Tag: sydney

  • Shreyas Iyer In ICU | ಪಕ್ಕೆಲುಬು ಗಾಯದಿಂದ ರಕ್ತಸ್ರಾವ – ಐಸಿಯುನಲ್ಲಿ ಶ್ರೇಯಸ್‌ ಅಯ್ಯರ್‌ಗೆ ಚಿಕಿತ್ಸೆ

    Shreyas Iyer In ICU | ಪಕ್ಕೆಲುಬು ಗಾಯದಿಂದ ರಕ್ತಸ್ರಾವ – ಐಸಿಯುನಲ್ಲಿ ಶ್ರೇಯಸ್‌ ಅಯ್ಯರ್‌ಗೆ ಚಿಕಿತ್ಸೆ

    ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಕೊನೇ ಪಂದ್ಯದಲ್ಲಿ ಕ್ಯಾಚ್‌ ಹಿಡಿಯವ ವೇಳೆ ಎಡ ಪಕ್ಕೆಲುಬು ಗಾಯಕ್ಕೆ ತುತ್ತಾಗಿ ಟೀಂ ಇಂಡಿಯಾ ಉಪನಾಯಕ ಶ್ರೇಯಸ್‌ ಅಯ್ಯರ್‌ (Shreyas Iyer) ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಂತರಿಕ ರಕ್ತಸ್ರಾವದಿಂದ ಬಳಲುತ್ತಿರುವ ಅಯ್ಯರ್ ಅವರನ್ನ ಸಿಡ್ನಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    34ನೇ ಓವರ್‌ನಲ್ಲಿ ಆಸ್ಟ್ರೇಲಿಯಾದ ಅಲೆಕ್ಸ್‌ ಕ್ಯಾರಿ (Alex Carey) ಬಾರಿಸಿದ ಚೆಂಡನ್ನು ಹಿಡಿಯಲು ಹಿಂದಕ್ಕೆ ಓಡಿ ಅದ್ಭುತ ಕ್ಯಾಚ್ ಪಡೆದುಕೊಂಡಿದ್ದರು. ಆ ಸಂದರ್ಭದಲ್ಲಿ ಅಯ್ಯರ್ ಪಕ್ಕೆಲುಬಿನ ಗಾಯಕ್ಕೆ ಒಳಗಾಗಿ ಮೈದಾನ ತೊರಿದಿದ್ದರು. ಅಲ್ಲದೇ ಡ್ರೆಸ್ಸಿಂಗ್‌ ರೂಮ್‌ಗೆ ಬರ್ತಿದ್ದಂತೆ ಅಯ್ಯರ್‌ ಅವರನ್ನ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವರದಿಯಲ್ಲಿ ಆಂತರಿಕ ರಕ್ತಸ್ರಾವವಾಗಿರುವುದು ಪತ್ತೆಯಾಗಿದ್ದು, ಕಳೆದ ಎರಡು ದಿನಗಳಿಂದ ಐಸಿಯುನಲ್ಲೇ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ತಿಳಿದುಬಂದಿದೆ.

    ರಕ್ತಸ್ರಾವದಿಂದ ಸೋಂಕು ಹರಡುವುದನ್ನ ತಪ್ಪಿಸುವ ಉದ್ದೇಶದಿಂದ ಚೇತರಿಕೆಯ ಆಧಾರದಲ್ಲಿ ಅವರನ್ನು ಎರಡರಿಂದ ಏಳು ದಿನಗಳ ಕಾಲ ವೈದ್ಯರ ಮೇಲ್ವಿಚಾರಣೆಯಲ್ಲಿಡಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ.

    ಬಿಸಿಸಿಐ ಹೇಳೋದೇನು?
    ಸ್ಕ್ಯಾನ್‌ ವರದಿಯಲ್ಲಿ ಪಕ್ಕೆಲುಬು ಗಾಯವಾಗಿರುವುದು ಕಂಡುಬಂದಿದೆ. ಆದ್ರೆ ವೈದ್ಯಕೀಯವಾಗಿ ಸ್ಥಿರವಾಗಿದ್ದು, ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತಿದ್ದಾರೆ. ಸಿಡ್ನಿ ಮತ್ತು ಭಾರತದ ತಜ್ಞರ ಸಮನ್ವಯದೊಂದಿಗೆ ಬಿಸಿಸಿಐ ವೈದ್ಯಕೀಯ ತಂಡವು ಅಯ್ಯರ್‌ ಆರೋಗ್ಯ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಅದಕ್ಕಾಗಿ ವೈದ್ಯಕೀಯ ತಂಡವನ್ನ ಸಿಡ್ನಿಯಲ್ಲೇ ಇರಿಸಲಾಗಿದೆ ಎಂದು ಬಿಸಿಸಿಐ (BCCI) ಹೇಳಿದೆ.

    ಆರಂಭದಲ್ಲಿ ಅಯ್ಯ‌ರ್ ಸುಮಾರು 3 ವಾರಗಳ ಕಾಲ ಆಟದಿಂದ ಹೊರಗುಳಿಯಬೇಕಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದ್ರೆ ಪರಿಸ್ಥಿತಿ ಗಮನಿಸಿದರೆ ಅವರ ಚೇತರಿಕೆಯ ಅವಧಿ ಇನ್ನಷ್ಟು ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

  • ಆಟದ ಮಧ್ಯೆಯೇ ಮೈದಾನ ತೊರೆದ ಬುಮ್ರಾ – ಟೀಂ ಇಂಡಿಯಾಕ್ಕೆ ದೊಡ್ಡ ಆಘಾತ!

    ಆಟದ ಮಧ್ಯೆಯೇ ಮೈದಾನ ತೊರೆದ ಬುಮ್ರಾ – ಟೀಂ ಇಂಡಿಯಾಕ್ಕೆ ದೊಡ್ಡ ಆಘಾತ!

    – ಬುಮ್ರಾ ಫಿಟ್‌ ಇಲ್ಲದಿದ್ರೆ 200 ರನ್‌ ಲೀಡ್‌ ಇದ್ರೂ ಸಾಲಲ್ಲ: ಗವಾಸ್ಕರ್‌
    – ಬುಮ್ರಾ ಬೌಲಿಂಗ್‌ ಮಾಡುವ ಬಗ್ಗೆ ಭಾನುವಾರ ನಿರ್ಧಾರ

    ಸಿಡ್ನಿ: ಬಾರ್ಡರ್ – ಗವಾಸ್ಕರ್ ಸರಣಿಯ ಕೊನೆಯ ಟೆಸ್ಟ್‌ ಪಂದ್ಯದಲ್ಲಿ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಿದೆ. ಈ ನಡುವೆ ಪಂದ್ಯದ ನಾಯಕ ಜಸ್ಪ್ರೀತ್‌ ಬುಮ್ರಾ (Jasprit Bumra) ಮೈದಾನ ತೊರೆದು ಶಾಕ್‌ ಕೊಟ್ಟಿದ್ದಾರೆ.

    ಸಿಡ್ನಿಯಲ್ಲಿ (Sydney) ನಡೆಯುತ್ತಿರುವ ಕೊನೇ ಪಂದ್ಯದಲ್ಲಿ ಭೋಜನ ವಿರಾಮದ ಬಳಿಕ ಬುಮ್ರಾ ಕೇವಲ ಒಂದೇ ಓವರ್‌ ಬೌಲಿಂಗ್‌ ಮಾಡಿದರು. ಬಳಿಕ ಸ್ಥಳೀಯ ಕಾಲಮಾನ 2 ಗಂಟೆ ಸುಮಾರಿಗೆ ಮೈದಾನ ತೊರೆದರು. ಬುಮ್ರಾ ಬದಲಿಗೆ ಪ್ರಸಿದ್ಧ್‌ ಕೃಷ್ಣ ಅವರನ್ನು ಕಣಕ್ಕಿಳಿಸಲಾಯಿತು. ಇದನ್ನೂ ಓದಿ: KSRTC Ticket Price Hike – ಬೆಂಗಳೂರಿನಿಂದ ನಿಮ್ಮ ಜಿಲ್ಲೆಗೆ ಎಷ್ಟು ದರ ಏರಿಕೆ? ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌

    ಮೈದಾನ ತೊರೆದ ಬುಮ್ರಾ ತಂಡದ ವೈದ್ಯ, ಬಿಸಿಸಿಐ ಅಧಿಕಾರಿ ಅಂಶುಮಾನ್ ಉಪಾಧ್ಯಾಯ ಮತ್ತು ಭದ್ರತಾ ಸಿಬ್ಬಂದಿ ಜೊತೆ, ಡ್ರೆಸ್ಸಿಂಗ್ ರೂಂನಿಂದ ಆಸ್ಪತ್ರೆಯ ಕಡೆಗೆ ಹೊರಟರು. ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌ ಮಾಡಿಸಿದ ಬಳಿಕ ಪುನಃ ಡ್ರೆಸ್ಸಿಂಗ್‌ ರೂಮ್‌ಗೆ ಮರಳಿದ್ದಾರೆ. ಒಂದು ವೇಳೆ, ಗಂಭೀರ ಸಮಸ್ಯೆ ಇದ್ದರೆ, ಆಸ್ಪತ್ರೆಗೆ ದಾಖಲಿಸದೇ ಬೇರೆ ವಿಧಿಯಿಲ್ಲ ಎಂದು ವರದಿಯಾಗಿದೆ.

    ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸಿದ್ಧ್ ಕೃಷ್ಣ, ಬುಮ್ರಾ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದಾರೆ ಎಂದು ಬಹಿರಂಗಪಡಿಸಿದರು. ಸದ್ಯ ಅವರು 3ನೇ ದಿನದಾಟಕ್ಕೆ ಕಣಕ್ಕಿಳಿಯುತ್ತಾರಾ ಅನ್ನೋ ಅನುಮಾನವೂ ಶುರುವಾಗಿದೆ. ಈ ನಡುವೆ ಬುಮ್ರಾ ಅವರು ಬ್ಯಾಟ್‌ ಮಾಡುವ ಪರಿಸ್ಥಿತಿಯಲ್ಲಿದ್ದಾರೆ. ಆದ್ರೆ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಬೌಲಿಂಗ್‌ ಮಾಡುವ ನಿರ್ಧಾರವನ್ನು ಭಾನುವಾರ (ಜ.5) ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.

    ಸದ್ಯ ಆಸೀಸ್‌ ವಿರುದ್ಧ ನಡೆಯುತ್ತಿರುವ ಈ ಸರಣಿಯ ಕೊನೇ ಪಂದ್ಯದಲ್ಲಿ ಅತಿದೊಡ್ಡ ಜವಾಬ್ದಾರಿ ಬುಮ್ರಾ ಅವರಮೇಲಿದೆ. ಇದುವರೆಗೆ 5 ಟೆಸ್ಟ್‌ ಪಂದ್ಯದ 9 ಇನ್ನಿಂಗ್ಸ್‌ನಲ್ಲಿ 32 ವಿಕೆಟ್‌ ಪಡೆದುಕೊಂಡಿದ್ದಾರೆ. ಕೊನೇ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲೂ ಆಸೀಸ್‌ ಬ್ಯಾಟರ್‌ಗಳನ್ನ ತೀವ್ರವಾಗಿ ಕಾಡಿದರು. ಇದೀಗ ಪಂದ್ಯ ಗೆದ್ದು ಸರಣಿಯನ್ನು ಡ್ರಾಗೊಳಿಸುವ ನಿಟ್ಟಿನಲ್ಲಿ ಬುಮ್ರಾ ಅವರ ಪಾತ್ರ ಪ್ರಮುಖವಾಗಿದೆ. ಹಾಗಾಗಿ ಭಾನುವಾರ ಬುಮ್ರಾ ಅವರ ಬೌಲಿಂಗ್‌ ಬಗ್ಗೆ ನಿರ್ಧಾರವಾಗಲಿದೆ. ಇದನ್ನೂ ಓದಿ: 32 ವರ್ಷಗಳಿಂದ ಸ್ನಾನವನ್ನೇ ಮಾಡದ ಛೋಟಾ ಬಾಬಾ – ‘ಕುಂಭ ಮೇಳ’ದ ಆಕರ್ಷಣೆ ಕೇಂದ್ರಬಿಂದು ಇವರೇ!

    ಸದ್ಯ ಬುಮ್ರಾ ಅವರ ಆರೋಗ್ಯದ ಬಗ್ಗೆ ಮುಖ್ಯ ಕೋಚ್ ಗೌತಂ ಗಂಭೀರ್ ಅಥವಾ ಬಿಸಿಸಿಐನಿಂದ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಒಂದು ವೇಳೆ, 2ನೇ ಇನ್ನಿಂಗ್ಸ್ ನಲ್ಲಿ ಅವರು ಆಡಲು ಸಾಧ್ಯವಾಗದೇ ಇದ್ದರೆ, ಟೀಂ ಇಂಡಿಯಾಗೆ ಬಹುದೊಡ್ಡ ಹೊಡೆತ ಬೀಳಲಿದೆ. ಬುಮ್ರಾಗೆ ಅತಿಯಾದ ವರ್ಕ್ ಲೋಡ್ ಇದೆ ಎಂದು ನಾಯಕ ರೋಹಿತ್ ಶರ್ಮಾ ಕೂಡಾ ಹೇಳಿದ್ದರು.

    ಬುಮ್ರಾ ಅವರ ಅನುಪಸ್ಥಿತಿಯಲ್ಲಿ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಿದ್ದಾರೆ. ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್ ನಲ್ಲಿ ಬುಮ್ರಾ 10 ಓವರ್ ಎಸೆದು, 2 ವಿಕೆಟ್ ಪಡೆದುಕೊಂಡಿದ್ದಾರೆ. ವೇಗಿಗಳಾದ ಸಿರಾಜ್ 16, ಪ್ರಸಿದ್ದ್ ಕೃಷ್ಣ 15 ಓವರ್ ಗಳನ್ನು ಎಸೆದಿದ್ದಾರೆ. ಇವರಿಬ್ಬರೂ, ತಲಾ ಮೂರು ವಿಕೆಟ್ ಅನ್ನು ಪಡೆದುಕೊಂಡರೆ, ನಿತೀಶ್ ಕುಮಾರ್ ರೆಡ್ಡಿ ಎರಡು ವಿಕೆಟ್ ಪಡೆದರು. ಇದನ್ನೂ ಓದಿ: BMTC Ticket Price Hike| ಮೆಜೆಸ್ಟಿಕ್‌ನಿಂದ ನಿಮ್ಮ ಏರಿಯಾಗೆ ಎಷ್ಟು ರೂ.? ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌

    ಬುಮ್ರಾ ಫಿಟ್‌ ಇಲ್ಲ ಅಂದ್ರೆ 200 ರನ್‌ ಕೂಡ ಸಾಲಲ್ಲ:
    ಬುಮ್ರಾ ಅವರು ಮೈದಾನ ತೊರೆದ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಕ್ರಿಕೆಟಿಗ ಸುನೀಲ್‌ ಗವಾಸ್ಕರ್‌, ಬುಮ್ರಾ ಬೌಲಿಂಗ್‌ ಮಾಡಲು ಫಿಟ್‌ ಇದ್ದರೆ, 150 ರನ್‌ ಟಾರ್ಗೆಟ್‌ ಇದ್ದರೂ ಭಾರತಕ್ಕೆ ಗೆಲ್ಲುವ ಅವಕಾಶವಿದೆ. ಒಂದು ವೇಳೆ ಫಿಟ್‌ ಇಲ್ಲವಾದ್ರೆ ಭಾರತ 200 ರನ್‌ ಲೀಡ್‌ ಕಾಯ್ಡುಕೊಂಡರೂ ಸಾಕಾಗುವುದಿಲ್ಲ. ಸದ್ಯ ಭಾರತ 145 ರನ್‌ಗಳ ಮುನ್ನಡೆಯಲ್ಲಿದೆ. ಇನ್ನೂ 40 ರನ್‌ ಗಳಿಸಿ 185 ರನ್‌ ಟಾರ್ಗೆಟ್‌ ಕೊಟ್ಟರೂ ಭಾರತಕ್ಕೆ ಗೆಲ್ಲುವ ಅವಕಾಶವಿದೆ. ಆದ್ರೆ ಅದು ಬುಮ್ರಾ ಫಿಟ್‌ನೆಸ್‌ ಮೇಲೆ ನಿರ್ಧಾರವಾಗಲಿದೆ.

  • ಬುಮ್ರಾ ವಿರುದ್ಧ ಕಾಲು ಕೆರೆದುಕೊಂಡು ಜಗಳಕ್ಕೆ ನಿಂತ 19ರ ಯುವ ಬ್ಯಾಟರ್‌!

    ಬುಮ್ರಾ ವಿರುದ್ಧ ಕಾಲು ಕೆರೆದುಕೊಂಡು ಜಗಳಕ್ಕೆ ನಿಂತ 19ರ ಯುವ ಬ್ಯಾಟರ್‌!

    ಸಿಡ್ನಿ: ಭಾರತ – ಆಸ್ಟ್ರೇಲಿಯಾ ನಡುವಿನ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿ ಈ ಬಾರಿ ವಿವಾದಗಳಿಂದಲೇ ಹೆಚ್ಚಾಗಿ ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ ಕೊಹ್ಲಿ ವಿರುದ್ಧ ಜಗಳ ಮಾಡಿಕೊಂಡಿದ್ದ 19 ವರ್ಷದ ಆಸೀಸ್‌ ಬ್ಯಾಟರ್‌, ಇಸೀಗ ಬುಮ್ರಾ (Jasprit Bumrah) ವಿರುದ್ಧ ಕಿರೀಕ್‌ ಮಾಡಿಕೊಂಡಿದ್ದಾರೆ. ಕೇವಲ 2ನೇ ಪಂದ್ಯ ಆಡುತ್ತಿರುವ ಸ್ಯಾಮ್ ಕಾನ್‌ಸ್ಟಾಸ್ (Sam Konstas) ಭಾರತದ ಅನುಭವೀ ಆಟಗಾರ ಜಸ್ಪ್ರೀತ್ ಬುಮ್ರಾ ವಿರುದ್ಧ ಅನಗತ್ಯವಾಗಿ ಕಿರಿಕ್‌ ಮಾಡಲು ಮುಂದಾಗಿದ್ದಾರೆ.

    ಆಸೀಸ್‌ ಆಟಗಾರರ (Australia Cricketer) ಕಿರಿಕ್‌ ಇಂದು ನಿನ್ನೆಯದ್ದಲ್ಲ.. ಕಾಂಗರೂ ಪಡೆ ಜಗಳ ಆಡದೇ ಇರುವ ತಂಡ ಜಗತ್ತಿನಲ್ಲಿ ಯಾವುದಾದರೂ ಇದ್ಯಾ? ಅದೇ ಪ್ರವೃತ್ತಿಯನ್ನ ಇದೀಗ ಯುವ ಬ್ಯಾಟರ್ ಸ್ಯಾಮ್‌ ಕಾನ್‌ಸ್ಟಾಸ್‌ ಮುಂದುವರಿಸಿದ್ದಾರೆ. ಈ ಹಿಂದೆ ಸಚಿನ್‌ ತೆಂಡೂಲ್ಕರ್‌ ಹಾಗೂ ವಿರಾಟ್‌ ಕೊಹ್ಲಿ (Virat Kohli) ವಿಚಾರದಲ್ಲೂ ಅನೇಕ ಬಾರಿ ಆಟಗಾರರು ಕಿರಿಕ್‌ ತೆಗೆದಿದ್ದಾರೆ. ಇದೀಗ ಕಾನ್ಸ್‌ಸ್ಟಾಸ್‌ ಬುಮ್ರಾ ಜೊತೆಗೆ ಬೇಕಂತಲೆ ಕಿರಿಕ್‌ ತೆಗೆದಂತೆ ಕಂಡುಬಂದಿದ್ದು, ಟೀಂ ಇಂಡಿಯಾ ಅಭಿಮಾನಿಗಳಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ.

    ಚಾಂಪಿಯನ್‌ ಬೌಲರ್‌ ಬುಮ್ರಾ ವಿಕೆಟ್ ಕೀಳುವ ಸಾಮರ್ಥ್ಯ ತಿಳಿದ ಯಾವ ಬ್ಯಾಟರ್ ಕೂಡ ಅವರನ್ನು ಕೆಣಕಲು ಹೋಗಲ್ಲ. ಆದ್ರೆ ಇನ್ನೂ 2ನೇ ಪಂದ್ಯವನ್ನಷ್ಟೇ ಆಡುತ್ತಿರುವ ಕಾನ್‌ಸ್ಟಾಸ್‌ ಈ ದುಸ್ಸಾಹಸ ಮಾಡಿದ್ದಾರೆ. ಮೆಲ್ಬೋರ್ನ್‌ ಪಂದ್ಯ ಪ್ರಾರಂಭವಾಗುವ ಮೊದಲೇ ಬುಮ್ರಾ ವಿರುದ್ಧ ದೊಡ್ಡ ದೊಡ್ಡ ಹೇಳಿಕೆಗಳನ್ನು ನೀಡಿದ್ದ ಕಾನ್‌ಸ್ಟಾಸ್‌ ಪ್ರಥಮ ಇನ್ನಿಂಗ್ಸ್ ನಲ್ಲಿ ಹೇಳಿದಂತೆ ಮಾಡಿದ್ದರು. ಬುಮ್ರಾ ಎಸೆತಗಳನ್ನು ಬೌಂಡರಿ, ಸಿಕ್ಸರ್‌ಗಟ್ಟಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದರು. ಆದ್ರೆ 2ನೇ ಇನ್ನಿಂಗ್ಸ್‌ನಲ್ಲಿ ಸ್ಯಾಮ್‌ ಆಟಕ್ಕೆ ಬುಮ್ರಾ ಬ್ರೇಕ್‌ ಹಾಕಿದರು. ಕಾನ್‌ಸ್ಟಾಸ್ ಅವರನ್ನ ಕ್ಲೀನ್ ಬೌಲ್ಡ್ ಮಾಡಿದ್ದ ಬುಮ್ರಾ, ಅವರದ್ದೇ ರೀತಿಯಲ್ಲಿ ಸಂಭ್ರಮಿಸಿ ತಿರುಗೇಟು ಕೊಟ್ಟಿದ್ದರು.

    ಅಲ್ಲದೇ ಆ ಪಂದ್ಯದಲ್ಲಿ ಕಾನ್‌ಸ್ಟಾಸ್‌ ಮತ್ತು ಕೊಹ್ಲಿ ನಡುವೆ ನಡೆದ ಡಿಕ್ಕಿ ಡ್ರಾಮಾ ಇಡೀ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿತ್ತು. ಅಲ್ಲದೇ ಕೊಹ್ಲಿಗೆ ಐಸಿಸಿ ಪಂದ್ಯ ಶುಲ್ಕದಲ್ಲಿ 20% ದಂಡ ವಿಧಿಸಿತ್ತು. ಇಡೀಗ ಪಂದ್ಯ ನಡೆಯುತ್ತಿರುವ ಸಿಡ್ನಿ ಮೈದಾನ ಕಾನ್‌ಸ್ಟಾಸ್‌ ತವರು ನೆಲ. ಹೀಗಾಗಿ ಇಲ್ಲಿ ಲೋಕಲ್ ಬಾಯ್ ಆಗಿರುವ ಕಾನ್ ಸ್ಟಾಸ್ ಆತ್ಮವಿಶ್ವಾಸ ತುಸು ಹೆಚ್ಚೇ ಇರುವಂತೆ ಭಾಸವಾಗುತ್ತಿದೆ. ಪ್ರಥಮ ದಿನದ ಆಟ ಮುಗಿಯುತ್ತಾ ಬರುತ್ತಿದ್ದಂತೆ ಬುಮ್ರಾ ಜೊತೆಗೆ ಕಾಲು ಕೆರೆದುಕೊಂಡು ಜಗಳಕ್ಕೆ ನಿಂತಿದ್ದಾರೆ.

    ಕೊನೇ ಎಸೆತಕ್ಕೂ ಮುನ್ನ ಭಾರೀ ಹೈಡ್ರಾಮಾ
    ದಿನದ ಅಂತ್ಯಕ್ಕೆ ಒಂದೇ ಒಂದು ಎಸೆತ ಬಾಕಿಯಿತ್ತು. ಆಸ್ಚ್ರೇಲಿಯಾದ ಮತ್ತೊಬ್ಬ ಆರಂಭಿಕ ಆಟಗಾರ ಉಸ್ಮಾನ್ ಖವಾಜ ಅವರು ಬುಮ್ರಾ ಬೌಲಿಂಗ್ ಮಾಡಲು ರನ್ ಅಪ್ ತೆಗೆದುಕೊಳ್ಳುತ್ತಿದ್ದಾಗ ಆಟವಾಡಲು ಸಿದ್ಧರಾಗಿರಲಿಲ್ಲ. ಇದಕ್ಕೆ ಬುಮ್ರಾ ಅವರು ಆಕ್ಷೇಪಿಸಿದರು. ಆಗ ಅನಗತ್ಯವಾಗಿ ಮಧ್ಯೆ ಪ್ರವೇಶಿಸಿದ ಕಾನ್ ಸ್ಟಾಪ್ ಬುಮ್ರಾ ಅವರನ್ನು ಬೌಲಿಂಗ್ ಮಾಡದಂತೆ ತಡೆದರು. ಈ ವೇಳೆ ಬುಮ್ರಾ ಅವರು ಕಾನ್ ಸ್ಟಾಸ್ ಗೆ ಏನು ಸಮಸ್ಯೆ ಎಂದು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಕೊಂಚ ಮಾತಿನ ಚಕಮಕಿಯೂ ನಡೆಯಿತು. ತಕ್ಷಣವೇ ಅಂಪೈರ್‌ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಮುಂದಿನ ಎಸೆತದಲ್ಲೇ ಬುಮ್ರಾ, ಖವಾಜ ವಿಕೆಟ್‌ ಕಿತ್ತು ಸ್ಯಾಮ್‌ ಎದುರು ಸಂಬ್ರಮಿಸಿದರು.

  • ವಾಸನೆ ಪತ್ತೆಹಚ್ಚುವುದರಲ್ಲಿ ನಾಯಿ, ಇಲಿಯನ್ನೇ ಮೀರಿಸುವ ರೋಬೊಟ್ ಸೃಷ್ಟಿ

    ವಾಸನೆ ಪತ್ತೆಹಚ್ಚುವುದರಲ್ಲಿ ನಾಯಿ, ಇಲಿಯನ್ನೇ ಮೀರಿಸುವ ರೋಬೊಟ್ ಸೃಷ್ಟಿ

    ಸಿಡ್ನಿ: ವಾಸನೆ ಪತ್ತೆ ಹಚ್ಚುವುದರಲ್ಲಿ ನಾಯಿ ಮತ್ತು ಇಲಿಯನ್ನೇ ಮೀರಿಸುವ ವೊಂದನ್ನು ಪಶ್ಚಿಮ ಸಿಡ್ನಿ (Sydney) ವಿವಿಯ ವಿಜ್ಞಾನಿಗಳು ಸೃಷ್ಟಿಯಾಗಿದೆ.

    ಪಶ್ಚಿಮ ಸಿಡ್ನಿ ವಿವಿಯ ವಿಜ್ಞಾನಿಗಳು ಈ ರೋಬೊಟ್ (Robot) ಅಭಿವೃದ್ಧಿ ಪಡಿಸಿದ್ದು, ವಾಸನೆಯನ್ನು ಪತ್ತೆ ಹಚ್ಚುವ ಪ್ರಾಣಿಗಳ ಉಳಿವಿಗೆ ಕಾರಣವಾಗಿದೆ. ಹಲವು ಸಮಸ್ಯೆಗಳಲ್ಲಿ ಪ್ರಾಣಿಗಳನ್ನು ಬಳಸಿ ಮನುಷ್ಯ ಪರಿಹಾರ ಕಂಡಿಕೊಳ್ಳುತ್ತಿದ್ದಾನೆ. ಪ್ರಾಣಿಗಳಿಗಿಂತಲೂ ವೇಗವಾಗಿ ಮತ್ತು ಸರಿಯಾಗಿ ಗುರುತಿಸುವ ಯಂತ್ರವನ್ನು ಅಭಿವೃದ್ಧಿ ಪಡಿಸಿದ್ದೇವೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜಮಖಂಡಿ ಓಲೆಮಠದ ಅಭಿನವ ಕುಮಾರ ಚೆನ್ನಬಸವ ಸ್ವಾಮೀಜಿ ಲಿಂಗೈಕ್ಯ

    ಪ್ರಾಣಿಗಳಿಗೂ ಗುರುತಿಸಲು ಸಾಧ್ಯವಾಗದ ವಾಸನೆಯ ಮಾರ್ಗವನ್ನು ಈ ಯಂತ್ರ ಪತ್ತೆ ಹಚ್ಚುತ್ತದೆ. ಇದರಿಂದಾಗಿ ದಟ್ಟ ಅರಣ್ಯದಲ್ಲಿ ಕಾಡ್ಗಿಚ್ಚು ಉಂಟಾದರೆ, ಭೂಕುಸಿತದಲ್ಲಿ ಸಿಲುಕಿಕೊಂಡವರನ್ನು ರಕ್ಷಿಸಲು ಹಾಗೂ ಕಳ್ಳರ ಮಾರ್ಗವನ್ನು ಕಂಡುಹಿಡಿಯಲು ಇದು ಬಹಳಷ್ಟು ಪ್ರಯೋಜನಕಾರಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಕಿಡ್ನ್ಯಾಪ್ ಆಗಿದ್ದ ಮಗು ಪತ್ತೆ

  • ತಾಂತ್ರಿಕ ದೋಷದಿಂದ ಯಡವಟ್ಟು; ಏಕಕಾಲಕ್ಕೆ ಕ್ವಾಂಟಾಸ್ ಫ್ಲೈಟ್‌ನ ಎಲ್ಲಾ ಟಿವಿ ಸ್ಕ್ರೀನ್‌ನಲ್ಲಿ ಸೆಕ್ಸ್‌ ವೀಡಿಯೋ ಪ್ರಸಾರ!

    ತಾಂತ್ರಿಕ ದೋಷದಿಂದ ಯಡವಟ್ಟು; ಏಕಕಾಲಕ್ಕೆ ಕ್ವಾಂಟಾಸ್ ಫ್ಲೈಟ್‌ನ ಎಲ್ಲಾ ಟಿವಿ ಸ್ಕ್ರೀನ್‌ನಲ್ಲಿ ಸೆಕ್ಸ್‌ ವೀಡಿಯೋ ಪ್ರಸಾರ!

    ಸಿಡ್ನಿ: ತಾಂತ್ರಿಕ ದೋಷದಿಂದ ಕ್ವಾಂಟಾಸ್ ಫ್ಲೈಟ್‌ನ (Qantas Flight) ಎಲ್ಲಾ ಟಿವಿ ಪರದೆಯ ಮೇಲೆ ನೀಲಿ ಚಿತ್ರ ಪ್ರಸಾರವಾದ ಘಟನೆ ಇತ್ತೀಚೆಗೆ ನಡೆದಿದೆ. ಸಿಡ್ನಿಯಿಂದ (Sydney) ಟೋಕಿಯೊಗೆ (Tokyo) ಹೊರಟಿದ್ದ ಕ್ವಾಂಟಾಸ್ ವಿಮಾನದ ಎಲ್ಲಾ ಟಿವಿ ಪರದೆಯ ಮೇಲೆ ಅನಿರೀಕ್ಷಿತವಾಗಿ ಒಂದು ಗಂಟೆಗಳ ಕಾಲ ಹೀಗೆ ನೀಲಿ ಚಿತ್ರ ಪ್ರಸಾರವಾಗಿದೆ ಎಂದು ವರದಿಯಾಗಿದೆ.

    ಪ್ರಸಾರವಾಗುತ್ತಿದ್ದ ಚಿತ್ರವನ್ನು ಆಫ್‌ ಮಾಡಲು, ಸ್ಟಾಪ್‌ ಮಾಡಲು ಹಾಗೂ ಮುಂದೆ ಓಡಿಸಲು ಸಹ ಪ್ರಯಾಣಿಕರಿಗೆ ಸಾಧ್ಯವಾಗಿಲ್ಲ. ಈ ವೇಳೆ ಪ್ರಯಾಣಿಕರು (Passenger) ಆಘಾತಕ್ಕೊಳಗಾಗಿದ್ದಾರೆ. ವಿಮಾನದಲ್ಲಿನ ಟಿವಿ ವ್ಯವಸ್ಥೆಯಲ್ಲಿನ ತಾಂತ್ರಿಕ ಸಮಸ್ಯೆಗಳಿಂದಾಗಿ ಈ ರೀತಿಯಾಗಿದೆ. ಇದರಿಂದ ಮಕ್ಕಳು ಹಾಗೂ ಅನೇಕ ಜನ ಮುಜುಗರಕ್ಕೊಳಗಾಗಿದ್ದಾರೆ.

    ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಯಾಣಿಕರೊಬ್ಬರು ಪೋಸ್ಟ್‌ ಹಾಕಿದ್ದು, ನಾನು ಸಿಡ್ನಿಯಿಂದ ಹನೆಡಾಗೆ ಕ್ವಾಂಟಾಸ್ ಫ್ಲೈಟ್ QF59 ನಲ್ಲಿ ಹೊರಟಿದ್ದೆ. ವಿಮಾನದಲ್ಲಿನ ಮನರಂಜನಾ ವ್ಯವಸ್ಥೆಯು ಸ್ಥಗಿತಗೊಂಡಿತ್ತು. ಈ ವೇಳೆ ನಗ್ನತೆ ಹಾಗೂ ಸೆಕ್ಸ್‌ನಂತಹ ದೃಶ್ಯಗಳು ಪ್ರಸಾರವಾಗಿದೆ. ಇದನ್ನು ಸರಿಪಡಿಸಲು ವಿಮಾನದ ಸಿಬ್ಬಂದಿ ಒಂದು ಗಂಟೆಕಾಲ ಪರದಾಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

    ಕ್ವಾಂಟಾಸ್‌ನ ವಕ್ತಾರರು ಘಟನೆಯನ್ನು ದೃಢಪಡಿಸಿದ್ದಾರೆ. ಈ ಬಗ್ಗೆ ಗ್ರಾಹಕರಲ್ಲಿ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಉಳಿದ ವಿಮಾನಗಳ ಎಲ್ಲಾ ಟಿವಿಗಳಲ್ಲೂ ಕುಟುಂಬ ಸ್ನೇಹಿ ಚಲನಚಿತ್ರಕ್ಕೆ ಬದಲಾಯಿಸಲಾಗಿದೆ. ತಾಂತ್ರಿಕ ದೋಷದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

  • ಸಿಡ್ನಿಯ ಅನಿವಾಸಿ ಭಾರತೀಯರ ಸಮ್ಮೇಳನದಲ್ಲಿ ಮಂಗಳೂರು ಬೆಡಗಿಯ ನೃತ್ಯ

    ಸಿಡ್ನಿಯ ಅನಿವಾಸಿ ಭಾರತೀಯರ ಸಮ್ಮೇಳನದಲ್ಲಿ ಮಂಗಳೂರು ಬೆಡಗಿಯ ನೃತ್ಯ

    ಕ್ಯಾನ್ಬೆರಾ: ಮಂಗಳವಾರ ಆಸ್ಟ್ರೇಲಿಯಾದಲ್ಲಿ (Australia) ನಡೆದ ಅನಿವಾಸಿ ಭಾರತೀಯರ ಸಮ್ಮೇಳನದಲ್ಲಿ ಮೋದಿಯ ಭಾಷಣ ಎಲ್ಲರನ್ನೂ ಮೋಡಿ ಮಾಡಿತ್ತು. ಅದರಲ್ಲೂ ಅಲ್ಲಿ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದಿತ್ತು. ಅಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ತುಳುನಾಡಿಗೂ ಅವಿನಾಭಾವ ಸಂಬಂಧವಿದೆ. ಅದೇನೆಂದರೆ ಕಾರ್ಯಕ್ರಮದಲ್ಲಿ ಮಂಗಳೂರು (Mangaluru) ಮೂಲದ ಯುವತಿ ಹಾಗೂ ಆಕೆಯ ತಂಡ ಕಾಂತಾರ (Kantara) ಸಿನಿಮಾದ ‘ವರಾಹ ರೂಪಂ’ ಹಾಗೂ ತುಳುವಿನ ‘ವಾ ಪೊರ್ಲುಯಾ’ ಹಾಡಿಗೆ ಹೆಜ್ಜೆ ಹಾಕಿದ್ದು ಎಲ್ಲರ ಮೆಚ್ಚುಗೆ ಗಳಿಸಿದೆ.

    ಸಿಡ್ನಿಯ (Sydney) ಫುಟ್ಬಾಲ್ ಆಟದ ಮೈದಾನದಲ್ಲಿ ನಡೆದ ಅನಿವಾಸಿ ಭಾರತೀಯರ ಸಮ್ಮೇಳನಕ್ಕೆ ಪ್ರಧಾನಿ ಮೋದಿಯವರನ್ನು ವಿಶೇಷವಾಗಿ ಸ್ವಾಗತಿಸಲಾಯಿತು. ಅಲ್ಲದೇ ಸಭೆಗೂ ಮೊದಲು ವಿವಿಧ ಭಾರತೀಯ ಶೈಲಿಗಳಲ್ಲಿ ನೃತ್ಯ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಅದರಲ್ಲಿ ಮಂಗಳೂರು ಮೂಲದ ಯುವತಿಯೋರ್ವಳು ತನ್ನ ತಂಡದೊಂದಿಗೆ ಕಾಂತಾರ ಸಿನಿಮಾದ ‘ವರಾಹ ರೂಪಂ’ ಹಾಗೂ ತುಳುನಾಡಿನ ‘ವಾ ಪೊರ್ಲುಯಾ’ ಹಾಡಿಗೆ ಹೆಜ್ಜೆ ಹಾಕಿ ಕರ್ನಾಟಕ ಹಾಗೂ ತುಳುನಾಡಿನ ಗರಿಮೆಯನ್ನು ಎತ್ತಿ ಹಿಡಿದಿದ್ದಾಳೆ. ಇದನ್ನೂ ಓದಿ: ಸಾಂಪ್ರದಾಯಿಕ ಸ್ವಾಗತ ಕೊಟ್ಟು ಮೋದಿಯನ್ನು ʻಬಾಸ್‌ʼ ಎಂದು ಕರೆದ ಆಸ್ಟ್ರೇಲಿಯಾ ಪ್ರಧಾನಿ

    ಸುಮಾರು 20 ಸಾವಿರಕ್ಕೂ ಅಧಿಕ ಮಂದಿ ಸೇರಿದ್ದ ಆ ಕಾರ್ಯಕ್ರಮದಲ್ಲಿ, ಮಂಗಳೂರಿನ ಬಿಜೈ ಕಾಪಿಕಾಡ್ ಮೂಲದ ಅನಿಷಾ ಪೂಜಾರಿ (Anisha Poojari) ಹಾಗೂ ಆಕೆಯ ತಂಡ ಹೆಜ್ಜೆ ಹಾಕಿದ್ದಾರೆ. ಉಡುಪಿ ಕುಂದಾಪುರ ಮೂಲದ ನಾಟ್ಯ ವಿದುಷಿ ಪಲ್ಲವಿ ಭಾಗವತ್ ಈಕೆಯ ಗುರುವಾಗಿದ್ದು, ತಮ್ಮ ನೃತ್ಯ ಸಂಸ್ಥೆಯ ನಾಟ್ಯೋಕ್ತಿ ಶಿಷ್ಯ ವೃಂದದೊಂದಿಗೆ ಕರ್ನಾಟಕದ ಹಳ್ಳಿ ಸೊಬಗನ್ನು ತೋರಿಸುವ ಜಾನಪದ ಹಾಗೂ ಯಕ್ಷಗಾನ ಶೈಲಿಯಲ್ಲಿ ನೃತ್ಯ ಪ್ರದರ್ಶನ ನೀಡಿದ್ದಾರೆ. ಇದನ್ನೂ ಓದಿ: ಶಿಷ್ಟಾಚಾರಕ್ಕೆ ಗುಡ್‌ಬೈ – ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತ ಕೋರಿದ ಪಪುವಾ ನ್ಯೂ ಗಿನಿಯಾ ಪ್ರಧಾನಿ

    ಅನಿಷಾ ತಮ್ಮ ನಾಲ್ಕನೇ ವಯಸ್ಸಿನಲ್ಲಿ ಭರತನಾಟ್ಯ ಕಲಿಕೆಯನ್ನು ಆರಂಭಿಸಿದ್ದು, ವಿದ್ವಾನ್ ಪ್ರೇಮನಾಥ ಮಾಸ್ಟರ್ ಬಳಿ ಹೆಚ್ಚಿನ ಶಿಕ್ಷಣವನ್ನು ಪಡೆದುಕೊಂಡರು. ಅಲ್ಲದೇ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಭರತನಾಟ್ಯ ಪ್ರದರ್ಶನ ನೀಡಿ ಅನೇಕ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ವಿವಾಹದ ಬಳಿಕ ಪತಿ ಹಾಗೂ ಮಗುವಿನೊಂದಿಗೆ ಸಿಡ್ನಿಯಲ್ಲಿ ನೆಲೆಸಿದ್ದ ಅವರು ಅಲ್ಲಿಯೂ ಸಹ ಭರತನಾಟ್ಯ ಕಲಿಕೆಯನ್ನು ಮುಂದುವರಿಸಿದ್ದಾರೆ. ನಾಟ್ಯ ವಿದುಷಿ ಪಲ್ಲವಿ ಭಾಗವತ್ ಅವರ ಬಳಿ ಕಲಿಕೆ ಮುಂದುವರಿಸಿದ ಅವರು ಇಂದು ಪ್ರಧಾನಿ ಮೋದಿಯ (Narendra Modi) ಮುಂದೆ ಹೆಜ್ಜೆ ಹಾಕಿದ್ದು ಸಂತೋಷದ ವಿಷಯವೇ ಸರಿ. ಇದನ್ನೂ ಓದಿ: ರಷ್ಯಾ ಯುದ್ಧ ಆರಂಭಿಸಿದ ಬಳಿಕ ಇದೇ ಮೊದಲ ಬಾರಿಗೆ ಉಕ್ರೇನ್‌ ಅಧ್ಯಕ್ಷ ಭೇಟಿಯಾದ ಮೋದಿ

    ಈ ಕುರಿತು ಅನಿಷಾ ತಂದೆ ಮಾತನಾಡಿ, ಅನಿಷಾ 6 ವರ್ಷಗಳಿಂದ ಕುಟುಂಬ ಸಮೇತ ಸಿಡ್ನಿಯಲ್ಲಿ ನೆಲೆಸುತ್ತಿದ್ದಾಳೆ. ಚಿಕ್ಕಂದಿನಿಂದಲೂ ಡ್ಯಾನ್ಸ್‌ನಲ್ಲಿ ಅಪಾರ ಆಸಕ್ತಿ ಹೊಂದಿದ್ದ ಈಕೆ, ಮೋದಿ ಮುಂದೆ ಹೆಜ್ಜೆ ಹಾಕಿರುವುದು ಸಂತಸ ತಂದಿದೆ ಎಂದರು. ಇದನ್ನೂ ಓದಿ: ಭಾರತ ಪಾಕ್‌ನೊಂದಿಗೆ ಸಾಮಾನ್ಯ ಬಾಂಧವ್ಯ ಬಯಸುತ್ತದೆ, ಆದರೆ… – ಮೋದಿ ಹೇಳಿದ್ದೇನು?

  • ಸಾಂಪ್ರದಾಯಿಕ ಸ್ವಾಗತ ಕೊಟ್ಟು ಮೋದಿಯನ್ನು ʻಬಾಸ್‌ʼ ಎಂದು ಕರೆದ ಆಸ್ಟ್ರೇಲಿಯಾ ಪ್ರಧಾನಿ

    ಸಾಂಪ್ರದಾಯಿಕ ಸ್ವಾಗತ ಕೊಟ್ಟು ಮೋದಿಯನ್ನು ʻಬಾಸ್‌ʼ ಎಂದು ಕರೆದ ಆಸ್ಟ್ರೇಲಿಯಾ ಪ್ರಧಾನಿ

    – ಭಾರತವು ವಿಶ್ವದ 3ನೇ ಅತಿದೊಡ್ಡ ಆರ್ಥಿಕ ಸದೃಢ ದೇಶ
    – ವಿಶ್ವದ ಅತ್ಯಂತ ಜನಪ್ರಿಯ ದೇಶವೂ ಹೌದು – ಆಲ್ಬನೀಸ್ ಮೆಚ್ಚುಗೆ
    – ಯೋಗ ಕೂಡ ನಮ್ಮನ್ನು ಬೆಸೆದಿದೆ ಎಂದ ಮೋದಿ

    ಕ್ಯಾನ್ಬೆರಾ: ಮೂರು ದಿನಗಳ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ (Prime Minister) ನರೇಂದ್ರ ಮೋದಿ (Narendra Modi) ಅವರು ಮಂಗಳವಾರ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಮಂಗಳವಾರ ಆಯೋಜಿಸಿದ್ದ ಅದ್ಧೂರಿ ಸಮಾರಂಭದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದರು. ಇದಕ್ಕೂ ಮೊದಲು ಆಸ್ಟ್ರೇಲಿಯಾದ (Australia) ಬುಡಕಟ್ಟು ಸಂಪ್ರದಾಯದಂತೆ ಭವ್ಯ ಸ್ವಾಗತ ಸ್ವೀಕರಿಸಿದರು.

    ನಂತರ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಮೋದಿ, ‘ಮಾಸ್ಟರ್ ಶೆಫ್ ಹಾಗೂ ಕ್ರಿಕೆಟ್’, ಭಾರತ ಮತ್ತು ಆಸ್ಟ್ರೇಲಿಯಾ (Australia) ನಡುವಿನ ಸಂಬಂಧವನ್ನ ಒಗ್ಗೂಡಿಸಿವೆ. ಉಭಯ ದೇಶಗಳ ನಡುವಿನ ಸಂಬಂಧ ವೃದ್ಧಿಗೆ ಕೊಡುಗೆ ನೀಡಿರುವ ಭಾರತೀಯ ಸಮುದಾಯಕ್ಕೆ (Indian Community) ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಿಷ್ಟಾಚಾರಕ್ಕೆ ಗುಡ್‌ಬೈ – ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತ ಕೋರಿದ ಪಪುವಾ ನ್ಯೂ ಗಿನಿಯಾ ಪ್ರಧಾನಿ

    ನಮ್ಮ ಜೀವನಶೈಲಿ ವಿಭಿನ್ನ ಇರಬಹುದು. ಆದರೆ ಯೋಗ ಕೂಡ ನಮ್ಮನ್ನು ಬೆಸೆದಿದೆ. ನಾವು ಕ್ರಿಕೆಟ್ ಮೂಲಕ ಸುದೀರ್ಘ ಸಮಯದಿಂದ ಸಂಪರ್ಕಿತರಾಗಿದ್ದೇವೆ. ಆದರೆ ಈಗ ಟೆನ್ನಿಸ್ ಮತ್ತು ಸಿನಿಮಾಗಳೂ ನಮ್ಮನ್ನ ಬೆಸೆಯುತ್ತಿವೆ. ನಾವು ವಿಭಿನ್ನ ರೀತಿಯಲ್ಲಿ ಅಡುಗೆಗಳನ್ನು ಮಾಡಬಹುದು, ಆದರೆ ಮಾಸ್ಟರ್‌ಶೆಫ್ ನಮ್ಮನ್ನು ಈಗ ಒಂದುಗೂಡಿಸುತ್ತಿದೆ ಎಂದಿದ್ದಾರೆ.  

    ಮುಖ್ಯವಾಗಿ ಭಾರತ ಮತ್ತು ಆಸ್ಟ್ರೇಲಿಯಾ ಸಂಬಂಧವು 3C, 3D ಮತ್ತು 3E ಗಳಿಂದ ಕೂಡಿದೆ. 3C ಅಂದರೆ ಕಾಮನ್‌ವೆಲ್ತ್, ಕ್ರಿಕೆಟ್ ಮತ್ತು ಕರ್ರಿ, 3Dಗಳು ಡೆಮಾಕ್ರಸಿ, ಡಯಾಸ್ಪೊರಾ ಹಾಗೂ ದೋಸ್ತಿ ಮತ್ತು 3E ಗಳು- ಎನೆರ್ಜಿ, ಎಕಾನಮಿ ಹಾಗೂ ಎಜುಕೇಷನ್‌ನ ಆಚೆ ಬೆಳೆದಿದೆ. ಇದು ಪರಸ್ಪರ ವಿಶ್ವಾಸ ಮತ್ತು ಪರಸ್ಪರ ಗೌರವದೊಂದಿಗೆ ನಡೆಯುತ್ತಿದೆ. ಭಾರತ ವಿಶ್ವದ ಆರ್ಥಿಕ ಸದೃಢ ರಾಷ್ಟ್ರಗಳಲ್ಲಿ ಒಂದಾಗಿದ್ದು, ಐಎಂಎಫ್ ಸಹ ಭಾರತವನ್ನ ಜಾಗತಿಕ ಆರ್ಥಿಕತೆಯಲ್ಲಿ ಉಜ್ವಲ ರಾಷ್ಟ್ರವಾಗಿ ಪರಿಗಣಿಸಿದೆ ಎಂದು ಹಾಡಿಹೊಗಳಿದ್ದಾರೆ.

    ಇದಕ್ಕೂ ಮುನ್ನ ಪ್ರಾಸ್ತಾವಿಕ ಭಾಷಣದಲ್ಲಿ ಮಾತನಾಡಿದ ಆಸ್ಟ್ರೇಲಿಯಾದ ಪ್ರಧಾನಿ ಆಂಟೋನಿ ಆಲ್ಬನೀಸ್, ಮೋದಿ ಅವರನ್ನ ‘ದಿ ಬಾಸ್’ ಕರೆದಿದ್ದಾರೆ. ಭಾರತೀಯ ಸಮುದಾಯದ ಜೊತೆ ಸಿಡ್ನಿಯಲ್ಲಿ ಆಯೋಜಿಸಿದ್ದ ಭವ್ಯ ಸಮಾರಂಭದಲ್ಲಿ ಅವರು ಮೋದಿ ಅವರನ್ನ ಕೊಂಡಾಡಿದ್ದಾರೆ. ಇದನ್ನೂ ಓದಿ: ರಷ್ಯಾ ಯುದ್ಧ ಆರಂಭಿಸಿದ ಬಳಿಕ ಇದೇ ಮೊದಲ ಬಾರಿಗೆ ಉಕ್ರೇನ್‌ ಅಧ್ಯಕ್ಷ ಭೇಟಿಯಾದ ಮೋದಿ

    ನಾನು ಕೊನೆಯ ಬಾರಿ ಈ ವೇದಿಕೆಯಲ್ಲಿ ಯಾರನ್ನಾದರೂ ನೋಡಿದ್ದು ಅಂದ್ರೆ ಬ್ರೂಸ್ ಸ್ಪ್ರಿಂಗ್‌ಸ್ಟೀನ್, ಆದ್ರೆ ಅವರಿಗೂ ಸಹ ಪ್ರಧಾನಿ ಮೋದಿಗೆ ಸಿಕ್ಕ ಸ್ವಾಗತ ಸಿಕ್ಕಿರಲಿಲ್ಲ, ಪ್ರಧಾನಿ ಮೋದಿ ಬಾಸ್ ಎಂದು ಬಣ್ಣಿಸಿದ್ದಾರೆ.

    ಇಂದಿಗೆ ನಾನು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿ ಒಂದು ವರ್ಷ ಕಳೆದಿದ್ದು, ನಾವು ಒಟ್ಟಿಗೆ ನಡೆಸುತ್ತಿರುವ 6ನೇ ಸಭೆಯಾಗಿದೆ. ಇದು ಆಸ್ಟ್ರೇಲಿಯಾ ಮತ್ತು ಭಾರತದ ನಡುವಿನ ಸಂಬಂಧವನ್ನ ಮತ್ತಷ್ಟು ಗಟ್ಟಿಗೊಳಿಸಿದೆ ಎಂಬುದನ್ನು ತೋರಿಸುತ್ತದೆ. ಭಾರತವು ವಿಶ್ವದ 3ನೇ ಅತಿದೊಡ್ಡ ಆರ್ಥಿಕ ಸದೃಢ ದೇಶವಾಗಿ ಬೆಳೆಯುತ್ತಿದೆ. ಈಗಾಗಲೇ ವಿಶ್ವದ ಅತ್ಯಂತ ಜನಪ್ರಿಯ ದೇಶವೂ ಆಗಿದೆ. ಅದಕ್ಕಾಗಿ ನಾವು ಹೂಡಿಕೆ ಸಂಪರ್ಕ ಬೆಳೆಸಬೇಕು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಇದಕ್ಕೂ ಮುನ್ನ ಭಾರತೀಯ ನೃತ್ಯಪಟುಗಳಿಂದ ಸಾಂಸ್ಕೃತಿಕ ಪ್ರದರ್ಶನದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪ್ರಧಾನಿ ಮೋದಿ ಅವರಿಗೂ ಮುನ್ನ ಮಾತನಾಡಿದ ಆಲ್ಬನೀಸ್, ಅದಕ್ಕೂ ಮುನ್ನ ಆಯೋಜಿಸಿದ್ದ ದ್ವಿಪಕ್ಷೀಯ ಸಭೆ ಕುರಿತು ಮಾಹಿತಿ ನೀಡಿದರು.

  • ಆಸ್ಟ್ರೇಲಿಯಾದಲ್ಲಿ ನಿಗದಿಪಡಿಸಲಾಗಿದ್ದ ಕ್ವಾಡ್ ಶೃಂಗಸಭೆ ರದ್ದು

    ಆಸ್ಟ್ರೇಲಿಯಾದಲ್ಲಿ ನಿಗದಿಪಡಿಸಲಾಗಿದ್ದ ಕ್ವಾಡ್ ಶೃಂಗಸಭೆ ರದ್ದು

    ಕ್ಯಾನ್‌ಬೆರಾ: ಮುಂದಿನ ವಾರ ಸಿಡ್ನಿಯಲ್ಲಿ (Sydney) ನಡೆಯಬೇಕಿದ್ದ ಕ್ವಾಡ್ ಶೃಂಗಭೆಯನ್ನು (Quad Summit) ಆಸ್ಟ್ರೇಲಿಯಾ (Australia) ಬುಧವಾರ ರದ್ದುಗೊಳಿಸಿದೆ.

    ಸ್ವದೇಶದ ಆರ್ಥಿಕ ಸಮಸ್ಯೆಯ ಹಿನ್ನೆಲೆ ಅಮೆರಿಕದ (America) ಅಧ್ಯಕ್ಷ ಜೋ ಬೈಡನ್ (Joe Biden) ಆಸ್ಟ್ರೇಲಿಯಾ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಆಸ್ಟ್ರೇಲಿಯಾದಲ್ಲಿ ನಡೆಯಬೇಕಿದ್ದ ಶೃಂಗಸಭೆಯನ್ನು ರದ್ದುಗೊಳಿಸಲಾಗಿದೆ.

    ಅಮೆರಿಕದಲ್ಲಿ ಸಾಲದ ಮಿತಿಯನ್ನು ತೆರವುಗೊಳಿಸುವ ಕುರಿತು ನಡೆಯುತ್ತಿರುವ ಚರ್ಚೆಯ ಹಿನ್ನೆಲೆ ಬೈಡನ್ ಆಸ್ಟ್ರೇಲಿಯಾ ಹಾಗೂ ಪಪುವಾ ನ್ಯೂಗಿನಿಯಾ ಭೇಟಿಗಳನ್ನು ರದ್ದುಗೊಳಿಸಿದ್ದಾರೆ. ಆದರೂ ಈ ವಾರಾಂತ್ಯ ಅವರು ಜಿ7 ಶೃಂಗಸಭೆಯಲ್ಲಿ (G7 Summit) ಪಾಲ್ಗೊಳ್ಳುವ ನಿರೀಕ್ಷೆಯಿದೆ.

    ಕ್ವಾಡ್ ಶೃಂಗಸಭೆಯ ರದ್ದು ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್, ಮುಂದಿನ ವಾರ ಸಿಡ್ನಿಯಲ್ಲಿ ಕ್ವಾಡ್ ನಾಯಕರ ಸಭೆ ನಡೆಯುವುದಿಲ್ಲ. ಬದಲಿಗೆ ನಾವು ಜಪಾನ್‌ನಲ್ಲಿ (Japan) ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಕ್ವಾಡ್ ನಾಯಕರೊಂದಿಗೆ ಆ ಚರ್ಚೆಯನ್ನು ನಡೆಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಹಿಂದೂ ಮಹಾಸಾಗರದಲ್ಲಿ ಚೀನಾದ ದೋಣಿ ಮುಳುಗಡೆ – 39 ಜನ ನಾಪತ್ತೆ

    ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಹೆಚ್ಚುತ್ತಿದ್ದ ಚೀನಾದ ಪ್ರಭಾವದ ಹಿನ್ನೆಲೆ 2017ರಲ್ಲಿ ಅಮೆರಿಕ, ಭಾರತ, ಜಪಾನ್ ಹಾಗೂ ಆಸ್ಟ್ರೇಲಿಯಾ ಕ್ವಾಡ್ ಒಕ್ಕೂಟವನ್ನು ರಚಿಸಲಾಯಿತು. ಭಾರತ ಹಾಗೂ ಆಸ್ಟ್ರೇಲಿಯಾ 7 ದೇಶಗಳ ಜಿ7 ನ ಸದಸ್ಯತ್ವ ಹೊಂದಿಲ್ಲ. ಆದರೂ ಮೇ 19 ರಿಂದ ಮೇ 21 ರವರೆಗೆ ಜಪಾನ್‌ನ ಹಿರೋಶಿಮಾದಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಭಾಗವಹಿಸಲು ಇವೆರಡು ದೇಶಗಳನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ: ಅಮೆರಿಕಕ್ಕೆ ಹಾರಲಿದ್ದಾರೆ ರಾಹುಲ್ – 10 ದಿನ ಪ್ರವಾಸ

  • ಮಾ.19ರಂದು ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ‘ವಿರಾಟಪುರ ವಿರಾಗಿ’ ಚಿತ್ರ ಪ್ರದರ್ಶನ

    ಮಾ.19ರಂದು ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ‘ವಿರಾಟಪುರ ವಿರಾಗಿ’ ಚಿತ್ರ ಪ್ರದರ್ಶನ

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್.ಲಿಂಗದೇವರು (BS Lingadevaru) ನಿರ್ದೇಶನದಲ್ಲಿ ಮೂಡಿ ಬಂದಿರುವ ‘ವಿರಾಟಪುರ ವಿರಾಗಿ’ (Viratpur Viragi) ಸಿನಿಮಾ ಮಾರ್ಚ್ 19ರಂದು ಆಸ್ಟ್ರೇಲಿಯಾದ (Australia) ಸಿಡ್ನಿಯಲ್ಲಿ(Sydney) ಪ್ರದರ್ಶನ ಕಾಣುತ್ತಿದೆ. ಅಂದು ಮಧ್ಯಾಹ್ನ 3.30ಕ್ಕೆ ಇವೆಂಟ್ ಸಿನಿಮಾಸ್ ಲೈವರ್ ಪೋಲ್ ಆಸ್ಟ್ರೇಲಿಯಾದಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಂಡಿರುವುದಾಗಿ ಬಿ.ಎಸ್.ಲಿಂಗದೇವರು ತಿಳಿಸಿದ್ದಾರೆ.

    ಹಾನಗಲ್ಲ (Hanagalla) ಕುಮಾರಸ್ವಾಮಿಗಳ (Kumaraswamy) ಜೀವನವನ್ನು ಆಧರಿಸಿದ ಸಿನಿಮಾ ಇದಾಗಿದ್ದು, ಭಾರೀ ಬಜೆಟ್ ಸಿನಿಮಾಗಳೇ ಸೋಲಿನ ಹಾದಿ ಹಿಡಿದಿರುವ ಸಂದರ್ಭದಲ್ಲಿ ವಿರಾಟಪುರ ವಿರಾಗಿ ಸಿನಿಮಾ ಭಾರೀ ಯಶಸ್ಸು ಕಂಡಿದೆ. ಸತತ ಮೂವತ್ತೈದು ದಿನಗಳಿಂದ ಹಲವು ಕಡೆ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಕಲಬುರಗಿ ನಗರವೊಂದರಲ್ಲೇ ನೂರು ಪ್ರದರ್ಶನಗಳನ್ನು ಕಂಡು ದಾಖಲೆ ಬರೆದಿದೆ. ಕರ್ನಾಟಕದಾದ್ಯಂತ ಈವರೆಗೂ ಮೂರು ಸಾವಿರಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ. ಇದನ್ನೂ ಓದಿ: 800 ವರ್ಷದ ಹಳೆಯ ಮನೆಯಲ್ಲಿ ಶುಭಾ ಪೂಂಜಾ ದಿಢೀರ್ ಮದುವೆ

    ಸಿನಿಮಾ ಬಿಡುಗಡೆಗೆ ಮುನ್ನವೇ 75 ಸಾವಿರಕ್ಕೂ ಅಧಿಕ ಟಿಕೆಟ್ ಮಾರಾಟವಾಗಿ ಹೊಸ ದಾಖಲೆ ಬರೆದಿದ್ದ  ಈ ಸಿನಿಮಾ ಈವರೆಗೂ 750ಕ್ಕೂ ಹೆಚ್ಚು ಶೋಗಳು ಹೌಸ್ ಫುಲ್ ಆಗಿವೆ. 62ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಕಲಬುರಗಿಯಲ್ಲೇ 82 ಶೋಗಳು ಹೌಸ್ ಫುಲ್ ಪ್ರದರ್ಶನ ಕಂಡಿದೆ. ಈ ವರ್ಷದಲ್ಲಿ ಹೆಚ್ಚು ಸದ್ದು ಮಾಡಿದ ಸಿನಿಮಾಗಳ ಪಟ್ಟಿಯಲ್ಲಿ ಈ ಚಿತ್ರ ಕೂಡ ಕಾಣಿಸಿಕೊಂಡಿದೆ.

    ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಕೂಡ ಕೇಳುಗರ ಗಮನ ಸೆಳೆದಿದ್ದು, ಈ ಸಿನಿಮಾವನ್ನು ಜನರಿಗೆ ತಲುಪಿಸುವುದಕ್ಕಾಗಿಯೇ ಹಾನಗಲ್ಲ ಕುಮಾರಸ್ವಾಮಿಗಳ ಭಕ್ತರು ರಥಯಾತ್ರೆ ಮತ್ತು ಗದಗ ಸೇರಿದಂತೆ ಹಲವು ಕಡೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದರು. ರಾಜ್ಯಾದ್ಯಂತ ರಥೆಯಾತ್ರೆ ಪ್ರವಾಸ ಮಾಡಿ, ಸಿನಿಮಾ ಮುಟ್ಟಿಸುವಲ್ಲಿ ಗೆದ್ದಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಾಂಗ್ಲಾದೇಶ, ಸಿಡ್ನಿಯಲ್ಲಿ ಮತ್ತೆ ಲಾಕ್‍ಡೌನ್ ಘೋಷಣೆ

    ಬಾಂಗ್ಲಾದೇಶ, ಸಿಡ್ನಿಯಲ್ಲಿ ಮತ್ತೆ ಲಾಕ್‍ಡೌನ್ ಘೋಷಣೆ

    ಸಿಡ್ನಿ/ಢಾಕಾ: ಒಂದು ಕಡೆ ಕೊರೊನಾ ಸೋಂಕು ಮತ್ತೊಂದು ಕಡೆ ಡೆಲ್ಟಾ ಪ್ಲಸ್ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ದೇಶಗಳಲ್ಲಿ ಮತ್ತೆ ಲಾಕ್‍ಡೌನ್ ಮೊರೆ ಹೋಗುತ್ತಿವೆ.

    79 ಸಕ್ರಿಯ ಪ್ರಕರಣಗಳಿರುವ ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಮತ್ತೆ ಲಾಕ್‍ಡೌನ್ ಘೋಷಣೆಯಾಗಿದೆ. ಮೇ ತಿಂಗಳ ನಂತರ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 9ರವರೆಗೆ ಲಾಕ್‍ಡೌನ್ ಘೋಷಣೆಯಾಗಿದೆ.

    ಶುಕ್ರವಾರ ಒಂದೇ ದಿನ ಸಿಡ್ನಿಯಲ್ಲಿ 32 ಹೊಸ ಪ್ರಕರಣಗಳು ವರದಿಯಾದ ಬೆನ್ನಲ್ಲೇ ಲಾಕ್‍ಡೌನ್ ನಿರ್ಧಾರಕ್ಕೆ ಬರಲಾಗಿದೆ. ಔಷಧಿ, ದಿನ ನಿತ್ಯದ ವಸ್ತು ಖರೀದಿ, ವ್ಯಾಯಾಮ ಮತ್ತು ಲಸಿಕೆ ಹಾಕಿಸಿಕೊಳ್ಳಲು ಮನೆಯಿಂದ ಹೊರ ಬರಬಹುದಾಗಿದೆ.  ಇದನ್ನೂ ಓದಿ: ಇಂದಿನಿಂದ ಕಲ್ಯಾಣ ಮಂಟಪ, ರೆಸಾರ್ಟ್‍ನಲ್ಲಿ ಮದುವೆಗೆ ಅನುಮತಿ – ಷರತ್ತು ಏನು?

    ಇಂದಿನಿಂದ ಬಾಂಗ್ಲಾದೇಶದಲ್ಲಿ ಲಾಕ್‍ಡೌನ್ ಜಾರಿಯಾಗಿದೆ. ದೇಶಾದ್ಯಂತ ಕೊರೊನಾ ನಿಯಂತ್ರಣ ಮಾಡಲು ಒಂದು ವಾರ ಲಾಕ್‍ಡೌನ್ ಮಾಡಲು ಸರ್ಕಾರ ಮುಂದಾಗಿದೆ. ಶುಕ್ರವಾರ 5,869 ಸೋಂಕು ಮತ್ತು 108 ಸಾವಿನ ಪ್ರಕರಣ ವರದಿಯಾದ ಬೆನ್ನಲ್ಲೇ ಲಾಕ್‍ಡೌನ್ ನಿರ್ಧಾರಕ್ಕೆ ಬರಲಾಗಿದೆ.

    85 ದೇಶಗಳಲ್ಲಿ ಪತ್ತೆಯಾಗಿರುವ ಡೆಲ್ಟಾಪ್ಲಸ್ ಅತ್ಯಂತ ಅತಿ ವೇಗವಾಗಿ ಹರಡುವ ರೂಪಾಂತರಿ ವೈರಸ್ ಎಂದು ವಿಶ್ವ ಆರೋಗ್ಯ ಸಂಸ್ಥೆ ಶನಿವಾರ ಹೇಳಿದೆ.