Tag: Sutturu Shri

  • `100’ರ ಸಂಭ್ರಮದಲ್ಲಿ ಪಬ್ಲಿಕ್ ಟಿವಿಯ `ಬೆಳಕು’

    `100’ರ ಸಂಭ್ರಮದಲ್ಲಿ ಪಬ್ಲಿಕ್ ಟಿವಿಯ `ಬೆಳಕು’

    ಬೆಂಗಳೂರು: ಇಂದು ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮಕ್ಕೆ ನೂರರ ಸಂಭ್ರಮ. ಬೆಳಕು ಎಂಬ ಶೀರ್ಷಿಕೆಯಡಿಯಲ್ಲಿ ಆರಂಭವಾಗ ಬೆಳಕು ಇಂದು ನೂರರ ಸಂಭ್ರಮದಲ್ಲಿದೆ. ಇಂದು ಈ ಕಾರ್ಯಕ್ರಮದ ಮುಲಕ ನೂರಾರು ಕುಟುಂಬಗಳಲ್ಲಿ ಬೆಳಕು ಮೂಡಿದೆ. ಬೆಳಕು ನೊಂದವರ ಪಾಲಿಗೆ ಬೆಳಕಾಗುವದೋಸ್ಕರ, ಬಡಪ್ರತಿಭಾವಂತರಿಗೆ ನೆರವಾಗುವ ಉದ್ದೇಶದಿಂದ ಆರಂಭವಾದ ಕಾರ್ಯಕ್ರಮ.

    ರಾಕ್‍ಲೈನ್ ವೆಂಕಟೇಶ್, ಲಹರಿ ಆಡಿಯೋ ಕಂಪನಿಯ ಮುಖ್ಯಸ್ಥರು ಮನೋಹರ್ ನಾಯ್ಡು, ನಟ ಯಶ್, ಸುತ್ತೂರು ಶ್ರೀಗಳು, ಕಣ್ವಾ ಮಾರ್ಟ್ ಮುಖ್ಯಸ್ಥ ನಂಜುಡಯ್ಯ ಮುಂತಾದ ಗಣ್ಯಾತೀಗಣ್ಯರು ಬೆಳಕು 100ರ ಸಂಚಿಕೆಗೆ ಸಾಕ್ಷಿಯಾದ್ರು.

    ಬೆಳಕು 100ರ ಸಂಚಿಕೆಯ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧಡೆಯಿಂದ ಜನರು ಆಗಮಿಸಿದ್ದರು. ಇನ್ನೂ ಬೆಳಕು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಜೀವನದಲ್ಲಿ ಬೆಳಕನ್ನು ಕಂಡಿರೋ ಅನೇಕರು ಆಗಮಿಸಿದ್ದರು.

     

    ಮೊದಲ ಸಂಚಿಕೆ: ಬೆಂಗಳೂರು ಹೊರವಲಯದ ನೆಲಮಂಗಲ ಬಳಿಯ ದಾಬಸ್‍ಪೇಟೆ ಬಳಿಯ ಪ್ರವೀಣ್ ಬೆಳಕು ಕಾರ್ಯಕ್ರಮದ ಮೊದಲನೇ ಸಂಚಿಕೆಗೆ ಬಂದಿದ್ದರು. ಆಟ ಆಡುವಾಗ ಪ್ರವೀಣ್ ಕಟ್ ಆಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿಸದ್ದರಿಂದ ತನ್ನ ಬಲಗೈಯನ್ನು ಕಳೆದುಕೊಂಡಿದ್ದನು. ಸರ್ಕಾರ ಪ್ರವೀಣನಿಗೆ 5000 ರೂ. ಪರಿಹಾರ ನೀಡಿ ಕೈ ತೊಳೆದುಕೊಂಡಿತ್ತು.

    ಬಲಗೈ ಕಳೆದುಕೊಂಡ್ರೂ ಪ್ರವೀಣ್ ಎಡಗೈ ಮೂಲಕ ಬರೆಯುವಲ್ಲಿ ಯಶಸ್ವಿಯಾಗಿದ್ದಾನೆ. ಇಂದು ಪ್ರವೀಣ್‍ನ ಶಿಕ್ಷಣ ವೆಚ್ಚವನ್ನು ಪಬ್ಲಿಕ್ ಟಿವಿ ನೀಡುತ್ತಿದೆ.

    ಚಿತ್ರದುರ್ಗದಿಂದ ಬಂದಂತಹ ಕಥೆಯಿದು ಹೃದಯ ಮಿಡಿಯುವ ಸ್ಟೋರಿ. ಪತಿಯಿಂದ ದೂರವಾದ ತಾಯಿ ಕೋರ್ಟ್ ಆವರಣದಲ್ಲಿ ಕಸ ಗುಡಿಸುವ ಮೂಲಕ ಸ್ವಾಭಿಮಾನ ಜೀವನ ಕಟ್ಟಿಕೊಂಡಿದ್ದರು. ಆದರೆ ಜೊತೆಯಲ್ಲಿದ್ದ ಕಂದನಿಗೆ ಹೃದಯದಲ್ಲಿ ರಂಧ್ರವಿದೆ ಎಂದು ತಿಳಿದಾಗ ತಾಯಿಗೆ ದಿಕ್ಕುತೋಚದಂತಾಗಿತ್ತು. ಕೊನೆಗೆ ತಾಯಿ ಪಬ್ಲಿಕ್ ಟಿವಿಗೆ ಬಂದು ತಮ್ಮ ನೋವನ್ನು ತೋಡಿಕೊಂಡಿದ್ದರು.

    ಪಬ್ಲಿಕ್ ಟಿವಿ ಮನವಿಯಂತೆ ನಗರದ ಜಯದೇವ ಆಸ್ಪತ್ರೆಯ ಮುಖ್ಯಸ್ಥ ಡಾ. ಮಂಜುನಾಥ್ ಅವರು ಮಗುವಿನ ಶಸ್ತ್ರ ಚಿಕಿತ್ಸೆಗೆ ಕೈ ಜೋಡಿಸಿದರು. ಇಂದು ಪುಟ್ಟ ಪೋರನ ಮುಖದಲ್ಲಿ ನಗು ಬಂದಿದೆ.

    ಕಾರ್ಯಕ್ರಮದ ಕೊನೆಗೆ ಸುತ್ತೂರು ಶ್ರೀಗಳು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಬೆಳಕು ಕಾರ್ಯಕ್ರಮದ ಸಹಾಯದ ಮೂಲಕ ವಿದ್ಯಾವಂತರಾಗಿ, ಸಹಾಯಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳುತ್ತೇವೆ. ಮುಂದೆ ನಾವು ಜೀವನದಲ್ಲಿ ಕಷ್ಟದಲ್ಲಿರುವರೆಗೂ ಸಹಾಯ ಮಾಡ್ತೇವೆ ಎಂದು ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.

    ಕಾರ್ಯಕ್ರಮ ಅಂತಿಮ ಘಟ್ಟದಲ್ಲಿ ಬೆಳಕು 100ನೇ ಸಂಚಿಕೆ ಆಗಮಿಸಿದ್ದ ಗಣ್ಯರಿಗೆ ನೆನಪಿನ ಕಾಣಿಕೆ ನೀಡಿ ಪಬ್ಲಿಕ್ ಟಿವಿಯಿಂದ ಗೌರವಿಸಲಾಯಿತು.

     

  • ಕತ್ತಲೆಯಲ್ಲಿಯ ಜನರ ಬಾಳಲ್ಲಿ ಬೆಳಕು ನೀಡುತ್ತಿದೆ ಈ ಕಾರ್ಯಕ್ರಮ: ಸುತ್ತೂರು ಶ್ರೀಗಳು

    ಕತ್ತಲೆಯಲ್ಲಿಯ ಜನರ ಬಾಳಲ್ಲಿ ಬೆಳಕು ನೀಡುತ್ತಿದೆ ಈ ಕಾರ್ಯಕ್ರಮ: ಸುತ್ತೂರು ಶ್ರೀಗಳು

    ಬೆಂಗಳೂರು: ನಾನು ಹೋದರೆ ಜಗತ್ತು ಹೇಗಿರುತ್ತೆಂದು ಸೂರ್ಯ ಯೋಚನೆ ಮಾಡ್ತಾಯಿದ್ದನಂತೆ. ಅವಾಗ ಕೊಠಡಿಯಲ್ಲಿದ್ದ ಸಣ್ಣ ಹಣತೆ ನೀನು ಅಸ್ತ ಆಗಬಹುದು. ನಾನು ಈ ಸಣ್ಣ ಕೊಠಡಿಯನ್ನು ಬೆಳಗ್ತಿನಿ. ಆದರೆ ಇಡೀ ಜನಗತ್ತನ್ನ ನಾನು ಬೆಳಗಲಾರೆ. ನನ್ನ ಸುತ್ತಲಿನ ಜನರಿಗೆ ಬೆಳಕನ್ನ ನೀಡಬಲ್ಲೆ ಎಂಬ ಉದಾಹರಣೆಯೊಂದಿಗೆ ಪಬ್ಲಿಕ್ ಟಿವಿ ಯ ಬೆಳಕು ಕಾರ್ಯಕ್ರಮ ಕತ್ತಲೆ ಯ ಜನರಿಗೆ ಬೆಳಕನ್ನು ನೀಡುವ ಕಾರ್ಯಕ್ರಮ ನೀಡುತ್ತಿದೆ ಎಂದು ಸುತ್ತೂರು ಶ್ರೀಗಳು ಹೇಳಿದ್ರು.

    ಕಾರ್ಗಿಲ್ ಯುದ್ಧವಾದ ನಂತರ ಜನರಿಂದ ಧನ ಸಹಾಯ ಕೇಳಲು ಹೊರಟಾಗ ಬೆಳಗ್ಗೆ ಒಂದು ಆಭರಣದ ಅಂಗಡಿಗೆ ಹೋದಾಗ ಅವರು ಇವಾಗ ಅಂಗಡಿ ಓಪನ್ ಮಾಡಿದ್ದೀನಿ.. ಇನ್ನೂ ಬೋನಿಯಾಗಿಲ್ಲ. ಇವಾಗ ಕೊಡಕಾಗಲ್ಲಬ ಎಂದು ಹೇಳಿ ಕಳಿಸದರು. ಮುಂದೆ ಒಬ್ಬ ಗಾಡಿ ಎಳೆಯುವ ಕೂಲಿ ಕಾರ್ಮಿಕ ಮುಂದಾದಗ ಆತ ನಮ್ಮನ್ನ ನೋಡಿ ತನ್ನು ಜೇಬಿನಲ್ಲಿರುವ ಹಿಂದಿನ ದಿನದ ಉಳಿಸಿದ ಹಣವೆನ್ನಲ್ಲಾ ನಮಗೆ ನೀಡಿದ. ವ್ಯಕ್ತಿಗೆ ಕೊಡೋ ಮನಸ್ಸಿರಬೇಕು ಅದು ಎಷ್ಟು ಅನ್ನೋದು ಮಹತ್ವ ಅಲ್ಲ ಎಂದು ಶ್ರೀಗಳು ತಿಳಿಸಿದರು.

    ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕು. ಒಂದು ಕೆಲಸವನ್ನು ಮಾಡಲು ಅದಕ್ಕೆ ಒಗ್ಗಿಕೊಳ್ಳಬೇಕು. ವ್ಯವಹಾರಿಕವಾಗಿ ಕೆಲಸ ಮಾಡದೇ ಅದನ್ನು ಮನಸ್ಸಿನಿಂದ ಮಾಡಿದಾಗ ಮಾತ್ರ ಅದು ಯಶ್ವಸಿಯಾಗುತ್ತದೆ.

    ಕೆಲವ್ರಿಗೆ ಕೊಡೊ ಮನಸ್ಸಿರುತ್ತೆ. ಆದರೆ ಅದು ಸರಿಯಾಗಿ ಉಪಯೋಗ ಆಗಲ್ಲ ಅನ್ನೋ ನಂಬಿಕೆಯಿರುತ್ತದೆ. ಆದರೆ ಇದನ್ನೆಲ್ಲಾ ಮೀರಿ ಬೆಳಕು ಕಾರ್ಯಕ್ರಮ ಮುಂದುವರಿಯುತ್ತದೆ.