನಾನು ಇಲ್ಲಿಗೆ ಬಂದಿರುವೆ. ನಮ್ಮ ಸ್ವಾಗತಿಸಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದರು.

    ಅಬುಧಾಬಿಗೆ ಬಂದಿಳಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಯುಎಇ ದೊರೆ ಶೇಖ್ ಅಬ್ದುಲ್ಲಾ ಬಿನ್ ಜಾಯೇದ್ ಅಲ್ ನಹ್ಯಾನ್ ಹಾಗೂ ವಿದೇಶಾಂಗ ಸಚಿವರು ಸ್ವಾಗತಿಸಿದರು.

    1969 ರಲ್ಲಿ ಇಸ್ಲಾಮಿಕ್ ಸಹಕಾರ ಸಂಘ ಆರಂಭಗೊಂಡಿದ್ದು ಸೌದಿ ಆರೇಬಿಯಾದ ಜೆಡ್ಡಾದಲ್ಲಿ ಮುಖ್ಯ ಕಚೇರಿಯಿದೆ. ಒಟ್ಟು 57 ರಾಷ್ಟ್ರಗಳು ಈ ಸಂಘಟನೆಯ ಸದಸ್ಯರಾಗಿವೆ. ವಿಶ್ವ ಸಂಸ್ಥೆಯ ಬಳಿಕ ಎರಡನೇ ಅತಿ ಹೆಚ್ಚು ಸದಸ್ಯರನ್ನು ಹೊಂದಿದ ಸಂಘಟನೆ ಇದಾಗಿದೆ.

    ಮುಸ್ಲಿಮ್ ಸಮುದಾಯವನ್ನು ಹೆಚ್ಚಿರುವ ದೇಶಗಳಿಗೆ ಮಾತ್ರ ಈ ಸಂಘಟನೆಯ ಸದಸ್ಯ ಸ್ಥಾನವನ್ನು ನೀಡಲಾಗುತ್ತದೆ. ರಷ್ಯಾ, ಥೈಲ್ಯಾಂಡ್ ಸೇರಿದಂತೆ ಕೆಲವೊಂದು ರಾಷ್ಟ್ರಗಳನ್ನು ವೀಕ್ಷಕರನ್ನಾಗಿ ನೇಮಿಸಲಾಗುತ್ತದೆ. ಕಳೆದ ವರ್ಷ ನಡೆದ ಶೃಂಗದಲ್ಲಿ ಬಾಂಗ್ಲಾದೇಶ ಭಾರತವನ್ನು ವೀಕ್ಷಕರನ್ನಾಗಿ ಮಾಡಬೇಕು ಎನ್ನುವ ಪ್ರಸ್ತಾಪವನ್ನು ಇಟ್ಟಿತ್ತು. ಆದರೆ ಈ ಪ್ರಸ್ತಾಪವನ್ನು ಪಾಕಿಸ್ತಾನ ವಿರೋಧಿಸಿತ್ತು.

    ನರೇಂದ್ರ ಮೋದಿ ಸರ್ಕಾರ ಬಂದ ಬಳಿಕ ಬಾಂಗ್ಲಾದೇಶ ಅಲ್ಲದೇ ಒಐಸಿಯ ಹಲವು ಮುಸ್ಲಿಂ ರಾಷ್ಟ್ರಗಳ ಜೊತೆಗಿನ ಭಾರತದ ಸಂಬಂಧ ವೃದ್ಧಿಸಿದೆ. ಯುಎಇ, ಸೌದಿ ಆರೇಬಿಯಾ ಜೊತೆಗಿನ ವ್ಯಾಪಾರ ಸಂಬಂಧ ಮತ್ತಷ್ಟು ವೃದ್ಧಿಯಾಗಿದೆ. ಗ್ಯಾಸ್ ನಲ್ಲಿ ಶ್ರೀಮಂತವಾಗಿರುವ ಕತಾರ್ ಜೊತೆಗಿನ ವ್ಯವಹಾರ ವೃದ್ಧಿಸಿದೆ. ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ಸಿಆರ್ ಪಿಎಫ್ ಯೋಧರ ಹತ್ಯೆಯನ್ನು ಖಂಡಿಸಿ ಪಾಕ್ ವಿರುದ್ಧ ನಿರ್ಣಯ ಕೈಗೊಳ್ಳುವಲ್ಲಿ ಕುವೈತ್ ಬಹಳ ಮುಖ್ಯ ಪಾತ್ರವಹಿಸಿತ್ತು. ತೈಲ ರಾಷ್ಟ್ರ ಇರಾನ್ ವ್ಯವಹಾರದಲ್ಲಿ ಪಾಲುದಾರನಾಗಿದೆ. ಹೀಗಾಗಿ ಹಲವು ಮುಸ್ಲಿಂ ರಾಷ್ಟ್ರಗಳು ಭಾರತವನ್ನು ಆಹ್ವಾನಿಸಬೇಕೆಂಬ ಒತ್ತಡ ಹಾಕಿದ ಹಿನ್ನೆಲೆಯಲ್ಲಿ ಒಐಸಿ ಮೊದಲ ಬಾರಿಗೆ ಭಾರತಕ್ಕೆ ಆಹ್ವಾನ ನೀಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪಾಕಿಸ್ತಾನ ಭಯೋತ್ಪಾದನೆಯ ವಿರೋಧಿ ದೇಶ: ಚೀನಾ

    ಪಾಕಿಸ್ತಾನ ಭಯೋತ್ಪಾದನೆಯ ವಿರೋಧಿ ದೇಶ: ಚೀನಾ

    ಬೀಜಿಂಗ್: ಪಾಕಿಸ್ತಾನ ಯಾವತ್ತೂ ಭಯೋತ್ಪಾದನ ವಿರೋಧಿ ದೇಶವಾಗಿದೆ ಎನ್ನುವ ನಂಬಿಕೆ ನಮ್ಮಲ್ಲಿದೆ ಎಂದು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ್ದಾರೆ.

    ಚೀನಾದ ವೂಹನ್‍ನಲ್ಲಿ ನಡೆದ 16ನೇ ರಷ್ಯಾ-ಭಾರತ-ಚೀನಾ (ಆರ್‍ಐಸಿ) ಸಭೆ ಬಳಿಕ ಮಾತನಾಡಿ ಅವರು, ಪಾಕಿಸ್ತಾನ ಹಾಗೂ ಭಾರತ ನಮಗೆ ಆತ್ಮೀಯ ದೇಶಗಳು. ಪರಸ್ಪರ ಮಾತುಕತೆಯಿಂದ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಜೊತೆಗೆ ಪುಲ್ವಾಮಾ ದಾಳಿಯ ತನಿಖೆಗೆ ಉಭಯ ದೇಶಗಳು ಸಹಕಾರ ನೀಡುವ ಮೂಲಕ ಶಾಂತಿ ಹಾಗೂ ಸ್ಥಿರತೆ ಕಾಯ್ದುಕೊಳ್ಳಬೇಕು ಎಂದು ವಾಂಗ್ ಯಿ ತಿಳಿಸಿದ್ದಾರೆ.

    ಪಾಕಿಸ್ತಾನ ಹಾಗೂ ಭಾರತದ ನಡುವಿನ ದಾಳಿ, ಪ್ರತಿ ದಾಳಿಯಲ್ಲಿ ಚೀನಾ ಸ್ಥಿರತೆ ಕಾಯ್ದುಕೊಂಡಿದೆ. ಉಭಯ ದೇಶಗಳಲ್ಲಿ ಯಾರ ವಿರುದ್ಧವು ನಾವು ಧ್ವನಿ ಎತ್ತಿಲ್ಲ ಎನ್ನುವ ಮೂಲಕ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಿಲ್ಲ ಎಂದು ಪರೋಕ್ಷವಾಗಿ ಸ್ಪಷ್ಟನೆ ನೀಡಿದರು.

    ರಷ್ಯಾ-ಚೀನಾ-ಭಾರತ ಭಯೋತ್ಪಾದನೆ ವಿರುದ್ಧ ನಿಂತಿವೆ ಎನ್ನುವುದನ್ನು ಪುನಃ ದೃಢೀಕರಿಸಲಾಗಿದೆ. ಸಂಯಮ ಕಾಯ್ದುಕೊಳ್ಳುತ್ತೇವೆ ಹಾಗೂ ಪರಿಸ್ಥಿತಿಯನ್ನು ಉಲ್ಬಣಗೊಳ್ಳಲು ಬಿಡುವುದಿಲ್ಲವೆಂದು ಭಾರತ-ಪಾಕಿಸ್ತಾನ ಹೇಳಿಕೆ ನೀಡಿರುವುದನ್ನು ಚೀನಾ ಮೆಚ್ಚಿಕೊಳ್ಳುತ್ತದೆ ಎಂದು ತಿಳಿಸಿದರು.

    ಇದಕ್ಕೂ ಮುನ್ನ ಮಾತನಾಡಿದ್ದ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು, ಮಂಗಳವಾರ ನಡೆದ ಏರ್ ಸ್ಟ್ರೈಕ್ ಯಾವುದೇ ಮಿಲಿಟರಿ ಕಾರ್ಯಾಚರಣೆಯಲ್ಲ. ಭಾರತದ ಮೇಲೆ ಜೈಶ್ ಉಗ್ರ ಸಂಘಟನೆ ಮತ್ತೊಂದು ದಾಳಿ ಮಾಡದಂತೆ ಮುನ್ನೆಚ್ಚರಿಕೆ ವಹಿಸಿದ್ದೇವೆ. ಈ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳಬೇಕು ಎಂದು ನಾವು ಬಯಸುವುದಿಲ್ಲ. ಜವಾಬ್ದಾರಿಯುತವಾಗಿ ಉಗ್ರರನ್ನು ಮಟ್ಟ ಹಾಕಲಾಗುತ್ತದೆ. ಉಗ್ರರ ವಿರುದ್ಧ ಹೋರಾಡಲು ನಮ್ಮ ಜೊತೆ ಅನೇಕ ರಾಷ್ಟ್ರಗಳು ನಿಂತಿವೆ. ಇದು ನನಗೆ ತುಂಬಾ ಖುಷಿ ತಂದುಕೊಟ್ಟಿದೆ ಎಂದು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಉಗ್ರರಿಂದ ಮಾನವೀಯತೆ ನಿರೀಕ್ಷೆ ಸಾಧ್ಯವಿಲ್ಲ: ಸುಷ್ಮಾ ಸ್ವರಾಜ್

    ಉಗ್ರರಿಂದ ಮಾನವೀಯತೆ ನಿರೀಕ್ಷೆ ಸಾಧ್ಯವಿಲ್ಲ: ಸುಷ್ಮಾ ಸ್ವರಾಜ್

    – ಚೀನಾಕ್ಕೆ ಭಾರತದ ಸಂಬಂಧ ಮನವರಿಕೆ ಮಾಡಿಕೊಟ್ಟ ಸಚಿವೆ

    ಬೀಜಿಂಗ್: ಭಯೋತ್ಪಾದಕರಿಂದ ನಾವು ಎಂದಿಗೂ ಮಾನವೀಯತೆಯನ್ನು ನಿರೀಕ್ಷೆ ಮಾಡುವುದಕ್ಕೆ ಸಾಧ್ಯವಿಲ್ಲ. ಉಗ್ರರನ್ನು ಸೆದೆ ಬಡಿಯಲು ವಿಶ್ವದ ರಾಷ್ಟ್ರಗಳು ಒಂದಾಗಿ ಹೋರಾಡಬೇಕಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

    ಚೀನಾದ ವೂಹನ್‍ನಲ್ಲಿ ನಡೆದ 16ನೇ ರಷ್ಯಾ-ಭಾರತ-ಚೀನಾ (ಆರ್‌ಐಸಿ) ವಿದೇಶಾಂಗ ವ್ಯವಹಾರಗಳ ಸಚಿವರ ಸಭೆಯಲ್ಲಿ ಸುಷ್ಮಾ ಸ್ವರಾಜ್ ಭಾಗವಹಿಸಿದ್ದರು. ಈ ವೇಳೆ ಮಂಗಳವಾರ ನಡೆದ ಏರ್ ಸ್ಟ್ರೈಕ್ ವಿಚಾರವಾಗಿ ಚೀನಾ ಹಾಗೂ ರಷ್ಯಾ ವಿದೇಶಾಂಗ ಸಚಿವರಿಗೆ ಮಾಹಿತಿ ನೀಡಿದ ಅವರು, ಪಾಕಿಸ್ತಾನವು ತನ್ನ ನೆಲದಲ್ಲಿ ಭಯೋತ್ಪಾದನೆಗೆ ಅವಕಾಶ ನೀಡುತ್ತಿದ್ದು, ಭಾರತದ ಮೇಲೆ ದಾಳಿ ಮಾಡಲು ಉಗ್ರರು ಪ್ಲಾನ್ ರೂಪಿಸಿದ್ದರು. ಹೀಗಾಗಿ ಸ್ವಯಂ ರಕ್ಷಣೆಗಾಗಿ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂರು ಕ್ಯಾಂಪ್‍ಗಳ ಮೇಲೆ ದಾಳಿ ಮಾಡಿದ್ದೇವೆ. ನಾಗರಿಕರ ಸಾವು ನೋವು ತಪ್ಪಿಸಲು ದಾಳಿ ಮಾಡಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.

    ಇದು ಯಾವುದೇ ಮಿಲಿಟರಿ ಕಾರ್ಯಾಚರಣೆಯಲ್ಲ. ಭಾರತದ ಮೇಲೆ ಜೈಶ್ ಉಗ್ರ ಸಂಘಟನೆ ಮತ್ತೊಂದು ದಾಳಿ ಮಾಡದಂತೆ ಮುನ್ನೆಚ್ಚರಿಕೆ ವಹಿಸಿದ್ದೇವೆ. ಈ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳಬೇಕು ಎಂದು ನಾವು ಬಯಸುವುದಿಲ್ಲ. ಜವಾಬ್ದಾರಿಯುತವಾಗಿ ಉಗ್ರರನ್ನು ಮಟ್ಟ ಹಾಕಲಾಗುತ್ತದೆ ಎಂದು ಸುಷ್ಮಾ ಸ್ವರಾಜ್ ತಿಳಿದರು.

    ಉಗ್ರರ ವಿರುದ್ಧ ಹೋರಾಡಲು ನಮ್ಮ ಜೊತೆ ಅನೇಕ ರಾಷ್ಟ್ರಗಳು ನಿಂತಿವೆ. ಇದು ನನಗೆ ತುಂಬಾ ಖುಷಿ ತಂದುಕೊಟ್ಟಿದೆ. ಭಾರತ ಉಗ್ರರ ವಿರುದ್ಧ ಕ್ರಮಕೈಗೊಂಡಿದೆ. ನಮ್ಮ ಗುರಿ ಭಯೋತ್ಪಾದನೆಯನ್ನ ನಿಲ್ಲಿಸುವುದು. ಪಾಕಿಸ್ತಾನ ಉಗ್ರರಿಗೆ ನೀಡುತ್ತಿರುವ ಬೆಂಬಲವನ್ನು ಬಿಡಬೇಕು. ಭಾರತೀಯ ವಾಯು ಪಡೆ ಉಗ್ರರ ನೆಲೆಗಳ ಮೇಲೆ ಮಾತ್ರ ದಾಳಿ ಮಾಡಿದೆ. ಅಲ್ಲಿನ ನಿವಾಸಿಗಳ ವಿರುದ್ಧ ಯುದ್ಧ ಸಾರಿಲ್ಲ ಎಂದು ಹೇಳಿದರು.

    ಭಾರತ-ಚೀನಾ ಸಂಬಂಧ ಉಭಯ ರಾಷ್ಟ್ರಗಳಿಗೆ ಮುಖ್ಯವಾಗಿದೆ. ವೂಹನ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ರಾಷ್ಟ್ರಪತಿ ಕ್ಸಿ ಜಿನ್‍ಪಿಂಗ್ ಅವರ ನಡುವೆ 2018 ಏಪ್ರಿಲ್‍ನಲ್ಲಿ ನಡೆದ ಸಭೆಯಿಂದ ಉಭಯ ದೇಶಗಳ ಸಂಬಂಧ ಮತ್ತಷ್ಟು ವೃದ್ಧಿಯಾಗಿದೆ ಎಂದು ಚೀನಾಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

    ಭಯೋತ್ಪಾದನೆಯನ್ನು ಹತ್ತಿಕ್ಕಲು ನಮಗೆ ಜಗತ್ತಿನ ಸಹಾಯ ಬೇಕಿದೆ. ಪುಲ್ವಾಮಾ ದಾಳಿಯಲ್ಲಿ 40 ವೀರ ಯೋಧರು ಹುತಾತ್ಮರಾಗಿದ್ದಾರೆ. ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಪಾಕಿಸ್ತಾನದ ಕುಮ್ಮಕ್ಕಿನಿಂದ ದಾಳಿ ಮಾಡಿಸಿದೆ ಎಂದು ಕಿಡಿಕಾರಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 50 ವರ್ಷಗಳಲ್ಲಿ ಫಸ್ಟ್ ಟೈಂ – ಮುಸ್ಲಿಮ್ ರಾಷ್ಟ್ರಗಳ ಶೃಂಗ ಸಭೆಗೆ ಭಾರತಕ್ಕೆ ಆಹ್ವಾನ

    50 ವರ್ಷಗಳಲ್ಲಿ ಫಸ್ಟ್ ಟೈಂ – ಮುಸ್ಲಿಮ್ ರಾಷ್ಟ್ರಗಳ ಶೃಂಗ ಸಭೆಗೆ ಭಾರತಕ್ಕೆ ಆಹ್ವಾನ

    ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಸ್ಲಿಮ್ ರಾಷ್ಟ್ರಗಳ ವಾರ್ಷಿಕ ಶೃಂಗ ಸಭೆಯಲ್ಲಿ ಇದೇ ಮೊದಲ ಬಾರಿಗೆ ಭಾರತ ಪಾಲ್ಗೊಳ್ಳುತ್ತಿದೆ. ಇಸ್ಲಾಮಿಕ್ ಸಹಕಾರ ಸಂಘ(ಒಐಸಿ) ಸ್ಥಾಪನೆಯಾಗಿ 50 ವರ್ಷಗಳ ನಂತರ ಭಾರತದ ವಿದೇಶಾಂಗ ಸಚಿವರೊಬ್ಬರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

    ಮಾರ್ಚ್ 1 ರಂದು ಅಬುಧಾಬಿಯಲ್ಲಿ ಒಐಸಿಯ ವಿದೇಶಾಂಗ ಸಚಿವರ ಸಮ್ಮೇಳನ ನಡೆಯಲಿದ್ದು, ಈ ಸಮ್ಮೇಳನದಲ್ಲಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

     

    ಪುಲ್ವಾಮಾ ಘಟನೆಗೂ ನಡೆಯುವ ಒಂದು ತಿಂಗಳು ಮೊದಲೇ ಈ ಆಹ್ವಾನ ಒಐಸಿಯಿಂದ ಭಾರತಕ್ಕೆ ಬಂದಿತ್ತು. ಯುಎಇ ವಿದೇಶಾಂಗ ಸಚಿವ ಶೇಖ್ ಅಬ್ದುಲ್ಲಾ ಬಿನ್ ಜಯಾದ್ ಸ್ವುಷ್ಮಾ ಸ್ವರಾಜ್ ಅವರನ್ನು ವಿಶೇಷ ಆಹ್ವಾನಿತರಾಗಿ ಆಹ್ವಾನಿಸಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುವಂತೆ ಕೇಳಿಕೊಂಡಿದ್ದರು. ಈ ಆಹ್ವಾನವನ್ನು ಭಾರತ ಸಂತೋಷದಿಂದ ಸ್ವೀಕರಿಸಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ.

    ಭಾರತ ಈ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತ್ರ ಭಾಗಿಯಾಗಲಿದೆ. ಸದಸ್ಯರಾಗದ ಕಾರಣ ಒಐಸಿಯ ಅಧಿಕೃತ ಹೇಳಿಕೆಯಲ್ಲಿ ಭಾರತ ಭಾಗಿಯಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ.

    ಕಾಶ್ಮೀರ ವಿಚಾರದಲ್ಲಿ ಒಐಸಿ ಪಾಕಿಸ್ತಾನದ ಪರವಿದೆ. 2018ರಲ್ಲಿ ವಿಶ್ವಸಂಸ್ಥೆಯಲ್ಲಿ ಒಐಸಿ ಕಾಶ್ಮೀರದಲ್ಲಿ ಭಾರತ ಮಾನವ ಹಕ್ಕುಗಳ ಉಲ್ಲಂಘನೆ ಮಾಡುತ್ತಿದೆ. ಕಾಶ್ಮೀರಿ ನಿವಾಸಿಗಳ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಒಐಸಿ ಆರೋಪಿಸಿತ್ತು. ಈ ಆರೋಪವನ್ನು ಭಾರತ ತಳ್ಳಿ ಹಾಕಿ, ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಈ ವಿಚಾರದಲ್ಲಿ ಯಾರೂ ಮೂಗು ತೂರಿಸುವ ಅಗತ್ಯವಿಲ್ಲ ಎಂದು ಹೇಳಿ ತಿರುಗೇಟು ನೀಡಿತ್ತು.

    ಸುಷ್ಮಾ ಸ್ವರಾಜ್ ಅವರು ತಮ್ಮ ಭಾಷಣದಲ್ಲಿ ಪಾಕಿಸ್ತಾನ ಹೇಗೆ ಉಗ್ರರಿಗೆ ಆಶ್ರಯ ನೀಡುತ್ತಿದೆ ಎನ್ನುವ ವಿಚಾರವನ್ನು ಪ್ರಸ್ತಾಪಿಸಿ, ಮುಸ್ಲಿಂ ರಾಷ್ಟ್ರಗಳು ಭಾರತಕ್ಕೆ ಬೆಂಬಲ ನೀಡಬೇಕೆಂದು ಮನವಿ ಮಾಡುವ ಸಾಧ್ಯತೆ ಇದೆ.

    1969 ರಲ್ಲಿ ಇಸ್ಲಾಮಿಕ್ ಸಹಕಾರ ಸಂಘ ಆರಂಭಗೊಂಡಿದ್ದು ಸೌದಿ ಆರೇಬಿಯಾದ ಜೆಡ್ಡಾದಲ್ಲಿ ಮುಖ್ಯ ಕಚೇರಿಯಿದೆ. ಒಟ್ಟು 57 ರಾಷ್ಟ್ರಗಳು ಈ ಸಂಘಟನೆಯ ಸದಸ್ಯರಾಗಿವೆ. ವಿಶ್ವ ಸಂಸ್ಥೆಯ ಬಳಿಕ ಎರಡನೇ ಅತಿ ಹೆಚ್ಚು ಸದಸ್ಯರನ್ನು ಹೊಂದಿದ ಸಂಘಟನೆ ಇದಾಗಿದೆ.

    ಮುಸ್ಲಿಮ್ ಸಮುದಾಯವನ್ನು ಹೆಚ್ಚಿರುವ ದೇಶಗಳಿಗೆ ಮಾತ್ರ ಈ ಸಂಘಟನೆಯ ಸದಸ್ಯ ಸ್ಥಾನವನ್ನು ನೀಡಲಾಗುತ್ತದೆ. ರಷ್ಯಾ, ಥೈಲ್ಯಾಂಡ್ ಸೇರಿದಂತೆ ಕೆಲವೊಂದು ರಾಷ್ಟ್ರಗಳನ್ನು ವೀಕ್ಷಕರನ್ನಾಗಿ ನೇಮಿಸಲಾಗುತ್ತದೆ. ಕಳೆದ ವರ್ಷ ನಡೆದ ಶೃಂಗದಲ್ಲಿ ಬಾಂಗ್ಲಾದೇಶ ಭಾರತವನ್ನು ವೀಕ್ಷಕರನ್ನಾಗಿ ಮಾಡಬೇಕು ಎನ್ನುವ ಪ್ರಸ್ತಾಪವನ್ನು ಇಟ್ಟಿತ್ತು. ಆದರೆ ಈ ಪ್ರಸ್ತಾಪವನ್ನು ಪಾಕಿಸ್ತಾನ ವಿರೋಧಿಸಿತ್ತು.

    ನರೇಂದ್ರ ಮೋದಿ ಸರ್ಕಾರ ಬಂದ ಬಳಿಕ ಬಾಂಗ್ಲಾದೇಶ ಅಲ್ಲದೇ ಒಐಸಿಯ ಹಲವು ಮುಸ್ಲಿಂ ರಾಷ್ಟ್ರಗಳ ಜೊತೆಗಿನ ಭಾರತದ ಸಂಬಂಧ ವೃದ್ಧಿಸಿದೆ. ಯುಎಇ, ಸೌದಿ ಆರೇಬಿಯಾ ಜೊತೆಗಿನ ವ್ಯಾಪಾರ ಸಂಬಂಧ ಮತ್ತಷ್ಟು ವೃದ್ಧಿಯಾಗಿದೆ. ಗ್ಯಾಸ್ ನಲ್ಲಿ ಶ್ರೀಮಂತವಾಗಿರುವ ಕತಾರ್ ಜೊತೆಗಿನ ವ್ಯವಹಾರ ವೃದ್ಧಿಸಿದೆ. ವಿಶ್ವಸಂಸ್ಥೆಯ ಭದ್ರತಾ  ಸಮಿತಿಯಲ್ಲಿ ಸಿಆರ್ ಪಿಎಫ್ ಯೋಧರ ಹತ್ಯೆಯನ್ನು ಖಂಡಿಸಿ ಪಾಕ್ ವಿರುದ್ಧ ನಿರ್ಣಯ ಕೈಗೊಳ್ಳುವಲ್ಲಿ ಕುವೈತ್ ಬಹಳ ಮುಖ್ಯ ಪಾತ್ರವಹಿಸಿತ್ತು. ತೈಲ ರಾಷ್ಟ್ರ ಇರಾನ್ ವ್ಯವಹಾರದಲ್ಲಿ ಪಾಲುದಾರನಾಗಿದೆ. ಹೀಗಾಗಿ ಹಲವು ಮುಸ್ಲಿಂ ರಾಷ್ಟ್ರಗಳು ಭಾರತವನ್ನು ಆಹ್ವಾನಿಸಬೇಕೆಂಬ ಒತ್ತಡ ಹಾಕಿದ ಹಿನ್ನೆಲೆಯಲ್ಲಿ ಒಐಸಿ ಮೊದಲ ಬಾರಿಗೆ ಭಾರತಕ್ಕೆ ಆಹ್ವಾನ ನೀಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸುಷ್ಮಾ ಸ್ವರಾಜ್ ಉತ್ತರ ಕೇಳಿ ಸದನದಿಂದ ಹೊರ ನಡೆದ ಕಾಂಗ್ರೆಸ್ ನಾಯಕ

    ಸುಷ್ಮಾ ಸ್ವರಾಜ್ ಉತ್ತರ ಕೇಳಿ ಸದನದಿಂದ ಹೊರ ನಡೆದ ಕಾಂಗ್ರೆಸ್ ನಾಯಕ

    ನವದೆಹಲಿ: ಲೋಕಸಭೆಯಲ್ಲಿ ರಫೇಲ್ ಗದ್ದಲ ಜೋರಾಗಿಯೇ ಇದೆ. ಇತ್ತ ರಾಜ್ಯಸಭೆಯಲ್ಲಿ ರಫೇಲ್ ವಿಚಾರ ಕೂಗು ಕೇಳಿಬಂತು. ರಫೇಲ್ ಪ್ರಶ್ನೆಗೆ ಸಂಬಂಧಿಸಿದಂತೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೀಡಿದ ಉತ್ತರಕ್ಕೆ ಕಾಂಗ್ರೆಸ್ ನಾಯಕರೊಬ್ಬರು ಸದನದಿಂದ ಹೊರ ನಡೆದಿದ್ದಾರೆ.

    ರಾಜ್ಯಸಭೆಯಲ್ಲಿ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ರಫೇಲ್ ವಿಚಾರಕ್ಕೆ ಸಂಬಂಧಿಸಿದಂತೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದರು. ವಿಪಕ್ಷ ನಾಯಕರ ಆರೋಪಗಳಿಗೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವೆ, ರಫೇಲ್ ವಿಚಾರದಲ್ಲಿ ಯಾವುದೇ ವಿವಾದವಿಲ್ಲ. ನೀವೆಲ್ಲರು ರಫೇಲ್ ವಿಚಾರವನ್ನು ಜೀವಂತವಾಗಿರಿಸಲು ಪ್ರಯತ್ನ ಮಾಡುತ್ತೀದ್ದೀರಿ ಎಂದು ತಿರುಗೇಟು ನೀಡಿದರು.

    ವಿವಾದ ಎಂಬುವುದು ಕೇವಲ ಕಾಂಗ್ರೆಸ್ ಮನದಲ್ಲಿದೆ. ಫ್ರಾನ್ಸ್ ವಿದೇಶಾಂಗ ಸಚಿವರು ಸಹ ರಫೇಲ್ ವಿಚಾರದಲ್ಲಿ ಚರ್ಚೆ ನಡೆಸಿಲ್ಲ. ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಫ್ರಾನ್ಸ್ ವಿದೇಶಾಂಗ ಸಚಿವರು ಸ್ವಾಗತಿಸಿದ್ದಾರೆ ಎಂದು ಹೇಳುವ ಮೂಲಕ ಆನಂದ್ ಶರ್ಮಾ ಅವರಿಗೆ ತಿರುಗೇಟು ನೀಡಿದರು. ಸುಷ್ಮಾ ಅವರ ಉತ್ತರ ಕೇಳುತ್ತಿದ್ದಂತೆ ಆನಂದ್ ಶರ್ಮಾ ಸಭಾತ್ಯಾಗ ನಡೆಸಿ ಹೊರ ನಡೆದರು.

    ಲೋಕಸಭೆಯಲ್ಲಿ ಟಿಡಿಪಿ ಮತ್ತು ಎಐಎಡಿಎಂಕೆ ನಾಯಕರ ಗಲಾಟೆ ಹೆಚ್ಚು ಮಾಡಿದ್ದರಿಂದ ಸ್ಪೀಕರ್ ಸುಮಿತ್ರಾ ಮಹಾಜನ್ ಸಂಸದರನ್ನು ಒಂದು ದಿನದ ಮಟ್ಟಿಗೆ ಅಮಾನುತುಗೊಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಹಸ್ಯ ಸಂಖ್ಯೆ ಟ್ವೀಟ್ ಮಾಡಿ ಟ್ವಿಟ್ಟಿಗರ ತಲೆ ಕೆಡಿಸಿದ ಸುಷ್ಮಾ ಸ್ವರಾಜ್?

    ರಹಸ್ಯ ಸಂಖ್ಯೆ ಟ್ವೀಟ್ ಮಾಡಿ ಟ್ವಿಟ್ಟಿಗರ ತಲೆ ಕೆಡಿಸಿದ ಸುಷ್ಮಾ ಸ್ವರಾಜ್?

    ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ರಹಸ್ಯ ಸಂಖ್ಯೆಯೊಂದನ್ನು ಟ್ವೀಟ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

    ಇಂದು ಮಧ್ಯಾಹ್ನ ವೇಳೆಗೆ ಟ್ವೀಟ್ ಮಾಡಿರುವ ಸುಷ್ಮಾ ಸ್ವರಾಜ್ ಅವರು, ತಮ್ಮ ಟ್ವೀಟ್‍ನಲ್ಲಿ ಕೇವಲ 638781 ಎಂಬ ಸಂಖ್ಯೆಯನ್ನು ಬರೆದುಕೊಂಡಿದ್ದರು. ಆದರೆ ಬಳಿಕ ಆ ಟ್ವೀಟ್ ಡಿಲೀಟ್ ಮಾಡಿದ್ದಾರೆ. ಆದರೆ ಸುಷ್ಮಾ ಸ್ವರಾಜ್ ಟ್ವೀಟ್ ಸ್ಕ್ರೀನ್ ಶಾಟ್ ತೆಗೆದುಕೊಂಡಿರುವ ಟ್ವಿಟ್ಟಿಗರು ನಂಬರ್ ರಹಸ್ಯವನ್ನು ಡಿ ಕೋಡ್ ಮಾಡಲು ಮುಂದಾಗಿದ್ದಾರೆ.

    https://twitter.com/BeVoterNotFan/status/1076437708053069824?

    ಕೆಲ ಟ್ವಿಟ್ಟಿಗರು ಸಂಖ್ಯೆಯ ಅರ್ಥವೇನು ಎಂದು ಪ್ರಶ್ನೆ ಮಾಡಿದ್ದರೆ, ಮತ್ತು ಕೆಲವರು ಇದು ಸಿಂಗಪೂರ್ ಪೋಸ್ಟಲ್ ಕೋಡ್, ಸುಷ್ಮಾ ಮೇಡಮ್ ಅವರು ಈ ಮೂಲಕ ನಮಗೇ ರಹಸ್ಯ ಸಂಕೇತವನ್ನು ರವಾನಿಸಿದ್ದಾರೆ ಎಂದು ಮರು ಟ್ವೀಟ್ ಮಾಡಿದ್ದಾರೆ.

    ಕೇಂದ್ರ ಸರ್ಕಾರದ ಸಚಿವರಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಜನರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿ ಸುಷ್ಮಾ ಸ್ವರಾಜ್ ಅವರು ಇರುತ್ತಾರೆ. ಈ ಮೂಲಕ ಹಲವು ಬಾರಿ ಜನರ ಮಸ್ಯೆ ಬಗೆ ಹರಿಸಲು ಕಾರ್ಯನಿರ್ವಹಿಸಿದ್ದಾರೆ. 2010 ರಲ್ಲಿ ಟ್ವಿಟ್ಟರ್ ಗೆ ಸೇರ್ಪಡೆ ಆಗಿರುವ ಸುಷ್ಮಾ ಸ್ವರಾಜ್ ಅವರು 12 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ.

    https://twitter.com/YousufHussaini5/status/1076438686349197313

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಸುಷ್ಮಾ ಸ್ವರಾಜ್

    ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಸುಷ್ಮಾ ಸ್ವರಾಜ್

    ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

    ಮಧ್ಯಪ್ರದೇಶದ ಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸುಷ್ಮಾ ಸ್ವರಾಜ್ ಅವರು ಈ ಕುರಿತು ಹೇಳಿಕೆ ನೀಡಿದ್ದು, ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಾರದು ಎಂದು ತೀರ್ಮಾನ ಮಾಡಿದ್ದೇನೆ. ಆದರೆ ಈ ಕುರಿತು ಪಕ್ಷ ಅಂತಿಮ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

    ತಮ್ಮ ತೀರ್ಮಾನದ ಕುರಿತು 66 ವರ್ಷದ ಸುಷ್ಮಾ ಅವರು ಪಕ್ಷದ ಮುಖಂಡರಿಗೆ ಮಾಹಿತಿ ನೀಡಿದ್ದಾಗಿ ಸ್ಪಷ್ಟನೆ ನೀಡಿದ್ದು, ಅವರ ಈ ತೀರ್ಮಾನಕ್ಕೆ ಆರೋಗ್ಯ ಸಮಸ್ಯೆಯೇ ಕಾರಣ ಎನ್ನಲಾಗಿದೆ.

    ಸುಷ್ಮಾ ಸ್ವರಾಜ್ ಅವರು ಮಧ್ಯಪ್ರದೇಶದ ವಿದಿಶಾ ಕ್ಷೇತ್ರದ ಸಂಸದರಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಸುಷ್ಮಾ ಸ್ವರಾಜ್ ಅವರು ಪಾರ್ಲಿಮೆಂಟರಿಗೆ ಗೈರಾಗಿದ್ದ ಕುರಿತ ಪ್ರಶ್ನೆ ಮಾಡಿ ಕ್ಷೇತ್ರದಲ್ಲಿ ಪೋಸ್ಟರ್ ಚಳುವಳಿ ಮಾಡಲಾಗಿತ್ತು. ಈ ಪ್ರತಿಭಟನೆ ಕುರಿತು ಇಂದು ಮಾಧ್ಯಮಗಳು ಪ್ರಶ್ನೆ ಮಾಡಿದ ವೇಳೆ ಸುಷ್ಮಾ ಸ್ವರಾಜ್ ತಮ್ಮ ನಿರ್ಧಾರವನ್ನು ಪ್ರಕಟಿಸಿದರು. ಆದರೆ ಸುಷ್ಮಾ ಸ್ವರಾಜ್ ಅವರ ಕಾರ್ಯಕ್ಷಮತೆ, ವಿದೇಶಿ ವ್ಯವಹಾರದಲ್ಲಿನ ಅವರ ಕೌಶಲ್ಯಗಳು ಹಾಗೂ ಸದನದಲ್ಲಿನ ಅವರ ನಿರ್ವಹಣೆಯನ್ನು ಗಮನದಲ್ಲಿಟ್ಟುಕೊಂಡು ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಸಾಧ್ಯತೆಗಳಿವೆ.

    ಕುಟುಂಬ ಮೂಲಗಳ ಮಾಹಿತಿ ಅನ್ವಯ ಸುಷ್ಮಾ ಸ್ವರಾಜ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಈ ಸಂಬಂಧ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ ಸುಷ್ಮಾ ಅವರು ತಮ್ಮ ಜೀವನದಲ್ಲಿ 11 ಚುನಾವಣೆಗಳನ್ನು ಎದುರಿಸಿದ್ದು, ಅವರ ನಿರ್ಧಾರದ ಹಿಂದೆ ರಾಜಕೀಯ ಕಾರಣಗಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. 2016 ರಲ್ಲಿ ಕಿಡ್ನಿ ಕಸಿಗೆ ಒಳಗಾಗಿದ್ದ ಸುಷ್ಮಾ ಸ್ವರಾಜ್ ಅವರು ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews