Tag: sushmitha

  • ಬೆಳಗ್ಗೆ 4 ಗಂಟೆಗೆ ಎಬ್ಬಿಸು ಎಂದು ಹೇಳಿದ್ದೆ, ಎದ್ದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿದ್ಲು: ಸುಶ್ಮಿತಾ ತಮ್ಮ

    ಬೆಳಗ್ಗೆ 4 ಗಂಟೆಗೆ ಎಬ್ಬಿಸು ಎಂದು ಹೇಳಿದ್ದೆ, ಎದ್ದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿದ್ಲು: ಸುಶ್ಮಿತಾ ತಮ್ಮ

    – ಸುಶ್ಮಿತಾ ಕಣ್ಣು ದಾನ ಮಾಡಲು ಮುಂದಾದ ಪೋಷಕರು

    ಬೆಂಗಳೂರು: ಬೆಳಗ್ಗೆ 4 ಗಂಟೆಗೆ ಎಬ್ಬಿಸು ಎಂದು ಹೇಳಿದ್ದೆ. ಆದರೆ ಬೆಳಗ್ಗೆ ಎದ್ದು ನೋಡಿದಾಗ ನನ್ನ ಅಕ್ಕ ಆತ್ಮಹತ್ಯೆ ಮಾಡಿಕೊಂಡಿದ್ದಳು ಎಂದು ಗಾಯಕಿ ಸುಶ್ಮಿತಾ ಸಹೋದರ ಯಶವಂತ್ ಹೇಳಿದರು.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಯಶವಂತ್, ನನ್ನ ಅಕ್ಕ ಏನೂ ಹೇಳಲಿಲ್ಲ. ನಾನು ದಿನ ಕೆಲಸಕ್ಕೆ ಹೋಗುತ್ತೇನೆ. ಬೆಳಗ್ಗೆ 4 ಗಂಟೆಗೆ ಎಬ್ಬಿಸು ಎಂದು ನಾನು ಸುಶ್ಮಿತಾಗೆ ಹೇಳಿ ಲೈಟ್ ಆಫ್ ಮಾಡಿ ಮಲಗಿದ್ದೆ. ನಾನು ಹಾಲ್‍ನಲ್ಲಿ ಮಲಗಿದ್ದೆ. ನನ್ನ ಅಕ್ಕ ರೂಮಿನಲ್ಲಿ ಮಲಗಿದ್ದಳು. ಬೆಳಗ್ಗೆ ನನ್ನ ಮೊಬೈಲಿನಲ್ಲೇ ಅಲಾರಾಂ ಆನ್ ಆಗಿತ್ತು. ಆಗ ನಾನು ಎದ್ದು ರೂಮಿಗೆ ಹೋಗಿ ನೋಡಿದಾಗ ಆಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು ಎಂದರು. ಇದನ್ನೂ ಓದಿ: ‘ಅಮ್ಮಾ, ನನ್ನ ಪತಿಯನ್ನು ಸುಮ್ಮನೆ ಬಿಡಬೇಡ’ – ಖ್ಯಾತ ಗಾಯಕಿ ಸುಶ್ಮಿತಾ ಆತ್ಮಹತ್ಯೆ

    ಮಧ್ಯರಾತ್ರಿ ಸುಮಾರು 1.30ಕ್ಕೆ ನನ್ನ ಅಕ್ಕ ಮೆಸೇಜ್ ಮಾಡಿದ್ದಾಳೆ. ಬೆಳಗ್ಗೆ ಎದ್ದು ನಾನು ರೂಮಿಗೆ ಹೋಗಿ ನೋಡಿದ್ದೆ ಆಗ ನನ್ನ ಅಕ್ಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ವಿಷಯ ನನ್ನ ಭಾವನಿಗೆ ತಿಳಿಸಿದ್ದೇವೆ. ನನ್ನ ತಮ್ಮ ಕೂಡ ಹೋಗಿ ಹೇಳಿದ್ದಾನೆ. ಆದರೆ ಅವರು ಎಲ್ಲಿ ಇದ್ದಾರೆ ಎಂಬುದು ಗೊತ್ತಿಲ್ಲ. ಈ ವಿಷಯ ತಿಳಿದ ತಕ್ಷಣ ನನ್ನ ಭಾವ ಓಡಿ ಹೋಗಿರಬಹುದು ಎಂದು ಯಶವಂತ್ ತಿಳಿಸಿದರು. ಇದನ್ನೂ ಓದಿ: ಹಣದ ಹಿಂದೆ ಬಿದ್ದಿದ್ದ, ಚಿನ್ನ ಮಾರಿ ಮನೆ ಖರೀದಿಸಿ ಹೊರ ಹಾಕ್ದ: ಗಾಯಕಿ ಸುಶ್ಮಿತಾ ತಾಯಿ

    ಇತ್ತ ಶರತ್ ಕುಟುಂಬಸ್ಥರು ವಿಕ್ಟೋರಿಯಾ ಆಸ್ಪತ್ರೆಗೆ ಆಗಮಿಸಿದ್ದು, ಅವರನ್ನು ನೋಡುತ್ತಿದ್ದಂತೆ ಸುಶ್ಮಿತಾ ಕುಟುಂಬಸ್ಥರು ಮುಗಿ ಬಿದ್ದರು. ಶರತ್ ತಪ್ಪೇ ಇಲ್ಲ ಎಂದು ಆತನ ದೊಡ್ಡಮ್ಮ ಸಮರ್ಥನೆ ಮಾಡಿಕೊಳ್ಳಲು ಮುಂದಾದರು. ಇದನ್ನು ಕೇಳಿ ಕೋಪಗೊಂಡ ಸುಶ್ಮಿತಾ ಶರತ್ ದೊಡ್ಡಮ್ಮನ ಮೇಲೆ ಗಲಾಟೆಗೆ ಮುಂದಾದರು. ಈ ವೇಳೆ ಪ್ರಕರಣ ತಿಳಿಗೊಳಿಸಲು ಪೊಲೀಸರು ಹರಸಾಹಸಪಟ್ಟರು.

    ಇನ್ನೂ ಸುಶ್ಮಿತಾ ಸಾವಿನಲ್ಲೂ ಪೋಷಕರು ಕಣ್ಣು ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ.

  • ಹಣದ ಹಿಂದೆ ಬಿದ್ದಿದ್ದ, ಚಿನ್ನ ಮಾರಿ ಮನೆ ಖರೀದಿಸಿ ಹೊರ ಹಾಕ್ದ: ಗಾಯಕಿ ಸುಶ್ಮಿತಾ ತಾಯಿ

    ಹಣದ ಹಿಂದೆ ಬಿದ್ದಿದ್ದ, ಚಿನ್ನ ಮಾರಿ ಮನೆ ಖರೀದಿಸಿ ಹೊರ ಹಾಕ್ದ: ಗಾಯಕಿ ಸುಶ್ಮಿತಾ ತಾಯಿ

    ಬೆಂಗಳೂರು: ಖ್ಯಾತ ಗಾಯಕಿ ಸುಶ್ಮಿತಾ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಾಯಿ ಪ್ರತಿಕ್ರಿಯಿಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸುಶ್ಮಿತಾ ಅವರ ತಾಯಿ, ಎಲ್ಲರೂ ಸೇರಿ ನನ್ನ ಮಗಳನ್ನು ಪ್ಲಾನ್ ಮಾಡಿ ಕೊಲೆ ಮಾಡಿದ್ದಾರೆ. 150 ಗ್ರಾಂ ಚಿನ್ನ ಕೊಟ್ಟು ನಾನು ನನ್ನ ಮಗಳ ಮದುವೆ ಮಾಡಿಸಿದ್ದೆ. ಆದರೆ ಶರತ್ ಆ ಚಿನ್ನವನ್ನು ಮಾರಿ ತನ್ನ ಹೆಸರಿನಲ್ಲಿ ಮನೆಯನ್ನು ಖರೀದಿಸಿದ್ದಾನೆ. ಬಳಿಕ ನನ್ನ ಮಗಳಿಗೆ ಮನೆಯಿಂದ ಹೊರ ಹೋಗು ಎಂದು ಬಲವಂತ ಮಾಡುತ್ತಿದ್ದನು. ಶರತ್ ಹಣದ ಹಿಂದೆ ಬಿದ್ದಿದ್ದನು. ನನ್ನ ಮಗಳಿಗೆ ಪ್ರೀತಿ ನೀಡಿಲ್ಲ. ಆಕೆಗೆ ಏನೂ ಕೊಡಿಸಲಿಲ್ಲ. ನನ್ನ ಮಗಳು ಬೇರೆ ಬೇರೆ ಶಾಲೆಯಲ್ಲಿ ಮ್ಯೂಸಿಕ್ ಟೀಚರ್ ಆಗಿ ಕೆಲಸ ಮಾಡುತ್ತಿದ್ದಳು. ಆಕೆಗೆ 45 ಸಾವಿರ ರೂ. ಸಂಬಳ ಬರುತ್ತಿತ್ತು ಎಂದು ತಿಳಿಸಿದರು. ಇದನ್ನೂ ಓದಿ: ‘ಅಮ್ಮಾ, ನನ್ನ ಪತಿಯನ್ನು ಸುಮ್ಮನೆ ಬಿಡಬೇಡ’ – ಖ್ಯಾತ ಗಾಯಕಿ ಸುಶ್ಮಿತಾ ಆತ್ಮಹತ್ಯೆ

    ಶರತ್ ನನ್ನ ಮಗಳಿಗೆ ಯಾವುದೋ ಮಾತ್ರೆಗಳನ್ನು ನೀಡುತ್ತಿದ್ದನು. ಅಲ್ಲದೆ ಆಕೆಗೆ ನೀನು ಮಗುವಿನ ಆಸೆ ಇಟ್ಟುಕೊಳ್ಳಬೇಡ ಎಂದು ಹೇಳಿದ್ದನಂತೆ. ನನ್ನ ಮಗಳು ಸಾವನ್ನಪ್ಪಿದ್ದಾಳೆ ಎಂಬ ವಿಷಯ ಶರತ್ ಕುಟುಂಬಸ್ಥರಿಗೆ ತಿಳಿಸಿದರೆ, ಅವಳು ಬದುಕಿದ್ದಾಳಾ, ಸತ್ತಿದ್ದಾಳಾ ಎಂದು ಶರತ್ ದೊಡ್ಡಮ್ಮ ಕೇಳಿದ್ದಾರೆ. ನಾನು ಕೂಲಿ ಮಾಡಿ ನನ್ನ ಮಗಳನ್ನು ಸಾಕಿದ್ದೇನೆ. ನಾನು ನನ್ನ ಮಗಳನ್ನು ಪುರುಷನಂತೆ ಸಾಕಿದ್ದೇನೆ. ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಾಳೆ ಎಂದು ನಾನು ಎಂದುಕೊಂಡಿರಲಿಲ್ಲ. ನನ್ನ ಮಗಳಿಲ್ಲದ ಜೀವನ ನನಗೆ ಬೇಡ. ನಾನು ಸತ್ತು ಹೋಗುತ್ತೇನೆ ಎಂದು ಸುಶ್ಮಿತಾ ತಾಯಿ ಕಣ್ಣೀರು ಹಾಕಿದ್ದಾರೆ.

    ಶರತ್, ಆತನ ದೊಡ್ಡಮ್ಮ ಹಾಗೂ ಕುಟುಂಬಸ್ಥರು ಆಕೆಯನ್ನು ಮನೆಯಿಂದ ಹೊರ ಹಾಕಲು ಪ್ಲಾನ್ ಮಾಡಿದ್ದಾರೆ. ಆದರೆ ನನ್ನ ಮಗಳು ಮರ್ಯಾದೆಗೆ ಅಂಜಿ ಮನೆಯಿಂದ ಹೊರ ಹೋಗಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಶರತ್ ಹಾಗೂ ಆತನ ಕುಟುಂಬಸ್ಥರು ನನ್ನ ಮಗಳಿಗೆ ಕಿರುಕುಳ ನೀಡಿದ್ದಾರೆ. ಆದರೆ ಈಗ ನನ್ನ ತಾಯಿಯ ಮರ್ಯಾದೆ ಹೋಗುತ್ತೆ ಎಂದು ಸುಶ್ಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶರತ್ ನನ್ನ ಮಗಳ ಮೇಲೆ ಹಲ್ಲೆ ಮಾಡಿದ್ದಾನೆ. ನನ್ನ ಮಗಳು ಶರತ್ ಕಾಲು ಹಿಡಿದುಕೊಂಡು ನನ್ನನ್ನು ಬಿಡಬೇಡ ಎಂದು ಅಂಗಲಾಚಿದರೂ, ಆತನ ಮನಸ್ಸು ಕರಗಲಿಲ್ಲ ಎಂದು ಸುಶ್ಮಿತಾ ತಾಯಿ, ಶರತ್ ಹಾಗೂ ಆತನ ಕುಟುಂಬಸ್ಥರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

  • ‘ಅಮ್ಮಾ, ನನ್ನ ಪತಿಯನ್ನು ಸುಮ್ಮನೆ ಬಿಡಬೇಡ’ – ಖ್ಯಾತ ಗಾಯಕಿ ಸುಶ್ಮಿತಾ ಆತ್ಮಹತ್ಯೆ

    ‘ಅಮ್ಮಾ, ನನ್ನ ಪತಿಯನ್ನು ಸುಮ್ಮನೆ ಬಿಡಬೇಡ’ – ಖ್ಯಾತ ಗಾಯಕಿ ಸುಶ್ಮಿತಾ ಆತ್ಮಹತ್ಯೆ

    – ನನ್ನನ್ನು ನಮ್ಮ ಊರಿನಲ್ಲಿ ಮಣ್ಣು ಮಾಡು ಅಥವಾ ಸುಡು
    – ಎಷ್ಟೇ ಬೇಡಿಕೊಂಡರೂ ಪತಿ ಮನಸ್ಸು ಕರಗಲಿಲ್ಲ

    ಬೆಂಗಳೂರು: ನನ್ನ ಪತಿಯನ್ನು ಸುಮ್ಮನೆ ಬಿಡಬೇಡ ಎಂದು ತಾಯಿಗೆ ವಾಟ್ಸಪ್ ಮೆಸೇಜ್ ಕಳುಹಿಸಿ ಎಂದು ಬೆಂಗಳೂರಿನಲ್ಲಿ ಖ್ಯಾತ ಗಾಯಕಿ ಸುಶ್ಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಸುಶ್ಮಿತಾ(26) ಆತ್ಮಹತ್ಯೆಗೆ ಶರಣಾದ ಗಾಯಕಿ. ಸುಶ್ಮಿತಾ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುವ ಶರತ್ ಕುಮಾರ್ ಅವರನ್ನು ಮದುವೆ ಆಗಿದ್ದರು. ಸುಶ್ಮಿತಾ ತನ್ನ ತಾಯಿ ಹಾಗೂ ತಮ್ಮನಿಗೆ ವಾಟ್ಸಪ್ ಮೂಲಕ ಸಂದೇಶ ರವಾನಿಸಿ ನಾಗರಬಾವಿಯಲ್ಲಿರುವ ತನ್ನ ತಾಯಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ವಾಟ್ಸಪ್‍ನಲ್ಲಿ ಕಳುಹಿಸಿದ್ದೇನು?
    ಅಮ್ಮ ನನ್ನನ್ನು ಕ್ಷಮಿಸು. ನಾನು ಮಾಡಿಕೊಂಡ ತಪ್ಪಿಗೆ ನಾನೇ ಶಿಕ್ಷೆ ಅನುಭವಿಸಿದ್ದೇನೆ. ನನ್ನನ್ನು ದಯವಿಟ್ಟು ಕ್ಷಮಿಸು. ನನ್ನ ಪತಿ ತನ್ನ ದೊಡ್ಡಮ್ಮನ ಮಾತು ಕೇಳಿ ನನಗೆ ಚಿತ್ರಹಿಂಸೆ ಕೊಡುತ್ತಿದ್ದರು. ನಾನು ಏನೇ ಮಾತನಾಡಿದ್ರೂ ನನಗೆ ಮನೆ ಬಿಟ್ಟು ಹೋಗು ಎಂದು ಹೇಳುತ್ತಿದ್ದರು. ನನಗೆ ಮಾನಸಿಕವಾಗಿ ತುಂಬಾ ಕಿರುಕುಳ ನೀಡುತ್ತಿದ್ದರು. ಅವರನ್ನು ಮಾತ್ರ ಸುಮ್ಮನೆ ಬಿಡಬೇಡ. ನನ್ನ ಸಾವಿಗೆ ಶರತ್, ವೈದೇಹಿ, ಗೀತಾ ನೇರವಾಗಿ ಕಾರಣ. ನಾನು ಎಷ್ಟು ಬೇಡಿಕೊಂಡರೂ ಕಾಲು ಹಿಡಿದರೂ ಅವನ ಮನಸ್ಸು ಕರಗಲಿಲ್ಲ.

    ಅಲ್ಲದೆ ಶರತ್ ಮನೆಯಲ್ಲಿ ನನಗೆ ಸಾಯಲು ಇಷ್ಟವಿರಲಿಲ್ಲ. ಮದುವೆ ಆದಾಗಿನಿಂದ ಇದೇ ರೀತಿ ಹಿಂಸೆ. ಅಮ್ಮ ಯಾರ ಹತ್ತಿರ ಈ ನೋವನ್ನು ಹೇಳಿಕೊಂಡಿರಲಿಲ್ಲ. ನನ್ನನ್ನು ನಮ್ಮ ಊರಿನಲ್ಲಿ ಮಣ್ಣು ಮಾಡು ಅಥವಾ ಸುಡು. ನನ್ನ ಕಾರ್ಯವನ್ನು ತಮ್ಮನೇ ಮಾಡಲಿ. ಅವರನ್ನ ಮಾತ್ರ ಸುಮ್ಮನೆ ಬಿಡಬೇಡ, ಇಲ್ಲದಿದ್ದರೆ ನನ್ನ ಆತ್ಮಕ್ಕೆ ಶಾಂತಿ ಸಿಗಲ್ಲ. ಅಮ್ಮ ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ. ನಿನಗೋಸ್ಕರ ನನ್ನ ತಮ್ಮ ಸಚಿನ್ ಇದ್ದಾನೆ. ಅವನನ್ನು ಚೆನ್ನಾಗಿ ನೋಡಿಕೊ. ಕೊನೆಯಾದಾಗಿ ತಮ್ಮ ಬಳಿ ಮತ್ತೊಮ್ಮೆ ಕ್ಷಮೆಯಾಚಿಸುತ್ತೇನೆ. ಅಮ್ಮನಿಗೆ ತೊರಿಸು ಮರಿಬೇಡ ಎಂದು ಸುಶ್ಮಿತಾ ವಾಟ್ಸಪ್‍ನಲ್ಲಿ ಕಳುಹಿಸಿದ್ದರು.

    ಎಂಬಿಎ ಪದವೀಧರೆ ಆಗಿರುವ ಸುಶ್ಮಿತಾ ‘ಹಾಲು-ತುಪ್ಪ’, ‘ಶ್ರೀಸಾಮಾನ್ಯ’ ಸೇರಿ ಹಲವು ಸಿನಿಮಾಗಳಲ್ಲಿ ಹಾಡಿದ್ದಾರೆ. ಸದ್ಯ ಈ ಬಗ್ಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.