Tag: Swami Vivekananda

  • ಪಿತೂರಿ ಮಾಡಿ ಸ್ವಾಮಿ ವಿವೇಕಾನಂದ, ಬಸವಣ್ಣರ ಕೊಲೆ : ಕೆ.ಎಸ್ ಭಗವಾನ್

    ಪಿತೂರಿ ಮಾಡಿ ಸ್ವಾಮಿ ವಿವೇಕಾನಂದ, ಬಸವಣ್ಣರ ಕೊಲೆ : ಕೆ.ಎಸ್ ಭಗವಾನ್

    ಮೈಸೂರು: ಪಿತೂರಿ ಮಾಡಿ ಸ್ವಾಮಿ ವಿವೇಕಾನಂದ ಮತ್ತು ಬಸವಣ್ಣರನ್ನು ಕೊಲೆ ಮಾಡಲಾಗಿದೆ ಎಂದು ಎಂದು ಪ್ರಗತಿಪರ ಚಿಂತಕ ಕೆ.ಎಸ್.ಭಗವಾನ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

    ಬಸವಣ್ಣವರು ಸಾಯುವ ಹಿಂದಿನ ದಿನ ತುಂಬಾ ಆರೋಗ್ಯಕರವಾಗಿದ್ದರು. ಹಾಗಾಗಿ ಬಸವಣ್ಣವರ ಕೊಲೆ ಮಾಡಲಾಗಿದೆ ಎಂಬುವುದು ನನ್ನ ಅಭಿಪ್ರಾಯ. ಬಸವಣ್ಣವರು ಹಿಂದೂ ಧರ್ಮಗಳನ್ನು ಬಲು ಕಟುವಾಗಿ ಟೀಕಿಸಿದ್ದಾರೆ. ಬಸವಣ್ಣವರು ಬೌದ್ಧ ಧರ್ಮದ ಬಗ್ಗೆ ಹಲವು ಮೆಚ್ಚುಗೆ ಸೂಚಿಸಿದ್ದಾರೆ ಎಂದು ಕೆಲವು ವಚನಗಳನ್ನು ಉದಾಹರಣೆಯಾಗಿ ನೀಡಿದರು. ಬಸವಣ್ಣವರ ಚಳುವಳಿಯನ್ನು ಸಹಿಸದವರೇ ಅವರ ಕೊಲೆ ಮಾಡಿದ್ದು, ಐಕ್ಯರಾಗಿದ್ದಾರೆ ಎಂಬುವುದು ಶುದ್ಧ ಸುಳ್ಳು ಎಂದು ವಾದಿಸಿದ್ದಾರೆ.

    ಸ್ವಾಮಿ ವಿವೇಕಾನಂದರನ್ನು ಪಿತೂರಿ ಮಾಡಿ ಕೊಲೆ ಮಾಡಲಾಗಿದೆ. ಸ್ವಾಮಿ ವಿವೇಕಾನಂದರು ನಿಜವಾದ ಸನ್ಯಾಸಿಗಳು. ಎಲ್ಲವನ್ನು ಅರಿತಿರೋ ವಿವೇಕಾನಂದರು ಎರಡನೇ ಗೌತಮ ಬುದ್ಧ. ರಾತ್ರಿ ಎಲ್ಲ ಚೆನ್ನಾಗಿದ್ದ ವಿವೇಕಾನಂದರು ಬೆಳಗ್ಗೆ ನೋಡುವಾಗ ಕುಳಿತಲ್ಲೇ ಪ್ರಾಣ ಬಿಟ್ಟರು ಅಂದ್ರೆ ನಂಬೋದಕ್ಕೆ ಆಗಲ್ಲ. ದೇಶದಲ್ಲಿ ಬಡವರಿಗಾಗಿ ಕೆಲಸ ಮಾಡಬೇಕು ಎಂದು ಚಿಂತಿಸುತ್ತಿದ್ದ ವಿವೇಕಾನಂದರನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಕೆ.ಎಸ್.ಭಗವಾನ್ ಸಂಶಯ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಬಸವ ಪೀಠಾಧ್ಯಕ್ಷೆ ಮಾತೆ ಮಹಾದೇವಿ, ಬಸವಣ್ಣವರ ಕೊಲೆ ಆಗಿದೆ ಎಂಬುವುದನ್ನು ನಾವು ಒಪ್ಪೊದಿಲ್ಲ. ಬಸವಣ್ಣವರು ಯೋಗಪಟುವಾಗಿದ್ದರು ಅಲ್ಲದೇ ಐಕ್ಯ ಹೊಂದುವ ಇಚ್ಛಾಶಕ್ತಿಯನ್ನು ಹೊಂದಿದ್ದರು. ಬಸವಣ್ಣವರ ಕೊಲೆ ಆಗಿದೆ ಎಂಬುದರ ಬಗ್ಗೆ ಎಲ್ಲಿಯೂ ಉಲ್ಲೇಖವಾಗಿಲ್ಲ. ಇತಿಹಾಸವನ್ನು ಸರಿಯಾಗಿ ಓದಬೇಕು. ಹಾಗಾಗಿ ಈ ರೀತಿಯ ಹೇಳಿಕೆಗಳನ್ನ ನೀಡುವುದು ತಪ್ಪಾಗುತ್ತದೆ. ಇತಿಹಾಸ ವಸ್ತುನಿಷ್ಟವಾಗಿದ್ದು, ಅದಕ್ಕೆ ಸಂಬಂಧಿಸಿದ ದಾಖಲೆಗಳಿವೆ. ಬಸವಣ್ಣವರು ಹಿಂದೂ ಧರ್ಮದಲ್ಲಿ ಬದಲಾವಣೆ ತರಲು ಪ್ರಯತ್ನಿಸಿದ್ದು ನಿಜ, ಆದ್ರೆ ಕೊಲೆಯಾಗಿದೆ ಎಂಬುವುದು ಸುಳ್ಳು ಎಂದು ಹೇಳಿದರು.

    ಮಾತೆ ಮಹಾದೇವಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕೆ.ಎಸ್.ಭಗವಾನ್. ಅದು ಅವರ ವೈಯಕ್ತಿಯ ಅಭಿಪ್ರಾಯ. ಹಾಗಾಗಿ ಮಾತೆ ಮಹಾದೇವಿಯವರ ಮಾತುಗಳಿಗೆ ಪ್ರತಿಕ್ರಿಯೆ ನೀಡಲ್ಲ ಎಂದು ಸ್ಪಷ್ಟಪಡಿಸಿದ್ರು.

  • ವಿಹೆಚ್‍ಪಿ ಸಮ್ಮೇಳನದಲ್ಲಿ ಭಾಗಿಯಾಗುವಂತೆ ರಘುರಾಮ್ ರಾಜನ್‍ಗೆ ಆಹ್ವಾನ!

    ವಿಹೆಚ್‍ಪಿ ಸಮ್ಮೇಳನದಲ್ಲಿ ಭಾಗಿಯಾಗುವಂತೆ ರಘುರಾಮ್ ರಾಜನ್‍ಗೆ ಆಹ್ವಾನ!

    ನವದೆಹಲಿ: ವಿಶ್ವ ಹಿಂದೂ ಕಾಂಗ್ರೆಸ್ ಸಮ್ಮೇಳನದಲ್ಲಿ ಭಾಗಿಯಾಗುವಂತೆ ವಿಶ್ವ ಹಿಂದೂ ಪರಿಷತ್ (ವಿಹೆಚ್‍ಪಿ) ಮಾಜಿ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ಅವರನ್ನು ಆಹ್ವಾನಿಸಿದೆ.

    ಚಿಕಾಗೊ ದ ವಿಶ್ವ ಧರ್ಮ ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದ ಅವರ ಭಾಷಣದ 125 ನೇ ವರ್ಷದ ನೆನಪಿನಾರ್ಥ ವಿಹೆಚ್‍ಪಿ ಈ ಸಮ್ಮೇಳನವನ್ನು ಆಯೋಜಿಸಿದೆ.

    4 ವರ್ಷಕ್ಕೊಮ್ಮೆ ನಡೆಯುವ ಸಮ್ಮೇಳನಕ್ಕೆ ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಟಿಬೇಟಿಯನ್ ಗುರು ದಲೈ ಲಾಮ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಹಾಲಿವುಡ್ ನಟ ರಿಚರ್ಡ್ ಗೆರೆ, ಯುಎಸ್ ಕಾಂಗ್ರೆಸ್ ನ ತುಳಸಿ ಗಬ್ಬಾರ್ಡ್ ಅವರನ್ನು ಆಹ್ವಾನಿಸಲಾಗಿದೆ.

    ರಾಜನ್ ಅವರು ಆಹ್ವಾನವನ್ನು ಸ್ವೀಕರಿಸಿದಲ್ಲಿ ಸ್ಪೈಸ್ ಜೆಟ್ ಮುಖ್ಯಸ್ಥ ಅಜಯ್ ಸಿಂಗ್, ಪಿರಾಮಾಲ್ ಸಮೂಹದ ಮುಖ್ಯಸ್ಥ ಅಜಯ್ ಪಿರಾಮಾಲ್, ಕೆಪಿಎಮ್‍ಜಿ ಭಾರತದ ಮುಖ್ಯಸ್ಥ ಅರುಣ್ ಕುಮಾರ್ ಅವರ ಜೊತೆ ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ.

    ಜೂನ್ 7 ರಂದು ನಡೆಯುವ ಆರ್‍ಎಸ್‍ಎಸ್ ಕಾರ್ಯಕ್ರಮಕ್ಕೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಆಹ್ವಾನಿಸಲಾಗಿದೆ. ಆಹ್ವಾನಕ್ಕೆ ಒಪ್ಪಿಗೆ ಸೂಚಿಸಿರುವುದು ಈಗ ವಿವಾದವನ್ನು ಸೃಷ್ಟಿಸಿದೆ. ಕೆಲವು ಕಾಂಗ್ರೆಸ್ ನಾಯಕರು ಅಸಮಾಧಾನಗೊಂಡಿದ್ದು ನಿರ್ಧಾರವನ್ನು ಮರು ಪರಿಶೀಲಿಸುವಂತೆ ಮುಖರ್ಜಿ ಅವರಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ:ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ ಭಾಗಿ – ಯಾರು, ಏನು ಹೇಳಿದ್ರು?

    ರಾಜನ್ ಅವರು ರಿಸರ್ವ್ ಬ್ಯಾಂಕ್ ಗವರ್ನರ್ ಅಗಿದ್ದ ವೇಳೆ ಆರ್‍ಎಸ್‍ಎಸ್ ಅವರನ್ನ ಬಹಳ ಟೀಕೆ ಮಾಡಿದ್ದು ಈಗ ಸಮ್ಮೇಳನಕ್ಕೆ ಆಹ್ವಾನ ಮಾಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

  • 21ನೇ ಶತಮಾನ ಭಾರತ, ಚೀನಾಗೆ ಸೇರಿದ್ದು: ಪ್ರಧಾನಿ ಮೋದಿ

    21ನೇ ಶತಮಾನ ಭಾರತ, ಚೀನಾಗೆ ಸೇರಿದ್ದು: ಪ್ರಧಾನಿ ಮೋದಿ

    ನವದೆಹಲಿ: 21ನೇ ಶತಮಾನ ಏಷ್ಯಾಗೆ ಸೇರಿದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    ಸ್ವಾಮಿ ವಿವೇಕಾನಂದ ಅವರ ಚಿಕಾಗೋ ಭಾಷಣಕ್ಕೆ 125 ವರ್ಷ ಹಾಗೂ ದೀನ್ ದಯಾಳ್ ಉಪಾಧ್ಯಾಯ ಅವರ 100 ವರ್ಷದ ಆಚರಣೆಯ ಹಿನ್ನೆಲೆಯಲ್ಲಿ ದೆಹಲಿಯ ವಿಜ್ಞಾನ ಭವನದಲ್ಲಿ ಮೋದಿ ಭಾಷಣ ಮಾಡಿದರು.

    ಒಂದೇ ಏಷ್ಯಾ ಎಂದು ವಿವೇಕಾನಂದರು ಪ್ರಥಮ ಬಾರಿಗೆ ಹೇಳಿದ್ದರು. ಆದರೆ ಈಗ ಏಷ್ಯಾ ಎಷ್ಟು ಎತ್ತರಕ್ಕೆ ಬೆಳೆಯುತ್ತಿದೆ ಎನ್ನುವುದು ಪ್ರಪಂಚಕ್ಕೆ ತಿಳಿಯುತ್ತಿದೆ. ಅದು ಭಾರತವೇ ಆಗಿರಲಿ ಅಥವಾ ಚೀನಾವೇ ಆಗಿರಲಿ ಎಂದರು.

    9/11 ದಿನ ಇಂದು ಬಹಳ ಪ್ರಸಿದ್ಧವಾಗಿದೆ. ಆದರೆ ಹೆಚ್ಚು ಪ್ರಚಾರದಕ್ಕೆ ಬಂದಿದ್ದು 2001ರ 9/11 ಘಟನೆಯಿಂದ. ಆದರೆ 1983 9/11ರಂದು ಸ್ವಾಮಿ ವಿವೇಕಾನಂದರ ಮಾಡಿರುವ ಭಾಷಣವನ್ನು ನಾವು ಈಗಲೂ ನೆನಪಿನಲ್ಲಿಟ್ಟುಕೊಂಡಿದ್ದೇವೆ. ಅಮೆರಿಕನ್ನರು 1983ರ 9/11ನ್ನು ಮರೆತ ಕಾರಣ 2001ರ 9/11 ಘಟನೆ ನಡೆಯಿತು ಎಂದು ಹೇಳಿದರು.

    ಕಾಲೇಜುಗಳಲ್ಲಿ ರೋಸ್ ದಿನ ಆಚರಣೆಗೆ ಕೆಲವರು ವಿರೋಧ ವ್ಯಕ್ತಪಡಿಸುತ್ತಾರೆ. ಆದರೆ ನಾನು ವಿರೋಧಿಸುವುದಿಲ್ಲ. ಆದರೆ ರೋಸ್ ದಿನ ಬದಲು ಆ ರಾಜ್ಯದ ಸಂಪ್ರದಾಯದಂತೆ ಕೇರಳ ದಿನ, ಸಿಕ್ ದಿನ, ಪಂಜಾಬ್ ದಿನ ಅಂತ ಆಚರಿಸಿ ಎಂದು ಪ್ರಧಾನಿ ಸಲಹೆ ನೀಡಿದರು.

    ನಂತರ ಸ್ವಚ್ಛತೆ ಬಗ್ಗೆ ಮಾತನಾಡಿದ ಮೋದಿ, ಮೊದಲು ಶೌಚಾಲಯ ನಿರ್ಮಿಸಿ ನಂತರ ದೇವಾಲಯವನ್ನು ನಿರ್ಮಿಸಬೇಕು. ನಾನು ನನ್ನ ಆರೋಗ್ಯವನ್ನು ಸ್ವಚ್ಛತ ಕಾರ್ಮಿಕರಿಗೆ ಅರ್ಪಿಸುತ್ತೇನೆ ಹೊರತು ದುಬಾರಿ ಡಾಕ್ಟರ್ ಗಳಿಗೆ ಅಲ್ಲ ಎಂದರು.

    ಸೋಲು ಇಲ್ಲದೇ ಗೆಲುವಿಲ್ಲ. ಆದರೆ ನಾವು ಸೋಲಿನಿಂದ ಭಯಪಡಬಾರದು. ಸ್ವಾಮಿ ವಿವೇಕಾನಂದರ ಪ್ರಕಾರ ಜ್ಞಾನ ಮತ್ತು ಕೌಶಲ್ಯಗಳೆರಡಕ್ಕೂ ಸಮವಾಗಿ ಮಹತ್ವವಿದೆ. ಜನರು ಯಾವಾಗಲೂ ಮಹಿಳೆಯರೇ ಮತ್ತು ಮಹನಿಯರೇ ಎಂದು ಸಂಬೋಧಿಸಿ ಭಾಷಣ ಮಾಡುತ್ತಾರೆ. ಆದರೆ ವಿವೇಕಾನಂದರು ಸಹೋದರ, ಸಹೋದರಿ ಎಂದು ಹೇಳಿ ತಮ್ಮ ಭಾಷಣವನ್ನು ಆರಂಭಿಸಿದ್ದರು. ಮಹಿಳೆಯರನ್ನೂ ಗೌರವಿಸೋರಿಗೆ ನನ್ನ ವಂದನೆಗಳು ಎಂದು ಹೇಳಿದರು.