Tag: sydney

  • ಸಂಭ್ರಮದಲ್ಲಿ ರಿಷಬ್ ಪಂತ್ Kip-Up – ವಿಡಿಯೋ ವೈರಲ್

    ಸಂಭ್ರಮದಲ್ಲಿ ರಿಷಬ್ ಪಂತ್ Kip-Up – ವಿಡಿಯೋ ವೈರಲ್

    ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿ ದಾಖಲೆ ಬರೆದಿರುವ ಟೀಂ ಇಂಡಿಯಾ ಯುವ ವಿಕೆಟ್ ಕೀಪರ್, ಬ್ಯಾಟ್ಸ್ ಮನ್ ರಿಷಬ್ ಪಂತ್ ಆನ್ ಫೀಲ್ಡ್ ನಲ್ಲೇ ಕಿಪ್ ಅಪ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    2ನೇ ಟೆಸ್ಟ್ ಪಂದ್ಯದ ವೇಳೆ ರಿಷಬ್ ಪಂತ್ ಡ್ರಿಂಕ್ಸ್ ಬ್ರೇಕ್ ವೇಳೆ ವಿಶ್ರಾಂತಿಗಾಗಿ ಮೈದಾನದಲ್ಲೇ ಕೆಲ ಕ್ಷಣಗಳ ಕಾಲ ಮಲಗಿದ್ದರು. ಈ ವೇಳೆ ಏಕಾಏಕಿ ಕಿಪ್ ಅಪ್ ಮಾಡಿ ಎದ್ದು ನಿಂತಿದ್ದಾರೆ. ಈ ರೀತಿ ಕಿಪ್ ಅಪ್ ಮಾಡಬೇಕಾದರೆ ಅತ್ಯುತ್ತಮವಾದ ದೈಹಿಕ ಸಾಮರ್ಥ್ಯ ಹೊಂದಿದರೆ ಮಾತ್ರ ಸಾಧ್ಯವಾಗುತ್ತದೆ.

    ಪಂದ್ಯದ ಬಳಿಕ ಮಾತನಾಡಿದ ಪಂತ್, ನಾನು 90 ರನ್ ಗಳಿಸಿದ ವೇಳೆ ಕ್ಷಣ ಕಾಲ ಆತಂಕಕ್ಕೆ ಒಳಗಾಗಿದ್ದೆ. ಏಕೆಂದರೆ ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದ 2 ಇನ್ನಿಂಗ್ಸ್ ಗಳಲ್ಲಿ 92, 92 ರನ್ ಗಳಿಗೆ ಔಟಾಗಿದ್ದೆ. ಆದರೆ ಇಂದಿನ ಶತಕ ನನಗೆ ಮತ್ತಷ್ಟು ಆತ್ಮವಿಶ್ವಾಸ ನೀಡಿದೆ. ಶತಕ ಸಂಭ್ರಮದ ವೇಳೆ ಆ ಕ್ಷಣದಲ್ಲಿ ಏನು ತೋಚಿದೆಯೋ ಅದನ್ನು ಮಾಡಿದ್ದೇನೆ ಅಷ್ಟೇ ಎಂದು ತಿಳಿಸಿದ್ದಾರೆ. ಇದನ್ನು ಓದಿ: 15 ವರ್ಷಗಳ ಹಿಂದಿನ `ದಿ ವಾಲ್’ ದ್ರಾವಿಡ್ ದಾಖಲೆ ಮುರಿದ ಪೂಜಾರ

    21 ವರ್ಷದ ರಿಷಬ್ ಪಂತ್ ಅಜೇಯ 159 ರನ್ (189 ಎಸೆತ, 15 ಎಸೆತ, 1 ಸಿಕ್ಸರ್) ಸಿಡಿಸಿದ್ದು, ಈ ಮೂಲಕ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾದ ನೆಲದಲ್ಲಿ ಭಾರತದ ಪರ ಶತಕ ಸಿಡಿಸಿದ ಮೊದಲ ವಿಕೆಟ್ ಕೀಪರ್ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಅಲ್ಲದೇ ಆಸೀಸ್ ನೆಲದಲ್ಲಿ ಪ್ರವಾಸಿ ವಿಕೆಟ್ ಕೀಪರ್ ಸಿಡಿಸಿದ 2ನೇ ಅಧಿಕ ಮೊತ್ತವಾಗಿದೆ. 2012ರ ಪರ್ತ್ ಟೆಸ್ಟ್ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ 169 ರನ್ ಸಿಡಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶತಕ ಸಿಡಿಸಿ ವಿವಿಎಸ್ ಲಕ್ಷ್ಮಣ್, ವೆಂಗ್‍ಸರ್ಕಾರ್ ಹಿಂದಿಕ್ಕಿದ ಪೂಜಾರ

    ಶತಕ ಸಿಡಿಸಿ ವಿವಿಎಸ್ ಲಕ್ಷ್ಮಣ್, ವೆಂಗ್‍ಸರ್ಕಾರ್ ಹಿಂದಿಕ್ಕಿದ ಪೂಜಾರ

    ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಅಂತಿಮ ಪಂದ್ಯದ ಮೊದಲ ದಿನದಲ್ಲಿ ಟೀಂ ಇಂಡಿಯಾ ಉತ್ತಮ ಆರಂಭ ಪಡೆದಿದ್ದು, ಅನುಭವಿ ಆಟಗಾರ ಚೇತೇಶ್ವರ ಪೂಜಾರ ಅಜೇಯ ಶತಕ ಹಾಗೂ ಕನ್ನಡಿಗ ಮಯಾಂಕ್ ಅಗರ್ವಾಲ್ ಅರ್ಧಶತಕದಿಂದಾಗಿ ದಿನದಾಟದಂತ್ಯಕ್ಕೆ 90 ಓವರ್ ಗಳಲ್ಲಿ 4 ವಿಕೆಟ್ ವಿಕೆಟ್ ನಷ್ಟಕ್ಕೆ 303 ರನ್ ಪೇರಿಸಿದೆ.

    ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಬ್ಬರು ಕನ್ನಡಿಗರು, ಆಪ್ತ ಗೆಳೆಯರಾದ ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಇನ್ನಿಂಗ್ಸ್ ಆರಂಭಿಸಿರುವ ಅವಕಾಶ ಪಡೆದಿಕೊಂಡರು. ಆದರೆ ಕೆಎಲ್ ರಾಹುಲ್ ತಮ್ಮ ಕಳಪೆ ಫಾರ್ಮ್ ಮುಂದುವರಿಸಿ 9 ರನ್ ಗಳಿಸಿ ಪೆವಿಲಿಯನ್ ಸೇರಿದರು.

    ಬಳಿಕ ಒಂದಾದ ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ ಜೋಡಿ 2ನೇ ವಿಕೆಟ್‍ಗೆ 116 ರನ್‍ಗಳ ಮಹತ್ವದ ಜೊತೆಯಾಟ ನೀಡಿ ತಂಡಕ್ಕೆ ಉತ್ತಮ ಆರಂಭ ನೀಡಿತು. ತಾಳ್ಮೆಯ ಆಟವಾಡಿದ ಅಗರ್ವಾಲ್ ಎರಡನೇ ಪಂದ್ಯದಲ್ಲೂ ಅರ್ಧ ಶತಕ ಪೂರೈಸಿದ ಸಾಧನೆ ಮಾಡಿದರು. 112 ಎಸೆತಗಳನ್ನು ಎದುರಿಸಿ 7 ಬೌಂಡರಿ, 2 ಸಿಕ್ಸರ್ ಗಳ ನೆರವಿನಿಂದ 77 ರನ್ ಸಿಡಿಸಿ ಔಟಾದರು.

    ಈ ಹಂತದಲ್ಲಿ ಕಣಕ್ಕೆ ಇಳಿದ ನಾಯಕ ಕೊಹ್ಲಿ 23 ರನ್, ಬಳಿಕ ಬಂದ ರಹಾನೆ 18 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ಮತ್ತೊಂದು ಬದಿಯಲ್ಲಿ ತಮ್ಮ ಅಮೋಘ ಬ್ಯಾಟಿಂಗ್ ಮುಂದುವರಿಸಿದ ಚೇತೇಶ್ವರ ಪೂಜಾರ 250 ಎಸೆತಗಳಲ್ಲಿ 130 ರನ್ ಗಳಿಸಿ 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇತ್ತ ಪೂಜಾರ ಅವರಿಗೆ ಸಾಥ್ ನೀಡಿರುವ ಯುವ ಆಟಗಾರ ಹನುಮ ವಿಹಾರಿ 39 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇದರೊಂದಿಗೆ ಟೀಂ ಇಂಡಿಯಾ ಮೊದಲ ದಿನದಾಟದ ಅಂತ್ಯಕ್ಕೆ 90 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 303 ರನ್ ಗಳಿಸಿ ಉತ್ತಮ ಸ್ಥಿತಿಯಲ್ಲಿದೆ.

    114 ಇನ್ನಿಂಗ್ಸ್ ಗಳಲ್ಲಿ ವೃತ್ತಿ ಜೀವನದ 18ನೇ ಶತಕ ಪೂರೈಸಿದ ಪೂಜಾರ ವಿವಿಎಸ್ ಲಕ್ಷ್ಮಣ್ ಹಾಗೂ ದಿಲೀಪ್ ವೆಂಗ್‍ಸರ್ಕಾರ್ ದಾಖಲೆಯನ್ನು ಮುರಿದರು. ಅಲ್ಲದೇ ಟೀಂ ಇಂಡಿಯಾ ಪರ ಅತಿ ಹೆಚ್ಚು ಶತಕಗಳನ್ನು ಸಿಡಿಸಿದ ಪಟ್ಟಿಯಲ್ಲಿ 7ನೇ ಸ್ಥಾನ ಪಡೆದರು. ವಿವಿಎಸ್ ಲಕ್ಷ್ಮಣ್, ದಿಲೀಪ್ ವೆಂಗ್‍ಸರ್ಕಾರ್ ತಲಾ 17 ಶತಕ ಸಿಡಿಸಿದ್ದಾರೆ. ಆಸೀಸ್ ಟೂರ್ನಿಯಲ್ಲಿ ಪೂಜಾರ ಅವರ 3ನೇ ಶತಕ ಇದಾಗಿದೆ.

    ಸಚಿನ್ ತೆಂಡೂಲ್ಕರ್ ಅವರ ಗುರು, ಕೋಚ್ ರಮಾಕಾಂತ್ ಅಚ್ರೇಕರ್ ವಿಧಿವಶರಾದ ಹಿನ್ನಲೆಯಲ್ಲಿ ಅವರ ಗೌರವಾರ್ಥವಾಗಿ ಟೀಂ ಇಂಡಿಯಾ ಆಟಗಾರರು ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಕಪ್ಪು ಪಟ್ಟಿ ಧರಿಸಿ ಕಣಕ್ಕೆ ಇಳಿದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 11 ರನ್ ಗಳಿಸಿ ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ

    11 ರನ್ ಗಳಿಸಿ ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ

    ಸಿಡ್ನಿ: ನನ್ನ ದಾಖಲೆಗಳನ್ನು ಮುರಿಯುವ ಶಕ್ತಿ, ಸಾಮರ್ಥ್ಯವನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ ಎಂಬ ಸಚಿನ್ ಮಾತಿನಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗ ಮತ್ತೊಂದು ದಾಖಲೆ ಮುರಿದಿದ್ದಾರೆ.

    ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಸಚಿನ್‍ರ ಮತ್ತೊಂದು ದಾಖಲೆಯನ್ನು ಮುರಿದಿರುವ ಕೊಹ್ಲಿ, ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ ವೇಗವಾಗಿ 17 ಸಾವಿರ ರನ್ ಪೂರೈಸಿದ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದಾರೆ.

    ಕೊಹ್ಲಿ ಈ ಪಂದ್ಯದಲ್ಲಿ 23 ರನ್ ಗಳಿಸಿ ಪೆವಿಲಿಯನ್ ಸೇರಿ ನಿರಾಸೆ ಮೂಡಿಸಿದರು ಕೂಡ 11 ರನ್ ಗಳಿಸಿದ್ದ ವೇಳೆ ಟಿ20, ಏಕದಿನ ಹಾಗೂ ಟೆಸ್ಟ್ ಮೂರು ಮಾದರಿಗಳಲ್ಲಿ 19 ಸಾವಿರ ರನ್ ಪೂರ್ಣಗೊಳಿಸಿದ್ದರು. ಕೊಹ್ಲಿ ಈ ಸಾಧನೆಯನ್ನು 399 ಇನ್ನಿಂಗ್ಸ್ ಗಳಲ್ಲಿ ಮಾಡಿದ್ದು, ಸಚಿನ್ 432 ಇನ್ನಿಂಗ್ಸ್ ಗಳಲ್ಲಿ 19 ಸಾವಿರ ರನ್ ಹೊಡೆದಿದ್ದರು.

    ಉಳಿದಂತೆ ವೆಸ್ಟ್ ಇಂಡೀಸ್ ತಂಡದ ಲಾರಾ 433 ಇನ್ನಿಂಗ್ಸ್, ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ 444 ಇನ್ನಿಂಗ್ಸ್, ಸೌತ್ ಆಫ್ರಿಕಾದ ಜಾಕ್ ಕಾಲಿಸ್ 458 ಇನ್ನಿಂಗ್ಸ್ ಗಳಲ್ಲಿ 19 ಸಾವಿರ ಪೂರ್ಣಗೊಳಿಸಿ ಟಾಪ್ 5 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕೊಹ್ಲಿ 2018 ರಲ್ಲಿ 2,735 ರನ್ ಗಳಿಸಿ ಟಾಪ್ ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆ ಪಡೆದಿದ್ದರು. ಅಲ್ಲದೇ 2019 ಆರಂಭದಲ್ಲೇ ಮಹತ್ವದ ದಾಖಲೆ ಮಾಡುವ ಮೂಲಕ ಶುಭಾರಂಭ ಮಾಡಿದ್ದಾರೆ.

    ಎಷ್ಟು ಇನ್ನಿಂಗ್ಸ್ ಗಳಲ್ಲಿ ಎಷ್ಟು ರನ್?
    15 ಸಾವಿರ ರನ್ (333 ಇನ್ನಿಂಗ್ಸ್)
    16 ಸಾವಿರ ರನ್ (350 ಇನ್ನಿಂಗ್ಸ್)
    17 ಸಾವಿರ ರನ್ (363 ಇನ್ನಿಂಗ್ಸ್)
    18 ಸಾವಿರ ರನ್ (382 ಇನ್ನಿಂಗ್ಸ್)
    19 ಸಾವಿರ ರನ್ (399 ಇನ್ನಿಂಗ್ಸ್)

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸ್ಲೆಡ್ಜಿಂಗ್ ಮಾಡಿದ್ದು ನೀವೇ ಅಲ್ವಾ – ರಿಷಬ್ ಪಂತ್‍ರನ್ನ ಸ್ವಾಗತಿಸಿದ ಆಸೀಸ್ ಪ್ರಧಾನಿ

    ಸ್ಲೆಡ್ಜಿಂಗ್ ಮಾಡಿದ್ದು ನೀವೇ ಅಲ್ವಾ – ರಿಷಬ್ ಪಂತ್‍ರನ್ನ ಸ್ವಾಗತಿಸಿದ ಆಸೀಸ್ ಪ್ರಧಾನಿ

    ಸಿಡ್ನಿ: ಹೊಸ ವರ್ಷಾಚರಣೆ ಹಾಗೂ ಸಿಡ್ನಿ ಟೆಸ್ಟ್ ಅಂಗವಾಗಿ ಟೀಂ ಇಂಡಿಯಾ ಆಟಗಾರರಿಗೆ ಆಸ್ಟ್ರೇಲಿಯಾ ಪ್ರಧಾನಿಗಳ ಸರ್ಕಾರಿ ನಿವಾಸದಲ್ಲಿ ಭೇಟಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ವೇಳೆ ಆಸೀಸ್ ಪ್ರಧಾನಿ ಸ್ಕಾಟ್ ಮಾರಿಸನ್ ಟೀಂ ಇಂಡಿಯಾ ಯುವ ಆಟಗಾರ ರಿಷಬ್ ಪಂತ್‍ರನ್ನು ಅಚ್ಚರಿ ರೀತಿಯಲ್ಲಿ ಸ್ವಾಗತಿಸಿ ಮಾತನಾಡಿದ್ದಾರೆ.

    ಆಸ್ಟ್ರೇಲಿಯಾ ಆಟಗಾರರು ಸೇರಿದಂತೆ ಟೀಂ ಇಂಡಿಯಾದ ಎಲ್ಲಾ ಆಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಟೀಂ ಇಂಡಿಯಾದ ಆಟಗಾರನ್ನು ಆಸೀಸ್ ಪ್ರಧಾನಿಗಳಿಗೆ ಪರಿಚಯ ಮಾಡಿಕೊಡಲಾಗುತ್ತಿತ್ತು. ಅಂತೆಯೇ ತಂಡದ ಮ್ಯಾನೇಜರ್ ಸುನಿಲ್ ಸುಭ್ರಮಣ್ಯಂ ಅವರು ರಿಷಬ್ ಪಂತ್ ಅವರನ್ನು ಪ್ರಧಾನಿಗೆ ಪರಿಚಯಿಸಿದ್ದರು.

    https://twitter.com/nibraz88cricket/status/1080404697461084161

    ರಿಷಬ್ ಪಂತ್ ಹೆಸರು ಕೇಳುತ್ತಿದಂತೆ ಅಚ್ಚರಿಗೊಂಡವರಂತೆ ಕಂಡ ಪ್ರಧಾನಿಗಳು, ನೀವೇ ಅಲ್ವಾ ಸ್ಲೆಡ್ಜಿಂಗ್ ಮಾಡಿದ್ದು ಎಂದು ಪ್ರಶ್ನಿಸಿದರು. ಈ ವೇಳೆ ರಿಷಬ್ ಪ್ರಧಾನಿಗಳತ್ತ ನಗೆ ಬೀರಿದ್ದರು. ಬಳಿಕ ಮಾತನಾಡಿದ ಪ್ರಧಾನಿಗಳು, ರಿಷಬ್ ಅವರಿಗೆ ಸ್ವಾಗತ ಕೋರಿ ನಿಮ್ಮಂತ ಸ್ಪರ್ಧಾತ್ಮಕ ಆಟವನ್ನು ಇಷ್ಟಪಡುತ್ತೇವೆ ಎಂದು ಸಂತಸ ವ್ಯಕ್ತಪಡಿಸಿದರು.

    ಬಾಕ್ಸಿಂಗ್ ಡೇ ಕ್ರಿಕೆಟ್ ಪಂದ್ಯದ ವೇಳೆ ಆಸೀಸ್ ನಾಯಕ ಟಿಮ್ ಪೈನೆ ಹಾಗೂ ರಿಷಬ್ ಪಂತ್ ಪರಸ್ಪರ ಸ್ಲೆಡ್ಜಿಂಜ್ ನಡೆಸಿ ಕಾಲೆಳೆದುಕೊಂಡಿದ್ದರು. ಮೊದಲು ಆಸೀಸ್ ವಿರುದ್ಧ ಕ್ರಿಕೆಟ್ ಪಂದ್ಯಕ್ಕೆ ಧೋನಿ ಕಮ್ ಬ್ಯಾಕ್ ಮಾಡಿದ್ದನ್ನೇ ಆಸ್ತ್ರವಾಗಿಕೊಂಡಿದ್ದ ಪೈನೆ, ಬಿಗ್ ಬ್ಯಾಶ್ ಟೂರ್ನಿ ಆಡುವಂತೆ ಆಹ್ವಾನ ನೀಡಿದ್ದರು. ಅಲ್ಲದೇ ತಾನು ಪತ್ನಿಯೊಂದಿಗೆ ಸಿನಿಮಾ ಹೋದ ವೇಳೆ ಮಕ್ಕಳನ್ನು ನೋಡಿಕೊಂಡಿರು ಎಂದರು ಕಾಲೆಳೆದಿದ್ದರು. ಬಳಿಕ ಇದಕ್ಕೆ ಟಾಂಗ್ ನೀಡಿದ್ದ ರಿಷಬ್ ಪಂತ್, ಪೈನೆರನ್ನು ತಾತ್ಕಾಲಿಕ ನಾಯಕ ಎಂದು ಕರೆದು ತಿರುಗೇಟು ನೀಡಿದ್ದರು.

    ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಸಿಡ್ನಿ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಐತಿಹಾಸ ದಾಖಲೆ ನಿರ್ಮಾಣ ಮಾಡುವ ವಿಶ್ವಾಸದಲ್ಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೆಎಲ್ ರಾಹುಲ್‍ಗೆ ಮತ್ತೊಮ್ಮೆ ಅದೃಷ್ಟದ ಬಾಗಿಲು ಓಪನ್!

    ಕೆಎಲ್ ರಾಹುಲ್‍ಗೆ ಮತ್ತೊಮ್ಮೆ ಅದೃಷ್ಟದ ಬಾಗಿಲು ಓಪನ್!

    ಮುಂಬೈ: ಆಸೀಸ್ ವಿರುದ್ಧದ ಟೆಸ್ಟ್ ಟೂರ್ನಿಯ ಅಂತಿಮ ಸಿಡ್ನಿ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ 13 ಆಟಗಾರರ ಪಟ್ಟಿಯನ್ನು ಪ್ರಕಟಿಸಿದ್ದು, ಕನ್ನಡಿಗ ಕೆಎಲ್ ರಾಹುಲ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

    ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಜಯ ಪಡೆದು ಆತ್ಮವಿಶ್ವಾಸದಲ್ಲಿರುವ ಟೀಂ ಇಂಡಿಯಾ 4ನೇ ಟೆಸ್ಟ್ ಗೆಲ್ಲುವ ಮೂಲಕ ಆಸೀಸ್ ನೆಲದಲ್ಲಿ ಇತಿಹಾಸ ನಿರ್ಮಿಸುವ ವಿಶ್ವಾಸದಲ್ಲಿದೆ. ಮಹತ್ವದ ಟೆಸ್ಟ್ ಪಂದ್ಯದಲ್ಲಿ ಆರ್ ಅಶ್ವಿನ್ ಕೂಡ ಆಡುವ ನಿರೀಕ್ಷೆ ಇದೆ.

    ಪಟ್ಟಿಯಲ್ಲಿ ಟೀಂ ಇಂಡಿಯಾದಲ್ಲಿ ಅನುಭವಿ ವೇಗಿ ಇಶಾಂತ್ ಶರ್ಮಾ ಸ್ಥಾನದಲ್ಲಿ ಉಮೇಶ್ ಯಾದವ್ ಅವಕಾಶ ಪಡೆದಿದ್ದು, ಗಾಯದ ಸಮಸ್ಯೆಯಿಂದ ಇಶಾಂತ್ ಶರ್ಮಾ ಹೊರಗುಳಿದಿದ್ದಾರೆ. ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಇಶಾಂತ್ 3 ಟೆಸ್ಟ್ ಪಂದ್ಯಗಳಿಂದ ಇದುವರೆಗೂ 11 ವಿಕೆಟ್ ಪಡೆದಿದ್ದರು.

    ರೋಹಿತ್ ಶರ್ಮಾ ಕೌಟುಂಬಿಕ ಕಾರಣಗಳಿಂದ ಭಾರತಕ್ಕೆ ಹಿಂದಿರುಗಿದ್ದು, 13 ಬಳಗದಲ್ಲಿ ಕೆಎಲ್ ರಾಹುಲ್ ಅವಕಾಶ ಪಡೆಯುಲು ಪ್ರಮುಖ ಕಾರಣ ಎನ್ನುವ ವಿಶ್ಲೇಷಣೆ ಕೇಳಿ ಬಂದಿದೆ. ಟೀಂ ಇಂಡಿಯಾ ನಾಯಕ ನಾಯಕ ವಿರಾಟ್ ಕೊಹ್ಲಿ ಅಂತಿಮ ಟೆಸ್ಟ್ ಪಂದ್ಯಕ್ಕೆ ಯಾವುದೇ ಬದಲಾವಣೆ ಮಾಡದೇ ಕಣಕ್ಕೆ ಇಳಿಯುವ ನಿರ್ಧಾರ ಕೈಗೊಂಡಿದ್ದರು. ಆದರೆ ರೋಹಿತ್ ಶರ್ಮಾ ಗೈರು ಹಾಜರಿಯಿಂದ ಅನಿವಾರ್ಯವಾಗಿ ಬದಲಾವಣೆ ಮಾಡಬೇಕಿದೆ. ಇತ್ತ ಏಕದಿನ ಕ್ರಿಕೆಟ್ ಸರಣಿಗೆ ರೋಹಿತ್ ಶರ್ಮಾ ತಂಡವನ್ನು ಸೇರಿಕೊಳ್ಳಲಿದ್ದಾರೆ.

    ಈ ಹಿಂದೆ ಆರ್ ಅಶ್ವಿನ್ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ 4ನೇ ಟೆಸ್ಟ್ ಪಂದ್ಯದಿಂದಲೂ ಹೊರ ಉಳಿಯುವ ಸಾಧ್ಯತೆ ಬಗ್ಗೆ ಮಾಹಿತಿ ಲಭಿಸಿತ್ತು. ಸದ್ಯ ಜನವರಿ 3 ರಿಂದ ಆರಂಭವಾಗಲಿರುವ ಟೆಸ್ಟ್ ಪಂದ್ಯದ ಟಾಸ್‍ಗೂ ಮುನ್ನ ಈ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ. ಅಲ್ಲದೇ ಪಿಚ್ ಸ್ಪಿನ್ನರ್ ಗಳಿಗೆ ನೆರವಾಗಲಿರುವ ಕಾರಣ ಕುಲ್ದೀಪ್ ಯಾದವ್‍ಗೆ ಅಚ್ಚರಿ ಅವಕಾಶ ಲಭಿಸುತ್ತಾ ಅಥವಾ ಕೆ ಎಲ್ ರಾಹುಲ್ ಮತ್ತೊಂದು ಅವಕಾಶ ಪಡೆಯುತ್ತಾರ ಎನ್ನುವುದನ್ನು ಕಾದು ನೋಡಬೇಕಿದೆ.

    ಟೀಂ ಇಂಡಿಯಾ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ರಹಾನೆ, ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಿಷಬ್ ಪಂತ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಜಸ್‍ಪ್ರೀತ್ ಬುಮ್ರಾ, ಉಮೇಶ್ ಯಾದವ್.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಚಿನ್ ಬಳಿಕ ಆಸೀಸ್ ಬ್ರಾಡ್ಮನ್ ಮ್ಯೂಸಿಯಂನಿಂದ ಕೊಹ್ಲಿಗೆ ವಿಶೇಷ ಗೌರವ

    ಸಚಿನ್ ಬಳಿಕ ಆಸೀಸ್ ಬ್ರಾಡ್ಮನ್ ಮ್ಯೂಸಿಯಂನಿಂದ ಕೊಹ್ಲಿಗೆ ವಿಶೇಷ ಗೌರವ

    ಸಿಡ್ನಿ: ಆಸೀಸ್ ತಂಡದ ಮಾಜಿ ಆಟಗಾರ ಬ್ರಾಡ್ಮನ್ ಅವರ ನೆನಪಿಗಾಗಿ ನಿರ್ಮಾಣವಾಗಿರುವ ಮ್ಯೂಸಿಯಂನಲ್ಲಿ ಸಚಿನ್ ಪಕ್ಕ ಕೊಹ್ಲಿ ಸ್ಥಾನ ಪಡೆದಿದ್ದಾರೆ.

    ಬ್ರಾಡ್ಮನ್ ಕ್ರಿಕೆಟ್ ನೀಡಿದ ಕೊಡುಗೆಯನ್ನು ತಿಳಿಸಲು ಅವರ ಹೆಸರಿನಲ್ಲಿ ಮ್ಯೂಸಿಯಂ ನಿರ್ಮಿಸಲಾಗಿದೆ. ಇಲ್ಲಿ ಅವರ ಕ್ರಿಕೆಟ್ ಸಾಧನೆಗೆ ಸಂಬಂಧಿಸಿದ ವಸ್ತುಗಳನ್ನು ಸಂಗ್ರಹಿಸಲಾಗಿದೆ. ಈ ಮ್ಯೂಸಿಯಂನಲ್ಲಿ ಈಗಾಗಲೇ ಸಚಿನ್ ಭಾವಚಿತ್ರವನ್ನು ಪ್ರದರ್ಶನದಲ್ಲಿ ಇಡಲಾಗಿದೆ. ಸದ್ಯ ಈ ಸಾಲಿಗೆ ಕೊಹ್ಲಿ ಕೂಡ ಸೇರಿದ್ದು ಕೊಹ್ಲಿ ಅವರ ಜರ್ಸಿಗೂ ಕೂಡ ಸಚಿನ್ ಪಕ್ಕದಲ್ಲೇ ಸ್ಥಾನ ಕಲ್ಪಿಸಲಾಗಿದೆ.

    ಈ ಕುರಿತು ಮ್ಯೂಸಿಯಂ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದು, ಕೊಹ್ಲಿ ಅವರ ಜೆರ್ಸಿಗೆ ವಿಶೇಷ ಸ್ಥಳ ನೀಡಲಾಗಿದೆ. ಸಚಿನ್ ಅವರ ಭಾವಚಿತ್ರದ ಪಕ್ಕವೇ ಸ್ಥಳ ನಿಗದಿ ಮಾಡಲಾಗಿದೆ. ಮ್ಯೂಸಿಯಂ ಪ್ರವೇಶ ಮಾಡುತ್ತಿದಂತೆ ಇಬ್ಬರು ಆಟಗಾರರು ಪ್ರೇರಣೆ ನೀಡುತ್ತಾರೆ. ಭಾರತದ ಕ್ರಿಕೆಟ್ ಆಧಾರಗಳಂತೆ ಕಾಣುತ್ತಾರೆ ಎಂದು ತಿಳಿಸಿದೆ.

    2014-15 ರಲ್ಲಿ ಆಸೀಸ್ ಪ್ರವಾಸ ಕೈಗೊಂಡಿದ್ದ ಟೀಂ ಇಂಡಿಯಾ ಟೂರ್ನಿಯಲ್ಲಿ ನಾಯಕ ವಿರಾಟ್ ಕೊಹ್ಲಿ ಶತಕ ಸಿಡಿಸಿ ಸಂಭ್ರಮಿಸಿದ್ದರು. ಈ ವೇಳೆ ಅವರು ಧರಿಸಿದ್ದ ಟೀ ಶರ್ಟ್ ಇದಾಗಿದ್ದು, ಸದ್ಯ ಸಚಿನ್ ಅವರ ಪಕ್ಕದಲ್ಲೇ ಕೊಹ್ಲಿ ಅವರಿಗೂ ಸ್ಥಾನ ನೀಡಲಾಗಿದೆ. ಈ ಮ್ಯೂಸಿಯಂನಲ್ಲಿ ಖ್ಯಾತ ಕ್ರಿಕೆಟಿಗರ ವಸ್ತುಗಳನ್ನು ಮಾತ್ರ ಇಡಲಾಗಿದ್ದು, ಭಾರತದ ಕಪಿಲ್ ದೇವ್, ಸಚಿನ್ ತೆಂಡೂಲ್ಕರ್ ಅವರ ಸಾಧನೆಯ ನೆನಪುಗಳ ವಸ್ತುಗಳನ್ನು ಇಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ. ಮ್ಯೂಸಿಯಂ ಪ್ರವೇಶದ್ವಾರದಲ್ಲಯೇ ಸಚಿನ್ ಅವರ ಭಾವಚಿತ್ರ ಇಡಲಾಗಿದ್ದು, ಸದ್ಯ ಅವರ ಬಳಿ ಕೊಹ್ಲಿ ಜರ್ಸಿ ಇರಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಿಕೆಟ್ ಪಡೆದ ಕೊಹ್ಲಿ ಸಂಭ್ರಮಿಸಿದ್ದು ಹೀಗೆ – ವಿಡಿಯೋ

    ವಿಕೆಟ್ ಪಡೆದ ಕೊಹ್ಲಿ ಸಂಭ್ರಮಿಸಿದ್ದು ಹೀಗೆ – ವಿಡಿಯೋ

    ಸಿಡ್ನಿ: ಬ್ಯಾಂಟಿಂಗ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ಇಲೆವೆನ್ ತಂಡದ ವಿರುದ್ಧ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಬೌಲಿಂಗ್ ಮಾಡಿ ವಿಕೆಟ್ ಪಡೆದು ಸಂಭ್ರಮಿಸಿದ್ದಾರೆ.

    ಪಂದ್ಯದ ಮೂರನೇ ದಿನದಾಟದ ವೇಳೆ 2 ಓವರ್ ಬೌಲ್ ಮಾಡಿದ್ದ ಕೊಹ್ಲಿ, ಅಂತಿಮ ದಿನದಂದು ಮತ್ತೆ ಬೌಲ್ ಹಿಡಿದು ನಿಂತಿದ್ದರು. ಪಂದ್ಯದಲ್ಲಿ ಒಟ್ಟು 7 ಓವರ್ ಎಸೆದ ಕೊಹ್ಲಿ ಅಂತಿಮವಾಗಿ ವಿಕೆಟ್ ಪಡೆಯುವ ಮೂಲಕ ಸಂಭ್ರಮಿಸಿದರು. ಆಸೀಸ್ ತಂಡದ ಪರ ಶತಕ ಸಿಡಿಸಿದ್ದ ವಿಕೆಟ್ ಕೀಪರ್ ಹ್ಯಾರಿ ನೀಲ್ಸನ್ ವಿಕೆಟ್ ಪಡೆದರು. ವಿಕೆಟ್ ಪಡೆಯುತ್ತಿದಂತೆ ಅಚ್ಚರಿ ವ್ಯಕ್ತಪಡಿಸಿದ ಕೊಹ್ಲಿ ಕ್ಷಣ ಸಮಯದ ಬಳಿಕ ಆಟಗಾರರತ್ತ ನೋಡಿ ಸಂಭ್ರಮಿಸಿದರು.

    ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಇದುವರೆಗೂ 8 ವಿಕೆಟ್ ಪಡೆದಿದ್ದು, ವೃತ್ತಿ ಜೀವನದ ಆರಂಭದಲ್ಲಿ ಅರೆ ಕಾಲಿಕ ಸ್ಪಿನ್ನರ್ ಆಗಿ ಬೌಲಿಂಗ್ ಮಾಡುತ್ತಿದ್ದ ಕೊಹ್ಲಿ ಬಳಿಕ ಬ್ಯಾಟಿಂಗ್ ನತ್ತ ಸಂಪೂರ್ಣ ಗಮನ ಹರಿಸಿದ್ದರು. 2016 ರಲ್ಲಿ ಟಿ20 ವಿಶ್ವಕಪ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಬೌಲ್ ಮಾಡಿದ್ದ ಕೊಹ್ಲಿ, ಜಾನ್ಸನ್ ಚಾರ್ಲ್ಸ್ ವಿಕೆಟ್ ಪಡೆದಿದ್ದರು.

    ಪಂದ್ಯದಲ್ಲಿ ಟೀಂ ಇಂಡಿಯಾ ನೀಡಿದ್ದ 358 ರನ್ ಗಳ ಉತ್ತರವಾಗಿ ಬ್ಯಾಟಿಂಗ್ ನಡೆಸಿದ ಆಸೀಸ್ ಇಲೆವೆನ್ ತಂಡ 544 ರನ್‍ಗಳ ಬೃಹತ್ ಮೊತ್ತ ಪೇರಿಸಿ ಮೊದಲ ಇನ್ನಿಂಗ್ಸ್ ನಲ್ಲಿ 183 ರನ್‍ಗಳ ಬೃಹತ್ ಮುನ್ನಡೆ ಪಡೆಯಿತು.

    https://twitter.com/strangerr_18/status/1068726737461116928

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಆಸೀಸ್ ಮೊದಲ ಟೆಸ್ಟ್ ಮುನ್ನವೇ ಟೀಂ ಇಂಡಿಯಾಗೆ ಆಘಾತ

    ಆಸೀಸ್ ಮೊದಲ ಟೆಸ್ಟ್ ಮುನ್ನವೇ ಟೀಂ ಇಂಡಿಯಾಗೆ ಆಘಾತ

    ಸಿಡ್ನಿ: ಆಸ್ಟೇಲಿಯಾ ವಿರುದ್ಧದ ಮೊದಲ ಟೆಸ್ಟ್ ಆರಂಭಕ್ಕೆ 6 ದಿನಗಳು ಬಾಕಿ ಇರುವ ಸಮಯದಲ್ಲೇ ಟೀಂ ಇಂಡಿಯಾಗೆ ಮೊದಲ ಅಘಾತ ಎದುರಾಗಿದ್ದು, ತಂಡ ಯುವ ಬ್ಯಾಟ್ಸ್‍ಮನ್ ಪೃಥ್ವಿ ಶಾ ಮೊದಲ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ.

    ಟೀಂ ಇಂಡಿಯಾ ಆಸೀಸ್ ವಿರುದ್ಧ ಅಭ್ಯಾಸ ಪಂದ್ಯ ಆಡುತ್ತಿದ್ದು, ಈ ವೇಳೆ ಫೀಲ್ಡಿಂಗ್ ಮಾಡುತ್ತಿದ್ದ ಪೃಥ್ವಿ ಶಾ ಕ್ಯಾಚ್ ಪಡೆಯುವ ಸಂರ್ಭದಲ್ಲಿ ಗಾಯಗೊಂಡಿದ್ದು, ಅಭ್ಯಾಸ ಪಂದ್ಯದ ಮೂರನೇ ದಿನದಾಟದ ವೇಳೆ ಆಸೀಸ್ ಆರಂಭಿಕ ಬ್ಯಾಟ್ಸ್‍ಮನ್ ಮ್ಯಾಕ್ಸ್ ಬ್ರಯಾಂಟ್ ಸಿಡಿಸಿದ ಚೆಂಡನ್ನು ಕ್ಯಾಚ್ ಪಡೆಯಲು ಪೃಥ್ವಿ ಶಾ ಪ್ರಯತ್ನಿಸಿದರು. ಆದರೆ ಈ ವೇಳೆ ಪೃಥ್ವಿ ಅವರ ಬಲಗಾಲಿನ ಪಾದ 90 ಡಿಗ್ರಿ ಸ್ಥಿತಿಯಲ್ಲಿ ತಿರುಗಿ ನೆಲಕ್ಕೆ ಬಿದ್ದಿದ್ದಾರೆ. ಇದರಿಂದ ಹೆಚ್ಚು ನೋವು ಅನುಭವಿಸಿದ ಪೃಥ್ವಿ ಶಾ ರನ್ನು ಟೀಂ ಇಂಡಿಯಾ ವೈದ್ಯಕೀಯ ಸಿಬ್ಬಂದಿ ಹೊತ್ತು ಮೈದಾನದಿಂದ ಹೊತ್ತು ಸಾಗಿಸಿದರು.

    ಈ ಕುರಿತು ಟ್ವೀಟ್ ಮಾಡಿರುವ ಬಿಸಿಸಿಐ, ಆಡಿಲೇಡ್‍ನಲ್ಲಿ ಡಿಸೆಂಬರ್ 6 ರಿಂದ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾ ಯುವ ಆಟಗಾರ ಪೃಥ್ವಿ ಶಾ ಅಲಭ್ಯರಾಗಿದ್ದಾರೆ ಎಂದು ಬರೆದುಕೊಂಡಿದೆ. ಅಲ್ಲದೇ ಪೃಥ್ವಿ ಶಾ ಅವರ ಕಾಲಿಗೆ ಇಂದು ಬೆಳಗ್ಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಅವರಿಗೆ ಚಿಕಿತ್ಸೆ ಹಾಗೂ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ.

    ವೆಸ್ಟ್ ಇಂಡೀಸ್ ವಿರುದ್ಧ ಪಾದಾರ್ಪಣೆ ಪಂದ್ಯದಲ್ಲೇ ಶತಕ ಸಿಡಿಸಿದ ಪೃಥ್ವಿ ಶಾ, ಆಸೀಸ್ ವಿರುದ್ಧ ನಡೆಯುತ್ತಿರುವ ಅಭ್ಯಾಸ ಪಂದ್ಯದ ಇನ್ನಿಂಗ್ಸ್‍ನಲ್ಲಿ ಅರ್ಧ ಶತಕ ಸಿಡಿಸಿ ಮಿಂಚಿದ್ದರು. ಸದ್ಯ ಪೃಥ್ವಿ ಶಾರ ಗೈರು ಹಾಜರಿಯಿಂದ ಟೀಂ ಇಂಡಿಯಾ ಆಯ್ಕೆ ಸಮಿತಿಗೆ ತಲೆನೋವು ಉಂಟಾಗಿದ್ದು, ಮೊದಲ ಟೆಸ್ಟ್ ಆರಂಭಿಕ ಜೋಡಿಯಾಗಿ ಮುರಳಿ ವಿಜಯ್ ಅಥವಾ ಕೆಎಲ್ ರಾಹುಲ್ ಕಣಕ್ಕೆ ಇಳಿಯುವ ಸಾಧ್ಯತೆಯಿದೆ.

    2 ಟೆಸ್ಟ್ ಪಂದ್ಯದ ಮೂರು ಇನ್ನಿಂಗ್ಸ್ ಆಡಿ 237 ರನ್ ಹೊಡೆದಿದರುವ ಪೃಥ್ವಿ ಶಾ ಒಂದು ಶತಕ, ಒಂದು ಅರ್ಧಶತಕ ಹೊಡೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಕೊಹ್ಲಿಯ ನಾಗಾಲೋಟ ತಡೆಗೆ ನಿಷೇಧಿತ ಕ್ರಿಕೆಟಿಗರ ಮೊರೆ ಹೋದ ಆಸ್ಟ್ರೇಲಿಯಾ

    ಕೊಹ್ಲಿಯ ನಾಗಾಲೋಟ ತಡೆಗೆ ನಿಷೇಧಿತ ಕ್ರಿಕೆಟಿಗರ ಮೊರೆ ಹೋದ ಆಸ್ಟ್ರೇಲಿಯಾ

    ಸಿಡ್ನಿ: ಕ್ರಿಕೆಟಿಗ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಆರ್ಭಟವನ್ನು ಕಟ್ಟಿಹಾಕಲು ಆಸ್ಟ್ರೇಲಿಯಾ ತಂಡ ನಿಷೇಧಿತ ಆಸಿಸ್ ಆಟಗಾರರ ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಮೊರೆ ಹೋಗಿದ್ದಾರೆ.

    ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ-20 ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ಹಾಗೂ ಸ್ಫೋಟಕ ಬ್ಯಾಟ್ಸ್‍ಮನ್ ವಿರಾಟ್ ಕೊಹ್ಲಿಯ ಆಟವನ್ನು ನೋಡಿ ಆಸೀಸ್ ಆಟಗಾರರು ಕಂಗಾಲಾಗಿ ಹೋಗಿದ್ದಾರೆ. ಅಲ್ಲದೇ ಮುಂಬರುವ ಟೆಸ್ಟ್ ಸರಣಿಯಲ್ಲೂ ಕೊಹ್ಲಿ ಇದೇ ರೀತಿ ತನ್ನ ನಾಗಾಲೋಟವನ್ನು ಮುಂದುವರಿಸಿದರೆ ಸರಣಿ ಸೋಲನ್ನು ಅನುಭವಿಸುವುದು ನಿಜವೆಂದು ಭಾವಿಸಲಾಗಿದೆ.

    ಹೀಗಾಗಿ ಖುದ್ದು ಆಸೀಸ್ ತಂಡ ಚೆಂಡು ವಿರೂಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷೇಧಕ್ಕೊಳಗಾಗಿರುವ ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಆಟಗಾರರ ಮೊರೆ ಹೋಗಿದೆ. ಅಲ್ಲದೇ ಇಬ್ಬರೂ ಆಟಗಾರರು ಕೊಹ್ಲಿಯನ್ನು ಕಟ್ಟಿಹಾಕುವ ಕುರಿತು ಕೆಲ ಮಾಹಿತಿಗಳನ್ನು ಆಸೀಸ್ ಆಟಗಾರರೊಂದಿಗೆ ಹಂಚಿಕೊಂಡಿದ್ದಾರೆಂದು ಹೇಳಲಾಗಿದೆ.

    ಇದಲ್ಲದೇ ಸ್ಮಿತ್ ಹಾಗೂ ವಾರ್ನರ್ ಆಸ್ಟ್ರೇಲಿಯಾ ತಂಡದ ಜೊತೆಗೆ ನೆಟ್ ಪ್ರಾಕ್ಟೀಸ್ ಕೂಡ ನಡೆಸುತ್ತಿದ್ದಾರೆ. ಇದರ ಜೊತೆ ಬೌಲಿಂಗ್ ಕೋಚ್ ಹಾಗೂ ಬೌಲರ್ ಗಳು ತಮ್ಮ ಅನುಭವಗಳನ್ನು ಸಹ ಹಂಚಿಕೊಂಡಿದ್ದಾರೆನ್ನುವ ಮಾಹಿತಿ ಲಭ್ಯವಾಗಿದೆ.

    ಡಿಸೆಂಬರ್ 6 ರಿಂದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯ ಅಡಿಲೇಡ್ ನಲ್ಲಿ ನಡೆಯಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆಸೀಸ್ ಬೌಲರ್‌ಗಳು ತಡೆಯದಿದ್ದರೂ ಕೊಹ್ಲಿ ಕ್ಯಾಚ್ ಹಿಡಿದು ಸಂಭ್ರಮಿಸಿದ ಭದ್ರತಾ ಸಿಬ್ಬಂದಿ!

    ಆಸೀಸ್ ಬೌಲರ್‌ಗಳು ತಡೆಯದಿದ್ದರೂ ಕೊಹ್ಲಿ ಕ್ಯಾಚ್ ಹಿಡಿದು ಸಂಭ್ರಮಿಸಿದ ಭದ್ರತಾ ಸಿಬ್ಬಂದಿ!

    ಸಿಡ್ನಿ: ಮೂರನೇ ಟಿ 20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಟವನ್ನು ಆಸ್ಟ್ರೇಲಿಯಾ ಬೌಲರ್ ಗಳು ನಿಲ್ಲಿಸದೇ ಇದ್ದರೂ ಗ್ರೌಂಡ್ ನಲ್ಲಿದ್ದ ಭದ್ರತಾ ಸಿಬ್ಬಂದಿ ಕ್ಯಾಚ್ ಹಿಡಿದು ಸಂಭ್ರಮಿಸಿದ್ದಾರೆ.

    ಮ್ಯಾಕ್ಸ್ ವೆಲ್ ಎಸೆದ 17ನೇ ಓವರಿನ 3ನೇ ಎಸೆತವನ್ನು ಕೊಹ್ಲಿ ಸಿಕ್ಸರ್ ಗೆ ಅಟ್ಟಿದ್ದರು. ಈ ವೇಳೆ ಬೌಂಡರಿ ಲೈನಿನಲ್ಲಿದ್ದ ಸೆಕ್ಯೂರಿಟಿ ಗಾರ್ಡ್ ಸಿಕ್ಸ್ ಕ್ಯಾಚ್ ಪಡೆದು ಸಂಭ್ರಮಿಸಿದ್ದರು. ಭದ್ರತಾ ಸಿಬ್ಬಂದಿ ಸಂಭ್ರಮಿಸಿ ಪ್ರೇಕ್ಷಕರ ಗ್ಯಾಲರಿ ಬಳಿ ಹೋದಾಗ ಅಲ್ಲಿದ್ದ ಪ್ರೇಕ್ಷಕರು ತಲೆಯನ್ನು ಸವರಿ ಮೆಚ್ಚುಗೆ ಸೂಚಿಸಿದರು.

    165 ರನ್ ಗಳ ಗುರಿ ಪಡೆದ ಭಾರತ 19.4 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 6 ವಿಕೆಟ್‍ಗಳ ಜಯಗಳಿಸಿತು. ವಿರಾಟ್ ಕೊಹ್ಲಿ ಔಟಾಗದೇ 61 ರನ್(41 ಎಸೆತ, 4 ಬೌಂಡರಿ, 2 ಸಿಕ್ಸರ್), ದಿನೇಶ್ ಕಾರ್ತಿಕ್ ಔಟಾಗದೇ 22 ರನ್(18 ಎಸೆತ, 1 ಬೌಂಡರಿ, 1 ಸಿಕ್ಸರ್) ಸಿಡಿಸಿ ಭಾರತಕ್ಕೆ ವಿಜಯವನ್ನು ತಂದಿಟ್ಟರು. ಇದನ್ನೂ ಓದಿ: ಕೊನೆಯ ಓವರ್‌ನಲ್ಲಿ ಗೆದ್ದು ಸರಣಿ ಸಮ ಮಾಡಿಕೊಂಡ ಟೀಂ ಇಂಡಿಯಾ!

    ಶಿಖರ್ ಧವನ್ 41 ರನ್(22 ಎಸೆತ, 6 ಬೌಂಡರಿ, 2 ಸಿಕ್ಸರ್), ರೋಹಿತ್ ಶರ್ಮಾ 23 ರನ್(16 ಎಸೆತ, 1 ಬೌಂಡರಿ, 2 ಸಿಕ್ಸರ್) ಹೊಡೆದರು. 4 ಓವರ್ ಎಸೆದು 36 ರನ್ ನೀಡಿ 4 ವಿಕೆಟ್ ಕಿತ್ತ ಕೃನಾಲ್ ಪಾಂಡ್ಯ ಅರ್ಹವಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv