Tag: Syed Ali Shah Geelani

  • ಸೈಯದ್ ಅಲಿ ಶಾ ಗೀಲಾನಿ ಮೃತದೇಹಕ್ಕೆ ಪಾಕ್ ಧ್ವಜ ಹೊದಿಸಿದ ಕುಟುಂಬಸ್ಥರ ವಿರುದ್ಧ FIR

    ಸೈಯದ್ ಅಲಿ ಶಾ ಗೀಲಾನಿ ಮೃತದೇಹಕ್ಕೆ ಪಾಕ್ ಧ್ವಜ ಹೊದಿಸಿದ ಕುಟುಂಬಸ್ಥರ ವಿರುದ್ಧ FIR

    ಶ್ರೀನಗರ: ಕಾಶ್ಮೀರ ಪ್ರತ್ಯೇಕವಾದಿ ನಾಯಕ ಸೈಯದ್ ಅಲಿ ಗೀಲಾನಿ(92)ಯವರ ಮೃತದೇಹಕ್ಕೆ ಪಾಕಿಸ್ತಾನ ಧ್ವಜ ಹೊದಿಸಿ, ದೇಶ ವಿರೋಧಿ ಘೋಷಣೆ ಕೂಗಿದ ಗೀಲಾನಿಯವರ ಕುಟುಂಬದವರ ವಿರುದ್ಧ ಬದ್ಗಾಂ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

    ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸೈಯದ್ ಅಲಿ ಗೀಲಾನಿಯವರು ಬುಧವಾರ ರಾತ್ರಿ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದರು. ನಂತರ ಅವರ ಮೃತ ದೇಹವನ್ನು ಸಮೀಪದಲ್ಲಿರು ಮಸೀದಿಯ ಸ್ಮಶಾನದಲ್ಲಿ ಹೂಳುವ ಮುನ್ನ ಪಾಕಿಸ್ತಾನ ರಾಷ್ಟ್ರ ಧ್ವಜವನ್ನು ಹೊದಿಸಲಾಗಿತ್ತು. ಇದನ್ನೂ ಓದಿ: ಮೈಸೂರಿನ ದರೋಡೆ, ಶೂಟ್‍ಔಟ್ ಪ್ರಕರಣ- ಖತರ್ನಾಕ್ ಬಾಂಬೆ ಬುಡ್ಡಾ ಅಂದರ್

    Syed Ali Shah Geelani

    ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಕಾಶ್ಮೀರದಲ್ಲಿ ಶುಕ್ರವಾರ ರಾತ್ರಿ ಮೊಬೈಲ್ ಇಂಟರ್‍ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಈ ನಡುವೆ ಪುತ್ರ ನಸೀಮ್ ಗಿಲಾನಿ ನಮ್ಮ ತಂದೆಯ ಮೃತ ದೇಹವನ್ನು ಪೊಲೀಸರು ಬಲವಂತವಾಗಿ ತೆಗೆದುಕೊಂಡು ಹೋಗಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಅಲ್ಲದೇ ಮನೆಯ ಮಹಿಳೆಯರಿಗೆ ಮತ್ತು ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಹಾಸನದಲ್ಲೊಂದು ತ್ರಿಕೋನ ಪ್ರೇಮ ಕಥೆ – ವಿಷ ಸೇವಿಸಿದವಳ ಆಯ್ಕೆ ಬಳಿಕ ಮತ್ತೊಬ್ಬಳು ಕೊಟ್ಟಿದ್ದೇಕೆ ಎಚ್ಚರಿಕೆ.?

    ಆದರೆ ಪೊಲೀಸರು ಸೈಯದ್ ಅಲಿ ಶಾ ಗೀಲಾನಿಯವರ ಅಂತ್ಯ ಕ್ರಿಯೆ ನಡೆಸಲು ಕುಟುಂಬಸ್ಥರಿಗೆ ಸಹಾಯ ಮಾಡಲಾಗಿದೆ ಎಂಬ ಮಾಹಿತಿ ಇದ್ದು, ಶ್ರೀನಗರದ ವಿಮಾನ ನಿಲ್ದಾಣದ ರಸ್ತೆಯಲ್ಲಿರುವ ಹೈದರ್‍ಪೋರಾದಲ್ಲಿ ಗೀಲಾನಿಯವರನ್ನು ಸಮಾಧಿ ಮಾಡಿಲಾಗಿದೆ. ಅಲ್ಲದೇ ಅಂತ್ಯಕ್ರಿಯೆಯಲ್ಲಿ ಗೀಲಾನಿಯವರ ಕೆಲ ಸಂಬಂಧಿಕರು ಕೂಡ ಪಾಲ್ಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

  • ಸಯ್ಯದ್ ಗಿಲಾನಿಗೆ ದೂರವಾಣಿ ಸಂಪರ್ಕ ಕಲ್ಪಿಸಿದ್ದ ಇಬ್ಬರು BSNL ಅಧಿಕಾರಿಗಳ ಅಮಾನತು

    ಸಯ್ಯದ್ ಗಿಲಾನಿಗೆ ದೂರವಾಣಿ ಸಂಪರ್ಕ ಕಲ್ಪಿಸಿದ್ದ ಇಬ್ಬರು BSNL ಅಧಿಕಾರಿಗಳ ಅಮಾನತು

    ಶ್ರೀನಗರ: ಕಾಶ್ಮೀರ ಪ್ರತ್ಯೇಕತಾವಾದಿ ಮುಖಂಡ ಸಯ್ಯದ್ ಅಲಿ ಶಾ ಗಿಲಾನಿಗೆ ದೂರವಾಣಿ ಸಂಪರ್ಕ ಕಲ್ಪಿಸಿದ್ದ ಆರೋಪದ ಅಡಿ ಇಬ್ಬರು ಬಿಎಸ್‍ಎನ್‍ಎಲ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

    ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರವು ಆಗಸ್ಟ್ 5ರಂದು ಪ್ರಕಟಿಸಿತ್ತು. ಜೊತೆಗೆ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ನಿರ್ಧಾರ ಪ್ರಕಟಿಸುವ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಎಚ್ಚರಿಕೆ ವಹಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ಈ ನಿಟ್ಟಿನಲ್ಲಿ ದೂರವಾಣಿ, ಅಂತರ್ಜಾಲ ಸಂಪರ್ಕಗಳನ್ನು ಆಗಸ್ಟ್ 4ರಿಂದ ಕಡಿತಗೊಳಿಸಲಾಗಿತ್ತು. ಇಂತಹ ಪರಿಸ್ಥಿತಿಯಲ್ಲಿಯೂ ಸಯ್ಯದ್ ಗಿಲಾನಿಗೆ ಅಂತರ್ಜಾಲ ಸೌಲಭ್ಯವನ್ನು ಒದಗಿಸಲಾಗಿತ್ತು ಎಂದು ಆರೋಪಿಸಲಾಗಿದೆ.

    ದೂರವಾಣಿ ಮತ್ತು ಅಂತರ್ಜಾಲ ಸೌಲಭ್ಯ ಕಡಿತಗೊಂಡಿದ್ದರಿಂದ ಜಮ್ಮು-ಕಾಶ್ಮೀರ ಒಂದು ವಾರ ಸ್ತಬ್ಧವಾಗಿತ್ತು. ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಹಾಗೂ ಫಾರೂಕ್ ಅಬ್ದುಲ್ಲಾ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು. ಜೊತೆಗೆ ಇಡೀ ಕಣಿವೆಯಲ್ಲಿ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಒಂದು ವಾರದಿಂದ ರಾಜ್ಯದಾದ್ಯಂತ ಎಲ್ಲ ಸಂವಹನ ಮಾಧ್ಯಮಗಳನ್ನು ನಿರ್ಬಂಧಿಸಲಾಗಿತ್ತು.

    ಇಂತಹ ಸನ್ನಿವೇಶದಲ್ಲಿಯೂ ಹುರಿಯತ್ ನಾಯಕ ಸಯ್ಯದ್ ಗಿಲಾನಿಗೆ ಅಂತರ್ಜಾಲ ಹಾಗೂ ದೂರವಾಣಿ ಸೌಲಭ್ಯ ಸಿಕ್ಕಿತ್ತು. ಇದು ಭದ್ರತಾ ಸಿಬ್ಬಂದಿ ಹಾಗೂ ಅಧಿಕಾರಿಗಳ ಗಮನಕ್ಕೆ ಬಂದಿರಲಿಲ್ಲ. ಆದರೆ ಯಾವಾಗ ಸಯ್ಯದ್ ಗಿಲಾನಿ ತಮ್ಮ ಟ್ವಿಟ್ಟರ್ ಖಾತೆ ಮೂಲಕ ಟ್ವೀಟ್ ಮಾಡಿದರೋ ಆಗ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ತಕ್ಷಣವೇ ಎಚ್ಚೆತ್ತುಕೊಂಡ ಪೊಲೀಸರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಇದರಿಂದಾಗಿ ಗಿಲಾನಿ ಸೇರಿದಂತೆ ಒಟ್ಟು 8 ಜನರ ಟ್ವಿಟ್ಟರ್ ಖಾತೆಯನ್ನು ಅಧಿಕಾರಿಗಳು ಬ್ಲಾಕ್ ಮಾಡಿದ್ದಾರೆ ಎಂದು ವರದಿಯಾಗಿದೆ.

    ಸಯ್ಯದ್ ಗಿಲಾನಿಗೆ ಅಂತರ್ಜಾಲ ಹಾಗೂ ದೂರವಾಣಿ ಸೌಲಭ್ಯ ಕಲ್ಪಿಸಿದ್ದ ಇಬ್ಬರು ಬಿಎಸ್‍ಎನ್‍ಎಲ್ ಅಧಿಕಾರಿಗಳನ್ನು ಮಾನತು ಮಾಡಲಾಗಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.