Tag: Suspect

  • ಕೇರಳದಲ್ಲಿ ರೈಲಿಗೆ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣ – ಪರಾರಿಯಾಗಿದ್ದ ಆರೋಪಿ ಅರೆಸ್ಟ್

    ಕೇರಳದಲ್ಲಿ ರೈಲಿಗೆ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣ – ಪರಾರಿಯಾಗಿದ್ದ ಆರೋಪಿ ಅರೆಸ್ಟ್

    ಮುಂಬೈ: ಕೇರಳದಲ್ಲಿ ಭಾನುವಾರ ರಾತ್ರಿ ಸಹ ಪ್ರಯಾಣಿಕನೊಂದಿಗೆ ಜಗಳವಾಡಿ ರೈಲಿಗೆ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗುಪ್ತಚರ (Central Intelligence) ಮತ್ತು ಭಯೋತ್ಪಾದನಾ ನಿಗ್ರಹ (Anti Terrorism) ಅಧಿಕಾರಿಗಳ ಜಂಟಿ ತಂಡ ಬುಧವಾರ ಶಂಕಿತ ಆರೋಪಿಯನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಶಾರುಖ್ ರೈಲಿಗೆ ಬೆಂಕಿ ಹಚ್ಚಿದ ಶಂಕಿತ ಆರೋಪಿಯಾಗಿದ್ದು, ಮಹಾರಾಷ್ಟ್ರದ (Maharashtra) ರತ್ನಗಿರಿ (Ratnagiri) ಜಿಲ್ಲೆಯಲ್ಲಿ ಆತನನ್ನು ಬಂಧಿಸಲಾಗಿದೆ. ಕೇರಳ ಪೊಲೀಸರ ತಂಡವೂ ರತ್ನಗಿರಿ ತಲುಪಿದ್ದು, ಶಂಕಿತ ಆರೋಪಿಯನ್ನು ಶೀಘ್ರದಲ್ಲೇ ಅವರಿಗೆ ಹಸ್ತಾಂತರಿಸಲಾಗುವುದು ಎಂದು  ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ವ್ಯಕ್ತಿ – ಮೂವರು ಸಾವು 

    ಪ್ರಕರಣದ ಹಿಂದಿನ ಉದ್ದೇಶವು ಇನ್ನೂ ಸ್ಪಷ್ಟವಾಗಿಲ್ಲ. ಕೋಝಿಕ್ಕೋಡ್ (Kozhikode) ಜಿಲ್ಲೆಯ ಎಲತ್ತೂರ್ ಬಳಿ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದ ವಾದದ ನಂತರ ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮಂಗಳವಾರ ಕಣ್ಣೂರು ನಿಲ್ದಾಣದಲ್ಲಿ ರೈಲಿನ ಕೋಚ್‌ಗಳನ್ನು ಪರೀಕ್ಷಿಸಿ ವಿಧಿವಿಜ್ಞಾನ ಸಾಕ್ಷಿಗಳನ್ನು ಸಂಗ್ರಹಿಸಿದೆ. ಘಟನೆಯ ವೇಳೆ ಅಲ್ಲಿದ್ದ ಕೆಲವು ಪ್ರಯಾಣಿಕರು ಮತ್ತು ರೈಲ್ವೆ ಸಿಬ್ಬಂದಿಯನ್ನೂ ಎನ್‌ಐಎ ವಿಚಾರಣೆಗೊಳಪಡಿಸಿದೆ. ಇದನ್ನೂ ಓದಿ: ವರನ ಕೊಲೆಗೆ ಸ್ಕೆಚ್‌ ಹಾಕಿ ಸ್ಫೋಟಕ ತುಂಬಿ ಗಿಫ್ಟ್‌ ಕೊಟ್ಟ ವಧುವಿನ ಮಾಜಿ ಲವ್ವರ್!  

    ಪ್ರಕರಣದ ತನಿಖೆಗಾಗಿ ಕೇರಳ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದರು. ಅಲ್ಲದೇ ಶಂಕಿತ ಆರೋಪಿಯ ಕುರಿತು ಮಾಹಿತಿ ನೀಡಿದವರಿಗೆ 2 ಲಕ್ಷ ರೂ. ಬಹುಮಾನ ಘೋಷಿಸಿದ್ದರು. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದ ರಜಾಕ್ ನೀಡಿದ ಸಾಕ್ಷಿ ವಿವರಣೆಯ ಆಧಾರದ ಮೇಲೆ ಪೊಲೀಸರು ಶಂಕಿತ ಆರೋಪಿಯ ರೇಖಾಚಿತ್ರವನ್ನೂ (Sketch) ಬಿಡುಗಡೆ ಮಾಡಿದ್ದರು.

    ರೇಖಾಚಿತ್ರವು ಗಡ್ಡ ಮತ್ತು ಕ್ಯಾಪ್ ಹೊಂದಿರುವ ವ್ಯಕ್ತಿಯನ್ನು ಒಳಗೊಂಡಿದ್ದು, ಗಾಢ ಬಣ್ಣದ ಶರ್ಟ್ ಮತ್ತು ಪ್ಯಾಂಟ್ ಧರಿಸಿದ್ದ. ಆತನ ಬಗ್ಗೆ ಯಾವುದೇ ಮಾಹಿತಿ ದೊರೆತರೂ ತಕ್ಷಣವೇ ತಿಳಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದರು. ಇದನ್ನೂ ಓದಿ: ಯುವತಿ ಮೇಲೆ ಅತ್ಯಾಚಾರವೆಸಗಿ ಚಿನ್ನಾಭರಣ ಕದ್ದು ಪರಾರಿ – ಮಹಿಳೆ ಸೇರಿ ಐವರ ವಿರುದ್ಧ ಕೇಸ್ 

    ಅಲಪ್ಪುಳ- ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲು ಕೋಝಿಕ್ಕೋಡ್ ನಗರವನ್ನು ದಾಟಿ ಕೇರಳದ (Kerala) ಕೊರಾಪುಳ ರೈಲ್ವೆ ಸೇತುವೆಯನ್ನು ತಲುಪಿತ್ತು. ಈ ವೇಳೆ ಅನಾಮಿಕನೊಬ್ಬ ಸಹ ಪ್ರಯಾಣಿಕನೊಂದಿಗೆ ಜಗಳವಾಡಿ, ನಂತರ ಆತನಿಗೆ ಬೆಂಕಿ (Fire) ಹಚ್ಚಿದ ಪರಿಣಾಮ 9 ಮಂದಿ ಗಾಯಗೊಂಡಿದ್ದಾರೆ. ಘಟನೆ ನಡೆದ ಕೂಡಲೇ ವ್ಯಕ್ತಿ ಪರಾರಿಯಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಕಚ್ಚಾ ತೈಲ ಮೇಲಿನ ವಿಂಡ್‌ಫಾಲ್‌ ತೆರಿಗೆ ಕಡಿತಗೊಳಿಸಿದ ಭಾರತ

    ಘಟನೆಯಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದರು. ಅದರಲ್ಲೂ 5 ಮಂದಿ ಗಂಭೀರ ಗಾಯಗೊಂಡಿದ್ದು, ಅವರನ್ನು ಕೋಝಿಕ್ಕೋಡ್‌ನ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಮೂವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವರದಿಗಳು ತಿಳಿಸಿವೆ. ಇದನ್ನೂ ಓದಿ: ಸಿಕ್ಕಿಂನಲ್ಲಿ ಭಾರೀ ಹಿಮಪಾತ – 6 ಸಾವು, ಹಲವರು ನಾಪತ್ತೆ

  • ಗಾಂಜಾ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದ ಆರೋಪಿ ಸಾವು – ಸಿಐಡಿ ತನಿಖೆಗೆ ಶಿಫಾರಸು

    ಗಾಂಜಾ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದ ಆರೋಪಿ ಸಾವು – ಸಿಐಡಿ ತನಿಖೆಗೆ ಶಿಫಾರಸು

    ಬೆಳಗಾವಿ: ಎನ್‍ಡಿಪಿಎಸ್ (NDPS) ಪ್ರಕರಣದಲ್ಲಿ ಪೊಲೀಸ್ (Police) ವಶದಲ್ಲಿದ್ದ ಆರೋಪಿಯೊಬ್ಬ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು, ಪ್ರಕರಣವನ್ನು ಕಮಿಷನರ್ ಡಾ.ಎಂ.ಬಿ.ಬೋರಲಿಂಗಯ್ಯ ಸಿಐಡಿ (CID) ತನಿಖೆಗೆ ಶಿಫಾರಸು ಮಾಡಿದ್ದಾರೆ.

    ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಈರನಗೌಡ ಪಾಟೀಲ್ (45) ಸಾವನ್ನಪ್ಪಿದ ಆರೋಪಿ. ನಿನ್ನೆ ಸಂಜೆ ಗಾಂಜಾ ಪ್ರಕರಣದಲ್ಲಿ ಬೆಳಗಾವಿ ಗ್ರಾಮೀಣ ಪೊಲೀಸರು ಬಸನಗೌಡ ಈರನಗೌಡ ಪಾಟೀಲ್‍ನನ್ನು ಬಂಧಿಸಿ ಕರೆತರುವಾಗ ಕಾಕತಿ ಗ್ರಾಮದ ಮಾರ್ಗಮಧ್ಯೆಯೇ ಆತನ ಆರೋಗ್ಯ ಹದಗೆಟ್ಟಿದೆ. ಈ ವೇಳೆ ಪೊಲೀಸರು ಪ್ರಾಥಮಿಕ ಚಿಕಿತ್ಸೆ ನೀಡಿ ಆತನ ಆರೋಗ್ಯ ಸುಧಾರಿಸಿದ ನಂತರ ಠಾಣೆಗೆ ಕರೆತಂದು ಮತ್ತೆ ವಿಚಾರಣೆಗೆ ಒಳಪಡಿಸುವ ಸಮಯದಲ್ಲಿ ಆರೋಪಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಇದನ್ನೂ ಓದಿ: ಬೆಳಗಾವಿ ಲಾಕಪ್‌ಡೆತ್ ಕೇಸ್: ಪೊಲೀಸರಿಂದ್ಲೇ ಚಿತ್ರಹಿಂಸೆ – ಮೃತನ ಪುತ್ರಿ ಆರೋಪ

    ಬಳಿಕ ಆರೋಪಿಯನ್ನು ಬೀಮ್ಸ್‌ಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಆರೋಪಿ ಚಿಕಿತ್ಸೆ ಫಲಕಾರಿ ಆಗದೇ ಸಾವನ್ನಪ್ಪಿದ್ದಾನೆ. ಸದ್ಯ ಪ್ರಕರಣವನ್ನು ಸಿಐಡಿ ತನಿಖೆ ನಡೆಸುವಂತೆ ಶಿಫಾರಸು ಮಾಡಲಾಗಿದೆ ಎಂದು ಡಿಸಿಪಿ ರವೀಂದ್ರ ಗಡಾದಿ ತಿಳಿಸಿದ್ದಾರೆ. ಇದನ್ನೂ ಓದಿ: ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ರಥ ಬೀದಿಯಲ್ಲಿ ಅರೆಬರೆ ವಸ್ತ್ರ ಧರಿಸಿದವರ ಸಂಚಾರಕ್ಕೆ ನಿಷೇಧ!

    Live Tv
    [brid partner=56869869 player=32851 video=960834 autoplay=true]

  • ನೀರಿನ ತೊಟ್ಟಿಗೆ ಬಿದ್ದು ಬಾಣಂತಿ ಸಾವು- ಪೋಷಕರಿಂದ ಕೊಲೆ ಆರೋಪ

    ನೀರಿನ ತೊಟ್ಟಿಗೆ ಬಿದ್ದು ಬಾಣಂತಿ ಸಾವು- ಪೋಷಕರಿಂದ ಕೊಲೆ ಆರೋಪ

    ಹಾಸನ : ನೀರಿನ ಸಂಪ್‍ನೊಳಗೆ(ತೊಟ್ಟಿ) ಬಿದ್ದು ಬಾಣಂತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಮಾಲೇಕಲ್ ತಿರುಪತಿ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ಕೆಲವರು ಸೂಟು ಹೊಲಿಸಿ ಸಿಎಂ ಆಗುವ ತಿರುಕನ ಕನಸು ಕಾಣ್ತಿದ್ದಾರೆ: ರೇಣುಕಾಚಾರ್ಯ

    ಭವ್ಯ(19) ನೀರಿನ ತೊಟ್ಟಿಯಲ್ಲಿ ಬಿದ್ದು ಸಾವನ್ನಪ್ಪಿದ ಬಾಣಂತಿಯಾಗಿದ್ದಾಳೆ. ಆದರೆ ಭವ್ಯ ಪೋಷಕರು ಇದು ಕೊಲೆಯೆಂದು ಆರೋಪಿಸುತ್ತಿದ್ದಾರೆ. ಭವ್ಯ ಎರಡು ತಿಂಗಳ ಹಿಂದೆಯಷ್ಟೇ ಗಂಡು ಮಗುವಿಗೆ ಜನ್ಮ ನೀಡಿದ್ದು, ಕೊರೊನಾ ಕಾರಣದಿಂದ ಬಾಣಂತನಕ್ಕೆ ತವರು ಮನೆಗೆ ಹೋಗದೇ, ಗಂಡನ ಮನೆಯಲ್ಲಿಯೇ ಉಳಿದುಕೊಂಡಿದ್ದಳು. ಆದರೆ ಇಂದು ಭವ್ಯ ನೀರಿನ ತೊಟ್ಟಿಯಲ್ಲಿ ಬಿದ್ದು ಸಾವಪ್ಪಿದ್ದಾಳೆ. ಇದನ್ನೂ ಓದಿ: ಆಶಾ ಕಾರ್ಯಕರ್ತೆಯರಿಗೆ ಬಾಗಿನ, ಚಿನ್ನದ ಮೂಗುತಿ ಗಿಫ್ಟ್ ಕೊಟ್ಟ ಯುವಕ

    ಮೃತ ಭವ್ಯ ಸಂಬಂಧಿಕರು ಭವ್ಯ ಗಂಡ ಹಾಗೂ ಅವರ ಮನೆಯವರ ವಿರುದ್ಧ ಕೊಲೆ ಆರೋಪವನ್ನು ಮಾಡುತ್ತಿದ್ದಾರೆ. ಒಂದು ವರ್ಷದ ಹಿಂದೆ ಮೇಳೇನಹಳ್ಳಿ ಗ್ರಾಮದ ಭವ್ಯ ಅವರನ್ನು ತಿರುಪತಿ ಮಾಲೇಕಲ್ ಗ್ರಾಮದ ಜಗದೀಶ್ ಜೊತೆ ಮದುವೆ ಮಾಡಲಾಗಿತ್ತು. ಮದುವೆಯಾದಾಗಿನಿಂದಲೂ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದರು ಎಂದು ಭವ್ಯ  ಪೋಷಕರು ಆರೋಪಿಸುತ್ತಿದ್ದಾರೆ.

  • ಉಸಿರಾಟದ ತೊಂದರೆಯಿಂದ ನಡುರಸ್ತೆಯಲ್ಲೇ ನರಳಾಡಿದ ಕೊರೊನಾ ಶಂಕಿತ

    ಉಸಿರಾಟದ ತೊಂದರೆಯಿಂದ ನಡುರಸ್ತೆಯಲ್ಲೇ ನರಳಾಡಿದ ಕೊರೊನಾ ಶಂಕಿತ

    ಗದಗ: ಕೊರೊನಾ ಶಂಕಿತ ವ್ಯಕ್ತಿಯೋರ್ವ ನಡುರಸ್ತೆಯಲ್ಲಿ ಬಿದ್ದು ನರಳಾಡುತ್ತಿರುವ ದೃಶ್ಯ ಗದಗ ನಗರದ ಬೆಟಗೇರಿ ಭಾಗದಲ್ಲಿ ಕಂಡು ಬಂದಿದೆ.

    ನಡುರಸ್ತೆಯಲ್ಲಿ ನರಳಾಡಿದ ವ್ಯಕ್ತಿ ನಗರದ ಕುರಹಟ್ಟಿಪೆಟೆ ನಿವಾಸಿ ಎನ್ನಲಾಗಿದೆ. ಗಂಟಲು ನೋವು, ಹೊಟ್ಟೆ ಉರಿ, ಎದೆ ಉರಿ ಎಂದು ಎದೆ ಬಡಿದುಕೊಂಡು ನರಳಾಡುತ್ತಿದ್ದರೂ ಯಾರು ಮುಟ್ಟಿಲ್ಲ. ಕೂಡಲೇ 108 ವಾಹನಕ್ಕೆ ಫೋನ್ ಮಾಡಿದರೂ ವಾಹನ ಬರಲಿಲ್ಲ. ಒಂದು ಗಂಟೆ ತಡವಾಗಿ ಬಂದಿದ್ದಕ್ಕೆ ಸ್ಥಳೀಯರು ಅಂಬುಲೆನ್ಸ್ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಕೊರೊನಾ ಇರಬಹುದು ಎಂದು ತಿಳಿದು ಯುವಕನನ ಬಳಿ ಹೋಗಲು ಯಾರೂ ಮುಂದಾಗಿಲ್ಲ. ಅವನ ಸಂಕಷ್ಟದ ಕೂಗು ಕೇಳಲಾಗದೇ ಓರ್ವ ವ್ಯಕ್ತಿ ಸಹಾಯಕ್ಕೆ ಮುಂದಾಗಿದ್ದಾನೆ. ನೀರು ಕುಡಿಸಿ ಸಮಾಧಾನ ಮಾಡಿದ್ದಾನೆ. 108 ಅಂಬುಲೆನ್ಸ್ ತಡವಾಗಿದ್ದಕ್ಕೆ ಅವನೇ ಹೊತ್ತುಕೊಂಡು ಆಸ್ಪತ್ರೆಗೆ ಹೋಗಲು ಮುಂದಾಗಿದ್ದು, ಅಷ್ಟರಲ್ಲಿ ಅಂಬುಲೆನ್ಸ್ ಬಂದ ಹಿನ್ನೆಲೆ ವಾಹನದ ಮೂಲಕ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಎಲ್ಲರೂ ನಿಂತು ನೋಡುವ ಸಂದರ್ಭದಲ್ಲಿ ಓರ್ವ ಯುವಕ ಏನನ್ನು ಯೋಚಿಸದೇ ಅವನ ಸಹಾಯಕ್ಕೆ ಬಂದು ಜೀವ ಉಳಿಸಲು ಮುಂದಾಗಿರುವುದು ನಿಜಕ್ಕೂ ಮೆಚ್ಚಲೇಬೇಕಾದ ವಿಚಾರವಾಗಿದೆ. ನಡುರಸ್ತೆಯಲ್ಲಿ ನರಳಾಡುತ್ತಿದ್ದ ವ್ಯಕ್ತಿ ಸದ್ಯ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುವಕನನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ವರದಿಗಾಗಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಕಾಯುತ್ತಿದೆ.

  • ಹಾಸನದ ರಸ್ತೆ ಬದಿಯಲ್ಲಿ ಅಪರಿಚಿತ ವ್ಯಕ್ತಿಯ ನರಳಾಟ- ಕೋವಿಡ್‌ ಆಸ್ಪತ್ರೆಗೆ ದಾಖಲು

    ಹಾಸನದ ರಸ್ತೆ ಬದಿಯಲ್ಲಿ ಅಪರಿಚಿತ ವ್ಯಕ್ತಿಯ ನರಳಾಟ- ಕೋವಿಡ್‌ ಆಸ್ಪತ್ರೆಗೆ ದಾಖಲು

    ಹಾಸನ: ನಗರದ ಅರಳೇಪೇಟೆಯ ರಸ್ತೆ ಬದಿಯಲ್ಲಿ ಅಸ್ವಸ್ಥನಾಗಿ ನರಳುತ್ತಿದ್ದ ಅನುಮಾನಸ್ಪದ ವ್ಯಕ್ತಿ ಓರ್ವನನ್ನು ಅಂಬುಲೆನ್ಸ್‌ ಮೂಲಕ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಹಾಸನ ನಗರದ ಅರಳೇಪೇಟೆ ರಸ್ತೆಯ ಮನೆಯೊಂದರ ಮುಂದೆ ಮಲಗಿದ್ದು, ರಾತ್ರಿಯಲ್ಲೇ ಅಕ್ಕ-ಪಕ್ಕದ ಮನೆ ಬಾಗಿಲು ಬಡಿದು ಭಯ ಮೂಡಿಸಿದ್ದ. ಬೆಳಿಗ್ಗೆ ಮನೆ ಬಾಗಿಲು ತೆಗೆದು ಎದ್ದು ಹೋಗುವಂತೆ ಹೇಳಿದ್ದಾರೆ. ಆತನು ಮೇಲಕ್ಕೆ ಎದ್ದೇಳಲು ಆಗುತ್ತಿರಲಿಲ್ಲ. ಹೀಗಾಗಿ ಕೊರೊನಾ ಇರುವುದರಿಂದ ಈ ಬೀದಿಯಲ್ಲಿರುವ ನಿವಾಸಿಗಳು ಈತನನ್ನು ನೋಡಿ ಭಯಗೊಂಡಿದ್ದರು.

    ಈತ ಯಾರು ಎಂದು ತಿಳಿದಿಲ್ಲ. ಆತನನ್ನು ಕೇಳಿದರೇ ನನ್ನ ಹೆಸರು ಪ್ರಭಾಕರ್ 62 ವರ್ಷ, ಇಲ್ಲೇ ಮನೆಯಿದೆ ಎಂದು ಹೇಳುತ್ತಿದ್ದ. ಇವನ ಮಾತುಗಳು ಕೇಳಿ ಹೆದರಿದ ನಿವಾಸಿಗಳು 108 ತುರ್ತು ವಾಹನಕ್ಕೆ ಕರೆ ಮಾಡಿದ್ದರು.

    ಈತನ ಬಳಿ ಬೆಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ಕೆಲ ಮಾಹಿತಿಗಳು ಲಭ್ಯವಾಗಿದೆ. ಅಲ್ಲಿಂದ ಇಲ್ಲಿಗೆ ಹೇಗೆ ಬಂದಿರಬಹುದು? ಇಂದಿನಿಂದ ಬೆಂಗಳೂರು ಲಾಕ್‍ಡೌನ್ ಇರುವುದರಿಂದ ತಪ್ಪಿಸಿಕೊಂಡು ಬಂದಿರಬಹುದೇ, ಇಲ್ಲವೇ ಕೊರೊನಾದಿಂದ ನರಳುತ್ತಿರಬಹುದೇ ಎಂಬ ಅನುಮಾನಗಳು ಮೂಡಿದೆ.

  • ಕೊರೊನಾ ಶಂಕಿತ ವೃದ್ಧ ಆಸ್ಪತ್ರೆಯಿಂದ ಎಸ್ಕೇಪ್ ಆಗಲು ಯತ್ನ

    ಕೊರೊನಾ ಶಂಕಿತ ವೃದ್ಧ ಆಸ್ಪತ್ರೆಯಿಂದ ಎಸ್ಕೇಪ್ ಆಗಲು ಯತ್ನ

    ಮಡಿಕೇರಿ: ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಶಂಕಿತ ವೃದ್ಧ ರೋಗಿಯೊಬ್ಬ ಎಸ್ಕೇಪ್ ಆಗಲು ಯತ್ನಿಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.

    ಕೇರಳದ ವಯನಾಡಿನ 70 ವರ್ಷದ ವೃದ್ಧನಿಗೆ ಕೊರೊನಾ ಸೋಂಕು ಶಂಕೆಯ ಆಧಾರದಲ್ಲಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಈ ವೃದ್ಧ ಆಸ್ಪತ್ರೆಯಿಂದ ಹೊರಬಂದು ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ. ಇದರಿಂದ ಆಸ್ಪತ್ರೆ ಸಿಬ್ಬಂದಿ ಒಂದು ಕ್ಷಣಕ್ಕೆ ದಿಗ್ಭ್ರಮೆಗೊಂಡಿದ್ದಾರೆ.

    ತಕ್ಷಣವೇ ಎಚ್ಚೆತ್ತುಕೊಂಡ ನರ್ಸ್ ಹಾಗೂ ಸ್ವಚ್ಛತಾ ಸಿಬ್ಬಂದಿ ಪೊಲೀಸ್ ಸಹಾಯ ಪಡೆದು ವೃದ್ಧನನ್ನು ಹುಡುಕಾಡಿದ್ದಾರೆ. ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ವೃದ್ಧ ಮಡಿಕೇರಿ ನಗರದ ಶಾಂತಿ ಚರ್ಚ್ ಬಳಿ ಹೋಗುತ್ತಿದ್ದ ಎನ್ನಲಾಗಿದೆ. ಅಲ್ಲಿಗೆ ಹುಡುಕಿಕೊಂಡು ಹೋದ ನರ್ಸ್ ಹಾಗೂ ಸ್ವಚ್ಛತಾ ಸಿಬ್ಬಂದಿ ಆತನನ್ನು ಕರೆತಂದಿದ್ದಾರೆ. ಬಳಿಕ ಸಾರ್ವಜನಿಕ ಜೀಪ್ ಒಂದರ ಮೂಲಕ ಆಸ್ಪತ್ರೆಗೆ ವಾಪಸ್ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

  • ಜಪಾನ್ ಹಡಗಿನಲ್ಲಿದ್ದ ವ್ಯಕ್ತಿಗೆ ಕೊರೊನಾ ಶಂಕೆ- ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲು

    ಜಪಾನ್ ಹಡಗಿನಲ್ಲಿದ್ದ ವ್ಯಕ್ತಿಗೆ ಕೊರೊನಾ ಶಂಕೆ- ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲು

    ಉಡುಪಿ: ಮಹಾಮಾರಿ ಕೊರೊನಾ ವೈರಸ್ ಕರಾವಳಿ ಜಿಲ್ಲೆ ಉಡುಪಿಯಲ್ಲಿ ಆತಂಕ ಹುಟ್ಟಿಸಿದೆ. ಒಂದೇ ದಿನ ನಾಲ್ಕು ಶಂಕಿತ ಪ್ರಕರಣ ಜಿಲ್ಲೆಯಲ್ಲಿ ದಾಖಲಾಗಿದ್ದು, ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಶುಕ್ರವಾರ ಸಂಜೆ ಶಿರ್ವ ಮೂಲದ ವ್ಯಕ್ತಿ ದಾಖಲಾಗಿದ್ದಾರೆ.

    ಕಾಪು ತಾಲೂಕು ಶಿರ್ವ ಮೂಲದ 37 ವರ್ಷ ಪ್ರಾಯದ ಯುವಕ ಇತ್ತೀಚೆಗೆ ಕೊರೊನಾ ವೈರಸ್ ಕಾರಣಕ್ಕಾಗಿ ನಿರ್ಬಂಧಿತವಾಗಿದ್ದ ಜಪಾನಿ ಹಡಗಿನಲ್ಲಿ ನೌಕರಿಯಲ್ಲಿದ್ದರು. ವೈದ್ಯಕೀಯ ಪರೀಕ್ಷೆಯ ವೇಳೆ ಅವರಲ್ಲಿ ಕೊರೊನಾ ಸೋಂಕು ಪತ್ತೆಯಾಗದ ಕಾರಣ ಬಿಡುಗಡೆಗೊಂಡು ದುಬೈಗೆ ತೆರಳಿ, ರಜೆಯಲ್ಲಿ ಊರಿಗೆ ವಾಪಸ್ ಆಗಿದ್ದರು.

    ಶಂಕಿತ ವ್ಯಕ್ತಿಯಲ್ಲಿ ಕೆಮ್ಮು, ಶೀತ, ಜ್ವರದ ತೊಂದರೆ ಕಾಣಿಸಿಕೊಂಡಿಲ್ಲ. ಉಸಿರಾಟದ ತೊಂದರೆಯೊಂದಿಗೆ ಭೇದಿ ಹಾಗೂ ವಿಪರೀತ ಹೊಟ್ಟೆನೋವು ಇರುವ ಕಾರಣ ಶುಕ್ರವಾರ ಸಂಜೆ ಜಿಲ್ಲಾಸ್ಪತ್ರೆಗೆ ಬಂದು ಇಲ್ಲಿನ ಪ್ರತ್ಯೇಕಿತ ವಾರ್ಡ್‍ಗೆ ದಾಖಲಾಗಿದ್ದಾರೆ. ಗಂಟಲಿನ ದ್ರವ ಹಾಗೂ ರಕ್ತದ ಸ್ಯಾಂಪಲ್‍ಗಳನ್ನು ಪರೀಕ್ಷೆಗಾಗಿ ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಸುಧೀರ್ ಚಂದ್ರಸೂಡ ಮಾಹಿತಿ ನೀಡಿದರು.

  • ‘ತುಳು ಭಾಷೆಯಲ್ಲಿ ಮಾತನಾಡುತ್ತಿದ್ದ’- ಶಂಕಿತ ವ್ಯಕ್ತಿಯ ಬಗ್ಗೆ ಆಟೋ ಚಾಲಕ ಹೇಳಿದ್ದೇನು?

    ‘ತುಳು ಭಾಷೆಯಲ್ಲಿ ಮಾತನಾಡುತ್ತಿದ್ದ’- ಶಂಕಿತ ವ್ಯಕ್ತಿಯ ಬಗ್ಗೆ ಆಟೋ ಚಾಲಕ ಹೇಳಿದ್ದೇನು?

    ಮಂಗಳೂರು: ಇಂದು ಬೆಳಗ್ಗೆಯಿಂದ ಆತಂಕಕ್ಕೆ ಕಾರಣವಾಗಿದ್ದ ಮಂಗಳೂರು ಬಾಂಬ್ ಪತ್ತೆ ಪ್ರಕರಣ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಯೊಂದು ಹೊರಬಂದಿದೆ. ಶಂಕಿತ ಆರೋಪಿಯನ್ನು ವಿಮಾನ ನಿಲ್ದಾಣದಕ್ಕೆ ಕರೆದುಕೊಂಡ ಬಂದ ಆಟೋ ಚಾಲಕ ಸ್ವತಃ ತಾನೇ ಪೊಲೀಸರ ಎದುರು ಹಾಜರಾಗಿದ್ದಾನೆ.

    ಇಂದು ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಪ್‍ಟಾಪ್ ಬ್ಯಾಗ್‍ನಲ್ಲಿ ಸಜೀವ ಬಾಂಬ್ ಒಂದು ಪತ್ತೆಯಾಗಿ ಆತಂಕ ಹುಟ್ಟಿಸಿತ್ತು. ಆದರೆ ಅದನ್ನು ಗಮನಿಸಿದ್ದ ಸಿಬ್ಬಂದಿಗಳು ಬಾಂಬ್ ಸ್ಕ್ವಾಡ್ ಮೂಲಕ ಕೆಂಜಾರು ಮೈದಾನದಕ್ಕೆ ತೆಗೆದುಕೊಂಡು ಸ್ಫೋಟಿಸಿ, ಭಾರೀ ದುರಂತವೊಂದನ್ನು ತಪ್ಪಿಸಿದ್ದರು. ಇದನ್ನು ಓದಿ: ಬಾಂಬ್ ಸ್ಫೋಟಿಸಿದ್ದು ಹೇಗೆ? ಇಂದು ಬೆಳಗ್ಗೆಯಿಂದ ಸಂಜೆಯವರೆಗೆ ಏನಾಯ್ತು? – ಇಲ್ಲಿದೆ ಪೂರ್ಣ ವಿವರ

    ಆಟೋದಲ್ಲಿ ಬಂದ ಅಪರಿಚಿತನೋರ್ವ ಟಿಕೆಟ್ ಕೌಂಟರ್ ಬಳಿ ಕಪ್ಪು ಬಣ್ಣದ ಬ್ಯಾಗ್ ಇರಿಸಿ ನಾಪತ್ತೆ ಆಗಿದ್ದ. ಮಂಗಳೂರು ವಿಮಾನ ನಿಲ್ದಾಣದ ಸಿಸಿಟಿವಿ ದೃಶ್ಯಗಳ ಫೋಟೋಗಳು ಲಭ್ಯವಾಗಿದ್ದು, ಕ್ಯಾಪ್ ಹಾಕಿರುವ ಒಬ್ಬ ಕೈಯಲ್ಲಿ ಬ್ಯಾಗ್ ಹಿಡಿದಿದ್ದಾನೆ. ಈ ವ್ಯಕ್ತಿ ನಿಲ್ದಾಣದಿಂದ ಹೊರಹೋಗುವುದನ್ನು ಫೋಟೋಗಳು ಸಿಕ್ಕಿದ್ದವು. ಹಾಗೆಯೇ ಶಂಕಿತ ಬಂದಿದ್ದ ಎನ್ನಲಾದ ಆಟೋದ ಎರಡು ಫೋಟೋಗಳು ಸಹ ಲಭಿಸಿತ್ತು. ಇದನ್ನು ಓದಿ: ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಶಂಕಿತ ಇವನೇನಾ?

    ಈ ಫೋಟೋಗಳಲ್ಲಿ ಆರೋಪಿ ವಿಮಾನ ನಿಲ್ದಾಣದಕ್ಕೆ ಆಟೋದಲ್ಲಿ ಬಂದ ಫೋಟೋ ಕೂಡ ಲಭಿಸಿತ್ತು. ಸುದ್ದಿ ತಿಳಿದ ಆಟೋದ ಚಾಲಕ ಪೊಲೀಸ್ ಠಾಣೆಗೆ ಬಂದು ಸ್ವತಃ ಶರಣಾಗಿದ್ದು, ಶಂಕಿತ ಆರೋಪಿಯ ಬಗ್ಗೆ ಮಾಹಿತಿ ನೀಡಿದ್ದಾನೆ. ನನ್ನ ಆಟೋದಲ್ಲಿ ಬಂದ ಶಂಕಿತ ಆರೋಪಿ ತುಳುನಲ್ಲಿ ಮಾತನಾಡುತ್ತಿದ್ದ. ಜೊತೆಗೆ ನನಗೆ 400 ರೂ. ಬಾಡಿಗೆ ಕೊಟ್ಟು ಪಂಪ್‍ವೆಲ್ ಬಳಿ ಇಳಿದುಕೊಂಡು ಹೋದ ಎಂದು ಹೇಳಿದ್ದಾನೆ. ಆಟೋ ಚಾಲಕನ ಮಾಹಿತಿ ಮೇರೆಗೆ ಮೂರು ವಿಶೇಷ ತಂಡಗಳನ್ನು ರಚಿಸಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

  • ಜಿಹಾದಿ ಗ್ಯಾಂಗ್ ಹೆಸರಲ್ಲಿ ಜಮೀನು ಖರೀದಿಗೆ ಮುಂದಾಗಿದ್ದ ಶಂಕಿತ ಉಗ್ರರು!

    ಜಿಹಾದಿ ಗ್ಯಾಂಗ್ ಹೆಸರಲ್ಲಿ ಜಮೀನು ಖರೀದಿಗೆ ಮುಂದಾಗಿದ್ದ ಶಂಕಿತ ಉಗ್ರರು!

    – ಇಬ್ಬರು ಶಂಕಿತ ಉಗ್ರರು ತಮಿಳುನಾಡು ಪೊಲೀಸರಿಗೆ ಹಸ್ತಾಂತರ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜಿಹಾದಿ ಗ್ಯಾಂಗ್ ಸದಸ್ಯರ ಬಂಧನ ಪ್ರಕರಣದಿಂದ ಒಂದೊಂದೆ ಸತ್ಯಾಂಶಗಳು ಹೊರ ಬರುವುದಕ್ಕೆ ಶುರುವಾಗಿವೆ. ಇಡೀ ದಕ್ಷಿಣ ಭಾರತವನ್ನು ಟಾರ್ಗೆಟ್ ಮಾಡಿದ್ದ ಜಿಹಾದಿ ಗ್ಯಾಂಗ್ ಸದಸ್ಯರಿಗೆ ಭರ್ಜರಿ ಟಾಸ್ಕ್ ನೀಡಲಾಗುತ್ತಿತ್ತು ಎನ್ನಲಾಗಿದೆ.

    ಜಿಹಾದಿಗಳು ವ್ಯವಸ್ಥಿತ ಜಾಲ ಹೆಣೆಯಲು ಪಕ್ಕಾ ಪ್ಲ್ಯಾನ್ ಮಾಡಿದ್ದರು. ಮತ್ತೊಂದು ಆಘಾತಕಾರಿ ವಿಚಾರವೆಂದರೆ ಗುಂಡ್ಲುಪೇಟೆ ತಾಲೂಕಿನಲ್ಲಿ ಟ್ರೈನಿಂಗ್ ಕ್ಯಾಂಪ್ ಮಾಡಲು ಸ್ಕೆಚ್ ಹಾಕಿದ್ದರಂತೆ. ಜಿಹಾದಿ ಗ್ಯಾಂಗ್ ಸದಸ್ಯರಿಗೆ ಅಲ್ಲಿಯೇ ಶಸ್ತ್ರಾಸ್ತ್ರ ತರಬೇತಿಗೆ ಪ್ಲ್ಯಾನ್ ರೂಪಿಸಲಾಗಿತ್ತು ಎಂಬ ವಿಚಾರ ಪೊಲೀಸ್ ತನಿಖೆಯಲ್ಲಿ ಹೊರ ಬಿದ್ದಿದೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.

    ಸದ್ದುಗುಂಟೆಪಾಳ್ಯದಲ್ಲಿದ್ದ ಶಂಕಿತ ಉಗ್ರ ಮೆಹಬೂಬ್ ಪಾಷಾ ಸ್ಥಾಪಿಸಿದ್ದ ಟ್ರಸ್ಟ್ ಹೆಸರಿನಲ್ಲಿ ಜಮೀನು ಖರೀದಿಗೆ ಯತ್ನ ನಡೆದಿತ್ತು. ರಾಜ್ಯದ ಐಸಿಎ ಸಂಘಟನೆ ಮುಖ್ಯಸ್ಥ ಮೆಹಬೂಬ್ ಪಾಷಾ ಮೂಲಕ ಮನ್ಸೂರ್ ಖಾನ್‍ಗೆ ಜಮೀನು ಖರೀದಿಸುವ ಟಾಸ್ಕ್ ನೀಡಲಾಗಿತ್ತು. ಸಿಸಿಬಿ ಪೊಲೀಸರು ಇಬ್ಬರು ಶಂಕಿತರನ್ನು ಗುಂಡ್ಲುಪೇಟೆಯಲ್ಲಿ ವಶಕ್ಕೆ ಪಡೆದಿದ್ದರು. ಅಲ್ಲದೆ ದೆಹಲಿಯಲ್ಲಿ ಬಂಧಿತನಾಗಿದ್ದ ಖಾಜಾ ಮೊಯಿದ್ದೀನ್ ಜಿಹಾದಿ ಸದಸ್ಯರ ಮುಖ್ಯಸ್ಥನ ಸೂಚನೆಯಂತೆ ಎಲ್ಲವೂ ನಡೆಯುತ್ತಿತ್ತು. ಬೆಂಗಳೂರಿನ ಸದ್ದುಗುಂಟೆಪಾಳ್ಯದ ಮನೆಯಲ್ಲಿ ಪಿಸ್ತೂಲ್, ಜೀವಂತ ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

    ಶಂಕಿತ ಉಗ್ರರು:
    ಉಡುಪಿಯಲ್ಲಿ ಮಂಗಳವಾರ ಸೆರೆಸಿಕ್ಕ ಇಬ್ಬರು ಶಂಕಿತ ಉಗ್ರರಾದ ಅಬ್ದುಲ್ ಶಮೀಮ್ ಮತ್ತು ತೌಫಿಕ್‍ನನ್ನು ತಮಿಳುನಾಡು ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ವಿಲ್ಸನ್ ಶೂಟೌಟ್ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಇಬ್ಬರನ್ನೂ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಇಬ್ಬರು ಆರೋಪಿಗಳ ಬಂಧನಕ್ಕಾಗಿ ಕರ್ನಾಟಕ, ಕೇರಳ ಹಾಗೂ ತಮಿಳುನಾಡು ಪೊಲೀಸರು ತೀವ್ರ ಶೋಧ ನಡೆಸಿದ್ದರು.

    ಉಗ್ರರ ಚಟುವಟಿಕೆ ಶಂಕೆ ಹಿನ್ನೆಲೆ ತಮಿಳುನಾಡು ಕೇರಳ ಗಡಿಯ ಕಲಿಯಿಕ್ಕಾವಿಲ ಚೆಕ್‍ಪೋಸ್ಟ್ ನಲ್ಲಿ ವಾಹನಗಳ ತೀವ್ರ ತಪಾಸಣೆ ನಡೆಸಲಾಗುತ್ತಿತ್ತು. ಇದೇ ಮಾರ್ಗವಾಗಿ ಜನವರಿ 8ರ ರಾತ್ರಿ ಮಹೀಂದ್ರ ಸ್ಕಾರ್ಪಿಯೋದಲ್ಲಿ ಬಂದಿದ್ದ ಇಬ್ಬರು ಶಂಕಿತ ಉಗ್ರರು ವಿಲ್ಸನ್ ಅವರನ್ನು ಹತ್ಯೆಗೈದು ಪರಾರಿ ಆಗಿದ್ದರು. ಸದ್ಯ ಈ ಪ್ರಕರಣದ ತನಿಖೆ ನಡೆಸುತ್ತಿರುವ ತಮಿಳುನಾಡು ಕ್ಯೂ ಬ್ರಾಂಚ್ ಪೊಲೀಸರು, ರಾಜ್ಯದ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ, ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ.

  • ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಶಂಕಿತ ವ್ಯಕ್ತಿಯ ಓಡಾಟ- ಚೆಕ್ಕಿಂಗ್  ಕೌಂಟರ್‌ನಲ್ಲಿ  ಹೈ ಸೆಕ್ಯೂರಿಟಿ

    ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಶಂಕಿತ ವ್ಯಕ್ತಿಯ ಓಡಾಟ- ಚೆಕ್ಕಿಂಗ್ ಕೌಂಟರ್‌ನಲ್ಲಿ ಹೈ ಸೆಕ್ಯೂರಿಟಿ

    ಬೆಂಗಳೂರು: ಸೋಮವಾರ ರಾತ್ರಿ ಸಿಲಿಕಾನ್ ಸಿಟಿಯ ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬ ಕಾಣಿಸಿಕೊಂಡಿದ್ದು, ಮೆಟ್ರೋ ನಿಲ್ದಾಣಗಳಲ್ಲಿ ಹೈ ಸೆಕ್ಯೂರಿಟಿ ಚೆಕ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ.

    ಸೋಮವಾರ ರಾತ್ರಿ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಕ್ಕೆ ಬಂದ ವ್ಯಕ್ತಿಯೊಬ್ಬ ಮೆಟಲ್ ಡಿಟೆಕ್ಟರ್ ಬಳಿ ಹಾದು ಹೋದಾಗ ಸದ್ದಾಗಿದೆ. ಈ ವೇಳೆ ಆತನ ತಪಾಸಣೆ ಮಾಡಲು ಸೆಕ್ಯೂರಿಟಿ ಮುಂದಾಗಿದ್ದಾರೆ. ಆಗ ಆ ವ್ಯಕ್ತಿ ಎಸ್ಕೇಪ್ ಆಗಿದ್ದಾನೆ. ಆದ್ದರಿಂದ ಮೆಟ್ರೋ ನಿಲ್ದಾಣ ಹಾಗೂ ರೈಲ್ವೇ ನಿಲ್ದಾಣಕ್ಕೆ ಹೆಚ್ಚುವರಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ. ಅಲ್ಲದೆ ಶಂಕಿತ ವ್ಯಕ್ತಿಯನ್ನು ಸೆರೆಹಿಡಿಯಲು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

    ಮುಂಜಾಗೃತ ಕ್ರಮವಾಗಿ ಮೆಟ್ರೋ ನಿಲ್ದಾಣದಲ್ಲಿ ಹೈ ಸೆಕ್ಯೂರಿಟಿ ಹಾಗೂ ಪ್ರಯಾಣಿಕರ ಫುಲ್ ಚೆಕ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಅಲ್ಲದೆ ಜನರ ಬ್ಯಾಗ್‍ಗಳನ್ನು ನಿಲ್ದಾಣದ ಹೊರಗಡೆಯಿಂದಲೇ ಭದ್ರತಾ ಸಿಬ್ಬಂದಿ ತಪಾಸಣೆ ಮಾಡುತ್ತಿದ್ದಾರೆ. ಜೊತೆಗೆ ಮೆಟ್ರೋ ನಿಲ್ದಾಣದ ಹೊರಭಾಗದಲ್ಲಿ ಪೊಲೀಸರಿಂದ ಹೈ ಸೆಕ್ಯೂರಿಟಿ ನೀಡಲಾಗುತ್ತದೆ.

    ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟವಾದ ಹಿನ್ನೆಲೆ ದೇಶದಲ್ಲಿ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮುನ್ನೇಚ್ಚರಿಕೆ ಕ್ರಮವನ್ನು ಕೈಗೊಳ್ಳಲಾಗಿದೆ. ಈ ಹಿಂದೆ ಬೆಂಗಳೂರಿಗೆ ಉಗ್ರರು ಬಂದಿಳಿದಿದ್ದಾರೆ ಐಟಿ ಕಂಪನಿಗಳ ಮೇಲೆ ದಾಳಿ ನಡೆಸಲು ತಯಾರಿ ಮಾಡುತ್ತಿದ್ದಾರೆ ಎಂಬ ಸುದ್ದಿ ವೈರಲ್ ಆಗಿತ್ತು. ಭಾನುವಾರದಂದು ಬೆಂಗಳೂರು ಸಿಟಿ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು ಟ್ವಿಟ್ಟರ್ ಮೂಲಕ ಸ್ಪಷ್ಟಪಡಿಸಿದ್ದರು.