Tag: swamiji

  • ರಾಜಣ್ಣ ಬೆನ್ನಿಗೆ ನಿಂತ 15ಕ್ಕೂ ಹೆಚ್ಚು ಮಠಾಧೀಶರು – ಮತ್ತೆ ಸಚಿವ ಸ್ಥಾನ ನೀಡುವಂತೆ ಒಕ್ಕೊರಲಿನ ಒತ್ತಾಯ

    ರಾಜಣ್ಣ ಬೆನ್ನಿಗೆ ನಿಂತ 15ಕ್ಕೂ ಹೆಚ್ಚು ಮಠಾಧೀಶರು – ಮತ್ತೆ ಸಚಿವ ಸ್ಥಾನ ನೀಡುವಂತೆ ಒಕ್ಕೊರಲಿನ ಒತ್ತಾಯ

    ತುಮಕೂರು: ರಾಜಣ್ಣರನ್ನು (KN Rajanna) ಸಹಕಾರಿ ಸಚಿವ ಸ್ಥಾನದಿಂದ ವಜಾ ಆದ ಬಳಿಕ ತುಮಕೂರಿನಲ್ಲಿ ಭಾರಿ ಹೈಡ್ರಾಮಾ ಸೃಷ್ಟಿಯಾಗಿತ್ತು. ಜೊತೆಗೆ ಹೈಕಮಾಂಡ್‌ನ ಈ ನಿರ್ಧಾರದ ವಿರುದ್ಧ ಆಕ್ರೋಶದ ಕೂಗುಗಳ ಜೊತೆಗೆ ಮತ್ತೆ ಸಚಿವ ಸ್ಥಾನ ಕೊಡಬೇಕೆಂಬ ಒತ್ತಾಯ ಕೇಳಿ ಬಂದಿತ್ತು. ಈಗ ರಾಜಣ್ಣನ ಬೆನ್ನಿಗೆ ನಿಂತ ವಿವಿಧ ಮಠಗಳ ಸ್ವಾಮೀಜಿಗಳು (Swamijis) ಸಹ ಸಚಿವ ಸ್ಥಾನ ಮತ್ತೆ ನೀಡಬೇಕೆಂದು ಧ್ವನಿ ಎತ್ತಿದ್ದಾರೆ.

    ಇಂದು ತುಮಕೂರಿನ (Tumakuru) ಕ್ಯಾತ್ಸಂದ್ರ ರಾಜಣ್ಣನ ನಿವಾಸಕ್ಕೆ ಬಂದ ಚಿತ್ರದುರ್ಗದ ಶ್ರೀ ಜಗದ್ಗುರು ಅಖಿಲ ಕುಂಚಿಟಿಗ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮಿಗಳು, ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಹೊಸದುರ್ಗದ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ, ಚಿತ್ರದುರ್ಗದ ಜಗದ್ಗುರು ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಮಹಾಸ್ವಾಮಿಗಳು, ದಾವಣಗೆರೆಯ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳು, ಸ್ವಾಮೀಜಿಗಳು ರಾಜಣ್ಣನವರನ್ನು ಭೇಟಿಯಾದರು. ಸತತ ಒಂದು ಘಂಟೆಗೂ ಅಧಿಕ ಕಾಲ ರಾಜಣ್ಣನ ಜೊತೆ ಚರ್ಚೆ ನಡೆಸಿದ 15ಕ್ಕೂ ಹೆಚ್ಚು ಸ್ವಾಮಿಜಿಗಳು ಸಚಿವ ಸ್ಥಾನದಿಂದ ತೆರವು ವಿಚಾರಕ್ಕೆ ಬೇಸರ ವ್ಯಕ್ತಪಡಿಸುವುದರ ಜೊತೆಗೆ ನಿಮ್ಮ ಜೊತೆ ನಾವಿದ್ದೇವೆ ಎಂಬ ಮಾತುಗಳನ್ನಾಡಿದರು.

    ಆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜಣ್ಣನ ಸಚಿವ ಸ್ಥಾನದಿಂದ ಕೈ ಬಿಟ್ಟಿರೊದು ಆಘಾತಕಾರಿ ವಿಚಾರ. ಇದು ರಾಜಣ್ಣನವರಿಗೆ ಆದ ನಷ್ಟವಲ್ಲ ಬದಲಾಗಿ ರಾಜ್ಯದ ಜನತೆಗೆ ಆದ ನಷ್ಟ. ಒಬ್ಬ ಹಿಂದುಳಿದ ನಾಯಕನಿಗೆ ಸಮಯ ಕೊಡಬೇಕಿತ್ತು. ಹೈಕಂಮಾಂಡ್ ಈ ವಿಚಾರ ಗಂಭೀರವಾಗಿ ಪರಿಗಣಿಸಿ ಮತ್ತೆ ರಾಜಣ್ಣನಿಗೆ ಸಚಿವ ಸ್ಥಾನ ಕೊಡಬೇಕು. ರಾಜಣ್ಣನಿಗೆ ಪುನಃ ಸಚಿವ ಸ್ಥಾನ ನೀಡಬೇಕೆಂದು ದಲಿತ ಹಿಂದುಳಿದ ವರ್ಗಗಳ ಒಕ್ಕೂಟದ ಸ್ವಾಮೀಜಿಗಳು ಹೈಕಮಾಂಡ್ ಭೇಟಿಗೆ ನಿರ್ಧಾರ ಮಾಡಿದ್ದೇವೆ. ಒಂದು ರಾಷ್ಟ್ರೀಯ ಪಕ್ಷ ಒಬ್ಬರಿಗೆ ಒಂದು ನ್ಯಾಯ ಮತ್ತೊಬ್ಬರಿಗೆ ಒಂದು ನ್ಯಾಯ ಮಾಡಬಾರದು. ದಲಿತ ಮತ ಚದುರದಂತೆ ನೋಡಿಕೊಳ್ಳಬೇಕು. ಹಾಗಾಗಿ ರಾಜಣ್ಣರಿಗೆ ಮತ್ತೆ ಸಚಿವ ಸ್ಥಾನಮಾನ ಕೊಡಬೇಕೆಂದು ಒತ್ತಾಯ ಮಾಡುತ್ತೇವೆ ಎಂದರು.

    ಇನ್ನು ಸ್ವಾಮೀಜಿಗಳ ಭೇಟಿ ಬಳಿಕ ಮಾತನಾಡಿದ ರಾಜಣ್ಣ, ಸ್ವಾಮಿಜಿಗಳು ಆಶೀರ್ವದಿಸಲು ಬಂದಿದ್ದರು. ಹೊರತುಪಡಿಸಿ ಅಧಿಕಾರ ಹೋದ ತಕ್ಷಣ ಅಸಮಾಧಾನ ಆಗಲಿ, ಚಿಂತೆ ಆಗಲಿ ಇಲ್ಲಾ. ಎಲ್ಲಾ ಜಾತಿಯ ಬಡವರ ಪರವಾದ ಧ್ವನಿಯೆತ್ತುವ ಕೆಲಸ ಮಾಡುತ್ತೇನೆ. ನಾನು ದೆಹಲಿಗೆ ಸಂಪುಟಕ್ಕೆ ಸೇರಿಸಿ ಅಂತಾ ಹೊಗಿದ್ನಾ? ನನಗೆ ಮಂತ್ರಿ ಸ್ಥಾನದ ಅಗತ್ಯತೆ ಏನು ಇಲ್ಲ. ಆದರೇ ಮತಗಳ್ಳತನ ಹೇಳಿಕೆ ಹೊರತು ಪಡಿಸಿ ಸಚಿವ ಸ್ಥಾನದಿಂದ ವಜಾ ಮಾಡಲು ಬೇರೆ ಕಾರಣ ಇತ್ತು ಎನಿಸುತ್ತದೆ. ಹನಿಟ್ರ‍್ಯಾಪ್ ಬಗ್ಗೆ ಹೇಳಿದ್ದೆ. ಡಿಸಿಎಂ ಬಗ್ಗೆ ಹೇಳಿದ್ದೆ ಇದೆಲ್ಲಾ ಕಾರಣ ಅನಿಸುತ್ತೆ. ಆದರೇ ನಾನು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲಾ. ಬೇರೆ ಪಕ್ಷ ಸೇರೋ ಅಗತ್ಯವೂ ಇಲ್ಲಾ ಎಂದು ತಿಳಿಸಿದರು.

    ಸದ್ಯ ರಾಜಣ್ಣನಿಗೆ ವಾಪಾಸ್ ಸಚಿವ ಸ್ಥಾನದ ಕೂಗೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆ ರಾಜಣ್ಣ ಬೆನ್ನಿಗೆ 15ಕ್ಕೂ ಹೆಚ್ಚು ಮಠದ ಸ್ವಾಮಿಜಿಗಳು ನಿಂತಿದ್ದು, ಮುಂದೆ ಹೈಕಮಾಂಡ್ ಇದನ್ನು ಯಾವ ರೀತಿ ಪರಿಗಣಿಸುತ್ತದೆ ಎಂದು ನೋಡಬೇಕಿದೆ. ಈ ನಡುವೆ ರಾಜಣ್ಣರ ಅಭಿಮಾನಿಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಸೋನಿಯಾಗಾಂಧಿ ಮನೆ ಮುಂದೆನೂ ಧರಣಿ ಮಾಡಲು ಅಣಿಯಾಗಿದ್ದಾರೆ. ಹೈಕಮಾಂಡ್ ಈ ಎಲ್ಲಾ ಹೋರಾಟಕ್ಕೆ ಮಣೆ ಹಾಕುತ್ತಾ ಅನ್ನೋದು ಸದ್ಯದ ಪ್ರಶ್ನೆಯಾಗಿದೆ.

  • ಸ್ವಾಮೀಜಿಗಳು ಭ್ರಷ್ಟಾಚಾರ ವಿರೋಧಿಸಬೇಕು, ಸಪೋರ್ಟ್ ಮಾಡೋದು ಸರಿಯಲ್ಲ- ಛಲವಾದಿ ನಾರಾಯಣಸ್ವಾಮಿ

    ಸ್ವಾಮೀಜಿಗಳು ಭ್ರಷ್ಟಾಚಾರ ವಿರೋಧಿಸಬೇಕು, ಸಪೋರ್ಟ್ ಮಾಡೋದು ಸರಿಯಲ್ಲ- ಛಲವಾದಿ ನಾರಾಯಣಸ್ವಾಮಿ

    ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅಕ್ರಮದ ಪರ ನಿಂತಿರುವ ಸ್ವಾಮೀಜಿಗಳು, ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಅಹಿಂದಾ ಸಮುದಾಯಗಳ ಪ್ರತಿಭಟನೆಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ವಿರೋಧ ವ್ಯಕ್ತಪಡಿಸಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ಜಾತ್ಯಾತೀತ ಅಂತಾರೆ. ಅವರು ಎಲ್ಲಿ ಜಾತಿ ಉಳಿಸಿಕೊಂಡಿದ್ದಾರೆ ಅವರೇ ಹೇಳಬೇಕು. ಕಾವಿಧಾರಿಗಳನ್ನು ಕಂಡ್ರೆ ಆಗ್ತಿರಲಿಲ್ಲ. ಈಗ ತಮ್ಮ ಸಂಕಷ್ಟಕ್ಕೆ ಕಾವಿಧಾರಿಗಳನ್ನೂ ಬಳಸಿಕೊಳ್ತಿದ್ದಾರೆ. ನಮಗೆ ಗುರುಗಳು, ಮಠಾಧೀಶರ ಮೇಲೆ ಗೌರವ ಇದೆ. ಅವರು ರಾಜಕಾರಣ ತೊಳೆಯುವ ಕೆಲಸ ಮಾಡಬೇಕೇ ಹೊರತು ಭ್ರಷ್ಟಾಚಾರ ಮಾಡಿದವರ ಬೆಂಬಲಿಸುವುದು ಎಷ್ಟು ಸರಿ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ನೀರಿನಲ್ಲಿ ಅಮಲು ಪದಾರ್ಥ ಸೇರಿಸಿ ಆಟೋ ಚಾಲಕನಿಂದ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ರೇಪ್

    ಈ ಸರ್ಕಾರ ಮುಡಾದಲ್ಲಿ ಭ್ರಷ್ಟಾಚಾರ ಮಾಡಿದೆ. ವಾಲ್ಮೀಕಿ ನಿಗಮದಲ್ಲಿ ಕೂಡ ಭ್ರಷ್ಟಾಚಾರ ಆಗಿ, ತನಿಖೆ ನಡೆಯುತ್ತಿದೆ. ದಲಿತ ಸಮುದಾಯಕ್ಕೆ ಅನ್ಯಾಯ ಆದಾಗ ಜನರ ಬೆಂಬಲಕ್ಕೆ ನಿಲ್ಲಬೇಕು. ಅದು ಬಿಟ್ಟು ದಲಿತ ವರ್ಗಕ್ಕೆ ಅನ್ಯಾಯ ಮಾಡಿದವರ ಸಪೋರ್ಟ್‌ಗೆ ನಿಲ್ಲೋದು ಎಷ್ಟು ಸರಿ. ಅಂಬೇಡ್ಕರ್ ಹೆಸರೇಳಿ ದಲಿತರಿಗೆ ಅನ್ಯಾಯ ಮಾಡಿದೆ. ಕಾಂಗ್ರೆಸ್ ಸರ್ಕಾರ ದಲಿತರ ಸಮಾಧಿ ಕಟ್ಟುತ್ತಿದೆ. ಸ್ವಾಮೀಜಿಗಳು ದಲಿತರಿಗೆ ಅನ್ಯಾಯ ಮಾಡಿದ್ದೀರಿ ಅಂತ ಸರ್ಕಾರಕ್ಕೆ ಪ್ರಶ್ನೆ ಮಾಡಬೇಕು. ಆದರೆ ಸರ್ಕಾರದ ಪರ ನಿಂತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

    ಅಹಿಂದಾ ಸಂಘಟನೆಗಳಿಂದ ಸಿಎಂ ಪರ ಹೋರಾಟಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹಲವು ದಲಿತ ಸಂಘಟನೆಗಳು ಸಿಎಂ ಪರವಾಗಿ ರಾಜಭವನ ಚಲೋ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ. ನಾಳೆ ದಲಿತ ಸಂಘಟನೆಗಳು ಸಭೆ ಕರೆದಿವೆ. ಕೆಲ ದಲಿತ ಸಂಘಟನೆಗಳು ಚಾಟಿ ಬೀಸಿವೆ. ಅಂಬೇಡ್ಕರ್ ಹೆಸರೇಳಿಕೊಂಡು ಹೋರಾಟ ಮಾಡುತ್ತಿದ್ದಾರೆ. ದಲಿತರ ಪರವಾಗಿ ನಿಲ್ಲಬೇಕೇ ಹೊರತು. ದಲಿತರಿಗೆ ಅನ್ಯಾಯ ಮಾಡಿದವರ ಪರ ನಿಲ್ಲಬಾರದು. ಅವರ ಬೆಂಬಲಕ್ಕೆ ನಿಂತಿರೋದು ಯಾಕೆ? ಎಂದು ಪ್ರಶ್ನಿಸಿದ್ದಾರೆ.ಇದನ್ನೂ ಓದಿ: ತಮಿಳಿನತ್ತ ನಟಿ- ಶಿವಕಾರ್ತಿಕೇಯನ್‌ಗೆ ಶ್ರೀಲೀಲಾ ಜೋಡಿ

    ಸರ್ಕಾರದ ಪರವಾಗಿ ನಿಂತರೆ ಆಮಿಷಕ್ಕೆ ನಿಂತಿದ್ದೀರಿ ಅಂತಾಗುತ್ತದೆ. ದಲಿತರ ಪರವಾಗಿ ನಿಲ್ಲೋದು ಬಿಟ್ಟು, ಸರ್ಕಾರದ ಪರ ನಿಲ್ಲೋದು ಯಾಕೆ? ಸಿಎಂ ಪರ ಆಗಲಿ, ಯಾರ ಪರ ಯಾರಾದ್ರೂ ನಿಲ್ಲಲಿ. ಸರ್ಕಾರ ದಲಿತರಿಗೆ ಸವಲತ್ತು ನೀಡದೇ ಇದ್ದಾಗ ಹೋರಾಟ ಮಾಡಲಿ. 24 ಸಾವಿರ ಕೋಟಿ ರೂ. 187 ಕೋಟಿ ಖಾತೆಗಳಿಗೆ ವರ್ಗಾವಣೆ ಆಗಿದೆ. ಅದನ್ನು ವಿರೋಧ ಮಾಡುತ್ತಿಲ್ಲ. ಹೊಟ್ಟೆಪಾಡಿಗಾಗಿ ಕೆಲ ಸಂಘಟನೆಗಳು ಅವರ ಪರ ನಿಲ್ಲುತ್ತಿದ್ದಾರೆ ಅನ್ನೋದು ಸ್ಪಷ್ಟವಾಗಲಿದೆ ಎಂದು ಕಿಡಿಕಾರಿದ್ದಾರೆ.

  • MUDA Scam | ರಾಜ್ಯಪಾಲರ ನಡೆಗೆ ಖಂಡನೆ – ಸಿದ್ದರಾಮಯ್ಯ ಬೆನ್ನಿಗೆ ನಿಂತ ಮಠಾಧೀಶರು

    MUDA Scam | ರಾಜ್ಯಪಾಲರ ನಡೆಗೆ ಖಂಡನೆ – ಸಿದ್ದರಾಮಯ್ಯ ಬೆನ್ನಿಗೆ ನಿಂತ ಮಠಾಧೀಶರು

    ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಹಲವು ಸಂಘಟನೆಗಳು, ಕಾಂಗ್ರೆಸ್‌ ಶಾಸಕರು, ಸಚಿವರು ಬೆಂಬಲ ನೀಡಿದ್ದಾರೆ. ಈ ನಡುವೆ ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ ಸಹ ಸಿಎಂ ಬೆನ್ನಿಗೆ ನಿಂತಿದೆ.

    ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟದ ಸ್ವಾಮೀಜಿಗಳು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಬೇಷರತ್ ನೈತಿಕ ಬೆಂಬಲ ಘೋಷಿಸಿದ್ದಾರೆ.

    ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ 10 ಸ್ವಾಮೀಜಿಗಳನ್ನೊಳಗೊಂಡ ನಿಯೋಗ ಸಿದ್ದರಾಮಯ್ಯ ಅವರಿಗೆ ಆತ್ಮಸ್ಥೈರ್ಯ ತುಂಬಿತು. ಇದೇ ವೇಳೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಕ್ರಮವನ್ನು ಒಕ್ಕೂಟ ಖಂಡಿಸಿತು.

    ಸಿಎಂಗೆ ಯಾರೆಲ್ಲಾ ಬೆಂಬಲ್ಲ?
    * ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಜಿಯವರು, ಕನಕ ಪೀಠ ಕಾಗಿನೆಲೆ.
    * ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮಿಗಳು, ಶ್ರೀ ಜಗದ್ಗುರು ಕುಂಚಿಟಿಗ ಮಾಸಂಸ್ಥಾನ ಮಠ ಹೊಸದುರ್ಗ.
    * ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿಗಳು, ಭೋವಿ ಗುರುಪೀಠ ಚಿತ್ರದುರ್ಗ.
    * ಜಗದ್ಗುರು ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಮಹಾಸ್ವಾಮಿಗಳು, ಮಾದರ ಚನ್ನಯ ಗುರುಪೀಠ ಚಿತ್ರದುರ್ಗ.
    * ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು, ಭಗಿರಥ ಪೀಠ ಮಧುರೆ.
    * ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು, ಕನಕ ಗುರುಪೀಠ ಹೊಸದುರ್ಗ.
    * ಶ್ರೀ ರೇಣುಕಾನಂದ ಸ್ವಾಮಿಗಳು, ನಾರಾಯಣ ಗುರುಪೀಠ ಶಿವಮೊಗ್ಗ.
    * ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು, ಮಡಿವಾಳ ಗುರುಪೀಠ ಚಿತ್ರದುರ್ಗ.
    * ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮಿಗಳು, ಹಡಪದ ಅಪ್ಪಣ್ಣ ಗುರುಪೀಠ ತಂಗಡಗಿ.
    * ಶ್ರೀ ಶಾಂತಮ್ಮಯ್ಯ ಸ್ವಾಮೀಜಿಗಳು, ಸರೂರು ವಿಜಯನಗರ.
    ಈ ಎಲ್ಲಾ ಪೂಜ್ಯರು ನಿಯೋಗದ ಪರವಾಗಿ ಉಪಸ್ಥಿತರಿದ್ದು, ಕೃತಕವಾಗಿ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರ ಸರ್ಕಾರದ ಮತ್ತು ರಾಜಭವನದ ಷಡ್ಯಂತ್ರಗಳನ್ನು ತೀವ್ರವಾಗಿ ಖಂಡಿಸಿ, ಈ ಷಡ್ಯಂತ್ರದ ವಿರುದ್ಧ ಒಕ್ಕೋರಲಿನಿಂದ ಮುಖ್ಯಮಂತ್ರಿಗಳ ಪರವಾಗಿ ನಿಂತು ಹೋರಾಟ ನಡೆಸುವುದಾಗಿ ಘೋಷಿಸಿದರು.

    ರಾಜ ಭವನ ಚಲೋ ಕುರಿತು ಪೂರ್ವಭಾವಿ ಸಭೆ:
    ಅಲ್ಲದೇ ಮೈಸೂರಿನಲ್ಲೂ ಸಹ ಭಾನುವಾರ ಸಿಎಂ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ ಇದೇ ಆಗಸ್ಟ್‌ 27ರಂದು ರಾಜ ಭವನ ಚಲೋ ಕಾರ್ಯಕ್ರಮ ಸಂಬಂಧ ಪೂರ್ವಭಾವಿ ಸಭೆ ನಡೆಸಲಾಗಿದೆ. ಕರ್ನಾಟಕ ‌ಶೋಷಿತ ಸಮುದಾಯಗಳ ಮಾಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ವತಿಯಿಂದ ಇದೇ ಆಗಸ್ಟ್‌ 27ರಂದು ಬೆಳಗ್ಗೆ 11 ಗಂಟೆಗೆ ಮೈಸೂರಿನ ಫ್ರೀಡಂ ಪಾರ್ಕ್‌ನಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಉದ್ದೇಶಿಸಲಾಗಿದೆ. ಈ ಸಂಬಂಧ ಮೈಸೂರಿನ ಸಿದ್ದಾರ್ಥ ನಗರದಲ್ಲಿರುವ ಕನಕ ಭವನದಲ್ಲಿ ಭಾನುವಾರ ಪೂರ್ವಭಾವಿ ಸಭೆ ನಡೆಸಲಾಗಿದೆ.

  • ರಾಜಸ್ಥಾನದಲ್ಲಿ ಕೈಕಾಲು, ಬಾಯಿ ಕಟ್ಟಿದ ಸ್ಥಿತಿಯಲ್ಲಿ ಸ್ವಾಮೀಜಿ ಶವ ಪತ್ತೆ

    ರಾಜಸ್ಥಾನದಲ್ಲಿ ಕೈಕಾಲು, ಬಾಯಿ ಕಟ್ಟಿದ ಸ್ಥಿತಿಯಲ್ಲಿ ಸ್ವಾಮೀಜಿ ಶವ ಪತ್ತೆ

    ಜೈಪುರ: ಸ್ವಾಮೀಜಿಯೊಬ್ಬರ (Swamiji) ಮೃತದೇಹ ಕೈಕಾಲು ಮತ್ತು ಬಾಯಿ ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ರಾಜಸ್ಥಾನದ (Rajasthan) ಕುಚಾಮನ್ (Kuchaman) ಜಿಲ್ಲೆಯಲ್ಲಿ ನಡೆದಿದೆ.

    ಮೃತ ಮುನಿಯನ್ನು ಮೋಹನ್ ದಾಸ್ (72) ಎಂದು ಗುರುತಿಸಲಾಗಿದ್ದು, ಕಳೆದ 15 ವರ್ಷಗಳಿಂದ ರಾಸಲ್ (Rasal) ಗ್ರಾಮದಲ್ಲಿ ವಾಸಿಸುತ್ತಿದ್ದರು. ಸೋಮವಾರ ಮುಂಜಾನೆ ಗ್ರಾಮಸ್ಥರಿಗೆ ಶವವಾಗಿ ಪತ್ತೆಯಾಗಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಎರಡು ದಿನ ರೆಡ್ ಅಲರ್ಟ್ – ಚಾರ್ ಧಾಮ್ ಯಾತ್ರೆ ತಾತ್ಕಾಲಿಕ ಸ್ಥಗಿತ

    ಮೃತ ಸ್ವಾಮೀಜಿ ಒಬ್ಬಂಟಿಯಾಗಿ ವಾಸಿಸುತ್ತಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಕೊಲೆ ಪ್ರಕರಣವನ್ನು ದಾಖಲಿಸಿದ್ದು, ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಕುಚಾಮನ್ ನಗರ ಎಸ್‌ಹೆಚ್‌ಒ ಸುರೇಶ್ ಕುಮಾರ್ ತಿಳಿಸಿದ್ದಾರೆ. ಅಲ್ಲದೇ ಮರಣೋತ್ತರ ಪರೀಕ್ಷೆಯ ಬಳಿಕ ಸ್ವಾಮೀಜಿಯ ಮೃತದೇಹವನ್ನು ಅದೇ ಗ್ರಾಮದಲ್ಲಿ ವಾಸಿಸುತ್ತಿರುವ ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ ಎಂದರು. ಇದನ್ನೂ ಓದಿ: ಭಾರೀ ಮಳೆಗೆ ಶಿಮ್ಲಾದಲ್ಲಿ ದೇವಾಲಯ ಕುಸಿತ – 9 ಸಾವು, ಹಲವರು ಸಿಲುಕಿರುವ ಶಂಕೆ

    ಭಾನುವಾರ ಸಂಜೆ ಗ್ರಾಮಸ್ಥರೊಂದಿಗೆ ಮಾತನಾಡಿದ ಬಳಿಕ ಸ್ವಾಮೀಜಿ ಮಲಗಲು ತಮ್ಮ ಕೋಣೆಗೆ ತೆರಳಿದ್ದರು. ಸೋಮವಾರ ಮುಂಜಾನೆ ಅವರ ಮೃತದೇಹ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ನೆಲದ ಮೇಲೆ ಬಿದ್ದಿರುವುದನ್ನು ಕಂಡು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹಿಮಾಚಲದಲ್ಲಿ ಮೇಘಸ್ಫೋಟಕ್ಕೆ 7 ಬಲಿ – ಕೊಚ್ಚಿ ಹೋದ ಮನೆಗಳು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನದಿಗೆ ಹಾರಿ 60 ವರ್ಷದ ಸ್ವಾಮೀಜಿ ಆತ್ಮಹತ್ಯೆ

    ನದಿಗೆ ಹಾರಿ 60 ವರ್ಷದ ಸ್ವಾಮೀಜಿ ಆತ್ಮಹತ್ಯೆ

    ಮೈಸೂರು: ಚಿಕ್ಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ವಿಚಾರ ದೇಶಾದ್ಯಂತ ತಲ್ಲಣ ಸೃಷ್ಟಿಸಿದ ಬೆನ್ನಲ್ಲೇ ಇದೀಗ 60 ವರ್ಷದ ಸ್ವಾಮೀಜಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅರಮನೆ ನಗರಿ ಮೈಸೂರು ಜಿಲ್ಲೆಯಲ್ಲಿ (Mysuru Swamiji Suicide) ನಡೆದಿದೆ.

    ಸ್ವಾಮೀಜಿಯನ್ನು ಶಿವಪ್ಪ ದೇವರು (Shivappa Devaru) ಎಂದು ಗುರುತಿಸಲಾಗಿದ್ದು, ಇವರು ನಂಜನಗೂಡಿನ ದೇವನೂರು ಮಠದ ಸ್ವಾಮೀಜಿಗಳ ಶಿಷ್ಯ.

    ಕಳೆದೆರಡು ದಿನದಿಂದ ಶಿವಪ್ಪ ದೇವರು ಸ್ವಾಮೀಜಿ ನಾಪತ್ತೆಯಾಗಿದ್ದರು. ಬಳಿಕ ಟಿ.ನರಸೀಪುರ (T narasipura) ತಾಲೂಕಿನ ಮೂಡುಕೊತೊರೆಯ ಬಳಿ ಕಾವೇರಿ ನದಿಗೆ (Cauvery River) ಹಾರಿ ಆತ್ಮಹತ್ಯೆ ಮಾಡಿಕೊಮಡಿದ್ದಾರೆ.

    ಮೂಲತಃ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಕಲಿವೂರು ಗ್ರಾಮದ ಸ್ವಾಮೀಜಿ ತೀವ್ರ ಅನಾರೋಗ್ಯ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಕಳೆದ 45 ವರ್ಷಗಳಿಂದ ದೇವನೂರು ಮಠದಲ್ಲಿ ಸೇವೆ ಮಾಡಿಕೊಂಡಿದ್ದ ಇವರು ಮಠ ಹಾಗೂ ಮಠದ ಭಕ್ತರಲ್ಲಿ ಉತ್ತಮ ಹೆಸರು ಹೊಂದಿದ್ದರು.

    ಸ್ಥಳಕ್ಕೆ ತಲಕಾಡು ಪೊಲೀಸರು (Talakadu police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹನುಮಂತನಿಗೆ ಅಪಮಾನ ಮಾಡಿದ ಆರೋಪ- ಶಪಥ ಮಾಡಿ ನದಿಯಲ್ಲೇ ಕುಳಿತ ಸ್ವಾಮೀಜಿ

    ಹನುಮಂತನಿಗೆ ಅಪಮಾನ ಮಾಡಿದ ಆರೋಪ- ಶಪಥ ಮಾಡಿ ನದಿಯಲ್ಲೇ ಕುಳಿತ ಸ್ವಾಮೀಜಿ

    ಚಿಕ್ಕೋಡಿ (ಬೆಳಗಾವಿ): ಹನುಮಂತನಿಗೆ (Aanjaneya) ಅಪಮಾನ ಮಾಡಿದ ಆರೋಪ ಹಿನ್ನೆಲೆಯಲ್ಲಿ ಮಳೆನೂ ಬರಲ್ಲ. ನದಿಗೆ ನೀರು ಜಾಸ್ತಿ ಆಗಲ್ಲ ಅಂತ ಸ್ವಾಮೀಜಿ ಶಪಥ ಮಾಡಿರೋ ವಿಚಿತ್ರ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

    ಬೆಳಗಾವಿ (Belagavi) ಜಿಲ್ಲೆಯ ಖಾನಾಪುರ ತಾಲೂಕಿನ ಹಬ್ಬಾನಟ್ಟಿ ಗ್ರಾಮ ಹನುಮಂತ ದೇವರ ಅರ್ಚಕ ಸ್ವಾಮೀಜಿ ದೇವೆಂದ್ರ ನದಿಯಲ್ಲಿಯೇ ಶಪಥ ಮಾಡಿ ಅಲ್ಲಿಯೇ ಕುಳಿತಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ – ಜುಲೈ 5ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

    ಕಳೆದ 15 ದಿನಗಳಿಂದ ಶಪಥ ಮಾಡಿ ತಪಸ್ಸಿಗೆ ಕುಳಿತಿರುವ ಸ್ವಾಮೀಜಿ, ನಾನು ನದಿಯಿಂದ ಏಳುವವರೆಗೆ ಮಳೆ ಪ್ರಮಾಣ ಕಡಿಮೆಯೇ ಆಗಿರುತ್ತೆ. ನದಿ ನೀರು ಸಹ ಈಗೆಷ್ಟಿದೆಯೋ ಅಷ್ಟೆ ಇರುತ್ತೆ ಎಂದು ನದಿಯಲ್ಲೇ ತಪಸ್ಸಿಗೆ ಕುಳಿತಿದ್ದಾರೆ. ಅಲ್ಲದೆ ದೇವಸ್ಥಾನದ ಕಮೀಟಿಯವರು ಹನುಂತನಿಗೆ ಅಪಮಾನ ಮಾಡಿದ್ದಾರೆ. ಕಮಿಟಿಯಲ್ಲಿರುವ ಇಬ್ಬರು ಜನರನ್ನು ತೆಗೆಯಬೇಕು ಎಂದು ಸ್ವಾಮೀಜಿ ವಾದಿಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನಾಥ ಬಾಲಕಿ ಮೇಲೆ ಆಶ್ರಮದಲ್ಲೇ ತಿಂಗಳುಗಳಿಂದ ಅತ್ಯಾಚಾರ – ಆಂಧ್ರದ ಸ್ವಾಮೀಜಿ ಅರೆಸ್ಟ್

    ಅನಾಥ ಬಾಲಕಿ ಮೇಲೆ ಆಶ್ರಮದಲ್ಲೇ ತಿಂಗಳುಗಳಿಂದ ಅತ್ಯಾಚಾರ – ಆಂಧ್ರದ ಸ್ವಾಮೀಜಿ ಅರೆಸ್ಟ್

    ಅಮರಾವತಿ: ತಾನೇ ನಡೆಸುತ್ತಿದ್ದ ಆಶ್ರಮದಲ್ಲಿ 15 ವರ್ಷದ ಅನಾಥ ಬಾಲಕಿ ಮೇಲೆ ಹಲವು ತಿಂಗಳುಗಳಿಂದ ಅತ್ಯಾಚಾರ (Rape) ಎಸಗಿರುವ ಆರೋಪದ ಮೇಲೆ ಆಂಧ್ರಪ್ರದೇಶದಲ್ಲಿ (Andhra Pradesh) ಸ್ವಾಮೀಜಿಯೊಬ್ಬರನ್ನು ಬಂಧಿಸಲಾಗಿದೆ.

    ಘಟನೆ ವಿಶಾಖಪಟ್ಟಣದಲ್ಲಿನ ಆಶ್ರಮದಲ್ಲಿ ನಡೆದಿದೆ. ಬಾಲಕಿ ಜೂನ್ 13ರಂದು ಆಶ್ರಮದಿಂದ ತಪ್ಪಿಸಿಕೊಂಡು ಹೋಗಿದ್ದು, ಈ ಬಗ್ಗೆ ಪೊಲೀಸರು ನಾಪತ್ತೆಯ ದೂರನ್ನು ದಾಖಲಿಸಿಕೊಂಡಿದ್ದರು. ಬಳಿಕ ಬಾಲಕಿ ವಿಜಯವಾಡ ತಲುಪಿ ಆಶ್ರಮದ ಸ್ವಾಮೀಜಿ ಪೂರ್ಣಾನಂದ ಸರಸ್ವತಿ (Purnananda Saraswati) ವಿರುದ್ಧ ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಬಾಲಕಿಯ ಪೋಷಕರು ಆಕೆ ಚಿಕ್ಕವಳಿದ್ದಾಗಲೇ ನಿಧನರಾಗಿದ್ದಾರೆ. ಬಳಿಕ ಆಕೆಯ ಅಜ್ಜಿ 2 ವರ್ಷಗಳ ಹಿಂದೆ ಆಶ್ರಮದಲ್ಲಿ ಅವಳನ್ನು ಬಿಟ್ಟು ಹೋಗಿರುವುದಾಗಿ ತಿಳಿಸಿದ್ದಾಳೆ. ಕಳೆದ ಹಲವು ತಿಂಗಳುಗಳಿಂದ ಪೂರ್ಣಾನಂದ ಸರಸ್ವತಿ ತನಗೆ ಪದೇ ಪದೇ ಹಿಂಸೆ ನೀಡುತ್ತಿದ್ದರು ಹಾಗೂ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಬಾಲಕಿ ದೂರು ನೀಡಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ: ಧಾರಾವಾಹಿ ನಿರ್ಮಾಪಕನ ಮೇಲೆ ಎಫ್.ಐ.ಆರ್ ದಾಖಲು

    ಇದೀಗ ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದು, ಪೂರ್ಣಾನಂದ ಸರಸ್ವತಿ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿಗೆ ಪೋಷಕರಿಲ್ಲದ ಕಾರಣ ಆಕೆಯ ಪರಿಸ್ಥಿತಿಯ ಲಾಭ ಪಡೆದುಕೊಳ್ಳಲಾಗಿದೆ. ಪೂರ್ಣಾನಂದ ಸರಸ್ವತಿ ಕಳೆದ ಹಲವು ತಿಂಗಳುಗಳಿಂದ ಆಶ್ರಮದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾಗಿ ಆರೋಪಿಸಲಾಗಿದೆ. ಅವರ ವಿರುದ್ಧ ಭಾರತೀಯ ದಂಡಸಂಹಿತೆ (IPC) ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 17,500 ರೂ. ಕೊಟ್ಟು ಫೇಶಿಯಲ್ ಮಸಾಜ್ ಮಾಡಿಸಿಕೊಂಡ ಯುವತಿ- ಮುಂದೇನಾಯ್ತು..?

  • ʼಶಕ್ತಿʼ ಯೋಜನೆ ಉದ್ಘಾಟನೆ ಜೋಶ್‌ನಲ್ಲಿ ಸರ್ಕಾರಿ ಬಸ್ ಚಲಾಯಿಸಿ ಸ್ವಾಮೀಜಿ ಅಚಾತುರ್ಯ

    ʼಶಕ್ತಿʼ ಯೋಜನೆ ಉದ್ಘಾಟನೆ ಜೋಶ್‌ನಲ್ಲಿ ಸರ್ಕಾರಿ ಬಸ್ ಚಲಾಯಿಸಿ ಸ್ವಾಮೀಜಿ ಅಚಾತುರ್ಯ

    ವಿಜಯಪುರ: ಮಹಿಳೆಯರಿಗೆ ಉಚಿತ ಬಸ್ (Free Bus Travel) ಪ್ರಯಾಣಕ್ಕೆ ಚಾಲನೆ ನೀಡುವಾಗ ಸ್ವಾಮೀಜಿಯೊಬ್ಬರು ಅಚಾತುರ್ಯ ಎಸಗಿದ್ದಾರೆ. ಭಾನುವಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿ ತಾವೇ ಸರ್ಕಾರಿ ಬಸ್ ಚಲಾಯಿಸಿದ್ದಾರೆ.

    ವಿಜಯಪುರ (Vijayapura) ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಘಟನೆ ನಡೆದಿದ್ದು, ಸುಮಾರು 5 ಕಿ.ಮೀ ವರೆಗೆ ಸರ್ಕಾರಿ ಬಸ್‌ನ್ನು ಸ್ವಾಮೀಜಿ ಚಲಾಯಿಸಿದ್ದಾರೆ. ಕೊಲ್ಹಾರದ ದಿಗಂಬರೇಶ್ವರ ಮಠದ ಕಲ್ಲಿನಾಥ್ ಸ್ವಾಮೀಜಿ ಬಸ್ ಚಲಾಯಿಸಿ ಅಚಾತುರ್ಯ ಎಸಗಿದ್ದಾರೆ. ಇದನ್ನೂ ಓದಿ: ಉಚಿತ ಬಸ್‌ ಪ್ರಯಾಣದ ಮೊದಲ ಟಿಕೆಟ್‌ ಪಡೆದ ಅದೃಷ್ಟಶಾಲಿ ಮಹಿಳೆ ಇವರೇ..!

    ಸರ್ಕಾರಿ ಅಧಿಕಾರಿಗಳ ಸಮ್ಮುಖದಲ್ಲೇ ಬಸ್ ತೆಗೆದುಕೊಂಡು ಹೋಗಿ ಕೊಲ್ಹಾರ ಪಟ್ಟಣದಲ್ಲಿ ಸ್ವಾಮೀಜಿ ಸುತ್ತಾಡಿಸಿದ್ದಾರೆ. ಸ್ವಾಮೀಜಿ ಬಸ್ ಜಲಾಯಿಸುತ್ತಿದ್ದಂತೆ ಆತಂಕದಲ್ಲೇ ಪ್ರಯಾಣಿಕರು ಪ್ರಯಾಣಿಸಿದ್ದಾರೆ.

    ನಿಯಮದಂತೆ ಸರ್ಕಾರಿ ಚಾಲಕ ಬಿಟ್ಟು ಬೇರೆಯವರು ಸರ್ಕಾರಿ ಬಸ್ ಚಲಾಯಿಸುವಂತಿಲ್ಲ. ಬಸ್ ಚಲಾಯಿಸುವವರು ಕಡ್ಡಾಯವಾಗಿ ಹೇವಿ ಲೈಸನ್ಸ್ ಪಡೆದಿರಬೇಕು. ಸರ್ಕಾರಿ ನಿಯಮಗಳನ್ನ ಗಾಳಿಗೆ ತೂರಿ ಸರ್ಕಾರಿ ಬಸ್‌ನ್ನು ಕಲ್ಲಿನಾಥ ಸ್ವಾಮೀಜಿ ಚಲಾಯಿಸಿದ್ದಾರೆ. ಸ್ವಾಮೀಜಿಯ ಅಚಾತುರ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಕ್ತಿ ಯೋಜನೆ- ಮಂಜುನಾಥನ ಸನ್ನಿಧಿಗೆ ಮೊದಲ ಬಸ್ ಪ್ರಯಾಣ

  • ಆಸ್ತಿ ವಿಷಯಕ್ಕೆ ರೈತನ ಮೇಲೆ ಮಾರಣಾಂತಿಕ ಹಲ್ಲೆ – ಸ್ವಾಮೀಜಿ, ಬೆಂಬಲಿಗರ ಮೇಲೆ ಎಫ್‌ಐಆರ್

    ಆಸ್ತಿ ವಿಷಯಕ್ಕೆ ರೈತನ ಮೇಲೆ ಮಾರಣಾಂತಿಕ ಹಲ್ಲೆ – ಸ್ವಾಮೀಜಿ, ಬೆಂಬಲಿಗರ ಮೇಲೆ ಎಫ್‌ಐಆರ್

    ಬೀದರ್: ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ರೈತನ (Farmer) ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಬಸವತೀರ್ಥ ಮಠದ ಸ್ವಾಮೀಜಿ ಹಾಗೂ ಬೆಂಬಲಿಗರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.

    ಜಮೀನು ಆಸ್ತಿ ವಿಷಯಕ್ಕೆ ಬಸವತೀರ್ಥ ಮಠದ ಸ್ವಾಮೀಜಿ ಬೆಂಬಲಿಗರು ಹಾಗೂ ತಾಂಡ ಜನರ ನಡುವೆ ಗಲಾಟೆಯಾಗಿತ್ತು. ಸ್ವಾಮೀಜಿ ಬೆಂಬಲಿಗರು ತಾಂಡ ಜನರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಇದೀಗ ಸಿದ್ದಲಿಂಗ ಸ್ವಾಮೀಜಿ (Siddalinga Swamiji) ಹಾಗೂ ಇಬ್ಬರು ಬೆಂಬಲಿಗರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಬಸ್ ನಿಲ್ದಾಣ ಜಾಗದ ವಿಚಾರಕ್ಕೆ 2 ಗುಂಪುಗಳ ನಡುವೆ ಮಾರಾಮಾರಿ – ಚಾಕು ಇರಿತದಿಂದ ಯುವಕ ಗಂಭೀರ

    ಬೀದರ್ (Bidar) ಜಿಲ್ಲೆಯ ಚಿಟ್ಟಗುಪ್ಪ ತಾಲೂಕಿನ ಕಲ್ಲೂರು ತಾಂಡದ ಸೋಮಲು ಎಂಬ ರೈತನ 4 ಎಕರೆ ಜಮೀನು ಮಠಕ್ಕೆ ಸೇರಬೇಕು ಎಂದು ಸ್ವಾಮೀಜಿ ಬೆಂಬಲಿಗರು ರೈತ ಸೋಮಲು, ಪತ್ನಿ ಹಾಗೂ ತಾಂಡದ ಜನರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಬಳಿಕ ರೈತ ಸೋಮಲು ಚಿಟಗುಪ್ಪಾ ಠಾಣೆಗೆ ದೂರು ನೀಡಿದ್ದು, ಈ ಹಿನ್ನೆಲೆ ಸ್ವಾಮೀಜಿ ಬೆಂಬಲಿಗರ ವಿರುದ್ಧ ಮಾರಣಾಂತಿಕ ಹಲ್ಲೆ ಹಾಗೂ ಜೀವ ಬೆದರಿಕೆ ಕೇಸ್ ದಾಖಲಾಗಿದೆ.

    ಬಸವತೀರ್ಥ ಮಠದ ಜಾತ್ರಾಮಹೋತ್ಸವಕ್ಕೆ ಚಾಲನೆ ನೀಡುವ ವೇಳೆ ಬಸವತೀರ್ಥ ಮಠದ ಡಾ. ಸಿದ್ದಲಿಂಗ ಮಹಾಸ್ವಾಮಿಗಳು ಗಾಳಿಯಲ್ಲಿ ಗುಂಡು ಕೂಡಾ ಹಾರಿಸಿದ್ದಾರೆ. ಎಫ್‌ಐಆರ್ ದಾಖಲಾಗುತ್ತಿದ್ದಂತೆ ಸಿದ್ದಲಿಂಗ ಸ್ವಾಮೀಜಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಭಿನ್ನಮತ ಸ್ಫೋಟ – ಬಿಜೆಪಿಗೆ ಮಾಜಿ ಶಾಸಕ ಕಿರಣ್ ಕುಮಾರ್ ಗುಡ್‌ಬೈ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸ್ವಾಮೀಜಿಗಳ ಮೇಲೆ ಆರೋಪ ಕೇಳಿಬರುತ್ತಲೇ ಆತ್ಮಹತ್ಯೆ ನಿರ್ಧಾರ ಮಾಡೋದು ಸರಿಯಲ್ಲ: ದಯಾನಂದ ಸ್ವಾಮೀಜಿ

    ಸ್ವಾಮೀಜಿಗಳ ಮೇಲೆ ಆರೋಪ ಕೇಳಿಬರುತ್ತಲೇ ಆತ್ಮಹತ್ಯೆ ನಿರ್ಧಾರ ಮಾಡೋದು ಸರಿಯಲ್ಲ: ದಯಾನಂದ ಸ್ವಾಮೀಜಿ

    ಹುಬ್ಬಳ್ಳಿ: ಇತ್ತೀಚೆಗೆ ಸ್ವಾಮೀಜಿಗಳ (Swamiji) ಮೇಲೆ ಹಲವಾರು ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ, ಅನೇಕ ಸ್ವಾಮೀಜಿಗಳು ಆತ್ಮಹತ್ಯೆಯ (Suicide) ನಿರ್ಧಾರಕ್ಕೆ ಮುಂದಾಗುತ್ತಿದ್ದಾರೆ. ಇದು ಸರಿಯಲ್ಲ ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ ದಯಾನಂದ ಸ್ವಾಮೀಜಿ (Dayananda Swamiji) ಹೇಳಿದ್ದಾರೆ.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ಸನ್ಯಾಸಿಯಾದವರು ಸನ್ಯಾಸತ್ವದ ನೀತಿಗಳನ್ನು ಪಾಲಿಸಿ, ತನ್ನ ಸ್ವಾಮೀತ್ವ ಜೀವನ ನಡೆಸಬೇಕು. ಅದನ್ನು ಬಿಟ್ಟು ಆಸ್ತಿ, ಅಧಿಕಾರಕ್ಕಾಗಿ ಬಡೆದಾಡಿಕೊಂಡು ಸಮಾಜದ ಎದುರಿಗೆ ಬರುವುದು ಅಪಚಾರವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಕರ್ನಾಟಕ ವಿವಿಯಲ್ಲಿದ್ದ ಉಗಾಂಡ ದೇಶದ ವಿದ್ಯಾರ್ಥಿ ನಾಪತ್ತೆ

    &

    ಮಠ ಮಾನ್ಯಗಳು ಸಮಾಜದಲ್ಲಿ ಕೆಟ್ಟ ವಿಚಾರಗಳನ್ನು ತಿದ್ದಿ, ಸುಸಂಸ್ಕೃತ ವಾತಾವರಣವನ್ನು ಕಟ್ಟಬೇಕು. ಆ ಕೆಲಸಗಳಲ್ಲಿ ಸ್ವಾಮೀಜಿಗಳು ಕಾರ್ಯೋನ್ಮುಖವಾಗಬೇಕು. ಅದನ್ನು ಬಿಟ್ಟು ಅವರ ಮೇಲೆ ಆರೋಪಗಳು ಬಂದಕೂಡಲೇ ಆತ್ಮಹತ್ಯೆ ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ನ.11ಕ್ಕೆ ಬೆಂಗಳೂರಿಗೆ ಮೋದಿ – ಅಂದು ಏನೇನು ಕಾರ್ಯಕ್ರಮ ನಡೆಯುತ್ತೆ?

    Live Tv
    [brid partner=56869869 player=32851 video=960834 autoplay=true]