Tag: Swami Vivekananda

  • ಏ.25 ರಂದು ಬೆಂಗಳೂರಿನಲ್ಲಿ ವಿವೇಕಾನಂದರ ಜೀವನಾಧಾರಿತ ‘ವೀರ ಸಂನ್ಯಾಸಿಯ ಆತ್ಮ ಗೀತೆ’ ಪ್ರದರ್ಶನ

    ಏ.25 ರಂದು ಬೆಂಗಳೂರಿನಲ್ಲಿ ವಿವೇಕಾನಂದರ ಜೀವನಾಧಾರಿತ ‘ವೀರ ಸಂನ್ಯಾಸಿಯ ಆತ್ಮ ಗೀತೆ’ ಪ್ರದರ್ಶನ

    – ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಆಯೋಜನೆ.
    – ಪರಮ್ ಕಲ್ಚರ್ ವತಿಯಿಂದ ಮಲ್ಟಿಮೀಡಿಯಾ ಪ್ರದರ್ಶನ
    – ಪ್ರಸಿದ್ಧ ಸಂಗೀತ ಸಂಯೋಜಕ ಪಂ. ಪ್ರವೀಣ್ ಡಿ. ರಾವ್, ನಿರ್ದೇಶಕ ಕಾರ್ತಿಕ್ ಸರಗೂರು ಸಾರಥ್ಯ

    ಬೆಂಗಳೂರು: ಪರಮ್ ಕಲ್ಚರ್ ವತಿಯಿಂದ ‘ವೀರ ಸಂನ್ಯಾಸಿಯ ಆತ್ಮ ಗೀತೆ ಸ್ವಾಮಿ ‘ ವಿವೇಕಾನಂದರ ಜೀವನ, ಕೃತಿ ಆಧಾರಿತ ಅತ್ಯದ್ಭುತ ಮಲ್ಟಿಮೀಡಿಯಾ ಪ್ರದರ್ಶನವನ್ನು ಏಪ್ರಿಲ್‌ 25 ರಂದು ಬೆಂಗಳೂರಿನ (Bengaluru)  ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಆಯೋಜಿಸಲಾಗಿದೆ.

    ಒಟ್ಟು 2 ಗಂಟೆಗಳ ಕಾಲಾವಧಿಯ ಪ್ರದರ್ಶನವಾಗಿದ್ದು, ಸುಮಾರು 35ಕ್ಕೂ ಅಧಿಕ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರು ಭಾಗಿಯಾಗಲಿದ್ದಾರೆ. ಪ್ರಖ್ಯಾತ ಸಂಗೀತ ಸಂಯೋಜಕರಾದ ಪಂ. ಪ್ರವೀಣ್ ಡಿ. ರಾವ್, ಹಾಗೂ ಚಲನಚಿತ್ರ ನಿರ್ದೇಶಕರಾದ ಕಾರ್ತಿಕ್ ಸರಗೂರು ಸಾರಥ್ಯದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಸಂಗೀತ, ನೃತ್ಯ, ನಾಟಕಗಳ ಮೂಲಕ ಸ್ವಾಮಿ ವಿವೇಕಾನಂದರ ಜೀವನ – ಚಿಂತನೆಗಳನ್ನು ವಿಜೃಂಭಣಾತ್ಮಕವಾಗಿ ತೋರಿಸುವ ಪ್ರಯತ್ನ ಇದಾಗಿದೆ.

    ಸ್ವಾಮಿ ವಿವೇಕಾನಂದರಿಂದಲೇ (Swami Vivekananda) ಇಂಗ್ಲಿಷ್, ಬಂಗಾಳಿ, ಸಂಸ್ಕೃತದಲ್ಲಿ ರಚಿಸಲ್ಪಟ್ಟ ಹಾಡುಗಳನ್ನು ಹಾಗೂ ಕನ್ನಡ ಸಾರಸ್ವತ ಲೋಕದ ರತ್ನಗಳಾದ, ಜಿ.ಎಸ್.ಶಿವರುದ್ರಪ್ಪ, ಕುವೆಂಪು ಸೇರಿದಂತೆ ಹಲವು ಪ್ರಖ್ಯಾತ ಕವಿಗಳು ವಿವೇಕಾನಂದರ ಬಗ್ಗೆ ಬರೆದ ಹಾಡುಗಳನ್ನು ಸಾದರಪಡಿಸಲಾಗುತ್ತದೆ. ಇದನ್ನೂ ಓದಿ: ಯುಎಸ್-ಚೀನಾ ಟಾರಿಫ್ ವಾರ್ ಮತ್ತಷ್ಟು ಜೋರು – ಚೀನಾ ಉತ್ಪನ್ನಗಳಿಗೆ 245% ಸುಂಕ ವಿಧಿಸಿದ ಅಮೆರಿಕ

    ಬೇಡಿಕೆ ಮೇರೆಗೆ ಮತ್ತೊಮ್ಮೆ ಆಯೋಜನೆ
    ಜನವರಿಯಲ್ಲಿ ಪ್ರದರ್ಶಿಸಲ್ಪಟ್ಟಿದ್ದ “ವೀರ ಸಂನ್ಯಾಸಿಯ ಆತ್ಮಗೀತೆ” ಯು, ಆಗ ಕಂಡ ಅಭೂತಪೂರ್ವ ಯಶಸ್ಸಿನಿಂದಾಗಿ, ಪ್ರೇಕ್ಷಕರ ಬೇಡಿಕೆಯ ಮೇರೆಗೆ ಈಗ ಮರುಪ್ರದರ್ಶನ ಕಾಣುತ್ತಿದೆ. ಸ್ವಾಮಿ ವಿವೇಕಾನಂದರ ತತ್ತ್ವ- ಆದರ್ಶಗಳನ್ನು ಮನೆ ಮನೆಗೂ ತಲುಪಿಸುವ ಸಲುವಾಗಿ “ಪರಮ್” ಇಂತಹದ್ದೊಂದು ಅದ್ಭುತ ಕಾರ್ಯಕ್ರಮವನ್ನು ಮತ್ತೆ ಆಯೋಜಿಸಿದೆ. ಬೇಸಿಗೆಯ ರಜೆಯಲ್ಲಿ ಮಕ್ಕಳಿಗೂ ತೋರಿಸಬಹುದಾದಂತಹ, ಕುಟುಂಬ ಸಮೇತ ಆಸ್ವಾದಿಸುವಂತಹ ಕಾರ್ಯಕ್ರಮ ಇದಾಗಿದೆ. ಇದನ್ನೂ ಓದಿ: 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ಅಡ್ಮಿಷನ್: ಮಧು ಬಂಗಾರಪ್ಪ

    ಏನಿದು ಪರಮ್‌ ವಿಜ್ಞಾನ ಮತ್ತು ಸಂಸ್ಕೃತಿ ಕೇಂದ್ರ?
    ಬೆಂಗಳೂರಿನ ಮಾಗಡಿರಸ್ತೆಯ ಚನ್ನೇನಹಳ್ಳಿಯಲ್ಲಿ ಸುಮಾರು 15 ಎಕರೆ ಜಾಗದಲ್ಲಿ ಪರಮ್ ವಿಜ್ಞಾನ ಮತ್ತು ಸಂಸ್ಕೃತಿ ಕೇಂದ್ರ ನಿರ್ಮಾಣಗೊಳ್ಳುತ್ತಿದೆ. ಈ ಕೇಂದ್ರವು, ಭಾರತದಲ್ಲಿ ರೂಪುಗೊಳ್ಳುತ್ತಿರುವ ಅತಿದೊಡ್ಡ ಮಲ್ಟಿ ಎಕ್ಸ್‌ಪೀರಿಯನ್ಸ್‌ ತಾಣವಾಗಿದೆ. ಇದು, ವಿಜ್ಞಾನ, ಇತಿಹಾಸ, ಕಲೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ವೇದಿಕೆಯನ್ನು ಒದಗಿಸಿ ಕೊಡಲಿದೆ. ಇಲ್ಲಿ, ವೈಜ್ಞಾನಿಕ ಆವಿಷ್ಕಾರಗಳೂ, ಸಾಂಸ್ಕೃತಿಕ ಕಲಿಕಾ ಸೌಲಭ್ಯಗಳೂ ಇರಲಿವೆ.

    ಪರಮ್‌ ವಿಜ್ಞಾನ ಮತ್ತು ಸಂಸ್ಕೃತಿ ಕೇಂದ್ರದಲ್ಲಿ, ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನ ಭವನ, ಪ್ರದರ್ಶನ ಭವನ, ವಿಜ್ಞಾನ ಕೇಂದ್ರ ಹಾಗೂ ಅತ್ಯುತ್ತಮ ಸೌಲಭ್ಯಗಳುಳ್ಳ ಅತಿಥಿ ಗೃಹಗಳು ನಿರ್ಮಾಣಗೊಳ್ಳುತ್ತಿವೆ. ಈ ಕೇಂದ್ರದ ಮೂಲಕ ಸೇವಾ ಸಂಸ್ಥೆಯು ಯುವ ಮನಸ್ಸುಗಳಿಗೆ ಆಧುನಿಕ ವಿಜ್ಞಾನ ಮತ್ತು ಭಾರತೀಯ ಪ್ರಾಚೀನ ವಿಜ್ಞಾನ, ಇತಿಹಾಸ, ಸಂಸ್ಕೃತಿ, ಕಲೆಯ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶ ಹೊಂದಿದೆ ಎನ್ನುತ್ತಾರೆ ಆಯೋಜನಕರು.

    ಎಲ್ಲಿ ಯಾವಾಗ?
    ದಿನಾಂಕ – ಏಪ್ರಿಲ್‌ 25
    ಸಮಯ – ಸಂಜೆ 6.30 ರಿಂದ 8.30
    ಸ್ಥಳ – ಚೌಡಯ್ಯ ಮೆಮೋರಿಯಲ್ ಹಾಲ್, ಮಲ್ಲೇಶ್ವರಂ, ಬೆಂಗಳೂರು
    ಸಂಪರ್ಕ ಸಂಖ್ಯೆ – 903503 4725, 83174 31009

  • ವಿವೇಕಾನಂದರ ಬಗ್ಗೆ ಅವಹೇಳನ – ಅಮೋಘ ಲೀಲಾ ದಾಸ್‌ಗೆ ನಿಷೇಧ ಹೇರಿದ ಇಸ್ಕಾನ್‌

    ವಿವೇಕಾನಂದರ ಬಗ್ಗೆ ಅವಹೇಳನ – ಅಮೋಘ ಲೀಲಾ ದಾಸ್‌ಗೆ ನಿಷೇಧ ಹೇರಿದ ಇಸ್ಕಾನ್‌

    ನವದೆಹಲಿ: ಪ್ರವಚನದಲ್ಲಿ ಸ್ವಾಮಿ ವಿವೇಕಾನಂದ (Swami Vivekananda) ಮತ್ತು ರಾಮಕೃಷ್ಣ ಪರಮಹಂಸ (Ramakrishna Paramahamsa) ಅವರನ್ನು ಅವಹೇಳನ ಮಾಡಿದ್ದಕ್ಕೆ ಆಧ್ಯಾತ್ಮಿಕ ಭಾಷಣಕಾರ ಅಮೋಘ ಲೀಲಾ ದಾಸ್ (Monk Amogh Lila Das) ಅವರಿಗೆ ಇಸ್ಕಾನ್‌ (ISKCON) 1 ತಿಂಗಳ ನಿಷೇಧವನ್ನು ಹೇರಿದೆ.

    ಇತ್ತೀಚಿಗೆ ನೀಡಿದ ಪ್ರವಚನದಲ್ಲಿ ಸ್ವಾಮಿ ವಿವೇಕಾನಂದ ಅವರು ಮೀನು ಆಹಾರ ಸೇವಿಸಿದ್ದನ್ನು ಪ್ರಶ್ನಿಸಿದ್ದರು. ದೈವಿಕ ವ್ಯಕ್ತಿಯು ಪ್ರಾಣಿಯನ್ನು ಕೊಂದು ಅದನ್ನು ತಿನ್ನುತ್ತಾನೆಯೇ? ಅವನು ಮೀನು ತಿನ್ನುತ್ತಾನೆಯೇ? ಮೀನು ಕೂಡ ನೋವು ಅನುಭವಿಸುತ್ತದೆ. ಮತ್ತು ವಿವೇಕಾನಂದರು ಮೀನು ತಿಂದರೆ, ದೈವಿಕ ವ್ಯಕ್ತಿ ಮೀನು ತಿನ್ನಬಹುದೇ ಎಂದು ಪ್ರಶ್ನಿಸಿದ್ದರು.

    ಒಬ್ಬ ದೈವಿಕ ಮಾನವನ ಹೃದಯದಲ್ಲಿ ದಯೆ ಇರುತ್ತದೆ. ಬದನೆಕಾಯಿ ನಮ್ಮ ಹಸಿವನ್ನು ನೀಗಿಸುತ್ತದೆ. ಹಾಗೆಂದ ಮಾತ್ರಕ್ಕೆ ತುಳಸಿಗಿಂತ ಬದನೆ ಉತ್ತಮ ಎಂದು ಹೇಳಬಹುದೇ? ಅಥವಾ ಭಗವದ್ಗೀತೆ ಅಧ್ಯಯನಕ್ಕಿಂತ ಫುಟ್ಬಾಲ್ ಆಡುವುದು ಮುಖ್ಯ ಎಂದು ಹೇಳುವುದು ಸರಿಯೇ?. ಸ್ವಾಮಿ ವಿವೇಕಾನಂದರ ಬಗ್ಗೆ ನನಗೆ ಅತ್ಯಂತ ಗೌರವವಿದೆ. ಅವರು ಇಲ್ಲೇ ಇದ್ದಿದ್ದರೆ ಅವರ ಮುಂದೆ ಸಾಷ್ಟಾಂಗ ನಮಸ್ಕಾರ ಮಾಡುತ್ತಿದ್ದೆ. ಆದರೆ ಅವರು ಹೇಳುವ ಎಲ್ಲವನ್ನೂ ನಾವು ಕುರುಡಾಗಿ ನಂಬಬಾರದು ಎಂದು ತಿಳಿಸಿದ್ದರು.  ಇದನ್ನೂ ಓದಿ: PublicTV Explainer: ನೀಲಿ ಆರ್ಥಿಕತೆ ಎಂದರೇನು? – ಭಾರತದಲ್ಲಿ ಹೇಗೆ ಕೆಲಸ ಮಾಡುತ್ತಿದೆ; ಕರ್ನಾಟಕದಲ್ಲಿ ನಿರೀಕ್ಷೆ ಏನು?

    ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್‌ ಆಗುತ್ತಿದ್ದಂತೆ ಅಮೋಘ ಲೀಲಾ ದಾಸ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ನೆಟ್ಟಿಗರಿಂದ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಇಸ್ಕಾನ್‌ ಅಮೋಘ ಲೀಲಾ ದಾಸ್ ಅವರ ಪ್ರವಚನಗಳಿಗೆ 1 ತಿಂಗಳ ಮಟ್ಟಿಗೆ ನಿಷೇಧ ಹೇರಿದೆ. ಅಷ್ಟೇ ಅಲ್ಲದೇ ಈ ಹೇಳಿಗೆ ವಿಷಾದ ವ್ಯಕ್ತಪಡಿಸಿದೆ.

    ಅಮೋಘ ಲೀಲಾ ದಾಸ್ ಯಾರು?
    43 ವರ್ಷದ ಅಮೋಘ ಲೀಲಾ ದಾಸ್ ಸನ್ಯಾಸಿಯಾಗಿದ್ದು 12 ವರ್ಷಗಳಿಂದ ಇಸ್ಕಾನ್‌ನೊಂದಿಗೆ ಸಂಬಂಧ ಹೊಂದಿದ್ದಾರೆ. ಅವರು ಪ್ರಸ್ತುತ ಇಸ್ಕಾನ್‌ನ ದ್ವಾರಕಾ ಚಾಪ್ಟರ್‌ನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

    ಲಕ್ನೋದ ಪಂಜಾಬಿ ಕುಟುಂಬದಲ್ಲಿ ಜನಿಸಿದ ಇವರ ನಿಜವಾದ ಹೆಸರು ಆಶಿಶ್‌ ಅರೋರಾ. ದೆಹಲಿ ಕಾಲೇಜ್ ಆಫ್ ಇಂಜಿನಿಯರಿಂಗ್‌ನಿಂದ 2004 ರಲ್ಲಿ ಸಾಫ್ಟ್‌ವೇರ್ ಎಂಜಿನಿಯರಿಂಗ್‌ನಲ್ಲಿ ಪದವಿಯನ್ನು ಪೂರ್ಣಗೊಳಿಸಿದ ಇವರು ಅಮೆರಿಕ ಮೂಲದ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. 2010 ರಲ್ಲಿ ಕಾರ್ಪೊರೇಟ್ ಕೆಲಸವನ್ನು ತೊರೆದು 29ನೇ ವಯಸ್ಸಿನಲ್ಲಿ ಇಸ್ಕಾನ್‌ ಸೇರಿದರು. ಧಾರ್ಮಿಕ ಪ್ರವಚನ ನೀಡುವ ಮೂಲಕ ಸಾಮಾಜಿಕ ಜಾಲಾತಣದಲ್ಲಿ ಅಪಾರ ಅಭಿಮಾನಿಗಳನ್ನು ಅಮೋಘ ಲೀಲಾ ದಾಸ್ ಹೊಂದಿದ್ದಾರೆ.

     

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇಸರಿ ಕಂಡರೆ ಕಾಂಗ್ರೆಸ್‌ಗೆ ಅಲರ್ಜಿ ಯಾಕೆ?- ವಿವೇಕ ಯೋಜನೆ ಸಮರ್ಥನೆ ಮಾಡಿಕೊಂಡ ಸಿಎಂ ಬೊಮ್ಮಾಯಿ

    ಕೇಸರಿ ಕಂಡರೆ ಕಾಂಗ್ರೆಸ್‌ಗೆ ಅಲರ್ಜಿ ಯಾಕೆ?- ವಿವೇಕ ಯೋಜನೆ ಸಮರ್ಥನೆ ಮಾಡಿಕೊಂಡ ಸಿಎಂ ಬೊಮ್ಮಾಯಿ

    ಬೆಂಗಳೂರು: ಶಾಲಾ ಕೊಠಡಿಗಳಿಗೆ ಕೇಸರಿ (Saffron) ಬಣ್ಣ ಹೊಡೆಯುವ ಸರ್ಕಾರದ ನಿರ್ಧಾರವನ್ನು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸಮರ್ಥನೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ಗೆ (Congress) ಕೇಸರಿ ಬಣ್ಣ ಕಂಡರೆ ಯಾಕೆ ಅಲರ್ಜಿ ಎಂದು ಕಿಡಿಕಾರಿದ್ದಾರೆ.

    ವಿವೇಕ ಯೋಜನೆಯಡಿ (Viveka Yojana) ನಿರ್ಮಾಣವಾಗುತ್ತಿರುವ ಶಾಲೆಗಳ ಕೊಠಡಿಗಳಿಗೆ ಕೇಸರಿ ಬಣ್ಣ ಹೊಡೆಯಲು ಸರ್ಕಾರ ಮುಂದಾಗಿದೆ. ಇದಕ್ಕೆ ಕಾಂಗ್ರೆಸ್ ಮತ್ತು ಮುಸ್ಲಿಂ ಸಂಘಟನೆಗಳು ವಿರೋಧ ಮಾಡಿವೆ. ವಿರೋಧ ಮಾಡಿದ ಕಾಂಗ್ರೆಸ್ ಮತ್ತು ಮುಸ್ಲಿಂ ಸಂಘಟನೆ ವಿರುದ್ಧ ಮುಖ್ಯಮಂತ್ರಿಗಳು ಕಿಡಿಕಾರಿದರು.

    ಎಲ್ಲದರಲ್ಲೂ ರಾಜಕಾರಣ ಮಾಡುವುದು ಇಂದು ಬಹಳ ಕೆಳಹಂತಕ್ಕೆ ಹೋಗುತ್ತಿದೆ. ಕೇಸರಿ ಬಣ್ಣ ನಮ್ಮ ಭಾರತದ ಬಾವುಟದಲ್ಲೇ ಇದೆ. ಕೇಸರಿ ಕಂಡರೆ ಅವರಿಗೆ ಯಾಕೆ ಅಷ್ಟೊಂದು ಅಲರ್ಜಿ? ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ಇನ್ಮುಂದೆ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ: ಪ್ರತಾಪ್ ಸಿಂಹ

    ಈ ಯೋಜನೆಯನ್ನು ಸ್ವಾಮಿ ವಿವೇಕಾನಂದ (Swami Vivekananda) ಅವರ ಹೆಸರಿನಲ್ಲಿ ಮಾಡುತ್ತಿದ್ದೇವೆ. ಸ್ವಾಮಿ ವಿವೇಕಾನಂದ ಒಬ್ಬ ಸನ್ಯಾಸಿ. ಅವರು ತೊಡುತ್ತಿದ್ದ ಎಲ್ಲಾ ವಸ್ತ್ರಗಳೂ ಕೇಸರಿ. ಹೀಗಾಗಿ ಅವರ ಹೆಸರಿನಲ್ಲಿ ಮಾಡುತ್ತಿರುವ ಯೋಜನೆಯಾದ್ದರಿಂದ ಶಾಲೆಗಳ ಕೊಠಡಿಗೆ ಕೇಸರಿ ಬಣ್ಣ ಹಚ್ಚಲಾಗುತ್ತಿದೆ. ಅದರಲ್ಲಿ ಬೇರೆ ಯಾವುದೇ ಅರ್ಥವಿಲ್ಲ. ವಿವೇಕ ಎಂದರೆ ಎಲ್ಲರಿಗೂ ಜ್ಞಾನ. ಇದರಲ್ಲೂ ರಾಜಕೀಯ ಮಾಡುವುದು ಸರಿಯಲ್ಲ ಎಂದು ಬೊಮ್ಮಾಯಿ ಕಾಂಗ್ರೆಸ್‌ಗೆ ತಿರುಗೇಟು ನೀಡಿದರು. ಇದನ್ನೂ ಓದಿ: ಮುಂದಿನ ವಾರದಿಂದ ಹಾಸನ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತೇನೆ: ಹೆಚ್‌.ಡಿ ದೇವೇಗೌಡ

    Live Tv
    [brid partner=56869869 player=32851 video=960834 autoplay=true]

  • ಮಾಜಿ ಸಿಎಂ ಬಿಪ್ಲಬ್ ದೇಬ್‌ರನ್ನು ಸ್ವಾಮಿ ವಿವೇಕಾನಂದ, ಗಾಂಧೀಜಿಗೆ ಹೋಲಿಸಿದ ಸಚಿವ ರತನ್ ಲಾಲ್ ನಾಥ್

    ಮಾಜಿ ಸಿಎಂ ಬಿಪ್ಲಬ್ ದೇಬ್‌ರನ್ನು ಸ್ವಾಮಿ ವಿವೇಕಾನಂದ, ಗಾಂಧೀಜಿಗೆ ಹೋಲಿಸಿದ ಸಚಿವ ರತನ್ ಲಾಲ್ ನಾಥ್

    ಅಗರ್ತಲಾ: ತ್ರಿಪುರಾದ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇವ್, ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧಿ, ರವೀಂದ್ರನಾಥ ಠಾಗೋರ್‌ರಂತಹ ಮಹನ್ ನಾಯಕ ಎಂದು ತ್ರಿಪುರಾದ ಶಿಕ್ಷಣ ಸಚಿವ ರತನ್ ಲಾಲ್ ನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ತ್ರಿಪುರಾದ ಧೈಲೆ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬಿಪ್ಲಬ್ ಕುಮಾರ್ ದೇವ್ ತ್ರಿಪುರಾದ ಮಹನ್ ನಾಯಕರಾಗಿದ್ದರು. ಇಲ್ಲಿನ ಪ್ರಜೆಗಳು ಇಂತಹ ನಾಯಕರನ್ನು ಪಡೆಯಲು ತುಂಬಾ ಅದೃಷ್ಟ ಮಾಡಿದ್ದರು ಎಂದು ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇವ್ ರಾಜೀನಾಮೆ

    ತ್ರಿಪುರಾದ ಜನ ಸರ್ಕಾರದ ಮೇಲೆ ಇಟ್ಟಿದ್ದಂತ ನಿರೀಕ್ಷೆಗಳಲ್ಲಿ ಕೆಲವನ್ನು ಬಿಪ್ಲಬ್ ದೇವ್ ಈಡೇರಿಸಿದ್ದಾರೆ. ಇಂತಹ ಮಹನ್ ನಾಯಕ ನಮ್ಮ ರಾಜ್ಯದಲ್ಲಿ ಹುಟ್ಟಿರುವುದು ನಮ್ಮ ಪುಣ್ಯ. ಸುಭಾಶ್ ಚಂದ್ರ ಬೋಸ್, ರವೀಂದ್ರನಾಥ್ ಠಾಕೂರ್, ಮಹಾತ್ಮ ಗಾಂಧಿ, ವಿವೇಕಾನಂದರಂತೆ ಬಿಪ್ಲಬ್ ದೇವ್ ನಮ್ಮ ರಾಜ್ಯದ ಮಹನ್ ನಾಯಕ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಕಪಾಳಕ್ಕೆ ಹೊಡೆದು ಮಾನಸಿಕ ಅಸ್ವಸ್ಥ ವೃದ್ಧನ ಹತ್ಯೆ – ಬಿಜೆಪಿ ಮುಖಂಡನಿಂದ ಕೃತ್ಯ

    ಬಿಪ್ಲಬ್ ಕುಮಾರ್ ದೇವ್ ಕೆಲದಿನಗಳ ಹಿಂದೆ ತ್ರಿಪುರಾ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಆ ಬಳಿಕ ಇದೀಗ ಸಿಎಂ ಆಗಿ ಡಾ. ಮಾಣಿಕ್ ಸಹಾ ಅಧಿಕಾರ ವಹಿಸಿಕೊಂಡಿದ್ದಾರೆ.

  • ವಿವೇಕಾನಂದರ ಬಗ್ಗೆ ಅವಹೇಳನಕಾರಿ ಲೇಖನ – ಶಿಕ್ಷಣ ಇಲಾಖೆ ಅಧಿಕಾರಿ ಅಮಾನತು

    ವಿವೇಕಾನಂದರ ಬಗ್ಗೆ ಅವಹೇಳನಕಾರಿ ಲೇಖನ – ಶಿಕ್ಷಣ ಇಲಾಖೆ ಅಧಿಕಾರಿ ಅಮಾನತು

    ರಾಯಚೂರು: ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಸ್ವಾಮಿ ವಿವೇಕಾನಂದರ 150ನೇ ಜಯಂತಿಯಂದು ಅವಹೇಳನಕಾರಿ ಲೇಖನ ಬರೆದು ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟ ಹಿನ್ನೆಲೆ ಅಮಾನತುಗೊಂಡಿದ್ದಾರೆ.

    ಸನಾವುಲ್ಲಾ ಅಮಾನತಾಗಿರುವ ಅಧಿಕಾರಿ. ಅವರು ಲಿಂಗಸುಗೂರು ತಾಲೂಕಿನಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿ(ಸಿಆರ್ ಪಿ) ಆಗಿ ಕೆಲಸ ಮಾಡುತ್ತಿದ್ದರು.

    ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವ್ಯಾಟ್ಸಾಪ್ ಗ್ರೂಪ್‍ನಲ್ಲಿ ವಿವೇಕಾನಂದರ ಬಗ್ಗೆ ಅವಹೇಳನಕಾರಿ ಲೇಖನ ಬರೆದು ಪೋಸ್ಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಆರ್ ಪಿ ಸನಾವುಲ್ಲಾನನ್ನು ಅಮಾನತುಗೊಳಿಸಲಾಗಿದೆ ಎಂದು ಡಿಡಿಪಿಐ ಜಿ.ಎಂ. ವೃಷಬೇಂದ್ರಯ್ಯ ತಿಳಿಸಿದ್ದಾರೆ. ಜಿಪಂ ಸಿಇಓ ಆದೇಶದ ಮೇರೆಗೆ ಸನಾವುಲ್ಲಾ ಅವರನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಬೆಳಗ್ಗೆ 3-4 ಗಂಟೆಯವರೆಗೆ ನನ್ನ ಮಕ್ಕಳ ಹೋಮ್ ವರ್ಕ್ ಮಾಡಿಸುತ್ತಿದ್ದೆ: ಪ್ರಿಯಾಂಕಾ ಗಾಂಧಿ

    ಸರ್ಕಾರಿ ನೌಕರನಾಗಿ ರಾಷ್ಟ್ರನಾಯಕನ ಬಗ್ಗೆ ಅವಹೇಳನ ಮಾಡಿದ್ದಾರೆ. ಸ್ವಾಮಿ ವಿವೇಕಾನಂದರ ಬಾಲ್ಯ ಜೀವನ, ಬದುಕಿನ ಬಗ್ಗೆ ಅವಹೇಳನ ಮಾಡುವ ಲೇಖನ ಬರೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಇದನ್ನೂ ಓದಿ: ಅಕ್ರಮವಾಗಿ ಒತ್ತುವರಿಯಾಗಿದ್ದ ಜಾಗ ಶಾಲೆಗೆ ವಾಪಸ್ – ತಹಶೀಲ್ದಾರ್‌ಗೆ ಗ್ರಾಮಸ್ಥರಿಂದ ಅಭಿನಂದನೆ

  • ಕಾಫಿನಾಡಿನಲ್ಲಿ ಚರ್ಚೆಗೆ ಗ್ರಾಸವಾಗಿದ್ದ ವಿವೇಕಾನಂದ ಮೂರ್ತಿಗೆ ಮುಕ್ತಿ

    ಕಾಫಿನಾಡಿನಲ್ಲಿ ಚರ್ಚೆಗೆ ಗ್ರಾಸವಾಗಿದ್ದ ವಿವೇಕಾನಂದ ಮೂರ್ತಿಗೆ ಮುಕ್ತಿ

    ಚಿಕ್ಕಮಗಳೂರು: ಕಳೆದೊಂದು ವಾರದಿಂದ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ನಗರದ ದಂಟರಮಕ್ಕಿ ಕೆರೆ ಮಧ್ಯೆಯಲ್ಲಿದ್ದ ಸ್ವಾಮಿ ವಿವೇಕಾನಂದರ ಮೂರ್ತಿಗೆ ಕೊನೆಗೂ ಮುಕ್ತಿ ಸಿಕ್ಕಿದೆ.

    ಸ್ವಾಮಿ ವಿವೇಕಾನಂದ ಮೂರ್ತಿ ನಿರ್ಮಾಣಗೊಂಡು ವರ್ಷಗಳೇ ಕಳೆದಿದ್ದರೂ ವಿರೂಪಗೊಂಡಿದ್ದ ಮೂರ್ತಿಯನ್ನು ಬದಲಿಸಲು ಯಾರೂ ಮುಂದಾಗಿರಲಿಲ್ಲ. ಅಲ್ಲಲ್ಲೇ ಪ್ಯಾಚ್ ವರ್ಕ್ ಮೂಲಕ ಅದೇ ಮೂರ್ತಿಯನ್ನು ಪುನಃ ಸರಿ ಮಾಡಿದ್ದರು. ಆದರೆ ಆ ಮೂರ್ತಿಯ ಬಣ್ಣ, ನಿಂತ ಭಂಗಿ ನೋಡಿ ವಿವೇಕಾನಂದರದ್ದು ಎಂದಷ್ಟೇ ಹೇಳಬಹುದಿತ್ತೋ ವಿನಃ. ಅದನ್ನು ಯಾರೂ ಕೂಡ ವಿವೇಕಾನಂದರು ಎಂದು ಒಪ್ಪಿಕೊಳ್ಳಲು ಸಿದ್ಧರಿರಲಿಲ್ಲ.

    ಈ ಮೂರ್ತಿಯನ್ನು ಕಂಡ ಸ್ಥಳೀಯರು ಹಾಗೂ ಪ್ರವಾಸಿಗರು ವಿವೇಕಾನಂದರ ಮೂರ್ತಿಗೆ ಮನಬಂದತೆ ವಿಶ್ಲೇಷಿಸಿದ್ದರು. ಕಳೆದೊಂದು ವಾರದಿಂದಂತೂ ಸಾಮಾಜಿಕ ಜಾಲತಾಣದಲ್ಲಿ ಯುವಸಮೂಹ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಹಾಗಾಗಿ ಇಂದು ಆ ಮೂರ್ತಿಯನ್ನು ನೆಲಸಮಗೊಳಿಸಿದ್ದು ಫೈಬರ್ ನಿಂದ ಸಿದ್ಧಗೊಂಡಿರೋ ಹೊಸ ಮೂರ್ತಿಯನ್ನು ಅದೇ ಜಾಗದಲ್ಲಿ ಪ್ರತಿಷ್ಠಾಪಿಸುವುದಾಗಿ ನಗರಸಭೆ ಮಾಜಿ ಅಧ್ಯಕ್ಷ ಹಾಗೂ ವಿವೇಕಾನಂದರ ಮೂರ್ತಿ ನಿರ್ಮಾಣದಲ್ಲಿ ಮುಂದಾಳತ್ವ ವಹಿಸಿದ್ದ ಮುತ್ತಯ್ಯ ಸ್ಪಷ್ಟಪಡಿಸಿದ್ದಾರೆ.

    ಸರ್ಕಾರದ ಹಣ ಬಳಸಿಲ್ಲ ಸಿ.ಟಿ.ರವಿ: ಯಾವಾಗ ಸಾಮಾಜಿಕ ಜಾಲತಾಣದಲ್ಲಿ ವಿವೇಕಾನಂದರ ಮೂರ್ತಿ ಬಗ್ಗೆ ಯುವಸಮೂಹ ತೀವ್ರ ಆಕ್ರೋಶ ವ್ಯಕ್ತಪಡಿಸಲು ಮುಂದಾದರೋ ಸಚಿವ ಸಿ.ಟಿ.ರವಿ ಕೂಡ ಫೇಸ್‍ಬುಕ್ ನಲ್ಲಿ ಸ್ಪಷ್ಟನೆ ನೀಡಿದ್ದರು. ಈ ಪ್ರತಿಮೆ ಖಾಸಗಿ ಸಹಭಾಗಿತ್ವ ಹಾಗೂ ಸ್ಥಳೀಯ ದಾನಿಗಳಿಂದ ನಿರ್ಮಾಣಗೊಂಡಿದ್ದು. ಇದಕ್ಕೆ ಸರ್ಕಾರದ ಒಂದೇ ಒಂದು ರೂಪಾಯಿ ಕೂಡ ಬಳಸಿಲ್ಲ. ಕಳಪೆ ಕಾಮಗಾರಿ ಹಾಗೂ ಮೂರ್ತಿಯ ರೂಪದ ಬಗ್ಗೆ ಎಲ್ಲರಲ್ಲೂ ಅಸಮಾಧಾನವಿದೆ. ಆದರೆ ಕೆಲಸ ಮಾಡಲು ಬಂದ ಗುತ್ತಿಗೆದಾರ ಹಣ ಪಡೆದು ಪರಾರಿಯಾಗಿದ್ದಾನೆ. ಕಂಟ್ರಾಕ್ಟರ್, ಸಬ್ ಕಂಟ್ರಾಕ್ಟರ್ ಗಳು ಕೆಲಸ ಮಾಡಿಲ್ಲ. ಹಾಗಾಗಿ ಇಂದು ಮೂರ್ತಿ ಈ ಹಂತ ತಲುಪಿದೆ. ಇದರಲ್ಲಿ ಸರ್ಕಾರದ ಹಣ ನಯಾ ಪೈಸೆಯೂ ಖರ್ಚಾಗಿಲ್ಲ. ಅಷ್ಟೆ ಅಲ್ಲದೆ ಮೂರ್ತಿಯ ಬಗೆಗಿನಿ ನಿಮ್ಮ ಮನದಾಳದ ಸೂಕ್ಷ್ಮತೆ ನನಗೂ ಗೊತ್ತು ಎಂದಿದ್ದರು.

    ಮೂರ್ತಿ ನಿರ್ಮಾಣದಲ್ಲಿ ಸಿ.ಟಿ.ರವಿ ಪಾತ್ರವಿಲ್ಲ: ಪ್ರವಾಸೋದ್ಯಮ ಸಚಿವರ ತವರಲ್ಲಿ ಊರ ಮಧ್ಯೆ ಇರೋ ಕೆರೆಯಲ್ಲಿನ ಮೂರ್ತಿಗೆ ಬಗ್ಗೆ ಸ್ಥಳಿಯರು ಹಾಗೂ ಪ್ರವಾಸಿಗರು ಸರ್ಕಾರ ಹಾಗೂ ಸಚಿವ ಸಿ.ಟಿ.ರವಿ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಯೂಥ್ ಐಕಾನ್ ವಿವೇಕಾನಂದರ ವಿರೂಪ ನಿರ್ಮಾಣದ ವಿರುದ್ಧ ಸಚಿವರ ವಿರುದ್ಧವೂ ಜನ ಆಕ್ರೋಶ ಹೊರಹಾಕಿದ್ದರು. ಆದರೆ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಗರಸಭೆ ಮಾಜಿ ಅಧ್ಯಕ್ಷ ಮುತ್ತಯ್ಯ, ಈ ಮೂರ್ತಿ ನಿರ್ಮಾಣದಲ್ಲಿ ಸಚಿವರ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಊರಿಗೆ ಒಳ್ಳೆಯದಾಗಿ ಎಂದು ನಾನೇ ಈ ಮೂರ್ತಿ ನಿರ್ಮಾಣಕ್ಕೆ ಮುಂದಾಗಿದ್ದು. ಮೂರ್ತಿಯ ಸ್ಥಿತಿ ಕಂಡು ನನಗೂ ನೋವಾಗಿದೆ. ಇದರಿಂದ ನಾನು ವೈಯಕ್ತಿಕವಾಗಿಯೂ ಸಾಕಷ್ಟು ಹಣ ಕಳೆದುಕೊಂಡಿದ್ದೇನೆ. ಶೀಘ್ರದಲ್ಲೇ ಆ ಜಾಗದಲ್ಲಿ ಹೊಸ ಮೂರ್ತಿ ಪ್ರತಿಷ್ಠಾಪಿಸುದುವುದಾಗಿ ಸ್ಪಷ್ಟನೆ ನೀಡಿದ್ದಾರೆ.

  • ವಿಶ್ವದ ಅತೀ ಎತ್ತರದ ಸ್ವಾಮಿ ವಿವೇಕಾನಂದ ಮೂರ್ತಿ ಲೋಕಾರ್ಪಣೆ – ಧ್ಯಾನದ ಜೊತೆ ಚಿಕಿತ್ಸೆಯೂ ಲಭ್ಯ

    ವಿಶ್ವದ ಅತೀ ಎತ್ತರದ ಸ್ವಾಮಿ ವಿವೇಕಾನಂದ ಮೂರ್ತಿ ಲೋಕಾರ್ಪಣೆ – ಧ್ಯಾನದ ಜೊತೆ ಚಿಕಿತ್ಸೆಯೂ ಲಭ್ಯ

    ಉಡುಪಿ: ವಿಶ್ವದ ಅತೀ ಎತ್ತರದ ಸ್ವಾಮಿ ವಿವೇಕಾನಂದ ಪ್ರತಿಮೆಯನ್ನು ಉಡುಪಿ ಜಿಲ್ಲೆ ಕೋಟದ ಮೂಡುಗಿಳಿಯಾರಿನಲ್ಲಿ ಸ್ಥಾಪಿಸಲಾಗಿದೆ. ಪ್ರತಿಮೆ 35 ಅಡಿ ಎತ್ತರವಿದ್ದು ಕನ್ಯಾಕುಮಾರಿಯಲ್ಲಿ ಇರುವ ವಿವೇಕಾನಂದ ಮೂರ್ತಿಯ ಎತ್ತರದ ದಾಖಲೆಯನ್ನು ಮೀರಿದೆ.

    ಉಡುಪಿಯ ಕೋಟದಲ್ಲಿರುವ ಡಿವೈನ್ ಪಾರ್ಕ್ ಟ್ರಸ್ಟ್ ಸರ್ವ ಕ್ಷೇಮ ಆಸ್ಪತ್ರೆ ನಿರ್ಮಿಸಿದೆ. ಚಿಕಿತ್ಸಾಕೇಂದ್ರ- ಧ್ಯಾನಕೇಂದ್ರದ ಆವರಣದಲ್ಲಿ ಅತೀ ಎತ್ತರದ ವಿವೇಕಾನಂದ ಮೂರ್ತಿ ನಿರ್ಮಾಣ ಮಾಡಲಾಗಿದೆ. ಆಸ್ಪತ್ರೆ ಪ್ರಾಚೀನ ದೇಗುಲದ ವಾಸ್ತು ವಿನ್ಯಾಸವನ್ನು ಹೊಂದಿದ್ದು, ಆಯುಷ್ ವಿಭಾಗ ಕೂಡ ಬಹಳ ವಿಶಿಷ್ಟವಾಗಿದೆ.

    ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯನ್ನು ಕರಾವಳಿಯ ಪ್ರಾಚೀನ ಶೈಲಿಯಲ್ಲಿ ನಿರ್ಮಾಣಗೊಂಡಿದೆ. ಪ್ರಕೃತಿ, ಯೋಗ, ಆಹಾರ, ಆಧ್ಯಾತ್ಮಿಕ, ಸಂಗೀತ, ಹಸಿರು, ಹಾಸ್ಯ, ಮೌನ ಚಿಕಿತ್ಸೆ ಹೀಗೆ ಬೇರೆ ಬೇರೆ ವಿಭಾಗಗಳನ್ನು ಮಾಡಿ ಎಲ್ಲಾ ಚಿಕಿತ್ಸೆಯನ್ನು ಒದಗಿಸುವ ಉದ್ದೇಶವನ್ನು ಆಸ್ಪತ್ರೆ ಇಟ್ಟುಕೊಂಡಿದೆ. ಪರಿಸರ ಸ್ನೇಹಿ ಆಸ್ಪತ್ರೆ ಇದಾಗಿದ್ದು, ಸೋಲಾರ್ ವ್ಯವಸ್ಥೆ ಇದೆ. ಸೈಕಲ್ ಟ್ರ್ಯಾಕ್ ಕೂಡ ನಿರ್ಮಾಣಗೊಂಡಿದೆ.

    ವ್ಯಕ್ತಿತ್ವ ನಿರ್ಮಾಣ ಹಾಗೂ ರಾಷ್ಟ್ರೋತ್ಥಾನದ ಬೇರೆ ಬೇರೆ ಯೋಜನೆಗಳಲ್ಲಿ ಆಧ್ಯಾತ್ಮ, ಆರೋಗ್ಯ, ಯೋಗದ ಮಹಿಮೆಯನ್ನು ತಿಳಿಸಿಕೊಡುವ ಕಾರ್ಯಕ್ರಮಗಳನ್ನು ಇವರೆಗೆ ಡಿವೈನ್ ಪಾರ್ಕ್ ಹಮ್ಮಿಕೊಳ್ಳಲಾಗುತ್ತಿತ್ತು. ಇದೀಗ ಈ ವಿಭಾಗ ಸೇರಿಕೊಂಡಿದೆ.

    ಜಗತ್ತಿನಲ್ಲೇ ಅತಿ ಎತ್ತರದ ಸ್ವಾಮಿ ವಿವೇಕಾನಂದ ಪ್ರತಿಮೆಯಾಗಿದ್ದು, 35 ಅಡಿ ಎತ್ತರ ಇದೆ. ಪ್ರತಿಮೆಗೆ ವಿಶೇಷವಾದ ಬೆಳಕಿನ ವ್ಯವಸ್ಥೆ ಮಾಡಲಾಗಿದೆ. ಹಸಿರು ಹುಲ್ಲು ಹಾಸಿನ ನಡುವೆ ಹೂವಿನ ದಳವಿರುವ ಡಿಸೈನ್ ಕೊಳದ ನಡುವೆ ಮೂರ್ತಿ ಇರಿಸಲಾಗಿದೆ. ವಿವೇಕಾನಂದರ ಮೂರ್ತಿ ಸುತ್ತ ವಿಶಾಲವಾದ ಜಾಗವಿದ್ದು, ಅಲ್ಲಿ ಸಂಗೀತ, ಧ್ಯಾನ ಪ್ರವಚನ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶವಿದೆ ಎಂದು ಸಂಸ್ಥೆಯ ಮುಖ್ಯಸ್ಥ ವಿವೇಕ್ ಉಡುಪ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದರು.

  • ವಿವೇಕಾನಂದರ ಆದರ್ಶಗಳನ್ನು ನಾವೆಲ್ಲ ಅನುಸರಿಸೋಣ: ಗೋವಿಂದ ಕಾರಜೋಳ

    ವಿವೇಕಾನಂದರ ಆದರ್ಶಗಳನ್ನು ನಾವೆಲ್ಲ ಅನುಸರಿಸೋಣ: ಗೋವಿಂದ ಕಾರಜೋಳ

    ಬಾಗಲಕೋಟೆ: ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ ಅಂಗವಾಗಿ ಬಾಗಲಕೋಟೆ ಜಿಲ್ಲಾಡಳಿತ ಆಯೋಜಿಸಿದ್ದ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಿಸಿಎಂ ಕಾರಜೋಳ, ವಿವೇಕಾನಂದ ಅವರು ಯುವಜನತೆಯ ಆಶಾಕಿರಣ ಎಂದು ಹೇಳಿದ್ದಾರೆ.

    ಯುವ ಶಕ್ತಿಯ ಪ್ರಾಮುಖ್ಯತೆ ಬಹಳಷ್ಟಿದೆ. ಸದಾ ಪರಿಶ್ರಮ, ಶ್ರದ್ಧೆ, ನಿರಂತರ ಪ್ರಯತ್ನದಿಂದ ಸಾಧನೆ ಮಾಡಬಹುದು, ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರೀ ಎನ್ನುವ ಸಂದೇಶದೊಂದಿಗೆ ಯುವ ಸಮೂಹಕ್ಕೆ ಪ್ರೇರೆಪಿಸಿದ್ದಾರೆ. ಇಡೀ ಪ್ರಪಂಚವನ್ನೆಲ್ಲಾ ಪರ್ಯಟನೆ ಮಾಡಿ, ವಿದೇಶಗಳು ಶಿಕ್ಷಣದಿಂದ ಅಭಿವೃದ್ಧಿಯಾಗುತ್ತಿವೆ. ಅದೇ ಮಾದರಿಯಲ್ಲಿ ನಮ್ಮ ದೇಶವು ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿಯಾಗಬೇಕು ಎನ್ನುವುದು ವಿವೇಕಾನಂದ ಅವರ ಆಶಯವಾಗಿದೆ ಎಂದು ಗೋವಿಂದ ಕಾರಜೋಳ ತಿಳಿಸಿದರು.

    ಶೇ.35 ರಷ್ಟು ಯುವ ಶಕ್ತಿಯನ್ನು ಹೊಂದಿರುವ ಭಾರತವು ಸಬಲೀಕರಣವಾಗಲು ಎಲ್ಲರೂ ಉನ್ನತ ಶಿಕ್ಷಣ ಪಡೆಯಬೇಕು. ಯಾವುದೇ ಪಾಶ್ಚಾತ್ಯ ಸಂಸ್ಕೃತಿಗೆ ಮಾರುಹೋಗದೆ ಭಾರತೀಯ ಪರಂಪರೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು. ಭಾರತವು ವಿಶ್ವಗುರುವಾಗುವಷ್ಟು ಯುವ ಶಕ್ತಿಯನ್ನು ಹೊಂದಿದೆ. ವಿವೇಕಾನಂದ ಅವರ ಆಯಶದಂತೆ ಯುವಕರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು ಎಂದು ಯುವಜನೆತೆಗೆ ಕರೆಕೊಟ್ಟರು.

    ರಾಜ್ಯದಲ್ಲಿ 2.5 ಲಕ್ಷ ರೂ. ಗಿಂತ ಕಡಿಮೆ ಆದಾಯವಿರುವ 430 ಸರ್ಕಾರಿ ಪದವಿ ಕಾಲೇಜುಗಳ 2.48 ಲಕ್ಷ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಿಸಲಾಗುವುದು ಎಂದು ತಿಳಿಸಿ, ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಿಸಿದರು. ಸಮಾರಂಭದಲ್ಲಿ ಸಂಸದರಾದ ಶ್ರೀ ಪಿ.ಸಿ. ಗದ್ದಿಗೌಡರ್, ಶಾಸಕರಾದ ಶ್ರೀ ವೀರಣ್ಣ ಚರಂತಿಮಠ, ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ, ಎಸ್.ಪಿ ಲೋಕೇಶ್, ಸಿಇಓ ಗಂಗೂಬಾಯಿ ಮಾನಕರ್ ಮತ್ತಿತರರು ಉಪಸ್ಥಿತರಿದ್ದರು.

  • ಸ್ವಾಮಿ ವಿವೇಕಾನಂದರ 2ನೇ ರೂಪವೇ ಮೋದಿ: ಉಮೇಶ್ ಜಾಧವ್

    ಸ್ವಾಮಿ ವಿವೇಕಾನಂದರ 2ನೇ ರೂಪವೇ ಮೋದಿ: ಉಮೇಶ್ ಜಾಧವ್

    ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಮಿ ವಿವೇಕಾನಂದರ ಎರಡನೇ ರೂಪ ಎಂದು ಡಾ. ಉಮೇಶ್ ಜಾಧವ್ ಹೇಳಿದ್ದಾರೆ.

    ಚಿಂಚೋಳಿಯ ಹಾಲಕೋಡು ಮಠದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಡಾ.ಜಾಧವ್, ಸ್ವಾಮಿ ವಿವೇಕಾನಂದರ ಎರಡನೇ ರೂಪ ನಮ್ಮ ಪ್ರಧಾನಿ ಮೋದಿ. ವಿವೇಕಾನಂದರು ನಮ್ಮ ದೇಶದ ಸಂಸ್ಕೃತಿಯನ್ನು ಇಡೀ ವಿಶ್ವಕ್ಕೆ ಪರಿಚಯಿಸಿದರು. ಮೋದಿಯವರು ಈ ಶತಮಾನದಲ್ಲಿ ಸ್ವಾಮಿ ವಿವೇಕಾನಂದರ ಎರಡನೇ ರೂಪದಲ್ಲಿ ಜನಿಸಿ, ನಮ್ಮ ದೇಶವನ್ನು ವಿಶ್ವದಲ್ಲಿ ತಲೆ ಎತ್ತುವಂತೆ ಮಾಡಿದ್ದಾರೆ ಎಂದರು.

    ನಾನು ನನ್ನ ಸ್ವಾರ್ಥಕ್ಕಾಗಿ ಕಾಂಗ್ರೆಸ್ ಬಿಟ್ಟಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದ ಅವರು, ನನ್ನ ಕ್ಷೇತ್ರದ ಜನರಿಗಾಗಿ ಪಕ್ಷದ ಬಿಟ್ಟಿದ್ದೇನೆ. ನಾನು ನಮ್ಮ ಕ್ಷೇತ್ರದಲ್ಲಿರುವ ಸಕ್ಕರೆ ಕಾರ್ಖಾನೆಯನ್ನು ಮರು ಆರಂಭಿಸುವಂತೆ ಹಾಗೂ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿ ದಿವಂಗತರಾದಾಗ ಸಚಿವ ಪ್ರಿಯಾಂಕ್ ಖರ್ಗೆ ಸ್ಟಾರ್ ಹೋಟೆಲ್ ನಲ್ಲಿ ಸರ್ಕಾರಿ ಕಾರ್ಯಕ್ರಮ ನಡೆಸಿ ಪಕ್ಷಕ್ಕೆ ಅವಮಾನ ಮಾಡಿದ್ದರು. ಹೀಗಾಗಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ವಜಾ ಮಾಡುವಂತೆ ಕೇಳಿದ್ದೆ. ಆದರೆ ನಮ್ಮ ಪಕ್ಷದ ಮುಖಂಡರು ನನ್ನ ಎರಡು ಬೇಡಿಕೆಗಳನ್ನು ಈಡೇರಿಸಲಿಲ್ಲ. ಇದಕ್ಕಾಗಿ ನಾನು ಪಕ್ಷ ಬಿಟ್ಟೆ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡರು.

    ಸರ್ಕಾರ ರಚನೆ: ಇದೇ ಸಂದರ್ಭದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಮಲ್ಲೇಶ್ವರಂ ಶಾಸಕ ಡಾ.ಅಶ್ವಥ್ ನಾರಾಯಣ ಅವರು, ಮತ್ತೆ ರಾಜ್ಯದಲ್ಲಿ ನಮ್ಮ ಬಿಜೆಪಿ ಸರ್ಕಾರ ಬರುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಜೆಡಿಎಸ್ ಮತ್ತು ಕಾಂಗ್ರೆಸ್ ಕಿತ್ತಾಟವನ್ನು ರಾಜ್ಯದ ಜನತೆ ನೋಡುತ್ತಿದ್ದಾರೆ. ನಾವು ಯಾವುದೇ ಆಪರೇಷನ್ ಕಮಲ ಮಾಡುವ ಅಗತ್ಯವಿಲ್ಲ. ಕಾಂಗ್ರೆಸ್, ಜೆಡಿಎಸ್ ನಾಯಕರ ಪರಸ್ಪರ ಕೆಸರೆರೆಚಾಟದಿಂದಲ್ಲೇ ಮೈತ್ರಿ ಸರ್ಕಾರ ಬಿಳುತ್ತೆ. ಮತ್ತೆ ನಮ್ಮ ನಾಯಕ ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರೆ ಎಮದು ವಿಶ್ವಾಸ ವ್ಯಕ್ತಪಡಿಸಿದರು.

    ಚಿಂಚೋಳಿಯ ಹಾಲಗೋಡು ಮಠದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಅವಿನಾಶ್ ಜಾಧವ್ ಪರ ಮತಯಾಚನೆ ಮಾಡಿದರು. ಈ ಬಾರಿ ಚಿಂಚೋಳಿಯ ಉಪಚುನಾವಣೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲು ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಸೋಮವಾರದಿಂದ ನಮ್ಮ ಪ್ರಮುಖ ನಾಯಕರು ಚುನಾವಣೆ ಪ್ರಚಾರ ಮಾಡಲಿದ್ದಾರೆ. ನಮ್ಮ ಅಭ್ಯರ್ಥಿ ಅವಿನಾಶ್ ಜಾದವ್ ರನ್ನು ಗೆಲ್ಲಿಸಿಕೊಂಡು ಬರುತ್ತವೆ ಎಂದರು.

  • ಕಸದ ರಾಶಿಯಲ್ಲಿ ಕೆಂಪೇಗೌಡ, ಕುವೆಂಪು, ವಿವೇಕಾನಂದರ ಭಾವಚಿತ್ರಗಳು

    ಕಸದ ರಾಶಿಯಲ್ಲಿ ಕೆಂಪೇಗೌಡ, ಕುವೆಂಪು, ವಿವೇಕಾನಂದರ ಭಾವಚಿತ್ರಗಳು

    -ಪುರಭವನ ಸಿಬ್ಬಂದಿಯಿಂದ ಎಡವಟ್ಟು

    ಬೆಂಗಳೂರು: ನಗರದ ಸರ್ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಮಹನೀಯ ವ್ಯಕ್ತಿಗಳಿಗೆ ಅಪಮಾನವಾಗಿದೆ. ಕಸದ ರಾಶಿಯಲ್ಲಿ ನಾಡಪ್ರಭು ಕೆಂಪೇಗೌಡ, ರಾಷ್ಟ್ರಕವಿ ಕುವೆಂಪು ಹಾಗೂ ಸ್ವಾಮಿ ವಿವೇಕಾನಂದರ ಭಾವಚಿತ್ರಗಳು ಕಂಡು ಬಂದಿದೆ.

    ಇತ್ತೀಚೆಗೆ ಪುರಭವನದಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಕುವೆಂಪು, ವಿವೇಕಾನಂದ ಹಾಗೂ ಕೆಂಪೇಗೌಡರ ಭಾವಚಿತ್ರ ಫಲಕಗಳನ್ನು ತರಲಾಗಿತ್ತು. ಈ ಕಾರ್ಯಕ್ರಮ ಮುಗಿದ ಬಳಿಕ ಸಿಬ್ಬಂದಿ ಪುರಭವನ ಸ್ವಚ್ಛಗೊಳಿಸಿದ್ದರು. ಈ ವೇಳೆ ಸಿಬ್ಬಂದಿ ಮಹನೀಯರ ಭಾವಚಿತ್ರಗಳನ್ನು ಕಸದ ಜೊತೆ ಹಾಕಿದ್ದಾರೆ.

    ಕಾರ್ಯಕ್ರಮದ ಬಳಿಕ ಈ ಫಲಕಗಳನ್ನು ತೆಗೆದುಕೊಂಡು ಹೋಗದೇ ಆಯೋಜಕರು ಪುರಭವನದಲ್ಲೇ ಬಿಟ್ಟು ಹೋಗಿದ್ದರು. ಆಯೋಜಕರ ಎಡವಟ್ಟು ಹಾಗೂ ಪುರಭವನ ಸಿಬ್ಬಂದಿಯ ನಿರ್ಲಕ್ಷ್ಯದಿಂದ ನಾಡು ನುಡಿಗೆ ಶ್ರವಿಸಿದವರಿಗೆ ಅಗೌರವವಾಗಿದೆ.

    ಇತ್ತೀಚೆಗಷ್ಟೇ ಸರ್ಕಾರದಿಂದ ಕೆಂಪೇಗೌಡ ಜಯಂತಿಯ ಅದ್ಧೂರಿ ಆಚರಣೆ ನಡೆದಿತ್ತು. ಬಿಬಿಎಂಪಿಯ ಕೂಗಳತೆ ದೂರದಲ್ಲಿಯೇ ನಾಡಪ್ರಭುಗೆ ಅವಮಾನ ನಡೆದಿದೆ. ಡಿಸೆಂಬರ್ 29ರಂದು ಕುವೆಂಪು ಜನ್ಮದಿನದ ಆಚರಣೆ ನಡೆಸಲಾಯಿತು. ಇದೇ ತಿಂಗಳ 12ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ನಡೆಯಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv